National Technology Day ಪೋಖ್ರಾನ್‌ ಅಣು ಪರೀಕ್ಷೆ ಯಶಸ್ವಿಯಾಗಿ ನಡೆದ ಹೆಮ್ಮೆಯ ದಿನ - Vistara News

ತಂತ್ರಜ್ಞಾನ

National Technology Day ಪೋಖ್ರಾನ್‌ ಅಣು ಪರೀಕ್ಷೆ ಯಶಸ್ವಿಯಾಗಿ ನಡೆದ ಹೆಮ್ಮೆಯ ದಿನ

ಪೋಖ್ರಾನ್‌ ಪರಮಾಣು ಪರೀಕ್ಷೆ ಮೂಲಕ ಭಾರತ ಪರಮಾಣು ಶಕ್ತ ರಾಷ್ಟ್ರವಾಗಿ ಹೊರಹೊಮ್ಮಿದ ಹೆಮ್ಮೆಯ ದಿನವಾದ 1998ರ ಮೇ 11 ಅಂದಿನಿಂದಲೇ ರಾಷ್ಟ್ರೀಯ ತಂತ್ರಜ್ಞಾನ ದಿನ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಅದ್ವಿತೀಯ ಸಾಧನೆಯ ಮಹತ್ವದ ಮೈಲುಗಲ್ಲು ಎಂದು ಗುರುತಿಸಲ್ಪಟ್ಟಿರುವುದು 1998ರ ಮೇ 11ರಂದು ನಡೆದ ಪೋಖ್ರಾನ್‌-2 ಪರಮಾಣು ಸ್ಫೋಟ. ಇದು ಜಗತ್ತಿನ ಬಲಿಷ್ಠ ರಾಷ್ಟ್ರಗಳ ಮುಂದೆ ತಲೆ ಎತ್ತಿ ನಿಲ್ಲುವಂತೆ ಮಾಡಿದ ಮತ್ತು ಭವಿಷ್ಯದಲ್ಲಿ ಭಾರತ ಸೂಪರ್‌ ಪವರ್‌ ರಾಷ್ಟ್ರವಾಗಿ ಎದ್ದು ನಿಲ್ಲಲಿದೆ ಎಂಬ ಭರವಸೆ ಮೂಡಿಸಿದ ದಿನ.

ಆ ದಿನವನ್ನು ರಾಷ್ಟ್ರೀಯ ತಂತ್ರಜ್ಞಾನ ದಿನ-National Technology Day ಎಂದು ಹೆಮ್ಮೆಯಿಂದ ಆಚರಿಸಲಾಗುತ್ತಿದೆ. ಪೋಖ್ರಾನ್‌ ಅಣು ಸ್ಫೋಟ ನಡೆದಾಗ ಪ್ರಧಾನ ಮಂತ್ರಿಗಳಾಗಿದ್ದ ಅಟಲ್‌ ಬಿಹಾರಿ ವಾಜಪೇಯಿ ಅವರು ಅಧಿಕೃತವಾಗಿ ಈ ದಿನವನ್ನು ರಾಷ್ಟ್ರೀಯ ತಂತ್ರಜ್ಞಾನ ದಿನವಾಗಿ ಘೋಷಿಸಿದ್ದರು.

1974ರ ಮೇ 18ರಂದು ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಕಾಲದಲ್ಲಿ ಪೋಖ್ರಾನ್‌ನಲ್ಲಿ ಮೊದಲ ಪರಮಾಣು ಪರೀಕ್ಷೆ ನಡೆದಿತ್ತು. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೂ ಒಂದು ದೊಡ್ಡ ಹೆಜ್ಜೆ. ಭಾರತ ತಂತ್ರಜ್ಞಾನ ಕ್ಷೇತ್ರದಲ್ಲಿ ನಿರಂತರ ಪ್ರಗತಿಯನ್ನು ಕಾಣುತ್ತಿರುವ ಹೊತ್ತಿನಲ್ಲಿ ಇದಕ್ಕೆಲ್ಲ ಕಾರಣರಾದ ವಿಜ್ಞಾನಿಗಳು, ಎಂಜಿನಿಯರ್‌ಗಳು, ತಂತ್ರಜ್ಞರನ್ನು ನೆನಪಿಸಿಕೊಂಡು ಭಾರತದ ಪ್ರಗತಿಗೆ ಹೆಮ್ಮೆ ಪಡುವ ದಿನ ಮೇ 11.

ಪೋಖ್ರಾನ್‌ನಲ್ಲಿ ಅಂದು ಏನಾಗಿತ್ತು?
ಅದು ಪರಮಾಣು ಪರೀಕ್ಷೆಗೆ ಜಗತ್ತಿನ ಬಲಿಷ್ಠ ರಾಷ್ಟ್ರಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದ ದಿನಗಳು. ಕೆಲವೇ ರಾಷ್ಟ್ರಗಳು ಅಣ್ವಸ್ತ್ರ ಹಿಡಿದು ಬೆದರಿಸುತ್ತಿದ್ದ ಕಾಲ. ಇಂಥ ಹೊತ್ತಿನಲ್ಲಿ ಭಾರತ ತಾನೂ ಪರಮಾಣು ಪರೀಕ್ಷೆ ನಡೆಸಬೇಕೆಂದು ನಿರ್ಧರಿಸಿತು. ಆದರೆ, ಈ ಪ್ಲ್ಯಾನ್‌ ಬಹಿರಂಗಗೊಂಡರೆ ತೀವ್ರ ವಿರೋಧ ವ್ಯಕ್ತವಾಗಬಹುದು ಎಂಬ ಕಾರಣಕ್ಕೆ ಇದನ್ನು ಅತ್ಯಂತ ಗೌಪ್ಯವಾಗಿ ನಡೆಸಲು ನಿರ್ಧರಿಸಲಾಯಿತು. ಅದಕ್ಕಾಗಿ ನಿಗದಿಯಾಗಿದ್ದು 1974ರಲ್ಲಿ ಪರಮಾಣು ಪರೀಕ್ಷೆ ನಡೆದಿದ್ದ ರಾಜಸ್ಥಾನದ ಅದೇ ಪೋಖ್ರಾನ್‌ನ್ನು. ನೇತೃತ್ವ ವಹಿಸಿದವರು ಮುಂದೆ ಭಾರತದ ರಾಷ್ಟ್ರಪತಿಗಳಾಗಿ ಅಧಿಕಾರ ನಿರ್ವಹಿಸಿದ ಜಗತ್ತು ಕಂಡ ಶ್ರೇಷ್ಠ ವಿಜ್ಞಾನಿಗಳಲ್ಲಿ ಒಬ್ಬರಾದ ʻಮಿಸೈಲ್‌ ಮ್ಯಾನ್‌ʼ ಡಾ. ಎಪಿಜೆ ಅಬ್ದುಲ್‌ ಕಲಾಂ.

ಈ ಕಾರ್ಯಾಚರಣೆ ಎಷ್ಟೊಂದು ನಿಗೂಢವಾಗಿ ನಡೆಯಿತು ಎಂದರೆ ಆವತ್ತು ಬೆಳಗ್ಗೆ ಪರೀಕ್ಷೆ ನಡೆಯುವವರೆಗೆ ಜಾಗತಿಕ ಪರಮಾಣು ಶಕ್ತ ರಾಷ್ಟ್ರಗಳಿಗೆ ಅದರ ಸಣ್ಣ ಸುಳಿವೇ ಇರಲಿಲ್ಲ. ಹೆಚ್ಚೇನು ತಂಡದಲ್ಲಿದ್ದ ಕೆಲವು ಸಿಬ್ಬಂದಿಗಳಿಗೂ ನಿಜಕ್ಕೂ ಇಲ್ಲಿ ನಡೆಯುತ್ತಿರುವುದೇನು ಎನ್ನುವುದರ ಅರಿವು ಇರಲಿಲ್ಲ. ಆವತ್ತು ಒಂದರ ಬೆನ್ನಿಗೆ ಒಂದರಂತೆ ಐದು ಪರೀಕ್ಷೆಗಳು ನಡೆದು ಅಟಲ್‌ ಬಿಹಾರಿ ವಾಜಪೇಯಿ ಅವರು ಭಾರತವನ್ನು ಪರಮಾಣು ಶಕ್ತ ರಾಷ್ಟ್ರವಾಗಿ ಘೋಷಿಸಿದರು.

