SRH vs RR: ಹೈದರಾಬಾದ್​ಗೆ ಗೆಲುವಿನ 'ಸನ್​ರೈಸ್'; ಫೈನಲ್​ನಲ್ಲಿ ಕೆಕೆಆರ್ ವಿರುದ್ಧ ಕಣಕ್ಕೆ​ - Vistara News

ಕ್ರೀಡೆ

SRH vs RR: ಹೈದರಾಬಾದ್​ಗೆ ಗೆಲುವಿನ ‘ಸನ್​ರೈಸ್’; ಫೈನಲ್​ನಲ್ಲಿ ಕೆಕೆಆರ್ ವಿರುದ್ಧ ಕಣಕ್ಕೆ​

SRH vs RR: ಬೌಲರ್‌ಗಳ ದಾಳಿಯ ನಡುವೆಯೂ ಹೆನ್ರಿಚ್​ ಕ್ಲಾಸೆನ್​ ಅರ್ಧಶತಕ ಬಾರಿಸಿ ಆಧರಿಸಿ ನಿಂತ ಪರಿಣಾಮ ತಂಡ 150ರ ಗಡಿ ದಾಟಿ ಉತ್ತಮ ರನ್​ ಕಲೆಹಾಕಿತು. ಒಂದೆಡೆ ವಿಕೆಟ್‌ಗಳು ಬಡಬಡನೆ ಉರುಳುತ್ತಿದ್ದರೂ ಕ್ಲಾಸೆನ್​ ಆಕ್ರಮಣಕಾರಿ ಆಟಕ್ಕೆ ಮುಂದಾದರು. ಇದು ಫಲ ಕೊಟ್ಟಿತು.

VISTARANEWS.COM


on

SRH vs RR
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಶುಕ್ರವಾರ ನಡೆದ ಐಪಿಎಲ್​ನ​ ಕ್ವಾಲಿಫೈಯರ್-2​ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್​(Sunrisers Hyderabad) ತಂಡ ರಾಜಸ್ಥಾನ್​ ರಾಯಲ್ಸ್(SRH vs RR)​ ವಿರುದ್ಧ 36 ರನ್​ಗಳ ಭರ್ಜರಿ ಗೆಲುವು ಸಾಧಿಸಿ ಫೈನಲ್​ ಪ್ರವೇಶಿಸಿದೆ. ಮೇ 26ರಂದು ನಡೆಯುವ ಫೈನಲ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಈ ಪಂದ್ಯ ಕೂಡ ಚಿದಂಬರಂ ಸ್ಟೇಡಿಯಂನಲ್ಲೇ ನಡೆಯಲಿದೆ.​

ಇಲ್ಲಿನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಸನ್​ರೈಸರ್ಸ್​ ಹೈದರಾಬಾದ್​ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ಗೆ 175 ರನ್​ ಬಾರಿಸಿತು. ಜವಾಬಿತ್ತ ರಾಜಸ್ಥಾನ್​ ಉತ್ತಮ ಆರಂಭ ಪಡೆದರೂ ಕೂಡ ಆ ಬಳಿಕ ನಾಟಕೀಯ ಕುಸಿತ ಕಂಡು 7 ವಿಕೆಟ್​ ನಷ್ಟಕ್ಕೆ 139 ರನ್​ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ರಾಜಸ್ಥಾನ್​ ತಂಡದ ಸೋಲು ಕಂಡು ಪುಟ್ಟ ಅಭಿಮಾನಿಯೊಬ್ಬಳು ಕಣ್ಣೀರು ಸುರಿಸಿದ ದೃಶ್ಯ ಕೂಡ ಕಂಡು ಬಂತು. ಅತ್ತ ಹೈದರಾಬಾದ್​ ತಂಡದ ಮಾಲಕಿ ಕಾವ್ಯಾ ಮಾರನ್​ ಅವರ ಸಂತಸಕ್ಕೆ ಪಾರವೇ ಇರಲಿಲ್ಲ. ವಿಕೆಟ್​ ಬಿದ್ದಾಗಲೆಲ್ಲಾ ಕುಣಿದು ಕುಪ್ಪಳಿಸುತ್ತಾ, ತನ್ನ ತಂದೆಯನ್ನು ತಬ್ಬಿಕೊಳ್ಳುತ್ತಾ ಸಂಭ್ರಮಿಸುತ್ತಿದ್ದರು.

ಚೇಸಿಂಗ್​ ವೇಳೆ ರಾಜಸ್ಥಾನ್(Rajasthan Royals)​ ತಂಡಕ್ಕೆ ಆಸರೆಯಾದದ್ದು ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್​ ಮಾತ್ರ. ತಂಡ 24 ರನ್​ ಗಳಿಸಿದ್ದ ವೇಳೆ ಟಾಮ್ ಕೊಹ್ಲರ್-ಕ್ಯಾಡ್ಮೋರ್(10) ರೂಪದಲ್ಲಿ ಮೊದಲ ವಿಕೆಟ್​ ಕಳೆದುಕೊಂಡಿತು. ದ್ವಿತೀಯ ವಿಕೆಟ್​ಗೆ ಜತೆಯಾದ ನಾಯಕ ಸಂಜು ಸ್ಯಾ,ಮ್ಸನ್​ ಮತ್ತು ಯಶಸ್ವಿ ಜೈಸ್ವಾಲ್​ ಕೆಲ ಕಾಲ ಜವಾಬ್ದಾರಿಯುತ ಬ್ಯಾಟಿಂಗ್​ ಮೂಲಕ ತಂಡಕ್ಕೆ ನೆರವಾದರು. ಆದರೆ ಈ ಜತೆಯಾಟ ಹೆಚ್ಚು ಹೊತ್ತು ಸಾಗಲಿಲ್ಲ. ಸ್ಯಾಮ್ಸನ್​ 10 ರನ್​ ಗಳಿಸಿದ್ದ ವೇಳೆ ವಿಕೆಟ್​ ಕಳೆದುಕೊಂಡರು. ಆ ಬಳಿಕ ಬಂದ ರಿಯಾನ್​ ಪರಾಗ್​(6), ಆರ್​ ಅಶ್ವಿನ್​(0), ಶಿಮ್ರಾನ್ ಹೆಟ್​ಮೇರ್​(4) ಒಬ್ಬರ ಹಿಂದೆ ಒಬ್ಬರಂತೆ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಪರೇಡ್​ ನಡೆಸಿದರು. ಯಾರೂ ಕೂಡ ತಂಡಕ್ಕೆ ಆಸರೆಯಾಗುವಲ್ಲಿ ಯಶಸ್ಸು ಕಾಣಲಿಲ್ಲ. ಜೈಸ್ವಾಲ್​ 3 ಸಿಕ್ಸರ್​ ಮತ್ತು 4 ಬೌಂಡರಿ ಬಾರಿಸಿ 42 ರನ್​ ಗಳಿಸಿದರು.

