Kannada New Movie: ವಿಜಯ್‌ ರಾಘವೇಂದ್ರ "ಗ್ರೇ ಗೇಮ್ಸ್" ಸಿನಿಮಾ ಗೆಲುವು - Vistara News

ಸ್ಯಾಂಡಲ್ ವುಡ್

Kannada New Movie: ವಿಜಯ್‌ ರಾಘವೇಂದ್ರ “ಗ್ರೇ ಗೇಮ್ಸ್” ಸಿನಿಮಾ ಗೆಲುವು

Kannada New Movie: ನಮ್ಮ ಚಿತ್ರ ಬಿಡುಗಡೆಯಾಗಿ ಇಂದಿಗೆ ಸರಿಯಾಗಿ ಇಪ್ಪತ್ತೈದು ದಿನ ಎಂದು ಮಾತನಾಡಿದ ನಿರ್ದೇಶಕ ಗಂಗಾಧರ್ ಸಾಲಿಮಠ, ʻʻಇಂದಿಗೂ ನಮ್ಮ ಚಿತ್ರ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ 26 ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ‌. ನಾವು ಏನೇ ಪ್ರಚಾರ ಮಾಡಿದರು, ಜನರ ಬಾಯಿಯಿಂದ ನಮ್ಮ ಚಿತ್ರದ ಬಗ್ಗೆ ಬರುವ ಅಭಿಪ್ರಾಯವೇ ಅಂತಿಮ. ಅವರು ನಮ್ಮ ಚಿತ್ರದ ಬಗ್ಗೆ ಒಬ್ಬರಿಂದ ಒಬ್ಬರಿಗೆ ಹೇಳುತ್ತಿರುವುದರಿಂದ ನಮ್ಮ ಚಿತ್ರ ಇಪ್ಪತ್ತೈದು ದಿನಗಳವರೆಗೂ ಪ್ರದರ್ಶನ ಕಾಣಲು ಸಾಧ್ಯವಾಗುತ್ತಿದೆ. ಚಿತ್ರದ ಗೆಲುವನ್ನು ಸಾಧ್ಯವಾಗಿಸಿದ ಪ್ರೇಕ್ಷಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದʼʼ ಎಂದರು.

VISTARANEWS.COM


on

Vijay Raghavendra gray games success
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗಂಗಾಧರ್ ಸಾಲಿಮಠ (Kannada New Movie) ನಿರ್ದೇಶನ ಹಾಗೂ “ಚಿನ್ನಾರಿ ಮುತ್ತ” ವಿಜಯ ರಾಘವೇಂದ್ರ (Vijay raghavendra) ಪ್ರಮುಖಪಾತ್ರದಲ್ಲಿ ನಟಿಸಿರುವ “ಗ್ರೇ ಗೇಮ್ಸ್” ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.‌ ಇತ್ತೀಚಿಗೆ ಈ ಚಿತ್ರ ಯಶಸ್ವಿಯಾಗಿ ಇಪ್ಪತ್ತೈದು ದಿ‌ನ ಪೂರೈಸಿರುವ ಸಂದರ್ಭವನ್ನು ಸಂಭ್ರಮಿದೆ. ನಿರ್ಮಾಪಕರು ಚಿತ್ರತಂಡದವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು‌. ನಂತರ ಯಶಸ್ಸಿನ ಖುಷಿಯನ್ನು ಮಾತುಗಳ ಮೂಲಕ ಹಂಚಿಕೊಂಡರು.

ನಮ್ಮ ಚಿತ್ರ ಬಿಡುಗಡೆಯಾಗಿ ಇಂದಿಗೆ ಸರಿಯಾಗಿ ಇಪ್ಪತ್ತೈದು ದಿನ ಎಂದು ಮಾತನಾಡಿದ ನಿರ್ದೇಶಕ ಗಂಗಾಧರ್ ಸಾಲಿಮಠ, ʻʻಇಂದಿಗೂ ನಮ್ಮ ಚಿತ್ರ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ 26 ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ‌. ನಾವು ಏನೇ ಪ್ರಚಾರ ಮಾಡಿದರು, ಜನರ ಬಾಯಿಯಿಂದ ನಮ್ಮ ಚಿತ್ರದ ಬಗ್ಗೆ ಬರುವ ಅಭಿಪ್ರಾಯವೇ ಅಂತಿಮ. ಅವರು ನಮ್ಮ ಚಿತ್ರದ ಬಗ್ಗೆ ಒಬ್ಬರಿಂದ ಒಬ್ಬರಿಗೆ ಹೇಳುತ್ತಿರುವುದರಿಂದ ನಮ್ಮ ಚಿತ್ರ ಇಪ್ಪತ್ತೈದು ದಿನಗಳವರೆಗೂ ಪ್ರದರ್ಶನ ಕಾಣಲು ಸಾಧ್ಯವಾಗುತ್ತಿದೆ. ಚಿತ್ರದ ಗೆಲುವನ್ನು ಸಾಧ್ಯವಾಗಿಸಿದ ಪ್ರೇಕ್ಷಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದʼʼ ಎಂದರು.

