COMEDK UGET 2024 : ಇಂದು ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ; ರಿಸಲ್ಟ್​ ನೋಡೋದು, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ? - Vistara News

ಪ್ರಮುಖ ಸುದ್ದಿ

COMEDK UGET 2024 : ಇಂದು ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ; ರಿಸಲ್ಟ್​ ನೋಡೋದು, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

COMEDK UGET 2024: ಕಾಮೆಡ್‌ – ಕೆ ಪರೀಕ್ಷೆಯನ್ನು ದೇಶಾದ್ಯಂತ 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಡೆದಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಸಲಾಗುವ ಈ ಪ್ರವೇಶ ಪರೀಕ್ಷೆ ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳ ಪ್ರವೇಶಕ್ಕೆ ಹೆದ್ದಾರಿಯಾಗಿದೆ. ಶುಕ್ರವಾರ (ಮೇ 24) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುತ್ತದೆ. COMEDK UGET 2024ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.

VISTARANEWS.COM


on

COMEDK UGET 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (COMEDK) ನಡೆಸಿರುವ 2024ರ ವರ್ಷದ ಪ್ರವೇಶ ಪರೀಕ್ಷೆಯ (UGET) ಫಲಿತಾಂಶವನ್ನು ಶುಕ್ರವಾರ (ಮೇ 24) ಮಧ್ಯಾಹ್ನ 2 ಗಂಟೆಗೆ ಪ್ರಕಟಗೊಳ್ಳಲಿದೆ . COMEDK UGET 2024ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್​​ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದ್ದು, ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶವನ್ನೂ ಕಲ್ಪಿಸಲಾಗಿದೆ.

ಕರ್ನಾಟಕದ 150 ಪ್ರೈವೇಟ್‌ ಎಂಜಿನಿಯರಿಂಗ್ ಕಾಲೇಜು, ದೇಶದ ಕೆಲವು ಕಡೆ ಇರುವ 40 ಖಾಸಗಿ ವಿವಿಗಳಲ್ಲಿನ ಸುಮಾರು 22 ಸಾವಿರ ಎಂಜಿನಿಯರಿಂಗ್ ಸೀಟುಗಳ ಪ್ರವೇಶಾತಿಗಾಗಿ ಈ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ದೇಶದ 1,03,799 (ಶೇಕಡಾ 87.96) ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಶುಕ್ರವಾರ ಅವರ ಭವಿಷ್ಯ ನಿರ್ಧಾರ ಆಗಲಿದೆ. ವಿದ್ಯಾರ್ಥಿಗಳು ತಮ್ಮ ಶ್ರೇಯಾಂಕದ ಪಟ್ಟಿಯನ್ನು ಪರಿಶೀಲಿಸಿಕೊಂಡು ಸ್ಕೋರ್‌ ಕಾರ್ಡ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

COMEDK UGET ಫಲಿತಾಂಶ 2024 ಪರಿಶೀಲನೆ ಹೇಗೆ?

  • ಹಂತ 1: ಕಾಮೆಡ್‌ಕೆ ಪರೀಕ್ಷಾ ಪೋರ್ಟಲ್‌ಗೆ ಭೇಟಿ ನೀಡಿ.
  • ಹಂತ 2: COMEDK UGET 2024 ಫಲಿತಾಂಶದ ಲಾಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಹಂತ 3: ನಿಮ್ಮ ಲಾಗಿನ್ ರುಜುವಾತುಗಳನ್ನು ನಮೂದಿಸಿ – ಅಪ್ಲಿಕೇಶನ್ ಸಂಖ್ಯೆ ಅಥವಾ ಬಳಕೆದಾರ ID ಮತ್ತು ಪಾಸ್‌ವರ್ಡ್ ಮತ್ತು ನಂತರ ಸಲ್ಲಿಸು ಮೇಲೆ ಕ್ಲಿಕ್ ಮಾಡಿ.
  • ಹಂತ 4: COMEDK UGET ಫಲಿತಾಂಶ 2024 ಪರದೆಯ ಮೇಲೆ ಕಾಣಿಸುತ್ತದೆ.
  • ಹಂತ 5: ಕೀ ಉತ್ತರವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ.

ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭ

ಮೇ 24ರಂದು ಕಾಮೆಡ್‌ಕೆ ರಿಸಲ್ಟ್‌ ಪ್ರಕಟವಾಗಿ ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭವಾಗಲಿದೆ. ಕರ್ನಾಟಕದಲ್ಲಿರುವ 150 ಖಾಸಗಿ ಎಂಜಿನಿಯರಿಂಗ್ ಕಾಲೇಜು ಮತ್ತು ದೇಶದ ವಿವಿಧ ಕಡೆ ಇರುವ 40 ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಯಾವ ಕಡೆಯಲ್ಲಾದರೂ ಪ್ರವೇಶ ಪಡೆಯಬೇಕೆಂದರೆ ಇಲ್ಲಿ ನೋಂದಣಿಯನ್ನು ಮಾಡಿಕೊಂಡಿರಬೇಕು.

