Namaz On Road: ಮಂಗಳೂರಿನ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಎಫ್‌ಐಆರ್‌ - Vistara News

ದಕ್ಷಿಣ ಕನ್ನಡ

Namaz On Road: ಮಂಗಳೂರಿನ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಎಫ್‌ಐಆರ್‌

ಮೇ 24 ರಂದು ಮಂಗಳೂರಿನ ಕಂಕನಾಡಿಯ ಮಸೀದಿ ಎದುರು ರಸ್ತೆಯಲ್ಲಿ ಯುವಕರ ತಂಡ ನಮಾಜ್‌ ಮಾಡಿತ್ತು. ಇದಕ್ಕೆ ಆಕ್ಷೇಪ ವ್ಯಕ್ತವಾಗಿದ್ದರಿಂದ ಪೊಲೀಸರು ಸುಮೋಟೊ ಕೇಸ್‌ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

Namaz on Road
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ನಗರದ ರಸ್ತೆಯಲ್ಲಿ ನಮಾಜ್ (Namaz On Road) ಮಾಡಿದ ವಿಚಾರಕ್ಕೆ ಬಿಜೆಪಿ ನಾಯಕರು ಹಾಗೂ ಹಿಂದು ಸಂಘಟನೆಗಳು ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ನಮಾಜ್ ಮಾಡಿದವರ ವಿರುದ್ಧ ಕದ್ರಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಪಿಸಿ ಕಲಂ 341, 283, 143 ಜೊತೆಗೆ 149ರಡಿ ಸುಮೋಟೊ ಪ್ರಕರಣ ದಾಖಲಾಗಿದೆ.

ಮೇ 24 ರಂದು ನಗರದ ಕಂಕನಾಡಿಯ ಮಸೀದಿ ಎದುರು ಯುವಕರ ತಂಡ ನಮಾಜ್‌ ಮಾಡಿತ್ತು. ಸಾರ್ವಜನಿಕ ಸ್ಥಳದಲ್ಲಿ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಆಗಿತ್ತು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ಘಟನೆ ಬಗ್ಗೆ ಹಿಂದು ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಕಿಡಿಕಾರಿದ್ದರು. ಅಲ್ಲದೇ ಇಂತಹ ಘಟನೆ ಮರುಕಳಿಸಿದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದಾಗಿ ವಿಶ್ವ ಹಿಂದೂ ಪರಿಷದ್‌ ಪ್ರಾಂತ ಸಹ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಪೊಲೀಸು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಸ್ತೆಯಲ್ಲಿ ನಮಾಜ್‌ ಮಾಡೋದು ನಿಲ್ಲಿಸದಿದ್ರೆ ಹನುಮಾನ್‌ ಚಾಲೀಸಾ ಪಠಣ: ವಿಹಿಂಪ ಎಚ್ಚರಿಕೆ

namaz in road mangalore

ಮಂಗಳೂರು: ಮಂಗಳೂರಿನ ಕಂಕನಾಡಿ ಬಳಿ ರಸ್ತೆಯಲ್ಲೇ ನಮಾಜ್ (Namaz in road) ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದು ಪರಿಷತ್ತು (Vishwa Hindu Parishad) ಆಕ್ಷೇಪ ವ್ಯಕ್ತಪಡಿಸಿತ್ತು. ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ತಡೆಯುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು. ನಿಲ್ಲಿಸದಿದ್ದರೆ ಸಾಮೂಹಿಕವಾಗಿ ಹನುಮಾನ್ ಚಾಲೀಸಾ (Hanuman Chalisa) ಪಠಿಸಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿತ್ತು.

ಮೊನ್ನೆ ಶುಕ್ರವಾರ ಮಂಗಳೂರಿನ ಕಂಕನಾಡಿಯಲ್ಲಿ ಮಸೀದಿ ಮುಂಭಾಗ ಇರುವ ರಸ್ತೆಯಲ್ಲೇ ನಮಾಜ್ ಮಾಡಲಾಗಿತ್ತು. ರಸ್ತೆಯಲ್ಲಿ ನಡೆದ ನಮಾಜ್ ವೀಡಿಯೋ ವೈರಲ್ ಆಗಿದ್ದು, ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳು ನಮಾಜ್ ಗಮನಿಸಿ ಯೂಟರ್ನ್ ಮಾಡಿಕೊಂಡಿದ್ದವು. ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಬೆಳವಣಿಗೆ ಬಗ್ಗೆ ವಿಹಿಂಪ ಆಕ್ಷೇಪಿಸಿತ್ತು.

“ಕೆಲವು ಕಡೆ ರಸ್ತೆ ಮತ್ತು ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡುತ್ತಿರುವ ಘಟನೆಗಳು ನಡೆಯುತ್ತಿರುವುದು ಜಿಲ್ಲೆಯಲ್ಲಿ ಅಶಾಂತಿ ನಿರ್ಮಿಸಲು ಸಂಚು ರೂಪಿಸುತ್ತಿದ್ದಾರೆ. ತಕ್ಷಣ ಜಿಲ್ಲಾಡಳಿತ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಿದರೆ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದರ ಮೂಲಕ ತಡೆಯುತ್ತೇವೆ ಎಂಬ ಎಚ್ಚರಿಕೆ ಕೊಡುತ್ತೇವೆ” ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದರು.

