Kannada New Movie: ನಿರ್ದೇಶಕ ಸಂದೇಶ ಶೆಟ್ಟಿ ಆಜ್ರಿ ಇದೀಗ `ಗುಂಮ್ಟಿ' ಅವತಾರದಲ್ಲಿ! - Vistara News

ಸ್ಯಾಂಡಲ್ ವುಡ್

Kannada New Movie: ನಿರ್ದೇಶಕ ಸಂದೇಶ ಶೆಟ್ಟಿ ಆಜ್ರಿ ಇದೀಗ `ಗುಂಮ್ಟಿ’ ಅವತಾರದಲ್ಲಿ!

Kannada News Movie: ಇನ್ನು ‘ಗುಂಮ್ಟಿ’ ಸಿನಿಮಾದಲ್ಲಿ ಕರ್ನಾಟಕದ ಕರಾವಳಿ ತೀರದ ʻಕುಡುಬಿʼ ಜನಾಂಗದ ಕಥೆಯೊಂದು ತೆರೆಮೇಲೆ ಅನಾವರಣವಾಗಲಿದೆ. ಕುಡುಬಿ ಜನಾಂಗದ ಸಂಪ್ರದಾಯ, ಆಚಾರ-ವಿಚಾರ, ಬದುಕು ಮತ್ತು ಆಧುನಿಕತೆಯ ನಡುವಿನ ಸಂಘರ್ಷವನ್ನು ‘ಗುಂಮ್ಟಿ’ ಸಿನಿಮಾದಲ್ಲಿ ಮನಮುಟ್ಟುವಂತೆ ಹೇಳಲು ಹೊರಟಿದೆ ಚಿತ್ರತಂಡ.

VISTARANEWS.COM


on

Kannada New Movie Gumti new post
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನಿಮಾಗಳನ್ನು (Kannada New Movie) ನಿರ್ದೇಶಿಸಿ ಕಂಟೆಂಟ್ ಸಿನಿಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶ ಶೆಟ್ಟಿ ಆಜ್ರಿ, ಈ ಬಾರಿ ಮತ್ತೊಂದು ಕಂಟೆಂಟ್ ಆಧಾರಿತ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದ್ದಾರೆ. ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ತಮ್ಮ ಮೂರನೇ ಸಿನಿಮಾಕ್ಕೆ ‘ಗುಂಮ್ಟಿ’ ಎಂದು ಹೆಸರಿಟ್ಟಿದ್ದಾರೆ. ಈ ಸಿನಿಮಾದಲ್ಲಿ ಸಂದೇಶ್ ಶೆಟ್ಟಿ ತೆರೆಮೇಲೆ ನಾಯಕನಾಗಿ, ತೆರೆಹಿಂದೆ ನಿರ್ದೇಶಕನಾಗಿ ‘ಡಬಲ್ ರೋಲ್’ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನು ‘ಗುಂಮ್ಟಿ’ ಸಿನಿಮಾದಲ್ಲಿ ಕರ್ನಾಟಕದ ಕರಾವಳಿ ತೀರದ ʻಕುಡುಬಿʼ ಜನಾಂಗದ ಕಥೆಯೊಂದು ತೆರೆಮೇಲೆ ಅನಾವರಣವಾಗಲಿದೆ. ಕುಡುಬಿ ಜನಾಂಗದ ಸಂಪ್ರದಾಯ, ಆಚಾರ-ವಿಚಾರ, ಬದುಕು ಮತ್ತು ಆಧುನಿಕತೆಯ ನಡುವಿನ ಸಂಘರ್ಷವನ್ನು ‘ಗುಂಮ್ಟಿ’ ಸಿನಿಮಾದಲ್ಲಿ ಮನಮುಟ್ಟುವಂತೆ ಹೇಳಲು ಹೊರಟಿದೆ ಚಿತ್ರತಂಡ.

ಈಗಾಗಲೇ ಸದ್ದಿಲ್ಲದೆ ಉಡುಪಿ, ಕುಂದಾಪುರ, ಶಿರಸಿ, ಬೆಳಗಾವಿ, ಮಹಾರಾಷ್ಟ್ರದ ಸೋಲಾಪುರ ಹೀಗೆ ಕರಾವಳಿ-ಮಲೆನಾಡು ಮತ್ತು ಪಶ್ಚಿಮ ಘಟ್ಟದ ಸುತ್ತಮುತ್ತ ಸುಮಾರು 25ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರತಂಡ ‘ಗುಂಮ್ಟಿ’ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿದೆ. ಇದೀಗ ‘ಗುಂಮ್ಟಿ’ ಸಿನಿಮಾದ ಚಿತ್ರೀಕರಣ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ಇನ್ನು ಎರಡು-ಮೂರು ತಿಂಗಳಿನಲ್ಲಿ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ.

ಇದನ್ನೂ ಓದಿ: Kannada New Movie: ʻಸಂಭವಾಮಿ ಯುಗೇ ಯುಗೇʼ ಚಿತ್ರದ ಮೊದಲ ಹಾಡು ರಿಲೀಸ್‌ ಮಾಡಿದ ನಟಿ ಶ್ರುತಿ ಹರಿಹರನ್!

