IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​ - Vistara News

ಕ್ರಿಕೆಟ್

IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​

IND vs PAK: ಪಾಕಿಸ್ತಾನ ಟಿ20 ಕ್ರಿಕೆಟ್‌ನಲ್ಲಿ ಉತ್ತಮ ಸಾಧನೆ ತೋರಿದೆ. 2009ರಲ್ಲಿ ಚಾಂಪಿಯನ್ ಆಗಿದ್ದ ತಂಡ, 2007 ಮತ್ತು 2022ರಲ್ಲಿ ರನ್ನರ್ ಅಪ್ ಆಗಿತ್ತು. ಒಟ್ಟು ಎಂಟು ಆವೃತ್ತಿಗಳಲ್ಲಿ ಆರು ಬಾರಿ ಸೆಮಿಫೈನಲ್ ತಲುಪಿದೆ. ಕಳೆದ ಆವೃತ್ತಿಯ ಫೈನಲ್‌ನಲ್ಲಿ ಇಂಗ್ಲೆಂಡ್‌ಗೆ ಮಣಿದಿತ್ತು.

VISTARANEWS.COM


on

IND vs PAK
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನ್ಯೂಯಾರ್ಕ್​: ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ವಿಶ್ವಕಪ್(t20 world cup 2024)​ ಪಂದ್ಯ ಭಾನುವಾರ(ಜೂನ್​ 9) ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಪಾಕ್(pakistan cricket team)​ ತಂಡದ ನಾಯಕ ಬಾಬರ್​ ಅಜಂ(Babar Azam) ಅವರು ತಂಡದ ಸಹ ಆಟಗಾರರರಿಗೆ ಮಹತ್ವದ ಸಲೆಯೊಂದನ್ನು ನೀಡಿದ್ದಾರೆ. ಎಲ್ಲರು ಶಾಂತ ಚಿತ್ತರಾಗಿ ಆಡಬೇಕು ಎಂದಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಬಾಬರ್​, ಭಾರತ ಮತ್ತು ಪಾಕಿಸ್ತಾನ ಪಂದ್ಯಗಳಿಗೆ ಇರುವ ಅತಿಯಾದ ಪ್ರಚಾರ, ನಿರೀಕ್ಷೆ ಮತ್ತು ಒತ್ತಡಗಳು ಆಟಗಾರರಲ್ಲಿ ಸಹಜವಾಗಿಯೇ ಒತ್ತಡ ಉಂಟುಮಾಡುತ್ತದೆ. ತಮ್ಮ ತಂಡದ ಆಟಗಾರರು ಶಾಂತಚಿತ್ತರಾಗಿದ್ದುಕೊಂಡು, ಆಟದ ಮೂಲಭೂತ ಅಂಶಗಳ ಕಡೆಗಷ್ಟೇ ಗಮನಹರಿಸಬೇಕು ಎಂದು ಸಲಹೆ ನೀಡಿದ್ದಾರೆ.

2021ರಲ್ಲಿ ದುಬೈನಲ್ಲಿ ನಡೆದಿದ್ದ ವಿಶ್ವಕಪ್‌ ಟೂರ್ನಿಯಲ್ಲಿ ನಾವು ಭಾರತ ವಿರುದ್ಧ 10 ವಿಕೆಟ್​ಗಳಿಂದ ಗೆಲುವು ಸಾಧಿಸಿದ್ದೆವು. ಈ ಗೆಲುವಿನ ಮಂತ್ರ, ನಾವು ಭಾರತೀಯ ಆಟಗಾರರನ್ನು ಕೆಣಕದೆ ಶಾಂತ ರೀತಿಯಲ್ಲಿ ಆಡಿದ್ದು. ಗೆಲುವಿನ ಬಳಿಕವೂ ದೊಡ್ಡ ಸಂಭ್ರಮಾಚರಣೆ ಮಾಡಿಲ್ಲ. ಈ ಬಾರಿಯೂ ನಾವು ಎಷ್ಟು ತಾಳ್ಮೆಯಿಂದ ಕ್ರಿಕೆಟ್​ ಆಡುತ್ತೇವೊ ಅಷ್ಟು ಉತ್ತಮ. ಇದು ನಮ್ಮ ಗೆಲುವಿಗೆ ಸಹಾಯ ಮಾಡುತ್ತದೆ. ಹೀಗಾಗಿ ಎಲ್ಲ ಆಟಗಾರರು ಈ ವಿಚಾರವನ್ನು ಗಮನದಲ್ಲಿರಿಸಬೇಕು ಎಂದರು.