2022ರ ಥೀಮ್‌ ಏನು?
ಸಹನೀಯ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನದ ಸಂಯೋಜಿತ ಪರಿಕ್ರಮ- ಇದು 2022ರ ರಾಷ್ಟ್ರೀಯ ತಂತ್ರಜ್ಞಾನ ದಿನದ ಧ್ಯೇಯ ವಾಕ್ಯ. ಅಂದರೆ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ದೇಶದ ಅಭಿವೃದ್ಧಿಗೆ ಅದ್ಭುತವಾಗಿ ಬಳಸಿಕೊಳ್ಳುವಂತೆಯೇ ಅದು ಸಹನೀಯವಾಗಿ ನೋಡಿಕೊಳ್ಳುವ ಜವಾಬ್ದಾರಿಯನ್ನೂ ಈ ಧ್ಯೇಯವಾಕ್ಯ ನೆನಪಿಸುತ್ತದೆ.

ಪ್ರಧಾನಿ ಮೋದಿ ಅಭಿನಂದನೆ
ʻʻಇವತ್ತು ರಾಷ್ಟ್ರೀಯ ತಂತ್ರಜ್ಞಾನ ದಿನ. 1998ರ ಪೋಖ್ರಾನ್‌ ಪರಮಾಣು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ ನಮ್ಮ ಶಕ್ತಿಶಾಲಿ, ಬುದ್ಧಿವಂತ ವಿಜ್ಞಾನಿಗಳು ಮತ್ತು ಅವರ ಪ್ರಯತ್ನಗಳಿಗೆ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತಿದ್ದೇವೆ. ಅತ್ಯದ್ಭುತ ರಾಜಕೀಯ ಧೈರ್ಯ ಮತ್ತು ಮುತ್ಸದ್ದಿತನ ತೋರಿದ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಅಸಾಮಾನ್ಯ ನಾಯಕತ್ವವನ್ನು ನಾವು ಇಂದು ಹೆಮ್ಮೆಯಿಂದ ನೆನೆಯುತ್ತೇವೆ,ʼʼ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ತಂತ್ರಜ್ಞಾನದಲ್ಲಿ ಭಾರತದ ಸ್ಥಾನಮಾನ
-ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ವೇಗವಾಗಿ ಮುನ್ನುಗ್ಗುತ್ತಿದೆ. ಆದರೂ ಸಾಗಬೇಕಾದ ಹಾದಿ ಬಹಳಷ್ಟು ಇದೆ. ಚಂದ್ರಯಾನ, ಉಪಗ್ರಹಗಳ ಉಡಾವಣೆ ವಿಷಯದಲ್ಲಿ ಭಾರತ ಜಗತ್ತಿನ ಐದು ಅತ್ಯುನ್ನತ ರಾಷ್ಟ್ರಗಳಲ್ಲಿ ಒಂದಾಗಿದೆ.
– ತಂತ್ರಜ್ಞಾನ ಹೂಡಿಕೆ ತಾಣವಾಗಿ ಭಾರತ ಬೆಳೆಯುತ್ತಿದ್ದು, ಒಟ್ಟಾರೆ ಹೂಡಿಕೆಯಲ್ಲಿ ಜಗತ್ತಿನಲ್ಲೇ ಮೂರನೇ ಸ್ಥಾನದಲ್ಲಿದೆ.
– ಜಾಗತಿಕ ಅನ್ವೇಷಣಾ ಸೂಚ್ಯಂಕದಲ್ಲಿ ಭಾರತದ ಈಗಿನ ರಾಂಕಿಂಗ್‌ 48ನೆಯದು.
– ಮಾಹಿತಿ ಮತ್ತು ಸಂಪರ್ಕ ತಂತ್ರಜ್ಞಾನ ಕ್ಷೇತ್ರದಲ್ಲಿನಲ್ಲಿ ಹೊಸ ಅನ್ವೇಷಣೆಗಳನ್ನು ನಡೆಸುತ್ತಿರುವ ಅಗ್ರ ದೇಶಗಳ ಪೈಕಿ ಭಾರತ 15ನೇ ಸ್ಥಾನದಲ್ಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Toyota Kirloskar Motor: ಟೊಯೊಟಾ ರುಮಿಯಾನ್‌ G-AT ಬುಕ್ಕಿಂಗ್‌ ಶುರು! ಏನಿದರ ವಿಶೇಷ?

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಟೊಯೊಟಾ ರುಮಿಯಾನ್ G-AT ನೂತನ ಗ್ರೇಡ್ ಅನ್ನು ಪರಿಚಯಿಸಿದ್ದು, 1.5-ಲೀಟರ್ ಸೀರಿಸ್ ಪೆಟ್ರೋಲ್ ಎಂಜಿನ್‌ನೊಂದಿಗೆ 6-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್‌ನಿಂದ ನಿಯಂತ್ರಿಸಲ್ಪಡುತ್ತದೆ. ನಿಯೋ ಡ್ರೈವ್ (ಐಎಸ್‌ಜಿ) ತಂತ್ರಜ್ಞಾನವನ್ನು ಒಳಗೊಂಡಿದೆ.

VISTARANEWS.COM


on

Toyota Kirloskar Motor Introduces New G-AT Grade of Toyota Rumion
Koo

ಬೆಂಗಳೂರು: ಟೊಯೊಟಾ ರುಮಿಯಾನ್‌ನ G-AT ಹೊಸ ಸರಣಿಯ ಅಧಿಕೃತ ಬುಕ್ಕಿಂಗ್ ಆರಂಭಿಸಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor) ಬೆಲೆಯನ್ನು ಇಂದು ಘೋಷಿಸಿದ್ದು, ಹೊಸದಾಗಿ ಬಿಡುಗಡೆಯಾದ G-AT ವೇರಿಯಂಟ್‌ ಸರಿಸಾಟಿಯಿಲ್ಲದ ಸ್ಪೇಸ್ ಮತ್ತು ಕಂಫರ್ಟ್‌, ಅತ್ಯುತ್ತಮ ಇಂಧನ ದಕ್ಷತೆ, ಸ್ಟೈಲಿಶ್ ಮತ್ತು ಪ್ರೀಮಿಯಂ ಎಕ್ಸ್‌ಟೀರಿಯರ್ ಡಿಸೈನ್‌ ಒಳಗೊಂಡಿದೆ.

ಟಿಕೆಎಂನ ಇತ್ತೀಚಿನ ಆಫರ್ ಬೆಲೆಯು 13 ಲಕ್ಷ ರೂ. ಗಳ ಆಕರ್ಷಕ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. ಡೆಲಿವರಿ ಮೇ 5 ರಿಂದ ಪ್ರಾರಂಭವಾಗುವ ನಿರೀಕ್ಷೆಯಿದ್ದು, ಗ್ರಾಹಕರು ಯಾವುದೇ ಅಧಿಕೃತ ಡೀಲರ್‌ಶಿಪ್‌ಗಳಲ್ಲಿ ಅಥವಾ ಆನ್‌ಲೈನ್‌ನಲ್ಲಿ 11 ಸಾವಿರ ರೂ. ಬುಕಿಂಗ್ ಶುಲ್ಕದೊಂದಿಗೆ ವಾಹನವನ್ನು ಬುಕ್ ಮಾಡಬಹುದಾಗಿದೆ.