ʻʻಸಿನಿಮಾ ಮಾಡುವುದು ನನ್ನ ಕನಸ್ಸಾಗಿತ್ತು. ಅದು ನನಸ್ಸಾಗಿದೆ. ಚಿತ್ರ ಇಪ್ಪತ್ತೈದನೇ ದಿನದ ಹತ್ತಿರ ಬಂದಿರುವುದು ಮತ್ತಷ್ಟು ಸಂತೋಷವಾಗಿದೆ‌. ಈ ಸಂದರ್ಭದಲ್ಲಿ ಎಲ್ಲರಿಗೂ ಧನ್ಯವಾದ ಹೇಳುತ್ತೇನೆʼʼ ಎಂದರು ನಿರ್ಮಾಪಕ ಆನಂದ್ ಮುಗದ್.

ಇದನ್ನೂ ಓದಿ: Kannada New Movie: `ಮಂಡೇಲಾ’ ಚಿತ್ರಕ್ಕೆ ನಾರಿ ಶ್ರೀನಿವಾಸ್ ನಾಯಕ!

ʻʻನನಗೆ ಮುಹೂರ್ತ ಹಾಗೂ ಬಿಡುಗಡೆಗೆ ಮುಂಚಿನ ಕಾರ್ಯಕ್ರಮಗಳಲ್ಲಿ ಮಾತನಾಡುವುದಕ್ಕಿಂತ, ಚಿತ್ರ ತೆರೆಕಂಡು ಎರಡುವಾರಗಳು ಪ್ರದರ್ಶನ ಕಂಡ ಮೇಲೆ ಮಾತನಾಡಿದರೆ ಹೆಚ್ಚು ವಿಷಯ ಇರುತ್ತದೆ ಅನಿಸುತ್ತಿತ್ತು. ಆ ಸಂದರ್ಭ ಈಗ ಬಂದಿದೆ. “ಗ್ರೇ ಗೇಮ್ಸ್” ಅನ್ನು ಜನ ಮೆಚ್ಚಿಕೊಂಡಿದ್ದಾರೆʼʼ ಎಂದು ನಟ ವಿಜಯ ರಾಘವೇಂದ್ರ ತಿಳಿಸಿದರು.

ʻʻನನ್ನ ಮಾವ ವಿಜಯ್ ರಾಘವೇಂದ್ರ ಅವರಿಂದ ನನಗೆ ಈ ಚಿತ್ರದಲ್ಲಿ ನಟಿಸಲು ಅವಕಾಶ ದೊರೆಯಿತು. ನಿರ್ದೇಶಕರು ನಟನೆ ಹೇಳಿಕೊಟ್ಟರು. ನಿರ್ಮಾಪಕರು ಅವಕಾಶ ನೀಡಿದರು ಈ ಸಂದರ್ಭದಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆʼʼ ಎಂದರು ನವ ನಟ ಜೈ.

ನಟಿ ಭಾವನರಾವ್ ಸಹ ಚಿತ್ರದ ಯಶಸ್ಸಿನ ಖುಷಿಯನ್ನು ಹಂಚಿಕೊಂಡರು. ಕಾರ್ಯಕಾರಿ ನಿರ್ಮಾಪಕ ಬಸವರಾಜ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

T20 World Cup 2024: ಸುದೀಪ್‌ ಸೇರಿದಂತೆ ಸೌತ್‌ ,ಬಾಲಿವುಡ್‌ ತಾರೆಯರು ವಿಶ್ವಕಪ್​ ಗೆಲುವನ್ನು  ಸಂಭ್ರಮಿಸಿದ್ದು ಹೀಗೆ!

T20 World Cup 2024: ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ.

VISTARANEWS.COM


on

T20 World Cup 2024 Celebrities Celebrates India ICC Cricket
Koo

ಬೆಂಗಳೂರು: ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್​ ಫೈನಲ್(T20 World Cup 2024) ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ(South Africa vs India) ತಂಡವನ್ನು 7 ರನ್​ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿತು. ಜತೆಗೆ 13 ವರ್ಷಗಳ ಕಪ್​ ಬರಗಾಲ ಕೂಡ ನೀಗಿತು.  ಭಾರತ ಕ್ರಿಕೆಟ್ ತಂಡದ ಗೆಲುವನ್ನು ಸಿನಿಮಾ ಸೆಲೆಬ್ರಿಟಿಗಳು ಕೂಡ ಸಂಭ್ರಮಿಸಿದ್ದಾರೆ.