ಇದನ್ನೂ ಓದಿ: Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

ಪ್ರತಿ ವರ್ಷ ಮೇ ತಿಂಗಳಲ್ಲಿ ಕಾಮೆಡ್‌-ಕೆ ಪರೀಕ್ಷೆ

ಕಾಮೆಡ್‌ – ಕೆ ಪರೀಕ್ಷೆಯನ್ನು ದೇಶಾದ್ಯಂತ ನಡೆಸಲಾಗಿದ್ದು, 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಈ ಪ್ರವೇಶ ಪರೀಕ್ಷೆಯು ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳ ಪ್ರವೇಶಕ್ಕೆ ಬುನಾದಿಯಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

David Warner : ವಿಶ್ವ ಕಪ್​ನಿಂದ ಹೊರಬಿದ್ದ ಬೇಸರ; ಬಿಯರ್ ಕುಡಿತಾ ಕುಳಿತ ಆಸ್ಟ್ರೇಲಿಯಾದ ಆಟಗಾರರು

David Warner : ಆಸ್ಟ್ರೇಲಿಯಾ ತಂಡ ಮಿಚೆಲ್ ಮಾರ್ಷ್​ ನೇತೃತ್ವದಲ್ಲಿ ವಿಶ್ವಾಸದಿಂದಲೇ ವೆಸ್ಟ್​ ಇಂಡೀಸ್​ಗೆ ತೆರಳಿತ್ತು. ಆದರೆ, ಅಪಘಾನಿಸ್ತಾನ ವಿರುದ್ಧ ಸೂಪರ್​ ಪಂದ್ಯವನ್ನು ಸೋತ ಬಳಿಕ ನಡುಗಿತು. ಬಳಿಕ ಭಾರತ ವಿರುದ್ಧವೂ ಹೀನಾಯವಾಗಿ ಪರಾಭವಗೊಂಡಿತು.

VISTARANEWS.COM


on

David Warner
Koo

ಬೆಂಗಳೂರು: ದುರಂಹಕಾರಿ ಆಸ್ಟ್ರೇಲಿಯಾ ತಂಡ ವಿಶ್ವ ಕಪ್​ನ ಸೂಪರ್ 8 ಹಂತದಿಂದ ಹೊರಕ್ಕೆ ಬಿದ್ದಿದೆ. ಹೀಗಾಗಿ ಆ ತಂಡಕ್ಕೆ ಆಘಾತವಾಗಿದೆ. 2021ರ ಆವೃತ್ತಿಯ ಚಾಂಪಿಯನ್ ಹಾಗೂ 2023ರ ಏಕ ದಿನ ವಿಶ್ವ ಕಪ್ ಚಾಂಪಿಯನ್ ತಂಡಕ್ಕೆ ಇದು ನಿಜವಾಗಿಯೂ ದುಃಖದ ವಿಚಾರ. ಹೀಗಾಗಿ ಸೋಲಿನ ಬಳಿಕ ಆಟಗಾರರು ಬಿಯರ್​ ಕುಡಿತಾ ಬೇಸರ ಹೊರಹಾಕಿದ್ದಾರೆ ಎಂಬುದಾಗಿ ವರದಿಯಾಗಿದೆ. ಬಿಯರ್ ಅಲ್ಲಿ ಸಾಮಾನ್ಯ ಸಂಸ್ಕೃತಿಯಾಗಿರುವ ಕಾರಣ ಅದು ಎಷ್ಟು ಸತ್ಯ ಎಂಬುದು ಗೊತ್ತಿಲ್ಲ. ಆದರೆ, ಜೇಕ್ ಫ್ರೇಸರ್ ಮೆಗ್​ಕುರ್ಕ್​ ಹಾಗೂ ಡೇವಿಡ್​ ವಾರ್ನರ್ (David Warner ) ಬಿಯರ್​ ಕುಡಿತಾ ಕುಳಿತಿರುವ ಫೋಟೊಗಳನ್ನು ಹಾಕಿಕೊಂಡಿದ್ದಾರೆ.

ಆಸ್ಟ್ರೇಲಿಯಾ ತಂಡ ಮಿಚೆಲ್ ಮಾರ್ಷ್​ ನೇತೃತ್ವದಲ್ಲಿ ವಿಶ್ವಾಸದಿಂದಲೇ ವೆಸ್ಟ್​ ಇಂಡೀಸ್​ಗೆ ತೆರಳಿತ್ತು. ಆದರೆ, ಅಪಘಾನಿಸ್ತಾನ ವಿರುದ್ಧ ಸೂಪರ್​ ಪಂದ್ಯವನ್ನು ಸೋತ ಬಳಿಕ ನಡುಗಿತು. ಬಳಿಕ ಭಾರತ ವಿರುದ್ಧವೂ ಹೀನಾಯವಾಗಿ ಪರಾಭವಗೊಂಡಿತು. ಗೆದ್ದೇ ಗೆಲ್ಲುತ್ತೇವೆ ಎಂಬ ಅತ್ಯುತ್ಸಾಹದಲ್ಲಿ ಸಾಗುವ ಕಾಂಗಾರೂ ಪಡೆಗಳಿಗೆ ಇದು ಸಂಪೂರ್ಣ ನಿರಾಸೆಯ ಸಂಗತಿಯಾಗಿದೆ. ಹೀಗಾಗಿ ಬಿಯರ್​ ಕುಡಿಯದೇ ವಿಧಿಯಿಲ್ಲ

ಮೆಗ್​ಕುರ್ಕ್​ ವಿಶ್ವ ಕಪ್​​ ಆಸ್ಟ್ರೇಲಿಯಾ ತಂಡದ ಪರ ಬ್ಯಾಟಿಂಗ್ ಮಾಡುವ ಮೂಲಕ ಅದ್ಭುತ ಪ್ರದರ್ಶನ ನೀಡಿದ್ದಾರೆ. ಯುವ ಬ್ಯಾಟ್ಸ್ಮನ್ ಅನ್ನು ಆಸ್ಟ್ರೇಲಿಯಾ ತಂಡದ ಮುಂದಿನ ಸಂಭಾವ್ಯ ಆರಂಭಿಕ ಆಟಗಾರ ಎಂದು ಪರಿಗಣಿಸಲಾಗಿದೆ. ಆಸ್ಟ್ರೇಲಿಯಾದ ಮಾಜಿ ಆರಂಭಿಕ ಬ್ಯಾಟರ್​​ ಡೇವಿಡ್ ವಾರ್ನರ್ ಈ ಯುವ ಆಟಗಾರನಿಗೆ ಪ್ರೇರಣೆ.

