Forest Man Of India: ಇವರೇ ನೋಡಿ ಭಾರತದ ಫಾರೆಸ್ಟ್‌ ಮ್ಯಾನ್‌; ಏಕಾಂಗಿಯಾಗಿ 1,360 ಎಕ್ರೆಯಲ್ಲಿ ಕಾಡು ಬೆಳೆಸಿದ ಸಾಹಸಿ - Vistara News

ಪರಿಸರ

Forest Man Of India: ಇವರೇ ನೋಡಿ ಭಾರತದ ಫಾರೆಸ್ಟ್‌ ಮ್ಯಾನ್‌; ಏಕಾಂಗಿಯಾಗಿ 1,360 ಎಕ್ರೆಯಲ್ಲಿ ಕಾಡು ಬೆಳೆಸಿದ ಸಾಹಸಿ

Forest Man Of India: ಏಕಾಂಗಿಯಾಗಿ ಹೆಕ್ಟರ್‌ಗಟ್ಟಲೆ ಪ್ರದೇಶಗಳಲ್ಲಿ ಕಾಡು ಬೆಳೆಸಿ ʼಫಾರೆಸ್ಟ್‌ ಮ್ಯಾನ್‌ ಆಫ್‌ ಇಂಡಿಯಾʼ ಎಂದು ಜನಪ್ರಿಯರಾಗಿರುವ ಜಾದವ್‌ ಮೊಲಾಯ್ ಪಾಯೆಂಗ್‌ ಅವರ ಮಹಾತ್ಕಾರ್ಯ ಎಲ್ಲರಿಗೂ ಸ್ಫೂರ್ತಿ ಎನಿಸಿಕೊಂಡಿದೆ. ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

The Forest Man Of India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದೆ. ದೇಶದಲ್ಲಿ ಗರಿಷ್ಠ 56 ಡಿಗ್ರಿ ಸೆಲ್ಶಿಯಸ್‌ ಉಷ್ಣಾಂಶ ದಾಖಲಾಗಿದೆ. ಬಿಸಿ ಗಾಳಿಯಿಂದ ಅನೇಕ ಮಂದಿ ತತ್ತರಿಸಿ ಹೋಗಿದ್ದಾರೆ. ಪ್ರಾಣಿ-ಪಕ್ಷಿಗಳ ಸ್ಥಿತಿಯಂತೂ ಇನ್ನೂ ಗಂಭೀರ. ವ್ಯಾಪಕ ಪ್ರಮಾಣದಲ್ಲಿ ಕಾಡುಗಳ ನಾಶವೇ ಈ ರೀತಿ ಉಷ್ಣಾಂಶ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಲು ನೇರ ಕಾರಣ ಎಂದು ಪರಿಸರ ತಜ್ಞರು ಎಚ್ಚರಿಸಿದ್ದಾರೆ. ಈ ಮಧ್ಯೆ ಏಕಾಂಗಿಯಾಗಿ ಹೆಕ್ಟರ್‌ಗಟ್ಟಲೆ ಪ್ರದೇಶಗಳಲ್ಲಿ ಕಾಡು ಬೆಳೆಸಿ ʼಫಾರೆಸ್ಟ್‌ ಮ್ಯಾನ್‌ ಆಫ್‌ ಇಂಡಿಯಾʼ (Forest Man Of India) ಎಂದು ಜನಪ್ರಿಯರಾಗಿರುವ ಜಾದವ್‌ ಮೊಲಾಯ್ ಪಾಯೆಂಗ್‌ (Jadav Payeng) ಅವರ ಮಹಾತ್ಕಾರ್ಯ ಎಲ್ಲಿಲ್ಲದ ಪ್ರಾಧಾನ್ಯತೆ ಪಡೆದುಕೊಂಡಿದೆ. ಇವರೊಬ್ಬರೇ ಬರೋಬ್ಬರಿ 1,360 ಎಕ್ರೆಯಲ್ಲಿ ಕಾಡು ಬೆಳೆಸಿದ್ದಾರೆ. ಅವರ ಸ್ಫೂರ್ತಿದಾಯಕ ಕಥೆ ಇಲ್ಲಿದೆ.

ಗೋಲ್ಬಾಲ್ಫಾರೆಸ್ಟ್ ವಾಚ್ ಪ್ರಕಾರ, 2010ರಲ್ಲಿ ಭಾರತವು 31.3 ಮಿಲಿಯನ್ ಹೆಕ್ಟೇರ್ ನೈಸರ್ಗಿಕ ಅರಣ್ಯ ಹೊಂದಿತ್ತು. ಅಂದರೆ ಭೂಪ್ರದೇಶದ ಶೇ. 11ರಷ್ಟು ಪ್ರದೇಶವನ್ನು ಹಸಿರು ವ್ಯಾಪಿಸಿತ್ತು. ಸುಮಾರು 11 ವರ್ಷಗಳಲ್ಲಿ ಈ ಚಿತ್ರಣವೇ ಬದಲಾಯ್ತು. ಅಂದರೆ 2021ರಲ್ಲಿ 127 ಸಾವಿರ ಹೆಕ್ಟರ್‌ಗಳಷ್ಟು ಅರಣ್ಯ ನಾಶವಾಯ್ತು. ಮರಗಳ ಮಾರಣ ಹೋಮದ ಜತೆಗೆ ಪರಿಸರ ವ್ಯವಸ್ಥೆಯೇ ಏರುಪೇರಾಗಿದೆ.

ಜಾದವ್‌ ಪಾಯೆಂಗ್‌ ಎನ್ನುವ ಭರವಸೆಯ ಬೆಳಕು

ಗಿಡ ನೆಡಬೇಕು, ಕಾಡು ಬೆಳೆಸಬೇಕು ಎನ್ನುವ ಕನಸು ಜಾಧವ್‌ ಅವರಲ್ಲಿ ಹದಿಹರೆಯದಲ್ಲೇ ಮೊಳೆತಿತ್ತು. ಕಣ್ಣೆದುರೇ ಬೆಳದ ಕಾಡುಗಳು ನಾಶವಾಗುತ್ತಿರುವುದು ನೋಡಿ ಜಾದವ್‌ ಪಾಯೆಂಗ್‌ ಒಳಗೊಳಗೇ ನಲುಗುತ್ತಿದ್ದರು. ಇದನ್ನು ಹೇಗಾದರೂ ಮಾಡಿ ತಡೆಯಬೇಕು, ತಾನು ಕಾಡು ಬೆಳೆಸಬೇಕು ಎನ್ನುವ ಛಲ ಅವರಲ್ಲಿ ಮೊಳೆಯತೊಡಗಿತು. ಹೀಗೆ ಅಸ್ಸಾಂನ ಮಜುಲಿಯಲ್ಲಿ ಜನಿಸಿದ ಜಾಧವ್‌ ಮುಂದೆ ʼಫಾರೆಸ್ಟ್‌ ಮ್ಯಾನ್‌ ಆಫ್‌ ಇಂಡಿಯಾʼ ಎಂದು ಕರೆಸಿಕೊಂಡರು.
ಮಜುಲಿ ಎನ್ನುವುದು ಬ್ರಹ್ಮಪುತ್ರ ನದಿಯಿಂದ ರೂಪುಗೊಂಡ ಒಂದು ದ್ವೀಪ. ಇಲ್ಲಿ ಮಿಶಿಂಗ್‌ ಆದಿವಾಸಿ ಕುಟುಂಬ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿದೆ.

ತಿರುವು ನೀಡಿದ ಘಟನೆ

1959ರಲ್ಲಿ ಜನಿಸಿದ್ದ ಜಾದವ್ ಸಾಮಾನ್ಯರಂತೆ ತಮ್ಮಷ್ಟಕ್ಕೆ ತಾವು ಜೀವನ ಸಾಗಿಸುತ್ತಿದ್ದರು. ಆದರೆ 1979ರಲ್ಲಿ ನಡೆದ ಘಟನೆ ಅವರ ಜೀವನವನ್ನೇ ಬದಲಾಯಿಸಿ ಬಿಟ್ಟಿತು. ಸಾಮಾನ್ಯ ವ್ಯಕ್ತಿಯನ್ನು ಅಸಮಾನ್ಯ ವ್ಯಕ್ತಿಯನ್ನಾಗಿಸಿತು. ಅಂದು ಜಾದವ್‌ ತಮ್ಮ ಮನೆಯ ಸುತ್ತ ಮರಳಿನ ನೆಲದ ಮೇಲೆ ಸತ್ತು ಬಿದ್ದಿರುವ ಅನೇಕ ಹಾವುಗಳನ್ನು ನೋಡಿದರು. ಉಷ್ಣತೆ ತಾಳಲಾರದೆ ಹಾವುಗಳು ಸತ್ತು ಬಿದ್ದಿದ್ದವು. ಈಗ ಹಾವಿನ ಪರಿಸ್ಥಿತಿ ಇದಾದರೆ ಮುಂದೊಂದು ದಿನ ಮನುಷ್ಯರಾದ ನಾವೂ ಶಾಖ ತಾಳಲಾರದೆ ಇದೇ ರೀತಿ ಸತ್ತು ಬೀಳಬಹುದು ಎನ್ನುವ ಆಲೋಚನೆ 20ರ ಹರೆಯ ಜಾದವ್‌ನ ಮನಸ್ಸಿನಲ್ಲಿ ಬೇರೂರಿತು. ಇದಕ್ಕೇನು ಪರಿಹಾರ ಎಂದು ಚಿಂತಿಸತೊಡಗಿದರು. ಆಗ ಹಿರಿಯರು ಉಷ್ಣಾಂಶದಿಂದ ಪಾರಾಗಲು ಗಿಡ ನೆಡಬೇಕು ಎನ್ನುವ ಸಲಹೆ ನೀಡಿದರು. ಹೀಗೆ ಜಾದವ್‌ ತಮ್ಮ ದ್ವೀಪದ ಖಾಲಿ ಸ್ಥಳಗಳಲ್ಲಿ ಬಿದಿರು ನೆಡಲು ಆರಂಭಿಸಿದರು. ‌

ಇದೇ ವೇಳೆ ಅಸ್ಸಾಂ ಸರ್ಕಾರ ಮಣ್ಣಿನ ಸವಕಳಿ ತಡೆಯಲು ಮತ್ತು ಪ್ರವಾಹವನ್ನು ನಿಯಂತ್ರಿಸಲು ದ್ವೀಪದಲ್ಲಿ ಗಿಡ ನೆಡುವ ಯೋಜನೆಯನ್ನು ಪ್ರಾರಂಭಿಸಿತು. ಜಾದವ್‌ ಈ ಯೋಜನೆ ಭಾಗವಾದರು. ಆ ಮೂಲಕ ಬೋಳು ಪ್ರದೇಶದಲ್ಲಿ ಹಸಿರು ಮೂಡಿಸುವ ಕಾರ್ಯಕ್ಕೆ ಮುಂದಾದರು. ಹೀಗೆ ಆರಂಭವಾದ ಜಾದವ್‌ ಅವರ ಮಿಷನ್‌ ಸುಮಾರು 40 ವರ್ಷಗಳ ಕಾಲ ಮುಂದುವರಿಯಿತು. ಇದೀಗ ಅವರು ಬೆಳೆಸಿದ ಸುಮಾರು 1,390 ಎಕ್ರೆ ಕಾಡಿಗೆ ಮೋಲಾಸ್‌ ಫಾರೆಸ್ಟ್‌ (Mola’s forest) ಎಂದು ಹೆಸರಿಡಲಾಗಿದೆ.

ವಿವಿಧ ತಳಿಗಳ ಗಿಡ

ಜಾದವ್‌ ವಿವಿಧ ರೀತಿಯ ಗಿಡಗಳನ್ನು ನೆಟ್ಟಿದ್ದಾರೆ. ವಾಲ್ಕೋಲ್, ಅರ್ಜುನ್, ಎಜರ್, ಗೋಲ್ಡ್ ಮೊಹರ್, ಕೊರೊಯಿ, ಬಿದಿರು ಸೇರಿದಂತೆ ನಾನಾ ತಳಿಯ ಗಿಡಗಳನ್ನು ನೆಟ್ಟು ದಟ್ಟ ಅರಣ್ಯ ಸೃಷ್ಟಿಸಿದ್ದಾರೆ. ಜತೆಗೆ ಈ ಕಾಡು ಅನೇಕ ವನ್ಯ ಜೀವಿಗಳ ಆವಾಸ ಸ್ಥಾನವಾಗಿಯೂ ಬದಲಾಗಿದೆ. ಹುಲಿ, ಖಡ್ಗ ಮೃಗ, ಜಿಂಕೆ, ಹಂದಿ, ಮೊಲ ಸೇರಿದಂತೆ ವಿವಿಧ ಪ್ರಾಣಿ ಪಕ್ಷಿಗಳ ತವರೂರು ಎನಿಸಿಕೊಂಡಿದೆ. ಆನೆಗಳ ಗುಂಪುಗಳೂ ಕೂಡ ಆಗಾಗ ಈ ಕಾಡಿಗೆ ಭೇಟಿ ನೀಡುತ್ತವೆ.

ಎಲೆ ಮರೆಯ ಕಾಯಿ

ಜಾದವ್‌ ಇಷ್ಟೆಲ್ಲ ಸಾಧನೆ ಮಾಡಿದ್ದರೂ ಹೊರ ಜಗತ್ತಿಗೆ ಪರಿಚಿತನಾಗಿರಲಿಲ್ಲ. ಎಲೆಮರೆಯ ಕಾಯಿಯಂತೆ ತಮ್ಮ ಪಾಡಿಗೆ ತಾವಿದ್ದರು. 2009ರಲ್ಲಿ ವೈಲ್ಡ್‌ಲೈಫ್‌ ರಿಪೋರ್ಟರ್‌ ಜಾದವ್‌ ಸಾಧನೆ ಬಗ್ಗೆ ಬರೆದಿದ್ದರು. ಇದು ವೈರಲ್‌ ಆಗಿ ಜಗತ್ತು ಜಾದವ್‌ ಅವರ ಮಹತ್ಕಾರ್ಯವನ್ನು ಗುರುತಿಸತೊಡಗಿತು. 2012ರಲ್ಲಿ ಇವರಿಗೆ ʼಫಾರೆಸ್ಟ್‌ ಮ್ಯಾನ್‌ ಆಫ್‌ ಇಂಡಿಯಾʼ ಎನ್ನುವ ಬಿರುದು ನೀಡಲಾಯಿತು. ಈಗಲೂ ಅವರು ಅರಣ್ಯದ ಜತೆ ಜತೆಗೆ ವಾಸಿಸುತ್ತ ಗಿಡ ನೆಡುವ ಕಾಯಕವನ್ನು ಮುಂದುವರಿಸಿದ್ದಾರೆ.

ಪದ್ಮಶ್ರೀ ಗೌರವ

ಜಾದವ್‌ ಅವರ ಸಾಮಾಜಿಕ ಕಾರ್ಯವನ್ನು ಗುರುತಿಸಿ ಕೇಂದ್ರ ಸರ್ಕಾರ 2015ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿತು. ಜತೆಗೆ ವಿವಿಧ ವಿಶ್ವ ವಿದ್ಯಾನಿಲಯಗಳು ಗೌರವ ಡಾಕ್ಟರೇಟ್‌ ಪ್ರದಾನ ಮಾಡಿವೆ. ಮೆಕ್ಸಿಕೋ ಕೂಡ ಅವರ ಸೇವೆಯನ್ನು ಗುರುತಿಸಿ ಮಾರ್ಗದರ್ಶನ ನೀಡಲು ತಮ್ಮ ದೇಶಕ್ಕೆ ಕರೆಸಿಕೊಂಡಿದೆ. ಜಾದವ್‌ ಅವರ ಸಾಧನೆ ಬಗ್ಗೆ 2012ರಲ್ಲಿ ʼದಿ ಮೊಲಾಯಿ ಫಾರೆಸ್ಟ್‌ʼ (The Molai Forest) ಎನ್ನುವ ಡಾಕ್ಯುಮೆಂಟ್ರಿ ತಯಾರಾಗಿದೆ.

ಈ ವಿಶ್ವ ಪರಿಸರ ದಿನದಂದು ಜಾದವ್‌ ಅವರ ನಡೆಯಿಂದ ಸ್ಫೂರ್ತಿಗೊಂಡು ಕೆಲವರಾದರೂ ಗಿಡ ನೆಡಲು ಮುಂದೆ ಬಂದರೆ ಅದೇ ನಾವು ಅವರಿಗೆ ನೀಡಬಹುದಾದ ದೊಡ್ಡ ಕೊಡುಗೆ ಎಂದು ಪ್ರಕೃತಿ ಪ್ರಿಯರು ಅಭಿಪ್ರಾಯಪಡುತ್ತಾರೆ.

ಇದನ್ನೂ ಓದಿ: Success Story: ರಾಧಾಮಣಿ ಅಮ್ಮಂಗೆ ವಯಸ್ಸು ಕೇವಲ ನಂಬರ್‌ ಅಷ್ಟೇ; 73 ವರ್ಷದ ಇವರ ಬಳಿ ಇದೆ ಬರೋಬ್ಬರಿ 11 ವಾಹನಗಳ ಲೈಸನ್ಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Indian Origin Crow: ಭಾರತೀಯ ಮೂಲದ 10 ಲಕ್ಷ ಕಾಗೆಗಳನ್ನು ಕೊಲ್ಲಲು ಕೀನ್ಯಾ ನಿರ್ಧರಿಸಿದ್ದೇಕೆ?

2024ರ ಅಂತ್ಯದ ವೇಳೆಗೆ ಅಂದರೆ ಮುಂಬರುವ ಆರು ತಿಂಗಳಲ್ಲಿ ಭಾರತೀಯ ಮೂಲದ ಕಾಗೆಗಳನ್ನು(Indian Origin Crow) ಹೆಚ್ಚಿನ ಸಂಖ್ಯೆಯಲ್ಲಿ ಕೊಲ್ಲುವುದಾಗಿ ಕೀನ್ಯಾ ಸರ್ಕಾರ ಘೋಷಿಸಿದೆ. 10 ಲಕ್ಷ ಕಾಗೆಗಳನ್ನು ನಿರ್ಮೂಲನೆ ಮಾಡಲು ಸರ್ಕಾರ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದೆ ಯಾಕೆ ಗೊತ್ತೇ? ಇಲ್ಲಿದೆ ಮಾಹಿತಿ.

