Prajwal Revanna Case: ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಮುಂದೇನಾಗುತ್ತದೆ? ಏನಿದೆ ಪ್ರಕ್ರಿಯೆ? - Vistara News

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಮುಂದೇನಾಗುತ್ತದೆ? ಏನಿದೆ ಪ್ರಕ್ರಿಯೆ?

Prajwal Revanna Case: ಪ್ರಜ್ವಲ್‌ ರೇವಣ್ಣ ಸಂಸದರಾಗಿರುವ ಕಾರಣ, ಅವರ ಬಳಿ ಡಿಪ್ಲೋಮ್ಯಾಟಿಕ್‌ ಪಾಸ್‌ಪೋರ್ಟ್‌ ಇರುವ ಕಾರಣ ವಿಮಾನ ನಿಲ್ದಾಣದಲ್ಲಿಯೇ ಇನ್ನಷ್ಟು ಪ್ರಕ್ರಿಯೆ ನಡೆಯಲಿದೆ. ಪ್ರಜ್ವಲ್‌ ರೇವಣ್ಣ ಬಂಧನದ ಕುರಿತು ಲೋಕಸಭೆ ಸ್ಪೀಕರ್‌ಗೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

VISTARANEWS.COM


on

Prajwal Revanna Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಸಿಲುಕಿ, ಕಳೆದ 34 ದಿನಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರನ್ನು ಕೊನೆಗೂ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Air Port) ಬಂಧಿಸಲಾಗಿದೆ. ದೇವನಹಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್‌ 2ಗೆ ಆಗಮಿಸುತ್ತಲೇ ಇಮಿಗ್ರೇಷನ್‌ ಅಧಿಕಾರಿಗಳು ವಿಚಾರಣೆ ನಡೆಸಿ, ಸಂಸದನನ್ನು ಎಸ್‌ಐಟಿ ಅಧಿಕಾರಿಗಳಿಗೆ ವಹಿಸಿದ್ದಾರೆ.

ಮುಂದೇನಾಗುತ್ತದೆ?

ಪ್ರಜ್ವಲ್‌ ರೇವಣ್ಣ ಸಂಸದರಾಗಿರುವ ಕಾರಣ, ಅವರ ಬಳಿ ಡಿಪ್ಲೋಮ್ಯಾಟಿಕ್‌ ಪಾಸ್‌ಪೋರ್ಟ್‌ ಇರುವ ಕಾರಣ ವಿಮಾನ ನಿಲ್ದಾಣದಲ್ಲಿಯೇ ಇನ್ನಷ್ಟು ಪ್ರಕ್ರಿಯೆ ನಡೆಯಲಿದೆ. ಪ್ರಜ್ವಲ್‌ ರೇವಣ್ಣ ಬಂಧನದ ಕುರಿತು ಲೋಕಸಭೆ ಸ್ಪೀಕರ್‌ಗೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ, ಸುಮಾರು 45 ಪುಟಗಳ ದಾಖಲೆಗಳನ್ನು ಎಸ್‌ಐಟಿ ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ. ಇಮಿಗ್ರೇಷನ್‌ ಅಧಿಕಾರಿಗಳ ಬಳಿ ಎಸ್‌ಐಟಿ ಅಧಿಕಾರಿಗಳು ಹಲವು ದಾಖಲೆಗಳ ಪರಿಶೀಲನೆ ಸೇರಿ ವಿವಿಧ ಪ್ರಕ್ರಿಯೆ ನಡೆಯಲಿದೆ. ಇದಾದ ಬಳಿಕವೇ ಎಸ್‌ಐಟಿ ಅಧಿಕಾರಿಗಳ ವಶಕ್ಕೆ ನೀಡಲಾಗುತ್ತದೆ.

ಇಮಿಗ್ರೇಷನ್‌ ಅಧಿಕಾರಿಗಳಿಂದ ಪ್ರಜ್ವಲ್‌ ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ನಂತರ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಸಾಧ್ಯತೆ ಇದೆ. ವೈದ್ಯಕೀಯ ತಪಾಸಣೆ ಬಳಿಕ ಸಿಐಡಿ ಕಚೇರಿಗೆ ಕರೆದೊಯ್ಯಲಿದ್ದಾರೆ. ಬೆಳಗ್ಗೆ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಹಾಗಾಗಿ, ಸಿಐಡಿ ಕಚೇರಿಗೆ ಎದುರು ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ನಾಳೆ ಜಾಮೀನು ಅರ್ಜಿ ವಿಚಾರಣೆ

ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯ ಅಪಹರಣ ಸೇರಿ ಎಫ್‌ಐಆರ್‌ ದಾಖಲಾಗಿರುವ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು ಎಂಬುದಾಗಿ ಪ್ರಜ್ವಲ್‌ ರೇವಣ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮೇ 31ರಂದು ಅರ್ಜಿಯ ವಿಚಾರಣೆ ನಡೆಯಲಿದೆ. ಇನ್ನು, ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತ ತೀರ್ಪು ಕೂಡ ಶುಕ್ರವಾರವೇ ಹೊರಬೀಳಲಿದೆ. ಇದರಿಂದಾಗಿ ಶುಕ್ರವಾರವು ಎಚ್‌.ಡಿ.ರೇವಣ್ಣ ಕುಟುಂಬಕ್ಕೆ ಬಿಗ್‌ ಡೇ ಆಗಿದೆ.

ಇದನ್ನೂ ಓದಿ: Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News : ʻ ಹುಡುಗ- ಹುಡುಗಿಯರ ಸರ್ವಿಸ್ ಬೇಕಾʼ ಎಂದವನ ಹೆಡೆಮುರಿ ಕಟ್ಟಿದ ಖಾಕಿ ಪಡೆ

Bengaluru News : ಬೇರೆ ಬೇರೆ ನಂಬರ್‌ಗಳಿಂದ ಸಿಕ್ಕ ಸಿಕ್ಕವರಿಗೆ ಫೋನ್‌ ಮಾಡಿ ಹುಡುಗ ಹಾಗೂ ಹುಡುಗಿಯರ ಸರ್ವೀಸ್ ಬೇಕಾ ಅಂತ ಕಿರಿಕಿರಿ ನೀಡುತ್ತಿದ್ದ ದುಷ್ಟನನ್ನು (Physical Abuse) ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Bengaluru News Physical Abuse
Koo

ಬೆಂಗಳೂರು: ಹುಡುಗ ಹಾಗೂ ಹುಡುಗಿಯರ ಸರ್ವಿಸ್ ಬೇಕಾ ಎಂದು ಯುವಕ-ಯುವತಿಯರಿಗೆ ಮಸೇಜ್‌ ಮಾಡುತ್ತಿದ್ದ‌ (Physical Abuse) ಕಿರಾತಕನನ್ನು (Bengaluru News) ಖಾಕಿ ಪಡೆ ಬಂಧಿಸಿದೆ. ಪೂರ್ವ ವಿಭಾಗ ಸೆನ್ ಪೊಲೀಸರು ಆನಂದ್ ಶರ್ಮಾ ಎಂಬಾತನನ್ನು ಬಂಧಿಸಿದ್ದಾರೆ.

ಈ ದುಷ್ಟ ಬೇರೆ ಬೇರೆ ನಂಬರ್‌ಗಳನ್ನು ಬಳಸಿ ಫೋನ್‌ ಮಾಡಿ ಹುಡುಗಿಯರ ಸರ್ವಿಸ್ ಬೇಕಾ ಎಂದು ಕರೆ ಮಾಡುತ್ತಿದ್ದ. ಸುಭಿ ಎಂಬಾಕೆಗೂ ಕರೆ ಮಾಡಿ ಟಾರ್ಚರ್‌ ಕೊಟ್ಟಿದ್ದ. ಹೀಗಾಗಿ ಆಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಮೊಬೈಲ್ ನಂಬರ್ ಆಧರಿಸಿ ಆರೋಪಿ ಆನಂದ್‌ ಶರ್ಮಾನನ್ನು ಪೂರ್ವ ವಿಭಾಗ ಸೆನ್ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂ ವಿ ಸ್ಟೇಜ್ ಪಿಜಿ ಬಳಿ ಆರೋಪಿಯನ್ನು ಬಂಧಿಸಿ, ಆತ ಬಳಿಯಿದ್ದ ಮೊಬೈಲ್ ಫೋನ್ ವಶಪಡಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ: Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

ಮನೆಗೆ ನುಗ್ಗಿ ಯುವಕನಿಂದ ಬಾಲಕಿ ಮೇಲೆ ಅಮಾನುಷ ಹಲ್ಲೆ; ವಿಡಿಯೊ ನೋಡಿ ಜನಾಕ್ರೋಶ

ನವದೆಹಲಿ: ಅಪ್ರಾಪ್ತ ವಯಸ್ಸಿನ ಬಾಲಕಿಗೆ (minor girl) ದುಷ್ಕರ್ಮಿಯೊಬ್ಬ ಅಮಾನುಷವಾಗಿ ಥಳಿಸಿರುವ ಘಟನೆ ನಡೆದಿದ್ದು, ಇದರ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ ಆಗಿ ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿದೆ. ತಮ್ಮ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸುವ ವ್ಯಕ್ತಿಯೊಬ್ಬ ಹುಡುಗಿ ಮೇಲೆ ಹಲ್ಲೆ ಮಾಡಿರುವುದನ್ನು ಈ ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ.

