Saanvi Sudeep: ಟ್ಯಾಟೂ ಹಾಕಿಸಿಕೊಂಡ ಕಿಚ್ಚ ಸುದೀಪ್‌ ಮುದ್ದಿನ ಮಗಳು: ʻPIKUʼ ಅರ್ಥ ಏನು? - Vistara News

ಸ್ಯಾಂಡಲ್ ವುಡ್

Saanvi Sudeep: ಟ್ಯಾಟೂ ಹಾಕಿಸಿಕೊಂಡ ಕಿಚ್ಚ ಸುದೀಪ್‌ ಮುದ್ದಿನ ಮಗಳು: ʻPIKUʼ ಅರ್ಥ ಏನು?

Saanvi Sudeep:  ಸಾನ್ವಿ ಇತ್ತೀಚೆಗೆ ಕಿರುಚಿತ್ರವೊಂದರಲ್ಲಿ ನಟನೆ ಮಾಡಿದ್ದಾರೆ. ಸುದೀಪ್​ ಅವರ ಸೋದರಳಿಯನ ‘ಜಿಮ್ಮಿ’ ಸಿನಿಮಾಕ್ಕೆ ಸಾನ್ವಿ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿದ್ದಾರೆ. ಜತೆಗೆ ಮ್ಯಾಕ್ಸ್‌ ಸಿನಿಮಾ ಕ್ಲೈಮ್ಯಾಕ್ಸ್‌ನಲ್ಲಿಯೂ ಸಾನ್ವಿ ಕೆಲಸ ಮಾಡಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Saanvi Sudeep New Tattoo Piku meaning
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಿಚ್ಚ ಸುದೀಪ್ (Saanvi Sudeep) ಅವರ ಏಕೈಕ ಮುದ್ದಿನ ಮಗಳು ಸಾನ್ವಿ, ʻಜಿಮ್ಮಿʼ ಸಿನಿಮಾ ಮೂಲಕ ಸಾಕಷ್ಟು ಸುದ್ದಿಯಲ್ಲಿದ್ದರು. ಸಿನಿಮಾದ ಹಾಡಿನ ಮೂಲಕ ಸಾನ್ವಿ ಅವರಿಗೂ ಸಾಕಷ್ಟು ಮಂದಿ ಫ್ಯಾನ್ಸ್‌ ಇದ್ದಾರೆ.

ಇದೀಗ ಸಾನ್ವಿ ಕತ್ತಿನ ಭಾಗದಲ್ಲಿ ‘ಪೀಕು’ (PIKU) ಎಂದು ಟ್ಯಾಟೂ ಹಾಕಿಸಿಕೊಂಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಎಕ್ಸಿಟ್‌ ಪೋಲ್‌ ಬಗ್ಗೆ ನಿಮಗೆಷ್ಟು ಗೊತ್ತು? ಅದನ್ನು ನಡೆಸುವವರು ಯಾರು? ಹೇಗಿರುತ್ತೆ ಪ್ರಕ್ರಿಯೆ?

ಪೀಕು ಎಂದರೆ ಯಾವುದೇ ಸಿನಿಮಾ ಹೆಸರಲ್ಲ. ಪೀಕು ಅರ್ಥ ಏನು ಎಂಬುದುನ್ನು ಸ್ವತಃ ಸಾನ್ವಿ ಹೇಳಿಕೊಂಡಿದ್ದಾರೆ.

ʻಪೀಕುʼ, ಸಾನ್ವಿಯ ತಾಯಿ ಪ್ರಿಯಾ ಸುದೀಪ್​ರ ಅಡ್ಡ ಹೆಸರು. ಪ್ರಿಯಾ ಸುದೀಪ್​ ಅವರನ್ನು ಅವರ ತಾತ ಮುದ್ದಾಗಿ ಪೀಕು ಎಂದೇ ಕರೆಯುತ್ತಿದ್ದರಂತೆ. ತಾಯಿಯ ಅಡ್ಡ ಹೆಸರನ್ನು ಟ್ಯಾಟೂ ಹಾಕಿಸಿಕೊಂಡಿದ್ದಾರೆ ಸಾನ್ವಿ.

