CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ - Vistara News

ರಾಜಕೀಯ

CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

CM Siddaramaiah: ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ್ದು, ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

One year for the government Cm Siddaramaiah reveals many dreams and media interaction live
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಂದಿಗೆ (ಮೇ 20) ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮಾಧ್ಯಮದ ಸಂವಾದದ ಮೂಲಕ ರಾಜ್ಯದ ಜನರಿಗೆ ಧನ್ಯವಾದ ಹೇಳಿದ್ದಾರೆ. ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ ಎಂದು ಹೇಳಿದ್ದಾರೆ. ಅಲ್ಲದೆ, ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವ ಗುರಿ ಇದೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ್ದು, ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ್ಮ ಕೈಗಳ ಬಲಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ. ಇಂತಹ ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

ಅಭಿವೃದ್ಧಿಯ ಕಾಯಕವನ್ನು ನಮಗೆ ಬಿಡಿ

ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ. ಅಭಿವೃದ್ಧಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದಾಗಿದೆ. ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧ ಪಕ್ಷಗಳು ಜಾತಿ – ಧರ್ಮಗಳನ್ನು ರಾಜಕೀಯದ ಅಸ್ತ್ರಗಳನ್ನಾಗಿ ಬಳಸಿಕೊಂಡು ನಮ್ಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆಯಾಗಿದೆ. ಉಳಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ. ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು ಎಂದು ಸಿಎಂ ಸಿದ್ದರಾಮಯ್ಯ ಭರವಸೆಯನ್ನು ನೀಡಿದ್ದಾರೆ.

ಸಿಎಂ ಮಾಧ್ಯಮ ಸಂವಾದ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

ಸೋಮವಾರ ಮಾಧ್ಯಮದವರೊಂದಿಗೆ ಸಂವಾದ ನಡೆಸಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.

ನುಡಿದಂತೆ ನಡೆದಿದ್ದೇವೆ, ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದೇವೆ ಎಂದು ಹೇಳಿದರು. ಅಲ್ಲದೆ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಎಂಬಿತ್ಯಾದಿ ಯೋಜನೆಗಳ ಬಗ್ಗೆ ಅಂಕಿ-ಅಂಶಗಳ ಸಹಿತ ಮಾಹಿತಿ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BJP Protest: ಪ್ರತಿಭಟನೆ ವೇಳೆ ಶಾಸಕ ವೇದವ್ಯಾಸ್ ಕಾಮತ್ ಧಮ್ಕಿ; ಕೆರಳಿದ ಪೊಲೀಸ್‌!

BJP Protest: ಬೆಂಗಳೂರಿನಲ್ಲಿ ಪ್ರತಿಭಟನಾಕಾರರನ್ನು ಬಸ್‌ ಹತ್ತಿಸುವ ವೇಳೆ ಧಮ್ಕಿ ಹಾಕಿದ್ದರಿಂದ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಜತೆ ಪೊಲೀಸ್‌ ಒಬ್ಬರು ವಾಗ್ದಾದ ನಡೆಸಿದ್ದಾರೆ.

VISTARANEWS.COM


on

BJP Protest
Koo

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ ಖಂಡಿಸಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ (BJP Protest) ಹಾಕಲು ಯತ್ನಿಸಿದ ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ..ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್‌.ಅಶೋಕ್‌ ಸೇರಿ ಹಲವು ನಾಯಕರನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದರು. ಪ್ರತಿಭಟನಾಕಾರರನ್ನು ಬಸ್‌ ಹತ್ತಿಸುವ ವೇಳೆ ಧಮ್ಕಿ ಹಾಕಿದ್ದರಿಂದ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಜತೆ ಪೊಲೀಸ್‌ ಒಬ್ಬರು ವಾಗ್ದಾದ ನಡೆಸಿರುವುದು ಕಂಡುಬಂದಿದೆ.

ಬಸ್‌ ಬಾಗಿಲಲ್ಲಿ ನಿಂತಿದ್ದ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರು ಕೆಳಗಿದ್ದ ಒಬ್ಬ ಪೊಲೀಸ್‌ಗೆ ಹೇಯ್ ಅಂದಿದ್ದಾರೆ. ಇದರಿಂದ ಕೆರಳಿದ ಪೊಲೀಸ್, ಶಾಸಕನ ಜತೆ ವಾಗ್ವಾದಕ್ಕೆ ಇಳಿದಿದ್ದಾರೆ. ಪೊಲೀಸರು ಹೋಗಪ್ಪ ಬಾರಪ್ಪ ಎಂದರೆ ಕೇಳಿಸಿಕೊಂಡು ಸುಮ್ಮನಿರಬೇಕಾ? ಎಂದು ಶಾಸಕ ಕಾಮತ್ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದಲ್ಲಿ ದಿನಕ್ಕೊಂದು ಹಗರಣ: ವಿಜಯೇಂದ್ರ ಅಕ್ರೋಶ

ಪ್ರತಿಭಟನೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ರಾಜ್ಯದಲ್ಲಿ ದಿನಕ್ಕೊಂದು ಹಗರಣ ನಡೆಯುತ್ತಿದೆ. ಹಗಲು ದರೋಡೆ ಮಾಡುತ್ತಿದ್ದಾರೆ. ಸಿಎಂ ಮನೆ ಮುತ್ತಿಗೆಗೆ ಹೊರಟರೆ ಬಂಧನ ಮಾಡುವ ಕೆಲಸ ನಡೆಯುತ್ತಿದೆ. ನಾವು ಭ್ರಷ್ಟಾಚಾರ ವಿರೋಧಿಸಿ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.

ಮೈಸೂರು ಮುಡಾ ಹಗರಣ ನಡೆದಿದೆ. ಸಿಎಂ ಮೈಸೂರಿನವರು, ಅವರ ಗಮನಕ್ಕೆ ಬಾರದೆ ಹಗರಣ ನಡೆದಿರುವುದಿಲ್ಲ. ಅವರೇ ಸ್ವತಃ ಹಣಕಾಸು ಸಚಿವರು. ಯಾವೆಲ್ಲಾ ಹಗರಣ ನಡೆದಿದೆ, ಎಲ್ಲವೂ ತನಿಖೆ ಮಾಡಬೇಕು. ಬಿಜೆಪಿಗೆ ತಿರುಗುಬಾಣ ಆದರೂ ಎದುರಿಸುತ್ತೇವೆ. ಬೈರತಿ ಸುರೇಶ್ ಅವರು ಸಿಎಂಗೆ ಪರಮಾಪ್ತರಿದ್ದಾರೆ. ಹಾಗಾಗಿ ಸೂಕ್ತ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ | Mangalore News: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

ನಮ್ಮ ವಿರುದ್ದ ಭ್ರಷ್ಟಾಚಾರದ ಆರೋಪ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ, ಸಿಎಂ ತವರಿನ ಮುಡಾದಲ್ಲಿ 4 ಸಾವಿರ ಕೋಟಿ ಹಗರಣ ಆಗಿದೆ. ಬೈರತಿ ಸುರೇಶ್ ಅವರು ಮೈಸೂರಲ್ಲಿ ಅಧಿಕಾರಿಗಳ ಸಭೆ ಮಾಡಿದ್ದರು, ಅಧಿಕಾರಿಗಳ ವರ್ಗಾವಣೆ ಮಾಡಿದ್ದಾರೆ. ಆದರೆ ಅವರನ್ನು ಸಸ್ಪೆಂಡ್ ಮಾಡಿಬೇಕಿತ್ತು. ಇವರ ಬುಡಕ್ಕೆ ಬರುತ್ತೆ ಅಂತ ಸಸ್ಪೆಂಡ್ ಮಾಡಿಲ್ಲ. ಕಡತಗಳನ್ನ ತಿದ್ದುಪಡಿ ಮಾಡಲು ಬೈರತಿ ಸುರೇಶ್ ತಂದಿದ್ದಾರೆ. ಯಾವುದೇ ತಿದ್ದುಪಡಿ ಮಾಡಿದ್ರೂ ಭ್ರಷ್ಟಾಚಾರ ಹೊರಗೆ ಬರಲಿದೆ. ಬಿಜೆಪಿ ಅವಧಿಯದ್ದೂ ಸೇರಿಸಿ, ಇವರ ಸರ್ಕಾರದ ಭ್ರಷ್ಟಾಚಾರ ತನಿಖೆ ಮಾಡಲಿ. ಅಲ್ಲಿಯವರೆಗೂ ಸಿಎಂ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.

Continue Reading

ದೇಶ

Narendra Modi: ಲೋಕಸಭಾ ಚುನಾವಣೆಯ ಫಲಿತಾಂಶದಿಂದ ದೇಶೀಯ ಮಾರುಕಟ್ಟೆಗೆ ಉತ್ತೇಜನ; ಮೋದಿ ಬಣ್ಣನೆ

Narendra Modi: ಈ ಲೋಕಸಭಾ ಚುನಾವಣೆಯ ಫಲಿತಾಂಶ ದೇಶೀಯ ಬಂಡವಾಳ ಮಾರುಕಟ್ಟೆಗೆ ಉತ್ತೇಜನ ನೀಡಿದೆ ಎಂದು ರಾಜ್ಯಸಭೆಯಲ್ಲಿ ಪ್ರದಾನಿ ನರೇಂದ್ರ ಮೋದಿ ಹೇಳಿದರು. ʼಭಾರತವು ಸದ್ಯದಲ್ಲೇ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದ್ದು, ಅದು ದೇಶೀಯ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿಯೂ ಸಕಾರಾತ್ಮಕ ಪರಿಣಾಮ ಬೀರಲಿದೆʼʼ ಎಂದು ಅವರು ಅಭಿಪ್ರಾಯಪಟ್ಟರು.

VISTARANEWS.COM


on

Narendra Modi
Koo

ನವದೆಹಲಿ: ರಾಜ್ಯಸಭೆ (Rajya Sabha)ಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಬುಧವಾರ (ಜುಲೈ 3) ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಮಾತನಾಡಿ, ಈ ಲೋಕಸಭಾ ಚುನಾವಣೆಯ ಫಲಿತಾಂಶ ದೇಶೀಯ ಬಂಡವಾಳ ಮಾರುಕಟ್ಟೆಗೆ ಉತ್ತೇಜನ ನೀಡಿದೆ ಎಂದು ಹೇಳಿದರು.

ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾಡಿದ ಭಾಷಣಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಧನ್ಯವಾದ ಅರ್ಪಿಸುವ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ʼʼಭಾರತವು ಸದ್ಯದಲ್ಲೇ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದ್ದು, ಅದು ದೇಶೀಯ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿಯೂ ಸಕಾರಾತ್ಮಕ ಪರಿಣಾಮ ಬೀರಲಿದೆʼʼ ಎಂದು ಅಭಿಪ್ರಾಯಪಟ್ಟರು.

“ಭಾರತದ ಆರ್ಥಿಕತೆಯು 10ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಜಿಗಿದಿದೆ. ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡಲು ನಮಗೆ ಜನಾದೇಶ ಸಿಕ್ಕಿದೆ. ದೇಶದಲ್ಲಿ ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ತ್ವರಿತ ಪರಿವರ್ತನೆಯಾಗಲಿದೆ. ತಂತ್ರಜ್ಞಾನದ ಹೆಜ್ಜೆ ಗುರುತುಗಳನ್ನು ಇಂದು ಅನೇಕ ಕ್ಷೇತ್ರಗಳಲ್ಲಿ ಕಾಣಬಹುದು” ಎಂದು ಅವರು ಹೇಳಿದರು.

ಮಹಿಳಾ ಸಬಲೀಕರಣ

ʼʼಮಹಿಳಾ ಸಬಲೀಕರಣದ ಪ್ರಯೋಜನಗಳು ಎಲ್ಲ ಕ್ಷೇತ್ರಗಳಲ್ಲಿ ಗೋಚರಿಸುತ್ತಿವೆ. ಸ್ವಸಹಾಯ ಗುಂಪುಗಳಲ್ಲಿ ಒಂದು ಕೋಟಿ ಮಹಿಳೆಯರು ‘ಲಖ್ಪತಿ ದೀದಿ’ಗಳಾಗಿದ್ದಾರೆ. ಈ ಸಂಖ್ಯೆ 3 ಕೋಟಿ ಹೆಚ್ಚಿಸಲು ಮುಂದಿನ ದಿನಗಳಲ್ಲಿ ಯತ್ನಿಸುತ್ತೇವೆ. ಜತೆಗೆ ನಮ್ಮ ಸರ್ಕಾರ ಬೆಂಬಲ ಬೆಲೆ ಹೆಚ್ಚಳ, ರಸಗೊಬ್ಬರಗಳಿಗೆ ರಿಯಾಯಿತಿ ನೀಡುವ ಮೂಲಕ ಕೃಷಿ ಕ್ಷೇತ್ರದ ಬಲವರ್ಧನೆಗೂ ಮುಂದಾಗಿದೆʼʼ ಎಂದು ತಿಳಿಸಿದರು.

ಮುಂದಿನ ಐದು ವರ್ಷಗಳಲ್ಲಿ ಮೂಲಭೂತ ಸೌಕರ್ಯಗಳ ವೃದ್ಧಿಗೆ ಶ್ರಮಿಸುತ್ತೇವೆ ಮತ್ತು ಬಡತನದ ವಿರುದ್ಧದ ಹೋರಾಡುತ್ತೇವೆ. ಮುಂದಿನ ಐದು ವರ್ಷಗಳಲ್ಲಿ ಈ ದೇಶವು ಬಡತನದ ವಿರುದ್ಧ ವಿಜಯಶಾಲಿಯಾಗಿ ಹೊರಹೊಮ್ಮಲಿದೆ ಎನ್ನುವ ವಿಶ್ವಾಸವಿದೆ. ಕಳೆದ 10 ವರ್ಷಗಳ ಅನುಭವದ ಆಧಾರದ ಮೇಲೆ ನಾನು ಇದನ್ನು ಹೇಳುತ್ತಿದ್ದೇನೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾದಾಗ, ಅದರ ಪರಿಣಾಮವು ಜೀವನದ ಪ್ರತಿಯೊಂದು ಕ್ಷೇತ್ರದ ಮೇಲೂ ಬೀರುತ್ತದೆ. ಭಾರತವು ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ನಿರ್ಣಾಯಕ ಹೆಜ್ಜೆಗಳನ್ನು ಇಟ್ಟಿದೆ ಮತ್ತು ಇಂದು ಅದರ ಫಲಿತಾಂಶ ನಮ್ಮ ಕಣ್ಣ ಮುಂದಿದೆ. ನಾವು ಮಹಿಳೆಯರ ಆರೋಗ್ಯ, ನೈರ್ಮಲ್ಯ ಮತ್ತು ಸ್ವಾಸ್ಥ್ಯ ಕ್ಷೇತ್ರಗಳಲ್ಲಿಯೂ ಕೆಲಸ ಮಾಡಿದ್ದೇವೆʼʼ ಎಂದು ಮೋದಿ ಹೇಳಿದರು.

ಈಗ ರದ್ದಾಗಿರುವ 2021-22ರ ದೆಹಲಿ ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಅವರು ಆಮ್ ಆದ್ಮಿ ಪಕ್ಷ (ಎಎಪಿ) ವಿರುದ್ಧ ವಾಗ್ದಾಳಿ ನಡೆಸಿದರು. ಜತೆಗೆ ಕಾಂಗ್ರೆಸ್ ಮತ್ತು ಎಎಪಿ ದ್ವಂದ್ವ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿದರು. “ಕೇಂದ್ರ ಸರ್ಕಾರವು ಸಿಬಿಐ ಮತ್ತು ಇಡಿ (ಜಾರಿ ನಿರ್ದೇಶನಾಲಯ) ನಂತಹ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಈಗ ಆರೋಪಿಸುತ್ತಿರುವವರು ಒಮ್ಮೆ ಅವುಗಳನ್ನು ಭ್ರಷ್ಟರ ವಿರುದ್ಧ ಬಳಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು” ಎಂದು ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ: Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Continue Reading

ದೇಶ

Parliament Sessions: “ಕಾಂಗ್ರೆಸ್‌ನದ್ದು ರಿಮೋಟ್‌ ಕಂಟ್ರೋಲ್‌ ಸರ್ಕಾರ”-ಸೋನಿಯಾ ವಿರುದ್ಧ ಮೋದಿ ವಾಗ್ಬಾಣ

Parliament Sessions:ರಾಜ್ಯಸಭೆಯಲ್ಲಿ ಮಾತನಾಡುತ್ತಾ ಪ್ರಧಾನಿ ಮೋದಿ, ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.” ಇವರೆಲ್ಲರೂ ಸರ್ಕಾರ ರಿಮೋಟ್‌ ಕಂಟ್ರೋಲ್‌ನಿಂದ ನಡೆಯುವುದನ್ನೇ ಬಯಸುತ್ತಿದ್ದಾರೆ. ಸರ್ಕಾರ ಸ್ವತಂತ್ರವಾಗಿ ಕಾರ್ಯನಿರ್ವಹಿಸುವುದು ಅವರಿಗೆ ಬೇಕಿಲ್ಲ. ಅವರಿಗೆ ಕೇವಲ ಅನುಮತಿಗಾಗಿ ಕಾಯುವುದು ಮಾತ್ರ ಗೊತ್ತು” ಎಂದು ಕಿಡಿಕಾರಿದರು.

VISTARANEWS.COM


on

Parliament Sessions
Koo

ಹೊಸದಿಲ್ಲಿ: ನಿನ್ನೆ ಲೋಕಸಭೆ ಅಧಿವೇಶನ(Parliament Sessions)ವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ(PM Narendra Modi) ಇಂದು ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಗೆ ರಾಜ್ಯಸಭೆಯಲ್ಲಿ ಉತ್ತರಿಸಿದರು. ಲೋಕಸಭೆಯಲ್ಲಿ ವಿಪಕ್ಷ ನಾಯಕರ ರಾಹುಲ್‌ ಗಾಂಧಿ(Rahul Gandhi)ಯನ್ನು ಬಾಲ ಬುದ್ಧಿಯ ನಾಯಕ ಎಂದಿದ್ದ ಮೋದಿ ಇಂದು ಪರೋಕ್ಷವಾಗಿ ರಾಜ್ಯಸಭೆ ಸದಸ್ಯೆ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ(Sonia Gandhi)ಯನ್ನು ಕುಟುಕಿದರು. ಈ ವೇಳೆ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷ ಮುಖಂಡರು ಸಭಾತ್ಯಾಗ ಮಾಡಿದರು.

ರಾಜ್ಯಸಭೆಯಲ್ಲಿ ಮಾತನಾಡುತ್ತಾ ಪ್ರಧಾನಿ ಮೋದಿ, ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.” ಇವರೆಲ್ಲರೂ ಸರ್ಕಾರ ರಿಮೋಟ್‌ ಕಂಟ್ರೋಲ್‌ನಿಂದ ನಡೆಯುವುದನ್ನೇ ಬಯಸುತ್ತಿದ್ದಾರೆ. ಸರ್ಕಾರ ಸ್ವತಂತ್ರವಾಗಿ ಕಾರ್ಯನಿರ್ವಹಿಸುವುದು ಅವರಿಗೆ ಬೇಕಿಲ್ಲ. ಅವರಿಗೆ ಕೇವಲ ಅನುಮತಿಗಾಗಿ ಕಾಯುವುದು ಮಾತ್ರ ಗೊತ್ತು” ಎಂದು ಕಿಡಿಕಾರಿದರು. ಆ ಮೂಲಕ ಕಾಂಗ್ರೆಸ್‌ ಅಧಿಕಾರದಲ್ಲಿರುವಾಗ ಪ್ರಧಾನಿಯಾಗಿ ಮನಮೋಹನ್‌ ಸಿಂಗ್‌ ಇದ್ದರೂ ಎಲ್ಲಾ ನಿರ್ಧಾರಗಳು ಸೋನಿಯಾ ಗಾಂಧಿಯದ್ದೇ ಆಗಿತ್ತು ಎಂಬ ಬಿಜೆಪಿ ಆರೋಪವನ್ನು ಪುನರುಚ್ಛರಿಸಿದರು. ಈ ಹೇಳಿಕೆ ನೀಡುತ್ತಿರುವಾಗಲೇ ಪ್ರತಿಪಕ್ಷ ನಾಯಕರು ಗದ್ದಲ ಆರಂಭಿಸಿದರು.

ಪ್ರಧಾನಿ ಮಾತಿನ ಆಕ್ಷೇಪ ವ್ಯಕ್ತಪಡಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನದಿಂದ ಎದ್ದು ನಿಲ್ಲುತ್ತಿದ್ದಂತೆ ಸಭಾಧ್ಯಕ್ಷ ಜಗದೀಪ್‌ ಧನ್ಕರ್‌ ಅನುಮತಿ ನೀಡಲಿಲ್ಲ. ಇದರಿಂದ ಕೋಪಗೊಂಡ ನಾಯಕರು ವಾಕ್‌ಔಟ್‌ ಮಾಡಿದರು. ಇನ್ನು ಪ್ರತಿಪಕ್ಷ ನಾಯಕರು ಸಭಾತ್ಯಾಗ ಮಾಡುತ್ತಿದ್ದಂತೆ ಟಾಂಗ್‌ ಕೊಟ್ಟ ಪ್ರಧಾನಿ ಸತ್ಯವನ್ನು ಎದುರಿಸುವ ತಾಕತ್ತು ಪ್ರತಿಪಕ್ಷಕ್ಕೆ ಇಲ್ಲ ಎಂದರು.

10 ವರ್ಷಗಳ ನಂತರ ಸರ್ಕಾರವು ಸತತವಾಗಿ ಮರಳಿದೆ ಮತ್ತು 6 ದಶಕಗಳ ನಂತರ ಭಾರತೀಯ ಪ್ರಜಾಪ್ರಭುತ್ವದಲ್ಲಿ ಇದು ಸಂಭವಿಸಿದೆ ಎಂದು ನನಗೆ ತಿಳಿದಿದೆ, ಈ ಘಟನೆ ಅಸಾಮಾನ್ಯ ಘಟನೆಯಾಗಿದೆ. ದೇಶದ ಜನ ಸಾಧನೆಗೆ ಆದ್ಯತೆ ನೀಡಿದ್ದಾರೆ. ಆದರೆ ಕೆಲವರಿಗೆ ಸಾರ್ವಜನಿಕ ವ್ಯವಸ್ಥೆ ಅರ್ಥವಾಗಲಿಲ್ಲ. ದೇಶದ ಜನತೆ ವಿಶ್ವಾಸದ ರಾಜಕಾರಣವನ್ನು ಅಳವಡಿಸಿಕೊಂಡಿದ್ದಾರೆ. ಭವಿಷ್ಯದ ನಿರ್ಣಯಗಳಿಗಾಗಿ ಸಾರ್ವಜನಿಕರು ನಮ್ಮತ್ತ ಮುಖ ಮಾಡಿದ್ದಾರೆ. ನಮ್ಮ ಸರ್ಕಾರ 10 ವರ್ಷ ನಡೆದಿದೆ, ಇನ್ನೂ 20 ವರ್ಷ ಬಾಕಿ ಇದೆ ಎಂದಿದ್ದಾರೆ.

