IND vs PAK: ಸ್ನೈಪರ್ ಗನ್​ ಕಣ್ಗಾವಲಿನಲ್ಲಿ ಭಾರತ-ಪಾಕ್ ಟಿ20​ ವಿಶ್ವಕಪ್​ ಪಂದ್ಯ - Vistara News

ಕ್ರಿಕೆಟ್

IND vs PAK: ಸ್ನೈಪರ್ ಗನ್​ ಕಣ್ಗಾವಲಿನಲ್ಲಿ ಭಾರತ-ಪಾಕ್ ಟಿ20​ ವಿಶ್ವಕಪ್​ ಪಂದ್ಯ

IND vs PAK: ಕಳೆದ ವಾರ ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಪಂದ್ಯ ನಡೆಯುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ಗೆ ನ್ಯೂಯಾರ್ಕ್​ ಪೊಲೀಸರಿಂದ ಮತ್ತು ಮಿಲಿಟರಿ ಪಡೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.

VISTARANEWS.COM


on

IND vs PAK
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನ್ಯೂಯಾರ್ಕ್​: ಕ್ರಿಕೆಟ್​ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾದು ಕುಳಿತಿರುವ, ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ವಿಶ್ವಕಪ್(T20 world cup 2024) ಪಂದ್ಯ​ ಜೂನ್​ 9ರಂದು ನಡೆಯಲಿದೆ. ಈ ಪಂದ್ಯಕ್ಕೆ ಉಗ್ರರ ದಾಳಿಯ ಭೀತಿ(india vs pak terror threat) ಎದುರಾಗಿರುವ ಕಾರಣ ಪಂದ್ಯ ನಡೆಯುವ ಸ್ಟೇಡಿಯಂಗೆ ಈಗಿಂದಲೇ ಭಾರೀ ಭದ್ರತೆ ಏರ್ಪಡಿಸಲಾಗಿದೆ. ನ್ಯೂಯಾರ್ಕ್​ನ(New York stadium) ವಿಶೇಷ ಮಿಲಿಟರಿ ಪಡೆ ಸ್ನೈಪರ್ ಗನ್ ಹಿಡಿದು ಕಣ್ಗಾವಲಿಟ್ಟಿದೆ. ಇದರ ಫೋಟೊಗಳು ವೈರಲ್​ ಆಗಿದೆ.


ಕಳೆದ ವಾರ ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಪಂದ್ಯ ನಡೆಯುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ಗೆ ನ್ಯೂಯಾರ್ಕ್​ ಪೊಲೀಸರಿಂದ ಮತ್ತು ಮಿಲಿಟರಿ ಪಡೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಇದನ್ನು ಓದಿ IND vs PAK: ಇಂಡೋ-ಪಾಕ್​ ಹೈವೋಲ್ಟೇಜ್​ ಟಿ20 ಪಂದ್ಯ ವೀಕ್ಷಿಸಲು ಅಭಿಮಾನಿಗಳ ಹಿಂದೇಟು; ಇನ್ನೂ ಮಾರಾಟವಾಗಿಲ್ಲ ಟಿಕೆಟ್​

ಪಂದ್ಯದ ವೇಳೆ ಡ್ರೋನ್ ದಾಳಿ ನಡೆಸುವ ಸಾಧ್ಯತೆ ಕೂಡ ಕಂಡುಬಂದಿದೆ. ಹೀಗಾಗಿ ಪಂದ್ಯ ನಡೆಯುವ ಕ್ರೀಡಾಂಗಣದ ಸುತ್ತ ‘ನೊ-ಫ್ಲೈ ಝೋನ್’ ಎಂದು ಘೋಷಿಸುವಂತೆ ನ್ಯೂಯಾರ್ಕ್ ಪೊಲೀಸ್ ಯುಎಸ್​ ಏವಿಯೇಷನ್ ​​​​ಅಡ್ಮಿನಿಸ್ಟ್ರೇಷನ್‌ಗೆ ವಿನಂತಿಸಿದೆ. ಸದ್ಯ ಭಾರತ ಮತ್ತು ಪಾಕ್​ ತಂಡ ಆಟಗಾರರು ಮಿಲಿಟರಿ ರಕ್ಷಣೆಯಲ್ಲೇ ಓಡಾಡುತ್ತಿದ್ದಾರೆ. ಇದರ ವಿಡಿಯೊ ಕೂಡ ವೈರಲ್​ ಆಗಿದೆ.

“ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಸಾರ್ವಜನಿಕರ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಪಂದ್ಯಗಳು ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಕಾನೂನು ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದ್ದೇನೆ” ಎಂದು ನ್ಯೂಯಾರ್ಕ್‌ನ ಗವರ್ನರ್‌ ಕ್ಯಾಥಿ ಹೊಚುಲ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆರಂಭದಲ್ಲಿ ಪ್ರೊ-ಇಸ್ಲಾಮಿಕ್ ಸ್ಟೇಟ್ (ಐಎಸ್)ನಿಂದ ವೆಸ್ಟ್​ ಇಂಡೀಸ್​ನಲ್ಲಿ ನಡೆಯುವ ಪಂದ್ಯಗಳಿಗೆ ದಾಳಿಯ ಬೆದರಿಕೆಯೊಂದು ಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ  ವೆಸ್ಟ್​ ಇಂಡೀಸ್​ ಕ್ರಿಕೆಟ್​ ಮಂಡಳಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ತೆಗೆದುಕೊಂಡಿತ್ತು.  ಕೆನ್ಸಿಂಗ್ಟನ್ ಓವಲ್(Kensington Oval Cricket Ground) ಕ್ರಿಕೆಟ್ ಮೈದಾನ, ಬಾರ್ಬಡೋಸ್​ನಲ್ಲಿ(Barbados) ಭದ್ರತಾ ಸಿಬ್ಬಂದಿಗಳು ಅಣುಕು ಪ್ರದರ್ಶನ ಮಾಡುತ್ತಿರುವ ಫೋಟೊ ಕೂಡ ವೈರಲ್​ ಆಗಿತ್ತು.

ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಹೊರವಲಯದಲ್ಲಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ಏರ್ಪಡಿಸಲಾಗಿದೆ ಎನ್ನಲಾಗಿದೆ.

ಟಿ20 ಮುಖಾಮುಖಿ

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Team India: ವಿಶ್ವಕಪ್​ ಗೆದ್ದು ಟೀಮ್​ ಇಂಡಿಯಾ ನಿರ್ಮಿಸಿದ ದಾಖಲೆಗಳ ಪಟ್ಟಿ ಹೀಗಿದೆ

Team India: ರೋಹಿತ್​ ಕಪ್​ ಗೆಲ್ಲುವ ಮೂಲಕ ಐಸಿಸಿ ಟ್ರೋಫಿ ಗೆದ್ದ 4ನೇ ಭಾರತೀಯ ನಾಯಕ ಎನಿಸಿಕೊಂಡರು. ಕಪಿಲ್ ದೇವ್​, ಸೌರವ್​ ಗಂಗೂಲಿ, ಧೋನಿ ಉಳಿದ ನಾಯಕರು.

VISTARANEWS.COM


on

Koo

ಬಾರ್ಬಡೋಸ್​: ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಶನಿವಾರ ರಾತ್ರಿ ನಡೆದ ಟಿ20 ವಿಶ್ವಕಪ್​ ಫೈನಲ್(​T20 World Cup 2024) ಪಂದ್ಯದಲ್ಲಿ ಭಾರತ ತಂಡ(Team India) ದಕ್ಷಿಣ ಆಫ್ರಿಕಾ(South Africa vs India) ವಿರುದ್ಧ 7 ವಿಕೆಟ್​ಗಳ ಗೆಲುವು ಸಾಧಿಸುವ ಮೂಲಕ 13 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರವೊಂದನ್ನು ನೀಗಿಸಿತು. ಈ ಪಂದ್ಯದಲ್ಲಿ ಭಾರತ ಮತ್ತು ತಂಡದ ಆಟಗಾರರು ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಟ್ಟಿ ಇಂತಿದೆ.

ದಾಖಲೆಗಳ ಪಟ್ಟಿ ಹೀಗಿದೆ

1. ನೀಗಿದ ಪ್ರಶಸ್ತಿ ಬರ: ಕಪ್​ ಗೆಲ್ಲುವ ಮೂಲಕ 11 ವರ್ಷಗಳ ಐಸಿಸಿ ಟ್ರೋಫಿ, 13 ವರ್ಷಗಳ ಐಸಿಸಿ ವಿಶ್ವಕಪ್​ ಬರ ನೀಗಿತು.


2. ದ್ವಿತೀಯ ಟಿ20 ವಿಶ್ವಕಪ್​: ಭಾರತ ತಂಡ 2ನೇ ಎರಡನೇ ಬಾರಿ ಮತ್ತು 17 ವರ್ಷಗಳ ಬಳಿಕ ಟಿ20 ವಿಶ್ವ ಚಾಂಪಿಯನ್​ ಪಟ್ಟ ಅಲಂಕರಿಸಿತು.

