Waste Disposal: ಕಸ ವಿಲೇವಾರಿ ಇನ್ನು ಬಿಬಿಎಂಪಿ ಕೆಲಸ ಅಲ್ಲ! ಅದಕ್ಕಾಗಿಯೇ ಬರುತ್ತಿದೆ ಹೊಸ ಸಂಸ್ಥೆ - Vistara News

ಬೆಂಗಳೂರು

Waste Disposal: ಕಸ ವಿಲೇವಾರಿ ಇನ್ನು ಬಿಬಿಎಂಪಿ ಕೆಲಸ ಅಲ್ಲ! ಅದಕ್ಕಾಗಿಯೇ ಬರುತ್ತಿದೆ ಹೊಸ ಸಂಸ್ಥೆ

Waste Disposal: ನಗರದಲ್ಲಿ ಕಸದ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಹೊಸ ಯೋಜನೆ ಜಾರಿಯಾಗುತ್ತಿದ್ದು, ಕಸ ವಿಲೇವಾರಿಗಾಗಿಯೇ (garbage disposal) ಒಂದು ಕಂಪನಿಯನ್ನು ರಾಜ್ಯ ಸರ್ಕಾರ ಸ್ಥಾಪಿಸಿದೆ. “ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಿಯಮಿತ” ಹೆಸರಿನ ಈ ಕಂಪನಿ ಘನತ್ಯಾಜ್ಯ ನಿರ್ವಹಣೆಯನ್ನು ಕೈಗೆತ್ತಿಕೊಳ್ಳಲಿದೆ.

VISTARANEWS.COM


on

bbmp waste disposal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಕಸ ವಿಲೇವಾರಿ (waste disposal) ಸಮಸ್ಯೆ ಬೃಹತ್‌ ಆಗಿ ಬೆಳೆದು ನಿಂತಿದೆ. ಬಿಬಿಎಂಪಿಯಲ್ಲಿ (BBMP) ಸಾಕಷ್ಟು ಎಂಜಿನಿಯರ್‌ಗಳು (Engineers) ಇದಕ್ಕಾಗಿಯೇ ಇದ್ದರೂ ಇದನ್ನು ನಿರ್ವಹಿಸುವುದು ಸವಾಲೇ ಆಗಿದೆ. ಹೀಗಾಗಿ, ರಾಜ್ಯ ಸರ್ಕಾರದಿಂದ ಕಸ ವಿಲೇವಾರಿಗೆ ಇದೇ ಜೂನ್‌ 1ರಿಂದ ಹೊಸ ಯೋಜನೆ ಜಾರಿಯಾಗುತ್ತಿದೆ.

ನಗರದಲ್ಲಿ ಕಸದ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಹೊಸ ಯೋಜನೆ ಜಾರಿಯಾಗುತ್ತಿದ್ದು, ಕಸ ವಿಲೇವಾರಿಗಾಗಿಯೇ (garbage disposal) ಒಂದು ಕಂಪನಿಯನ್ನು ರಾಜ್ಯ ಸರ್ಕಾರ ಸ್ಥಾಪಿಸಿದೆ. “ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಿಯಮಿತ” ಹೆಸರಿನ ಈ ಕಂಪನಿ ಘನತ್ಯಾಜ್ಯ ನಿರ್ವಹಣೆಯನ್ನು ಕೈಗೆತ್ತಿಕೊಳ್ಳಲಿದ್ದು, ಇನ್ನು ಮುಂದೆ ನಗರದಲ್ಲಿ ಕಸದ ಸಮಸ್ಯೆ ಕಂಡುಬಂದರೆ ಅದನ್ನು ಈ ಕಂಪನಿಯ ಮುಂದೆ ಪ್ರಶ್ನಿಸಬೇಕಾಗಲಿದೆ.

ರಾಜ್ಯ ಸರ್ಕಾರ ಹಾಗೂ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ ಜಂಟಿಯಾಗಿ ಈ ಸಂಸ್ಥೆಯನ್ನು ನಿರ್ಮಾಣ ಮಾಡಿವೆ. ಇನ್ನು ಮುಂದೆ ಈ ಕಂಪನಿಯಿಂದಲೇ ಕಸ ಸಂಗ್ರಹಣೆ, ಸಾಗಾಣಿಕೆ ಹಾಗೂ ಹಾಗೂ ವಿಲೇವಾರಿ ಕಾರ್ಯ ನಡೆಯಲಿದೆ. ಜೂನ್ 1ರಿಂದ ಮನೆಮನೆಯಿಂದ ಅಟೋದಲ್ಲಿ ಕಸ ಸಂಗ್ರಹಣೆ, ಸಂಗ್ರಹಿಸಿದ ಕಸವನ್ನು ಟಿಪ್ಪರ್ ಲಾರಿಗಳ ಮೂಲಕ ಕಸದ ಸಂಸ್ಕರಣಾ ಘಟಕ ಅಥವಾ ಕ್ಯಾರಿಗಳಿಗೆ ಸಾಗಿಸುವುದು ಈ ಸಂಸ್ಥೆಯ ಹೊಣೆ.

ಬಿಬಿಎಂಪಿ ಅಡಿಯಲ್ಲಿ ತ್ಯಾಜ್ಯ ವಿಲೇವಾರಿ ಕಾರ್ಯ ನಿರ್ವಹಿಸುತ್ತಿರುವ ಅಟೋ, ಟಿಪ್ಪರ್, ಕಾಂಪ್ಯಾಕ್ಟರ್ ಚಾಲಕರು, ಸಹಾಯಕರು ಕಂಪನಿ ವ್ಯಾಪ್ತಿಗೆ ಬರಲಿದ್ದಾರೆ. ಘನತ್ಯಾಜ್ಯ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ವಾರ್ಡ್‌ ಮಟ್ಟದ ಎಂಜಿನಿಯರ್‌ಗಳು, ಸಿಬ್ಬಂದಿಗಳು ಹಾಗೂ ಮಾರ್ಷಲ್‌ಗಳು ಕಂಪನಿ ಅಧೀನಕ್ಕೆ ಬರಲಿದ್ದಾರೆ. ಈ ಅಧಿಕಾರಿಗಳ, ಸಿಬ್ಬಂದಿಗಳ ವೇತನವನ್ನು ಕಂಪನಿಯೇ ಪಾವತಿ ಮಾಡಲಿದೆ.

ನಗರದಲ್ಲಿ ಇರುವ 7 ಕಸ ಸಂಸ್ಕರಣಾ ಘಟಕಗಳು ಕಂಪನಿ ವ್ಯಾಪ್ತಿಗೆ ಬರಲಿವೆ. ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಪ್ರತಿ ವರ್ಷ ಕಂಪನಿಗೆ ಅಂತ ಅನುದಾನ ನೀಡಲಿವೆ. ಪೌರ ಕಾರ್ಮಿಕರು, ಗುತ್ತಿಗೆ ಪೌರಕಾರ್ಮಿಕರು ಬಿಬಿಎಂಪಿ ಅಧೀನದಲ್ಲಿ ಕಾರ್ಯ ನಿರ್ವಹಿಸಲಿದ್ದು, ಇವರಿಗೆ ಬಿಬಿಎಂಪಿಯಿಂದ ವೇತನ ದೊರೆಯಲಿದೆ. ಪೌರಕಾರ್ಮಿಕರು ಕೇವಲ ಕಸ ಗುಡಿಸುವುದು, ಸಾರ್ವಜನಿಕ ಸ್ಥಳಗಳನ್ನು ಕ್ಲೀನ್ ಮಾಡುವುದು ಮಾಡಲಿದ್ದಾರೆ.

ಘನತ್ಯಾಜ್ಯ ಇಲಾಖೆಯನ್ನು ಆರೋಗ್ಯ ಇಲಾಖೆ ಜೊತೆ ವಿಲೀನ ಮಾಡಿ ಅದೇಶ ಹೊರಡಿಸಲಾಗಿದ್ದು, ಇನ್ನು ಮುಂದೆ ಆರೋಗ್ಯ ಮತ್ತು ನೈರ್ಮಲ್ಯ ಇಲಾಖೆ ಎಂದು ಕರೆಯಲಾಗುತ್ತದೆ. ಈ ಬದಲಾವಣೆಗಳಿಂದ ಮುಂದಿನ ದಿನಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಕಸದ ಸಮಸ್ಯೆ ಇರವುದಿಲ್ಲವೇ, ಗಾರ್ಬೆಜ್ ಸಿಟಿ ಗಾರ್ಡನ್ ಸಿಟಿ ಆಗಲಿದೆಯೇ ಎಂಬ ಪ್ರಶ್ನೆಗಳಿಗೆ ಉತ್ತರ ಕಾದು ನೋಡಬೇಕಿದೆ.

ಜನರಹಿತ ಪ್ರದೇಶಗಳಿಗೆ ಕಸ ವಿಲೇವಾರಿ ಘಟಕಗಳ ಸ್ಥಳಾಂತರ: ಡಿಕೆಶಿ

ಜನ ಸಾಮಾನ್ಯರ ತೊಂದರೆ ನಿವಾರಣೆಗೆ ಯಶವಂತಪುರ ವಿಧಾನಸಭೆ ಕ್ಷೇತ್ರದ 5, ಬ್ಯಾಟರಾಯನಪುರದ 2, ದಾಸರಹಳ್ಳಿ, ಆನೇಕಲ್, ಮಹದೇವಪುರ ಕ್ಷೇತ್ರದಲ್ಲಿನ ಕಸ ವಿಲೇವಾರಿ ಘಟಕಗಳನ್ನು (Waste Disposal Unit) ಬೆಂಗಳೂರಿನ ಹೊರಭಾಗದಲ್ಲಿ ಜನರಹಿತ ಬೆಟ್ಟ ಗುಡ್ಡ ಪ್ರದೇಶಕ್ಕೆ ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಈ ಹಿಂದೆ ತಿಳಿಸಿದ್ದರು.

ಬೆಂಗಳೂರು ಅಪಾರವಾಗಿ ಬೆಳೆದ ಪರಿಣಾಮ ಕಸ ವಿಲೇವಾರಿ ಘಟಕಗಳು ನಗರದ ಹೃದಯ ಭಾಗಕ್ಕೆ ಬಂದಿವೆ. ಈ ಘಟಕಗಳ ಸುತ್ತಮುತ್ತ ನಾಲ್ಕೈದು ಕಿ.ಮೀ. ವರೆಗೆ ನಾಗರಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಬ್ಯಾಟರಾಯಣಪುರ ಶಾಸಕ, ಸಚಿವ ಕೃಷ್ಣಬೈರೇಗೌಡ, ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತಿತರರು ಕಸ ವಿಲೇವಾರಿ ಘಟಕ ಸ್ಥಳಾಂತರದ ವಿಚಾರವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ನಾನು ಕೂಡ ಖುದ್ದು ಸ್ಥಳ ಪರಿಶೀಲನೆ ನಡೆಸಿದ್ದೆ. ಮುಂದಿನ ದಿನಗಳಲ್ಲಿ ಜನರಿಗೆ ಕಸದ ವಾಸನೆ ಬರಬಾರದು ಎಂಬ ಉದ್ದೇಶದಿಂದ ನಗರದ ಹೊರವಲಯಕ್ಕೆ ಈ ಘಟಕಗಳ ಸ್ಥಳಾಂತರಕ್ಕೆ ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Suraj Revanna Case: ಅಮಾವಾಸ್ಯೆ ದಿನ ಸೂರಜ್‌ ಬಳೆ ತೊಡ್ತಾನೆ, ಸೀರೆ ಉಡ್ತಾನೆ! ಬಯಲು ಮಾಡಿದ ಸಂತ್ರಸ್ತ

Suraj Revanna Case: ಸೂರಜ್ ರೇವಣ್ಣ ಅವರು Good Evening ಮೆಸೇಜ್ ಜತೆ ಲವ್ ಸಿಂಬಲ್ ಕಳಿಸಿ ಮಾತು ಆರಂಭಿಸಿದರು. ಬಳಿಕ ಫಾರ್ಮ್‌ಹೌಸ್‌ಗೆ ಒಂಟಿಯಾಗಿ ಕರೆಸಿಕೊಂಡು ಬಲಾತ್ಕಾರದಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಸಂತ್ರಸ್ತ ಜೆಡಿಎಸ್ ಕಾರ್ಯಕರ್ತ ಹೇಳಿದ್ದಾನೆ.

