Cooking In An Iron Pot: ಕಬ್ಬಿಣದ ಪಾತ್ರೆಯಲ್ಲಿ ಅಡುಗೆ ಮಾಡುವುದು ಒಳ್ಳೆಯದು! ಯಾಕೆ ಗೊತ್ತೇ? - Vistara News

ಆರೋಗ್ಯ

Cooking In An Iron Pot: ಕಬ್ಬಿಣದ ಪಾತ್ರೆಯಲ್ಲಿ ಅಡುಗೆ ಮಾಡುವುದು ಒಳ್ಳೆಯದು! ಯಾಕೆ ಗೊತ್ತೇ?

ಮಣ್ಣಿನ ಮಡಕೆಯಿಂದ ಹಿಡಿದು ಗಾಜಿನ ಪಾತ್ರೆಗಳವರೆಗೆ ತರಹೇವಾರಿ ಪಾತ್ರೆಗಳು ಆಕರ್ಷಕ ವಿನ್ಯಾಸಗಳಲ್ಲಿ ಇಂದು ಲಭ್ಯವಿವೆ. ಅಡುಗೆ ಮನೆಯ ಸೌಂದರ್ಯವನ್ನು ಹೆಚ್ಚಿಸುವಲ್ಲಿ ನಾವು ಆಯ್ಕೆ ಮಾಡುವ ಪಾತ್ರೆಗಳ ಪಾಲೂ ಇದೆ ಎಂಬುದು ನಿಜ. ಆದರೂ, ಪ್ರತಿ ಪಾತ್ರೆಗಳ ಆಯ್ಕೆಯ ಹಿಂದೆ ನಮ್ಮ ಆರೋಗ್ಯದ ರಹಸ್ಯವೂ ಅಡಗಿದೆ. ನಮ್ಮ ಹಳೆಯ ತಲೆಮಾರಿನ ಹಿರಿಯರಿಂದ ಪಾತ್ರೆಗಳ ಬಳಕೆಯ ಬಗ್ಗೆ ನಮಗೆ ದಕ್ಕಿದ ವಿಚಾರದ ಹಿಂದೆ (Cooking in an iron pot) ವಿಜ್ಞಾನವೂ ಇದೆ.

VISTARANEWS.COM


on

Cooking In An Iron Pot
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತೀಯ ಅಡುಗೆ ಮನೆಗಳ ಪಾತ್ರೆಗಳಲ್ಲೇ ಒಂದು ಸೊಗಸಿದೆ. ನಾವು ನಿತ್ಯವೂ ಅಡುಗೆಗೆ ಬಳಸುವ ಪಾತ್ರೆಗಳಲ್ಲಿ ಪ್ರತಿಯೊಬ್ಬರ ಆಸಕ್ತಿ, ಅಭಿರುಚಿಗಳನ್ನೂ ಗುರುತಿಸಬಹುದು. ಮಣ್ಣಿನ ಮಡಕೆಯಿಂದ ಹಿಡಿದು ಗಾಜಿನ ಪಾತ್ರೆಗಳವರೆಗೆ ತರಹೇವಾರಿ ಪಾತ್ರೆಗಳು ಆಕರ್ಷಕ ವಿನ್ಯಾಸಗಳಲ್ಲಿ ಇಂದು ಲಭ್ಯವಿವೆ. ಅಡುಗೆ ಮನೆಯ ಸೌಂದರ್ಯವನ್ನು ಹೆಚ್ಚಿಸುವಲ್ಲಿ ನಾವು ಆಯ್ಕೆ ಮಾಡುವ ಪಾತ್ರೆಗಳ ಪಾಲೂ ಇದೆ ಎಂಬುದು ನಿಜ. ಆದರೂ, ಪ್ರತಿ ಪಾತ್ರೆಗಳ ಆಯ್ಕೆಯ ಹಿಂದೆ ನಮ್ಮ ಆರೋಗ್ಯದ ರಹಸ್ಯವೂ ಅಡಗಿದೆ. ನಮ್ಮ ಹಳೆಯ ತಲೆಮಾರಿನ ಹಿರಿಯರಿಂದ ಪಾತ್ರೆಗಳ ಬಳಕೆಯ ಬಗ್ಗೆ ನಮಗೆ ದಕ್ಕಿದ ವಿಚಾರದ ಹಿಂದೆ ವಿಜ್ಞಾನವೂ ಇದೆ. ವೈದ್ಯರೂ, ಸಂಶೋಧನೆಗಳೂ ಕೂಡಾ ಇವನ್ನು ಪುಷ್ಟೀಕರಿಸಿವೆ. ಮಣ್ಣಿನ ಪಾತ್ರೆಗಳು, ಕಬ್ಬಿಣದ ಪಾತ್ರೆಗಳ ಬಳಕೆ, ಎಲ್ಲೆಲ್ಲಿ ತಾಮ್ರದ ಪಾತ್ರೆಗಳನ್ನು ಬಳಸಬಹುದು ಇತ್ಯಾದಿ ಮಾಹಿತಿಗಳನ್ನು ನಾವು ಗ್ರಹಿಸಿಕೊಂಡು ಅಳವಡಿಸುವುದರಿಂದ ಸಾಕಷ್ಟು ಆರೋಗ್ಯದ (Cooking in an iron pot) ಲಾಭಗಳನ್ನೂ ಪಡೆಯಬಹುದು. ಹೊಸ ನಮೂನೆಯ ಆಧುನಿಕ ಪಾತ್ರೆಗಳ ಹಾವಳಿಯಿಂದ ತಲೆತಲಾಂತರಗಳಿಂದ ಬಂದ ಕಬ್ಬಿಣದ ಪಾತ್ರೆಗಳ ಬಳಕೆ ಇತ್ತೀಚಿನ ವರ್ಷಗಳಲ್ಲಿ ಕಡಿಮೆಯಾಗಿತ್ತು. ಆದರೆ, ಈಗ ಮತ್ತೆ ಕಬ್ಬಿಣದ ಪಾತ್ರೆಯ ಪ್ರಯೋಜನಗಳ ಬಗ್ಗೆ ಜನರಲ್ಲಿ ನಿಧಾನವಾಗಿ ಅರಿವು ಮೂಡುತ್ತಿರುವುದರಿಂದ ಕಬ್ಬಿಣ ಮತ್ತೆ ಚಾಲ್ತಿಯಲ್ಲಿ ಬರುತ್ತಿದೆ. ಬನ್ನಿ, ಕಬ್ಬಿಣದ ಪಾತ್ರೆಯನ್ನು ಬಳಸುವುದರಿಂದ ಯಾವೆಲ್ಲ ಪ್ರಯೋಜನಗಳಿವೆ ಎಂಬುದನ್ನು ನೋಡೋಣ.

Closed Caldron Pot

ಹೆಚ್ಚು ಬೇಯಿಸಲು ಉತ್ತಮ

ಕಬ್ಬಿಣದ ಪಾತ್ರೆಯಲ್ಲಿ ಹೆಚ್ಚು ಉಷ್ಣತೆಯ ಹೀಟಿಂಗ್‌ ಪಾಯಿಂಟ್‌ ತಲುಪಬಹುದು. ಆಹಾರವನ್ನು ರೋಸ್ಟ್‌ ಮಾಡಲು, ಗ್ರಿಲ್‌ ಮಾಡಲು ಹಾಗೂ ಬೇಯಿಸಲು ಕಬ್ಬಿಣದ ಪಾತ್ರೆ ಅತ್ಯುತ್ತಮ. ಆದರೆ, ಕಬ್ಬಿಣದ ಪಾತ್ರೆಯಲ್ಲಿ ಎಲ್ಲ ಭಾಗದಲ್ಲೂ ಒಂದೇ ಸಮನಾದ ಉಷ್ಣತೆ ಹಂಚಿ ಹೋಗುವುದಿಲ್ಲ. ಹಾಗಾಗಿ ಈ ಕಬ್ಬಿಣದ ಪಾತ್ರೆಯಲ್ಲಿ ಅಡುಗೆ ಮಾಡುವ ಮೊದಲೇ ಕೊಂಚ ಹೊತ್ತು ಬಿಸಿಗೆ ಇಡಬೇಕಾಗುತ್ತದೆ. ಆದರೆ ಎಷ್ಟು ಬಿಸಿಯಾದರೂ ನಾನ್‌ಸ್ಟಿಕ್‌ನಂತೆ ಇದರಲ್ಲಿ ರಾಸಾಯನಿಕ ಬಿಡುಗಡೆಯಾಗುವ ಭಯವಿಲ್ಲ.

