Foeticide Case: ಬಾಗಲಕೋಟೆಯಲ್ಲಿ ಮತ್ತೊಂದು ಭ್ರೂಣ ಹತ್ಯೆ: ಗಾಢ ನಿದ್ರೆಯಲ್ಲಿದ್ದಾರಾ ಅಧಿಕಾರಿಗಳು? - Vistara News

ಬಾಗಲಕೋಟೆ

Foeticide Case: ಬಾಗಲಕೋಟೆಯಲ್ಲಿ ಮತ್ತೊಂದು ಭ್ರೂಣ ಹತ್ಯೆ: ಗಾಢ ನಿದ್ರೆಯಲ್ಲಿದ್ದಾರಾ ಅಧಿಕಾರಿಗಳು?

Foeticide Case: ಕೆಲವು ದಿನಗಳ ಹಿಂದೆಯಷ್ಟೇ ಬಾಲಕೋಟೆಯ ಮಹಾಲಿಂಗಪುರದಲ್ಲಿ ಮೂರನೇ ಮಗು ಹೆಣ್ಣು ಎಂಬದನ್ನು ಪತ್ತೆ ಮಾಡಿಸಿ ಮನೆಯಲ್ಲಿಯೇ ಗರ್ಭಪಾತ ಮಾಡಿಸಿದ ಘಟನೆ ಬೆಳಕಿಗೆ ಬಂದಿತ್ತು. ಘಟನೆಯಲ್ಲಿ ಮಹಾರಾಷ್ಟ್ರ ಮೂಲದ ಗರ್ಭಿಣಿ ಮೃತಪಟ್ಟಿದ್ದರು. ಪೊಲೀಸರು ನರ್ಸ್‌ ಸೇರಿದಂತೆ ಹಲವರನ್ನು ಬಂಧನ ಮಾಡಿದ್ದರು. ಇದೀಗ ಬಾಗಲಕೋಟೆ ಜಿಲ್ಲೆಯಲ್ಲಿ ಭ್ರೂಣ ಹತ್ಯೆಯ ಎರಡನೇ ಪ್ರಕರಣ ಇದು. ಇದರಿಂದಾಗಿ ಜನ ಜಿಲ್ಲೆಯ ಅಧಿಕಾರಿಗಳ ಕಾರ್ಯವೈಖರಿಗೆ ಛೀಮಾರಿ ಹಾಕುತ್ತಿದ್ದಾರೆ.

VISTARANEWS.COM


on

Foeticide Case Foeticide another Case in Bagalkot
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟೆ: ರಾಜ್ಯದಲ್ಲಿ ಭ್ರೂಣ ಹತ್ಯೆ ಜಾಲದ ಕರಾಳ ಮುಖಗಳು ಒಂದೊಂದೇ ಬಯಲಾಗುತ್ತಿವೆ. ಈಗಾಗಲೇ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆಯನ್ನು ಕಾನೂನು ಬಾಹಿರ ಎಂದು ಘೋಷಿಸಿ, ಕಠಿಣ ಕ್ರಮಗಳ ಕಾನೂನು ಇದ್ದರೂ ಇದನ್ನು ತಡೆಯಲಾಗದಿರುವ (Foeticide Case) ಬಗ್ಗೆ ಈಗ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇದೆಲ್ಲದರ ನಡುವೆ ಬಾಗಲಕೋಟೆಯಲ್ಲಿ ಮತ್ತೊಂದು ಭ್ರೂಣ ಹತ್ಯೆ ಪ್ರಕರಣ ಬಯಲಾಗಿದೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಭ್ರೂಣ ಹತ್ಯೆ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಭ್ರೂಣ ಹತ್ಯೆ ಆಗಿದೆ. ನಗರದ ಹೊರ ವಲಯದ ಕಸದ ರಾಶಿ ನಡುವೆ ನವಜಾತ ಶಿಶುವಿನ ಶವ ಕಂಡುಬಂದಿದೆ.

ಕೆಲವು ದಿನಗಳ ಹಿಂದೆಯಷ್ಟೇ ಬಾಲಕೋಟೆಯ ಮಹಾಲಿಂಗಪುರದಲ್ಲಿ ಮೂರನೇ ಮಗು ಹೆಣ್ಣು ಎಂಬದನ್ನು ಪತ್ತೆ ಮಾಡಿಸಿ ಮನೆಯಲ್ಲಿಯೇ ಗರ್ಭಪಾತ ಮಾಡಿಸಿದ ಘಟನೆ ಬೆಳಕಿಗೆ ಬಂದಿತ್ತು. ಘಟನೆಯಲ್ಲಿ ಮಹಾರಾಷ್ಟ್ರ ಮೂಲದ ಗರ್ಭಿಣಿ ಮೃತಪಟ್ಟಿದ್ದರು. ಪೊಲೀಸರು ನರ್ಸ್‌ ಸೇರಿದಂತೆ ಹಲವರನ್ನು ಬಂಧನ ಮಾಡಿದ್ದರು. ಇದೀಗ ಬಾಗಲಕೋಟೆ ಜಿಲ್ಲೆಯಲ್ಲಿ ಭ್ರೂಣ ಹತ್ಯೆಯ ಎರಡನೇ ಪ್ರಕರಣ ಇದು. ಇದರಿಂದಾಗಿ ಜನ ಜಿಲ್ಲೆಯ ಅಧಿಕಾರಿಗಳ ಕಾರ್ಯವೈಖರಿಗೆ ಛೀಮಾರಿ ಹಾಕುತ್ತಿದ್ದಾರೆ.

