Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು - Vistara News

ದಕ್ಷಿಣ ಕನ್ನಡ

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

Mrs India Karnataka: ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಭಾನುವಾರ ಮಿಸಸ್ ಕರ್ನಾಟಕ ಮಂಗಳೂರು ಕಾರ್ಯಕ್ರಮ ನೆರವೇರಿತು. ಸಾಂಪ್ರದಾಯಿಕ, ಮಾಡರ್ನ್ ಉಡುಗೆ ವಿಭಾಗಗಳಲ್ಲಿ ನಡೆದ ಫ್ಯಾಷನ್‌ ಶೋ ನೆರೆದಿದ್ದ ಜನರ ಕಣ್ಮನ ಸೆಳೆಯಿತು.

VISTARANEWS.COM


on

Mrs India Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಮಹಿಳೆಯರಿಗೆ ಫ್ಯಾಷನ್ ಲೋಕದಲ್ಲಿ ಅವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರತಿಭಾ ಸಂಶೀಮಠ ಅವರ ನೇತೃತ್ವದಲ್ಲಿ ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಮಿಸಸ್ ಕರ್ನಾಟಕ ಮಂಗಳೂರು (Mrs India Karnataka) ಗ್ರ್ಯಾಂಡ್ ಫಿನಾಲೆ ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಭಾನುವಾರ ನಡೆಯಿತು.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಸುಮಾರು 26 ಮಹಿಳೆಯರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಾಲ್ಕು ವರ್ಷಗಳಿಂದ ಮಿಸಸ್ ಕರ್ನಾಟಕವನ್ನು ಆಯೋಜನೆ ಮಾಡುತ್ತಿದ್ದು, ಇದೀಗಾ 5ನೇ ವರ್ಷದ ಮಿಸಸ್ ಕರ್ನಾಟಕ ಆವೃತ್ತಿ ಮಂಗಳೂರಿನಲ್ಲಿ ನಡೆಯಿತು. ಸಾಂಪ್ರದಾಯಿಕ, ಮಾಡರ್ನ್ ಉಡುಗೆ ವಿಭಾಗಗಳಲ್ಲಿ ನಡೆದ ಈ ಗ್ರ್ಯಾಂಡ್ ಫಿನಾಲೆ ನೆರೆದಿದ್ದ ಜನರ ಕಣ್ಮನ ಸೆಳೆಯಿತು.

ಇದನ್ನೂ ಓದಿ | Sequins Partywear Fashion: ಪಾರ್ಟಿಪ್ರಿಯರಿಗೆ ಬಂತು ಮಿರಮಿರ ಮಿನುಗುವ ಸಿಕ್ವೀನ್ಸ್‌ ಔಟ್‌ಫಿಟ್ಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌; ತಿಂಗಳಾಂತ್ಯದವರೆಗೆ ಮೀನುಗಾರರಿಗೆ ನಿರ್ಬಂಧ

Karnataka Weather Forecast: ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಕರಾವಳಿ ಭಾಗಕ್ಕೆ ರೆಡ್‌ ಹಾಗೂ ಮಲೆನಾಡಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ತಿಂಗಳಾಂತ್ಯದವರೆಗೆ ಮೀನುಗಾರರಿಗೆ ಕಡಲತೀರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ಇನ್ನೊಂದು ವಾರ ಮಳೆಯು (Rain News) ಅಬ್ಬರಿಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಈ ದಿನ ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಹಗುರವಾದ ವರ್ಷಧಾರೆಯಾಗಲಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಭಾಗಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸುತ್ತಮುತ್ತ ಸಾಧಾರಣ ಮಳೆಯೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾದ ಮಧ್ಯಮದಿಂದ ಭಾರಿ ಮಳೆಯಾಗಲಿದ್ದು, ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಈ ಜಿಲ್ಲೆಗಳಲ್ಲಿ ಭಯಂಕರ ಮಳೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಜಿಲ್ಲೆಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಮೀನುಗಾರರಿಗೆ ಮುಂದುವರಿದ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್‌ 30ರವರೆಗೆ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

Karnataka Weather : ಗುಡುಗು ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

VISTARANEWS.COM


on

By

Karnataka Weather Forecast
Koo

ಮಂಗಳೂರು/ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ (Rain news) ಸುರಿಯುತ್ತಿರುವ ಹಿನ್ನೆಲೆ ಜೂ.28ರಂದು ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ (Karnataka weather Forecast) ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸುವಂತೆ ತಿಳಿಸಲಾಗಿದೆ.

ನಿರಂತರ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರ

ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ ಮಳೆಯೊಂದಿಗೆ 40-50ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾದರೆ, ಕರ್ನಾಟಕದ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ರಭಸವಾಗಿ ಗಾಳಿ ಬೀಸಲಿದೆ.

