Odisha Assembly Result 2024: ಬಿಜೆಡಿ ಭದ್ರ ಕೋಟೆಗೆ ಬಿಜೆಪಿ ಗ್ರ್ಯಾಂಡ್‌ ಎಂಟ್ರಿ! ಹಳೇ ದೋಸ್ತಿಗೆ ಸಕತ್‌ ಠಕ್ಕರ್‌ ಕೊಟ್ಟ ಕೇಸರಿ ಬಣ - Vistara News

ದೇಶ

Odisha Assembly Result 2024: ಬಿಜೆಡಿ ಭದ್ರ ಕೋಟೆಗೆ ಬಿಜೆಪಿ ಗ್ರ್ಯಾಂಡ್‌ ಎಂಟ್ರಿ! ಹಳೇ ದೋಸ್ತಿಗೆ ಸಕತ್‌ ಠಕ್ಕರ್‌ ಕೊಟ್ಟ ಕೇಸರಿ ಬಣ

Odisha Assembly Result 2024: ಒಟ್ಟು 147 ಸ್ಥಾನಗಳಲ್ಲಿ 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇನ್ನು 67 ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿರುವ ಬಿಜೆಪಿ(BJP) ಸ್ಪಷ್ಟ ಬಹುಮತ ಪಡೆಯುವ ಮೂಲಕ ಸರ್ಕಾರ ರಚಿಸುವುದು ಖಚಿತವಾಗಿದೆ. ಇನ್ನು 42ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಬಿಜೆಡಿ ಕೇವಲ 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದಂತೆ ಕಾಂಗ್ರೆಸ್‌ 13 ಕ್ಷೇತ್ರಗಳಲ್ಲಿ ಗೆದ್ದಿದೆ.

VISTARANEWS.COM


on

Odisha Assembly Result 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಾಟ್ನಾ: ಒಡಿಶಾ(Odisha)ದಲ್ಲಿ ಬಿಜೆಪಿ ತನ್ನ ಹಳೆದ ದೋಸ್ತಿ ಬಿಜೆಡಿಗೆ ಭರ್ಜರಿ ಗುದ್ದು ನೀಡಿದೆ. ವಿಧಾನಸಭಾ ಚುನಾವಣಾ ಫಲಿತಾಂಶ(Odisha Assembly Result 2024)ಬಹುತೇಕ ಹೊರ ಬಿದ್ದಿದ್ದು, ಒಟ್ಟು 147 ಸ್ಥಾನಗಳಲ್ಲಿ 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇನ್ನು 67 ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿರುವ ಬಿಜೆಪಿ(BJP) ಸ್ಪಷ್ಟ ಬಹುಮತ ಪಡೆಯುವ ಮೂಲಕ ಸರ್ಕಾರ ರಚಿಸುವುದು ಖಚಿತವಾಗಿದೆ. ಇನ್ನು 42ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಬಿಜೆಡಿ ಕೇವಲ 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದಂತೆ ಕಾಂಗ್ರೆಸ್‌ 13 ಕ್ಷೇತ್ರಗಳಲ್ಲಿ ಗೆದ್ದಿದೆ.

ಇನ್ನು ಒಡಿಶಾದಲ್ಲಿ ಈ ಬಾರಿ ಚುನಾವಣಾ ಫಲಿತಾಂಶವು ಬಹುತೇಕ 2019ರ ರೀತಿಯಲ್ಲೇ ಇರಲಿದೆ ಎಂದೂ ಅಂದಾಜಿಸಲಾಗಿತ್ತು. ಎಕ್ಸಿಟ್‌ ಪೋಲ್‌ ರಿಸಲ್ಟ್‌ ಪ್ರಕಾರ ಬಿಜೆಡಿ ಈ ಬಾರಿ 62-80 ಸ್ಥಾನಗಳನ್ನು ಗಳಿಸಿದರೆ ಕಾಂಗ್ರೆಸ್‌ 5 ರಿಂದ 8 ಸ್ಥಾನಗಳನ್ನು ಗಿಟ್ಟಿಸಿಕೊಳ್ಳಲಿದೆ. ಇನ್ನು ಲೋಕಸಭಾ ಎಲೆಕ್ಷನ್‌ ರಿಸಲ್ಟ್‌ಗೆ ಬಂದರೆ ಬಿಜೆಪಿ ಒಡಿಶಾದಲ್ಲಿ 18-20 ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಬಿಜೆಡಿ ಕೇವಲ 0-2 ಸ್ಥಾನ ಪಡೆದುಕೊಳ್ಳಲಿದೆ. ಇಲ್ಲಿ ಕಾಂಗ್ರೆಸ್‌ 0-1 ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ ಎಂದು ಅಂದಾಜಿಸಿತ್ತು ಇಂದಿನ ಈ ಫಲಿತಾಂಶ ಎಲ್ಲಾ ಎಕ್ಸಿಟ್‌ ಪೋಲ್‌ ಫಲಿತಾಂಶವನ್ನು ತಲೆಕೆಳಗಾಗಿಸಿವೆ.

2019ರ ಚಿತ್ರಣ

2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜು ಜನತಾ ದಳಕ್ಕೆ 117, ಬಿಜೆಪಿಗೆ 23 ಮತ್ತು ಕಾಂಗ್ರೆಸ್‌ಗೆ 9 ಸ್ಥಾನ ಸಿಕ್ಕಿತ್ತು. 2000ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದ ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ ಅವರು ಸತತ ಐದನೇ ಅವಧಿಗೆ ಮರು ಆಯ್ಕೆಯಾಗಿದ್ದರು. 77 ವರ್ಷದ ಪಟ್ನಾಯಕ್‌ ಅವರು ಈ ಬಾರಿ ಬಿಜೆಪಿಯಿಂದ ಕಠಿಣ ಸ್ಪರ್ಧೆ ಎದುರಿಸಲಿದ್ದಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಬಿಜೆಡಿಯ ಮಾಜಿ ಮಿತ್ರ ಪಕ್ಷವಾದ ಬಿಜೆಪಿ ಇತ್ತೀಚಿನ ವರ್ಷಗಳಲ್ಲಿ ಪ್ರಮುಖ ವಿರೋಧ ಪಕ್ಷವಾಗಿ ಗುರುತಿಸಿಕೊಂಡಿದೆ. ಬಿಜೆಪಿಯು 2000 ಮತ್ತು 2009ರ ನಡುವೆ ಬಿಜೆಡಿಯೊಂದಿಗೆ ಅಧಿಕಾರವನ್ನು ಹಂಚಿಕೊಂಡಿತ್ತು. ಆ ಅವಧಿಯಲ್ಲಿ ಈ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸಿದ್ದವು. 2009ರ ಚುನಾವಣೆಗೂ ಮೊದಲು ಮೈತ್ರಿ ಮುರಿದು ಬಿದ್ದು, ಬಿಜೆಪಿ ರಾಜ್ಯದಲ್ಲಿ ಮೂರನೇ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆಯಿತು.

ಎರಡೂವರೆ ದಶಕಗಳ ