Karnataka Election Results 2024: ಬೆಂ. ಗ್ರಾಮಾಂತರದಲ್ಲಿ ಡಿ.ಕೆ.ಸುರೇಶ್‌ಗೆ ಭಾರಿ ಹಿನ್ನಡೆ; ಡಿಸಿಎಂ ಡಿಕೆಶಿ ನಿವಾಸದ ಬಳಿ ನೀರವ ಮೌನ - Vistara News

ಕರ್ನಾಟಕ

Karnataka Election Results 2024: ಬೆಂ. ಗ್ರಾಮಾಂತರದಲ್ಲಿ ಡಿ.ಕೆ.ಸುರೇಶ್‌ಗೆ ಭಾರಿ ಹಿನ್ನಡೆ; ಡಿಸಿಎಂ ಡಿಕೆಶಿ ನಿವಾಸದ ಬಳಿ ನೀರವ ಮೌನ

Karnataka Election Results 2024: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ಮುನ್ನಡೆಯಲ್ಲಿದ್ದಾರೆ. ಡಿಕೆ ಬ್ರದರ್ಸ್ ಮನೆಯಿಂದ ಹೊರಗೆ ಬಾರದೆ, ಒಳಗೆ ಕೂತು ಫಲಿತಾಂಶ ವೀಕ್ಷಣೆ ಮಾಡುತ್ತಿದ್ದಾರೆ.

VISTARANEWS.COM


on

Karnataka Election Results 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರ ಚುನಾವಣೆ ಫಲಿತಾಂಶದಲ್ಲಿ (Karnataka Election Results 2024) ಕಾಂಗ್ರೆಸ್‌ ಅಭ್ಯರ್ಥಿ ಡಿ‌.ಕೆ. ಸುರೇಶ್‌ಗೆ ಭಾರಿ ಹಿನ್ನಡೆ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ನಿವಾಸದ ಬಳಿ ನೀರವ ಮೌನ ಆವರಿಸಿದೆ. ಕ್ಷೇತ್ರದಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದರರಿಂದ ಸದಾ ಬೆಂಬಲಿಗರಿಂದ ಗಿಜುಗುಡುತ್ತಿದ್ದ ಡಿಕೆಶಿ ನಿವಾಸದ ಕಡೆ, ಕೈ ನಾಯಕರು, ಬೆಂಬಲಿಗರು, ಕಾರ್ಯಕರ್ತರು ಯಾರೂ ಸುಳಿಯುತ್ತಿ.ಲ್ಲ.

ಸತತ ಹಿನ್ನಡೆಯಿಂದಾಗಿ ಡಿಕೆಶಿ ನಿವಾಸದ ಬಳಿ ಬೆಂಬಲಿಗರು ಸುಳಿಯುತ್ತಿಲ್ಲ. ಮತ್ತೊಂದೆಡೆ ಡಿಕೆ ಬ್ರದರ್ಸ್ ಮನೆಯಿಂದ ಹೊರಗೆ ಬಾರದೆ, ಒಳಗೆ ಕೂತು ಫಲಿತಾಂಶ ವೀಕ್ಷಣೆ ಮಾಡುತ್ತಿದ್ದಾರೆ.

ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಶಿವಕುಮಾರ್‌ ವಿರುದ್ಧ 1,61,593 ಮತಗಳ ಮುನ್ನಡೆ ಸಾಧಿಸಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ಸಾಧ್ಯತೆಗಳಿವೆ.

“ಜನ ಹೃದಯವನ್ನೂ ನನಗೆ ಕೊಟ್ಟಿದ್ದಾರೆ…” 1.6 ಲಕ್ಷ ಮತಗಳ ಅಂತರದಿಂದ ಡಾ. ಮಂಜುನಾಥ್ ಗೆಲುವಿನತ್ತ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ (Bangalore Rural) ಕ್ಷೇತ್ರದಲ್ಲಿ ಬಿಜೆಪಿಯ ಡಾ. ಸಿಎನ್‌ ಮಂಜುನಾಥ್‌ (Dr CN Manjunath) ಅವರು 1 ಲಕ್ಷ ಮತಗಳ ಅಂತರದಲ್ಲಿ ಗೆಲುವಿನತ್ತ (Election Results 2024) ಮುನ್ನಡೆದಿದ್ದಾರೆ. ಒಂಬತ್ತು ಸುತ್ತುಗಳ ಮತ ಎಣಿಕೆ (vote counting) ಮುಗಿದ ನಂತರ 1.6 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರವನ್ನು ಎದುರಾಳಿ ಕಾಂಗ್ರೆಸ್‌ನ ಡಿ.ಕೆ ಸುರೇಶ್‌ (DK Suresh) ಅವರಿಂದ ಮಂಜುನಾಥ್‌ ಕಾಯ್ದುಕೊಂಡರು. ಈ ಸಂದರ್ಭದಲ್ಲಿ ವಿಸ್ತಾರ ನ್ಯೂಸ್‌ ಜೊತೆಗೆ ಮಾತನಾಡಿದ ಮಂಜುನಾಥ್‌, “ಜನ ಮತಗಳ ಜೊತೆಗೆ ತಮ್ಮ ಹೃದಯವನ್ನೂ ನನಗೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