3. ಮೂರನೇ ತಂಡ: ಭಾರತ 2 ಟಿ20 ವಿಶ್ವಕಪ್​ ಗೆದ್ದ ಮೂರನೇ ತಂಡ ಎನಿಸಿಕೊಂಡಿತು. ಇದಕ್ಕೂ ಮುನ್ನ ವೆಸ್ಟ್​ ಇಂಡೀಸ್​ ಮತ್ತು ಇಂಗ್ಲೆಂಡ್​ ಈ ಸಾಧನೆ ಮಾಡಿತ್ತು.


4. ರೋಹಿತ್​ ಸಾಧನೆ: ರೋಹಿತ್​ ಶರ್ಮ ಅವರು ಭಾರತ ಪರ 2 ಟಿ0 ವಿಶ್ವಕಪ್​ ಗೆದ್ದ ಮೊದಲ ಆಟಗಾರ. ನಾಯಕನಾಗಿ ಮತ್ತು ಆಟಗಾರನಾಗಿ. ಜತೆಗೆ ಧೋನಿ ನಂತರ ಟಿ20 ವಿಶ್ವಕಪ್​ ಗೆದ್ದ 2ನೇ ನಾಯಕ ಎನಿಸಿಕೊಂಡರು.

5. ದ್ರಾವಿಡ್​ಗೆ ಗೆಲುವಿನ ವಿದಾಯ: ರಾಹುಲ್​ ದ್ರಾವಿಡ್​ ಕೋಚ್​ ಆಗಿ ಜೂನಿಯರ್​ ಮತ್ತು ಸೀನಿಯರ್​ ವಿಭಾಗದಲ್ಲಿ ಐಸಿಸಿ ಟ್ರೋಫಿ ಗೆದ್ದ ಸಾಧನೆ ಮಾಡಿದರು.


6. ಕೊಹ್ಲಿಗೆ ಮೊದಲ ಕಪ್​: ವಿರಾಟ್​ ಕೊಹ್ಲಿ ಅವರು ಮೊದಲ ಟಿ20 ವಿಶ್ವಕಪ್​ ಗೆದ್ದರು. ಈ ಮೂಲಕ ಏಕದಿನ ಮತ್ತು ಟಿ20 ವಿಶ್ವಕಪ್​ ಗೆದ್ದ ಸಾಧನೆ ಮಾಡಿದರು.

7. ನಾಲ್ಕನೇ ಐಸಿಸಿ ವಿಶ್ವಕಪ್: ಭಾರತ ಈ ಕಪ್​ ಗೆಲ್ಲುವ ಮೂಲಕ 4 ಐಸಿಸಿ ವಿಶ್ವಕಪ್​ ಗೆದ್ದ ಸಾಧನೆ ಮಾಡಿತು. (2 ಏಕದಿನ, 2 ಟಿ20).

8. 4ನೇ ನಾಯಕ: ರೋಹಿತ್​ ಕಪ್​ ಗೆಲ್ಲುವ ಮೂಲಕ ಐಸಿಸಿ ಟ್ರೋಫಿ ಗೆದ್ದ 4ನೇ ಭಾರತೀಯ ನಾಯಕ ಎನಿಸಿಕೊಂಡರು. ಕಪಿಲ್ ದೇವ್​, ಸೌರವ್​ ಗಂಗೂಲಿ, ಧೋನಿ ಉಳಿದ ನಾಯಕರು.

9. ಐದು ಫೈನಲ್​ ಸೋಲಿನ ಬಳಿಕದ ಗೆಲುವು: ಸತತ 5 ಐಸಿಸಿ ಟೂರ್ನಿಗಳ ಫೈನಲ್​ ಸೋಲಿನ ಬಳಿಕ ಸಾಧಿಸಿದ ಗೆಲುವು ಇದಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

Continue Reading

ಪ್ರಮುಖ ಸುದ್ದಿ

Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

Suryakumar Yadav:

