Weather Report | ರಾಜ್ಯಾದ್ಯಂತ ಅತಿವೃಷ್ಟಿಯ ತಲ್ಲಣ, ಮಳೆ ಅಬ್ಬರಿಸಲಿದೆ ಇನ್ನೂ ಎರಡು ದಿನ - Vistara News

ಕರ್ನಾಟಕ

Weather Report | ರಾಜ್ಯಾದ್ಯಂತ ಅತಿವೃಷ್ಟಿಯ ತಲ್ಲಣ, ಮಳೆ ಅಬ್ಬರಿಸಲಿದೆ ಇನ್ನೂ ಎರಡು ದಿನ

ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕುಗೊಂಡಿದ್ದು, ಸತತ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಆಗಸ್ಟ್ 4, 5ರಂದು ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Weather Report) ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

rain
ಸಂಗ್ರಹ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಆಗಸ್ಟ್ 4, 5ರಂದು ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Weather Report) ಹವಾಮಾನ ಇಲಾಖೆ ನೀಡಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 50-60 ಕಿಮೀ ತಲುಪುವ ಸಾಧ್ಯತೆಯಿದ್ದು, ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಕರಾವಳಿಯ ಎಲ್ಲ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರದ ಕೆಲವು ಕಡೆ ವ್ಯಾಪಕ ಮಳೆಯಾಗಲಿದೆ.

ಜತೆಗೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ ಹಾಗೂ ಕೋಲಾರ, ಮಂಡ್ಯ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಅಲ್ಲಲ್ಲಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ | Heavy Rain | ಸತತ ಮಳೆಗೆ ಉರುಳಿ ಬಿದ್ದ ಬೃಹತ್‌ ಮರ; ಆಟೋ ಜಖಂ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಂಪಾದಕೀಯ

ವಿಸ್ತಾರ ಸಂಪಾದಕೀಯ: SSLC Result 2024: ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತದ ಜೊತೆಗೆ ಸಿಹಿ ಸುದ್ದಿಯೂ ಇದೆ

SSLC Result 2024: ನಿಜಕ್ಕೂ ಸಿಹಿ ಸುದ್ದಿ ಎಂದರೆ ಇನ್ನೆರಡು ಬಾರಿ ಪರೀಕ್ಷೆ ಬರೆಯುವ ಅವಕಾಶ. ಅನುತ್ತೀರ್ಣರಾದ ಹಾಗೂ ಉನ್ನತ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗಬಾರದೆಂಬ ಉದ್ದೇಶದಿಂದ ಇದೇ‌ ಮೊದಲ ಬಾರಿಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ಮಾದರಿಯಲ್ಲಿ ಮೂರು ಬಾರಿ ಪೂರಕ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಪರೀಕ್ಷೆಯ ಅಂಕಗಳು ಸಮಾಧಾನ ತರದಿದ್ದಲ್ಲಿ ಇಡೀ ಪರೀಕ್ಷೆಯನ್ನು ಮರಳಿ ಬರೆಯಬಹುದು.

VISTARANEWS.COM


on

karnataka SSLC result 2024
Koo

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಈ ಬಾರಿಯ ಫಲಿತಾಂಶ ನೋಡಿ ಸಂತೋಷಪಡುವುದಕ್ಕೂ, ಗಾಬರಿಯಾಗುವುದಕ್ಕೂ ಕಾರಣಗಳಿವೆ.

ಮೊದಲನೆಯದಾಗಿ, ಕಳಪೆ ಫಲಿತಾಂಶ. ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್ ಆಗಿದ್ದಾರೆ. ಅಂದರೆ ಶೇಕಡಾ 10.49%ರಷ್ಟು ಫಲಿತಾಂಶ ಕುಸಿತವಾಗಿದೆ. ಆದರೆ ಇದು ಕೂಡ ನಿಜವಾದ ಕುಸಿತವಲ್ಲ. ಶಿಕ್ಷಣ ಇಲಾಖೆ ಈ ಬಾರಿ ವಿದ್ಯಾರ್ಥಿಗಳಿಗೆ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟಿದೆ. ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿ ಹಿತದೃಷ್ಟಿಯಿಂದ ಗ್ರೇಸ್‌ ಮಾರ್ಕ್ಸ್‌ ನೀಡಲಾಗಿದೆ. ಒಟ್ಟು 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್‌ ಸಿಕ್ಕಿದೆ. ಇಷ್ಟಾಗಿಯೂ ಫಲಿತಾಂಶ ಮಾತ್ರ ಕಡಿಮೆಯೇ.

ಕೃಪಾಂಕಗಳ ಹಿಂದೊಂದು ಕತೆಯಿದೆ. ಹಲವು ಕಡೆ ಸಾಮೂಹಿಕ ನಕಲು ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ, ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿತ್ತು. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಇದರ ಪರಿಣಾಮವೇ ಈ ಫಲಿತಾಂಶ. ಇದರಿಂದ ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಇದರಿಂದ ಗಾಬರಿ ಬಿದ್ದ ಇಲಾಖೆ, ವಿದ್ಯಾರ್ಥಿಗಳ ಹಾಗೂ ಒಟ್ಟಾರೆ ಶೈಕ್ಷಣಿಕ ಆವರಣದ ನೈತಿಕ ಸ್ಥೈರ್ಯ ಕುಸಿಯದಿರಲಿ ಎಂಬ ದೃಷ್ಟಿಯಿಂದ ಭಾರಿ ಪ್ರಮಾಣದ ಕೃಪಾಂಕ ನೀಡಿದೆ. ಇದೇನೂ ಒಳ್ಳೆಯ ಸುದ್ದಿಯಲ್ಲ. ನಕಲು ನಡೆಯುತ್ತಿದ್ದುದರಿಂದ ಉತ್ತಮ ಫಲಿತಾಂಶ ದೊರೆಯುತ್ತಿತ್ತು ಎಂಬುದನ್ನು ಇಲಾಖೆ ಒಪ್ಪಿಕೊಂಡ ಹಾಗಾಗಿದೆ. ವೆಬ್ ಕಾಸ್ಟಿಂಗ್ ಪರಿಣಾಮ ನಕಲು ನಿಂತುದು ಒಳ್ಳೆಯ ಸಂಗತಿಯೇ. ಆದರೆ ಇದು ಪಾರದರ್ಶಕ ಪರೀಕ್ಷೆಯಲ್ಲಿ ತನ್ಮೂಲಕ ಉತ್ತಮ ಫಲಿತಾಂಶದಲ್ಲಿ ಕೊನೆಯಾಗಬೇಕಿದೆ. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ. ಪರೀಕ್ಷೆಯ ಮೇಲೆ ನಿಗಾ ಇಡಲು ದುಡ್ಡು ಖರ್ಚು ಮಾಡಿದರೆ ಸಾಲದು, ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಗೂ ಹಾಗೆಯೇ ವೆಚ್ಚ ಮಾಡಿದರೆ ಉತ್ತಮ ಫಲಿತಾಂಶ ಬಂದೀತು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್‌ ಆಗಿ ಹೊರಹೊಮ್ಮಿರುವ, 625ರಲ್ಲಿ ಅಷ್ಟೂ ಅಂಕಗಳನ್ನೂ ಬಾಚಿಕೊಂಡಿರುವ ಅಂಕಿತಾ ಕೊನ್ನೂರ್‌ ಹಳ್ಳಿಯೊಂದರ ರೈತರ ಮಗಳು. ಇದು ಗ್ರಾಮೀಣ ಪ್ರತಿಭೆಯ ದಿಗ್ವಿಜಯ ಎನ್ನಬಹುದು. ಈಕೆಗೆ ಐಎಎಸ್‌ ಅಧಿಕಾರಿಯಾಗುವ ಕನಸು ಇದೆಯಂತೆ. ಬಾಗಲಕೋಟೆ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ. ಪಠ್ಯದ ಜೊತೆಗೆ ಲೈಬ್ರರಿ ಹಾಗೂ ಯುಟ್ಯೂಬ್ ಮಾಹಿತಿಯನ್ನೂ ಸೂಕ್ತವಾಗಿ ಬಳಸಿಕೊಂಡು ಈಕೆ ಟಾಪರ್ ಆಗಿದ್ದಾಳೆ. ಎಲ್ಲ ಮಕ್ಕಳಿಗೂ ಮಾದರಿಯಾಗಿರುವ ಈಕೆಯ ಅಭಿನಂದನೆಗಳು ಸಲ್ಲುತ್ತವೆ. ನಮ್ಮ ಹಳ್ಳಿಯ ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯ ದೊರೆತರೆ ದೊಡ್ಡ ಸಾಧನೆ ಮಾಡಬಲ್ಲರು ಎಂಬುದನ್ನು ನಾವು ಅರ್ಥ ಮಾಡಿಕೊಂಡರೆ ಸಾಕು.