ಲಕ್ನೋದ ಬಿ-376 ವಿಶಾಲ್ ಖಂಡ್‌ನ ಗೋಮತಿ ನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ವಿಡಿಯೋವನ್ನು ಆದಿತ್ಯ ಕಮಲ್ ಪಾಂಡೆ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪ್ರಬಲ್ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಅಪ್ರಾಪ್ತ ಬ್ರಾಹ್ಮಣ ಹುಡುಗಿಯ ಮನೆಗೆ ಬಲವಂತವಾಗಿ ಪ್ರವೇಶಿಸಿ, ಅಶ್ಲೀಲವಾಗಿ ನಿಂದಿಸುತ್ತಾನೆ. ಫೋನ್‌ನಲ್ಲಿ ಯಾರೊಂದಿಗಾದರೂ ಮಾತನಾಡುವಂತೆ ಮಾಡುತ್ತಾನೆ. ಈ ಅಪ್ರಾಪ್ತ ಬಾಲಕಿ ಯಾಕೆ ಹಾಗೆ ಹೇಳುತ್ತೀರಿ ಎಂದು ಪ್ರಶ್ನಿಸಿದಾಗ ಆತ ಬಾಲಕಿಗೆ ಕಪಾಳಮೋಕ್ಷ ಮಾಡಿದ್ದಾನೆ. ಬಾಲಕಿಯ ಫೋನ್‌ಗಳನ್ನು ಒಡೆಯಲಾಗಿದೆ, ಬಟ್ಟೆ ಹರಿದು ಹಾಕಲಾಗಿದೆ. ಆಕೆಗೆ ಸಾಕಷ್ಟು ಹಿಂಸೆ ನೀಡಲಾಗಿದೆ. ವ್ಯಕ್ತಿಯು ರಿವಾಲ್ವರ್ ಕೂಡ ಹೊಂದಿದ್ದ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಲಾಗಿದೆ.

ಆರೋಪಿಯನ್ನು ಬಂಧಿಸಿರುವ ಕುರಿತು ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ವಿಡಿಯೋದಲ್ಲಿರುವ ಬಾಲಕಿಯನ್ನು ದೀಪಶಿಖಾ ತಿವಾರಿ ಎಂದು ಗುರುತಿಸಲಾಗಿದ್ದು, ಆ ವ್ಯಕ್ತಿ ಅವರ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸಿದ್ದಾರೆ ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Dengue Cases: ರಾಜ್ಯದಲ್ಲಿ ಭಾನುವಾರ 159 ಮಂದಿಗೆ ಡೆಂಗ್ಯೂ ದೃಢ; ಬೆಂಗಳೂರಲ್ಲೇ ಅತಿ ಹೆಚ್ಚು!

Dengue Cases: ರಾಜ್ಯದಲ್ಲಿ ಒಟ್ಟು 301 ಸಕ್ರಿಯ ಪ್ರಕರಣಗಳ ಪೈಕಿ 35 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಅಂದರೆ 80 ಪ್ರಕರಣಗಳು ಪತ್ತೆಯಾಗಿವೆ.

VISTARANEWS.COM


on

Dengue Cases
Koo

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 159 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಒಟ್ಟು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 301ಕ್ಕೆ ಏರಿಕೆಯಾಗಿದೆ. ಇನ್ನು ಜನವರಿಯಿಂದ ಈವರೆಗೂ ಡೆಂಗ್ಯೂನಿಂದ (Dengue Cases) 6 ಸಾವು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ 954 ಮಂದಿಗೆ ಟೆಸ್ಟ್‌ ಮಾಡಲಾಗಿದ್ದು, ಈ ಪೈಕಿ 159 ಮಂದಿಯಲ್ಲಿ ಡೆಂಗ್ಯೂ ಸೋಂಕು ಪತ್ತೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 80, ಚಿಕ್ಕಬಳ್ಳಾಪುರ – 08, ತುಮಕೂರು – 12, ದಾವಣಗೆರೆ – 10, ಗದಗ – 5, ಯಾದಗಿರಿ – 2, ಬೀದರ್ – 13, ಕೊಪ್ಪಳ – 1, ಹಾಸನ – 03, ಚಿಕ್ಕಮಗಳೂರು – 25 ಪ್ರಕರಣಗಳು ಪತ್ತೆಯಾಗಿವೆ.