ವಿಶೇಷವೆಂದರೆ, ಇಬ್ಬರೂ ಕ್ರಿಕೆಟಿಗರು ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಡ್ರೆಸ್ಸಿಂಗ್ ಕೊಠಡಿಯನ್ನು ಹಂಚಿಕೊಂಡಿದ್ದಾರೆ. 2024 ರ ಟಿ 20 ವಿಶ್ವ ಕಪ್​ನಿಂದ ಆಸೀಸ್​ ಬಳಗ ಹೊರಬಿದ್ದ ನಂತರ ಅವರಿಬ್ಬರೂ ಮೈದಾನದಿಂದ ದೂರವಿದ್ದರು. ಅವರಿಬ್ಬರೂ ಜತೆಯಾಗಿ ಬಿಯರ್​ ಕುಡಿದಿದ್ದಾರೆ.

ಮೆಗ್​ಕುರ್ಕ್​ ಒಂದೇ ಒಂದು ಪಂದ್ಯವನ್ನು ಆಡಲು ಸಾಧ್ಯವಾಗದಿದ್ದರೂ ಆಸೀಸ್​ ತಂಡದ ಟ್ರೋಫಿಗೆ ಸವಾಲೊಡ್ಡುವ ವಾತಾವರಣಕ್ಕೆ ಅವರು ತೆರೆದುಕೊಂಡರು. ಡೇವಿಡ್ ವಾರ್ನರ್ ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ಮೆಗ್​ಕುರ್ಕ್​ ಅವರೊಂದಿಗಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಇಬ್ಬರೂ ತಮ್ಮ ಕೆರಿಬಿಯನ್ ವಾಸ್ತವ್ಯದ ಮುಕ್ತಾಯದ ನಂತರ ಬಿಯರ್ ಕುಡಿತಾ ಕುಳಿತಿದ್ದರು.

ಮೆಗ್​ಕುರ್ಕ್​ ಪ್ರಶ್ನೆಗಳನ್ನು ಕೇಳುತ್ತಾರೆ : ವಾರ್ನರ್

ಆಸ್ಟ್ರೇಲಿಯಾ ತಂಡದಲ್ಲಿ ಜೇಕ್ ಫ್ರೇಸರ್ ಮೆಕ್ಗುರ್ಕ್ ಅವರ ಸಂಭಾವ್ಯ ಸ್ಥಾನದ ಬಗ್ಗೆ ವಾರ್ನರ್ ಮಾತನಾಡಿದ್ದಾರೆ. ಜಾಗತಿಕ ಟೂರ್ನಿಯಿಂದ ದುರದೃಷ್ಟವಶಾತ್ ನಿರ್ಗಮಿಸಿದ ನಂತರ ಆಸ್ಟ್ರೇಲಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ ಮತ್ತು ಮೆಕ್ಗುರ್ಕ್ ಸ್ಥಾನ ಪಡೆಯುವ ವಿಶ್ವಾಸವನ್ನು ಅವರು ತೋರಿಸಿದ್ದಾರೆ. ಮೆಕ್ಗುರ್ಕ್, ವಿಶೇಷವಾಗಿ, ಡೆಲ್ಲಿ ಕ್ಯಾಪಿಟಲ್ಸ್​ ತಂಡ ಪರವಾಗಿ ಅಸಾಧಾರಣ ಪ್ರದರ್ಶನ ನೀಡಿದ್ದರು. ಅವರನ್ನು ಪಂದ್ಯಾವಳಿಯ ಫೈನಲ್​ ಸ್ಟ್ರೈಕರ್ ಎಂದು ಕರೆಯಲಾಗಿತ್ತು. ಅವರ ಸ್ಟ್ರೈಕ್ ರೇಟ್ 200 ರ ಗಡಿಯನ್ನು ಮೀರಿತ್ತು.

ಇದನ್ನೂ ಓದಿ: Women’s Asia Cup 2024 : ಮಹಿಳೆಯರ ಏಷ್ಯಾ ಕಪ್​ ಕ್ರಿಕೆಟ್​ನ ವೇಳಾಪಟ್ಟಿ ಬಿಡುಗಡೆ, ಜುಲೈ 19ಕ್ಕೆ ಭಾರತ- ಪಾಕ್ ಪಂದ್ಯ

” ಮೆಗ್​ಕುರ್ಕ್​ ಅವರ ಅನುಭವವು ಉತ್ತಮವಾಗಿರುತ್ತದೆ. ಅವರು ಆಗಸ್ಟ್ ಅಂತ್ಯದಲ್ಲಿ ಇಂಗ್ಲೆಂಡ್ ಪ್ರವಾಸಕ್ಕೆ ಹೋಗುತ್ತಾರೆ ಎಂದು ನಾನು ಭಾವಿಸುತ್ತೇನೆ. ಚಿಕ್ಕ ಮಗುವಾಗಿ, ಆಟದ ಬಗ್ಗೆ, ತಂಡದ ಆಟಗಾರನಾಗಿ ಗುಂಪಿನ ಸುತ್ತಲೂ ಇರುವುದು ಹೇಗೆ ಎಂಬುದನ್ನು ಅವರು ಅರ್ಥಮಾಡಿಕೊಂಡಿದ್ದಾರೆ. ಅವರು ಸಾಕಷ್ಟು ಪ್ರಶ್ನೆಗಳನ್ನು ಕೇಳುತ್ತಾರೆ ಮತ್ತು ಅವರು ಆಟವನ್ನು ಪ್ರೀತಿಸುತ್ತಾರೆ” ಎಂದು ವಾರ್ನರ್ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಹಾಲು ದರ ಏರಿಕೆ ಬಳಕೆದಾರನಿಗೆ ಹೊರೆಯಾಗದಿರಲಿ