ಇದನ್ನೂ ಓದಿ: Labour Day 2024: ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿ ಉದ್ಯೋಗಿಗಳಿಗೆ ಉಪಯುಕ್ತ ಹಣಕಾಸು ಟಿಪ್ಸ್‌ ಇಲ್ಲಿದೆ

ಟೊಯೊಟಾ ರುಮಿಯಾನ್ G-AT ವೇರಿಯಂಟ್ 1.5-ಲೀಟರ್ ಸೀರಿಸ್ ಪೆಟ್ರೋಲ್ ಎಂಜಿನ್‌ನೊಂದಿಗೆ 6-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್‌ನಿಂದ ನಿಯಂತ್ರಿಸಲ್ಪಡುತ್ತದೆ. ನಿಯೋ ಡ್ರೈವ್ (ಐಎಸ್‌ಜಿ) ತಂತ್ರಜ್ಞಾನವನ್ನು ಒಳಗೊಂಡಿದೆ. ಪೆಟ್ರೋಲ್ ಗ್ರೇಡ್ 75.8 ಕಿಲೋವ್ಯಾಟ್ @ 6000 rpm ಪವರ್ ಮತ್ತು 136.8 Nm @ 4400 ಆರ್‌ಪಿಎಂ ಟಾರ್ಕ್ ಅನ್ನು ಹೊಂದಿದೆ. ಸಿಎನ್‌ಜಿ ಗ್ರೇಡ್ 64.6 ಕಿಲೋವ್ಯಾಟ್ ಔಟ್‌ಪುಟ್ @ 5500 rpm ಮತ್ತು 121.5 Nm@4200 rpm ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಟೊಯೊಟಾ ರುಮಿಯಾನ್ ಈಗ ನಿಯೋ ಡ್ರೈವ್ MT ಏಳು ರೂಪಾಂತರಗಳಲ್ಲಿ ಲಭ್ಯವಿದೆ. ಎಸ್, ಜಿ ಮತ್ತು ವಿ ಗ್ರೇಡ್ ಮತ್ತು ನಿಯೋ ಡ್ರೈವ್ AT: ಎಸ್, ಜಿ ಮತ್ತು ವಿ ಗ್ರೇಡ್. ಇ-ಸಿಎನ್ ಜಿ: ಎಸ್ ಗ್ರೇಡ್ ಗ್ರಾಹಕರಿಗೆ ವ್ಯಾಪಕ ಶ್ರೇಣಿಯ ಆಯ್ಕೆಗಳನ್ನು ನೀಡುತ್ತದೆ.

G-AT ವೇರಿಯಂಟ್ ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಹೊಂದಿರುವ 17.78 ಸೆಂ.ಮೀ ಸ್ಮಾರ್ಟ್ ಪ್ಲೇ ಕ್ಯಾಸ್ಟ್ ಟಚ್ ಸ್ಕ್ರೀನ್ ಆಡಿಯೊ ಸಿಸ್ಟಮ್ ಸೇರಿದಂತೆ ಸುಧಾರಿತ ತಂತ್ರಜ್ಞಾನವನ್ನು ಒಳಗೊಂಡಿದೆ. ಟೊಯೊಟಾ i-Connect ಹೊಂದಿರುವ ಇದು ಹವಾಮಾನ, ಲಾಕ್ / ಅನ್ಲಾಕ್, ಹಜಾರ್ಡ್ ಲೈಟ್ಸ್ ಸೇರಿದಂತೆ ಅನೇಕ ಸಂಪರ್ಕಿತ ವೈಶಿಷ್ಟ್ಯಗಳಿಗಾಗಿ ರಿಮೋಟ್ ಕಂಟ್ರೋಲ್ ಅನ್ನು ನೀಡುತ್ತದೆ. ಟೊಯೊಟಾ ರುಮಿಯಾನ್ ಡ್ಯುಯಲ್ ಫ್ರಂಟ್ ಏರ್ ಬ್ಯಾಗ್ಸ್, ಇಬಿಡಿಯೊಂದಿಗೆ ಎಬಿಎಸ್, ಹಿಲ್ ಹೋಲ್ಡ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ (ಇಎಸ್ ಪಿ) ಸೇರಿದಂತೆ ಹಲವು ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ತನ್ನ ಮಾಲೀಕರ ಸುರಕ್ಷತೆಗೆ ಆದ್ಯತೆ ನೀಡುತ್ತದೆ.

ಇದನ್ನೂ ಓದಿ: IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ ಕುಲ್​ದೀಪ್, ನರೈನ್

ಈ ಕುರಿತು ಟಿಕೆಎಂನ ಸೇಲ್ಸ್ ಅಂಡ್ ಸ್ಟ್ರಾಟಜಿಕ್ ಮಾರ್ಕೆಟಿಂಗ್ ನ ಉಪಾಧ್ಯಕ್ಷ ಶಬರಿ ಮನೋಹರ್ ಮಾತನಾಡಿ, ಟೊಯೊಟಾ ರುಮಿಯಾನ್ ಸೀರಿಸ್‌ಗೆ ಹೊಸ ಗ್ರೆಡ್ ಸೇರ್ಪಡೆಯನ್ನು ಘೋಷಿಸಲು ನಾವು ಉತ್ಸುಕರಾಗಿದ್ದೇವೆ, ಇದರಿಂದಾಗಿ ಗ್ರಾಹಕರಿಗೆ ಅವರ ಚಲನಶೀಲತೆ ಅಗತ್ಯತೆಗಳು ಮತ್ತು ಅವಶ್ಯಕತೆಗಳ ಆಧಾರದ ಮೇಲೆ ವ್ಯಾಪಕ ಆಯ್ಕೆಗಳನ್ನು ನೀಡುತ್ತದೆ. G-AT ವೇರಿಯಂಟ್‌ನ ಬುಕಿಂಗ್ ಈಗ ತೆರೆದಿದೆ. ಆಗಸ್ಟ್ 23ರಲ್ಲಿ ಬಿಡುಗಡೆಯಾದಾಗಿನಿಂದ ಟೊಯೊಟಾ ರುಮಿಯಾನ್ ಗ್ರಾಹಕರಲ್ಲಿ ಹೆಚ್ಚಿನ ಉತ್ಸಾಹವನ್ನು ಸೃಷ್ಟಿಸಿದೆ. ಇದು ಹೆಚ್ಚಿನ ಎನ್‌ಕ್ವೈರಿ ಮತ್ತು ಆರೋಗ್ಯಕರ ಬುಕಿಂಗ್‌ಗೆ ಕಾರಣವಾಗಿದೆ. ನಮ್ಮ ಮೌಲ್ಯಯುತ ಗ್ರಾಹಕರು ತೋರಿಸಿದ ಪ್ರೀತಿ ಮತ್ತು ನಂಬಿಕೆಯನ್ನು ನಾವು ತುಂಬು ಹೃದಯದಿಂದ ಪ್ರಶಂಸಿಸುತ್ತೇವೆ ಎಂದು ತಿಳಿಸಿದ್ದಾರೆ.

