HD Kumaraswamy: ರಾಕೇಶ್‌ನನ್ನು ವಿದೇಶಿ ಪಾರ್ಟಿಗೆ ನೀವೇ ಕಳಿಸಿ ಸಾವಿಗೆ ಕಾರಣರಾದಿರಿ ಎಂದರೆ ಹೇಗೆ? ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ - Vistara News

ರಾಜಕೀಯ

HD Kumaraswamy: ರಾಕೇಶ್‌ನನ್ನು ವಿದೇಶಿ ಪಾರ್ಟಿಗೆ ನೀವೇ ಕಳಿಸಿ ಸಾವಿಗೆ ಕಾರಣರಾದಿರಿ ಎಂದರೆ ಹೇಗೆ? ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ

HD Kumaraswamy: ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶಕ್ಕೆ ಕಳುಹಿಸಿದ್ದೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ನಿಮ್ಮ ಪುತ್ರನನ್ನು Tomorrow Land ಪಾರ್ಟಿಗೆ ನೀವೇ ಕಳುಹಿಸಿ ಅವರ ಸಾವಿಗೆ ಕಾರಣರಾದಿರಿ ಎಂದು ಕೇಳಿದರೆ ಹೇಗೆ?ಇಂಟೆಲಿಜೆನ್ಸ್ ಇಟ್ಟುಕೊಂಡಿರುವ ನಿಮಗೇನೂ ಗೊತ್ತಿಲ್ಲವೇ? ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

HD Kumaraswamy slams CM Siddaramaiah about devegowda statement
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳುಹಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ (HD Devegowda) ಬಗ್ಗೆ ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತಿರುಗೇಟು ನೀಡಿದ್ದಾರೆ. ನಿಮ್ಮ ಪುತ್ರನನ್ನು Tomorrow Land ಪಾರ್ಟಿಗೆ ನೀವೇ ಕಳುಹಿಸಿ ಅವರ ಸಾವಿಗೆ ಕಾರಣರಾದಿರಿ ಎಂದು ಕೇಳಿದರೆ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಎಚ್.ಡಿ. ಕುಮಾರಸ್ವಾಮಿ, ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ? ಎಂದು ಪ್ರಶ್ನಿಸಿದ್ದಾರೆ.

ದಯಮಾಡಿ ವಕೀಲಿಕೆ ಮಾಡಬೇಡಿ

ನಾನು ವಕೀಲನಾಗಿದ್ದೆ, ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ ಮಹಾನುಭಾವರು ಈ ವೃತ್ತಿಗೆ ಕಳಶಪ್ರಾಯರಾಗಿದ್ದಾರೆ. ದಯಮಾಡಿ ಅವರೆಲ್ಲರನ್ನು ಅಪಮಾನಿಸಬೇಡಿ. “ಅತ್ಯಾಚಾರದ ವಿಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ” ಎನ್ನುವ ಆಣಿಮುತ್ತು ಉದುರಿಸಿದ್ದೀರಿ. ನಿಮ್ಮ ವಕೀಲಿಕೆಯ ಪಾಂಡಿತ್ಯದ ಬಗ್ಗೆ ಈ ನಿಮ್ಮ ಮಾತು ನನ್ನಲ್ಲಿ ಅನೇಕ ಪ್ರಶ್ನೆಗಳನ್ನು ಉಂಟು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಎಚ್.ಡಿ. ಕುಮಾರಸ್ವಾಮಿ ಕುಟುಕಿದ್ದಾರೆ.

ಅತ್ಯಾಚಾರ ಅಮಾನುಷ ಸರಿ, ವಿಡಿಯೊ ಹಂಚುವುದೇನು?

ಅತ್ಯಾಚಾರ ಅಮಾನುಷ ಎನ್ನುವುದರಲ್ಲಿ ಎರಡನೇ ಮಾತಿಲ್ಲ. ಆದರೆ, ಆ ಅಮಾನುಷಕ್ಕೆ ತುತ್ತಾದ ಹೆಣ್ಮಕ್ಕಳ ವಿಡಿಯೊಗಳನ್ನು ಹಂಚಿ ವಿಕೃತಾನಂದ ಅನುಭವಿಸುವುದು ಮಾನುಷವೇ? ಮನುಷ್ಯರು ಹೇಳುವ ಮಾತೇ ಇದು? ದಯಮಾಡಿ ನೀವು ಇನ್ನೆಂದೂ ನಾನು ವಕೀಲಿಕೆ ಮಾಡುತ್ತಿದ್ದೆ ಎನ್ನಬೇಡಿ. ನಿಮ್ಮ ಪಕ್ಕದಲ್ಲಿ ಪೆನ್ ಡ್ರೈವ್ ಹಂಚಿಕೆದಾರ ಕೂತಿದ್ದಾರೆ. ಆ CD ಶಿವು (‌ಡಿಸಿಎಂ ಡಿ.ಕೆ. ಶಿವಕುಮಾರ್) ಚುನಾವಣಾ ಸ್ವಾರ್ಥಕ್ಕಾಗಿ ಹೆಣ್ಮಕ್ಕಳ ಮಾನವನ್ನು ಪೆನ್ ಡ್ರೈವ್‌ಗಳಿಗೆ ತುಂಬಿಸಿ ಹಾದಿಬೀದಿಯಲ್ಲಿ ಮಾರಿಕೊಂಡಿದ್ದು ನಿಮಗೆ ಗೊತ್ತಿಲ್ಲವೇ? ಸ್ವಯಂ ಘೋಷಿತ ಸಂವಿಧಾನ ತಜ್ಞ ಬಿರುದಾಂಕಿತರಾದ ನೀವು, ಇಂಥ ಮಾನದ್ರೋಹಿಯನ್ನು ಪಕ್ಕದಲ್ಲೇ ಕೂರಿಸಿಕೊಳ್ಳಲು ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೇ? ಪ್ರಶ್ನೆ ಮಾಡಿಕೊಳ್ಳಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನಿಮ್ಮ ಡಿಸಿಎಂ ಅನ್ನು ಪ್ರಶ್ನಿಸಿದ್ದೀರಾ?