ನಿಜಕ್ಕೂ ಸಿಹಿ ಸುದ್ದಿ ಎಂದರೆ ಇನ್ನೆರಡು ಬಾರಿ ಪರೀಕ್ಷೆ ಬರೆಯುವ ಅವಕಾಶ. ಅನುತ್ತೀರ್ಣರಾದ ಹಾಗೂ ಉನ್ನತ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗಬಾರದೆಂಬ ಉದ್ದೇಶದಿಂದ ಇದೇ‌ ಮೊದಲ ಬಾರಿಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ಮಾದರಿಯಲ್ಲಿ ಮೂರು ಬಾರಿ ಪೂರಕ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಪರೀಕ್ಷೆಯ ಅಂಕಗಳು ಸಮಾಧಾನ ತರದಿದ್ದಲ್ಲಿ ಇಡೀ ಪರೀಕ್ಷೆಯನ್ನು ಮರಳಿ ಬರೆಯಬಹುದು. ವಿಷಯವಾರು ಪರೀಕ್ಷೆಯನ್ನೂ ಬರೆಯಬಹುದು. ಎರಡು ಅಥವಾ ಮೂರು ಪರೀಕ್ಷೆಗಳಿಗೂ ಕುಳಿತುಕೊಳ್ಳಬಹುದು. ಯಾವುದೇ ವಿಷಯದಲ್ಲಿ ವಿದ್ಯಾರ್ಥಿ ಪಡೆದ ಗರಿಷ್ಠ ಅಂಕಗಳನ್ನು ಪರಿಗಣಿಸಲಾಗುತ್ತದೆ. ಇದು ಪರೀಕ್ಷಾ ವಿಧಾನದಲ್ಲಿ ಕ್ರಾಂತಿಕರ ಬದಲಾವಣೆ. ಈ ಬಾರಿ ಅನುತ್ತೀರ್ಣರಾದವರಿಗೆ ಹೇಗೂ ಪೂರಕ ಪರೀಕ್ಷೆ ಇದ್ದೇ ಇದೆ. ಆದ್ದರಿಂದ, ಇದೇ ನಿಜವಾಗಿಯೂ ಫಲಿತಾಂಶ ಹೆಚ್ಚಿಸುವ ವೈಜ್ಞಾನಿಕ ವಿಧಾನವಾಗಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

Continue Reading

ಮಳೆ

Karnataka Weather : 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆಗೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು ಮಿಂಚಿನ ಭಾರಿ ಮಳೆಯಾಗುವ (Heavy Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಆರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜೋರಾಗಿ ಗಾಳಿ ಬೀಸುವುದರಿಂದ ಮರದಡಿ ನಿಲ್ಲದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನೂ ಕರಾವಳಿಐಲ್ಲಿ ಮಧ್ಯಮ ಮಳೆಯಾಗುವ (Rain News) ನಿರೀಕ್ಷೆ ಇದೆ. ಜತೆಗೆ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ರಾಯಚೂರು ಹಾಗೂ ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯನಗರ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿರಲಿದೆ.