ಕಾರವಾರದಲ್ಲಿ ಕಾಟೇಜ್‌ಗಳು ನೆಲಸಮ

ಭಾರಿ ಗಾಳಿ ಮಳೆಗೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ದೇವಭಾಗದಲ್ಲಿ ಕಡಲಕೊರೆತ ಜೋರಾಗಿದೆ. ಜಂಗಲ್ ಲಾಡ್ಜಸ್‌‌ಗೆ ಸೇರಿದ ದೇವಭಾಗ ಬೀಚ್ ರೆಸಾರ್ಟ್ಸ್‌ನ 4 ಕಾಟೇಜ್‌ಗಳಿಗೆ ಹಾನಿಯಾಗಿದೆ. 18 ಕಾಟೇಜ್‌ಗಳಿದ್ದ ದೇವಭಾಗ್ ಬೀಚ್ ರೆಸಾರ್ಟ್‌ನಲ್ಲಿ ಮೂರ್ನಾಲ್ಕು ದಿನಗಳ ಅಂತರದಲ್ಲೇ 4 ಕಾಟೇಜ್‌ಗಳು ನೆಲಸಮವಾಗಿದೆ. ದಡಕ್ಕೆ ಅಪ್ಪಳಿಸುತ್ತಿರುವ ಆಳೆತ್ತರದ ಅಲೆಗಳಿಂದಾಗಿ ಕಾಟೇಜ್‌ಗಳು ಸಮುದ್ರಪಾಲಾದ ಪರಿಣಾಮ 1 ಕೋಟಿಗೂ ಅಧಿಕ ಹಾನಿಯಾಗಿದೆ. ಕಡಲ ತೀರಪ್ರದೇಶಕ್ಕೆ ಹೊಂದಿಕೊಂಡಿದ್ದ ಕಾಟೇಜ್‌ಗಳಿಗೆ ಹಾನಿಯಾಗಿದ್ದು, ಅರಣ್ಯ ಇಲಾಖೆಯ ನೂರಾರು ಮರಗಳು ನೆಲಕ್ಕುರುಳಿವೆ.

ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಭಾಸ್ಕೇರಿ ಬಳಿ ಬುಧವಾರ ರಾತ್ರಿ ಗುಡ್ಡ ಕುಸಿದಿತ್ತು. ಗುಡ್ಡ ಕುಸಿತದಿಂದ ಹೊನ್ನಾವರ ಬೆಂಗಳೂರು ನಡುವಿನ ಸಂಚಾರ ಅಸ್ತವ್ಯಸ್ಥವಾಗಿತ್ತು. ಇದೀಗ ಸ್ಥಳೀಯರ ಸಹಾಯದಿಂದ ಗುಡ್ಡದ ಮಣ್ಣನ್ನು ತಾಲೂಕು ಆಡಳಿತ ತೆರವು ಮಾಡಿದೆ.

ಕೊಡಗಿನಲ್ಲಿ ಕುಸಿದು ಬಿದ್ದ ತಡೆಗೋಡೆ

ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಬುಧವಾರ ಸುರಿದ ಗಾಳಿ‌ ಮಳೆಗೆ ತಡರಾತ್ರಿ ತಡೆಗೋಡೆ ಕುಸಿದಿದೆ. ಮಡಿಕೇರಿಯ ತ್ಯಾಗರಾಜ ಕಾಲೋನಿಯಲ್ಲಿ ಘಟನೆ ನಡೆದಿದೆ. ಮನೆಗಳ ರಕ್ಷಣೆಗಾಗಿ ನಿರ್ಮಿಸಿದ ತಡೆಗೋಡೆ ಕುಸಿದ ಹಿನ್ನೆಲೆಯಲ್ಲಿ ಹಿಂಬದಿಯ ಮನೆಗಳಿಗೆ ಅಪಾಯ ಕಾಡುತ್ತಿದೆ. ತಡೆಗೋಡೆ ಕುಸಿತ ಹಿನ್ನೆಲೆಯಲ್ಲಿ ಮನೆಯ ಮುಂಭಾಗಕ್ಕೆ ಟಾರ್ಪಲ್ ಹೊದಿಕೆ ಹಾಕಲಾಗಿದೆ. ಸ್ಥಳಕ್ಕೆ ಮಡಿಕೇರಿ ನಗರಸಭೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಡಗು ಜಿಲ್ಲೆಯ ಸಂಪಾಜೆ ಸಮೀಪದ ಕೊಯ್ನಾಡಿನಲ್ಲಿ ಭಾರಿ ಗಾಳಿ ಮಳೆಗೆ ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದಿದೆ. ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದು ಗೋಡೆ, ಕಿಟಕಿ ಜಖಂಗೊಂಡಿದೆ. ಶಾಲೆಗೆ ರಜೆ ಇದ್ದಿದ್ದರಿಂದ ಅನಾಹುತ ತಪ್ಪಿದೆ. ಸುಮಾರು 80 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಳೆದ ಬಾರಿ ಮಳೆಗಾಲದಲ್ಲಿ ಇದೇ ಸಮಸ್ಯೆ ಎದುರಾಗಿತ್ತು.

ಮಳೆ ನಿಂತರೂ ನಿಲ್ಲದ ನೆರೆಹಾವಳಿ

ಉಡುಪಿ ನಗರದ ಹಲವೆಡೆ ಮಳೆ ನಿಂತರೂ ನೆರೆಹಾವಳಿ ಕಡಿಮೆ ಆಗಿಲ್ಲ. ಮೂಡನಿಡಂಬೂರು ಪರಿಸರದಲ್ಲಿ ನೀರಿನ ಮಟ್ಟ ಹೆಚ್ಚಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಮನೆ ದೇವಾಲಯಗಳಿಗೆ ನೀರು ನುಗ್ಗಿದೆ. ದೈವಾರಾದನೆ ನಡೆಯುವ ಮೂಡನಿಡಂಬೂರು ಗರಡಿಯು ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಸುರಿದ ಭಾರಿ ಮಳೆ ಹಿನ್ನೆಲೆ ವಿಶ್ವ ಪ್ರಸಿದ್ಧ ಮರವಂತೆ ಬೀಚ್ ಬಳಿ ಸಮುದ್ರದ ರುದ್ರನರ್ತನ ಜೋರಾಗಿದೆ. ತೀರದಲ್ಲಿ ಹಾಕಲಾಗಿರುವ ಟೆಟ್ರಾ ಪಾರ್ಟ್ಸ್ ಗೆ ಬಂದು ಅಲೆಗಳು ಬಡಿಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು, ಪ್ರವಾಸಿಗರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉಡುಪಿಯ ಕಲ್ಸಂಕದ ಹೋಟೆಲ್- ಲಾಡ್ಜ್ ಗೆ ಮಳೆ ನೀರು ನುಗ್ಗಿದ್ದು, ಎರಡು ಪಂಪ್ ಇಟ್ಟು ನೀರು ಖಾಲಿ ಮಾಡಲಾಗಿದೆ. ಕೃಷ್ಣಮಠ, ಕಲ್ಸಂಕ, ಬೈಲಕೆರೆ ಭಾಗದ ಕೆಲ ಮನೆ ಕಟ್ಟಡಗಳಿಗೆ ನೀರು ನುಗ್ಗಿದೆ. ಲಾಡ್ಜ್, ಹೋಟೆಲ್‌ನ ಬೇಸ್ ಮೆಂಟ್‌ಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಇಂದ್ರಾಣಿ ನದಿ ತುಂಬಿ ಹರಿದ ಪರಿಣಾಮ ಸುತ್ತಮುತ್ತ ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ ಬಳಿ ಕೃತಕ ನೆರೆ ಸೃಷ್ಟಿಯಾಗಿದೆ. ಯಡ್ತರೆ ಗ್ರಾಮದ ಬಂಕೇಶ್ವರ ಅಂಗನವಾಡಿ ಕೇಂದ್ರಕ್ಕೆ ನೀರು ನುಗಿದ್ದು, ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಪಟ್ಟಣಪಂಚಾಯತ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ತರಾಟೆಗೆ ತೆಗೆದುಕೊಂಡರು. ಅಂಗನವಾಡಿಯ ಆಹಾರ ಸಾಮಾಗ್ರಿ ದಾಸ್ತಾನ ನೀರುಲಾಗಿತ್ತು. ಎರಡು ದಿನದಲ್ಲಿ ಒಳಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಲಾಗಿದೆ.

Continue Reading

ಮಳೆ

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Karnataka Weather Forecast : ಮಂಗಳೂರಲ್ಲಿ ಭಾರಿ ಮಳೆಗೆ (Rain News) ಸೇತುವೆಯಿಂದ ಹಾರಿ ಕಾರೊಂದು ಹೊಳೆಗೆ ಬಿದ್ದು, ಇಬ್ಬರು ಪವಾಡದಂತೆ ಪಾರಾಗಿದ್ದಾರೆ. ಇತ್ತ ಚಿಕ್ಕಮಗಳೂರಿನಲ್ಲಿ ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಬಾಲಕನಿಗೆ ಶಾಕ್‌ ಹೊಡೆದಿದ್ದು, ಗಾಯಗೊಂಡಿದ್ದಾನೆ.

VISTARANEWS.COM


on

By

karnataka Weather Forecast
Koo

ಮಂಗಳೂರು/ಚಿಕ್ಕಮಗಳೂರು: ಕರಾವಳಿ ಭಾಗದಲ್ಲಿ ಭಾರೀ (Karnataka weather Forecast) ಮಳೆಯಾಗುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರಿನ ಗಡಿಭಾಗ ಕಾಸರಗೋಡಿನಲ್ಲಿ ಕಾರೊಂದು ಹೊಳೆಗೆ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರ ರಕ್ಷಣೆ ಮಾಡಲಾಗಿದ್ದು, ಕಾರು ನೀರುಪಾಲಾಗಿದೆ. ಕಾಸರಗೋಡಿನ ಪಳ್ಳಂಜಿ-ಪಾಂಡ್ಯ ರಸ್ತೆಯಲ್ಲಿ ಘಟನೆ (Heavy rain) ನಡೆದಿದೆ.