ಅಂತಿಮ ಹಂತದಲ್ಲಿ ಧೃವ್​ ಜುರೇಲ್​ ಅರ್ಧಶತಕ ಬಾರಿಸುವ ಮೂಲಕ ಶಕ್ತಿ ಮೀರಿದ ಬ್ಯಾಟಿಂಗ್​ ಹೋರಾಟ ನಡೆಸಿದರು. ಇದೇ ವೇಳೆ ನಟರಾಜ್​ ಓವರ್​ನಲ್ಲಿ ಗಂಟಲಿಗೆ ಚೆಂಡು ತಾಗಿಸಿಕೊಂಡು ಸಣ್ಣ ಮಟ್ಟಿನ ಗಾಯಕ್ಕೆ ತುತ್ತಾದರು. ಆದರೆ ಅವರ ಆಟಕ್ಕೆ ಯಾವುದೇ ಅಡ್ಡಿಯಾಗಲಿಲ್ಲ. ಇವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್​ ಸಿಗುತ್ತಿದ್ದರೆ ರಾಜಸ್ಥಾನ್​ಗೆ ಗೆಲುವು ಒಲಿಯುವ ಸಾಧ್ಯತೆ ಇತ್ತು. ವೆಸ್ಟ್​ ಇಂಡೀಸ್​ ತಂಡದ ನಾಯಕ ರೋವ್ಮನ್ ಪೊವೆಲ್‌(6) ಕೂಡ ವಿಫಲರಾದರು. ಹೈದರಾಬಾದ್​ ಪರ ಶಾಬಾಜ್​ ಅಹ್ಮದ್​ 4 ಓವರ್​ಗೆ ಕೇವಲ 23 ರನ್​ ಬಿಟ್ಟುಕೊಟ್ಟು ಪ್ರಮುಖ 3 ವಿಕೆಟ್​ ಕಡೆವಿದರು. ಪಾರ್ಟ್​ ಟೈಮ್​ ಬೌಲರ್​ ಅಭಿಷೇಕ್​ ಶರ್ಮ ಈ ಪಂದ್ಯದಲ್ಲಿ ಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರುವ ಮೂಲಕ 24 ರನ್​ಗೆ 2 ವಿಕೆಟ್​ ಕಿತ್ತರು. ಅಜೇಯರಾಗಿ ಉಳಿದ ಜುರೇಲ್ 35 ಎಸೆತಗಳಿಂದ 56 ರನ್​ ಬಾರಿಸಿದರು. ಇದರದ್ದೇ ತಂಡದ ಪರ ಅತ್ಯಧಿಕ ಗಳಿಕೆ.

ಮೊದಲು ಬ್ಯಾಟಿಂಗ್​ ನಡೆಸಿದ ಹೈದರಾಬಾದ್​ ತಂಡ ಕಳೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಅನುಭವಿಸಿ​​ದಂತೆ ಈ ಪಂದ್ಯದಲ್ಲಿಯೂ ಆರಂಭಿಕ ಆಘಾತ ಎದುರಿಸಿತು. ಎಡಗೈ ಬ್ಯಾಟರ್​ ಟ್ರೆಂಟ್​ ಬೌಲ್ಟ್​ ಅವರ ಮೊದಲ ಓವರ್​ನಲ್ಲಿಯೇ ಬಡಬಡನೆ ತಲಾ ಒಂದು ಸಿಕ್ಸರ್ ಮತ್ತು ​ಬೌಂಡರಿ ಬಾರಿಸಿದರೂ ಈ ಬಿರುಸನ್ನು ಕಾಯ್ದುಕೊಳ್ಳಲು ಅವರಿಂದಾಗಲಿಲ್ಲ. ಇದೇ ಓವರ್​ನ ಅಂತಿಮ ಎಸೆತದಲ್ಲಿ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು.

ಇದನ್ನೂ ಓದಿ IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

ದ್ವಿತೀಯ ವಿಕೆಟ್​ಕೆ ಆಡಲಿಳಿದ ರಾಹುಲ್​ ತ್ರಿಪಾಠಿ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ಕೊಟ್ಟು 15 ಎಸೆತಗಳಿಂದ 5 ಬೌಂಡರಿ ಮತ್ತು 2 ಸಿಕ್ಸರ್​ ನೆರವಿನಿಂದ 37 ರನ್​ ಬಾರಿಸಿ ವಿಕೆಟ್​ ಕಳೆದುಕೊಂಡರು. ಹಲವು ಪಂದ್ಯಗಳ ಬಳಿಕ ಈ ಪಂದ್ಯದಲ್ಲಿ ಆಡಿದ ಐಡೆನ್​ ಮಾರ್ಕ್ರಮ್​ ಕೇವಲ 1 ರನ್​ಗೆ ಔಟಾಗಿ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಳ್ಳುವಲ್ಲಿ ವಿಫಲರಾದರು. ಒಂದೇ ಓವರ್​ನಲ್ಲಿ ಬೌಲ್ಟ್​​ 2 ಪ್ರಮುಖ ವಿಕೆಟ್​ ಬೇಟೆಯಾಡಿದರು. ಅಲ್ಲಿಗೆ ಆರಂಭಿಕ ಮೂರು ವಿಕೆಟ್​ ಕೂಡ ಬೌಲ್ಟ್​​ ಪಾಲಾಯಿತು.

ಆಪದ್ಬಾಂಧವ ಕ್ಲಾಸೆನ್​


ಬೌಲರ್‌ಗಳ ದಾಳಿಯ ನಡುವೆಯೂ ಹೆನ್ರಿಚ್​ ಕ್ಲಾಸೆನ್​ ಅರ್ಧಶತಕ ಬಾರಿಸಿ ಆಧರಿಸಿ ನಿಂತ ಪರಿಣಾಮ ತಂಡ 150ರ ಗಡಿ ದಾಟಿ ಉತ್ತಮ ರನ್​ ಕಲೆಹಾಕಿತು. ಒಂದೆಡೆ ವಿಕೆಟ್‌ಗಳು ಬಡಬಡನೆ ಉರುಳುತ್ತಿದ್ದರೂ ಕ್ಲಾಸೆನ್​ ಆಕ್ರಮಣಕಾರಿ ಆಟಕ್ಕೆ ಮುಂದಾದರು. ಇದು ಫಲ ಕೊಟ್ಟಿತು. ಕ್ಲಾಸೆನ್​ ಹೊರತುಪಡಿಸಿದರೆ ಟ್ರಾವಿಸ್​ ಹೆಡ್​ ಪ್ರದರ್ಶನ ಗಮನಾರ್ಹ ಮಟ್ಟದಲ್ಲಿತ್ತು. ಹೆಡ್​ 34 ರನ್​ ಬಾರಿಸಿದರು. ಹೆಡ್​ ಮತ್ತು ಕ್ಲಾಸೆನ್​ ಸೇರಿಕೊಂಡು 4 ವಿಕೆಟ್​ಗೆ 42 ರನ್​ಗಳ ಜತೆಯಾಟ ನಡೆಸಿದರು. 18 ಓವರ್​ ತನಕ ಬ್ಯಾಟಿಂಗ್​ ನಡೆಸಿದ ಕ್ಲಾಸೆನ್​ 34 ಎಸೆತಗಳಿಂದ ಭರ್ತಿ 50 ರನ್​ ಗಳಿಸಿ ಸಂದೀಪ್​ ಶರ್ಮಾ ಅವರ ಸ್ಲೋ ಯಾರ್ಕರ್​ ಎಸೆತದ ಮರ್ಮವನ್ನು ಅರಿಯುವಲ್ಲಿ ವಿಫಲವಾಗಿ ಕ್ಲೀನ್​ ಬೌಲ್ಡ್​ ಆದರು. ಅವರ ಅರ್ಧಶತಕದ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 4 ಸಿಕ್ಸರ್ ಸಿಡಿಯಿತು.