ಇದನ್ನೂ ಓದಿ: Weather Updates:ಇಡೀ ರಾತ್ರಿ ಭಾರೀ ಮಳೆ; ಮುಂಗಾರು ಆರಂಭದಲ್ಲೇ ಬೆಂಗಳೂರು ಅಸ್ತವ್ಯಸ್ತ

Foeticide another Case in Bagalkot

ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರ ಭೇಟಿ ಬೆನ್ನಲ್ಲೇ ಜಿಲ್ಲೆಯಲ್ಲಿ ವ್ಯಾಪಕವಾಗಿ ಭ್ರೂಣ ಹತ್ಯೆಯ ಜಾಲಗಳು ಕಾಣಿಸುತ್ತಿವೆ. ನಗರದ ಹೊರ ವಲಯದ ಕಸದ ರಾಶಿ ನಡುವೆ ನವಜಾತ ಶಿಶುವಿನ ಶವ ಕಂಡುಬಂದಿದೆ. ಈಗಾಗಲೇ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆಯನ್ನು ಕಾನೂನು ಬಾಹಿರ ಎಂದು ಘೋಷಿಸಿ, ಕಠಿಣ ಕ್ರಮಗಳ ಕಾನೂನು ಇದ್ದರೂ ಇದನ್ನು ತಡೆಯಲಾಗದಿರುವ ಬಗ್ಗೆ ಈಗ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮತ್ತೆ ಇಂಥ ಪ್ರಕರಣಗಳು ಆಗದಂತೆ ಕಾನೂನನ್ನು ಮತ್ತಷ್ಟು ಕಠಿಣ ಮಾಡಬೇಕು ಎಂದು ಜನರೂ ಕೂಡ ಒತ್ತಾಯಿಸುತ್ತಿದ್ದಾರೆ.

ಜಾಲಕ್ಕೆ ಅಧಿಕಾರಿಗಳು ಬೆಂಗಾವಲು?

ಇಷ್ಟೂ ಪ್ರಕರಣಗಳು ಆದರೂ ಆರೋಗ್ಯ ಇಲಾಖೆ, ಡಿಸಿಪಿಒ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗಾಢ ನಿದ್ರೆಯಲ್ಲಿದೆಯಾ? ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಲಿಂಗ ಪತ್ತೆ ,ಗರ್ಭಪಾತ,ಭ್ರೂಣ ಹತ್ಯೆ ಜಾಲಕ್ಕೆ ಅಧಿಕಾರಿಗಳು ಬೆಂಗಾವಲಾಗಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

ಇನ್ನು ವರದಿಗಳ ಪ್ರಕಾರ ಉತ್ತರ ಭಾರತದ ರಾಜ್ಯಗಳಿಗೆ ಹೋಲಿಸಿದರೆ, ದಕ್ಷಿಣ ಭಾರತದ ರಾಜ್ಯಗಳು ಈ ಹೆಣ್ಣು ಭ್ರೂಣ ಹತ್ಯೆ ತಡೆಯಲ್ಲಿ ಸಾಕಷ್ಟು ಪ್ರಗತಿಯನ್ನು ಸಾಧಿಸಿವೆ. ಮಧ್ಯ ಪ್ರದೇಶ, ಗುಜರಾತ್ ಮತ್ತು ಛತ್ತೀಸ್‌ಗಢಗಳಲ್ಲಿ ಈ ಪ್ರಕರಣಗಳು ಹೆಚ್ಚು ಆದರೂ, ಈಗ ಹೊರ ಬಿದ್ದಿರುವ ಮಾಹಿತಿಯನ್ನು ನೋಡುತ್ತಿದ್ದರೆ ಕರ್ನಾಟಕವೂ ಏನೂ ಕಡಿಮೆಯಿಲ್ಲ ಎನ್ನುವಂತಾಗುತ್ತಿದೆ. ಈ ಕಳಂಕವನ್ನು ನಾವು ತೊಡೆದುಕೊಳ್ಳಬೇಕಿದೆ. ಕಾನೂನು ಜಾರಿ, ಜಾಗೃತಿ ಜತೆಗೆ ತಂದೆ-ತಾಯಿಗಳ ಮನೋಸ್ಥಿತಿಯನ್ನು ಬದಲಾಯಿಸುವ ಪ್ರಯತ್ನಗಳು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ನಡೆಯಬೇಕು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast : ಉಡುಪಿಯಲ್ಲಿ ಭಾರಿ ಮಳೆಗೆ (Heavy Rain) ಮನೆ ಮುಂದಿದ್ದ ಬಾವಿಯೊಂದು ಕುಸಿದರೆ ಇತ್ತ ಮಂಗಳೂರಿನಲ್ಲಿ ಕಡಲ ಅಬ್ಬರಕ್ಕೆ ಮನೆಯೊಂದು (Karnataka rain) ಸಮುದ್ರಪಾಲಾಗಿದೆ. ಕೊಡಗಿನಲ್ಲಿ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ (Rain Effected) ಹಾನಿಯಾಗಿದೆ.

