India Highest Paid Item Girl : ಅತಿ ಹೆಚ್ಚು ಸಂಭಾವನೆ ಪಡೆಯುವ ಐಟಂ ಗರ್ಲ್ ಯಾರು? ಮಲೈಕಾ, ಸನ್ನಿ, ನೋರಾ ಅಲ್ವೇ ಅಲ್ಲ! - Vistara News

ಸಿನಿಮಾ

India Highest Paid Item Girl : ಅತಿ ಹೆಚ್ಚು ಸಂಭಾವನೆ ಪಡೆಯುವ ಐಟಂ ಗರ್ಲ್ ಯಾರು? ಮಲೈಕಾ, ಸನ್ನಿ, ನೋರಾ ಅಲ್ವೇ ಅಲ್ಲ!

India Highest Paid Item Girl : ಈ ಹಿಂದೆ ಕೆಲವೇ ಕೆಲವು ನಟಿಯರು ಮಾತ್ರ ಅದರಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಆದರೆ ಈಗ ಟಾಪ್ ನಟಿಯರೂ ಈ ರೀತಿಯ ಹಾಡಿಗೆ ಹೆಜ್ಜೆ ಹಾಕುತ್ತಾರೆ. ಐಟಂ ಸಾಂಗ್‌ಗಳನ್ನು ಮಾಡಲು ಹೀರೋಗಿಂತ ಹೆಚ್ಚಿನ ಸಂಭಾವನೆ ಪಡೆದ ಉದಾಹರಣೆ ಸಾಕಷ್ಟಿದೆ. ಕರೀನಾ ಕಪೂರ್ ಐಟಂ ಡ್ಯಾನ್ಸ್​ಗೆ 1.5 ಕೋಟಿ ರೂಪಾಯಿ ಪಡೆಯುತ್ತಾರೆ. ತಮನ್ನಾ ಭಾಟಿಯಾ ಒಂದು ಹಾಡಿಗೆ ರೂ. 1 ಕೋಟಿ ರೂ., ಕತ್ರಿನಾ ಕೈಫ್ ವಿಶೇಷ ಸಾಂಗ್​ನಲ್ಲಿ ಕಾಣಿಸಿಕೊಳ್ಳಲು 2 ಕೋಟಿ ರೂಪಾಯಿ ಪಡೆಯುತ್ತಾರೆ.

VISTARANEWS.COM


on

India Highest Paid Item Girl not Malaika Nora, Katrina, Sunny
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಲೈಕಾದಿಂದ ಹಿಡಿದು ಸನ್ನಿ ಲಿಯೋನ್‌ವರೆಗೆ (India Highest Paid Item Girl ) ಅನೇಕ ನಟಿಯರು ಚಿತ್ರಗಳಲ್ಲಿ ಐಟಂ ಹಾಡುಗಳನ್ನು ಮಾಡಿದ್ದಾರೆ. 4ರಿಂದ 5 ನಿಮಿಷದ ಹಾಡಿಗೆ ಹೆಜ್ಜೆ ಹಾಕುವುದಕ್ಕೆ ಕೋಟಿಗಟ್ಟಲೆ ಸಂಭಾವನೆ ಪಡೆದ ಅನೇಕ ಹೀರೋಯಿನ್​ಗಳು ಇದ್ದಾರೆ. ಕಳೆದ ಕೆಲ ವರ್ಷಗಳಲ್ಲಿ ಐಟಂ ಸಾಂಗ್‌ಗಳು ಸಿನಿಮಾದಲ್ಲಿ ವಿಶೇಷ ಸ್ಥಾನ ಪಡೆದುಕೊಳ್ಳುತ್ತಿವೆ. ಈ ಹಿಂದೆ ಕೆಲವೇ ಕೆಲವು ನಟಿಯರು ಮಾತ್ರ ಅದರಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಆದರೆ ಈಗ ಟಾಪ್ ನಟಿಯರೂ ಈ ರೀತಿಯ ಹಾಡಿಗೆ ಹೆಜ್ಜೆ ಹಾಕುತ್ತಾರೆ. ಐಟಂ ಸಾಂಗ್‌ಗಳನ್ನು ಮಾಡಲು ಹೀರೋಗಿಂತ ಹೆಚ್ಚಿನ ಸಂಭಾವನೆ ಪಡೆದ ಉದಾಹರಣೆ ಸಾಕಷ್ಟಿದೆ.

