UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ - Vistara News

ಶಿಕ್ಷಣ

UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

UPSC: ಕೇಂದ್ರ ಲೋಕ ಸೇವಾ ಆಯೋಗವು 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ ಮತ್ತು ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯುಪಿಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಟೈಮ್‌ ಟೇಬಲ್‌ ಪ್ರಕಟಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

UPSC
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC)ವು 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ (Indian Economic Service-IES) / ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ (Indian Statistical Service Examination-ISSE)ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯುಪಿಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಟೈಮ್‌ ಟೇಬಲ್‌ ಪ್ರಕಟಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

ಯಾವಾಗ, ಯಾವ ಪರೀಕ್ಷೆ?

ಯುಪಿಎಸ್‌ಸಿ ಐಇಎಸ್ / ಐಎಸ್ಎಸ್ಇ 2024 ಪರೀಕ್ಷೆಗಳು ಜೂನ್ 21ರಂದು ಆರಂಭವಾಗಲಿದ್ದು, 22, 23ರಂದು ನಡೆಯಲಿದೆ. ಈ ಪರೀಕ್ಷೆ ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಅಧ್ಯಯನ, ಸಾಮಾನ್ಯ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ ಮತ್ತು ಭಾರತೀಯ ಅರ್ಥಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳಲ್ಲಿ ನಡೆಯಲಿದೆ. ಆರ್ಥಿಕ ಮತ್ತು ಸಂಖ್ಯಾಶಾಸ್ತ್ರೀಯ ಕ್ಷೇತ್ರಗಳಲ್ಲಿ ವೃತ್ತಿ ಜೀವನದ ನಡೆಸಲು ಬಯಸುವವರು ಈ ಪ್ರತಿಷ್ಠಿತ ಪರೀಕ್ಷೆಯ ವೇಳಾಪಟ್ಟಿಯನ್ನು ಎಚ್ಚರಿಕೆಯಿಂದ ಗಮನಿಸುವಂತೆ ಪ್ರಕಟಣೆ ತಿಳಿಸಿದೆ. ಪ್ರಶ್ನೆ ಪತ್ರಿಕೆ ವಸ್ತುನಿಷ್ಠ ಪ್ರಶ್ನೆಗಳು ಮತ್ತು ವಿವರಣಾತ್ಮಕ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಜೂನ್‌ 21ರಂದು ಬೆಳಿಗ್ಗೆ 9 ಗಂಟೆಗೆ ಸಾಮಾನ್ಯ ಇಂಗ್ಲಿಷ್‌ ಮತ್ತು ಅಪರಾಹ್ನ 2.30ಕ್ಕೆ ಸಾಮಾನ್ಯ ಅಧ್ಯಯನ ಪರೀಕ್ಷೆ ನಡೆಯಲಿದೆ. ಜೂನ್‌ 22ರಂದು ಬೆಳಿಗ್ಗೆ 9 ಗಂಟೆಗೆ ಸಾಮಾನ್ಯ ಅರ್ಥಶಾಸ್ತ್ರ-I, ಸ್ಟ್ಯಾಟಿಸ್ಟಿಕ್ಸ್‌-I ಮತ್ತು ಅಪರಾಹ್ನ 2.30ರಿಂದ ಸಾಮಾನ್ಯ ಅರ್ಥಶಾಸ್ತ್ರ-II ಹಾಗೂ ಸ್ಟ್ಯಾಟಿಸ್ಟಿಕ್ಸ್‌-II ಎಕ್ಸಾಂ ಆಯೋಜಿಸಲಾಗಿದೆ. ಇನ್ನು ಜೂನ್‌ 23ರಂದು ಬೆಳಿಗ್ಗೆ 9 ಗಂಟೆಯಿಂದ ಸಾಮಾನ್ಯ ಅರ್ಥಶಾಸ್ತ್ರ-III ಮತ್ತು ಸ್ಟ್ಯಾಟಿಸ್ಟಿಕ್ಸ್‌-III ಹಾಗೂ ಅಪರಾಹ್ನ 2.30ರಿಂದ ಭಾರತೀಯ ಅರ್ಥಶಾಸ್ತ್ರ ಹಾಗೂ ಸ್ಟ್ಯಾಟಿಸ್ಟಿಕ್ಸ್‌-IV ಪರೀಕ್ಷೆ ನಡೆಯಲಿದೆ.

ವೇಳಾಪಟ್ಟಿ ವೀಕ್ಷಿಸಲು ಹೀಗೆ ಮಾಡಿ

  • ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ಗೆ ಭೇಟಿ ನೀಡಿ.
  • ಬಲಭಾಗದಲ್ಲಿ ಕಾಣಿಸುವ What’s New ಆಯ್ಕೆಯ ಕೆಳಗೆ ಕಂಡು ಬರುವ Examination Time Table: Indian Economic Service – Indian Statistical Service Examination, 2024 ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ಪುಟದಲ್ಲಿನ Document ಆಪ್ಶನ್‌ ಆಯ್ಕೆ ಮಾಡಿದರೆ ವೇಳಾಪಟ್ಟಿ ತೆರೆದುಕೊಳ್ಳುತ್ತದೆ.

Indian Economic Service – Indian Statistical Service Examinationನ ಟೈಮ್‌ ಟೇಬಲ್‌ ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ.

ಹಾಲ್‌ ಟಿಕೆಟ್‌ ಯಾವಾಗ?

ಈ ಪರೀಕ್ಷೆಗೆ 2024ರ ಏಪ್ರಿಲ್ 10ರಿಂದ 30ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಲಿಖಿತ ಪರೀಕ್ಷೆಯು ಗರಿಷ್ಠ 1,000 ಅಂಕಗಳನ್ನು ಹೊಂದಿದೆ. ಪ್ರವೇಶ ಪತ್ರ (Hall Ticket)ವನ್ನು ಪರೀಕ್ಷೆಯ ಏಳು ದಿನಗಳ ಮೊದಲು ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಬಹುದು. ಈ ಪರೀಕ್ಷೆಯ ಮೂಲಕ ಆಯ್ಕೆಯಾದ ಅಧಿಕಾರಿಗಳನ್ನು ಆರ್ಥಿಕ ನೀತಿಗಳನ್ನು ರೂಪಿಸುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ ಮತ್ತು ಸರ್ಕಾರದ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡಲು ನೇಮಿಸಲಾಗುತ್ತದೆ.

ಇದನ್ನೂ ಓದಿ: UPSC EXAM-2023: ಯುಪಿಎಸ್‌ಸಿ ಟಾಪರ್ ವಾಸಿಸುತ್ತಿದ್ದುದು ಮನೆಯಲ್ಲಲ್ಲ, ಈ ಜೋಪಡಿಯಲ್ಲಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Joint CSIR UGC NET: ನೆಟ್‌ ಪರೀಕ್ಷೆ ರದ್ದಾದ ಬೆನ್ನಲ್ಲೇ ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಮುಂದೂಡಿಕೆ!

Joint CSIR UGC NET: ದೇಶದ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಜ್ಯೂನಿಯರ್‌ ರಿಸರ್ಚ್‌ ಫೆಲೋಶಿಪ್‌ (JRF) ಪಡೆಯಲು ಹಾಗೂ ಉಪನ್ಯಾಸಕರಾಗಿ ಅಥವಾ ಸಹಾಯ ಪ್ರಾಧ್ಯಾಪಕರಾಗಿ ಆಯ್ಕೆಯಾಗಲು ಅರ್ಹತೆ ಪಡೆಯಬೇಕಾದರೆ ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು. ಜೂನ್‌ 25 ಹಾಗೂ ಜೂನ್‌ 27ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು.

VISTARANEWS.COM


on

Joint CSIR UGC NET
Koo

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET 2024) ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಪರೀಕ್ಷೆಯನ್ನೇ ರದ್ದುಗೊಳಿಸಬೇಕು ಎಂಬ ಆಗ್ರಹಗಳು ಕೇಳಿಬರುತ್ತಿವೆ. ಮತ್ತೊಂದೆಡೆ, ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಯುಜಿಸಿ ನೆಟ್‌ (ಯುಜಿಸಿ-ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆ ನಡೆದ ಒಂದೇ ದಿನದಲ್ಲಿ ಕೇಂದ್ರ ಸರ್ಕಾರ ಪರೀಕ್ಷೆಯನ್ನೇ ರದ್ದುಗೊಳಿಸಿದೆ. ಇದರ ಬೆನ್ನಲ್ಲೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ (Joint CSIR UGC NET-Council of Scientific and Industrial Research-University Grants Commission National Eligibility Test) ಪರೀಕ್ಷೆಯನ್ನು ಮುಂದೂಡಿದೆ.

ದೇಶದ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಜ್ಯೂನಿಯರ್‌ ರಿಸರ್ಚ್‌ ಫೆಲೋಶಿಪ್‌ (JRF) ಪಡೆಯಲು ಹಾಗೂ ಉಪನ್ಯಾಸಕರಾಗಿ ಅಥವಾ ಸಹಾಯ ಪ್ರಾಧ್ಯಾಪಕರಾಗಿ ಆಯ್ಕೆಯಾಗಲು ಅರ್ಹತೆ ಪಡೆಯಬೇಕಾದರೆ ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು. ಜೂನ್‌ 25 ಹಾಗೂ ಜೂನ್‌ 27ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಈಗ ಪರೀಕ್ಷೆಯನ್ನು ಮುಂದೂಡಿ ಎನ್‌ಟಿಎ ಆದೇಶ ಹೊರಡಿಸಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸಲಾಗುವುದು ಎಂದು ಎನ್‌ಟಿಎ ತಿಳಿಸಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ಗೆ (https://csirnet.nta.ac.in/) ಭೇಟಿ ನೀಡಿ ಎಂದು ಕೂಡ ತಿಳಿಸಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ಎರಡು ದಿನಗಳ ಹಿಂದಷ್ಟೇ ರದ್ದುಗೊಳಿಸಿದೆ. ನ್ಯಾಷನ್‌ ಸೈಬರ್‌ ಕ್ರೈಮ್‌ ಥ್ರೆಟ್‌ ಅನಾಲಿಟಿಕ್ಸ್‌ ಯುನಿಟ್‌ ಆಫ್‌ ಇಂಡಿಯನ್‌ ಸೈಬರ್‌ ಕ್ರೈಮ್‌ ಕೋ-ಆರ್ಡಿನೇಷನ್‌ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.

ಜೂನ್‌ 18ರಂದು ಕರ್ನಾಟಕ ಸೇರಿ ದೇಶಾದ್ಯಂತ 317 ನಗರಗಳ 1,205 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 11 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೆಟ್‌ಗೆ ಹಾಜರಾಗಿದ್ದರು. ಈಗ ಪರೀಕ್ಷೆಯನ್ನು ರದ್ದುಗೊಳಿಸಿರುವ ಕಾರಣ ಶೀಘ್ರದಲ್ಲೇ ಹೊಸ ದಿನಾಂಕ ಘೋಷಿಸಲಾಗುತ್ತದೆ ಎಂದು ತಿಳಿದುಬಂದಿದೆ. ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪಿಎಚ್‌.ಡಿ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಬದಲು ಅಭ್ಯರ್ಥಿಯು ನೆಟ್‌ನಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಲು ಯುಜಿಸಿಯು ಈಗಾಗಲೇ ಅನುಮೋದನೆ ನೀಡಿದೆ. ಹಾಗಾಗಿ, ಅಭ್ಯರ್ಥಿಗಳಿಗೆ ನೆಟ್‌ ಪ್ರಮುಖ ಸಂಗತಿಯಾಗಿದೆ.

ಇದನ್ನೂ ಓದಿ: NET 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ; ಏನಿದು ಕೇಸ್?‌

Continue Reading

ಕರ್ನಾಟಕ

LKG UKG In Govt Schools: 578 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರ ಆದೇಶ; ಶಿಕ್ಷಕರಾಗಲು ಅರ್ಹತೆ ಏನು?

LKG UKG In Govt Schools: 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ.

VISTARANEWS.COM


on

LKG UKG In Govt Schools
Koo

ಬೆಂಗಳೂರು: ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (govt pre-schools) ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (LKG UKG In Govt Schools) ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ. ಅದರಂತೆ, 2023-24 ನೇ ಸಾಲಿನಲ್ಲಿ ರಾಜ್ಯದ ಆಯ್ದ 262 ಮತ್ತು 2024-25ನೇ ಸಾಲಿನಲ್ಲಿ 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದ ಅನುಮತಿ ನೀಡುವಂತೆ ಕೋರಿ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಆದೇಶ ಹೊರಡಿಸಲಾಗಿದೆ.

ಇನ್ನು ಶಿಕ್ಷಣ ಸಚಿವಾಲದ ಸೂಚನೆಯಂತೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾಯೋಗಿಕವಾಗಿ ಪ್ರಾರಂಭಿಸುವ ಸಂಬಂಧದಲ್ಲಿ ಈ ಕೆಳಗಿನಂತೆ ವಿವರವಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.