ಕಳೆದ 24 ಗಂಟೆಗಳಲ್ಲಿ 1 ವರ್ಷದೊಳಗಿನ ಮೂವರು ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಸದ್ಯ 301 ಸಕ್ರಿಯ ಪ್ರಕರಣಗಳ ಪೈಕಿ 35 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾಸನದಲ್ಲಿ ಶಂಕಿತ ಡೆಂಗ್ಯೂಗೆ 26 ವರ್ಷದ ಯುವತಿ ಬಲಿ

ಹಾಸನ: ಶಂಕಿತ ಡೆಂಗ್ಯೂಗೆ (Dengue Cases in Hassan) 26 ವರ್ಷದ ಯುವತಿ ಬಲಿಯಾಗಿರುವ ಘಟನೆ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆಯ ಅರಸೀಕೆರೆ ತಾಲೂಕಿನ ಮುದುಡಿ ತಾಂಡ್ಯ ಗ್ರಾಮದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಜೂಲೂನಾಯ್ಕ-ಸುಮಿತ್ರಾದೇವಿ ಎಂಬುವವರ ಪುತ್ರಿ ಸುಪ್ರಿತಾ (26) ಮೃತ ಯುವತಿ. ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿರುವಾಗಲೇ ಸುಪ್ರಿತಾಗೆ ಬಹುಅಂಗಾಗ ವೈಫಲ್ಯವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸುಪ್ರಿತಾ ಮೃತಪಟ್ಟಿದ್ದಾಳೆ. ಇದರಿಂದ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ಸಾವಿನ ಸಂಖ್ಯೆ ಏಳಕ್ಕೆ ಏರಿದೆ.

ಮೈಸೂರಿನಲ್ಲಿ ಜಯದೇವ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಸಾವು

ಮೈಸೂರು: ಜಿಲ್ಲೆಯಲ್ಲಿ ಡೆಂಗ್ಯೂಗೆ ಎರಡನೇ ಬಲಿಯಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಲಲಿತಾ ಮೃತಪಟ್ಟವರು. ಮೂರು ದಿನಗಳ ಹಿಂದೆ ಹುಣಸೂರು ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೊಬ್ಬರು ಡೆಂಗ್ಯೂ ಜ್ವರದಿಂದ (Dengue Cases in Mysore) ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ | Dengue Scare: ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಡೆಂಗ್ಯೂ; ನೂರಾರು ಮಂದಿ ಆಸ್ಪತ್ರೆಗೆ ದಾಖಲು

ಮೈಸೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. 3 ದಿನಗಳ ಹಿಂದೆ ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿತ್ತು. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ (32) ಮೃತ ಮೃತಪಟ್ಟಿದ್ದರು.

Continue Reading

ಬೆಂಗಳೂರು

Dengue Scare: ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಡೆಂಗ್ಯೂ; ನೂರಾರು ಮಂದಿ ಆಸ್ಪತ್ರೆಗೆ ದಾಖಲು

ಬೆಂಗಳೂರಿನಲ್ಲಿ ಇಲ್ಲಿಯವರೆಗೆ 2,000ಕ್ಕೂ ಹೆಚ್ಚು ಡೆಂಗ್ಯೂ (Dengue Scare) ಪ್ರಕರಣಗಳು ದಾಖಲಾಗಿವೆ. ರಾಜ್ಯಾದ್ಯಂತ ಡೆಂಗ್ಯೂ ಪೀಡಿತರ ಸಂಖ್ಯೆ 7,000 ದಾಟಿದೆ. ಹೆಚ್ಚಿನ ಸಂಖ್ಯೆಯ ಮಕ್ಕಳು, ವೃದ್ಧರಲ್ಲಿ ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಈಗಾಗಲೇ ಬೆಂಗಳೂರಿನಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಡಲು ವಿಫಲರಾದ ಆಸ್ತಿ ಮಾಲೀಕರ ವಿರುದ್ಧ 500 ರೂಪಾಯಿ ದಂಡ ವಿಧಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