Karnataka Milk Federation: ಕಾಂಗ್ರೆಸ್‌ ಸರಕಾರ ಎಲ್ಲೆಲ್ಲಿ ದರ ಏರಿಸಬಹುದು ಎಂಬ ಕಡೆಯೆಲ್ಲಾ ಪ್ರಯತ್ನಿಸಿ ನೋಡುತ್ತಿರುವಂತಿದೆ. ಇತ್ತೀಚೆಗೆ ತಾನೇ ಪೆಟ್ರೋಲ್-‌ ಡೀಸೆಲ್‌ ಬೆಲೆಯೇರಿಕೆಯನ್ನು ಮಾಡಿತ್ತು. ಹೀಗೆ ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆಯ ಬರೆ ಎಳೆಯುತ್ತ ಹೋದರೆ ಕೆಳ ಹಾಗೂ ಕೆಳಮಧ್ಯಮ ವರ್ಗದ ಬಳಕೆದಾರರು ಬದುಕುಳಿಯುವುದೇ ಕಷ್ಟವಾಗಲಿದೆ. ಹೈನುಗಾರರಿಗೆ ಹಾಲು ಮಾರಾಟದ ಲಾಭ ಸಿಗಲಿ. ಆದರೆ ಅದಕ್ಕಾಗಿ ಸಾಮಾನ್ಯ ಬಳಕೆದಾರನ ಜೇಬಿಗೆ ಹೆಚ್ಚಿನ ಹೊರೆ ಆಗದಿರಲಿ.

VISTARANEWS.COM


on

Karnataka Milk Federation
Koo


ಕರ್ನಾಟಕ ಹಾಲು ಮಹಾಮಂಡಳಿ (Karnataka Milk Federation) ನಂದಿನಿ ಹಾಲಿನ ದರ ಏರಿಕೆಯನ್ನು ಘೋಷಿಸಿದೆ. ಹೊಸ ದರ ಬುಧವಾರದಿಂದ ಜಾರಿಗೆ ಬರಲಿದೆ. ಇತ್ತೀಚೆಗಷ್ಟೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬರೆ ಎಳೆದಿದ್ದ ಕರ್ನಾಟಕ ಸರ್ಕಾರ, ಈಗ ಹಾಲಿನ ದರ ಏರಿಕೆ ಮಾಡಿ ಗ್ರಾಹಕರನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಿದೆ. ದರ ಏರಿಕೆಯಿಂದ ಪ್ರತಿ ಲೀಟರ್ ಹಾಲಿಗೆ 2.10 ರೂಪಾಯಿ ಹೆಚ್ಚಳವಾಗಲಿದೆ. ಬೆಲೆ ಹೊಂದಾಣಿಕೆಯ ಜೊತೆಗೆ, ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಲು ಒದಗಿಸಲು ನಂದಿನಿ ಹಾಲಿನ ಪ್ರತಿ ಪ್ಯಾಕೆಟ್ ಈಗ 50 ಮಿಲಿ ಲೀಟರ್ ಹೆಚ್ಚು ಹಾಲನ್ನು ಹೊಂದಿರುತ್ತದೆ. ಉದಾಹರಣೆಗೆ, ಅರ್ಧ ಲೀಟರ್ ಪ್ಯಾಕೆಟ್‌ನಲ್ಲಿ 550 ಮಿ.ಲೀ. ಹಾಲನ್ನು ಹೊಂದಿರುತ್ತದೆ. ಒಂದು ಲೀಟರ್‌ ಹಾಲಿನ ಪ್ಯಾಕೆಟ್‌ನಲ್ಲೂ 50 ಮಿ.ಲೀ. ಹೆಚ್ಚಿರುತ್ತದೆ. ಈ ಹೆಚ್ಚುವರಿ ಹಾಲಿನ ದರವನ್ನು ಮಾತ್ರ ವಸೂಲಿ ಮಾಡಲಾಗುತ್ತದೆ ಎಂಬುದು ಈ ಬೆಲೆ ಏರಿಕೆ ಮಾಡಿದವರ ಸಮಜಾಯಿಷಿ.

ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿದ್ದರಿಂದ ನಂದಿನಿ ಹಾಲಿನ ಪ್ಯಾಕೆಟ್‌ಗೆ ತಲಾ 50 ಮಿ.ಲೀ. ಹಾಲು ಹೆಚ್ಚಳ (Nandini Milk Price Hike) ಮಾಡಲಾಗಿದೆ. ಹೀಗಾಗಿ ಹೆಚ್ಚುವರಿ ಹಾಲಿಗೆ 2 ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಹಾಲಿನ ದರ ಹೆಚ್ಚಳಕ್ಕೆ ಸ್ಪಷ್ಟನೆ ನೀಡಿದ್ದಾರೆ. ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್‌ ಸಂಸ್ಥೆ ಪ್ಯಾಕೆಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ ಎಂದಿದ್ದಾರೆ.