ಸಾನ್ವಿ ಇತ್ತೀಚೆಗೆ ಕಿರುಚಿತ್ರವೊಂದರಲ್ಲಿ ನಟನೆ ಮಾಡಿದ್ದಾರೆ. ಸುದೀಪ್​ ಅವರ ಸೋದರಳಿಯನ ‘ಜಿಮ್ಮಿ’ ಸಿನಿಮಾಕ್ಕೆ ಸಾನ್ವಿ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Rakshak Bullet: ಅಜ್ಜಿ-ತಂದೆಯ ಸಮಾಧಿ ತೊಳೆದು ವಿಶೇಷ ವಿಡಿಯೊ ಮಾಡಿದ ರಕ್ಷಕ್ ಬುಲೆಟ್

Rakshak Bullet: ಸುದೀಪ್‌ ಬಗ್ಗೆ ಹೇಳಿಕೆಯಿಂದಾಗಿ (Rakshak Bullet) ಟ್ರೋಲ್‌ ಆಗಿ ಕ್ಷಮೆಯೂ ಕೇಳಿದ್ದರು. ಆಗಾಗ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಉತ್ತಲೇ ಇರುತ್ತಾರೆ. ಈಗ ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ತಂದೆ ಬುಲೆಟ್ ಪ್ರಕಾಶ್ ಹಾಗೂ ಅಜ್ಜಿ ಗೌರಮ್ಮ ಅವರ ಸಮಾಧಿಯನ್ನು ತೊಳೆದಿದ್ದಾರೆ.

VISTARANEWS.COM


on

Rakshak Bullet Washed His Father grave
Koo

ಬೆಂಗಳೂರು: ಬಿಗ್‌ಬಾಸ್ʼ ಕನ್ನಡ ಸೀಸನ್‌ 10ರಲ್ಲಿ (BBK SEASON 10) ನಟ ಬುಲೆಟ್‌ ಪ್ರಕಾಶ್‌ ಅವರ ಪುತ್ರ ರಕ್ಷಕ್‌ ಬುಲೆಟ್‌ ಒಂದು ತಿಂಗಳ ಕಾಲ ಬಿಗ್‌ಬಾಸ್‌ನಲ್ಲಿದ್ದು ಎಲಿಮಿನೇಟ್‌ ಆಗಿಯೂ ಹೊರಬಂದಿದ್ದರು. ಸುದೀಪ್‌ ಬಗ್ಗೆ ಹೇಳಿಕೆಯಿಂದಾಗಿ (Rakshak Bullet) ಟ್ರೋಲ್‌ ಆಗಿ ಕ್ಷಮೆಯೂ ಕೇಳಿದ್ದರು. ಆಗಾಗ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಉತ್ತಲೇ ಇರುತ್ತಾರೆ. ಈಗ ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ತಂದೆ ಬುಲೆಟ್ ಪ್ರಕಾಶ್ ಹಾಗೂ ಅಜ್ಜಿ ಗೌರಮ್ಮ ಅವರ ಸಮಾಧಿಯನ್ನು ತೊಳೆದಿದ್ದಾರೆ.

ವಿಡಿಯೊದಲ್ಲಿ ರಕ್ಷಕ್‌ ಮಾತನಾಡಿ ʻʻಈ ಜಾಗ ನನಗೆ ಒಂಥರ ಸ್ಪೆಷಲ್‌. ಯಾಕಂದರೆ ನನಗೆ ಎಷ್ಟೇ ಖುಷಿ , ಬೇಜಾರು ಆದರೂ ಇಲ್ಲಿ ಬಂದು 5 ನಿಮಿಷ ಕೂತು ನನ್ನ ಮನಸಲ್ಲಿ ಇರೋದು ಹೇಳ್ಕೊಂಡಾಗ ತುಂಬ ಖುಷಿ ಆಗುತ್ತೆ. ನೆಮ್ಮದಿ ಕೂಡ ಆಗತ್ತೆ. ನಾವು ಕ್ಲೀನ್ ಆಗಿದ್ದಂತೆ, ಇವರು ಕ್ಲೀನ್ ಆಗಿರಬೇಕು. ಹೀಗಾಗಿ, ವಾರಕ್ಕೆ ಒಮ್ಮೆ ಬಂದು ಇಲ್ಲಿ ಸಮಾಧಿ ತೊಳೆದು ಹೋಗುತ್ತೇನೆ. ಎಲ್ಲರೂ ಕೇಲ್ತಾರೆ 3 ವರ್ಷದಲ್ಲಿ ರಕ್ಷಕ್‌ ಹೆಂಗೆ ಬೇಳೆದುಬಿಟ್ಟ ಅಂತ. ಈ ಮೂರು ವರ್ಷದ ಹಿಂದೆ ಶ್ರಮ ಇದೆ. ನಮ್ಮ ಅಜ್ಜಿ, ತಂದೆನ ತುಂಬಾ ಚೆನ್ನಾಗಿ ನೋಡಿಕೊಂಡಿದ್ದೇನೆ. ಮಗು ರೀತಿ ನೋಡಿಕೊಂಡಿದ್ದೇನೆ. ಊದಿನಕಡ್ಡಿ ಹಚ್ಚಿ, ಅವರಿಷ್ಟದ ತಿಂಡಿನ ಇಟ್ಟು ಹೋಗುತ್ತೇನೆ. ನಮಸ್ಕಾರ ಮಾಡಿ ಹೋಗುತ್ತೇನೆ. ದೊಡ್ಡವರ ಆಶೀರ್ವಾದ ಇದ್ದರೆ ಬೆಳೆಯುತ್ತೀರಾ. ದೊಡ್ಡವರ ಆಶೀರ್ವಾದವೇ ಇದಕ್ಕೆ ಕಾರಣ’ ಎಂದಿದ್ದಾರೆ ರಕ್ಷಕ್.

