GST Collection: ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ನಂ. 2; ಇಲ್ಲಿ ಸಂಗ್ರಹವಾಗಿದ್ದು ಎಷ್ಟು? - Vistara News

ವಾಣಿಜ್ಯ

GST Collection: ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ನಂ. 2; ಇಲ್ಲಿ ಸಂಗ್ರಹವಾಗಿದ್ದು ಎಷ್ಟು?

GST Collection: ಕಳೆದ ತಿಂಗಳ ಜಿಎಸ್‌ಟಿ ಸಂಗ್ರಹದ ಅಂಕಿ-ಅಂಶ ಬಿಡುಗಡೆಯಾಗಿದೆ. ಮೇಯಲ್ಲಿ ಬರೋಬ್ಬರಿ 1.73 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರವಾಗಿದ್ದು, ಕರ್ನಾಟಕ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದೆ. ರೀಫಂಡ್ ಕಳೆದ ಬಳಿಕ ನಿವ್ವಳ ಜಿಎಸ್​ಟಿ ಸಂಗ್ರಹ ಮೇಯಲ್ಲಿ 1.44 ಲಕ್ಷ ಕೋಟಿ ರೂ. ಆಗಿದೆ ಎಂದು ವರದಿ ತಿಳಿಸಿದೆ. ಮಹಾರಾಷ್ಟ್ರವು 26,854 ಕೋಟಿ ರೂ. ಸಂಗ್ರಹಿಸುವ ಮೂಲಕ ಎಂದಿನಂತೆ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಕರ್ನಾಟಕ ಇದೆ. ಇಲ್ಲಿ 11,889 ಕೋಟಿ ರೂ. ಸಂಗ್ರಹವಾಗಿದೆ.

VISTARANEWS.COM


on

GST Collection
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕಳೆದ ತಿಂಗಳ ಜಿಎಸ್‌ಟಿ ಸಂಗ್ರಹದ ಅಂಕಿ-ಅಂಶ ಬಿಡುಗಡೆಯಾಗಿದೆ (GST Collection). ಮೇಯಲ್ಲಿ ಬರೋಬ್ಬರಿ 1.73 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರವಾಗಿದ್ದು, ಕರ್ನಾಟಕ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದೆ. ಕಳೆದ ವರ್ಷದಕ್ಕೆ ಹೋಲಿಸಿದರೆ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಶೇ. 10ರಷ್ಟು ಹೆಚ್ಚಳವಾಗಿದೆ. ರೀಫಂಡ್ ಕಳೆದ ಬಳಿಕ ನಿವ್ವಳ ಜಿಎಸ್​ಟಿ ಸಂಗ್ರಹ ಮೇಯಲ್ಲಿ 1.44 ಲಕ್ಷ ಕೋಟಿ ರೂ. ಆಗಿದೆ ಎಂದು ವರದಿ ತಿಳಿಸಿದೆ.

ಹಣಕಾಸು ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿ, ʼʼಮೇಯಲ್ಲಿ ಜಿಎಸ್‌ಟಿ ಆದಾಯ 1.73 ಲಕ್ಷ ಕೋಟಿ ರೂ. ಆಗಿದ್ದು, ಕಳೆದ ವರ್ಷದಕ್ಕೆ ಹೋಲಿಸಿದರೆ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಶೇ. 10ರಷ್ಟು ಹೆಚ್ಚಳ ದಾಖಲಿಸಿದೆ. ಜತೆಗೆ ದೇಶೀಯ ವಹಿವಾಟುಗಳಲ್ಲಿ ಬಲವಾದ ಹೆಚ್ಚಳ (ಶೇಕಡಾ 15.3ರಷ್ಟು ಏರಿಕೆ) ಮತ್ತು ಆಮದುಗಳಲ್ಲಿ ಇಳಿಕೆ (ಶೇಕಡಾ 4.3ರಷ್ಟು ಕಡಿಮೆ) ಕಂಡು ಬಂದಿದೆʼʼ ಎಂದು ತಿಳಿಸಿದೆ.

ರಾಜ್ಯವಾರು ಸಂಗ್ರಹ

ಮಹಾರಾಷ್ಟ್ರವು 26,854 ಕೋಟಿ ರೂ. ಸಂಗ್ರಹಿಸುವ ಮೂಲಕ ಎಂದಿನಂತೆ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಕರ್ನಾಟಕ ಇದೆ. ಇಲ್ಲಿ 11,889 ಕೋಟಿ ರೂ. ಸಂಗ್ರಹವಾಗಿದೆ. ಗುಜರಾತ್‌ನಲ್ಲಿ 11,325 ಕೋಟಿ ರೂ. ಸಂಗ್ರಹವಾಗಿದ್ದು ಮೂರನೇ ಸ್ಥಾನದಲ್ಲಿದೆ.

ಜಿಎಸ್‌ಟಿ ಸಂಗ್ರಹದಲ್ಲಿ ಟಾಪ್‌ 10 ರಾಜ್ಯಗಳು

ರಾಜ್ಯ ಜಿಎಸ್‌ಟಿ ಸಂಗ್ರಹ (ಕೋಟಿ ರೂ.ಗಳಲ್ಲಿ)
ಮಹಾರಾಷ್ಟ್ರ26,854
ಕರ್ನಾಟಕ11,889
ಗುಜರಾತ್11,325
ತಮಿಳುನಾಡು9,768
ಹರಿಯಾಣ9,289
ಉತ್ತರಪ್ರದೇಶ9,091
ದೆಹಲಿ7,512
ಪಶ್ಚಿಮ ಬಂಗಾಳ5,377
ಒಡಿಶಾ5,027
ತೆಲಂಗಾಣ4,986

ವಿವಿಧ ತೆರಿಗೆಗಳ ಅಂಕಿ ಅಂಶ

  • ಕೇಂದ್ರ ಸರಕು ಮತ್ತು ಸೇವಾ ತೆರಿಗೆ (CGST): 32,409 ಕೋಟಿ ರೂ.
  • ರಾಜ್ಯ ಸರಕು ಮತ್ತು ಸೇವಾ ತೆರಿಗೆ (SGST): 40,265 ಕೋಟಿ ರೂ.
  • ಸಮಗ್ರ ಸರಕು ಮತ್ತು ಸೇವಾ ತೆರಿಗೆ (IGST): ಆಮದು ಸರಕುಗಳ ಮೇಲೆ ಸಂಗ್ರಹಿಸಿದ 39,879 ಕೋಟಿ ರೂ. ಸೇರಿದಂತೆ ಒಟ್ಟು 87,781 ಕೋಟಿ ರೂ.
  • ಸೆಸ್: ಆಮದು ಮಾಡಿದ ಸರಕುಗಳ ಮೇಲೆ ಸಂಗ್ರಹಿಸಿದ 1,076 ಕೋಟಿ ರೂ. ಸೇರಿದಂತೆ ಒಟ್ಟು 12,284 ಕೋಟಿ ರೂ.