ಇದನ್ನೂ ಓದಿ: Akshaya Tritiya Fashion: ಅಕ್ಷಯ ತೃತೀಯಕ್ಕೆ ಬಂತು ಬಂಗಾರದ ಆಕರ್ಷಕ ಮೂಗಿನ ಸ್ಟಡ್ಸ್

ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಭಾರೀ ಮಳೆಯೊಂದಿಗೆ ಗುಡುಗು ಸಹಿತ ಬಿರುಗಾಳಿ (ಗಂಟೆಗೆ 40-50 ಕಿ.ಮೀ) ಬೀಸಲಿದೆ. ಹೀಗಾಗಿ ಐಎಂಡಿ ಹಳದಿ ಎಚ್ಚರಿಕೆಯನ್ನು ನೀಡಿದೆ. ಮುಖ್ಯವಾಗಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Akshaya Tritiya 2024: ಸಕಲ ಸಮೃದ್ಧಿಗಳು ಕ್ಷಯಿಸದಂತೆ ಕಾಪಾಡುವ ಅಕ್ಷಯ ತೃತೀಯ

ಅಕ್ಷಯ ತದಿಗೆ ಅಥವಾ ಅಕ್ಷಯ ತೃತೀಯ… ಹೆಸರು ಯಾವುದಾದರೂ (Akshaya Tritiya 2024) ಅರ್ಥ ಮಾತ್ರ ಒಂದೇ- ಎಂದಿಗೂ ಕಡಿಮೆಯಾಗದ್ದು ಎಂಬುದು. ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ, ಯಶಸ್ಸು, ಆರೋಗ್ಯ, ಐಶ್ವರ್ಯ ಮುಂತಾದ ಸಮೃದ್ಧಿಗಳು ಕ್ಷಯವಾಗುವುದಿಲ್ಲ, ಅಂದರೆ ಕಡಿಮೆ ಆಗುವುದಿಲ್ಲ ಎಂದು ಹೇಳಲಾಗುತ್ತದೆ. ಅಕ್ಷಯ ತೃತೀಯ ಕುರಿತ ವಿಶೇಷ ಲೇಖನ ಇಲ್ಲಿದೆ.

VISTARANEWS.COM


on

Akshaya Tritiya 2024
Koo

ಅಲಕಾ ಕೆ, ಮೈಸೂರು

ಚಿನ್ನ-ಬೆಳ್ಳಿ ಮುಂತಾದ (Akshaya Tritiya 2024) ಹೊಸ ವಸ್ತುಗಳ ಖರೀದಿ, ಆಸ್ತಿ ಹೂಡಿಕೆ, ಉದ್ದಿಮೆ ಪ್ರಾರಂಭ, ವಿವಾಹದಂಥ ಶುಭ ಕಾರ್ಯಗಳು- ಎಲ್ಲವಕ್ಕೂ ಅಕ್ಷಯ ತೃತೀಯ ಪ್ರಶಸ್ತ ಎಂಬುದು ಬಹುಜನರ ನಂಬಿಕೆ. ಅಂದು ನೆರವಿನ ಅಗತ್ಯ ಇರುವವರಿಗೆ ಬೇಕಾದ ನೆರವು ನೀಡುವುದರಿಂದ ಸಮೃದ್ಧಿ ಹೆಚ್ಚುತ್ತದೆ ಎಂಬ ನಂಬಿಕೆಯೂ ಇದೆ. ಅಂದು ಪೂಜೆಗೆ ಪ್ರಶಸ್ತ್ರ ಸಮಯ ಯಾವುದು?

ಅಕ್ಷಯ ತದಿಗೆ ಅಥವಾ ಅಕ್ಷಯ ತೃತೀಯ… ಹೆಸರು ಯಾವುದಾದರೂ ಅರ್ಥ ಮಾತ್ರ ಒಂದೇ- ಎಂದಿಗೂ ಕಡಿಮೆಯಾಗದ್ದು ಎಂಬುದು. ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ, ಯಶಸ್ಸು, ಆರೋಗ್ಯ, ಐಶ್ವರ್ಯ ಮುಂತಾದ ಸಮೃದ್ಧಿಗಳು ಕ್ಷಯವಾಗುವುದಿಲ್ಲ, ಅಂದರೆ ಕಡಿಮೆ ಆಗುವುದಿಲ್ಲ ಎಂದು ಹೇಳಲಾಗುತ್ತದೆ. ಹಾಗಾಗಿ ಭಾರತದೆಲ್ಲೆಡೆ ಈ ದಿನವನ್ನು ಮಂಗಳಕರವೆಂದು ಪರಿಗಣಿಸಲಾಗಿದೆ.