VISTARANEWS.COM


on

Suryakumar Yadav
Koo

ಬೆಂಗಳೂರು: ವೆಸ್ಟ್​ ಇಂಡೀಸ್​​ನ ಬಾರ್ಬಡೋಸ್​​ನಲ್ಲಿ ಶನಿವಾರ ನಡೆದ ವಿಶ್ವ ಕಪ್​ 2024ರ (T20 World Cup 2024) ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಗೆಲುವು ಸಾಧಿಸಿದ ಬಳಿಕ ಭಾರತ ತಂಡದ ಆಟಗಾರರ ಸಂತಸಕ್ಕೆ ಪಾರವೇ ಇಲ್ಲ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಅಂತೆಯೇ ಪಂದ್ಯದ 19ನೇ ಓವರ್​ನಲ್ಲಿ ಅದ್ಬುತ ಕ್ಯಾಚ್​ ಹಿಡಿದು ಪಂದ್ಯಕ್ಕೆ ನಿರ್ಣಾಯ ತಿರುವು ಕೊಟ್ಟ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವಿಶಾ ಶೆಟ್ಟಿ ಅವರು ರಾತ್ರಿಯಲ್ಲಿ ಟಿ 0 ವಿಶ್ವಕಪ್ ಟ್ರೋಫಿ ಬೆಡ್​ ಮೇಲೆ ಇಟ್ಟು ಮಲಗಿದ್ದಾರೆ. ಅದರ ವಿಡಿಯೊ ವೈರಲ್​ ಆಗಿದೆ.

ಅಂತಿಮ ಓವರ್​ನಲ್ಲಿ ಡೇವಿಡ್ ಮಿಲ್ಲರ್ ಅವರನ್ನು ಬೌಂಡರಿ ಲೈನ್​ನಲ್ಲಿ ಕ್ಯಾಚ್​ ಹಿಡಿದು ಔಟ್ ಮಾಡಿದ ಸೂರ್ಯ ಕುಮಾರ್​ ಯಾದವ್​ ಅತ್ಯಂತ ಸಂಭ್ರಮದಲ್ಲಿದ್ದರು. ತಂಡದ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಇದನ್ನು ಆಟದ ಗತಿ ಬದಲಾವಣೆ ಮಾಡಿದ ಕ್ಷಣ ಎಂದು ಕರೆದಿದ್ದಾರೆ. ಏಕೆಂದರೆ ವಿಜಯದ ನಂತರ ಸೂರ್ಯ ಭಾರತೀಯ ಡ್ರೆಸ್ಸಿಂಗ್ ಕೋಣೆಯಲ್ಲಿ ಅತ್ಯುತ್ತಮ ಫೀಲ್ಡರ್ ಪದಕ ಕೂಡ ಪಡೆದಿದ್ದಾರೆ.

ಅದಕ್ಕಿಂತ ಮೊದಲು ಕುಲದೀಪ್ ಯಾದವ್ ಕ್ವಿಂಟನ್ ಡಿ ಕಾಕ್ ಅವರ ಪ್ರಮುಖ ಕ್ಯಾಚ್ ಪಡೆದಿದ್ದರು. ಆದರೆ ಸೂರ್ಯಕಮಾರ್​ ಯಾದವ್ ಅವರ ಕ್ಯಾಚ್ ಇನ್ನೂ ಅತ್ಯುತ್ತಮವಾಗಿತ್ತು ಎಂದು ಟಿ ದಿಲೀಪ್ ಹೇಳಿದ್ದಾರೆ. ಆದ್ದರಿಂದ, ಅವರು ಟ್ರೋಫಿಯನ್ನು ಪಕ್ಕದಲ್ಲೇ ಇಟ್ಟುಕೊಂಡಿರುವುದು ಸರಿಯಾಗಿಯೇ ಇದೆ.

ಸೂರ್ಯ ಹಾಸಿಗೆ ಒಂದು ಬದಿಯಲ್ಲಿ ಮಲಗಿದ್ದರೆ ಪತ್ನಿ ಇನ್ನೊಂದು ಕಡೆಯಲ್ಲಿ ಮಲಗಿದ್ದರು. ಮಧ್ಯದಲ್ಲಿ ಅವರು ಟ್ರೋಫಿಯನ್ನು ಇಟ್ಟುಕೊಂಡಿದ್ದರು. ಈ ಫೋಟೊ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ 7 ರನ್ ಗಳ ಜಯ ಸಾಧಿಸಿತು. 2007ರಲ್ಲಿ ಉದ್ಘಾಟನಾ ಆವೃತ್ತಿಯಲ್ಲಿ ಎಂ.ಎಸ್.ಧೋನಿ ಪಡೆ ಟ್ರೋಫಿ ಪಡೆದ ಬಳಿಕ ಇದು ಎರಡನೇ ಟಿ20 ವಿಶ್ವ ಕಪ್ ಟ್ರೋಫಿಯಾಗಿದೆ.