ರಶೀದ್, ತಸ್ರೀಫ್ ಎಂಬುವವರು ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ತಡೆಬೇಲಿ ಇಲ್ಲದ ಕಾರಣ, ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಹೊಳೆಗೆ ಬಿದ್ದಿದೆ. ತುಂಬಿ ಹರಿಯುತ್ತಿದ್ದ ಹೊಳೆಯಲ್ಲೇ ಮರವನ್ನು ಹಿಡಿದು ಇಬ್ಬರು ಪ್ರಾಣ ಉಳಿಸಿಕೊಂಡಿದ್ದಾರೆ.

ಬಾಲಕನಿಗೆ ಕರೆಂಟ್‌ ಶಾಕ್‌

ಗಾಳಿ ಮಳೆಗೆ ರಸ್ತೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಬಾಲಕನಿಗೆ ಶಾಕ್‌ ಹೊಡೆದಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಎಚ್ ಹೊಸೂರು ಗ್ರಾಮದಲ್ಲಿ ಘಟನೆ ನಡೆದಿದೆ. ಎರಡನೇ ತರಗತಿ ವಿದ್ಯಾರ್ಥಿ ಶಾಲೆ ಮುಗಿಸಿ ಮನೆಗೆ ಹೋಗುತ್ತಿದ್ದ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗಲೇ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಇದನ್ನೂ ಗಮನಿಸಿದೇ ವಿದ್ಯುತ್‌ ತಂತಿ ತುಳಿದು ಕೆಳಗೆ ಬಿದ್ದಿದ್ದಾನೆ. ಸದ್ಯ ಬಾಲಕನಿಗೆ ಕೈ, ಬೆನ್ನು, ಕಾಲಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾನೆ. ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಬಾಲಕನಿಗೆ ಕೊಪ್ಪ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಕಾರವಾರದಲ್ಲಿ ಕಾಟೇಜ್‌ಗಳು ನೆಲಸಮ

ಭಾರಿ ಗಾಳಿ ಮಳೆಗೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ದೇವಭಾಗದಲ್ಲಿ ಕಡಲಕೊರೆತ ಜೋರಾಗಿದೆ. ಜಂಗಲ್ ಲಾಡ್ಜಸ್‌‌ಗೆ ಸೇರಿದ ದೇವಭಾಗ ಬೀಚ್ ರೆಸಾರ್ಟ್ಸ್‌ನ 4 ಕಾಟೇಜ್‌ಗಳಿಗೆ ಹಾನಿಯಾಗಿದೆ. 18 ಕಾಟೇಜ್‌ಗಳಿದ್ದ ದೇವಭಾಗ್ ಬೀಚ್ ರೆಸಾರ್ಟ್‌ನಲ್ಲಿ ಮೂರ್ನಾಲ್ಕು ದಿನಗಳ ಅಂತರದಲ್ಲೇ 4 ಕಾಟೇಜ್‌ಗಳು ನೆಲಸಮವಾಗಿದೆ. ದಡಕ್ಕೆ ಅಪ್ಪಳಿಸುತ್ತಿರುವ ಆಳೆತ್ತರದ ಅಲೆಗಳಿಂದಾಗಿ ಕಾಟೇಜ್‌ಗಳು ಸಮುದ್ರಪಾಲಾದ ಪರಿಣಾಮ 1 ಕೋಟಿಗೂ ಅಧಿಕ ಹಾನಿಯಾಗಿದೆ. ಕಡಲ ತೀರಪ್ರದೇಶಕ್ಕೆ ಹೊಂದಿಕೊಂಡಿದ್ದ ಕಾಟೇಜ್‌ಗಳಿಗೆ ಹಾನಿಯಾಗಿದ್ದು, ಅರಣ್ಯ ಇಲಾಖೆಯ ನೂರಾರು ಮರಗಳು ನೆಲಕ್ಕುರುಳಿವೆ.

ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಭಾಸ್ಕೇರಿ ಬಳಿ ಬುಧವಾರ ರಾತ್ರಿ ಗುಡ್ಡ ಕುಸಿದಿತ್ತು. ಗುಡ್ಡ ಕುಸಿತದಿಂದ ಹೊನ್ನಾವರ ಬೆಂಗಳೂರು ನಡುವಿನ ಸಂಚಾರ ಅಸ್ತವ್ಯಸ್ಥವಾಗಿತ್ತು. ಇದೀಗ ಸ್ಥಳೀಯರ ಸಹಾಯದಿಂದ ಗುಡ್ಡದ ಮಣ್ಣನ್ನು ತಾಲೂಕು ಆಡಳಿತ ತೆರವು ಮಾಡಿದೆ.