ಐಟಂ ಸಾಂಗ್‌ಗೆ ಹೆಜ್ಜೆ ಹಾಕುವವರ ಸಂಭಾವನೆ ಗಗನಕ್ಕೇರಿದೆ. ಈ ಒಬ್ಬ ‘ಐಟಂ ಗರ್ಲ್’ ಈಗ ಅನೇಕ ನಾಯಕ ನಟಿಯರಿಗಿಂತ ಹೆಚ್ಚು ಸಂಭಾವನೆ ಪಡೆಯುತ್ತಾರೆ. ಪುಷ್ಪಾ ದಿ ರೈಸ್‌ ಸಿನಿಮಾದ ಊ ಅಂಟವಾ ಹಾಡಿಗೆ ಚಿತ್ರದಲ್ಲಿ ಐದು ನಿಮಿಷಗಳ ಕಾಲ ಕಾಣಿಸಿಕೊಂಡಿದ್ದಕ್ಕಾಗಿ ದಕ್ಷಿಣದ ಸೂಪರ್‌ಸ್ಟಾರ್ ಸಮಂತಾ ರುತ್ ಪ್ರಭು 5 ಕೋಟಿ ರೂ. ಸಂಭಾವನೆ ಪಡೆದುಕೊಂಡರು. ಭಾರತೀಯ ಚಿತ್ರರಂಗದ ಯಾವ ನಟಿಯರೂ ಈ ರೀತಿ ಹಣ ಗಳಿಕೆ ಮಾಡಿಲ್ಲ. ಐಟಂ ಸಾಂಗ್‌ಗಳಿಗಾಗಿ ಹೆಚ್ಚು ಸಂಭಾವನೆ ಪಡೆಯುವ ಇತರ ನಟಿಯರೆಂದರೆ ನೋರಾ ಫತೇಹಿ ಮತ್ತು ಸನ್ನಿ ಲಿಯೋನ್. ಇಬ್ಬರೂ ಪ್ರತಿ ಹಾಡಿಗೆ 2 ಕೋಟಿ ರೂ ಪಡೆದುಕೊಳ್ಳುತ್ತಿದ್ದಾರೆ. ಒಂದು ಕಾಲದಲ್ಲಿ ಬಾಲಿವುಡ್ ಐಟಂ ಸಾಂಗ್‌ಗಳ ರಾಣಿ ಮಲೈಕಾ ಅರೋರಾ ಇಂದು 50 ಲಕ್ಷದಿಂದ 1 ಕೋಟಿ ರೂ. ಚಾರ್ಚ್‌ ಮಾಡುತ್ತಾರೆ.

ವಿಚಿತ್ರವೆಂದರೆ ಚಿತ್ರದ ನಾಯಕಿ ರಶ್ಮಿಕಾ ಮಂದಣ್ಣ ಅವರು ಚಿತ್ರದಲ್ಲಿ ನಟಿಸಿದ್ದಕ್ಕಾಗಿ ಕಡಿಮೆ ಸಂಭಾವನೆ ಪಡೆದುಕೊಂಡಿದ್ದಾರೆ. ಪುಷ್ಪಾ ದಿ ರೈಸ್ ಚಿತ್ರದಲ್ಲಿ ಶ್ರೀವಲ್ಲಿ ಪಾತ್ರಕ್ಕಾಗಿ ರಶ್ಮಿಕಾ ಕೇವಲ 2 ಕೋಟಿ ರೂ. ಸಂಭಾವನೆ ಪಡೆದರೆ, ಜಾನ್ವಿ ಕಪೂರ್, ತಮನ್ನಾ ಭಾಟಿಯಾ ಮತ್ತು ಪೂಜಾ ಹೆಗ್ಡೆಯಂತಹ ಇತರ ಜನಪ್ರಿಯ ನಟಿಯರೆಲ್ಲರೂ ಪ್ರತಿ ಚಿತ್ರಕ್ಕೆ 5 ಕೋಟಿ ರೂ.ಗಿಂತ ಕಡಿಮೆ ಸಂಭಾವನೆ ಪಡೆಯುತ್ತಾರೆ ಕೇವಲ ಒಂದು ಹಾಡಿಗೆ ಸಮಂತಾ ಗಳಿಸಿದ ಗಳಿಸಿದ್ದು ಬರೋಬ್ಬರಿ 5 ಕೋಟಿ ರೂ.

ಇದನ್ನೂ ಓದಿ: Kannada New Movie: ಶಶಿಕುಮಾರ್ ಪುತ್ರನ ‘ಕಾದಾಡಿ’ ಸಿನಿಮಾದ ಲಿರಿಕಲ್ ಸಾಂಗ್ ಔಟ್‌!

ಕರೀನಾ ಕಪೂರ್ ಐಟಂ ಡ್ಯಾನ್ಸ್​ಗೆ 1.5 ಕೋಟಿ ರೂಪಾಯಿ ಪಡೆಯುತ್ತಾರೆ. ತಮನ್ನಾ ಭಾಟಿಯಾ ಒಂದು ಹಾಡಿಗೆ ರೂ. 1 ಕೋಟಿ ರೂ., ಕತ್ರಿನಾ ಕೈಫ್ ವಿಶೇಷ ಸಾಂಗ್​ನಲ್ಲಿ ಕಾಣಿಸಿಕೊಳ್ಳಲು 2 ಕೋಟಿ ರೂಪಾಯಿ ಪಡೆಯುತ್ತಾರೆ. ಸಮಂತಾ ಆರಂಭದಲ್ಲಿ ಐಟಂ ಸಾಂಗ್‌ ಮಾಡಲು ಹಿಂಜರಿದಿದ್ದರು. ನಂತರ ಒಪ್ಪಿ ಖುಷಿಯಿಂದ ಡ್ಯಾನ್ಸ್ ಮಾಡಿದರು ಎಂದು ವರದಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Actor Darshan: ಇಂದಾದ್ರೂ ಭೇಟಿಗೆ ಬರ್ತಾರಾ ದರ್ಶನ್‌ ಅಮ್ಮ, ತಮ್ಮ?