VISTARANEWS.COM


on

By

Indian Origin Crow
Koo

ಭಾರತೀಯ ಮೂಲದ 10 ಲಕ್ಷ ಕಾಗೆಗಳನ್ನು (Indian Origin Crow) ಈ ವರ್ಷಾಂತ್ಯದ ವೇಳೆಗೆ ಕೊಲ್ಲಲು ಕೀನ್ಯಾ (Kenya) ಯೋಜನೆ ಹಾಕಿಕೊಂಡಿದೆ. ಕಾಗೆಯು ಪ್ರಾಥಮಿಕ ಪರಿಸರ ವ್ಯವಸ್ಥೆಯ ಭಾಗವಲ್ಲ. ಈ ಕಾಗೆಗಳು ದಶಕಗಳಿಂದ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದು, ಸ್ಥಳೀಯ ಪಕ್ಷಿಗಳನ್ನು ಸಾಯಿಸುತ್ತಿವೆ ಎಂದು ಕೀನ್ಯಾದ ವನ್ಯಜೀವಿ ಇಲಾಖೆ (Wildlife Department) ಹೇಳಿದೆ.

2024ರ ಅಂತ್ಯದ ವೇಳೆಗೆ ಅಂದರೆ ಮುಂಬರುವ ಆರು ತಿಂಗಳಲ್ಲಿ ಭಾರತೀಯ ಮೂಲದ ಕಾಗೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕೊಲ್ಲುವುದಾಗಿ ಕೀನ್ಯಾ ಸರ್ಕಾರ ಘೋಷಿಸಿದೆ. 10 ಲಕ್ಷ ಕಾಗೆಗಳನ್ನು ನಿರ್ಮೂಲನೆ ಮಾಡಲು ಸರ್ಕಾರ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದೆ. ಭಾರತೀಯ ಮೂಲದ ಕಾಗೆಗಳನ್ನು ‘ಆಕ್ರಮಣಕಾರಿ ವಿದೇಶಿ ಪಕ್ಷಿಗಳು’ ಎಂದು ಕರೆದಿರುವ ಕೀನ್ಯಾದ ವನ್ಯಜೀವಿ ಪ್ರಾಧಿಕಾರವು ಈ ಕಾಗೆಗಳು ಪೂರ್ವ ಆಫ್ರಿಕಾಕ್ಕೆ ಸ್ಥಳೀಯವಾಗಿಲ್ಲ ಎಂದಿದೆ.

ಕಳೆದ ಕೆಲವು ವರ್ಷಗಳಲ್ಲಿ ಕರಾವಳಿ ನಗರಗಳಾದ ಮೊಂಬಾಸಾ, ಮಲಿಂಡಿ, ಕಿಲಿಫಿ ಮತ್ತು ವಟಮುಗಳಲ್ಲಿ ಅವುಗಳ ಸಂಖ್ಯೆಯು ವೇಗವಾಗಿ ಹೆಚ್ಚಾಗಿದೆ. ಇದರಿಂದ ಉಂಟಾಗುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು 1 ಮಿಲಿಯನ್ ಕಾಗೆಗಳನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿದೆ. ಹೊಟೇಲ್ ಉದ್ಯಮದ ಪ್ರತಿನಿಧಿಗಳು ಮತ್ತು ಕಾಗೆ ನಿಯಂತ್ರಣದಲ್ಲಿ ಪರಿಣತಿ ಹೊಂದಿರುವ ವೈದ್ಯರನ್ನು ಒಳಗೊಂಡ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಹೊಟೇಲ್ ಉದ್ಯಮಕ್ಕೆ ತೊಂದರೆ

ವನ್ಯಜೀವಿ ಪ್ರಾಧಿಕಾರವು ನೀಡಿರುವ ಹೇಳಿಕೆಯಲ್ಲಿ ಕರಾವಳಿ ನಗರಗಳ ಹೊಟೇಲ್ ಉದ್ಯಮಕ್ಕೆ ಈ ಕಾಗೆಗಳು ದೊಡ್ಡ ಸಮಸ್ಯೆಯಾಗುತ್ತಿವೆ. ಕಾಗೆಗಳಿಂದ ಪ್ರವಾಸಿಗರು ತೆರೆದ ಜಾಗದಲ್ಲಿ ಕುಳಿತು ಆಹಾರ ಸೇವಿಸಲು ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹೊಟೇಲ್ ಉದ್ಯಮಕ್ಕೆ ಸಂಬಂಧಿಸಿದವರು ಸಹ ಕಾಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಮತ್ತು ಅವುಗಳ ಮೇಲೆ ನಿಯಂತ್ರಣಕ್ಕೆ ಒತ್ತಾಯಿಸುತ್ತಿದ್ದಾರೆ. ಸಾರ್ವಜನಿಕ ಹಿತಾಸಕ್ತಿಯಿಂದ ಕಾಗೆಗಳನ್ನು ನಿರ್ಮೂಲನೆ ಮಾಡಲು ನಿರ್ಧರಿಸಲಾಗಿದೆ ಎಂದು ಕೀನ್ಯಾ ವನ್ಯಜೀವಿ ಪ್ರಾಧಿಕಾರ ತಿಳಿಸಿದೆ.

ಯಾರಿಗೆ ಅಪಾಯ?

ಕೀನ್ಯಾದಲ್ಲಿ ಕಾಗೆಗಳಿಂದಾಗಿ ಅನೇಕ ಪಕ್ಷಿಗಳು ಅಳಿವಿನಂಚಿನಲ್ಲಿವೆ. ಅಂತಹ ಪಕ್ಷಿಗಳನ್ನು ಕಾಗೆಗಳು ನಿರಂತರವಾಗಿ ಬೇಟೆಯಾಡುತ್ತಿವೆ ಎಂದು ವನ್ಯಜೀವಿ ಪ್ರಾಧಿಕಾರ ತಿಳಿಸಿದೆ.

ಇದನ್ನೂ ಓದಿ: Norway Tour: ಜಗತ್ತಿನ ಕೊನೆಯ ದೇಶ ಇದು! ಇಲ್ಲಿ 6 ತಿಂಗಳು ಹಗಲು, 6 ತಿಂಗಳು ರಾತ್ರಿ!

