KCET Result 2024 : ಜೂನ್‌ ಮೊದಲ ವಾರ ಸಿಇಟಿ ಪರೀಕ್ಷೆ ಫಲಿತಾಂಶ ಖಚಿತ! - Vistara News

ಬೆಂಗಳೂರು

KCET Result 2024 : ಜೂನ್‌ ಮೊದಲ ವಾರ ಸಿಇಟಿ ಪರೀಕ್ಷೆ ಫಲಿತಾಂಶ ಖಚಿತ!

KCET Result 2024 : ಇಂಜಿನಿಯರಿಂಗ್‌ (Engineering) ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದಿದ್ದ ಕೆ-ಸಿಇಟಿ (Karnataka CET 2024) ಪರೀಕ್ಷೆ ಫಲಿತಾಂಶ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ. ಬಹುತೇಕ ಜೂನ್‌ ಮೊದಲ ವಾರವೇ ಪರೀಕ್ಷೆ ಫಲಿತಾಂಶವು ಪ್ರಕಟಗೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

VISTARANEWS.COM


on

KCET Result 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 2024ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (CET Result) ಫಲಿತಾಂಶ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಿಇಟಿ ಪರೀಕ್ಷೆಯನ್ನು (KCET Exam) ಏಪ್ರಿಲ್ 18, 19 ಹಾಗೂ 20ರಂದು ನಡೆಸಿತ್ತು. ಇದರಲ್ಲಿ ಸುಮಾರು 3.28 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿ ಕೊಂಡಿದ್ದರು. ಇದೀಗ ಇವರೆಲ್ಲರ ಭವಿಷ್ಯವು ಜೂನ್‌ ಮೊದಲ ವಾರದಲ್ಲೇ (KCET Result 2024) ನಿರ್ಧಾರವಾಗಲಿದೆ.

ಸಿಇಟಿ ಫಲಿತಾಂಶವನ್ನು ಲೋಕಸಭಾ ಚುನಾವಣೆಯ ರಿಸಲ್ಟ್‌ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ, ದ್ವಿತೀಯ ಪಿಯುಸಿ 2ರ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದರು. ಕಳೆದ ಮೇ 21ರಂದು ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವು ಪ್ರಕಟಗೊಂಡಿದೆ. ಹೀಗಾಗಿ ವಿದ್ಯಾರ್ಥಿಗಳ ಚಿತ್ತ ಸಿಇಟಿ ಫಲಿತಾಂಶದತ್ತ ನೆಟ್ಟಿದೆ.

ಪಿಯುಸಿ ಪರೀಕ್ಷೆಯ ಯಾವ ಅಂಕ ಪರಿಗಣನೆ?

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುತ್ತದೆ.

ರಿಸಲ್ಟ್‌ ಚೆಕ್‌ ಮಾಡುವ ವಿಧಾನ ಹೇಗೆ?

ರಿಸಲ್ಟ್‌ ಪ್ರಕಟವಾದ ಬಳಿಕ ಚೆಕ್‌ ಮಾಡುವ ವಿಧಾನದ ಹಂತ ಹಂತದ ಮಾಹಿತಿ ಇಲ್ಲಿದೆ. ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿ ಅಫೀಶಿಯಲ್ ವೆಬ್‌ಸೈಟ್‌ https://cetonline.karnataka.gov.in/kea/ಗೆ ಭೇಟಿ ನೀಡಿ.

ಓಪನ್‌ ಆದ ಪುಟದ ಮೇಲ್ಭಾಗದಲ್ಲಿರುವ ʼಪ್ರವೇಶʼ ಆಯ್ಕೆಯನ್ನು ಕ್ಲಿಕ್‌ ಮಾಡಿ ಬಳಿಕ ʼಯುಜಿಸಿಇಟಿ 2024′ ಆಪ್ಶನ್‌ ಸೆಲೆಕ್ಟ್‌ ಮಾಡಿ.

ಇತ್ತೀಚಿನ ಪ್ರಕಟಣೆಗಳು ಎಂದಿರುವ ಕೆಳಗಡೆ ‘ಯುಜಿಸಿಇಟಿ 2024’ ಫಲಿತಾಂಶದ ಲಿಂಕ್ ನೀಡಲಾಗಿರುತ್ತದೆ. ಅದನ್ನು ಕ್ಲಿಕ್ ಮಾಡಿ.

ಈಗ ತೆರೆದುಕೊಳ್ಳುವ ಹೊಸ ಪುಟದಲ್ಲಿ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ನೀಡಿ, ‘Submit’ ಬಟನ್‌ ಕ್ಲಿಕ್‌ ಮಾಡಿದರೆ ಫಲಿತಾಂಶ ಕಾಣಿಸುತ್ತದೆ. ಇದರ ಹೊರತಾಗಿಯೂ ವಿದ್ಯಾರ್ಥಿಗಳ ಫೋನ್‌ ನಂಬರ್‌ಗೆ ಫಲಿತಾಂಶದ ಮಸೇಜ್‌ ಬರಲಿದೆ.