ಇದನ್ನೂ ಓದಿ: Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Continue Reading

ದೇಶ

Narendra Modi: ಮುಂದಿನ 5 ವರ್ಷ ಬಡತನ ವಿರುದ್ಧದ ಹೋರಾಟಕ್ಕೆ ಮೀಸಲು; ರಾಜ್ಯಸಭೆಯಲ್ಲಿ ಮೋದಿ ಭರವಸೆ

Narendra Modi: ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾಜ್ಯಸಭೆ ಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಮಾತನಾಡಿ, ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ”2024ರ ಲೋಕಸಭಾ ಚುನಾವಣೆಯ ಫಲಿತಾಂಶವು ಜನರು ಪ್ರಚಾರವನ್ನು ತಿರಸ್ಕರಿಸಿದ್ದಾರೆ ಮತ್ತು ಕಾರ್ಯಕ್ಷಮತೆಗಾಗಿ ಮತ ಚಲಾಯಿಸಿದ್ದಾರೆ ಎನ್ನುವುದನ್ನು ಸ್ಪಷ್ಟವಾಗಿ ತೋರಿಸಿದೆ. ಮುಂದಿನ 5 ವರ್ಷ ನಾವು ಬಡತನ ನಿರ್ಮೂಲನೆ ಮಾಡಲು ಹೋರಾಡುತ್ತೇವೆʼʼ ಎಂದು ಹೇಳಿದರು.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಬುಧವಾರ (ಜುಲೈ 3) ರಾಜ್ಯಸಭೆ (Rajya Sabha)ಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಮಾತನಾಡಿ, ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ”2024ರ ಲೋಕಸಭಾ ಚುನಾವಣೆಯ ಫಲಿತಾಂಶವು ಜನರು ಪ್ರಚಾರವನ್ನು ತಿರಸ್ಕರಿಸಿದ್ದಾರೆ ಮತ್ತು ಕಾರ್ಯಕ್ಷಮತೆಗಾಗಿ ಮತ ಚಲಾಯಿಸಿದ್ದಾರೆ ಎನ್ನುವುದನ್ನು ಸ್ಪಷ್ಟವಾಗಿ ತೋರಿಸಿದೆ. ಮುಂದಿನ 5 ವರ್ಷ ನಾವು ಬಡತನ ನಿರ್ಮೂಲನೆ ಮಾಡಲು ಹೋರಾಡುತ್ತೇವೆʼʼ ಎಂದು ಹೇಳಿದರು.

ʼʼನಾವು 10 ವರ್ಷಗಳಿಂದ ಸರ್ಕಾರ ನಡೆಸಿದ್ದೇವೆ. ಇನ್ನೂ 20 ವರ್ಷ ಇದು ಮುಂದುವರಿಯಲಿದೆ. ಭಾರತದ ಸಂವಿಧಾನದಿಂದಾಗಿ ಎನ್‌ಡಿಎ ಸರ್ಕಾರ ಅಧಿಕಾರದಲ್ಲಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದಾಗಿ ನಾನು ಇಲ್ಲಿದ್ದೇನೆ” ಎಂದರು. ʼʼಎನ್‌ಡಿಎ ಮೂರನೇ ಅವಧಿಯಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ಕಳೆದ 10 ವರ್ಷಗಳಲ್ಲಿ ಭಾರತದ ಆರ್ಥಿಕತೆಯು ಹತ್ತರಿಂದ ಐದನೇ ಸ್ಥಾನಕ್ಕೆ ಏರಿದೆʼʼ ಎಂದು ಅವರು ಹೇಳಿದರು.