ತುಕ್ಕು ಹಿಡಿಯಲು ಬಿಡಬಾರದು

ಕಬ್ಬಿಣದ ಪಾತ್ರೆಯ ಬಳಕೆ ಕಷ್ಟ ಎಂಬ ಭಾವನೆ ಹಲವರಲ್ಲಿದೆ. ಆದರೆ ಅದು ಅಷ್ಟು ಕಷ್ಟದ ವಿಚಾರವೇನಲ್ಲ. ಕಬ್ಬಿಣದ ಪಾತ್ರೆ ಕೊಂಚ ಒರಟು ಮೇಲ್ಮೈಯನ್ನು ಹೊಂದಿರುವುದರಿಂದ ಅದನ್ನು ಸದಾ ತೊಳೆದು ಆರಲು ಬಿಟ್ಟು ಎಣ್ಣೆ ಹಚ್ಚಿಟ್ಟರೆ ಸಾಕಾಗುತ್ತದೆ. ತುಕ್ಕು ಹಿಡಿಯಲು ಬಿಡಬಾರದು. ಹಿಡಿದರೆ ಅದನ್ನು ತೊಳೆದು ಮತ್ತೆ ಉಪಯೋಗಿಸಲು ನೆನಪಿಡಿ. ತುಕ್ಕಿನ ಮೇಲೆಯೇ ಹಾಗೆಯೇ ಅಡುಗೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.

Cast Iron Pot Of Chili

ಸ್ವಚ್ಛಗೊಳಿಸುವುದು ಸುಲಭ

ಹಾಗೆ ನೋಡಿದರೆ ಕಬ್ಬಿಣದ ತವಾ ಅಥವಾ ಪಾತ್ರೆಯನ್ನು ಸ್ವಚ್ಛಗೊಳಿಸುವುದು ಸುಲಭ. ಇದಕ್ಕೆ ಅತ್ಯಂತ ಜಾಗರೂಕತೆಯ ಕಾಳಜಿ ಅಗತ್ಯವಿಲ್ಲ. ನಾನ್‌ಸ್ಟಿಕ್‌ ಪಾತ್ರೆಯಂತೆ ಜಾಗರೂಕತೆಯ ಅಗತ್ಯವಿಲ್ಲ. ಯಾವುದೇ ಡಿಶ್‌ವಾಶ್‌ ಜೆಲ್ ಮೂಲಕ ಸ್ವಚ್ಛಗೊಳಿಸಬಹುದು. ತಿಕ್ಕಿ ತೊಳೆಯಬಹುದು. ಆದರೆ ತಿಕ್ಕಿ ತೊಳೆದ ಮೇಲೆ ಒಣಗಿಸುವಾಗ ಸ್ವಲ್ಪ ಕಾಳಜಿ ಬೇಕು. ಎಣ್ಣೆಯನ್ನು ಹಚ್ಚಿ ಇಡುವ ಕೆಲಸ ಮಾತ್ರ ಈ ಪಾತ್ರೆಯ ಕಾವಲಿಯಲ್ಲಿ ಮಾಡಬೇಕಾದ ಹೆಚ್ಚುವರಿ ಕೆಲಸವಾಗಿದೆ.

ಲೋಹದ ಯಾವುದೇ ಸೌಟು ಬಳಸಬಹುದು

ನಾನ್‌ಸ್ಟಿಕ್‌ ಪಾತ್ರೆಯಂತೆ ಕಬ್ಬಿಣದ ಪಾತ್ರೆಗೆ ಮರದ ಸೌಟನ್ನು ಬಳಸಬೇಕಾಗಿಲ್ಲ. ಲೋಹದ ಯಾವುದೇ ಬಗೆಯ ಸೌಟನ್ನೂ ಬಳಸಬಹುದು. ಅದರ ಮೂಲಕ ಪಾತ್ರೆಗೆ ಯಾವುದೇ ಹಾನಿಯಾಗದು.

Iron Pot

ಆರೋಗ್ಯ ದೃಷ್ಟಿಯಿಂದ ಒಳ್ಳೆಯದು

ಕಬ್ಬಿಣದ ಪಾತ್ರೆಯ ಬಳಕೆ ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದೇ. ನಮ್ಮ ದೇಹಕ್ಕೆ ಕಬ್ಬಿಣಾಂಶವೂ ಇದರಿಂದ ದೊರೆಯುತ್ತದೆ. ರಕ್ತಹೀನತೆಯಂತಹ ಸಮಸ್ಯೆ ಇದರಿಂದ ಬರದು. ಕಬ್ಬಿಣದ ಪಾತ್ರೆಯಲ್ಲಿ ಅಡುಗೆ ಮಾಡುವಾಗ ಕಬ್ಬಿಣದ ಸ್ವಲ್ಪ ಅಂಶ ಆಹಾರಕ್ಕೆ ಸೇರುವುದರಿಂದ ದೇಹಕ್ಕೆ ಕಬ್ಬಿಣಾಂಶವೂ ದೊರೆಯುತ್ತದೆ. ನಮ್ಮ ದೇಹದ ರಕ್ತದಲ್ಲಿನ ಹಿಮೋಗ್ಲೋಬಿನ್‌ನ ಹೆಚ್ಚಳಕ್ಕೆ ಕಬ್ಬಿಣಾಂಶ ಬೇಕೇಬೇಕು. ಹಾಗಾಗಿ ಇದು ಆರೋಗ್ಯಕ್ಕೆ ಪೂರಕ.

ಇದನ್ನೂ ಓದಿ: Clay Pot Cooking: ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡಲು ಬಯಸಿದ್ದೀರಾ? ಹಾಗಿದ್ದರೆ ಇವಿಷ್ಟು ಸಂಗತಿ ನೆನಪಿರಲಿ!

ಯಾವ ನಿರ್ಬಂಧವೂ ಇಲ್ಲ

ಕಬ್ಬಿಣದ ಪಾತ್ರೆಯಲ್ಲಿ ಅಸಿಡಿಕ್‌ ಅಥವಾ ಆಮ್ಲೀಯ ಗುಣಗಳ ಆಹಾರವನ್ನು ಇಡುವಂತಿಲ್ಲ ಎಂಬ ಯಾವ ನಿರ್ಬಂಧವೂ ಇಲ್ಲ. ಆದರೆ, ಇಂಥ ಅಡುಗೆಯನ್ನು ಬಹಳ ಹೊತ್ತು ಇಟ್ಟುಕೊಂಡು ಕುದಿಸುವಂಥ ಪ್ರಕ್ರಿಯೆ ಮಾಡದೆ ಇರುವುದು ಒಳ್ಳೆಯದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

National Doctor’s Day: ಇಂದು ರಾಷ್ಟ್ರೀಯ ವೈದ್ಯರ ದಿನ; ಕಾಳಜಿಯ ಕೈಗಳಿಗೆ ಕೃತಜ್ಞತೆ ಹೇಳುವ ದಿನ

National Doctor’s Day: ಆರೋಗ್ಯವೆಂಬ ಭಾಗ್ಯ ಕೈಕೊಟ್ಟಾಗಲೇ ನಮಗೆ ವೈದ್ಯರ ನೆನಪಾಗುವುದು. ವ್ಯಕ್ತಿಗತವಾಗಿ ಮತ್ತು ಸಮುದಾಯಗಳ ಕುರಿತಾಗಿ ವೈದ್ಯರು ತೋರಿಸುವ ಕಾಳಜಿ, ಕರ್ತವ್ಯಪರತೆಯನ್ನು ಸ್ಮರಿಸಿಕೊಂಡು, ಅವರಿಗೆ ಆಭಾರಿಗಳಾಗಿರುವುದಕ್ಕೆ ಜುಲೈ ತಿಂಗಳ ಈ ಮೊದಲ ದಿನವನ್ನು ಮೀಸಲಿಡಲಾಗಿದೆ. ಈ ಕುರಿತ ವಿಶೇಷ ಲೇಖನ ಇಲ್ಲಿದೆ.