ಇದನ್ನೂ ಓದಿ: Liquor Ban : ಡ್ರೈ ಡೇ ಎಫೆಕ್ಟ್‌; ನಾಳೆ ಸಂಜೆಯಿಂದಲೇ ಮದ್ಯ ಮಾರಾಟ ಬಂದ್‌

ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳು

ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರತಿ ವರ್ಷ ವೃತ್ತಿಪರ ಕೋಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆದರೆ, ಈ ಬಾರಿಯ ಸಿಇಟಿ ಪರೀಕ್ಷೆ ಗೊಂದಲದ ಗೂಡಾಗಿತ್ತು. ಪರೀಕ್ಷೆಯಲ್ಲಿ 4 ವಿಷಯಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಔಟ್‌ ಆಫ್‌ ಸಿಲಬಸ್‌ (Out of Syllabus) ಪ್ರಶ್ನೆಗಳನ್ನು ಕೇಳಲಾಗಿತ್ತು. ರಸಾಯನ ಶಾಸ್ತ್ರದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5 ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು. ಇದಕ್ಕೆ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದ್ದವು. ಬಳಿಕ ಆ 50 ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳ ಮೌಲ್ಯ ಮಾಪನ ಮಾಡಲಾಗಿತ್ತು.

ಸದ್ಯ ಸಿಇಟಿ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೌಲ್ಯಮಾಪನ ಮಾಡಿ ಸಿದ್ಧಪಡಿಸಿದೆ. ಇದರ ಜತೆಗೆ ಶೇ. 50ರಷ್ಟು ದ್ವಿತೀಯ ಪಿಯುಸಿ ಅಂಕ ಮತ್ತು ಬಿಎಸ್‌ಸಿ ಸೀಟು ಹಂಚಿಕೆಗಾಗಿ ಜಿಕೆವಿಕೆ ನಡೆಸುವ ಪ್ರಾಯೋಗಿಕ ಪರೀಕ್ಷೆ ಫಲಿತಾಂಶದ ಅಂಕ ಸೇರಿಸಬೇಕಾಗಿರುವುದರಿಂದ ಕೆಇಎ ಅದಕ್ಕಾಗಿ ಕಾಯುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karave Protest: ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ನಾರಾಯಣ ಗೌಡ ನಿಯೋಗ ಮನವಿ; ಶೀಘ್ರವೇ ಕ್ರಮ ಎಂದ ಸಿಎಂ

Karave Protest: ಕನ್ನಡಿಗರಿಗೆ ಉದ್ಯೋಗ ನೀಡಲು ಡಾ. ಸರೋಜಿನಿ ಮಹಿಷಿ ವರದಿ ಜಾರಿ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ನಿಯೋಗ ಮನವಿ ಮಾಡಿದೆ.

VISTARANEWS.COM


on

Karave Protest
Koo

ಬೆಂಗಳೂರು: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಆಗ್ರಹಿಸಿ ರಾಜ್ಯಾದ್ಯಂತ ಸೋಮವಾರ, ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ (Karave Protest) ನಡೆಸಲಾಗಿದ್ದು, ಈ ನಡುವೆ ಸಿಎಂ ಸಿದ್ದರಾಮಯ್ಯ ಅವರನ್ನು ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ನೇತೃತ್ವದ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಸಿಎಂ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ನಿಯೋಗ ಭೇಟಿ ಮಾಡಿ, ಕನ್ನಡಿಗರಿಗೆ ಉದ್ಯೋಗ ನೀಡಲು ಡಾ. ಸರೋಜಿನಿ ಮಹಿಷಿ ವರದಿ ಜಾರಿ ಮಾಡಲು ಕೋರಿದೆ. ಇದಕ್ಕೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿ, ನಾಳೆಯೇ ಅಧಿಕಾರಿಗಳನ್ನು ಕರೆಸಿ ಚರ್ಚೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಸಿದ್ದರಾಮಯ್ಯ ಮೇಲೆ ಭರವಸೆ ಇದೆ ಎಂದ ನಾರಾಯಣ ಗೌಡ್ರು

ಸಿಎಂ ಭೇಟಿ ಬಳಿಕ ಮಾತನಾಡಿದ ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಅವರು, ನಾನು ಮೊದಲೇ ಒಂದು ಮಾತು ಹೇಳಿದ್ದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಕನ್ನಡದ ಬಗ್ಗೆ ಕಾಳಜಿ ಇದೆ. ಈಗ ನಾವು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಕೊಟ್ಟಿದ್ದು, ನಾಳೆಯೇ ಅಧಿಕಾರಿಗಳನ್ನು ಕರೆಸಿ ಚರ್ಚೆ ಮಾಡುತ್ತೀನಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಮ್ಮ ಸರ್ಕಾರ ಸದಾ ಕನ್ನಡದ ಪರವಾಗಿದೆ, ನಾನು ಕೂಡ ಕನ್ನಡ ಪರ ಇದ್ದೀನಿ. ನಿಮ್ಮ ಮನವಿಯನ್ನು ಪರಿಶೀಲಿಸಿ ಶೀಘ್ರದಲ್ಲಿಯೇ ಕಾನೂನು ತಜ್ಞರ ಜತೆ ಚರ್ಚೆ ಮಾಡುತ್ತೀನಿ ಎಂದು ಸಿಎಂ ಹೇಳಿರುವುದಾಗಿ ತಿಳಿಸಿದರು.