ತಮ್ಮನ್ನು ಗೆಲುವಿನತ್ತ ಕೊಂಡೊಯ್ದ ಬೆಂಗಳೂರು ಗ್ರಾಮಾಂತರದ ಮತದಾರರಿಗೆ ಡಾ. ಮಂಜುನಾಥ್‌ ಧನ್ಯವಾದ ಸಮರ್ಪಿಸಿದ್ದಾರೆ. ತಮ್ಮ ಗೆಲುವಿನ ಹಿಂದೆ ನಿಂತ ಬಿಜೆಪಿಯ ರಾಷ್ಟ್ರೀಯ ಹಾಗೂ ಸ್ಥಳಿಯ ಮುಖಂಡರು, ಜೊತೆಗೆ ದುಡಿದ ಜೆಡಿಎಸ್‌ನ ನಾಯಕರು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಿಸಿದ್ದಾರೆ.

“ಚುನಾವಣೆ ಹಬ್ಬದ ರೀತಿಯಲ್ಲಿ ಚುನಾವಣೆ ನಡೆಯಿತು. ಜನಶಕ್ತಿಯೇ ಪ್ರಜಾಪ್ರಭುತ್ವದಲ್ಲಿ ಅತ್ಯಂತ ದೊಡ್ಡ ಶಕ್ತಿ ಎಂಬುದನ್ನು ಕ್ಷೇತ್ರದ ಜನತೆ ತೋರಿಸಿದ್ದಾರೆ. ಜನರ ಬಾಯಲ್ಲಿ ನಮ್ಮ ಹೆಸರಿತ್ತು. ಬಾಯಿಯಲ್ಲಿದ್ದ ಹೆಸರು ಬ್ಯಾಲೆಟ್‌ಗೆ ಬಂತು” ಎಂದು ಮಂಜುನಾಥ್‌ ಹರ್ಷ ವ್ಯಕ್ತಪಡಿಸಿದರು.

“ಹೆಂಡತಿ ಮಕ್ಕಳು ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ, ಇದು ನಮಗಲ್ಲ ಅನ್ನುತ್ತಾ ಇದ್ದರು. ಆಮೇಲೆ ಚುನಾವಣೆ ಪ್ರಚಾರದ ಪ್ರಕ್ರಿಯವಾಗಿ ಅವರೂ ಪಾಲ್ಗೊಂಡರು, ಓಡಾಡಿದರು. ಜನರ ಪ್ರೀತಿ ಅಭಿಮಾನಕ್ಕೆ ಬೆಲೆ ಕಟ್ಟುವುದಕ್ಕಾಗುವುದಿಲ್ಲ” ಎಂದು ಅವರು ನುಡಿದರು.

“ಎಲ್ಲ ಕ್ಷೇತ್ರಗಳಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಬೇಕು. ಚುನಾವಣೆ ನಂತರ ಘರ್ಷಣೆ ಆಗಬಾರದು, ಅದೂ ಕೂಡ ಅಭಿವೃದ್ಧಿಯೇ. ಜನರ ಮಾನಸಿಕ ನೆಮ್ಮದಿಯ ಜೀವನ ಮುಖ್ಯ. ಜನ ಸಂತೃಪ್ತಿಯಿಂದ ಇರಬೇಕು. ಬೆಂಗಳೂರಿನಲ್ಲಿ ನಿಮ್ಹಾನ್ಸ್‌ ಆರಂಭವಾದಾಗ ಜನಸಂಖ್ಯೆ ಕಡಿಮೆ ಇತ್ತು. ಈಗ ದುಪ್ಪಟ್ಟು ಆಗಿದೆ. ನರರೋಗ ಚಿಕಿತ್ಸೆ ಕೇಂದ್ರದ ಇನ್ನೊಂದು ಶಾಖೆ ತೆರೆಯಬೇಕಿದೆ. ರಸ್ತೆ ಟ್ರಾಫಿಕ್‌ನಲ್ಲಿ ಶೇ.20 ಮರಣ ಆಗುತ್ತಿದೆ. ಪ್ರತಿ 125 ಕಿಮೀಗೆ ಒಂದು ಕ್ರಿಟಿಕಲ್‌ ಕೇರ್‌ ಕ್ಲಿನಿಕ್‌ ಆಗಬೇಕು. ಹೃದಯಾಘಾತ, ಬ್ರೇನ್‌ ಸ್ಟ್ರೋಕ್‌ಗೆ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಸಿಗಬೇಕು” ಎಂದು ಮಂಜುನಾಥ್‌ ತಮ್ಮ ಕನಸುಗಳನ್ನು ಹಂಚಿಕೊಂಡರು.