ಏಪ್ರಿಲ್‌ನಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದ ಜಿಎಸ್‌ಟಿ ಸಂಗ್ರಹ

ಏಪ್ರಿಲ್‌ನ ಜಿಎಸ್‌ಟಿ ಸಂಗ್ರಹ ಸಾರ್ವಕಾಲಿಕ ದಾಖಲೆ ನಿರ್ಮಿಸಿತ್ತು. 2024ರ ಏಪ್ರಿಲ್‌ನ ಒಟ್ಟು ಜಿಎಸ್‌ಟಿ ಸಂಗ್ರಹವು 2.10 ಲಕ್ಷ ಕೋಟಿ ರೂ.ಗೆ ತಲುಪಿತ್ತು. ಒಟ್ಟಾರೆಯಾಗಿ ಪರೋಕ್ಷ ತೆರಿಗೆ ಆದಾಯವು ಶೇ. 12.4ರಷ್ಟು ಬೆಳವಣಿಗೆಯನ್ನು ದಾಖಲಿಸಿತ್ತು. ದೇಶೀಯ ವಹಿವಾಟು ಮತ್ತು ಆಮದುಗಳಲ್ಲಿನ ಹೆಚ್ಚಳ ಇದಕ್ಕೆ ಕಾರಣ.

ಟ್ಯಾಕ್ಸ್ ಕನೆಕ್ಟ್ ಅಡ್ವೈಸರಿ ಸರ್ವೀಸಸ್ ಎಲ್‌ಎಲ್‌ಪಿಯ ಪಾಲುದಾರ ವಿವೇಕ್ ಜಲನ್ ಈ ಬಗ್ಗೆ ಮಾತನಾಡಿ,  ʼʼ2017ರ ಜುಲೈಯಲ್ಲಿ ಈ ನಿಯಮ ಜಾರಿಗೆ ಬಂದಾಗಿನಿಂದ 2024ರ ಏಪ್ರಿಲ್‌ವರೆಗೆ ಜಿಎಸ್‌ಟಿ ಸಂಗ್ರಹವು ಸರಾಸರಿ ಮಾಸಿಕ ಆದಾಯವನ್ನು ಸುಮಾರು 0.9 ಲಕ್ಷ ಕೋಟಿ ರೂ.ಗೆ ಹೆಚ್ಚಿಸಿದೆʼʼ ಎಂದು ತಿಳಿಸಿದ್ದರು.

ಇದನ್ನೂ ಓದಿ: GST Collection: ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಜಿಎಸ್‌ಟಿ ಸಂಗ್ರಹ; ಏಪ್ರಿಲ್‌ನ ಕಲೆಕ್ಷನ್‌ ಎಷ್ಟು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಪ್ರಮುಖ ಸುದ್ದಿ

Passport Seva Portal: ಐದು ದಿನಗಳ ಕಾಲ ಪಾಸ್ ಪೋರ್ಟಲ್ ಸೇವಾ ಕಾರ್ಯ ಸ್ಥಗಿತ

ಪಾಸ್‌ಪೋರ್ಟ್ ಸೇವಾ ಪೋರ್ಟಲ್ (Passport Seva Portal) ತಾಂತ್ರಿಕ ನಿರ್ವಹಣೆ ಕಾರಣಕ್ಕಾಗಿ ಸ್ಥಗಿತಗೊಳ್ಳಲಿದ್ದು, ಈಗಾಗಲೇ ನಿಗದಿಯಾಗಿರುವ ಅಪಾಯಿಂಟ್‌ಮೆಂಟ್‌ಗಳು ಮರುನಿಗದಿ ಪಡಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2ರ ವರೆಗೆ ಯಾವುದೇ ಹೊಸ ಅಪಾಯಿಂಟ್‌ಮೆಂಟ್‌ಗಳನ್ನು ನಿಗದಿಪಡಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

VISTARANEWS.COM


on

By

Passport Seva Portal
Koo

ಪಾಸ್ ಪೋರ್ಟ್ ಪೋರ್ಟಲ್ ನ (Passport Seva Portal) ನಿರ್ವಹಣೆ ಕಾರ್ಯದ ಹಿನ್ನೆಲೆಯಲ್ಲಿ ಇನ್ನು ಐದು ದಿನಗಳ ಕಾಲ ಪಾಸ್ ಪೋರ್ಟಲ್ ಸೇವೆ ಸ್ಥಗಿತಗೊಳ್ಳಲಿದೆ. ಆಗಸ್ಟ್ 29ರ ಗುರುವಾರ 8 ಗಂಟೆಯಿಂದ ಸೆಪ್ಟೆಂಬರ್ 2ರ ಸೋಮವಾರ ಬೆಳಗ್ಗೆ 6 ಗಂಟೆಯವರೆಗೂ ಪೋರ್ಟಲ್ ಸೇವೆ ಸ್ಥಗಿತಗೊಳ್ಳುವುದಾಗಿ ಪ್ರಕಟಣೆ ತಿಳಿಸಿದೆ.

ಪಾಸ್‌ಪೋರ್ಟ್ ಸೇವಾ ಪೋರ್ಟಲ್ ತಾಂತ್ರಿಕ ನಿರ್ವಹಣೆ ಕಾರಣಕ್ಕಾಗಿ ಸ್ಥಗಿತಗೊಳ್ಳಲಿದ್ದು, ಈಗಾಗಲೇ ನಿಗದಿಯಾಗಿರುವ ಅಪಾಯಿಂಟ್‌ಮೆಂಟ್‌ಗಳು ಮರುನಿಗದಿ ಪಡಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2ರ ವರೆಗೆ ಯಾವುದೇ ಹೊಸ ಅಪಾಯಿಂಟ್‌ಮೆಂಟ್‌ಗಳನ್ನು ನಿಗದಿಪಡಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಪಾಸ್‌ಪೋರ್ಟ್ ಸೇವಾ ಪೋರ್ಟಲ್ ಅನ್ನು ಹೊಸ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಲು ಅಥವಾ ಪಾಸ್‌ಪೋರ್ಟ್ ನವೀಕರಿಸಲು ದೇಶಾದ್ಯಂತ ಕೇಂದ್ರಗಳಲ್ಲಿ ನೇಮಕಾತಿಗಳನ್ನು ಕಾಯ್ದಿರಿಸಲು ಬಳಸಲಾಗುತ್ತದೆ.

ನೇಮಕಾತಿಯ ದಿನದಂದು ಅರ್ಜಿದಾರರು ಪಾಸ್‌ಪೋರ್ಟ್ ಕೇಂದ್ರಗಳನ್ನು ತಲುಪಬೇಕು ಮತ್ತು ಪರಿಶೀಲನೆಗಾಗಿ ತಮ್ಮ ದಾಖಲೆಗಳನ್ನು ಒದಗಿಸಬೇಕು. ಇದರ ಅನಂತರ ಪೊಲೀಸ್ ಪರಿಶೀಲನೆ ನಡೆಯುತ್ತದೆ. ಬಳಿಕ ಪಾಸ್ ಪೋರ್ಟ್ ಅರ್ಜಿದಾರರ ವಿಳಾಸವನ್ನು ತಲುಪುತ್ತದೆ. ಅರ್ಜಿದಾರರು ನಿಯಮಿತ ಮೋಡ್ ಅನ್ನು ಆರಿಸಿಕೊಳ್ಳಬಹುದು. ಬಳಿಕ ಪಾಸ್‌ಪೋರ್ಟ್ ಅರ್ಜಿದಾರರನ್ನು 30- 45 ಕೆಲಸದ ದಿನಗಳಲ್ಲಿ ತಲುಪುತ್ತದೆ.


ಪೋರ್ಟಲ್ ಸೇವೆ ಸ್ಥಗಿತಗೊಂಡಿರುವುದರಿಂದ ಸೆಪ್ಟೆಂಬರ್ 2ರ ಬಳಿಕ ಪಾಸ್‌ಪೋರ್ಟ್ ಸೇವಾ ಪೋರ್ಟಲ್ ಹಿಂದಿನಂತೆ ಕಾರ್ಯ ನಿರ್ವಹಿಸಲಿದ್ದು, ಅರ್ಜಿದಾರರು ಅಲ್ಲಿಯವರೆಗೂ ಕಾಯಬೇಕಾಗುತ್ತದೆ.

ಇದನ್ನೂ ಓದಿ: Reliance Jio: ರಿಲಯನ್ಸ್ ಜಿಯೋನಿಂದ ಹೊಸ ಆಫರ್‌; 100 ಜಿಬಿ ಕ್ಲೌಡ್ ಸಂಗ್ರಹ ಉಚಿತ

ಪ್ರತಿಯೊಬ್ಬ ನಾಗರಿಕನ ಮೇಲೆ ಪರಿಣಾಮ ಬೀರಲಿದೆ ಈ ಬದಲಾವಣೆ

ಸೆಪ್ಟೆಂಬರ್ 1ರಿಂದ ಎಲ್‌ಪಿಜಿ (LPG) ಮತ್ತು ಆಧಾರ್ ಕಾರ್ಡ್‌ಗೆ (Aaadhar card) ಸಂಬಂಧಿಸಿ ಆರು ದೊಡ್ಡ ಬದಲಾವಣೆಗಳು (Rule Change) ಆಗಲಿವೆ. ಇದು ಪ್ರತಿಯೊಬ್ಬರ ಜೇಬಿನ ಮೇಲೂ ಪರಿಣಾಮ ಬೀರಲಿದೆ. ಈ ಬದಲಾವಣೆಗಳು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್‌ಗಳ (LPG cylinder) ಬೆಲೆ ಮತ್ತು ಕ್ರೆಡಿಟ್ ಕಾರ್ಡ್‌ಗಳ (Credit card) ನಿಯಮಗಳನ್ನು ಒಳಗೊಂಡಿವೆ. ಅಲ್ಲದೇ ತುಟ್ಟಿಭತ್ಯೆ ಕುರಿತು ಸರ್ಕಾರಿ ನೌಕರರಿಗೆ ವಿಶೇಷ ಪ್ರಕಟಣೆಗಳು ಸೇರಿವೆ.

ಎಲ್ ಪಿ ಜಿ ಸಿಲಿಂಡರ್ ಬೆಲೆ

ಪ್ರತಿ ತಿಂಗಳ ಮೊದಲ ದಿನಾಂಕದಂದು ಸರ್ಕಾರವು ಎಲ್‌ಪಿಜಿ ಬೆಲೆಯನ್ನು ಬದಲಾಯಿಸುತ್ತದೆ. ಅಂತೆಯೇ ಅಡುಗೆ ಅನಿಲ, ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಗಳಲ್ಲಿ ಬದಲಾವಣೆ ಸೆಪ್ಟೆಂಬರ್ ಮೊದಲ ದಿನವೇ ಕಾಣಬಹುದು.

ಎಟಿಎಫ್, ಸಿಎನ್‌‌ಜಿ, ಪಿಎನ್‌‌ಜಿ ದರಗಳು

ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳೊಂದಿಗೆ ತೈಲ ಮಾರುಕಟ್ಟೆ ಕಂಪೆನಿಗಳು ಏರ್ ಟರ್ಬೈನ್ ಇಂಧನ (ಎಟಿಎಫ್) ಮತ್ತು ಸಿಎನ್‌ಜಿ-ಪಿಎನ್‌ಜಿ ಬೆಲೆಗಳನ್ನು ಸಹ ಪರಿಷ್ಕರಿಸುತ್ತವೆ. ಈ ಕಾರಣದಿಂದಾಗಿ ಸೆಪ್ಟೆಂಬರ್ ಮೊದಲ ದಿನಾಂಕದಂದು ಅವುಗಳ ಬೆಲೆಯಲ್ಲಿ ಬದಲಾವಣೆಗಳನ್ನು ಕಾಣಬಹುದು.

ನಕಲಿ ಕರೆಗಳಿಗೆ ಕಡಿವಾಣ

ಸೆಪ್ಟೆಂಬರ್ 1ರಿಂದ ನಕಲಿ ಕರೆ ಮತ್ತು ಸಂದೇಶಗಳಿಗೆ ಕಡಿವಾಣ ಬೀಳಲಿದೆ. ನಕಲಿ ಕರೆಗಳು ಮತ್ತು ನಕಲಿ ಸಂದೇಶಗಳಿಗೆ ಕಡಿವಾಣ ಹಾಕುವಂತೆ ಟಿಆರ್‌‌ಎಐ ಟೆಲಿಕಾಂ ಕಂಪೆನಿಗಳಿಗೆ ಸೂಚನೆ ನೀಡಿದೆ. ಇದಕ್ಕಾಗಿ ಟಿಆರ್‌‌ಎಐ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಿದೆ.

ಕ್ರೆಡಿಟ್ ಕಾರ್ಡ್ ನಿಯಮಗಳು

ಸೆಪ್ಟೆಂಬರ್ 1ರಿಂದ ಎಚ್‌ಡಿಎಫ್‌ಸಿ ಬ್ಯಾಂಕ್ ಯುಟಿಲಿಟಿ ವಹಿವಾಟುಗಳ ರಿವಾರ್ಡ್ ಪಾಯಿಂಟ್‌ಗಳ ಮಿತಿಯನ್ನು ನಿಗದಿಪಡಿಸಲಿದೆ. ಇದರ ಅಡಿಯಲ್ಲಿ ಗ್ರಾಹಕರು ಈ ವಹಿವಾಟುಗಳಲ್ಲಿ ತಿಂಗಳಿಗೆ 2,000 ಪಾಯಿಂಟ್‌ಗಳವರೆಗೆ ಮಾತ್ರ ಪಡೆಯಬಹುದು.