ಇದನ್ನೂ ಓದಿ: Rakshak Bullet: ಇನ್ಮುಂದೆ ನಂದೇ ರೌಂಡು, ನಂದೇ ಸೌಂಡು ಎಂದ ಮರಿ ಬುಲೆಟ್‌!

ಈಗ ಅವರು ಹಂಚಿಕೊಂಡಿರೋ ಈ ವಿಡಿಯೋಗೆ ಎಲ್ಲ ಕಡೆಗಳಿಂದ ಭರ್ಜರಿ ಮೆಚ್ಚುಗೆ ಸಿಗುತ್ತಿದೆ. ಎಲ್ಲರೂ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಸುದೀಪ್‌ ವಿಚಾರವಾಗಿ ಸುದ್ದಿಯಾಗಿದ್ದ ರಕ್ಷಕ್‌

ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ʻʻಸುದೀಪಣ್ಣ ಬಂದ ಬಳಿಕ, ದೇವರು ನಿಂತಿದ್ದಾರೆ. ನಾವೆಲ್ಲ ಭಕ್ತಾದಿಗಳು. ಅವರು ಹೆಂಗೆ ವರ ಕೊಡ್ತಾರೋ, ಹಂಗೆ ತೆಗೋಬೇಕು ಅನ್ನೋ ಥರ ಎಲ್ಲರೂ ಇರ್ತಾರೆʼʼಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಸುದೀಪ್‌ ಫ್ಯಾನ್ಸ್‌ ಕೂಡ ರಕ್ಷಕ್‌ ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಅದರಂತೆ ರಕ್ಷಕ್‌ ಕ್ಷಮೆ ಕೇಳಿದ್ದರು.

ರಕ್ಷಕ್‌ ಹೇಳಿದ್ದೇನು?

ಮಾಧ್ಯಮವೊಂದರ ಸಂದರ್ಶನವೊಂದರಲ್ಲಿ ರಕ್ಷಕ್‌ ಅವರು ಮಾತನಾಡಿʻʻ ಬಿಗ್ ಬಾಸ್ ಮನೆಯಲ್ಲಿ ಎಲ್ಲ ಸ್ಪರ್ಧಿಗಳು ಡ್ರಾಮಾ ಮಾಡ್ತಾರೆ. ಕಳಪೆ ಉತ್ತಮ ಅಂತ ಕೊಟ್ಟಮೇಲೆ ಆ ಮಾತಿನ ಮೇಲೆ ಯಾರೂ ನಿಲ್ಲುವುದಿಲ್ಲ. ಸುದೀಪ್‌ ಅವರು ಬಂದ ಮೇಲೆ ಎಲ್ಲವೂ ಬದಲಾಗುತ್ತದೆ. ಸುದೀಪಣ್ಣ ಬಂದ ಬಳಿಕ, ದೇವರು ನಿಂತಿದ್ದಾರೆ. ನಾವೆಲ್ಲ ಭಕ್ತಾದಿಗಳು.. ಅವರು ಹೆಂಗೆ ವರ ಕೊಡ್ತಾರೋ, ಹಂಗೆ ತೆಗೋಬೇಕು ಎನ್ನುವ ಥರ ಎಲ್ಲರೂ ಇರ್ತಾರೆ” ಎಂದು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಈ ಹೇಳಿಕೆ ಭಾರಿ ಟೀಕೆಗೆ ಗುರಿಯಾಗಿತ್ತು.

Continue Reading

ಸಿನಿಮಾ

Rakshit Shetty: ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ!