ಕನ್ನಡದ ವಿಚಾರದಲ್ಲಿ ನಾನು ರಾಜಿ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಡಾ. ಸರೋಜಿನಿ ಮಹಿಷಿ ವರದಿ ಜಾರಿಗಾಗಿ 40 ವರ್ಷದಿಂದ ಹೋರಾಟ ಮಾಡುತ್ತಿದ್ದೀವಿ. ಈ ವರದಿ ಪ್ರಕಾರ ಉದ್ಯೋಗದಲ್ಲಿ 100ಕ್ಕೆ 100ರಷ್ಟು ಕನ್ನಡಿಗರು ಇರಬೇಕು ಅಂತ ಇದೆ. ಕರ್ನಾಟಕದಲ್ಲಿರುವ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ಎಲ್ಲ ವಿಚಾರಗಳನ್ನು ಸಿಎಂಗೆ ಮನವರಿಕೆ ಮಾಡಿದ್ದೇವೆ. ಜಾರಿಗೆ ತಂದರೆ ಬದುಕು ಕಟ್ಟಿಕೊಳ್ಳುವ ಕೆಲಸ ಮಾಡಲಾಗುತ್ತೆ. ಸಿದ್ದರಾಮಯ್ಯ ಮೇಲೆ ಭರವಸೆ ಇದೆ ಎಂದು ಹೇಳಿದರು.

ಇದನ್ನೂ ಓದಿ | Karave Protest: ಕನ್ನಡಿಗರಿಗೆ ಉದ್ಯೋಗ ನೀಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ: ಕರವೇ ಕಾರ್ಯಕರ್ತರ ಆಕ್ರೋಶ

ಕನ್ನಡ ನಾಮಫಲಕ ಕಡ್ಡಾಯ ಮಾಡುವ ವಿಚಾರಕ್ಕೆ ಸರ್ಕಾರ ಸರಿಯಾಗಿ ಕಾಯ್ದೆ ಮಾಡಿದೆ. ಇದರಿಂದ ಶೇ. 60% ಕನ್ನಡ ಕರ್ನಾಟಕದಲ್ಲಿ ಕಾಣುತ್ತಿದೆ. ನಾನು ಮುಂದಿನ ವಾರ ದೆಹಲಿಗೆ ಹೋಗಬೇಕು, ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ಸೋಮಣ್ಣರನ್ನು ಭೇಟಿ ಮಾಡುತ್ತೀನಿ. ರಾಜ್ಯಕ್ಕೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಅವರೊಂದೊಗೆ ಚರ್ಚೆ ಮಾಡುತ್ತೇನೆ. ತೆರಿಗೆ, ಜಿಎಸ್‌ಟಿ ಸೇರಿ 1 ಲಕ್ಷ 86 ಕೋಟಿ ರೂ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದೆ. ಈ ವಿಚಾರವಾಗಿ ನಮ್ಮ ಜೊತೆ ಕೈ ಜೋಡಿಸಿ ಅಂತ ಸಿಎಂ ಕೇಳಿದ್ದಾರೆ ಎಂದು ನಾರಾಯಣ ಗೌಡ ತಿಳಿಸಿದ್ದಾರೆ.

ಕಾಯ್ದೆ ಜಾರಿಯಾಗದಿದ್ದರೆ ನಿಮ್ಮ ಸರ್ಕಾರ ಉಳಿಯಲ್ಲ: ನಾರಾಯಣ ಗೌಡ ಎಚ್ಚರಿಕೆ

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಾಯ್ದೆ ಜಾರಿ ಮಾಡದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ. ಯಾವುದೇ ಸರ್ಕಾರ ಬರಲಿ ನಿರಂತರವಾಗಿ ಬೇಡಿಕೆ ಇಟ್ಟಿದ್ದೇವೆ. ಇಂದು ಸಾಂಕೇತಿಕವಾಗಿ ಒಂದು ದಿನದ ಧರಣಿ ಮೂಲಕ ಒತ್ತಡ ಹಾಕುತ್ತಿದ್ದೇವೆ. ಸರ್ಕಾರ ಮಾಡಲು ಕಾರಣ ಕನ್ನಡಿಗರು, ಈಗ ಅವರ ಹಿತ ಕಾಪಾಡಿ. ಇಲ್ಲದಿದ್ದರೆ ನಿಮ್ಮ ಸರ್ಕಾರ ಉಳಿಯುವುದಿಲ್ಲ ಎಂದು ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಎಚ್ಚರಿಕೆ ನೀಡಿದರು.

ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಕನ್ನಡಿಗರ ಬದುಕಿನ ಹಾಗೂ ಉದ್ಯೋಗ ವಿಚಾರದಲ್ಲಿ ಕಾಯ್ದೆ ಜಾರಿ ಆಗಬೇಕು. ಇಡೀ ರಾಜ್ಯದ 31 ಜಿಲ್ಲೆಗಳಲ್ಲಿ ಧರಣಿ ನಡೆಯುತ್ತಿದೆ. ಅಲ್ಲಿನ ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಕೆ ಆಗಲಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಒಂದಷ್ಟು ಕಾಳಜಿ ಇದೆ. ಅಂದು ನಮ್ಮ ಹೋರಾಟಕ್ಕೆ ಮಣಿದು ಕನ್ನಡ ನಾಮಫಲಕ ಕಾಯ್ದೆ ಆಯಿತು. ನಾವು ಇಂದು ಒಂದು ದಿನದ ಭಜನೆ ಮಾಡಲು ಬಂದಿಲ್ಲ ಸ್ವಾಮಿ ಎಂದರು.

ಆಗ ನನ್ನನ್ನ ಜೈಲಿಗೆ ಹಾಕಿ ಚಿತ್ರ ಹಿಂಸೆ ಕೊಟ್ಟಿದ್ದಿರಿ. ಆದರೆ, ನಾನು ಹೋರಾಡಿ ಸಾಯುತ್ತೇನೆ ಹೊರತು ರಾಜಿ ಮಾಡಿಕೊಳ್ಳುವುದಿಲ್ಲ. ಒಂದು ಸಣ್ಣ ಕಿಡಿ ಇಲ್ಲಿ ಇಂದು ಹೊತ್ತಿಕೊಂಡಿದೆ, ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಖಚಿತ ಎಂದರು.

Continue Reading

ಕರ್ನಾಟಕ

Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

Press Day: ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು, ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

The whole society should be very careful about fake news says CM Siddaramaiah
Koo

ಬೆಂಗಳೂರು: ಫೇಕ್ ನ್ಯೂಸ್‌ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Press Day) ತಿಳಿಸಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

ಫೇಕ್ ನ್ಯೂಸ್‌ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಫಾಸ್ಟ್‌ ಚೆಕ್‌ (Fact check) ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್, ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

ಇದನ್ನೂ ಓದಿ: Karnataka Rain :‌ ಮುಂದುವರಿದ ಮಳೆ ಅಬ್ಬರ; ಸಿಡಿಲು ಬಡಿದು ಹೊತ್ತಿ ಉರಿದ ಮನೆ, ಸೇತುವೆ ಮುಳುಗಡೆ

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Suraj Revanna Case: ಸೂರಜ್ ರೇವಣ್ಣ ಮತ್ತೆ 2 ದಿನ ಸಿಐಡಿ ಕಸ್ಟಡಿಗೆ; ವಕೀಲ ದೇವರಾಜೇಗೌಡಗೆ ಜಾಮೀನು

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ 8 ದಿನ ಸಿಐಡಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್‌ಗೆ ಸೂರಜ್ ರೇವಣ್ಣನನ್ನು ಹಾಜರುಪಡಿಸಲಾಗಿತ್ತು. ಅವರಿಗೆ ಮತ್ತೆ 2 ದಿನ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಿಸಿದೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣನನ್ನು (Suraj Revanna Case) ಮತ್ತೆ ಎರಡು ದಿನ ಸಿಐಡಿ ಕಸ್ಟಡಿಗೆ ನೀಡಲು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಆದೇಶ ನೀಡಿದ್ದಾರೆ. ಮತ್ತೊಂದೆಡೆ ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿದ್ದ ವಕೀಲ ದೇವರಾಜೇಗೌಡಗೆ ಜಾಮೀನು ಸಿಕ್ಕಿದೆ.

ಯುವಕನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಅರೋಪದಡಿ ದಾಖಲಾದ ಪ್ರಕರಣದಲ್ಲಿ ಜೂನ್‌ 22ರಂದು ಸೂರಜ್‌ ರೇವಣ್ಣನನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದರು. ನಂತರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 8 ದಿನ ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿತ್ತು. ಇಂದು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಸೂರಜ್‌ನ ಹಾಜರುಪಡಿಸಲಾಗಿತ್ತು. ಹೀಗಾಗಿ ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್‌ ಸೂರಜ್‌ಗೆ ಜುಲೈ 3ರವರೆಗೆ ಕಸ್ಟಡಿ ವಿಸ್ತರಿಸಿದೆ.

ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ವೇಳೆ ಮತ್ತೆ ಆರು ದಿನ ಕಸ್ಟಡಿಗೆ ನೀಡುವಂತೆ ಎಸ್‌ಪಿಪಿ ಅಶೋಕ್ ನಾಯಕ್ ಮನವಿ ಮಾಡಿದರು. ವಾಯ್ಸ್ ಸ್ಯಾಂಪಲ್ಸ್ ಸಂಗ್ರಹ ಮಾಡಬೇಕಿದೆ, ಪ್ರತಿನಿತ್ಯ ಏನೆಲ್ಲಾ ತನಿಖೆ ನಡೆದಿದೆ, ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಈ ವೇಳೆ ಎಂಟು ದಿನ ಕಸ್ಟಡಿಯಲ್ಲಿದ್ದಾಗ ಏನಾದೂ ತೊಂದರೆ ನೀಡಿದರಾ ಎಂದು ಸೂರಜ್‌ಗೆ ಜಡ್ಜ್ ಪ್ರಶ್ನೆ ಕೇಳಿದರು. ಯಾವುದೇ ತೊಂದರೆ ನೀಡಿಲ್ಲ ಎಂದು ಸೂರಜ್ ಉತ್ತರಿಸಿದ್ದಾರೆ. ಬಳಿಕ 2 ದಿನ ಕಸ್ಟಡಿ ವಿಸ್ತರಿಸಲು ನ್ಯಾಯಾಧೀಶರು ಸೂಚಿಸಿದ್ದಾರೆ.

ಇದನ್ನೂ ಓದಿ | New Criminal Law: ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ ಹಾಸನದಲ್ಲಿ ದಾಖಲು, ಯಾವ ಕೇಸ್?‌

ವಕೀಲ ದೇವರಾಜೇಗೌಡಗೆ ಜಾಮೀನು

Prajwal Revanna case Devaraje Gowda should be given mental treatment says Congress

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. 2023ರ ಡಿ.29ರಂದು ರಂದು ಅತ್ಯಾಚಾರ ಮಾಡಿದ್ದಾರೆ ಎಂದು 2024ರ ಏ.1 ರಂದು ಸಂತ್ರಸ್ತೆ ದೂರು ನೀಡಿದ್ದರು. ಇದಕ್ಕೂ ಮೊದಲು ಹನಿಟ್ರ್ಯಾಪ್ ಎಂದು ದೇವರಾಜೇಗೌಡ ಮಾ.28 ರಂದು ದೂರು ನೀಡಿದ್ದರು. ಇದೀಗ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಜಾಮೀನು ನೀಡಲಾಗಿದೆ.

ಮಾರ್ಚ್ 29 ರಂದು ದೇವರಾಜೇಗೌಡ ವಿರುದ್ಧ ಸಂತ್ರಸ್ತೆ ಪತಿ ದೂರು ನೀಡಿದ್ದರು. ಅದರಲ್ಲಿ ಅತ್ಯಾಚಾರದ ಬಗ್ಗೆ ಯಾವುದೇ ಚಕಾರವಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ದೇವರಾಜೇಗೌಡ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿದ ಬಳಿಕ ವಕೀಲ ದೇವರಾಜೇಗೌಡಗೆ ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ನೀಡಿ ಆದೇಶಿಸಿದೆ.

ವಕೀಲ ದೇವರಾಜೇಗೌಡ ಬಂಧನವಾಗಿದ್ದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿತ್ತು.

Continue Reading

ಕರ್ನಾಟಕ

Actor Darshan: ದರ್ಶನ್ ಅಪ್ಪಿಕೊಂಡು ಕಣ್ಣೀರಿಟ್ಟ ತಾಯಿ ಮೀನಾ; ಕುಟುಂಬಸ್ಥರನ್ನು ಕಂಡು ನಟ ಭಾವುಕ

Actor Darshan: ದರ್ಶನ್‌ ಅವರ ತಾಯಿ ಮೀನಾ, ತಮ್ಮ ದಿನಕರ್, ದರ್ಶನ್ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್‌ ಪರಪ್ಪನ ಅಗ್ರಹಾರ ಜೈಲಿಗೆ ಸೋಮವಾರ ಭೇಟಿ ನೀಡಿದ್ದರು. ಕುಟುಂಬಸ್ಥರನ್ನು ಕಂಡು ದರ್ಶನ್‌ ಕೂಡ ಭಾವುಕರಾಗಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರನ್ನು ಕುಟುಂಬಸ್ಥರು ಸೋಮವಾರ ಭೇಟಿ ಮಾಡಿದರು. ಕುಟುಂಬಸ್ಥರನ್ನು ನೋಡುತ್ತಿದ್ದಂತೆ ದರ್ಶನ್ ಭಾವುಕರಾಗಿದ್ದು, ಈ ವೇಳೆ ಮಗನನ್ನು ಅಪ್ಪಿಕೊಂಡು ತಾಯಿ ಮೀನಾ ಕೂಡ ಕಣ್ಣೀರು ಹಾಕಿದ್ದಾರೆ. ತನ್ನ ಸ್ಥಿತಿ ಕಂಡು ಗೋಳಾಡುತ್ತಿದ್ದ ತಾಯಿಗೆ ದರ್ಶನ್ (Actor Darshan) ಸಮಾಧಾನ ಹೇಳಿದ್ದಾರೆ.

