Pralhad Joshi: ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರ ಮೌನ; ಪ್ರಲ್ಹಾದ ಜೋಶಿ ಆರೋಪ - Vistara News

ಕರ್ನಾಟಕ

Pralhad Joshi: ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರ ಮೌನ; ಪ್ರಲ್ಹಾದ ಜೋಶಿ ಆರೋಪ

Pralhad Joshi: ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ವ್ಯವಸ್ಥೆ ತೀರಾ ಹದಗೆಟ್ಟಿದೆ. ಅಮಾಯಕ ಹೆಣ್ಣುಮಕ್ಕಳ ಜೀವ ಬಲಿಯಾಗುತ್ತಿದ್ದರೂ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕ್ಯಾರೆ ಎನ್ನುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Union Food and Consumer Affairs Minister Pralhad Joshi latest statement
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೀದರ್‌: ರಾಜ್ಯದಲ್ಲಿ ಅಮಾಯಕ ಹೆಣ್ಣು ಮಕ್ಕಳ ಹತ್ಯೆಯಾದರೂ ಈ ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದರು.

ಬೀದರ್‌ನಲ್ಲಿ ಗುರುವಾರ ಕರ್ನಾಟಕ ವಿಧಾನ ಪರಿಷತ್ ಚುನಾವಣೆ 2024, ಈಶಾನ್ಯ ಪದವೀಧರ ಕ್ಷೇತ್ರ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ವ್ಯವಸ್ಥೆ ತೀರಾ ಹದಗೆಟ್ಟಿದೆ. ಅಮಾಯಕ ಹೆಣ್ಣುಮಕ್ಕಳ ಜೀವ ಬಲಿಯಾಗುತ್ತಿದ್ದರೂ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕ್ಯಾರೆ ಎನ್ನುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 54 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ರಾಜ್ಯದೆಲ್ಲೆಡೆ ಮಹಿಳೆಯರಿಗೆ ಸುರಕ್ಷತಾ ಭಾವ ಇಲ್ಲದಾಗಿದೆ. ಜೀವಕ್ಕೆ ಗ್ಯಾರಂಟಿ ಇರದಂತಹ ಘಟನೆಗಳು ಘಟಿಸುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ ಅವರು, ಪೊಲೀಸರು ಬಹುಶಃ ಸರ್ಕಾರದ ಕೈಗೊಂಬೆ ಎಂಬಂತೆ ಕೆಲಸ ಮಾಡುತ್ತಿದ್ದರೇನೋ ಅನಿಸುತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲ ಘಟನೆಗಳನ್ನು ನೋಡಿ ಸಾರ್ವಜನಿಕರೇ ಈ ರೀತಿ ಶಂಕೆ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಮಾದಕ ವಸ್ತು ಮಾರಾಟ

ಕಾಲೇಜುಗಳ ಹತ್ತಿರ ರಾಜಾರೋಷವಾಗಿ ಮಾದಕ ವಸ್ತುಗಳ ಮಾರಾಟವಾಗುತ್ತಿದ್ದರೂ ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಹೀಗೇ ಕೆಲ ವರ್ಷಗಳು ಮುಂದುವರೆದರೆ, ಕರ್ನಾಟಕ ಪಂಜಾಬನ್ನೂ ಮೀರಿಸುವ ಸಾಧ್ಯತೆ ಇದೆ ಎಂದು ಸಚಿವ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ, ಶಾಂತಿ-ಸುವ್ಯವಸ್ಥೆ ಹಾಗೂ ಅಭಿವೃದ್ಧಿಗಾಗಿ ಈ ಬಾರಿ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಯಶಸ್ವಿಯಾಗಬೇಕು ಎಂದ ಅವರು, ಕರ್ನಾಟಕದ ಕನ್ನಡಿಗರ ಉಳಿವಿಗಾಗಿ, ಒಳ್ಳೆಯ ಭವಿಷ್ಯಕ್ಕಾಗಿ ನಾವೆಲ್ಲರೂ ಇಂದು ಶ್ರಮಿಸಬೇಕಾಗಿದೆ ಎಂದು ಎರಡು ಪಕ್ಷಗಳ ಕಾರ್ಯಕರ್ತರಿಗೆ ಸಚಿವರು ಕರೆ ನೀಡಿದರು.