ರಾಜಸ್ಥಾನ್​ ಪರ ಚಹಲ್​ ವಿಕೆಟ್​ ಕೀಳದಿದ್ದರೂ ಕೂಡ ಪ್ರಮುಖ ಮೂರು ಆಟಗಾರರ ಕ್ಯಾಚ್​ ಹಿಡಿದು ಮಿಂಚಿದರು. ಅವೇಶ್​ ಖಾನ್​ ಅವರು ಅಪಾಯಕಾರಿ ಅಬ್ದುಲ್​ ಸಮದ್​(0) ಮತ್ತು ನಿತೇಶ್​ ರೆಡ್ಡಿ(5) ಅವರನ್ನು ಸತತ ಎಸೆತಗಳಿಂದ ಔಟ್ ಮಾಡಿದ್ದು ಹೈದರಾಬಾದ್​ನ ದೊಡ್ಡ ಮೊತ್ತಕ್ಕೆ ಹಿನ್ನಡೆಯಾಯಿತು. ಅಂತಿ​ಮ ಹಂತದಲ್ಲಿ ಶಹಬಾಜ್ ಅಹಮದ್ 18 ರನ್​ ಬಾರಿಸಿದರು. ರಾಜಸ್ಥಾನ್​ ಪರ ಬೌಲ್ಟ್​ ಮತ್ತು ಅವೇಶ್​ ಖಾನ್​ ತಲಾ 3 ವಿಕೆಟ್​ ಕಿತ್ತರೆ, ಸಂದೀಪ್​ ಶರ್ಮ 2 ವಿಕೆಟ್​ ಪಡೆದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

1983 WC Win Anniversary: ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನ​ ಸವಿ ನೆನಪನ್ನು ವಿಂಡೀಸ್​ನಲ್ಲಿ ಕೇಕ್​ ಕತ್ತರಿಸಿ ಸಂಭ್ರಮಿಸಿದ ರವಿಶಾಸ್ತ್ರಿ, ಗವಾಸ್ಕರ್, ​ಬಿನ್ನಿ

1983 World Cup: ವೆಸ್ಟ್​ ಇಂಡೀಸ್​ನಲ್ಲಿರುವ ಟೀಮ್​ ಇಂಡಿಯಾ ಆಟಗಾರರಾದ ರಿಷಭ್​ ಪಂತ್​, ಮೊಹಮ್ಮದ್​ ಸಿರಾಜ್​, ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್​ ಅಗರ್ಕರ್​ ಸೇರಿ ಕೆಲ ಆಟಗಾರರು ಲೆಜಂಡರಿ ಕ್ರಿಕೆಟಿಗರ ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಕೇಕ್ ಕತ್ತರಿಸಿ ಅಂದಿನ ಚೊಚ್ಚಲ ವಿಶ್ವಕಪ್​ ಗೆಲುವನ್ನು ಸಂಭ್ರಮಿಸಿದರು

VISTARANEWS.COM


on

1983 World Cup
Koo

ಗಯಾನ: ಭಾರತೀಯ ಕ್ರಿಕೆಟಿನ ದಿಕ್ಕನ್ನೇ ಬದಲಿಸಿದ ಈ ಮಹಾ ವಿಜಯಕ್ಕೆ(1983 World Cup) ಮಂಗಳವಾರ 41 ವರ್ಷ ತುಂಬಿತು(1983 WC Win Anniversary). 1983ರ ಜೂ. 25ರಂದು ಐತಿಹಾಸಿಕ ಲಾರ್ಡ್ಸ್‌ ಅಂಗಳದಲ್ಲಿ ಎರಡು ಬಾರಿಯ ಹಾಲಿ ಚಾಂಪಿಯನ್‌, ಭಯಾನಕ ವೆಸ್ಟ್‌ ಇಂಡೀಸ್​ ತಂಡವನ್ನು ಫೈನಲ್‌ನಲ್ಲಿ 43 ರನ್ನುಗಳಿಂದ ಉರುಳಿಸಿದ “ಕಪಿಲ್‌ ಡೆವಿಲ್ಸ್‌’ ಹೊಸ ಇತಿಹಾಸ ಬರೆದ ಅದ್ಭುತ ಕ್ಷಣವದು. ಈ ಸಂಭ್ರಮಕ್ಕೆ 41 ವರ್ಷ ತುಂಬಿದ ನಿಟ್ಟಿನಲ್ಲಿ ಅಂದಿನ ವಿಶ್ವಕಪ್​ ತಂಡದ ಸದಸ್ಯರಾದ ರವಿಶಾಸ್ತ್ರಿ(Ravi Shastri), ಸುನೀಲ್ ಗವಾಸ್ಕರ್(Sunil Gavaskar)​ ಮತ್ತು ಪ್ರಸ್ತುತ ಬಿಸಿಸಿಐ ಅಧ್ಯಕ್ಷರಾಗಿರುವ ರೋಜರ್ ಬಿನ್ನಿ(Roger Binny) ಅವರು ಹಾಲಿ ಟಿ20 ವಿಶ್ವಕಪ್​ ಆಡುತ್ತಿರುವ ಟೀಮ್​ ಇಂಡಿಯಾ ಆಟಗಾರರೊಂದಿಗೆ ಸಂಭ್ರಮಾಚರಣನೆ ನಡೆಸಿದ್ದಾರೆ.