ನಿಮ್ಮ ಉಪ ಮುಖ್ಯಮಂತ್ರಿ ಮಹಾಶಯ ಪೆನ್ ಡ್ರೈವ್ ಹಂಚಿಕೆಯಲ್ಲಿ ಶಾಮೀಲಾಗಿಲ್ಲವೇ? ದೇವರಾಜೆಗೌಡ, ಬ್ರೋಕರ್ ಶಿವರಾಮೇಗೌಡ, ಡಿ.ಕೆ.ಶಿವಕುಮಾರ್ ನಡುವಿನ ಮೊಬೈಲ್ ಸಂಭಾಷಣೆ ನಿಮ್ಮ ಸರ್ಕಾರದ ಮಾನವನ್ನು ಹಾಸನದಲ್ಲಿ ಪೆನ್ ಡ್ರೈವ್ ರೂಪದಲ್ಲಿ ವೋಟಿಗೆ ಹರಾಜಾಗಲಿಲ್ಲವೇ? ಚಾಲಕ ಕಾರ್ತಿಕ್ ಗೌಡ ಆ ನೊಂದ ಮಹಿಳೆಯರ ಅಶ್ಲೀಲ ವಿಡಿಯೊಗಳನ್ನು ತುಂಬಿದ್ದ ಮೊದಲ ಪೆನ್ ಡ್ರೈವ್‌ ಅನ್ನು ನಿಮಗೆ ತಂದು ಕೊಡಲಿಲ್ಲವೇ? ಎಂದು ನಿಮ್ಮ ಉಪ ಮುಖ್ಯಮಂತ್ರಿಯನ್ನು ಒಮ್ಮೆಯಾದರೂ ಕೇಳಿದ್ದೀರಾ ಮುಖ್ಯಮಂತ್ರಿಗಳೇ..? ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರನ್ನು ನಾನೆಂದೂ ಸಮರ್ಥನೆ ಮಾಡಿಲ್ಲ, ಮಾಡುವುದೂ ಇಲ್ಲ. ಪ್ರಕರಣ ಹೊರಬಂದ ಮೊದಲ ದಿನವೇ ‘ಈ ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ ಎಂದು ಹೇಳಿದ್ದೇನೆ. ನನ್ನ ಹೇಳಿಕೆ ನಿಮಗೆ ಗೊತ್ತಾಗಲಿಲ್ಲವೇ? ನಿಮಗೆ ಪತ್ರಿಕೆ ಓದುವ ಅಭ್ಯಾಸ ಇಲ್ಲದಿದ್ದರೆ ನಾನೇನು ಮಾಡಲಿ? ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ?

ದೇವೇಗೌಡರ ಬಗ್ಗೆ ನೀವು ಕಾರಿಕೊಂಡ ವಿಷದ ಬಗ್ಗೆ ಹೇಳುವುದಾದರೆ, ನನ್ನ ಮಾತಿಗೆ ಗೌರವ ಕೊಟ್ಟು ಪ್ರಜ್ವಲ್ ವಾಪಸ್ ಬಂದು SIT ಮುಂದೆ ಹಾಜರಾಗದಿದ್ದರೆ ಕುಟುಂಬದಿಂದ ಹೊರ ಹಾಕುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ಅವರ ಮಾತೇ ನಮ್ಮ ಕುಟುಂಬದ ಮಾತು. ಆದರೆ, ನೀವು ಹೇಳಿದ್ದೇನು? ಪ್ರಜ್ವಲ್‌ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದಿದ್ದೀರಿ! ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ? ಎಂದು ಎಚ್.ಡಿ. ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ನಮ್ಮ ಮನೆಗಳ ಮೇಲೆ ಕಳ್ಳಕಿವಿ ಇಟ್ಟಿದ್ದೀರಿ

ಅವನು ದೇವೇಗೌಡರಿಗೆ ಹೇಳಿಯೇ ವಿದೇಶಕ್ಕೆ ಹೋಗಿದ್ದಾನೆ ಎಂದು ಹೇಳಿದ್ದೀರಿ. ನಿಮಗೆ ಹೇಗೆ ಗೊತ್ತು? ನಿಮ್ಮ ಪಕ್ಷದಲ್ಲೇ ಕೂರುವ CD ಶಿವು ಮಾಡುತ್ತಿರುವ ಮಾನಗೇಡಿ ಕೃತ್ಯಗಳು ಗೊತ್ತಾಗೋದಿಲ್ಲ ನಿಮಗೆ!? ಆದರೆ, ದೇವೆಗೌಡರ ಮನೆಯಲ್ಲಿ ನಡೆಯೋದೆಲ್ಲ ನಿಮಗೆ ಗೊತ್ತಾಗುತ್ತದೆಯೇ!? ಅದು ಹೇಗೆ? ನನ್ನ ಮತ್ತು ದೇವೆಗೌಡರ ಮನೆಗೆ ಕಳ್ಳಕಿವಿ ಇಟ್ಟಿದ್ದೀರಿ ಎನ್ನುವ ನನ್ನ ಆರೋಪ ಸತ್ಯ ಎಂದ ಹಾಗಾಯಿತು.. ಅಲ್ಲವೇ? ಅಸತ್ಯ ಹೇಳುವ ಅಗತ್ಯ ನಮಗಿಲ್ಲ. ಅವನು ಕುಟುಂಬದ ಸಂಪರ್ಕದಲ್ಲಿ ಇಲ್ಲ. ಹಿಂದೆಯೂ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Excise revenue: ಇದು ಎಣ್ಣೆ ಮಹಿಮೆ! ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಇಂಟೆಲಿಜೆನ್ಸ್ ಇಟ್ಟುಕೊಂಡಿರುವ ನಿಮಗೇನೂ ಗೊತ್ತಿಲ್ಲವೇ?

ಪಕ್ಷದ ಅಧ್ಯಕ್ಷನಾಗಿ ಆತನ ವಿರುದ್ಧ ಕ್ರಮ ಕೈಗೊಂಡಿದ್ದೇನೆ. ಆತನ ಮೇಲಿರುವ ಆರೋಪ ಸಾಬೀತಾದರೆ ಪಕ್ಷದಲ್ಲಿ ಆತನಿಗೆ ಸ್ಥಾನವಿಲ್ಲ. ನಿಮಗೆ ಸಂಶಯ ಸಲ್ಲ. ಇನ್ನು, ಎಸ್‌ಐಟಿ ತನಿಖೆ ಅಂತೀರಾ? ಎಸ್‌ಐಟಿ ಹೆಸರಿನಲ್ಲಿ ಎಷ್ಟು ಸ್ಲೀಪರ್ ಸೆಲ್‌ಗಳು ತನಿಖೆ ಮಾಡುತ್ತಿವೆ ಎಂದು ಬಿಚ್ಚಿಟ್ಟರೆ ನಿಮ್ಮ ಸರ್ಕಾರ ಕಥೆ ಮುಗಿದೇ ಹೋಗುತ್ತದೆ. CD ಶಿವು ಆದೇಶದ ಮೇರೆಗೆ ಪೆನ್ ಡ್ರೈವ್‌ಗಳನ್ನು ಹಂಚಿದ ಕಿರಾತಕರೆಲ್ಲ ದಿನ ಬೆಳಗಾದರೆ ಯಾರ ಮನೆಯಲ್ಲಿ ಪ್ರತ್ಯಕ್ಷರಾಗುತ್ತಾರೆ? ವಿಧಾನಸೌಧದಲ್ಲಿ ಯಾರ ಕಚೇರಿಯೊಳಕ್ಕೆ ನುಸುಳುತ್ತಾರೆ ಎನ್ನುವುದು ಇಂಟೆಲಿಜೆನ್ಸ್ ಅನ್ನು ಇಟ್ಟುಕೊಂಡಿರುವ ನಿಮಗೇ ಗೊತ್ತಿಲ್ಲದಿದ್ದರೆ ಹೇಗೆ? ಎಂದು ಸಿಎಂಗೆ ಎಚ್.ಡಿ. ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ

ನಿಮ್ಮ ಸುಪುತ್ರ, ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರನ್ನು ಟುಮಾರೋ ಲ್ಯಾಂಡ್ ( Tomorrow Land) ಎನ್ನುವ ಅಮಲಿನ ಪಾರ್ಟಿಗೆ ನೀವೇ ಕಳಿಸಿದ್ದೀರಿ, ಅಲ್ಲಿ ಅವರ ಸಾವಿಗೆ ನೀವೇ ಕಾರಣರಾದಿರಿ ಎಂದು ಯಾರಾದರೂ ನಿಮ್ಮನ್ನು ಕೇಳಿದರೆ ನಿಮ್ಮ ಮನಸ್ಸಿಗೆ ಹೇಗಾಗಬೇಡ? ದೇವೇಗೌಡರ ಬಗ್ಗೆ ನೀವು ಕೇಳಿದ್ದು ಕೂಡ ಹಾಗೆಯೇ ಅಲ್ಲವೇ ಮಾನ್ಯ ಮುಖ್ಯಮಂತ್ರಿಗಳೇ? ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ. ದಯಮಾಡಿ ಅರ್ಥ ಮಾಡಿಕೊಳ್ಳಿ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Lok Sabha Speaker: 18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ ಭಾರೀ ಕುತೂಹಲ ಮೂಡಿಸಿದ್ದ ಚುನಾವಣೆಯಲ್ಲಿ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

VISTARANEWS.COM


on

Lok Sabha Speaker
Koo

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ (Lok Sabha Speaker). ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಕಣಕ್ಕಿಳಿದಿದ್ದರು. ಭಾರೀ ಕುತೂಹಲ ಮೂಡಿಸಿದ್ದ ಈ ಐತಿಹಾಸಿಕ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಓಂ ಬಿರ್ಲಾ ಅವರು ಬಹುಮತಗಳನ್ನು ಪಡೆದುಕೊಂಡರು. ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ಬಳಿಕ ಹಲವು ನಾಯಕರು ಅನುಮೋದಿಸಿದರು. ಧ್ವನಿ ಮತದ ಮೂಲಕ ಸದಸ್ಯರು ಮತ ಚಲಾಯಿಸಿದರು. ಈ ಮೂಲಕ ಓಂ ಬಿರ್ಲಾ ಅವರು ಬಲರಾಮ್ ಜಖರ್ (1980-89) ನಂತರ ಎರಡು ಪೂರ್ಣ ಅವಧಿಗೆ ಆಯ್ಕೆಯಾದ ಎರಡನೇ ಸ್ಪೀಕರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಲೋಕಸಭೆಯ ಎರಡನೇ ಸ್ಪೀಕರ್ ಎಂ.ಎ.ಅಯ್ಯಂಗಾರ್ ಮತ್ತು ಗುರ್ದಿಯಾಲ್ ಸಿಂಗ್ ಧಿಲ್ಲಾನ್ ಈ ಹಿಂದೆ ಎರಡು ಬಾರಿ ಈ ಹುದ್ದೆಯನ್ನು ಆಯ್ಕೆಯಾಗಿದ್ದರೂ ಅವರ ಎರಡನೇ ಅವಧಿ ಒಂದೂವರೆ ವರ್ಷಕ್ಕಿಂತ ಹೆಚ್ಚು ಕಾಲ ಉಳಿದಿರಲಿಲ್ಲ. ಹಂಗಾಮಿ ಸ್ಪೀಕರ್‌ ಭಾರ್ತೃಹರಿ ಮಹತಾಬ್‌ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

ವಿಪ್‌ ಜಾರಿ

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್‌ ಎಲ್ಲ ಸದಸ್ಯರಿಗೆ ಹಾಜರಾಗುವಂತೆ ಮಂಗಳವಾರ ವಿಪ್‌ ಜಾರಿ ಮಾಡಿದ್ದವು.

ಕೊನೆ ಕ್ಷಣದಲ್ಲಿ ಸುರೇಶ್‌ಗೆ ಬೆಂಬಲ ಸೂಚಿಸಿದ ಟಿಎಂಸಿ

ಇಂಡಿ ಬಣ ಅಭ್ಯರ್ಥಿಯಾಗಿ ಕೆ.ಸುರೇಶ್ ಅವರನ್ನು ಆಯ್ಕೆ ಮಾಡುವ ಮುನ್ನ ತಮ್ಮ ಬಳಿ ಸಮಾಲೋಚನೆಯನ್ನೇ ನಡೆಸಿಲ್ಲ ಎಂದು ಟಿಎಂಸಿ ಮಂಗಳವಾರ ಆರೋಪಿಸಿತ್ತು. ಕೆ. ಸುರೇಶ್ ಅವರನ್ನು ಇಂಡಿ ಬಣ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರ ಎಂದು ಟಿಎಂಸಿ ಹೇಳಿ ಇಂಡಿ ಬಣವನ್ನು ಆತಂಕಕ್ಕೆ ದೂಡಿತ್ತು. ಆದರೆ ಕೊನೆಕ್ಷಣದಲ್ಲಿ ಟಿಎಂಸಿ ಸದಸ್ಯರು ಸುರೇಶ್‌ ಅವರಿಗೆ ಬೆಂಬಲ ಸೂಚಿಸಿದರು.