ಕೊಡಗಿನಲ್ಲಿ ಕುಸಿದು ಬಿದ್ದ ತಡೆಗೋಡೆ

ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಬುಧವಾರ ಸುರಿದ ಗಾಳಿ‌ ಮಳೆಗೆ ತಡರಾತ್ರಿ ತಡೆಗೋಡೆ ಕುಸಿದಿದೆ. ಮಡಿಕೇರಿಯ ತ್ಯಾಗರಾಜ ಕಾಲೋನಿಯಲ್ಲಿ ಘಟನೆ ನಡೆದಿದೆ. ಮನೆಗಳ ರಕ್ಷಣೆಗಾಗಿ ನಿರ್ಮಿಸಿದ ತಡೆಗೋಡೆ ಕುಸಿದ ಹಿನ್ನೆಲೆಯಲ್ಲಿ ಹಿಂಬದಿಯ ಮನೆಗಳಿಗೆ ಅಪಾಯ ಕಾಡುತ್ತಿದೆ. ತಡೆಗೋಡೆ ಕುಸಿತ ಹಿನ್ನೆಲೆಯಲ್ಲಿ ಮನೆಯ ಮುಂಭಾಗಕ್ಕೆ ಟಾರ್ಪಲ್ ಹೊದಿಕೆ ಹಾಕಲಾಗಿದೆ. ಸ್ಥಳಕ್ಕೆ ಮಡಿಕೇರಿ ನಗರಸಭೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಡಗು ಜಿಲ್ಲೆಯ ಸಂಪಾಜೆ ಸಮೀಪದ ಕೊಯ್ನಾಡಿನಲ್ಲಿ ಭಾರಿ ಗಾಳಿ ಮಳೆಗೆ ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದಿದೆ. ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದು ಗೋಡೆ, ಕಿಟಕಿ ಜಖಂಗೊಂಡಿದೆ. ಶಾಲೆಗೆ ರಜೆ ಇದ್ದಿದ್ದರಿಂದ ಅನಾಹುತ ತಪ್ಪಿದೆ. ಸುಮಾರು 80 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಳೆದ ಬಾರಿ ಮಳೆಗಾಲದಲ್ಲಿ ಇದೇ ಸಮಸ್ಯೆ ಎದುರಾಗಿತ್ತು.

ಮಳೆ ನಿಂತರೂ ನಿಲ್ಲದ ನೆರೆಹಾವಳಿ

ಉಡುಪಿ ನಗರದ ಹಲವೆಡೆ ಮಳೆ ನಿಂತರೂ ನೆರೆಹಾವಳಿ ಕಡಿಮೆ ಆಗಿಲ್ಲ. ಮೂಡನಿಡಂಬೂರು ಪರಿಸರದಲ್ಲಿ ನೀರಿನ ಮಟ್ಟ ಹೆಚ್ಚಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಮನೆ ದೇವಾಲಯಗಳಿಗೆ ನೀರು ನುಗ್ಗಿದೆ. ದೈವಾರಾದನೆ ನಡೆಯುವ ಮೂಡನಿಡಂಬೂರು ಗರಡಿಯು ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಸುರಿದ ಭಾರಿ ಮಳೆ ಹಿನ್ನೆಲೆ ವಿಶ್ವ ಪ್ರಸಿದ್ಧ ಮರವಂತೆ ಬೀಚ್ ಬಳಿ ಸಮುದ್ರದ ರುದ್ರನರ್ತನ ಜೋರಾಗಿದೆ. ತೀರದಲ್ಲಿ ಹಾಕಲಾಗಿರುವ ಟೆಟ್ರಾ ಪಾರ್ಟ್ಸ್ ಗೆ ಬಂದು ಅಲೆಗಳು ಬಡಿಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು, ಪ್ರವಾಸಿಗರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉಡುಪಿಯ ಕಲ್ಸಂಕದ ಹೋಟೆಲ್- ಲಾಡ್ಜ್ ಗೆ ಮಳೆ ನೀರು ನುಗ್ಗಿದ್ದು, ಎರಡು ಪಂಪ್ ಇಟ್ಟು ನೀರು ಖಾಲಿ ಮಾಡಲಾಗಿದೆ. ಕೃಷ್ಣಮಠ, ಕಲ್ಸಂಕ, ಬೈಲಕೆರೆ ಭಾಗದ ಕೆಲ ಮನೆ ಕಟ್ಟಡಗಳಿಗೆ ನೀರು ನುಗ್ಗಿದೆ. ಲಾಡ್ಜ್, ಹೋಟೆಲ್‌ನ ಬೇಸ್ ಮೆಂಟ್‌ಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಇಂದ್ರಾಣಿ ನದಿ ತುಂಬಿ ಹರಿದ ಪರಿಣಾಮ ಸುತ್ತಮುತ್ತ ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ ಬಳಿ ಕೃತಕ ನೆರೆ ಸೃಷ್ಟಿಯಾಗಿದೆ. ಯಡ್ತರೆ ಗ್ರಾಮದ ಬಂಕೇಶ್ವರ ಅಂಗನವಾಡಿ ಕೇಂದ್ರಕ್ಕೆ ನೀರು ನುಗಿದ್ದು, ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಪಟ್ಟಣಪಂಚಾಯತ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ತರಾಟೆಗೆ ತೆಗೆದುಕೊಂಡರು. ಅಂಗನವಾಡಿಯ ಆಹಾರ ಸಾಮಾಗ್ರಿ ದಾಸ್ತಾನ ನೀರುಲಾಗಿತ್ತು. ಎರಡು ದಿನದಲ್ಲಿ ಒಳಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಲಾಗಿದೆ.