ವೆಸ್ಟ್​ ಇಂಡೀಸ್​ನಲ್ಲಿರುವ ಟೀಮ್​ ಇಂಡಿಯಾ ಆಟಗಾರರಾದ ರಿಷಭ್​ ಪಂತ್​(Rishabh Pant), ಮೊಹಮ್ಮದ್​ ಸಿರಾಜ್​, ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್​ ಅಗರ್ಕರ್​ ಸೇರಿ ಕೆಲ ಆಟಗಾರರು ಲೆಜಂಡರಿ ಕ್ರಿಕೆಟಿಗರ ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಕೇಕ್ ಕತ್ತರಿಸಿ ಅಂದಿನ ಚೊಚ್ಚಲ ವಿಶ್ವಕಪ್​ ಗೆಲುವನ್ನು ಸಂಭ್ರಮಿಸಿದರು. ಈ ಸುಂದರ ಕ್ಷಣದ ಫೋಟೊವನ್ನು ರವಿಶ್ರಾಸ್ತ್ರಿ ತಮ್ಮ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟನ್ನು ಐಸಿಸಿ ಕೂಡ ಶೇರ್​ ಮಾಡಿದೆ.

ಆ ಕಾಲಕ್ಕೆ ಭಾರತದಲ್ಲಿ ಇನ್ನೂ ಕ್ರಿಕೆಟ್​ ಅಷ್ಟಾಗಿ ಖ್ಯಾತಿ ಪಡೆದಿರಲಿಲ್ಲ. ಭಾರತ ತಂಡವೂ ಕೂಡ ಬಲಿಷ್ಠವಾಗಿರಲಿಲ್ಲ. ಕೇವಲ ಲೆಕ್ಕ ಭರ್ತಿಗೆ ಇದ್ದ ತಂಡ ಎಂದು ಎಲ್ಲರಿಂದಲೂ ಅಪಹಾಸ್ಯಕ್ಕೆ ಒಳಗಾಗಿತ್ತು. ಜತೆಗೆ ಭಾರತೀಯ ಆಟಗಾರರಿಗೂ ಇದೊಂದು ವಿದೇಶ ಪ್ರವಾಸ ಎಂಬ ಭಾವನೆ ಇದ್ದಿತ್ತು. ಆದರೆ ಲಂಡನ್​ನಲ್ಲಿ ನಡೆದದ್ದೇ ಬೇರೆ.

ಫೈನಲ್​ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್​ ಎದುರಾದಾಗ ಇಡೀ ವಿಶ್ವವೇ ಮತ್ತೊಮ್ಮೆ ವಿಂಡೀಸ್​ ಚಾಂಪಿಯನ್​ ಆಗಲಿದೆ ಎಂದು ಹೇಳಿದ್ದರು. ಆದರೆ, ಕಪಿಲ್​ದೇವ್​ ನೇತೃತ್ವದ ಭಾರತ ತಂಡ ಅಸಾಧಾರಣ ಪ್ರದರ್ಶನ ತೋರಿ ಹ್ಯಾಟ್ರಿಕ್​​ ಹಾದಿಯಲ್ಲಿದ್ದ ವಿಂಡೀಸ್​ ತಂಡವನ್ನು ಕಟ್ಟಿಹಾಕಿ ಇತಿಹಾಸ ನಿರ್ಮಿಸಿದರು.

ಇದನ್ನೂ ಓದಿ 1983 World Cup: ಕಪಿಲ್‌ ಪಡೆಯ ಏಕದಿನ ವಿಶ್ವಕಪ್‌ ವಿಜಯ ದಿವಸಕ್ಕೆ 40ರ ಸಂಭ್ರಮ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ 183 ರನ್​ಗಳಿಗೆ ಆಲೌಟ್​ ಆಯಿತು. ಸಣ್ಣ ಮೊತ್ತವನ್ನು ಬೆನ್ನಟ್ಟಿದ ವಿಂಡೀಸ್​ಗೆ ಛಲ ಬಿಡದ ಮದನ್​ಲಾಲ್​ ಮತ್ತು ಮೊಹಿಂದರ್​ ಅಮರ್​ನಾಥ್​(Mohinder Amarnath) ಉತ್ಕೃಷ್ಟ ಮಟ್ಟದ ಬೌಲಿಂಗ್​ ನಡೆಸಿ ತಲಾ 3 ವಿಕೆಟ್​ ಕೆಡವಿದರು. ಅಂತಿಮವಾಗಿ ಕೆರೆಬಿಯನ್ನರನ್ನು 140 ರನ್​​ಗೆ ಆಲೌಟ್​ ಮಾಡುವ ಮೂಲಕ 43 ರನ್​ಗಳಿಂದ ಗೆಲುವು ಸಾಧಿಸಿ ದೇಶಕ್ಕೆ ಮೊದಲ ಏಕದಿನ ವಿಶ್ವಕಪ್​ ತಂದುಕೊಟ್ಟರು. ನಾಯಕ ಕಪಿಲ್​ದೇವ್​ ಅವರು ಲಾರ್ಡ್ಸ್​ನಲ್ಲಿ ಕಪ್​ ಎತ್ತಿ ಭಾರತದ ವಿಜಯ ಪತಾಕೆ ಹಾರಿಸಿದ್ದರು.

ಅಂದಿನ ಕಪಿಲ್‌ ಪಡೆಯ ಓರ್ವ ಸದಸ್ಯ ಸಯ್ಯದ್‌ ಕಿರ್ಮಾನಿ ಹೇಳಿದಂತೆ “ನಮ್ಮ 1983ರ ವಿಶ್ವಕಪ್‌ ಗೆಲುವು ಮೊದಲ ಪ್ರೀತಿಯಂತೆ, ಯಾವತ್ತೂ ಮರೆಯಲಾಗದ್ದು” ನಿಜಕ್ಕೂ ಈ ಮಾತು ಇಂದಿಗೂ ಮರೆಯಲಾಗದಂತೆ ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದುಕೊಂಡಿದೆ.

Continue Reading

ಕ್ರಿಕೆಟ್

IND vs ENG: ಇಂಗ್ಲೆಂಡ್‌ ಎದುರು ಭಾರತಕ್ಕೆ ಸೇಡಿನ ಪಂದ್ಯ; ನಾಳೆ ದ್ವಿತೀಯ ಸೆಮಿಫೈನಲ್​

IND vs ENG: ಹಾಲಿ ಚಾಂಪಿಯನ್​ ಇಂಗ್ಲೆಂಡ್​ 2022ರಲ್ಲಿ ಅಡಿಲೇಡ್​ನಲ್ಲಿ ನಡೆದ ಟಿ20 ವಿಶ್ವಕಪ್​ ಸೆಮೀಸ್​ನಲ್ಲಿ ಭಾರತಕ್ಕೆ 10 ವಿಕೆಟ್​ಗಳ ಹೀನಾಯ ಸೋಲುಣಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅಪೂರ್ವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ.