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಎಕ್ಸ್‌ ಖಾತೆಯಲ್ಲಿ ʻʻರಾಹುಲ್ ದ್ರಾವಿಡ್ ಸರ್ ನೀವು ನಮ್ಮ ಹೆಮ್ಮೆ. , ಘನತೆಯ ಶಿಖರ ಇದು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಅವರುಗಳು ನಮ್ಮ ಹೀರೋಗಳಾಗಿ ಹೊರಹೊಮ್ಮಿದ್ದಕ್ಕೆ ಧನ್ಯಾವದ. ಅದ್ಭುತ ಕ್ಯಾಚ್ ಪಡೆದ ಸೂರ್ಯಕುಮಾರ್ ಯಾದವ್​ಗೆ ವಿಶೇಷ ಧನ್ಯವಾದ’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ: T20 World Cup 2024: ದರ್ಶನ್‌ ಜೈಲಿಗೆ ಹೋದಾಗೆಲ್ಲ ವಿಶ್ವಕಪ್‌ ಗೆದ್ದ ಭಾರತ; ಹೀಗ್ಯಾಕೆ ಅಂದ್ರು ನೆಟ್ಟಿಗರು?

ಅಮಿತಾಭ್‌ ಬಚ್ಚನ್‌ ಕೂಡ ʻʻಕಣ್ಣೀರು ಹರಿಯುತ್ತಿದೆ. ವಿಶ್ವ ಚಾಂಪಿಯನ್ಸ್ ಭಾರತ. ಭಾರತ ಮಾತಾ ಕಿ ಜಯ್‌. ಜಯ ಹಿಂದ್ ಜಯ ಹಿಂದ್ʼʼಎಂದು ಬರೆದುಕೊಂಡಿದ್ದಾರೆ.

ಇನ್ನು ನಟ, ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಸಹ ಟ್ವೀಟ್ ಮಾಡಿದ್ದು, ಸರಳವಾಗಿ, ‘ಭಾರತ ತಂಡಕ್ಕೆ ಅಭಿನಂದನೆಗಳು’ ಎಂದಿದ್ದಾರೆ. ಭಾರತ ಕ್ರಿಕೆಟ್ ತಂಡದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಸಹ ಟ್ವೀಟ್ ಮಾಡಿದ್ದು, ʻʻಈ ಕಪ್‌ ನಮ್ಮದು! ಹೀರೋಸ್-ಇನ್-ಬ್ಲೂ ಹೊಸ ‘ವಿಶ್ವ ಚಾಂಪಿಯನ್’! ಸೂರ್ಯ ಕುಮಾರ್‌ ಕ್ಯಾಚ್‌ ಅದ್ಭುತ. ಈ ಐತಿಹಾಸಿಕ ಗೆಲುವಿನ ಬಗ್ಗೆ ತುಂಬಾ ಹೆಮ್ಮೆ ಇದೆ. ಜೈ ಹಿಂದ್! ಎಂದು ಬರೆದುಕೊಂಡಿದ್ದಾರೆ.

ರಣದೀಪ್ ಹೂಡಾ “ಬುಮ್ರಾ ಸ್ವಿಂಗ್ ದೇವರು ಮತ್ತು ಅರ್ಶ್‌ದೀಪ್ ಮತ್ತು ಅಕ್ಸರ್ .. ಕೊಹ್ಲಿ ಬ್ಯಾಟ್ ಮತ್ತು ರೋಹಿತ್ ಗ್ರೇಟ್‌. ಧನ್ಯವಾದಗಳು ರಾಹುಲ್ ದ್ರಾವಿಡ್.”ಎಂದು ಬರೆದುಕೊಂಡಿದ್ದಾರೆ.

ಅನಿಲ್ ಕಪೂರ್, ಮತ್ತು ರಶ್ಮಿಕಾ ಮಂದಣ್ಣ, ಅನನ್ಯ ಪಾಂಡೆ, ರವೀನಾ ಟಂಡನ್ ರಣದೀಪ್ ಹೂಡಾ ರಣ್ವೀರ್ ಸಿಂಗ್ ಸೇರಿದಂತೆ ಇನ್ನೂ ಹಲವು ಸಿನಿಮಾ ಸೆಲೆಬ್ರಿಟಿಗಳು ಭಾರತ ಕ್ರಿಕೆಟ್ ತಂಡದ ಅತ್ಯದ್ಭುತವಾದ ವಿಜಯಕ್ಕೆ ಟ್ವೀಟ್ ಮಾಡಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

T20 World Cup 2024: ದರ್ಶನ್‌ ಜೈಲಿಗೆ ಹೋದಾಗೆಲ್ಲ ವಿಶ್ವಕಪ್‌ ಗೆದ್ದ ಭಾರತ; ಹೀಗ್ಯಾಕೆ ಅಂದ್ರು ನೆಟ್ಟಿಗರು?

T20 World Cup 2024: ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳ ಸಡಗರ ಮುಗಿಲು ಮುಟ್ಟಿತ್ತು‌. ಎಂ.ಜಿ. ರಸ್ತೆ, ಬ್ರಿಗೇಡ್ ರೋಡ್, ಕೋರಮಂಗಲ ಸೇರಿದಂತೆ ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಮತ್ತು ತ್ರಿವರ್ಣ ಧ್ವಜ ಹಾರಿಸಿ, ಹಾಡುಗಳಿಗೆ ಕುಣಿದು ಸಂಭ್ರಮ ಆಚರಿಸಿ ಭಾರತ ತಂಡಕ್ಕೆ ಅಭಿನಂದನೆ‌ ಸಲ್ಲಿಸಿದರು.

VISTARANEWS.COM


on

T20 World Cup 2024 Netizen Thanking Darshan For India World Cup Win
Koo

ಬೆಂಗಳೂರು: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಇದರ ಬೆನ್ನಲ್ಲೇ  ಭಾರತ ವಿಶ್ವಕಪ್ ಗೆಲ್ಲಲು ಕಾರಣ ದರ್ಶನ್‌ ಎಂದು ಟ್ರೋಲ್‌ ಆಗುತ್ತಿದೆ. ಮಾತ್ರವಲ್ಲ ನೆಟ್ಟಿಗರು ದರ್ಶನ್‌ಗೆ ಧನ್ಯವಾದ ಎಂದು ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದಾರೆ. 

ಭಾರತ ಕಳೆದ ಬಾರಿ ವಿಶ್ವಕಪ್ ಗೆದ್ದಿದ್ದು 2011 ರಲ್ಲಿ ಆ ವರ್ಷವೂ ಸಹ ದರ್ಶನ್ ಜೈಲು ಸೇರಿದ್ದರು. ಅದಾದ 13 ವರ್ಷಗಳ ಬಳಿಕ 2024 ರಲ್ಲಿ ದರ್ಶನ್​ ಮತ್ತೆ ಜೈಲಿಗೆ ಹೋಗಿದ್ದಾರೆ. ಈ ಬಾರಿ ಭಾರತ ಮತ್ತೆ ವಿಶ್ವಕಪ್ ಗೆದ್ದಿದೆ. ಹಾಗಾಗಿ ದರ್ಶನ್ ಜೈಲು ಸೇರಿದ್ದಕ್ಕೆ ಭಾರತ ವಿಶ್ವಕಪ್ ಗೆದ್ದಿದ್ದು ಎಂಬುದು ಕೆಲವರ ಮಾತುಗಳು. ಭಾರತ ವಿಶ್ವಕಪ್ ಗೆದ್ದ ಕೆಲವು ತಿಂಗಳು ಬಳಿಕ ದರ್ಶನ್ ಜೈಲಿಗೆ ಹೋಗಿದ್ದರೆ ಹೊರತು ವಿಶ್ವಕಪ್ ಗೆಲ್ಲುವ ಮೊದಲಲ್ಲ. 2011 ರ ಏಪ್ರಿಲ್ 2 ರಂದು ಭಾರತ ವಿಶ್ವಕಪ್ ಗೆದ್ದಿತ್ತು, ಅದಾದ ಕೆಲವು ತಿಂಗಳ ಬಳಿಕ ಅಂದರೆ ಸೆಪ್ಟೆಂಬರ್ 9 ರಂದು ನಟ ದರ್ಶನ್ ಜೈಲು ಸೇರಿದ್ದರು.

ಹೇಗಿತ್ತು ಸೆಲೆಬ್ರೇಷನ್‌?

ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳ ಸಡಗರ ಮುಗಿಲು ಮುಟ್ಟಿತ್ತು‌. ಎಂ.ಜಿ. ರಸ್ತೆ, ಬ್ರಿಗೇಡ್ ರೋಡ್, ಕೋರಮಂಗಲ ಸೇರಿದಂತೆ ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಮತ್ತು ತ್ರಿವರ್ಣ ಧ್ವಜ ಹಾರಿಸಿ, ಹಾಡುಗಳಿಗೆ ಕುಣಿದು ಸಂಭ್ರಮ ಆಚರಿಸಿ ಭಾರತ ತಂಡಕ್ಕೆ ಅಭಿನಂದನೆ‌ ಸಲ್ಲಿಸಿದರು.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡ ಭಾರತ; ರಾಜ್ಯದ ವಿವಿಧೆಡೆ ಸಂಭ್ರಮಾಚರಣೆ ಹೀಗಿತ್ತು