ಪಾಕಿಸ್ತಾನ ಟಿ20 ಕ್ರಿಕೆಟ್‌ನಲ್ಲಿ ಉತ್ತಮ ಸಾಧನೆ ತೋರಿದೆ. 2009ರಲ್ಲಿ ಚಾಂಪಿಯನ್ ಆಗಿದ್ದ ತಂಡ, 2007 ಮತ್ತು 2022ರಲ್ಲಿ ರನ್ನರ್ ಅಪ್ ಆಗಿತ್ತು. ಒಟ್ಟು ಎಂಟು ಆವೃತ್ತಿಗಳಲ್ಲಿ ಆರು ಬಾರಿ ಸೆಮಿಫೈನಲ್ ತಲುಪಿದೆ. ಕಳೆದ ಆವೃತ್ತಿಯ ಫೈನಲ್‌ನಲ್ಲಿ ಇಂಗ್ಲೆಂಡ್‌ಗೆ ಮಣಿದಿತ್ತು. ಭಾರತ ವಿರುದ್ಧ ಆಡುವಾಗ ಯಾವಾಗಲು ಕೂಡ ಆಟಗಾರರಲ್ಲಿ ಸಹಜವಾಗಿಯೇ ಒತ್ತಡವಿರುತ್ತದೆ. ಇದನ್ನು ಬದಿಗಿಟ್ಟು ಆಡಿದರೆ ಗೆಲುವು ಖಚಿತ ಎಂದು ಬಾಬರ್​ ಅಭಿಪ್ರಾಯಪಟ್ಟರು.

ಇದನ್ನೂ ಓದಿ IND vs PAK: ಸ್ನೈಪರ್ ಗನ್​ ಕಣ್ಗಾವಲಿನಲ್ಲಿ ಭಾರತ-ಪಾಕ್ ಟಿ20​ ವಿಶ್ವಕಪ್​ ಪಂದ್ಯ

ಕಳೆದ ವಾರ ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಪಂದ್ಯ ನಡೆಯುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ಗೆ ನ್ಯೂಯಾರ್ಕ್​ ಪೊಲೀಸರಿಂದ ಮತ್ತು ಮಿಲಿಟರಿ ಪಡೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸ್ಟೇಡಿಯಂಗೆ ಈಗಿಂದಲೇ ಭಾರೀ ಭದ್ರತೆ ಏರ್ಪಡಿಸಲಾಗಿದೆ. ನ್ಯೂಯಾರ್ಕ್​ನ(New York stadium) ವಿಶೇಷ ಮಿಲಿಟರಿ ಪಡೆ ಸ್ನೈಪರ್ ಗನ್ ಹಿಡಿದು ಕಣ್ಗಾವಲಿಟ್ಟಿದೆ. ಇದರ ಫೋಟೊಗಳು ವೈರಲ್​ ಆಗಿದೆ.

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಪಾಕಿಸ್ತಾನ ತಂಡ


ಬಾಬರ್ ಅಜಂ (ನಾಯಕ), ಅಬ್ರಾರ್ ಅಹ್ಮದ್, ಅಜಮ್ ಖಾನ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾಹ್ಮಾನ್ ಅಫ್ರಿದಿ, ಉಸ್ಮಾನ್ ಖಾನ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

Suryakumar Yadav:

VISTARANEWS.COM


on

Suryakumar Yadav
Koo

ಬೆಂಗಳೂರು: ವೆಸ್ಟ್​ ಇಂಡೀಸ್​​ನ ಬಾರ್ಬಡೋಸ್​​ನಲ್ಲಿ ಶನಿವಾರ ನಡೆದ ವಿಶ್ವ ಕಪ್​ 2024ರ (T20 World Cup 2024) ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಗೆಲುವು ಸಾಧಿಸಿದ ಬಳಿಕ ಭಾರತ ತಂಡದ ಆಟಗಾರರ ಸಂತಸಕ್ಕೆ ಪಾರವೇ ಇಲ್ಲ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಅಂತೆಯೇ ಪಂದ್ಯದ 19ನೇ ಓವರ್​ನಲ್ಲಿ ಅದ್ಬುತ ಕ್ಯಾಚ್​ ಹಿಡಿದು ಪಂದ್ಯಕ್ಕೆ ನಿರ್ಣಾಯ ತಿರುವು ಕೊಟ್ಟ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವಿಶಾ ಶೆಟ್ಟಿ ಅವರು ರಾತ್ರಿಯಲ್ಲಿ ಟಿ 0 ವಿಶ್ವಕಪ್ ಟ್ರೋಫಿ ಬೆಡ್​ ಮೇಲೆ ಇಟ್ಟು ಮಲಗಿದ್ದಾರೆ. ಅದರ ವಿಡಿಯೊ ವೈರಲ್​ ಆಗಿದೆ.