ಇದನ್ನೂ ಓದಿ | NET 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ; ಏನಿದು ಕೇಸ್?‌

ತರಗತಿ ಪ್ರಾರಂಭಿಸಲು ಪಾಲಿಸಬೇಕಾದ ಸೂಚನೆಗಳು

  • 2024-25ನೇ ಸಾಲಿನ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.
  • 2024-25ನೇ ಸಾಲಿನಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರಿ ಪ್ರಾಥಮಿಕ ಶಾಲೆಗಳ ಎಸ್.ಡಿ.ಎಂ.ಸಿಯವರು ಮತ್ತು ಶಿಕ್ಷಕರು ಸ್ಥಳೀಯ ಮಟ್ಟದಲ್ಲಿ ಪ್ರಚಾರ ಮಾಡಬೇಕು.
  • 2024-25ನೇ ಸಾಲಿನ ಪೂರ್ವ ಪ್ರಾಥಮಿಕ LKGಯ ಒಂದು ವಿಭಾಗವನ್ನು ಮಾತ್ರ ಪ್ರಾರಂಭಿಸುವುದು, ಈ LKG ತರಗತಿಗೆ 4 ವರ್ಷದಿಂದ 5 ವರ್ಷದ ವಯೋಮಿತಿಯ ಒಳಗಿನ ಮಕ್ಕಳನ್ನು ದಾಖಲುಮಾಡಿಕೊಳ್ಳುವುದು. ಈ ವಿಭಾಗ ಪ್ರಾರಂಭಿಸಲು 4 ವರ್ಷದಿಂದ 5 ವರ್ಷದ ವಯೋಮಾನದ ಕನಿಷ್ಠ 20 ಮಕ್ಕಳು ಪ್ರವೇಶ ಪಡೆಯುವಂತಿರಬೇಕು ಹಾಗೂ ಗರಿಷ್ಠ 30 ಮಕ್ಕಳನ್ನು ಮಾತ್ರ ದಾಖಲಿಸಬೇಕು.
  • ಪೂರ್ವ ಪ್ರಾಥಮಿಕ ತರಗತಿಯನ್ನು ಪ್ರಾರಂಭಿಸಲು ಒಂದು ಕೊಠಡಿಯನ್ನು ಗುರುತಿಸಿಕೊಳ್ಳುವುದು ಹಾಗೂ ಕೊಠಡಿ ಸಜ್ಜುಗೊಳಿಸುವುದು ಅವಶ್ಯ ಸಾಧನ ಸಾಮಗ್ರಿಗಳನ್ನು ನಿಯಮಾನುಸಾರ ಖರೀದಿಸುವುದು. ಕೊಠಡಿ ಸಜ್ಜುಗೊಳಿಸಲು ಸ್ಥಳಿಯ ಚಿತ್ರಕಲಾ ಶಿಕ್ಷಕರನ್ನು / ಚಿತ್ರಕಲಾ ಪರಿಣಿತರನ್ನು ಬಳಸಿಕೊಂಡು ಮಕ್ಕಳಿಗೆ ಆಕರ್ಷಕವಾದ ಚಿತ್ರಗಳ ರಚನೆ, ಗೋಡೆ ಮೇಲೆ ನೆಲ ಮಟ್ಟದಿಂದ 2 ಅಡಿಯವರೆಗೆ ಮಕ್ಕಳು ಬರೆಯಲು/ ಚಿತ್ರ ರಚಿಸಲು ಸಾಧ್ಯವಾಗುವಂತೆ ಗ್ರೀನ್ ಬೋರ್ಡ/ಕರಿಹಲಗೆ ರಚನೆ ಮುಂತಾದ ಕಾರ್ಯಗಳನ್ನು ಮಾಡುವುದು. ಖರೀದಿಸಬೇಕಾದ ಸಾಧನ ಸಾಮಗ್ರಿಗಳ ಪಟ್ಟಿಯನ್ನು ಹಾಗೂ ಕೆಲವು ಕೊಠಡಿಯ ವಿನ್ಯಾಸದ ಕೆಲವು ಮಾದರಿ ಉದಾಹರಣೆಗಳನ್ನು ಕೂಡಲೇ ಒದಗಿಸಬೇಕು.
  • ಪ್ರತಿ ಪೂರ್ವ ಪ್ರಾಥಮಿಕ ತರಗತಿಗೆ ಒಬ್ಬ ಶಿಕ್ಷಕಿ/ಶಿಕ್ಷಕ ಮತ್ತು ಒಬ್ಬರು ಆಯಾರವರನ್ನು ಶಾಲಾ ಎಸ್.ಡಿ.ಎಂ.ಸಿ ವತಿಯಿಂದ ತಾತ್ಕಾಲಿಕವಾಗಿ 10 ತಿಂಗಳುಗಳ ಅವಧಿಗೆ ನೇಮಕ ಮಾಡಿಕೊಳ್ಳತಕ್ಕದ್ದು. ಪೂರ್ವ ಪ್ರಾಥಮಿಕ ತರಗತಿ ಶಿಕ್ಷಕಿ/ಶಿಕ್ಷಕರಿಗೆ ಪ್ರಸ್ತುತ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಸಂಭಾವನೆಯಂತೆಯೇ ಮಾಸಿಕ 10,000 ರೂ. ಮತ್ತು ಆಯಾಗಳಿಗೆ ಮಾಸಿಕ 5000 ರೂ. ಸಂಭಾವನೆಯನ್ನು ನಿಗದಿಪಡಿಸತಕ್ಕದ್ದು.
  • ವೇತನ ಅನುದಾನವನ್ನು ಆಯಾ ಎಸ್.ಡಿ.ಎಂ.ಸಿ. ಖಾತೆಗೆ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಿಂದ ಬಿಡುಗಡೆ ಮಾಡಬೇಕು.

ಆಡಳಿತಾತ್ಮಕ ಕ್ರಮಗಳು

ಶಿಕ್ಷಕಿ/ಶಿಕ್ಷಕರನ್ನು ಮತ್ತು ಆಯಾ ಅವರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಈ ಕೆಳಗಿನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ | NEET-UG Row: ನೀಟ್‌ ಕೌನ್ಸೆಲಿಂಗ್‌ಗೆ ತಡೆ ಇಲ್ಲ ಎಂದು ಪುನರುಚ್ಚರಿಸಿದ ಸುಪ್ರೀಂ ಕೋರ್ಟ್