Rakshit Shetty: ರಕ್ಷಿತ್‌ ಶೆಟ್ಟಿ ಆಗಾಗ ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗೆ ಕರಾವಳಿಯ ಕಾರ್ಣಿಕದ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ರಕ್ಷಿತ್ ಪಾಲ್ಗೊಂಡಿದ್ದರು. ಹಾಗೆಯೇ ಉಡುಪಿಯ ಅಲೆವೂರಿನಲ್ಲಿ (alevoor udupi kola) ದೈವಗಳ ಪುನರ್ ಪ್ರತಿಷ್ಠೆ, ಕೋಲ ಇತ್ತು. ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಕೋಲದಲ್ಲಿ ಅವರು ಭಾಗಿ ಆಗಿದ್ದರು. ಅಲೆವೂರು ಜೋಡು ರಸ್ತೆಯಲ್ಲಿ ನಡೆದ 118ನೇ‌ ನೇಮೋತ್ಸವದಲ್ಲಿ ಪಾಲ್ಗೊಂಡು, ಪೂಜೆ ನೆರವೇರಿಸಿ ಪ್ರಸಾದ ಸ್ವೀಕರಿಸಿದ್ದರು.

VISTARANEWS.COM


on

Rakshit Shetty Visited Koragajja Temple And Prayed
Koo

ಬೆಂಗಳೂರು: ರಕ್ಷಿತ್ ಶೆಟ್ಟಿ (Rakshit Shetty) ಸಿನಿಮಾ ಕೆಲಸಗಳ ಬಗ್ಗೆ ಗಮನ ಹರಿಸುತ್ತಿದ್ದಾರೆ. ‘ರಿಚರ್ಡ್​ ಆ್ಯಂಟನಿ’ ಸಿನಿಮಾದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಈಗ ಅವರು ಕೊರಗಜ್ಜ ಸನ್ನಿಧಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಉಡುಪಿಯ ಬೈಲೂರಿನ ನೀಲಕಂಠ‌ ಬಬ್ಬು ಸ್ವಾಮಿ ಕೊರಗಜ್ಜ ದೈವಸ್ಥಾನಕ್ಕೆ ರಕ್ಷಿತ್ ಭೇಟಿ ನೀಡಿದ್ದಾರೆ. ಉಡುಪಿಗೆ ಬಂದಾಗಲೆಲ್ಲ ರಕ್ಷಿತ್​ ಕೊರಗಜ್ಜನ ಸನ್ನಿಧಾನಕ್ಕೆ ಭೇಟಿ ನೀಡುತ್ತಾರೆ. ಇದಕ್ಕೂ ಮುಂಚೆ ನಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ (Rakshit Shetty) ಅವರು ಅಯೋಧ್ಯೆ ರಾಮಲಲ್ಲಾನ ದರ್ಶನ ಮಾಡಿ ಬಂದಿದ್ದರು. ಜತೆಗೆ ಇನ್‌ಸ್ಟಾದಲ್ಲಿ ಶ್ರೀರಾಮ ಮೂರ್ತಿಯ ದರ್ಶನ ಪಡೆದ ಬಗ್ಗೆ ಬರೆದುಕೊಂಡಿದ್ದರು. ಮಾತ್ರವಲ್ಲ ವಿಗ್ರಹ ಕೆತ್ತನೆ ಮಾಡಿದ ಕನ್ನಡಿಗ ಶಿಲ್ಪಿ ಅರುಣ್ ಯೋಗಿರಾಜ್ ಬಳಿ ಸಿಂಪಲ್ ಸ್ಟಾರ್ ವಿಶೇಷ ಮನವಿ ಮಾಡಿದ್ದರು.

ರಕ್ಷಿತ್‌ ಶೆಟ್ಟಿ ಆಗಾಗ ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗೆ ಕರಾವಳಿಯ ಕಾರ್ಣಿಕದ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ರಕ್ಷಿತ್ ಪಾಲ್ಗೊಂಡಿದ್ದರು. ಹಾಗೆಯೇ ಉಡುಪಿಯ ಅಲೆವೂರಿನಲ್ಲಿ (alevoor udupi kola) ದೈವಗಳ ಪುನರ್ ಪ್ರತಿಷ್ಠೆ, ಕೋಲ ಇತ್ತು. ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಕೋಲದಲ್ಲಿ ಅವರು ಭಾಗಿ ಆಗಿದ್ದರು. ಅಲೆವೂರು ಜೋಡು ರಸ್ತೆಯಲ್ಲಿ ನಡೆದ 118ನೇ‌ ನೇಮೋತ್ಸವದಲ್ಲಿ ಪಾಲ್ಗೊಂಡು, ಪೂಜೆ ನೆರವೇರಿಸಿ ಪ್ರಸಾದ ಸ್ವೀಕರಿಸಿದ್ದರು.