“ರಾಮನಗರದಲ್ಲಿ ರೇಷ್ಮೆ ಬೆಳೆಗಾರಿಕೆ ಆಧುನೀಕರಣ, ಅಂತಾರಾಷ್ಟ್ರೀಯ ಮಾರುಕಟ್ಟೆ ಸೃಷ್ಟಿಸಬೇಕು. ಬೆಂಗಳೂರು ಮೆಟ್ರೋ ಹಾರೋಹಳ್ಳಿ ವರೆಗೆ ವಿಸ್ತರಣೆ ಆಗಬೇಕು. ಬೆಂಗಳೂರಿನಲ್ಲಿ ಕೆರೆಗಳ ರಕ್ಷಣೆಗೆ ತಜ್ಞರ ಸಮಿತಿ ಆಗಬೇಕು. ಮಳೆನೀರು ಕೊಯ್ಲು, ಪ್ರವಾಹ ನಿಯಂತ್ರಣಕ್ಕೆ ವ್ಯವಸ್ಥೆ ಆಗಬೇಕು” ಎಂದು ಅವರು ತಿಳಿಸಿದರು.

ಇದನ್ನೂ ಓದಿ: Election results 2024: ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್‌ ಭರ್ಜರಿ ಮುನ್ನಡೆ

“ಮಂಜುನಾಥ್‌ ಅವರನ್ನು ಬಿಜೆಪಿ ʼಬಲಿಪಶುʼ ಮಾಡುತ್ತಿದೆ ಎಂಬ ಎದುರಾಳಿಗಳ ಮಾತಿಗೆ ನಾನು ಅಂದೂ ಉತ್ತರ ಕೊಡಲಿಲ್ಲ, ಈಗಲೂ ಉತ್ತರ ಕೊಡುವುದಿಲ್ಲ. ಜನರೇ ಉತ್ತರ ಕೊಟ್ಟಿದ್ದಾರೆ” ಎಂದು ಅವರು ನುಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

Bengaluru Murder : ವೈಯಾಲಿಕಾವಲ್ ಮಹಿಳೆಯ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

VISTARANEWS.COM


on

By

Murder case
Koo

ಬೆಂಗಳೂರು: ಬೆಂಗಳೂರಿನ (Bengaluru Murder) ವೈಯಾಲಿಕಾವಲ್ ಮಹಾಲಕ್ಷ್ಮೀ ಮರ್ಡರ್ ಕೇಸ್‌ ಟ್ವಿಸ್ಟ್‌ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಮಹಿಳೆಯನ್ನು ಕೊಲೆ ಮಾಡಿದವನು ತನ್ನೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಪೊಲೀಸರ ಮುಂದೆ ಪ್ರಶ್ನೆಗಳ ಸರಮಾಲೆಯೇ ಇದೆ. ಮಹಾಲಕ್ಷ್ಮಿಯನ್ನು ಕೊಂದ ಕೊಲೆಗಾರನನ್ನು ಟ್ರೇಸ್‌ ಮಾಡಿ ಇನ್ನೇನು ಹಿಡಿಬೇಕು ಎನ್ನುವಾಗಲೇ ಕೊಲೆ ಆರೋಪಿ ಮುಕ್ತಿರಂಜನ್ ಎಂಬಾತ ಒಡಿಶಾದಲ್ಲಿ ನಿನ್ನೆ (ಸೆ.25) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಹಾಲಕ್ಷ್ಮೀ ಮರ್ಡರ್ ಕೇಸ್ ಪೊಲೀಸರ ಮುಂದೆ ಹಲವು ಸವಾಲುಗಳನ್ನಿಟ್ಟಿದೆ‌. ಆರೋಪಿ ಅರೆಸ್ಟ್ ಆದಮೇಲೆ ಪ್ರಕರಣಕ್ಕೆ ಒಂದು ಫುಲ್ ಸ್ಟಾಪ್ ಇಡಬಹುದಿತ್ತು. ಆದರೆ ಪೊಲೀಸರಿಗೆ ಸಿಗುವ ಮುನ್ನವೆ ಆರೋಪಿ ಮುಕ್ತಿ ರಂಜನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದಾಗಿ ತನಿಖಾಧಿಕಾರಿಗಳಿಗೆ ಮುಂದಿರುವ ಸಾಕಷ್ಟು ಪ್ರಶ್ನೆಗಳಿಗೆ ಉತ್ತರ ಸಿಗದಂತಾಗಿದೆ. ಪ್ರಕರಣದ ಆರೋಪಿಯಾಗಿದ್ದ ಒಡಿಶಾ ಮೂಲದ ಮುಕ್ತಿರಂಜನ್ ಪ್ರತಾಪ್ ರಾಯ್ ನಿನ್ನೆ ಬುಧವಾರ ಬೆಳಗ್ಗೆ ಒಡಿಶಾದ ಭದ್ರಕ್ ಜಿಲ್ಲೆಯ ಭೂನಿಪುರದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಹಾಲಕ್ಷ್ಮಿಯ ಭೀಕರ ಹತ್ಯೆಗೆ ಕಾರಣವೇನು? ಆರೋಪಿ ಹತ್ಯೆಗೈದಿದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳು ಸಿಗುವ ಮುನ್ನವೇ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇದನ್ನೂ ಓದಿ: Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