ಶಿಕ್ಷಕರ ಆಯ್ಕೆಗೆ ಆರ್ಹತೆ

ಪೂರ್ವ ಪ್ರಾಥಮಿಕ ತರಗತಿ ಶಿಕ್ಷಕಿ/ಶಿಕ್ಷಕ, ಪದವಿ ಪೂರ್ವ ಶಿಕ್ಷಣದಲ್ಲಿ (PUC) ಕನಿಷ್ಠ ಶೇ.50 ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು ಮತ್ತು NCTE ಮಾನ್ಯತೆ ಪಡೆದ ಸಂಸ್ಥೆಯಿಂದ ಎರಡು ಅಥವಾ ಎರಡು ವರ್ಷಕ್ಕಿಂತ ಹೆಚ್ಚಿನ ಅವಧಿಯ ಡಿಪ್ಲೊಮಾ ಇನ್ ನರ್ಸರಿ ಟೀಚರ್ಸ್ ಎಜ್ಯುಕೇಶನ್/ಪ್ರೀ- ಸ್ಕೂಲ್ ಎಜ್ಯುಕೇಶನ್/ಅರ್ಲಿ ಚೈಲ್ಡ್‌ಹುಡ್ ಎಜುಕೇಶನ್ ಪ್ರೊಗ್ರಾಂ (ಡಿ.ಇ.ಸಿ.ಇಡಿ) ಅಥವಾ ಬಿ.ಇಡಿ (ನರ್ಸರಿ) ಅರ್ಹತೆ (Diploma in Nursery Teachers Education/pre-School Education/Early Childhood Education Programme (D.E.C.ED) of duration of not less than two years or B.Ed(Nursery)] ಹೊಂದಿರಬೇಕು, ವಯಸ್ಸು 45 ವರ್ಷಕ್ಕಿಂತ ಕಡಿಮೆ ಇರಬೇಕು.

ಒಂದು ವೇಳೆ ಈ ಮೇಲಿನ ಪೂರ್ವ ಪ್ರಾಥಮಿಕ ಶಿಕ್ಷಕರ ತರಬೇತಿ ಪಡೆದ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಪಿ.ಯು.ಸಿ.ಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆಯುವುದರ ಜತೆಗೆ NCTE ಮಾನ್ಯತೆ ಪಡೆದ ಸಂಸ್ಥೆಯಿಂದ ಡಿ.ಎಡ್ ತರಬೇತಿ ಹೊಂದಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಭ್ಯರ್ಥಿಗಳನ್ನು ಪರಿಗಣಿಸತಕ್ಕದ್ದು.

ಆಯಾಗಳ ಹುದ್ದೆಗೆ ಅರ್ಹತೆ:

  1. ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು ಕಡ್ಡಾಯವಾಗಿ ಮಹಿಳೆಯಾಗಿರಬೇಕು, ವಯಸ್ಸು 45 ವರ್ಷಕ್ಕಿಂತ ಕಡಿಮೆ ಇರಬೇಕು ಮತ್ತು ಸ್ಥಳಿಯರಾಗಿರಬೇಕು (ಆಯಾ ಗ್ರಾಮ/ವಾರ್ಡ್ ವ್ಯಾಪ್ತಿಯವರು), ಒಂದು ವೇಳೆ ಸ್ಥಳಿಯವಾಗಿ ಯಾವುದೇ ಅಭ್ಯರ್ಥಿ ಲಭ್ಯವಿಲ್ಲದೇ ಇದ್ದಲ್ಲಿ ಸರ್ಕಾರಿ ಶಾಲೆ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದವರನ್ನು/ಪಕ್ಕದ ವಾರ್ಡಿನವರನ್ನು ಪರಿಗಣಿಸತಕ್ಕದ್ದು.

ಶಿಕ್ಷಕರ/ಆಯಾರ ಆಯ್ಕೆಯಲ್ಲಿ ಅನುಸರಿಸಬೇಕಾದ ಮಾನದಂಡಗಳು

  1. a) ಶಿಕ್ಷಕರ/ಆಯಾರ ಆಯ್ಕೆ ಸಮಿತಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಇರುವ ಮುಖ್ಯ ಶಿಕ್ಷಕರು, ಪ್ರಾಥಮಿಕ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಒಬ್ಬ ಹಿರಿಯ ಸಹ ಶಿಕ್ಷಕ / ಶಿಕ್ಷಕಿ ಸದಸ್ಯರಾಗಿರತಕ್ಕದ್ದು.
    B)ಶಿಕ್ಷಕರ ಆಯ್ಕೆಗೆ ವಿವಿಧ ಅಂಶಗಳಿಗೆ ನೀಡಬೇಕಾದ ಮೌಲ್ಯ (weightage): ಅರ್ಹ ಅಭ್ಯರ್ಥಿಗಳ ಪೈಕಿ ನಿಗದಿತ ಮಾನದಂಡದಂತೆ ಅತೀ ಹೆಚ್ಚು ಒಟ್ಟು ಅಂಕಗಳಿಸಿದವರನ್ನು ಪರಿಗಣಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.


    Continue Reading

    ಪ್ರಮುಖ ಸುದ್ದಿ

    NEET-UG Row: ನೀಟ್‌ ಕೌನ್ಸೆಲಿಂಗ್‌ಗೆ ತಡೆ ಇಲ್ಲ ಎಂದು ಪುನರುಚ್ಚರಿಸಿದ ಸುಪ್ರೀಂ ಕೋರ್ಟ್

    NEET-UG Row: ಕಳೆದ ವಾರ, ನೀಟ್‌ ಪರೀಕ್ಷೆಯಲ್ಲಿ ಆಗಿರಬುದಾದ ಸಣ್ಣ ನಿರ್ಲಕ್ಷ್ಯವನ್ನು ಸಹ ಸಹಿಸಲಾಗುವುದಿಲ್ಲ ಎಂದು ನ್ಯಾಯಾಲಯ ಗುಡುಗಿತ್ತು. ಆದರೆ ಕೌನ್ಸೆಲಿಂಗ್‌ಗೆ ತಡೆ ನೀಡಲು ನಿರಾಕರಿಸಿತ್ತು. “ಯಾರದಾದರೂ ಕಡೆಯಿಂದ 0.001% ನಿರ್ಲಕ್ಷ್ಯವಿದ್ದರೆ ಸದ ಅದನ್ನು ಸಂಪೂರ್ಣವಾಗಿ ಬಗೆಹರಿಸಬೇಕು” ಎಂದು ನ್ಯಾಯಾಲಯ ಹೇಳಿದೆ.

