T20 World Cup 2024: ಐನಾಕ್ಸ್‌ ದೈತ್ಯ ಪರದೆಯಲ್ಲೂ ಮೂಡಿಬರಲಿದೆ ಭಾರತದ ಪಂದ್ಯಗಳು - Vistara News

ಕ್ರೀಡೆ

T20 World Cup 2024: ಐನಾಕ್ಸ್‌ ದೈತ್ಯ ಪರದೆಯಲ್ಲೂ ಮೂಡಿಬರಲಿದೆ ಭಾರತದ ಪಂದ್ಯಗಳು

T20 World Cup 2024: ಭಾರತದ ಲೀಗ್​ ಪಂದ್ಯಗಳು ಐನಾಕ್ಸ್‌(INOX), ಪಿವಿಆರ್(PVR)​, ಸಿನೆಪೊಲಿಸ್(CONEPOLIS), ಮಿರಾಜ್​ ಸಿನೆಮಾ(MIRAJ CENIM)ದ ಬಿಗ್‌ ಸ್ಕ್ರೀನ್‌ಗಳಲ್ಲಿ ಮೂಡಿಬರಲಿವೆ. ನವದೆಹಲಿ, ನೋಯ್ಡಾ, ಫ‌ರೀದಾಬಾದ್‌, ಗುರುಗ್ರಾಮ್‌, ಮುಂಬಯಿ, ಬೆಂಗಳೂರು, ಪುಣೆ, ಕೋಲ್ಕತಾ, ಜೈಪುರ, ಇಂದೋರ್‌, ಸೂರತ್‌, ವಡೋದರ ಸೇರಿ ದೇಶದ ಪ್ರಮುಖ ನಗರದಲ್ಲಿ ಈ ವ್ಯವಸ್ಥೆ ಇದೆ

VISTARANEWS.COM


on

T20 World Cup 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಭಾರತದ ಪಂದ್ಯಗಳನ್ನು ಕ್ರಿಕೆಟ್​ ಅಭಿಮಾನಿಗಳು ಮೊಬೈಲ್​ ಮತ್ತು ಟಿವಿ ಮೂಲಕ ಮಾತ್ರವಲ್ಲದೆ ಸಿನೆಮಾ ಥಿಯೇಟರ್​ಗಳಲ್ಲಿಯೂ ಕಣ್ತುಂಬಿಕೊಳ್ಳಬಹುದು. ಹೌದು, ಭಾರತದ ಲೀಗ್​ ಪಂದ್ಯಗಳು ಐನಾಕ್ಸ್‌(INOX), ಪಿವಿಆರ್(PVR)​, ಸಿನೆಪೊಲಿಸ್(CONEPOLIS), ಮಿರಾಜ್​ ಸಿನೆಮಾ(MIRAJ CENIM)ದ ಬಿಗ್‌ ಸ್ಕ್ರೀನ್‌ಗಳಲ್ಲಿ ಮೂಡಿಬರಲಿವೆ. ನವದೆಹಲಿ, ನೋಯ್ಡಾ, ಫ‌ರೀದಾಬಾದ್‌, ಗುರುಗ್ರಾಮ್‌, ಮುಂಬಯಿ, ಬೆಂಗಳೂರು, ಪುಣೆ, ಕೋಲ್ಕತಾ, ಜೈಪುರ, ಇಂದೋರ್‌, ಸೂರತ್‌, ವಡೋದರ ಸೇರಿ ದೇಶದ ಪ್ರಮುಖ ನಗರದಲ್ಲಿ ಈ ವ್ಯವಸ್ಥೆ ಇದೆ.

ಜೂನ್​ 9ರಂದು ನಡೆಯುವ ಹೈವೋಲ್ಟೇಜ್ ಪಂದ್ಯವಾದ ಭಾರತ ಮತ್ತು ಪಾಕ್​ ಪಂದ್ಯಕ್ಕೆ ಭಾರೀ ಬೇಡಿಕೆ ಇರುವ ಸಾಧ್ಯತೆ ಇದೆ. ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್​ 5ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಲೀಗ್​ನಲ್ಲಿ ಭಾರತ ಒಟ್ಟು 4 ಪಂದ್ಯಗಳನ್ನು ಆಡಲಿದೆ. ಇಲ್ಲಿ ಅಗ್ರ 2ರೊಳಗೆ ಸ್ಥಾನ ಪಡೆದರೆ ಸೂಪರ್​ 8 ಹಂತಕ್ಕೇರಲಿದೆ.