ಇದು ಪಾಕಿಸ್ತಾನವಲ್ಲ, ಹಿಂದೂಸ್ತಾನ: ಈಶ್ವರಪ್ಪ

“ರಸ್ತೆಯಲ್ಲಿ ನಮಾಜ್‌ ಮಾಡಲು, ಮುಸಲ್ಮಾನರು ಏನು ಬೇಕಾದರೂ ಮಾಡಬಹುದು ಎನ್ನಲು ಇದು ಪಾಕಿಸ್ತಾನ ಅಲ್ಲ, ಹಿಂದೂಸ್ತಾನ” ಎಂದು ಕೆ.ಎಸ್‌ ಈಶ್ವರಪ್ಪ ಗುಡುಗಿದ್ದಾರೆ. “ಮಂಗಳೂರು ಪಾಕಿಸ್ತಾನದ ಜಿಲ್ಲೆಯಲ್ಲ. ಮಂಗಳೂರು ಹಿಂದುತ್ವ ವೀರರ ಭೂಮಿ. ಇಲ್ಲಿ ರಸ್ತೆಯಲ್ಲಿ ನಮಾಜ್ ಮಾಡಲು ದುಷ್ಟ ಶಕ್ತಿಗಳು ಯಶಸ್ವಿಯಾಗಿದ್ದು ನೋವಾಗಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು, ಗೃಹ ಸಚಿವರು, ಸರಕಾರ ಸತ್ತಿದೆಯೋ ಬದುಕಿದೆಯೋ ಗೊತ್ತಾಗ್ತಿಲ್ಲ. ಒಬ್ಬ ಇದು ನಮ್ಮ ಸರ್ಕಾರ ಟಿಪ್ಪು ಸುಲ್ತಾನ್ ರಾಜ್ಯ ಅಂತಾನೆ. ಬಿಟ್ಟರೆ ಸಿಎಂ, ಗೃಹ ಸಚಿವರು, ಹಿಂದುಗಳ ಮನೆಗೆ ಬಂದು ನಮಾಜ್ ಮಾಡುತ್ತಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video: ನಡು ರಸ್ತೆಯಲ್ಲಿ ಪಿಸ್ತೂಲ್‌ ತೋರಿಸಿ ವ್ಯಕ್ತಿ ಮೇಲೆ ಹಲ್ಲೆ; ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ನಿಂದ ದಾಂಧಲೆ

“ನಿಮ್ಮ ಮನೆಯಲ್ಲಿ ನಜಾಮ್ ಮಾಡಿಸಿ ಬೇಡ ಅನ್ನಲ್ಲ. ಎಲ್ಲ ಮುಸ್ಲಿಮರನ್ನು ಟೀಕೆ ಮಾಡುತ್ತಿಲ್ಲ, ಅರ್ಥ ಮಾಡಿಕೊಳ್ಳಿ. ಇವರು ಯಾರೋ ರಾಷ್ಟ್ರದ್ರೋಹಿಗಳು ಮಾಡುತ್ತಿರುವ ಕುತಂತ್ರ. ಇಂತಹವರನ್ನು ಒಳಗೆ ಹಾಕಿದರೆ ಇತರ ಮುಸ್ಲಿಮರಿಗೂ ಸಂತೋಷ ಆಗುತ್ತದೆ. ಮುಸ್ಲಿಂ ಸಮುದಾಯಕ್ಕೆ ಅಪಮಾನ ಆಗುತ್ತಿದೆ ಅಂತ ಅವರೂ ಹೇಳುತ್ತಿದ್ದಾರೆ. ತುಷ್ಟೀಕರಣ ನೀತಿ ಸರ್ಕಾರವನ್ನು ಸುಡುತ್ತೆ, ಭಸ್ಮ ಮಾಡುತ್ತೆ. ರಸ್ತೆಯಲ್ಲಿ ನಮಾಜ್ ಮಾಡಿದವರನ್ನು ತಕ್ಷಣ ಅರೆಸ್ಟ್ ಮಾಡಿ. ರಾಷ್ಟ್ರದ್ರೋಹದ ಕೃತ್ಯ ಕೇಸ್ ಹಾಕಿ” ಎಂದು ಅವರು ಆಗ್ರಹಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Assault Case: ಸಾಲ ವಾಪಸ್‌ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತ

Assault Case: ಹಲ್ಲೆಗೊಳಗಾದ ಮಹಿಳೆ ಧರ್ಮಸ್ಥಳದ ರೂಪಾ ಎಂಬವರು. ಇವರು ಉಜಿರೆಯಲ್ಲಿ ಬಟ್ಟೆ ಅಂಗಡಿ ಹೊಂದಿದ್ದಾರೆ. ಇವರು ನವೀನ್‌ಗೆ 7 ಲಕ್ಷ ರೂಪಾಯಿ ಸಾಲ ನೀಡಿದ್ದರು. ಅದನ್ನು ವಾಪಸ್ ಕೇಳಿದ್ದಕ್ಕೆ ನವೀನ್‌ ಹಲ್ಲೆ ನಡೆಸಿದ್ದಾನೆ. ಕಳೆದ ಎರಡು ದಿನದ ಹಿಂದೆ ಉಜಿರೆಯಲ್ಲಿರುವ ಮಹಿಳೆಯ ಬಟ್ಟೆ ಅಂಗಡಿಯಲ್ಲಿ ಘಟನೆ ನಡೆದಿದೆ.

VISTARANEWS.COM


on

assault case bjp worker
Koo

ಮಂಗಳೂರು: ಬಿಜೆಪಿ ಕಾರ್ಯಕರ್ತನೊಬ್ಬ (BJP Worker) ಬಟ್ಟೆ ಅಂಗಡಿಗೆ ನುಗ್ಗಿ ವಿವಾಹಿತ ಮಹಿಳೆ (Married Woman) ಮೇಲೆ ಮಾರಣಾಂತಿಕ ಹಲ್ಲೆ (Assault Case) ನಡೆಸಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕೃತ್ಯ ನಡೆದಿದೆ. ಬಿಜೆಪಿ ಕಾರ್ಯಕರ್ತ, ಹೂವಿನ ವ್ಯಾಪಾರಿ ನವೀನ್ ಕನ್ಯಾಡಿ ಎಂಬಾತನಿಂದ ಈ ಕೃತ್ಯ ನಡೆದಿದೆ.

ಹಲ್ಲೆಗೊಳಗಾದ ಮಹಿಳೆ ಧರ್ಮಸ್ಥಳದ ರೂಪಾ ಎಂಬವರು. ಇವರು ಉಜಿರೆಯಲ್ಲಿ ಬಟ್ಟೆ ಅಂಗಡಿ ಹೊಂದಿದ್ದಾರೆ. ಇವರು ನವೀನ್‌ಗೆ 7 ಲಕ್ಷ ರೂಪಾಯಿ ಸಾಲ ನೀಡಿದ್ದರು. ಅದನ್ನು ವಾಪಸ್ ಕೇಳಿದ್ದಕ್ಕೆ ನವೀನ್‌ ಹಲ್ಲೆ ನಡೆಸಿದ್ದಾನೆ. ಕಳೆದ ಎರಡು ದಿನದ ಹಿಂದೆ ಉಜಿರೆಯಲ್ಲಿರುವ ಮಹಿಳೆಯ ಬಟ್ಟೆ ಅಂಗಡಿಯಲ್ಲಿ ಘಟನೆ ನಡೆದಿದೆ.

ಮಹಿಳೆಯ ಕಪಾಳಕ್ಕೆ ಹೊಡೆಯುವುದು ಸೇರಿ ಇತರೆಡೆ ಮಾರಣಾಂತಿಕ ಹಲ್ಲೆಯನ್ನು ನವೀನ್ ಕನ್ಯಾಡಿ ಮಾಡಿದ್ದಾನೆ. ಹಲ್ಲೆಗೊಳಗಾದ ಮಹಿಳೆ ಉಜಿರೆಯ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡುವ ದೃಶ್ಯ ಅಂಗಡಿಯ ಸಿಸಿಕ್ಯಾಮರದಲ್ಲಿ ಸೆರೆಯಾಗಿದೆ. ಬೆಳ್ತಂಗಡಿ ಪೊಲೀಸರಿಂದ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ!

ಬೆಂಗಳೂರು: ಇಂದು ಮಾಡಿದ ತಪ್ಪಿನ ಶಿಕ್ಷೆ ಮುಂದಿನ ಜನ್ಮದಲ್ಲಿ ಸಿಗುತ್ತದೆ ಎಂದು ನಮ್ಮ ಹಿರಿಯರು ಹೇಳುತ್ತಾರೆ. ಆದರೆ ಅದು ಸುಳ್ಳು, ಇಂದು ಮಾಡಿದ ತಪ್ಪಿಗೆ ಶಿಕ್ಷೆ ಇದೇ ಕಾಲದಲ್ಲಿ ಸಿಗುತ್ತದೆ. ಆದರೆ ಕೆಲವರಿಗೆ ತಡವಾಗಿ ಸಿಕ್ಕರೆ, ಕೆಲವರಿಗೆ ಅಂದೇ ಸಿಗುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಕಳ್ಳನೊಬ್ಬ ಮಹಿಳೆಯೊಬ್ಬರ ಮೊಬೈಲ್ ಕದ್ದು ಓಡುತ್ತಿದ್ದಾಗ ಕಾರಿಗೆ ಡಿಕ್ಕಿ ಹೊಡೆದು ಸಾವನಪ್ಪಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Viral Video )ಆಗಿದೆ.