VISTARANEWS.COM


on

suraj revanna case 12
Koo

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ (Homosexuality, abnormal physical abuse) ಪ್ರಕರಣದಲ್ಲಿ ಈಗ ಪೊಲೀಸ್‌ ವಶದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna Case) ಬಗ್ಗೆ ಸಂತ್ರಸ್ತ ಯುವಕ ಕುತೂಹಲಕಾರಿ ಹೇಳಿಕೆ ನೀಡಿದ್ದಾನೆ. ಸೂರಜ್‌ ರೇವಣ್ಣ ಅಮಾವಾಸ್ಯೆ ದಿನ (New Moon) ಬಳೆ (bangles) ತೊಟ್ಟು, ಸೀರೆ (Saree) ಉಡುತ್ತಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಅವರ ಹಿರಿಯ ಪುತ್ರ ಸೂರಜ್‌ ರೇವಣ್ಣನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ವಶದಲ್ಲಿಟ್ಟುಕೊಂಡಿದ್ದಾರೆ. ಸೂರಜ್ ರೇವಣ್ಣ ಅವರ ಕುರಿತು ಜೆಡಿಎಸ್ ಕಾರ್ಯಕರ್ತ ಹಾಗೂ ಸಂತ್ರಸ್ತ ಯುವಕ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಬೆಚ್ಚಿಬೀಳುವಂತಹ ಮಾಹಿತಿ ನೀಡಿದ್ದಾನೆ.

2019ರ ಚುನಾವಣೆ ಸಂದರ್ಭದಲ್ಲಿ ನಾನು ಅವರನ್ನು ಭೇಟಿ ಮಾಡಿದ್ದೆ. ಅರಕಲಗೂಡಿನಲ್ಲಿ ಜೆಡಿಎಸ್ ಕಾರ್ಯಕ್ರಮ ಚೆನ್ನಾಗಿ ಮಾಡಿದ್ದೆ. ಈ ವೇಳೆ ಕಾರ್ಯಕ್ರಮ ಚೆನ್ನಾಗಿ ಮಾಡಿದೀಯ ಅಂತ ನನ್ನನ್ನು ಹೊಗಳಿ ನನ್ನ ಫೋನ್‌ ನಂಬರ್ ಅನ್ನು ತೆಗೆದುಕೊಂಡರು. ನಂತರ ಅವರ ವಿಸಿಟಿಂಗ್ ಕಾರ್ಡ್ ಕೊಟ್ಟರು. ನಂತರ ಅವರು ನನ್ನ ಜೊತೆಗೆ ದೂರವಾಣಿಯಲ್ಲಿ ಮಾತನಾಡಿದರು ಎಂದಿದ್ದಾನೆ. ಸೂರಜ್ ರೇವಣ್ಣ ಅವರು Good Evening ಮೆಸೇಜ್ ಜತೆ ಲವ್ ಸಿಂಬಲ್ ಕಳಿಸಿ ಮಾತು ಆರಂಭಿಸಿದರು. ಬಳಿಕ ಫಾರ್ಮ್‌ಹೌಸ್‌ಗೆ ಒಂಟಿಯಾಗಿ ಕರೆಸಿಕೊಂಡು ಬಲಾತ್ಕಾರದಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಸಂತ್ರಸ್ತ ಜೆಡಿಎಸ್ ಕಾರ್ಯಕರ್ತ ಹೇಳಿದ್ದಾನೆ.

ಸೂರಜ್ ರೇವಣ್ಣಗೆ ಎರಡು ವ್ಯಕ್ತಿತ್ವ ಇದೆ. ಅವರು ಸಾರ್ವಜನಿಕ ಜೀವನದಲ್ಲಿ ಇರುವುದಕ್ಕೆ ವಿರುದ್ಧವಾಗಿ ಒಳಗಡೆ ಇರುತ್ತಾರೆ. ಸೂರಜ್ ರೇವಣ್ಣ ಕಾಮುಕ, ಹೊರಗೆ ಒಂದು ಮುಖ, ಒಳಗೆ ಇನ್ನೊಂದು ಮುಖ. ನಾಲ್ಕು ವರ್ಷದಿಂದ ಎಲ್ಲೂ ಹೇಳಿಕೊಳ್ಳೋಕೆ ನನಗೆ ಆಗಿರಲಿಲ್ಲ, ಮನಸ್ಸಿನಲ್ಲಿ ಕಾಡುತ್ತಿತ್ತು. ಒಂದು ದಿನ ನನ್ನ ಜೊತೆಗೆ ಸೂರಜ್ ರೇವಣ್ಣ ಮಾತಾಡುತ್ತಾ ನನ್ನ ಜೀವನ ಹೇಗೆ ಏನು ಅಂತ ಎಲ್ಲಾ ಕೇಳಿದ್ರು. ನಾನು ನನ್ನ ಕೆಲಸ, ಕುಟುಂಬದ ಬಗ್ಗೆ ಹೇಳಿದೆ. ಯಾವುದಕ್ಕೂ ಯೋಚನೆ ಮಾಡಬೇಡ ನಾನು ಇದ್ದೇನೆ ಎಂದು ಹೇಳಿ ರೂಮ್ ಒಳಗೆ ಕರೆದುಕೊಂಡು ಹೋದ್ರು.
ನಂತರ ನನ್ನ ಕಾಲು ಒತ್ತುವಂತೆ ಹೇಳಿದರು. ನಾನು ಕಾಲು ಒತ್ತಿದೆ.. ಮುಂದೆ ಏನಾಯ್ತು ಅಂತ ನಾನು ಹೇಳಲು ಸಾಧ್ಯವಿಲ್ಲ ಎಂದು ಸಂತ್ರಸ್ತ ಯುವಕ ವಿವರಿಸಿದ್ದಾನೆ.