Actor Darshan: ದರ್ಶನ್‌ ತನ್ನ ಕುಟುಂಬದವರ ಜೊತೆಗೆ ಕೂಡ ಸುಮಧುರ ಬಾಂಧವ್ಯ ಹೊಂದಿಲ್ಲ. ಸಹೋದರ ದಿನಕರ್‌ ಮೇಲೆ ಆತ ಈ ಹಿಂದೆ ಹಲ್ಲೆ ನಡೆಸಿದ್ದಿದೆ. ತಾಯಿ ಮೀನಾ ಅವರ ಮಾತು ಕೂಡ ಕೇಳಿಸಿಕೊಳ್ಳದೆ ಪುಂಡಾಟ ಮಾಡಿದ ಉದಾಹರಣೆ ಇದೆ. ಆದರೂ, ಮನೆಯವರು ಬಂದರೆ ಮಾತ್ರ ಒಳಗೆ ಬಿಡಿ ಎಂದು ದರ್ಶನ್‌ ಜೈಲು ಸಿಬ್ಬಂದಿಗೆ ತಿಳಿಸಿದ್ದಾನೆ.

VISTARANEWS.COM


on

Actor Darshan In Central Jail remembering mother and son
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್‌ (Actor Darshan) ಸೆರೆವಾಸ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟು ದಿನವೂ ದರ್ಶನ್‌ ಅವರ ಅಮ್ಮ ಹಾಗೂ ತಮ್ಮ ಮಗನ ಭೇಟಿಗೆ ಸೆರೆಮನೆಯತ್ತ ಕಾಲಿಟ್ಟಿರಲಿಲ್ಲ. ಇಂದಾದರೂ ಅವರು ಆಗಮಿಸಲಿದ್ದಾರಾ ಎಂಬ ಕುತೂಹಲ ಮೂಡಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಭೇಟಿಗೆ ಸಹೋದರ ದಿನಕರ್ ಹಾಗೆ ತಾಯಿ ಮೀನಾ ಇಂದು ತೆರಳುವ ಸಾಧ್ಯತೆ ಇದೆ. ಬೆಳಿಗ್ಗೆ 11 ಘಂಟೆ ನಂತರ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೈಲು ಸೇರಿರುವ ದರ್ಶನ್ ಕುಟುಂಬದವರನ್ನು ಹೊರತುಪಡಿಸಿ ಬೇರೆ ಯಾರ ಭೇಟಿಗೂ ಮನಸ್ಸು ಮಾಡಿಲ್ಲ. ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್‌ ಇತ್ತೀಚೆಗೆ ಭೇಟಿಯಾಗಿದ್ದರು.

ಆದರೆ ದರ್ಶನ್‌ ತನ್ನ ಕುಟುಂಬದವರ ಜೊತೆಗೆ ಕೂಡ ಸುಮಧುರ ಬಾಂಧವ್ಯ ಹೊಂದಿಲ್ಲ. ಸಹೋದರ ದಿನಕರ್‌ ಮೇಲೆ ಆತ ಈ ಹಿಂದೆ ಹಲ್ಲೆ ನಡೆಸಿದ್ದಿದೆ. ತಾಯಿ ಮೀನಾ ಅವರ ಮಾತು ಕೂಡ ಕೇಳಿಸಿಕೊಳ್ಳದೆ ಪುಂಡಾಟ ಮಾಡಿದ ಉದಾಹರಣೆ ಇದೆ. ಆದರೂ, ಮನೆಯವರು ಬಂದರೆ ಮಾತ್ರ ಒಳಗೆ ಬಿಡಿ ಎಂದು ದರ್ಶನ್‌ ಜೈಲು ಸಿಬ್ಬಂದಿಗೆ ತಿಳಿಸಿದ್ದಾನೆ.

ಜೈಲೂಟ ಒಗ್ಗದೆ ಇದ್ದರೂ ವಿಧಿಯಿಲ್ಲದೆ ಜೈಲೂಟ ಸವಿಯುತ್ತಿರುವ ದರ್ಶನ್ ಇಂದು ಜೈಲಿನ ಮೆನುವಿನಂತೆ ಉಪ್ಪಿಟ್ಟು ಸೇವಿಸಿದ್ದಾನೆ. ಜೈಲಿನಲ್ಲಿ ಮಾನಸಿಕವಾಗಿ ಕುಗ್ಗಿ ಹೋಗಿರುವ ನಟ ದರ್ಶನ್ ತಾಯಿ ಮತ್ತು ಸಹೋದರ ಇಂದು ಭೇಟಿ ನೀಡಲಿದ್ದು, ದರ್ಶನ್‌ಗೆ ತಾಯಿ ಮತ್ತು ಸಹೋದರ ಧೈರ್ಯ ಹೇಳಲಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ದರ್ಶನ್ ಮಡದಿ ಮಗ ಆಗಮಿಸಿದ್ದರು. ಅವರು ಬಂದು ಹೋದ ದಿನ ಖುಷಿಯಾಗಿದ್ದ ದರ್ಶನ್‌, ಬಳಿಕ ಮತ್ತೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿ ಹೋಗಿದ್ದಾನೆ. ಸಹ ಬಂಧಿಗಳ ಜೊತೆ ಬೆರೆಯದೆ ಒಬ್ಬಂಟಿಯಾಗಿ ಕುಳಿತು ಮೌನಕ್ಕೆ ಶರಣಾಗಿದ್ದಾನೆ.