ಭಾರತ ತಂಡ ಎರಡನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಹಿನ್ನೆಲೆಯಲ್ಲಿ ಬೆಳಗಾವಿಯ ಸಮಾದೇವಿ ಗಲ್ಲಿಯಲ್ಲಿ ಕ್ರಿಕೆಟ್ ಪ್ರೇಮಿಗಳು ಭಾರತ ಧ್ವಜ, ಭಗವಾಧ್ವಜ ಪ್ರದರ್ಶಿಸಿ ಖುಷಿಪಟ್ಟರು. ಜತೆಗೆ ಡಿಜೆಗೆ ಸಖತ್‌ ಸ್ಟೆಪ್ ಹಾಕಿ ಕ್ರೀಡಾ ಪ್ರೇಮಿಗಳು ಸಂಭ್ರಮಿಸಿದರು. ಕನ್ನಡ, ಹಿಂದಿ ಹಾಡುಗಳ ನಡುವೆ ಯುವ ಜನತೆಯ ಡ್ಯಾನ್ಸ್‌ ಗಮನ ಸೆಳೆಯಿತು.

ಟಾಸ್ ಗೆದ್ದ ನಂತರ ಭಾರತವು ಬ್ಯಾಟಿಂಗ್ ಸ್ನೇಹಿ ಪಿಚ್ನಲ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ನಿಧಾನವಾಗಿ ರನ್ ಪೇರಿಸಿ ದಕ್ಷಿಣ ಆಫ್ರಿಕಾಕ್ಕೆ 177 ರನ್​ಗಳ ಸವಾಲಿನ ಗುರಿ ನಿಗದಿಪಡಿಸಿತು. ಅಂತೆಯೇ ಅಂತಿಮ ಓವರ್​ನಲ್ಲಿ ದಕ್ಷಿಣ ಆಫ್ರಿಕಾಕ್ಕೆ ಪ್ರಶಸ್ತಿ ಗೆಲ್ಲಲು 16 ರನ್ಗಳ ಅವಶ್ಯಕತೆಯಿತ್ತು. ಈ ನಿರ್ಣಾಯಕ ಓವರ್​ಗೆ ಎಸೆಯಲು ರೋಹಿತ್ ಶರ್ಮಾ ಪಾಂಡ್ಯಗೆ ಚೆಂಡನ್ನು ನೀಡಿದರು. ಪಾಂಡ್ಯ ಕೇವಲ ಏಳು ರನ್​ಗಳನ್ನು ಬಿಟ್ಟುಕೊಟ್ಟು ಡೇವಿಡ್ ಮಿಲ್ಲರ್ ಮತ್ತು ಕಗಿಸೊ ರಬಾಡ ಅವರ ಎರಡು ಪ್ರಮುಖ ವಿಕೆಟ್​​ಗಳನ್ನು ಪಡೆದು ಭಾರತದ ಗೆಲುವನ್ನು ಖಚಿತಪಡಿಸಿದರು.

Continue Reading

ಕರ್ನಾಟಕ

Kannada New Movie: ಸೆನ್ಸಾರ್ ಅಂಗಳದಲ್ಲಿ ‘ಬ್ಯಾಕ್ ಬೆಂಚರ್ಸ್’ ಸಿನಿಮಾ!

Kannada New Movie: ಕಾಲೇಜು ಕೇಂದ್ರಿತ ಕಥೆ ಮತ್ತು ಬೇರೆ ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ “ಬ್ಯಾಕ್ ಬೆಂಚರ್ಸ್” ಆಕರ್ಷಿಸಿದ್ದಾರೆ. ಹೀಗೆ ತಾನೇತಾನಾಗಿ ಎಲ್ಲರನ್ನು ಆವರಿಸಿಕೊಂಡಿರುವ ಈ ಚಿತ್ರ ಇದೇ ಜುಲೈ 19ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಆರಂಭಿಕ ಹೆಜ್ಜೆಯಲ್ಲಿಯೇ ಸಕಾರಾತ್ಮಕ ವಾತಾವರಣ ಸೃಷ್ಟಿಸಿಕೊಂಡಿರುವ ಈ ಸಿನಿಮಾ ಈಗ ಸೆನ್ಸಾರ್ ಅಂಗಳ ತಲುಪಿಕೊಂಡಿದೆ.