ಕನ್ನಡ ಸೇರಿದಂತೆ ಮಲಯಾಳಂ ಸಿನಿಮಾದಲ್ಲೂ ಕೂಡ ಸಂದೇಶ್ ಶೆಟ್ಟಿ ಅವರು ಅಭಿನಯಿಸಿದ್ದಾರೆ. ‘ತಸ್ಮೈ ಪ್ರೊಡಕ್ಷನ್ಸ್’ ಮತ್ತು ‘ಜ್ಯೋತಿ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ಜಂಟಿಯಾಗಿ ನಿರ್ಮಾಣವಾಗುತ್ತಿರುವ ‘ಗುಂಮ್ಟಿ’ ಸಿನಿಮಾವನ್ನು ವಿಕಾಸ್ ಎಸ್. ಶೆಟ್ಟಿ ನಿರ್ಮಿಸುತ್ತಿದ್ದಾರೆ.

ಸಿನಿಮಾದಲ್ಲಿ ನಾಯಕ ಸಂದೇಶ್ ಶೆಟ್ಟಿ ಆಜ್ರಿ ಅವರಿಗೆ ವೈಷ್ಣವಿ ನಾಡಿಗ್ ಹಾಗೂ ನೇಹಾ ಗೌಡ ಜೋಡಿಯಾಗಿದ್ದಾರೆ. ,ಉಳಿದಂತೆ ರಂಜನ್ ಛತ್ರಪತಿ, ಕರಣ್ ಕುಂದರ್, ಯಶ್ ಆಚಾರ್ಯ, ಪ್ರಭಾಕರ ಕುಂದರ್, ರಘು ಪಾಂಡೇಶ್ವರ, ಚೇತನ ನೈಲಾಡಿ, ಚಿತ್ರಕಲಾ, ನೂರ್ ಅಹ್ಮದ್, ಸ್ವರಾಜ್ ಲಕ್ಷ್ಮಿ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ‘ಗುಂಮ್ಟಿ’ ಸಿನಿಮಾ ಅನೀಶ್ ಡಿಸೋಜಾ ಕ್ಯಾಮರದ ಕೈಚಳಕದಲ್ಲಿ ಮೂಡಿ ಬಂದಿದ್ದು, ಸಿನಿಮಾಕ್ಕೆ ಮೋಹನ್ ಸಂಗೀತ ಸಂಯೋಜಿಸಿದ್ದಾರೆ.

‘ಗುಂಮ್ಟಿ’ ಸಿನಿಮಾಕ್ಕೆ ಶಿವರಾಜ್ ಮೇಹು ಸಂಕಲನವಿದೆ. ‘ಯುಗಾದಿ’ ಹಬ್ಬದ ಸಂದರ್ಭದಲ್ಲಿ ‘ಗುಂಮ್ಟಿ’ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಪೋಸ್ಟರ್ ಬಿಡುಗಡೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ‘ಗುಂಮ್ಟಿ’ ಫಸ್ಟ್ ಲುಕ್ ಮತ್ತು ಟೈಟಲ್ ಪೋಸ್ಟರ್ ಸಿನಿಪ್ರಿಯರ ಗಮನ ಸೆಳೆಯುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

Actor Darshan: `ದರ್ಶನ್‌’ ಫುಲ್‌ ಟೈಟ್‌ ಆದಾಗಲೇ ಅಗ್ರೆಸಿವ್‌ ಆಗೋದು‌ ಎಂದ ಭಾವನಾ ಬೆಳಗೆರೆ!

Actor Darshan: ಕೊಲೆ ಕೇಸ್‌ ಆದ ಬಳಿಕ ರೇಣುಕಾಸ್ವಾಮಿ ನಿವಾಸಕ್ಕೆ ರವಿ ಬೆಳಗೆರೆ ಪುತ್ರಿ ಭಾವನಾ ಬೆಳಗೆರೆ ಭೇಟಿ ನೀಡಿ, ಮೃತ ರೇಣುಕಾ ಸ್ವಾಮಿಯ ಪತ್ನಿ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಆದರೀಗ ವಿಸ್ತಾರ ನ್ಯೂಸ್‌ನಲ್ಲಿ ಭಾವನಾ ಬೆಳಗೆರೆ ಅವರು ʻಕುಡಿದಾಗ ಮಾತ್ರ ದರ್ಶನ್‌ ಅಗ್ರೆಸ್ಸಿವ್‌ ಆಗಿ ಮಾತಾಡಡುತ್ತಾರೆ. ಹಾಗೇ ಈ ಕೃತ್ಯ ಕುಡಿದಾಗಲೇ ಮಾಡಿರಬಹುದುʼʼಎಂದು ಹೇಳಿಕೆ ನೀಡಿದ್ದಾರೆ.