ಐಡಿಎಫ್ ಸಿ ಫಸ್ಟ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳಲ್ಲಿ ಪಾವತಿಸಬೇಕಾದ ಕನಿಷ್ಠ ಮೊತ್ತ ಮತ್ತು ಪಾವತಿ ದಿನಾಂಕವನ್ನು 18 ರಿಂದ 15 ದಿನಗಳವರೆಗೆ ಕಡಿಮೆ ಮಾಡಲಾಗುತ್ತದೆ.

ಇದರ ಹೊರತಾಗಿಸೆಪ್ಟೆಂಬರ್ 1ರಿಂದ ಯುಪಿಐ ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಪಾವತಿಗಳಿಗಾಗಿ ರುಪೇ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುವ ಗ್ರಾಹಕರು ಇತರ ಪಾವತಿ ಸೇವಾ ಪೂರೈಕೆದಾರರ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುವಂತೆಯೇ ರಿವಾರ್ಡ್ ಪಾಯಿಂಟ್‌ಗಳನ್ನು ಪಡೆಯುತ್ತಾರೆ.

ತುಟ್ಟಿಭತ್ಯೆ

ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಘೋಷಣೆಯಾಗುವ ಸಾಧ್ಯತೆ ಇದೆ. ಸರ್ಕಾರವು ನೌಕರರಿಗೆ ತುಟ್ಟಿಭತ್ಯೆಯನ್ನು ಶೇಕಡಾ 3ರಷ್ಟು ಹೆಚ್ಚಿಸುವ ನಿರೀಕ್ಷೆಯಿದೆ.

ಆಧಾರ್ ಕಾರ್ಡ್ ಉಚಿತ ನವೀಕರಣ

ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲು ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 14 ಎಂದು ನಿಗದಿಪಡಿಸಲಾಗಿದೆ. ಸೆಪ್ಟೆಂಬರ್ 14ರ ಅನಂತರ ಆಧಾರ್ ಅನ್ನು ನವೀಕರಿಸಲು ಶುಲ್ಕವನ್ನು ಪಾವತಿಸಬೇಕಾಗುತ್ತದೆ.

Continue Reading

ವಾಣಿಜ್ಯ

Richest City: ಭಾರತದ ಶ್ರೀಮಂತ ನಗರ ಮುಂಬಯಿ; ನಾಲ್ಕನೇ ಸ್ಥಾನಕ್ಕೆ ಇಳಿದ ಬೆಂಗಳೂರು

ಭಾರತದ ಶ್ರೀಮಂತ ನಗರಗಳ (Richest City) ಪಟ್ಟಿಯನ್ನು ಹುರುನ್ ಇಂಡಿಯಾ ರೀಸರ್ಚ್ ಸಂಸ್ಥೆ ಬಿಡುಗಡೆ ಮಾಡಿದ್ದು ಇದು ದೇಶದ ಅತೀ ಹೆಚ್ಚು ಶ್ರೀಮಂತರು ಇರುವ ನಗರಗಳನ್ನು ಗುರುತಿಸಿ ಲೆಕ್ಕಾಚಾರ ನಡೆಸಿದೆ. ಭಾರತದ ಆರ್ಥಿಕ ರಾಜಧಾನಿ ವೇಗವಾಗಿ ಬೆಳೆಯುತ್ತಿರುವ ಮುಂಬಯಿ ಅನ್ನು ವಿಶ್ವದ ಮೂರನೇ ಶ್ರೀಮಂತ ನಗರವನ್ನಾಗಿ ಗುರುತಿಸಲಾಗಿದೆ.

VISTARANEWS.COM


on

By

Richest City
Koo

ಭಾರತದ ಶ್ರೀಮಂತ ನಗರವಾಗಿ (Richest City) ಮತ್ತೆ ಮುಂಬಯಿ (mumbai) ಮೊದಲ ಸ್ಥಾನ ಗಳಿಸಿದೆ. ದೆಹಲಿ (New Delhi) ಮತ್ತು ಹೈದರಾಬಾದ್ (Hyderabad) ಕ್ರಮವಾಗಿ ಎರಡು, ಮೂರು ಸ್ಥಾನಗಳನ್ನು ಅಲಂಕರಿಸಿದೆ. ಐಟಿ ಕ್ಯಾಪಿಟಲ್ (IT Capital) ಬೆಂಗಳೂರನ್ನು (bengaluru) ಹಿಂದಿಕ್ಕಿದ ಹೈದರಾಬಾದ್ ಶ್ರೀಮಂತ ನಗರಿ ಪಟ್ಟಿಯಲ್ಲಿ ಮೇಲೆರಿದ್ದು ಬೆಂಗಳೂರು ನಾಲ್ಕನೇ ಸ್ಥಾನಕ್ಕೆ ಇಳಿದಿದೆ.

ಭಾರತದ ಶ್ರೀಮಂತ ನಗರಗಳ ಪಟ್ಟಿಯನ್ನು ಹುರುನ್ ಇಂಡಿಯಾ ರೀಸರ್ಚ್ ಸಂಸ್ಥೆ ಬಿಡುಗಡೆ ಮಾಡಿದ್ದು ಇದು ದೇಶದ ಅತೀ ಹೆಚ್ಚು ಶ್ರೀಮಂತರು ಇರುವ ನಗರಗಳನ್ನು ಗುರುತಿಸಿ ಲೆಕ್ಕಾಚಾರ ನಡೆಸಿದೆ.

ಈ ವರ್ಷ ಭಾರತವು 94 ಹೊಸ ಬಿಲಿಯನೇರ್‌ಗಳನ್ನು ಸ್ವಾಗತಿಸಿದೆ. ಭಾರತದ ಬಿಲಿಯನೇರ್‌ಗಳು ಸಾಮೂಹಿಕ ಸಂಪತ್ತು ಸರಿಸುಮಾರು 1 ಟ್ರಿಲಿಯನ್‌ ಯುಎಸ್ ಡಾಲರ್. ಇದು ಒಟ್ಟು ಜಾಗತಿಕ ಸಂಪತ್ತಿನ ಶೇ. 7ರಷ್ಟಿದೆ. ಯುನೈಟೆಡ್ ಸ್ಟೇಟ್ಸ್ ಬಳಿಕ ಜಾಗತಿಕವಾಗಿ ಇದು ಎರಡನೇ ಅತಿ ಹೆಚ್ಚು ಏರಿಕೆಯಾಗಿದೆ.

ಇದು ಭಾರತದ ಆರ್ಥಿಕ ರಾಜಧಾನಿ ವೇಗವಾಗಿ ಬೆಳೆಯುತ್ತಿರುವ ಮುಂಬಯಿ ಅನ್ನು ವಿಶ್ವದ ಮೂರನೇ ಶ್ರೀಮಂತ ನಗರವನ್ನಾಗಿ ಮಾಡಿದೆ ಎಂದು ಹುರುನ್ ಇಂಡಿಯಾ ರೀಸರ್ಚ್ ಸಂಸ್ಥೆ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.