ಪೊಲೀಸ್ ವಿಚಾರಣೆ ವೇಳೆ ಹಾಗೂ ದೂರು ಪ್ರತಿಯಲ್ಲಿ ಘಟನೆಯನ್ನು 27 ವರ್ಷದ ಸಂತ್ರಸ್ತ ವಿವರಿಸಿದ್ದಾರೆ. “ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪರಿಚಯವಾಗಿದ್ದ ಸೂರಜ್ ರೇವಣ್ಣ ಪಕ್ಷದ ಚಟುವಟಿಕೆಗಳಲ್ಲಿ ಹೆಚ್ಚು ಸಕ್ರಿಯನಾಗಿದ್ದ ಕಾರಣ ನನ್ನ ಮೊಬೈಲ್ ನಂಬರ್ ಪಡೆದಿದ್ದರು. ಜೂ.14ರಂದು ಮೊದಲ ಬಾರಿಗೆ ಗುಡ್ ಈವಿನಿಂಗ್ ಸಂದೇಶದ ಜತೆಗೆ ಲವ್ ಸಿಂಬಲ್ ಕಳಿಸಿ ಮಾತನಾಡಲು ಆರಂಭಿಸಿದ್ದರು. ಇದಾದ ಬಳಿಕ ಜೂನ್ 16ರಂದು ಗನ್ನಿಕಡದ ಫಾರ್ಮ್‌ಹೌಸ್‌ಗೆ ಒಂಟಿಯಾಗಿ ಬರಲು ತಿಳಿಸಿದ್ದರು. ಅದರಂತೆ ಸಾಯಂಕಾಲ 6.15ರ ಸುಮಾರಿಗೆ ಫಾರ್ಮ್ ಹೌಸ್‌ಗೆ ತೆರಳಿದ್ದ ವೇಳೆ ತನ್ನ ಬೆಡ್ ರೂಂಗೆ ಕರೆದೊಯ್ದ ಸೂರಜ್ ರೇವಣ್ಣ ಬೆದರಿಕೆ ಒಡ್ಡಿ ಬಲಾತ್ಕಾರದಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬೇಡ ಎಂದು ಗೋಳಾಡಿದರೂ ಸೂರಜ್ ರೇವಣ್ಣ ಬಿಡದೆ ಕೃತ್ಯ ಎಸಗಿದ್ದಾರೆ” ಎಂದು ಸಂತ್ರಸ್ತ ದೂರಿನಲ್ಲಿ ಆರೋಪಿಸಿದ್ದಾನೆ.

ಸೂರಜ್ ರೇವಣ್ಣ ನನ್ನ ಮೇಲೆ ಎಸಗಿದ ಕೃತ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದೆ. ಇದನ್ನು ಹೇಳಿದಾಗ, ಈ ವಿಚಾರ ಎಲ್ಲಿಯೂ ಹೇಳದಂತೆ 2 ಕೋಟಿ ರೂ. ಹಾಗೂ ಕೆಲಸದ ಆಮಿಷ ಒಡ್ಡಿದ್ದರು. ಒಪ್ಪದಿದ್ದಕ್ಕೆ ಜೀವಬೆದರಿಕೆ ಒಡ್ಡಿದ್ದರು ಎಂದು ಸಂತ್ರಸ್ತ ದೂರಿದ್ದಾನೆ.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

Continue Reading

ಕ್ರೈಂ

Actor Darshan: ದರ್ಶನ್‌, ಪ್ರದೋಷ್‌ನಿಂದ ಮೂರು ಪಿಸ್ತೂಲ್‌ ವಶಕ್ಕೆ

Actor Darshan: ದರ್ಶನ್ ಬಳಿ ಎರಡು ಯುಎಸ್ ಮೇಡ್ ಪಿಸ್ತೂಲ್‌ಗಳು, ಪ್ರದೋಷ್ ಬಳಿ ಒಂದು ಲೈಸೆನ್ಸ್ ಪಿಸ್ತೂಲ್‌ ಇವೆ. ಕಳೆದ ಲೋಕಸಭಾ ಚುನಾವಣಾ ವೇಳೆ ಲೈಸೆನ್ಸ್ ಪಡೆದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಬೇಕಿತ್ತು. ಆದರೆ ಚುನಾವಾಣೆ ವೇಳೆ ಶಸ್ತ್ರಾಸ್ತ್ರ ಠೇವಣಿಯಿಂದ ದರ್ಶನ್ ಮತ್ತು ಪ್ರದೋಷ್ ವಿನಾಯಿತಿ ಪಡೆದಿದ್ದರು.

VISTARANEWS.COM


on

Actor Darshan Judicial Custody Jailer Gave UTP Number
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ (Actor Darshan) ಮತ್ತು ಆತನ ಸಹಚರ ಪ್ರದೋಷ್‌ ಬಗ್ಗೆ ಮತ್ತೊಂದು ಕುತೂಹಲಕಾರಿ ವಿಚಾರ ಬೆಳಕಿಗೆ ಬಂದಿದೆ. ಇಬ್ಬರ ಬಳಿಯೂ ಪರವಾನಗಿ ಹೊಂದಿದ ಪಿಸ್ತೂಲ್‌ಗಳಿದ್ದು Licenced Pistol), ಲೋಕಸಭೆ ಚುನಾವಣೆ (Lok Sabha Election 2024) ವೇಳೆ ಇಬ್ಬರೂ ಅವುಗಳನ್ನು ಪೊಲೀಸರ ಬಳಿ ಠೇವಣಿ (deposit) ಇರಿಸಿರಲಿಲ್ಲ ಎಂಬುದು ಗೊತ್ತಾಗಿದೆ. ಇದೀಗ ಅವುಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.

ದರ್ಶನ್ ಬಳಿ ಎರಡು ಯುಎಸ್ ಮೇಡ್ ಪಿಸ್ತೂಲ್‌ಗಳು, ಪ್ರದೋಷ್ ಬಳಿ ಒಂದು ಲೈಸೆನ್ಸ್ ಪಿಸ್ತೂಲ್‌ ಇವೆ. ಕಳೆದ ಲೋಕಸಭಾ ಚುನಾವಣಾ ವೇಳೆ ಲೈಸೆನ್ಸ್ ಪಡೆದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಬೇಕಿತ್ತು. ಆದರೆ ಚುನಾವಾಣೆ ವೇಳೆ ಶಸ್ತ್ರಾಸ್ತ್ರ ಠೇವಣಿಯಿಂದ ದರ್ಶನ್ ಮತ್ತು ಪ್ರದೋಷ್ ವಿನಾಯಿತಿ ಪಡೆದಿದ್ದರು.