ಅಂತಿಮ ಓವರ್​ನಲ್ಲಿ ಡೇವಿಡ್ ಮಿಲ್ಲರ್ ಅವರನ್ನು ಬೌಂಡರಿ ಲೈನ್​ನಲ್ಲಿ ಕ್ಯಾಚ್​ ಹಿಡಿದು ಔಟ್ ಮಾಡಿದ ಸೂರ್ಯ ಕುಮಾರ್​ ಯಾದವ್​ ಅತ್ಯಂತ ಸಂಭ್ರಮದಲ್ಲಿದ್ದರು. ತಂಡದ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಇದನ್ನು ಆಟದ ಗತಿ ಬದಲಾವಣೆ ಮಾಡಿದ ಕ್ಷಣ ಎಂದು ಕರೆದಿದ್ದಾರೆ. ಏಕೆಂದರೆ ವಿಜಯದ ನಂತರ ಸೂರ್ಯ ಭಾರತೀಯ ಡ್ರೆಸ್ಸಿಂಗ್ ಕೋಣೆಯಲ್ಲಿ ಅತ್ಯುತ್ತಮ ಫೀಲ್ಡರ್ ಪದಕ ಕೂಡ ಪಡೆದಿದ್ದಾರೆ.

ಅದಕ್ಕಿಂತ ಮೊದಲು ಕುಲದೀಪ್ ಯಾದವ್ ಕ್ವಿಂಟನ್ ಡಿ ಕಾಕ್ ಅವರ ಪ್ರಮುಖ ಕ್ಯಾಚ್ ಪಡೆದಿದ್ದರು. ಆದರೆ ಸೂರ್ಯಕಮಾರ್​ ಯಾದವ್ ಅವರ ಕ್ಯಾಚ್ ಇನ್ನೂ ಅತ್ಯುತ್ತಮವಾಗಿತ್ತು ಎಂದು ಟಿ ದಿಲೀಪ್ ಹೇಳಿದ್ದಾರೆ. ಆದ್ದರಿಂದ, ಅವರು ಟ್ರೋಫಿಯನ್ನು ಪಕ್ಕದಲ್ಲೇ ಇಟ್ಟುಕೊಂಡಿರುವುದು ಸರಿಯಾಗಿಯೇ ಇದೆ.

ಸೂರ್ಯ ಹಾಸಿಗೆ ಒಂದು ಬದಿಯಲ್ಲಿ ಮಲಗಿದ್ದರೆ ಪತ್ನಿ ಇನ್ನೊಂದು ಕಡೆಯಲ್ಲಿ ಮಲಗಿದ್ದರು. ಮಧ್ಯದಲ್ಲಿ ಅವರು ಟ್ರೋಫಿಯನ್ನು ಇಟ್ಟುಕೊಂಡಿದ್ದರು. ಈ ಫೋಟೊ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ 7 ರನ್ ಗಳ ಜಯ ಸಾಧಿಸಿತು. 2007ರಲ್ಲಿ ಉದ್ಘಾಟನಾ ಆವೃತ್ತಿಯಲ್ಲಿ ಎಂ.ಎಸ್.ಧೋನಿ ಪಡೆ ಟ್ರೋಫಿ ಪಡೆದ ಬಳಿಕ ಇದು ಎರಡನೇ ಟಿ20 ವಿಶ್ವ ಕಪ್ ಟ್ರೋಫಿಯಾಗಿದೆ.

ಇದನ್ನೂ ಓದಿ: Hardik Pandya : ಭಾರತಕ್ಕೆ ಆಡುವುದೇ ಕನಸು; ಹಾರ್ದಿಕ್ ಪಾಂಡ್ಯನ ಹಳೆ ವಿಡಿಯೊ ವೈರಲ್​

ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​​ಗೆ ವಿದಾಯ ಘೋಷಿಸಿದ್ದಾರೆ. ರೋಹಿತ್ ನಾಯಕನಾಗಿ 50 ಗೆಲುವುಗಳನ್ನು ದಾಖಲಿಸಿದ್ದಾರೆ. ಇದು ಟಿ 20 ಪಂದ್ಯಗಳಲ್ಲಿ ಯಾವುದೇ ನಾಯಕನಿಗೆ ಅತಿ ಹೆಚ್ಚು. ಗೆಲುವಾಗಿದೆ.