ಈ ವಿಡಿಯೊವನ್ನು @Desam_officialz ತಮ್ಮ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದು ‘ಇದು ಭೂಮಿಯ ಮೇಲೆ ದೇವರ ತಕ್ಷಣದ ತೀರ್ಪು. ದೇವರು ಕರುಣೆ ತೋರಲಿ’ ಎಂದು ಬರೆದಿದ್ದಾರೆ. ಈ ವಿಡಿಯೊದಲ್ಲಿ ಕಳ್ಳ ಮಹಿಳೆಯಿಂದ ಕದ್ದ ಮೊಬೈಲ್ ಪೋನ್ ಅನ್ನು ತೆಗೆದುಕೊಂಡು ತಪ್ಪಿಸಿಕೊಳ್ಳಲು ಜೋರಾಗಿ ಓಡುತ್ತಾ ರಸ್ತೆ ದಾಟುತ್ತಿದ್ದಾಗ ಎದುರಿಗೆ ವೇಗವಾಗಿ ಬಂದ ಕಾರೊಂದು ಆತನಿಗೆ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮ ಆತ ಹಾರಿ ಹೋಗಿ ತುಂಬಾ ದೂರ ರಸ್ತೆಯ ಮೇಲೆ ಬಿದ್ದಿದ್ದಾನೆ. ಆದರೆ ಕಾರು ತನ್ನ ವೇಗವನ್ನು ನಿಯಂತ್ರಿಸಲಾಗದೆ ಕೆಳಗೆ ಬಿದ್ದ ಆತನ ಮೆಲೆ ಹರಿದು ನಂತರ ನಿಂತಿದೆ. ಇದರಿಂದ ಆತ ಸ್ಥಳದಲ್ಲೇ ಸಾವನಪ್ಪಿದ್ದಾನೆ.
ಈ ಘಟನೆ ನಡೆದ ಸ್ಥಳ ಮತ್ತು ದಿನಾಂಕ ತಿಳಿದುಬಂದಿಲ್ಲ. ಆದರೆ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅನೇಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಇದು ದೇವರ ತೀರ್ಪು ಎಂದು ಹೇಳಿದರೆ. ಕೆಲವರು ‘ಬಡವರ ವಿಷಯದಲ್ಲಿ ದೇವರು ತಕ್ಷಣ ತೀರ್ಪುಗಳನ್ನು ನೀಡುತ್ತಾನೆ? ಆದರೆ ಶ್ರೀಮಂತರು ಮತ್ತು ಶಕ್ತಿವಂತರಿಗೆ ಏಕೆ ದೇವರು ತಕ್ಷಣದ ತೀರ್ಪುಗಳನ್ನು ನೀಡುತ್ತಿಲ್ಲ? ಪ್ರತಿದಿನ ಇಂತಹ ಲಕ್ಷಾಂತರ ದರೋಡೆಗಳು, ರಸ್ತೆಗಳಲ್ಲಿ ಕೊಲೆಗಳು ನಡೆಯುತ್ತಿವೆ, ಯಾವುದೇ ತಕ್ಷಣದ ತೀರ್ಪುಗಳನ್ನು ನೋಡಿಲ್ಲ, ಏಕೆ? ಎಂದು ಪ್ರಶ್ನಿಸಿದ್ದಾರೆ.

ಸೆಪ್ಟೆಂಬರ್ 2023 ರಲ್ಲಿ ಗುಜರಾತ್‌ ನಲ್ಲಿಯೂ ಇಂತಹದ್ದೇ ಒಂದು ಘಟನೆ ನಡೆದಿತ್ತು. ಗುಜರಾತ್‌ನ ಮೊದಸಾದಲ್ಲಿ ಶೋರೂಂನಿಂದ ಕದಿಯಲು ಪ್ರಯತ್ನಿಸುತ್ತಿದ್ದ ಕಳ್ಳನಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಈ ಘಟನೆಯು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

Continue Reading

ಮಳೆ

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

Karnataka Weather Forecast : ಮುಂಗಾರು ಮಳೆ ಅವಾಂತರವನ್ನೇ ಸೃಷ್ಟಿಸಿದ್ದು, ಚಿಕ್ಕಮಗಳೂರಲ್ಲಿ ಸ್ಕಿಡ್‌ ಆಗಿ ಕಾರೊಂದು ಹೇಮಾವತಿ ನದಿಗೆ ಹಾರಿದೆ. ಭಾನುವಾರವೂ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು/ಬೆಂಗಳೂರು: ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ (karnataka Weather Forecast) ಅಬ್ಬರ ಮುಂದುವರಿದಿದ್ದು, ಹೇಮಾವತಿ ನದಿಗೆ ಮತ್ತೊಂದು ಕಾರು ಬಿದ್ದಿದೆ. ಭಾರಿ ಮಳೆಯಿಂದ (Rain News) ಚಾಲಕನ ನಿಯಂತ್ರಣ ತಪ್ಪಿ ನದಿಗೆ ಹಾರಿದೆ. ನಿನ್ನೆ ಶುಕ್ರವಾರ ಕೂಡ ಇದೇ ಜಾಗದಲ್ಲಿ, ಇದೇ ಶೈಲಿಯಲ್ಲಿ ಕಾರು ಬಿದ್ದಿತ್ತು. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಘಟನೆ ನಡೆದಿದೆ.

ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ತಂಗಡಿಯಿಂದ ಮೂಡಿಗೆರೆಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆ ಹಾರಿ ನದಿಗೆ ಬಿದ್ದಿದೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳೀಯ ಸಹಾಯದಿಂದ ಕಾರನ್ನು ಮೇಲೆ ಎತ್ತಲಾಗಿದೆ.

ಜೂ 28ರಂದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ನೋಡ ನೋಡುತ್ತಿದ್ದಂತೆ ‌ಕಾರು ಹೇಮಾವತಿ ನದಿಗೆ ಹಾರಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಕಾರು ನಿಯಂತ್ರಣ ತಪ್ಪಿರುವ ಶಂಕೆ ವ್ಯಕ್ತವಾಗಿತ್ತು. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಿಂದ ಜಿಗಿದು ನದಿಗೆ ಕಾರು ಬಿದ್ದಿತ್ತು. ಕಳೆದ ಎರಡು ತಿಂಗಳ ಹಿಂದೆ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಇದೆ ಸ್ಥಳದಲ್ಲೇ ಮತ್ತೆರಡು ಅಪಘಾತ ಸಂಭವಿಸಿದೆ.

ಇದನ್ನೂ ಓದಿ: Road Accident : ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ; ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

ಕರಾವಳಿಯಲ್ಲಿ ವಿಪರೀತ ಮಳೆ

ಜೂನ್‌ 30ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.‌ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ದಕ್ಷಿಣ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ

ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಕ್ರಮವಾಗಿ 30-21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Dr HS Shetty: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನಿಂದ ಜುಲೈ 6ರಂದು 41 ಸಾವಿರ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ

Dr HS Shetty: ಜುಲೈ 6ರಂದು ಬೈಂದೂರು ತಾಲೂಕಿನಲ್ಲಿ ಸಾಗುವ ರಾಷ್ಟ್ರೀಯ ಹೆದ್ದಾರಿ 66 ರ ಬಳಿಯಿರುವ ಜೆ.ಎನ್.ಆ‌ರ್. ಸಭಾ೦ಗಣದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸಮೃದ್ಧ ಜನಸೇವಾ ಚಾರಿಟೇಬಲ್‌ ಟ್ರಸ್ಟ್ (ರಿ) ಬೈ೦ದೂರು ಹಾಗೂ ಉಡುಪಿ ಜಿಲ್ಲೆಯು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇಲಾಖೆ ಸಹಕಾರದೊಂದಿಗೆ ಈ ಬೃಹತ್​ ಸಮಾರಂಭವನ್ನು ಆಯೋಜಿಸಲಾಗಿದೆ.

VISTARANEWS.COM


on

Dr HS Shetty
Koo

ಬೆಂಗಳೂರು: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ನೋಂದಾಯಿತ) ಬೆಂಗಳೂರು ವತಿಯಿಂದ ಉಡುಪಿ ಜಿಲ್ಲೆಯ 350 ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ 41,000 ಜೊತೆ ಶಾಲಾ ಸಮವಸ್ತ್ರಗಳ ವಿತರಣೆ ಕಾರ್ಯಕ್ರಮ ಆಯೋಜನೆಗೊಂಡಿದೆ. ಜುಲೈ 6ರಂದು ಬೈಂದೂರು ತಾಲೂಕಿನಲ್ಲಿ ಸಾಗುವ ರಾಷ್ಟ್ರೀಯ ಹೆದ್ದಾರಿ 66ರ ಬಳಿಯ ಜೆ.ಎನ್.ಆ‌ರ್. ಸಭಾ೦ಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಮೃದ್ಧ ಜನಸೇವಾ ಚಾರಿಟೇಬಲ್‌ ಟ್ರಸ್ಟ್ ಬೈಂದೂರು ಹಾಗೂ ಉಡುಪಿ ಜಿಲ್ಲೆಯು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇಲಾಖೆ ಸಹಯೋಗದೊಂದಿಗೆ ಈ ಬೃಹತ್​ ಸಮಾರಂಭ ನಡೆಯಲಿದೆ.

ವಿಧಾನ ಸಭೆ ಸ್ಪೀಕರ್​ ಯು. ಟಿ ಖಾದರ್​ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್​​ನ ಅಧ್ಯಕ್ಷರಾದ ಡಾ. ಹೆಚ್.ಎಸ್.ಶೆಟ್ಟಿ (Dr HS Shetty ) ಅವರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಶುಭಾಂಶಸನೆ ಮಾಡಲಿದ್ದಾರೆ. ಮಾಜಿ ಸಚಿವರಾದ ವಿನಯಕುಮಾ‌ರ್ ಸೊರಕೆ ಸಮವಸ್ತ್ರ ವಿತರಣೆ ಮಾಡಲಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ, ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಬಿ.ಎಸ್. ಸುರೇಶ್ ಶೆಟ್ಟಿ, ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆಯ ಉಪ ನಿರ್ದೇಶಕ ಬೈಂದೂರು ಶ್ರೀ ಕೆ. ಗಣಪತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಪ್ರಶಸ್ತಿ ಪ್ರಧಾನ ಸಮಾರಂಭ