VISTARANEWS.COM


on

IND vs ENG
Koo


ಗಯಾನಾ: ಲೀಗ್‌ ಮತ್ತು ಸೂಪರ್​-8 ಹಂತದಲ್ಲಿ ಆಡಿದ ಎಲ್ಲ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಟಿ20 ವಿಶ್ವಕಪ್‌(T20 World Cup 2024) ನಾಕೌಟ್‌ ಪ್ರವೇಶಿಸಿರುವ ಭಾರತ(IND vs ENG) ತಂಡದ ಮುಂದೀಗ ಸೇಡಿನ ಪಂದ್ಯವೊಂದು ಕಾದು ಕುಳಿತಿದೆ. ನಾಳೆ(ಗುರುವಾರ) ರಾತ್ರಿ ನಡೆಯಲಿರುವ ಸೆಮಿಫೈನಲ್‌(T20 World Cup 2024) ಮುಖಾಮುಖಿಯಲ್ಲಿ ರೋಹಿತ್​ ಶರ್ಮ ಪಡೆ ಬಲಿಷ್ಠ ಇಂಗ್ಲೆಂಡ್‌ ಸವಾಲನ್ನು ಎದುರಿಸಲಿದೆ.

ಹಾಲಿ ಚಾಂಪಿಯನ್​ ಇಂಗ್ಲೆಂಡ್​ 2022ರಲ್ಲಿ ಅಡಿಲೇಡ್​ನಲ್ಲಿ ನಡೆದ ಟಿ20 ವಿಶ್ವಕಪ್​ ಸೆಮೀಸ್​ನಲ್ಲಿ ಭಾರತಕ್ಕೆ 10 ವಿಕೆಟ್​ಗಳ ಹೀನಾಯ ಸೋಲುಣಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅಪೂರ್ವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ. ಇದರಲ್ಲಿ ರೋಹಿತ್​ ಬಳಗ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದೊಂದು ಕುತೂಹಲ. ದಿನದ ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಅಫಘಾನಿಸ್ತಾನ ತಂಡ ಸೆಣಸಾಟ ನಡೆಸಲಿದೆ.

ಅಡಿಲೇಡ್​ನಲ್ಲಿ ನಡೆದಿದ್ದ ಕಳೆದ ಟಿ20 ವಿಶ್ವಕಪ್​ ಸೆಮೀ ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ 6 ವಿಕೆಟ್​ಗೆ 168 ರನ್​ಗಳ ಸಾಧಾರಣ ಮೊತ್ತ​ ಪೇರಿಸಿ ಸವಾಲೊಡ್ಡಿತು. ಈ ಮೊತ್ತವನ್ನು ಇಂಗ್ಲೆಂಡ್​ 16 ಓವರ್​ಗಳಲ್ಲೇ ವಿಕೆಟ್​ ನಷ್ಟವಿಲ್ಲದೆ 170 ರನ್​ ಗಳಿಸಿ ಗೆದ್ದಿತ್ತು. ಜಾಸ್​ ಬಟ್ಲರ್​(80*) ಮತ್ತು ಅಲೆಕ್ಸ್​ ಹೇಲ್ಸ್​(86*) ಅಜೇಯ ಬ್ಯಾಟಿಂಗ್​ ಆರ್ಭಟದ ಮುಂದೆ ಭಾರತೀಯ ಬೌಲರ್​ಗಳು ಸಂಪೂರ್ಣ ಮಂಕಾದರು. ಭಾರತ ಪರ ವಿರಾಟ್​ ಕೊಹ್ಲಿ ಮತ್ತು ಹಾರ್ದಿಕ್​ ಪಾಂಡ್ಯ ಅರ್ಧಶತಕ ಬಾರಿಸಿದ್ದರು. ಆದರೆ ಈ ಬಾರಿ ಕೊಹ್ಲಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ವಿಫಲರಾಗಿದ್ದಾರೆ. 2 ಶೂನ್ಯ ಕೂಡ ಸುತ್ತಿದ್ದಾರೆ. ಎರಡಂಕಿ ಮೊತ್ತ ಪೇರಿಸಿದ್ದು ಒಮ್ಮೆ ಮಾತ್ರ.

ಇದನ್ನೂ ಓದಿ IND vs ENG: ಭಾರತ-ಇಂಗ್ಲೆಂಡ್​ ಸೆಮಿ ಕಾದಾಟಕ್ಕೆ ಮೀಸಲು ದಿನ ಇಲ್ಲ; ಪಂದ್ಯ ರದ್ದಾದರೆ ಯಾರಾಗಲಿದ್ದಾರೆ ವಿಜೇತರು?

ಮಳೆ ಬಂದರೆ ಭಾರತಕ್ಕೆ ಲಾಭ


ಪ್ರಾವಿಡೆನ್ಸ್​ ಸ್ಟೇಡಿಯಂನಲ್ಲಿ ನಡೆಯಲಿರುವ ಇತ್ತಂಡಗಳ ನಡುವಣ ಈ ಪಂದ್ಯಕ್ಕೆ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಪಂದ್ಯದ ಸಮಯದಲ್ಲಿ ಮಳೆ ಸುರಿಯುವ ಸಾಧ್ಯತೆ ಶೇ. 88ರಷ್ಟಿದೆ ಎಂದು ಎಚ್ಚರಿಕೆ ನೀಡಿದೆ. ಪಂದ್ಯ ರದ್ದಾದರೂ ಅಚ್ಚರಿ ಇಲ್ಲ ಎಂದು ಹೇಳಿದೆ. ಈ ಪಂದ್ಯಕ್ಕೆ ಮೀಸಲು ದಿನವಿಲ್ಲ. ಆದರೆ, ಪಂದ್ಯ ಮುಗಿಸಲು 250 ನಿಮಿಷಗಳ ಹೆಚ್ಚುವರಿ ಸಮಯವನ್ನು ಐಸಿಸಿ ನೀಡಿದೆ. ಒಂದು ವೇಳೆ ಪಂದ್ಯ ರದ್ದುಗೊಂಡರೆ ಭಾರತ ತಂಡ ಫೈನಲ್​ಗೇರಲಿದೆ. ಏಕೆಂದರೆ ಸೂಪರ್​-8 ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನ ಸಂಪಾದಿಸಿದೆ. ಇಂಗ್ಲೆಂಡ್​ ಸೂಪರ್​-8 ಅಂಕಪಟ್ಟಿಯಲ್ಲಿ 2ನೇ ಸ್ಥಾನ ಗಳಿಸಿತ್ತು. ಹೀಗಾಗಿ ಈ ಲಾಭ ಭಾರತಕ್ಕೆ ಲಭಿಸಲಿದೆ.