Continue Reading

ಪ್ರಮುಖ ಸುದ್ದಿ

Hardik Pandya : ಭಾರತಕ್ಕೆ ಆಡುವುದೇ ಕನಸು; ಹಾರ್ದಿಕ್ ಪಾಂಡ್ಯನ ಹಳೆ ವಿಡಿಯೊ ವೈರಲ್​

VISTARANEWS.COM


on

Hardik Pandya
Koo

ಬೆಂಗಳೂರು: ಭಾರತ ತಂಡದ ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ (Hardik Pandya) 2024ರ ಟಿ 20 ವಿಶ್ವಕಪ್ ಗೆಲುವಿನಲ್ಲಿ (T20 World Cup 2024) ಪ್ರಮುಖ ಪಾತ್ರ ವಹಿಸಿದ ಬಳಿಕ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ಅವರ ಬಗ್ಗೆ ಜೋರು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಅವರು ತಮ್ಮ ಬಾಲ್ಯದ ದಿನಗಳ ಕ್ರಿಕೆಟ್ ಕನಸನ್ನು ವ್ಯಕ್ತಪಡಿಸುವ​ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಎಕ್ಸ್​ ಪೋಸ್ಟ್​​ನಲ್ಲಿ ಬೌಲಿಂಗ್ ಆಲ್ರೌಂಡರ್ ತಮ್ಮ ದೇಶಕ್ಕಾಗಿ ಆಡುವುದು ತನ್ನ ದೊಡ್ಡ ಗೌರವವಾಗಿ ಉಳಿಯುತ್ತದೆ ಎಂದು ಹೇಳಿಕೊಂಡಿದ್ದಾರೆ.

ಐಪಿಎಲ್ 2024 ರ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿದ್ದ 30 ವರ್ಷದ ಪಾಂಡ್ಯ ಭಾರತದ ವಿಶ್ವಕಪ್ ಗೆಲುವಿನ ರೂವಾರಿಗಳಲ್ಲೊಬ್ಬರು. ಶನಿವಾರ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್​ನಲ್ಲಿ ಅವರು ತಮ್ಮ ಕೊನೇ ಓವರ್​​ನಲ್ಲಿ 16 ರನ್​ಗಳನ್ನು ಕಾಪಾಡಿಕೊಂಡಿದ್ದರು. ಅಲ್ಲಿ ಅವರು ಕೇವಲ 9 ರನ್​ ನೀಡಿದ್ದರು. ಅಂತೆಯೇ ಬರೋಡಾ ಮೂಲದ ಕ್ರಿಕೆಟಿಗ ದಕ್ಷಿಣ ಆಫ್ರಿಕಾ ತಂಡವು ಮುನ್ನಡೆ ಸಾಧಿಸುತ್ತಿದ್ದಾಗ ಹೆನ್ರಿಚ್​​ ಕ್ಲಾಸೆನ್ ಅವರ ವಿಕೆಟ್ ಪಡೆದಿದ್ದರು. ಒಟ್ಟು 3 ವಿಕೆಟ್ ಪಡೆದ ಅವರು ಸಂಭ್ರಮಿಸಿದ್ದರು.

“ಬರೋಡಾದ ಒಬ್ಬ ಹುಡುಗ ತನ್ನ ಕನಸನ್ನು ಸಾಕಾರಗೊಳಿಸಿದ್ದಾನೆ. ಮತ್ತು ತನ್ನ ದಾರಿಯಲ್ಲಿ ಎದುರಾಗಿರುವ ಎಲ್ಲ ರಿಗೂ ಕೃತಜ್ಞನಾಗಿದ್ದಾನೆ. ಇದಕ್ಕಿಂತ ಹೆಚ್ಚಿನದನ್ನು ಕೇಳಲು ಸಾಧ್ಯವಿಲ್ಲ. ನನ್ನ ದೇಶಕ್ಕಾಗಿ ಆಡುವುದು ಯಾವಾಗಲೂ ದೊಡ್ಡ ಗೌರವ. ಎಂದಿಗೂ ಪದಗಳಿಂದ ಪ್ರತಿಕ್ರಿಯಿಸುವುದಿಲ್ಲ ಎಂದು ನಾನು ಯಾವಾಗಲೂ ಜೀವನದಲ್ಲಿ ನಂಬಿಕೆ ಇಟ್ಟಿದ್ದೇನೆ ಎಂದು ಪಾಂಡ್ಯ ಬರೆದುಕೊಂಡಿದ್ದಾರೆ. ಅದಕ್ಕೆ ತಾವು ಬಾಲ್ಯದಲ್ಲಿ ಬರೋಡಾ ಹಾಗೂ ಭಾರತಕ್ಕೆ ಆಡುವ ಕನಸು ಹೊಂದಿದ್ದೇನೆ ಎಂದು ಹೇಳುವ ವಿಡಿಯೊವನ್ನು ಅಪ್​ಲೋಡ್​ ಮಾಡಿದ್ದಾರೆ.

ಪಂದ್ಯದ ನಂತರ ಮಾತನಾಡಿದ ಪಾಂಡ್ಯ, ತಮ್ಮನ್ನು ಅವಮಾನ ಮಾಡಿದ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ. ಉತ್ತಮ ಪ್ರದರ್ಶನಗಳೊಂದಿಗೆ ಅವರೆಲ್ಲರನ್ನೂ ಮೌನಗೊಳಿಸುವುದು ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: T20 World Cup 2024 : ಗೆಲುವಿನ ಸಂಭ್ರಮದಲ್ಲಿ ಪಾಂಡ್ಯ ಕೆನ್ನೆಗೆ ಮುತ್ತಿಟ್ಟ ನಾಯಕ ರೋಹಿತ್; ಇಲ್ಲಿದೆ ವಿಡಿಯೊ