ಇದನ್ನೂ ಓದಿ: Rakshit Shetty: ʻಏಕಂʼ ವೆಬ್ ಸಿರೀಸ್​ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ!

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ರಿಚರ್ಡ್​ ಆಂಟನಿ ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್‌ ನಿರ್ದೇಶನ ಮಾಡುತ್ತಿದ್ದಾರೆ. ನನ್ನ ಮುಂದಿನ ಎರಡು ಸಿನಿಮಾಗಳಿಗೆ (ʻರಿಚರ್ಡ್​ ಆಂಟನಿ’ ಹಾಗೂ ‘ಪುಣ್ಯಕೋಟಿ’) ಪರಶುರಾಮ ಹಾಗೂ ಆತನ ಕೊಡಲಿಯೇ ಸ್ಫೂರ್ತಿ. ಈ ಕಥೆ ಜತೆ ಹೀಗಾಗಲೇ 4 ವರ್ಷ ಕಳೆದಿದ್ದೇನೆ. ಇನ್ನೂ ನಾಲ್ಕು ವರ್ಷ ಕಳೆಯೋದು ಇದೆ ಅನಿಸುತ್ತಿದೆ ಎಂದು ರಕ್ಷಿತ್ ಶೆಟ್ಟಿ ಈ ಹಿಂದೆ ಹೇಳಿಕೊಂಡಿದ್ದರು.

Continue Reading

ಸ್ಯಾಂಡಲ್ ವುಡ್

Samarjit Lankesh: ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಅಭಿನಯದ `ಗೌರಿ’ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

Samarjit Lankesh: ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ 15 ಸ್ವತಂತ್ರ ದಿನಾಚರಣೆ ದಿನ ಹಾಗೂ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Samarjit Lankesh gowri movie kannada release date announce
Koo

ಬೆಂಗಳೂರು: ಪತ್ರಕರ್ತ, ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ (Samarjit Lankesh) ಪುತ್ರ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಅಗಸ್ಟ್ 15 ಸ್ವತಂತ್ರ ದಿನಾಚರಣೆ ದಿನ ಹಾಗೂ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ.

ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಲು ಇಂದ್ರಜಿತ್ ಲಂಕೇಶ್ ಅವರು ರಾಜಾಜಿನಗರದ ವಿದ್ಯಾವಿಹಾರ (ಎಂ ಇ ಎಸ್ ಮ್ಯಾನೇಜ್ಮೆಂಟ್) ಕಾಲೇಜಿನಲ್ಲಿ ಅದ್ಧೂರಿ ಸಮಾರಂಭ ಆಯೋಜಿಸಿದ್ದರು. ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ಸಮಾರಂಭಕ್ಕೆ ಸಾಕ್ಷಿಯಾದರು. ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ʻʻನಮ್ಮ “ಗೌರಿ” ಚಿತ್ರತಂಡ ಕರ್ನಾಟಕದಾದ್ಯಂತ ಸಂಚಾರ ಮಾಡುತ್ತಿದೆ. ಆ ಊರಿನ ಮಾಧ್ಯಮದವರು ಹಾಗೂ ಅಭಿಮಾನಿಗಳು ನೀಡುತ್ತಿರುವ ಪ್ರೋತ್ಸಾಹಕ್ಕೆ ಮನ ತುಂಬಿ ಬಂದಿದೆ. ಹಾಡುಗಳ ಮೂಲಕ ಈಗಾಗಲೇ ಜನರನ್ನು ತಲುಪಿರುವ “ಗೌರಿ” ಚಿತ್ರ ಇದೇ ಅಗಸ್ಟ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ವರಮಹಾಲಕ್ಷ್ಮೀ, ಸ್ವತಂತ್ರ ದಿನಾಚರಣೆ, ರಕ್ಷಾ ಬಂಧನ ಹೀಗೆ ಸಾಲುಸಾಲು ರಜೆ ದಿಗಗಳು ಆ ಸಮಯದಲ್ಲಿದೆ. ಹಾಗಾಗಿ ಆಗಸ್ಟ್ 15 ದಿನಾಂಕವನ್ನು ಆಯ್ಕೆ ಮಾಡಿಕೊಂಡಿದ್ದೇವೆ‌. ಒಬ್ಬ ಪ್ರೇಕ್ಷಕನಾಗಿ ಸಿನಿಮಾ ನೋಡಿದಾಗ ನನಗೆ ಬಹಳ ಇಷ್ಟವಾಯಿತು. ಪ್ರೇಕ್ಷಕರಿಗೂ ನಮ್ಮ ಚಿತ್ರ ಮೆಚ್ಚುಗೆಯಾಗಲಿದೆʼʼ ಎಂದರು ಇಂದ್ರಜಿತ್ ಲಂಕೇಶ್.