ದರ್ಶನ್‌ ಭೇಟಿ ಮಾಡಿದ ರಕ್ಷಿತಾ- ಪ್ರೇಮ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು (Actor Darshan) ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

ನಟ ದರ್ಶನ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ನಟಿ ರಕ್ಷಿತಾ, ಈ ಘಟನೆ ನಡೆದಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ ಎಂದು ಹೇಳಿದರು.

ನಿರ್ದೇಶಕ ಜೋಗಿ ಪ್ರೇಮ್ ಪ್ರತಿಕ್ರಿಯಿಸಿ, ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿ, ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

ಇದನ್ನೂ ಓದಿ: Actor Darshan:  ದರ್ಶನ್‌‌‌‌‌‌ ವಿರುದ್ಧ ಪರೋಕ್ಷವಾಗಿ ಕೌಂಟರ್‌ ಕೊಟ್ಟ ನಟ ಜಗ್ಗೇಶ್!

Continue Reading

ಸಿನಿಮಾ

Rakshit Shetty: ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ!

Rakshit Shetty: ರಕ್ಷಿತ್‌ ಶೆಟ್ಟಿ ಆಗಾಗ ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗೆ ಕರಾವಳಿಯ ಕಾರ್ಣಿಕದ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ರಕ್ಷಿತ್ ಪಾಲ್ಗೊಂಡಿದ್ದರು. ಹಾಗೆಯೇ ಉಡುಪಿಯ ಅಲೆವೂರಿನಲ್ಲಿ (alevoor udupi kola) ದೈವಗಳ ಪುನರ್ ಪ್ರತಿಷ್ಠೆ, ಕೋಲ ಇತ್ತು. ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಕೋಲದಲ್ಲಿ ಅವರು ಭಾಗಿ ಆಗಿದ್ದರು. ಅಲೆವೂರು ಜೋಡು ರಸ್ತೆಯಲ್ಲಿ ನಡೆದ 118ನೇ‌ ನೇಮೋತ್ಸವದಲ್ಲಿ ಪಾಲ್ಗೊಂಡು, ಪೂಜೆ ನೆರವೇರಿಸಿ ಪ್ರಸಾದ ಸ್ವೀಕರಿಸಿದ್ದರು.

VISTARANEWS.COM


on

Rakshit Shetty Visited Koragajja Temple And Prayed
Koo

ಬೆಂಗಳೂರು: ರಕ್ಷಿತ್ ಶೆಟ್ಟಿ (Rakshit Shetty) ಸಿನಿಮಾ ಕೆಲಸಗಳ ಬಗ್ಗೆ ಗಮನ ಹರಿಸುತ್ತಿದ್ದಾರೆ. ‘ರಿಚರ್ಡ್​ ಆ್ಯಂಟನಿ’ ಸಿನಿಮಾದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಈಗ ಅವರು ಕೊರಗಜ್ಜ ಸನ್ನಿಧಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಉಡುಪಿಯ ಬೈಲೂರಿನ ನೀಲಕಂಠ‌ ಬಬ್ಬು ಸ್ವಾಮಿ ಕೊರಗಜ್ಜ ದೈವಸ್ಥಾನಕ್ಕೆ ರಕ್ಷಿತ್ ಭೇಟಿ ನೀಡಿದ್ದಾರೆ. ಉಡುಪಿಗೆ ಬಂದಾಗಲೆಲ್ಲ ರಕ್ಷಿತ್​ ಕೊರಗಜ್ಜನ ಸನ್ನಿಧಾನಕ್ಕೆ ಭೇಟಿ ನೀಡುತ್ತಾರೆ. ಇದಕ್ಕೂ ಮುಂಚೆ ನಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ (Rakshit Shetty) ಅವರು ಅಯೋಧ್ಯೆ ರಾಮಲಲ್ಲಾನ ದರ್ಶನ ಮಾಡಿ ಬಂದಿದ್ದರು. ಜತೆಗೆ ಇನ್‌ಸ್ಟಾದಲ್ಲಿ ಶ್ರೀರಾಮ ಮೂರ್ತಿಯ ದರ್ಶನ ಪಡೆದ ಬಗ್ಗೆ ಬರೆದುಕೊಂಡಿದ್ದರು. ಮಾತ್ರವಲ್ಲ ವಿಗ್ರಹ ಕೆತ್ತನೆ ಮಾಡಿದ ಕನ್ನಡಿಗ ಶಿಲ್ಪಿ ಅರುಣ್ ಯೋಗಿರಾಜ್ ಬಳಿ ಸಿಂಪಲ್ ಸ್ಟಾರ್ ವಿಶೇಷ ಮನವಿ ಮಾಡಿದ್ದರು.