ಇದನ್ನೂ ಓದಿ: Hardik Pandya : ಭಾರತಕ್ಕೆ ಆಡುವುದೇ ಕನಸು; ಹಾರ್ದಿಕ್ ಪಾಂಡ್ಯನ ಹಳೆ ವಿಡಿಯೊ ವೈರಲ್​

ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​​ಗೆ ವಿದಾಯ ಘೋಷಿಸಿದ್ದಾರೆ. ರೋಹಿತ್ ನಾಯಕನಾಗಿ 50 ಗೆಲುವುಗಳನ್ನು ದಾಖಲಿಸಿದ್ದಾರೆ. ಇದು ಟಿ 20 ಪಂದ್ಯಗಳಲ್ಲಿ ಯಾವುದೇ ನಾಯಕನಿಗೆ ಅತಿ ಹೆಚ್ಚು. ಗೆಲುವಾಗಿದೆ.

Continue Reading

ಪ್ರಮುಖ ಸುದ್ದಿ

Hardik Pandya : ಭಾರತಕ್ಕೆ ಆಡುವುದೇ ಕನಸು; ಹಾರ್ದಿಕ್ ಪಾಂಡ್ಯನ ಹಳೆ ವಿಡಿಯೊ ವೈರಲ್​

VISTARANEWS.COM


on

Hardik Pandya
Koo

ಬೆಂಗಳೂರು: ಭಾರತ ತಂಡದ ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ (Hardik Pandya) 2024ರ ಟಿ 20 ವಿಶ್ವಕಪ್ ಗೆಲುವಿನಲ್ಲಿ (T20 World Cup 2024) ಪ್ರಮುಖ ಪಾತ್ರ ವಹಿಸಿದ ಬಳಿಕ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ಅವರ ಬಗ್ಗೆ ಜೋರು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಅವರು ತಮ್ಮ ಬಾಲ್ಯದ ದಿನಗಳ ಕ್ರಿಕೆಟ್ ಕನಸನ್ನು ವ್ಯಕ್ತಪಡಿಸುವ​ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಎಕ್ಸ್​ ಪೋಸ್ಟ್​​ನಲ್ಲಿ ಬೌಲಿಂಗ್ ಆಲ್ರೌಂಡರ್ ತಮ್ಮ ದೇಶಕ್ಕಾಗಿ ಆಡುವುದು ತನ್ನ ದೊಡ್ಡ ಗೌರವವಾಗಿ ಉಳಿಯುತ್ತದೆ ಎಂದು ಹೇಳಿಕೊಂಡಿದ್ದಾರೆ.

ಐಪಿಎಲ್ 2024 ರ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿದ್ದ 30 ವರ್ಷದ ಪಾಂಡ್ಯ ಭಾರತದ ವಿಶ್ವಕಪ್ ಗೆಲುವಿನ ರೂವಾರಿಗಳಲ್ಲೊಬ್ಬರು. ಶನಿವಾರ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್​ನಲ್ಲಿ ಅವರು ತಮ್ಮ ಕೊನೇ ಓವರ್​​ನಲ್ಲಿ 16 ರನ್​ಗಳನ್ನು ಕಾಪಾಡಿಕೊಂಡಿದ್ದರು. ಅಲ್ಲಿ ಅವರು ಕೇವಲ 9 ರನ್​ ನೀಡಿದ್ದರು. ಅಂತೆಯೇ ಬರೋಡಾ ಮೂಲದ ಕ್ರಿಕೆಟಿಗ ದಕ್ಷಿಣ ಆಫ್ರಿಕಾ ತಂಡವು ಮುನ್ನಡೆ ಸಾಧಿಸುತ್ತಿದ್ದಾಗ ಹೆನ್ರಿಚ್​​ ಕ್ಲಾಸೆನ್ ಅವರ ವಿಕೆಟ್ ಪಡೆದಿದ್ದರು. ಒಟ್ಟು 3 ವಿಕೆಟ್ ಪಡೆದ ಅವರು ಸಂಭ್ರಮಿಸಿದ್ದರು.

“ಬರೋಡಾದ ಒಬ್ಬ ಹುಡುಗ ತನ್ನ ಕನಸನ್ನು ಸಾಕಾರಗೊಳಿಸಿದ್ದಾನೆ. ಮತ್ತು ತನ್ನ ದಾರಿಯಲ್ಲಿ ಎದುರಾಗಿರುವ ಎಲ್ಲ ರಿಗೂ ಕೃತಜ್ಞನಾಗಿದ್ದಾನೆ. ಇದಕ್ಕಿಂತ ಹೆಚ್ಚಿನದನ್ನು ಕೇಳಲು ಸಾಧ್ಯವಿಲ್ಲ. ನನ್ನ ದೇಶಕ್ಕಾಗಿ ಆಡುವುದು ಯಾವಾಗಲೂ ದೊಡ್ಡ ಗೌರವ. ಎಂದಿಗೂ ಪದಗಳಿಂದ ಪ್ರತಿಕ್ರಿಯಿಸುವುದಿಲ್ಲ ಎಂದು ನಾನು ಯಾವಾಗಲೂ ಜೀವನದಲ್ಲಿ ನಂಬಿಕೆ ಇಟ್ಟಿದ್ದೇನೆ ಎಂದು ಪಾಂಡ್ಯ ಬರೆದುಕೊಂಡಿದ್ದಾರೆ. ಅದಕ್ಕೆ ತಾವು ಬಾಲ್ಯದಲ್ಲಿ ಬರೋಡಾ ಹಾಗೂ ಭಾರತಕ್ಕೆ ಆಡುವ ಕನಸು ಹೊಂದಿದ್ದೇನೆ ಎಂದು ಹೇಳುವ ವಿಡಿಯೊವನ್ನು ಅಪ್​ಲೋಡ್​ ಮಾಡಿದ್ದಾರೆ.