ಇದನ್ನೂ ಓದಿ: Lok Sabha Speaker Election: ಲೋಕಸಭೆ ಇತಿಹಾಸದಲ್ಲೇ ಮೊದಲ ಬಾರಿ ಸ್ಪೀಕರ್‌ ಹುದ್ದೆಗೆ ನಡೆಯಲಿದೆ ಚುನಾವಣೆ

ಏಳು ಸಂಸದರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ ಮತ್ತು ಕೇರಳದ ವಯನಾಡು ಸ್ಥಾನಕ್ಕೆ ರಾಹುಲ್‌ ಗಾಂಧಿ ರಾಜೀನಾಮೆ ನೀಡಿದ ಕಾರಣ 535 ಸಂಸದರು ಇಂದು ಮತ ಚಲಾಯಿಸಿದ್ದರು. ಹೀಗಾಗಿ ಬಹುಮತಕ್ಕೆ 268 ಸದಸ್ಯರ ಬೆಂಬಲ ಅಗತ್ಯವಿತ್ತು. ಓಂ ಬಿರ್ಲಾ ಅವರಿಗೆ ಎನ್‌ಡಿಎ ಜತೆಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷ, ಇತರರು ಬೆಂಬಲ ಸೂಚಿಸಿದ್ದರಿಂದ ಸುಲಭವಾಗಿ 300ಕ್ಕೆಂತ ಹೆಚ್ಚು ಮತ ಪಡೆದುಕೊಂಡರು.

Continue Reading

ದೇಶ

Lok Sabha Speaker Election: ಲೋಕಸಭೆ ಸ್ಪೀಕರ್ ಚುನಾವಣೆ ಇಂದು; ಆಡಳಿತ ಪಕ್ಷ-ಪ್ರತಿಪಕ್ಷ ಬಲಾಬಲ ಹೀಗಿದೆ

Lok Sabha Speaker Election: ಇಂದು ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ. ಎನ್‌ಡಿಎಯ ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ ಮಧ್ಯೆ ತೀವ್ರ ಪೈಪೋಟಿ ಕಂಡು ಬಂದಿದೆ. ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್‌ ತನ್ನ ಸಂಸದರಿಗೆ ವಿಪ್‌ ಜಾರಿ ಮಾಡಿ ಹಾಜರಿರುವಂತೆ ಸೂಚಿಸಿದೆ.

VISTARANEWS.COM


on

Lok Sabha Speaker Election
Koo

ನವದೆಹಲಿ: ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ 3.0 ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕದ ಮೊದಲ ಅಧಿವೇಶನ (Parliament Session 2024) ಆರಂಭವಾಗಲಿದೆ. ಈಗಾಗಲೇ ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದು, ಇಂದು ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ (Lok Sabha Speaker Election). ಎನ್‌ಡಿಎಯಿಂದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಮಂಗಳವಾರ ಲೋಕಸಭಾ ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಬಲಾಬಲ ಹೀಗಿದೆ

ಲೋಕಸಭೆಯಲ್ಲಿ ಬಿಜೆಪಿ ಈಗಾಗಲೇ ತನ್ನದೇ ಸಂಸದರಿಂದ 240 ಮತಗಳನ್ನು ಮತ್ತು ಎನ್‌ಡಿಎ ಪಾಲುದಾರ ಪಕ್ಷಗಳಿಂದ 63 ಮತಗಳನ್ನು ಹೊಂದಿದೆ. ಇದರಲ್ಲಿ ಚಂದ್ರಬಾಬು ನಾಯ್ಡು ಅವರ ಟಿಡಿಪಿಯ 16 ಸಂಸದರು ಮತ್ತು ಪವನ್ ಕಲ್ಯಾಣ್‌ ಅವರ ಜನಸೇನಾ ಪಕ್ಷದ 2 ಸಂಸದರು ಸೇರಿಕೊಂಡಿದ್ದಾರೆ. ಒಟ್ಟು 293 ಸಂಖ್ಯಾಬಲವಿದೆ. ಹೆಚ್ಚುವರಿಯಾಗಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಬಿಜೆಪಿ ಅಭ್ಯರ್ಥಿ ಓಂ ಬಿರ್ಲಾ ಅವರನ್ನು ಬೆಂಬಲಿಸಲಿದೆ ಎನ್ನಲಾಗಿದ್ದು, ಅವರ 4 ಸಂಸದರ ಬಲ ಸೇರಿಸಿದರೆ ಎನ್‌ಡಿಎಗೆ ಒಟ್ಟು 297 ಮತ ದೊರೆಯಲಿದೆ. ಸ್ಥಳೀಯವಾಗಿ ವಿರೋಧ ಇರುವ ಹೊರತಾಗಿಯೂ ಬಿರ್ಲಾ ಅವರನ್ನು ಬೆಂಬಲಿಸಲು ವೈಎಸ್​ಆರ್​ ನಿರ್ಧರಿಸಿದೆ.

ಇನ್ನು ಪ್ರತಿಪಕ್ಷಗಳ ಇಂಡಿ ಬಣ ಲೋಕಸಭೆಯಲ್ಲಿ 232 ಸಂಸದರನ್ನು ಹೊಂದಿದೆ. ಈ ಪೈಕಿ 7 ಸಂಸದರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ. ಹೀಗಾಗಿ ಅವರಿಗೆ ವೋಟಿಂಗ್‌ ಮಾಡುವ ಅಧಿಕಾರವಿಲ್ಲ. ಇದರಲ್ಲಿ ಕಾಂಗ್ರೆಸ್‌ ಐವರು ಮತ್ತು ತೃಣಮೂಲ ಕಾಂಗ್ರೆಸ್‌ ಇಬ್ಬರು ಸೇರಿದ್ದಾರೆ. ಜತೆಗೆ ಕೆಲವು ಸ್ವತಂತ್ರ ಅಭ್ಯರ್ಥಿಗಳೂ ಪ್ರಮಾಣ ವಚನ ಸ್ವೀಕರಿಸಿಲ್ಲ. ಈ ಕೆಲವು ನಾಯಕರ ಪ್ರಮಾಣ ವಚನ ಸ್ವೀಕಾರ ಏಕೆ ಬಾಕಿ ಉಳಿದಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಅರ್ಹತೆ ಹೊಂದಿರುವ ಸಂಸದರ ಸಂಖ್ಯೆಯನ್ನು ಆಧರಿಸಿ ವೋಟಿಂಗ್‌ ನಡೆಯಲಿದೆ. ಹೀಗಾಗಿ ಬಹುಮತಕ್ಕೆ 269 ಮತಗಳ ಅಗತ್ಯವಿದೆ.