ಮದುವೆ ಆಗುವಂತೆ ಒತ್ತಾಯಿಸಿದ್ದಳು ಮಹಾಲಕ್ಷ್ಮಿ

ಇನ್ನು ತನಿಖೆ ವೇಳೆ ಒಂದಷ್ಟು ಸ್ಫೋಟಕ ವಿಚಾರಗಳು ಹೊರ ಬಿದ್ದಿದ್ದು, ಮದುವೆಯಾಗುವಂತೆ ಮುಕ್ತಿ ರಂಜನ್‌ನ ಮಹಾಲಕ್ಷ್ಮಿ ಒತ್ತಾಯಿಸುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ಆಗಿ ಕೊಲೆ ನಡೆದಿರಬಹುದು ಎಂಬ ಅನುಮಾನ ಮೂಡಿದೆ. ಮಹಾಲಕ್ಷ್ಮಿ ಹಾಗೂ ಮುಕ್ತಿ ರಂಜನ್‌ ಇಬ್ಬರು ಒಂದೆ ಕಡೆ ಕೆಲಸ ಮಾಡುತ್ತಿದ್ದರು. ಹೀಗಾಗಿ ಇಬ್ಬರ ಮಧ್ಯೆ ಸ್ನೇಹ, ಸಲುಗೆ ಬೆಳದಿತ್ತು.

ಮುಕ್ತಿರಂಜನ್‌ನನ್ನು ತುಂಬಾ ಹಚ್ಡಿಕೊಂಡಿದ್ದ ಮಹಾಲಕ್ಷ್ಮಿ ಆತನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದಳು. ಕೆಲಸ ಮಾಡುತ್ತಿದ್ದ ಸ್ಟೋರ್‌ನಲ್ಲಿ ಬೇರೆ ಹುಡುಗೀಯರ ಜತೆ ಮುಕ್ತಿರಂಜನ್‌ ಮಾತನಾಡಿದರೆ ಮಹಾಲಕ್ಷ್ಮಿ ಸ್ವಲ್ಪವೂ ಸಹಿಸುತ್ತಿರಲಿಲ್ಲ. ಕೂಡಲೇ ಆ ಯುವತಿಯರಿಗೆ ವಾರ್ನ್ ಮಾಡುತ್ತಿದ್ದಳು. ಇನ್ನು ಮುಕ್ತಿರಂಜನ್ ಸಹ ಸ್ವತಃ ಹಠಮಾರಿ ಸ್ವಭಾವದವನಾಗಿದ್ದ ಎಂಬುದು ಇದುವರೆಗಿನ ತನಿಖೆಯಲ್ಲಿ ತಿಳಿದು ಬಂದಿದೆ. ಸೆಪ್ಟೆಂಬರ್ 1ರಂದು ಇಬ್ಬರೂ ಕೆಲಸಕ್ಕೆ ಹಾಜರಾಗಿದ್ದರು. ಎರಡನೇ ತಾರೀಖು ಇಬ್ಬರೂ ರಜೆ ಹಾಕಿ ವೈಯಾಲಿಕಾವಲ್ ಮನೆಗೆ ಹೋಗಿದ್ದರಂತೆ. ಈ ವೇಳೆ ಜಗಳ ಆಗಿ, ಕೊಲೆ ಮಾಡಿ ಮುಕ್ತಿರಂಜನ್‌ ಎಸ್ಕೇಪ್ ಆಗಿರಬಹುದು ಎನ್ನಲಾಗಿದೆ.

ಮನೆಯಲ್ಲಿ ಎಲ್ಲೂ ರಕ್ತ ಹರಿದಿಲ್ಲ; ಮೂವರ ಫಿಂಗರ್‌ ಪ್ರಿಂಟ್‌ ಪತ್ತೆ

ಮಹಾಲಕ್ಷ್ಮಿಯನ್ನು ಹತ್ಯೆ ಮಾಡಿರುವ ಬಗ್ಗೆಯಂತೂ ಪೊಲೀಸರಿಗೆ ಅನುಮಾನಗಳ ಮೇಲೆ ಅನುಮಾನ ಹುಟ್ಟಿಸಿದೆ. ದೇಹ ಕತ್ತರಿಸುವ ರೀತಿ, ಮನೆಯಲ್ಲಿ ರಕ್ತ ಎಲ್ಲಿಯೂ ಸಹ ಸಿಡಿಯದಂತೆ ಮೃತದೇಹ ಕತ್ತರಿಸಲಾಗಿದೆ. ಹತ್ಯೆಗೈದು ಮೃತದೇಹದ ರಕ್ತ ಹರಿದ ನಂತರ ಕತ್ತರಿಸಲಾಗಿತ್ತಾ ಅನ್ನೋ ಪ್ರಶ್ನೆ ಮುಂದಿವೆ. ಅಲ್ಲದೇ ಮನೆಯಲ್ಲಿ ಇಬ್ಬರಿಂದ ಮೂರು ಜನರ ಫಿಂಗರ್ ಪ್ರಿಂಟ್‌ಗಳು ಪತ್ತೆಯಾಗಿದ್ದು, ಆರೋಪಿಯ ಕೃತ್ಯಕ್ಕೆ ಬೇರೆ ಯಾರಾದರೂ ಸಾಥ್ ನೀಡಿದ್ದರಾ? ಹತ್ಯೆಗೈದು ಇಷ್ಟು ದಿನ ಆರೋಪಿ ತಲೆಮರೆಸಿಕೊಂಡಿದ್ದೆಲ್ಲಿ ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿತ್ತು. ಆದರೆ ಪೊಲೀಸರಿಗೆ ಸಿಗುವ ಮುನ್ನವೇ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವುದು ಪೊಲೀಸರ ತಲೆ ಕೆಡಿಸಿದೆ.