ಮಂಗಳಕಾರ್ಯಗಳಿಗೆ ಪ್ರಶಸ್ತ:

ಈ ದಿನ ಯಾವುದೇ ಮಂಗಳಕಾರ್ಯಗಳಿಗೆ ಪ್ರಶಸ್ತವಾಗಿದೆ ಎಂಬ ನಂಬಿಕೆ ಇದೆ. ಹೊಸ ಉದ್ದಿಮೆಗಳ ಪ್ರಾರಂಭ, ವಿವಾಹ, ಚಿನ್ನ, ಭೂಮಿಯಂಥ ಆಸ್ತಿ ಖರೀದಿ, ಹೂಡಿಕೆ ಮುಂತಾದ ಕೆಲಸಗಳನ್ನು ಜನ ಈ ದಿನದಂದು ಇರಿಸಿಕೊಳ್ಳುತ್ತಾರೆ. ಹಾಗಾಗಿ ದೇಶದ ಉದ್ದಗಲಕ್ಕೆ ಚಿನಿವಾರ ಪೇಟೆಗೆ ಅಂದು ಬಿಡುವಿಲ್ಲದ ಕೆಲಸ. ಈ ಬಾರಿ ಅಕ್ಷಯ ತೃತೀಯ ಮೇ 10ರಂದು ಆಚರಣೆಯಾಗಲಿದ್ದು, ಬೆಳಗಿನ 5.33ರಿಂದ ಮಧ್ಯಾಹ್ನ 12.18ರವರೆಗೆ ಪೂಜೆಗೆ ಸೂಕ್ತ ಎನ್ನಲಾಗಿದೆ. ತದಿಗೆಯ ತಿಥಿಯು ಮೇ 10ರಂದು ಬೆಳಗಿನ 4.17ಕ್ಕೆ ಪ್ರಾರಂಭವಾದರೆ, ಮೇ 11ರ ಬೆಳಗಿನ ಜಾವ 2.50ರವರೆಗೆ ಇರಲಿದೆ. ಬಂಗಾರ ಖರೀದಿಗೆ ಬೆಳಗಿನ ಜಾವ 4.17ರಿಂದ ತದಿಗೆ ಮುಗಿಯುವರೆಗೂ ಸಕಾಲ.

ಲಕ್ಷ್ಮಿ ಮತ್ತು ಕುಬೇರ ಪೂಜೆ:

ಅಂದಿನ ದಿನ ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿಯನ್ನು ಮತ್ತು ಕುಬೇರನನ್ನು ಪೂಜಿಸುವ ಸಂಪ್ರದಾಯವಿದೆ. ಇದಲ್ಲದೆ, ದಾನ-ದಕ್ಷಿಣೆಗಳನ್ನು ನೀಡಲು ಪ್ರೋತ್ಸಾಹಿಸಲಾಗುತ್ತದೆ. ನೆರವಿನ ಅಗತ್ಯ ಉಳ್ಳವರಿಗೆ ದಾನ ಮಾಡಿದಷ್ಟೂ ಸಮೃದ್ಧಿ ಹೆಚ್ಚು ಎನ್ನುವ ಪ್ರತೀತಿಯೂ ಇದೆ. ಮೊಳಕೆ ಕಾಳುಗಳು, ಹಣ್ಣುಗಳು ಮತ್ತು ಸಿಹಿ ತಿಂಡಿಗಳನ್ನು ವಿತರಿಸುವ ವಾಡಿಕೆ ಕೆಲವೆಡೆಗಳಲ್ಲಿ ಇದೆ. ಕೆಲವರು ಅನ್ನದಾನವನ್ನೂ ನಡೆಸಿ ಕೊಡುತ್ತಾರೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವುದು?