VISTARANEWS.COM


on

Back Benchers film in the Censor
Koo

ಬೆಂಗಳೂರು: ಭಿನ್ನ ಕಂಟೆಂಟಿನ ಮುನ್ಸೂಚನೆಯೊಂದಿಗೆ ಕ್ರೇಜ್ ಹುಟ್ಟುಹಾಕಿರುವ ಚಿತ್ರ `ಬ್ಯಾಕ್ ಬೆಂಚರ್ಸ್’ ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಕಾಲೇಜು ಕೇಂದ್ರಿತ ಕಥೆ ಮತ್ತು ಬೇರೆ ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ “ಬ್ಯಾಕ್ ಬೆಂಚರ್ಸ್” ಆಕರ್ಷಿಸಿದ್ದಾರೆ. ಹೀಗೆ ತಾನೇತಾನಾಗಿ ಎಲ್ಲರನ್ನು ಆವರಿಸಿಕೊಂಡಿರುವ ಈ ಚಿತ್ರ ಇದೇ ಜುಲೈ 19ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಆರಂಭಿಕ ಹೆಜ್ಜೆಯಲ್ಲಿಯೇ ಸಕಾರಾತ್ಮಕ ವಾತಾವರಣ ಸೃಷ್ಟಿಸಿಕೊಂಡಿರುವ ಈ ಸಿನಿಮಾ (Kannada New Movie) ಈಗ ಸೆನ್ಸಾರ್ ಅಂಗಳ ತಲುಪಿಕೊಂಡಿದೆ.

ಇದು ರಾಜಶೇಖರ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ. ನಿರ್ಮಾಪಕರಾಗಿ, ನಿರ್ದೇಶಕರಾಗಿ ಪ್ರೇಕ್ಷಕರ ನಾಡಿಮಿಡಿತವನ್ನು ಅರಿತಿರುವವರು ರಾಜಶೇಖರ್. ಅನುಭವವನ್ನೆಲ್ಲ ಒಟ್ಟುಗೂಡಿಸಿಕೊಂಡು, ಹೊಸಬರ ತಂಡವನ್ನಿಟ್ಟುಕೊಂಡು ರಾಜಶೇಖರ್ ಈ ಚಿತ್ರವನ್ನು ರೂಪಿಸಿದ್ದಾರೆ.

ಸಾಮಾನ್ಯವಾಗಿ ಹೊಸಬರನ್ನು ಹಾಕಿಕೊಂಡು ಸಿನಿಮಾ ಮಾಡಲು ಬಹುತೇಕರು ಹಿಂದೇಟು ಹಾಕುತ್ತಾರೆ. ರಾಜಶೇಖರ್ ಅವರು ಸಂಪೂರ್ಣವಾಗಿ ಹೊಸಬರ ತಂಡದೊಂದಿಗೆ ಈ ಚಿತ್ರವನ್ನು ತಯಾರಿಸಿದ್ದಾರೆಂದರೆ ಅಚ್ಚರಿ ಮೂಡದಿರುವುದಿಲ್ಲ. ಹೊಸಬರೇ ಸೇರಿರುವುದರಿಂದ ಇಲ್ಲಿ ಹೊಸತನದ ಛಾಯೆಯಿದೆ. ಅದರ ಘಮವೀಗ ಟೀಸರ್ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿದೆ.

ಇದನ್ನೂ ಓದಿ: VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

ಇದರ ಭಾಗವಾಗಿರುವ ಯುವ ಪಡೆ ಭಿನ್ನ ಶೈಲಿಯಲ್ಲಿಯೇ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಂತೂ ಈಗ “ಬ್ಯಾಕ್ ಬೆಂಚರ್ಸ್” ಹವಾ ವ್ಯಾಪಿಸಿಕೊಂಡಿದೆ. ಇದು ನಾಯಕ ನಾಯಕಿಯರಾಗಿರುವವರು, ಇತರೇ ಪಾತ್ರಗಳನ್ನು ನಿರ್ವಹಿಸಿದವರು ಸೇರಿದಂತೆ ಒಂದಿಡೀ ತಂಡ ಹೊಸ ಶೈಲಿಯಲ್ಲಿ ಪ್ರೇಕ್ಷಕರನ್ನು ತಲುಪಿಕೊಳ್ಳುತ್ತಿದೆ.

ನಿರ್ದೇಶಕ ರಾಜಶೇಖರ್ ಸ್ಕ್ರಿಫ್ಟ್ ವರ್ಕ್ ಸೇರಿದಂತೆ ಎಲ್ಲದರಲ್ಲಿಯೂ ಈ ಹುಡುಗ-ಹುಡುಗಿಯರನ್ನು ಸೇರಿಸಿಕೊಂಡಿದ್ದಾರೆ. ಅದರ ಫಲವಾಗಿಯೇ ಈ ಕಾಲೇಜು ಸ್ಟೋರಿ ತಾಜಾ ಅನುಭೂತಿಯೊಂದಿಗೆ ಸೆಳೆದುಕೊಂಡಿದೆ.

ಪಿಪಿ ಪ್ರೊಡಕ್ಷನ್ಸ್ ಅಡಿಯಲ್ಲಿ ಖುದ್ದು ರಾಜಶೇಖರ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಎಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಗಣವಿದೆ.