    VISTARANEWS.COM


    on

    NEET UG row Result 2024 supreme court
    Koo

    ಹೊಸದಿಲ್ಲಿ : ವೈದ್ಯಕೀಯ ಪ್ರವೇಶ ಪರೀಕ್ಷೆಯ (NEET-UG 2024) ನಡಾವಳಿಯ ಅಕ್ರಮಗಳ ಕುರಿತು ಎದ್ದಿರುವ ಕೋಲಾಹಲದ (NEET-UG Row) ನಡುವೆ, NEET-UG 2024 ಕೌನ್ಸೆಲಿಂಗ್‌ಗೆ (NEET-UG 2024 counselling) ತಡೆ ನೀಡಲು ಸುಪ್ರೀಂ ಕೋರ್ಟ್ (Supreme Court) ಮತ್ತೊಮ್ಮೆ ನಿರಾಕರಿಸಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ (NTA) ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

    ಬಾಕಿ ಉಳಿದಿರುವ ಅರ್ಜಿಗಳ ಜೊತೆಗೆ ಹೊಸ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಟ್ಯಾಗ್ ಮಾಡಿ ಜುಲೈ 8ರಂದು ವಿಚಾರಣೆಗೆ ಮುಂದೂಡಿದೆ. ಗುರುವಾರ, ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ- ಪದವಿಪೂರ್ವ (NEET-UG) 2024ರ ನಡವಳಿಯನ್ನು ಪ್ರಶ್ನಿಸಿ, ಪೇಪರ್ ಸೋರಿಕೆ ಮತ್ತು ಗ್ರೇಸ್ ಮಾರ್ಕ್‌ಗಳನ್ನು ಒಳಗೊಂಡಿರುವ ಅವ್ಯವಹಾರಗಳ ಬಗ್ಗೆ ಸ್ವತಂತ್ರ ತನಿಖೆಯನ್ನು ಕೋರಿ ಮೂರು ಹೈಕೋರ್ಟ್‌ಗಳಲ್ಲಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ತಡೆಹಿಡಿಯಿತು.

    ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎಸ್‌ವಿಎನ್ ಭಟ್ಟಿ ಅವರಿದ್ದ ರಜಾಕಾಲದ ಪೀಠವು, ಎನ್‌ಇಇಟಿ-ಯುಜಿ ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸಲ್ಲಿಸಿದ ವರ್ಗಾವಣೆ ಅರ್ಜಿಗಳು ಮತ್ತು ಇದೇ ರೀತಿಯ ಕುಂದುಕೊರತೆಗಳನ್ನು ಎತ್ತುವ ಇತರ 11 ಅರ್ಜಿಗಳನ್ನೂ ಸೇರಿಸಿ ನೋಟಿಸ್ ಜಾರಿ ಮಾಡಿದೆ. ಜುಲೈ 8 ರಂದು ವಿಚಾರಣೆಗೆ ಬರಲಿರುವ ಇದೇ ವಿಷಯದ ಕುರಿತು ಬಾಕಿ ಉಳಿದಿರುವ ಪ್ರಕರಣಗಳ ಜೊತೆಗೆ ಈ ವಿಷಯವನ್ನು ಸೇರಿಸಲಾಗಿದೆ.

    ಕಳೆದ ವಾರ, ನೀಟ್‌ ಪರೀಕ್ಷೆಯಲ್ಲಿ ಆಗಿರಬುದಾದ ಸಣ್ಣ ನಿರ್ಲಕ್ಷ್ಯವನ್ನು ಸಹ ಸಹಿಸಲಾಗುವುದಿಲ್ಲ ಎಂದು ನ್ಯಾಯಾಲಯ ಗುಡುಗಿತ್ತು. ಆದರೆ ಕೌನ್ಸೆಲಿಂಗ್‌ಗೆ ತಡೆ ನೀಡಲು ನಿರಾಕರಿಸಿತ್ತು. “ಯಾರದಾದರೂ ಕಡೆಯಿಂದ 0.001% ನಿರ್ಲಕ್ಷ್ಯವಿದ್ದರೆ ಸದ ಅದನ್ನು ಸಂಪೂರ್ಣವಾಗಿ ಬಗೆಹರಿಸಬೇಕು” ಎಂದು ನ್ಯಾಯಾಲಯ ಹೇಳಿದೆ.

    ನೀಟ್‌ ಪರೀಕ್ಷೆಯನ್ನು ಮೇ 5ರಂದು ನಡೆಸಲಾಗಿತ್ತು. ಈ ತಿಂಗಳ ಆರಂಭದಲ್ಲಿ ಫಲಿತಾಂಶಗಳು ಬಂದವು. ದೇಶದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದೆಂದು ಪರಿಗಣಿಸಲಾದ ನೀಟ್ ಪರೀಕ್ಷೆಯಲ್ಲಿ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೂರ್ಣ ಅಂಕಗಳನ್ನು ಗಳಿಸಿದ್ದರು. ನಂತರ, ಪ್ರವೇಶ ಪರೀಕ್ಷೆಯ ನಡವಳಿಯಲ್ಲಿ ಅಕ್ರಮಗಳಾಗಿವೆ ಎಂದು ವೈದ್ಯಕೀಯ ಆಕಾಂಕ್ಷಿಗಳು ಆರೋಪಿಸಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ನೀಡಿದ ಗ್ರೇಸ್ ಅಂಕಗಳ ಬಗ್ಗೆಯೂ ಕೋಲಾಹಲ ಉಂಟಾಗಿತ್ತು. ಪ್ರತಿಭಟನೆಯ ನಂತರ, NTA 1500ಕ್ಕೂ ಹೆಚ್ಚು ವೈದ್ಯಕೀಯ ಆಕಾಂಕ್ಷಿಗಳಿಗೆ ಪರೀಕ್ಷೆಯನ್ನು ಮರುಪಡೆಯಲು ಕೇಳಿಕೊಂಡಿತು.

    ಏತನ್ಮಧ್ಯೆ, ಯುಜಿಸಿ-ನೆಟ್ ಪೇಪರ್ ಇಂಟರ್‌ನೆಟ್‌ನಲ್ಲಿ ಸೋರಿಕೆಯಾದ ನಂತರ ಪರೀಕ್ಷೆ ರದ್ದತಿಗೆ ಕಾರಣವಾಯಿತು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಎನ್‌ಟಿಎಯಲ್ಲಿ ಸುಧಾರಣೆಗಳ ಕುರಿತು ಶಿಫಾರಸುಗಳನ್ನು ಮಾಡಲು ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

    “ಎನ್‌ಟಿಎಯಲ್ಲಿನ ಸುಧಾರಣೆಗಳಿಗೆ ಸಂಬಂಧಿಸಿದಂತೆ ಸರ್ಕಾರವು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಿದೆ. ಸಮಿತಿಯು ಎನ್‌ಟಿಎ, ಅದರ ರಚನೆ, ಕಾರ್ಯನಿರ್ವಹಣೆ, ಪರೀಕ್ಷಾ ಪ್ರಕ್ರಿಯೆ, ಪಾರದರ್ಶಕತೆ ಮತ್ತು ಡೇಟಾ ಭದ್ರತಾ ಪ್ರೋಟೋಕಾಲ್‌ಗಳನ್ನು ಇನ್ನಷ್ಟು ಸುಧಾರಿಸಲು ಶಿಫಾರಸುಗಳನ್ನು ಮಾಡುವ ನಿರೀಕ್ಷೆಯಿದೆ. ಶೂನ್ಯ-ದೋಷ ಪರೀಕ್ಷೆಯು ನಮ್ಮ ಬದ್ಧತೆ. ಸಮಿತಿಯು ಜಾಗತಿಕ ತಜ್ಞರನ್ನೂ ಹೊಂದಿರುತ್ತದೆ” ಎಂದು ಅವರು ಹೇಳಿದರು.