ಇದನ್ನೂ ಓದಿ: Mouth Sleeping: ನಿದ್ದೆಯಲ್ಲಿದ್ದಾಗ ಬಾಯಿಯಿಂದ ಉಸಿರಾಡುತ್ತೀರಾ? ಹಾಗಾದರೆ ಮುಂದೆ ಸಮಸ್ಯೆಯಾಗಬಹುದು!

ಈ ಸಂದರ್ಭದಲ್ಲಿ ಸಂಸದ ಭಗವಂತ್ ಖೂಬ, ಬಸವ ಕಲ್ಯಾಣ ಕ್ಷೇತ್ರದ ಶಾಸಕ ಶರಣು ಸಲಗರ, ವಿಧಾನ ಪರಿಷತ್ತಿನ ಸದಸ್ಯರಾದ ರಘುನಾಥ ಮಲ್ಕಾಪುರೆ, ರವಿ ಕುಮಾರ್, ಜೆಡಿಎಸ್ ನಾಯಕರಾದ ಬಂಡೆಪ್ಪ ಕಾಶೆಂಪುರ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

Karnataka Weather Forecast : ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲವಾಗಿದ್ದರೂ, ಕರಾವಳಿ ಹಾಗೂ ಒಳನಾಡಿನ ವಿವಿಧೆಡೆ ಮಳೆಯು (Rain News) ಅಬ್ಬರಿಸುತ್ತಿದೆ. ಕಡಲ ತೀರದಲ್ಲಿ ಅಲೆಗಳು ಆಳೆತ್ತರದಲ್ಲಿ ಅಪ್ಪಳಿಸುತ್ತಿದ್ದು, ನಾಳೆಗೂ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರಾವಳಿಯಲ್ಲಿ ವರುಣಾರ್ಭಟ (Rain News) ಮುಂದುವರೆದಿದೆ. ಕಳೆದ ಎರಡು ಮೂರು ದಿನಗಳಿಂದ ಕರಾವಳಿಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದು, ಭಾರೀ ಗಾಳಿ ಹಿನ್ನೆಲೆಯಲ್ಲಿ ದಡಕ್ಕೆ ಆಳೆತ್ತರದ ಅಲೆಗಳು ಅಪ್ಪಳಿಸುತ್ತಿದೆ. ರೆಡ್‌ ಅಲರ್ಟ್‌ ನೀಡಲಾಗಿದ್ದು, ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್ ಬಿದ್ದಿದೆ. ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಮುನ್ಸೂಚನೆ (Karnataka Weather Forecast) ನೀಡಿದೆ.

ಜೂನ್‌ 25ರವರೆಗೆ ಕರಾವಳಿ ಮತ್ತು ದಕ್ಷಿನ ಒಳನಾಡಿನಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಾದ ಬೀದರ್‌, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ , ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರದಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿ ಬೀಸಲಿದೆ.

ರಾಜ್ಯಾದ್ಯಂತ ಮುಂಗಾರು ದುರ್ಬಲವಾಗಿದ್ದರೂ, ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಪಣಂಬೂರು, ಭಾಲ್ಕಿ 5 ಸೆಂ.ಮೀ, ಮಂಗಳೂರು ವಿಮಾನ ನಿಲ್ದಾಣ , ಕೊಟ್ಟಿಗೆಹಾರ ತಲಾ 4 ಸೆಂ.ಮೀ ಮಳೆಯಾಗಿದೆ. ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿಯಲ್ಲಿ 3 ಸೆಂ.ಮೀ ಮಳೆಯಾಗಿದೆ. ಧರ್ಮಸ್ಥಳ, ಮಂಕಿ, ಪುತ್ತೂರು , ಅಂಕೋಲಾ, ರೋನ್, ಭಾಗಮಂಡಲ, ಆಗುಂಬೆಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಕಾರವಾರ, ಮೂಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ, ಉಪ್ಪಿನಂಗಡಿ, ನರಗುಂದ, ನಿಪ್ಪಾಣಿ, ಶಹಪುರ, ಕುಷ್ಟಗಿ, ಲಿಂಗನಮಕ್ಕಿ ಎಚ್‌ಎಂಎಸ್ , ಪೊನ್ನಂಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Artificial Colours Ban: ರಾಜ್ಯದಲ್ಲಿ ಚಿಕನ್‌, ಫಿಶ್‌ ಕಬಾಬ್‌ನಲ್ಲಿ ಕೃತಕ ಬಣ್ಣ ಬಳಕೆ ನಿಷೇಧ!