ಜೂನ್​ 29ಕ್ಕೆ ಬ್ರಿಜ್​ಟೌನ್​ನಲ್ಲಿ ಫೈನಲ್​ ಪಂದ್ಯ ನಡೆಯಲಿದೆ. ನಿಗದಿತ ದಿನದಂದು ಪಂದ್ಯ ಪೂರ್ಣಗೊಳ್ಳಲಿದ್ದರೆ. ಪಂದ್ಯ ಎಲ್ಲಿಗೆ ನಿಂತಿರುತ್ತದೆಯೇ ಅಲ್ಲಿಂದಲೇ ಮೀಸಲು ದಿನ ಅಂದರೆ ಜೂನ್​ 30 (ಭಾನುವಾರ) ನಡೆಯಲಿದೆ. ಫೈನಲ್​ನಲ್ಲೂ ಫಲಿತಾಂಶ ನಿರ್ಧಾರಕ್ಕೆ ಉಭಯ ತಂಡಗಳು ಕನಿಷ್ಠ 10 ಓವರ್​ ಆಡಬೇಕು. ಮೀಸಲು ದಿನವೂ ಮಳೆ ಅಡ್ಡಿಪಡಿಸಿದರೆ, ಫೈನಲ್​ಗೇರಿದ ಎರಡೂ ತಂಡಗಳನ್ನು ಜಂಟಿ ಚಾಂಪಿಯನ್​ ಎಂದು ಐಸಿಸಿ ಘೋಷಿಸಲಿದೆ.

Continue Reading

ಕ್ರೀಡೆ

Inzamam Ul Haq: ಭಾರತ ತಂಡದ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ ಮಾಡಿದ ಪಾಕ್​ ಮಾಜಿ ನಾಯಕ

Inzamam Ul Haq: ಪಾಕ್​ ತಂಡ ಈ ಬಾರಿ ಆಡಿದ ಟಿ20 ವಿಶ್ವಕಪ್​ ಪಂದ್ಯದಲ್ಲಿ ಕ್ರಿಕೆಟ್​ ಶಿಶು ಅಮೆರಿಕ ವಿರುದ್ಧವೂ ಹೀನಶಯವಾಗಿ ಸೋಲು ಕಂಡಿತ್ತು. ಆಡಿದ 4 ಪಂದ್ಯಗಳಲ್ಲಿ ಕೇವ 2 ಪಂದ್ಯ ಮಾತ್ರ ಗೆದ್ದು ಲೀಗ್​ ಹಂತದಿಂದಲೇ ನಿರ್ಗಮನ ಕಂಡಿತ್ತು. ಈ ಸೋಲು ಪಾಕ್​ನ ಮಾಜಿ ಆಟಗಾರರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

VISTARANEWS.COM


on

Inzamam Ul Haq
Koo

ಕರಾಚಿ: ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬ ಮಾತಿನಂತೆ ಪಾಕಿಸ್ತಾನದ ತಕರಾರು ಮುಗಿದಂತೆ ಕಾಣುತ್ತಿಲ್ಲ. ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯಿಂದ ಹೊರಬಿದ್ದಿರುವುದನ್ನು ಇನ್ನೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತೋರುತ್ತಿದೆ. ಪಾಕಿಸ್ತಾನದ ಮಾಜಿ ನಾಯಕ ಹಾಗೂ ಆಟಗಾರ ಇಂಜಮಾಮ್ ಉಲ್ ಹಕ್(Inzamam Ul Haq) ಅವರು ಭಾರತದ ತಂಡದ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ ಮಾಡಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ವಿಶ್ಲೇಷಣಾ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ವೇಳೆ ಇಂಜಮಾಮ್ ಉಲ್ ಹಕ್ ಈ ಆರೋಪ ಮಾಡಿದ್ದಾರೆ. ಇದೇ ಕಾರ್ಯಕ್ರಮದಲ್ಲಿದ್ದ ಸಲೀಂ ಮಲಿಕ್ ಅವರು ವೇಗಿ ಅರ್ಶ್​ದೀಪ್ ಸಿಂಗ್(Arshdeep Singh) ಅವರ ರಿವರ್ಸ್ ಸ್ವಿಂಗ್ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಆದರೆ, ಇಂಜಮಾಮ್ ಅವರು ಅರ್ಶ್​ದೀಪ್ ರಿವರ್ಸ್ ಸ್ವಿಂಗ್ ಬಗ್ಗೆ ಅನುಮಾನವಿದೆ ಎಂದು ಹೇಳಿದರು.

“15ನೇ ಓವರ್​ನಲ್ಲಿ ಅರ್ಶದೀಪ್​ ಸಿಂಗ್​ ಬೌಲಿಂಗ್​ ನಡೆಸುವ ವೇಳೆ ಚೆಂಡು ಹೆಚ್ಚು ಸ್ವಿಂಗ್​ ಆಗುತ್ತಿತ್ತು. ನಾನು ಗಮನಿಸಿದ ಹಾಗೆ ಈ ರೀತಿ ಚೆಂಡು ಏಕಾಏಕಿ ಸ್ವಿಂಗ್​ ಆಗಲು ಸಾಧ್ಯವಿಲ್ಲ. ನನ್ನ ಪ್ರಕಾರ ಭಾರತೀಯ ಆಟಗಾರರು 12 ಅಥವಾ 13ನೇ ಓವರ್​ನಲ್ಲಿ ಚೆಂಡಿಗೆ ಶೈನಿಂಗ್​ ಹಚ್ಚಿದಂತೆ ಕಾಣುತ್ತಿದೆ. ಅಂಪೈರ್​ಗಳು ಇದನ್ನು ಸೂಕ್ಷವಾಗಿ ಪರಿಗಣಿಸಬೇಕು. ಇಲ್ಲಿ ಯಾವುದೋ ಮೋಸದಾಟ ನಡೆದಂತಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ ಪಾಕ್​ ತಂಡದ ಸರಣಿ ಸೋಲಿನ ರಹಸ್ಯ ಬಯಲು ಮಾಡಿದ ಮಾಜಿ ನಾಯಕ

ಇಂಜಮಾಮ್ ಅವರ ಈ ಆರೋಪಕ್ಕೆ ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಸರಿಯಾದ ತಿಇರುಗೇಟು ನೀಡಿದ್ದಾರೆ. ನೀವು ಮಾಡುತ್ತಿರುವ ಈ ಆರೋಪ ಯಾವ ಕಾರಣಕ್ಕೆ ಎಂದು ಭಾರತೀಯರಿಗೆ ಮಾತ್ರವಲ್ಲ ಬೇರೆ ದೇಶದ ಕ್ರಿಕೆಟಿಗರಿಗು ತಿಳಿದಿದೆ. ಟೂರ್ನಿಯಿಂದ ಹೊರ ಬಿದ್ದರೂ ಕೂಡ ಕೊಂಕು ಬಯಸುವ ನಿಮ್ಮ ಈ ನರಿ ಬುದ್ದಿಯನ್ನು ಮೊದಲು ಬಿಟ್ಟು ಬಿಡಿ ಎಂದಿದ್ದಾರೆ.