ಇದನ್ನೂ ಓದಿ: Kidnap case : ಕೋಟಿ ಆಸೆಗೆ ಸಿನಿಮಾ ಸ್ಟೈಲ್‌ನಲ್ಲಿ ಸ್ಟಾಕ್‌ ಮಾರ್ಕೆಟ್‌ ವಂಚಕನ ಕಿಡ್ನ್ಯಾಪ್‌

ಅಪ್ಪ ಹೇಳಿದ ಹಾಗೆ ಹೋದ ಕಡೆಯಲ್ಲಾ ನಮ್ಮ ಚಿತ್ರಕ್ಕೆ ಪಾಸಿಟಿವ್ ರೆಸ್ಪಾನ್ಸ್ ಸಿಗುತ್ತಿದೆ‌. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ನನ್ನ ಹಲವು ವರ್ಷಗಳ ಶ್ರಮಕ್ಕೆ ಉತ್ತರ ಸಿಗುವ ದಿನ ಹತ್ತಿರ ಬಂದಿದೆ ಎಂದರು ನಾಯಕ ಸಮರ್ಜಿತ್ ಲಂಕೇಶ್.

ಆಗಸ್ಟ್ 15 ನನ್ನ ಕನಸು ನನ್ನಸಾಗುವ ದಿನ. ಈ ದಿನಕ್ಕಾಗಿ ಕಾಯುತ್ತಿದೆ‌. ಅವಕಾಶ ನೀಡಿದ ಇಂದ್ರಜಿತ್ ಲಂಕೇಶ್ ಅವರಿಗೆ ಧನ್ಯವಾದ ಎಂದರು ನಾಯಕಿ ಸಾನ್ಯ ಅಯ್ಯರ್ .

Continue Reading

ಕ್ರೈಂ

Actor Darshan:  ದರ್ಶನ್‌‌‌‌‌‌ ವಿರುದ್ಧ ಪರೋಕ್ಷವಾಗಿ ಕೌಂಟರ್‌ ಕೊಟ್ಟ ನಟ ಜಗ್ಗೇಶ್!

Actor Darshan: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan ) ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತಿದ್ದಾರೆ. ಹಲವು ಅಭಿಮಾನಿಗಳು ದರ್ಶನ್​ರನ್ನು ಭೇಟಿಯಾಗಲು ಪ್ರತಿನಿತ್ಯ ಜೈಲಿನ ಬಳಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರಿಗೂ ಅವಕಾಶ ನೀಡುತ್ತಿಲ್ಲ. ಕೇವಲ ಕುಟುಂಬ ಸದಸ್ಯರಿಗೆ ಹಾಗೂ ವಕೀಲರಿಗಷ್ಟೆ ಅವಕಾಶ ನೀಡಲಾಗಿದೆ.