ಶಾಕ್‌ ಕೊಟ್ಟ ಟಿಎಂಸಿ

ಈ ನಡುವೆ ಇಂಡಿ ಬಣ ಅಭ್ಯರ್ಥಿಯಾಗಿ ಕೆ.ಸುರೇಶ್ ಅವರನ್ನು ಆಯ್ಕೆ ಮಾಡುವ ಮುನ್ನ ತಮ್ಮ ಬಳಿ ಸಮಾಲೋಚನೆಯನ್ನೇ ನಡೆಸಿಲ್ಲ ಎಂದು ಟಿಎಂಸಿ ಆರೋಪಿಸಿದೆ. ಕೆ. ಸುರೇಶ್ ಅವರನ್ನು ಇಂಡಿ ಬಣ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರ ಎಂದು ಟಿಎಂಸಿ ಹೇಳಿದೆ. ಹೀಗಾಗಿ ಟಿಎಂಸಿ ನಡೆ ಕುತೂಹಲ ಮೂಡಿಸಿದೆ.

ಇಂದು ಬೆಳಿಗ್ಗೆ 11 ಗಂಟೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್‌ ತನ್ನ ಸಂಸದರಿಗೆ ವಿಪ್‌ ಜಾರಿ ಮಾಡಿ ಹಾಜರಿರುವಂತೆ ಸೂಚಿಸಿದೆ.

ಇದನ್ನೂ ಓದಿ: Parliament Session 2024: ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

Continue Reading

ದೇಶ

Parliament Session 2024: ಇಂದು ಐತಿಹಾಸಿಕ ಲೋಕಸಭಾ ಸ್ಪೀಕರ್‌ ಚುನಾವಣೆ; ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ

Parliament Session 2024: ಲೋಕಸಭಾ ಸ್ಪೀಕರ್‌ ಹುದ್ದೆಗೆ ಎನ್‌ಡಿಎಯಿಂದ ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ ಸ್ಪರ್ಧಿಸುತ್ತಿದ್ದಾರೆ. ಸಾಮಾನ್ಯವಾಗಿ ಸ್ಪೀಕರ್ ಹಾಗೂ ಡೆಪ್ಯುಟಿ ಸ್ಪೀಕರ್ ಆಯ್ಕೆಯು ಸಹಮತದೊಂದಿಗೆ ನಡೆಯುತ್ತದೆ. ಆದರೆ ಈ ಬಾರಿ ಚುನಾವಣೆ ನಡೆಯಲಿದೆ. ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ Live ವೀಕ್ಷಿಸಿ.

VISTARANEWS.COM


on

Parliament Session 2024
Koo

ನವದೆಹಲಿ: ಜಿದ್ದಾಜಿದ್ದಿನ ಲೋಕಸಭಾ ಚುನಾವಣೆಯ ಬಳಿಕ ಇದೀಗ ದೇಶ ಲೋಕಸಭಾ ಸ್ಪೀಕರ್‌ ಆಯ್ಕೆಯ ಚುನಾವಣೆಗೆ ಸಾಕ್ಷಿಯಾಗಲಿದೆ (Lok Sabha Speaker Election). ಲೋಕಸಭಾ ಸ್ಪೀಕರ್‌ ಹುದ್ದೆಗೆ ಎನ್‌ಡಿಎಯಿಂದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಸ್ಪರ್ಧಿಸುತ್ತಿದ್ದಾರೆ. ಅವಿರೋಧ ಆಯ್ಕೆಗೆ ಒಮ್ಮತ ಮೂಡದ ಹಿನ್ನಲೆಯಲ್ಲಿ ಈ ಇಬ್ಬರು ನಾಯಕರು ಮಂಗಳವಾರ ನಾಮಪತ್ರ ಸಲ್ಲಿಸಿದರು (Parliament Session 2024).

ಸಾಮಾನ್ಯವಾಗಿ ಸ್ಪೀಕರ್ ಹಾಗೂ ಡೆಪ್ಯುಟಿ ಸ್ಪೀಕರ್ ಆಯ್ಕೆಯು ಸಹಮತದೊಂದಿಗೆ ನಡೆಯುತ್ತದೆ. ಹಲವು ವರ್ಷಗಳಿಂದಲೂ ಈ ಸಂಪ್ರದಾಯ ನಡೆದುಕೊಂಡು ಬಂದಿದೆ. ಆದರೆ ಈ ಬಾರಿ ಈ ಸಂಪ್ರದಾಯ ಕೊನೆಯಾಗಿದ್ದು, ಹಲವು ದಶಕಗಳ ಬಳಿಕ ಇದೇ ಮೊದಲ ಸಲ ಸ್ಪೀಕರ್ ಸ್ಥಾನಕ್ಕೆ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಜಿದ್ದಾಜಿದ್ದಿನ ಹೋರಾಟಕ್ಕೆ ಅಣಿಯಾಗಿವೆ.

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ನಾಮಪತ್ರ ಸಲ್ಲಿಸಿದರು.

ಓಂ ಬಿರ್ಲಾ, ಕೆ.ಸುರೇಶ್‌ ಹಿನ್ನೆಲೆ

ರಾಜಸ್ಥಾನದ ಕೋಟಾ ಕ್ಷೇತ್ರವನ್ನು ಪ್ರತಿನಿಧಿಸುವ ಓಂ ಬಿರ್ಲಾ ಅವರು 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕಳೆದ ಬಾರಿಯೂ ಅವರೇ ಸ್ಪೀಕರ್‌ ಆಗಿದ್ದರು. ಹೀಗಾಗಿ ಅವರನ್ನೇ ಸ್ಪೀಕರ್ ಆಗಿ ಮುಂದುವರಿಸಲು ಬಿಜೆಪಿ ಮುಂದಾಗಿದೆ. ಇನ್ನು ಕೆ.ಸುರೇಶ್‌ ಕೇರಳದ ಮಾವೆಲಿಕರಾ ಕ್ಷೇತ್ರದ ಕಾಂಗ್ರೆಸ್ ಸಂಸದ. ಎಂಟು ಬಾರಿ ಗೆದ್ದಿರುವ ಸುರೇಶ್ ಅವರು, 18ನೇ ಲೋಕಸಭೆಯಲ್ಲಿ ಅತ್ಯಂತ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಸಂಸದರೆನಿಸಿದ್ದಾರೆ. ಕಳೆದ 2 ಲೋಕಸಭಾ ಅಧಿವೇಶನಗಳಲ್ಲಿ ಬಿಜೆಪಿಯ ಸುಮಿತ್ರಾ ಮಹಾಜನ್ (2014) ಮತ್ತು ಓಂ ಬಿರ್ಲಾ (2019) ಸ್ಪೀಕರ್‌ಗಳಾಗಿದ್ದರು.