VISTARANEWS.COM


on

National Doctor’s Day
Koo

ವೈದ್ಯರನ್ನು ನಾರಾಯಣನೆಂದು ಕರೆಯುವ ವಾಡಿಕೆಯಿದೆ ಭಾರತದಲ್ಲಿ. ಹಾಗೆಲ್ಲ ದೇವರೆಂದು ಪೂಜಿಸುವ ವೃತ್ತಿಯಲ್ಲಿರುವವರಿಗೂ ʻಸಾಕಪ್ಪಾʼ ಎನಿಸುವಂತೆ ವೈದ್ಯರ ಮೇಲಿನ ದಾಳಿಗಳು, ನೀಟ್‌ ಪರೀಕ್ಷೆಗಳ ಅವಾಂತರ ಮುಂತಾದವು ಇತ್ತೀಚಿನ ದಿನಗಳಲ್ಲಿ ಸುದ್ದಿ ಮಾಡುತ್ತಿವೆ. ಅವುಗಳ ನಡುವೆಯೇ, ಈ ಗುಣ ಪಡಿಸುವ ಕೈಗಳಿಗೆ ಕೃತಜ್ಞತೆ ಸಲ್ಲಿಸುವ ದಿನವೂ ಬಂದಿದೆ. ಇಂದು ರಾಷ್ಟ್ರೀಯ ವೈದ್ಯರ ದಿನ (National Doctor’s Day).
ಆರೋಗ್ಯವೆಂಬ ಭಾಗ್ಯ ಕೈಕೊಟ್ಟಾಗಲೇ ನಮಗೆ ವೈದ್ಯರ ನೆನಪಾಗುವುದು. ವ್ಯಕ್ತಿಗತವಾಗಿ ಮತ್ತು ಸಮುದಾಯಗಳ ಕುರಿತಾಗಿ ವೈದ್ಯರು ತೋರಿಸುವ ಕಾಳಜಿ, ಕರ್ತವ್ಯಪರತೆಯನ್ನು ಸ್ಮರಿಸಿಕೊಂಡು, ಅವರಿಗೆ ಆಭಾರಿಗಳಾಗಿರುವುದಕ್ಕೆ ಈ ದಿನವನ್ನು ಮೀಸಲಿಡಲಾಗಿದೆ. ಇದೊಂದೇ ದಿನ ಸಾಕು ಎನ್ನುವ ಅರ್ಥದಲ್ಲಿ ಅಲ್ಲ, ಆದರೆ ಇಂದಾದರೂ ನೆನಪಿನಿಂದ ನಿಂನಿಮ್ಮ ವೈದ್ಯರಿಗೆ ಸಣ್ಣದೊಂದು ʻಥ್ಯಾಂಕ್ಸ್‌ʼ ಹೇಳಲು, ಅವರ ಕಾಳಜಿಯ ಕುರಿತಾಗಿ ಕೃತಜ್ಞತೆ ಸಲ್ಲಿಸಲು ಮರೆಯದಿರಿ ಎನ್ನುವ ಉದ್ದೇಶ ಇದರ ಹಿಂದಿದೆ.

Doctor’s Day

ಇಂದೇ ಏಕೆ?

ಜುಲೈ ಮೊದಲ ದಿನವೇ ವೈದ್ಯರ ದಿನವನ್ನಾಗಿ ಏಕೆ ಆಚರಿಸಲಾಗುತ್ತದೆ? ರೋಗಿಗಳ ನೋವನ್ನು ಶಮನ ಮಾಡುವ, ಗುಣಪಡಿಸುವ ಮತ್ತು ಬದುಕನ್ನು ಸಹನೀಯಗೊಳಿಸುವ ವೈದ್ಯರಿಗೆ ಇಂದೇ ಕೃತಜ್ಞತೆ ಸಲ್ಲಿಸುವುದಕ್ಕೆ ಕಾರಣಗಳಿವೆ. ಡಾ. ಬಿಪಿನ್‌ ಚಂದ್ರ ರಾಯ್‌ ಅವರ ಸಂಸ್ಮರಣಾರ್ಥವಾಗಿ ಭಾರತ ಸರಕಾರ ಈ ದಿನವನ್ನು ವೈದ್ಯರ ದಿನವೆಂದು 1991ರಲ್ಲಿ ಘೋಷಿಸಿದೆ. ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿಯಾಗಿದ್ದ ಡಾ. ಬಿಪಿನ್‌ ಚಂದ್ರ ರಾಯ್‌, ಖ್ಯಾತ ವೈದ್ಯರು ಮತ್ತು ಸ್ವಾತಂತ್ರ ಹೋರಾಟಗಾರರೂ ಆಗಿದ್ದರು.

ಇದನ್ನೂ ಓದಿ: Swim Benefits: ನಿತ್ಯವೂ ಈಜಿದರೆ ಸಾಕು; ಇದಕ್ಕಿಂತ ದೊಡ್ಡ ಬೇರೆ ವ್ಯಾಯಾಮ ಇನ್ನೊಂದು ಬೇಡ!

ಭಾರತೀಯ ವೈದ್ಯಕೀಯ ಸಂಘ, ಭಾರತೀಯ ವೈದ್ಯಕೀಯ ಮಂಡಳಿ ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳನ್ನು ಹುಟ್ಟುಹಾಕಿ, ವೈದ್ಯಕೀಯ ಕ್ಷೇತ್ರಕ್ಕೆ ಸಾಂಸ್ಥಿಕ ಬಲವನ್ನು ನೀಡುವಲ್ಲಿ ಡಾ. ರಾಯ್‌ ಪ್ರಮುಖರಾಗಿದ್ದರು. ತಾವೇ ಸ್ವತಃ ಒಳ್ಳೆಯ ವೈದ್ಯರಾಗಿ, ಬಹಳಷ್ಟು ಜೀವಗಳನ್ನು ಉಳಿಸಿದ್ದರು. ಸ್ವಾತಂತ್ರ ಹೋರಾಟದಲ್ಲೂ ಅವರು ಪಾಲ್ಗೊಂಡಿದ್ದರು. ದೇಶಕ್ಕೆ ಅವರು ನೀಡಿದ ಕೊಡುಗೆಗಾಗಿ, ಭಾರತದ ಅತ್ತ್ಯುನ್ನತ ನಾಗರಿಕ ಪ್ರಶಸ್ತಿ ʻಭಾರತ ರತ್ನʼ ಪುರಸ್ಕಾರವನ್ನು ನೀಡಿ ಗೌರವಿಸಲಾಗಿದೆ. ಆರೋಗ್ಯಕ್ಷೇತ್ರ ಮತ್ತು ನಾಗರಿಕ ಆರೋಗ್ಯ ವಲಯದಲ್ಲಿ ವೃತ್ತಿಪರತೆ ಮತ್ತು ಮಾನವೀಯತೆಯ ಉನ್ನತ ಆದರ್ಶಗಳನ್ನು ಸೃಷ್ಟಿಸಿರುವ ಸಾವಿರಾರು ವೈದ್ಯರು ನಮ್ಮ ಕಣ್ಣೆದುರಿಗಿದ್ದಾರೆ. ನೂರೆಂಟು ಸವಾಲುಗಳ ನಡುವೆ, ಜೀವ ಉಳಿಸುವ ಕೈಂಕರ್ಯದಲ್ಲಿ ನಿಸ್ವಾರ್ಥವಾಗಿ ತೊಡಗಿಸಿಕೊಂಡು, ಅದರಲ್ಲೇ ತೃಪ್ತಿಯನ್ನು ಕಂಡವರ ಕತೆಗಳನ್ನು, ದೃಷ್ಟಾಂತಗಳನ್ನು ನಾವೆಲ್ಲರೂ ಕೇಳಿರುತ್ತೇವೆ. ಕೋವಿಡ್‌ ಮಹಾಮಾರಿಯ ಸಂದರ್ಭದಲ್ಲೇ ಜೀವ ಒತ್ತಡ ಇಟ್ಟು ಹಗಲಿರುಳು ದುಡಿದ ವೈದ್ಯರು ಜಗತ್ತಿನ ಉದ್ದಗಲಕ್ಕೆ ಕಾಣಸಿಗುತ್ತಾರೆ. ಸಮಾಜಕ್ಕೆ ಈ ವೃತ್ತಿ ನೀಡುತ್ತಿರುವ ಕೊಡುಗೆಗೆ ಧನ್ಯವಾದ ಹೇಳುವುದೂ ಅಗತ್ಯವಲ್ಲವೇ? ಈ ವರ್ಷದ ಘೋಷವಾಕ್ಯ: ಗುಣಪಡಿಸುವ ಕೈಗಳು, ಕಾಳಜಿಯ ಹೃದಯಗಳು.