ಮೊಬೈಲ್​ನಲ್ಲಿ ಉಚಿತ ಪ್ರಸಾರ


ಏಕದಿನ ವಿಶ್ವಕಪ್​ ಟೂರ್ನಿಯಂತೆ ಈ ಬಾರಿಯೂ ಟಿ20 ವಿಶ್ವಕಪ್​ ಪಂದ್ಯಾವಳಿಗಳನ್ನು ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಉಚಿತವಾಗಿ ನೋಡಬಹುದಾಗಿದೆ. ​ಡಿಸ್ನಿ + ಹಾಟ್‌ಸ್ಟಾರ್(Disney+ Hotstar) ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರಿಗೆ ಈ ಅವಕಾಶ ಕಲ್ಪಿಸಿದೆ. OTT ಪ್ಲಾಟ್‌ಫಾರ್ಮ್‌ನಲ್ಲಿ ಎಲ್ಲ ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಲು ಸಾಧ್ಯವಾಗುತ್ತದೆ.

ಭಾರತದ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8ಗಂಟೆಗೆ ಆರಂಭವಾಗಲಿದೆ. ಇತರ ತಂಡಗಳ ಕೆಲವು ಪಂದ್ಯಗಳು ಬೆಳಗ್ಗೆ 6 ಗಂಟೆಗೆ ಪ್ರಸಾರಗೊಳ್ಳಲಿದೆ. ಡಿಸ್ನಿ+ ಹಾಟ್‌ಸ್ಟಾರ್ ಇಂಡಿಯಾದ ಮುಖ್ಯಸ್ಥ ಸಜಿತ್ ಶಿವಾನಂದನ್, “ಐಸಿಸಿ ಪುರುಷರ ಟಿ20 ವಿಶ್ವಕಪ್ 2024 ಅನ್ನು ಮೊಬೈಲ್‌ನಲ್ಲಿ ಉಚಿತವಾಗಿ ನೀಡುವ ಮೂಲಕ, ನಾವು ಕ್ರಿಕೆಟ್ ಆಟವನ್ನು ಬೆಳೆಸುವ, ದೇಶಾದ್ಯಂತ ಹೆಚ್ಚಿನ ಪ್ರೇಕ್ಷಕರನ್ನು ತಲುಪುವ ಗುರಿಯನ್ನು ಹೊಂದಿದ್ದೇವೆ” ಎಂದು ಹೇಳಿದ್ದಾರೆ.

ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಸಮಯದಲ್ಲಿ, ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ಮೊಬೈಲ್‌ನಲ್ಲಿ ಉಚಿತವಾಗಿ ಸ್ಟ್ರೀಮ್ ಮಾಡಲಾಯಿತು. ಇದು ಏಕಕಾಲದಲ್ಲಿ ಅತ್ಯಧಿಕ ವೀಕ್ಷಣೆ ಕಂಡ 5 ಬಾರಿಯ ದಾಖಲೆಗಳನ್ನು ಮುರಿದಿತ್ತು. ಟೀಮ್ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್‌ನಲ್ಲಿ ಪಂದ್ಯ ಏಕಕಾಲಕ್ಕೆ 5.9 ಕೋಟಿ ವೀಕ್ಷಣೆ ಕಂಡಿತ್ತು. ಈ ದಾಖಲೆ ಟಿ20 ವಿಶ್ವಕಪ್​ನಲ್ಲಿ ಪತನಗೊಳ್ಳುವ ಸಾಧ್ಯತೆ ಇದೆ.

ಈ ಬಾರಿ ಟೂರ್ನಿಯಲ್ಲಿ ಗರಿಷ್ಠ 20 ತಂಡಗಳು ಕಣಕ್ಕಿಳಿಯಲಿವೆ. 2022ರ ಆವೃತ್ತಿಯಲ್ಲಿ 12 ತಂಡಗಳು ಭಾಗಿಯಾಗಿದ್ದವು. ಟೂರ್ನಿಯಲ್ಲೂ ವಿಭಿನ್ನ ಸ್ವರೂಪವಿದೆ. 20 ತಂಡಗಳನ್ನು ತಲಾ ಐದು ತಂಡಗಳಂತೆ ನಾಲ್ಕು ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಗುಂಪು ವಿಭಾಗದಲ್ಲಿ ಪ್ರತಿ ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಆಡಲಿವೆ. ಪ್ರತಿ ಗುಂಪಿನಿಂದ ತಲಾ ಎರಡು ತಂಡಗಳು ಸೂಪರ್ ಎಂಟರ ಹಂತಕ್ಕೆ ತೇರ್ಗಡೆ ಪಡೆಯಲಿವೆ. ಅಲ್ಲೂ ತಲಾ ನಾಲ್ಕು ತಂಡಗಳ ಎರಡು ಗುಂಪುಗಳು ಇದ್ದು, ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಲಗ್ಗೆ ಇಡಲಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

T20 World Cup 2024: ʼವಿಶ್ವʼ ಗೆದ್ದ ನಾಯಕ ರೋಹಿತ್‌, ಕೋಚ್‌ ದ್ರಾವಿಡ್‌, ಕೊಹ್ಲಿಗೆ ಕರೆ ಮಾಡಿ ಅಭಿನಂದಿಸಿದ ಮೋದಿ