ಪಂದ್ಯದ ನಂತರ ಮಾತನಾಡಿದ ಪಾಂಡ್ಯ, ತಮ್ಮನ್ನು ಅವಮಾನ ಮಾಡಿದ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ. ಉತ್ತಮ ಪ್ರದರ್ಶನಗಳೊಂದಿಗೆ ಅವರೆಲ್ಲರನ್ನೂ ಮೌನಗೊಳಿಸುವುದು ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: T20 World Cup 2024 : ಗೆಲುವಿನ ಸಂಭ್ರಮದಲ್ಲಿ ಪಾಂಡ್ಯ ಕೆನ್ನೆಗೆ ಮುತ್ತಿಟ್ಟ ನಾಯಕ ರೋಹಿತ್; ಇಲ್ಲಿದೆ ವಿಡಿಯೊ

ನಾನು ಒಳ್ಳೆಯದನ್ನು ನಂಬುತ್ತೇನೆ. ಒಬ್ಬ ವ್ಯಕ್ತಿಯಾಗಿ ನನ್ನ ಬಗ್ಗೆ ಸ್ವಲ್ಪವೂ ತಿಳಿಯದ ಜನರು ಬಹಳಷ್ಟು ಮಾತನಾಡಿದ್ದಾರೆ. ಅದರಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಆದರೆ ನಾನು ಎಂದಿಗೂ ಪದಗಳಿಂದ ಪ್ರತಿಕ್ರಿಯಿಸುವುದಿಲ್ಲ. ಸಂದರ್ಭಗಳಿಂದ ಪ್ರತಿಕ್ರಿಯಿಸುತ್ತೇನೆ. ನಾನು ಯಾವಾಗಲೂ ಜೀವನದಲ್ಲಿ ನಂಬಿಕೆ ಇಟ್ಟಿದ್ದೇನೆ. ಕಷ್ಟದ ಸಮಯಗಳು ಸಹ ಶಾಶ್ವತವಾಗಿ ಉಳಿಯುವುದಿಲ್ಲ. ಗೆದ್ದರೂ. ಸೋತರೂ ಉತ್ತಮವಾಗಿರುವುದು ಮುಖ್ಯ. ಅಭಿಮಾನಿಗಳು ಮತ್ತು ಪ್ರತಿಯೊಬ್ಬರೂ ಕಲಿಯಬೇಕು ಎಂದು ಪಾಂಡ್ಯ ಹೇಳಿದ್ದಾರೆ.

Continue Reading

ಕ್ರೀಡೆ

Suryakumar Yadav Catch: ಬೌಂಡರಿ ಲೈನ್ ಟಚ್ ಮಾಡಿದ್ರಾ ಸೂರ್ಯಕುಮಾರ್?; ಹೊಸ ವಿಡಿಯೊ ವೈರಲ್​

Suryakumar Yadav Catch: ಇಂಗ್ಲೆಂಡ್​ ವಿರುದ್ಧದ ಸೆಮಿಫೈನಲ್​ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್​ ನಡೆಸಿದ್ದ ಸೂರ್ಯಕುಮಾರ್ ಫೈನಲ್​ ಪಂದ್ಯದಲ್ಲಿ ಇದೇ ಪ್ರದರ್ಶನ ತೋರುವಲ್ಲಿ ವಿಫಲರಾದರು. 4 ಎಸೆತ ಎದುರಿಸಿ ಕೇವಲ 3 ರನ್​ಗೆ ವಿಕೆಟ್​ ಕೈಚೆಲ್ಲಿ ನಿರಾಸೆ ಮೂಡಿಸಿದರು.