Continue Reading

ಪ್ರಮುಖ ಸುದ್ದಿ

Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

Dengue Fever: ಹೊಸದಾಗಿ 213 ಡೆಂಗ್ಯು ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1742 ಜನರಿಗೆ ಡೆಂಗ್ಯು ಸೋಂಕು ತಗುಲಿದೆ. ಮಹಿಳೆಯರು ಮತ್ತು ಮಕ್ಕಳು ಡೆಂಗ್ಯು ಸೋಂಕಿಗೆ ಬೇಗ ಒಳಗಾಗುತ್ತಿದ್ದಾರೆ ಎನ್ನಲಾಗಿದ್ದು, ಗರ್ಭಿಣಿಯರಲ್ಲಿ ಡೆಂಗ್ಯು ಹೆಚ್ಚಿನ ಹಾನಿ ಎಸಗುತ್ತಿರುವುದರಿಂದಾಗಿ ಹೆಚ್ಚಿನ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.

VISTARANEWS.COM


on

Dengue fever rises across the state including Bengaluru BBMP Commissioner also get fever
Koo

ಬೆಂಗಳೂರು: ಕಗ್ಗದಾಸಪುರದ 27 ವರ್ಷದ ಯುವಕ ಡೆಂಗ್ಯು ಸೋಂಕಿನಿಂದಲೇ (Dengue Fever) ಸಾವಿಗೀಡಾಗಿದ್ದಾರೆ ಎಂದು ಬಿಬಿಎಂಪಿ (BBMP) ಖಚಿತಪಡಿಸಿದೆ. ಕಳೆದ ಶುಕ್ರವಾರ ಎರಡು ಡೆಂಗ್ಯು ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು ಡೆಂಗ್ಯುವಿನಿಂದಾಗಿದೆ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ (BBMP Health Audit) ಖಚಿತಪಡಿಸಿದೆ.

ಕಗ್ಗದಾಸಪುರದ ಯುವಕನ ಸಾವಿಗೆ ಡೆಂಗ್ಯು ಕಾರಣವವಾಗಿದೆ. ಆದರೆ 80ರ ವೃದ್ಧೆಯ ಸಾವಿಗೆ ಕ್ಯಾನ್ಸರ್ ಕಾರಣ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ನಗರದಲ್ಲಿ ಸದ್ಯ 1743 ಆಕ್ಟಿವ್ ಡೆಂಗ್ಯು ಕೇಸ್‌ಗಳು ಇವೆ.

ಹೊಸದಾಗಿ 213 ಡೆಂಗ್ಯು ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1742 ಜನರಿಗೆ ಡೆಂಗ್ಯು ಸೋಂಕು ತಗುಲಿದೆ. ಮಹಿಳೆಯರು ಮತ್ತು ಮಕ್ಕಳು ಡೆಂಗ್ಯು ಸೋಂಕಿಗೆ ಬೇಗ ಒಳಗಾಗುತ್ತಿದ್ದಾರೆ ಎನ್ನಲಾಗಿದ್ದು, ಗರ್ಭಿಣಿಯರಲ್ಲಿ ಡೆಂಗ್ಯು ಹೆಚ್ಚಿನ ಹಾನಿ ಎಸಗುತ್ತಿರುವುದರಿಂದಾಗಿ ಹೆಚ್ಚಿನ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.

ಇದೂವರೆಗೂ ನಗರದಲ್ಲಿ ಇಬ್ಬರು ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದಾರೆ. ಸಿವಿ ರಾಮನ್ ನಗರದ 27 ವರ್ಷದ ಯುವಕ ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದು, ಈತ ತೀವ್ರ ಜ್ವರದಿಂದ ಬಳಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ ಎಂದು ಬಿಬಿಎಂಪಿ ಮೂಲಗಳು ಮಾಹಿತಿ ನೀಡಿವೆ.

4 ಸಾವಿರ ಗಡಿ ದಾಟಿದ ಡೆಂಗ್ಯೂ; ಐವರು ಸಾವು

ಹವಾಮಾನ ವೈಪರೀತ್ಯ ಮತ್ತು ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. 2024ರಲ್ಲಿ ಈ ವರೆಗೆ (ಜೂನ್‌) 93,012 ಶಂಕಿತವಾಗಿದ್ದು, ಇದರಲ್ಲಿ 40,918 ಮಂದಿಯ ರಕ್ತ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಆ ಪ್ರಕಾರ 4364 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಫಲಿಸದೇ ಐವರು ಮೃತಪಟ್ಟಿದ್ದಾರೆ. ಶಿವಮೊಗ್ಗ, ಬಾಗಲಕೋಟೆ, ಗದಗದಲ್ಲಿ ತಲಾ ಒಬ್ಬರು ಹಾಗೂ ಹಾಸನದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಡೆತ್‌ ಆಡಿಟಿಂಗ್‌ಗೆ ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ವಿಪರೀತ ಏರಿಕೆ ಆಗಿವೆ. ಬೆಂಗಳೂರಲ್ಲಿ ಜನವರಿಯಿಂದ ಈವರೆಗೆ 1,385 ಮಂದಿಗೆ ಡೆಂಗ್ಯೂ ಜ್ವರ ಕಂಡು ಬಂದಿದೆ. ಈವರೆಗೆ ಡೆಂಗ್ಯೂನಿಂದ ಮೃತಪಟ್ಟ ವರದಿ ಆಗಿಲ್ಲ. ಆದರೆ ಇಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವ ಶಂಕೆ ಇದ್ದು, ಸಾವಿಗೆ ಕಾರಣ ತಿಳಿಯುವ ಸಲುವಾಗಿ ಡೆತ್ ಆಡಿಟ್‌ಗೆ ಬಿಬಿಎಂಪಿ ಮುಂದಾಗಿದೆ.

ಇನ್ನೂ 3,470 ಲಾರ್ವಾ ಉತ್ಪತ್ತಿ ತಾಣ ಪತ್ತೆಯಾಗಿದ್ದು, ಇದರಲ್ಲಿ 2,004 ತಾಣಗಳ ನಾಶ ಮಾಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗ ಮಾಹಿತಿ ನೀಡಿದೆ. ಪಾಲಿಕೆಯ ಆರೋಗ್ಯ ಸಿಬ್ಬಂದಿ ನಿನ್ನೆವರೆಗೂ 17,877 ಮನೆಗಳ ಸಮೀಕ್ಷೆ ನಡೆಸಿದ್ದಾರೆ. ಆಡಿಟ್ ಬಳಿಕ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರವಾನೆ ಮಾಡಲಾಗುತ್ತದೆ.

ಡೆಂಗ್ಯೂ ಹೇಗೆ ಹರಡುತ್ತದೆ?

ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು ಆಗಿದೆ. ಇದು ಈಡಿಪಸ್‌ ಎಂಬ ಹೆಣ್ಣು ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಸೊಳ್ಳೆ ಕಚ್ಚಿದ 4-7 ದಿನಗಳ ನಂತರ ರೋಗ ಲಕ್ಷಣಗಳು ಸಾಮಾನ್ಯವಾಗಿ ಕಂಡು ಬರುತ್ತವೆ. ಇದರ ಪ್ರಭಾವ 10 ದಿನಗಳವರೆಗೆ ಇರುತ್ತದೆ. ಹೀಗಾಗಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಉತ್ತಮವಾಗಿದೆ.

ಡೆಂಗ್ಯೂ ಜ್ವರ ತಲೆನೋವಿನಂತಹ ರೋಗಲಕ್ಷಣಗಳನ್ನು ಉಂಟು ಮಾಡಬಹುದು. ಡೆಂಗ್ಯೂವನ್ನು ಹೆಮರಾಜಿಕ್ ಜ್ವರ ಎಂದೂ ಕರೆಯಲಾಗುತ್ತದೆ. ಡೆಂಗ್ಯೂ ಜ್ವರದ ತೀವ್ರ ಸ್ವರೂಪವು ತೀವ್ರ ರಕ್ತಸ್ರಾವ, ರಕ್ತದೊತ್ತಡ ಹಾಗೂ ರಕ್ತಕಣಗಳ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿ ವ್ಯಕ್ತಿಯ ಸಾವಿಗೂ ಕಾರಣವಾಗಬಹುದು. ಅಧಿಕ ಜ್ವರ, ತೀವ್ರ ತಲೆನೋವು, ವಾಂತಿ, ದೇಹದ ವಿವಿಧ ಭಾಗಗಳಲ್ಲಿ ದದ್ದುಗಳು, ಗ್ರಂಥಿಗಳಲ್ಲಿ ಊತ, ಮೂಳೆ ಮತ್ತು ಕೀಲು ನೋವು, ರಕ್ತಸ್ರಾವವಾಗವುದು ರೋಗ ಲಕ್ಷಣಗಳಾಗಿವೆ.