ರಕ್ಷಿತ್‌ ಶೆಟ್ಟಿ ಆಗಾಗ ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗೆ ಕರಾವಳಿಯ ಕಾರ್ಣಿಕದ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ರಕ್ಷಿತ್ ಪಾಲ್ಗೊಂಡಿದ್ದರು. ಹಾಗೆಯೇ ಉಡುಪಿಯ ಅಲೆವೂರಿನಲ್ಲಿ (alevoor udupi kola) ದೈವಗಳ ಪುನರ್ ಪ್ರತಿಷ್ಠೆ, ಕೋಲ ಇತ್ತು. ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಕೋಲದಲ್ಲಿ ಅವರು ಭಾಗಿ ಆಗಿದ್ದರು. ಅಲೆವೂರು ಜೋಡು ರಸ್ತೆಯಲ್ಲಿ ನಡೆದ 118ನೇ‌ ನೇಮೋತ್ಸವದಲ್ಲಿ ಪಾಲ್ಗೊಂಡು, ಪೂಜೆ ನೆರವೇರಿಸಿ ಪ್ರಸಾದ ಸ್ವೀಕರಿಸಿದ್ದರು.

ಇದನ್ನೂ ಓದಿ: Rakshit Shetty: ʻಏಕಂʼ ವೆಬ್ ಸಿರೀಸ್​ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ!

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ರಿಚರ್ಡ್​ ಆಂಟನಿ ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್‌ ನಿರ್ದೇಶನ ಮಾಡುತ್ತಿದ್ದಾರೆ. ನನ್ನ ಮುಂದಿನ ಎರಡು ಸಿನಿಮಾಗಳಿಗೆ (ʻರಿಚರ್ಡ್​ ಆಂಟನಿ’ ಹಾಗೂ ‘ಪುಣ್ಯಕೋಟಿ’) ಪರಶುರಾಮ ಹಾಗೂ ಆತನ ಕೊಡಲಿಯೇ ಸ್ಫೂರ್ತಿ. ಈ ಕಥೆ ಜತೆ ಹೀಗಾಗಲೇ 4 ವರ್ಷ ಕಳೆದಿದ್ದೇನೆ. ಇನ್ನೂ ನಾಲ್ಕು ವರ್ಷ ಕಳೆಯೋದು ಇದೆ ಅನಿಸುತ್ತಿದೆ ಎಂದು ರಕ್ಷಿತ್ ಶೆಟ್ಟಿ ಈ ಹಿಂದೆ ಹೇಳಿಕೊಂಡಿದ್ದರು.

Continue Reading

ಕ್ರಿಕೆಟ್

Virat Kohli: ಈ ಗೆಲುವು ನನ್ನದಷ್ಟೇ ಅಲ್ಲ, ನಿನ್ನದು ಕೂಡ ಎಂದು ಪತ್ನಿಗೆ ಪ್ರೀತಿ ವ್ಯಕ್ತಪಡಿಸಿದ ವಿರಾಟ್‌ ಕೊಹ್ಲಿ!

Virat Kohli: 17 ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup 2024)​ ಗೆದ್ದ ಟೀಮ್​ ಇಂಡಿಯಾಗೆ ಹಲವಾರು ಸೆಲೆಬ್ರಿಟಿಗಳು ಭಾರತೀಯ ಕ್ರಿಕೆಟ್ ತಂಡಕ್ಕೆ ತಮ್ಮ ಶುಭಾಶಯಗಳನ್ನು ಸಲ್ಲಿಸಿದರು. ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದರು. ಇದೀಗ ವಿರಾಟ್ ಕೊಹ್ಲಿ ತಮ್ಮ ಪತ್ನಿ, ನಟಿ ಅನುಷ್ಕಾ ಶರ್ಮಾಗೆ ಕೃತಜ್ಞತೆ ಮತ್ತು ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

irat Kohli's Heartfelt Tribute to Anushka Sharma
Koo

ಬೆಂಗಳೂರು: ವಿರಾಟ್‌ ಕೊಹ್ಲಿ (Virat Kohli) ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿರುವಂತಹ ವ್ಯಕ್ತಿ. ಆ ವ್ಯಕ್ತಿಗೂ ಸ್ಫೂರ್ತಿಯಾಗಿರುವವರಿದ್ದಾರೆ. ಅವರು ಮತ್ತಿನ್ಯಾರೂ ಅಲ್ಲ, ಅವರ ಪತ್ನಿ, ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ. 17 ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup 2024)​ ಗೆದ್ದ ಟೀಮ್​ ಇಂಡಿಯಾಗೆ ಹಲವಾರು ಸೆಲೆಬ್ರಿಟಿಗಳು ಭಾರತೀಯ ಕ್ರಿಕೆಟ್ ತಂಡಕ್ಕೆ ತಮ್ಮ ಶುಭಾಶಯಗಳನ್ನು ಸಲ್ಲಿಸಿದರು. ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದರು. ಇದೀಗ ವಿರಾಟ್ ಕೊಹ್ಲಿ ತಮ್ಮ ಪತ್ನಿ, ನಟಿ ಅನುಷ್ಕಾ ಶರ್ಮಾಗೆ ಕೃತಜ್ಞತೆ ಮತ್ತು ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