ಟೊಯೊಟಾ MPV ಸಿಗ್ನೇಚರ್ ಫ್ರಂಟ್ ಗ್ರಿಲ್, ಕ್ರೋಮ್ ಫಿನಿಶ್‌ನೊಂದಿಗೆ ಫ್ರಂಟ್ ಬಂಪರ್, ಬ್ಯಾಕ್ ಡೋರ್ ಕ್ರೋಮ್ ಡಿಸೈನ್ ನೊಂದಿಗೆ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ. ಅತ್ಯಾಧುನಿಕ ಡ್ಯುಯಲ್ ಟೋನ್ ಅಲಾಯ್ ವೀಲ್ಸ್, ದೃಢವಾದ ಗುಣಲಕ್ಷಣಗಳೊಂದಿಗೆ ರಫ್ ಲುಕ್‌ಗಾಗಿ ರುಮಿಯನ್ ಸ್ಟೈಲಿಶ್ ಮತ್ತು ಪ್ರೀಮಿಯಂ ಎಕ್ಸ್‌ಟೀರಿಯರ್ ಡಿಸೈನ್ ಅನ್ನು ಹೊಂದಿದೆ. ಐಷಾರಾಮಿ ಒಳಾಂಗಣವು ಮರದ ಫಿನಿಶ್ ಡ್ಯಾಶ್ ಬೋರ್ಡ್ ಮತ್ತು ಡೋರ್ ಟ್ರಿಮ್‌ಗಳೊಂದಿಗೆ ಪ್ರೀಮಿಯಂ ಡ್ಯುಯಲ್-ಟೋನ್, ಪ್ರೀಮಿಯಂ ಡ್ಯುಯಲ್-ಟೋನ್ ಒಳಾಂಗಣ ಮತ್ತು ಅನುಕೂಲಕರ ಸೌಲಭ್ಯಗಳನ್ನು ನೀಡುತ್ತದೆ.

ಇದನ್ನೂ ಓದಿ: Maoists killed: ಭದ್ರತಾ ಪಡೆಗಳ ಜತೆ ಗುಂಡಿನ ಚಕಮಕಿ, ಏಳು ಮಾವೋವಾದಿಗಳು ಫಿನಿಶ್

ಟೊಯೊಟಾ ರುಮಿಯಾನ್ ಅತ್ಯುನ್ನತ ಸುರಕ್ಷತಾ ಮಾನದಂಡಗಳನ್ನು ಸಹ ನೋಡುತ್ತದೆ. ಇದು ಡ್ಯುಯಲ್ ಫ್ರಂಟ್ ಏರ್ ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್ ಮತ್ತು ಬ್ರೇಕ್ ಅಸಿಸ್ಟ್, ಎಂಜಿನ್ ಇಮೊಬೈಲೈಜರ್, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ಐಎಸ್ ಒ ಫಿಕ್ಸ್ ಚೈಲ್ಡ್ ಸೀಟ್ ಆಂಕೋರೇಜ್‌ಗಳೊಂದಿಗೆ ಬಿಡುಗಡೆಯಾಗುತ್ತಿದೆ. ಪ್ರಿಟೆನ್ಷನರ್‌ಗಳು ಮತ್ತು ಫೋರ್ಸ್ ಲಿಮಿಟರ್‌ಗಳೊಂದಿಗೆ ಫ್ರಂಟ್ ಸೀಟ್ ಬೆಲ್ಟ್‌ಗಳು, ಎಲ್ಲಾ ಸೀಟ್‌ಗಳಿಗೆ ಸೀಟ್ ಬೆಲ್ಟ್ ರಿಮೈಂಡರ್ ಮತ್ತು ಹೈಸ್ಪೀಡ್ ಅಲರ್ಟ್ ಸಿಸ್ಟಮ್ ಹೊಂದಿದೆ.

Continue Reading

ವಾಣಿಜ್ಯ

Toyota Kirloskar Motor: ಕಾರ್‌ ಕೇರ್‌ಗೆ ʼಟಿಗ್ಲೊಸ್ʼ ಆರಂಭಿಸಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ (ಟಿಕೆಎಂ) ತನ್ನ ಕ್ರಾಂತಿಕಾರಿ ಕಾರ್ ಕೇರ್ ಬ್ರಾಂಡ್ “ಟಿಗ್ಲೊಸ್” ಅನ್ನು ಪ್ರಾರಂಭಿಸಿದ್ದು, ಟಿಕೆಎಂ ವಾಹನದ ಇಂಟೀರಿಯರ್ ಮತ್ತು ಎಕ್ಸ್‌ಟೀರಿಯರ್ ಲುಕ್ ಅನ್ನು ಹೆಚ್ಚಿಸಲು ವ್ಯಾಪಕವಾದ ಸೇವೆಗಳನ್ನು ಇದು ನೀಡಲಿದೆ.

VISTARANEWS.COM


on

Toyota Kirloskar Motor launched the Tgloss
Koo

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ (ಟಿಕೆಎಂ) ತನ್ನ ಕ್ರಾಂತಿಕಾರಿ ಕಾರ್ ಕೇರ್ ಬ್ರಾಂಡ್ “ಟಿಗ್ಲೊಸ್” ಅನ್ನು (Toyota Kirloskar Motor) ಪ್ರಾರಂಭಿಸಿದೆ.

ಮೇ 1, 2024 ರಿಂದ, “ಟಿಗ್ಲೊಸ್” ಸೇವೆಯು ಭಾರತದ ಎಲ್ಲಾ ಅಧಿಕೃತ ಟೊಯೊಟಾ ಡೀಲರ್‌ಶಿಪ್‌ಗಳಲ್ಲಿ ದೊರೆಯಲಿದೆ. ಕಾರು ತಯಾರಕರ ಇಂಡಸ್ಟ್ರಿ ಫಸ್ಟ್ ಉದ್ಯಮವಾಗಿ, “ಟಿಗ್ಲೊಸ್” ಬ್ರಾಂಡ್ ಅಡಿಯಲ್ಲಿ ಟಿಕೆಎಂ ವಾಹನದ ಇಂಟೀರಿಯರ್ ಮತ್ತು ಎಕ್ಸ್‌ಟೀರಿಯರ್ ಲುಕ್ ಅನ್ನು ಹೆಚ್ಚಿಸಲು ವ್ಯಾಪಕವಾದ ಸೇವೆಗಳನ್ನು ಇದು ನೀಡಲಿದೆ.

ವಾಹನಗಳ ಆಕರ್ಷಣೆ ಹೆಚ್ಚಿಸುವ ಗುರಿ

ಇದರಲ್ಲಿ ಸೆರಾಮಿಕ್ ಕೋಟ್, ಅಂಡರ್ ಬಾಡಿ ಕೋಟ್, ಸೈಲೆನ್ಸರ್ ಕೋಟ್ ಮತ್ತು ಇಂಟರ್‌ನಲ್ ಪ್ಯಾನಲ್ ಪ್ರೊಟೆಕ್ಷನ್ ಸೇರಿವೆ. ಇದು ವಾಹನಗಳ ಆಕರ್ಷಣೆಯನ್ನು ಹೆಚ್ಚಿಸುವ ಗುರಿಯ ಜತೆಗೆ ವಾತಾವರಣದಿಂದ ಕಾರಿನ ಮೇಲಾಗುವ ಪರಿಣಾಮಗಳ ವಿರುದ್ಧವೂ ರಕ್ಷಣೆಯನ್ನು ಒದಗಿಸುತ್ತದೆ.