    ಏನಿದು ಹಗರಣ?

    ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG Result 2024) ಅಕ್ರಮ ನಡೆದಿದೆ ಎಂದು ನೀಟ್ ಆಕಾಂಕ್ಷಿಗಳು ಒಂದೆಡೆ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ (exam) ಗ್ರೇಸ್ ಅಂಕಗಳನ್ನು (grace marks) ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆ (retest) ನಡೆಸಲು ಕೇಂದ್ರ ಸರ್ಕಾರ (central govt) ಗುರುವಾರ ಪ್ರಸ್ತಾವನೆ ಸಲ್ಲಿಸಿದೆ. ನೀಟ್ ಫಲಿತಾಂಶ ಘೋಷಣೆಯಾದ ಬಳಿಕ ಆಕಾಂಕ್ಷಿಗಳು ಮತ್ತು ಪೋಷಕರು ಕೆಲವು ಕೇಂದ್ರಗಳಲ್ಲಿ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ತನಿಖೆ ಮತ್ತು ಮರು ಪರೀಕ್ಷೆಗೆ ಒತ್ತಾಯಿಸುತ್ತಿದ್ದಾರೆ.

    ನೀಟ್- ಯುಜಿ ಅನ್ನು ಮೊದಲು ಆಲ್ ಇಂಡಿಯಾ ಪ್ರಿ ಮೆಡಿಕಲ್ ಟೆಸ್ಟ್ (AIPMT) ಎಂದು ಕರೆಯಲಾಗುತ್ತಿತ್ತು. ಇದು ದೇಶದಾದ್ಯಂತ ಎಲ್ಲಾ ವೈದ್ಯಕೀಯ ಸಂಸ್ಥೆಗಳಲ್ಲಿ ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನಡೆಯುವ ಏಕೈಕ ಪ್ರವೇಶ ಪರೀಕ್ಷೆಯಾಗಿದೆ.

    ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಸೇರಿದಂತೆ ಹದಿಮೂರು ಭಾಷೆಗಳಲ್ಲಿ ಪರೀಕ್ಷೆಯನ್ನು ನಡೆಸುವ ಉಸ್ತುವಾರಿ ವಹಿಸಿಕೊಂಡಿದೆ. ಈ ಹಿಂದೆ ಸೆಂಟ್ರಲ್ ಬೋರ್ಡ್ ಆಫ್ ಸ್ಕೂಲ್ ಎಜುಕೇಶನ್ (CBSE) ಇದನ್ನು ನಡೆಸುತ್ತಿತ್ತು.

    ನೀಟ್ ಯುಜಿ ಫಲಿತಾಂಶಗಳ ಸುತ್ತ ವಿವಾದ

    2024ರ ಮೇ 5ರಂದು 14 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 571 ನಗರಗಳಲ್ಲಿ, 4,750 ಕೇಂದ್ರಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಬಳಿಕ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ದೊರೆತಿರುವುದು ಭಾರಿ ಸುದ್ದಿ ಆಯಿತು. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪರಿಪೂರ್ಣ ಅಂಕಗಳನ್ನು ಸಾಧಿಸಲು ಪ್ರಶ್ನೆ ಪತ್ರಿಕೆ ಸೋರಿಕೆಯೇ ಕಾರಣ ಎಂಬ ಆರೋಪಗಳೂ ಕೇಳಿ ಬಂದಿದೆ.

    ನೀಟ್ ಯುಜಿ ಪರೀಕ್ಷೆ ಬರೆದ 67 ವಿದ್ಯಾರ್ಥಿಗಳು ಒಟ್ಟು 720 ಅಂಕಗಳನ್ನು ಗಳಿಸಿದ್ದಾರೆ ಎಂಬುದು ಫಲಿತಾಂಶ ತೋರಿಸಿವೆ. ಇದು ಹಿಂದಿನ ವರ್ಷಗಳ ಫಲಿತಾಂಶಗಳಿಗೆ ಹೋಲಿಸಿದರೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ಮಾತ್ರ ಪೂರ್ಣ ಅಂಕ ಗಳಿಸಿದ್ದರೆ, 2022ರಲ್ಲಿ ಮೂವರು, 2021ರಲ್ಲಿ ಇಬ್ಬರು, 2020ರಲ್ಲಿ ಒಬ್ಬರು ಮಾತ್ರ ಪೂರ್ಣ ಅಂಕ ಗಳಿಸಿದ್ದರು. ಈ ಬಾರಿ ಹರ್ಯಾಣದ ಒಂದೇ ಕೇಂದ್ರದಲ್ಲಿ ಆರು ಮಂದಿ ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಇದು ಸಂಶಯಕ್ಕೆ ಆಸ್ಪದ ಮಾಡಿ ಕೊಟ್ಟಿದೆ.

    Continue Reading

    ಶಿಕ್ಷಣ

    Engineering Seats: ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಸಿಹಿಸುದ್ದಿ; ಈ ಬಾರಿ ಹೆಚ್ಚು ಸೀಟುಗಳು ಲಭ್ಯ!

    ಉನ್ನತ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ ಸೀಟ್ ಲಭ್ಯತೆ ಬಗ್ಗೆ ಅಧಿಸೂಚನೆ ಹೊರಡಿಸಿದೆ. 2024- 25ನೇ ಸಾಲಿನ ಎಂಜಿನಿಯರಿಂಗ್ ಪ್ರವೇಶಕ್ಕೆ (Engineering Seats) ಎಲ್ಲ ಮಾದರಿಯ 245 ಎಂಜಿನಿಯರಿಂಗ್ ಕಾಲೇಜುಗಳಿಂದ 1,32,309 ಸೀಟುಗಳ ಇನ್ ಟೆಕ್ ಆಗಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಸೀಟುಗಳು ಲಭ್ಯ ಆಗಲಿವೆ. ಆದರೆ ಸಿಇಟಿ ಅರ್ಹತೆ ಪಡೆದ ವಿದ್ಯಾರ್ಥಿಗಳ ಸಂಖ್ಯೆಯೂ ಕಳೆದ ಬಾರಿಗಿಂತ ಈ ವರ್ಷ ಹೆಚ್ಚಿದೆ.