ಸದ್ಯ ಒಡಿಶಾದಲ್ಲಿ ಬೀಡುಬಿಟ್ಟಿರುವ ಬೆಂಗಳೂರು ಪೊಲೀಸರು, ಆರೋಪಿಯ ಕುಟುಂಬಸ್ಥರಿಂದ ಮಾಹಿತಿ ಪಡಿತಿದೆ. ಈಗಾಗಲೇ ರಾಜ್ಯ ಪೊಲೀಸರ ಎರಡು ತಂಡಗಳು ಒಡಿಶಾದಲ್ಲಿರುವುದರಿಂದ ಕಾನೂನು ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ. ಮತ್ತೊಂದು ಕಡೆ ಮಹಿಳೆ ಮೊಬೈಲ್ ಎಫ್‌ಎಸ್‌ಎಲ್‌ಗೆ ಕಳಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾವೇರಿ

Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

assault case : ಪತಿ- ಪತ್ನಿ ನಡುವಿನ ಜಗಳಕ್ಕೆ ಅಡಿಕೆ ಗಿಡಗಳು ಬಲಿಯಾಗಿವೆ. ಪತ್ನಿ ಮನೆಗೆ ಬಾರದ್ದಕ್ಕೆ ಕೋಪಗೊಂಡ ಅಳಿಯ ಮಾವನ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ್ದಾನೆ.

VISTARANEWS.COM


on

By

assault case
Koo

ಹಾವೇರಿ : ಪತ್ನಿಯನ್ನು ಮನೆಗೆ ಕಳುಹಿಸಲಿಲ್ಲ ಎಂದು ಮಾವನ ಮೇಲೆ ಸಿಟ್ಟಾದ ಅಳಿಯನೊಬ್ಬ, ಅಡಕೆ ತೋಟ ನಾಶಪಡಿಸಿದ್ದಾನೆ. ಮಾವ ಬೆಳೆಸಿದ್ದ 106 ಅಡಿಕೆ ಗಿಡಗಳನ್ನು ಕಡಿದು ಸಿಟ್ಟು (Assault Case) ಹೊರಹಾಕಿದ್ದಾನೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಸಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

assault case
assault case

ದೇವೆಂದ್ರಪ್ಪ ಫಕ್ಕಿರಪ್ಪ ಗಾಣಿಗೇರಗೆ ಸೇರಿದ ಅಡಿಕೆ ತೋಟವನ್ನು ಅಳಿಯ ಬಸವರಾಜ್ ಎಂಬಾತ ಅಡಿಕೆ ಬೆಳೆ ನಾಶ ಮಾಡಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಬಸವರಾಜ್ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ. ಆದರೆ ಪತ್ನಿ ಜತೆಗೆ ನಿತ್ಯವು ಜಗಳವಾಡುತ್ತಿದ್ದ. ಗಂಡನ ಕಿರುಕುಳಕ್ಕೆ ಬೇಸತ್ತ ಪತ್ನಿ ತವರು ಮನೆ ಸೇರಿದ್ದಳು. ಮೂರು ತಿಂಗಳಿನಿಂದ ಪತ್ನಿ ತವರು ಮನೆಯಲ್ಲಿ ಇದ್ದಿದ್ದಕ್ಕೆ ಸಿಟ್ಟಾದ ಬಸವರಾಜ್‌, ಅಡಿಕೆ ತೋಟವನ್ನು ನಾಶ ಮಾಡಿದ್ದಾನೆ. ಪತಿ- ಪತ್ನಿ ನಡುವಿನ ಜಗಳಕ್ಕೆ ಅಡಕೆ ಗಿಡಗಳು ಬಲಿಯಾಗಿವೆ.