ಚುನಾವಣೆ ಎಷ್ಟು ಗಂಟೆಗೆ?

ಇಂದು ಬೆಳಿಗ್ಗೆ 11 ಗಂಟೆಗೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದೆ. 293 ಸಂಸದರ ಬಲ ಹೊಂದಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸರಳ ಬಹುಮತದೊಂದಿಗೆ ಓಂ ಬಿರ್ಲಾ ಅವರು ಪುನರಾಯ್ಕೆ ಆಗುವ ನಿರೀಕ್ಷೆಯಲ್ಲಿದೆ. ಇಂಡಿ ಮೈತ್ರಿಕೂಟಕ್ಕೆ 232 ಸದಸ್ಯರ ಬಲವಿದೆ. ಈ ಪೈಕಿ 7 ಸಂಸದರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ. ಹೀಗಾಗಿ ಅವರಿಗೆ ವೋಟು ಮಾಡುವ ಅಧಿಕಾರವಿಲ್ಲ. ಜತೆಗೆ ವೈ.ಎಸ್‌.ಜಗಮೋಹನ್‌ ರೆಡ್ಡಿ ಅವರ ವೈಎಸ್‌ಆರ್‌ ಕಾಂಗ್ರೆಸ್‌ನ ನಾಲ್ವರು ಸಂಸದರು ಎನ್‌ಡಿಎಗೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ.

ವಿಪ್‌ ಜಾರಿ

ಲೋಕಸಭಾ ಸ್ಪೀಕರ್ ಹುದ್ದೆಯ ಚುನಾವಣೆಯ ಹಿನ್ನೆಲೆಯಲ್ಲಿ ಬುಧವಾರ ಸದನಕ್ಕೆ ಹಾಜರಾಗುವಂತೆ ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್‌ ತಮ್ಮ ಸಂಸದರಿಗೆ ವಿಪ್‌ (Whip) ಜಾರಿ ಮಾಡಿವೆ. ಎರಡೂ ಪಕ್ಷಗಳು ಬುಧವಾರ ಬೆಳಿಗ್ಗೆ 11 ಗಂಟೆಗೆ ಲೋಕಸಭೆಗೆ ಹಾಜರಾಗುವಂತೆ ಮೂರು ಸಾಲಿನ ವಿಪ್ ಜಾರಿ ಮಾಡಿವೆ.

ಇದನ್ನೂ ಓದಿ: Lok Sabha Speaker Election: ಲೋಕಸಭೆ ಇತಿಹಾಸದಲ್ಲೇ ಮೊದಲ ಬಾರಿ ಸ್ಪೀಕರ್‌ ಹುದ್ದೆಗೆ ನಡೆಯಲಿದೆ ಚುನಾವಣೆ

Continue Reading

Latest

Members of Parliament: ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ? ಜೈಲಿನಲ್ಲಿದ್ದವರ ಕತೆಯೇನು?

ಲೋಕ ಸಭಾ ಚುನಾವಣೆ ಬಳಿಕ ಸಂಸದರಾಗಿ (Members of Parliament) ಆಯ್ಕೆಯಾಗುವವರು ಯಾವ ರೀತಿ ಪ್ರಮಾಣ ವಚನ ಸ್ವೀಕರಿಸಬೇಕು ಎಂಬುದನ್ನು ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಮತ್ತು ಪ್ರಮುಖ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗದೇ ಇದ್ದರೆ ಮುಂದಿನ ನಡೆ ಹೇಗಿರುತ್ತದೆ ಎಂಬಿತ್ಯಾದಿ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

By

Members of Parliament
Koo

18ನೇ ಲೋಕಸಭೆಯ (loksabha election) ಮೊದಲ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಹೊಸದಾಗಿ ಚುನಾಯಿತರಾದ ಸಂಸತ್ ಸದಸ್ಯರು (Members of Parliament) ಸೋಮವಾರದಿಂದ ಪ್ರಮಾಣ ವಚನ (taking oath) ಸ್ವೀಕರಿಸಲು ಆರಂಭಿಸಿದ್ದಾರೆ. ಎರಡು ದಿನಗಳಲ್ಲಿ ಕೆಳಮನೆಯ (lower house) 543 ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 26ರಂದು ನೂತನ ಲೋಕಸಭಾ ಸ್ಪೀಕರ್ (Speaker) ಆಯ್ಕೆ ನಡೆಯಲಿದೆ.

ಪ್ರಮಾಣ ವಚನ ಬೋಧಿಸುವವರು ಯಾರು?

ಸಂಸದೀಯ ಪದ್ಧತಿಗಳ ಪ್ರಕಾರ ಪ್ರತಿ ಸಾರ್ವತ್ರಿಕ ಚುನಾವಣೆಯ ಅನಂತರ ಲೋಕಸಭೆಗೆ ಹೊಸದಾಗಿ ಚುನಾಯಿತರಾದ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಸ್ವೀಕರಿಸುವ ಹೊಣೆ ನಿರ್ವಹಿಸುತ್ತಾರೆ. ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಯನ್ನು ನಡೆಸುವ ಜವಾಬ್ದಾರಿ ಕೂಡ ಈ ಹಂಗಾಮಿ ಸ್ಪೀಕರ್‌ದೇ ಆಗಿರುತ್ತದೆ.

ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಅನಾರೋಗ್ಯದ ಕಾರಣ ಅಥವಾ ಅವರ ಸ್ಥಳದಿಂದ ತೆರಳಲು ಸಾಧ್ಯವಾಗದ ಕಾರಣ ಪ್ರಮಾಣ ವಚನ ಸ್ವೀಕರಿಸದಿರುವ ಸಾಧ್ಯತೆಯಿದೆ.

ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ?

1. ಮೊದಲ ದಿನ ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡದ ಚುನಾಯಿತ ಸಂಸದರು ಸದನದ ಅಧಿವೇಶನದ ಪ್ರಾರಂಭದಲ್ಲಿ ಅದೇ ಅಧಿವೇಶನದಲ್ಲಿ ಅಥವಾ ಅನಂತರದ ಅಧಿವೇಶನದಲ್ಲಿ ಯಾವುದೇ ನಂತರದ ದಿನದಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು.

2. ಸಂಸದರ ಕೋರಿಕೆಯ ಮೇರೆಗೆ ಸಭಾಧ್ಯಕ್ಷರ ಚೇಂಬರ್‌ನಲ್ಲಿ ಮಧ್ಯಂತರ ಅವಧಿಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಲಾಗುತ್ತದೆ.