ಇದನ್ನೂ ಓದಿ: World Malaria Day: ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

Continue Reading

ಆರೋಗ್ಯ

Watermelon At Night: ಸಂಜೆ 7 ಗಂಟೆಯ ನಂತರ ಕಲ್ಲಂಗಡಿ ಹಣ್ಣನ್ನು ತಿನ್ನಲು ಹೋಗಬೇಡಿ!

watermelon at night: ಭರಪೂರ ಪೋಷಕಾಂಶಗಳಿರುವ ಹೃದಯ ಸ್ನೇಹಿಯಾಗಿರುವ, ಕಿಡ್ನಿಯ ಆರೋಗ್ಯಕ್ಕೂ ಸಹಾಯ ಮಾಡುವ, ರಕ್ತದೊತ್ತಡವನ್ನೂ ಸಮತೋಲನಗೊಳಿಸುವ ಕಲ್ಲಂಗಡಿ ಹಣ್ಣು ಸೇವನೆಗೆ ಸೂಕ್ತ. ಆದರೆ ಕಲ್ಲಂಗಡಿ ಕಡಿಮೆ ಕ್ಯಾಲರಿಯೆಂದು ಸಂಜೆಯ ಮೇಲೆ, ರಾತ್ರಿಯ ಊಟಕ್ಕೆ ತಿನ್ನುತ್ತೀರಾದರೆ ಕೊಂಚ ಎಚ್ಚರವಿರಲಿ. ಇದು ಖಂಡಿತಾ ರಾತ್ರಿಯೂಟದ ಸಮಯಕ್ಕೆ ಹೇಳಿ ಮಾಡಿಸಿದ ಹಣ್ಣಲ್ಲ. ಕಡಿಮೆ ಕ್ಯಾಲರಿಯಾದ್ದರಿಂದ ಇದು ಬೇಗ ಕರಗೀತು ಎಂದು ನೀವು ಲೆಕ್ಕಾಚಾರ ಹಾಕಿದರೆ ನಿಮ್ಮ ಲೆಕ್ಕಾಚಾರ ಖಂಡಿತ ತಪ್ಪು. ಈ ಬಗ್ಗೆ ಮತ್ತಷ್ಟು ಮಾಹಿತಿಗೆ ಈ ಲೇಖನ ಓದಿ.

VISTARANEWS.COM


on

Watermelon At Nigh
Koo

ಪ್ರಕೃತಿದತ್ತವಾಗಿ ಸಿಗುವ ಹಣ್ಣು ಹಂಪಲುಗಳಿಂದ ದೇಹ ತಂಪು ಮಾಡಿಕೊಂಡು ಆರೋಗ್ಯವಾಗಿರಲು ಪ್ರಯತ್ನಿಸುತ್ತೇವೆ. ಸಾಕಷ್ಟು ಹಣ್ಣುಗಳು ತೂಕ ಇಳಿಕೆಗೆ ಪೂರಕವಾಗಿಯೂ ಇವೆ. ಹೆಚ್ಚು ಲೈಕೋಪೀನ್‌ ಇರುವ ಕಲ್ಲಂಗಡಿ ಹಣ್ಣೂ ಕೂಡಾ, ತೂಕ ಇಳಿಕೆಗೆ ಸಹಾಯ ಮಾಡುವ ಹಣ್ಣೇ ಆಗಿದೆ. ಆದರೆ, ಹಾಗಂತ, ಈ ಕಲ್ಲಂಗಡಿಯನ್ನೇ ತಿಂದು ತೂಕ ಇಳಿಸಲು ಪ್ರಯತ್ನಿಸುವ ಮಂದಿಯೂ ಇಲ್ಲದಿಲ್ಲ. ಕಡಿಮೆ ಕ್ಯಾಲರಿಯ, ಹೆಚ್ಚು ನೀರಿನಂಶ ಇರುವ ತಂಪಾದ ಹಣ್ಣು ಕಲ್ಲಂಗಡಿಯನ್ನು ತಿಂದು ತೂಕ ಇಳಿಸಿಕೊಂಡವರೂ ಇದ್ದಾರೆ ನಿಜ. ಭರಪೂರ ಪೋಷಕಾಂಶಗಳಿರುವ ಹೃದಯ ಸ್ನೇಹಿಯಾಗಿರುವ, ಕಿಡ್ನಿಯ ಆರೋಗ್ಯಕ್ಕೂ ಸಹಾಯ ಮಾಡುವ, ರಕ್ತದೊತ್ತಡವನ್ನೂ ಸಮತೋಲನಗೊಳಿಸುವ ಈ ಹಣ್ಣು ಸೇವನೆಗೆ ಸೂಕ್ತ. ಆದರೆ, ಕಲ್ಲಂಗಡಿ ಕಡಿಮೆ ಕ್ಯಾಲರಿಯೆಂದು ಸಂಜೆಯ ಮೇಲೆ, ರಾತ್ರಿಯ ಊಟಕ್ಕೆ ತಿನ್ನುತ್ತೀರಾದರೆ ಕೊಂಚ ಎಚ್ಚರವಿರಲಿ. ಇದು ಖಂಡಿತಾ ರಾತ್ರಿಯೂಟದ ಸಮಯಕ್ಕೆ ಹೇಳಿ ಮಾಡಿಸಿದ ಹಣ್ಣಲ್ಲ. ಕಡಿಮೆ ಕ್ಯಾಲರಿಯಾದ್ದರಿಂದ ಇದು ಬೇಗ ಕರಗೀತು ಎಂದು ನೀವು ಲೆಕ್ಕಾಚಾರ ಹಾಕಿದರೆ ನಿಮ್ಮ ಲೆಕ್ಕಾಚಾರ ಖಂಡಿತ ತಪ್ಪು. ಬನ್ನಿ, ಕಲ್ಲಂಗಡಿಯನ್ನು (watermelon at night) ಯಾಕೆ ರಾತ್ರಿ ತಿನ್ನಬಾರದು ಎಂಬುದನ್ನು ತಿಳಿಯೋಣ.

Watermelon

ಇದು ಆಮ್ಲೀಯ ಗುಣ ಹೊಂದಿದೆ

ವಾಟರ್‌ ಮೆಲನ್‌ ಎಂಬ ತನ್ನ ಹೆಸರೇ ಹೇಳುವಂತೆ, ಕಲ್ಲಂಗಡಿ ಹಣ್ಣಿನಲ್ಲಿ 90ಕ್ಕೂ ಹೆಚ್ಚು ಪ್ರತಿಶತ ನೀರಿದೆ. ಲೈಕೋಪೀನ್, ಪೊಟಾಶಿಯಂ, ಹಾಗೂ ಸಾಕಷ್ಟು ಪ್ರಮಾಣದಲ್ಲಿ ಇತರ ಪೋಷಕಾಂಶಗಳೂ ಇವೆ. ನಾರಿನಂಶವೂ ಹೆಚ್ಚಿದೆ. ಹಾಗಾಗಿ ಜೀರ್ಣಕ್ರಿಯೆಗೆ ಸಹಾಯವನ್ನೂ ಮಾಡುತ್ತದೆ ನಿಜ. ಆದರೆ, ಇವೆಲ್ಲ ಇದ್ದೂ, ಕಲ್ಲಂಗಡಿ ಹಣ್ಣನ್ನು ಯಾವಾಗ ಎಷ್ಟು ತಿನ್ನಬೇಕು ಎಂಬ ಅರಿವು ಇರಬೇಕು. ಮುಖ್ಯವಾಗಿ ರಾತ್ರಿ ಮಲಗಲು ಹೋಗುವ ಮುನ್ನ ತಿನ್ನಬಾರದು. ಅಂದರೆ, ರಾತ್ರಿಯೂಟ ಎಂದು ಕಲ್ಲಂಗಡಿ ಹಣ್ಣನ್ನು ತಿನ್ನಬಾರದು. ಸಂಜೆ ಏಳರ ನಂತರ ಕಲ್ಲಂಗಡಿ ಹಣ್ಣನ್ನು ತಿನ್ನುವುದು ಖಂಡಿತವಾಗಿಯೂ ಒಳ್ಳೆಯದಲ್ಲ. ಯಾಕೆಂದರೆ, ಕಲ್ಲಂಗಡಿ ಹಣ್ಣು ಸ್ವಲ್ಪ ಅಸಿಡಿಕ್‌ ಅಂದರೆ ಆಮ್ಲೀಯ ಗುಣವನ್ನೂ ಹೊಂದಿರುವುದರಿಂದ ದೇಹ ವಿಶ್ರಾಂತಿಗೆ ಹೊರಡುವ ಸಂದರ್ಭ ಇದರ ಸೇವನೆ ಒಳ್ಳೆಯದಲ್ಲ. ಅಷ್ಟೇ ಅಲ್ಲ, ಇದು ಜೀರ್ಣಕ್ರಿಯೆಯನ್ನೂ ನಿಧಾನಗೊಳಿಸುವ ಅಪಾಯವಿರುತ್ತದೆ.