VISTARANEWS.COM


on

By

Dengue Scare
Koo

ಬೆಂಗಳೂರು: ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು (Dengue Scare) ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ (silicon city) ಬೆಂಗಳೂರಿನಲ್ಲಿ (bengaluru) ಸಾಕಷ್ಟು ಮುನ್ನೆಚ್ಚರಿಕೆಗಳನ್ನು ವಹಿಸಲಾಗುತ್ತಿದೆ. ಅನೇಕರು ಸೊಳ್ಳೆ ಬ್ಯಾಟ್‌ಗಳನ್ನು (Mosquito Bats) ಖರೀದಿಸುತ್ತಿದ್ದು, ಮನೆ ಸುತ್ತಮುತ್ತ ಸೊಳ್ಳೆಗಳು ಬರದಂತೆ ಮುನ್ನೆಚ್ಚರಿಕೆ ವಹಿಸುತ್ತಿರುವುದು ಕಂಡು ಬರುತ್ತಿದೆ. ಈ ನಡುವೆ, ಡೆಂಗ್ಯೂ ಪೀಡಿತರಾಗಿ ನೂರಾರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಡೆಂಗ್ಯೂವಿನಿಂದಾಗಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಸಿಲಿಕಾನ್ ಸಿಟಿಯು ಇಲ್ಲಿಯವರೆಗೆ 2,000ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳನ್ನು ದಾಖಲಿಸಿದೆ. ರಾಜ್ಯಾದ್ಯಂತ ಒಟ್ಟು ಸಂಖ್ಯೆ 7,000 ದಾಟಿದೆ. ಹೆಚ್ಚಿನ ಸಂಖ್ಯೆಯ ಮಕ್ಕಳು, ವೃದ್ಧರಲ್ಲಿ ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಮನೆಯಲ್ಲಿ ಹೆಚ್ಚುವರಿ ಸೊಳ್ಳೆ ಬ್ಯಾಟ್‌ಗಳನ್ನು ಖರೀದಿಸುವ ಅವಶ್ಯಕತೆ ಹೆಚ್ಚಾಗಿದೆ ಎನ್ನುತ್ತಾರೆ ಸ್ಥಳೀಯರು.

ಗಿಡಗಳಿಂದ ಆವೃತವಾಗಿರುವ ಪ್ರದೇಶಗಳಲ್ಲಿ ಬಾವಲಿಗಳು ಹೆಚ್ಚುತ್ತಿದೆ. ಜೂನ್‌ನಲ್ಲಿ ಭಾರೀ ಮಳೆಯು ಸೊಳ್ಳೆಗಳಿಗೆ ಸೂಕ್ತವಾದ ಸಂತಾನೋತ್ಪತ್ತಿಯ ಸ್ಥಳವನ್ನು ಸೃಷ್ಟಿಸಿದ ಅನಂತರ ಬಾವಲಿಗಳೂ ಹೆಚ್ಚಾಗಿವೆ.


ಬೆಂಗಳೂರಿನಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮಗಳು

ಈಗಾಗಲೇ ಬೆಂಗಳೂರಿನಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಡಲು ವಿಫಲರಾದ ಆಸ್ತಿ ಮಾಲೀಕರ ವಿರುದ್ಧ 500 ರೂಪಾಯಿ ದಂಡ ವಿಧಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದ ಸಭೆಯಲ್ಲಿ ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಹರಡುವ ಡೆಂಗ್ಯೂ ನಿಯಂತ್ರಣದ ಬಗ್ಗೆ ಗಮನಹರಿಸಿ ನಿರ್ಧಾರ ಕೈಗೊಳ್ಳಲು ಸೂಚಿಸಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೇರಿದಂತೆ ಮುನ್ಸಿಪಲ್ ಕಾರ್ಪೊರೇಷನ್‌ಗಳಿಗೆ ತಮ್ಮ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳದ ಆಸ್ತಿ ಮಾಲೀಕರಿಗೆ ಗರಿಷ್ಠ 50೦ ರೂಪಾಯಿ ದಂಡ ವಿಧಿಸುವಂತೆ ಆರೋಗ್ಯ ಸಚಿವರು ಸೂಚಿಸಿದ್ದಾರೆ.

ಇದನ್ನೂ ಓದಿ: Bomb Threat: ಬಾಯ್‌ ಫ್ರೆಂಡ್‌ ಬಿಟ್ಟು ಹೋಗ್ತಾನೆ ಎಂದು ಬೆಂಗಳೂರು ಏರ್‌ಪೋರ್ಟ್‌ಗೆ ಹುಸಿ ಬಾಂಬ್‌ ಕರೆ ಮಾಡಿದ ಯುವತಿ!