ಕಾರ್ಯಕ್ರಮದಲ್ಲಿ ‘ಹೆಗ್ಗು೦ಜೆ ರಾಜೀವ ಶೆಟ್ಟಿ ವಿದ್ಯಾ ಪೋಷಕ್‌ ಪ್ರಶಸ್ತಿ’ ಪ್ರಧಾನ ಸಮಾರಂಭ ನಡೆಯಲಿದೆ. ಹಿರಿಯ ಶಿಕ್ಷಕರು ಹಾಗೂ ಯಕ್ಷಗಾನ ಪ್ರಸಂಗಕರ್ತರಾದ ಕಂದಾವರ ರಘುರಾಮ ಶೆಟ್ಟಿ ಅವರಿಗೆ ಈ ಬಾರಿ ಪ್ರಶಸ್ತಿ ಪ್ರದಾನವಾಗಲಿದ್ದು, ಶಿವಮೊಗ್ಗ ಸಂಸದ ಬಿ. ವೈ ರಾಘವೇಂದ್ರ ಪ್ರಶಸ್ತಿ ನೀಡಿ ಸನ್ಮಾನಿಸಲಿದ್ದಾರೆ.

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್​​​ನ ಅಧ್ಯಕ್ಷರಾದ ಎಚ್​. ಎಸ್. ಶೆಟ್ಟಿ ,ಉಪಾಧ್ಯಕ್ಷರಾದ ಹಾಲಾಡಿ ನಾಗರಾಜ ಶೆಟ್ಟಿ, ಕಾರ್ಯದರ್ಶಿ ಡಾ. ಸುಮನಾ ಶೆಟ್ಟಿ ಅವರು ಬೃಹತ್​ ಕಾರ್ಯಕ್ರಮಕ್ಕೆ ಸರ್ವರಿಗೂ ಸ್ವಾಗತ ಕೋರಿದ್ದಾರೆ. ಮೈಸೂರು ಮರ್ಕಂಟೈಲ್ ಕಂಪನಿ ಲಿಮಿಟೆಡ್ ಬೆಂಗಳೂರು, ಮೈಸೂರು ಗ್ರೀನ್ ಕಂಪನಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಮೈಸೂರು ಸೈನ್ಸ್ & ಟಿಕ್ನಾಲಜಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಕಾರ್ಯಕ್ರಮದ ಪೋಷಕ ಸಂಸ್ಥೆಗಳಾಗಿವೆ.

ಕಾರ್ಯಕ್ರಮದ ರೂವಾರಿ ಡಾ.ಎಚ್‌.ಎಸ್‌.ಶೆಟ್ಟಿ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹಾಲಾಡಿಯಲ್ಲಿ ಜನಿಸಿದ ಡಾ.ಎಚ್‌.ಎಸ್‌.ಶೆಟ್ಟಿ ಅವರು ಹೋಟೆಲ್‌ ಉದ್ಯಮಿಯಾಗಿ ಹೆಸರು ಮಾಡಿದ್ದಾರೆ. ಜತೆಗೆ ಬಟ್ಟೆ ಮತ್ತು ಖಾದ್ಯ ತೈಲ ವಹಿವಾಟು, ಕೃಷಿ ಸಂಬಂಧಿ ಉತ್ಪನ್ನಗಳ ಮಾರಾಟ, ವಿದ್ಯುತ್‌ ಉತ್ಪಾದನೆ ಹೀಗೆ ಹಲವು ಕ್ಷೇತ್ರಗಳಲ್ಲಿ ಯಶಸ್ವೀ ಉದ್ಯಮಿ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ: Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಮೈಸೂರು ಮರ್ಕೆಂಟೈಲ್‌ ಕಂಪನಿ ಲಿಮಿಟೆಡ್‌ ಸ್ಥಾಪಿಸಿ, ಕೃಷಿ ಉತ್ಪನ್ನಗಳನ್ನು ರಫ್ತು ಮಾಡುತ್ತ ರೈತರಿಗೆ ನೆರವಾಗುತ್ತಿರುವ ಇವರಿಗೆ ಆರು ಬಾರಿ ಬೆಸ್ಟ್‌ ಎಕ್ಸ್‌ಪೋರ್ಟ್‌ ಅವಾರ್ಡ್‌ ಲಭಿಸಿದೆ. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಸ್ಥಾಪಿಸಿ, ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ಡಾ. ಎಚ್‌.ಎಸ್‌. ಶೆಟ್ಟಿ (Dr HS Shetty) ಅವರಿಗೆ ಇತ್ತೀಚೆಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 23ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿತ್ತು.

Continue Reading

ಕ್ರೈಂ

Road Accident : ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ; ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

Road Accident : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಬಿದ್ದರೆ, ಇತ್ತ ಶಿರಾಡಿಘಾಟ್‌ನಲ್ಲಿ ರಾಜಹಂಸ ಹಾಗೂ ಐರಾವತ ನಡುವೆ ಅಪಘಾತ ಸಂಭವಿಸಿದೆ. ಎರಡು ಅಪಘಾತದಲ್ಲಿ ಪ್ರಯಾಣಿಕರು ಸಣ್ಣ-ಪುಟ್ಟ ಗಾಯದಿಂದ ಪಾರಾಗಿದ್ದಾರೆ.