ಭಾರತದ ಅತ್ಯಂತ ಶ್ರೀಮಂತ ನಗರವಾದ ಮುಂಬಯಿ ಈಗ ಒಟ್ಟು 386 ಬಿಲಿಯನೇರ್‌ಗಳನ್ನು ಹೊಂದಿದೆ. ಈ ವರ್ಷವೊಂದರಲ್ಲೇ 58 ಹೊಸ ವ್ಯಕ್ತಿಗಳು ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ನಗರದ ಸಂಪತ್ತು ಕಳೆದ ವರ್ಷದಿಂದ ಶೇ. 47ರಷ್ಟು ಏರಿಕೆಯಾಗಿದೆ.

ಮುಂಬಯಿ ಬಳಿಕ ನವದೆಹಲಿ ಮತ್ತು ಹೈದರಾಬಾದ್ ಭಾರತದ ಅತಿ ಶ್ರೀಮಂತ ನಗರಗಳಾಗಿ ಹೊರಹೊಮ್ಮಿವೆ. ದೆಹಲಿ 18 ಹೊಸ ಬಿಲಿಯನೇರ್‌ಗಳ ಸೇರ್ಪಡೆಯೊಂದಿಗೆ ಈಗ ಪಟ್ಟಿಯಲ್ಲಿ ಒಟ್ಟು 217 ಬಿಲಿಯನೇರ್ ಗಳನ್ನು ಹೊಂದಿದೆ. ಇದು ಭಾರತದಲ್ಲಿ ಅತಿ ಹೆಚ್ಚು ಬಿಲಿಯನೇರ್‌ಗಳನ್ನು ಹೊಂದಿರುವ ಎರಡನೇ ನಗರವಾಗಿದೆ.


ಬೆಂಗಳೂರನ್ನು ಹಿಂದಿಕ್ಕಿದ ಹೈದರಾಬಾದ್

ಈ ಬಾರಿ ಹೈದರಾಬಾದ್ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಮೊದಲ ಬಾರಿಗೆ ಬೆಂಗಳೂರನ್ನು ಹಿಂದಿಕಿರುವ ಹೈದರಾಬಾದ್ ಶ್ರೀಮಂತ ನಿವಾಸಿಗಳ ವಿಷಯದಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

17 ಹೊಸ ಬಿಲಿಯನೇರ್‌ಗಳ ಸೇರ್ಪಡೆಯು ಹೈದರಾಬಾದ್‌ನ ಒಟ್ಟು ಮೊತ್ತವನ್ನು 104 ಕ್ಕೆ ತಂದಿದೆ. ಆದರೆ ಬೆಂಗಳೂರು 100 ಶ್ರೀಮಂತ ವ್ಯಕ್ತಿಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಬೆಂಗಳೂರಿಗೆ ನಾಲ್ಕನೇ ಸ್ಥಾನದ ಬಗ್ಗೆ ಕಳವಳ ವ್ಯಕ್ತಪಡಿಸಿದ ಬೆಂಗಳೂರು ಉದ್ಯಮಿಗಳು, ಬಂಡವಾಳ, ಹೂಡಿಕೆ ಹೈದರಾಬಾದ್ ನತ್ತ ಸಾಗುತ್ತಿರುವುದೇ ಇದಕ್ಕೆ ಕಾರಣ ಎಂದು ಹೇಳಿದ್ದಾರೆ.


ಇದನ್ನೂ ಓದಿ: Luxury House: ಕನಸಿನ ನಗರಿ ಮುಂಬಯಿಯಲ್ಲಿರುವ 9 ಅತ್ಯಂತ ದುಬಾರಿ ಬಂಗಲೆಗಳಿವು!

ಉಳಿದಂತೆ ಚೆನ್ನೈ-82, ಕೋಲ್ಕತ್ತಾ-69, ಅಹಮದಾಬಾದ್-67, ಪುಣೆ-53, ಸೂರತ್-28, ಗುರುಗ್ರಾಮ-23 ಬಿಲಿಯನೇರ್ ಗಳನ್ನು ಹೊಂದಿದ್ದು ಕ್ರಮವಾಗಿ ಸ್ಥಾನ ಗಳಿಸಿದೆ.

Continue Reading

ವಾಣಿಜ್ಯ

Reliance Jio: ರಿಲಯನ್ಸ್ ಜಿಯೋನಿಂದ ಹೊಸ ಆಫರ್‌; 100 ಜಿಬಿ ಕ್ಲೌಡ್ ಸಂಗ್ರಹ ಉಚಿತ

ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗಾಗಿ ಬಂಪರ್ ಆಫರ್ ಘೋಷಿಸಿದ್ದು, ಶೀಘ್ರದಲ್ಲೇ ಕಂಪನಿಯು ತನ್ನ ಗ್ರಾಹಕರಿಗೆ 100 ಜಿಬಿ ತನಕ ಉಚಿತ ಕ್ಲೌಡ್ ಸಂಗ್ರಹವನ್ನು ನೀಡುತ್ತಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Reliance Jio
Koo

ಮುಂಬೈ: ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗಾಗಿ ಬಂಪರ್ ಆಫರ್ ಘೋಷಿಸಿದ್ದು, ಶೀಘ್ರದಲ್ಲೇ ಕಂಪನಿಯು ತನ್ನ ಗ್ರಾಹಕರಿಗೆ 100 ಜಿಬಿ ತನಕ ಉಚಿತ ಕ್ಲೌಡ್ ಸಂಗ್ರಹವನ್ನು ನೀಡುತ್ತಿದೆ. ಫೋಟೋಗಳು, ವಿಡಿಯೋಗಳು ಅಥವಾ ಡಾಕ್ಯುಮೆಂಟ್‌ಗಳು ಇಂತಹುಗಳನ್ನು ಸಂಗ್ರಹಿಸಬಹುದಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 47ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಗುರುವಾರ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಈ ಮಾಹಿತಿಯನ್ನು ನೀಡಿದ್ದಾರೆ.

ಅಲ್ಲದೆ, ಜಿಯೋ ಬ್ರೈನ್ ಶೀಘ್ರದಲ್ಲೇ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಪ್ರಾರಂಭಿಸಲು ತಯಾರಿ ನಡೆಸುತ್ತಿದೆ. ಕನೆಕ್ಟೆಡ್ ಇಂಟೆಲಿಜೆನ್ಸ್ ವಿಶ್ವ ದರ್ಜೆಯ ಮೂಲಸೌಕರ್ಯದೊಂದಿಗೆ ಬರುತ್ತದೆ. ಕಂಪನಿಯು ಇದನ್ನು “ಎಐ ಎವೆರಿವೇರ್ ಫಾರ್ ಎವರಿಒನ್” ಎಂಬ ಥೀಮ್ ಮೇಲೆ ಪ್ರಾರಂಭಿಸುತ್ತದೆ.

ಇದನ್ನೂ ಓದಿ: Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಜನ-ಜೀವನ ಅಸ್ತವ್ಯಸ್ತ

ಜಿಯೋ ಸಂಪೂರ್ಣ ಎಐ ಅನ್ನು ಒಳಗೊಂಡ ಪರಿಕರಗಳು ಮತ್ತು ಪ್ಲಾಟ್‌ಫಾರ್ಮ್‌ಗಳ ಸಮಗ್ರ ಸೂಟ್ ಅನ್ನು ಅಭಿವೃದ್ಧಿಪಡಿಸುತ್ತಿದೆ. ಇದನ್ನು ‘ಜಿಯೋ ಬ್ರೈನ್’ ಎಂದು ಕರೆಯಲಾಗುತ್ತದೆ. “ರಿಲಯನ್ಸ್‌ ಜಿಯೋ ಬ್ರೈನ್ ಅನ್ನು ಗಟ್ಟಿಗೊಳಿಸುವ ಮೂಲಕ ನಾವು ಶಕ್ತಿಯುತ ಎಐ ಸೇವೆಗಳ ಪ್ಲಾಟ್‌ಫಾರ್ಮ್ ರೂಪಿಸುತ್ತೇವೆ ಎಂಬುದಾಗಿ ನಾನು ಭಾವಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ನಾವು ಜಾಮ್‌ನಗರದಲ್ಲಿ ಗಿಗಾವ್ಯಾಟ್ ಪ್ರಮಾಣದ ಎಐ- ಸಿದ್ಧ ಡೇಟಾ ಕೇಂದ್ರವನ್ನು ಸ್ಥಾಪಿಸಲು ಯೋಜಿಸಿದ್ದೇವೆ, ಇದು ಸಂಪೂರ್ಣವಾಗಿ ರಿಲಯನ್ಸ್‌ನ ಹಸಿರು ಶಕ್ತಿಯಿಂದ ಚಾಲಿತವಾಗುತ್ತದೆ. ಭಾರತದಲ್ಲಿಯೇ ವಿಶ್ವದ ಅತ್ಯಂತ ಕೈಗೆಟುಕುವ ಎಐ ಇಂಟರ್ ಫೇಸಿಂಗ್ ಸೃಷ್ಟಿಸುವುದು ನಮ್ಮ ಗುರಿಯಾಗಿದೆ. “ಇದು ಭಾರತದಲ್ಲಿ ಎಐ ಅಪ್ಲಿಕೇಷನ್‌ಗಳನ್ನು ಹೆಚ್ಚು ಕೈಗೆಟುಕುವಂತೆ ಮತ್ತು ಎಲ್ಲರಿಗೂ ಸಂಪರ್ಕ ಸಿಗುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Kannada New Movie: ‘ಸರ್ವೇ ನಂಬರ್ 45’ ಚಿತ್ರೀಕರಣಕ್ಕೆ ಚಾಲನೆ

ಜಿಯೋ ಅಧ್ಯಕ್ಷ ಆಕಾಶ್ ಅಂಬಾನಿ ಹಲವಾರು ಹೊಸ ಎಐ ಸೇವೆಗಳನ್ನು ಘೋಷಿಸಿದ್ದಾರೆ. ಇದು ಜಿಯೋ ಟಿವಿಒಎಸ್ (Jio TVOS), ಹಲೋಜಿಯೋ (HelloJio), ಜಿಯೋ ಐಒಟಿ ಸಲ್ಯೂಷನ್ (Jio Home IoT), ಜಿಯೋ ಹೋಮ್ (JioHome) ಅಪ್ಲಿಕೇಷನ್ ಮತ್ತು ಜಿಯೋ ಫೋನ್ ಕಾಲ್ ಎಐ (Jio Phonecall AI) ಅನ್ನು ಒಳಗೊಂಡಿದೆ.

Continue Reading

ವಾಣಿಜ್ಯ

Luxury House: ಕನಸಿನ ನಗರಿ ಮುಂಬಯಿಯಲ್ಲಿರುವ 9 ಅತ್ಯಂತ ದುಬಾರಿ ಬಂಗಲೆಗಳಿವು!

ಭಾರತದ ಆರ್ಥಿಕ ರಾಜಧಾನಿ ಮುಂಬಯಿಯು ಕೆಲವು ಶ್ರೀಮಂತ ವ್ಯಕ್ತಿಗಳ ನೆಲೆಯಾಗಿದೆ. ಇವರ ಅತ್ಯಂತ ದುಬಾರಿ ಮನೆಗಳು ಎಲ್ಲರ ಗಮನ ಸೆಳೆಯುತ್ತದೆ. ಮುಖೇಶ್ ಅಂಬಾನಿ ಅವರ 12,000 ಕೋಟಿ ರೂ. ನ ಆಂಟಿಲಿಯಾದಿಂದ ಸೈರಸ್ ಪೂನಾವಾಲಾ ಅವರ 750 ಕೋಟಿ ರೂ. ನ ಲಿಂಕನ್ ಹೌಸ್ ವರೆಗೆ 9 ಐಷಾರಾಮಿ ಬಂಗಲೆಗಳು (Luxury House) ಮುಂಬಯಿನಲ್ಲಿದೆ. ಇದು ಯಾರದ್ದು, ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Koo

ವಾಣಿಜ್ಯ ನಗರಿ (Commercial town) ಮುಂಬಯಿನಲ್ಲಿ (mumbai) ಮನೆ ಖರೀದಿಸುವ ಕನಸು ಎಲ್ಲರಲ್ಲೂ ಇರುತ್ತದೆ. ಆದರೆ ಅದು ಸಾಮಾನ್ಯ, ಮಧ್ಯಮ ವರ್ಗದ ಜನರಿಗೆ ಬಹುತೇಕ ಕನಸಿನ ಯೋಚನೆಯೇ ಆಗಿರುತ್ತದೆ. ಆದರೆ ಎಲ್ಲರೂ ಕಣ್ತುಂಬಿಕೊಳ್ಳಬಹುದಾದ ಐಷಾರಾಮಿ ಬಂಗಲೆಗಳಿಗೆ (Luxury House) ಮುಂಬಯಿಯಲ್ಲೇನೂ ಕೊರತೆ ಇಲ್ಲ! ಭಾರತದ ಆರ್ಥಿಕ ರಾಜಧಾನಿಯು ಕೆಲವು ಶ್ರೀಮಂತ ವ್ಯಕ್ತಿಗಳಿಗೆ ನೆಲೆಯಾಗಿದೆ. ಇವರ ಅತ್ಯಂತ ದುಬಾರಿ ಮನೆಗಳು ಎಲ್ಲರ ಗಮನ ಸೆಳೆಯುತ್ತದೆ. ಅಂತಹ 9 ಐಷಾರಾಮಿ ಬಂಗಲೆಗಳು ಯಾರದ್ದು, ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ.