ಪೌರಾಣಿಕ ಹಿನ್ನೆಲೆ:

ಅಕ್ಷಯ ತೃತೀಯದ ಹಿಂದೆ ಹಲವಾರು ಪೌರಾಣಿಕ ಕಥೆಗಳಿವೆ. ಪಾಂಡವರು ವನವಾಸದಲ್ಲಿದ್ದಾಗ ದೂರ್ವಾಸರ ಕೋಪಕ್ಕೆ ತುತ್ತಾಗುವುದನ್ನು ತಪ್ಪಿಸಿದ್ದು ಅಕ್ಷಯ ಪಾತ್ರೆ. ಸಾವಿರಾರು ಶಿಷ್ಯಂದಿರ ಜೊತೆಗೆ ದೂರ್ವಾಸರು ಪಾಂಡವರ ಆಶ್ರಮಕ್ಕೆ ಆಗಮಿಸುತ್ತಾರೆ. ಅವರೆಲ್ಲರನ್ನೂ ಸತ್ಕರಿಸಬೇಕಾದ ಪರಿಸ್ಥಿತಿ ಪಾಂಡವರ ಪಾಲಿಗೆ ಒದಗುತ್ತದೆ. ಆದರೆ ಅಕ್ಷಯಪಾತ್ರೆಯಲ್ಲಿ ದ್ರೌಪದಿಯೂ ಉಂಡು ಮಗುಚಿದ ಮೇಲೆ, ಆ ದಿನಕ್ಕೆ ಆಹಾರ ದೊರೆಯುವುದಿಲ್ಲ. ಮುಂದಿನ ದಾರಿ ಕಾಣದೆ ಅವರು ಕೃಷ್ಣನನ್ನು ಕರೆಯುತ್ತಾರೆ. ಅಲ್ಲಿಗೆ ಆಗಮಿಸುವ ಕೃಷ್ಣ, ಅದರಲ್ಲಿದ್ದ ಅಗುಳೊಂದನ್ನು ಸೇವಿಸಿದಾಗ, ದೂರ್ವಾಸರು ಮತ್ತವರ ಶಿಷ್ಯರ ಹೊಟ್ಟೆಯೆಲ್ಲ ಭರ್ತಿಯಾದ ಕಥೆಯನ್ನು ಕೇಳಿಯೇ ಇರುತ್ತೇವೆ. ಒಂದೇ ಅಗುಳು ಅಕ್ಷಯವಾಗಿ ಎಲ್ಲರ ಹೊಟ್ಟೆ ತುಂಬಿಸಿದ್ದ ಕಥೆಯು ಈ ದಿನಕ್ಕೆ ಸಂಬಂಧಿಸಿದ್ದು ಎನ್ನಲಾಗುತ್ತದೆ.
ಇದಲ್ಲದೆ, ಇಂದಿನ ದಿನ ದ್ವಾರಕೆಯಲ್ಲಿದ್ದ ಕೃಷ್ಣನನ್ನು ಆತನ ಮಿತ್ರ ಸುಧಾಮ ಭೇಟಿ ಮಾಡಿ, ಸಂಪತ್ತು ಹೆಚ್ಚಿಕೊಂಡ ಘಟನೆಯ ನಂಟೂ ಇರುವುದಾಗಿ ಕಥೆಗಳು ಹೇಳುತ್ತವೆ. ವಿಷ್ಣವಿನ ಅವತಾರವಾದ ಪರಶುರಾಮನ ಜನ್ಮದಿನವೆಂದು ನಂಬಲಾಗುತ್ತದೆ. ಪರಶುರಾಮ ದೇಗುಲಗಳಲ್ಲಿ ಅಂದು ಆತನ ಪೂಜೆಯೂ ವಿಜೃಂಭಣೆಯಿಂದ ಜರುಗುತ್ತದೆ. ಗಣಪತಿಗೆ ಬರೆಯುವುದಕ್ಕೆಂದು ಮಹಾಭಾರತವನ್ನು ವ್ಯಾಸರು ಕಥಿಸಲು ಪ್ರಾರಂಭಿಸಿದ ದಿನ ಎಂಬ ದಂತಕಥೆಯೂ ಈ ದಿನದೊಂದಿಗೆ ತಳುಕು ಹಾಕಿಕೊಂಡಿದೆ. ಗಂಗೆಯು ಭುವಿಗೆ ಅವತರಿಸಿದ ದಿನವಿದು ಎಂಬ ಪ್ರತೀತಿಯೂ ಅಕ್ಷಯ ತದಿಗೆಗೆ ಇದೆ. ಚಾರ್‌ಧಾಮ್‌ ಪುಣ್ಯ ಕ್ಷೇತ್ರಗಳನ್ನು ಯಾತ್ರಿಕರಿಗೆ ತೆರೆಯುವುದು ಸಾಮಾನ್ಯವಾಗಿ ಈ ಶುಭ ಸಂದರ್ಭದಲ್ಲೇ.