ಭೇಟಿ ವೇಳೆ ಮಗ ವಿನೀಶ್‌ನನ್ನು ತೊಡೆಯ ಮೇಲೆ ಕೂರಿಸಿಕೊಂಡು ದರ್ಶನ್ ಮುದ್ದಾಡಿದ್ದಾರೆ. ಸ್ನೇಹಿತರಂತಿದ್ದ ತಂದೆ-ಮಗನ ಸ್ಥಿತಿ ಕಂಡು ದರ್ಶನ್ ಪತ್ನಿ ವಿಜಯಲಕ್ಷ್ಮಿ ಭಾವುಕರಾಗಿದ್ದಾರೆ. ಇನ್ನು ದರ್ಶನ್‌ಗೆ ಸಹೋದರ ದಿನಕರ್ ತೂಗುದೀಪ್ ಧೈರ್ಯ ತುಂಬಿದ್ದು, ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಕಳೆದ ಹತ್ತು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಹೀಗಾಗಿ ಹಲವು ನಟ, ನಟಿಯರು ಹಾಗೂ ಕುಟುಂಬಸ್ಥರು ನಟ ದರ್ಶನ್‌ರನ್ನು ಭೇಟಿ ಮಾಡುತ್ತಿದ್ದಾರೆ.

ಇದನ್ನೂ ಓದಿ | Actor Darshan: ಕೆಟ್ಟ ಕಮೆಂಟ್‌ ಮಾಡೋರನ್ನ ಬ್ಲಾಕ್‌ ಮಾಡಿ, ದರ್ಶನ್‌ ನಿರಪರಾಧಿ ಆಗಿ ಹೊರ ಬರಲಿ ಎಂದ ಅದ್ವಿತಿ ಶೆಟ್ಟಿ

ಇನ್ನು ಬಂದಿಖಾನೆ ಇಲಾಖೆ ಕಾನೂನನ್ನು ಗಾಳಿಗೆ ತೂರಿ ದರ್ಶನ್‌ಗೆ ರಾಜಾತಿಥ್ಯ ನೀಡಿದೆ. ಸಾಮಾನ್ಯರು ಜೈಲಿಗೆ ಎಂಟ್ರಿ‌ ಕೊಡಬೇಕಾದರೆ ಹತ್ತಾರು ರೂಲ್ಸ್‌ ಹೇಳುತ್ತಾರೆ. ಅದೇ ನಟ ದರ್ಶನ್ ಕುಟುಂಬಕ್ಕೆ ಮಾತ್ರ ಕಂಡಿಷನ್ ಇಲ್ಲವೆಂಬಂತಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ರಾಜಾರೋಷವಾಗಿ ನಟ ದರ್ಶನ್ ಕುಟುಂಬದವರಿಗೆ ಜೈಲು ಎಂಟ್ರಿ ನೀಡಲಾಗಿದೆ. ಮಾಧ್ಯಮಗಳ ಕಣ್ತಪ್ಪಿಸಿ ನಟ ದರ್ಶನ್ ಅವರನ್ನು ಕುಟುಂಬ ಭೇಟಿ ಮಾಡಿದೆ. ಪರಪ್ಪನ ಅಗ್ರಹಾರ ಜೈಲಿಗೆ ನಟ ದರ್ಶನ್ ತಾಯಿ, ತಮ್ಮ ಪತ್ನಿ ಮಗ ಎಂಟ್ರಿ ಕೊಟ್ಟರು. ಹತ್ತು ಗಂಟೆ ಸುಮಾರಿಗೆ ಕುಟುಂಬ ಜೈಲಿಗೆ ಬಂದಿತ್ತು. ಪರಪ್ಪನ ಅಗ್ರಹಾರ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಉದಯ್ ದರ್ಶನ್ ಭೇಟಿಗೆ ಕರೆದೊಯ್ದರು. ಉದಯ್‌ ಅವರು ಕಳೆದ ಸೋಮವಾರ ಸಹ ಮಾಧ್ಯಮಗಳ ಕಣ್ತಪ್ಪಿಸಿ ಪತ್ನಿ ಮಗನನ್ನು ಕರೆದೊಯ್ದಿದ್ದರು. ಇಂದು ಕೂಡ ಖಾಸಗಿ ಕಾರಿನಲ್ಲಿ ಉದಯ್‌ ಕುಟುಂಬವನ್ನು ಕರೆದೊಯ್ದಿದ್ದಾರೆ ಎಂದು ಹೇಳಲಾಗಿದೆ.

Actor Darshan: ದರ್ಶನ್ ನನ್ನ ಮಗು, ಆತ ಕೊಟ್ಟ ಕೊಡುಗೆ ಕಡೆ ನೋಡೋಣ ಎಂದ ಹಂಸಲೇಖ!