T20 World Cup 2024: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಎಲ್ಲೆಡೆಯಿಂದ ಅಭಿನಂದನಾ ಪ್ರವಾಹವೇ ಹರಿದು ಬರುತ್ತಿದೆ. ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಮುಳುಗಿದ್ದಾರೆ. ಇತ್ತ ಟೀಮ್‌ ಇಂಡಿಯಾ ಜಯ ಗಳಿಸುತ್ತಿದ್ದಂತೆ ಅಭಿನಂದನೆ ತಿಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಂಡದ ಸದಸ್ಯರಿಗೆ ಕರೆ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

VISTARANEWS.COM


on

T20 World Cup 2024
Koo

ನವದೆಹಲಿ: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಎಲ್ಲೆಡೆಯಿಂದ ಅಭಿನಂದನಾ ಪ್ರವಾಹವೇ ಹರಿದು ಬರುತ್ತಿದೆ. ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಮುಳುಗಿದ್ದಾರೆ. ಇತ್ತ ಟೀಮ್‌ ಇಂಡಿಯಾ ಜಯ ಗಳಿಸುತ್ತಿದ್ದಂತೆ ಅಭಿನಂದನೆ ತಿಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ತಂಡದ ಸದಸ್ಯರಿಗೆ ಕರೆ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

ಮೋದಿ ಹೇಳಿದ್ದೇನು?

ಮೋದಿ ಅವರು ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಮಾತನಾಡಿ, ಅದ್ಭುತ ನಾಯಕತ್ವಕ್ಕಾಗಿ ಅಭಿನಂದನೆ ತಿಳಿಸಿದರು. ಅವರ ಟಿ20 ವೃತ್ತಿ ಜೀವನವನ್ನು ಶ್ಲಾಘಿಸಿದರು. ಜತೆಗೆ ಪ್ರಧಾನಿ ಫೈನಲ್‌ ಪಂದ್ಯದಲ್ಲಿ ಭಾರತವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ಸಹಾಯ ಮಾಡಿದ ವಿರಾಟ್ ಕೊಹ್ಲಿ (76 ರನ್) ಅವರ ಆಟವನ್ನೂ ಮೆಚ್ಚಿಕೊಂಡರು. ಜತೆಗೆ ಭಾರತೀಯ ಕ್ರಿಕೆಟ್‌ಗೆ ಕೊಹ್ಲಿ ನೀಡಿದ ಕೊಡುಗೆಯನ್ನೂ ನೆನಪಿಸಿಕೊಂಡರು.

ಜತೆಗೆ ಭಾರತೀಯ ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೂ ಪ್ರಧಾನಿ ಮೆಚ್ಚುಗೆ ಸೂಚಿಸಿದರು. ಮಾತ್ರವಲ್ಲ ಅದ್ಭುತ ಕ್ಯಾಚ್‌ ಹಿಡಿದು ಪಂದ್ಯದ ಗತಿಯನ್ನೇ ಬದಲಾಯಿಸಿದ ಸೂರ್ಯ ಕುಮಾರ್ ಯಾದವ್ ಅವರನ್ನು ಉಲ್ಲೇಖಿಸಲು ಪ್ರಧಾನಿ ಮರೆಯಲಿಲ್ಲ.

ರಾಹುಲ್‌ ದ್ರಾವಿಡ್‌ಗೆ ಧನ್ಯವಾದ ಹೇಳಿದ ಮೋದಿ

ಗೆಲುವಿಗಾಗಿ ಮುಖ್ಯ ಕೊಡುಗೆ ನೀಡಿದ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಮೋದಿ ಧನ್ಯವಾದ ಅರ್ಪಿಸಿದರು. ಶನಿವಾರ (ಜೂನ್ 29) ತಡರಾತ್ರಿ ಭಾರತ ಪಂದ್ಯವನ್ನು ಗೆದ್ದ ನಂತರ, ಪ್ರಧಾನಿ ‘ಮೆನ್ ಇನ್ ಬ್ಲೂ’ಗೆ ಅಭಿನಂದನಾ ವಿಡಿಯೊ ಸಂದೇಶವನ್ನು ಪೋಸ್ಟ್ ಮಾಡಿ ಭಾರತೀಯ ಕ್ರಿಕೆಟಿಗರು ಕೋಟ್ಯಂತರ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ ಎಂದು ಅವರು ಹೇಳಿದ್ದಾರೆ. “ಚಾಂಪಿಯನ್ಸ್! ನಮ್ಮ ತಂಡವು ಟಿ20 ವಿಶ್ವಕಪ್ ಅನ್ನು ಮನೆಗೆ ತರುತ್ತಿದೆ! ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆʼʼ ಎಂದು ಬರೆದುಕೊಂಡು ಅವರು ವಿಡಿಯೊವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜತೆಗೆ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು ಬಗ್ಗು ಬಡಿದಿರುವುದು ಐತಿಹಾಸಿಕ ಎಂದು ಬಣ್ಣಿಸಿದ್ದಾರೆ. ಕಳೆದ ವರ್ಷದ ಏಕದಿನ ವಿಶ್ವಕಪ್‌ ಪಂದ್ಯದ ಫೈನಲ್‌ನಲ್ಲಿ ಭಾರತ ತಂಡ ಸೋತಾಗ ಮೋದಿ ಅವರು ಸಾಂತ್ವನ ಹೇಳಿದ್ದರು.