ನಾನು ಒಳ್ಳೆಯದನ್ನು ನಂಬುತ್ತೇನೆ. ಒಬ್ಬ ವ್ಯಕ್ತಿಯಾಗಿ ನನ್ನ ಬಗ್ಗೆ ಸ್ವಲ್ಪವೂ ತಿಳಿಯದ ಜನರು ಬಹಳಷ್ಟು ಮಾತನಾಡಿದ್ದಾರೆ. ಅದರಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಆದರೆ ನಾನು ಎಂದಿಗೂ ಪದಗಳಿಂದ ಪ್ರತಿಕ್ರಿಯಿಸುವುದಿಲ್ಲ. ಸಂದರ್ಭಗಳಿಂದ ಪ್ರತಿಕ್ರಿಯಿಸುತ್ತೇನೆ. ನಾನು ಯಾವಾಗಲೂ ಜೀವನದಲ್ಲಿ ನಂಬಿಕೆ ಇಟ್ಟಿದ್ದೇನೆ. ಕಷ್ಟದ ಸಮಯಗಳು ಸಹ ಶಾಶ್ವತವಾಗಿ ಉಳಿಯುವುದಿಲ್ಲ. ಗೆದ್ದರೂ. ಸೋತರೂ ಉತ್ತಮವಾಗಿರುವುದು ಮುಖ್ಯ. ಅಭಿಮಾನಿಗಳು ಮತ್ತು ಪ್ರತಿಯೊಬ್ಬರೂ ಕಲಿಯಬೇಕು ಎಂದು ಪಾಂಡ್ಯ ಹೇಳಿದ್ದಾರೆ.

Continue Reading

ಕ್ರೀಡೆ

Suryakumar Yadav Catch: ಬೌಂಡರಿ ಲೈನ್ ಟಚ್ ಮಾಡಿದ್ರಾ ಸೂರ್ಯಕುಮಾರ್?; ಹೊಸ ವಿಡಿಯೊ ವೈರಲ್​

Suryakumar Yadav Catch: ಇಂಗ್ಲೆಂಡ್​ ವಿರುದ್ಧದ ಸೆಮಿಫೈನಲ್​ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್​ ನಡೆಸಿದ್ದ ಸೂರ್ಯಕುಮಾರ್ ಫೈನಲ್​ ಪಂದ್ಯದಲ್ಲಿ ಇದೇ ಪ್ರದರ್ಶನ ತೋರುವಲ್ಲಿ ವಿಫಲರಾದರು. 4 ಎಸೆತ ಎದುರಿಸಿ ಕೇವಲ 3 ರನ್​ಗೆ ವಿಕೆಟ್​ ಕೈಚೆಲ್ಲಿ ನಿರಾಸೆ ಮೂಡಿಸಿದರು.

VISTARANEWS.COM


on

Suryakumar Yadav
Koo

ಬಾರ್ಬಾಡೋಸ್​: ಅತ್ಯಂತ ರೋಚಕವಾಗಿ ನಡೆದ ಶನಿವಾರದ ಟಿ20 ವಿಶ್ವಕಪ್​ ಫೈನಲ್(T20 World Cup 2024)​ ಪಂದ್ಯದ ಅಂತಿಮ ಓವರ್​ನಲ್ಲಿ ಸೂರ್ಯಕುಮಾರ್​ ಯಾದವ್(Suryakumar Yadav)​ ಅವರು ಬೌಂಡರಿ ಲೈನ್‌ನಲ್ಲಿ ಕೂದಲೆಳೆ(Suryakumar Yadav Catch) ಅಂತರದಲ್ಲಿ ಡೇವಿಡ್ ಮಿಲ್ಲರ್(David Miller) ಅವರ ಆಘಾತಕಾರಿ ಕ್ಯಾಚ್ ಹಿಡಿಯುವ ಮೂಲಕ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ, ಈ ಕ್ಯಾಚ್​ ಬಗ್ಗೆ ದಕ್ಷಿಣ ಆಫ್ರಿಕಾದ ಅಭಿಮಾನಿಗಳು ಚಕಾರ ಎತ್ತಿದ್ದಾರೆ.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಮಿಲ್ಲರ್​ ಔಟ್​ ಆಗದೇ ಹೋಗಿದ್ದರೆ ಭಾರತ ಪಂದ್ಯ ಸೋಲುವ ಸಾಧ್ಯತೆ ಇತ್ತು.