ವಿರಾಟ್ ಕೊಹ್ಲಿ ಅವರು ಅನುಷ್ಕಾ ಜತೆ ಇರುವ ಫೋಟೊ ಹಂಚಿಕೊಂಡು ಹೀಗೆ ಬರೆದುಕೊಂಡಿದ್ದಾರೆ. ʻʻನೀನಿಲ್ಲದೆ ಇದೆಲ್ಲವೂ ಸಾಧ್ಯವಾಗುತ್ತಿರಲಿಲ್ಲ. ನನ್ನನ್ನು ವಿನಮ್ರವಾಗಿ ಇರಲು ಪ್ರಯತ್ನಿಸಿರುವೆ. ನಾನು ನಿಮಗಾಗಿ ಹೆಚ್ಚು ಕೃತಜ್ಞರಾಗಿರಲು ಸಾಧ್ಯವಿಲ್ಲ. ಈ ಗೆಲುವು ನನ್ನದಷ್ಟೇ ನಿನ್ನದು ಕೂಡ. ಧನ್ಯವಾದಗಳು ಮತ್ತು ನಾನು ನಿನ್ನನ್ನು ತುಂಬ ಪ್ರೀತಿಸುತ್ತೇನೆ ʼʼಎಂದು ಬರೆದುಕೊಂಡಿದ್ದಾರೆ.

ನಿನ್ನೆಯಷ್ಟೇ ಅನುಷ್ಕಾ ಶರ್ಮಾ ಅವರು ಪೋಸ್ಟ್‌ನಲ್ಲಿ ʻʻನಮ್ಮ ಮಗಳ ದೊಡ್ಡ ಕಾಳಜಿ ಏನೆಂದರೆ, ಎಲ್ಲಾ ಆಟಗಾರರು ಟಿವಿಯಲ್ಲಿ ಅಳುತ್ತಿರುವುದನ್ನು ನೋಡಿದ ನಂತರ ಅವರನ್ನು ತಬ್ಬಿಕೊಳ್ಳಲು ಯಾರಾದರೂ ಇದ್ದರೆ ಎಂದು. ಆಗ ನಾನು ಅಂದೆ ..ಹೌದು, ಅವರನ್ನು 1.5 ಬಿಲಿಯನ್ ಜನರು ತಬ್ಬಿಕೊಂಡರು ಎಂದೆ. ಎಂತಹ ಅದ್ಭುತ ಗೆಲುವು ಮತ್ತು ಎಂತಹ ಪೌರಾಣಿಕ ಸಾಧನೆ!! ಚಾಂಪಿಯನ್ಸ್ – ಅಭಿನಂದನೆಗಳು!! ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ: Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ಕಂಪ್ಲೀಟ್‌ ಡಿಟೇಲ್ಸ್‌!

ಮತ್ತೊಂದು ಪೋಸ್ಟ್‌ನಲ್ಲಿ, ಅನುಷ್ಕಾ ಅವರು ವಿರಾಟ್ ಮುಗುಳ್ನಕ್ಕು ಟ್ರೋಫಿಯನ್ನು ಎತ್ತುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದರು.

ರೋಚಕ ಪಂದ್ಯ ಗೆದ್ದ ಭಾರತ

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಎರಡನೇ ಎಸೆತವನ್ನು ರಬಾಡಾ ಬೌಂಡರಿ ಬಾರಿಸಿದರು. ಮೂರನೇ ಎಸೆತದಲ್ಲಿ ಒಂದು ರನ್ ಬಂತು. ಕೊನೆಯ ಎರಡು ಎಸೆತಗಳಲ್ಲಿ 10 ರನ್ ಅಗತ್ಯವಿತ್ತು. ಹಾರ್ದಿಕ್ ಒಂದು ವೈಡ್ ಎಸೆದರು. ರಬಾಡಾ ಕ್ಯಾಚಿತ್ತು ನಿರ್ಗಮಿಸಿದರು. ಕೊನೆಯ ಎಸೆತದಲ್ಲಿ ಒಂದು ರನ್ ಮಾತ್ರ ಬಂತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

Continue Reading

ಟಾಲಿವುಡ್

Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಕಂಡ ʻಕಲ್ಕಿʼ: ಪ್ರಭಾಸ್‌ ಅಬ್ಬರಕ್ಕೆ ಬಾಕ್ಸ್ ಆಫೀಸ್‌ ಧೂಳೀಪಟ!

Kalki 2898 AD: ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್‌ ಬಚ್ಚನ್ ಮತ್ತು ಕಮಲ್ ಹಾಸನ್ ಅಭಿನಯದ ಈ ಚಿತ್ರ ಭಾರತದಲ್ಲಿ ಎಲ್ಲಾ ಭಾಷೆಗಳಲ್ಲಿ 300.6 ಕೋಟಿ ರೂ. ಗಳಿಸಿದೆ. ವರದಿಗಳ ಪ್ರಕಾರ, ಕಲ್ಕಿ 2898 AD ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 500 ಕೋಟಿ ರೂ. ಮೀರಿದೆ.ಭಾನುವಾರ ಈ ಸಿನಿಮಾ 83.2 ಕೋಟಿ ರೂಪಾಯಿ ಗಳಿಸಿದೆ.