VISTARANEWS.COM


on

By

karnataka Rain
Koo

ಉಡುಪಿ: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು (Rain News), ನೋಡ ನೋಡುತ್ತಿದ್ದಂತೆ ಮನೆ ಮುಂದಿದ್ದ ಬಾವಿಯೊಂದು ಪಾತಾಳ (well collapsed) ಸೇರಿದೆ. ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಕುಸಿತಕ್ಕೆ ಮನೆಯ ಬಾವಿ ಧಾರಾಶಾಹಿಯಾಗಿದೆ.

ಬಾವಿಯೊಂದು ಕುಸಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಉಡುಪಿಯ ಕಾರ್ಕಳ ತಾಲೂಕಿನ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪ ಘಟನೆ ನಡೆದಿದೆ. ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಭೂಮಿ ಒಳಗೆ ಬಾವಿ ಜಾರಿದೆ. ಬಾವಿ ಪಕ್ಕದಲ್ಲೆ ಮನೆ ಇದ್ದು, ಭೂಕುಸಿತದಿಂದಾಗಿ ಆತಂಕ ಹೆಚ್ಚಾಗಿದೆ.

ಮಂಗಳೂರಿನಲ್ಲಿ ಹೆಚ್ಚಾದ ಕಡಲ ಅಬ್ಬರ

ಮಂಗಳೂರಿನಲ್ಲಿ ಕಡಲ ಅಬ್ಬರ ಹೆಚ್ಚಾಗುತ್ತಿದ್ದು, ನೋಡ ನೋಡುತ್ತಿದ್ದಂತೆ ಮನೆಯೊಂದು ಸಮುದ್ರಕ್ಕುರುಳಿದೆ. ಉಳ್ಳಾಲದ ಬಟ್ಟಪಾಡಿ ಕಡಲ ತೀರದಲ್ಲಿದ್ದ ಮನೆಯು ಅಲೆಗಳ ಹೊಡೆತಕ್ಕೆ ಸಿಲುಕಿ ಬಿದ್ದು ಹೋಗಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಕಡಲ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮನೆಯವರನ್ನು ಸ್ಥಳಾಂತರ ಮಾಡಿತ್ತು. ಮನೆ ಬೀಳುವ ದೃಶ್ಯ ಮೊಬೈಲ್‌ನಲ್ಲಿ‌ ಸೆರೆಯಾಗಿದೆ.

karnataka rain

ಇದನ್ನೂ ಓದಿ: Rain News: ಅಬ್ಬರಿಸುತ್ತಿರುವ ಮುಂಗಾರು: 3 ಜಿಲ್ಲೆಗೆ ರೆಡ್‌ ಅಲರ್ಟ್‌, ಇನ್ನೂ ನಾಲ್ಕು ದಿನ ಜೋರು ಮಳೆ

ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ

ಕೊಡಗು ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ಅನಾಹುತವನ್ನೇ ಸೃಷ್ಟಿಸಿದೆ. ಭಾರೀ ಮಳೆಗೆ ಶಾಲಾ ಕಟ್ಟಡದ ಮೇಲೆ ಗುಡ್ಡ ಕುಸಿದಿದೆ. ಕೊಡಗಿನ ಮಡಿಕೇರಿ ತಾಲೂಕಿನ ಕೊಯನಾಡಿನಲ್ಲಿ ಘಟನೆ ನಡೆದಿದೆ. ಕೊಯನಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ವೇಳೆ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ ಯಾಗಿದೆ.

ಗುಡ್ಡದ ಮಣ್ಣು ಬಿದ್ದ ರಭಸಕ್ಕೆ ಶಾಲೆಯ ಗೋಡೆ ಧ್ವಂಸವಾಗಿದೆ. ಸುಮಾರು 80ಕ್ಕೂ ಅಧಿಕ ಮಕ್ಕಳು ಓದುತ್ತಿರುವ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ನಡೆಯುತ್ತಿದ್ದ ತರಗತಿಗೂ ಹಾನಿಯಾಗಿದೆ. ಮಳೆ ಹೆಚ್ಚಾದರೆ ಮಣ್ಣು ಮತ್ತಷ್ಟು ಕುಸಿಯುವ ಸಾಧ್ಯತೆ ಇದ್ದು, ಶಾಲೆ ಬಳಿಯ ಗುಡ್ಡದ ಮಣ್ಣು ತೆರವಿಗೆ ಪೋಷಕರು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ-ಮಳೆಗೆ ರಸ್ತೆಗೆ ಬಿದ್ದ ಬೃಹತ್ ಮರ

ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ಬೃಹತ್‌ ಮರವೊಂದು ಬುಡ ಸಮೇತ ಕಿತ್ತುಬಂದಿದೆ. ರಾಜ್ಯ ಹೆದ್ದಾರಿಗೆ ಬೃಹತ್ ಮರ ಉರುಳಿದೆ. ಮೂಡಿಗೆರೆಯಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ಮರ ತೆರವು ಮಾಡಿ ಸುಗಮ ಸಂಚಾರಕ್ಕೆ ಸ್ಥಳೀಯರು ಅವಕಾಶ ಮಾಡಿಕೊಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌; ತಿಂಗಳಾಂತ್ಯದವರೆಗೆ ಮೀನುಗಾರರಿಗೆ ನಿರ್ಬಂಧ