Continue Reading

ಪ್ರಮುಖ ಸುದ್ದಿ

Murder Case : ಕೊಡಗಿನಲ್ಲಿ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ರುಂಡ ಕತ್ತರಿಸಿ ಕೊಂದ ಪ್ರೇಮಿ

Murder Case: ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮದುವೆ ರದ್ದು ಮಾಡಲಾಗಿತ್ತು. ಆಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಆಕೆಯ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಕೊಲೆ ಮಾಡಿದ್ದಾನೆ ಆರೋಪಿ ವಿರೂಪಾಕ್ಷ.

VISTARANEWS.COM


on

Mureder Case
Koo

ಸೋಮವಾರಪೇಟೆ: ತನ್ನ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯೊಬ್ಬಳನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ (Murder Case) ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ. ಕೊಲೆ ಮಾಡಿದ ಹುಚ್ಚ ಪ್ರೇಮಿಯನ್ನು ವಿರೂಪಾಕ್ಷ ಎಂದು ಗುರುತಿಸಲಾಗಿದೆ. ಮೀನಾ ಕೊಲೆಯಾಗಿರುವ ಬಾಲಕಿ. ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿದ್ದರೆ ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ವಿರೂಪಾಕ್ಷ ಆಕೆಯನ್ನು ಎಳೆದೊಯ್ದು ಕತ್ತು ಕೊಯ್ದು ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದಾನೆ. ಭೀಕರ ಘಟನೆಯು ಈ ಪ್ರದೇಶದ ಜನರನ್ನು ಬೆಚ್ಚಿ ಬೀಳಿಸಿದೆ.

ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮದುವೆ ರದ್ದು ಮಾಡಲಾಗಿತ್ತು. ಆಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಆಕೆಯ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಕೊಲೆ ಮಾಡಿದ್ದಾನೆ ಆರೋಪಿ ವಿರೂಪಾಕ್ಷ.

ಬಾಲಕಿಯನ್ನು ಆರೋಪಿ ವಿರೂಪಾಕ್ಷ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: Prajwal Revanna Case : ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಕೇಸ್​ ದಾಖಲು

ಎಸ್​ಎಸ್​ಎಲ್​ಸಿ ಪಾಸಾಗಿದ್ದ ಬಾಲಕಿ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಗುರುವಾರವಷ್ಟೇ ಫಲಿತಾಂಶ ಪ್ರಕಟಿಸಿತ್ತು. ಅಂತೆಯೇ ಸುರ್ಲಬ್ಬಿ ಸರ್ಕಾರಿ ಹೈಸ್ಕೂಲ್​ನ ಏಕೈಕ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆಕೆ ತೇರ್ಗಡೆಗೊಂಡಿರುವ ಸಂಗತಿ ಶಾಲಾ ಅಧ್ಯಾಪಕರಿಗೆ ಸಂತಸ ತಂದಿದ್ದು. ಅಲ್ಲದೆ ಶಾಲೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿತ್ತು. ಆದರೆ ಸಂಜೆಯ ವೇಳೆಗೆ ಬಾಲಕಿ ಭಯಾನಕವಾಗಿ ಕೊಲೆಯಾಗಿದ್ದಳು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ತನಿಖೆ ಆರಂಭಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌; ನೇಣಿಗೆ ಶರಣಾದ ವಿದ್ಯಾರ್ಥಿ