ಇದನ್ನೂ ಓದಿ: Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

ಕುಡಿದು ಪೀಡಿಸುತ್ತಿದ್ದ ಅಳಿಯನಿಗೆ ಅತ್ತೆಯಿಂದ ಗೂಸಾ

ಬೆಳಗಾವಿ: ಕಂಠ ಪೂರ್ತಿ ಕುಡಿದು ಪೀಡಿಸುತ್ತಿದ್ದ ಅಳಿಯನಿಗೆ ಅತ್ತೆಯಿಂದ ಗೂಸಾ ಬಿದ್ದಿದೆ. ನಡುಬೀದಿಯಲ್ಲೇ ಕುಡುಕ ಅಳಿಯನ ಹಿಡಿದು ಅತ್ತೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬೆಳಗಾವಿ ತಾಲೂಕಿನ ಶಿಂಧೊಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ತೇಲಾಡುತ್ತಿದ್ದ ವ್ಯಕ್ತಿಯನ್ನು ಮನೆಗೆ ಕರೆದುಕೊಂಡು ಹೋಗಲು ಪತ್ನಿ, ಅತ್ತೆ ಹರಸಾಹಸ ಪಡುತ್ತಿದ್ದರು. ಮನೆಗೆ ಬರಲು ಹಿಂದೇಟ್ಟು ಹಾಕುತ್ತಿದ್ದ ಕುಡುಕ ಅಳಿಯನಿಗೆ ಕಪಾಳಮೋಕ್ಷ ಮಾಡಿ ಹಿಗ್ಗಾಮುಗ್ಗಾ ಥಳಿಸಿದರು. ಕುಡುಕನ ಅವಾಂತರಕ್ಕೆ ಸ್ಥಳೀಯರು ಹೈರಾಣಾದರು. ಜತೆಗೆ ಅಲ್ಲಿದ್ದವರೇ ವಿಡಿಯೊ ಮಾಡಿಕೊಂಡಿದ್ದು, ಸದ್ಯ ಎಲ್ಲೆಡೆ ವೈರಲ್‌ ಆಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಾವಣಗೆರೆ

Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು. ಆದರೆ ಮುಂದೊಂದು ದಿನ ತನ್ನ ಅಕ್ರಮ ಸಂಬಂಧಕ್ಕೆ ಪತಿ ಎಲ್ಲಿ ಅಡ್ಡಿಯಾಗುತ್ತಾನೋ ಎಂದು ತಿಳಿದು ಪ್ರಿಯಕರನ ಜತೆ ಸೇರಿ ಕೊಂದಿದ್ದಳು. ಇದೀಗ ವರ್ಷದ ನಂತರದ ಪ್ರಕರಣವನ್ನು ಪೊಲೀಸರು ಭೇದಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

VISTARANEWS.COM


on

By

Murder case
Koo

ದಾವಣಗೆರೆ: ವರ್ಷದ ಹಿಂದೆ ವ್ಯಕ್ತಿಯೊಬ್ಬ ಸಾವಿನ ಜಾಡು ಹಿಡಿದು ಹೊರಟ ಪೊಲೀಸರು‌ ಪ್ರಕರಣವನ್ನು ಭೇದಿಸಿದ್ದಾರೆ. ತನ್ನ ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ ಆಗುತ್ತಾನೆಂದು ತಿಳಿದ ಪಾಪಿ ಪತ್ನಿ ಪ್ರಿಯಕರನ ಜತೆ ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಕೊಲೆಯಾದ ಒಂದು ವರ್ಷದ ಬಳಿಕ ಪ್ರಕರಣ ಭೇದಿಸಿದ ಪೊಲೀಸರು, ಇಲಿಯಾಸ್ ಅಹಮ್ಮದ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಪಟ್ಟಣದಲ್ಲಿ ಘಟನೆ ನಡೆದಿದೆ. 2023ರ ಫೆಬ್ರವರಿಯಲ್ಲಿ ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿ ಅನಾಮಧೇಯ ಮೃತದೇಹ ನೀರಿನಲ್ಲಿ ಕೊಚ್ಚಿಕೊಂಡು ಬಂದಿತ್ತು. ಕಾಣೆಯಾದ ಇಲಿಯಾಸ್ ಅಹಮ್ಮದ್ ಇರಬಹುದು ಎಂದು ಪೊಲೀಸರು ಅನುಮಾನಗೊಂಡಿದ್ದರು.

ಕೂಡಲೇ‌ ಮೃತನ ಮಕ್ಕಳ ಹಾಗೂ ಮೃತ ದೇಹದ ಡಿಎನ್ಎ ಪರೀಕ್ಷೆಗೆ ಕಳುಹಿಸಿದ್ದರು. ಡಿಎನ್ಎ ಪರೀಕ್ಷೆಯಲ್ಲಿ ಮೃತ ಇಲಿಯಾಸ್ ಅಹಮ್ಮದ್ ಎಂದು ಧೃಡವಾಗಿತ್ತು. ಬಳಿಕ ಇಲಿಯಾಸ್‌ನ ಸಾವಿನ ಜಾಡು ಹಿಡಿದು ಹೊರಟ ಬಸವಪಟ್ಟಣ ಪೊಲೀಸರು, ಇಲಿಯಾಸ್ ಪತ್ನಿ ಬಿಬಿ ಆಯೇಷಾ ಆಕೆಯ ಪ್ರಿಯಕರ ಮಂಜುನಾಥ್ ಕೊಲೆ ಅರೋಪಿಗಳೆಂದು ಸಾಬೀತಾಗಿದೆ.