    VISTARANEWS.COM


    on

    By

    Engineering Seats
    Koo

    ಬೆಂಗಳೂರು: ಎಂಜಿನಿಯರ್ (engineering) ಆಗುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ (students) ಒಂದು ಸಿಹಿ ಸುದ್ದಿ. ಈ ಬಾರಿ ರಾಜ್ಯದಲ್ಲಿ ಹೆಚ್ಚುವರಿಯಾಗಿ ಎಂಟು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತಮ್ಮ ಕನಸನ್ನು ನನಸು ಮಾಡಿಕೊಳ್ಳುವ ಸುವರ್ಣ ಅವಕಾಶ ಸಿಗಲಿದೆ.

    ಎಂಜಿನಿಯರಿಂಗ್ ಸೀಟುಗಳಿಗೆ (Engineering Seats) ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ತಾಂತ್ರಿ ಕ ಶಿಕ್ಷಣ ಪರಿಷತ್ (AICTE) ಇನ್ ಟೇಕ್ (IN-Take) ಸಡಿಲಗೊಳಿಸಿದ್ದರಿಂದ ಎಂಟು ಸಾವಿರಕ್ಕೂ ಹೆಚ್ಚು ಸೀಟುಗಳು ಈ ವರ್ಷದಲ್ಲಿ ಸಿಗಲಿದೆ.

    ಉನ್ನತ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ ಸೀಟ್ ಲಭ್ಯತೆ ಬಗ್ಗೆ ಅಧಿಸೂಚನೆ ಹೊರಡಿಸಿದೆ. 2024- 25ನೇ ಸಾಲಿನ ಎಂಜಿನಿಯರಿಂಗ್ ಪ್ರವೇಶಕ್ಕೆ ಎಲ್ಲ ಮಾದರಿಯ 245 ಎಂಜಿನಿಯರಿಂಗ್ ಕಾಲೇಜುಗಳಿಂದ 1,32,309 ಸೀಟುಗಳ ಇನ್ ಟೆಕ್ ಆಗಿದೆ. ಇದರಲ್ಲಿ ಸರ್ಕಾರಿ ಕೋಟಾದಡಿಯಲ್ಲಿ 62,930 ಸೀಟುಗಳು, COMED-K ಕೋಟಾದ ಅಡಿಯಲ್ಲಿ 28,656 ಸೀಟುಗಳು ಮತ್ತು ಸೂಪರ್ ನ್ಯೂಮರರಿ ಕೋಟಾದ ಅಡಿಯಲ್ಲಿ 5,155 ಸೀಟುಗಳು ಸೇರಿವೆ.

    ಈ ಬಾರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) 62,930 ಸೀಟುಗಳ ಲಭ್ಯ ವಾಗಿದೆ. 2023ರಲ್ಲಿ 245 ಕಾಲೇಜುಗಳಿಂದ 1,24,551 ಸೀಟುಗಳು ಲಭ್ಯವಾಗಿದ್ದು, ಇದರಲ್ಲಿ ಕೆಇಎಗೆ 58,845 ಸೀಟುಗಳಿದ್ದವು.
    ಕಳೆದ ವರ್ಷ ಒಟ್ಟು ಸೀಟುಗಳ ಸಂಖ್ಯೆ 1,24,551 ಮತ್ತು ಸರ್ಕಾರಿ ಕೋಟಾದ ಸೀಟುಗಳು 58,845 ಆಗಿತ್ತು. ಈ ಬಾರಿ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ (ಎಐಸಿಟಿಇ) ಎಂಜಿನಿಯರಿಂಗ್ ಪ್ರವೇಶದ ಮೇಲಿನ ಮಿತಿಯನ್ನು ತೆಗೆದುಹಾಕುವುದರೊಂದಿಗೆ, ಈ ಶೈಕ್ಷಣಿಕ ವರ್ಷದಲ್ಲಿ ಸೀಟುಗಳ ಸಂಖ್ಯೆ 7,758 ಹೆಚ್ಚಲಿದೆ. ಇದರಲ್ಲಿ ಸರ್ಕಾರಿ ಕೋಟಾದ ಅಡಿಯಲ್ಲಿ 4,085ರಷ್ಟು ಸೀಟು ಹೆಚ್ಚು ಸಿಗಲಿದೆ.

    ಇನ್ನು 13 ಕಾಲೇಜುಗಳ ಸೀಟುಗಳು ಇದಕ್ಕೆ ಸೇರ್ಪಡೆಯಾಗಲಿದ್ದು, ಹೀಗಾಗಿ ಕೆಇಎಗೆ ಇನ್ನೂ ಹೆಚ್ಚಿನ ಸೀಟುಗಳು ಲಭ್ಯವಾಗುವ ನಿರೀಕ್ಷೆ ಇದೆ.

    ಎಲ್ಲಿ ಎಷ್ಟು ಸೀಟು ?

    ಕೆಇಎಗೆ ಲಭ್ಯವಾಗಿರುವ 62,930 ಸೀಟುಗಳಲ್ಲಿ ಖಾಸಗಿ ಕಾಲೇಜುಗಳಲ್ಲಿ 38,024 ಖಾಸಗಿ ವಿವಿಗಳಲ್ಲಿ 9,988 ಸೀಟುಗಳು ಸೇರಿವೆ. ಇದರಲ್ಲಿ 246 ಸೀಟುಗಳು ಆರ್ಕಿಟೆಕ್ಚರ್ ಗೆ ಸಂಬಂಧಿಸಿದೆ.

    ಯಾವುದಕ್ಕೆ ಹೆಚ್ಚಿನ ಬೇಡಿಕೆ?

    ಹೆಚ್ಚಿನ ಸೀಟುಗಳು ಕಂಪ್ಯೂಟರ್ ವಿಜ್ಞಾನ ಮತ್ತು ಸಂಬಂಧಿತ ವಿಷಯಗಳಲ್ಲಿವೆ. ಈ ಶೈಕ್ಷಣಿಕ ವರ್ಷದಿಂದ, ಎಐಸಿಟಿಇ ಪದವಿಪೂರ್ವ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಮಿತಿಯನ್ನು ತೆಗೆದುಹಾಕಿದೆ. ಅದರ ಅನಂತರ ಹಲವಾರು ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಕಂಪ್ಯೂಟರ್ ಸೈನ್ಸ್ ಮತ್ತು ಸಂಬಂಧಿತ ವಿಷಯಗಳಿಗೆ ಸೀಟು ಗಳ ಸಂಖ್ಯೆಯನ್ನು 500ರಿಂದ 1,000ಕ್ಕೆ ಹೆಚ್ಚಿಸಿವೆ.