Artificial Colours Ban: ಈ ಹಿಂದೆ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಗೆ ಕೃತಕ ಬಣ್ಣ ಬಳಕೆಯನ್ನು ರಾಜ್ಯ ಸರ್ಕಾರ ಬ್ಯಾನ್ ಮಾಡಿತ್ತು. ಇದೀಗ ಕಬಾಬ್‌ಗೂ ಕೃತಕ ಬಣ್ಣ ಬಳಕೆಯನ್ನು ನಿಷೇಧಿಸಿದೆ. ನಿಯಮ ಉಲ್ಲಂಘಿಸಿದರೆ ಕಠಿಣ ಶಿಕ್ಷೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

Artificial Colours Ban
Koo

ಬೆಂಗಳೂರು: ಗೋಬಿ ಬಳಿಕ ಇದೀಗ ಕಬಾಬ್‌ಗೂ ಕೃತಕ ಬಣ್ಣ (Artificial Colours Ban) ಬಳಕೆಗೂ ರಾಜ್ಯ ಸರ್ಕಾರ ನಿಷೇಧ ಹೇರಿದೆ. ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವೆಜ್/ಚಿಕನ್/ಫಿಶ್ ಇತರೆ ಕಬಾಬ್‌ಗಳಲ್ಲಿ ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕಬಾಬ್‌ (chicken, fish kebab) ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬೆರೆಸುವುದನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಬಂಧಿಸಿದೆ.

ಬಾಯಿ ಚಪ್ಪರಿಸಿಕೊಂಡು ತಿನ್ನುವ ಗೋಬಿ ಮಂಚೂರಿ, ಬಾಂಬೆ ಮಿಠಾಯಿಗೆ ಕಲರ್‌ ಹಾಕುವುದನ್ನು ಬ್ಯಾನ್ ಮಾಡಿದ ಬೆನ್ನಲ್ಲೇ ಇದೀಗ ಕಬಾಬ್‌ ಸರದಿಯಾಗಿದೆ. ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗೆ (artificial colours in Kebab) ಬೆರಸುವ ಕೃತಕ ಬಣ್ಣ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಿತ್ತು.

ರಾಜ್ಯಾದ್ಯಂತ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಿದಾಗ, ಅದರಲ್ಲಿ 8 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ – 7 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 1) ಕೂಡಿರುವುದರಿಂದ ಅಸುರಕ್ಷಿತ ಎಂದು ವರದಿಗಳಲ್ಲಿ ಕಂಡುಬಂದಿದೆ. ಹೀಗಾಗಿ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿರುವುದಿಲ್ಲ ಎಂದು ಸೂಚಿಸಿದೆ.

ಇದನ್ನೂ ಓದಿ | Sleep After Lunch: ಊಟದ ನಂತರ ನಮಗೆ ಆಕಳಿಕೆ, ನಿದ್ದೆ ಬರುವುದೇಕೆ?

ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟುಮಾಡುತ್ತವೆ. ಈ ಹಿನ್ನೆಲೆಯಲ್ಲಿ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ ಅವಕಾಶವಿಲ್ಲ. ವೆಜ್/ಚಿಕನ್/ಫಿಶ್ ಇತರೆ ಕಬಾಬ್‌ಗಳ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿರ್ಬಂಧಿಸಿ ಆದೇಶಿಸಿದೆ. ಒಂದು ವೇಳೆ ಕೃತಕ ಬಣ್ಣಗಳನ್ನು ಬಳಸಿರುವುದು ಕಂಡುಬಂದಲ್ಲಿ ತಯಾರಿಸುವವರ ಮೇಲೆ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು 10 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

Continue Reading

ಕರ್ನಾಟಕ

Renuka Swamy Murder: ರೇಣುಕಾಸ್ವಾಮಿ ಹತ್ಯೆ ಕೇಸ್‌ನ 4 ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್; ಕಾರಣವೇನು?

Renuka Swamy Murder: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರವಿ‌ಶಂಕರ್, ಕೇಶವಮೂರ್ತಿ, ಕಾರ್ತಿಕ್ ಹಾಗೂ ನಿಖಿಲ್‌ನನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

VISTARANEWS.COM


on

Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಆದೇಶ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರವಿ‌ಶಂಕರ್, ಕೇಶವಮೂರ್ತಿ, ಕಾರ್ತಿಕ್ ಹಾಗೂ ನಿಖಿಲ್‌ನನ್ನು ಸ್ಥಳಾಂತರ ಮಾಡಲು ಪೊಲೀಸರು ಮುಂದಾಗಿದ್ದಾರೆ.

ಅರ್ಜಿ ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು ತುಮಕೂರು ಜೈಲಿಗೆ ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿದರು. ಆದರೆ, ಆರೋಪಿಗಳ ವರ್ಗಾವಣೆ ಯಾಕೆ ಅಗತ್ಯ ಎಂದು ಎಸ್‌ಪಿಪಿ ಪ್ರಸನ್ನ ಕುಮಾರ್ ವಿವರಿಸಿದ್ದಾರೆ. ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿತ್ತು.

ಒಂದೇ ಜೈಲಿನಲ್ಲಿದ್ದರೇ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆ ಇದ್ದು, ನಾಲ್ವರು ಆರೋಪಿಗಳ ಜೀವಕ್ಕೆ ಅಪಾಯ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ | R Ashok: ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕ್ಷಮೆ ಕೋರಲಿ, ರಾಹುಲ್‌ ಗಾಂಧಿ ತಲೆಬಾಗಲಿ; ಆರ್‌. ಅಶೋಕ್‌

ಪತ್ನಿ, ಮಗ ನೋಡುತ್ತಿದ್ದಂತೆ ಕಣ್ಣೀರಿಟ್ಟ ನಟ ದರ್ಶನ್; ಮಗನನ್ನು ತಬ್ಬಿ ಬಿಕ್ಕಿ ಬಿಕ್ಕಿ ಅತ್ತ ʻದಾಸʼ!

Actor Darshan crying In Jail while seeing wife and son

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Actor Darshan) ಬಂಧನವಾಗಿರುವ ನಟ ದರ್ಶನ್‌ ಅವರನ್ನು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಸೋಮವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾದರು. ಇವರಷ್ಟೇ ಅಲ್ಲದೇ ದರ್ಶನ್‌ ಆಪ್ತ ವಿನೋದ್‌ ಪ್ರಭಾಕರ್‌ ಕೂಡ ಸ್ನೇಹಿತರ ಜತೆ ಆಗಮಿಸಿ ಭೇಟಿ ಮಾಡಿದರು. ಈ ವೇಳೆ ದರ್ಶನ್‌ ಅವರು ಮಗನನ್ನು ನೋಡಿ ಕಣ್ಣೀರಿಟ್ಟರು. ಮಗ ವಿನೀಶ್ ಹಾಗೂ ಪತ್ನಿ ವಿಜಯಲಕ್ಷ್ಮಿ ನೋಡುತ್ತಿದ್ದಂತೆ ದರ್ಶನ್ ಭಾವುಕರಾದರು.