ಪಾರ್ಟಿ ನೆಪದಲ್ಲಿ ಕೊಲೆ

ಪತಿ ಇಲಿಯಾಸ್‌ಗೆ ನಿದ್ದೆ ಮಾತ್ರೆ ಹಾಕಿ ಆಯೇಷಾ ಮತ್ತು ಮಂಜುನಾಥ್ ಇಬ್ಬರು ದೈಹಿಕ ಸಂಪರ್ಕ ಬೆಳೆಸುತ್ತಿದ್ದರು. ಮುಂದೊಂದು ದಿನ ನಮ್ಮಿಬ್ಬರ ಸಂಬಂಧಕ್ಕೆ ಪತಿ ಅಡ್ಡಿಯಾದರೆ ಅಂತ ಆಯೇಷಾಗೆ ಚಿಂತೆ ಕಾಡಿತ್ತು. ಹೀಗಾಗಿ ಪತಿ ಇಲಿಯಾಸ್‌ನನ್ನು ಕೊಂದರೆ ಅಕ್ರಮ ಸಂಬಂಧಕ್ಕೆ ಅಡ್ಡಿ ಇರುವುದಿಲ್ಲ ಎಂದು ಪ್ಲ್ಯಾನ್‌ ಮಾಡಿಕೊಂಡಿದ್ದರು. ಅದರಂತೆ ಮಂಜುನಾಥ್ ಉಪಾಯದಿಂದ‌ ಇಲಿಯಾಸ್‌ನನ್ನು ಸಾಗರಪೇಟೆ ಬಳಿ ಡಾಬಾದಲ್ಲಿ ಪಾರ್ಟಿಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ಮದ್ಯದಲ್ಲಿ ನಿದ್ರೆ ಮಾತ್ರೆ ಹಾಕಿ ಚೆನ್ನಾಗಿ ಮದ್ಯ ಕುಡಿಸಿದ್ದ.

ಬಲವಂತವಾಗಿ ಚಾನಲ್‌ನಲ್ಲಿ ಈಜಾಡಲು ಕರೆದುಕೊಂಡು ಹೋಗಿ ಮಂಜುನಾಥ್ ಕೊಲೆ ಮಾಡಿದ್ದ. ಇಲಿಯಾಸ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ 24/09/2024ರಂದು ಕುಟುಂಬಸ್ಥರ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರಿಗೆ ಇಲಿಯಾಸ್ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಇಲಿಯಾಸ್ ಪತ್ನಿ ಆಯೇಷಾ, ಪ್ರಿಯಕರ ಮಂಜುನಾಥ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

New Serial: ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಕಾಂಟ್ರಾಕ್ಟ್ ಮದುವೆಯನ್ನೊಳಗೊಂಡ ಹೊಸ ಧಾರಾವಾಹಿ “ನಿನ್ನ ಜೊತೆ ನನ್ನ ಕಥೆ” ಶುರುವಾಗ್ತಿದೆ. ಇದೇ ಸೋಮವಾರದಿಂದ ಅಂದರೆ ಸೆ.30ರ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ.

VISTARANEWS.COM


on

By

new serial
Koo

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಅದೆಷ್ಟೋ ಮದುವೆ ಆಧಾರಿತ ಕಥೆಗಳು ಬಂದು ಹೋಗಿವೆ. ಆದರೆ ಇದೀಗ ‘ನಿನ್ನ ಜೊತೆ ನನ್ನ ಕಥೆ’ ಎಂಬ ಹೊಸ ಧಾರಾವಾಹಿಯ ಮೂಲಕ ವಿನೂತನ ಕಥೆಯನ್ನು (New Serial) ವೀಕ್ಷಕರಿಗೆ ಹೇಳಲು ಕನ್ನಡದ ಜನಪ್ರಿಯ ವಾಹಿನಿ ಸ್ಟಾರ್ ಸುವರ್ಣ (star suvarna) ಸಜ್ಜಾಗಿದೆ.

ಕರ್ನಾಟಕದ ಸಕ್ಕರೆನಾಡು ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಈ ಕಥೆಯು ಕೇಂದ್ರೀಕೃತವಾಗಿರುತ್ತದೆ. ಸಾಮಾನ್ಯವಾಗಿ ಮನಸು-ಮನಸುಗಳ ಬೆಸುಗೆಯಿಂದ ಮದುವೆಯಾಗುತ್ತದೆ. ಆದರೆ ಇದೊಂತರ ಡಿಫರೆಂಟ್ ಕಥೆ ಅಂತಾನೇ ಹೇಳಬಹುದು. ಕಥಾನಾಯಕಿ ಭೂಮಿ ಚಹಾ (ಟೀ) ಮಾರುವವಳಾಗಿದ್ದು, ಪೊಲೀಸ್ ಕಾನ್ಸ್‌ಟೇಬಲ್‌ ಆಗಬೇಕೆಂಬ ಕನಸನ್ನು ಹೊಂದಿರುತ್ತಾಳೆ. ಇನ್ನೊಂದು ಕಡೆ ಯಾರದ್ದೋ ಸಂಚಿಗೆ ಬಲಿಯಾಗಿ ಭೂಮಿಯ ತಾಯಿ ತಪ್ಪೇ ಮಾಡದಿದ್ರೂ ಜೈಲು ಸೇರಿರುತ್ತಾರೆ.