Actor Darshan is like my son says hamsalekha

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್‌ (Actor Darshan) ಸೆರೆವಾಸ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟು ದಿನವೂ ದರ್ಶನ್‌ ಅವರ ಅಮ್ಮ ಹಾಗೂ ತಮ್ಮ ಮಗನ ಭೇಟಿಗೆ ಸೆರೆಮನೆಯತ್ತ ಕಾಲಿಟ್ಟಿರಲಿಲ್ಲ. ಇಂದಾದರೂ ಅವರು ಆಗಮಿಸಲಿದ್ದಾರಾ ಎಂಬ ಕುತೂಹಲ ಮೂಡಿದೆ. ರಚಿತಾ ರಾಮ್, ರಕ್ಷಿತಾ, ಪ್ರೇಮ್ ಸೇರಿದಂತೆ ಸಾಕಷ್ಟು ಮಂದಿ ದರ್ಶನ್ ಪರ ನಿಂತಿದ್ದಾರೆ. ಈಗ ನಾದ ಬ್ರಹ್ಮ ಹಂಸಲೇಖ ಕೂಡ ದರ್ಶನ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಂಸಲೇಖ ಮಾತನಾಡಿ ʻʻನಾವು ಸಿಟ್ಟನ್ನು ಸ್ಕ್ರಿಪ್ಟ್ ಮಾಡಬೇಕು. ದ್ವೇಷ ಇದೆಯಲ್ಲ ಅದನ್ನು ಕ್ಯಾರೆಕ್ಟರ್ ಮಾಡಬೇಕು. ಸಿಟ್ಟು ಅಂದರೆ ಅದೊಂದು ಸ್ಕ್ರಿಪ್ಟ್‌ . ದ್ವೇಷ ಅಂದರೆ ಅದು ಕ್ಯಾರೆಕ್ಟರ್ ಅಯ್ಯ. ಆತರ ಸಿನಿಮಾದಲ್ಲಿ ತೋರಿಸಬೇಕಷ್ಟೆ ನಾವು. ನಿಜ ಜೀವನದಲ್ಲಿ ಸ್ಕ್ರಿಪ್ಟ್ ತರಬಾರದು. ನಿಜ ಜೀವನದಲ್ಲಿ ಕ್ಯಾರೆಕ್ಟರ್ ಅನ್ನು ತರಬಾರದು. ಇದು ಕಲಾವಿದರ ಕರ್ತವ್ಯ.” ಎಂದು ಹಂಸಲೇಖ ಹೇಳಿದ್ದಾರೆ.

“ದರ್ಶನ್ ನನ್ನ ಮಗು ಅಂತ ತಿಳಿದುಕೊಳ್ಳಿ. ನನ್ನ ಮಗು ತಪ್ಪು ಮಾಡಿದ್ದರೆ, ತಂದೆ ಎಷ್ಟು ನೋವು ತಿಂತಾನೋ ಅಷ್ಟೇ ನಾನು ನೋವು ತಿನ್ನುತ್ತೀನಿ. ಆ ಮಗು ಕೂಡ ಅಷ್ಟೇ ನೋವು ತಿನ್ನುತ್ತಿರುತ್ತೆ. ನಾವು ಆತ ಕೊಟ್ಟಿರುವ ಕೊಡುಗೆ ಕಡೆ ನೋಡೋಣ.” ಎಂದು ದರ್ಶನ್ ಜೈಲು ಸೇರಿರುವ ಬಗ್ಗೆ ಹಂಸಲೇಖ ಹೇಳಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದ ನಷ್ಟದ ಹಾದಿ ಹಿಡಿದಿರುವ ಬಗ್ಗೆನೂ ಹಂಸಲೇಖ ಪ್ರತಿಕ್ರಿಯೆ ನೀಡಿದ್ದಾರೆ. “ಚಂದನವನ ಎಷ್ಟು ಕೀರ್ತಿಯನ್ನು ಗಳಿಸಿತು. ಎಷ್ಟು ಪ್ರಶಸ್ತಿಗಳು. ಎಷ್ಟು ರಾಷ್ಟ್ರ ಪ್ರಶಸ್ತಿಗಳು. ಎಷ್ಟು ಗೌರವ. ಎಂತಹ ಪ್ರತಿಭಾವಂತರು ಹುಟ್ಟಿ ಬೆಳೆದಿದ್ದಾರೆ. ಅಂದರೆ, ಆ ಎತ್ತರಕ್ಕೆ ಏರಿದ್ದಾರೆ. ಆ ಎತ್ತರಕ್ಕೆ ಹೋದ ಮೇಲೆ ಅಲ್ಲಿಂದ ಕೆಳಗೆ ಬೀಳಬೇಕಾಗುತ್ತೆ. ಹಾಗಾಗುವುದು ಬೇಡ. ಅಲ್ಲಿಂದ ಬಿದ್ದ ಕೂಡಲೇ ಅಲ್ಲಿಂದ ಮತ್ತೆ ಏಳುವ ಚಾನ್ಸ್ ಇದೆ.” ಎಂದು ಹಂಸಲೇಖ ಚಿತ್ರರಂಗದ ಬಗ್ಗೆ ಹೇಳಿದ್ದಾರೆ.