ಇದನ್ನೂ ಓದಿ: Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನ ಈ ಚಿತ್ರಕ್ಕಿದೆ. ಇದೀಗ ಸೆನ್ಸಾರ್ ಅಂಗಳ ತಲುಪಿರುವ “ಬ್ಯಾಕ್ ಬೆಂಚರ್ಸ್” ಮತ್ತಷ್ಟು ವೇಗದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

Continue Reading

ಕರ್ನಾಟಕ

Kannada New Movie: ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಅಜಾಗ್ರತ’ ಸಿನಿಮಾ ಡೈರೆಕ್ಟರ್‌ಗೆ ನಿರ್ಮಾಪಕರಿಂದ ದುಬಾರಿ ಕಾರ್‌ ಗಿಫ್ಟ್‌!

Kannada New Movie: ಯಾವುದೇ ಚಿತ್ರವಾದರೂ ಸರಿ. ಮೊದಲು ಬಂಡವಾಳ ಹಾಕಿದ ನಿರ್ಮಾಪಕರಿಗೆ ಆ ಸಿನಿಮಾ ಮೆಚ್ಚುಗೆಯಾಗಬೇಕು. ನಿರ್ಮಾಪಕರಿಗೆ ಸಿನಿಮಾ ಇಷ್ಟವಾದಾರೆ ನಿರ್ದೇಶಕ ಅರ್ಧ ಗೆದ್ದ ಹಾಗೆ. ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ ನಿರ್ದೇಶನದ “ಅಜಾಗ್ರತ” ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ‘ಅಜಾಗ್ರತ” ಚಿತ್ರದ ರಫ್ ಕಾಪಿ ನೋಡಿದ ನಿರ್ಮಾಪಕರಿಗೆ ಚಿತ್ರ ತುಂಬಾ ಇಷ್ಟವಾಗಿದೆಯಂತೆ. ಈ ಸಂದರ್ಭದಲ್ಲಿ ನಿರ್ಮಾಪಕ ರವಿರಾಜ್, ನಿರ್ದೇಶಕ ಶಶಿಧರ್ ಅವರಿಗೆ ದುಬಾರಿ ಕಾರ್‌ ಉಡುಗೊರೆಯಾಗಿ ನೀಡುವ ಮೂಲಕ ಚಿತ್ರ ಉತ್ತಮವಾಗಿ ಮೂಡಿಬಂದಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ‌.

VISTARANEWS.COM


on

Producer who gifted an expensive car to the director of Radhika Kumaraswamy starrer Ajagrata
Koo

ಬೆಂಗಳೂರು: ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ. ಶಶಿಧರ್ ನಿರ್ದೇಶನದ “ಅಜಾಗ್ರತ” ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ‘ಅಜಾಗ್ರತ” ಚಿತ್ರದ ರಫ್ ಕಾಪಿ ನೋಡಿದ ನಿರ್ಮಾಪಕರಿಗೆ ಚಿತ್ರ ತುಂಬಾ ಇಷ್ಟವಾಗಿದೆಯಂತೆ. ಈ ಸಂದರ್ಭದಲ್ಲಿ ನಿರ್ಮಾಪಕ ರವಿರಾಜ್, ನಿರ್ದೇಶಕ ಶಶಿಧರ್ ಅವರಿಗೆ ದುಬಾರಿ ಕಾರು ನೀಡುವ ಮೂಲಕ ಚಿತ್ರ (Kannada New Movie) ಉತ್ತಮವಾಗಿ ಮೂಡಿಬಂದಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ‌.

“ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ, ಅದಕ್ಕೂ ಹೆಚ್ಚಾಗಿಯೇ ಚಿತ್ರವನ್ನು ಬಹಳ ಚೆನ್ನಾಗಿ ಮಾಡಿ ಮುಗಿಸಿದ್ದಾರೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರ ನೋಡಿ ನನಗೆ ತುಂಬಾ ಖುಷಿಯಾಗಿದೆ. ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿರುವ ನಿರ್ದೇಶಕರಿಗೆ ಉಡುಗೊರೆ ನೀಡುವ ಮನಸ್ಸಾಯಿತು. ಹಾಗಾಗಿ ಫಾರ್ಚ್ಯೂನರ್ ಕಾರನ್ನು ಉಡುಗೊರೆಯಾಗಿ ನೀಡುತ್ತಿದ್ದೇನೆ” ಎಂದು ನಿರ್ಮಾಪಕ ರವಿರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ: VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

ಚಿತ್ರ ಬಿಡುಗಡೆಯಾಗಿ ಯಶಸ್ವಿಯಾದ ನಂತರ ನಿರ್ದೇಶಕರಿಗೆ ಉಡುಗೊರೆ ನೀಡುವ ನಿರ್ಮಾಪಕರಿದ್ದಾರೆ. ಆದರೆ ಚಿತ್ರ ಬಿಡುಗಡೆಗೂ ಮುನ್ನ ನಿರ್ದೇಶಕರ ಕಾರ್ಯವನ್ನು ಮೆಚ್ಚಿ, ಕಾರನ್ನು ಉಡುಗೊರೆ ನೀಡಿರುವ ನಿರ್ಮಾಪಕ ರವಿರಾಜ್ ಅವರ ಗುಣ ನಿಜಕ್ಕೂ ಶ್ಲಾಘನೀಯ.

