Prevention Of Obesity: ಆರೋಗ್ಯಪೂರ್ಣ ಜೀರ್ಣಕ್ರಿಯೆ ಮೂಲಕ ಬೊಜ್ಜು ನಿವಾರಣೆ ಸಾಧ್ಯ - Vistara News

ಆರೋಗ್ಯ

Prevention Of Obesity: ಆರೋಗ್ಯಪೂರ್ಣ ಜೀರ್ಣಕ್ರಿಯೆ ಮೂಲಕ ಬೊಜ್ಜು ನಿವಾರಣೆ ಸಾಧ್ಯ

ದೇಹದಲ್ಲಿ ಅತಿಯಾಗಿ ಕೊಬ್ಬು ಶೇಖರಣೆಯಾದಾಗ ಬೊಜ್ಜು ಬರುತ್ತದೆ. ಇದನ್ನು BMIಯಿಂದ ಅಳೆಯಲಾಗುತ್ತದೆ. ಬೊಜ್ಜಿನ ಸಮಸ್ಯೆಯಿಂದ ಹೃದ್ರೋಗ, ಮಧುಮೇಹ ಮತ್ತು ಕ್ಯಾನ್ಸರ್‌ನಂತಹ ಅಪಾಯಕಾರಿ ಕಾಯಿಲೆಗಳು ಬರುತ್ತವೆ. ಜೀರ್ಣಕ್ರಿಯೆಗೆ ಕರುಳಿನ ಆರೋಗ್ಯವೇ ಪ್ರಧಾನ. ಇದು ಜಠರದಲ್ಲಿ ಬ್ಯಾಕ್ಟೀರಿಯಾ, ಕಿಣ್ವಗಳು, ಸೂಕ್ಷ್ಮಜೀವಿಗಳ ಸಮತೋಲಿತ ವ್ಯವಸ್ಥೆಯನ್ನು ನಿರ್ವಹಿಸುತ್ತದೆ. ಕರುಳು ಆರೋಗ್ಯವಾಗಿದ್ದರೆ, ಜೀರ್ಣಕ್ರಿಯೆ, ಪೋಷಕಾಂಶಗಳ ಹೀರಿಕೊಳ್ಳುವಿಕೆ, ರೋಗನಿರೋಧಕ ಶಕ್ತಿ ಹಾಗೂ ಮಾನಸಿಕ ಆರೋಗ್ಯ (Prevention of obesity) ಉತ್ತಮವಾಗಿರುತ್ತದೆ

VISTARANEWS.COM


on

Prevention Of Obesity
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೊಜ್ಜಿನ ಸಮಸ್ಯೆಯು (Prevention of obesity) ಆಧುನಿಕ ಯುಗದಲ್ಲಿ ಎಲ್ಲರನ್ನೂ ಬೆಂಬಿಡದೆ ಕಾಡುತ್ತಿರುವ ಅತಿದೊಡ್ಡ ಜಾಗತಿಕ ಸಮಸ್ಯೆಯಾಗಿದೆ. ಬೊಜ್ಜು ದೇಹದ ಆಕಾರದ ಮೇಲೆ ಮಾತ್ರ ಪರಿಣಾಮ ಬೀರುವುದಿಲ್ಲ, ಜೊತೆಗೆ ಸಂಪೂರ್ಣ ಆರೋಗ್ಯ ಹಾಗೂ ಯೋಗಕ್ಷೇಮದ ಮೇಲೆ ಪರಿಣಾಮ ಬೀರುತ್ತದೆ. ದೇಹದಲ್ಲಿ ಅತಿಯಾಗಿ ಕೊಬ್ಬು ಶೇಖರಣೆಯಾದಾಗ ಬೊಜ್ಜು ಬರುತ್ತದೆ. ಇದನ್ನು BMIಯಿಂದ ಅಳೆಯಲಾಗುತ್ತದೆ. ಬೊಜ್ಜಿನ ಸಮಸ್ಯೆಯಿಂದ ಹೃದ್ರೋಗ, ಮಧುಮೇಹ ಮತ್ತು ಕ್ಯಾನ್ಸರ್‌ನಂತಹ ಅಪಾಯಕಾರಿ ಕಾಯಿಲೆಗಳು ಬರುತ್ತವೆ. ಜೀರ್ಣಕ್ರಿಯೆಗೆ ಕರುಳಿನ ಆರೋಗ್ಯವೇ ಪ್ರಧಾನ. ಇದು ಜಠರದಲ್ಲಿ ಬ್ಯಾಕ್ಟೀರಿಯಾ, ಕಿಣ್ವಗಳು, ಸೂಕ್ಷ್ಮಜೀವಿಗಳ ಸಮತೋಲಿತ ವ್ಯವಸ್ಥೆಯನ್ನು ನಿರ್ವಹಿಸುತ್ತದೆ. ಕರುಳು ಆರೋಗ್ಯವಾಗಿದ್ದರೆ, ಜೀರ್ಣಕ್ರಿಯೆ, ಪೋಷಕಾಂಶಗಳ ಹೀರಿಕೊಳ್ಳುವಿಕೆ, ರೋಗನಿರೋಧಕ ಶಕ್ತಿ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಬೆಂಗಳೂರಿನ ಕಿಂಡರ್ ಆಸ್ಪತ್ರೆಯ ನ್ಯೂಟ್ರೀಷನಿಸ್ಟ್ ಕನ್ಸಲ್ಟೆಂಟ್ ಡಾ. ಸಂಜನಾ ಪ್ರೇಮ್‌ಲಾಲ್ ತಿಳಿಸಿದರು.

healthy internal organs of human digestive system

ಮಾನವನ ದೇಹವು ಸಂಪೂರ್ಣವಾಗಿ ಆರೋಗ್ಯವಾಗಿರಬೇಕು ಎಂದರೆ ಜೀರ್ಣಕ್ರಿಯೆ ಹಾಗೂ ತೂಕದ ನಡುವಿನ ಸಂಬಂಧ ಮುಖ್ಯವಾಗಿದೆ. ಕರುಳಿನ ಮೈಕ್ರೋಬಯೋಟಾದಲ್ಲಿನ ಅಸಮತೋಲನವೇ ತೂಕ ಹೆಚ್ಚಾಗಲು ಮತ್ತು ಜೀರ್ಣಕ್ರಿಯೆ ಅಸ್ವಸ್ಥತೆಗೆ ಕಾರಣವಾಗಿರುತ್ತದೆ. ಅಷ್ಟೇ ಅಲ್ಲದೆ ತೂಕ ನಿರ್ವಹಣೆಗೆ ಅಡೆತಡೆ ಉಂಟುಮಾಡುತ್ತದೆ. ಹೆಚ್ಚಿನ ತೂಕ ಕಡಿಮೆ ಮಾಡಿಕೊಳ್ಳಲು ಬಯಸುವುದಾದರೆ, ಜೀರ್ಣಕ್ರಿಯೆ, ಪೋಷಕಾಂಶಗಳ ಹೀರಿಕೊಳ್ಳುವಿಕೆ, ಹಸಿವು ನಿಯಂತ್ರಿಸುವುದು, ಉರಿಯೂತ, ಚಯಾಪಚಯ ಹಾಗೂ ಹಾರ್ಮೋನ್‌ಗಳ ಅಸಮತೋಲನ ವಿಷಯಗಳಲ್ಲಿ ಕರುಳಿನ ಆರೋಗ್ಯ ಹೇಗಿದೆ ಎಂಬುದನ್ನು ಗುರುತಿಸಬೇಕು. ಇವುಗಳು ಪರಿಣಾಮಕಾರಿ ತೂಕ ನಿರ್ವಹಣೆಗೆ ಸಹಕಾರಿಯಾಗುತ್ತದೆ.

ಶಿಸ್ತು ಮೀರಿದ ಆಹಾರ

ಅಶಿಸ್ತಿನ ಆಹಾರ ಕ್ರಮ, ಔಷಧಿಗಳ ಅತಿಯಾದ ಬಳಕೆ ಮತ್ತು ಒತ್ತಡದಿಂದ ಕರುಳಿನಲ್ಲಿ ಬ್ಯಾಕ್ಟೀರಿಯಾಗಳು ಉತ್ಪತ್ತಿಯಾಗುತ್ತವೆ. ಇದು ತೂಕ ಹೆಚ್ಚಳಕ್ಕೆ ಹಾಗೂ ಬೊಜ್ಜಿನ ಸಮಸ್ಯೆಗೆ ಕಾರಣವಾಗಬಹುದು. ಈ ಲೇಖನದಲ್ಲಿ ತಿಳಿಸಿರುವ ಸೂತ್ರಗಳನ್ನು ಅನುಸರಿಸುವ ಮೂಲಕ ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಜೊತೆಗೆ ಆರೋಗ್ಯಕರವಾದ ತೂಕವನ್ನು ಹೊಂದಲು ಅನುಕೂಲವಾಗಲಿದೆ ಎಂದು ಡಾ. ಸಂಜನಾ ಪ್ರೇಮ್‌ಲಾಲ್‌ ಹೇಳಿದ್ದಾರೆ.

Healthy digestive system Lemon Water Benefits

ಆರೋಗ್ಯಕರ ಜೀರ್ಣಕ್ರಿಯೆಗೆ ಏನು ಮಾಡಬೇಕು?

ಹೆಚ್ಚು ಸಸ್ಯಹಾರ ಸೇವನೆ: ಹಣ್ಣು, ತರಕಾರಿ, ದವಸ ಹಾಗೂ ಧಾನ್ಯಗಳನ್ನು ಸೇವಿಸಿದರೆ, ಅವುಗಳಲ್ಲಿ ರೋಗನಿರೋಧಕ ಶಕ್ತಿ ಹಾಗೂ ಫೈಬರ್ ಸಮೃದ್ಧವಾಗಿರುತ್ತದೆ, ಇದರಿಂದ ಜೀರ್ಣಕ್ರಿಯೆ ಸುಲಭವಾಗಿರುತ್ತದೆ.

ಪ್ರಿಬಯಾಟಿಕ್ ಮತ್ತು ಪ್ರೋಬಯಾಟಿಕ್ ಆಹಾರ ಸೇವನೆ

ಪ್ರಯೋಜನಕಾರಿ ಕರುಳಿನ ಬ್ಯಾಕ್ಟೀರಿಯಾದ ಬೆಳವಣಿಗೆಗಾಗಿ ಜೆರುಸಲೇಮ್ ಆರ್ಟಿಚೋಕ್ಸ್, ಶತಾವರಿ, ಹಾಗೂ ಕಿಮ್ಚಿ & ಸೌರ್ಕ್ರಾಟ್‌ನಂತಹ ಆಹಾರ ಪದಾರ್ಥಗಳನ್ನು ಸೇವಿಸಬೇಕು.

drink water

ಹೈಡ್ರೇಟೆಡ್ ಆಗಿರುವುದು

ಹೆಚ್ಚು ನೀರು ಕುಡಿಯುವುದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಹಾಗೂ ಮಲಬದ್ಧತೆ ತಡೆಯುವುದರ ಜೊತೆಗೆ ಕರುಳಿನ ಒಳಪದರದ ಆರೋಗ್ಯವನ್ನು ಕಾಪಾಡುತ್ತದೆ.

ಆಹಾರವನ್ನು ಜಗಿದು ತಿನ್ನುವುದು

ಉತ್ತಮ ಜೀರ್ಣಕ್ರಿಯೆಗೆ ಪೋಷಕಾಂಶಗಳ ಹೀರಿಕೊಳ್ಳುವಿಕೆ ಹಾಗೂ ಜೀರ್ಣಕ್ರಿಯೆಯ ಅಸ್ವಸ್ಥತೆಯನ್ನು ಕಡಿಮೆ ಮಾಡಲು ಆಹಾರವನ್ನು ಸಂಪೂರ್ಣವಾಗಿ ಜಗಿದು ತಿನ್ನಬೇಕು.

Sleeping Tips

ಉತ್ತಮ ನಿದ್ರೆ

ಹಾರ್ಮೋನ್ ಸಮತೋಲನ ಮತ್ತು ಕರುಳಿನ ಆರೋಗ್ಯಕ್ಕೆ ಉತ್ತಮ ನಿದ್ರೆ ಅತ್ಯಗತ್ಯ. ಹೀಗಾಗಿ ಪ್ರತಿದಿನ ರಾತ್ರಿ ಗುಣಮಟ್ಟದ ನಿದ್ರೆಯನ್ನು ಮಾಡಬೇಕು.

ಉತ್ತಮ ಅಡುಗೆ ಎಣ್ಣೆ ಬಳಸಿ

ಉತ್ತಮ ಆರೋಗ್ಯಕ್ಕಾಗಿ ವರ್ಜಿನ್ ಆಲಿವ್ ಎಣ್ಣೆ ಹಾಗೂ ತೆಂಗಿನ ಎಣ್ಣೆಯನ್ನು ಬಳಸಿ. ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುವುದರ ಜೊತೆಗೆ ಉರಿಯೂತ ಕಡಿಮೆಯಾಗುತ್ತದೆ.

exercise

ವ್ಯಾಯಾಮ

ದೈಹಿಕ ಚಟುವಟಿಕೆಯು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಹೀಗಾಗಿ ನಿಮ್ಮ ದಿನಚರಿಯಲ್ಲಿ ವ್ಯಾಯಾಮವನ್ನು ಸೇರಿಸಿಕೊಳ್ಳಬೇಕು.

ಸರಿಯಾದ ಸಮಯಕ್ಕೆ ತಿನ್ನಿ

ಜೀರ್ಣಕ್ರಿಯೆ ಉತ್ತಮವಾಗಿರಲು ಪ್ರತಿ ಊಟದ ನಡುವೆ 3 ರಿಂದ 4 ಗಂಟೆಗಳ ಅಂತರವಿರಲಿ. ಇದರಿಂದ ಹೊಟ್ಟೆ ಉಬ್ಬರಿಕೆ ಹಾಗೂ ಮಲಬದ್ಧತೆಯಂತಹ ಸಮಸ್ಯೆಗಳು ಕಂಡು ಬರುವುದಿಲ್ಲ.

Stress Reduction Health Benefits Of Hot Water Bath

ಒತ್ತಡ ನಿರ್ವಹಣೆ

ಒತ್ತಡವನ್ನು ನಿರ್ವಹಿಸಲು ಧ್ಯಾನ, ಯೋಗ ಮಾಡುವುದರಿಂದ ಕರುಳಿನ ಆರೋಗ್ಯ ಉತ್ತಮವಾಗಿರುತ್ತದೆ. ಕರುಳು ಆರೋಗ್ಯವಾಗಿರಲು ಈ ಕೆಲಸಗಳನ್ನು ಮಾಡದಿರಿ

ಒಂದೇ ತರಹದ ಆಹಾರ ಸೇವನೆ

ಪ್ರತಿನಿತ್ಯ ಒಂದೇ ತರಹದ ಆಹಾರ ಸೇವನೆಯನ್ನು ಮಾಡದಿರುವುದು ಒಳಿತು. ಈ ರೀತಿ ಮಾಡುವುದರಿಂದ ದೇಹಕ್ಕೆ ಅಗತ್ಯ ಪೋಷಕಾಂಶಗಳ ಕೊರತೆ ಉಂಟಾಗುತ್ತದೆ. ಹೀಗಾಗಿ ಹಣ್ಣು, ತರಕಾರಿ, ದವಸ ಹಾಗೂ ಸಿರಿಧಾನ್ಯಗಳ ಸೇವನೆಯಿಂದ ಕರುಳಿನ ಆರೋಗ್ಯಕ್ಕೆ ಅನುಕೂಲವಾಗಲಿದೆ.

beautiful asian young woman eating healthy food Sleep Tips

ಹೆಚ್ಚು ಆಹಾರ ಸೇವನೆ

ಹೆಚ್ಚು ಆಹಾರ ಸೇವಿಸುವುದರಿಂದ ಜೀರ್ಣಕ್ರಿಯೆಗೆ ಸಮಸ್ಯೆಯಾಗುತ್ತದೆ. ಹೀಗಾಗಿ ಅಗತ್ಯ ಹಾಗೂ ಉತ್ತಮ ಆಹಾರವನ್ನು ಸರಿಯಾಗಿ ಜಗಿದು ತಿನ್ನಬೇಕು. ಜೊತೆಗೆ ಹಸಿವಾದಾಗ ಮಾತ್ರ ಆಹಾರ ಸೇವಿಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು.

ಸಂಸ್ಕರಿಸಿದ ಆಹಾರ ಸೇವನೆ

ಸಂಸ್ಕರಿಸಿದ ಆಹಾರ ಸೇವನೆ‌ ಒಳ್ಳೆಯದಲ್ಲ. ಇದರಿಂದ ಪೋಷಕಾಂಶಗಳ ಕೊರತೆ ಉಂಟಾಗುವುದರ ಜೊತೆಗೆ ಕರುಳಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಜೀರ್ಣಕ್ರಿಯೆಗೆ ಬೇಳೆ ಕಾಳುಗಳು, ದವಸಧಾನ್ಯಗಳು, ಹೆಚ್ಚು ಪ್ರೊಟೀನ್ ಇರುವ ಆಹಾರವನ್ನು ಸೇವಿಸಬೇಕು.

Selection of Colorful Sweets

ಕೃತಕ ಸಿಹಿ ಪದಾರ್ಥಗಳ ಸೇವನೆ

ಕೃತಕ ಸಿಹಿ ಪದಾರ್ಥಗಳ ಸೇವನೆಯಿಂದ ಕರುಳಿನ ಆರೋಗ್ಯ ಹಾಳಾಗುತ್ತದೆ. ಹೀಗಾಗಿ ನೈಸರ್ಗಿಕ ಪದಾರ್ಥಗಳಿಂದ ತಯಾರಿಸಲಾದ ಜ್ಯೂಸ್ ಹಾಗೂ ತಾಜಾ ಹಣ್ಣುಗಳನ್ನು ಸೇವಿಸುವುದು ಒಳಿತು.
ಉರಿಯೂತವನ್ನುಂಟು ಮಾಡುವ ಅಡುಗೆ ಎಣ್ಣೆ

ಬಳಕೆ ನಿಷೇಧ

ಕ್ಯಾನೋಲ, ಕಡಲೆಕಾಯಿ ಮತ್ತು ಸೂರ್ಯಕಾಂತಿಯಂತಹ ಅಡುಗೆ ಎಣ್ಣೆ ಬಳಕೆಯನ್ನು ಕಡಿಮೆ ಮಾಡಿ. ಇವುಗಳಿಂದ ಉರಿಯೂತ ಉಂಟಾಗುವುದರ ಜೊತೆಗೆ ಜೀರ್ಣಾಂಗ ವ್ಯವಸ್ಥೆ ಹದಗೆಡುತ್ತದೆ. ಉತ್ತಮ ಕರುಳಿನ ಆರೋಗ್ಯಕ್ಕಾಗಿ ಸಂಪೂರ್ಣವಾಗಿ ಸಂಸ್ಕರಿಸದ ಸಸ್ಯ ಆಧಾರಿತ ಆಹಾರಗಳನ್ನು ಹೆಚ್ಚು ಬಳಸಿ.

ಇದನ್ನೂ ಓದಿ: Nosebleeds In Summer: ಬೇಸಿಗೆಯ ತಾಪಕ್ಕೆ ಮೂಗಿನಲ್ಲಿ ರಕ್ತಸ್ರಾವವೇ? ತಡೆಯಲು ಇಲ್ಲಿವೆ ಸರಳ ಉಪಾಯ

ದೈಹಿಕ ಮತ್ತು ಮಾನಸಿಕ ಆರೋಗ್ಯದ ನಿರ್ಲಕ್ಷ್ಯ

ದೈಹಿಕ ಹಾಗೂ ಮಾನಸಿಕ ಆರೋಗ್ಯ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಉತ್ತಮ ಆರೋಗ್ಯಕ್ಕಾಗಿ ವ್ಯಾಯಾಮ, ಒತ್ತಡ ನಿರ್ವಹಣೆ ಹಾಗೂ ಸ್ವಯಂ ಆರೈಕೆಗೆ ಸಮಯ ಮೀಸಲಿಡಬೇಕು.
ಬೊಜ್ಜು ನಿವಾರಿಸಲು ಜೀರ್ಣಕ್ರಿಯೆ ಹೆಚ್ಚಿಸಿಕೊಳ್ಳುವುದರ ಜೊತೆಗೆ ವ್ಯಾಯಾಮ ಮಾಡುವುದು ಪ್ರಮುಖ ಸೂತ್ರ. ಉತ್ತಮ ಆಹಾರ ಪದ್ದತಿ, ಸ್ಥಿರವಾದ ದೈಹಿಕ ಚಟುವಟಿಕೆ, ಸರಿಯಾದ ನಿದ್ರೆ, ಒತ್ತಡ ನಿರ್ವಹಣೆ, ತೂಕ ನಿಯಂತ್ರಣ ಕೂಡ ಅತ್ಯಗತ್ಯವಾಗಿರುತ್ತದೆ. ಸಣ್ಣ ಬದಲಾವಣೆಗಳು ಸಹ ಕರುಳಿನ ಆರೋಗ್ಯ ಹಾಗೂ ತೂಕ ನಿರ್ವಹಣೆಯಲ್ಲಿ ದೀರ್ಘಕಾಲದ ಯಶಸ್ಸನ್ನು ನೀಡುತ್ತದೆ ಎಂದು ತಜ್ಞೆ ಸಂಜನಾ ಪ್ರೇಮ್‌ಲಾಲ್‌ ಸಲಹೆಗಳನ್ನು ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಆರೋಗ್ಯ

Sour Curd: ಹುಳಿ ಬಂದ ಮೊಸರಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದೋ ಕೆಟ್ಟದ್ದೋ?

sour curd: ನಿತ್ಯವೂ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವುದು ಬಹುತೇಕರಿಗೆ ಅಭ್ಯಾಸ. ಅಷ್ಟೇ ಅಲ್ಲ, ಅನೇಕ ಬಗೆಯಲ್ಲಿ ಮೊಸರಿನ ಬಳಗೆ ನಮ್ಮ ಮನೆಗಳಲ್ಲಿ ನಿತ್ಯವೂ ಇದೆ. ಬೇಸಿಗೆಯಲ್ಲಿ ಮಜ್ಜಿಗೆ ಮಾಡಿ ಕುಡಿಯಲು, ತಂಪಾದ ಲಸ್ಸಿ ಹೊಟ್ಟೆಗಿಳಿಸಲು ಮೊಸರು ಬೇಕೇ ಬೇಕು. ಇಂತಹ ಮೊಸರಿನಲ್ಲಿರುವ ಪ್ರೊಬಯಾಟಿಕ್‌ ಗುಣಗಳಿರುವುದರಿಂದ, ಈ ಒಳ್ಳೆಯ ಬ್ಯಾಕ್ಟೀರಿಯಾಗಳು ಹೊಟ್ಟೆಯನ್ನು, ಪಚನಕ್ರಿಯೆಯನ್ನು ಆರೋಗ್ಯವಾಗಿಡುತ್ತದೆ. ಆದರೆ, ಮೊಸರು ಬಹುಬೇಗನೆ ಹುಳಿ ಬರುತ್ತದೆ. ಹೀಗೆ ಹೆಚ್ಚು ಹುಳಿ ಬಂದ ಮೊಸರನ್ನು ಸೇವಿಸಬಹುದೇ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Sour Curd
Koo

ಮೊಸರು ಭಾರತೀಯರ ಅಡುಗೆ ಮನೆಯ ಆರಾಧ್ಯ ದೈವ. ಅದರಲ್ಲೂ ದಕ್ಷಿಣ ಭಾರತೀಯರಿಗೆ ಮೊಸರಿಲ್ಲದೆ ಜೀವನ ಬಲು ದುಸ್ತರ. ನಿತ್ಯವೂ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವುದು ಬಹುತೇಕರಿಗೆ ಅಭ್ಯಾಸ. ಅಷ್ಟೇ ಅಲ್ಲ, ಅನೇಕ ಬಗೆಯಲ್ಲಿ ಮೊಸರಿನ ಬಳಗೆ ನಮ್ಮ ಮನೆಗಳಲ್ಲಿ ನಿತ್ಯವೂ ಇದೆ. ಬೇಸಿಗೆಯಲ್ಲಿ ಮಜ್ಜಿಗೆ ಮಾಡಿ ಕುಡಿಯಲು, ತಂಪಾದ ಲಸ್ಸಿ ಹೊಟ್ಟೆಗಿಳಿಸಲು ಮೊಸರು ಬೇಕೇ ಬೇಕು. ಇಂತಹ ಮೊಸರಿನಲ್ಲಿರುವ ಪ್ರೊಬಯಾಟಿಕ್‌ ಗುಣಗಳಿರುವುದರಿಂದ, ಈ ಒಳ್ಳೆಯ ಬ್ಯಾಕ್ಟೀರಿಯಾಗಳು ಹೊಟ್ಟೆಯನ್ನು, ಪಚನಕ್ರಿಯೆಯನ್ನು ಆರೋಗ್ಯವಾಗಿಡುತ್ತದೆ. ಆದರೆ, ಮೊಸರು ಬೇಸಿಗೆಯಲ್ಲಿ ಬಹುಬೇಗನೆ ಹುಳಿ ಬರುತ್ತದೆ. ಹೆಚ್ಚು ಕಾಲ ಹೊರಗೇ ಇಟ್ಟರೆ, ಹುಳಿಯಾಗುತ್ತದೆ. ಕೆಲವೊಮ್ಮೆ ಇದು ಅತಿ ಹುಳಿಯಾಗಿ ತನ್ನ ವಾಸನೆಯನ್ನೂ, ರುಚಿಯನ್ನೂ ಬದಲಾಯಿಸಿಬಿಡುತ್ತದೆ. ಹೀಗೆ ಹುಳಿಯಾದ ಮೊಸರೂ ಕೂಡಾ ಆರೋಗ್ಯಕ್ಕೆ ಒಳ್ಳೆಯದನ್ನೇ ಮಾಡುತ್ತದೋ ಎಂಬ ಗೊಂದಲ ಕೆಲವರಲ್ಲಿ ಇರಬಹುದು. ಬನ್ನಿ, ಈ ಬಗ್ಗೆ (sour curd) ತಿಳಿಯೋಣ.

homemade curd in a clay pot Stomach Bloating Relief

ಆರೋಗ್ಯಕ್ಕೆ ಹಾನಿಯೇ?

ಹುಳಿ ಮೊಸರಿನ ಸೇವನೆಯಿಂದ ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ. ಇದು ತೀರಾ ರುಚಿ ಕೆಡದೇ ಇದ್ದರೆ ಹಾಗೂ ಹಾಳಾಗದಿದ್ದರೆ, ಇದನ್ನು ಸೇವಿಸಬಹುದು. ಇದರಲ್ಲಿರುವ ಅಸಿಡಿಟಿ ಮಟ್ಟ ಹೆಚ್ಚಾದಷ್ಟು ಇದರಲ್ಲಿರುವ ಪ್ರೊಬಯಾಟಿಕ್‌ ಗುಣ ಹೆಚ್ಚುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಆದರೂ, ಇಂಥ ಮೊಸರನ್ನು ಸೇವಿಸುವ ಮುನ್ನ ಕೆಲವು ವಿಚಾರಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಬನ್ನಿ ಅವು ಯಾವುವು ನೋಡೋಣ.