Karnataka Weather Forecast: ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಕರಾವಳಿ ಭಾಗಕ್ಕೆ ರೆಡ್‌ ಹಾಗೂ ಮಲೆನಾಡಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ತಿಂಗಳಾಂತ್ಯದವರೆಗೆ ಮೀನುಗಾರರಿಗೆ ಕಡಲತೀರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ಇನ್ನೊಂದು ವಾರ ಮಳೆಯು (Rain News) ಅಬ್ಬರಿಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಈ ದಿನ ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಹಗುರವಾದ ವರ್ಷಧಾರೆಯಾಗಲಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಭಾಗಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸುತ್ತಮುತ್ತ ಸಾಧಾರಣ ಮಳೆಯೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾದ ಮಧ್ಯಮದಿಂದ ಭಾರಿ ಮಳೆಯಾಗಲಿದ್ದು, ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಈ ಜಿಲ್ಲೆಗಳಲ್ಲಿ ಭಯಂಕರ ಮಳೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಜಿಲ್ಲೆಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಮೀನುಗಾರರಿಗೆ ಮುಂದುವರಿದ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್‌ 30ರವರೆಗೆ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

Karnataka Weather : ಗುಡುಗು ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

VISTARANEWS.COM


on

By

Karnataka Weather Forecast
Koo

ಮಂಗಳೂರು/ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ (Rain news) ಸುರಿಯುತ್ತಿರುವ ಹಿನ್ನೆಲೆ ಜೂ.28ರಂದು ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ (Karnataka weather Forecast) ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸುವಂತೆ ತಿಳಿಸಲಾಗಿದೆ.

ನಿರಂತರ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರ

ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ ಮಳೆಯೊಂದಿಗೆ 40-50ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾದರೆ, ಕರ್ನಾಟಕದ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ರಭಸವಾಗಿ ಗಾಳಿ ಬೀಸಲಿದೆ.

ಕಾರವಾರದಲ್ಲಿ ಕಾಟೇಜ್‌ಗಳು ನೆಲಸಮ

ಭಾರಿ ಗಾಳಿ ಮಳೆಗೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ದೇವಭಾಗದಲ್ಲಿ ಕಡಲಕೊರೆತ ಜೋರಾಗಿದೆ. ಜಂಗಲ್ ಲಾಡ್ಜಸ್‌‌ಗೆ ಸೇರಿದ ದೇವಭಾಗ ಬೀಚ್ ರೆಸಾರ್ಟ್ಸ್‌ನ 4 ಕಾಟೇಜ್‌ಗಳಿಗೆ ಹಾನಿಯಾಗಿದೆ. 18 ಕಾಟೇಜ್‌ಗಳಿದ್ದ ದೇವಭಾಗ್ ಬೀಚ್ ರೆಸಾರ್ಟ್‌ನಲ್ಲಿ ಮೂರ್ನಾಲ್ಕು ದಿನಗಳ ಅಂತರದಲ್ಲೇ 4 ಕಾಟೇಜ್‌ಗಳು ನೆಲಸಮವಾಗಿದೆ. ದಡಕ್ಕೆ ಅಪ್ಪಳಿಸುತ್ತಿರುವ ಆಳೆತ್ತರದ ಅಲೆಗಳಿಂದಾಗಿ ಕಾಟೇಜ್‌ಗಳು ಸಮುದ್ರಪಾಲಾದ ಪರಿಣಾಮ 1 ಕೋಟಿಗೂ ಅಧಿಕ ಹಾನಿಯಾಗಿದೆ. ಕಡಲ ತೀರಪ್ರದೇಶಕ್ಕೆ ಹೊಂದಿಕೊಂಡಿದ್ದ ಕಾಟೇಜ್‌ಗಳಿಗೆ ಹಾನಿಯಾಗಿದ್ದು, ಅರಣ್ಯ ಇಲಾಖೆಯ ನೂರಾರು ಮರಗಳು ನೆಲಕ್ಕುರುಳಿವೆ.

ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಭಾಸ್ಕೇರಿ ಬಳಿ ಬುಧವಾರ ರಾತ್ರಿ ಗುಡ್ಡ ಕುಸಿದಿತ್ತು. ಗುಡ್ಡ ಕುಸಿತದಿಂದ ಹೊನ್ನಾವರ ಬೆಂಗಳೂರು ನಡುವಿನ ಸಂಚಾರ ಅಸ್ತವ್ಯಸ್ಥವಾಗಿತ್ತು. ಇದೀಗ ಸ್ಥಳೀಯರ ಸಹಾಯದಿಂದ ಗುಡ್ಡದ ಮಣ್ಣನ್ನು ತಾಲೂಕು ಆಡಳಿತ ತೆರವು ಮಾಡಿದೆ.