ಇದನ್ನೂ ಓದಿ: IPL 2024 Points Table: ಚೆನ್ನೈ ಗೆಲುವಿನಿಂದ ಅಂಕಪಟ್ಟಿಯಲ್ಲಿ 3 ತಂಡಗಳಿಗೆ ಭಾರೀ ಹೊಡೆತ

ಗ್ರಾಹಕರ ಕಾರಿಗೆ ಹೊಸ ಜೀವ ತುಂಬುವುದು, ಕಾರಿನ ಆಕರ್ಷಣೆಯನ್ನು ಹೆಚ್ಚಿಸುವುದು ಮತ್ತು ಹೊಸದಾಗಿ ಕಾಣುವಂತೆ ಮಾಡುವ ಇಂಟೀರಿಯರ್ ಎನ್‌ರಿಚ್ಮೆಂಟ್, ಎಕ್ಸ್‌ಟೀರಿಯರ್ ಆಕರ್ಷಣೆಯನ್ನು ಹೆಚ್ಚಿಸುವ ಸೇವೆಗಳಂತಹ ಸಮಗ್ರ ಸರ್ವಿಸ್‌ಗಳನ್ನು ಇದರಿಂದ ಪಡೆಯಬಹುದಾಗಿದೆ.

ಹೆಚ್ಚುವರಿಯಾಗಿ ಪ್ರಯಾಣಿಕರ ಯೋಗಕ್ಷೇಮಕ್ಕಾಗಿ “ಟಿಗ್ಲೊಸ್” ಸೇವೆಗಳು ಎಸಿ ಡಕ್ಟ್ ಕ್ಲೀನಿಂಗ್ ಮತ್ತು ಎವಾಪರೇಟರ್ ಕ್ಲೀನಿಂಗ್ ಪರಿಹಾರಗಳನ್ನೂ ಇದು ಹೊಂದಿದೆ. ಇದು ಕಾರಿನಲ್ಲಿ ಪರಿಶುದ್ಧ ವಾತಾವರಣ ನಿರ್ಮಾಣ ಮತ್ತು ಆರೋಗ್ಯಕರ ಚಾಲನೆಯನ್ನು ಉತ್ತೇಜಿಸುತ್ತದೆ.

ಇದನ್ನೂ ಓದಿ: WhatsApp Exit India: ವಾಟ್ಸ್ಯಾಪ್‌ ಜೊತೆಗೇ ಭಾರತ ತೊರೆಯಲಿವೆಯೇ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ?

ಈ ಬಗ್ಗೆ ಮಾತನಾಡಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಸೇಲ್ಸ್–ಸರ್ವೀಸ್-ಯೂಸ್ಡ್ ಕಾರ್ ಬ್ಯುಸಿನೆಸ್‌ನ ಉಪಾಧ್ಯಕ್ಷ ಶಬರಿ ಮನೋಹರ್, ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ‘ಗ್ರಾಹಕ-ಮೊದಲು’ ತತ್ವಕ್ಕೆ ಅಚಲ ಬದ್ಧತೆಯನ್ನು ವ್ಯಕ್ತಪಡಿಸುವ ಇನ್ನೊವೇಟೀವ್ ಮತ್ತು ಇಂಡಸ್ಟ್ರಿ ಫಸ್ಟ್ “ಟಿಗ್ಲೊಸ್” ಅನ್ನು ಅನಾವರಣಗೊಳಿವುದು ನಮಗೆ ಹೆಚ್ಚು ಸಂತಸವನ್ನು ನೀಡುತ್ತದೆ. ಟಿಗ್ಲೊಸ್ ಅನ್ನು ತಮ್ಮ ಕಾರುಗಳನ್ನು ಆಕರ್ಷಣೀಯವಾಗಿ ಅತ್ಯುತ್ತಮ ಸ್ಥಿತಿಯಲ್ಲಿಡಲು ಸಹಾಯ ಮಾಡುವ ಮೂಲಕ ಅವರ ಅಗತ್ಯಗಳನ್ನು ಪೂರೈಸಲು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: Drown in Mekedatu: ಮೇಕೆದಾಟು ಬಳಿ ಈಜಲು ಹೋಗಿದ್ದ ಐವರು ಪ್ರವಾಸಿಗರ ಸಾವು

ಟಿಗ್ಲೊಸ್ ಎಂಬುದು ಒನ್-ಸ್ಟಾಪ್-ಶಾಪ್ ಸೊಲ್ಯೂಷನ್ ಆಗಿದೆ. ಗ್ರಾಹಕರಿಗೆ ಉತ್ತಮ ಗುಣಮಟ್ಟದ ಕಾರ್‌ ಕೇರ್ ಸರ್ವಿಸ್‌ಗಳನ್ನು ನೀಡುವ ಗುರಿಯನ್ನು ಹೊಂದಿದೆ, ಇದು ಟೊಯೊಟಾ ಮಾಲೀಕರಿಗೆ ಗುಣಮಟ್ಟ, ಬಾಳಿಕೆ ಮತ್ತು ವಿಶ್ವಾಸಾರ್ಹತೆಯ (ಕ್ಯೂಡಿಆರ್) ನಮ್ಮ ಪ್ರಮುಖ ಮೌಲ್ಯಗಳೊಂದಿಗೆ ತಡೆರಹಿತವಾಗಿ ಹೊಂದಾಣಿಕೆಯಾಗುವ ಸೇವೆ ಇದಾಗಿದೆ. ಸಮಗ್ರ ಕಾರ್ ಕೇರ್ ಸೊಲ್ಯೂಷನ್‌ಗಳನ್ನು ತಲುಪಿಸುವ ನಮ್ಮ ಪ್ರಯಾಣದಲ್ಲಿ ಮಹತ್ವದ ಮತ್ತೊಂದು ನಿರ್ಣಾಯಕ ಮೈಲಿಗಲ್ಲನ್ನು ಸೂಚಿಸುತ್ತದೆ. ಇಲ್ಲಿ ಹೆಚ್ಚು ನುರಿತ ಮತ್ತು ತರಬೇತಿ ಪಡೆದ ವೃತ್ತಿಪರರು ಸೇವೆಯನ್ನು ನೀಡುತ್ತಾರೆ ಎಂದು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

WhatsApp Exit India: ವಾಟ್ಸ್ಯಾಪ್‌ ಜೊತೆಗೇ ಭಾರತ ತೊರೆಯಲಿವೆಯೇ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ?

WhatsApp Exit India: WhatsApp ಪ್ರಕಾರ, ಎಂಡ್-ಟು-ಎಂಡ್ ಎನ್ಕ್ರಿಪ್ಶನ್ ವೈಶಿಷ್ಟ್ಯವನ್ನು ತೆಗೆದುಹಾಕಲು ಭಾರತ ಸರಕಾರದಿಂದ ಒತ್ತಡ ಬಂದರೆ, ಅದು ಭಾರತಕ್ಕೆ ವಿದಾಯ ಹೇಳುವುದು ಖಚಿತ. ಐಟಿ ನಿಯಮಗಳು 2021ರ ನಿಯಮ 4(2) ರ ಅಡಿಯಲ್ಲಿ ಭಾರತ ಸರ್ಕಾರ ಮತ್ತು WhatsApp ನಡುವೆ ಸಮರ ನಡೆಯುತ್ತಿದೆ. ಈ ನಿಯಮದ ಪ್ರಕಾರ, ಸರ್ಕಾರ ಕೇಳಿದಾಗ, ವಾಟ್ಸ್ಯಾಪ್‌ ವೇದಿಕೆಯು ನಿರ್ದಿಷ್ಟ ಸಂದೇಶದ ಮೂಲವನ್ನು ಬಹಿರಂಗಪಡಿಸಬೇಕಾಗುತ್ತದೆ.