VISTARANEWS.COM


on

Actor Darshan Full aggressive mode while he drunk
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ ಆದ ಬಳಿಕ ರೇಣುಕಾಸ್ವಾಮಿ ನಿವಾಸಕ್ಕೆ ರವಿ ಬೆಳಗೆರೆ ಪುತ್ರಿ ಭಾವನಾ ಬೆಳಗೆರೆ ಭೇಟಿ ನೀಡಿ, ಮೃತ ರೇಣುಕಾ ಸ್ವಾಮಿಯ ಪತ್ನಿ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಮಾತ್ರವಲ್ಲ ಹಲವು ಮಾಧ್ಯಮಗಳಿಗೆ ಈ ಬಗ್ಗೆ ಹೇಳಿಕೆ (Actor Darshan) ನೀಡಿದ್ದಾರೆ. ಆದರೀಗ ವಿಸ್ತಾರ ನ್ಯೂಸ್‌ನಲ್ಲಿ ಭಾವನಾ ಬೆಳಗೆರೆ ಅವರು ʻಕುಡಿದಾಗ ಮಾತ್ರ ದರ್ಶನ್‌ ಅಗ್ರೆಸ್ಸಿವ್‌ ಆಗಿ ಮಾತಾಡಡುತ್ತಾರೆ. ಹಾಗೇ ಈ ಕೃತ್ಯ ಕುಡಿದಾಗಲೇ ಮಾಡಿರಬಹುದುʼʼಎಂದು ಹೇಳಿಕೆ ನೀಡಿದ್ದಾರೆ.

ಭಾವನಾ ಬೆಳಗೆರೆ ಮಾತನಾಡಿ ʻʻದರ್ಶನ್‌ ಅವರು ಕುಡಿದು ಮಾತನಾಡುವಾಗ ಅಗ್ರೆಸಿವ್‌ ಆಗಿ ಮಾತಾಡ್ತಾರೆ. ಇಲ್ಲ ಅಂದರೆ ಆರಾಮಾಗಿ ಮಾತನಾಡುತ್ತಾರೆ. ಪ್ರತಿ ಬಾರಿ ಮಾತನಾಡುವಾಗ ಅಲ್ವಾ! ಎಂಬ ಉತ್ತರಕ್ಕೆ ಕಾಯುತ್ತಾರೆ. ಮಿಕ್ಕಿದ ದಿನದಲ್ಲಿ ಕ್ಯಾಮೆರಾಗೆ ಅಟ್ಯಾಕ್‌ ಮಾಡಲು ಬರುತ್ತಾರೆ. ಕುಡಿದಿದ್ದಾಗ ಯಾರು ಏನೇ ಹೇಳಿದ್ದರೂ ಒಪ್ಪಿಕೊಳ್ಳಲ್ಲ. ಇಂದು ನಾನು ತಂದೆಯವರೆ ಹಿಸ್ಟರಿ ಇಟ್ಟುಕೊಂಡು ಮಾತಾಡ್ತಾ ಇಲ್ಲ. ನನ್ನ ಸ್ವತಃ ಅಣುಭವ ಹಂಚಿಕೊಳ್ಳುತ್ತಿರುವೆʼʼಎಂದರು.

ಇದನ್ನೂ ಓದಿ: ‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

ʻʻಆಗಿನ ಕಾಲದ ನಟರನ್ನು ನಾವು ಪೂಜಿಸುತ್ತಿದ್ದೇವು. ಅಣ್ಣಾವ್ರ ಆಗಲಿ ಹಲವು ನಟರು ಇಷ್ಟವಾಗುತ್ತಿದ್ದರು. ಆದರೆ ಆಗ ಅಭಿಮಾನಿಗಳ ನಡುವೆ ಜಿದ್ದಾ ಜಿದ್ದಿ ಇರಲಿಲ್ಲ. ಆದರೆ ಈಗ ದರ್ಶನ್‌ ಅಥವಾ ಅಪ್ಪು, ಸುದೀಪ್‌ ಈ ರೀತಿ ಅಭಿಮಾನಿಗಳು ಮಾತನಾಡಲು ಶುರು ಮಾಡಿದ್ದಾರೆ. ಮುಂಚೆ ಎಲ್ಲರೂ ಒಟ್ಟಿಗೆ ನಿಂತು ಬೆಳೆಸುತ್ತಿದ್ದರು. ಆದರೀಗ ಒಬ್ಬರ ಫ್ಯಾನ್ಸ್‌ ಇನ್ನೊಬ್ಬರ ಸಿನಿಮಾ ಕೂಡ ನೋಡುತ್ತಿಲ್ಲʼʼಎಂದರು.

ನಮ್ಮ ತಂದೆ ಅವತ್ತು ಬುದ್ಧಿ ಹೇಳಿದ್ದೇ ತಪ್ಪಾ?

ʻʻನನ್ನ ತಂದೆ ದರ್ಶನ್‌ ಅವರಿಗೆ ವಿಜಯಲಕ್ಷ್ಮಿ ಅವರನ್ನು ಹೊಡೆಯಬೇಡ ಎಂದಿದ್ದಾಗ, ದರ್ಶನ್‌ ನನ್ನ ಹೆಂಡತಿ ಅವಳು ಹೊಡತ್ತೀನಿ, ನೀನು ಯಾರು ಎಂದು ಕೇಳಿದ್ದರು. ಆದರೆ ನನ್ನ ತಂದೆ ಬುದ್ಧಿ ಮಾತು ಹೇಳಿದ್ದರು. ಕುಡಿದಾಗ ಮಾತ್ರ ದರ್ಶನ್‌ ಹೀಗೆ. ಆದರೆ ಬೇರೆ ಸಮಯದಲ್ಲಿ ತುಂಬ ಸಾಫ್ಟ್‌. ಈ ಕೃತ್ಯ ಆದಾಗ ಅವರು ಕುಡಿದಾಗಲೇ ಮಾಡಿರೋದು. ಆದರೆ ಈಗ ಕಾನೂನು ಒಂದೇ. ಕುಡಿದು ಮಾಡಿದೆ ಅಂತ ಕ್ಷಮೆ ಏನು ಕಡಿಮೆ ಆಗಲ್ಲ. ಆದರೆ ದರ್ಶನ್‌ ಯಾವಾಗ ಈ ರೀತಿಯ ಗೂನವನ್ನು ಸರಿ ಮಾಡ್ಕೋತ್ತಾರೆ? ಆದರೆ ಮುಂದೆ ಏನಾಗುತ್ತೆ ಎನ್ನುವುದು ಗೊತ್ತಿಲ್ಲʼʼಎಂದರು.