VISTARANEWS.COM


on

By

Road Accident
Koo

ಮಂಡ್ಯ/ಮಂಗಳೂರು: ಶನಿವಾರ ಒಂದೇ ದಿನ ಹಲವೆಡೆ ರಸ್ತೆ ಅಪಘಾತಗಳು (Road Accident) ಸಂಭವಿಸಿದೆ. ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಡಿವೈಡರ್ ದಾಟಿ ಸರ್ವಿಸ್ ರಸ್ತೆಯ ಹಳ್ಳಕ್ಕೆ ಉರುಳಿದ ಘಟನೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ.

ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್‌ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್‌ ವೇಗವಾಗಿ ಬಂದು ನೋಡನೋಡುತ್ತಿದ್ದಂತೆ ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ಮೇಲೆ ಹತ್ತಿದೆ. ಬಳಿಕ ಸರ್ವಿಸ್ ರಸ್ತೆಗೆ ಬಂದು ಹಳ್ಳಕ್ಕೆ ಬಿದ್ದಿದೆ. ಬಿದ್ದ ರಭಸಕ್ಕೆ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದೆ.

ಗಂಭೀರವಾಗಿ ಗಾಯಗೊಂಡವರನ್ನು ಮಂಡ್ಯ ಮೆಡಿಕಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸಣ್ಣ-ಪುಟ್ಟ ಗಾಯಗೊಂಡವರು ಬೇರೆ ಬಸ್‌ ಮುಖಾಂತರ ತೆರಳಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ ಸಂಭವಿಸಿದೆ. ರಾಜಹಂಸ, ಐರಾವತ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತ ತಪ್ಪಿಸಲು ಹೋಗಿ ಟೆಂಪೋ ಚರಂಡಿಗೆ ಬಿದ್ದ ಬಿದ್ದಿದೆ. ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರಾಗಿದ್ದಾರೆ. ಅಪಘಾತದಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಸ್ಥಳಕ್ಕಾಗಮಿಸಿದ ಪೊಲೀಸರು ಬಸ್‌ಗಳನ್ನು ತೆರವುಗೊಳಿಸಿದ್ದರು.

ಇದನ್ನೂ ಓದಿ: Road Accident: ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್‌ನಿಂದ ಬಿದ್ದು ನವ ವಿವಾಹಿತೆ ಸಾವು

ಸುಟ್ಟು ಕರಕಲಾದ ಬಸ್‌ಗಳು

ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ಅಗ್ನಿ ಅವಘಡ ಸಂಭವಿಸಿದೆ. ಖಾಸಗಿ ನರ್ಸಿಂಗ್ ಕಾಲೇಜಿನ ಐದು ಬಸ್‌ಗಳಿಗೆ ಬೆಂಕಿ ತಗುಲಿದ್ದು, ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ರಾಜಗೋಪಾಲ ನಗರ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಮಧ್ಯಾಹ್ನ 2.40ರ ಸುಮಾರಿಗೆ ಘಟನೆ ನಡೆದಿದೆ. ಕಾಲೇಜಿನ ಖಾಲಿ ಜಾಗವೊಂದರಲ್ಲಿ ಕೆಟ್ಟಿದ್ದ ಹಳೆ ಬಸ್‌ಗಳು ನಿಲ್ಲಿಸಲಾಗಿತ್ತು. ನಿಂತಿದ್ದ ಬಸ್‌ವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಅಲ್ಲಿದ್ದ ಇತರೆ ಬಸ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ‌. ಕೂಡಲೇ ಕಾಲೇಜು ಮಂಡಳಿಯವರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಪಾಯ ವರದಿ ಆಗಿಲ್ಲ.

ಕರೆಂಟ್‌ ಶಾಕ್‌ಗೆ ಮೊಸಳೆ ಸಾವು

ವಿದ್ಯುತ್ ತಗುಲಿ ಮೊಸಳೆಯೊಂದು ಮೃತಪಟ್ಟಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೇಡಕಿಹಾಳ ಗ್ರಾಮದ ದೂಧಗಂಗಾ ನದಿಯಲ್ಲಿ ಘಟನೆ ನಡೆದಿದೆ. ದೂಧಗಂಗಾ ನದಿಯಲ್ಲಿ ವಿದ್ಯುತ್‌ ಸ್ಪರ್ಶದಿಂದಾಗಿ ಸುಮಾರು 8 ಅಡಿ ಉದ್ದದ ಮೊಸಳೆ ಸಾವನ್ನಪ್ಪಿದೆ.