3. ಅನಾರೋಗ್ಯದಿಂದ ಬಳಲುತ್ತಿರುವವರು, ಸದನಕ್ಕೆ ಬರಲು ಸಾಧ್ಯವಾಗದ ಸಂದರ್ಭದಲ್ಲಿ ಅವರು ಬಯಸಿದಲ್ಲಿ ಪ್ರಮಾಣ ಅಥವಾ ದೃಢೀಕರಣವನ್ನು ಮಾಡಬಹುದು. ಈ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಯು ಸದಸ್ಯರಿಗೆ ಸಂಬಂಧಿತ ಪ್ರಮಾಣ ಅಥವಾ ದೃಢೀಕರಣ ಕಾರ್ಡ್ ಅನ್ನು ನೀಡುತ್ತಾರೆ.

4. ಸಂವಿಧಾನದ ಪ್ರಕಾರ ಚುನಾಯಿತ ಸಂಸದರು 60 ದಿನಗಳವರೆಗೆ ಸಂಸತ್ತಿಗೆ ಹಾಜರಾಗದಿದ್ದರೆ ಅವರ ಸ್ಥಾನವನ್ನು ಖಾಲಿ ಎಂದು ಘೋಷಿಸಬಹುದು. ಇದೇ ಆಧಾರದಲ್ಲಿ ನ್ಯಾಯಾಲಯಗಳು ಜೈಲಿನಲ್ಲಿರುವ ಸಂಸದರಿಗೆ ಪ್ರಮಾಣ ವಚನ ಸ್ವೀಕರಿಸುವುದಕ್ಕಾಗಿ ಸಂಸತ್‌ಗೆ ಬರಲು ಅವಕಾಶ ನೀಡಬಹುದು. ಆದರೆ ಪ್ರಮಾಣ ವಚನ ಸ್ವೀಕರಿಸಿದ ಅನಂತರ ಅವರು ಮತ್ತೆ ಜೈಲಿಗೆ ಮರಳಬೇಕಾಗುತ್ತದೆ.

5. ದೃಷ್ಟಿ ಸಮಸ್ಯೆಯಿಂದ ಸದಸ್ಯರಿಗೆ ಸಹಿ ಮಾಡಲು, ಪ್ರಮಾಣ ಪತ್ರ ಓದಲು ಸಾಧ್ಯವಾಗದೇ ಇದ್ದರೆ ಇನ್ನೊಬ್ಬ ಸದಸ್ಯರು ಇವರಿಗೆ ಓದಿ ಹೇಳಬಹುದಾಗಿದೆ.

6. ನ್ಯಾಯಾಲಯದ ಆದೇಶದ ಪರಿಣಾಮವಾಗಿ ಒಬ್ಬ ವ್ಯಕ್ತಿಯು ಸದಸ್ಯರಾಗುವುದನ್ನು ತಡೆದರೆ ಮತ್ತು ಅವರ ಸ್ಥಾನದಲ್ಲಿ ಇನ್ನೊಬ್ಬರು ಚುನಾಯಿತರೆಂದು ಘೋಷಿಸಲ್ಪಟ್ಟರೆ ಮತ್ತೆ ಹೊಸದಾಗಿ ಪ್ರಮಾಣವಚನ ಅಥವಾ ದೃಢೀಕರಣವನ್ನು ಮಾಡಬೇಕು.

7. ಮೊದಲ ಸುತ್ತಿನಲ್ಲಿ ಪ್ರಮಾಣವಚನಕ್ಕೆ ಹಾಜರಾಗದ ಸದಸ್ಯರ ಹೆಸರನ್ನು ಕೊನೆಯಲ್ಲಿ ಮತ್ತೆ ಕರೆಯಲಾಗುತ್ತದೆ.

ಯಾವ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂವಿಧಾನದ ಮೂರನೇ ಶೆಡ್ಯೂಲ್ ಸಂಸತ್ತಿನ ಪ್ರಮಾಣ ವಚನದ ಪಠ್ಯವನ್ನು ಒಳಗೊಂಡಿದೆ. ಅದು ಹೀಗೆ ಹೇಳುತ್ತದೆ: ನಾನು…. ಚುನಾಯಿತನಾದ ಅಥವಾ ನಾಮನಿರ್ದೇಶನಗೊಂಡ ಸದಸ್ಯರ ಸಂಸತ್‌ ಸದಸ್ಯನಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ನಾನು ಕಾನೂನಿನ ಮೂಲಕ ಸ್ಥಾಪಿಸಿದಂತೆ ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದುತ್ತೇನೆ ಎಂದು ಸ್ಪಷ್ಟವಾಗಿ ದೃಢಪಡಿಸುತ್ತೇನೆ. ನಾನು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಎತ್ತಿಹಿಡಿಯುತ್ತೇನೆ. ನನ್ನ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ.

ಪ್ರಮಾಣ ವಚನ ಏಕೆ ಮಹತ್ವದ್ದಾಗಿದೆ?

ಲೋಕಸಭೆಯಲ್ಲಿ ಚರ್ಚೆ ಮತ್ತು ಮತ ಚಲಾಯಿಸುವ ಅಧಿಕಾರವನ್ನು ಪಡೆಯಲು ಸಂವಿಧಾನದಲ್ಲಿ (ಆರ್ಟಿಕಲ್ 99) ಸೂಚಿಸಿದಂತೆ ಸಂಸದರು ಪ್ರಮಾಣ ವಚನ ಸ್ವೀಕರಿಸಬೇಕು.

ಕೇವಲ ಚುನಾವಣೆಯಲ್ಲಿ ಗೆದ್ದು ಅವಧಿಯನ್ನು ಪ್ರಾರಂಭಿಸುವುದರಿಂದ ಅವರು ಸದನದ ಕಲಾಪಗಳಲ್ಲಿ ಭಾಗವಹಿಸಲು ಸ್ವಯಂಚಾಲಿತವಾಗಿ ಸಾಧ್ಯವಾಗುವುದಿಲ್ಲ.

ಹೇಗೆ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂಸದರು ಮೊದಲು ತಮ್ಮ ಚುನಾವಣಾ ಪ್ರಮಾಣಪತ್ರವನ್ನು ಲೋಕಸಭೆಯ ಸಿಬ್ಬಂದಿಗೆ ಸಲ್ಲಿಸಬೇಕಾಗುತ್ತದೆ. 1957ರಲ್ಲಿ ನಡೆದ ಘಟನೆಯ ಅನಂತರ ಸಂಸತ್ತು ಈ ಸುರಕ್ಷತೆಯನ್ನು ಸೇರಿಸಿತು. ಮಾನಸಿಕವಾಗಿ ಅಸ್ವಸ್ಥ ವ್ಯಕ್ತಿಯೊಬ್ಬರು ಸಂಸದರೆಂದು ಪೋಸ್ ನೀಡಿ ಸದನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು!