ಮಗನನ್ನು ತಬ್ಬಿಕೊಂಡು ಕೆಲ ಹೊತ್ತು ದರ್ಶನ್‌ ಕಣ್ಣೀರಿಟ್ಟರು. ಪತ್ನಿ ಬಳಿ ನಡೆದ ಘಟನೆಯ ಬಗ್ಗೆ ದರ್ಶನ್‌ ಕೆಲ ಮಾತುಗಳನ್ನಾಡಿದರು. ಕಾನೂನು ಹೋರಾಟದ ಬಗ್ಗೆ ಪತ್ನಿ ದರ್ಶನ್‌ಗೆ ಮಾಹಿತಿ ನೀಡಿದರು. ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮೀ ಧೈರ್ಯ ತುಂಬಿದರು. . ಮಗ ವಿನೀಶ್ ನನ್ನು ತಬ್ಬಿಕೊಂಡೇ ಅಳುತ್ತಾ ಮಾತನಾಡಿದ್ದಾರೆ. ಅರ್ಧ ಘಂಟೆಯ ಭೇಟಿಯಲ್ಲಿ ದರ್ಶನ್ ಭಾವುಕದಿಂದಲೇ ಮಾತನಾಡಿದರು. ಪತ್ನಿ ವಿಜಯಲಕ್ಷ್ಮಿಗಿಂತ ಹೆಚ್ಚಿನ ಸಮಯವನ್ನು ಮಗನ ಜೊತೆಗೆ ಕಳೆದರು.

ಇದನ್ನೂ ಓದಿ: Actor Darshan: ಜೈಲಿನಲ್ಲಿ ನಟ ದರ್ಶನ್‌ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್‌

ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಕಪ್ಪು ಬಣ್ಣದ ಕಿಯಾ ಕಾರಿನಲ್ಲಿ ಆಗಮಿಸಿದ್ದರು. ಮೊದಲು ಜೈಲಿನ ಚೆಕ್ ಪೋಸ್ಟ್ ಸಮೀಪ ಕಾರು ನಿಲ್ಲಿಸಲಾಗಿತ್ತು. ಆಗ ಮಾಧ್ಯಮಗಳ ಕ್ಯಾಮೆರಾ ಕಂಡು ವಿಜಯಲಕ್ಷ್ಮಿ, ವಿನೀಶ್ ವಾಪಸ್ ತೆರಳಿದರು. ನಂತರ ಬೇರೊಂದು ಕಾರಿನಲ್ಲಿ ಜೈಲಿನ ಬಳಿ ಬಂದರು. ಆಗ ಮಾಧ್ಯಮಗಳ ಕಣ್ತಪ್ಪಿಸಿ ಜೈಲಿನ ಒಳಗೆ ದರ್ಶನ್‌ ಪತ್ನಿ, ಪುತ್ರನನ್ನು ಪೊಲೀಸರು ಕರೆದೊಯ್ದರು.

ಇದನ್ನೂ ಓದಿ | Actor Darshan: ಇನ್ಮುಂದೆ ದರ್ಶನ್‌ ಕೈದಿ ನಂಬರ್‌ ನನ್ನ ಗಾಡಿ ಮೇಲೆ ಇರತ್ತೆ ಎಂದು ಗಳಗಳನೇ ಅತ್ತ ಅಭಿಮಾನಿ!

ಇನ್ನು ಜೈಲಿನಲ್ಲಿದ್ದರೂ ನಟ ದರ್ಶನ್‌ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನಲಾಗಿದೆ. ಸಾಮಾನ್ಯ ಕೈದಿಗಳನ್ನು ಭೇಟಿಯಾಗಲು ಬಂದರೆ ನೂರೊಂದು ಕಂಡಿಷನ್ಸ್‌ ವಿಧಿಸುವ ಪೊಲೀಸರು, ಸೆಲೆಬ್ರಿಟಿ, ರಾಜಕಾರಣಿಗಳು, ಬಲಾಢ್ಯರಿಗೆ ರಾಜಾತಿಥ್ಯ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

Continue Reading

ಕರ್ನಾಟಕ

Pralhad Joshi: ಮಾತೃಭಾಷೆ, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವ ಪ್ರಲ್ಹಾದ್‌ ಜೋಶಿ