new serial
new serial

ಇನ್ನು ಈ ಕಥೆಯ ನಾಯಕ ಅಜಿತ್‌, ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ದು ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿರುತ್ತಾನೆ. ಮದುವೆ ಅಂದ್ರೇನೆ ಇಷ್ಟವಿರದ ಆದಿಗೆ ಮನೆಯಲ್ಲಿ ಮದುವೆಯ ತಯಾರಿ ಮಾಡುತ್ತಿರುತ್ತಾರೆ. ಮುಂದೆ, ಅನಿವಾರ್ಯ ಕಾರಣಗಳಿಂದಾಗಿ ಭೂಮಿ ಹಾಗು ಅಜಿತ್‌ ಇಬ್ಬರು ಪರಸ್ಪರ ಷರತ್ತುಗಳಿಗೆ ಒಪ್ಪಿಕೊಂಡು ಒಂದು ವರ್ಷದ ಕಾಂಟ್ರಾಕ್ಟ್‌ನೊಂದಿಗೆ ಮದುವೆಯಾಗ್ತಾರೆ. ಕಾಂಟ್ರಾಕ್ಟ್ ಮದುವೆಯಿಂದ ಒಂದಾದ ಈ ಜೀವಗಳ ಮನಸುಗಳು ಮುಂದೆ ಹೇಗೆ ಒಂದಾಗುತ್ತೆ ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.

ಈ ಕಥೆಯ ನಾಯಕನ ಪಾತ್ರದಲ್ಲಿ ನಟಿಸುತ್ತಿರುವ ನಟ ನಿರಂಜನ್ ವರ್ಷಗಳ ಬಳಿಕ “ನಿನ್ನ ಜೊತೆ ನನ್ನ ಕಥೆ” ಧಾರಾವಾಹಿಯ ಮೂಲಕ ಕನ್ನಡ ಕಿರುತೆರೆಗೆ ಮರಳುತ್ತಿದ್ದಾರೆ. ನಾಯಕಿಯಾಗಿ ನಟಿ ನಿರುಷ ಗೌಡ ನಟಿಸುತ್ತಿದ್ದು ಕಥೆಯು ಅದ್ಬುತ ತಾರಾಬಳಗವನ್ನು ಹೊಂದಿದೆ. ಹೊಚ್ಚ ಹೊಸ ಧಾರಾವಾಹಿ “ನಿನ್ನ ಜೊತೆ ನನ್ನ ಕಥೆ” ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Murder case
ಬೆಂಗಳೂರು7 ಗಂಟೆಗಳು ago

Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

assault case
ಹಾವೇರಿ8 ಗಂಟೆಗಳು ago

Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

Murder case
ದಾವಣಗೆರೆ8 ಗಂಟೆಗಳು ago

Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

new serial
ಬೆಂಗಳೂರು11 ಗಂಟೆಗಳು ago

New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

World Retinal Day 2024
ಪ್ರಮುಖ ಸುದ್ದಿ12 ಗಂಟೆಗಳು ago

World Retinal Day 2024 : ಶಾಕಿಂಗ್‌ ನ್ಯೂಸ್‌; ಜಾಗತಿಕವಾಗಿ 1 ಬಿಲಿಯನ್ ಜನರು ತಮ್ಮ ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದರಂತೆ!

MUda Scam
ರಾಜಕೀಯ12 ಗಂಟೆಗಳು ago

Muda Scam : ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಾದ ಒತ್ತಡ; ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ಪ್ರತಿಭಟನೆ

Cancer Treatment AI
ಆರೋಗ್ಯ13 ಗಂಟೆಗಳು ago

Cancer Treatment : ವೈದ್ಯಕೀಯ ಲೋಕದಲ್ಲಿ ಎಐ; ಕ್ಯಾನ್ಸರ್‌ಕಾರಕ ಗಡ್ಡೆ ಪತ್ತೆಗೂ ಬಂದಿದೆ ಎಐ ಚಾಲಿತ ಸೈಬರ್‌ನೈಫ್‌-ಎಸ್7 ಸಿಸ್ಟಮ್‌!

Dina Bhavishya
ಭವಿಷ್ಯ13 ಗಂಟೆಗಳು ago

Dina Bhavishya :ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Self Harming
ಕೋಲಾರ2 ದಿನಗಳು ago

Self Harming : ಹೆಂಡ್ತಿ ಮನೆಯವರ ಕಿರುಕುಳ; ವಿಡಿಯೊ ಮಾಡಿ ಮಾರ್ಕಂಡೇಶ್ವರ ಬೆಟ್ಟದಲ್ಲಿ ನೇಣಿಗೆ ಶರಣು

karnataka weather Forecast
ಮಳೆ2 ದಿನಗಳು ago

Karnataka Weather : ರಾಜ್ಯಾದ್ಯಂತ ವ್ಯಾಪಕ ಮಳೆ ; ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