curd in bowl
  • ಹುಳಿ ಬಂದ ಮೊಸರನ್ನು ಫ್ರಿಡ್ಜ್‌ನಲ್ಲಿಟ್ಟಿರಬೇಕು ಹಾಗೂ ಅದನ್ನು ಗಾಳಿಯಾಡದ ಡಬ್ಬದಲ್ಲಿ ಹಾಕಿ ಇಟ್ಟಿರಬೇಕು. ಇಲ್ಲವಾದರೆ, ಇದರಲ್ಲಿ ಕೆಟ್ಟ ಬ್ಯಾಕ್ಟೀರಿಯಾಗಳೂ ಬೆಳೆಯುವ ಸಂಭವ ಹೆಚ್ಚು.
  • ಮೊಸರಿನ ರೂಪ ಹಾಗೂ ಅದರ ಪರಿಮಳದಲ್ಲಿ ವ್ಯತ್ಯಾಸವಾಗಿದ್ದರೆ, ವಾಸನೆ ಬೀರುತ್ತಿದ್ದರೆ ಸೇವನೆ ಒಳ್ಳೆಯದಲ್ಲ. ಅಥವಾ ಹಳದಿ ಬಣ್ಣಕ್ಕೆ ತಿರುಗಿದ್ದರೂ ಕೂಡಾ ಇದನ್ನು ಸೇವಿಸಬಾರದು.
  • ಲ್ಯಾಕ್ಟೋಸ್‌ಗೆ ಬ್ಯಾಕ್ಟೀರಿಯಾ ಸೇರಿ ಹುದುಗು ಬಂದು ಲ್ಯಾಕ್ಟಿಕ್‌ ಆಸಿಡ್‌ ಆದಾಗ ಮೊಸರು ಹುಳಿ ಬರುತ್ತದೆ. ಇದು ನೈಸರ್ಗಿಕವಾದ, ಸಹಜವಾದ ಪ್ರಕ್ರಿಯೆ. ಇದಕ್ಕೆ ಕಾಲಾವಕಾಶ ಬೇಕು. ಎಷ್ಟು ಹೊತ್ತು ಹುಳಿಬರುವಿಕೆಯಲ್ಲಿ ತೆಗೆದುಕೊಂಡಿದೆ ಎಂಬುದರ ಮೇಲೆ ಮೊಸರಿನ ಹುಳಿ ನಿರ್ಧರಿತವಾಗುತ್ತದೆ.
  • ಹುಳಿ ಬರಲು ಆರಂಭವಾದ ಮೊಸರನ್ನು ಫ್ರಿಡ್ಜ್‌ನಲ್ಲಿಡುವ ಮೂಲಕ ಹುಳಿ ಬರುವಿಕೆಯ ಹಂತವನ್ನು ನಿಧಾನವಾಗಿಸಬಹುದು. ಹೆಚ್ಚು ಹೊತ್ತು ಹೊರಗೇ ಇಟ್ಟರೆ ಮತ್ತೆ ಹೆಚ್ಚು ಹುಳಿ ಬಂದು ಸೇವಿಸಲು ಅಯೋಗ್ಯವಾಗುತ್ತದೆ.
  • ಮೊಸರನ್ನು ತೆಗೆಯಲು ಬಳಸುವ ಸೌಟು ಯಾವಾಗಲೂ ಶುದ್ಧವಾಗಿರಲಿ. ಮೊಸರು ಬಹುಬೇಗನೆ ಬೇರೆ ವಸ್ತುಗಳ ಮೂಲಕ ಕಲುಷಿತಗೊಂಡು ಹಾಳಾಗುವ ಸಂಭವವಿದೆ.
  • ಹುಳಿ ಮೊಸರನ್ನು ತಿಂದು ಅಭ್ಯಾಸವಿಲ್ಲದಿದ್ದರೆ ಒಮ್ಮೆಲೆ ಹೆಚ್ಚು ಸೇವಿಸಬೇಡಿ. ಸ್ವಲ್ಪ ಸ್ವಲ್ಪವೇ ನಿಮ್ಮ ಆಹಾರದಲ್ಲಿ ಸೇರಿಸಿ.
  • ಹುಳಿ ಮೊಸರನ್ನು ಹಾಗೆಯೇ ತಿನ್ನಲು ಸಾಧ್ಯವಾಗದಿದ್ದರೆ, ಬೇರೆ ಆಹಾರಗಳ ಜೊತೆಗೆ ಸೇವಿಸಿ. ಆಗ ಅದರ ಪರಿಣಾಮ ಕಡಿಮೆಯಾಗುತ್ತದೆ.
  • ಎಲ್ಲಕ್ಕಿಂತ ಮುಖ್ಯವಾಗಿ ಹುಳಿ ಮೊಸರನ್ನು ಹಗಲಿನಲ್ಲಿ ಸೇವಿಸಿ. ರಾತ್ರಿಯ ಸಮಯ ಆದಷ್ಟೂ ಸೇವಿಸದೆ ಇರುವುದು ಒಳ್ಳೆಯದು. ನೀವು ಹೆಚ್ಚು ಆಕ್ಟಿವ್‌ ಆಗಿದ್ದಾಗ ಹಗಲು ಹೊತ್ತಿನಲ್ಲಿ ಅಥವಾ ಮಧ್ಯಾಹ್ನದೂಟದ ಜೊತೆಗೆ ಸೇವಿಸಬಹುದು.
  • ನಿಮ್ಮ ದೇಹಕ್ಕೆ ಹುಳಿ ಮೊಸರಿನಿಂದ ಏನಾದರೂ ತೊಂದರೆಯಾಗುತ್ತದೆಯೋ ಗಮನಿಸಿ. ಏನಾದರೂ ಸಮಸ್ಯೆಯಾದರೆ, ದಯವಿಟ್ಟು ಸೇವಿಸಬೇಡಿ. ನಿಮ್ಮ ದೇಹಕ್ಕೆ ಹೊಂದುತ್ತಿಲ್ಲ ಎಂದೇ ಅರ್ಥ.

ಇದನ್ನೂ ಓದಿ: Internet Addiction: ಈ 10 ಲಕ್ಷಣಗಳು ನಿಮ್ಮಲ್ಲಿದ್ದರೆ, ನೀವೂ ಇಂಟರ್ನೆಟ್‌ ಚಟಕ್ಕೆ ಬಿದ್ದಿದ್ದೀರಿ ಎಂದರ್ಥ!

Continue Reading

ಆರೋಗ್ಯ

Pancreatitis: ಏನಿದು ಪ್ಯಾಂಕ್ರಿಯಾಟೈಟಿಸ್‌ನಿಂದ ಉಂಟಾಗುವ ಉರಿಯೂತ? ಇದಕ್ಕೇನು ಪರಿಹಾರ?

Pancreatitis: ಹೊಟ್ಟೆಯಲ್ಲಿರುವ ಪ್ರಮುಖ ಅಂಗಗಳಲ್ಲಿ ಮೇದೋಜ್ಜೀರಕ ಗ್ರಂಥಿ (Pancreas)ಯೂ ಒಂದು. ಮೇದೋಜ್ಜೀರಕ ಗ್ರಂಥಿಯು ಹೊಟ್ಟೆಯ ಹಿಂದೆ ಮತ್ತು ಸಣ್ಣ ಕರುಳಿನ ಬಳಿ ಇರುವ ಉದ್ದವಾದ ಗ್ರಂಥಿ ಆಗಿದೆ. ಪ್ಯಾಂಕ್ರಿಯಾಟೈಟಿಸ್‌ ಅಂದರೆ ಮೇದೋಜ್ಜೀರಕ ಗ್ರಂಥಿಯ ಉರಿಯೂತದ ಕಾಯಿಲೆ ಎಂದರ್ಥ. ಇದಕ್ಕೆ ಏನು ಕಾರಣ? ಪರಿಹಾರ ಏನು? ಈ ಕುರಿತು ಪರಿಣತ ವೈದ್ಯರು ನೀಡಿರುವ ಸಲಹೆ ಇಲ್ಲಿದೆ.

VISTARANEWS.COM


on

Pancreatitis
Koo

-ಡಾ. ಕಿಶೋರ್ ಜಿಎಸ್‌ಬಿ, ಹಿರಿಯ ಸಲಹೆಗಾರ ಮತ್ತು ಕ್ಲಿನಿಕಲ್ ಲೀಡ್
ಡಾ. ಪಿಯೂಷ್ ಕುಮಾರ್ ಸಿನ್ಹಾ, ಹಿರಿಯ ಸಲಹೆಗಾರ, ಎಚ್‌ಪಿಬಿ ಸರ್ಜರಿ ಮತ್ತು ಲಿವರ್ ಟ್ರಾನ್ಸ್‌ಪ್ಲಾಂಟೇಶನ್ ವಿಭಾಗ, ಫೋರ್ಟಿಸ್‌ ಆಸ್ಪತ್ರೆ

ಹೊಟ್ಟೆಯಲ್ಲಿರುವ ಪ್ರಮುಖ ಅಂಗಗಳಲ್ಲಿ ಮೇದೋಜ್ಜೀರಕ ಗ್ರಂಥಿ (Pancreatitis)ಯೂ ಒಂದು. ಮೇದೋಜ್ಜೀರಕ ಗ್ರಂಥಿಯು ಹೊಟ್ಟೆಯ ಹಿಂದೆ ಮತ್ತು ಸಣ್ಣ ಕರುಳಿನ ಬಳಿ ಇರುವ ಉದ್ದವಾದ ಗ್ರಂಥಿ ಆಗಿದೆ. ಪ್ಯಾಂಕ್ರಿಯಾಟೈಟಿಸ್‌ ಅಂದರೆ ಮೇದೋಜ್ಜೀರಕ ಗ್ರಂಥಿಯ ಉರಿಯೂತದ ಕಾಯಿಲೆ ಎಂದರ್ಥ.

Pancreatitis

ಮೇದೋಜ್ಜೀರಕ ಗ್ರಂಥಿಯ ಪ್ರಮುಖ ಕೆಲಸಗಳು

ಕಿಣ್ವ ಉತ್ಪಾದನೆ

ಇದು ನಿಮ್ಮ ಸಣ್ಣ ಕರುಳಿನಲ್ಲಿರುವ ಪ್ರೋಟೀನ್‌, ಕಾರ್ಬೋಹೈಡ್ರೇಟ್‌ಗಳು ಮತ್ತು ಕೊಬ್ಬನ್ನು ಒಡೆಯುವ ಜೀರ್ಣಕಾರಿ ಕಿಣ್ವಗಳನ್ನು ಉತ್ಪಾದಿಸುತ್ತದೆ. ಈ ಕಿಣ್ವಗಳು ಸರಿಯಾದ ಪೋಷಕಾಂಶಗಳ ಹೀರಿಕೊಳ್ಳಲಿದೆ.

ಹಾರ್ಮೋನ್ ನಿಯಂತ್ರಣ

ಇದು ಇನ್ಸುಲಿನ್ ಮತ್ತು ಗ್ಲುಕಗನ್‌ನಂತಹ ಹಾರ್ಮೋನ್‌ಗಳನ್ನು ಸಹ ಉತ್ಪಾದಿಸುತ್ತದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.

ಉರಿಯೂತಕ್ಕೆ ಕಾರಣಗಳು

ಮೇದೋಜ್ಜೀರಕ ಗ್ರಂಥಿಯು ಉರಿಯೂತವಾದಾಗ ತೀವ್ರವಾದ ಪ್ಯಾಂಕ್ರಿಯಾಟೈಟಿಸ್ ಸಂಭವಿಸುತ್ತದೆ. ಈ ಉರಿಯೂತವು ಅದರ ಸಾಮಾನ್ಯ ಕಾರ್ಯಚಟುವಟಿಕೆಗೆ ಅಡ್ಡಿಪಡಿಸುತ್ತದೆ, ಜೀರ್ಣಕಾರಿ ಕಿಣ್ವಗಳು ಮೇದೋಜ್ಜೀರಕ ಗ್ರಂಥಿಯೊಳಗೆ ಗೊತ್ತಿಲ್ದೇ ಸಕ್ರಿಯವಾಗಲು ಕಾರಣವಾಗುತ್ತದೆ. ಅಂದರೆ, ಸ್ವಯಂ ಜೀರ್ಣಕ್ರಿಯೆಗೆ ಕಾರಣವಾಗುತ್ತದೆ. ಉರಿಯೂತದ ತೀವ್ರತೆಯು ರೋಗದ ಕೋರ್ಸ್ ಅನ್ನು ನಿರ್ಧರಿಸುತ್ತದೆ.