ಮೇಲ್ನೋಟಕ್ಕೆ ಈ ಕ್ರಮದಲ್ಲಿ ಸದುದ್ದೇಶವೇ ಇರುವಂತೆ ಕಾಣಿಸುತ್ತಿದೆ. ಯಾಕೆಂದರೆ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು. ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬುದು ಸದುದ್ದೇಶ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆಎಂಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯ. ಪ್ಯಾಕೆಟ್‌ನಲ್ಲಿ ಹೆಚ್ಚುವರಿ ಹಾಲನ್ನು ಸೇರಿಸುವುದು ಸರಿ. ಅದು ಬಳಕೆದಾರನಿಗೆ ಲಾಭವಾಗಿ ಸಿಗುವಂತೆ ಮಾಡದೆ, ಆತನಿಗೆ ಬೇಕಿಲ್ಲದಿದ್ದರೂ ಬಲವಂತವಾಗಿ ನೀಡುತ್ತಿರುವಂತೆ ಈ ಕ್ರಮ ಇದೆ. ಬಳಕೆದಾರನ ದೃಷ್ಟಿಯಿಂದ ಇದು ಅಷ್ಟೇನೂ ಸರಿಯಾದ ಕ್ರಮವಲ್ಲ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಭಯೋತ್ಪಾದಕನಿಗೆ ಶ್ರದ್ಧಾಂಜಲಿ; ಕೆನಡಾ ಸಂಸತ್ ನ ಮೂರ್ಖತನ

ಈಗಲೂ ಹಾಲಿನ ಮಾರಾಟದಿಂದ ಕೆಎಂಎಫ್‌ ಲಾಭವನ್ನು ಗಳಿಸುತ್ತಿಲ್ಲ ಎಂಬುದು ಎಲ್ಲರಿಗೂ ತಿಳಿದೇ ಇದೆ. ಗರಿಷ್ಠ ಪ್ರಮಾಣದ ಹಾಲನ್ನು ಹಾಲಿನ ಪೌಡರ್‌ ತಯಾರಿಕೆ ಮಾಡುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್‌ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ. ಜೊತೆಗೆ ಮೊಸರು, ತುಪ್ಪ, ಬೆಣ್ಣೆ ಮುಂತಾದ ನಂದಿನಿ ಹೈನು ಉತ್ಪನ್ನಗಳಿವೆ. ಹಾಗೆಯೇ ಮೈಸೂರು ಪಾಕ್‌, ಪೇಢ ಮುಂತಾದ ಸಿಹಿ ಉತ್ಪನ್ನಗಳೂ ಇವೆ. ಇವೆಲ್ಲವುಗಳ ಮಾರಾಟದಿಂದ ಬರುತ್ತಿರುವ ಒಟ್ಟಾರೆ ಆದಾಯವು ಈ ಸಂಸ್ಥೆಯನ್ನು ಸಲಹುತ್ತಿದೆ. ರಾಜ್ಯದಲ್ಲಿ ಹಾಲಿನ ಬಳಕೆಯನ್ನು ಹೆಚ್ಚು ಮಾಡಬೇಕು; ಆ ಮೂಲಕ ಹೈನುಗಾರರಿಗೆ ನೆರವಾಗಬೇಕು ಎಂಬ ಉದ್ದೇಶವೇನೋ ಚೆನ್ನಾಗಿದೆ. ಆದರೆ ಇದನ್ನು ಬೇರೆ ಮೂಲಗಳಿಂದ ಭರಿಸಬೇಕು ಹೊರತು ಹಾಲಿನಿಂದಲ್ಲ. ಯಾಕೆಂದರೆ ಹಾಲು ಒಂದು ರೀತಿಯಿಂದ ಎಲ್ಲರ ಅಗತ್ಯ ಆಹಾರ. ಹೊಟ್ಟೆ ತುಂಬ ಊಟವಿಲ್ಲದಾಗ ಹಾಲು ಕುಡಿದೇ ಹೊಟ್ಟೆ ತುಂಬಿಸಿಕೊಳ್ಳುವವರಿದ್ದಾರೆ. ಮಕ್ಕಳಿಗೆ, ಮಹಿಳೆಯರಿಗೆ ಹಾಲು ಅತ್ಯಂತ ಪೌಷ್ಟಿಕ ಆಹಾರ. ಆದರೆ ಎಲ್ಲರೂ ಈ ಏರಿದ ಬೆಲೆಯಲ್ಲಿ ಹಾಲನ್ನು ಕೊಳ್ಳುವ ಸ್ಥಿತಿವಂತರಾಗಿರುವುದಿಲ್ಲ.