VISTARANEWS.COM


on

WhatsApp Exit India facebook instagram
Koo

ಹೊಸದಿಲ್ಲಿ; ಐಟಿ ನಿಯಮಗಳಿಗೆ (IT Rules) ವಿರುದ್ಧವಾಗಿ ನಡೆದುಕೊಂಡು ಕೇಂದ್ರ ಸರ್ಕಾರದ ಕೆಂಗಣ್ಣಿಗೆ ತುತ್ತಾಗಿರುವ ವಾಟ್ಸ್ಯಾಪ್‌ (WhatsApp), ಎಂಡ್‌ ಟು ಎಂಡ್‌ ಎನ್‌ಕ್ರಿಪ್ಷನ್‌ (End to End encription) ಅನ್ನು ಭೇದಿಸಲಾಗುವುದಿಲ್ಲ ಎಂದಿದೆ. ಈ ವಿಚಾರದಲ್ಲಿ ಒತ್ತಡ ಬಂದರೆ ದೇಶವನ್ನೇ ತೊರೆಯುವುದಾಗಿ (WhatsApp Exit India) ಬೆದರಿಕೆ ಹಾಕಿದೆ. ಇದರೊಂದಿಗೆ, ಇದೇ ಕಂಪನಿಗೇ ಸೇರಿದ ಫೇಸ್‌ಬುಕ್‌ (Facebook) ಹಾಗೂ ಇನ್‌ಸ್ಟಾಗ್ರಾಂ (Instagram) ಕೂಡ ದೇಶವನ್ನು ತೊರೆಯಬಹುದೇ ಎಂಬ ಕುತೂಹಲ ಮೂಡಿದೆ.

ವಾಟ್ಸ್ಯಾಪ್‌, ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂಗಳು ಪ್ರಪಂಚದಾದ್ಯಂತದ ಬಳಕೆದಾರರಲ್ಲಿ ತುಂಬಾ ಜನಪ್ರಿಯವಾಗಿವೆ. ಇದು ಜನರ ನಡುವಿನ ಸಂವಹನಕ್ಕೆ ಮಾತ್ರವಲ್ಲದೆ ಅನೇಕ ಅಧಿಕೃತ, ಕಚೇರಿ ಕೆಲಸಗಳಿಗೂ ಉತ್ತಮ ಮಾಧ್ಯಮವಾಗಿವೆ. ಆದರೆ ಮೆಟಾ ಒಡೆತನದ ವಾಟ್ಸ್ಯಾಪ್ ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದೆ. ಅದು ಭಾರತವನ್ನು ತೊರೆಯಬಹುದು ಎಂಬ ವರದಿಗಳಿವೆ. ಇದರ ಹಿಂದಿನ ಕಾರಣ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಗೌಪ್ಯತೆ ವೈಶಿಷ್ಟ್ಯ. ಇದು ಭಾರತ ಸರ್ಕಾರದ 2021ರ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ವಿರುದ್ಧವಾಗಿದೆ.

WhatsApp ಪ್ರಕಾರ, ಎಂಡ್-ಟು-ಎಂಡ್ ಎನ್ಕ್ರಿಪ್ಶನ್ ವೈಶಿಷ್ಟ್ಯವನ್ನು ತೆಗೆದುಹಾಕಲು ಭಾರತ ಸರಕಾರದಿಂದ ಒತ್ತಡ ಬಂದರೆ, ಅದು ಭಾರತಕ್ಕೆ ವಿದಾಯ ಹೇಳುವುದು ಖಚಿತ. ಐಟಿ ನಿಯಮಗಳು 2021ರ ನಿಯಮ 4(2) ರ ಅಡಿಯಲ್ಲಿ ಭಾರತ ಸರ್ಕಾರ ಮತ್ತು WhatsApp ನಡುವೆ ಸಮರ ನಡೆಯುತ್ತಿದೆ. ಈ ನಿಯಮದ ಪ್ರಕಾರ, ಸರ್ಕಾರ ಕೇಳಿದಾಗ, ವಾಟ್ಸ್ಯಾಪ್‌ ವೇದಿಕೆಯು ನಿರ್ದಿಷ್ಟ ಸಂದೇಶದ ಮೂಲವನ್ನು ಬಹಿರಂಗಪಡಿಸಬೇಕಾಗುತ್ತದೆ.

ಭಾರತದ ಐಟಿ ನಿಯಮಗಳು- 2021ಕ್ಕೆ ಮೆಟಾ ಸವಾಲು ಹಾಕಿದೆ. ಈ ಬಗ್ಗೆ ವಾಟ್ಸ್ಯಾಪ್, ನ್ಯಾಯಾಲಯದಲ್ಲಿ ವೈರಲ್ ಸುದ್ದಿಗೆ ಸಂಬಂಧಿಸಿದಂತೆ ಈಗಾಗಲೇ ಕ್ರಮ ಕೈಗೊಂಡಿರುವುದಾಗಿ ತಿಳಿಸಿತ್ತು. ಆದರೆ, ಬಳಕೆದಾರರ ಗೌಪ್ಯತೆಯ ಹಕ್ಕಿನ ಅಡಿಯಲ್ಲಿ, ಕಂಪನಿಯು ತನ್ನ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಷನ್‌ ಅನ್ನು ತೆಗೆದುಹಾಕಲು ಸಾಧ್ಯವಿಲ್ಲ ಎಂದಿದೆ. ವಾಟ್ಸ್ಯಾಪ್‌ ಹಾಗೂ ಮೂಲ ಕಂಪನಿ ಮೆಟಾ ಭಾರತವನ್ನು ತೊರೆದರೆ, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಕೂಡ ಇಲ್ಲಿಂದ ಹೊರಡಬಹುದು.

WhatsApp ಭಾರತದಲ್ಲಿ ಅತ್ಯಗತ್ಯ ಸೋಶಿಯಲ್‌ ಮೀಡಿಯಾ ಹಾಗೂ ಸಂದೇಶ ವೇದಿಕೆಯಾಗಿದೆ. ಅಂಕಿಅಂಶಗಳ ಪ್ರಕಾರ, ಈ ವೇದಿಕೆಯನ್ನು ವಿಶ್ವಾದ್ಯಂತ 278 ಕೋಟಿ ಬಳಕೆದಾರರು ಬಳಸುತ್ತಾರೆ. ಹೆಚ್ಚಿನ ಭಾರತೀಯ ಬಳಕೆದಾರರು ಇದನ್ನು ಬಳಸುತ್ತಾರೆ. ಮೆಟಾಗೆ 53.58 ಕೋಟಿ ಭಾರತೀಯ ಬಳಕೆದಾರರು ಭಾರತದಲ್ಲಿದ್ದಾರೆ. ಹೀಗಾಗಿ ಮೆಟಾ ಕಂಪನಿಗೆ ಭಾರತದ ಮಾರುಕಟ್ಟೆಯೂ ಮಹತ್ವದ್ದಾಗಿದೆ.

WhatsApp ಅನ್ನು ಫೆಬ್ರವರಿ 2009ರಲ್ಲಿ ಪ್ರಾರಂಭಿಸಲಾಯಿತು. ಇದರ ಆರಂಭಿಕ ಆವೃತ್ತಿಯು ಕ್ರ್ಯಾಶಿಂಗ್ ಸಮಸ್ಯೆಗಳನ್ನು ಹೊಂದಿತ್ತು. ಐಫೋನ್‌ನಲ್ಲಿ WhatsApp 2.0 ಅನ್ನು ಆಗಸ್ಟ್ 2009ರಲ್ಲಿ ಬಿಡುಗಡೆ ಮಾಡಲಾಯಿತು. 250000 ಜನರು ಡೌನ್‌ಲೋಡ್‌ ಮಾಡಿದರು. ನಂತರ 2010ರಲ್ಲಿ Android ಬಳಕೆದಾರರಿಗೆ ಪರಿಚಯಿಸಲಾಯಿತು. ಅಂದಿನಿಂದ ವಾಟ್ಸ್ಯಾಪ್ ಜನಪ್ರಿಯತೆಯ ತುದಿ ಮುಟ್ಟಿದೆ. ಸದ್ಯ ಭಾರತ ಸರ್ಕಾರ ಮತ್ತು ವಾಟ್ಸ್ಯಾಪ್ ನಡುವಿನ ಸಮರ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಮೇಲೆ ಕೂಡ ಪರಿಣಾಮ ಬೀರುತ್ತದೆಯೇ ಎಂದು ಕಾದು ನೋಡಬೇಕಾಗಿದೆ.