ಕೊಡಗಿನಲ್ಲಿ ಕುಸಿದು ಬಿದ್ದ ತಡೆಗೋಡೆ

ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಬುಧವಾರ ಸುರಿದ ಗಾಳಿ‌ ಮಳೆಗೆ ತಡರಾತ್ರಿ ತಡೆಗೋಡೆ ಕುಸಿದಿದೆ. ಮಡಿಕೇರಿಯ ತ್ಯಾಗರಾಜ ಕಾಲೋನಿಯಲ್ಲಿ ಘಟನೆ ನಡೆದಿದೆ. ಮನೆಗಳ ರಕ್ಷಣೆಗಾಗಿ ನಿರ್ಮಿಸಿದ ತಡೆಗೋಡೆ ಕುಸಿದ ಹಿನ್ನೆಲೆಯಲ್ಲಿ ಹಿಂಬದಿಯ ಮನೆಗಳಿಗೆ ಅಪಾಯ ಕಾಡುತ್ತಿದೆ. ತಡೆಗೋಡೆ ಕುಸಿತ ಹಿನ್ನೆಲೆಯಲ್ಲಿ ಮನೆಯ ಮುಂಭಾಗಕ್ಕೆ ಟಾರ್ಪಲ್ ಹೊದಿಕೆ ಹಾಕಲಾಗಿದೆ. ಸ್ಥಳಕ್ಕೆ ಮಡಿಕೇರಿ ನಗರಸಭೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಡಗು ಜಿಲ್ಲೆಯ ಸಂಪಾಜೆ ಸಮೀಪದ ಕೊಯ್ನಾಡಿನಲ್ಲಿ ಭಾರಿ ಗಾಳಿ ಮಳೆಗೆ ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದಿದೆ. ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದು ಗೋಡೆ, ಕಿಟಕಿ ಜಖಂಗೊಂಡಿದೆ. ಶಾಲೆಗೆ ರಜೆ ಇದ್ದಿದ್ದರಿಂದ ಅನಾಹುತ ತಪ್ಪಿದೆ. ಸುಮಾರು 80 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಳೆದ ಬಾರಿ ಮಳೆಗಾಲದಲ್ಲಿ ಇದೇ ಸಮಸ್ಯೆ ಎದುರಾಗಿತ್ತು.

ಮಳೆ ನಿಂತರೂ ನಿಲ್ಲದ ನೆರೆಹಾವಳಿ

ಉಡುಪಿ ನಗರದ ಹಲವೆಡೆ ಮಳೆ ನಿಂತರೂ ನೆರೆಹಾವಳಿ ಕಡಿಮೆ ಆಗಿಲ್ಲ. ಮೂಡನಿಡಂಬೂರು ಪರಿಸರದಲ್ಲಿ ನೀರಿನ ಮಟ್ಟ ಹೆಚ್ಚಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಮನೆ ದೇವಾಲಯಗಳಿಗೆ ನೀರು ನುಗ್ಗಿದೆ. ದೈವಾರಾದನೆ ನಡೆಯುವ ಮೂಡನಿಡಂಬೂರು ಗರಡಿಯು ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಸುರಿದ ಭಾರಿ ಮಳೆ ಹಿನ್ನೆಲೆ ವಿಶ್ವ ಪ್ರಸಿದ್ಧ ಮರವಂತೆ ಬೀಚ್ ಬಳಿ ಸಮುದ್ರದ ರುದ್ರನರ್ತನ ಜೋರಾಗಿದೆ. ತೀರದಲ್ಲಿ ಹಾಕಲಾಗಿರುವ ಟೆಟ್ರಾ ಪಾರ್ಟ್ಸ್ ಗೆ ಬಂದು ಅಲೆಗಳು ಬಡಿಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು, ಪ್ರವಾಸಿಗರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉಡುಪಿಯ ಕಲ್ಸಂಕದ ಹೋಟೆಲ್- ಲಾಡ್ಜ್ ಗೆ ಮಳೆ ನೀರು ನುಗ್ಗಿದ್ದು, ಎರಡು ಪಂಪ್ ಇಟ್ಟು ನೀರು ಖಾಲಿ ಮಾಡಲಾಗಿದೆ. ಕೃಷ್ಣಮಠ, ಕಲ್ಸಂಕ, ಬೈಲಕೆರೆ ಭಾಗದ ಕೆಲ ಮನೆ ಕಟ್ಟಡಗಳಿಗೆ ನೀರು ನುಗ್ಗಿದೆ. ಲಾಡ್ಜ್, ಹೋಟೆಲ್‌ನ ಬೇಸ್ ಮೆಂಟ್‌ಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಇಂದ್ರಾಣಿ ನದಿ ತುಂಬಿ ಹರಿದ ಪರಿಣಾಮ ಸುತ್ತಮುತ್ತ ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ ಬಳಿ ಕೃತಕ ನೆರೆ ಸೃಷ್ಟಿಯಾಗಿದೆ. ಯಡ್ತರೆ ಗ್ರಾಮದ ಬಂಕೇಶ್ವರ ಅಂಗನವಾಡಿ ಕೇಂದ್ರಕ್ಕೆ ನೀರು ನುಗಿದ್ದು, ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಪಟ್ಟಣಪಂಚಾಯತ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ತರಾಟೆಗೆ ತೆಗೆದುಕೊಂಡರು. ಅಂಗನವಾಡಿಯ ಆಹಾರ ಸಾಮಾಗ್ರಿ ದಾಸ್ತಾನ ನೀರುಲಾಗಿತ್ತು. ಎರಡು ದಿನದಲ್ಲಿ ಒಳಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಲಾಗಿದೆ.