ಬೆಂಗಳೂರು ನಗರಾದ್ಯಂತ 7830 ಗನ್ ಲೈಸೆನ್ಸ್ ಪರವಾನಗಿದಾರರಿದ್ದಾರೆ. ಈ ಪೈಕಿ ದರ್ಶನ್ ಮತ್ತು ಪ್ರದೋಷ್ ಸೇರಿ 277 ಜನರಿಗೆ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ನೀಡಲಾಗಿತ್ತು. ಉಳಿದ 7553 ಪರವಾನಗಿ ಹೊಂದಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ಠೇವಣಿ ಇರಿಸಿಕೊಂಡಿದ್ದರು. ಆದರೆ ನಟ ದರ್ಶನ್ ಮತ್ತು ಪ್ರದೋಷ್ ಪಿಸ್ತೂಲ್ ವಾಪಸ್ ಮಾಡದೇ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಪಡೆದಿದ್ದಾರೆ.

ಬೆಂಗಳೂರಿನ 277 ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಪಡೆದವರಲ್ಲಿ ದರ್ಶನ್ ಮತ್ತು ಪ್ರದೋಷ್‌ಗೂ ವಿನಾಯಿತಿ ನೀಡಲಾಗಿದ್ದು, ಬೆಂಗಳೂರು ಪೊಲೀಸ್ ಕಮೀಷನರ್ ಅವರಿಂದಲೇ ವಿನಾಯಿತಿ ನೀಡಿ ಆದೇಶ ದೊರೆತಿದೆ. ಕಮೀಷನರ್ ಬಿ. ದಯಾನಂದ ಶಸ್ತ್ರಾಸ್ತ್ರ ಠೇವಣಿ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿದ್ದರು. ಅತಿ ಗಣ್ಯರಿಗೆ ನೀಡುವ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿಯಲ್ಲಿ ನಟ ದರ್ಶನ್ ಮತ್ತು ಪ್ರದೋಷ್ ಕೂಡ ಅವಕಾಶ ಪಡೆದಿದ್ದು, ಕಳೆದ ಮಾರ್ಚ್ 27ರಂದು ವಿನಾಯಿತಿ ನೀಡಿ ಕಮೀಷನರ್ ದಯಾನಂದ್ ಆದೇಶ ನೀಡಿದ್ದರು.

ನಿವೃತ್ತ ನ್ಯಾಯಾಧೀಶರು, ಐಎಎಸ್, ಐಪಿಎಸ್ ಅಧಿಕಾರಿಗಳು, ಬ್ಯಾಂಕ್ ಮ್ಯಾನೇಜರ್ ಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಇಲಾಖೆ ಅಧಿಕಾರಿಗಳು, ಶೂಟಿಂಗ್ ಕ್ರೀಡಾಪಟುಗಳು, ಶಾಸಕರು, ಪರಿಷತ್ ಸದಸ್ಯರು ಸೇರಿ ಹಿರಿಯ ರಾಜಕಾರಣಿಗಳಿಗೆ ಮಾತ್ರ ವಿನಾಯಿತಿ ನೀಡಬಹುದು. ಉಳಿದಂತೆ ಎಲ್ಲರ ಬಳಿಯಿರುವ ಶಸ್ತ್ರಾಸ್ತ್ರಗಳನ್ನು ಆಯಾ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ವಶಕ್ಕೆ ಪಡೆಯಬೇಕು.

ಸದ್ಯ ಪ್ರದೋಷ್‌ಗೆ ಸಂಬಂಧಪಟ್ಟಂತೆ ಗಿರಿನಗರ ಠಾಣೆ ಹಾಗೂ ದರ್ಶನ್‌ಗೆ ಸಂಬಂಧಪಟ್ಟಂತೆ ಆರ್.ಆರ್.ನಗರ ಠಾಣಾಧಿಕಾರಿಗಳಿಗೆ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಿಕ್ಕೆ ಸೂಚನೆ ನೀಡಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾಧಿಕಾರಿಗಳಿಂದ ಎರಡು ಠಾಣೆ ಪೊಲೀಸ್ ಇನ್ಸ್ಪೆಕ್ಟರ್‌ಗಳಿಗೆ ಈ ಕುರಿತು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Actor Darshan: ಪ್ರಥಮ್‌, ಉಮಾಪತಿಗೆ ಬೆದರಿಕೆ ಹಾಕಿದ ಡಿ ಬಾಸ್‌ ಫ್ಯಾನ್‌ ಬಂಧನ

Continue Reading

ಕರ್ನಾಟಕ

Karnataka Weather: ಇಂದು ಹಾಸನ, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Karnataka Weather: ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ವೇಗವಾಗಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಹಾಗೂ ಮನರಂಜನೆಗಾಗಿ ಸಮುದ್ರಕ್ಕೆ ಇಳಿಯುವವರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಜೂನ್‌ 26ರಂದು ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (Karnataka Weather) ನೀಡಿದೆ

ಇನ್ನು ರಾಜ್ಯದ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ.

ಅದೇ ರೀತಿ ಜೂನ್‌ 27ರಂದು ಕೂಡ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಬೀಳಲಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ಗಂಟೆಗೆ 35 ಕಿ.ಮೀನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಮುಲ್ಕಿಯಿಂದ ಮಂಗಳೂರಿನವರೆಗೆ, ಅಲೆಗಳು ರಾತ್ರಿ 11.30ರವರೆಗೆ 3.3ರಿಂದ 3.6 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗುವ ಮುನ್ಸೂಚನೆ ನೀಡಲಾಗಿದೆ. ಸಾಗರ ಕಾರ್ಯಾಚರಣೆ ಮತ್ತು ಹತ್ತಿರದ ದಡದ ಮನರಂಜನೆ ಮಾಡುವಾಗ ಜಾಗರೂಕರಾಗಿರಿ ಎಂದು ಸಲಹೆ ನೀಡಲಾಗಿದೆ.