ನಿರಂತರ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರ

ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ ಮಳೆಯೊಂದಿಗೆ 40-50ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾದರೆ, ಕರ್ನಾಟಕದ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ರಭಸವಾಗಿ ಗಾಳಿ ಬೀಸಲಿದೆ.

ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಜೂ.28ರಂದು ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸುವಂತೆ ತಿಳಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

Karnataka Rain : ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುತ್ತಿದೆ. ಈ ಮಧ್ಯೆ ಗುಡ್ಡ ಕುಸಿತ ಹೆಚ್ಚಾಗುತ್ತಿದ್ದು, ಹಲವೆಡೆ ಮನೆಗಳ ಕಾಂಪೌಂಡ್‌ಗೆ ಹಾನಿಯಾಗಿದೆ. ಮನೆ ಮೇಲೆ ಧರೆ ಕುಸಿದಿದ್ದು, ಮಕ್ಕಳಿಬ್ಬರು ಮಣ್ಣಿನಡಿ ಸಿಲುಕಿದ ಘಟನೆಯೂ ನಡೆದಿದೆ.

VISTARANEWS.COM


on

By

karnataka Rains Effected
Koo

ಕಾರವಾರ/ಮಂಗಳೂರು: ಉತ್ತರಕನ್ನಡ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣಾರ್ಭಟ (Karnataka Rain) ಜೋರಾಗಿದೆ. ಸಿದ್ದಾಪುರ ತಾಲೂಕಿನ ಹಸ್ವಿಗುಳಿಯಲ್ಲಿ ಧಾರಾಕಾರ ಮಳೆಗೆ (Rain News) ಗುಡ್ಡಗಳು ಸಡಿಲಗೊಂಡು ಕುಸಿಯುತ್ತಿದೆ. ಹಸ್ವಿಗುಳಿಯ ವೆಂಕಟರಮಣ ತಿಮ್ಮ ನಾಯ್ಕ, ಸದಾನಂದ ತಿಮ್ಮ ನಾಯ್ಕ ಹಾಗೂ ಪಾರ್ವತಿ ತಿಮ್ಮ ನಾಯ್ಕ ಅವರ ಮನೆಯ ಹಿಂಬದಿಯಲ್ಲಿ ಗುಡ್ಡ ಕುಸಿಯುತ್ತಿದೆ. ಅತಿಯಾದ ಮಳೆಯಿಂದ (Karnataka Weather Forecast) ಗುಡ್ಡ ಕುಸಿಯುತ್ತಿದ್ದು, ಮನೆಗಳಿಗೂ ಹಾನಿಯಾಗುವ ಆತಂಕ ಎದುರಾಗಿದೆ. ಗುಡ್ಡಕುಸಿತದ ಆತಂಕವಿರುವ ಮನೆಗಳ ಹಿಂಭಾಗದಲ್ಲಿ ಯಾರೂ ಓಡಾಡದಂತೆ ತಾಲೂಕಾ ಆಡಳಿತದಿಂದ ಎಚ್ಚರಿಕೆಯನ್ನೂ ನೀಡಿದೆ. ಈಗಾಗಲೇ ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಗುಡ್ಡ ಕುಸಿತದ ಮುನ್ಸೂಚನೆ ನೀಡಿದೆ.

ಇತ್ತ ಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು, ಮನೆ, ಬೈಕ್ ಸೇರಿ 8ಕ್ಕೂ ಅಧಿಕ ವಿದ್ಯುತ್ ಕಂಬಗಳು ಜಖಂಗೊಂಡಿವೆ. ಉತ್ತರ ಕನ್ನಡದ ಶಿರಸಿಯ ಟಿಪ್ಪು ನಗರದಲ್ಲಿ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಮೌಲಾನಾ ಎಂಬುವವರಿಗೆ ಸೇರಿದ ಮನೆಗೆ ಹಾನಿಯಾಗಿದೆ. ಕುಟುಂಬದವರು ಮನೆಯಲ್ಲಿದ್ದ ಸಂದರ್ಭದಲ್ಲೇ ಮಧ್ಯರಾತ್ರಿ ಸುಮಾರು 12 ಗಂಟೆ ಸುಮಾರಿಗೆ ಮರ ಧರೆಗುರುಳಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಮರ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಧರೆ ಕುಸಿದು ಮಣ್ಣಿನಡಿ ಸಿಲುಕಿದ ಮಕ್ಕಳು

ಮಂಗಳೂರಿನ ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದಾಗ ಮನೆ ಮೇಲೆ ಧರೆ ಕುಸಿದಿದೆ. ಕೂಡಲೇ ಪೋಷಕರು ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿಯಾಗಿದೆ.

ತಂದೆ ಮಜೀದ್ ಮತ್ತು ಅವರಿಬ್ಬರು ಮಕ್ಕಳು ಮಲಗಿದ್ದ ಕೊಠಡಿ ಮೇಲೆ ಮಣ್ಣು ಕುಸಿದಿದೆ. ತಕ್ಷಣ ಎಚ್ಚೆತ್ತ ಮಜೀದ್‌ ಮಣ್ಣಿನಡಿ ಇದ್ದ ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ. ಮನೆ ಪಕ್ಕದ ಧರೆಯೊಂದು ಸಡಿಲಗೊಂಡು ಮನೆ ಮೇಲೆ ಬಿದ್ದು ಹಾನಿಯಾಗಿದೆ. ಘಟನಾ ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರಸಭೆ ಮತ್ತು ಸ್ಥಳೀಯರಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಗೆ ಕಾಂಪೌಂಡ್ ಕುಸಿದು ಎರಡು ಮನೆಗಳಿಗೆ ಅಪಾಯ ಎದುರಾಗಿರದೆ. ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಹೊಸ್ಮಾರ್ ಎಂಬಲ್ಲಿ ಘಟನೆ ನಡೆದಿದೆ. ಅಶೋಕ್ ಪೂಜಾರಿ ಮತ್ತು ಗಣೇಶ್ ಪೂಜಾರಿ ಎಂಬುವವರ ಮನೆ ಅಪಾಯದಲ್ಲಿದ್ದು, ಮನೆ ಮಂದಿಯನ್ನು ಸಂಬಂಧಿಕರ ಮನೆಗೆ ಸ್ಥಳಾಂತರ ಮಾಡಲಾಗಿದೆ. ಮಣ್ಣು ಮತ್ತೆ ಕುಸಿಯದಂತೆ ತುರ್ತು ತಡೆಗೋಡೆ ನಿರ್ಮಾಣಕ್ಕೆ ಸೂಚನೆ ನೀಡಲಾಗಿದೆ. ಇನ್ನೂ ಕಾಂಪೌಂಡ್ ಕುಸಿದು ಬೀಳುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Yelahanka Railway : ರೈಲು ಬೋಗಿಯ ಕಸದ ಬುಟ್ಟಿಯಲ್ಲಿತ್ತು ನವಜಾತ ಶಿಶು; ನರಳಾಡಿ ಪ್ರಾಣಬಿಟ್ಟ ಕಂದ

ಮಳೆ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇವಸ್ಥಾನ ಜಲಾವೃತ

ಮಂಗಳೂರು ಗಡಿಭಾಗ ಕಾಸರಗೋಡಿನಲ್ಲೂ ಭಾರೀ ಮಳೆಯಾಗುತ್ತಿದೆ. ಮಳೆ ಅಬ್ಬರಕ್ಕೆ ಇತಿಹಾಸ ಪ್ರಸಿದ್ದ ಮಧೂರು ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನ ಜಲಾವೃತಗೊಂಡಿದೆ. ಮಧುವಾಹಿನಿ ನದಿ ತುಂಬಿ ತುಳುಕುತ್ತಿದ್ದು, ದೇವಸ್ಥಾನದ ಒಳಭಾಗದಲ್ಲಿ ನಾಲ್ಕೈದು ಅಡಿ ನೀರು ನಿಂತಿದೆ. ದೇವಸ್ಥಾನ ಸುತ್ತಮುತ್ತಲ ಪ್ರದೇಶ ಜಲಾವೃತವಾಗಿ ದ್ವೀಪದಂತೆ ಗೋಚರಿಸುತ್ತಿದೆ.

ಬ್ರಹ್ಮಗಿರಿ ತಪ್ಪಲಿನಲ್ಲೂ ನಿರಂತರ ಮಳೆ

ಕೊಡಗಿನ ಹಲವೆಡೆ ಮಳೆ ಅಬ್ಬರ ಮುಂದುವರಿದಿದ್ದು, ನದಿ, ತೊರೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲೂ ನಿರಂತರ ಮಳೆಯಿಂದಾಗಿ ಕಾವೇರಿ ನದಿ ನೀರಿನ ಮಟ್ಟದಲ್ಲೂ ಗಣನೀಯ ಏರಿಕೆ ಕಂಡಿದೆ. ಭಾಗಮಂಡಲ ತ್ರಿವೇಣಿ ಸಂಗಮದ ಸ್ಥಾನಘಟ ಮುಳುಗಡೆಯಾಗಿದೆ. ಮಳೆ ಇದೇ ರೀತಿ ಮುಂದುವರೆದಲ್ಲಿ ಮಡಿಕೇರಿ- ಭಾಗಮಂಡಲ, ನಾಪೋಕ್ಲು-ಭಾಗಮಂಡಲ ರಸ್ತೆ ಜಲಾವೃತವಾಗುವ ಸಾಧ್ಯತೆ ಇದೆ. ಈಗಾಗಲೇ ಕೊಡಗಿನ ಮಡಿಕೇರಿ, ವಿರಾಜಪೇಟೆ ಪೊನ್ನಂಪೇಟೆ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕೃಷ್ಣ ಮಠದ ಅಕ್ಕಪಕ್ಕ ನುಗ್ಗಿದ ನೀರು