ರೇಣುಕಾ ಸ್ವಾಮಿ ಚಿತ್ರದುರ್ಗದವರಾಗಿದ್ದು ಬಡ ಮಧ್ಯಮ ಕುಟುಂಬದವರಾಗಿದ್ದಾರೆ. ಕಳೆದ ವರ್ಷ ಇದೇ ತಿಂಗಳು ಮದುವೆಯಾಗಿದ್ದ ರೇಣುಕಾ ಸ್ವಾಮಿಯ ಪತ್ನಿ ಐದು ತಿಂಗಳ ಗರ್ಭಿಣಿ. ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಸ್ವಾಮಿಯನ್ನು ಶನಿವಾರ ಅಪಹರಣ ಮಾಡಿದ್ದ ನಟ ದರ್ಶನ್ ಸಹಚರರು ಪಟ್ಟಣಗೆರೆಯ ಶೆಡ್​ನಲ್ಲಿ ಕೂಡಿಹಾಕಿ ಹೊಡೆದು, ಚಿತ್ರಹಿಂಸೆ ನೀಡಿ ಕೊಲೆ ಮಾಡಿ, ಚರಂಡಿಗೆ ಎಸಗಿ ಹೋಗಿದ್ದರು.

Continue Reading

ಸ್ಯಾಂಡಲ್ ವುಡ್

Tharun Sudhir: ದರ್ಶನ್‌ ತಮಾಷೆಯಿಂದಲೇ ಹುಟ್ಟಿತು ತರುಣ್‌- ಸೋನಲ್‌ ಪ್ರೀತಿ? ಇಬ್ಬರ ಲವ್ ಸ್ಟೋರಿ ಶುರುವಾಗಿದ್ದೇಗೆ?

Tharun Sudhir: ಚೌಕ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ ಮುಂದೆ ಒಂದರ ಹಿಂದೆಯಂತೆ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಇದೀಗ ತರುಣ್ 4ನೇ ಸಿನಿಮಾ ತಯಾರಿಯಲ್ಲಿದ್ದಾರೆ. ಖಳನಟ ಸುಧೀರ್ ಕಿರಿಯಪುತ್ರ ತರುಣ್ ಮದುವೆ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿವೆ. ಈಗಾಗಲೇ ತರುಣ್‌ ಅವರ ಮದುವೆ ಫಿಕ್ಸ್‌ ಆಗಿದ್ದು, ಎರಡು ತಿಂಗಳಲ್ಲಿ ಮದುವೆ ಫಿಕ್ಸ್‌ ಎನ್ನುವ ವದಂತಿ ಹಬ್ಬಿದೆ.

VISTARANEWS.COM


on

Tharun Sudhir and sonal monteiro love story support By Darshan
Koo

ಬೆಂಗಳೂರು: ನಟಿ ಸೋನಾಲ್ ಮಂಥೆರೊ (sonal monteiro) ಹಾಗೂ ನಿರ್ದೇಶಕ ತರುಣ್ ಸುಧೀರ್ (Tharun Sudhir) ಮದುವೆಯಾಗುವುದು ಬಹುತೇಕ ಫಿಕ್ಸ್‌ ಎನ್ನಲಾಗುತ್ತಿದೆ. ತರುಣ್ ಸುಧೀರ್ ತಾಯಿ ಮಾಲತಿ ಸುಧೀರ್ ಈ ಮದುವೆ ವಿಚಾರವನ್ನು ಖಚಿತಪಡಿಸಿದ್ದಾರೆ ಎಂದು ವರದಿಯಾಗಿದೆ. ಶೀಘ್ರದಲ್ಲೇ ಸುದ್ದಿಗೋಷ್ಠಿ ನಡೆಸಿ ಜೋಡಿ ಅಧಿಕೃತವಾಗಿ ಹೇಳಿಕೆ ನೀಡಿಲಿದೆ ಎನ್ನಲಾಗಿದೆ. ‘ರಾಬರ್ಟ್’ ಚಿತ್ರದಲ್ಲಿ ಸೋನಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ತರುಣ್- ಸೋನಲ್ ನಡುವೆ ಪ್ರೀತಿ ಹುಟ್ಟಿತ್ತು ಎಂದು ಹೇಳಲಾಗುತ್ತಿದೆ. ಇನ್ನು ದರ್ಶನ್‌ ಕೂಡ ಆಗಾಗ ತರುಣ್‌ಗೆ ಮದುವೆ ಮಾಡಿಸಬೇಕು ಎನ್ನುತ್ತಿದ್ದರಂತೆ. ಹಾಗಾಗಿ ಶೂಟಿಂಗ್‌ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ ರೇಗಿಸುತ್ತಿದ್ದರು, ಇದೇ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಮೂಡಿರಬಹುದು ಎನ್ನಲಾಗಿದೆ.