Pancreatitis photo

ಈ ಅಂಶಗಳು ಉರಿಯೂತವನ್ನು ಪ್ರಚೋದಿಸಬಹುದು

ಪಿತ್ತಗಲ್ಲುಗಳು

ಪಿತ್ತಗಲ್ಲು ಸಾಮಾನ್ಯ ಪಿತ್ತರಸ ನಾಳದಲ್ಲಿ ನೆಲೆಸಬಹುದು, ಪಿತ್ತರಸ ಮತ್ತು ಪ್ಯಾಂಕ್ರಿಯಾಟಿಕ್ ಕಿಣ್ವಗಳ ಹರಿವನ್ನು ತಡೆಯುತ್ತದೆ. ಈ ಬ್ಯಾಕಪ್ ಮೇದೋಜ್ಜೀರಕ ಗ್ರಂಥಿಯನ್ನು ಉರಿಯುವಂತೆ ಮಾಡುತ್ತದೆ.

Alcohol and cigarette Snoring Solution

ಆಲ್ಕೋಹಾಲ್ ಸೇವನೆ

ಕಾಲಾನಂತರದಲ್ಲಿ ಅತಿಯಾದ ಆಲ್ಕೊಹಾಲ್ ಸೇವನೆಯು ಮೇದೋಜ್ಜೀರಕ ಗ್ರಂಥಿಯನ್ನು ಹಾನಿಗೊಳಿಸಿ, ಉರಿಯುತ್ತಕ್ಕೆ ಕಾರಣವಾಗಬಹುದು. ಕೆಲವೊಮ್ಮೆ ಒಂದು ಪಾನೀಯವು ತೀವ್ರವಾದ ಪ್ಯಾಂಕ್ರಿಯಾಟೈಟಿಸ್ನ ಸಂಚಿಕೆಯನ್ನು ಪ್ರಚೋದಿಸಬಹುದು.

ಇತರ ಕಾರಣಗಳು

ಅತಿಯಾದ ಔಷಧಿಗಳ ಸೇವನೆ, ದೇಹಕದಲ್ಲಿ ಕಾಣಿಸಿಕೊಳ್ಳುವ ಸೋಂಕುಗಳು (ಮಂಪ್ಸ್), ಅಧಿಕ ರಕ್ತದ ಟ್ರೈಗ್ಲಿಸರೈಡ್ ಮಟ್ಟ ಮತ್ತು ಕೆಲವು ಶಸ್ತ್ರಚಿಕಿತ್ಸಾ ವಿಧಾನಗಳು ಕಾರಣವಾಗಬಹುದು.

ತೀವ್ರವಾದ ಪ್ಯಾಂಕ್ರಿಯಾಟೈಟಿಸ್‌ನ ರೋಗಲಕ್ಷಣ

  • ಹೊಟ್ಟೆಯ ಮೇಲ್ಭಾಗದಲ್ಲಿ ತೀವ್ರವಾದ ನೋವು, ಈ ನೋವು ಬೆನ್ನಿನ ಕಡೆಗೂ ಹರಡಬಹುದು,
  • ವಾಕರಿಕೆ ಮತ್ತು ವಾಂತಿ
  • ಹಸಿವು ಆಗದೇ ಇರುವುದು
  • ಜ್ವರ
  • ಹೃದಯ ಬಡಿತ ಹೆಚ್ಚಳ
  • ಅಸ್ವಸ್ಥತೆ ಅಥವಾ ಆಯಾಸ
  • ಕಿಬ್ಬೊಟ್ಟೆಯ ಊತ
  • ಪರೀಕ್ಷೆ ಅಗತ್ಯ

ರಕ್ತ ಪರೀಕ್ಷೆ: ನಿಮ್ಮ ರಕ್ತದಲ್ಲಿನ ಪ್ಯಾಂಕ್ರಿಯಾಟಿಕ್ ಕಿಣ್ವಗಳ (ಅಮೈಲೇಸ್ ಮತ್ತು ಲಿಪೇಸ್) ಮಟ್ಟ (ಸಾಮಾನ್ಯ ಮೇಲಿನ ಮಿತಿಗಿಂತ ಮೂರು ಪಟ್ಟು ಹೆಚ್ಚು) ಹೆಚ್ಚಳವಾಗುತ್ತಿರುವ ಪರೀಕ್ಷೆ ಮಾಡಿಸಿಕೊಳ್ಳುವುದು

ಅಲ್ಟ್ರಾಸೌಂಡ್, CT ಸ್ಕ್ಯಾನ್, ಅಥವಾ MRI ಸ್ಕ್ಯಾನ್‌ನ ಮೂಲಕ ಮೇದೋಜ್ಜೀರಕ ಗ್ರಂಥಿಯನ್ನು ದೃಶ್ಯೀಕರಿಸಿ ಪಿತ್ತಗಲ್ಲು, ಉರಿಯೂತ ಅಥವಾ ತೊಡಕುಗಳನ್ನು ಗುರುತಿಸುವುದು

Pancreatitis image

ಚಿಕಿತ್ಸೆಗಳೇನು?

ನೋವು ನಿವಾರಣೆ: ಮೇದೋಜ್ಜೀರಕದಲ್ಲಿ ಉಂಟಾದ ನೋವನ್ನು ನಿವಾರಿಸಲು ವೈದ್ಯರು ಸೂಕ್ತ ಔಷಧ ನೀಡುತ್ತಾರೆ. ಔಷಧಗಳು ಮತ್ತು ನೋವು ನಿರ್ವಹಣೆ ತಂತ್ರಗಳು ಅಸ್ವಸ್ಥತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಮೇದೋಜ್ಜೀರಕ ಗ್ರಂಥಿಯನ್ನು ಶಾಂತಿಗೊಳಿಸುವುದು: ಅತಿಯಾದ ಉರಿಯೂತವಿದ್ದ ಸಂದರ್ಭದಲ್ಲಿ ವೈದ್ಯರು, ಮೊದಲು ಮೇದೋಜ್ಜೀರಕ ಗ್ರಂಥಿ ಶಾಂತಿಗೊಳಿಸಲು ಊಟ ಹಾಗೂ ನೀರು ಸೇವಿಸುವುದನ್ನು ನಿಲ್ಲಿಸಲು ಸೂಚಿಸುತ್ತಾರೆ. ಇದಕ್ಕೆ ಪರ್ಯಾಯವಾಗಿ ನಿಮ್ಮನ್ನು ಹೈಡ್ರೀಕರಿಸಲು ದ್ರವಗಳನ್ನು ಅಭಿದಮನಿ ಮೂಲಕ ಒದಗಿಸಲಾಗುತ್ತದೆ.

ಔಷಧಿಗಳು: ವಾಕರಿಕೆ ಮತ್ತು ವಾಂತಿಯನ್ನು ನಿಯಂತ್ರಿಸಲು ಔಷಧಿಗಳನ್ನು ನೀಡಬಹುದು.

ಪ್ರಕರಣದ ತೀವ್ರತೆ ಆಧಾರದ ಮೇಲೆ ಸೂಕ್ತ ಚಿಕಿತ್ಸೆ ನೀಡಲಿದ್ದಾರೆ.

ಇದನ್ನೂ ಓದಿ: Sabja Seeds Benefits: ಸಬ್ಜಾ ಬೀಜವನ್ನು ನೆನೆಹಾಕಿ ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆ ದೂರ

ತಡೆಗಟ್ಟುವ ಕ್ರಮಗಳೇನು?

  • ಧೂಮಪಾನವನ್ನು ತ್ಯಜಿಸಿ – ಧೂಮಪಾನವು ಮಾರಕವಾಗಬಹುದು. ಆದ್ದರಿಂದ, ಧೂಮಪಾನವನ್ನು ನಿಲ್ಲಿಸಿ. ನಿಮಗೆ ಸಾಧ್ಯವಾಗದಿದ್ದರೆ, ನಿಮ್ಮ ವೈದ್ಯರಿಂದ ಸಹಾಯ ಪಡೆಯಿರಿ.
  • ಆಲ್ಕೋಹಾಲ್ ಸೇವನೆಯನ್ನು ನಿಲ್ಲಿಸಿ – ಮೇದೋಜ್ಜೀರಕ ಗ್ರಂಥಿಯ ಉರಿಯೂತದೊಂದಿಗೆ ಆಲ್ಕೊಹಾಲ್ ಕುಡಿಯುವುದು ಜೀವಕ್ಕೆ ಅಪಾಯಕಾರಿ.
  • ನಿಮ್ಮನ್ನು ಹೈಡ್ರೀಕರಿಸಿಟ್ಟುಕೊಳ್ಳಿ – ನಿಮ್ಮನ್ನು ಹೈಡ್ರೀಕರಿಸಲು ಸಾಕಷ್ಟು ನೀರು ಮತ್ತು ಇತರ ದ್ರವಗಳನ್ನು ಕುಡಿಯಿರಿ.
  • ಕಡಿಮೆ ಕೊಬ್ಬಿನ ಆಹಾರವನ್ನು ಸೇವಿಸಿ – ಧಾನ್ಯಗಳು, ತಾಜಾ ತರಕಾರಿಗಳು, ಹಣ್ಣುಗಳು ಮತ್ತು ಸೀಸದ ಪ್ರೋಟೀನ್‌ಗಳನ್ನು ಒಳಗೊಂಡಿರುವ ಕಡಿಮೆ-ಕೊಬ್ಬಿನ ಆಹಾರವನ್ನು ಅನುಸರಿಸಿ.
Continue Reading

ಆರೋಗ್ಯ

Food for Concentration: ಈ ಆಹಾರಗಳ ಸೇವನೆಯಿಂದ ನಿಮ್ಮ ಏಕಾಗ್ರತೆ ಶಕ್ತಿಯೇ ಕುಂಠಿತವಾಗಬಹುದು!