ಇದೀಗ ಸೂರ್ಯಕುಮಾರ್​ ಅವರು ಹಿಡಿದ ಕ್ಯಾಚ್​ನ ವಿಡಿಯೊವನ್ನು ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿರುವ ದಕ್ಷಿಣ ಆಫ್ರಿಕಾದ ನೆಟ್ಟಿಗರು ಅಂಪೈರ್​ಗಳು ಈ ವಿಡಿಯೊವನ್ನು ಸೂಕ್ಷವಾಗಿ ಗಮನಿಸುವ ಅಗತ್ಯವಿದೆ. ಸೂರ್ಯಕುಮಾರ್​ ಅವರ ಕಾಲುಗಳು ಬೌಂಡರಿ ಲೈನ್​ಗ ಕೆಳ ಭಾಗದ ಪಟ್ಟಿಗೆ ತಾಗಿರುವುದು ಕಂಡು ಬಂದಿದೆ. ಹೀಗಾಗಿ ಇದು ಔಟ್​ ಅಲ್ಲ ಸಿಕ್ಸ್​ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ Rohit Sharma: ಲಿಯೋನೆಲ್ ಮೆಸ್ಸಿ ಶೈಲಿಯಲ್ಲಿ ವಿಶ್ವಕಪ್​ ಎತ್ತಿ ಹಿಡಿದ ರೋಹಿತ್​; ವಿಡಿಯೊ ವೈರಲ್​

ಹೊಸದಾಗಿ ವೈರಲ್​ ಆಗುತ್ತಿರುವ ವಿಡಿಯೊ ನೋಡುವಾಗ ಬೌಂಡರಿ ಲೈನ್​ನ ಕೆಳ ಭಾಗದ ಪಟ್ಟಿ ಸೂರ್ಯಕುಮಾರ್​ ಅವರ ಕಾಲಿಗೆ ತಾಗಿದಂತೆ ಕಾಣುತ್ತದೆ. ಆದರೆ, ನಿನ್ನೆ ಮೂರನೇ ಅಂಪೈರ್ ಹಲವು ಆಯಾಮದಲ್ಲಿ ಪರೀಕ್ಷಿಸುವಾಗ ಇದು ಬೆಳಕಿಗೆ ಬಂದಿರಲಿಲ್ಲ. ಹೀಗಾಗಿ ಈ ಕ್ಯಾಚ್​ನ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗಳು ಶರುವಾಗಿದೆ. ಕೆಲವರು ಇದು ಅಂಪೈರ್​ಗಳ ಅನ್ಯಾಯ ಎಂದರೆ, ಇನ್ನು ಕೆಲವರು ಇದು ಎಡಿಟ್​ ಮಾಡಿರುವ ವಿಡಿಯೊ ಎಂದು ಟ್ವೀಟ್​ ವಾರ್​ ನಡೆಸುತ್ತಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

ಇಂಗ್ಲೆಂಡ್​ ವಿರುದ್ಧದ ಸೆಮಿಫೈನಲ್​ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್​ ನಡೆಸಿದ್ದ ಸೂರ್ಯಕುಮಾರ್ ಫೈನಲ್​ ಪಂದ್ಯದಲ್ಲಿ ಇದೇ ಪ್ರದರ್ಶನ ತೋರುವಲ್ಲಿ ವಿಫಲರಾದರು. 4 ಎಸೆತ ಎದುರಿಸಿ ಕೇವಲ 3 ರನ್​ಗೆ ವಿಕೆಟ್​ ಕೈಚೆಲ್ಲಿ ನಿರಾಸೆ ಮೂಡಿಸಿದರು. ಆದರೆ, ಫೀಲ್ಡಿಂಗ್​ನಲ್ಲಿ ತೋರಿದ ಉತ್ಕೃಷ್ಟ ಮಟ್ಟದ ಪ್ರದರ್ಶನ ಮಾತ್ರ ಮೆಚ್ಚಲೇ ಬೇಕು.

Continue Reading

ಕ್ರೀಡೆ

Rohit Sharma: ಲಿಯೋನೆಲ್ ಮೆಸ್ಸಿ ಶೈಲಿಯಲ್ಲಿ ವಿಶ್ವಕಪ್​ ಎತ್ತಿ ಹಿಡಿದ ರೋಹಿತ್​; ವಿಡಿಯೊ ವೈರಲ್​

Rohit Sharma: ರೋಹಿತ್​ಗೆ ಮೆಸ್ಸಿಯ ಈ ಶೈಲಿಯನ್ನು ಹೇಳಿಕೊಟ್ಟದ್ದು ತಂಡದ ಸಹ ಆಟಗಾರ ಕುಲ್​ದೀಪ್​ ಯಾದವ್​. ಆಟಗಾರರೆಲ್ಲ ಪದಕ ಸ್ವೀಕರಿಸುತ್ತಿದ್ದ ವೇಳೆ ಕುಲ್​ದೀಪ್​ ಅವರು ರೋಹಿತ್​ ಅವರಿಗೆ ಯಾವ ರೀತಿಯಲ್ಲಿ ಬಂದು ಕಪ್​ ಎತ್ತಬೇಕು ಎಂದು ನಟನೆ ಮಾಡಿ ತೋರಿಸಿಕೊಟ್ಟಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Rohit Sharma
Koo