ತರುಣ್ ನಿರ್ದೇಶನದ ‘ರಾಬರ್ಟ್’ ಚಿತ್ರದಲ್ಲಿ ರಾಘವ ವಿನೋದ್ ಪ್ರಭಾಕರ್ ಜೋಡಿ ತನು ಆಗಿ ಸೋನಲ್ ಮಿಂಚಿದ್ದರು. ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಮೊದಲಿಗೆ ತುಳು ಸಿನಿಮಾಗಳಲ್ಲಿ ನಟಿಸಿದ್ದರು. ‘ಅಭಿಸಾರಿಕೆ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದರು. ಇದೀಗ ಈ ಜೋಡಿ ಸಪ್ತಪದಿ ತುಳಿಯಲಿದೆ ಎನ್ನಲಾಗಿದೆ. ತರುಣ್‌ ಹಾಗೂ ಸೋನಲ್‌ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

‘ಚೌಕ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ ಮುಂದೆ ಒಂದರ ಹಿಂದೆಯಂತೆ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಇದೀಗ ತರುಣ್ 4ನೇ ಸಿನಿಮಾ ತಯಾರಿಯಲ್ಲಿದ್ದಾರೆ. ಖಳನಟ ಸುಧೀರ್ ಕಿರಿಯಪುತ್ರ ತರುಣ್ ಮದುವೆ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿವೆ. ಈಗಾಗಲೇ ತರುಣ್‌ ಅವರ ಮದುವೆ ಫಿಕ್ಸ್‌ ಆಗಿದ್ದು, ಎರಡು ತಿಂಗಳಲ್ಲಿ ಮದುವೆ ಫಿಕ್ಸ್‌ ಎನ್ನುವ ವದಂತಿ ಹಬ್ಬಿದೆ.

ಇದನ್ನೂ ಓದಿ: Tharun Sudhir: ಸೋನಲ್ ಜತೆ `ತರುಣ್ ಸುಧೀರ್‌’ಗೆ ಕೂಡಿಬಂತು ಕಂಕಣಭಾಗ್ಯ?

ಎಕ್ಸ್‌ಕ್ಯೂಸ್‌ಮಿ’ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದರು. ‘ರ್ಯಾಂಬೊ’ ಚಿತ್ರದ ಸಹ ನಿರ್ದೇಶಕರಾಗಿ ಕೆಲಸ ಮಾಡಿ ತರುಣ್ ‘ಚೌಕ’ ಚಿತ್ರದಿಂದ ನಿರ್ದೇಶಕರಾದರು. ತರುಣ್‌ ಹಾಗೂ ಸೋನಲ್‌ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಅಗಸ್ಟ್‌ 10ಕ್ಕೆ ತರುಣ್‌ ಅವರ ಮದುವೆ ಎನ್ನಲಾಗಿದೆ.

ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಕಾಲೇಜು ದಿನಗಳಲ್ಲೇ ಮಾಡೆಲಿಂಗ್ ಆರಂಭಿಸಿದ್ದರು. ‘ಎಕ್ಕಾ ಸಕ್ಕಾ’ ಎನ್ನುವ ತುಳು ಚಿತ್ರದಲ್ಲಿ ಮೊದಲಿಗೆ ನಟಿಸಿದರು. ಬಳಿಕ ಮತ್ತೆರಡು ತುಳು ಸಿನಿಮಾ ಅವಕಾಶ ಸಿಕ್ಕಿತ್ತು. ನಂತರ ‘ಅಭಿಸಾರಿಕ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು.

‘ಎಂಎಲ್‌ಎ’, ‘ಮದುವೆ ದಿಬ್ಬಣ’, ‘ಪಂಚತಂತ್ರ’, ‘ಡೆಮೊ ಪೀಸ್’ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಸೋನಲ್ ಮಿಂಚಿದರು.ರಾಬರ್ಟ್’ ಬಳಿಕ ‘ಶಂಭೋ ಶಿವ ಶಂಕರ’, ‘ಗರಡಿ’, ‘ಶುಗರ್ ಫ್ಯಾಕ್ಟರಿ’ ಸಿನಿಮಾಗಳಲ್ಲಿ ಸೋನಲ್ ನಟಿಸಿದ್ದಾರೆ. ‘ಬುದ್ಧಿವಂತ-2’ ಹಾಗೂ ‘ಮಾರ್ಗರೆಟ್ ಲವರ್ ಆಫ್ ರಾಮಾಚಾರಿ’ ಸಿನಿಮಾಗಳಲ್ಲಿ ನಟಿಸಿದ್ದು ಇನ್ನಷ್ಟೇ ಈ ಸಿನಿಮಾಗಳು ತೆರೆಗೆ ಬರಬೇಕಿದೆ.