VISTARANEWS.COM


on

Suryakumar Yadav
Koo

ಬಾರ್ಬಾಡೋಸ್​: ಅತ್ಯಂತ ರೋಚಕವಾಗಿ ನಡೆದ ಶನಿವಾರದ ಟಿ20 ವಿಶ್ವಕಪ್​ ಫೈನಲ್(T20 World Cup 2024)​ ಪಂದ್ಯದ ಅಂತಿಮ ಓವರ್​ನಲ್ಲಿ ಸೂರ್ಯಕುಮಾರ್​ ಯಾದವ್(Suryakumar Yadav)​ ಅವರು ಬೌಂಡರಿ ಲೈನ್‌ನಲ್ಲಿ ಕೂದಲೆಳೆ(Suryakumar Yadav Catch) ಅಂತರದಲ್ಲಿ ಡೇವಿಡ್ ಮಿಲ್ಲರ್(David Miller) ಅವರ ಆಘಾತಕಾರಿ ಕ್ಯಾಚ್ ಹಿಡಿಯುವ ಮೂಲಕ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ, ಈ ಕ್ಯಾಚ್​ ಬಗ್ಗೆ ದಕ್ಷಿಣ ಆಫ್ರಿಕಾದ ಅಭಿಮಾನಿಗಳು ಚಕಾರ ಎತ್ತಿದ್ದಾರೆ.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಮಿಲ್ಲರ್​ ಔಟ್​ ಆಗದೇ ಹೋಗಿದ್ದರೆ ಭಾರತ ಪಂದ್ಯ ಸೋಲುವ ಸಾಧ್ಯತೆ ಇತ್ತು.

ಇದೀಗ ಸೂರ್ಯಕುಮಾರ್​ ಅವರು ಹಿಡಿದ ಕ್ಯಾಚ್​ನ ವಿಡಿಯೊವನ್ನು ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿರುವ ದಕ್ಷಿಣ ಆಫ್ರಿಕಾದ ನೆಟ್ಟಿಗರು ಅಂಪೈರ್​ಗಳು ಈ ವಿಡಿಯೊವನ್ನು ಸೂಕ್ಷವಾಗಿ ಗಮನಿಸುವ ಅಗತ್ಯವಿದೆ. ಸೂರ್ಯಕುಮಾರ್​ ಅವರ ಕಾಲುಗಳು ಬೌಂಡರಿ ಲೈನ್​ಗ ಕೆಳ ಭಾಗದ ಪಟ್ಟಿಗೆ ತಾಗಿರುವುದು ಕಂಡು ಬಂದಿದೆ. ಹೀಗಾಗಿ ಇದು ಔಟ್​ ಅಲ್ಲ ಸಿಕ್ಸ್​ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ Rohit Sharma: ಲಿಯೋನೆಲ್ ಮೆಸ್ಸಿ ಶೈಲಿಯಲ್ಲಿ ವಿಶ್ವಕಪ್​ ಎತ್ತಿ ಹಿಡಿದ ರೋಹಿತ್​; ವಿಡಿಯೊ ವೈರಲ್​

ಹೊಸದಾಗಿ ವೈರಲ್​ ಆಗುತ್ತಿರುವ ವಿಡಿಯೊ ನೋಡುವಾಗ ಬೌಂಡರಿ ಲೈನ್​ನ ಕೆಳ ಭಾಗದ ಪಟ್ಟಿ ಸೂರ್ಯಕುಮಾರ್​ ಅವರ ಕಾಲಿಗೆ ತಾಗಿದಂತೆ ಕಾಣುತ್ತದೆ. ಆದರೆ, ನಿನ್ನೆ ಮೂರನೇ ಅಂಪೈರ್ ಹಲವು ಆಯಾಮದಲ್ಲಿ ಪರೀಕ್ಷಿಸುವಾಗ ಇದು ಬೆಳಕಿಗೆ ಬಂದಿರಲಿಲ್ಲ. ಹೀಗಾಗಿ ಈ ಕ್ಯಾಚ್​ನ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗಳು ಶರುವಾಗಿದೆ. ಕೆಲವರು ಇದು ಅಂಪೈರ್​ಗಳ ಅನ್ಯಾಯ ಎಂದರೆ, ಇನ್ನು ಕೆಲವರು ಇದು ಎಡಿಟ್​ ಮಾಡಿರುವ ವಿಡಿಯೊ ಎಂದು ಟ್ವೀಟ್​ ವಾರ್​ ನಡೆಸುತ್ತಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