Woman Eating Watermelon

ಮಧ್ಯಾಹ್ನ ಸೇವನೆ ಸೂಕ್ತ

ಕಲ್ಲಂಗಡಿ ಹಣ್ಣಿನ ಸೇವನೆಗೆ ಅತ್ಯಂತ ಒಳ್ಳೆಯ ಸಮಯ ಎಂದರೆ ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಒಂದು ಗಂಟೆ. ಈ ಸಂದರ್ಭ ದೇಹದ ಜೀರ್ಣಕ್ರಿಯೆಯ ಶಕ್ತಿ ಅತ್ಯಂತ ಹೆಚ್ಚಿರುತ್ತದೆ. ಆಗ, ಕಲ್ಲಂಗಡಿ ಹಣ್ಣಿನ ಪೋಷಕಾಂಶಗಳೂ ಸಹ ದೇಹಕ್ಕೆ ಸಮರ್ಪಕವಾಗಿ ಸಿಗುತ್ತದೆ.

Digestive Issues Coffee Side Effects

ಜೀರ್ಣಕ್ರಿಯೆ ಸ್ನೇಹಿಯಲ್ಲ

ನಾವಂದುಕೊಂಡಂತೆ, ರಾತ್ರಿಯ ಹೊತ್ತು ಕಲ್ಲಂಗಡಿ ಹಣ್ಣು ಜೀರ್ಣಕ್ರಿಯೆಯ ಸ್ನೇಹಿಯಲ್ಲ. ಹಗಲಿನಲ್ಲಿ, ಇದು ಜೀರ್ಣಕ್ರಿಯೆಗೆ ಸಹಾಯ ಮಾಡಿದರೂ ರಾತ್ರಿಯಾದ ಮೇಲೆ, ದೇಹ ವಿಶ್ರಾಂತಿಯಲ್ಲಿರುವಾಗ ಇದರ ವರಸೆ ಬದಲಾಗುತ್ತದೆ. ಹಾಗಾಗಿ, ರಾತ್ರಿ ಇದನ್ನು ಸೇವಿಸಿದರೆ, ಮಾರನೇ ದಿನ ಹೊಟ್ಟೆ ಕೆಡುವುದು, ಚೆನ್ನಾಗಿ ಕರಗಿದ ಅನುಭವ ಆಗದೆ ಇರುವುದು, ಹೊಟ್ಟೆ ಸಂಬಂಧೀ ಕಿರಿಕಿರಿಗಳು ಉಂಟಾಗುವ ಸಂಭವ ಇವೆ.

Belly Fat Reduction

ತೂಕ ಏರುವ ಆತಂಕ

ಕಲ್ಲಂಗಡಿ ಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆಯ ಪ್ರಮಾಣ ಹೆಚ್ಚಿರುವುದರಿಂದ ರಾತ್ರಿ ಸೇವಿಸಿದರೆ, ತೂಕ ಹೆಚ್ಚಾಗುವ ಸಂಭವವೂ ಇದೆ.

Sleeping tips

ರಾತ್ರಿ ನಿದ್ರೆಗೆ ಭಂಗ

ಕೇವಲ ಇವಿಷ್ಟೇ ಅಲ್ಲ, ಕಲ್ಲಂಗಡಿ ಹಣ್ಣಿನಲ್ಲಿ ಹೆಚ್ಚು ನೀರಿರುವುದರಿಂದ ಆಗಾಗ ಮೂತ್ರ ಬರುವ ಸಂಭವ ಹೆಚ್ಚು. ಹೀಗಾಗಿ, ರಾತ್ರಿಯ ನಿದ್ದೆಗೆ ಭಂಗ ಉಂಟಾಗಲೂಬಹುದು.

Home Remedies For Cough And Cold

ನೆಗಡಿಯ ಆತಂಕ

ಶೀತ ಪ್ರಕೃತಿಯ ದೇಹ ಇರುವ ಮಂದಿಗೆ ರಾತ್ರಿ ಕಲ್ಲಂಗಡಿ ಸೇವನೆಯಿಂದ ತಲೆನೋವು, ನೆಗಡಿ ಬರುವ ಸಂಭವವೂ ಇದೆ. ಮಾರನೇ ದಿನ ತಲೆ ಭಾರವಾದ ಸ್ಥಿತಿ, ತಲೆನೋವಿನ ಸಮಸ್ಯೆಯೂ ಕೆಲವರಿಗೆ ಬರಬಹುದು. ಹಾಗಾಗಿ ಈ ಬಗ್ಗೆ ಜಾಗರೂಕರಾಗಿರಿ.

ಇದನ್ನೂ ಓದಿ: Seeds For Weight Loss: ತೂಕ ಇಳಿಸಿಕೊಳ್ಳಬೇಕೆ? ಈ 7 ಬೀಜಗಳನ್ನು ನಿಯಮಿತವಾಗಿ ಸೇವಿಸಿ

ಫ್ರಿಡ್ಜ್‌ನಲ್ಲಿಟ್ಟು ತಿನ್ನುವುದು ಒಳ್ಳೆಯದಲ್ಲ

ಕಲ್ಲಂಗಡಿ ಹಣ್ಣನ್ನು ಅಂಗಡಿಯಿಂದ ತಂದ ತಕ್ಷಣ ತಾಜಾ ಆಗಿರುವಾಗಲೇ ಕತ್ತರಿಸಿ ತಿನ್ನುವುದು ಒಳ್ಳೆಯದು. ಅದನ್ನು ಫ್ರಿಡ್ಜ್‌ನಲ್ಲಿಟ್ಟು ತಿನ್ನುವುದು ಒಳ್ಳೆಯದಲ್ಲ. ತಾಜಾ ತಿನ್ನುವುದರಿಂದ ಆರೋಗ್ಯದ ಲಾಭಗಳು ಹೆಚ್ಚು.

Continue Reading

ಆರೋಗ್ಯ

Healthy Foods For Kidney: ನಮ್ಮ ಕಿಡ್ನಿ ಆರೋಗ್ಯವಾಗಿರಲು ಈ ಆಹಾರ ಸೇವನೆ ಸೂಕ್ತ

Healthy foods for kidney: ಕಿಡ್ನಿಯ ಸಮಸ್ಯೆ ಇದ್ದವರು ಯಾವಾಗಲೂ ದೇಹವನ್ನು ತೇವಾಂಶದಿಂದ ಇಟ್ಟುಕೊಳ್ಳಬೇಕು. ಇದಕ್ಕಾಗಿ ನೀರು ಕುಡಿಯುವುದು ಒಳ್ಳೆಯದು. ದೇಹಕ್ಕೆ ಸರಿಯಾದ ಪ್ರಮಾಣದಲ್ಲಿ ನೀರಿನ ಪೂರೈಕೆ ಮಾಡುತ್ತಿದ್ದರೆ, ಮಧುಮೇಹ, ಅಧಿಕ ರಕ್ತದೊತ್ತಡ, ಮಾನಸಿಕ ಒತ್ತಡ, ಉದ್ವೇಗದಂತಹ ಸಮಸ್ಯೆಗಳನ್ನು ದೂರವಿರಿಸಬಹುದು. ಕಿಡ್ನಿಯ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಯಾವ ಆಹಾರಗಳನ್ನು ಸೇವಿಸಬಹುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