ಮಂಡ್ಯ: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Result 2024) ಪ್ರಕಟಗೊಂಡಿದೆ. ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ಫೇಲ್‌ ಆದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಿಖಿಲ್ (16) ನೇಣಿಗೆ ಶರಣಾದ ವಿದ್ಯಾರ್ಥಿ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿಖಿಲ್, ಫಲಿತಾಂಶ ನೋಡಿ 3 ವಿಷಯದಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಹೊಲಕ್ಕೆ ತೆರಳಿ ಮರವೊಂದಕ್ಕೆ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
ಬೆಳಗಾವಿ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತಿರ್ಣಗೊಂಡ ವಿದ್ಯಾರ್ಥಿನಿಯೋರ್ವಳು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ಜರುಗಿದೆ.

Continue Reading
Advertisement
karnataka SSLC result 2024
ಸಂಪಾದಕೀಯ13 mins ago

ವಿಸ್ತಾರ ಸಂಪಾದಕೀಯ: SSLC Result 2024: ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತದ ಜೊತೆಗೆ ಸಿಹಿ ಸುದ್ದಿಯೂ ಇದೆ

Digestion Tips
ಆರೋಗ್ಯ30 mins ago

Digestion Tips: ಜೀರ್ಣಾಂಗಗಳ ಕ್ಷಮತೆ ಹೆಚ್ಚಿಸುವುದು ಹೇಗೆ?

Karnataka Weather Forecast
ಮಳೆ60 mins ago

Karnataka Weather : 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆಗೆ ಯೆಲ್ಲೋ ಅಲರ್ಟ್‌ ಘೋಷಣೆ

Which Sweetener Is Better
ಆರೋಗ್ಯ1 hour ago

Which Sweetener Is Better: ಸಕ್ಕರೆ, ಬೆಲ್ಲ, ಕಲ್ಲುಸಕ್ಕರೆ- ಯಾವುದು ಒಳ್ಳೆಯದು?

Basavanna jayanti
ಧಾರ್ಮಿಕ2 hours ago

Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

Akshaya Tritiya 2024
ಪ್ರಮುಖ ಸುದ್ದಿ2 hours ago

Akshaya Tritiya 2024: ಸಕಲ ಸಮೃದ್ಧಿಗಳು ಕ್ಷಯಿಸದಂತೆ ಕಾಪಾಡುವ ಅಕ್ಷಯ ತೃತೀಯ

Dina Bhavishya
ಭವಿಷ್ಯ2 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Mureder Case
ಪ್ರಮುಖ ಸುದ್ದಿ5 hours ago

Murder Case : ಕೊಡಗಿನಲ್ಲಿ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ರುಂಡ ಕತ್ತರಿಸಿ ಕೊಂದ ಪ್ರೇಮಿ

Akshaya Tritiya Bala Rama Silver Idol gift from Sri Sai Gold Palace in bengaluru
ಬೆಂಗಳೂರು6 hours ago

Sri Sai Gold Palace: ಅಕ್ಷಯ ತೃತೀಯ; ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಿಂದ ಶ್ರೀ ಬಾಲ ರಾಮನ ಬೆಳ್ಳಿ ವಿಗ್ರಹ ಉಡುಗೊರೆ

IPL 2024
ಪ್ರಮುಖ ಸುದ್ದಿ7 hours ago

IPL 2024 : ಆರ್​ಸಿಬಿಗೆ ಐದನೇ ವಿಜಯ, ಪಂಜಾಬ್​ ವಿರುದ್ಧ 60 ರನ್ ಭರ್ಜರಿ ಗೆಲುವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ10 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ11 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ11 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ18 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ18 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ19 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು19 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ19 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು21 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಟ್ರೆಂಡಿಂಗ್‌