ಈ ಕಾಗೆಗಳು ಸಣ್ಣ ಸ್ಥಳೀಯ ಪಕ್ಷಿಗಳ ಗೂಡುಗಳನ್ನು ನಾಶಪಡಿಸುತ್ತವೆ ಮತ್ತು ಅವುಗಳ ಮೊಟ್ಟೆಗಳು ಮತ್ತು ಮರಿಗಳನ್ನು ತಿನ್ನುತ್ತವೆ, ಇದರಿಂದಾಗಿ ಅನೇಕ ಪಕ್ಷಿ ಪ್ರಭೇದಗಳು ಕಡಿಮೆಯಾಗುತ್ತಿವೆ ಎಂದು ಕೀನ್ಯಾದ ಪಕ್ಷಿವಿಜ್ಞಾನಿ ಕಾಲಿನ್ ಜಾಕ್ಸನ್ ತಿಳಿಸಿದ್ದಾರೆ.

ಸ್ಥಳೀಯ ಪಕ್ಷಿಗಳ ಕೊರತೆಯಿಂದ ಪರಿಸರ ಸಂರಕ್ಷಣೆಗೆ ತೊಂದರೆಯಾಗಿದೆ. ಕಾಗೆಗಳ ಹೆಚ್ಚುತ್ತಿರುವ ಸಂಖ್ಯೆಯ ಪರಿಣಾಮವು ಅಂತಹ ಪಕ್ಷಿಗಳ ಮೇಲೆ ಮಾತ್ರವಲ್ಲ ಇಡೀ ಪರಿಸರ ವ್ಯವಸ್ಥೆಯು ಪರಿಣಾಮ ಬೀರುತ್ತಿದೆ ಎಂದು ಕೀನ್ಯಾ ಹೇಳಿದೆ.

Continue Reading

ಬಳ್ಳಾರಿ

Ballari News: ಚೇಳ್ಳಗುರ್ಕಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Ballari News: ಬಳ್ಳಾರಿ ತಾಲೂಕಿನ ಚೇಳ್ಳಗುರ್ಕಿ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಆಂಧ್ರಪ್ರದೇಶದ ಹ್ಯಾಂಡ್ಸ್‌ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ವೆಂಕಟರೆಡ್ಡಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು. ಗ್ರಾಮೀಣರಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.

VISTARANEWS.COM


on

World Environment Day programme in Chellagurki
Koo

ಬಳ್ಳಾರಿ: ತಾಲೂಕಿನ ಚೇಳ್ಳಗುರ್ಕಿ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ (World Environment Day) ಕಾರ್ಯಕ್ರಮವನ್ನು (Ballari News) ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಾಧ್ಯಾಪಕ ನಾರಾಯಣಸ್ವಾಮಿ, ಪರಿಸರ ಹಾಗೂ ನೀರಿನ ಸದ್ಬಳಕೆ ಕುರಿತು ತಿಳಿಸಿದರು.

ಇದನ್ನೂ ಓದಿ: Ballari News: ಬಳ್ಳಾರಿಯಲ್ಲಿ ಅಕ್ರಮ ಗಾಂಜಾ ಸಂಗ್ರಹ; ಇಬ್ಬರು ಆರೋಪಿಗಳ ಬಂಧನ

ಆಂಧ್ರಪ್ರದೇಶದ ಹ್ಯಾಂಡ್ಸ್‌ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ವೆಂಕಟರೆಡ್ಡಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು. ಗ್ರಾಮೀಣರಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.

ಹ್ಯಾಂಡ್ಸ್‌ ಸಂಸ್ಥೆಯ ಡಿ. ಗಂಗಾಧರ ಮಾತನಾಡಿ, ಪರಿಸರ ನಾಶದಿಂದಾಗುತ್ತಿರುವ ಅಪಾಯಗಳು ಹಾಗೂ ಜನಜೀವನದ ಮೇಲಿನ ಪರಿಣಾಮಗಳು ಕುರಿತು ತಿಳಿಸಿದರು. ತೋಟಗಾರಿಕೆ ಅಧಿಕಾರಿ ವಿನಯ್ ಕುಮಾರ, ಇಲಾಖೆಯ ಯೋಜನೆಗಳ ಕುರಿತು ತಿಳಿಸಿದರು.

ಇದನ್ನೂ ಓದಿ: KMH CUP: ʼಕೆಎಂಎಚ್‌ ಕಪ್‌ʼ ಕ್ರಿಕೆಟ್‌ಗೆ ನಟಿ ಭಾವನಾ ರಾಮಣ್ಣ ರಾಯಭಾರಿ

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಸಿ.ಎಂ. ಬಸವರಾಜ ಸ್ವಾಮಿ, ಶಿವಕುಮಾರ ರೆಡ್ಡಿ, ನಾರಾಯಣ, ಟಿ. ತಿಮ್ಮನಗೌಡ, ವೈ.ಎಸ್. ಎರ್ರೆಣ್ಣ, ದೊಡ್ಡಬಸವನಗೌಡ, ಶಶಿಧರಗೌಡ, ವಿ. ಎರಿಸ್ವಾಮಿ, ಟಿ. ಎರಿಸ್ವಾಮಿ ಹಾಗೂ ದ್ರಾಕ್ಷಾಯಿಣಮ್ಮ ಉಪಸ್ಥಿತರಿದ್ದರು.

Continue Reading

ಕೊಡಗು

Kodagu News: ಬಿಸ್ಲೆರಿಯಿಂದ ಕೊಡಗಿನಲ್ಲಿ ಸ್ವಚ್ಛತಾ ಅಭಿಯಾನ

Kodagu News: ಕೊಡಗು ಜಿಲ್ಲೆಯ ಮಲ್ದರೆಯಲ್ಲಿ ಅರಣ್ಯ ಇಲಾಖೆಯು ಬಿಸ್ಲೆರಿ ಇಂಟರ್‌ನ್ಯಾಷನಲ್ ಸಹಯೋಗದಲ್ಲಿ ಬೃಹತ್‌ ಅರಣ್ಯ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ಅಭಿಯಾನದಲ್ಲಿ ಕೊಡಗು ಜಿಲ್ಲೆಯ ಮಲ್ದರೆಯಿಂದ ಮುತ್ತೂರು ಅಭಯಾರಣ್ಯದವರೆಗೆ ಸುಮಾರು 10 ಕಿ.ಮೀ. ವರೆಗೆ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಈ ವೇಳೆ ತಂಡವು ಒಟ್ಟು 810 ಕಿಲೋ ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಜೈವಿಕವಾಗಿ ವಿಘಟನೆಯಾಗದ ತ್ಯಾಜ್ಯವನ್ನು ಸಂಗ್ರಹಿಸಿದೆ.