Food for Concentration: ಕೆಲವು ಆಹಾರಗಳು ಸಾಕಷ್ಟು ಪೋಷಕಾಂಶಗಳನ್ನು ಒಳಗೊಂಡು ಮಿದುಳಿನ ಆರೋಗ್ಯದ ಕಾಳಜಿ ವಹಿಸುತ್ತವೆ. ಮೀನು, ಮೊಟ್ಟೆ, ಡಾರ್ಕ್‌ ಚಾಕೋಲೇಟ್‌, ಬೆರ್ರಿಗಳು, ಒಣ ಬೀಜಗಳು, ಧಾನ್ಯಗಳು, ಬೇಳೆ ಕಾಳುಗಳು ಮಿದುಳಿನ ಆರೋಗ್ಯಕ್ಕೆ ಅತ್ಯಂತ ಸೂಕ್ತ. ಇವನ್ನು ತಿನ್ನುವುದರಿಂದ ಮಿದುಳಿನ ಆರೋಗ್ಯ ಹೆಚ್ಚುತ್ತದೆ. ಆದರೆ, ಕೆಲವು ಆಹಾರ ಸೇವನೆಯಿಂದ ಮಿದುಳಿನ ಆರೋಗ್ಯದ ಮೇಲೆ ಅಡ್ಡ ಪರಿಣಾಮಗಳೂ ಆಗುತ್ತವೆ. ಅವು ಏಕಾಗ್ರತೆಯನ್ನೂ ಕ್ಷೀಣಿಸುವಂತೆ ಮಾಡಬಲ್ಲವು.

VISTARANEWS.COM


on

Food for Concentration
Koo

ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯದ (Food for Concentration) ಗುಟ್ಟಿರುವುದು ನಾವೇನು ಆಹಾರ ಸೇವಿಸುತ್ತೇವೆ ಎಂಬುದರ ಮೇಲೆ. ಈಗಾಗಲೇ ಅನೇಕ ಸಂಶೋಧನೆಗಳು ನಾವು ತಿನ್ನುವ ಆಹಾರಕ್ಕೂ ನಮ್ಮ ಮಾನಸಿಕ ಆರೋಗ್ಯಕ್ಕೂ ಸಂಬಂಧವಿದೆ ಎಂಬುದನ್ನು ಸಾಬೀತುಪಡಿಸಿವೆ. ಕೆಲವು ಆಹಾರಗಳು ಸಾಕಷ್ಟು ಪೋಷಕಾಂಶಗಳನ್ನು ಒಳಗೊಂಡು ಮಿದುಳಿನ ಆರೋಗ್ಯದ ಕಾಳಜಿ ವಹಿಸುತ್ತವೆ. ಮೀನು, ಮೊಟ್ಟೆ, ಡಾರ್ಕ್‌ ಚಾಕೋಲೇಟ್‌, ಬೆರ್ರಿಗಳು, ಒಣ ಬೀಜಗಳು, ಧಾನ್ಯಗಳು, ಬೇಳೆ ಕಾಳುಗಳು ಮಿದುಳಿನ ಆರೋಗ್ಯಕ್ಕೆ ಅತ್ಯಂತ ಸೂಕ್ತ. ಇವನ್ನು ತಿನ್ನುವುದರಿಂದ ಮಿದುಳಿನ ಆರೋಗ್ಯ ಹೆಚ್ಚುತ್ತದೆ. ಆದರೆ, ಕೆಲವು ಆಹಾರ ಸೇವನೆಯಿಂದ ಮಿದುಳಿನ ಆರೋಗ್ಯದ ಮೇಲೆ ಅಡ್ಡ ಪರಿಣಾಮಗಳೂ ಆಗುತ್ತವೆ. ಅವು ಏಕಾಗ್ರತೆಯನ್ನೂ ಕ್ಷೀಣಿಸುವಂತೆ ಮಾಡಬಲ್ಲವು. ಬನ್ನಿ, ಯಾವೆಲ್ಲ ಆಹಾರಗಳು ಏಕಾಗ್ರತಾ ಶಕ್ತಿಯನ್ನೇ ಮೊಡಕುಗೊಳಿಸುತ್ತವೆ ಎಂಬುದನ್ನು ನೋಡೋಣ.

Cakes, Muffins

ಇವು ಅತಿಯಾದರೆ ಒಳ್ಳೆಯದಲ್ಲ

ಪೇಸ್ಟ್ರಿ, ಕೇಕ್‌, ವೈಟ್‌ ಬ್ರೆಡ್‌: ಕೇಕ್‌, ಪೇಸ್ಟ್ರಿಗಳು ಹಾಗೂ ಬ್ರೆಡ್‌ನಿಂದ ಮಾಡಿದ ಸ್ಯಾಂಡ್‌ವಿಚ್‌, ಬರ್ಗರ್‌, ಡೋನಟ್‌ ಇತ್ಯಾದಿಗಳೆಲ್ಲವೂ ಬಾಯಲ್ಲಿ ನೀರೂರುಸಬಹುದು. ನಿಮ್ಮ ಸಂಭ್ರಮವನ್ನು ಹೆಚ್ಚಿಸಬಹುದು. ಮಕ್ಕಳು ಇವಿದ್ದರೆ ಊಟ ಬಿಡಬಹುದು. ಆದರೆ, ಇವು ಅತಿಯಾದರೆ ಒಳ್ಳೆಯದಲ್ಲ. ಇವು ರಕ್ತದಲ್ಲಿರುವ ಸಕ್ಕರೆಯ ಮಟ್ಟವನ್ನು ಏರುಪೇರುಗೊಳಿಸುವ ಜೊತೆಗೆ ಮಿದುಳಿನ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಬಹುದು.

French Fries Closeup

ಹೆಚ್ಚು ಉಪ್ಪಿರುವ ತಿನಿಸುಗಳು

ಹೆಚ್ಚು ಉಪು ಒಳ್ಳೆಯದಲ್ಲ. ಹೆಚ್ಚು ಉಪ್ಪಿನ ಸೇವನೆಯಿಂದ ಮಿದುಳಿನ ಕಾರ್ಯನಿರ್ವಹಣೆಗೆ ಅಡ್ಡಿಯಾಗುತ್ತದೆ. ಹೆಚ್ಚು ಉಪ್ಪಿನಿಂದ ಕೆಲವೊಮ್ಮೆ ಮಿದುಳಿನಲ್ಲಿ ಉರಿಯೂತವೂ ಆಗಬಹುದು. ಸ್ಮರಣಶಕ್ತಿ ಕುಂಠಿತಗೊಳ್ಳುವುದು, ಏಕಾಗ್ರತೆಗೆ ಧಕ್ಕೆಯುಂಟಾಗುವುದು ಇತ್ಯಾದಿಗಳೂ ಆಗುವ ಸಂಭವ ಹೆಚ್ಚು.

Selection of Colorful Sweets

ಸೋಡಾ ಹಾಗೂ ಸಕ್ಕರೆಯುಕ್ತ ಆಹಾರ

ಹೆಚ್ಚಿನ ಮಂದಿಗೆ ತಂಪಾದ ಸೋಢಾ, ಹಾಗೂ ಕಾರ್ಬೋನೇಟೆಡ್‌ ಡ್ರಿಂಕ್‌ಗಳನ್ನು ಸೇವಿಸುವುದರಿಂದ ಖುಷಿ, ಉಲ್ಲಾಸ ಸಿಗುತ್ತದೆ. ಆದರೆ, ಇವುಗಳ ಸೇವನೆಯಿಂದ ದಿಢೀರ್‌ ಸಕ್ಕರೆಯ ಅಂಶ ದೇಹದಲ್ಲಿ ಹೆಚ್ಚುತ್ತದೆ. ಸಿಹಿತಿನಿಸು, ಹಾಗೂ ಸಿಹಿಯಾದ ಡ್ರಿಂಕ್‌ಗಳನ್ನು ಕುಡಿಯುವುದರಿಂದಲೂ ಇದೇ ಆಗಬಹುದು. ಇಂತಹ ಸಿಹಿಯಿಂದ ಸಿಗುವ ಖುಷಿಗೆ ಒಗ್ಗಿಕೊಂಡ ಮನಸ್ಸು ದೇಹ ಹಲವು ಅಡ್ಡ ಪರಿಣಾಮಗಳನ್ನೂ ಕಾಣುತ್ತದೆ. ಮಾನಸಿಕವಾಗಿ ಒತ್ತಡ, ಖಿನ್ನತೆ, ಪಾರ್ಶ್ವವಾಯು, ಏಕಾಗ್ರತೆಯಲ್ಲಿ ಸಮಸ್ಯೆ ಇತ್ಯಾದಿಗಳಿಗೂ ಕಾರಣವಾಗಬಹುದು.

Image Of Coffee Side Effects

ಕಾಫಿ

ಕಾಫಿ ಕುಡಿಯುವುದರಿಂದ ಅದರಲ್ಲಿರುವ ಕೆಫಿನ್‌ನಿಂದಾಗಿ ನಿಮಗೆ ಶಕ್ತಿ ಇಮ್ಮಡಿಯಾಗಿ ಕೆಲಸದಲ್ಲಿ ಚುರುಕುತನ ಕಾಣಬಹುದು. ಆದರೆ, ಇದು ತಾತ್ಕಾಲಿಕ. ಆದರೆ ಇವು ಉದ್ವೇಗವನ್ನೂ ಹೆಚ್ಚು ಮಾಡುತ್ತದೆ. ಕೆಲವು ಮಂದಿಗೆ ಇದು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಪರಿಣಾಮ ಬೀರುತ್ತದೆ. ನಿದ್ದೆಯ ಸಮಸ್ಯೆ, ಒಂದೆಡೆ ಕೂರಲು ಸಾಧ್ಯವಾಗದಿರುವಂಥ ಏಕಾಗ್ರತೆಯ ಕೊರತೆ ಇತ್ಯಾದಿಗಳೂ ಕಾಣಿಸಿಕೊಳ್ಳಬಹುದು.

ಇದನ್ನೂ ಓದಿ: Mint Leaf Water: ಪುದಿನ ಎಲೆಗಳ ನೀರನ್ನು ನಿತ್ಯವೂ ಕುಡಿಯಿರಿ, ಈ ಲಾಭಗಳನ್ನು ಪಡೆಯಿರಿ!