Continue Reading

ಮಳೆ

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Karnataka Weather Forecast : ಮಂಗಳೂರಲ್ಲಿ ಭಾರಿ ಮಳೆಗೆ (Rain News) ಸೇತುವೆಯಿಂದ ಹಾರಿ ಕಾರೊಂದು ಹೊಳೆಗೆ ಬಿದ್ದು, ಇಬ್ಬರು ಪವಾಡದಂತೆ ಪಾರಾಗಿದ್ದಾರೆ. ಇತ್ತ ಚಿಕ್ಕಮಗಳೂರಿನಲ್ಲಿ ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಬಾಲಕನಿಗೆ ಶಾಕ್‌ ಹೊಡೆದಿದ್ದು, ಗಾಯಗೊಂಡಿದ್ದಾನೆ.

VISTARANEWS.COM


on

By

karnataka Weather Forecast
Koo

ಮಂಗಳೂರು/ಚಿಕ್ಕಮಗಳೂರು: ಕರಾವಳಿ ಭಾಗದಲ್ಲಿ ಭಾರೀ (Karnataka weather Forecast) ಮಳೆಯಾಗುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರಿನ ಗಡಿಭಾಗ ಕಾಸರಗೋಡಿನಲ್ಲಿ ಕಾರೊಂದು ಹೊಳೆಗೆ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರ ರಕ್ಷಣೆ ಮಾಡಲಾಗಿದ್ದು, ಕಾರು ನೀರುಪಾಲಾಗಿದೆ. ಕಾಸರಗೋಡಿನ ಪಳ್ಳಂಜಿ-ಪಾಂಡ್ಯ ರಸ್ತೆಯಲ್ಲಿ ಘಟನೆ (Heavy rain) ನಡೆದಿದೆ.

ರಶೀದ್, ತಸ್ರೀಫ್ ಎಂಬುವವರು ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ತಡೆಬೇಲಿ ಇಲ್ಲದ ಕಾರಣ, ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಹೊಳೆಗೆ ಬಿದ್ದಿದೆ. ತುಂಬಿ ಹರಿಯುತ್ತಿದ್ದ ಹೊಳೆಯಲ್ಲೇ ಮರವನ್ನು ಹಿಡಿದು ಇಬ್ಬರು ಪ್ರಾಣ ಉಳಿಸಿಕೊಂಡಿದ್ದಾರೆ.

ಬಾಲಕನಿಗೆ ಕರೆಂಟ್‌ ಶಾಕ್‌

ಗಾಳಿ ಮಳೆಗೆ ರಸ್ತೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಬಾಲಕನಿಗೆ ಶಾಕ್‌ ಹೊಡೆದಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಎಚ್ ಹೊಸೂರು ಗ್ರಾಮದಲ್ಲಿ ಘಟನೆ ನಡೆದಿದೆ. ಎರಡನೇ ತರಗತಿ ವಿದ್ಯಾರ್ಥಿ ಶಾಲೆ ಮುಗಿಸಿ ಮನೆಗೆ ಹೋಗುತ್ತಿದ್ದ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗಲೇ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಇದನ್ನೂ ಗಮನಿಸಿದೇ ವಿದ್ಯುತ್‌ ತಂತಿ ತುಳಿದು ಕೆಳಗೆ ಬಿದ್ದಿದ್ದಾನೆ. ಸದ್ಯ ಬಾಲಕನಿಗೆ ಕೈ, ಬೆನ್ನು, ಕಾಲಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾನೆ. ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಬಾಲಕನಿಗೆ ಕೊಪ್ಪ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಕಾರವಾರದಲ್ಲಿ ಕಾಟೇಜ್‌ಗಳು ನೆಲಸಮ

ಭಾರಿ ಗಾಳಿ ಮಳೆಗೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ದೇವಭಾಗದಲ್ಲಿ ಕಡಲಕೊರೆತ ಜೋರಾಗಿದೆ. ಜಂಗಲ್ ಲಾಡ್ಜಸ್‌‌ಗೆ ಸೇರಿದ ದೇವಭಾಗ ಬೀಚ್ ರೆಸಾರ್ಟ್ಸ್‌ನ 4 ಕಾಟೇಜ್‌ಗಳಿಗೆ ಹಾನಿಯಾಗಿದೆ. 18 ಕಾಟೇಜ್‌ಗಳಿದ್ದ ದೇವಭಾಗ್ ಬೀಚ್ ರೆಸಾರ್ಟ್‌ನಲ್ಲಿ ಮೂರ್ನಾಲ್ಕು ದಿನಗಳ ಅಂತರದಲ್ಲೇ 4 ಕಾಟೇಜ್‌ಗಳು ನೆಲಸಮವಾಗಿದೆ. ದಡಕ್ಕೆ ಅಪ್ಪಳಿಸುತ್ತಿರುವ ಆಳೆತ್ತರದ ಅಲೆಗಳಿಂದಾಗಿ ಕಾಟೇಜ್‌ಗಳು ಸಮುದ್ರಪಾಲಾದ ಪರಿಣಾಮ 1 ಕೋಟಿಗೂ ಅಧಿಕ ಹಾನಿಯಾಗಿದೆ. ಕಡಲ ತೀರಪ್ರದೇಶಕ್ಕೆ ಹೊಂದಿಕೊಂಡಿದ್ದ ಕಾಟೇಜ್‌ಗಳಿಗೆ ಹಾನಿಯಾಗಿದ್ದು, ಅರಣ್ಯ ಇಲಾಖೆಯ ನೂರಾರು ಮರಗಳು ನೆಲಕ್ಕುರುಳಿವೆ.

ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಭಾಸ್ಕೇರಿ ಬಳಿ ಬುಧವಾರ ರಾತ್ರಿ ಗುಡ್ಡ ಕುಸಿದಿತ್ತು. ಗುಡ್ಡ ಕುಸಿತದಿಂದ ಹೊನ್ನಾವರ ಬೆಂಗಳೂರು ನಡುವಿನ ಸಂಚಾರ ಅಸ್ತವ್ಯಸ್ಥವಾಗಿತ್ತು. ಇದೀಗ ಸ್ಥಳೀಯರ ಸಹಾಯದಿಂದ ಗುಡ್ಡದ ಮಣ್ಣನ್ನು ತಾಲೂಕು ಆಡಳಿತ ತೆರವು ಮಾಡಿದೆ.

ಕೊಡಗಿನಲ್ಲಿ ಕುಸಿದು ಬಿದ್ದ ತಡೆಗೋಡೆ

ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಬುಧವಾರ ಸುರಿದ ಗಾಳಿ‌ ಮಳೆಗೆ ತಡರಾತ್ರಿ ತಡೆಗೋಡೆ ಕುಸಿದಿದೆ. ಮಡಿಕೇರಿಯ ತ್ಯಾಗರಾಜ ಕಾಲೋನಿಯಲ್ಲಿ ಘಟನೆ ನಡೆದಿದೆ. ಮನೆಗಳ ರಕ್ಷಣೆಗಾಗಿ ನಿರ್ಮಿಸಿದ ತಡೆಗೋಡೆ ಕುಸಿದ ಹಿನ್ನೆಲೆಯಲ್ಲಿ ಹಿಂಬದಿಯ ಮನೆಗಳಿಗೆ ಅಪಾಯ ಕಾಡುತ್ತಿದೆ. ತಡೆಗೋಡೆ ಕುಸಿತ ಹಿನ್ನೆಲೆಯಲ್ಲಿ ಮನೆಯ ಮುಂಭಾಗಕ್ಕೆ ಟಾರ್ಪಲ್ ಹೊದಿಕೆ ಹಾಕಲಾಗಿದೆ. ಸ್ಥಳಕ್ಕೆ ಮಡಿಕೇರಿ ನಗರಸಭೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಡಗು ಜಿಲ್ಲೆಯ ಸಂಪಾಜೆ ಸಮೀಪದ ಕೊಯ್ನಾಡಿನಲ್ಲಿ ಭಾರಿ ಗಾಳಿ ಮಳೆಗೆ ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದಿದೆ. ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದು ಗೋಡೆ, ಕಿಟಕಿ ಜಖಂಗೊಂಡಿದೆ. ಶಾಲೆಗೆ ರಜೆ ಇದ್ದಿದ್ದರಿಂದ ಅನಾಹುತ ತಪ್ಪಿದೆ. ಸುಮಾರು 80 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಳೆದ ಬಾರಿ ಮಳೆಗಾಲದಲ್ಲಿ ಇದೇ ಸಮಸ್ಯೆ ಎದುರಾಗಿತ್ತು.