ರೋಚಕ ಹೋರಾಟದಲ್ಲಿ ಭಾರತಕ್ಕೆ ಗೆಲುವು

ಕಿಂಗ್ ಕೊಹ್ಲಿಯ ಅಬ್ಬರದ ಅರ್ಧ ಶತಕ (76 ರನ್​) ರನ್ ಹಾಗೂ ಆಲ್​ರೌಂಡರ್ ಅಕ್ಷರ್ ಪಟೇಲ್​ ಅವರ ಸ್ಫೋಟಕ ಬ್ಯಾಟಿಂಗ್​ (47 ರನ್​, 31 ಎಸೆತ, 4 ಸಿಕ್ಸರ್​, 1 ಫೋರ್​) ನೆರವು ಹಾಗೂ ಕೊನೇ ಕ್ಷಣದ ರೋಚಕ ಹೋರಾಟ ಫಲವಾಗಿ ಭಾರತ ತಂಡ ವಿಶ್ವ ಕಪ್​ ಗೆದ್ದುಕೊಂಡಿತು. ಫೈನಲ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್​ಗಳ ರೋಚಕ ಗೆಲುವು ದಾಖಲಿಸಿ ಟ್ರೋಫಿ ಮುಡಿಗೇರಿಸಿಕೊಂಡಿತು. ಭಾರತದ ಪಾಲಿಗೆ ಇದು ಸ್ಮರಣೀಯ ಟ್ರೋಫಿ. ಹಿರಿಯ ಆಟಗಾರರಾದ ರೋಹಿತ್​ ಶರ್ಮಾ ಹಾಗೂ ವಿರಾಟ್​ ಕೊಹ್ಲಿಗೆ ಅಪೇಕ್ಷಿತ ಚಾಂಪಿಯನ್ ಪಟ್ಟ. ಅತ್ತ ದಕ್ಷಿಣ ಆಫ್ರಿಕಾ ತಂಡ ತನ್ನ ಚೋಕರ್ಸ್​ ಹಣೆಪಟ್ಟಿಯನ್ನು ಮತ್ತಷ್ಟು ದಿನ ಕಟ್ಟಿಕೊಳ್ಳುವಂತಾಯಿತು. 4 ದಶಕಗಳ ತನ್ನ ವಿಶ್ವ ಕಪ್​ ಅಭಿಯಾನದಲ್ಲಿ ಒಂದೇ ಒಂದು ಟ್ರೋಫಿ ಗೆಲ್ಲಲು ಸಾಧ್ಯವಾಗದೇ ನಿರಾಸೆ ಎದುರಿಸಿತು.

ಇದನ್ನೂ ಓದಿ: Virat Kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿರಾಟ್​​ ಕೊಹ್ಲಿ

Continue Reading

ಪ್ರಮುಖ ಸುದ್ದಿ

Jay Shah Promise: ಜಯ್​​ ಶಾ ಭವಿಷ್ಯ ನುಡಿದಂತೆ ಟಿ20 ವಿಶ್ವಕಪ್​ ಗೆದ್ದ ಭಾರತ; ವಿಡಿಯೊ ವೈರಲ್​

Jay Shah Promise: ಅಂದು ಸಭೆಯಲ್ಲಿ ಮಾತನಾಡಿದ್ದ ಜಯ್​ ಶಾ ಅವರು ನಾನು ಭರವಸೆ ನೀಡುತ್ತಿದ್ದೇನೆ. ರೋಹಿತ್​ ಶರ್ಮ ನಾಯಕತ್ವದಲ್ಲಿ ಭಾರತ ತಂಡ ಜೂನ್​ 29ರಂದು ಬಾರ್ಬಡೋಸ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ ಫೈನಲ್​ನಲ್ಲಿ ಪಕ್​ ಗೆದ್ದು ವಿಂಡೀಸ್​ನಲ್ಲಿ ತ್ರಿವರ್ಣ ಧ್ವಜ ರಾರಾಜಿಸಲಿದೆ ಎಂದು ಹೇಳಿದ್ದರು. ಇದೀಗ ಅವರು ನುಡಿದಂತೆ ಭಾರತ 17 ವರ್ಷಗಳ ಬಳಿಕ ಭಾರತ 2ನೇ ಟಿ20 ವಿಶ್ವಕಪ್​ ಗೆದ್ದು ಸಂಭ್ರಮಿಸಿದೆ.