ಇದಲ್ಲದೆ, ಬೆಂಗಳೂರಿನಲ್ಲಿ ಡೆಂಗ್ಯೂ ಹರಡುವುದನ್ನು ತಡೆಯಲು ಲಾರ್ವಾ ಪರೀಕ್ಷೆ ಮತ್ತು ನಾಗರಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬಿಬಿಎಂಪಿಯಿಂದ ಮನೆ-ಮನೆ ಸಮೀಕ್ಷೆ ನಡೆಸಲಾಗುತ್ತಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ದಟ್ಟ ಜನಸಂಖ್ಯೆ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವ ಸುಮಾರು 25 ಲಕ್ಷ ನಗರ ಬಡವರನ್ನು ಸಮೀಕ್ಷೆಗಾಗಿ ಎಲ್ಲಾ ಬಿಬಿಎಂಪಿ ವಲಯಗಳಲ್ಲಿ ಗುರುತಿಸಲಾಗಿದೆ. ಅಲ್ಲಿ ಆರೋಗ್ಯ ನಿರೀಕ್ಷಕರು, ಆಶಾ ಕಾರ್ಯಕರ್ತರು, ಎಎನ್‌ಎಂಗಳು, ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು, ಎನ್‌ಎಸ್‌ಎಸ್ ಸ್ವಯಂಸೇವಕರು ಇರಲಿದ್ದಾರೆ. ತಲಾ 1,000 ಮನೆಗಳನ್ನು ಒಳಗೊಂಡ ಬ್ಲಾಕ್ ರಚಿಸಲು ನಿರ್ದೇಶನ ನೀಡಲಾಗಿದೆ. ಪ್ರತಿ 15 ದಿನಗಳಿಗೊಮ್ಮೆ ಕನಿಷ್ಠ 12-14 ಲಕ್ಷ ಮನೆಗಳನ್ನು ಆವರಿಸುವ ಗುರಿ ಹೊಂದಲಾಗಿದೆ.

Continue Reading

ಬೆಂಗಳೂರು

Press Club of Bangalore: ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷರಾಗಿ ಆರ್. ಶ್ರೀಧರ್ ಮರು ಆಯ್ಕೆ; ನೂತನ ಪದಾಧಿಕಾರಿಗಳ ಪಟ್ಟಿ ಇಲ್ಲಿದೆ

Press Club of Bangalore: ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಆರ್‌. ಶ್ರೀಧರ್ ಅವರು ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಬಿ. ಎನ್. ಮೋಹನ್ ಕುಮಾರ್ ಆಯ್ಕೆಯಾಗಿದ್ದಾರೆ.

VISTARANEWS.COM


on

Press Club of Bangalore
Koo

ಬೆಂಗಳೂರು: 2024-25ನೇ ಸಾಲಿನ ʼಪ್ರೆಸ್ ಕ್ಲಬ್ ಆಫ್ ಬೆಂಗಳೂರುʼ (Press Club of Bangalore) ಚುನಾವಣೆಯಲ್ಲಿ ಹಿರಿಯ ಪತ್ರಕರ್ತ ಆರ್‌. ಶ್ರೀಧರ್ ಅವರು ಮರು ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಬಿ. ಎನ್. ಮೋಹನ್ ಕುಮಾರ್ ಆಯ್ಕೆಯಾಗಿದ್ದಾರೆ. ʼಪ್ರೆಸ್ ಕ್ಲಬ್ ಆಫ್ ಬೆಂಗಳೂರುʼಗೆ ಭಾನುವಾರ ಚುನಾವಣೆ ನಡೆದಿದ್ದು, ಮತ್ತೊಮ್ಮೆ ಅಧ್ಯಕ್ಷರಾಗಿ ಆಯ್ಕೆಯಾಗುವಲ್ಲಿ ಆರ್‌. ಶ್ರೀಧರ್ ಸಫಲರಾದರು.

ಅಧ್ಯಕ್ಷ ಸ್ಥಾನಕ್ಕಾಗಿ ಧ್ಯಾನ್ ಪೂಣಚ್ಚ, ಆರ್. ಶ್ರೀಧರ್ ಹಾಗೂ ಸುಭಾಷ್ ಹೂಗಾರ್ ಅವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಅತಿ ಹೆಚ್ಚು ಮತದಾರರ ಬೆಂಬಲದಿಂದ ಆರ್. ಶ್ರೀಧ‌ರ್ ಅವರು ಅಧ್ಯಕ್ಷರಾಗಿ ಮರು ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನಕ್ಕೆ ಮಹಾಂತೇಶ್ ಹೀರೇಮರ್, ಬಿ.ಎನ್.ಮೋಹನ್ ಕುಮಾರ್ ಹಾಗೂ ವಿಶ್ವನಾಥ್ ಭಾಗವತ್ ಕಣದಲ್ಲಿದ್ದರು. ಅಂತಿಮವಾಗಿ ಮೋಹನ್ ಕುಮಾರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅದೇ ರೀತಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ದೊಡ್ಡ ಬೊಮ್ಮಯ್ಯ, ಟಿ. ಮಂಜುನಾಥ್, ಎಂ.ಡಿ ಶಿವಕುಮಾರ್ ಬೆಳ್ಳಿತಟ್ಟೆ ಹಾಗೂ ವೈ.ಎಸ್.ಎಲ್. ಸ್ವಾಮಿ ನಡುವೆ ಪೈಪೋಟಿ ನಡೆದಿತ್ತು. ಅಂತಿಮವಾಗಿ ಶಿವಕುಮಾರ್ ಬೆಳ್ಳಿತಟ್ಟೆಯವರು ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳ ಪಟ್ಟಿ