ಮಳೆ ನಿಂತರೂ ನಿಲ್ಲದ ನೆರೆಹಾವಳಿ

ಉಡುಪಿ ನಗರದ ಹಲವೆಡೆ ಮಳೆ ನಿಂತರೂ ನೆರೆಹಾವಳಿ ಕಡಿಮೆ ಆಗಿಲ್ಲ. ಮೂಡನಿಡಂಬೂರು ಪರಿಸರದಲ್ಲಿ ನೀರಿನ ಮಟ್ಟ ಹೆಚ್ಚಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಮನೆ ದೇವಾಲಯಗಳಿಗೆ ನೀರು ನುಗ್ಗಿದೆ. ದೈವಾರಾದನೆ ನಡೆಯುವ ಮೂಡನಿಡಂಬೂರು ಗರಡಿಯು ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಸುರಿದ ಭಾರಿ ಮಳೆ ಹಿನ್ನೆಲೆ ವಿಶ್ವ ಪ್ರಸಿದ್ಧ ಮರವಂತೆ ಬೀಚ್ ಬಳಿ ಸಮುದ್ರದ ರುದ್ರನರ್ತನ ಜೋರಾಗಿದೆ. ತೀರದಲ್ಲಿ ಹಾಕಲಾಗಿರುವ ಟೆಟ್ರಾ ಪಾರ್ಟ್ಸ್ ಗೆ ಬಂದು ಅಲೆಗಳು ಬಡಿಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು, ಪ್ರವಾಸಿಗರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉಡುಪಿಯ ಕಲ್ಸಂಕದ ಹೋಟೆಲ್- ಲಾಡ್ಜ್ ಗೆ ಮಳೆ ನೀರು ನುಗ್ಗಿದ್ದು, ಎರಡು ಪಂಪ್ ಇಟ್ಟು ನೀರು ಖಾಲಿ ಮಾಡಲಾಗಿದೆ. ಕೃಷ್ಣಮಠ, ಕಲ್ಸಂಕ, ಬೈಲಕೆರೆ ಭಾಗದ ಕೆಲ ಮನೆ ಕಟ್ಟಡಗಳಿಗೆ ನೀರು ನುಗ್ಗಿದೆ. ಲಾಡ್ಜ್, ಹೋಟೆಲ್‌ನ ಬೇಸ್ ಮೆಂಟ್‌ಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಇಂದ್ರಾಣಿ ನದಿ ತುಂಬಿ ಹರಿದ ಪರಿಣಾಮ ಸುತ್ತಮುತ್ತ ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ ಬಳಿ ಕೃತಕ ನೆರೆ ಸೃಷ್ಟಿಯಾಗಿದೆ. ಯಡ್ತರೆ ಗ್ರಾಮದ ಬಂಕೇಶ್ವರ ಅಂಗನವಾಡಿ ಕೇಂದ್ರಕ್ಕೆ ನೀರು ನುಗಿದ್ದು, ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಪಟ್ಟಣಪಂಚಾಯತ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ತರಾಟೆಗೆ ತೆಗೆದುಕೊಂಡರು. ಅಂಗನವಾಡಿಯ ಆಹಾರ ಸಾಮಾಗ್ರಿ ದಾಸ್ತಾನ ನೀರುಲಾಗಿತ್ತು. ಎರಡು ದಿನದಲ್ಲಿ ಒಳಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಲಾಗಿದೆ.

ನಿರಂತರ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರ

ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ ಮಳೆಯೊಂದಿಗೆ 40-50ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾದರೆ, ಕರ್ನಾಟಕದ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ರಭಸವಾಗಿ ಗಾಳಿ ಬೀಸಲಿದೆ.

ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಜೂ.28ರಂದು ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸುವಂತೆ ತಿಳಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actor Darshan fans starts sticker trend mobile cover 6106
ಸ್ಯಾಂಡಲ್ ವುಡ್7 mins ago

Actor Darshan: ‘ಕೈದಿ ನಂ. 6106…ನಮ್ದೇ ದರ್ಬಾರುʼ ಅಂದ್ರು ಫ್ಯಾನ್ಸ್‌; ಮೊಬೈಲ್ ಕವರ್, ಆಟೋ, ಬೈಕ್‌ಗಳಲ್ಲಿ ಸ್ಟಿಕ್ಟರ್ ಟ್ರೆಂಡ್!

Valmiki Corporation Scam
ಕ್ರೈಂ10 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಸಿಬಿಐನಿಂದ ಬಂಧನ ಆತಂಕದಲ್ಲಿ ಮಾಜಿ ಸಚಿವ ನಾಗೇಂದ್ರ

Virat Kohli
ಕ್ರಿಕೆಟ್17 mins ago

Virat Kohli: ಕೊಹ್ಲಿ ಕ್ಲಾಸ್ ಪ್ಲೇಯರ್, ಫೈನಲ್​ನಲ್ಲಿ ಆಡುತ್ತಾರೆ ಎಂದು ಬೆಂಬಲ ಸೂಚಿಸಿದ ನಾಯಕ ರೋಹಿತ್​

karnataka Rain
ಮಳೆ18 mins ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Viral Video
Latest19 mins ago

Viral Video: ನಡುರಸ್ತೆಯಲ್ಲಿ ಶಿಕ್ಷಕಿಯ ಹಣೆಗೆ ಸಿಂಧೂರ ಹಚ್ಚಿ ಬಲವಂತವಾಗಿ ಮದುವೆಯಾದ ಯುವಕ!

Viral Video
Latest22 mins ago

Viral Video: ನೋಡುಗರ ಕಣ್ಮನ ಸೆಳೆಯುತ್ತಿದೆ ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಆಮಂತ್ರಣ ಪತ್ರಿಕೆ

Actor Darshan support by singer dr shamitha malnad
ಸ್ಯಾಂಡಲ್ ವುಡ್43 mins ago

Actor Darshan: ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

airtel price hike
ಪ್ರಮುಖ ಸುದ್ದಿ47 mins ago

Airtel Price Hike: ಜಿಯೋ ನಂತರ ಏರ್‌ಟೆಲ್‌ ಡೇಟಾ ಬಳಕೆದಾರರ ಜೇಬಿಗೂ ಕತ್ತರಿ; 21% ದರ ಏರಿಕೆ

murder Case in Kalaburagi
ಕಲಬುರಗಿ49 mins ago

Murder case : ಗಾಣಗಾಪುರ ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

Actor Darshan special appeal to the fans
ಸ್ಯಾಂಡಲ್ ವುಡ್1 hour ago

Actor Darshan: ಪರಪ್ಪನ ಅಗ್ರಹಾರದಿಂದಲೇ ಅಭಿಮಾನಿಗಳ ಬಳಿ ದರ್ಶನ್‌ ವಿಶೇಷ ಮನವಿ; ಏನದು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ18 mins ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ17 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು20 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ24 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