ಶಕ್ತಿವರ್ಧಕ ಪೇಯಗಳು

ಬಹಳ ಮಂದಿ ನಿದ್ದೆಯನ್ನು ಮುಂದೂಡಲು ಕೆಲವು ಕೆಫಿನ್‌ ಇರುವ ಪೇಯಗಳು, ಶಕ್ತಿವರ್ಧಕ ಪೇಯಗಳನ್ನು ಕುಡಿಯುತ್ತಾರೆ. ಅದು ಆ ಕ್ಷಣಕ್ಕೆ ನಿದ್ದೆಯನ್ನು ಮುಂದೂಡಬಹುದು ನಿಜವಾದರೂ, ಭವಿಷ್ಯದಲ್ಲಿ ಒಳ್ಳೆಯದನ್ನು ಮಾಡಲಾರದು. ನಿರ್ಜಲೀಕರಣ, ಮೂತ್ರಶಂಕೆ ಅತಿಯಾಗುವುದು, ಮೂಡ್‌ ಏರುಪೇರು, ಉದ್ವೇಗ, ಏಕಾಗ್ರತೆಯ ಸಮಸ್ಯೆ ಇತ್ಯಾದಿ ಸಮಸ್ಯೆಗಳನ್ನು ತಂದೊಡ್ಡಬಹುದು.

Continue Reading

ಆರೋಗ್ಯ

Mosquito Repellents: ರಾಸಾಯನಿಕದ ಅಪಾಯ ಏಕೆ? ಸೊಳ್ಳೆ ಓಡಿಸಲು ಇಲ್ಲಿವೆ 10 ನೈಸರ್ಗಿಕ ವಿಧಾನಗಳು!

ಸೊಳ್ಳೆಗಳನ್ನು ನಿಯಂತ್ರಿಸಲು ಮಾರುಕಟ್ಟೆಯಲ್ಲಿ ಸಾಕಷ್ಟು ಉತ್ಪನ್ನಗಳಿವೆ. ಆದರೆ ಅವುಗಳಲ್ಲಿ ಹೆಚ್ಚಿನವು ಅಲರ್ಜಿ ಮತ್ತು ಚರ್ಮದ ಸೋಂಕನ್ನು ಉಂಟು ಮಾಡುತ್ತವೆ. ಆದ್ದರಿಂದ ಸೊಳ್ಳೆಗಳನ್ನು ನಿಯಂತ್ರಿಸಲು ಮನೆಯಲ್ಲೇ ನಾವು ಸೊಳ್ಳೆ ನಿವಾರಕಗಳನ್ನು (Mosquito Repellents) ಸಿದ್ಧಪಡಿಸಿಕೊಳ್ಳಬಹುದು.

VISTARANEWS.COM


on

By

Mosquito Repellents
Koo

ಮಳೆಗಾಲ (rainy season) ಆರಂಭವಾಯಿತೆಂದರೆ ಡೆಂಗ್ಯೂ (Dengue), ಮಲೇರಿಯಾ (Malaria) ಮತ್ತು ಚಿಕೂನ್‌ಗುನ್ಯಾದಂತಹ (Chikungunya) ರೋಗ ಹರಡುವಿಕೆಯು ಆರಂಭವಾಯಿತು ಎಂದೇ ತಿಳಿದುಕೊಳ್ಳಬೇಕಾದ ಕಾಲ. ಸೊಳ್ಳೆಗಳ ಸಂತಾನೋತ್ಪತ್ತಿಯ ಸಂಖ್ಯೆಯಲ್ಲಿನ ಹೆಚ್ಚಳದಿಂದಾಗಿ ಆರೋಗ್ಯದ ಮೇಲೆ ಭಾರಿ ಪರಿಣಾಮ ಉಂಟಾಗುತ್ತದೆ. ಹೀಗಾಗಿ ನಾವು ಮಳೆಗಾಲದಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವುದು ಬಹುಮುಖ್ಯ. ಮನೆ ಹಾಗೂ ಸುತ್ತಮುತ್ತ ಸೊಳ್ಳೆಗಳ (Mosquito Repellents) ಸಂತಾನೋತ್ಪತ್ತಿ ಆಗದಂತೆ ತಡೆಯುವುದು, ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಬಹು ಮುಖ್ಯವಾಗಿದೆ.

ಸೊಳ್ಳೆಗಳನ್ನು ನಿಯಂತ್ರಿಸಲು ಮಾರುಕಟ್ಟೆಯಲ್ಲಿ ಸಾಕಷ್ಟು ಉತ್ಪನ್ನಗಳಿವೆ. ಆದರೆ ಅವುಗಳಲ್ಲಿ ಹೆಚ್ಚಿನವು ಅಲರ್ಜಿ ಮತ್ತು ಚರ್ಮದ ಸೋಂಕನ್ನು ಉಂಟು ಮಾಡುತ್ತವೆ. ಆದ್ದರಿಂದ ಸೊಳ್ಳೆಗಳನ್ನು ನಿಯಂತ್ರಿಸಲು ಮನೆಯಲ್ಲೇ ನಾವು ಸೊಳ್ಳೆ ನಿವಾರಕಗಳನ್ನು ಸಿದ್ಧಪಡಿಸಿಕೊಳ್ಳಬಹುದು.

ಸೊಳ್ಳೆಗಳು ಮನೆಯೊಳಗೆ ಬಾರದಂತೆ ಬಳಸಬಹುದಾದ 10 ನೈಸರ್ಗಿಕ ಸೊಳ್ಳೆ ನಿವಾರಕಗಳ ಕುರಿತು ಮಾಹಿತಿ ಇಲ್ಲಿದೆ. ನೀವು ಮನೆಯಲ್ಲಿ ಇದನ್ನು ಮಾಡಿ ನೋಡಿ. ಸೊಳ್ಳೆಗಳನ್ನು ಮನೆಯಿಂದ ದೂರ ಮಾಡಿ.


1. ಬೆಳ್ಳುಳ್ಳಿ ನೀರು

ಸೊಳ್ಳೆಗಳನ್ನು ತೊಡೆದು ಹಾಕಲು ಬೆಳ್ಳುಳ್ಳಿ ನೀರು ಅತ್ಯುತ್ತಮ ದ್ರಾವಣ. ಹಲವಾರು ಔಷಧೀಯ ಗುಣವಿರುವ ಬೆಳ್ಳುಳ್ಳಿಯ ಕೆಲವು ಎಸಳು ಮತ್ತು ಸ್ವಲ್ಪ ಲವಂಗವನ್ನು ಪುಡಿ ಮಾಡಿ ಅನಂತರ ನೀರಿನಲ್ಲಿ ಕುದಿಸಬೇಕು. ಅದರ ದ್ರಾವಣವನ್ನು ಸ್ಪ್ರೇ ಬಾಟಲಿಯಲ್ಲಿ ಸುರಿದು ಅದನ್ನು ಕೋಣೆಯ ಸುತ್ತಲೂ, ಎಲ್ಲಾ ಹೊರಾಂಗಣ ಬಲ್ಬ್‌, ಗ್ಯಾರೇಜ್ ಬಳಿ ಸಿಂಪಡಿಸಿ. ಈ ದ್ರಾವಣವು ಸೊಳ್ಳೆಗಳನ್ನು ತಕ್ಷಣವೇ ಕೊಲ್ಲುತ್ತದೆ.


2. ಮಜ್ಜಿಗೆ ಸೊಪ್ಪು

ಮಜ್ಜಿಗೆ ಸೊಪ್ಪು ಭಾರತದಲ್ಲಿ ಸಾಮಾನ್ಯವಾಗಿ ಕಂಡುಬರುವ ಸಸ್ಯಗಳಾಗಿವೆ. ಇದರ ಎಣ್ಣೆಯು ಸೊಳ್ಳೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಮಜ್ಜಿಗೆ ಸೊಪ್ಪುನ ಎಲೆಗಳನ್ನು ಪುಡಿ ಮಾಡಿ ತಯಾರಿಸಿದ ಎಣ್ಣೆಯುಕ್ತ ಮಿಶ್ರಣವನ್ನು ನೇರವಾಗಿ ಚರ್ಮಕ್ಕೆ ಅನ್ವಯಿಸಬಹುದು. ಇದರಿಂದ ಹಲವು ಗಂಟೆಗಳವರೆಗೆಸೊಳ್ಳೆ ಕಚ್ಚದಂತೆ ಅದು ತಡೆಯುತ್ತದೆ. ಈ ಎಣ್ಣೆಯು ಕಡಿಮೆ ಸಾಂದ್ರತೆಯನ್ನು ಹೊಂದಿರುವ ಕಾರಣ ಪದೇ ಪದೇ ಬಳಸುವ ಅಗತ್ಯವಿರುತ್ತದೆ.


3. ವಿನೆಗರ್

ಸೊಳ್ಳೆ ನಿವಾರಣೆ ಮಾಡುವಲ್ಲಿ ವಿನೆಗರ್ ಕೂಡ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ. ಆಪಲ್ ಸೈಡರ್ ವಿನೆಗರ್ ಅಥವಾ ಸಾಮಾನ್ಯ ವಿನೆಗರ್ ಆಗಿರಲಿ ಸೊಳ್ಳೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. 3 ಕಪ್ ನೀರು ಮತ್ತು 1 ಕಪ್ ವಿನೆಗರ್ ಅನ್ನು ಸ್ಪ್ರೇ ಬಾಟಲಿಯಲ್ಲಿ ತೆಗೆದುಕೊಂಡು ಅದನ್ನು ನೇರವಾಗಿ ಚರ್ಮದ ಮೇಲೆ ಅಥವಾ ಡೈನಿಂಗ್ ಟೇಬಲ್ ಮತ್ತು ಮನೆಯ ಪರದೆಯ ಸುತ್ತಲೂ ಸಿಂಪಡಿಸಿದರೆ ಮನೆಯಿಂದ ಸೊಳ್ಳೆಯನ್ನು ದೂರ ಮಾಡಬಹುದು.