VISTARANEWS.COM


on

Actor Darshan case Jaggesh reaction about this
Koo

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ (ಶಿವಾನಂದ ಸರ್ಕಲ್) ಉದ್ಘಾಟನಾ ಸಮಾರಂಭವನ್ನು (Actor Darshan) ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಹೊಸ ಕಟ್ಟಡವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ನಟ ಶಿವರಾಜ್‌ ಕುಮಾರ್‌, ಜಗ್ಗೇಶ್‌ , ಸಾಧು ಕೋಕಿಲಾ ಸೇರದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಜಗ್ಗೇಶ್, ಚಿತ್ರರಂಗದ ಕೆಲಸಗಳನ್ನು ಪಟ್ಟು ಹಿಡಿದು ಮಾಡಿಸಬೇಕು, ಸಿದ್ದರಾಮಯ್ಯ ಅವರು ಬಂದಾಗ ಹೇಳಿ ಸುಮ್ಮನಾಗುವುದಲ್ಲ ಆಗಾಗ್ಗೆ ಹೋಗಿ ಅವರ ತಲೆ ನಿನ್ನುತ್ತಿರಬೇಕು, ಸಿಎಂ ಅವರಿಗೆ ಕೆಲಸದ ಭಾರ ತುಂಬಾ ಇರುತ್ತದೆ. ಒಟಿಟಿ ಎಂಬುದು ಒಳ್ಳೆಯ ಯೋಜನೆ. ಇದನ್ನು ಸರ್ಕಾರ ಮಾಡಿದ್ರೆ ಪ್ರಾಫಿಟ್‌ ತಂದು ಕೊಡುತ್ತದೆ. ಈಗಾಗಲೇ ಮಲ್ಟಿ ನ್ಯಾಷನಲ್ ಕಂಪನಿ ಮಾಡಿಕೊಂಡಿದೆ. ನಮ್ಮ ದುಡ್ಡು ಹೊರ ರಾಜ್ಯಕ್ಕೆ ಹೋಗ್ತಿದೆ’ ಎಂದಿದ್ದಾರೆ.

ಇದನ್ನೂ ಓದಿ: Actor Darshan : ಶಂಖ ಊದುತ್ತ, ಜಾಗಟೆ ಬಾರಿಸುತ್ತ ದರ್ಶನ್‌ ಭೇಟಿಗೆ ಬಂದ ವಿಶೇಷ ಚೇತನ ಅಭಿಮಾನಿ!

ಸಿನಿಮಾ ರಂಗದ ಇತ್ತೀಚಿನ ಬೆಳವಣಿಗೆ ಬಗ್ಗೆ ಜಗ್ಗೇಶ್‌ ಮಾತನಾಡಿ ಪರೋಕ್ಷವಾಗಿ ʻʻ ನಿರ್ಮಾಪಕರು ಸಿನಿಮಾ ನಾಯಕನ ಹಿಂದೆ ಹೋಗಿ ಸಿನಿಮಾ ಮಾಡಬೇಡಿ. ಕಥೆ ಹಿಂದೆ ಹೋಗಿ ಸಿನಿಮಾ ಮಾಡಿ. ಇವತ್ತು ನಾಯಕರ ಹಿಂದೆಯೇ ಹೋದಾಗಲೇ ನಿರ್ಮಾಪಕರಿಗೆ ಸಮಸ್ಯೆ ಆಗಿದೆ. ಹಿಂದೆ ಕಥೆ ಹಿಂದೆ ಹೋದಾಗ ನಿರ್ಮಾಪಕರು ಚನ್ನಾಗಿದ್ದರುʼʼಎಂದರು.

ಈ ವೇಳೆ ನಟ ಶಿವರಾಜ್‌ಕುಮಾರ್‌ ಕೂಡ ಭಾಗಿಯಾಗಿದ್ದರು. ಈ ವೇಳೆ ದರ್ಶನ್‌ (Actor Darshan) ಕುರಿತಾಗಿ ಮಾತನಾಡಿದರು. ಶಿವಣ್ಣ ಮಾತನಾಡಿ ʻʻಈ ವಿಚಾರದ ಬಗ್ಗೆ ಬೇಸರ ಆಗತ್ತೆ. ಅದೆಲ್ಲ ಹಣೆಬರಹ. ಹಣೆ ಬರಹ ಅನ್ನೋದು ಒಂದು ಇರುತ್ತೆ. ಏನೇ ಮಾತನಾಡಿದರೂ ಅದು ಸರಿನಾ ಎಂದು ಯೋಚನೆ ಮಾಡಬೇಕು. ನಾವು ಬಂದರೋದು ಎದುರಿಸಲೇ ಬೇಕು. ಈಗಾಗಲೇ ತನಿಖೆ ಆಗುತ್ತಿದೆ. ಯಾಕಪ್ಪ ಹೀಗೆ ಆಯ್ತು ಅಂತ ಬೇಜಾರ ಆಗುತ್ತೆ. ಎರಡೂ ಕುಟಂಬಗಳು ಬೇಜಾರಿನ ಲ್ಲಿದೆ. ನ್ಯಾಯ ಎಲ್ಲಿದೆ ಮುಂದೆ ಗೊತ್ತಾಗತ್ತೆʼʼಎಂದರು.

 ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan ) ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತಿದ್ದಾರೆ. ಹಲವು ಅಭಿಮಾನಿಗಳು ದರ್ಶನ್​ರನ್ನು ಭೇಟಿಯಾಗಲು ಪ್ರತಿನಿತ್ಯ ಜೈಲಿನ ಬಳಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರಿಗೂ ಅವಕಾಶ ನೀಡುತ್ತಿಲ್ಲ. ಕೇವಲ ಕುಟುಂಬ ಸದಸ್ಯರಿಗೆ ಹಾಗೂ ವಕೀಲರಿಗಷ್ಟೆ ಅವಕಾಶ ನೀಡಲಾಗಿದೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಯಾರಿಗೂ ಭೇಟಿಯಾಗುವ ಅವಕಾಶ ಇರುವುದಿಲ್ಲ. ಹೀಗಿದ್ದರೂ ದಾಸಪ್ಪ ವೃತ್ತಿ ಮಾಡುವ ವಿಶೇಷ ಚೇತನ ಅಭಿಮಾನಿ, ಹಾಗೂ ಮಾರತ್ತಹಳ್ಳಿಯಿಂದ ಆಟೋ ಚಾಲಕ ಸುನೀಲ್ ದರ್ಶನ್‌ ನೋಡಲು ಬಂದಿದ್ದಾರೆ.

Continue Reading
Advertisement
Rohit Sharma
ಪ್ರಮುಖ ಸುದ್ದಿ16 mins ago

Rohit Sharma: ನನಗೆ ಟಿ20ಗೆ ನಿವೃತ್ತಿ ಘೋಷಿಸಲು ಮನಸ್ಸು ಇರಲಿಲ್ಲ; ಆಘಾತಕಾರಿ ಹೇಳಿಕೆ ನೀಡಿದ ರೋಹಿತ್​ ಶರ್ಮಾ

LPG Price Cut
ವಾಣಿಜ್ಯ17 mins ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ 30 ರೂ. ಇಳಿಕೆ

kidanp case
ಕ್ರೈಂ24 mins ago

Kidnap Case: ಹಿಂದೂ ಹುಡುಗನ ಜೊತೆಗೆ ಮುಸ್ಲಿಂ ಹುಡುಗಿ ನಾಪತ್ತೆ, ಕಿಡ್ನಾಪ್‌ ದೂರು

Rakshak Bullet Washed His Father grave
ಸ್ಯಾಂಡಲ್ ವುಡ್28 mins ago

Rakshak Bullet: ಅಜ್ಜಿ-ತಂದೆಯ ಸಮಾಧಿ ತೊಳೆದು ವಿಶೇಷ ವಿಡಿಯೊ ಮಾಡಿದ ರಕ್ಷಕ್ ಬುಲೆಟ್

Team India Captain
ಕ್ರೀಡೆ39 mins ago

Team India Captain : ರೋಹಿತ್ ಶರ್ಮಾ ನಂತರ ಟಿ20 ತಂಡದ ನಾಯಕ ಯಾರು? ಇಲ್ಲಿದೆ ಐದು ಮುಂಚೂಣಿ ಹೆಸರುಗಳು

Water tank Collapsed
ದೇಶ41 mins ago

Water Tank Collapsed: ಭೀಕರ ದುರಂತ; ಇಬ್ಬರು ಸ್ಥಳದಲ್ಲೇ ಸಾವು-12ಮಂದಿಗೆ ಗಂಭೀರ ಗಾಯ

New Criminal Law
ದೇಶ52 mins ago

New Criminal Law: ಹೊಸ ಕ್ರಿಮಿನಲ್‌ ಕಾನೂನಿನಂತೆ ಬೀದಿ ವ್ಯಾಪಾರಿ ವಿರುದ್ಧ ಮೊದಲ ಎಫ್‌ಐಆರ್‌ ದಾಖಲು

Actor Darshan In Central Jail remembering mother and son
ಕ್ರೈಂ53 mins ago

Actor Darshan: ಇಂದಾದ್ರೂ ಭೇಟಿಗೆ ಬರ್ತಾರಾ ದರ್ಶನ್‌ ಅಮ್ಮ, ತಮ್ಮ?

Rakshit Shetty Visited Koragajja Temple And Prayed
ಸಿನಿಮಾ1 hour ago

Rakshit Shetty: ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ!

Parliament Sessions
ದೇಶ1 hour ago

Parliament Sessions: ಇಂದು ಸಂಸತ್‌ ಕಲಾಪ ಪುನರಾರಂಭ; ʼನೀಟ್‌ʼ ಚರ್ಚೆಗೆ ಪ್ರತಿಪಕ್ಷಗಳ ಪಟ್ಟು ಸಾಧ್ಯತೆ: Live ಇಲ್ಲಿ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು22 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