Pralhad Joshi: ಸೋಮವಾರ ನಡೆದ 18ನೇ ಲೋಕಸಭೆ ಮೊದಲ ಅಧಿವೇಶನದಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೂತನ ಸಚಿವ ಪ್ರಲ್ಹಾದ್‌ ಜೋಶಿ ಅವರು ಮಾತೃಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸಿ ಸಂಸತ್‌ನಲ್ಲಿ ಕನ್ನಡ ಭಾಷೆಯ ಹಿರಿಮೆಯನ್ನು ಎತ್ತಿ ಹಿಡಿದರು.

VISTARANEWS.COM


on

union Minister Pralhad Joshi took oath in the name of God in his mother tongue
Koo

ನವದೆಹಲಿ: ಸಂಸತ್‌ ಭವನದಲ್ಲಿ ಸೋಮವಾರ (ಜೂನ್‌ 24) ನಡೆದ 18ನೇ ಲೋಕಸಭೆ ಮೊದಲ ಅಧಿವೇಶನದಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೂತನ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi), ಮಾತೃಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಸಂಸತ್‌ನಲ್ಲಿ ಕನ್ನಡತನ ಎತ್ತಿ ಹಿಡಿದರು.

2024ರ ಲೋಕಸಭೆ ಚುನಾವಣೆ ಬಳಿಕ ನೂತನ ಸಂಸತ್ ಭವನದಲ್ಲಿ ಸೋಮವಾರ ಮೊದಲ ಬಾರಿ ಆಯೋಜಿಸಿದ್ದ ಅಧಿವೇಶನದ ವೇಳೆ ಹಂಗಾಮಿ ಸ್ಪೀಕರ್ ಭರ್ತೃಹರಿ ಮಹ್ತಾಬ್ ಪ್ರಮಾಣ ವಚನ ಬೋಧಿಸಿದರು.

ಈ ವೇಳೆ, ಧಾರವಾಡ ಲೋಕಸಭೆ ಕ್ಷೇತ್ರದಿಂದ ಸತತ 5ನೇ ಬಾರಿ ಬಿಜೆಪಿಯಿಂದ ಕಣಕ್ಕಿಳಿದು ಐತಿಹಾಸಿಕ ಗೆಲುವು ಸಾಧಿಸಿದ್ದ ಪ್ರಲ್ಹಾದ್‌ ಜೋಶಿ, ಸಂಸತ್‌ನಲ್ಲಿ ಪ್ರಧಾನಿ ಮೋದಿ ಸಂಗಡ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ: R Ashok: ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕ್ಷಮೆ ಕೋರಲಿ, ರಾಹುಲ್‌ ಗಾಂಧಿ ತಲೆಬಾಗಲಿ; ಆರ್‌. ಅಶೋಕ್‌

ಪ್ರಸಕ್ತ ಅಧಿವೇಶನದಲ್ಲಿ “ಪ್ರಲ್ಹಾದ್‌ ವೆಂಕಟೇಶ ಜೋಶಿಯಾದ ನಾನು” ಎಂದು ಕನ್ನಡದಲ್ಲೇ ಮಾತನಾಡುತ್ತ, ಪ್ರತಿಜ್ಞಾ ಪತ್ರ ಓದಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ದೇಶದ ಅಖಂಡತೆ, ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವ ಜತೆಗೆ ನನ್ನ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕವಾಗಿ ಶ್ರದ್ಧೆ ಮತ್ತು ನಿಷ್ಠೆಯಿಂದ ನಿರ್ವಹಿಸುವುದಾಗಿ ಪ್ರಮಾಣಗೈದರು.