4. ನಿಂಬೆ ಮತ್ತು ಲವಂಗ

ಸೊಳ್ಳೆಗಳನ್ನು ದೂರವಿಡಲು ಅರ್ಧ ನಿಂಬೆ ಮತ್ತು ಕೈ ತುಂಬ ಲವಂಗವು ಅದ್ಭುತ ಅಂಶವಾಗಿದೆ. ನಿಂಬೆ ಸ್ಲೈಸ್ ಅನ್ನು ತೆಗೆದುಕೊಂಡು, ಅದರಲ್ಲಿ ಕೆಲವು ಲವಂಗವನ್ನು ಸೇರಿಸಿ ಮತ್ತು ಕೋಣೆಯಲ್ಲಿ ಇರಿಸಿ. ಈ ಮ್ಯಾಜಿಕ್ ಅಂಶವು ಸೊಳ್ಳೆಗಳನ್ನು ದೂರವಿರಿಸಲು ಸಹಾಯ ಮಾಡುತ್ತದೆ.


5. ಲ್ಯಾವೆಂಡರ್ ಎಣ್ಣೆ

ಲ್ಯಾವೆಂಡರ್ ಎಣ್ಣೆಯ ಪರಿಮಳವನ್ನು ಸೊಳ್ಳೆಗಳು ಸಹಿಸುವುದಿಲ್ಲ. ಆದ್ದರಿಂದ ಸೊಳ್ಳೆಗಳನ್ನು ದೂರವಿಡಲು ಲ್ಯಾವೆಂಡರ್ ಎಣ್ಣೆಯನ್ನು ಬಳಸಬಹುದು. ಮನೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇದನ್ನು ಸಿಂಪಡಿಸಬಹುದು. ಸೊಳ್ಳೆ ಕಚ್ಚದಂತೆ ತಡೆಯಲು ಚರ್ಮಕ್ಕೂ ಇದರ ಕೆಲವು ಹನಿಗಳನ್ನು ಸಿಂಪಡಿಸಬಹುದು.


6. ತುಳಸಿ

ತುಳಸಿ ಸಮೀಪ ಸೊಳ್ಳೆಗಳು ಬರುವುದಿಲ್ಲ. ಇದರಿಂದಲೂ ಎಣ್ಣೆ ತಯಾರಿಸಿ ಚರ್ಮಕ್ಕೆ ಹಚ್ಚಿಕೊಳ್ಳಬಹುದು. ಇದು ಸೊಳ್ಳೆಗಳನ್ನು ನಮ್ಮಿಂದ ದೂರವಿರಿಸುತ್ತದೆ. ಮನೆ ಸುತ್ತಮುತ್ತ ತುಳಸಿ ಗಿಡಗಳನ್ನು ನೆಡುವುದು ಕೂಡ ಸೊಳ್ಳೆಯನ್ನು ಮನೆಯಿಂದ ದೂರವಿರುವಂತೆ ಮಾಡುತ್ತದೆ.


7. ಕರ್ಪೂ

ಕರ್ಪೂರವು ಬಹುಮುಖ್ಯ ಸೊಳ್ಳೆ ನಿವಾರಕವಾಗಿದೆ. ಇದರ ದಟ್ಟವಾದ ವಾಸನೆಯು ಸೊಳ್ಳೆಗಳನ್ನು ಓಡಿಸುತ್ತದೆ. ಸುಮಾರು ಕಾಲು ಕಪ್ ನೀರಿಗೆ ಕರ್ಪೂರದ ಎರಡು ಮಾತ್ರೆಗಳನ್ನು ಹಾಕಿ ಕೋಣೆಯ ಸುತ್ತಲೂ ಅಥವಾ ಹೊರಾಂಗಣದಲ್ಲಿ ಸಿಂಪಡಿಸಿ. ಅಲ್ಲದೆ ಕೋಣೆಯಲ್ಲಿ ಕೆಲವು ಕರ್ಪೂರವನ್ನು ಸುಟ್ಟು ಎಲ್ಲಾ ಬಾಗಿಲು ಮತ್ತು ಕಿಟಕಿಗಳನ್ನು ಮುಚ್ಚಿ. ಸುಮಾರು 20 ನಿಮಿಷಗಳ ಕಾಲ ಅದನ್ನು ಉರಿಯಲು ಬಿಡಿ. ಕೋಣೆಯ ಹೊರಗೆ ಇರಿ. ಸೊಳ್ಳೆಗಳು ಮನೆಯಿಂದ ಓಡಿ ಹೋಗುವುದು.


8. ಪುದೀನಾ

ಸೊಳ್ಳೆಗಳನ್ನು ಎದುರಿಸಲು ಪುದೀನಾ ಮತ್ತೊಂದು ನೈಸರ್ಗಿಕ ವಿಧಾನವಾಗಿದೆ. ಪುದೀನಾವನ್ನು ಬಳಸಲು ಸ್ಪ್ರೇ ಬಾಟಲಿಯಲ್ಲಿ ಒಂದು ಕಪ್ ನೀರಿನೊಂದಿಗೆ ಪುದೀನಾ ಎಲೆಯ ತೈಲದ ಕೆಲವು ಹನಿಗಳನ್ನು ಸೇರಿಸಿ. ಚೆನ್ನಾಗಿ ಅಲ್ಲಾಡಿಸಿ ಮತ್ತು ಚರ್ಮದ ಮೇಲೆ ಸಿಂಪಡಿಸಿ. ಪುದೀನಾ ಸ್ಪ್ರೇ ರಕ್ತ ಹೀರುವ ಸೊಳ್ಳೆಗಳನ್ನು ದೂರ ಮಾಡುತ್ತದೆ.


ಇದನ್ನೂ ಓದಿ: Watermelon At Night: ಸಂಜೆ 7 ಗಂಟೆಯ ಕಲ್ಲಂಗಡಿ ಹಣ್ಣನ್ನು ತಿನ್ನಲು ಹೋಗಬೇಡಿ!

9. ತೆಂಗಿನ ಎಣ್ಣೆ ಮತ್ತು ಬೇವಿನ ಎಣ್ಣೆ

ತೆಂಗಿನ ಎಣ್ಣೆ ಮತ್ತು ಬೇವಿನ ಎಣ್ಣೆಯ ಸಂಯೋಜನೆಯು ನೈಸರ್ಗಿಕ ಸೊಳ್ಳೆ ನಿವಾರಕವಾಗಿದೆ. ತೆಂಗಿನ ಎಣ್ಣೆ ಮತ್ತು ಬೇವಿನ ಎಣ್ಣೆಯನ್ನು ಚೆನ್ನಾಗಿ ನೀರಿನಲ್ಲಿ ಬೆರೆಸಿ ಚರ್ಮದ ಮೇಲೆ ಸಿಂಪಡಿಸಿ. ಅರ್ಧ ದಿನದವರೆಗೆ ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಇದು ಸಹಾಯ ಮಾಡುತ್ತದೆ.


10. ಕಾಫಿ ಬೀಜ

ಕಾಫಿ ಬೀಜಗಳು ಸೊಳ್ಳೆಗಳನ್ನು ದೂರ ಮಾಡಲು ಸಹಾಯ ಮಾಡುತ್ತದೆ. ಇದು ಪರಿಸರ ಸ್ನೇಹಿ ಪರ್ಯಾಯ ಮಾತ್ರವಲ್ಲ ಕಾಫಿ ಬೀಜಗಳ ಮರು ಬಳಕೆ ಮಾಡಲು ಇದು ಉತ್ತಮ ಮಾರ್ಗವಾಗಿದೆ. ಕಾಫಿ ಬೀಜಗಳನ್ನು ಸುಟ್ಟು ಅದರಿಂದ ಬರುವ ಹೊಗೆಯು ಸೊಳ್ಳೆಗಳನ್ನು ಮನೆಯಿಂದ ದೂರ ಓಡಿಸುತ್ತದೆ.

Continue Reading
Advertisement
IPS transfer
ಪ್ರಮುಖ ಸುದ್ದಿ28 mins ago

IPS Transfer: ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

karnataka weather Forecast
ಮಳೆ52 mins ago

Karnataka Weather : ಬೆಂಗಳೂರಲ್ಲಿ ಮರೆಯಾಗುವ ಸೂರ್ಯ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ

Dharamshala Tour
ಪ್ರವಾಸ1 hour ago

Dharamshala Tour: ಪರಿಪೂರ್ಣ ಪ್ರವಾಸದ ಅನುಭವ ಕೊಡುವ ಧರ್ಮಶಾಲಾ

Vastu Tips
ಧಾರ್ಮಿಕ1 hour ago

Vastu Tips: ಮನೆ, ಅಂಗಡಿಯಲ್ಲಿ ಧನಾತ್ಮಕ ಶಕ್ತಿ ಆಹ್ವಾನಿಸಿ; ಸುಖ, ಶಾಂತಿ, ಸಮೃದ್ಧಿ ವೃದ್ಧಿಸಿ

Sour Curd
ಆರೋಗ್ಯ2 hours ago

Sour Curd: ಹುಳಿ ಬಂದ ಮೊಸರಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದೋ ಕೆಟ್ಟದ್ದೋ?

Dina Bhavishya
ಭವಿಷ್ಯ2 hours ago

Dina Bhavishya : ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುವಿರಿ

ಆಟೋಮೊಬೈಲ್6 hours ago

Mahindra Scorpio N : ಮಹೀಂದ್ರಾ ತನ್ನ ಸ್ಕಾರ್ಪಿಯೋ-ಎನ್ Z8 ವೇರಿಯೆಂಟ್​ನಲ್ಲಿ ನೀಡಿದ ಹಲವು ಫೀಚರ್​ಗಳು

suicide news
ಕರ್ನಾಟಕ7 hours ago

Suicide News : ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

Aditya L1
ದೇಶ7 hours ago

Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

David Miller :
ಪ್ರಮುಖ ಸುದ್ದಿ8 hours ago

David Miller : ಸೋಲಿನ ಬೇಸರದಲ್ಲಿ ವಿದಾಯ ಹೇಳಿದರೇ ಮಿಲ್ಲರ್​​; ದಕ್ಷಿಣ ಆಫ್ರಿಕಾ ಆಟಗಾರನ ಪ್ರತಿಕ್ರಿಯೆ ಏನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ12 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