ಪ್ರಮಾಣಪತ್ರದ ಜೊತೆಗೆ ಸಂಸದರು ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡಲು ಬಯಸಿದ ಭಾಷೆಯನ್ನು ಸಹ ನಮೂದಿಸಬೇಕು.

ಸದಸ್ಯರು ಪ್ರಮಾಣ ವಚನ ಮಾಡುವಾಗ ಹಂಗಾಮಿ ಸ್ಪೀಕರ್ ಜೊತೆ ಹಸ್ತಲಾಘವ ಮಾಡುತ್ತಾರೆ. ಅನಂತರ ಅವರು ಸದನದಲ್ಲಿ ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಸದಸ್ಯರಿಗೆ ಸ್ಪೀಕರ್‌ ಅನುಮತಿ ನೀಡುತ್ತಾರೆ. ಸದಸ್ಯರು ದಾಖಲಾತಿ ಪುಸ್ತಕದಲ್ಲಿ ಸಹಿ ಮಾಡುತ್ತಾರೆ.

ಯಾವ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು?

ಸಂಸದರು ಇಂಗ್ಲಿಷ್ ಅಥವಾ ಅಸ್ಸಾಮಿ, ಬೆಂಗಾಲಿ, ಬೋಡೋ, ಡೋಗ್ರಿ, ಗುಜರಾತಿ, ಹಿಂದಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮೈಥಿಲಿ, ಮಲಯಾಳಂ, ಮಣಿಪುರಿ, ಮರಾಠಿ, ನೇಪಾಳಿ, ಒಡಿಯಾ, ಪಂಜಾಬಿ, ಸಂಸ್ಕೃತ, ಸಂತಾಲಿ, ಸಿಂಧಿ, ತಮಿಳು, ತೆಲುಗು ಮತ್ತು ಉರ್ದು.. ಹೀಗೆ 22 ಭಾಷೆಗಳಲ್ಲಿ ಪ್ರಮಾಣವಚನವನ್ನು ಸ್ವೀಕರಿಸಬಹುದು.

ಅರ್ಧದಷ್ಟು ಸಂಸದರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಹಿಂದಿನ ಎರಡು ಲೋಕಸಭೆಯಲ್ಲಿ ಸಂಸ್ಕೃತವು ಜನಪ್ರಿಯ ಭಾಷೆಯಾಗಿ ಮಾರ್ಪಟ್ಟಿದ್ದು, ಹಲವು ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: Bansuri Swaraj: ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿ ಸುಷ್ಮಾ ಸ್ವರಾಜ್‌ರನ್ನು ನೆನಪಿಸಿದ ಮಗಳು! ವಿಡಿಯೊ ನೋಡಿ

ಯಾವಾಗ ಸದನದ ಸದಸ್ಯರಾಗುತ್ತಾರೆ?

ಒಬ್ಬ ವ್ಯಕ್ತಿಯು ಚುನಾವಣಾ ಅಧಿಕಾರಿಯಿಂದ ಚುನಾಯಿತರೆಂದು ಘೋಷಿಸಲ್ಪಟ್ಟ ದಿನಾಂಕದಿಂದ ಸದನದ ಸದಸ್ಯರಾಗುತ್ತಾರೆ. ಸದನವನ್ನು ರಚಿಸುವ ಚುನಾವಣಾ ಆಯೋಗದ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ ಅವರು ಸಂಸದರಾಗಿ ಸಂಬಳವನ್ನು ಸ್ವೀಕರಿಸಲು ಪ್ರಾರಂಭಿಸುತ್ತಾರೆ. ಸಂಸದರು ಸದನದ ಅಧಿವೇಶನಗಳಿಗೆ ಗೈರುಹಾಜರಿಯನ್ನು ಕೇಳಬಹುದಾಗಿದೆ.

Continue Reading
Advertisement
IRCTC
ದೇಶ18 mins ago

IRCTC: ಆನ್‌ಲೈನ್‌ನಲ್ಲಿ ರೈಲ್ವೇ ಟಿಕೆಟ್‌ ಬುಕ್ಕಿಂಗ್‌ ಮಾಡೋ ಮುನ್ನ ಹೊಸ ನಿಯಮದ ಬಗ್ಗೆ ಇರಲಿ ಗಮನ!

1983 World Cup
ಕ್ರೀಡೆ21 mins ago

1983 WC Win Anniversary: ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನ​ ಸವಿ ನೆನಪನ್ನು ವಿಂಡೀಸ್​ನಲ್ಲಿ ಕೇಕ್​ ಕತ್ತರಿಸಿ ಸಂಭ್ರಮಿಸಿದ ರವಿಶಾಸ್ತ್ರಿ, ಗವಾಸ್ಕರ್, ​ಬಿನ್ನಿ

Viral Video
Latest23 mins ago

Viral Video: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿ ಬೆರಗುಗೊಳಿಸಿದ ಅತ್ಯಂತ ಕಿರಿಯ ಸಂಸದೆ!

cm siddaramaiah water price hike
ಕರ್ನಾಟಕ27 mins ago

CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

Neha Gowda in saree with baby bump
ಸ್ಯಾಂಡಲ್ ವುಡ್29 mins ago

Neha Gowda: ಸೀರೆಯುಟ್ಟು ಸಿಂಪಲ್‌ ಆಗಿ ಗಂಡನ ಜತೆ ಪೋಸ್‌ ಕೊಟ್ಟ ಗರ್ಭಿಣಿ ನೇಹಾ ಗೌಡ!

Viral Video
Latest30 mins ago

Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

Lok Sabha Speaker
ದೇಶ31 mins ago

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Kaagada movie released on 5th July
ಕರ್ನಾಟಕ35 mins ago

Kannada New Movie: ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ “ಕಾಗದ” ಜುಲೈ 5ರಂದು ತೆರೆಗೆ

prajwal revanna case 4th
ಕ್ರೈಂ1 hour ago

Prajwal Revanna Case: ʼಪ್ರತಿ ದಿನ ಫೋನ್‌ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್‌ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?

Famous Serial Actress kasthuri shankar half naked photos leaked
ಟಾಲಿವುಡ್1 hour ago

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