ಪಾಕ್​ ತಂಡ ಈ ಬಾರಿ ಆಡಿದ ಟಿ20 ವಿಶ್ವಕಪ್​ ಪಂದ್ಯದಲ್ಲಿ ಕ್ರಿಕೆಟ್​ ಶಿಶು ಅಮೆರಿಕ ವಿರುದ್ಧವೂ ಹೀನಶಯವಾಗಿ ಸೋಲು ಕಂಡಿತ್ತು. ಆಡಿದ 4 ಪಂದ್ಯಗಳಲ್ಲಿ ಕೇವ 2 ಪಂದ್ಯ ಮಾತ್ರ ಗೆದ್ದು ಲೀಗ್​ ಹಂತದಿಂದಲೇ ನಿರ್ಗಮನ ಕಂಡಿತ್ತು. ಈ ಸೋಲು ಪಾಕ್​ನ ಮಾಜಿ ಆಟಗಾರರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಭಾರತದ ಬಿರುದ್ಧ ಇಲ್ಲ ಸಲ್ಲದ ಆರೋಪ ಮಾಡಲಾರಂಭಿಸಿದ್ದಾರೆ.

ಪಾಕಿಸ್ತಾನದ ಮಾಜಿ ಆಟಗಾರರು ಭಾರತೀಯ ಆಟಗಾರರ ಮೇಲೆ ಈ ರೀತಿಯ ಆರೋಪಗಳು ಮಾಡುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯ ವೇಳೆಯೂ ಇಂತಹ ಹಲವು ಆರೋಪಗಳನ್ನು ಮಾಡಿದ್ದರು. ಭಾರತೀಯ ಆಟಗಾರರು ಬೌಲಿಂಗ್​ ಮತ್ತು ಬ್ಯಾಟಿಂಗ್​ ನಡೆಸುವ ವೇಳೆ ಬೇರೆ ಬೆಂಡನ್ನು ಬಳಸುತ್ತಾರೆ, ಐಸಿಸಿ ಕೂಡ ಭಾರತಕ್ಕೆ ಬೆಂಬಲ ನೀಡುತ್ತಿದೆ ಎಂದು ಇಲ್ಲ ಸಲ್ಲದ ಆರೋಪಗಳನ್ನು ಮಾಡಿದ್ದರು.

Continue Reading

ಕ್ರೀಡೆ

Albania vs Spain: ಯುರೋ ಕಪ್​ನಲ್ಲಿ ನಾಕೌಟ್‌ ಹಂತಕ್ಕೇರಿದ ಸ್ಪೇನ್‌

Albania vs Spain: ಈಗಾಗಲೇ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದು ನಾಕೌಟ್‌ಗೆ ಅರ್ಹತೆಯನ್ನು ಪಡೆದಿರುವ ಪೋರ್ಚುಗಲ್‌ ತಂಡವು ‘ಎಫ್‌’ ಗುಂಪಿನ ಕೊನೆಯ ಪಂದ್ಯದಲ್ಲಿ ಗುರುವಾರ ಜಾರ್ಜಿಯಾ ತಂಡದ ಸವಾಲು ಎದುರಿಸಲಿದೆ. ಸ್ಟಾರ್‌ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಈ ಪಂದ್ಯದಲ್ಲಿ ಗೋಲು ಗಳಿಸಿದರೆ ಅತಿ ಹಿರಿಯ ಸ್ಕೋರರ್‌ ಎಂಬ ದಾಖಲೆ ಬರೆಯಲಿದ್ದಾರೆ.

VISTARANEWS.COM


on

Albania vs Spain
Koo

ಡಸೆಲ್‌ಡಾರ್ಫ್‌: ಹಾಲಿ ಆವೃತ್ತಿಯ ಯೊರೋ ಕಪ್(Euro 2024)​ ಫುಟ್ಬಾಲ್​ ಲೀಗ್​ನಲ್ಲಿ ಸ್ಪೇನ್‌(Albania vs Spain) ತಂಡ ನಾಕೌಟ್‌ ಹಂತಕ್ಕೆ ಮುನ್ನಡೆದಿದೆ. ‘ಬಿ’ ಗುಂಪಿನ ಪಂದ್ಯದಲ್ಲಿ ಅಲ್ಬೇನಿಯಾ ವಿರುದ್ಧ 1-0 ಅಂತರದ ಗೆಲುವು ಸಾಧಿಸಿ ಈ ಸಾಧನೆ ಮಾಡಿದೆ. ಇದೇ ಗುಂಪಿನಿಂದ ಹಾಲಿ ಚಾಂಪಿಯನ್​ ಇಟಲಿ(italy vs croatia) ಕೂಡ ನಾಕೌಟ್‌ ಹಂತಕ್ಕೆರಿದೆ.

11ನೇ ನಿಮಿಷದಲ್ಲಿ ಫೆರಾನ್ ಟೊರೆಸ್ ಗಳಿಸಿದ ಏಕೈಕ ಗೋಲು ಸ್ಪೇನ್‌ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು. ‘ಬಿ’ ಗುಂಪಿನಲ್ಲಿ ಆಡಿದ ಎಲ್ಲ ಪಂದ್ಯಗಳನ್ನು ಗೆದ್ದ ಸ್ಪೇನ್​ ಅಜೇಯವಾಗಿ ನಾಕೌಟ್‌ ಹಂತಕ್ಕೆ ಏರಿದ್ದು ನೋಡುವಾಗ ಈ ಬಾರಿಯ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗೋಚರಿಸಿದೆ. ಮೂರು ಬಾರಿ (1964, 2008, 2012) ಚಾಂಪಿಯನ್‌ ಆಗಿರುವ ಸ್ಪೇನ್‌ ತಂಡವು 2008ರ ಬಳಿಕ ಗುಂಪು ಹಂತದಲ್ಲಿ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದ ಸಾಧನೆ ಮಾಡಿತು.

ಸ್ಪೇನ್​ ವಿರುದ್ಧ ಸೋಲು ಕಂಡ ಅಲ್ಬೇನಿಯಾ ಆಡಿರುವ ಮೂರು ಪಂದ್ಯಗಳ ಪೈಕಿ ಒಂದರಲ್ಲಿ ಡ್ರಾ ಸಾಧಿಸಿ, ಮತ್ತೆರಡರಲ್ಲಿ ಸೋತು 1 ಅಂಕ ಪಡೆದು, ಟೂರ್ನಿಯಿಂದಲೇ ಹೊರಬಿದ್ದಿದೆ. ಸ್ಪೇನ್ ವಿರುದ್ಧ ಅಲ್ಬೇನಿಯಾ ಸೋತಿದ್ದರಿಂದ ಇಂಗ್ಲೆಂಡ್, ಫ್ರಾನ್ಸ್ ಮತ್ತು ನೆದರ್ಲೆಂಡ್ಸ್‌ ತಂಡಗಳು ತಮ್ಮ ಗುಂಪಿನ ಕೊನೆಯ ಪಂದ್ಯದ ಫಲಿತಾಂಶಕ್ಕೂ ಮುನ್ನವೇ ನಾಕೌಟ್‌ಗೆ ಅರ್ಹತೆಯನ್ನು ಖಚಿತಪಡಿಸಿಕೊಂಡಿವೆ.