ನವದೆಹಲಿ: 2022 ಕತಾರ್​ನಲ್ಲಿ ನಡೆದ ಫಿಫಾ ಫುಟ್ಬಾಲ್​​​​​​​​​ ವಿಶ್ವ ಕಪ್(Fifa World Cup 2022) ರೋಮಾಂಚನಕಾರಿ ಫೈನಲ್​ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ(Lionel Messi) ನಾಯಕತ್ವದಲ್ಲಿ ಅರ್ಜೆಂಟೀನಾ ತಂಡ ಫ್ರಾನ್ಸ್​ ತಂಡವನ್ನು ಮಣಿಸಿ 36 ವರ್ಷಗಳ ಬಳಿಕ ವಿಶ್ವ ಚಾಂಪಿಯನ್ ಆಗಿ ಹೊರಮೊಮ್ಮಿತ್ತು. ಲಿಯೋನೆಲ್ ಮೆಸ್ಸಿ ಅವರು ವಿಭಿನ್ನ ಶೈಲಿಯಲ್ಲಿ ಬಂದು ಕಪ್​ ಎತ್ತಿ ಹಿಡಿಯುವ ಮೂಲಕ ಫೋಟೊಗೆ ಫೋಸ್​ ಕೊಟ್ಟಿದ್ದರು. ಶನಿವಾರ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಚಾಂಪಿಯನ್(T20 World Cup final)​ ಪಟ್ಟ ಅಲಂಕರಿಸಿದ ಭಾರತ ತಂಡದ ನಾಯಕ ರೋಹಿತ್​ ಶರ್ಮ(Rohit Sharma) ಕೂಡ ಮೆಸ್ಸಿಯ ಶೈಲಿಯಲ್ಲೇ ವಿಶ್ವಕಪ್​ ಎತ್ತಿ ಹಿಡಿದಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ರೋಹಿತ್​ಗೆ ಮೆಸ್ಸಿಯ ಈ ಶೈಲಿಯನ್ನು ಹೇಳಿಕೊಟ್ಟದ್ದು ತಂಡದ ಸಹ ಆಟಗಾರ ಕುಲ್​ದೀಪ್​ ಯಾದವ್​. ಆಟಗಾರರೆಲ್ಲ ಪದಕ ಸ್ವೀಕರಿಸುತ್ತಿದ್ದ ವೇಳೆ ಕುಲ್​ದೀಪ್​ ಅವರು ರೋಹಿತ್​ ಅವರಿಗೆ ಯಾವ ರೀತಿಯಲ್ಲಿ ಬಂದು ಕಪ್​ ಎತ್ತಬೇಕು ಎಂದು ನಟನೆ ಮಾಡಿ ತೋರಿಸಿದರು. ಈ ವೇಳೆ ರೋಹಿತ್​ ಓಕೆ ಓಕೆ.. ಎಂದು ಹೇಳುತ್ತಾರೆ. ಬಳಿಕ ವಿಶ್ವಕಪ್ ಟ್ರೋಫಿಯೊಂದಿಗೆ ಫೋಟೊಗೆ ಫೋಸ್​ ನೀಡಲು ಬರುವ ವೇಳೆ ಕುಲ್​ದೀಪ್​ ಹೇಳಿಕೊಟ್ಟಂತೆ ರೋಹಿತ್ ಅವರು ಅಂದು​ ಮೆಸ್ಸಿ ನಡೆದು ಬಂದು ಟ್ರೋಫಿಯನ್ನು ಎತ್ತಿ ಹಿಡಿದ ರೀತಿಯಲ್ಲೇ ವಿಶ್ವಕಪ್​ ಟ್ರೋಫಿಯನ್ನು ಎತ್ತಿ ಸಂಭ್ರಮಿಸಿದ್ದಾರೆ. ಟೀಮ್​ ಇಂಡಿಯಾ ಆಟಗಾರರು ಕೂಡ ಅರ್ಜೆಂಟೀನಾ ಫುಟ್ಬಾಲ್​ ತಂಡದ ಆಟಗಾರರಂತೆ ಸಂಭ್ರಮಿಸಿದ್ದು ಕಂಡುಬಂತು.

ಇದನ್ನೂ ಓದಿ T20 World Cup 2024: ಎರಡನೇ ವಿಶ್ವಕಪ್‌ಗೆ ತಾಳ್ಮೆಯಿಂದ ಕಾದಂತೆ ಟ್ರಾಫಿಕ್‌ ಸಿಗ್ನಲ್‌ನಲ್ಲೂ ಕಾಯಿರಿ; ದೆಹಲಿ ಪೊಲೀಸರ ಕ್ರಿಯೇಟಿವ್​ ವಿಷ್‌