Continue Reading

ಸ್ಯಾಂಡಲ್ ವುಡ್

‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Actor Darshan: ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ (Actor Darshan) ಮತ್ತು ಆತನ ಸಹಚರ ಪ್ರದೋಷ್‌ ಬಗ್ಗೆ ಮತ್ತೊಂದು ಕುತೂಹಲಕಾರಿ ವಿಚಾರ ಬೆಳಕಿಗೆ ಬಂದಿದೆ. ಇಬ್ಬರ ಬಳಿಯೂ ಪರವಾನಗಿ ಹೊಂದಿದ ಪಿಸ್ತೂಲ್‌ಗಳಿದ್ದು Licenced Pistol), ಲೋಕಸಭೆ ಚುನಾವಣೆ (Lok Sabha Election 2024) ವೇಳೆ ಇಬ್ಬರೂ ಅವುಗಳನ್ನು ಪೊಲೀಸರ ಬಳಿ ಠೇವಣಿ (deposit) ಇರಿಸಿರಲಿಲ್ಲ ಎಂಬುದು ಗೊತ್ತಾಗಿದೆ. ಇದೀಗ ಅವುಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.

VISTARANEWS.COM


on

Actor Darshan support by anchor hemalatha
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ (Actor Darshan) ಹತ್ಯೆಯಲ್ಲಿ ಪವಿತ್ರಾ ಗೌಡ ಹಾಗೂ ದರ್ಶನ್​ 14ದಿನಗಳ ವರೆಗೆ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಹಲವರು ನಟನ ಬೆಂಬಲಕ್ಕೆ ನಿಂತಿದ್ದರು. ನಟಿ ಸಂಜನಾ ಗಲ್ರಾನಿ ಅವರು ಕೂಡ ಸ್ಪಷ್ಟ ಅಭಿಪ್ರಾಯ ನೀಡಿ ದರ್ಶನ್ ತೂಗುದೀಪ ಬೆಂಬಲಕ್ಕೆ ನಿಂತಿದ್ದರು. ಇದರ ಬೆನ್ನಲ್ಲೇ ಕನ್ನಡದ ಖ್ಯಾತ ನಿರೂಪಕಿ ಹೇಮಾಲತಾ ತಮ್ಮ ಇನ್‌ಸ್ಟಾ ಖಾತೆಯಲ್ಲಿ ದರ್ಶನ್‌ ಜೊತೆಗಿನ ಫೋಟೋ ಹಂಚಿಕೊಂಡು ಮೃತ ರೇಣುಕಾಸ್ವಾಮಿಯನ್ನು ಹೀರೋ ಮಾಡುವುದನ್ನು ನಿಲ್ಲಿಸಿ ಎಂದು ಬರೆದುಕೊಂಡಿದ್ದಾರೆ.

ನಿರೂಪಕಿ ಹೇಮಾಲತಾ ಪೋಸ್ಟ್‌ನಲ್ಲಿ ʻʻಸಾವಿರ ಜನ ಸಾವಿರ ಮಾತನಾಡಲಿ.. ಒಮ್ಮೆ ಬೆಳೆದ ಸ್ನೇಹಕ್ಕೆ ಕಡಲಿನಸ್ಟಿರುವ ಪ್ರೀತಿಗೆ ನಾವೆಲ್ಲರೂ ಋಣಿಗಳೇ.. ಸ್ನೇಹಾವೆಂಬ ಸಂಕೋಲೆಯಲಿ ಒಮ್ಮೆ ಸಿಕ್ಕಿಕೊಂಡರೆ ಕೊಂಡಿ ಕಳಚುವುದಿಲ್ಲ…
ಅಂದಿಗೂ ಇಂದಿಗೂ ಎಂದೆಂದಿಗೂ ಮರೆಯುವುದಿಲ್ಲ, ಬಿಡುವುದಿಲ್ಲ, ಬಿಟ್ಟುಕೊಡುವುದಿಲ್ಲ. ಈ ಘಟನೆಗೆ ಏನು ಹೇಳಬೇಕು ಎಂದು ತಿಳಿಯುತ್ತಿಲ್ಲ, ಕಾನೂನಿನ ಮುಖಾಂತರ ಅಂತ್ಯವನ್ನಾಡಿ ಎಲ್ಲಾ ಕಳಂಕವನ್ನು ತೊಳೆದುಕೊಂಡು ಹೊರಗೆ ಬನ್ನಿ. ನಿಮ್ಮ ಮೇಲಿರುವ ಪ್ರೀತಿ ಗೌರವ ಎಂದಿಗೂ ಕಮ್ಮಿ ಆಗುವುದಿಲ್ಲ. ಅಲ್ಲದೇ ಕೊಲೆಯಾಗಿರುವ ರೇಣುಕಾಸ್ವಾಮಿಯನ್ನು ಹೀರೋ ಎನ್ನುವಂತೆ ಬಿಂಬಿಸಬೇಡಿʼʼ ಎಂದು ನಿರೂಪಕಿ ಹೇಮಾಲತಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಇನ್ನು ಈ ಹಿಂದೆ ಬಿಗ್‌ಬಾಸ್‌ ಸ್ಪರ್ಧಿ ಇಶಾನಿ ದರ್ಶನ್‌ ಜೊತೆಗಿನ ಫೋಟೋ ಹಂಚಿಕೊಂಡು, ದರ್ಶನ್ ಸರ್ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಎಂದಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಇಶಾನಿ, ನಿಜಕ್ಕೂ ಇದು ಅಘಾತಕಾರಿ ಸುದ್ದಿ. ಒಬ್ಬ ಅಣ್ಣನ ರೂಪದಲ್ಲಿ ನಾನು ಕಂಡ ದರ್ಶನ್ ಸರ್ ನಿಜಕ್ಕೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಕೇಳಿದಾಗ ನಂಬಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದರ್ಶನ್‌, ಪ್ರದೋಷ್‌ನಿಂದ ಮೂರು ಪಿಸ್ತೂಲ್‌ ವಶಕ್ಕೆ

ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ (Actor Darshan) ಮತ್ತು ಆತನ ಸಹಚರ ಪ್ರದೋಷ್‌ ಬಗ್ಗೆ ಮತ್ತೊಂದು ಕುತೂಹಲಕಾರಿ ವಿಚಾರ ಬೆಳಕಿಗೆ ಬಂದಿದೆ. ಇಬ್ಬರ ಬಳಿಯೂ ಪರವಾನಗಿ ಹೊಂದಿದ ಪಿಸ್ತೂಲ್‌ಗಳಿದ್ದು Licenced Pistol), ಲೋಕಸಭೆ ಚುನಾವಣೆ (Lok Sabha Election 2024) ವೇಳೆ ಇಬ್ಬರೂ ಅವುಗಳನ್ನು ಪೊಲೀಸರ ಬಳಿ ಠೇವಣಿ (deposit) ಇರಿಸಿರಲಿಲ್ಲ ಎಂಬುದು ಗೊತ್ತಾಗಿದೆ. ಇದೀಗ ಅವುಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.

ದರ್ಶನ್ ಬಳಿ ಎರಡು ಯುಎಸ್ ಮೇಡ್ ಪಿಸ್ತೂಲ್‌ಗಳು, ಪ್ರದೋಷ್ ಬಳಿ ಒಂದು ಲೈಸೆನ್ಸ್ ಪಿಸ್ತೂಲ್‌ ಇವೆ. ಕಳೆದ ಲೋಕಸಭಾ ಚುನಾವಣಾ ವೇಳೆ ಲೈಸೆನ್ಸ್ ಪಡೆದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಬೇಕಿತ್ತು. ಆದರೆ ಚುನಾವಾಣೆ ವೇಳೆ ಶಸ್ತ್ರಾಸ್ತ್ರ ಠೇವಣಿಯಿಂದ ದರ್ಶನ್ ಮತ್ತು ಪ್ರದೋಷ್ ವಿನಾಯಿತಿ ಪಡೆದಿದ್ದರು.

ಬೆಂಗಳೂರು ನಗರಾದ್ಯಂತ 7830 ಗನ್ ಲೈಸೆನ್ಸ್ ಪರವಾನಗಿದಾರರಿದ್ದಾರೆ. ಈ ಪೈಕಿ ದರ್ಶನ್ ಮತ್ತು ಪ್ರದೋಷ್ ಸೇರಿ 277 ಜನರಿಗೆ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ನೀಡಲಾಗಿತ್ತು. ಉಳಿದ 7553 ಪರವಾನಗಿ ಹೊಂದಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ಠೇವಣಿ ಇರಿಸಿಕೊಂಡಿದ್ದರು. ಆದರೆ ನಟ ದರ್ಶನ್ ಮತ್ತು ಪ್ರದೋಷ್ ಪಿಸ್ತೂಲ್ ವಾಪಸ್ ಮಾಡದೇ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಪಡೆದಿದ್ದಾರೆ.

ಬೆಂಗಳೂರಿನ 277 ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಪಡೆದವರಲ್ಲಿ ದರ್ಶನ್ ಮತ್ತು ಪ್ರದೋಷ್‌ಗೂ ವಿನಾಯಿತಿ ನೀಡಲಾಗಿದ್ದು, ಬೆಂಗಳೂರು ಪೊಲೀಸ್ ಕಮೀಷನರ್ ಅವರಿಂದಲೇ ವಿನಾಯಿತಿ ನೀಡಿ ಆದೇಶ ದೊರೆತಿದೆ. ಕಮೀಷನರ್ ಬಿ. ದಯಾನಂದ ಶಸ್ತ್ರಾಸ್ತ್ರ ಠೇವಣಿ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿದ್ದರು. ಅತಿ ಗಣ್ಯರಿಗೆ ನೀಡುವ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿಯಲ್ಲಿ ನಟ ದರ್ಶನ್ ಮತ್ತು ಪ್ರದೋಷ್ ಕೂಡ ಅವಕಾಶ ಪಡೆದಿದ್ದು, ಕಳೆದ ಮಾರ್ಚ್ 27ರಂದು ವಿನಾಯಿತಿ ನೀಡಿ ಕಮೀಷನರ್ ದಯಾನಂದ್ ಆದೇಶ ನೀಡಿದ್ದರು.