ಬಾಲಿವುಡ್‌ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ಅಭಿನಯಿಸಿದ್ದಾರೆ. ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾ ಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: International Mud Day: ಆರೋಗ್ಯ, ಸೌಂದರ್ಯದ ಪಾಲಿಗೆ ಹೊನ್ನು ಈ ಮಣ್ಣು!

ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Continue Reading
Advertisement
snake Bite
ಕಲಬುರಗಿ2 mins ago

Snake Bite : ಮರದಡಿ ಕುಳಿತಾಗ ಮಹಿಳೆಯ ಕಿವಿಗೆ ಕುಟುಕಿದ ಹಾವು; ವಿಷವೇರಿ ಸಾವು

T20 World Cup 2024 prize money
ಕ್ರೀಡೆ20 mins ago

T20 World Cup 2024 Prize Money:ಚಾಂಪಿಯನ್​ ಭಾರತ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು?

Text Book
ಕರ್ನಾಟಕ20 mins ago

Text Book: ರಾಜ್ಯ ಪಠ್ಯಕ್ರಮದ ವಿರುದ್ಧ ವೀರಶೈವ ಮಠಾಧೀಶರ ಅಸಮಾಧಾನ; ಸಿಎಂಗೆ ಪತ್ರ

Virat Kohli video calls Anushka Sharma after winning
ಬಾಲಿವುಡ್21 mins ago

Virat Kohli: ವಿಶ್ವಕಪ್ ಗೆದ್ದ ನಂತರ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿ ಫ್ಲೈಯಿಂಗ್ ಕಿಸ್‌ ಕೊಟ್ಟ ವಿರಾಟ್ ಕೊಹ್ಲಿ!

Sabja Seeds Benefits
ಆರೋಗ್ಯ23 mins ago

Sabja Seeds Benefits: ಸಬ್ಜಾ ಬೀಜವನ್ನು ನೆನೆಹಾಕಿ ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆ ದೂರ

Physical Abuse
ಚಿಕ್ಕಬಳ್ಳಾಪುರ32 mins ago

Physical Abuse : ಆಟವಾಡುತ್ತಿದ್ದ 6 ವರ್ಷದ ಬಾಲಕಿ ಮೇಲೆ 17 ವರ್ಷದ ಬಾಲಕನಿಂದ ಅತ್ಯಾಚಾರ

Mann Ki Baat
ದೇಶ42 mins ago

Mann Ki Baat: ನಾಲ್ಕು ತಿಂಗಳ ನಂತರ ಮೋದಿ ʼಮನ್‌ ಕೀ ಬಾತ್‌ʼ; Live ಲಿಂಕ್ ಇಲ್ಲಿದೆ

Rahul Dravid
ಕ್ರೀಡೆ43 mins ago

Rahul Dravid: ನಾಯಕನಾಗಿ ಸೋಲಿನ ಅವಮಾನ ಎದುರಿಸಿದ್ದ ಮೈದಾನದಲ್ಲೇ ಕೋಚ್​ ಆಗಿ ವಿಶ್ವಕಪ್​ ಎತ್ತಿ ಹಿಡಿದ ದ್ರಾವಿಡ್

Shiva Rajkumar Tweet About India's T20 Victory about rahul
ಕ್ರಿಕೆಟ್54 mins ago

Shiva Rajkumar: ರಾಹುಲ್ ದ್ರಾವಿಡ್ ಫೋಟೊ ಶೇರ್‌ ಮಾಡಿ ‘ಗೋಡೆ’ ಮೇಲೆ ವರ್ಲ್ಡ್ ಕಪ್ ಇಡೋರ್ ಆಗ್ಬೇಕು ಎಂದ ಶಿವಣ್ಣ

T20 World Cup 2024 Anushka Sharma reveals Vamika biggest concern
ಕ್ರಿಕೆಟ್1 hour ago

T20 World Cup 2024: ಟೀಮ್​ ಇಂಡಿಯಾ ಗೆದ್ದ ಬಳಿಕ ವಿರಾಟ್‌- ಅನುಷ್ಕಾ ಮಗಳ ವಿಶೇಷ ಕಾಳಜಿ ಏನಾಗಿತ್ತು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ18 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