VISTARANEWS.COM


on

Healthy Foods For Kidney
Koo

ಕಿಡ್ನಿಯ ಆರೋಗ್ಯಕ್ಕೆ ಒಳ್ಳೆಯ ಆಹಾರ (healthy foods for kidney) ಅತ್ಯಂತ ಮುಖ್ಯ. ಕಿಡ್ನಿಯ ಸಮಸ್ಯೆ ಇದ್ದವರು ಯಾವಾಗಲೂ ದೇಹವನ್ನು ತೇವಾಂಶದಿಂದ ಇಟ್ಟುಕೊಳ್ಳಬೇಕು. ಇದಕ್ಕಾಗಿ ನೀರು ಕುಡಿಯುವುದು ಒಳ್ಳೆಯದು. ದೇಹಕ್ಕೆ ಸರಿಯಾದ ಪ್ರಮಾಣದಲ್ಲಿ ನೀರಿನ ಪೂರೈಕೆ ಮಾಡುತ್ತಿದ್ದರೆ, ಮಧುಮೇಹ, ಅಧಿಕ ರಕ್ತದೊತ್ತಡ, ಮಾನಸಿಕ ಒತ್ತಡ, ಉದ್ವೇಗದಂತಹ ಸಮಸ್ಯೆಗಳನ್ನು ದೂರವಿರಿಸಬಹುದು. ಈ ಸಮಸ್ಯೆಗಳನ್ನು ದೂರವಿಟ್ಟರೆ, ಕಿಡ್ನಿಯ ಸಮಸ್ಯೆಗೂ ಒಳ್ಳೆಯದೇ. ಬನ್ನಿ ನಾವು ಕಿಡ್ನಿಯ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಯಾವ ಆಹಾರಗಳನ್ನು ಸೇವಿಸಬಹುದು ಎಂಬುದನ್ನು ನೋಡೋಣ.

Raw Turmeric with Powder Cutout

ಅರಿಶಿನ

ಅರಿಶಿನದಲ್ಲಿ ಸಾಕಷ್ಟು ಆಂಟಿ ಇನ್‌ಫ್ಲಮೇಟರಿ ಗುಣಗಳಿರುವುದರಿಂದ ಕಿಡ್ನಿಯಲ್ಲಾಗಿರುವ ಉರಿಯೂತದ ಲಕ್ಷಣಗಳಿಗೆ ಇದು ಒಳ್ಳೆಯದನ್ನೇ ಮಾಡುತ್ತದೆ. ಬಿಸಿ ಹಾಲಿನಲ್ಲಿ ಚಿಟಿಕೆ ಅರಿಶಿನ ಹಾಕಿ ನಿತ್ಯವೂ ಸೇವಿಸಬಹುದು.

Red capsicum Foods For Sharpen The Eyes

ಕೆಂಪು ಕ್ಯಾಪ್ಸಿಕಂ

ಕೆಂಬಣ್ಣದ ಕ್ಯಾಪ್ಸಿಕಂನಲ್ಲಿ ವಿಟಮಿನ್‌ ಸಿ, ಆಂಟಿ ಆಕ್ಸಿಡೆಂಟ್ಸ್‌ ಹೇರಳವಾಗಿರುವುದರಿಂದ ಇದು ಕಿಡ್ನಿಯ ಆರೋಗ್ಯಕ್ಕೆ ಅತ್ಯಂತ ಒಳ್ಳೆಯದು.

Gooseberries and Greengages close up Gooseberry Benefits

ನೆಲ್ಲಿಕಾಯಿ

ನೆಲ್ಲಿಕಾಯಿಯಲ್ಲಿ ವಿಟಮಿನ್‌ ಸಿ ಹಾಗೂ ಆಂಟಿ ಆಕ್ಸಿಡೆಂಟ್ಸ್‌ ಹೇರಳವಾಗಿದೆ. ಇದು ಕಿಡ್ನಿಯ ಕಾರ್ಯಶೈಲಿಯನ್ನು ಚುರುಕುಗೊಳಿಸುತ್ತದೆ. ಅಷ್ಟೇ ಅಲ್ಲ ಆಕ್ಸಿಡೇಟಿವ್‌ ಒತ್ತಡದಿಂದ ರಕ್ಷಿಸುತ್ತದೆ. ನೆಲ್ಲಿಕಾಯಿ ಚಟ್ನಿ, ಜ್ಯೂಸ್‌, ನೆಲಿಕಾಯಿ ಮೊರಬ್ಬ ಇತ್ಯಾದಿಗಳ ಸೇವನೆಯಿಂದ ದೇಹಕ್ಕೆ ಅಗತ್ಯ ಪ್ರಮಾಣದ ವಿಟಮಿನ್‌ ಸಿ ಪೂರೈಕೆ ಮಾಡಬಹುದು.

garlic Anti Infective Foods

ಬೆಳ್ಳುಳ್ಳಿ

ಬೆಳ್ಳುಳ್ಳಿಯು ಕೇವಲ ಕೊಲೆಸ್ಟೆರಾಲ್‌ ಇಳಿಸುವುದಕ್ಕೆ ಸಹಾಯ ಮಾಡುವುದಷ್ಟೇ ಅಲ್ಲ, ಅದು ಕಿಡ್ನಿಯ ಆರೋಗ್ಯವನ್ನೂ ಹೆಚ್ಚಿಸಿ ಚುರುಕಾಗಿಸುತ್ತದೆ. ಅಡುಗೆಯಲ್ಲಿ ಸಾಧ್ಯವಾದೆಡೆಯೆಲ್ಲ ಬೆಳ್ಳುಳ್ಳಿ ಬಳಸಿ. ಒಗ್ಗರಣೆಯಲ್ಲಿ ಬೆಳ್ಳುಳ್ಳಿಯನ್ನೂ ಸೇರಿಸಿ. ಆಗಾಗ ಬೆಳ್ಳುಳ್ಳಿ ಚಟ್ನಿ ಮಾಡಿ ಸೇವಿಸಿ. ಬೆಳ್ಳುಳ್ಳಿ ಪರಾಠಾ ಮಾಡಿ ಸೇವಿಸಿ. ಸೂಪ್‌ಗೆ ಬೆಳ್ಳುಳ್ಳಿ ಹಾಕಿ ಸೇವಿಸಿ.

Barley for Hot Flashes During Period

ಬಾರ್ಲಿ

ನಾರಿನಂಶ ಹೆಚ್ಚಿರುವ ಬಾರ್ಲಿಯಂತಹ ಧಾನ್ಯವನ್ನು ಬಳಕೆ ಮಾಡಲು ಕಲಿಯಿರಿ. ಇದು ರಕ್ತದಲ್ಲಿನ ಸಕ್ಕರೆಯ ಅಂಶವನ್ನು ಸಮತೋಲನದಲ್ಲಿಡಲು ಸಹಾಐ ಮಾಡುವುದಲ್ಲದೆ, ಕಿಡ್ನಿ ಸಮಸ್ಯೆಯನ್ನೂ ದೂರವಿರಿಸಲು ಸಹಾಯ ಮಾಡುತ್ತದೆ. ಬಾರ್ಲಿಯ ಒಂದು ಸರಳ ಸೂಪ್‌, ಅಥವಾ ತರಕಾರಿಗಳ ಜೊತೆಗೆ ಬಾರ್ಲಿಯನ್ನೂ ಬೇಯಿಸಿ ತಿನ್ನುವುದು ಇತ್ಯಾದಿಗಳನ್ನು ಟ್ರೈ ಮಾಡಬಹುದು.

banana stem

ಬಾಳೆದಂಡು

ಬಾಳೆಮರದ ದಂಡೂ ಕೂಡಾ ಕಿಡ್ನಿಕಲ್ಲಿಗೆ ಅತ್ಯಂತ ಒಳ್ಳೆಯ ಔಷಧಿ. ಮನೆಮದ್ದಾಗಿ ಇದನ್ನು ಬಳಕೆ ಮಾಡಿ ಕಿಡ್ನಿ ಸಮಸ್ಯೆಯಿಂದ ಪಾರಾದವರೂ ಇದ್ದಾರೆ. ಬಾಳೆದಂಡಿನ ರಸ ಹಿಂಡಿ ಅದರ ಜ್ಯೂಸನ್ನು ನಿತ್ಯವೂ ಕುಡಿಯುವುದರಿಂದ ಪ್ರಯೋಜನ ಪಡೆಯಬಹುದು. ಆದರೆ, ಪೊಟಾಶಿಯಂ ಹೆಚ್ಚಾದರೆ ಅದೂ ಕಿಡ್ನಿಗೆ ಆಪತ್ತು ತರಬಹುದು ಎಂಬುದು ನೆನಪಿರಲಿ.