ಉಡುಪಿ ಜಿಲ್ಲೆಯಲ್ಲಿ ರಾತ್ರಿಯಿಡಿ ಸುರಿದ ಭಾರಿ ಮಳೆಯಿಂದಾಗಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನೀರು ನುಗ್ಗಿಯಾಗಿದೆ. ಕೃಷ್ಣ ಮಠದ ಪಕ್ಕದ ಜನವಸತಿ ಪ್ರದೇಶಗಳಲ್ಲಿ ನೆರೆಯಿಂದ ಮುಳುಗಡೆಯಾಗಿದೆ. ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ವರ್ಷವೂ ಇದೇ ಪರಿಸ್ಥಿತಿ ಎದುರಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿಯೇ ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ. ಗಾಳಿ ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಅಲ್ಲಲ್ಲಿ ಮರಗಳು ಧರೆಗುರುಳಿದೆ. ನಗರದ ಇಂದ್ರಾಣಿ ಒಳ ರಸ್ತೆಯಲ್ಲಿ ಬೃಹತ್ ಗಾತ್ರದ ಮರ ಧರಾಶಾಹಿಯಾಗಿದ್ದು, ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಚಿಕ್ಕಮಗಳೂರಲ್ಲೂ ನಿರಂತರ ಮಳೆ

ಚಿಕ್ಕಮಗಳೂರಿನಲ್ಲಿ ಗುರುವಾರ ಬೆಳಗ್ಗೆಯಿಂದಲೂ ಬಿಟ್ಟು-ಬಿಟ್ಟು ಧಾರಾಕಾರ ಮಳೆ ಸುರಿಯುತ್ತಿದೆ. ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ, ಕಳಸ ಸೇರಿದಂತೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಸುತ್ತ ಭಾರೀ ಮಳೆಯೊಂದಿಗೆ ಗಾಳಿ ಬೀಸುತ್ತಿದೆ. ಗಾಳಿ-ಮಳೆ ಮಧ್ಯೆ ಚಾರ್ಮಾಡಿ ಘಾಟಿಯಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Vastu Tips
ಧಾರ್ಮಿಕ11 mins ago

Vastu Tips: ಈ ವಾಸ್ತು ನಿಯಮ ಪಾಲಿಸಿದರೆ ವ್ಯವಹಾರದಲ್ಲಿ ವೃದ್ಧಿ

haveri Accident
ಕರ್ನಾಟಕ31 mins ago

Haveri Accident: ಹಾವೇರಿಯಲ್ಲಿ ಭಯಾನಕ ಅಪಘಾತ: ಲಾರಿಗೆ ಟಿಟಿ ಡಿಕ್ಕಿ, 13 ಜನರ ಸಾವು

Weight Loss Tips
ಆರೋಗ್ಯ41 mins ago

Weight Loss Tips: ದಕ್ಷಿಣ ಭಾರತೀಯ ಶೈಲಿಯ ಬೆಳಗಿನ ತಿಂಡಿಯಲ್ಲೂ ನೀವು ತೂಕ ಇಳಿಸಬಹುದು!

Indian Origin Crow
ವಿದೇಶ1 hour ago

Indian Origin Crow: ಭಾರತೀಯ ಮೂಲದ 10 ಲಕ್ಷ ಕಾಗೆಗಳನ್ನು ಕೊಲ್ಲಲು ಕೀನ್ಯಾ ನಿರ್ಧರಿಸಿದ್ದೇಕೆ?

karnataka weather Forecast
ಮಳೆ1 hour ago

Karnataka Weather : ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌; ತಿಂಗಳಾಂತ್ಯದವರೆಗೆ ಮೀನುಗಾರರಿಗೆ ನಿರ್ಬಂಧ

World's Newest Countries
ವಿದೇಶ2 hours ago

World’s Newest Countries: ಇವು ವಿಶ್ವದ 10 ಹೊಸ ರಾಷ್ಟ್ರಗಳು! ಏನು ಈ ರಾಷ್ಟ್ರಗಳ ವಿಶೇಷ?

Dina Bhavishya
ಭವಿಷ್ಯ3 hours ago

Dina Bhavishya : ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರ ವಹಿಸಿ

IND vs ENG Semi Final
ಕ್ರೀಡೆ6 hours ago

IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

Abhyas Trial
ದೇಶ8 hours ago

Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Congress Protest
ಕರ್ನಾಟಕ8 hours ago

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ12 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ14 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು16 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ19 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