ಯಾರು ಅಧಿಕಾರದಲ್ಲಿದ್ದರೂ ದೇಶ ಬೆಳೆಯುತ್ತದೆ ಎಂಬ ಕಾಂಗ್ರೆಸ್ ಹೇಳಿಕೆಗೆ ಮೋದಿ ತಿರುಗೇಟು ನೀಡಿದರು. ಆಟೋ-ಪೈಲಟ್ ಮೋಡ್‌ನಲ್ಲಿ ಸರ್ಕಾರವನ್ನು ನಡೆಸಿದವರು ಮಾತ್ರ ಅಂತಹ ಹೇಳಿಕೆಗಳನ್ನು ನೀಡಬಹುದು ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಅವರ ಭಾಷಣದ ಮಧ್ಯೆ ಪ್ರತಿಪಕ್ಷದ ಸಂಸದರು ತಮ್ಮ ಸ್ಥಾನದಿಂದ ಎದ್ದುನಿಂತು ರಾಜ್ಯಸಭೆಯನ್ನು ಮುಂದೂಡುವಂತೆ ಆಗ್ರಹಿಸಿದವು. ಪ್ರಧಾನಿ ಭಾಷಣದ ವೇಳೆ ಮಧ್ಯಪ್ರವೇಶಿಸಲು ಸಭಾಪತಿ ಜಗದೀಪ್ ಧನ್ಕರ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಪ್ರತಿಪಕ್ಷಗಳ ಸಂಸದರು ಸಭಾತ್ಯಾಗ ಮಾಡಿದರು. ಈ ಕರಿತು ವ್ಯಂಗ್ಯವಾಡಿದ ಮೋದಿ, ʼʼಪ್ರತಿಪಕ್ಷಗಳಿಗೆ ತಾವು ಎತ್ತಿದ ಪ್ರಶ್ನೆಗಳಿಗೆ ನಾವು ಹೇಳುವ ಉತ್ತರವನ್ನು ಕೇಳುವ ತಾಳ್ಮೆ ಇಲ್ಲ. ಹೀಗಾಗಿ ಅವರು ಓಡಿಹೋಗುತ್ತಿದ್ದಾರೆ. ಅವರು ಮೇಲ್ಮನೆ ಅದರ ಸಂಪ್ರದಾಯಗಳನ್ನು ಅವಮಾನಿಸುತ್ತಿದ್ದಾರೆ. ಜನರು ಅವರನ್ನು ಎಲ್ಲ ರೀತಿಯಲ್ಲಿ ಸೋಲಿಸಿದ್ದಾರೆ ಮತ್ತು ಅವರಿಗೆ ಗಲ್ಲಿಗಳಲ್ಲಿ ಕೂಗುವುದನ್ನು ಬಿಟ್ಟು ಬೇರೆ ಆಯ್ಕೆಗಳಿಲ್ಲʼʼ ಎಂದು ಟೀಕಿಸಿದರು.

ʼʼಬೆಂಬಲ ಬೆಲೆಯಲ್ಲಿ ದಾಖಲೆಯ ಖರೀದಿಯನ್ನೂ ಮಾಡಿದ್ದೇವೆ. ಮೊದಲು ಕೇವಲ ಘೋಷಣೆಗಳನ್ನು ಮಾಡಲಾಗುತ್ತಿತ್ತು, ಆದರೆ ಈಗ ಖರೀದಿಗಳನ್ನು ಮಾಡಲಾಗಿದೆ. ನಾವು ಮಹಿಳೆಯರ ಹೆಸರಿನಲ್ಲಿ ಹೆಚ್ಚಿನ ಮನೆಗಳನ್ನು ನಿರ್ಮಿಸಿದ್ದೇವೆ. ಬ್ಯಾಂಕ್‌ಗಳಲ್ಲಿ ಖಾತೆ ತೆರೆಯುವುದರೊಂದಿಗೆ ಆರ್ಥಿಕ ನಿರ್ಧಾರಗಳಲ್ಲಿ ಮಹಿಳೆಯರ ಪಾತ್ರ ಹೆಚ್ಚಿದೆ. ಎಲ್ಲರಿಂದಲೂ ಕಡೆಗಣಿಸಲ್ಪಟ್ಟ ಮಹಿಳೆಯರಲ್ಲಿ ಆತ್ಮವಿಶ್ವಾಸ ವೃದ್ಧಿಸಿದೆʼʼ ಎಂದು ಮೋದಿ ತಿಳಿಸಿದರು.

ಮೋದಿ ಹೇಳಿದ್ದೇನು?