Luxury House
Luxury House


1. ಆಂಟಿಲಿಯಾ

12,000 ಕೋಟಿ ರೂ. ಮೌಲ್ಯದ ʼಆಂಟಿಲಿಯಾʼ ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿಯವರದ್ದು. ಅಲ್ಟಾಮೌಂಟ್ ರಸ್ತೆಯಲ್ಲಿರುವ ಈ ಬಂಗಲೆ ವಿಶ್ವದ ಎರಡನೇ ಅತ್ಯಂತ ದುಬಾರಿ ಮನೆಯಾಗಿದೆ. 27 ಅಂತಸ್ತಿನ ಗಗನಚುಂಬಿ ಕಟ್ಟಡವು 80 ಆಸನಗಳ ಚಲನಚಿತ್ರ ಥಿಯೇಟರ್, 9 ಹೈಸ್ಪೀಡ್ ಎಲಿವೇಟರ್‌, 3 ಹೆಲಿಪ್ಯಾಡ್‌, ಸಲೂನ್, ಐಸ್ ಕ್ರೀಮ್ ಪಾರ್ಲರ್, ಈಜುಕೊಳ ಮತ್ತು ಜಿಮ್ ಸೇರಿದಂತೆ ಅದ್ಧೂರಿ ಸೌಕರ್ಯಗಳನ್ನು ಒಳಗೊಂಡಿದೆ.

Luxury House
Luxury House


2. ಜಟಿಯಾ ಹೌಸ್

ಮಲಬಾರ್ ಬೆಟ್ಟದ ಮೇಲೆ ಅರಬ್ಬಿ ಸಮುದ್ರದ ಎದುರು ನೆಲೆಯಾಗಿರುವ 425 ಕೋಟಿ ರೂ. ಮೌಲ್ಯದ ಜಟಿಯಾ ಹೌಸ್ ಆದಿತ್ಯ ಬಿರ್ಲಾ ಗ್ರೂಪ್‌ನ ಅಧ್ಯಕ್ಷ ಕುಮಾರ್ ಮಂಗಲಂ ಬಿರ್ಲಾ ಅವರಿಗೆ ಸೇರಿದೆ. 30,000 ಚದರ ಅಡಿಗಳಷ್ಟು ವ್ಯಾಪಿಸಿರುವ ಈ ಮಹಲು 20 ಮಲಗುವ ಕೋಣೆಗಳು, ಪ್ರಾಂಗಣ, ಈಜು ಕೊಳದೊಂದಿಗೆ ಸೊಂಪಾದ ಉದ್ಯಾನ ಮತ್ತು 500- 700 ಜನರ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಮರ್ಥ್ಯವನ್ನು ಹೊಂದಿದೆ.

Luxury House
Luxury House


2. ಜೆಕೆ ಮನೆ

ರೇಮಂಡ್ ಗ್ರೂಪ್‌ನ ಅಧ್ಯಕ್ಷ ಗೌತಮ್ ಸಿಂಘಾನಿಯಾ ಒಡೆತನದ 6,000 ಕೋಟಿ ರೂ. ಮೌಲ್ಯದ ಜೆಕೆ ಹೌಸ್ ಮುಂಬಯಿನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಪ್ರದೇಶದಲ್ಲಿದೆ. 16,000 ಚದರ ಅಡಿ ಮಹಲು 30 ಮಹಡಿಗಳಲ್ಲಿ ವ್ಯಾಪಿಸಿದೆ. 6 ಮಹಡಿಗಳನ್ನು ಪಾರ್ಕಿಂಗ್‌ಗೆ ಮೀಸಲಿಡಲಾಗಿದೆ. ಕಟ್ಟಡವು ರೇಮಂಡ್ ಶೋರೂಮ್ ಅನ್ನು ಸಹ ಹೊಂದಿದ್ದು, ಇದು ಕಟ್ಟಡದ ಆಕರ್ಷಣೆ ಮತ್ತು ಭವ್ಯತೆಯನ್ನು ಹೆಚ್ಚಿಸುತ್ತದೆ.

Luxury House
Luxury House


3. ಲಿಂಕನ್ ಹೌಸ್

750 ಕೋಟಿ ರೂ. ಮೌಲ್ಯದ ಲಿಂಕನ್ ಹೌಸ್ ಮುಂಬಯಿನ ಬ್ರೀಚ್ ಕ್ಯಾಂಡಿಯಲ್ಲಿದೆ. ಸೈರಸ್ ಪೂನಾವಾಲಾ ಅವರ ಒಡೆತನದ ಒಂದು ಭವ್ಯವಾದ ಕಡಲತೀರದ ಮಹಲು ಇದಾಗಿದೆ. ಈ ಆಸ್ತಿಯು ಅದರ ಐತಿಹಾಸಿಕ ಪ್ರಾಮುಖ್ಯತೆ ಮತ್ತು ಐಷಾರಾಮಿ ಸೌಕರ್ಯಗಳಿಗೆ ಹೆಸರುವಾಸಿಯಾಗಿದೆ.


4. ಅಬೊಡೆ

5,000 ಕೋಟಿ ರೂ. ನ ಈ ಬಂಗಲೆ ಬಾಂದ್ರಾದ ಪಾಲಿ ಹಿಲ್‌ನಲ್ಲಿದೆ. ಅನಿಲ್ ಅಂಬಾನಿ ನಿವಾಸವಾದ ಇದು 1,600 ಚದರ ಅಡಿಗಳಷ್ಟು ವ್ಯಾಪಿಸಿದೆ. ಈ ಮನೆಯು ಈಜುಕೊಳ, ಜಿಮ್ನಾಷಿಯಂ, ವಿಸ್ತಾರವಾದ ಗ್ಯಾರೇಜ್ ಮತ್ತು ಬಹು ಹೆಲಿಕಾಪ್ಟರ್‌ಗಳನ್ನು ಹೊಂದಿರುವ ಹೆಲಿಪ್ಯಾಡ್ ಸೇರಿದಂತೆ ಉನ್ನತ ಮಟ್ಟದ ಸೌಲಭ್ಯಗಳನ್ನು ಹೊಂದಿದೆ.

Luxury House
Luxury House


5. ಮನ್ನತ್‌‌

200 ಕೋಟಿ ರೂ. ಮೌಲ್ಯದ ಮನ್ನತ್ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ ಸಾಂಪ್ರದಾಯಿಕ ಮನೆಯಾಗಿದೆ. ಇದು ಬಾಂದ್ರಾದಲ್ಲಿದೆ. ಈ ಅದ್ದೂರಿ ಬಂಗಲೆಯು ಆರು ಮಹಡಿಗಳನ್ನು ಹೊಂದಿದೆ. ಜಿಮ್ನಾಷಿಯಂ, ಪೂಲ್, ಖಾಸಗಿ ಥಿಯೇಟರ್, ಹೋಮ್ ಆಫೀಸ್‌ಗಳು, ಟೆರೇಸ್, ಗಾರ್ಡನ್, ಲೈಬ್ರರಿ ಮತ್ತು ವೈಯಕ್ತಿಕ ಆಡಿಟೋರಿಯಂನಂತಹ ಸೌಕರ್ಯಗಳನ್ನು ಹೊಂದಿದೆ. ಇದು ಭಾರತದ ಅತ್ಯಂತ ಐಷಾರಾಮಿ ನಿವಾಸಗಳಲ್ಲಿ ಒಂದಾಗಿದೆ.