VISTARANEWS.COM


on

forest cleaning campaign in Maldare of Kodagu district
Koo

ಕೊಡಗು: ಜಿಲ್ಲೆಯ ಮಲ್ದರೆಯಲ್ಲಿ ಅರಣ್ಯ ಇಲಾಖೆಯು ಬಿಸ್ಲೆರಿ ಇಂಟರ್‌ನ್ಯಾಷನಲ್ ಸಹಯೋಗದಲ್ಲಿ ಬೃಹತ್‌ ಅರಣ್ಯ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು (Kodagu News) ಹಮ್ಮಿಕೊಳ್ಳಲಾಗಿತ್ತು. ಸ್ವಚ್ಛತಾ ಅಭಿಯಾನದಲ್ಲಿ ಕೊಡಗು ಜಿಲ್ಲೆಯ ಮಲ್ದರೆಯಿಂದ ಮುತ್ತೂರು ಅಭಯಾರಣ್ಯದವರೆಗೆ ಸುಮಾರು 10 ಕಿ.ಮೀ. ವರೆಗೆ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಈ ವೇಳೆ ತಂಡವು ಒಟ್ಟು 810 ಕಿಲೋ ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಜೈವಿಕವಾಗಿ ವಿಘಟನೆಯಾಗದ ತ್ಯಾಜ್ಯವನ್ನು ಸಂಗ್ರಹಿಸಿದೆ.

ಅಷ್ಟೇ ಅಲ್ಲ, ಸೈನೇಜ್ ಬೋರ್ಡ್‌ಗಳನ್ನು ನೆಟ್ಟು, ಸರಿಯಾದ ತ್ಯಾಜ್ಯ ವಿಲೇವಾರಿ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಿದೆ. ಜತೆಗೆ ಮರುಬಳಕೆಯನ್ನು ಉತ್ತೇಜಿಸಿ, ಕಸ ಎಸೆಯುವುದನ್ನು ತಪ್ಪಿಸಲು ಒಮ್ಮೆ ಬಳಸಿ ಎಸೆಯುವ ಪ್ಲಾಸ್ಟಿಕ್‌ನ ಪರಿಣಾಮ ಮತ್ತು ಬಳಸಿದ ಪ್ಲಾಸ್ಟಿಕ್ ಅನ್ನು ಸಂಗ್ರಹಿಸುವ ವಿಧಾನದ ಬಗ್ಗೆ ತಿಳಿವಳಿಕೆಯನ್ನೂ ಮೂಡಿಸಲು ಯತ್ನಿಸಿದೆ.

ಇದನ್ನೂ ಓದಿ: Share Market : ಷೇರು ಮಾರುಕಟ್ಟೆಯಲ್ಲಿ ನೂತನ ದಾಖಲೆ; ಮೊದಲ ಬಾರಿಗೆ 78,000 ಮಟ್ಟವನ್ನು ದಾಟಿದ ಸೆನ್ಸೆಕ್ಸ್

ಈ ಕುರಿತು ರಾಜ್ಯ ಅರಣ್ಯ ಇಲಾಖೆಯ ಟೈಗರ್ ರಿಸರ್ವ್‌ ಫಾರೆಸ್ಟ್‌ನ ಡಿಆರ್‌ಎಫ್‌ಒ ಚಿನ್ನವಿಶೇರಾ ಮಾತನಾಡಿ, “ಪರಿಸರ ಸುಸ್ಥಿರತೆಯನ್ನು ಖಾತ್ರಿ ಪಡಿಸುವ ನಿಟ್ಟಿನಲ್ಲಿ ಈ ಪಾಲುದಾರಿಕೆ ಅತ್ಯಂತ ಮಹತ್ವದ್ದಾಗಿದೆ. ಬಾಟಲ್ಸ್ ಫಾರ್ ಚೇಂಜ್‌ ಎಂಬ ಕಾರ್ಯಕ್ರಮದ ಅಡಿಯಲ್ಲಿ ಮರುಬಳಕೆ ಪ್ರಯತ್ನದಲ್ಲಿ ಬಿಸ್ಲೆರಿ ಇಂಟರ್‌ನ್ಯಾಷನಲ್‌ ಸಹಕಾರ ಮತ್ತು ಸಕ್ರಿಯ ತೊಡಗಿಸಿಕೊಳ್ಳುವಿಕೆಯನ್ನು ನಾವು ಮೆಚ್ಚುತ್ತೇವೆ. ಕರ್ನಾಟಕಕ್ಕೆ ಪರಿಸರ ಸ್ನೇಹಿ ಭವಿಷ್ಯವನ್ನು ರೂಪಿಸುವುದಕ್ಕೆ ನಾವು ನಿರಂತರವಾಗಿ ಶ್ರಮಿಸುತ್ತೇವೆ ಎಂದು ತಿಳಿಸಿದ್ದಾರೆ.

ಸಹಭಾಗಿತ್ವದ ಕುರಿತು ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈ.ಲಿ.ನ ಸುಸ್ಥಿರತೆ ಮತ್ತು ಕಾರ್ಪೊರೇಟ್ ವ್ಯವಹಾರಗಳ ನಿರ್ದೇಶಕ ಕೆ.ಗಣೇಶ್ ಮಾತನಾಡಿ, ನಮ್ಮ ಬಾಟಲ್ಸ್ ಫಾರ್ ಚೇಂಜ್ ಕಾರ್ಯಕ್ರಮದ ಮೂಲಕ ಪರಿಸರ ಸಂರಕ್ಷಣೆಯನ್ನು ಉತ್ತೇಜಿಸಲು ಕರ್ನಾಟಕ ಅರಣ್ಯ ಇಲಾಖೆಯ ಜತೆಗೆ ಸಹಭಾಗಿತ್ವ ವಹಿಸಿರುವುದಾಗಿ ಘೋಷಿಸುವುದು ನಮಗೆ ಖುಷಿಯ ಸಂಗತಿಯಾಗಿದೆ. ಧನಾತ್ಮಕ ಬದಲಾವಣೆಯನ್ನು ಪ್ರೋತ್ಸಾಹಿಸಲು ಮತ್ತು ಸುಸ್ಥಿರ ಭವಿಷ್ಯವನ್ನು ಪೋಷಿಸಲು ನಮಗೆ ಈ ಪಾಲುದಾರಿಕೆಯು ಪೂರಕವಾಗಿರಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Transfer Guidelines: ಸರ್ಕಾರಿ ನೌಕರರ ವರ್ಗಾವಣೆಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ; ಜು.9ರವರೆಗೆ ಅವಕಾಶ