Actor Darshan:  ದರ್ಶನ್‌‌‌‌‌‌ ವಿರುದ್ಧ ಪರೋಕ್ಷವಾಗಿ ಕೌಂಟರ್‌ ಕೊಟ್ಟ ನಟ ಜಗ್ಗೇಶ್!

ಜೈಲೂಟ ಒಗ್ಗದೆ ಇದ್ದರೂ ವಿಧಿಯಿಲ್ಲದೆ ಜೈಲೂಟ ಸವಿಯುತ್ತಿರುವ ದರ್ಶನ್ ಇಂದು ಜೈಲಿನ ಮೆನುವಿನಂತೆ ಉಪ್ಪಿಟ್ಟು ಸೇವಿಸಿದ್ದಾನೆ. ಜೈಲಿನಲ್ಲಿ ಮಾನಸಿಕವಾಗಿ ಕುಗ್ಗಿ ಹೋಗಿರುವ ನಟ ದರ್ಶನ್ ತಾಯಿ ಮತ್ತು ಸಹೋದರ ಇಂದು ಭೇಟಿ ನೀಡಲಿದ್ದು, ದರ್ಶನ್‌ಗೆ ತಾಯಿ ಮತ್ತು ಸಹೋದರ ಧೈರ್ಯ ಹೇಳಲಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ದರ್ಶನ್ ಮಡದಿ ಮಗ ಆಗಮಿಸಿದ್ದರು. ಅವರು ಬಂದು ಹೋದ ದಿನ ಖುಷಿಯಾಗಿದ್ದ ದರ್ಶನ್‌, ಬಳಿಕ ಮತ್ತೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿ ಹೋಗಿದ್ದಾನೆ. ಸಹ ಬಂಧಿಗಳ ಜೊತೆ ಬೆರೆಯದೆ ಒಬ್ಬಂಟಿಯಾಗಿ ಕುಳಿತು ಮೌನಕ್ಕೆ ಶರಣಾಗಿದ್ದಾನೆ.

Continue Reading
Advertisement
Medha Patkar
ದೇಶ17 mins ago

Medha Patkar: ನರ್ಮದಾ ಬಚಾವೋ ಹೋರಾಟಗಾರ್ತಿ ಮೇಧಾ ಪಾಟ್ಕರ್‌ಗೆ ಜೈಲು; 10ಲಕ್ಷ ರೂ. ದಂಡ

Karave Protest
ಕರ್ನಾಟಕ19 mins ago

Karave Protest: ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ನಾರಾಯಣ ಗೌಡ ನಿಯೋಗ ಮನವಿ; ಶೀಘ್ರವೇ ಕ್ರಮ ಎಂದ ಸಿಎಂ

Arecanut Insurance Karnataka last date
ಕೃಷಿ38 mins ago

Arecanut Insurance : ಮೆಣಸು, ಅಡಿಕೆಗೆ ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

Thalapathy Vijay
Latest57 mins ago

Thalapathy Vijay: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

The whole society should be very careful about fake news says CM Siddaramaiah
ಕರ್ನಾಟಕ60 mins ago

Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

Money Guide
ಮನಿ-ಗೈಡ್1 hour ago

Money Guide: ವಿದೇಶ ಪ್ರವಾಸಕ್ಕೆ ಮುಂದಾಗಿದ್ದೀರಾ? ಅತ್ಯುತ್ತಮ ಕೊಡುಗೆ ನೀಡುವ ಈ ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ ಬಗ್ಗೆ ತಿಳಿಯಿರಿ

Suraj Revanna Case
ಪ್ರಮುಖ ಸುದ್ದಿ1 hour ago

Suraj Revanna Case: ಸೂರಜ್ ರೇವಣ್ಣ ಮತ್ತೆ 2 ದಿನ ಸಿಐಡಿ ಕಸ್ಟಡಿಗೆ; ವಕೀಲ ದೇವರಾಜೇಗೌಡಗೆ ಜಾಮೀನು

Actor Yash to recreate the 50s and 70s era in Toxic
ಸಿನಿಮಾ1 hour ago

Actor Yash: ರಾಕಿಂಗ್‌ ಸ್ಟಾರ್‌ ಯಶ್‌ ʼಟಾಕ್ಸಿಕ್‌ʼ ಸಿನಿಮಾದಿಂದ ಹೊರ ಬಿತ್ತು ಬಿಗ್‌ ಅಪ್‌ಡೇಟ್‌!

New Rules
ವಾಣಿಜ್ಯ2 hours ago

New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

new criminal law
ಕ್ರೈಂ2 hours ago

New Criminal Law: ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ ಹಾಸನದಲ್ಲಿ ದಾಖಲು, ಯಾವ ಕೇಸ್?‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ24 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