ಇದನ್ನು ಓದಿ: WhatsApp update: ಈ ಹಳೇ ಫೋನ್‌ಗಳಲ್ಲಿ ಇನ್ನು ವಾಟ್ಸ್ಯಾಪ್‌ ಸಿಗೋಲ್ಲ! ನಿಮ್ಮ ಫೋನ್‌ ಕೂಡ ಇದೆಯಾ ನೋಡಿಕೊಳ್ಳಿ

Continue Reading

ತಂತ್ರಜ್ಞಾನ

WhatsApp colour: ವಾಟ್ಸ್ಆ್ಯಪ್​ನ ಬಣ್ಣ ಬದಲಾಗಿದ್ದು ಯಾಕೆ? ಏನಿದರ ಗುಟ್ಟು?

WhatsApp colour: ನಿರಂತರ ಅಪ್ಡೇಟ್ ಆಗುತ್ತಿರುವ ವಾಟ್ಸ್ ಆಪ್ ನಲ್ಲಿ ಈಗ ಬಣ್ಣ ಬದಲಾವಣೆ ಆಗಿದ್ದು, ಹೆಚ್ಚಿನವರು ಇದನ್ನು ಗಮನಿಸಿ ಇಲ್ಲದೇ ಇದ್ದರೂ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ಆರಂಭವಾಗಿದೆ. ಯಾಕೆ ಈ ಬಣ್ಣ ಬದಲಾಯಿಸಲಾಗಿದೆ ಗೊತ್ತೇ?

VISTARANEWS.COM


on

By

WhatsApp color
Koo

ಜಗತ್ತಿನಾದ್ಯಂತ (world) ಎರಡು ಬಿಲಿಯನ್ ಗಿಂತಲೂ ಹೆಚ್ಚು ಮಂದಿ ಬಳಸುತ್ತಿರುವ ವಾಟ್ಸ್ ಆಪ್ (whatsApp) ತನ್ನ ವೈಶಿಷ್ಟ್ಯದಿಂದಾಗಿ ನಿರಂತರ ಎಲ್ಲರ ಗಮನ ಸೆಳೆಯುತ್ತದೆ. ಎಲ್ಲರೂ ಬಹು ಸುಲಭವಾಗಿ ಬಳಸಬಹುದಾದ ಈ ಪುಟ್ಟ ಆ್ಯಪ್ ಈಗ ನವೀಕರಣಗೊಂಡಿದ್ದು ಬಣ್ಣದ ಬದಲಾವಣೆಯಿಂದ (WhatsApp colour) ಬಳಕೆದಾರರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

ವಾಟ್ಸ್ ಆಪ್ ಈಗ ಒಂದು ಸೂಕ್ಷ್ಮ ಬದಲಾವಣೆಗೆ ಒಳಗಾಗಿದ್ದು ಅದು ಅದರ ಹಸಿರು ಬಣ್ಣ (green colour). ಸಂದೇಶ ಕಳುಹಿಸುವಿಕೆಯ ಅಪ್ಲಿಕೇಶನ್‌ ವಾಟ್ಸ್ ಆ್ಯಪ್​ ನ ಭಾಗಗಳು ಈಗ ಲೋಗೋದಂತೆಯೇ ಹಸಿರು ಬಣ್ಣಕ್ಕೆ ತಿರುಗಿದೆ. ಆದರೆ ಇದು ಹೆಚ್ಚಿನವರ ಗಮನಕ್ಕೆ ಬರಲಿಲ್ಲವಾದರೂ ಕೆಲವರು ಮಾತ್ರ ಇದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಪ್ರಾರಂಭಿಸಿದ್ದಾರೆ.

ಕೆಲವು ಬಳಕೆದಾರರು ಈ ಬದಲಾವಣೆ ತುಂಬಾ ಚೆನ್ನಾಗಿಲ್ಲ ಎಂದು ಹೇಳಿದ್ದು, ಮೆಟಾ (meta) ಮಾಲೀಕತ್ವದ ಈ ಅಪ್ಲಿಕೇಶನ್ ಈ ರೀತಿ ಮಾಡಲು ಏಕೆ ನಿರ್ಧರಿಸಿದೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Deep Fakes: ಶೇ. 75 ಭಾರತೀಯರು ಡೀಪ್‌ಫೇಕ್‌ಗೆ ಒಳಗಾಗಿದ್ದಾರೆ; ಗೊತ್ತಾಗಿದ್ದು ಶೇ.22 ಮಂದಿಗೆ ಮಾತ್ರ!

ಭಾರತೀಯ ಬಳಕೆದಾರರಿಗೂ ಈ ಹೊಸ ಅಪ್ಡೇಟ್ ಲಭ್ಯವಾಗಿದ್ದು, ಒಂದು ವೇಳೆ ವಾಟ್ಸ್ ಆಪ್ ಈ ಸಣ್ಣ ಬದಲಾವಣೆ ಕಂಡು ಬಂದರೆ ಈ ಬಗ್ಗೆ ಆಶ್ಚರ್ಯ ಪಡಬೇಕಿಲ್ಲ.


ವಾಟ್ಸಾಪ್ ಏಕೆ ಹಸಿರಾಗಿದೆ?

ವಾಟ್ಸ್ ಆ್ಯಪ್​​ನ ಮಾಲೀಕರಾಗಿರುವ ಮೆಟಾ ಈ ಬದಲಾವಣೆಗಳ ಮೂಲಕ ಬಳಕೆದಾರರಿಗೆ ಆಧುನಿಕ, ಹೊಸ ಅನುಭವ ನೀಡುವ ಗುರಿಯನ್ನು ಹೊಂದಿದೆ ಮತ್ತು ಅದನ್ನು ಹೆಚ್ಚು ಸುಲಭವಾಗಿ ಮತ್ತು ಬಳಸಲು ಸರಳವಾಗುವಂತೆ ಮಾಡಲಾಗುತ್ತದೆ ಎಂದು ಹೇಳಿದೆ.

ಬದಲಾವಣೆಗಳೇನು?

ವಾಟ್ಸ್ ಆ್ಯಪ್ ನವೀಕರಣದ ಬಳಿಕ iOS ಮತ್ತು Android ಬಳಕೆದಾರರಿಗೆ ಇದು ಲಭ್ಯವಾಗುತ್ತಿದೆ. Android ಬಳಕೆದಾರರು ಹಿಂದಿನ ಹಸಿರು ಬಣ್ಣದಲ್ಲಿ ಬದಲಾವಣೆಯನ್ನು ಗಮನಿಸಬಹುದು.