ಇಂಗ್ಲೆಂಡ್​ ವಿರುದ್ಧದ ಸೆಮಿಫೈನಲ್​ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್​ ನಡೆಸಿದ್ದ ಸೂರ್ಯಕುಮಾರ್ ಫೈನಲ್​ ಪಂದ್ಯದಲ್ಲಿ ಇದೇ ಪ್ರದರ್ಶನ ತೋರುವಲ್ಲಿ ವಿಫಲರಾದರು. 4 ಎಸೆತ ಎದುರಿಸಿ ಕೇವಲ 3 ರನ್​ಗೆ ವಿಕೆಟ್​ ಕೈಚೆಲ್ಲಿ ನಿರಾಸೆ ಮೂಡಿಸಿದರು. ಆದರೆ, ಫೀಲ್ಡಿಂಗ್​ನಲ್ಲಿ ತೋರಿದ ಉತ್ಕೃಷ್ಟ ಮಟ್ಟದ ಪ್ರದರ್ಶನ ಮಾತ್ರ ಮೆಚ್ಚಲೇ ಬೇಕು.

Continue Reading
Advertisement
ಕ್ರೀಡೆ29 seconds ago

Team India: ವಿಶ್ವಕಪ್​ ಗೆದ್ದು ಟೀಮ್​ ಇಂಡಿಯಾ ನಿರ್ಮಿಸಿದ ದಾಖಲೆಗಳ ಪಟ್ಟಿ ಹೀಗಿದೆ

Leopard attack bike rider and cab driver
ಬೆಂಗಳೂರು9 mins ago

Leopard attack : ರಸ್ತೆ ಮೇಲೆ ಸತ್ತಂತೆ ಬಿದ್ದಿದ್ದ ಚಿರತೆ; ಮುಟ್ಟಲು ಹೋದ ಬೈಕ್‌ ಸವಾರ, ಕ್ಯಾಬ್‌ ಚಾಲಕನ ಮೇಲೆ ದಾಳಿ

Suryakumar Yadav
ಪ್ರಮುಖ ಸುದ್ದಿ12 mins ago

Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

Money Guide
ಮನಿ-ಗೈಡ್15 mins ago

Money Guide: ಕಡಿಮೆ ಸಂಬಳ ಇದ್ದರೂ ಚಿಂತೆ ಬೇಡ; ಉಳಿತಾಯಕ್ಕಾಗಿ ಈ ಟಿಪ್ಸ್‌ ಫಾಲೋ ಮಾಡಿ

Road Accident
ಬೆಳಗಾವಿ19 mins ago

Road Accident : ಬೈಕ್‌ಗೆ ಟಾಟಾ ಏಸ್‌ ಡಿಕ್ಕಿ; ಮಗನ ಕಣ್ಣೆದುರೇ ತಾಯಿ ಸಾವು

Pradeep Eshwar
ಕರ್ನಾಟಕ27 mins ago

Pradeep Eshwar: ವಿಪಕ್ಷ ನಾಯಕರು ಸಿದ್ದರಾಮಯ್ಯ ಬಳಿ ಕೋಚಿಂಗ್‌ ಪಡೆಯಲಿ: ಅಶೋಕ್‌ಗೆ ಪ್ರದೀಪ್‌ ಈಶ್ವರ್‌ ಸಲಹೆ

Actor Darshan in Parappana Agrahara Jail special fan who came to visit
ಸ್ಯಾಂಡಲ್ ವುಡ್42 mins ago

Actor Darshan : ಶಂಖ ಊದುತ್ತ, ಜಾಗಟೆ ಬಾರಿಸುತ್ತ ದರ್ಶನ್‌ ಭೇಟಿಗೆ ಬಂದ ವಿಶೇಷ ಚೇತನ ಅಭಿಮಾನಿ!

Hardik Pandya
ಪ್ರಮುಖ ಸುದ್ದಿ44 mins ago

Hardik Pandya : ಭಾರತಕ್ಕೆ ಆಡುವುದೇ ಕನಸು; ಹಾರ್ದಿಕ್ ಪಾಂಡ್ಯನ ಹಳೆ ವಿಡಿಯೊ ವೈರಲ್​

Physical Assault
ಕ್ರೈಂ49 mins ago

Physical Assualt: 2 ವರ್ಷದ ಮಗುವನ್ನೇ ಲೈಂಗಿಕ ಕ್ರಿಯೆಗಾಗಿ ಮಾರಲು ಯತ್ನಿಸಿದ್ದ ದುಷ್ಟ ದಂಪತಿ ಬಂಧನ

bike wheeling
ಬೆಂಗಳೂರು ಗ್ರಾಮಾಂತರ60 mins ago

Bike Wheeling: ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಜತೆಗೆ ಯುವತಿಗೆ ಕೀಟಲೆ ಮಾಡಿದ ಪುಂಡರು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು4 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ23 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ಟ್ರೆಂಡಿಂಗ್‌