Continue Reading

ಸ್ಯಾಂಡಲ್ ವುಡ್

Neha Gowda: ಸೀರೆಯುಟ್ಟು ಸಿಂಪಲ್‌ ಆಗಿ ಗಂಡನ ಜತೆ ಪೋಸ್‌ ಕೊಟ್ಟ ಗರ್ಭಿಣಿ ನೇಹಾ ಗೌಡ!

Neha Gowda: ಬಿಗ್‌ ಬಾಸ್‌ ಕನ್ನಡ ಸೀಸನ್‌ 9ರಲ್ಲಿ ಸ್ಪರ್ಧಿಸಿದ್ದರು ನೇಹಾ, ಕನ್ನಡದ ಜತೆಗೆ ತೆಲುಗು, ತಮಿಳು ಭಾಷೆಗಳಲ್ಲೂ ನೇಹಾ ಕೆಲಸ ಮಾಡಿದ್ದಾರೆ. ಪತಿ ಚಂದನ್ ಜತೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ರಾಜ-ರಾಣಿ ರಿಯಾಲಿಟಿ ಶೋನಲ್ಲೂ ಭಾಗವಹಿಸಿ ಗೆದ್ದಿದ್ದರು

VISTARANEWS.COM


on

Neha Gowda in saree with baby bump
Koo

ಮದುವೆಯಾದ 6 ವರ್ಷಗಳ ಬಳಿಕ ಸಿಹಿ ಸುದ್ದಿ ಕೊಟ್ಟಿದ್ದಾರೆ ಲಕ್ಷ್ಮೀ ಬಾರಮ್ಮ ಖ್ಯಾತಿಯ ಗೊಂಬೆ (Neha Gowda) ನೇಹಾ ಹಾಗೂ ಚಂದನ್‌ ದಂಪತಿ.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

ಇದೀಗ ತೋಟವೊಂದರಲ್ಲಿ ಕ್ಲಿಕ್ಕಿಸಿಕೊಂಡಿರುವ ಫೋಟೊಗಳನ್ನು ನೇಹಾ ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಇತ್ತ ಚಂದನ್ ಗೌಡ ತಮ್ಮ ಖಾತೆಯಲ್ಲಿ ಪತ್ನಿ ಜೊತೆ ಅದೇ ಸ್ಥಳದಲ್ಲಿ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ನೇಹಾ ನಿರಂತರವಾಗಿ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುತ್ತಾರೆ. ಇದೀಗ ಸರಳವಾದ ಸೀರೆ ಧರಿಸಿಕೊಂಡು ಫೋಟೋ ತೆಗೆಸಿಕೊಂಡಿದ್ದಾರೆ.

2018ರಂದು ಬೆಂಗಳೂರಿನಲ್ಲಿ ಚಂದನ್ ಮತ್ತು ನೇಹಾ ಗೌಡ ಮದುವೆಯಾಗಿದ್ದರು.ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ನೇಹಾ ಹಾಗೂ ನಟ ಚಂದನ್​, ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.

Continue Reading
Advertisement
Monsoon Rain Boots Fashion
ಫ್ಯಾಷನ್18 mins ago

Monsoon Rain Boots Fashion: ಮಕ್ಕಳ ಮಾನ್ಸೂನ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಬಗೆಯ ರೈನ್‌ ಬೂಟ್ಸ್

Narendra Modi
ದೇಶ42 mins ago

Narendra Modi: ಸಂಸತ್ತಿನಲ್ಲಿ ಇಬ್ಬರು ‘ಪುಟಾಣಿ’ ಅತಿಥಿಗಳನ್ನು ಸ್ವಾಗತಿಸಿದ ಮೋದಿ; ಯಾರವರು? Video ನೋಡಿ

Weight Loss Tips
ಆರೋಗ್ಯ48 mins ago

Weight Loss Tips: ನಲವತ್ತರ ನಂತರ ತೂಕ ಇಳಿಸುವುದು ಹೇಗೆ?

Nadaprabhu Kempegowda
ಬೆಂಗಳೂರು55 mins ago

Essay on Kempegowda in Kannada: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ!

Nitin Gadkari
ದೇಶ1 hour ago

Nitin Gadkari: ಜಿಪಿಎಸ್‌ ತಂತ್ರಜ್ಞಾನದಿಂದ ಹೆದ್ದಾರಿ ಪ್ರಾಧಿಕಾರಕ್ಕೆ ಬಂಪರ್;‌ 10 ಸಾವಿರ ಕೋಟಿ ರೂ. ಆದಾಯ!

Paris Fashion Week
ಫ್ಯಾಷನ್2 hours ago

Paris Fashion Week: ಪ್ಯಾರಿಸ್‌ ಹಾಟ್‌ ಕೌಚರ್‌ ಫ್ಯಾಷನ್‌ ವೀಕ್ 2024ರ ಹೈಲೈಟ್ಸ್

Anant Ambani
ದೇಶ2 hours ago

Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Viral Video
Latest2 hours ago

Viral Video: ಜಿಮ್‌ಗೆ ಹೋಗುವವರೇ ಹುಷಾರ್‌! ಈ ವಿಡಿಯೊ ನೋಡಿ!

Acharya Pramod Krishnam
ದೇಶ2 hours ago

ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

Viral Video
Latest3 hours ago

Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