ಇದನ್ನೂ ಓದಿ: Job Alert: ಗಮನಿಸಿ; GTTCಯಲ್ಲಿನ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ; ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

ಪ್ರಧಾನಿ ಮೋದಿ ಸಂಪುಟದಲ್ಲಿ ಸತತ ಎರಡನೇ ಬಾರಿ ಸಚಿವರಾಗಿರುವ ಪ್ರಲ್ಹಾದ್‌ ಜೋಶಿ ಅವರು, ಬಿಜಿಪಿಯ ಹಿರಿಯ ನಾಯಕರಲ್ಲಿ ಒಬ್ಬರಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಮೊದಲು ದೇವರ ಪೂಜೆಗೈದು ವಿಶೇಷತೆ ಮೆರೆದರು. ಇನ್ನು, ಸಂಸತ್ ಭವನದಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಕನ್ನಡಾಭಿಮಾನದ ಜತೆಗೆ ಮಾತೃಭಾಷಾ ವೈಶಿಷ್ಟ್ಯ ಪ್ರದರ್ಶಿಸಿದರು.

Continue Reading
Advertisement
Virat kohli
ಪ್ರಮುಖ ಸುದ್ದಿ57 seconds ago

Virat kohli : ನಿವೃತ್ತಿಯಾಗುವುದು ಉತ್ತಮ; ಕೊಹ್ಲಿ, ರೋಹಿತ್​ಗೆ ಸಲಹೆ ನೀಡಿದ ವೀರೇಂದ್ರ ಸೆಹ್ವಾಗ್​

Parliament Session 2024
ದೇಶ5 mins ago

Parliament Session 2024: ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಹುಲ್‌ ಗಾಂಧಿ ಮಾಡಿದ್ದೇನು ಗೊತ್ತಾ? ವೈರಲಾಯ್ತು ವಿಡಿಯೋ

Rahul Gandhi
ದೇಶ10 mins ago

Rahul Gandhi: ಸಂಸತ್‌ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡುವ ಕಾರ್ಯಕ್ರಮಕ್ಕೆ ರಾಹುಲ್‌ ಗಾಂಧಿ ಚಕ್ಕರ್?

Viral Video
Latest35 mins ago

Viral Video: ಶಾಪಿಂಗ್‌ ಮಾಲ್‌ನ ಆಟಿಕೆ ರೈಲು ಪಲ್ಟಿಯಾಗಿ ಬಾಲಕ ಸಾವು

Team India
ಪ್ರಮುಖ ಸುದ್ದಿ37 mins ago

Team India : ಜಿಂಬಾಬ್ವೆ ಪ್ರವಾಸಕ್ಕೆ ಟೀಮ್ ಇಂಡಿಯಾ ಪ್ರಕಟ, ಶುಭ್​ಮನ್ ಗಿಲ್​ಗೆ ನಾಯಕತ್ವ

karnataka Weather Forecast
ಮಳೆ39 mins ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

Artificial Colours Ban
ಪ್ರಮುಖ ಸುದ್ದಿ45 mins ago

Artificial Colours Ban: ರಾಜ್ಯದಲ್ಲಿ ಚಿಕನ್‌, ಫಿಶ್‌ ಕಬಾಬ್‌ನಲ್ಲಿ ಕೃತಕ ಬಣ್ಣ ಬಳಕೆ ನಿಷೇಧ!

Divorce
ದೇಶ1 hour ago

Divorce: ತೂಕ ಇಳಿಸಿಕೊಳ್ಳಲು ನೆರವಾಗದ ‘ಜಿಮ್‌ ಟ್ರೇನರ್‌’ ಗಂಡನಿಗೆ ಮಹಿಳೆ ಡಿವೋರ್ಸ್‌!

Crush Saree Fashion
ಫ್ಯಾಷನ್1 hour ago

Crush Saree Fashion: ಸೆಲೆಬ್ರೆಟಿ ಲುಕ್‌ ನೀಡುವ ಡಿಸೈನರ್‌ ಕ್ರಶ್‌ ಸೀರೆಗಳು

ಕರ್ನಾಟಕ1 hour ago

Renuka Swamy Murder: ರೇಣುಕಾಸ್ವಾಮಿ ಹತ್ಯೆ ಕೇಸ್‌ನ 4 ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್; ಕಾರಣವೇನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ39 mins ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