    ಇದನ್ನೂ ಓದಿ: NEET UG : ಫಿಸಿಕ್ಸ್​ನಲ್ಲಿ 85, ಕೆಮೆಸ್ಟ್ರಿಯಲ್ಲಿ 5! ನೀಟ್ ಆಕಾಂಕ್ಷಿಯ ಸ್ಕೋರ್ ಕಾರ್ಡ್ ಸೋರಿಕೆ, ಆರೋಪಿ ಸೆರೆ

    ಎಂಜಿನಿಯರಿಂಗ್ ಆಕಾಂಕ್ಷಿಗಳು ಹೆಚ್ಚಳ

    ಈ ವರ್ಷ ಸಿಇಟಿಗೆ ಹಾಜರಾದ 3.1೦ ಲಕ್ಷ ವಿದ್ಯಾರ್ಥಿಗಳ ಪೈಕಿ 2.74 ಲಕ್ಷ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಸೇರಲು ಅರ್ಹರಾಗಿದ್ದಾರೆ. ಕಳೆದ ವರ್ಷ ಈ ಸಂಖ್ಯೆ 2.03 ಲಕ್ಷ ಇತ್ತು. ಈ ವರ್ಷ 30 ಸಾವಿರ ವಿದ್ಯಾರ್ಥಿಗಳು ಹೆಚ್ಚಾಗಿದೆ.

    ಈ ಹಿಂದೆ ಸೀಟು ಹೆಚ್ಚಳಕ್ಕೆ ಆಯಾ ವಿವಿಗಳಿಗೆ ಕಾಲೇಜುಗಳು ಪ್ರಸ್ತಾವನೆ ಸಲ್ಲಿಸಬೇಕಿತ್ತು. ಇದನ್ನು ಸ್ಥಳೀಯ ವಿಚಾರಣಾ ಸಮಿತಿ ಪರಿಶೀಲಿಸಿ ನಿರ್ಣಯ ಕೈಗೊಳ್ಳುತ್ತಿತ್ತು. ಆದರೆ ಈ ಬಾರಿ ಕಾಲೇಜುಗಳು ಸೀಟು ಹೆಚ್ಚಳಕ್ಕೆ ನೇರವಾಗಿ ಎಐಸಿಟಿಇಯಿಂದ ಅನುಮೋದನೆಯನ್ನು ಪಡೆಯಬೇಕಾಗಿದೆ. ಇದನ್ನು ರಾಜ್ಯ ಸರ್ಕಾರ ವಿರೋಧಿಸಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ.

    Continue Reading
    Advertisement
    Kalki 2898 AD Final Trailer Released
    ಕರ್ನಾಟಕ1 hour ago

    Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

    Sonakshi Sinha
    ಬಾಲಿವುಡ್2 hours ago

    Sonakshi Sinha: ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್‌ ಮದುವೆ; ಮೆಹಂದಿ ಶಾಸ್ತ್ರದ ವೇಳೆ ಪತಿ ಜತೆ ನಟಿ ಮಿಂಚಿಂಗ್!

    T20 World Cup 2024
    ಪ್ರಮುಖ ಸುದ್ದಿ2 hours ago

    T20 World Cup 2024 : ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ತಂಡಕ್ಕೆ 7 ರನ್ ಜಯ

    Suryakumar Yadav
    ಪ್ರಮುಖ ಸುದ್ದಿ2 hours ago

    Suryakumar Yadav : ವಿಶ್ವದ ಬೆಸ್ಟ್​ ಟಿ20 ಆಟಗಾರ ಸೂರ್ಯಕುಮಾರ್​ ಯಾದವ್​ ಎಂದ ಅಂಬಾಟಿ ರಾಯುಡು

    Central Government monitoring wheat price stability: Union Minister Pralhad Joshi
    ಕರ್ನಾಟಕ2 hours ago

    Pralhad Joshi: ಗೋಧಿ ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರದ ಕ್ರಮ; ಪ್ರಲ್ಹಾದ್‌ ಜೋಶಿ

    regional Laboratory sanctioned to Kims Hubballi
    ಕರ್ನಾಟಕ2 hours ago

    Pralhad Joshi: ಕಿಮ್ಸ್‌ಗೆ ಅತ್ಯಾಧುನಿಕ “ವೈರಾಣು ಸಂಶೋಧನೆ, ರೋಗ ನಿರ್ಣಯ ಪ್ರಯೋಗಾಲಯ” ಮಂಜೂರು

    Hinduja Family
    ವಿದೇಶ3 hours ago

    Hinduja Family: ಮನೆಗೆಲಸದವರ ಮೇಲೆ ದೌರ್ಜನ್ಯ; ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

    Gautam Gambhir
    ಪ್ರಮುಖ ಸುದ್ದಿ3 hours ago

    Gautam Gambhir : ಕೋಚ್​ ಹುದ್ದೆ ಅಂತಿಮವಾಗಿಲ್ಲ; ವರದಿಗಳಿಗೆ ವ್ಯತಿರಿಕ್ತ ಹೇಳಿಕೆ ನೀಡಿದ ಗಂಭೀರ್​!

    Rishabh Pant
    ಪ್ರಮುಖ ಸುದ್ದಿ4 hours ago

    Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

    Parking Complex
    ಬೆಂಗಳೂರು4 hours ago

    Parking Complex: ಬೆಂಗಳೂರಿನಲ್ಲಿ ಸುಸಜ್ಜಿತ ಪಾರ್ಕಿಂಗ್‌ ಕಾಂಪ್ಲೆಕ್ಸ್;‌ ಶುಲ್ಕದ ಕುರಿತ ಮಾಹಿತಿ ಇಲ್ಲಿದೆ

    Sharmitha Gowda in bikini
    ಕಿರುತೆರೆ9 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ8 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ8 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ7 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ9 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ6 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ7 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    karnataka weather Forecast
    ಮಳೆ7 hours ago

    Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

    International Yoga Day 2024
    ಕರ್ನಾಟಕ13 hours ago

    International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

    Karnataka Weather Forecast
    ಮಳೆ1 day ago

    Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

    Actor Darshan
    ಮೈಸೂರು5 days ago

    Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

    Bakrid 2024
    ಬೆಂಗಳೂರು5 days ago

    Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

    Renukaswamy murder case The location of the accused is complete
    ಸಿನಿಮಾ5 days ago

    Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

    Renuka swamy murder
    ಚಿತ್ರದುರ್ಗ5 days ago

    Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

    Vijayanagara News
    ವಿಜಯನಗರ6 days ago

    Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

    Actor Darshan
    ಯಾದಗಿರಿ6 days ago

    Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

    Karnataka Weather Forecast
    ಮಳೆ1 week ago

    Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

    ಟ್ರೆಂಡಿಂಗ್‌