ಜೊತೆಗೆ ಹಾಲಿನ ದರ ಏರಿಕೆಯೆಂದರೆ ಒಂದು ರೀತಿಯಲ್ಲಿ ಪೆಟ್ರೋಲ್‌ ದರ ಏರಿಕೆಯಂತೆಯೇ. ಇದನ್ನನುಸರಿಸಿ ಕಾಫಿ, ಟೀ ಮುಂತಾದ ಹೋಟೆಲ್‌ ಉತ್ಪನ್ನಗಳ ದರಗಳು ಹೆಚ್ಚಾಗಲಿವೆ. ಮೊಸರು, ತುಪ್ಪ, ಬೆಣ್ಣೆಗಳ ದರವೂ ಹೆಚ್ಚಬೇಕಾದೀತು. ಹಾಲನ್ನು ಬಳಸಿ ಮಾಡುವ ಖಾದ್ಯಗಳ ಬೆಲೆಯೂ ಹೆಚ್ಚಾಗುತ್ತದೆ. ಹೀಗಾಗಿ ಇದು ಬಳಕೆದಾರರಿಗೆ ಹೊರೆಯೇ ಆಗಿದೆ. ಕಾಂಗ್ರೆಸ್‌ ಸರಕಾರ ಎಲ್ಲೆಲ್ಲಿ ದರ ಏರಿಸಬಹುದು ಎಂಬ ಕಡೆಯೆಲ್ಲಾ ಪ್ರಯತ್ನಿಸಿ ನೋಡುತ್ತಿರುವಂತಿದೆ. ಇತ್ತೀಚೆಗೆ ತಾನೇ ಪೆಟ್ರೋಲ್-‌ ಡೀಸೆಲ್‌ ಬೆಲೆಯೇರಿಕೆಯನ್ನು ಮಾಡಿತ್ತು. ಹೀಗೆ ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆಯ ಬರೆ ಎಳೆಯುತ್ತ ಹೋದರೆ ಕೆಳ ಹಾಗೂ ಕೆಳಮಧ್ಯಮ ವರ್ಗದ ಬಳಕೆದಾರರು ಬದುಕುಳಿಯುವುದೇ ಕಷ್ಟವಾಗಲಿದೆ. ಹೈನುಗಾರರಿಗೆ ಹಾಲು ಮಾರಾಟದ ಲಾಭ ಸಿಗಲಿ. ಆದರೆ ಅದಕ್ಕಾಗಿ ಸಾಮಾನ್ಯ ಬಳಕೆದಾರನ ಜೇಬಿಗೆ ಹೆಚ್ಚಿನ ಹೊರೆ ಆಗದಿರಲಿ.

Continue Reading

ಭವಿಷ್ಯ

Dina Bhavishya: ಈ ರಾಶಿಯವರಿಗೆ ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದುಕೊಡಲಿದೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ಕುಂಭ ರಾಶಿಯಿಂದ ಮೀನ ರಾಶಿಗೆ ಬುಧವಾರ ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕುಂಭ ರಾಶಿಯವರಿಗೆ ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ. ಇನ್ನು ವೃಶ್ಚಿಕ ರಾಶಿಯವರಿಗೆ ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (26-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ಪಂಚಮಿ 20:54 ವಾರ: ಬುಧವಾರ
ನಕ್ಷತ್ರ: ಧನಿಷ್ಠಾ 13:04 ಯೋಗ: ವಿಷ್ಕಂಭ 06:12
ಕರಣ: ಕೌಲವ 10:02 ಅಮೃತಕಾಲ: ಬೆಳಗಿನ ಜಾವ 04:51 ರಿಂದ 06:21
ದಿನದ ವಿಶೇಷ: ಕೂಡ್ಲಿ ನೃಸಿಂಹ ಭಾರತೀ ಸ್ವಾಮಿಗಳ ಆರಾಧನೆ

ಸೂರ್ಯೋದಯ : 05:44   ಸೂರ್ಯಾಸ್ತ : 07:15

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆಗಳು ಹೆಚ್ಚು, ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು. ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ, ಆರೋಗ್ಯದ ಕಡೆಗೆ ಗಮನ ಹರಿಸಿ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಿರಿಯರಿಂದ ಮಾರ್ಗದರ್ಶನ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ವಿಮರ್ಶಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ, ಅವರ ಮಾತನ್ನು ಲಕ್ಷಿಸದೆ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ. ಅಪರಿಚರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರಯತ್ನಿಸುವಂತೆ ಮಾಡುವಂತೆ ಪ್ರೇರೇಪಿಸುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣ, ದಿನದ ಮಟ್ಟಿಗೆ ಖರ್ಚು. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ, ಮಾಧ್ಯಮ ಕ್ಷೇತ್ರ ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ : ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೊಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ. ಆರೋಗ್ಯ ಉತ್ತಮ. ದಿನದ ಮಟ್ಟಿಗೆ ಖರ್ಚು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅತಿಥಿಗಳ ಆಗಮನ ಸಂತಸ ತರುವುದು. ಆತ್ಮವಿಶ್ವಾಸ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ. ಆರೋಗ್ಯ, ಉದ್ಯೋಗದಲ್ಲಿ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಗೊಳ್ಳುವಂತೆ ಉದ್ರೇಕವಾಗುವ ವಿಷಯಗಳಿಂದ ದೂರ ಇರಿ. ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Women’s Asia Cup 2024 : ಮಹಿಳೆಯರ ಏಷ್ಯಾ ಕಪ್​ ಕ್ರಿಕೆಟ್​ನ ವೇಳಾಪಟ್ಟಿ ಬಿಡುಗಡೆ, ಜುಲೈ 19ಕ್ಕೆ ಭಾರತ- ಪಾಕ್ ಪಂದ್ಯ

Women’s Asia Cup 2024 : ಏಷ್ಯಾದ ಅಗ್ರ 8 ಮಹಿಳಾ ಕ್ರಿಕೆಟ್ ತಂಡಗಳನ್ನು ಒಳಗೊಂಡ ಪಂದ್ಯಾವಳಿಗೆ ನಿಮ್ಮನ್ನು ಸಜ್ಜುಗೊಳಿಸಿಕೊಳ್ಳಿ. ನಿಮ್ಮ ಕ್ಯಾಲೆಂಡರ್​ನಲ್ಲಿ ದಿನಾಂಕಗಳನ್ನು ಮಾರ್ಕ್ ಮಾಡಿ. ಏಕೆಂದರೆ ಇದು ಜುಲೈ 19, 2024 ರಂದು ಶ್ರೀಲಂಕಾದ ಡಂಬುಲ್ಲಾದಲ್ಲಿ ಟೂರ್ನಿ ಪ್ರಾರಂಭವಾಗಲಿದೆ, ಕಾಂಟಿನೆಂಟಲ್ ಕ್ರಿಕೆಟ್ ಆಡಳಿತ ಮಂಡಳಿಯಾಗಿರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮಂಗಳವಾರ ತನ್ನ ‘ಎಕ್ಸ್’ ಹ್ಯಾಂಡಲ್​ನಲ್ಲಿ ಬರೆದುಕೊಂಡಿದೆ.