ಉಡುಪಿಯಲ್ಲಿ ಹೈ ವೇವ್ ಎಚ್ಚರಿಕೆ: ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಯಲ್ಲಿ, ರಾತ್ರಿ 11.30ರ ವರೆಗೆ 3.4ರಿಂದ 3.8 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣವು ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಉತ್ತರ ಕನ್ನಡ, ಕರ್ನಾಟಕ ಕರಾವಳಿಯಲ್ಲಿ ಮಾಜಾಳಿಯಿಂದ ಭಟ್ಕಳದವರೆಗೆ ರಾತ್ರಿ 11.30ರವರೆಗೆ 3.5 ರಿಂದ 4.0 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣ ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಇದನ್ನೂ ಓದಿ | Monsoon Hair care: ಮಳೆಗಾಲದಲ್ಲಿ ಕೂದಲಿನ ಆರೈಕೆಗೆ ಈ ಸಲಹೆ ಪಾಲಿಸಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಲಘು ಮಳೆಯಾಗುವ ಸಾಧ್ಯತೆ ಹೆಚ್ಚು. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ‘C ಮತ್ತು 21 ° C ಆಗಿರಬಹುದು.

Continue Reading

ಕರ್ನಾಟಕ

Foreign Investment: 100 ಕೋಟಿ ರೂ. ವೆಚ್ಚದ ತ್ಯಾಜ್ಯ ನೀರು ನಿರ್ವಹಣಾ ಉಪಕರಣಗಳ ತಯಾರಿಕಾ ಘಟಕ ಸ್ಥಾಪನೆಗೆ ಒಪ್ಪಂದ

Foreign Investment: ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರವು ಜಪಾನ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ರೋಡ್‌ಶೋದಲ್ಲಿ ಜಪಾನಿನ 150 ಕ್ಕೂ ಹೆಚ್ಚು ಕಂಪನಿಗಳಿಗೆ ರಾಜ್ಯದಲ್ಲಿನ ಬಂಡವಾಳ ಹೂಡಿಕೆಯ ಅವಕಾಶಗಳ ಪರಿಚಯ ಮಾಡಿಕೊಟ್ಟಿತು. ನಿಯೋಗದ ನೇತೃತ್ವ ವಹಿಸಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌, ರಾಜ್ಯದಲ್ಲಿನ ಸದೃಢ ಕೈಗಾರಿಕಾ ಪರಿಸರ ವ್ಯವಸ್ಥೆ, ಉದ್ಯಮಕ್ಕೆ ಅನುಕೂಲಕರ ವಾತಾವರಣ ಮತ್ತು ಸರ್ಕಾರದ ಪ್ರಗತಿಪರ ನೀತಿಗಳನ್ನು ಮನದಟ್ಟು ಮಾಡಿಕೊಟ್ಟರು.

VISTARANEWS.COM


on

minister mb patil visit japan and discuss about investment in Karnataka
Koo

ಟೋಕಿಯೊ: ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರವು ಜಪಾನ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ರೋಡ್‌ಶೋದಲ್ಲಿ ಜಪಾನಿನ 150ಕ್ಕೂ ಹೆಚ್ಚು ಕಂಪನಿಗಳಿಗೆ ರಾಜ್ಯದಲ್ಲಿನ ಬಂಡವಾಳ ಹೂಡಿಕೆಯ (Foreign Investment) ಅವಕಾಶಗಳ ಪರಿಚಯ ಮಾಡಿಕೊಟ್ಟಿತು.

ಕರ್ನಾಟಕ ಸರ್ಕಾರದ ಉನ್ನತ ಮಟ್ಟದ ನಿಯೋಗವು ಜಪಾನ್‌ ಭೇಟಿಯ ಎರಡನೇ ದಿನ ಪರಿಸರ ಸಂರಕ್ಷಣೆ ಉಪಕರಣ ತಯಾರಿಸುವ ಬಹುರಾಷ್ಟ್ರೀಯ ಕಂಪನಿ ಡೈಕಿ ಆ್ಯಕ್ಸಿಸ್‌, ಕೈಗಾರಿಕಾ ಯಂತ್ರೋಪಕರಣ ತಯಾರಿಸುವ ಸುಮಿಟೊಮೊ ಹೆವಿ ಇಂಡಸ್ಟ್ರೀಸ್‌ (ಎಸ್‌ಎಚ್‌ಐ), ಸೆಮಿಕಂಡಕ್ಟರ್‌ ಪರಿಕರ ತಯಾರಿಸುವ ರೆನೆಸಸ್‌ ಎಲೆಕ್ಟ್ರಾನಿಕ್ಸ್‌ ಕಾರ್ಪೊರೇಷನ್‌ ಕಂಪನಿ ಹಾಗೂ ಜಪಾನ್‌ ಸರ್ಕಾರದ ಸಣ್ಣ ಕೈಗಾರಿಕೆಗಳ ಸಂಘಟನೆ ʼಎಸ್‌ಎಂಆರ್‌ಜೆʼ ಮುಖ್ಯಸ್ಥರ ಜತೆ ಸಮಾಲೋಚನೆ ನಡೆಸಿತು.

ಈ ಸಭೆಗಳಲ್ಲಿನ ಮಾತುಕತೆಗಳು ರಾಜ್ಯದಲ್ಲಿನ ಬಂಡವಾಳ ಹೂಡಿಕೆಯ ಅವಕಾಶಗಳನ್ನು ಅನ್ವೇಷಿಸಲು ಮತ್ತು ಕರ್ನಾಟಕ ಮತ್ತು ಜಪಾನ್ ನಡುವಣ ಕೈಗಾರಿಕಾ ಸಹಯೋಗ ಬಲಪಡಿಸುವ ಬಗ್ಗೆ ಕೇಂದ್ರೀಕೃತಗೊಂಡಿದ್ದವು.

ಇದನ್ನೂ ಓದಿ: Bengaluru Power Cut: ಜೂ.27ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ನಿಯೋಗದ ನೇತೃತ್ವ ವಹಿಸಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಅವರು, ರಾಜ್ಯದಲ್ಲಿನ ಸದೃಢ ಕೈಗಾರಿಕಾ ಪರಿಸರ ವ್ಯವಸ್ಥೆ, ಉದ್ಯಮಕ್ಕೆ ಅನುಕೂಲಕರ ವಾತಾವರಣ ಮತ್ತು ಸರ್ಕಾರದ ಪ್ರಗತಿಪರ ನೀತಿಗಳನ್ನು ಮನದಟ್ಟು ಮಾಡಿಕೊಟ್ಟರು.