1.ಅಧ್ಯಕ್ಷ – ಹಿರಿಯ ಪತ್ರಕರ್ತ ಆರ್. ಶ್ರೀಧರ್ ಶ್ರೀಧರ್
2.ಉಪಾಧ್ಯಕ್ಷ- ಬಿ.ಎನ್.ಮೋಹನ್ ಕುಮಾರ್
3.ಪ್ರಧಾನ ಕಾರ್ಯದರ್ಶಿ – ಎಂ.ಡಿ.ಶಿವಕುಮಾರ್ ಬೆಳ್ಳಿತಟ್ಟೆ
4.ಕಾರ್ಯದರ್ಶಿ – ಜಿ.ವೈ. ಮಂಜುನಾಥ್
5.ಜಂಟಿ ಕಾರ್ಯದರ್ಶಿ- ಧರಣೀಶ್ ಬಿ.ಎನ್
6.ಖಜಾಂಚಿ- ಜಿ.ಗಣೇಶ್

ಕಾರ್ಯಕಾರಿ ಸಮಿತಿ ಸದಸ್ಯರು

ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿಗೆ ಸ್ಪರ್ಧಿಸಿದ್ದ 19 ಅಭ್ಯರ್ಥಿಗಳ ಈ ಕೆಳಕಂಡ ಪೈಕಿ 6 ಸದಸ್ಯರು ಗೆಲುವು ಕಂಡಿದ್ದಾರೆ.

1.ರೋಹಿಣಿ ವಿ. ಅಡಿಗ
2.ಮಂಜುನಾಥ್ ಸಿ.ಆರ್.
3.ಮುಮ್ತಾಜ್ ಅಲೀಂ ಜಿ
4.ಯಾಸಿರ್ ಮುಶ್ತಾಕ್
5.ಶರಣಬಸಪ್ಪ ಎ.ಎಚ್.
6.ಶಿವಣ್ಣ

ಕಾರ್ಯಕಾರಿ ಸಮಿತಿ ಮಹಿಳಾ ಸದಸ್ಯರು

ಮಿನಿ ತೇಜಸ್ವಿ: ಪ್ರೆಸ್ ಕ್ಲಬ್ ಮಹಿಳಾ ಮೀಸಲು ವಿಭಾಗದಲ್ಲಿ ಸ್ಪರ್ಧಿಸಿದ್ದ ಇಬ್ಬರ ಪೈಕಿ ಮಿನಿ ತೇಜಸ್ವಿ ಗೆಲುವು ಪಡೆದು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಯಾರಿಗೆಷ್ಟು ಮತ?

ಪ್ರೆಸ್ ಕ್ಲಬ್ ಆಫ್ ಬೆಂಗಳೂರು 2024-25ನೇ ಸಾಲಿನ ಚುನಾವಣೆಗೆ ಬೆಳಗ್ಗೆ 9 ರಿಂದ 4ಗಂಟೆವರೆಗೂ ಮತದಾನ ಪ್ರಕ್ರಿಯೆ ನಡೆಯಿತು. ಒಟ್ಟು 1040 ಮತದಾರರ ಪೈಕಿ ಈ ಬಾರಿ 767 ಸದಸ್ಯರು ಮತ ಚಲಾಯಿಸಿದರು.

ಆರ್.ಶ್ರೀಧರ್ – 404
ಬಿ.ಎನ್.ಮೋಹನ್ ಕುಮಾರ್- 417
ಎಂ.ಡಿ.ಶಿವಕುಮಾರ್ ಬೆಳ್ಳಿತಟ್ಟೆ – 336
ಗಣೇಶ್.ಜಿ. – 556
ಮಂಜುನಾಥ್ ಜಿ.ವೈ.- 288
ಧರಣೀಶ್ ಬಿ.ಎನ್.- 195
ಕಾರ್ಯಕಾರಿ ಸಮಿತಿ ಮಹಿಳಾ ಮೀಸಲು ಸದಸ್ಯೆ – ಮಿನಿ ತೇಜಸ್ವಿ – 491
ಮಂಜುನಾಥ್ ಸಿ.ಆರ್ – 281
ರೋಹಿಣಿ ವಿ ಅಡಿಗ – 306
ಯಾಸಿರ್ ಮುಶ್ತಾಕ್ – 259
ಮುಮ್ತಾಜ್ ಅಲೀಂ ಜಿ – 272
ಶಿವಣ್ಣ – 234
ಶರಣಬಸಪ್ಪ ಎ.ಎಚ್. – 258