ಅಂದು ನಡೆದಿದ್ದ ರಣರೋಚಕ ಫುಟ್ಬಾಲ್​ ಫೈನಲ್​ ಪಂದ್ಯದಲ್ಲಿ ಪೂರ್ಣ ಅವಧಿ 90 ನಿಮಿಷ ಹಾಗೂ ಹೆಚ್ಚುವರಿ 30 ನಿಮಿಷಗಳ ಆಟದಲ್ಲಿ ಇತ್ತಂಡಗಳು 3-3 ಗೋಲ್​ಗಳನ್ನು ಬಾರಿಸಿದ ಕಾರಣ ಫಲಿತಾಂಶಕ್ಕೆ ಪೆನಾಲ್ಟಿ ಮೊರೆ ಹೋಗಲಾಯಿತು. ಅಲ್ಲಿ ಅರ್ಜೆಂಟೀನಾ 4-2 ಗೋಲ್​ಗಳ ಅಂತರದಿಂದ ಗೆದ್ದು ವಿಜಯೋತ್ಸವ ಆಚರಿಸಿತ್ತು.

ಮೆಸ್ಸಿ ಸಂಭ್ರಮಿಸಿದ ಕ್ಷಣ

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading
Advertisement
Suryakumar Yadav
ಪ್ರಮುಖ ಸುದ್ದಿ42 seconds ago

Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

Money Guide
ಮನಿ-ಗೈಡ್3 mins ago

Money Guide: ಕಡಿಮೆ ಸಂಬಳ ಇದ್ದರೂ ಚಿಂತೆ ಬೇಡ; ಉಳಿತಾಯಕ್ಕಾಗಿ ಈ ಟಿಪ್ಸ್‌ ಫಾಲೋ ಮಾಡಿ

Road Accident
ಬೆಳಗಾವಿ7 mins ago

Road Accident : ಬೈಕ್‌ಗೆ ಟಾಟಾ ಏಸ್‌ ಡಿಕ್ಕಿ; ಮಗನ ಕಣ್ಣೆದುರೇ ತಾಯಿ ಸಾವು

Pradeep Eshwar
ಕರ್ನಾಟಕ15 mins ago

Pradeep Eshwar: ವಿಪಕ್ಷ ನಾಯಕರು ಸಿದ್ದರಾಮಯ್ಯ ಬಳಿ ಕೋಚಿಂಗ್‌ ಪಡೆಯಲಿ: ಅಶೋಕ್‌ಗೆ ಪ್ರದೀಪ್‌ ಈಶ್ವರ್‌ ಸಲಹೆ

Actor Darshan in Parappana Agrahara Jail special fan who came to visit
ಸ್ಯಾಂಡಲ್ ವುಡ್30 mins ago

Actor Darshan : ಶಂಖ ಊದುತ್ತ, ಜಾಗಟೆ ಬಾರಿಸುತ್ತ ದರ್ಶನ್‌ ಭೇಟಿಗೆ ಬಂದ ವಿಶೇಷ ಚೇತನ ಅಭಿಮಾನಿ!

Hardik Pandya
ಪ್ರಮುಖ ಸುದ್ದಿ32 mins ago

Hardik Pandya : ಭಾರತಕ್ಕೆ ಆಡುವುದೇ ಕನಸು; ಹಾರ್ದಿಕ್ ಪಾಂಡ್ಯನ ಹಳೆ ವಿಡಿಯೊ ವೈರಲ್​

Physical Assault
ಕ್ರೈಂ38 mins ago

Physical Assualt: 2 ವರ್ಷದ ಮಗುವನ್ನೇ ಲೈಂಗಿಕ ಕ್ರಿಯೆಗಾಗಿ ಮಾರಲು ಯತ್ನಿಸಿದ್ದ ದುಷ್ಟ ದಂಪತಿ ಬಂಧನ

bike wheeling
ಬೆಂಗಳೂರು ಗ್ರಾಮಾಂತರ48 mins ago

Bike Wheeling: ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಜತೆಗೆ ಯುವತಿಗೆ ಕೀಟಲೆ ಮಾಡಿದ ಪುಂಡರು!

Ex CIA Officer
ವಿದೇಶ50 mins ago

Ex CIA Officer: ಪಾಕಿಸ್ತಾನದಲ್ಲಿ ಉಗ್ರರನ್ನು ತಾಲಿಬಾನ್ ಮೂಲಕ ಕೊಲ್ಲುತ್ತಿರುವ ಭಾರತ; ಅಮೆರಿಕ ಗುಪ್ತಚರ ಇಲಾಖೆ ಮಾಜಿ ಅಧಿಕಾರಿ ಹೇಳಿಕೆ

Suryakumar Yadav
ಕ್ರೀಡೆ55 mins ago

Suryakumar Yadav Catch: ಬೌಂಡರಿ ಲೈನ್ ಟಚ್ ಮಾಡಿದ್ರಾ ಸೂರ್ಯಕುಮಾರ್?; ಹೊಸ ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು3 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ23 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ಟ್ರೆಂಡಿಂಗ್‌