VISTARANEWS.COM


on

Jay Shah Promise
Koo

ಬಾರ್ಬಡೋಸ್​: ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಅವರು ಟಿ20 ವಿಶ್ವಕಪ್(T20 World Cup 2024 Final)​ ಟೂರ್ನಿಯ ಆರಂಭಕ್ಕೆ ತಂಡ ಪ್ರಕಟಿಸುವ ಮುನ್ನವೇ ಭಾರತ ತಂಡ ಜೂನ್​ 29ರಂದು ಬಾರ್ಬಡೋಸ್​ನಲ್ಲಿ ವಿಶ್ವಕಪ್​ ಗೆಲ್ಲಲಿದೆ ಎಂದು ವೇದಿಯಲ್ಲಿ ಮಾತನಾಡುವ ವೇಳೆ ಬಹಿರಂಗವಾಗಿಯೇ ಭವಿಷ್ಯ(Jay Shah Promise) ನುಡಿದಿದ್ದರು. ಇದೀಗ ಅವರ ಹೇಳಿದಂತೆ ಭಾರತ ಕಪ್​ ಗೆದ್ದು ಸಂಭ್ರಮಿಸಿದೆ. ಅಂದು ಜಯ್​ ಶಾ ಹೇಳಿದ ಹೇಳಿದ ಈ ಭವಿಷ್ಯದ ವಿಡಿಯೊ ಇದೀಗ ವೈರಲ್(viral video)​ ಆಗಿದೆ.

ಅಂದು ಸಭೆಯಲ್ಲಿ ಮಾತನಾಡಿದ್ದ ಜಯ್​ ಶಾ ಅವರು ನಾನು ಭರವಸೆ ನೀಡುತ್ತಿದ್ದೇನೆ. ರೋಹಿತ್​ ಶರ್ಮ ನಾಯಕತ್ವದಲ್ಲಿ ಭಾರತ ತಂಡ ಜೂನ್​ 29ರಂದು ಬಾರ್ಬಡೋಸ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ ಫೈನಲ್​ನಲ್ಲಿ ಪಕ್​ ಗೆದ್ದು ವಿಂಡೀಸ್​ನಲ್ಲಿ ತ್ರಿವರ್ಣ ಧ್ವಜ ರಾರಾಜಿಸಲಿದೆ ಎಂದು ಹೇಳಿದ್ದರು. ಇದೀಗ ಅವರು ನುಡಿದಂತೆ ಭಾರತ 17 ವರ್ಷಗಳ ಬಳಿಕ ಭಾರತ 2ನೇ ಟಿ20 ವಿಶ್ವಕಪ್​ ಗೆದ್ದು ಸಂಭ್ರಮಿಸಿದೆ.

ಚಾಂಪಿಯನ್​(T20 World Cup Final) ಪಟ್ಟ ಅಲಂಕರಿಸಿದ ಭಾರತ ತಂಡಕ್ಕೆ (t20 world cup winner) ಮೊತ್ತದ $ 2.45 ಮಿಲಿಯನ್ ಯುಎಸ್ ಡಿ (20,42,49,000 ರೂ) ಬಹುಮಾನ(T20 World Cup 2024 Prize Money) ಮೊತ್ತ ಲಭಿಸಿದೆ. ಇದು ಪಂದ್ಯಾವಳಿಯ ಇತಿಹಾಸದಲ್ಲಿ ಇದುವರೆಗೆ ನೀಡಲಾದ ಅತ್ಯಧಿಕ ಮೊತ್ತವಾಗಿದೆ. ರನ್ನರ್​ ಅಪ್​ ದಕ್ಷಿಣ ಆಫ್ರಿಕಾ ತಂಡಕ್ಕೆ 1,280,000 USD (10,68,06,400 ರೂ.) ಹಣ ದೊರೆಕಿದೆ. ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯ ಒಟ್ಟು ಬಹುಮಾನ ಮೊತ್ತ 11.25 ಮಿಲಿಯನ್ ಯುಸ್ ಡಾಲರ್ ಆಗಿತ್ತು.

ಇದನ್ನೂ ಓದಿ Rahul Dravid: ನಾಯಕನಾಗಿ ಸೋಲಿನ ಅವಮಾನ ಎದುರಿಸಿದ್ದ ಮೈದಾನದಲ್ಲೇ ಕೋಚ್​ ಆಗಿ ವಿಶ್ವಕಪ್​ ಎತ್ತಿ ಹಿಡಿದ ದ್ರಾವಿಡ್

ಬ್ರಿಜ್‌ಟೌನ್‌ನ ಕೆನ್ಸಿಂಗ್ಟನ್‌ ಓವಲ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