Paris Olympics 2024: ಒಲಿಂಪಿಕ್ಸ್‌ಗೆ ಭಾರತದ ಎಲ್ಲ ಕ್ರೀಡಾಪಟುಗಳು ಫಿಟ್‌ ಎಂದ ಐಒಎ

Continue Reading
Advertisement
Viral News
ವೈರಲ್ ನ್ಯೂಸ್24 mins ago

Viral News: ಸಮುದ್ರದಲ್ಲಿ ಮೂತ್ರ ವಿಸರ್ಜನೆ ಮಾಡಿದರೆ 67 ಸಾವಿರ ರೂ. ದಂಡ; ಕಂಡು ಹಿಡಿಯೋದು ಹೇಗೆ?

Bengaluru News Physical Abuse
ಬೆಂಗಳೂರು33 mins ago

Bengaluru News : ʻ ಹುಡುಗ- ಹುಡುಗಿಯರ ಸರ್ವಿಸ್ ಬೇಕಾʼ ಎಂದವನ ಹೆಡೆಮುರಿ ಕಟ್ಟಿದ ಖಾಕಿ ಪಡೆ

Dengue Cases
ಕರ್ನಾಟಕ41 mins ago

Dengue Cases: ರಾಜ್ಯದಲ್ಲಿ ಭಾನುವಾರ 159 ಮಂದಿಗೆ ಡೆಂಗ್ಯೂ ದೃಢ; ಬೆಂಗಳೂರಲ್ಲೇ ಅತಿ ಹೆಚ್ಚು!

Sonakshi Sinha
ಸಿನಿಮಾ51 mins ago

Sonakshi Sinha: ಮದುವೆ ಆದವರು ಗರ್ಭಿಣಿಯಾದರೆ ಮಾತ್ರ ಆಸ್ಪತ್ರೆಗೆ ಹೋಗಬೇಕಾ? ವದಂತಿಕೋರರಿಗೆ ನಟಿ ಸೋನಾಕ್ಷಿ ಪ್ರಶ್ನೆ!

Dengue Scare
ಬೆಂಗಳೂರು1 hour ago

Dengue Scare: ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಡೆಂಗ್ಯೂ; ನೂರಾರು ಮಂದಿ ಆಸ್ಪತ್ರೆಗೆ ದಾಖಲು

Press Club of Bangalore
ಬೆಂಗಳೂರು1 hour ago

Press Club of Bangalore: ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷರಾಗಿ ಆರ್. ಶ್ರೀಧರ್ ಮರು ಆಯ್ಕೆ; ನೂತನ ಪದಾಧಿಕಾರಿಗಳ ಪಟ್ಟಿ ಇಲ್ಲಿದೆ

Foods For Hormone Balance
ಆರೋಗ್ಯ1 hour ago

Foods For Hormone Balance: ಮಹಿಳೆಯರೇ, ಹಾರ್ಮೋನಿನ ಸಮತೋಲನಕ್ಕಾಗಿ ಈ ಆಹಾರಗಳನ್ನು ಮರೆಯದೇ ಸೇವಿಸಿ

ZIM vs IND
ಪ್ರಮುಖ ಸುದ್ದಿ1 hour ago

ZIM vs IND : ಭಾರತ ತಂಡಕ್ಕೆ 100 ರನ್​ ಭರ್ಜರಿ ಜಯ, ಜಿಂಬಾಬ್ವೆ ವಿರುದ್ಧ ಸರಣಿಯಲ್ಲಿ 1-1 ಸಮಬಲ ಸಾಧನೆ

Viral Video
ವೈರಲ್ ನ್ಯೂಸ್2 hours ago

Viral Video: ಮನೆಗೆ ನುಗ್ಗಿ ಯುವಕನಿಂದ ಬಾಲಕಿ ಮೇಲೆ ಅಮಾನುಷ ಹಲ್ಲೆ; ವಿಡಿಯೊ ನೋಡಿ ಜನಾಕ್ರೋಶ

Mobile Tariffs
ದೇಶ2 hours ago

Mobile Tariffs: ಜಿಯೋ, ಏರ್‌ಟೆಲ್‌, VI ರಿಚಾರ್ಜ್‌ ಶುಲ್ಕ ಕಡಿಮೆ ಮಾಡಲಿದ್ದಾರಾ ಮೋದಿ? ಇಲ್ಲಿದೆ ಕೇಂದ್ರದ ಸ್ಪಷ್ಟನೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ4 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ5 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ15 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