VISTARANEWS.COM


on

Women's Asia Cup
Koo

ಬೆಂಗಳೂರು : ಇತ್ತೀಚೆಗೆ ತವರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ 3-0 ಸರಣಿ ಗೆಲುವಿನೊಂದಿಗೆ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಉತ್ಸಾಹದಲ್ಲಿದೆ. ಇದೀಗ ಮತ್ತೊಂದು ಪ್ರಮುಖ ಪಂದ್ಯಾವಳಿಗಾಗಿ ಶೀಘ್ರದಲ್ಲೇ ಸಿದ್ಧಗೊಳ್ಳಬೇಕಾಗಿದೆ. ಅದುವೇ ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್ (Women’s Asia Cup 2024 )​. ಅಲ್ಲಿ ಏಷ್ಯಾದ ಅಗ್ರ ತಂಡಗಳು ಖಂಡಾಂತರ ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ.

ಮುಂಬರುವ ಮಹಿಳಾ ಏಷ್ಯಾ ಕಪ್ 2024 ಖಂಡದ ಅಗ್ರ ಎಂಟು ತಂಡಗಳು ಭಾಗವಹಿಸಲಿವೆ. ಜುಲೈ 19ರಿಂದ ಆರಂಭವಾಗಲಿರುವ ಈ ರೋಚಕ ಕ್ರಿಕೆಟ್ ಪಂದ್ಯ ಜುಲೈ 28ರಂದು ಮುಕ್ತಾಯಗೊಳ್ಳಲಿದೆ. ಶ್ರೀಲಂಕಾ ಟೂರ್ನಿಗೆ ಆತಿಥ್ಯ ವಹಿಸಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಕ್ರಿಕೆಟ್ ಅಭಿಮಾನಿಗಳಿಗೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಏಷ್ಯಾದ ಅಗ್ರ 8 ಮಹಿಳಾ ಕ್ರಿಕೆಟ್ ತಂಡಗಳನ್ನು ಒಳಗೊಂಡ ಪಂದ್ಯಾವಳಿಗೆ ನಿಮ್ಮನ್ನು ಸಜ್ಜುಗೊಳಿಸಿಕೊಳ್ಳಿ. ನಿಮ್ಮ ಕ್ಯಾಲೆಂಡರ್​ನಲ್ಲಿ ದಿನಾಂಕಗಳನ್ನು ಮಾರ್ಕ್ ಮಾಡಿ. ಏಕೆಂದರೆ ಇದು ಜುಲೈ 19, 2024 ರಂದು ಶ್ರೀಲಂಕಾದ ಡಂಬುಲ್ಲಾದಲ್ಲಿ ಟೂರ್ನಿ ಪ್ರಾರಂಭವಾಗಲಿದೆ, ಕಾಂಟಿನೆಂಟಲ್ ಕ್ರಿಕೆಟ್ ಆಡಳಿತ ಮಂಡಳಿಯಾಗಿರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮಂಗಳವಾರ ತನ್ನ ‘ಎಕ್ಸ್’ ಹ್ಯಾಂಡಲ್ನಲ್ಲಿ ಬರೆದುಕೊಂಡಿದೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ಮಹಿಳಾ ಏಷ್ಯಾ ಕಪ್ 2024 ರ ವೇಳಾಪಟ್ಟಿಯ ಬಗ್ಗೆ ಮಾತನಾಡುವುದಾದರೆ, ಜುಲೈ 21 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಮಹಿಳಾ ವಿರುದ್ಧ ಭಾರತ ಮಹಿಳಾ ತಂಡವನ್ನು ಆಡಲು ನಿರ್ಧರಿಸಲಾಗಿತ್ತು. ಆದಾಗ್ಯೂ, ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಎಸಿಸಿ ಆಟವನ್ನು ಜುಲೈ 19 ಕ್ಕೆ ನಿಗದಿ ಮಾಡಿದೆ. ವಿಶೇಷವೆಂದರೆ, ಅಪೇಕ್ಷಿತ ಪಂದ್ಯಾವಳಿಯಲ್ಲಿ ಎಂಟು ತಂಡಗಳು ಕೇಂದ್ರ ಸ್ಥಾನವನ್ನು ಪಡೆಯುತ್ತಿರುವುದು ಇದೇ ಮೊದಲು. ಕಾಂಟಿನೆಂಟಲ್ ಈವೆಂಟ್​​ನಲ್ಲಿ ಇಲ್ಲಿಯವರೆಗೆ ಕೇವಲ ಏಳು ತಂಡಗಳು ಆಡಿದ್ದವು.