ಸುಸ್ಥಿರ ಅಭಿವೃದ್ಧಿ ಉಪಕ್ರಮಗಳ ಮೂಲಕ ಸಮುದಾಯಗಳ ಮೇಲೆ ಧನಾತ್ಮಕ ಮತ್ತು ದೀರ್ಘಕಾಲೀನ ಪರಿಣಾಮವನ್ನು ಉಂಟು ಮಾಡುವ ಗುರಿ ಹೊಂದಿರುವ ಲಾಭೋದ್ದೇಶ ರಹಿತ ಸಂಸ್ಥೆ ಸಂಪ್ರಭಾವ್‌ ಫೌಂಡೇಶನ್‌ ಪರಿಣಾಮಕಾರಿಯಾಗಿ ತ್ಯಾಜ್ಯವನ್ನು ನಿರ್ವಹಿಸುವುದು ಮತ್ತು ಸಾಮಗ್ರಿಗಳನ್ನು ಮರುಬಳಕೆ ಮಾಡುವ ವಿಷಯದಲ್ಲಿ ಸಮುದಾಯಗಳಲ್ಲಿ ಜಾಗೃತಿ ಮೂಡಿಸುವ ಗುರಿ ಹೊಂದಿದೆ. ಈ ಸಂಸ್ಥೆಯು ಪಾಲುದಾರನಾಗಿದೆ. ಈ ಸಂಸ್ಥೆಯು ಕೊಡಗಿನ ಅಭ್ಯತ್‌ಮಂಗಲ ಮೂಲದ್ದಾಗಿದೆ.

Continue Reading

ಕ್ರೈಂ

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

Hunters Arrest :ರಾಜ್ಯದ ಹಲವೆಡೆ ಬೇಟೆಗಾರರ ಬೆನ್ನತ್ತಿರುವ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕಾಡು ಹಂದಿ ಹಾಗೂ ಬಾಗಲಕೋಟೆಯಲ್ಲಿ ಕೃಷ್ಣ ಮೃಗ ಬೇಟೆಯಾಡುತ್ತಿದ್ದವರನ್ನು ಬಂಧಿಸಲಾಗಿದೆ. ಇತ್ತ ಶಿವಮೊಗ್ಗದಲ್ಲಿ ಬೇಟೆಗಾರರ ಕೃತ್ಯಕ್ಕೆ ಕಾಡು ಕೋಣಗಳು ಬಲಿಯಾಗಿವೆ.

VISTARANEWS.COM


on

By

Hunters Arrest
Koo

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಾಡು ಕೋಣಗಳ ಮಾರಣಹೋಮ ಹೋಗಿದೆ. ದುಷ್ಕರ್ಮಿಗಳು (Hunters Arrest) ನಾಲ್ಕೈದು ಕಾಡು ಕೋಣಗಳನ್ನು ಬೇಟೆಯಾಡಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಅಕ್ರಮ ಬಂದೂಕು ಬಳಸಿ ಕಾಡುಕೋಣಗಳ ಹತ್ಯೆ (Bison) ಮಾಡಲಾಗಿದೆ. ಕಾಡುಕೋಣಗಳ ಕಳೆಬರ ಪತ್ತೆಯಾಗಿದೆ.

ಸ್ಥಳಕ್ಕೆ ಸಾಗರ ಡಿಎಫ್‌ಓ ಸಂತೋಷ್ ಕೆಂಚಣ್ಣನವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡುಕೋಣದ ಕಳೇಬರಗಳನ್ನು ಪರೀಕ್ಷೆಗಾಗಿ ಲ್ಯಾಬ್‌ಗೆ ಕಳುಹಿಸಿದ್ದಾರೆ. ಆರೋಪಿಗಳು ಕಾಡುಕೋಣಗಳ ಮಾಂಸಕಾಗಿ ಬೇಟೆಯಾಡಿರುವ ಸಾಧ್ಯತೆ ಇದೆ. ಸದ್ಯ ಅರಣ್ಯಾಧಿಕಾರಿಗಳು ಕಾಡುಕೋಣಗಳ ಹತ್ಯೆ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಕಾಡು ಹಂದಿಗಳ ಬೇಟೆ

ಚಿಕ್ಕಬಳ್ಳಾಪುರದಲ್ಲಿ ಕಾಡು ಹಂದಿಗಳ ಬೇಟೆಯಾಡಿ ಸಾಗಾಟ ಮಾಡುತ್ತಿದ್ದ ಜಾಲವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಬೀಚಗಾನಹಳ್ಳಿ ಮಿಟ್ಟೇಮರಿ ಅರಣ್ಯದಲ್ಲಿ ಕಾಡು ಹಂದಿಗಳ ಬೇಟೆಯಾಡುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ ಮಾಡಿದ್ದಾರೆ.

ದಾಳಿ ವೇಳೆ ಸಿಕ್ಕಿದ ಆರು ಕಾಡು ಹಂದಿಗಳನ್ನು ರಕ್ಷಣೆ ಮಾಡಲಾಗಿದೆ. ದಾಳಿಯಲ್ಲಿ ಇಬ್ಬರು ಸಿಕ್ಕಿ ಬಿದ್ದಿದ್ದು, ನಾಲ್ವರು ಪರಾರಿ ಆಗಿದ್ದಾರೆ. ಒಂದು ಬುಲೇರೋ ವಾಹನ ಸೀಸ್ ಮಾಡಿದ್ದಾರೆ. ಬಾಗೇಪಲ್ಲಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Hunters Arrest

ಇದನ್ನೂ ಓದಿ: Road Accident : ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