VISTARANEWS.COM


on

Kalki 2898 AD Prabhas Film Hits Jackpot 500 Cr WW In Opening
Koo

ಬೆಂಗಳೂರು: ಕಲ್ಕಿ 2898 AD (Kalki 2898 AD) ಕಲ್ಕಿ 2898 ಎಡಿ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ನಾಗ್ ಅಶ್ವಿನ್ ಅವರ ಕಲ್ಕಿ 2898 AD ಜೂನ್ 27 ರಂದು ಬಿಡುಗಡೆಯಾಯಿತು. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್‌ ಬಚ್ಚನ್ ಮತ್ತು ಕಮಲ್ ಹಾಸನ್ ಅಭಿನಯದ ಈ ಚಿತ್ರ ಭಾರತದಲ್ಲಿ ಎಲ್ಲಾ ಭಾಷೆಗಳಲ್ಲಿ 300.6 ಕೋಟಿ ರೂ. ಗಳಿಸಿದೆ. ವರದಿಗಳ ಪ್ರಕಾರ, ಕಲ್ಕಿ 2898 AD ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 500 ಕೋಟಿ ರೂ. ಮೀರಿದೆ.ಭಾನುವಾರ ಈ ಸಿನಿಮಾ 83.2 ಕೋಟಿ ರೂಪಾಯಿ ಗಳಿಸಿದೆ.

ಕಲ್ಕಿ 2898 AD ತನ್ನ ಆರಂಭಿಕ ದಿನದಲ್ಲಿ 95.3 ಕೋಟಿ ರೂ. ಮತ್ತು ಶುಕ್ರವಾರ 57.6 ಕೋಟಿ ರೂ. ಭಾರತದಲ್ಲಿ ಗಳಿಸಿತು. ಶನಿವಾರ 67.1 ಕೋಟಿ ರೂ. ಮತ್ತು ಭಾನುವಾರ 83.2 ಕೋಟಿ ರೂ. ಗಳಿಸಿದ ಈ ಚಿತ್ರ ಕಲೆಕ್ಷನ್‌ನಲ್ಲಿ ಏರಿಕೆ ಕಂಡಿದೆ. ಚಿತ್ರದ ಒಟ್ಟು ಮೊತ್ತ 300.6 ಕೋಟಿ ರೂ. ಆಗಿದೆ. ವಿಶ್ವಾದ್ಯಂತ ಮೂರು ದಿನಗಳಲ್ಲಿ ಚಿತ್ರ 415 ಕೋಟಿ ಗಳಿಸಿದೆ. ವಾರದ ದಿನಗಳಲ್ಲೂ ಚಿತ್ರ ತನ್ನ ಯಶಸ್ವಿ ಪ್ರದರ್ಶನವನ್ನು ಉಳಿಸಿಕೊಳ್ಳುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಕಲ್ಕಿ 2898 AD ಎಲ್ಲಾ ದಕ್ಷಿಣ ಭಾರತದ ಭಾಷೆಗಳಲ್ಲಿ ಮತ್ತು ಹಿಂದಿಯಲ್ಲಿ 2D ಮತ್ತು 3D ನಲ್ಲಿ ಬಿಡುಗಡೆಯಾಯಿತು.

ಕರ್ನಾಟಕದಲ್ಲಿ ‘ಕಲ್ಕಿ2898 AD’ ಸಿನಿಮಾ ಅತೀ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಿತ್ತು. ಕನ್ನಡದಲ್ಲಿ ದೊಡ್ಡ ಸಿನಿಮಾಗಳು ಇಲ್ಲದೇ ಇರುವುದರಿಂದ ಕರ್ನಾಟಕದಲ್ಲಿ ಸುಮಾರು 444 ಸ್ಕ್ರೀನ್‌ಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ 219 ಸ್ಕ್ರೀನ್‌ಗಳಲ್ಲಿ ತೆಲುಗು, 100 ಸ್ಕ್ರೀನ್‌ಗಳಲ್ಲಿ ಕನ್ನಡ, 85 ಸ್ಕ್ರೀನ್‌ಗಳಲ್ಲಿ ಹಿಂದಿ, 40 ಸ್ಕ್ರೀನ್‌ಗಳಲ್ಲಿ ತಮಿಳು ಭಾಷೆಯ ಕಲ್ಕಿ ರಿಲೀಸ್ ಆಗಿದ್ದವು. ಈ ನಾಲ್ಕು ಭಾಷೆಗಳಿಂದ ಕರ್ನಾಟಕದಲ್ಲಿ ‘ಕಲ್ಕಿ2898 AD’ ಗಳಿಸಿದ್ದು ಬರೋಬ್ಬರಿ 6.7 ಕೋಟಿ ರೂಪಾಯಿ (Nett) ಎಂದು ಟ್ರೇಡ್ ಎಕ್ಸ್‌ಪರ್ಟ್‌ಗಳು ಲೆಕ್ಕ ಕೊಟ್ಟಿದ್ದಾರೆ.

ಇದನ್ನೂ ಓದಿ: Kalki 2898 AD: ಮೂರನೇ ದಿನ ಭರ್ಜರಿ ಗಳಿಕೆ ಕಂಡ ‘ಕಲ್ಕಿ 2898 ಎಡಿ’ ಸಿನಿಮಾ ! 

ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಲನಚಿತ್ರವು ಈಗಾಗಲೇ ತನ್ನ ಮುಂಗಡ ಬುಕಿಂಗ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.