ಇದನ್ನೂ ಓದಿ: T20 World Cup : ಅಫಘಾನಿಸ್ತಾನ ತಂಡದ ನಾಯಕ ರಶೀದ್​ ಗೆ ಕರೆ ಮಾಡಿ ಶುಭಾಶಯ ತಿಳಿಸಿದ ತಾಲಿಬಾನ್ ನಾಯಕ

ಏಷ್ಯನ್ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಆಯಾ ಗುಂಪುಗಳ ಅಗ್ರ ಎರಡು ತಂಡಗಳು ಜುಲೈ 26 ರಂದು ನಡೆಯಲಿರುವ ಸೆಮಿಫೈನಲ್​ಗೆ ಅರ್ಹತೆ ಪಡೆಯುತ್ತವೆ. ಫೈನಲ್ ಪಂದ್ಯ ಜುಲೈ 28ರಂದು ನಡೆಯಲಿದೆ. ಇದಲ್ಲದೆ, ಸಾಂಪ್ರದಾಯಿಕ ಎದುರಾಳಿಗಳ ಜೊತೆಗೆ ನೇಪಾಳ ಮತ್ತು ಯುಎಇ ತಂಡಗಳನ್ನು ಟೀಮ್ ಇಂಡಿಯಾದೊಂದಿಗೆ ಗುಂಪು ಮಾಡಲಾಗಿದೆ. ಬಾಂಗ್ಲಾದೇಶ, ಶ್ರೀಲಂಕಾ, ಥಾಯ್ಲೆಂಡ್ ಮತ್ತು ಮಲೇಷ್ಯಾ ತಂಡಗಳು ‘ಬಿ’ ಗುಂಪಿನಲ್ಲಿವೆ.

ಮಹಿಳಾ ಏಷ್ಯಾ ಕಪ್ ಅನ್ನು ಕೊನೆಯ ಬಾರಿಗೆ 2022 ರಲ್ಲಿ ಬಾಂಗ್ಲಾದೇಶದಲ್ಲಿ ಆಡಿಸಲಾಗಿತ್ತು. ಅಲ್ಲಿ ಫೈನಲ್​​ನಲ್ಲಿ ಶ್ರೀಲಂಕಾ ಮಹಿಳೆಯರನ್ನು ಎಂಟು ವಿಕೆಟ್​ಗಳಿಂ ಸೋಲಿಸಿದ ಭಾರತ ಮಹಿಳೆಯರು ಏಳನೇ ಪ್ರಶಸ್ತಿ ಗೆದ್ದುಕೊಂಡಿದ್ದರು ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಏಷ್ಯಾ ಕಪ್ ಅನ್ನು ಎರಡು ವರ್ಷಗಳ ಕಾಲ ಮುಂದೂಡಲಾಗಿತ್ತು.

Continue Reading
Advertisement
Actor Darshan Judicial Custody Jailer Gave UTP Number
ಕ್ರೈಂ15 mins ago

Actor Darshan: ದರ್ಶನ್‌, ಪ್ರದೋಷ್‌ನಿಂದ ಮೂರು ಪಿಸ್ತೂಲ್‌ ವಶಕ್ಕೆ

Health Tips Kannada
ಆರೋಗ್ಯ25 mins ago

Health Tips Kannada: ಕುಂಬಳಕಾಯಿ ಬೀಜದಲ್ಲಿದೆ ನಮ್ಮ ಆರೋಗ್ಯದ ಗುಟ್ಟು!

NEET Paper Leak
ಶಿಕ್ಷಣ25 mins ago

NEET Paper Leak: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ರೂವಾರಿ ಸಂಜೀವ್ ಮುಖಿಯಾ; ಈತ ನಟೋರಿಯಸ್‌!

Karnataka Weather
ಕರ್ನಾಟಕ55 mins ago

Karnataka Weather: ಇಂದು ಹಾಸನ, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

David Warner
ಪ್ರಮುಖ ಸುದ್ದಿ1 hour ago

David Warner : ವಿಶ್ವ ಕಪ್​ನಿಂದ ಹೊರಬಿದ್ದ ಬೇಸರ; ಬಿಯರ್ ಕುಡಿತಾ ಕುಳಿತ ಆಸ್ಟ್ರೇಲಿಯಾದ ಆಟಗಾರರು

Fatty Lever Disease
ಆರೋಗ್ಯ1 hour ago

Fatty Lever Disease: ಎಚ್ಚರ ವಹಿಸಿ, ಮಕ್ಕಳನ್ನು ಸದ್ದಿಲ್ಲದೆ ಕಾಡುತ್ತಿದೆ ಫ್ಯಾಟಿ ಲಿವರ್‌ ಕಾಯಿಲೆ!

Karnataka Milk Federation
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಹಾಲು ದರ ಏರಿಕೆ ಬಳಕೆದಾರನಿಗೆ ಹೊರೆಯಾಗದಿರಲಿ

Dina Bhavishya
ಭವಿಷ್ಯ2 hours ago

Dina Bhavishya: ಈ ರಾಶಿಯವರಿಗೆ ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದುಕೊಡಲಿದೆ

Women's Asia Cup
ಪ್ರಮುಖ ಸುದ್ದಿ8 hours ago

Women’s Asia Cup 2024 : ಮಹಿಳೆಯರ ಏಷ್ಯಾ ಕಪ್​ ಕ್ರಿಕೆಟ್​ನ ವೇಳಾಪಟ್ಟಿ ಬಿಡುಗಡೆ, ಜುಲೈ 19ಕ್ಕೆ ಭಾರತ- ಪಾಕ್ ಪಂದ್ಯ

minister mb patil visit japan and discuss about investment in Karnataka
ಕರ್ನಾಟಕ8 hours ago

Foreign Investment: 100 ಕೋಟಿ ರೂ. ವೆಚ್ಚದ ತ್ಯಾಜ್ಯ ನೀರು ನಿರ್ವಹಣಾ ಉಪಕರಣಗಳ ತಯಾರಿಕಾ ಘಟಕ ಸ್ಥಾಪನೆಗೆ ಒಪ್ಪಂದ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