  • ಈ ಚುನಾವಣೆಯಲ್ಲಿ ಈ ದೇಶದ ಜನರು ತೋರಿದ ಬುದ್ಧಿವಂತಿಕೆಯ ಬಗ್ಗೆ ನಮಗೆ ಹೆಮ್ಮೆ ಇದೆ. ಅವರು ಪ್ರಚಾರವನ್ನು ಸೋಲಿಸಿದರು. ಅವರು ಕಾರ್ಯಕ್ಷಮತೆಗೆ ಆದ್ಯತೆ ನೀಡಿದರು. ಅವರು ಮೋಸದ ರಾಜಕೀಯವನ್ನು ತಿರಸ್ಕರಿಸಿದರು ಮತ್ತು ನಂಬಿಕೆಯ ರಾಜಕೀಯದ ಮೇಲೆ ವಿಜಯದ ಮುದ್ರೆ ಒತ್ತಿದರು.
  • ‘ವಿಸಿತ್‌ ಭಾರತ್’ ಮತ್ತು ‘ಆತ್ಮನಿರ್ಭರ ಭಾರತ್’ ಅನ್ನು ಸಾಕಾರಗೊಳಿಸಲು ದೇಶದ ಜನರು ಮೂರನೇ ಬಾರಿಗೆ ನಮಗೆ ನೀಡಿದ ಅವಕಾಶ ಇದು.
  • ಮುಂದಿನ ಐದು ವರ್ಷಗಳು ಮೂಲಭೂತ ಸೌಕರ್ಯಗಳ ಪರಿಪೂರ್ಣತೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ಬಡತನದ ವಿರುದ್ಧದ ಹೋರಾಟಕ್ಕೆ ಮೀಸಲಿಡುತ್ತಿದ್ದೇವೆ. ಈ ದೇಶವು ಬಡತನದ ವಿರುದ್ಧದ ಹೋರಾಟದಲ್ಲಿ ವಿಜಯಶಾಲಿಯಾಗಿ ಹೊರಹೊಮ್ಮಲಿದೆ ಮತ್ತು ಕಳೆದ 10 ವರ್ಷಗಳ ಅನುಭವದ ಆಧಾರದ ಮೇಲೆ ನಾನು ಇದನ್ನು ಹೇಳುತ್ತಿದ್ದೇನೆ ಎಂದು ಮೋದಿ ಹೇಳಿದರು.
  • ಇದನ್ನೂ ಓದಿ: Narendra Modi: ರಾಹುಲ್‌ ಗಾಂಧಿ ಥರ ಆಡ್ಬೇಡಿ; ಗಂಭೀರವಾಗಿರಿ: ಎನ್‌ಡಿಎ ಸಂಸದರಿಗೆ ಮೋದಿ ಕಿವಿಮಾತು
Continue Reading
Advertisement
Viral Video
Latest2 mins ago

Viral Video: ರಜೆಯಲ್ಲೂ ಮಗುವಿನ ಹೋಮ್‌ ವರ್ಕ್ ನೋಡಿ ಸಿಟ್ಟಾದ ತಾಯಿ ಮಾಡಿದ್ದೇನು? ವಿಡಿಯೊ ನೋಡಿ!

Ram charan the Indian House on set
ಟಾಲಿವುಡ್8 mins ago

Ram Charan: ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ಸಿನಿಮಾ!

Family drama Kannada movie song
ಕರ್ನಾಟಕ10 mins ago

Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

Suraj Revanna Case
ಕರ್ನಾಟಕ12 mins ago

Suraj Revanna Case: ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

Sexual Harassment
Latest13 mins ago

Sexual Harassment: ಎಲ್ಲಾ ತಂದೆಯರೂ ಹೀಗೇ ಮಾಡುತ್ತಾರೆ ಎನ್ನುತ್ತ ಮಗಳನ್ನೇ ಗರ್ಭಿಣಿ ಮಾಡಿದ್ದ ನೀಚ ತಂದೆಗೆ 101 ವರ್ಷ ಶಿಕ್ಷೆ!

Koo Shut Down
ಕರ್ನಾಟಕ23 mins ago

Koo Shut Down: ‘ಕೂ’ಗು ನಿಲ್ಲಿಸಿದ ಕನ್ನಡಿಗನೇ ಕಟ್ಟಿದ ಆ್ಯಪ್‌; ದೇಶೀಯ ಟ್ವಿಟರ್‌ ಇನ್ನು ನೆನಪು ಮಾತ್ರ!

Ananth Ambani
Latest32 mins ago

Ananth Ambani: ಸಾಮೂಹಿಕ ವಿವಾಹದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಅಂಬಾನಿ ಕುಟುಂಬ

kanaganahalli mid day meal
ಕಲಬುರಗಿ34 mins ago

Mid Day Meal: ಕಲಬುರಗಿಯಲ್ಲಿ ಬಿಸಿಯೂಟ ಉಂಡ 33 ವಿದ್ಯಾರ್ಥಿಗಳು ಅಸ್ವಸ್ಥ; 3 ದಿನಗಳಲ್ಲಿ ಎರಡನೇ ಘಟನೆ

Yakshagana artist Tulsi Hegade added to the world record list
ಕರ್ನಾಟಕ35 mins ago

Sirsi News: ವಿಶ್ವಶಾಂತಿಗೆ ಯಕ್ಷ ನೃತ್ಯ ಕೊಡುಗೆ; ವಿಶ್ವದಾಖಲೆ ಪಟ್ಟಿಗೆ ತುಳಸಿ ಹೆಗಡೆ ಸೇರ್ಪಡೆ

Hardik Pandya
ಕ್ರೀಡೆ36 mins ago

Hardik Pandya: ಆಲ್​ರೌಂಡರ್​ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ ಹಾರ್ದಿಕ್​ ಪಾಂಡ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