ವಿಶ್ವದಾದ್ಯಂತ (world) ತೆರೆಗೆ ಬಂದ ಅತ್ಯಂತ ದುಬಾರಿ ಚಿತ್ರ (film) ʼಕಲ್ಕಿ 2898 ಎಡಿʼ (Kalki 2898AD) ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಇದು ಹಿಂದೂ ಧರ್ಮದ (hindu dharma) ವಿಷಯದ ಮೇಲೆ ಕೇಂದ್ರೀಕೃತವಾಗಿರುವುದು. ಭಗವಾನ್ ವಿಷ್ಣುವಿನ (baghavan vishnu) 10ನೇ ಅವತಾರ ಕಲ್ಕಿ (kalki). ಸದಾಚಾರ ಮತ್ತು ನೈತಿಕ ನಡವಳಿಕೆಯನ್ನು ಉತ್ತೇಜಿಸುವ ಕಲ್ಕಿ, ಕಲಿಯುಗವನ್ನು ಕೊನೆಗೊಳಿಸಿ ಮತ್ತೆ ಸತ್ಯಯುಗದ ಸುವರ್ಣ ಯುಗವನ್ನು ಪ್ರಾರಂಭಿಸುತ್ತಾನೆ ಎಂದು ನಂಬಲಾಗಿದೆ.

Continue Reading
Advertisement
New Criminal Law
ದೇಶ7 mins ago

New Criminal Law: ಹೊಸ ಕ್ರಿಮಿನಲ್‌ ಕಾನೂನಿನಂತೆ ಬೀದಿ ವ್ಯಾಪಾರಿ ವಿರುದ್ಧ ಮೊದಲ ಎಫ್‌ಐಆರ್‌ ದಾಖಲು

Actor Darshan In Central Jail remembering mother and son
ಕ್ರೈಂ8 mins ago

Actor Darshan: ಇಂದಾದ್ರೂ ಭೇಟಿಗೆ ಬರ್ತಾರಾ ದರ್ಶನ್‌ ಅಮ್ಮ, ತಮ್ಮ?

Rakshit Shetty Visited Koragajja Temple And Prayed
ಸಿನಿಮಾ29 mins ago

Rakshit Shetty: ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ!

Parliament Sessions
ದೇಶ41 mins ago

Parliament Sessions: ಇಂದು ಸಂಸತ್‌ ಕಲಾಪ ಪುನರಾರಂಭ; ʼನೀಟ್‌ʼ ಚರ್ಚೆಗೆ ಪ್ರತಿಪಕ್ಷಗಳ ಪಟ್ಟು ಸಾಧ್ಯತೆ: Live ಇಲ್ಲಿ ನೋಡಿ

Watermelon At Nigh
ಆರೋಗ್ಯ41 mins ago

Watermelon At Night: ಸಂಜೆ 7 ಗಂಟೆಯ ಕಲ್ಲಂಗಡಿ ಹಣ್ಣನ್ನು ತಿನ್ನಲು ಹೋಗಬೇಡಿ!

Off Shoulder Tops Fashion
ಫ್ಯಾಷನ್41 mins ago

Off Shoulder Tops Fashion: ನೀವೂ ಆಫ್‌ ಶೋಲ್ಡರ್‌ ಟಾಪ್‌ ಧರಿಸಬಹುದು! ಆದರೆ ಈ ಎಚ್ಚರಿಕೆ ವಹಿಸಿ

shubham milk price hike
ಪ್ರಮುಖ ಸುದ್ದಿ44 mins ago

Milk Price Hike: ಹಾಲಿನ ದರ 4 ರೂ. ಹೆಚ್ಚಳ? ಶುಭಂ ಗೋಲ್ಡ್‌ ದರ ಏರಿಕೆ

irat Kohli's Heartfelt Tribute to Anushka Sharma
ಕ್ರಿಕೆಟ್51 mins ago

Virat Kohli: ಈ ಗೆಲುವು ನನ್ನದಷ್ಟೇ ಅಲ್ಲ, ನಿನ್ನದು ಕೂಡ ಎಂದು ಪತ್ನಿಗೆ ಪ್ರೀತಿ ವ್ಯಕ್ತಪಡಿಸಿದ ವಿರಾಟ್‌ ಕೊಹ್ಲಿ!

Birla Opus
ವಾಣಿಜ್ಯ1 hour ago

Birla Opus: ಬಿರ್ಲಾ ಪೇಂಟ್ ಜಾಹೀರಾತು ನಿಮಗೂ ಇಷ್ಟ ಆಗಿರಬೇಕಲ್ಲವೇ? ಇದರ ಸಂದೇಶ ಏನು? ಹಿನ್ನೆಲೆ ಏನು? ಕುತೂಹಲಕರ ಮಾಹಿತಿ

Kalki 2898 AD Prabhas Film Hits Jackpot 500 Cr WW In Opening
ಟಾಲಿವುಡ್1 hour ago

Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಕಂಡ ʻಕಲ್ಕಿʼ: ಪ್ರಭಾಸ್‌ ಅಬ್ಬರಕ್ಕೆ ಬಾಕ್ಸ್ ಆಫೀಸ್‌ ಧೂಳೀಪಟ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು21 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