ಡೈಕಿ ಆ್ಯಕ್ಸಿಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ನ ನಿರ್ದೇಶಕ ರಿಯೊ ರಿಯೊಟಾ ವಾಜಾ ಅವರನ್ನು ಭೇಟಿಯಾಗಿ ಕರ್ನಾಟಕದಲ್ಲಿ ಸುಸ್ಥಿರ ಬೆಳವಣಿಗೆ, ನೀರಿನ ಉಳಿತಾಯ, ಕೊಳಚೆ ನೀರು ನಿರ್ವಹಣಾ ಘಟಕ (ಎಸ್‌ಟಿಪಿ) ಸ್ಥಾಪಿಸುವ ಕುರಿತು ಮಾತುಕತೆ ನಡೆಸಿದರು. ಡೈಕಿ ಆ್ಯಕ್ಸಿಸ್‌ 100 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕದಲ್ಲಿ ತ್ಯಾಜ್ಯ ನೀರು ನಿರ್ವಹಣಾ ಉಪಕರಣಗಳ ತಯಾರಿಕಾ ಘಟಕ ಸ್ಥಾಪಿಸುವ ಒಪ್ಪಂದಕ್ಕೆ ಈ ಸಭೆಯಲ್ಲಿ ಸಹಿ ಹಾಕಲಾಯಿತು.

ರೆನೆಸಸ್‌ ಎಲೆಕ್ಟ್ರಾನಿಕ್ಸ್‌ ಕಾರ್ಪೊರೇಷನ್‌ನ ಸಿಇಒ ಚಾರ್ಲ್ಸ್‌ಕವಾಶಿಮಾ ಅವರನ್ನು ಭೇಟಿ ಮಾಡಿದ ನಿಯೋಗವು ವಿದೇಶಿ ಬಂಡವಾಳ ಹೂಡಿಕೆಗೆ ಇರುವ ಅವಕಾಶಗಳು ಮತ್ತು ಸವಾಲುಗಳನ್ನು ಚರ್ಚಿಸಿತು.

ಸುಮಿಟೊಮೊ ಹೆವಿ ಇಂಡಸ್ಟ್ರೀಸ್‌ನ (ಎಸ್‌ಎಚ್‌ಐ) ಚೇರ್ಮನ್‌ ಆಫ್‌ ರಿಪ್ರೆಸೆಂಟೇಟಿವ್‌ ಡೈರೆಕ್ಟರ್‌ ತೆತ್ಸುಯ ಒಕಾಮುರ ಮತ್ತು ಕಾರ್ಯನಿರ್ವಾಹಕ ಉಪಾಧ್ಯಕ್ಷ ತೋಷಿಹರು ತನಾಕಾ ಅವರನ್ನು ರಾಜ್ಯದ ನಿಯೋಗವು ಭೇಟಿಯಾಗಿತ್ತು. ರಾಜ್ಯದಲ್ಲಿ ಕಂಪನಿಯ ವಹಿವಾಟಿನ ವಿಸ್ತರಣೆಗೆ ಅಗತ್ಯ ಬೆಂಬಲ ನೀಡುವುದಾಗಿ ನಿಯೋಗವು ಭರವಸೆ ನೀಡಿತು. 2024 ರ ಅಂತ್ಯದ ವೇಳೆಗೆ ಎಸ್‌ಎಚ್‌ಐ ಬೆಂಗಳೂರಿನಲ್ಲಿ ತನ್ನ ಪ್ರಧಾನ ಕಚೇರಿ ಆರಂಭಿಸಲಿದೆ.

ಜಪಾನ್‌ ಸರ್ಕಾರದ ಸಣ್ಣ ಹಾಗೂ ಮಧ್ಯಮ ಉದ್ಯಮಗಳು ಮತ್ತು ಪ್ರಾದೇಶಿಕ ಆವಿಷ್ಕಾರ ಸಂಸ್ಥೆಯ (ಎಸ್‌ಎಂಆರ್‌ಜೆ) ಕಾರ್ಯನಿರ್ವಾಹಕ ಉಪಾಧ್ಯಕ್ಷ ತೊಮೊಹಿರೊ ಕನೆಕೊ ಅವರ ಜತೆ ನಿಯೋಗವು ಸಮಾಲೋಚನೆ ನಡೆಸಿತು.

ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ವಾಹನ ಬಿಡಿಭಾಗ, ಎಲೆಕ್ಟ್ರಾನಿಕ್ಸ್ , ವೈಮಾಂತರಿಕ್ಷ ಹಾಗೂ ರಕ್ಷಣೆ, ಆಹಾರ ಸಂಸ್ಕರಣೆ, ಭಾರಿ ಯಂತ್ರೋಪಕರಣ ತಯಾರಿಕೆ ಕ್ಷೇತ್ರಗಳಲ್ಲಿ ತಮ್ಮ ವಹಿವಾಟು ವಿಸ್ತರಿಸಲು ʼಎಸ್‌ಎಂಆರ್‌ಜೆʼಗೆ ಅಗತ್ಯ ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಸಚಿವರು ಭರವಸೆ ನೀಡಿದರು. ಜಪಾನಿನ 26,000 ʼಎಸ್‌ಎಂಇʼಗಳ ಸಹಯೋಗದಲ್ಲಿ ಕರ್ನಾಟಕದ ʼಎಸ್‌ಎಂಇʼಗಳ ಬೆಳವಣಿಗೆ ಉತ್ತೇಜಿಸಲು ನೆರವಾಗುವ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಇದನ್ನೂ ಓದಿ: CM Siddaramaiah: ಅಲೆಮಾರಿ ಕುರಿಗಾಹಿಗಳ ಮೇಲಿನ ದೌರ್ಜನ್ಯ ತಡೆಯಲು ಕಾಯ್ದೆ; ಸಿದ್ದರಾಮಯ್ಯ

ಈ ವೇಳೆ ಜಪಾನ್‌ ಮತ್ತು ಭಾರತದ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ (ಎಸ್‌ಎಂಇ) ಮುಖ್ಯಸ್ಥರ ಸಭೆಯನ್ನು ಆಗಸ್ಟ್‌ನಲ್ಲಿ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಕರ್ನಾಟಕದಲ್ಲಿ ಜಪಾನಿನ ʼಎಸ್‌ಎಂಇʼಗಳು ತಮ್ಮ ವಹಿವಾಟು ವಿಸ್ತರಿಸಲು ನಿಯೋಗವು ಆಹ್ವಾನ ನೀಡಿತು.