ವಾಟ್ಸ್​​ಆ್ಯಪ್​ನಲ್ಲಿ ಹಸಿರು ಬಣ್ಣವನ್ನು ಮಾತ್ರವಲ್ಲ ಸ್ಟೇಟಸ್ ಬಾರ್‌ನಿಂದ ಚಾಟ್-ಲಿಸ್ಟ್ ವಿಂಡೋದವರೆಗೆ ಎಲ್ಲವೂ ವಿನ್ಯಾಸ ಬದಲಾವಣೆಯಾಗಿದೆ. ಅಪ್ಲಿಕೇಶನ್‌ನಲ್ಲಿ ಹಂಚಿಕೊಳ್ಳಲಾದ ಲಿಂಕ್‌ಗಳು ಕೂಡ ಹಸಿರು ಬಣ್ಣದಲ್ಲಿ ಗೋಚರಿಸುತ್ತವೆ.

ಆಂಡ್ರಾಯ್ಡ್ ಬಳಕೆದಾರರು ಡಾರ್ಕ್ ಮೋಡ್‌ ನಲ್ಲಿ ಸೂಕ್ಷ್ಮ ಹೊಂದಾಣಿಕೆಗಳನ್ನು ಕಾಣಬಹುದು. ಡಾರ್ಕ್ ಮೋಡ್ ನಲ್ಲಿ ಅದು ಇನ್ನಷ್ಟು ಗಾಢವಾಗುತ್ತದೆ ಮತ್ತು ಲೈಟ್ ಮೋಡ್ ನಲ್ಲಿ ಹೆಚ್ಚುವರಿ ಸ್ಥಳಾವಕಾಶದೊಂದಿಗೆ ಸುಧಾರಿತ ಓದುವಿಕೆಗೆ ಪ್ರಾಶಸ್ತ್ಯ ನೀಡುತ್ತದೆ.

ಬಳಕೆದಾರರ ಅನುಭವ ಸುಧಾರಣೆಗೆ ಕ್ರಮ

ವಾಟ್ಸ್ ಆ್ಯಪ್ ನಲ್ಲಿ ಬಣ್ಣ ಬದಲಾವಣೆಯೊಂದಿಗೆ ಬಳಕೆದಾರರ ಅನುಭವವನ್ನು ಸುಧಾರಿಸುವ ಉದ್ದೇಶದಿಂದ ಹಲವು ನವೀಕರಣಗಳನ್ನು ಮಾಡಿದೆ.

ವಾಟ್ಸ್ ಆ್ಯಪ್ ತನ್ನ ಸಂದೇಶ ಸೂಚಕಗಳಲ್ಲಿ ಕೆಲವು ಪದಗಳನ್ನು ದೊಡ್ಡಕ್ಷರ ಮಾಡಲು ಇತ್ತೀಚೆಗೆ ಪರಿಶೀಲನೆಗೆ ಒಳಗಾಯಿತು. ಕೆಲವು ಬಳಕೆದಾರರು “ಆನ್‌ಲೈನ್” ಮತ್ತು “ಟೈಪಿಂಗ್” ನ ಮೊದಲ ಅಕ್ಷರಗಳನ್ನು ಕ್ರಮವಾಗಿ “ಆನ್‌ಲೈನ್” ಮತ್ತು “ಟೈಪಿಂಗ್” ಎಂದು ದೊಡ್ಡಕ್ಷರದಲ್ಲಿ ಬದಲಾವಣೆಯನ್ನು ಗಮನಿಸಿದ್ದಾರೆ. ಆಂಡ್ರಾಯ್ಡ್ ಮತ್ತು ಐಒಎಸ್ ಎರಡರಲ್ಲೂ ಗಮನಿಸಲಾದ ಬದಲಾವಣೆಯು ಆನ್‌ಲೈನ್‌ನಲ್ಲಿ ಮಹತ್ವದ ಚರ್ಚೆಗಳನ್ನು ಹುಟ್ಟುಹಾಕಿದೆ.

Continue Reading
Advertisement
Lok Sabha Election 2024
Lok Sabha Election 20249 mins ago

Lok Sabha Election 2024: ಬಿಜೆಪಿ ಅಭ್ಯರ್ಥಿಗಳಿಗೆ ಪತ್ರ ಬರೆದ ಮೋದಿ; ಕಾಂಗ್ರೆಸ್‌ನ ತುಷ್ಟೀಕರಣ ನೀತಿಯ ಬಗ್ಗೆಅರಿವು ಮೂಡಿಸಲು ಕರೆ

Mahanati Show
ಪ್ರಮುಖ ಸುದ್ದಿ18 mins ago

Mahanati Show: ʼಮಹಾನಟಿ ಶೋʼ ವಿರುದ್ಧ ಮೆಕ್ಯಾನಿಕ್‌ಗಳ ಆಕ್ರೋಶ; ಸ್ಪರ್ಧಿ ಗಗನಾ, ರಮೇಶ್‌ ಅರವಿಂದ್‌ ಸೇರಿ ಐವರ ವಿರುದ್ಧ ಮತ್ತೊಂದು ದೂರು

jammu kashmir flash flood
ದೇಶ44 mins ago

Jammu Kashmir Flash Flood: ಜಮ್ಮ- ಕಾಶ್ಮೀರದಲ್ಲಿ ಭೂಕುಸಿತ, ಹಠಾತ್ ಪ್ರವಾಹ: 5 ಸಾವು

Love Jihad
ದೇಶ54 mins ago

‌Love Jihad: ಲವ್‌ ಜಿಹಾದ್‌ಗೆ ಮತ್ತೊಂದು ಬಲಿ? ಹೋಟೆಲ್ ರೂಮ್ ನಲ್ಲಿ ಹಿಂದೂ ಯುವತಿ ಶವ ಪತ್ತೆ; ಮುಸ್ಲಿಂ ಯುವಕ ಎಸ್ಕೇಪ್‌

T20 World Cup 2024
ಕ್ರಿಕೆಟ್54 mins ago

T20 World Cup 2024: ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟ; ಕನ್ನಡಿಗ ರಾಹುಲ್​ಗೆ ಕೊಕ್​

Hassan Pen Drive Case I gave video only to Devaraje Gowda says Karthik
ಹಾಸನ57 mins ago

Hassan Pen Drive Case: ನಾನು ವಿಡಿಯೊ ಕೊಟ್ಟಿದ್ದು ದೇವರಾಜೇಗೌಡರಿಗೆ ಮಾತ್ರ; ಅವರೇ ಲೀಕ್‌ ಮಾಡಿರಬೇಕು ಎಂದ ಕಾರ್ತಿಕ್!

Jai Shri Ram Slogan
ವಿದೇಶ1 hour ago

Jai Shri Ram Slogan: ಪ್ಯಾಲೆಸ್ತೇನ್ ವಿರುದ್ಧ ಜೈಶ್ರೀರಾಮ್ ಘೋಷಣೆ ಕೂಗಿದ ಇಸ್ರೇಲ್ ಬೆಂಬಲಿಗರು!

Amit Shah doctored video case
ದೇಶ1 hour ago

Amit Shah: ಅಮಿತ್‌ ಶಾ ತಿರುಚಿದ ವಿಡಿಯೋ ಪ್ರಕರಣ: ಆಪ್‌, ಕಾಂಗ್ರೆಸ್‌ ಪಕ್ಷದ ಮೂವರ ಬಂಧನ

National Commission for Women enters Prajwal Hassan Pen Drive Case Letter to DG to submit report within 3 days
ಕ್ರೈಂ1 hour ago

Hassan Pen Drive Case: ಪ್ರಜ್ವಲ್‌ ಕೇಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ; 3 ದಿನದಲ್ಲಿ ವರದಿ ಕೊಡಲು ಡಿಜಿಗೆ ಪತ್ರ

T20 World Cup 2024
ಕ್ರೀಡೆ2 hours ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಇಂಗ್ಲೆಂಡ್​, ದಕ್ಷಿಣ ಆಫ್ರಿಕಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ12 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