Coconut water Foods For Fight Against Dengue Fever

ಎಳನೀರು

ನೈಸರ್ಗಿಕ ಎಲೆಕ್ಟ್ರೋಲೈಟ್‌ಗಳಿರುವ ಎಳನೀರು ದೇಹವನ್ನು ಸದಾ ತೇವಾಂಶದಿಂದಿಡಲು ಅನುಕೂಲಕರ. ಇದು ಕಿಡ್ನಿಯನ್ನು ಆರೋಗ್ಯವಾಗಿಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ದೇಹವನ್ನು ತಂಪಾಗಿಡುವ ಜೊತೆಗೆ ದೇಹಕ್ಕೆ ಬೇಕಾದ ಖನಿಜ ಲವಣಾಂಶಗಳನ್ನೂ ನೀಡುತ್ತದೆ. ಎಳನೀರಿನ ಜೊತೆಗೆ ನಿಂಬೆಹಣ್ಣು, ಪುದಿನ ಸೇರಿಸಿ ಕುಡಿಯುವುದರಿಂದಲೂ ಉತ್ತಮ ಪರಿಣಾಮ ಕಾಣಬಹುದು.

Blueberry Foods That Slow Down Ageing

ಬ್ಲೂಬೆರ್ರಿ

ಬ್ಲೂಬೆರ್ರಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆಂಟಿ ಆಕ್ಸಿಡೆಂಟ್‌ಗಳಿದ್ದು, ಇದು ಕಿಡ್ನಿಯ ಸಮಸ್ಯೆಗಳು ಬಾರದಂತೆ ಮೊದಲೇ ತಡೆಯುತ್ತದೆ. ಬ್ಲೂಬೆರ್ರಿ ಸ್ಮೂದಿ, ಬ್ಲೂಬೆರ್ರಿ ಯೋಗರ್ಟ್‌ ಮತ್ತಿತರ ಆಹಾರಗಳನ್ನು ತಯಾರಿಸುವ ಮೂಲಕ ಬ್ಲೂಬೆರ್ರಿಯನ್ನು ಸೇವಿಸಬಹುದು.

Ginger Digestive Boosting Foods

ಶುಂಠಿ

ಶುಂಠಿಯಲ್ಲಿ ಅತ್ಯಂತ ಹೆಚ್ಚು ಪ್ರಮಾಣದಲ್ಲಿ ಆಂಟಿ ಆಕ್ಸಿಡೆಂಟ್‌ಗಳಿವೆ. ಇದು ಕಿಡ್ನಿಗೆ ಆಗುವ ಹಾನಿಗಳನ್ನು ತಡೆಯುತ್ತದೆ. ನಿತ್ಯವೂ ಶುಂಠಿಯನ್ನು ಆಹಾರದ ಜೊತೆಯಲ್ಲಿ ಬಳಕೆ ಮಾಡುವ ಮೂಲಕ ಶುಂಠಿಯ ಉಪಯೋಗವನ್ನು ಪಡೆಯಬಹುದು. ಬಿಸಿನೀರಿಗೆ ಶುಂಠಿಯನ್ನು ತುರಿದು ಹಾಕಿ ಕುಡಿಯುವುದು, ನಿಂಬೆಹಣ್ಣು, ಜೇನುತುಪ್ಪ ಸೇರಿಸಿ ಶುಂಠಿ ಚಹಾ ಮಾಡಿ ಕುಡಿಯುವುದು ಇತ್ಯಾದಿಗಳ ಮೂಲಕ ಶುಂಠಿಯ ಉಪಯೋಗವನ್ನು ದೇಹ ಪಡೆದುಕೊಳ್ಳುವಂತೆ ಮಾಡಬಹುದು.

Antioxidant Properties Cucumber Benefits

ಸೌತೆಕಾಯಿ

ಸೌತೆಕಾಯಿಯಲ್ಲಿ ನೀರಿನಂಶ ಬಹಳ ಹೆಚ್ಚಿರುವುದರಿಂದ ಸಹಜವಾಗಿಯೇ ಕಿಡ್ನಿಕಲ್ಲು ಮತ್ತಿತರ ಕಿಡ್ನಿ ಸಮಸ್ಯೆಗೆ ಇದು ಅತ್ಯಂತ ಒಳ್ಳೆಯದು. ಇದರ ಸೇವನೆಯಿಂದ ಕಿಡ್ನಿಯಲ್ಲಿರುವ ಹಾಗೂ ದೇಹದಲ್ಲಿರುವ ವಿಷಕಾರೀ ಅಂಶಗಳನ್ನು ಹೊರಕ್ಕೆ ಕಳಿಸುವಂತೆ ಮಾಡಬಹುದು. ಇದರ ಜೊತೆಗೆ ನಿಂಬೆಹಣ್ಣು ಹಿಂಡಿಯೂ ಸೇವಿಸಬಹುದು.

ಇದನ್ನೂ ಓದಿ: Weight Loss Tips: ಕಪ್ಪು ಬಣ್ಣದ ಆಹಾರಗಳಿಂದ ತೂಕ ಇಳಿಸಿ!

Continue Reading
Advertisement
Actor Yash to recreate the 50s and 70s era in Toxic
ಸಿನಿಮಾ3 mins ago

Actor Yash: ರಾಕಿಂಗ್‌ ಸ್ಟಾರ್‌ ಯಶ್‌ ʼಟಾಕ್ಸಿಕ್‌ʼ ಸಿನಿಮಾದಿಂದ ಹೊರ ಬಿತ್ತು ಬಿಗ್‌ ಅಪ್‌ಡೇಟ್‌!

police constable commits suicide
ಬೆಂಗಳೂರು11 mins ago

police constable : 3 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಕಾನ್ಸ್‌ಟೇಬಲ್‌ ನಾಪತ್ತೆ; ಪಾಳು ಬಾವಿಯಲ್ಲಿ ಶವವಾಗಿ ಪತ್ತೆ

New Rules
ವಾಣಿಜ್ಯ18 mins ago

New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

new criminal law
ಕ್ರೈಂ38 mins ago

New Criminal Law: ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ ಹಾಸನದಲ್ಲಿ ದಾಖಲು, ಯಾವ ಕೇಸ್?‌

tumkur News Assault Case
ತುಮಕೂರು54 mins ago

Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

Amith Shah
ದೇಶ55 mins ago

Amit Shah: ಹೊಸ ಕ್ರಿಮಿನಲ್ ಕಾನೂನಿನಲ್ಲಿ ಶಿಕ್ಷೆಯ ಬದಲು ನ್ಯಾಯಕ್ಕೆ ಪ್ರಾಧಾನ್ಯತೆ; ಅಮಿತ್ ಶಾ

Parliament Sessions
ದೇಶ56 mins ago

Parliament Sessions: ಹಿಂದೂ ಹಿಂಸಾವಾದಿ ಹೇಳಿಕೆ; ಸಂಸತ್‌ನಲ್ಲಿ ರಾಹುಲ್‌-ಮೋದಿ ಜಟಾಪಟಿ

Meghana Raj didn't want to enter the film Father Sundarraj
ಸ್ಯಾಂಡಲ್ ವುಡ್1 hour ago

Meghana Raj: ಮೇಘನಾ ರಾಜ್‌  ಫಿಲ್ಮ್​ಗೆ ಎಂಟ್ರಿ ಕೊಟ್ಟಿದ್ದು ಇಷ್ಟವಿರಲಿಲ್ಲ; ಬೇಸರ ಹೊರಹಾಕಿದ್ದ ಅಪ್ಪ ಸುಂದರರಾಜ್​ 

Assault Case in Hubballi
ಹುಬ್ಬಳ್ಳಿ1 hour ago

Assault case: ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ಗ್ಯಾಂಗ್ ವಾರ್! ನಡುರಸ್ತೆಯಲ್ಲೆ ಹೊಡಿಬಡಿ

DK ShivaKumar
ಪ್ರಮುಖ ಸುದ್ದಿ1 hour ago

DK Shivakumar: ಸಿಎಂ- ಡಿಸಿಎಂ ದಂಗಲ್‌ ವಿಷಯ ಎತ್ತುವ ಶಾಸಕರಿಗೆ ನೊಟೀಸ್: ಡಿಕೆ ಶಿವಕುಮಾರ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ22 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