ನಾಕೌಟ್‌ ಪ್ರವೇಶಿಸಿದ ಇಟಲಿ


‘ಬಿ’ ಗುಂಪಿನಿಂದ ಸ್ಪೇನ್​ ಮಾತ್ರವಲ್ಲದೆ ಹಾಲಿ ಚಾಂಪಿಯನ್‌ ಇಟಲಿ ಕೂಡ ನಾಕೌಟ್​ ಪ್ರವೇಶಿಸಿದೆ. ಕ್ರೊವೇಷಿಯಾದೊಂದಿಗೆ 1-1ರಿಂದ ಡ್ರಾ ಸಾಧಿಸಿದರೂ ಅಂಕ ಗಳಿಕೆಯಲ್ಲಿ ಮುಂದಿದ್ದ ಕಾರಣ ನಾಕೌಟ್‌ಗೆ ಅರ್ಹತೆ ಪಡೆಯಿತು. ಅಲ್ಬೇನಿಯಾ ವಿರುದ್ಧ 2-1ರಿಂದ ಗೆದ್ದಿದ್ದ ಇಟಲಿ ತಂಡ ಸ್ಪೇನ್‌ ಎದುರು ಸೋಲು ಅನುಭವಿಸಿತ್ತು. ಒಟ್ಟಾರೆ 4 ಅಂಕಗಳನ್ನು ಸಂಪಾದಿಸಿರುವ ಇಟಲಿ, ಗುಂಪಿನಲ್ಲಿ ಎರಡನೇ ಸ್ಥಾನ ಪಡೆದು ನಾಕೌಟ್​ ಪ್ರವೇಶಿಸಿದೆ.

ಇದನ್ನೂ ಓದಿ IND vs ENG: ಭಾರತ-ಇಂಗ್ಲೆಂಡ್​ ಸೆಮಿ ಕಾದಾಟಕ್ಕೆ ಮೀಸಲು ದಿನ ಇಲ್ಲ; ಪಂದ್ಯ ರದ್ದಾದರೆ ಯಾರಾಗಲಿದ್ದಾರೆ ವಿಜೇತರು?

ಅತ್ಯಂತ ರೋಚಕವಾಗಿ ಸಾಗಿದ ಈ ಪಂದ್ಯದಲ್ಲಿ ಲುಕಾ ಮಾಡ್ರಿಕ್ 55ನೇ ನಿಮಿಷದಲ್ಲಿ ಗೋಲು ಬಾರಿಸಿ ಕ್ರೊವೇಷಿಯಾಗೆ ಆರಂಭಿಕ ಮುನ್ನಡೆ ತಂದು ಕೊಟ್ಟರು. ಆದರೆ, ಪಂದ್ಯ ಮುಗಿಯಲು ಕೆಲವೇ ಕ್ಷಣಗಳು ಇರುವಾಗ (90+8ನೇ ನಿಮಿಷ) ಇಟಲಿಯ ಮಟ್ಟಿಯಾ ಜಕಾಗ್ನಿ ಯಾರೂ ಊಹಿಸದ ರೀತಿಯಲ್ಲಿ ಚೆಂಡನ್ನು ಗೋಲು ಪೆಟ್ಟಿಗೆಗೆ ಸೇರಿಸಿ ಪಂದ್ಯವನ್ನು ಸಮಬಲಗೊಳಿಸಿದರು.

ಗುರುವಾರ ಜಾರ್ಜಿಯಾ-ಪೋರ್ಚುಗಲ್‌ ಕಾದಾಟ


ಈಗಾಗಲೇ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದು ನಾಕೌಟ್‌ಗೆ ಅರ್ಹತೆಯನ್ನು ಪಡೆದಿರುವ ಪೋರ್ಚುಗಲ್‌ ತಂಡವು ‘ಎಫ್‌’ ಗುಂಪಿನ ಕೊನೆಯ ಪಂದ್ಯದಲ್ಲಿ ಗುರುವಾರ ಜಾರ್ಜಿಯಾ ತಂಡದ ಸವಾಲು ಎದುರಿಸಲಿದೆ. ಸ್ಟಾರ್‌ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಈ ಪಂದ್ಯದಲ್ಲಿ ಗೋಲು ಗಳಿಸಿದರೆ ಅತಿ ಹಿರಿಯ ಸ್ಕೋರರ್‌ ಎಂಬ ದಾಖಲೆ ಬರೆಯಲಿದ್ದಾರೆ.

Continue Reading
Advertisement
IRCTC
ದೇಶ20 mins ago

IRCTC: ಆನ್‌ಲೈನ್‌ನಲ್ಲಿ ರೈಲ್ವೇ ಟಿಕೆಟ್‌ ಬುಕ್ಕಿಂಗ್‌ ಮಾಡೋ ಮುನ್ನ ಹೊಸ ನಿಯಮದ ಬಗ್ಗೆ ಇರಲಿ ಗಮನ!

1983 World Cup
ಕ್ರೀಡೆ23 mins ago

1983 WC Win Anniversary: ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನ​ ಸವಿ ನೆನಪನ್ನು ವಿಂಡೀಸ್​ನಲ್ಲಿ ಕೇಕ್​ ಕತ್ತರಿಸಿ ಸಂಭ್ರಮಿಸಿದ ರವಿಶಾಸ್ತ್ರಿ, ಗವಾಸ್ಕರ್, ​ಬಿನ್ನಿ

Viral Video
Latest25 mins ago

Viral Video: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿ ಬೆರಗುಗೊಳಿಸಿದ ಅತ್ಯಂತ ಕಿರಿಯ ಸಂಸದೆ!

cm siddaramaiah water price hike
ಕರ್ನಾಟಕ30 mins ago

CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

Neha Gowda in saree with baby bump
ಸ್ಯಾಂಡಲ್ ವುಡ್31 mins ago

Neha Gowda: ಸೀರೆಯುಟ್ಟು ಸಿಂಪಲ್‌ ಆಗಿ ಗಂಡನ ಜತೆ ಪೋಸ್‌ ಕೊಟ್ಟ ಗರ್ಭಿಣಿ ನೇಹಾ ಗೌಡ!

Viral Video
Latest32 mins ago

Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

Lok Sabha Speaker
ದೇಶ33 mins ago

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Kaagada movie released on 5th July
ಕರ್ನಾಟಕ37 mins ago

Kannada New Movie: ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ “ಕಾಗದ” ಜುಲೈ 5ರಂದು ತೆರೆಗೆ

prajwal revanna case 4th
ಕ್ರೈಂ1 hour ago

Prajwal Revanna Case: ʼಪ್ರತಿ ದಿನ ಫೋನ್‌ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್‌ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?

Famous Serial Actress kasthuri shankar half naked photos leaked
ಟಾಲಿವುಡ್1 hour ago

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