ಕೃಷ್ಣ ಮೃಗ ಬೇಟೆಯಾಡುತ್ತಿದ್ದ 7 ಜನರ ಬಂಧನ

ಬಾಗಲಕೋಟೆಯ ಜಮಖಂಡಿ ಹೊರ ವಲಯದ ಅರಣ್ಯ ಪ್ರದೇಶದಲ್ಲಿ ಕೃಷ್ಣ ಮೃಗ ಬೇಟೆಯಾಡುತ್ತಿದ್ದ 7 ಜನರನ್ನು ಬಂಧಿಸಲಾಗಿದೆ. ರಾಯಭಾಗ ತಾಲೂಕಿನ ಕಡಕಬಾವಿ ಗ್ರಾಮದ ಸಿದ್ದಪ್ಪ ಪಿಡಾಯಿ (23), ಬ್ಯಾಕೋಡ ಗ್ರಾಮದ ಸುರೇಶ್ ಪಕಾಂಡೆ (21), ಚೇತನ್ ಬಿದರಿ (24) , ಕಂಕನವಾಡಿ ಗ್ರಾಮದ ನಿಂಗಪ್ಪ ಪಡತಾರೆ (24) ಹಾಗೂ ದೇವರಪಟ್ಟಿ ಗ್ರಾಮದ ಪ್ರಜ್ವಲ್ ಮೆಳವಂಕಿ (18), ರಬಕವಿ ಬನಹಟ್ಟಿ ತಾಲ್ಲೂಕಿನ ಹಳಿಂಗಳಿ ಗ್ರಾಮದ ಶಬ್ಬಿರ್ ಗುಡ್ಡದಮನಿ (25), ರಮಜಾನ್‌ಸಾಬ್ ಅಲಸ್ (25) ಬಂಧಿತ ಆರೋಪಿಗಳು.

Hunters Arrest

ಬಂಧಿತರಿಂದ 13.5 ಕೆಜಿ ಹಂದಿ ಮಾಂಸ, 4 ಮೊಬೈಲ್, ಕಾರು, ನಾಲ್ಕು ಬೇಟೆ ನಾಯಿಯನ್ನು ವಶಕ್ಕೆ ಪಡೆಯಲಾಗಿದೆ. ಡಿಸಿಎಫ್‌ಸಿ ಶ್ರೀಧರ್ ನೇತೃತ್ವದಲ್ಲಿ ಎಸಿಎಫ್ ರಾಜೇಶ್ವರಿ, ಆರ್‌ಎಫ್‌ಒ ಪವನ್ ಕುರನಿಂಗ ತಂಡ ಕಾರ್ಯಾಚರಣೆ ನಡೆಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Virat Kohli
ಪ್ರಮುಖ ಸುದ್ದಿ10 mins ago

Virat Kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿರಾಟ್​​ ಕೊಹ್ಲಿ

T20 World Cup
ಪ್ರಮುಖ ಸುದ್ದಿ37 mins ago

T20 World Cup 2024 : 13 ವರ್ಷಗಳ ಕಾಯುವಿಕೆ ಅಂತ್ಯ, ಕೊನೆಗೂ ವಿಶ್ವ ಕಪ್​ ಗೆದ್ದ ಭಾರತ

Progress review meeting at Karwar ZP office
ಉತ್ತರ ಕನ್ನಡ53 mins ago

Uttara Kannada News: ಕೂಸಿನ ಮನೆ ಯೋಜನೆ ಯಶಸ್ವಿಗೊಳಿಸಿ: ಉಮಾ ಮಹಾದೇವನ್

Tupolev fighter jet INS Chapel warship open for public viewing
ಉತ್ತರ ಕನ್ನಡ56 mins ago

Uttara Kannada News: ಟುಪಲೇವ್ ಯುದ್ಧ ವಿಮಾನ, ಐ.ಎನ್.ಎಸ್.ಚಾಪೆಲ್ ಯುದ್ಧನೌಕೆ ಸಾರ್ವಜನಿಕ ವೀಕ್ಷಣೆಗೆ ಮುಕ್ತ

narendra modi dk shivakumar siddaramaiah
ಪ್ರಮುಖ ಸುದ್ದಿ1 hour ago

DK Shivakumar: ರಾಜ್ಯಕ್ಕೊಂದು ಗಿಫ್ಟ್‌ ಸಿಟಿಗೆ ಪ್ರಧಾನಿ ಮುಂದೆ ಬೇಡಿಕೆ: ಡಿಸಿಎಂ ಡಿ‌.ಕೆ.ಶಿವಕುಮಾರ್

T20 World Cup
ಪ್ರಮುಖ ಸುದ್ದಿ2 hours ago

T20 World Cup : ಘರ್ಜಿಸಿದ ಕಿಂಗ್ ಕೊಹ್ಲಿ, 176 ರನ್ ಬಾರಿಸಿದ ಭಾರತ, ಇದು ವಿಶ್ವ ಕಪ್​ ಫೈನಲ್​ನಲ್ಲಿ ಗರಿಷ್ಠ ಸ್ಕೋರ್​

cm siddaramaiah T20 World Cup Final
ಪ್ರಮುಖ ಸುದ್ದಿ2 hours ago

T20 World Cup Final: ವಿಮಾನ ನಿಲ್ದಾಣದಲ್ಲೂ ಸಿದ್ದರಾಮಯ್ಯಗೆ ವಿಶ್ವಕಪ್‌ ಕ್ರಿಕೆಟ್‌ ಧ್ಯಾನ!

Hardik Pandya
ಪ್ರಮುಖ ಸುದ್ದಿ3 hours ago

Hardik Pandya : ಕಪಿಲ್​ ದೇವ್​ ರೀತಿ ಮೀಸೆ ಬಿಟ್ಟುಕೊಂಡು ಫೈನಲ್ ಪಂದ್ಯ ಆಡಲು ಬಂದ ಹಾರ್ದಿಕ್ ಪಾಂಡ್ಯ

CM Siddaramaiah pm narendra modi
ಪ್ರಮುಖ ಸುದ್ದಿ3 hours ago

Siddaramaiah: ಮೇಕೆದಾಟು ಕೂಡಲೇ ಕ್ಲಿಯರ್‌ ಮಾಡಿ: ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Indira Gandhi's Emergency
ದೇಶ3 hours ago

Lalu Prasad Yadav: “ಇಂದಿರಾ ಗಾಂಧಿ ನಮ್ಮನ್ನು ಜೈಲಿಗಟ್ಟಿದರು, ಆದರೆ…” ಎಮರ್ಜೆನ್ಸಿ ಬಗ್ಗೆ ಲಾಲೂ ಹೇಳಿದ್ದೇನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ13 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ1 day ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