ಸೆಮಿಕಂಡಕ್ಟರ್‌ ಪರಿಕರಗಳನ್ನು ತಯಾರಿಸುವ ಬಹುರಾಷ್ಟ್ರೀಯ ಕಂಪನಿ ರೆನೆಸಸ್‌ ಎಲೆಕ್ಟ್ರಾನಿಕ್ಸ್‌ ಕಾರ್ಪೊರೇಷನ್‌ನ ಹಿರಿಯ ನಿರ್ದೇಶಕ ಷೊ ಒಜಾಕಿ ಅವರನ್ನು ನಿಯೋಗವು ಭೇಟಿಯಾಗಿತ್ತು. ಎಲೆಕ್ಟ್ರಾನಿಕ್ಸ್‌ ವಲಯಕ್ಕೆ ದೇಶದಲ್ಲಿಯೇ ಗರಿಷ್ಠ ಪ್ರಮಾಣದ ಸಬ್ಸಿಡಿ ನೀಡುತ್ತಿರುವ ಕರ್ನಾಟಕದಲ್ಲಿನ ಎಲೆಕ್ಟ್ರಾನಿಕ್ಸ್‌ ಸಿಸ್ಟಮ್‌ ಡಿಸೈನ್‌ ಮತ್ತು ತಯಾರಿಕಾ (ಇಎಸ್‌ಡಿಎಂ) ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಿಯೋಗವು ಮನವಿ ಮಾಡಿಕೊಂಡಿತು.

ಕರ್ನಾಟಕದ ನಿಯೋಗವು ಟೋಕಿಯೋದಲ್ಲಿನ ಕನ್ನಡ ಸಂಘದ ಪ್ರತಿನಿಧಿಗಳ ಜತೆ ಬೆಳಗಿನ ಉಪಾಹಾರದ ಸಂದರ್ಭದಲ್ಲಿ ಸಭೆ ನಡೆಸಿತು.

ಇದನ್ನೂ ಓದಿ: Bengaluru News: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಜೂ.30ಕ್ಕೆ

ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಉಪಸ್ಥಿತರಿದ್ದರು.

Continue Reading
Advertisement
Inzamam Ul Haq
ಕ್ರೀಡೆ6 mins ago

Inzamam Ul Haq: ಭಾರತ ತಂಡದ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ ಮಾಡಿದ ಪಾಕ್​ ಮಾಜಿ ನಾಯಕ

rain news wall collapse 4 death
ಕ್ರೈಂ8 mins ago

Rain News: ಭಾರಿ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವು

Sanjith Hegde Nange Allava song Out
ಸ್ಯಾಂಡಲ್ ವುಡ್31 mins ago

Sanjith Hegde: ಸಂಜನಾ ದಾಸ್‌ಗೆ ʻನೀ ನಂಗೆ ಅಲ್ಲವಾʼ ಎಂದ ಸಂಜಿತ್ ಹೆಗಡೆ!

suraj revanna case 12
ಕ್ರೈಂ39 mins ago

Suraj Revanna Case: ಅಮಾವಾಸ್ಯೆ ದಿನ ಸೂರಜ್‌ ಬಳೆ ತೊಡ್ತಾನೆ, ಸೀರೆ ಉಡ್ತಾನೆ! ಬಯಲು ಮಾಡಿದ ಸಂತ್ರಸ್ತ

Lok Sabha Speaker Election
ದೇಶ42 mins ago

Lok Sabha Speaker Election: ಲೋಕಸಭೆ ಸ್ಪೀಕರ್ ಚುನಾವಣೆ ಇಂದು; ಆಡಳಿತ ಪಕ್ಷ-ಪ್ರತಿಪಕ್ಷ ಬಲಾಬಲ ಹೀಗಿದೆ

Albania vs Spain
ಕ್ರೀಡೆ42 mins ago

Albania vs Spain: ಯುರೋ ಕಪ್​ನಲ್ಲಿ ನಾಕೌಟ್‌ ಹಂತಕ್ಕೇರಿದ ಸ್ಪೇನ್‌

Parliament Session 2024
ದೇಶ48 mins ago

Parliament Session 2024: ಇಂದು ಐತಿಹಾಸಿಕ ಲೋಕಸಭಾ ಸ್ಪೀಕರ್‌ ಚುನಾವಣೆ; ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ

Pavithra Gowda Cried After In Jail darshan case
ಕ್ರೈಂ56 mins ago

Pavithra Gowda: ನನ್ನನ್ನು ನೋಡಲು ಯಾರೂ ಬರೋದಿಲ್ಲ ಎಂದು ಪವಿತ್ರಾ ಕಣ್ಣೀರು; ʻದಚ್ಚುʼ ನಿರಾಳ!

Sunita Williams
ವಿದೇಶ1 hour ago

Sunita Williams: ತಾಂತ್ರಿಕ ಸಮಸ್ಯೆ- ಎರಡು ವಾರಗಳಿಂದ ಬಾಹ್ಯಾಕಾಶದಲ್ಲೇ ಸಿಲುಕಿದ ಸುನೀತಾ ವಿಲಿಯಮ್ಸ್‌

IND vs ENG
ಕ್ರೀಡೆ1 hour ago

IND vs ENG: ಭಾರತ-ಇಂಗ್ಲೆಂಡ್​ ಸೆಮಿ ಕಾದಾಟಕ್ಕೆ ಮೀಸಲು ದಿನ ಇಲ್ಲ; ಪಂದ್ಯ ರದ್ದಾದರೆ ಯಾರಾಗಲಿದ್ದಾರೆ ವಿಜೇತರು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