ದ್ರಾವಿಡ್​ಗೆ ಸ್ಮರಣೀಯ ಬೀಳ್ಕೊಡುಗೆ


ನಾಯಕನಾಗಿ ಗೆಲ್ಲಲಾಗದ ವಿಶ್ವಕಪ್(T20 World Cup 2024)​ ಟ್ರೋಫಿಯನ್ನು ರಾಹುಲ್​ ದ್ರಾವಿಡ್‌(Rahul Dravid) ಕೊನೆಗೂ ಭಾರತ ತಂಡದ ತರಬೇತುದಾರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಕೂಡ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಎನ್ನುವುದು ವಿಶೇಷ. 2007ರಲ್ಲಿ ವೆಸ್ಟ್​ ಇಂಡೀಸ್​ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ರಾಹುಲ್​ ದ್ರಾವಿಡ್​ ಅವರ ನಾಯಕತ್ವದಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಲೀಗ್​ ಹಂತದಿಂದಲೇ ನಿರ್ಗಮಿಸಿತ್ತು. ದುರ್ಬಲ ಬಾಂಗ್ಲಾದೇಶ ವಿರುದ್ದವೂ ಕೂಡ ಗೆಲುವು ಸಾಧಿಸಲು ಸಾಧ್ಯವಾಗ ಅವಮಾನಕ್ಕೆ ಸಿಲುಕಿತ್ತು. ಅಂದು ಅವಮಾನ ಎದುರಿಸಿದ ವಿಂಡೀಸ್​ ನೆಲದಲ್ಲೇ ಇದೀಗ ದ್ರಾವಿಡ್​ ತರಬೇತುದಾರನಾಗಿ ಕಪ್​ ಗೆದ್ದು ಸಂಭ್ರಮಿಸಿದ್ದಾರೆ.

Continue Reading

ಕ್ರೀಡೆ

T20 World Cup 2024 Prize Money:ಚಾಂಪಿಯನ್​ ಭಾರತ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು?

T20 World Cup 2024 Prize Money: ರನ್ನರ್​ ಅಪ್​ ದಕ್ಷಿಣ ಆಫ್ರಿಕಾ ತಂಡಕ್ಕೆ 1,280,000 USD (10,68,06,400 ರೂ.) ಹಣ ದೊರೆಕಿದೆ. ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯ ಒಟ್ಟು ಬಹುಮಾನ ಮೊತ್ತ 11.25 ಮಿಲಿಯನ್ ಯುಸ್ ಡಾಲರ್ ಆಗಿತ್ತು.

VISTARANEWS.COM


on

T20 World Cup 2024 prize money
Koo

ಬಾರ್ಬಡೋಸ್​: 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದ ಚಾಂಪಿಯನ್​(T20 World Cup Final) ಭಾರತ ತಂಡಕ್ಕೆ ಭಾರಿ(t20 world cup winner) ಮೊತ್ತದ ಬಹುಮಾನ(T20 World Cup 2024 Prize Money) ಲಭಿಸಿದೆ. $ 2.45 ಮಿಲಿಯನ್ ಯುಎಸ್ ಡಿ (20,42,49,000 ರೂ) ಪಡೆದಿದೆ. ಇದು ಪಂದ್ಯಾವಳಿಯ ಇತಿಹಾಸದಲ್ಲಿ ಇದುವರೆಗೆ ನೀಡಲಾದ ಅತ್ಯಧಿಕ ಮೊತ್ತವಾಗಿದೆ. ರನ್ನರ್​ ಅಪ್​ ದಕ್ಷಿಣ ಆಫ್ರಿಕಾ ತಂಡಕ್ಕೆ 1,280,000 USD (10,68,06,400 ರೂ.) ಹಣ ದೊರೆಕಿದೆ. ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯ ಒಟ್ಟು ಬಹುಮಾನ ಮೊತ್ತ 11.25 ಮಿಲಿಯನ್ ಯುಸ್ ಡಾಲರ್ ಆಗಿತ್ತು.

ಬ್ರಿಜ್‌ಟೌನ್‌ನ ಕೆನ್ಸಿಂಗ್ಟನ್‌ ಓವಲ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಎರಡನೇ ಎಸೆತವನ್ನು ರಬಾಡಾ ಬೌಂಡರಿ ಬಾರಿಸಿದರು. ಮೂರನೇ ಎಸೆತದಲ್ಲಿ ಒಂದು ರನ್ ಬಂತು. ಕೊನೆಯ ಎರಡು ಎಸೆತಗಳಲ್ಲಿ 10 ರನ್ ಅಗತ್ಯವಿತ್ತು. ಹಾರ್ದಿಕ್ ಒಂದು ವೈಡ್ ಎಸೆದರು. ರಬಾಡಾ ಕ್ಯಾಚಿತ್ತು ನಿರ್ಗಮಿಸಿದರು. ಕೊನೆಯ ಎಸೆತದಲ್ಲಿ ಒಂದು ರನ್ ಮಾತ್ರ ಬಂತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