6. ರತನ್ ಟಾಟಾ ಅವರ ಮನೆ

150 ಕೋಟಿ ರೂ. ಮೌಲ್ಯದ ರತನ್ ಟಾಟಾ ಅವರ ನಿವೃತ್ತಿ ಮನೆ ಕೊಲಾಬಾದಲ್ಲಿ ನೆಲೆಯಾಗಿದೆ. 13,350 ಚದರ ಅಡಿ ವಿಸ್ತೀರ್ಣದ ಈ ಬಂಗಲೆಯು ಸನ್ ಡೆಕ್, ಇನ್ಫಿನಿಟಿ ಪೂಲ್, ಮೀಡಿಯಾ ರೂಮ್, ಲೈಬ್ರರಿ ಮತ್ತು ವೈಯಕ್ತಿಕ ಜಿಮ್ ಅನ್ನು ಒಳಗೊಂಡಿದೆ. ಇದು ವಿವಿಧ ಸೌಕರ್ಯ ಮತ್ತು ಸೌಂದರ್ಯದ ಪರಿಪೂರ್ಣ ಮಿಶ್ರಣವಾಗಿದೆ.


7. ಜಲ್ಸಾ

ಅಮಿತಾಭ್ ಬಚ್ಚನ್ ಒಡೆತನದ 120 ಕೋಟಿ ರೂ. ಮೌಲ್ಯದ ಜಲ್ಸಾ ಜುಹುನಲ್ಲಿರುವ ಎರಡು ಅಂತಸ್ತಿನ ಬಂಗಲೆಯಾಗಿದೆ. ಮೂಲತಃ ನಿರ್ದೇಶಕ ರಮೇಶ್ ಸಿಪ್ಪಿ ಅವರಿಂದ ಉಡುಗೊರೆಯಾಗಿ ಪಡೆದ ಈ ಮನೆಯಲ್ಲಿ ಇಡೀ ಬಚ್ಚನ್ ಕುಟುಂಬ ವಾಸವಿದೆ.

ಇದನ್ನೂ ಓದಿ: AAP VS Delhi LG: ಆಪ್‌ಗೆ ಹಿನ್ನಡೆ; ದಿಲ್ಲಿ ನಗರಸಭೆಗೆ ಸದಸ್ಯರನ್ನು ನೇಮಿಸುವ ಎಲ್‌ಜಿ ಅಧಿಕಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್


8. ಗುಲಿತಾ

ಇಶಾ ಅಂಬಾನಿಯ ಈ ಮನೆಯ ಮೌಲ್ಯ 452 ಕೋಟಿ ರೂಪಾಯಿ. ವರ್ಲಿಯಲ್ಲಿರುವ ವಿಸ್ತಾರವಾದ ಈ ಮಹಲು ಪ್ರೀತಿ ಮತ್ತು ಐಷಾರಾಮಕ್ಕೆ ಸಾಕ್ಷಿಯಾಗಿದೆ. ಹಿಂದೂಸ್ತಾನ್ ಯೂನಿಲಿವರ್‌ನಿಂದ 2012ರಲ್ಲಿ ಸ್ವಾಧೀನಪಡಿಸಿಕೊಂಡ ಗುಲಿತಾ ಅತ್ಯಾಧುನಿಕ ಮತ್ತು ಭವ್ಯತೆಯ ಸ್ವರ್ಗವಾಗಿ ರೂಪಾಂತರಗೊಂಡಿದೆ. ಭವ್ಯವಾದ ಈ ಬಂಗಲೆ ಎತ್ತರದ ಚಾವಣಿಗಳು, ಅತ್ಯಾಧುನಿಕ ಪೀಠೋಪಕರಣಗಳನ್ನು ಒಳಗೊಂಡಿದೆ. ಗಾಜಿನ ಮುಂಭಾಗವು ಮಹಲಿನ ಅನನ್ಯತೆಯನ್ನು ಹೆಚ್ಚಿಸುವುದಲ್ಲದೆ ನೈಸರ್ಗಿಕ ಬೆಳಕಿನ ಸುಂದರ ದೃಶ್ಯಗಳನ್ನು ಪ್ರತಿಬಿಂಬಿಸುತ್ತದೆ.

Continue Reading
Advertisement
Murder case
ಬೆಂಗಳೂರು7 ಗಂಟೆಗಳು ago

Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

assault case
ಹಾವೇರಿ8 ಗಂಟೆಗಳು ago

Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

Murder case
ದಾವಣಗೆರೆ9 ಗಂಟೆಗಳು ago

Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

new serial
ಬೆಂಗಳೂರು11 ಗಂಟೆಗಳು ago

New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

World Retinal Day 2024
ಪ್ರಮುಖ ಸುದ್ದಿ12 ಗಂಟೆಗಳು ago

World Retinal Day 2024 : ಶಾಕಿಂಗ್‌ ನ್ಯೂಸ್‌; ಜಾಗತಿಕವಾಗಿ 1 ಬಿಲಿಯನ್ ಜನರು ತಮ್ಮ ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದರಂತೆ!

MUda Scam
ರಾಜಕೀಯ13 ಗಂಟೆಗಳು ago

Muda Scam : ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಾದ ಒತ್ತಡ; ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ಪ್ರತಿಭಟನೆ

Cancer Treatment AI
ಆರೋಗ್ಯ13 ಗಂಟೆಗಳು ago

Cancer Treatment : ವೈದ್ಯಕೀಯ ಲೋಕದಲ್ಲಿ ಎಐ; ಕ್ಯಾನ್ಸರ್‌ಕಾರಕ ಗಡ್ಡೆ ಪತ್ತೆಗೂ ಬಂದಿದೆ ಎಐ ಚಾಲಿತ ಸೈಬರ್‌ನೈಫ್‌-ಎಸ್7 ಸಿಸ್ಟಮ್‌!

Dina Bhavishya
ಭವಿಷ್ಯ13 ಗಂಟೆಗಳು ago

Dina Bhavishya :ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Self Harming
ಕೋಲಾರ2 ದಿನಗಳು ago

Self Harming : ಹೆಂಡ್ತಿ ಮನೆಯವರ ಕಿರುಕುಳ; ವಿಡಿಯೊ ಮಾಡಿ ಮಾರ್ಕಂಡೇಶ್ವರ ಬೆಟ್ಟದಲ್ಲಿ ನೇಣಿಗೆ ಶರಣು

karnataka weather Forecast
ಮಳೆ2 ದಿನಗಳು ago

Karnataka Weather : ರಾಜ್ಯಾದ್ಯಂತ ವ್ಯಾಪಕ ಮಳೆ ; ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