ರಿಪೇರಿಗೆ ತಂದಿದ್ದ ಮೊಬೈಲ್ ಬ್ಯಾಟರಿ ಬ್ಲಾಸ್ಟ್

ರಿಪೇರಿಗೆ ತಂದಿದ್ದ ಮೊಬೈಲ್ ಬ್ಯಾಟರಿ ಬ್ಲಾಸ್ಟ್ ಆಗಿದೆ. ಕೊಪ್ಪಳ ನಗರದ ಜಗದಂಬಾ ಮೊಬೈಲ್ ಸೆಂಟರ್‌ನಲ್ಲಿ ಘಟನೆ ನಡೆದಿದೆ. ಕೊಪ್ಪಳ ನಗರದ ಕೇಂದ್ರೀಯ ಬಸ್ ನಿಲ್ದಾಣದ ಬಳಿ ಇರುವ ಮೊಬೈಲ್ ಶಾಪ್‌ನಲ್ಲಿ ಗ್ರಾಹಕರೊಬ್ಬರು ರಿಪೇರಿಗೆಂದು ಮೊಬೈಲ್‌ ಕೊಟ್ಟು ಹೋಗಿದ್ದರು. ರಿಪೇರಿ ಮಾಡುವಾಗ ಏಕಾಏಕಿ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Suryakumar Yadav
ಪ್ರಮುಖ ಸುದ್ದಿ24 mins ago

Suryakumar Yadav : ಭಾರತ ಕ್ರಿಕೆಟ್ ಇತಿಹಾಸದಲ್ಲಿ ಅದ್ಬುತ ಕ್ಯಾಚ್ ಹಿಡಿದ ಸೂರ್ಯಕುಮಾರ್​; ವಿಶ್ವ ಕಪ್​ ಗೆಲ್ಲಲು ಭಾರತಕ್ಕೆ ನೆರವಾಗಿದ್ದೂ ಇದೇ ಕ್ಯಾಚ್​​

Dina Bhvishya
ಭವಿಷ್ಯ24 mins ago

Dina Bhavishya : ಈ ರಾಶಿಯವರು ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವಿರಿ ಈ ದಿನ ಎಚ್ಚರಿಕೆ ಇರಲಿ

Rohit Sharma
ಪ್ರಮುಖ ಸುದ್ದಿ3 hours ago

Rohit Sharma : ಕೊಹ್ಲಿ ಹಾದಿ ತುಳಿದ ರೋಹಿತ್​, ಟಿ20 ಐ ಕ್ರಿಕೆಟ್​​ಗೆ ವಿದಾಯ ಹೇಳಿದ ಟೀಮ್ ಇಂಡಿಯಾ ನಾಯಕ

Virat Kohli
ಪ್ರಮುಖ ಸುದ್ದಿ5 hours ago

Virat Kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿರಾಟ್​​ ಕೊಹ್ಲಿ

T20 World Cup
ಪ್ರಮುಖ ಸುದ್ದಿ6 hours ago

T20 World Cup 2024 : 13 ವರ್ಷಗಳ ಕಾಯುವಿಕೆ ಅಂತ್ಯ, ಕೊನೆಗೂ ವಿಶ್ವ ಕಪ್​ ಗೆದ್ದ ಭಾರತ

Progress review meeting at Karwar ZP office
ಉತ್ತರ ಕನ್ನಡ6 hours ago

Uttara Kannada News: ಕೂಸಿನ ಮನೆ ಯೋಜನೆ ಯಶಸ್ವಿಗೊಳಿಸಿ: ಉಮಾ ಮಹಾದೇವನ್

Tupolev fighter jet INS Chapel warship open for public viewing
ಉತ್ತರ ಕನ್ನಡ6 hours ago

Uttara Kannada News: ಟುಪಲೇವ್ ಯುದ್ಧ ವಿಮಾನ, ಐ.ಎನ್.ಎಸ್.ಚಾಪೆಲ್ ಯುದ್ಧನೌಕೆ ಸಾರ್ವಜನಿಕ ವೀಕ್ಷಣೆಗೆ ಮುಕ್ತ

narendra modi dk shivakumar siddaramaiah
ಪ್ರಮುಖ ಸುದ್ದಿ7 hours ago

DK Shivakumar: ರಾಜ್ಯಕ್ಕೊಂದು ಗಿಫ್ಟ್‌ ಸಿಟಿಗೆ ಪ್ರಧಾನಿ ಮುಂದೆ ಬೇಡಿಕೆ: ಡಿಸಿಎಂ ಡಿ‌.ಕೆ.ಶಿವಕುಮಾರ್

T20 World Cup
ಪ್ರಮುಖ ಸುದ್ದಿ7 hours ago

T20 World Cup : ಘರ್ಜಿಸಿದ ಕಿಂಗ್ ಕೊಹ್ಲಿ, 176 ರನ್ ಬಾರಿಸಿದ ಭಾರತ, ಇದು ವಿಶ್ವ ಕಪ್​ ಫೈನಲ್​ನಲ್ಲಿ ಗರಿಷ್ಠ ಸ್ಕೋರ್​

cm siddaramaiah T20 World Cup Final
ಪ್ರಮುಖ ಸುದ್ದಿ7 hours ago

T20 World Cup Final: ವಿಮಾನ ನಿಲ್ದಾಣದಲ್ಲೂ ಸಿದ್ದರಾಮಯ್ಯಗೆ ವಿಶ್ವಕಪ್‌ ಕ್ರಿಕೆಟ್‌ ಧ್ಯಾನ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ13 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ19 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ1 day ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