ಇದನ್ನೂ ಓದಿ Rahul Dravid: ನಾಯಕನಾಗಿ ಸೋಲಿನ ಅವಮಾನ ಎದುರಿಸಿದ್ದ ಮೈದಾನದಲ್ಲೇ ಕೋಚ್​ ಆಗಿ ವಿಶ್ವಕಪ್​ ಎತ್ತಿ ಹಿಡಿದ ದ್ರಾವಿಡ್

ಜಮ್ಮು-ಕಾಶ್ಮೀರದಲ್ಲಿ ಮೊಳಗಿದ ವಿಜಯೋತ್ಸವ


17ನೇ ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup final)​ ಗೆದ್ದ ಭಾರತ ತಂಡದ ಈ ಅಭೂತಪೂರ್ವ ಗೆಲುವನ್ನು ಅಭಿಮಾನಿಗಳು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದಾರೆ. ದೇಶದ ಮೂಲೆ ಮೂಲೆಯಲ್ಲೂ ತಡರಾತ್ರಿಯೇ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದ್ದಾರೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲೂ ಅಭಿಮಾನಿಗಳು ತ್ರಿವರ್ಣ ಧ್ವಜಗಳನ್ನು ಹಿಡಿದು ಗೆಲುವನ್ನು ಸಂಭ್ರಮಿಸಿದ್ದಾರೆ. ಇದರ ಫೋಟೊ ಮತ್ತು ವೈರಲ್​ ಆಗಿದೆ.

ಜಮ್ಮು ಕಾಶ್ಮೀರದ ಕಚಿ ಚೌನಿ ಸೇರಿದಂತೆ ವಿವಿಧ ಭಾಗಗಳಲ್ಲಿ ಚಳಿಯನ್ನು ಕೂಡ ಲೆಕ್ಕಿಸದೆ ಮಧ್ಯರಾತ್ರಿಯೇ ಅಭಿಮಾನಿಗಳು ಮನೆಯಿಂದ ಹೊರ ಬಂದು ಭಾರತದ ಗೆಲುವನ್ನು ಸಂಭ್ರಮಿಸಿದ್ದಾರೆ. ಬೃಹತ್ ತ್ರಿವರ್ಣ ಧ್ವಜ ಹಿಡಿದು ಪಟಾಕಿ ಸಿಡಿಸಿ ಜಯಘೋಷ ಮೊಳಗಿಸಿದ್ದಾರೆ.

Continue Reading

ಬಾಲಿವುಡ್

Virat Kohli: ವಿಶ್ವಕಪ್ ಗೆದ್ದ ನಂತರ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿ ಫ್ಲೈಯಿಂಗ್ ಕಿಸ್‌ ಕೊಟ್ಟ ವಿರಾಟ್ ಕೊಹ್ಲಿ!

Virat Kohli: ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದು ಹೇಳಿದರು.

VISTARANEWS.COM


on

Virat Kohli video calls Anushka Sharma after winning
Koo

ಬೆಂಗಳೂರು: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ (Virat Kohli) ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.  ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಭಾರತೀಯ ಆಟಗಾರರು ಸಂಭ್ರಮಿಸುತ್ತಿರುವ ವಿಡಿಯೊಗಳು ಮತ್ತು ಫೋಟೋಗಳು ಸದ್ದು ಮಾಡುತ್ತಿವೆ. ವಿಶ್ವಕಪ್ ಗೆದ್ದ ನಂತರ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿರುವ ಫೋಟೊಗಳು ಸಖತ್‌ ವೈರಲ್‌ ಆಗುತ್ತಿವೆ.

ವೈರಲ್‌ ಆದ ಫೋಟೊಗಳಲ್ಲಿ ವಿರಾಟ್‌ ಸಂತಸದಿಂದ ಪತ್ನಿ ಜತೆ ಮಾತನಾಡುತ್ತಿರುವುದು ಕಂಡು ಬಂದಿದೆ. ಮಾತ್ರವಲ್ಲ ಕಾಲ್‌ ಮೂಲಕವೇ ಫ್ಲೈ ಕಿಸ್‌ ಕೂಡ ಕೊಟ್ಟಿದ್ದಾರೆ. ಈ ಭಾವುಕ ಕ್ಷಣಗಳನ್ನು ಅಭಿಮಾನಿಗಳು ಕೂಡ ಹಾಡಿ ಹೊಗಳುತ್ತಿದ್ದಾರೆ.

ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಮಗಳು ವಾಮಿಕಾ ಬಗ್ಗೆ ಘಟನೆವೊಂದನ್ನು ಹಂಚಿಕೊಂಡಿದ್ದಾರೆ. ಅನುಷ್ಕಾ ಶರ್ಮಾ ಪೋಸ್ಟ್‌ನಲ್ಲಿ ʻʻನಮ್ಮ ಮಗಳ ದೊಡ್ಡ ಕಾಳಜಿ ಏನೆಂದರೆ, ಎಲ್ಲಾ ಆಟಗಾರರು ಟಿವಿಯಲ್ಲಿ ಅಳುತ್ತಿರುವುದನ್ನು ನೋಡಿದ ನಂತರ ಅವರನ್ನು ತಬ್ಬಿಕೊಳ್ಳಲು ಯಾರಾದರೂ ಇದ್ದರೆ ಎಂದು. ಆಗ ನಾನು ಅಂದೆ ..ಹೌದು, ಅವರನ್ನು 1.5 ಬಿಲಿಯನ್ ಜನರು ತಬ್ಬಿಕೊಂಡರು ಎಂದೆ. ಎಂತಹ ಅದ್ಭುತ ಗೆಲುವು ಮತ್ತು ಎಂತಹ ಪೌರಾಣಿಕ ಸಾಧನೆ!! ಚಾಂಪಿಯನ್ಸ್ – ಅಭಿನಂದನೆಗಳು!! ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಪೋಸ್ಟ್‌ನಲ್ಲಿ, ಅನುಷ್ಕಾ ಅವರು ವಿರಾಟ್ ಮುಗುಳ್ನಕ್ಕು ಟ್ರೋಫಿಯನ್ನು ಎತ್ತುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Virat Kohli: ಗೆಲುವಿನ ಬಳಿಕ ಪಂಜಾಬಿ ಹಾಡಿಗೆ ಮಸ್ತ್​ ಸ್ಟೆಪ್ಸ್​ ಹಾಕಿದ ವಿರಾಟ್​ ಕೊಹ್ಲಿ

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

ವಿದಾಯ ಹೇಳಿದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದು ಹೇಳಿದರು.

Continue Reading
Advertisement
T20 World Cup 2024
ಕ್ರೀಡೆ4 mins ago

T20 World Cup 2024: ʼವಿಶ್ವʼ ಗೆದ್ದ ನಾಯಕ ರೋಹಿತ್‌, ಕೋಚ್‌ ದ್ರಾವಿಡ್‌, ಕೊಹ್ಲಿಗೆ ಕರೆ ಮಾಡಿ ಅಭಿನಂದಿಸಿದ ಮೋದಿ

Self Harming
ಮೈಸೂರು9 mins ago

Self Harming : ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

Jay Shah Promise
ಪ್ರಮುಖ ಸುದ್ದಿ22 mins ago

Jay Shah Promise: ಜಯ್​​ ಶಾ ಭವಿಷ್ಯ ನುಡಿದಂತೆ ಟಿ20 ವಿಶ್ವಕಪ್​ ಗೆದ್ದ ಭಾರತ; ವಿಡಿಯೊ ವೈರಲ್​

snake Bite
ಕಲಬುರಗಿ31 mins ago

Snake Bite : ಮರದಡಿ ಕುಳಿತಾಗ ಮಹಿಳೆಯ ಕಿವಿಗೆ ಕುಟುಕಿದ ಹಾವು; ವಿಷವೇರಿ ಸಾವು

T20 World Cup 2024 prize money
ಕ್ರೀಡೆ49 mins ago

T20 World Cup 2024 Prize Money:ಚಾಂಪಿಯನ್​ ಭಾರತ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು?

Text Book
ಕರ್ನಾಟಕ49 mins ago

Text Book: ರಾಜ್ಯ ಪಠ್ಯಕ್ರಮದ ವಿರುದ್ಧ ವೀರಶೈವ ಮಠಾಧೀಶರ ಅಸಮಾಧಾನ; ಸಿಎಂಗೆ ಪತ್ರ

Virat Kohli video calls Anushka Sharma after winning
ಬಾಲಿವುಡ್50 mins ago

Virat Kohli: ವಿಶ್ವಕಪ್ ಗೆದ್ದ ನಂತರ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿ ಫ್ಲೈಯಿಂಗ್ ಕಿಸ್‌ ಕೊಟ್ಟ ವಿರಾಟ್ ಕೊಹ್ಲಿ!

Sabja Seeds Benefits
ಆರೋಗ್ಯ53 mins ago

Sabja Seeds Benefits: ಸಬ್ಜಾ ಬೀಜವನ್ನು ನೆನೆಹಾಕಿ ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆ ದೂರ

Physical Abuse
ಚಿಕ್ಕಬಳ್ಳಾಪುರ1 hour ago

Physical Abuse : ಆಟವಾಡುತ್ತಿದ್ದ 6 ವರ್ಷದ ಬಾಲಕಿ ಮೇಲೆ 17 ವರ್ಷದ ಬಾಲಕನಿಂದ ಅತ್ಯಾಚಾರ

Mann Ki Baat
ದೇಶ1 hour ago

Mann Ki Baat: ನಾಲ್ಕು ತಿಂಗಳ ನಂತರ ಮೋದಿ ʼಮನ್‌ ಕೀ ಬಾತ್‌ʼ; Live ಲಿಂಕ್ ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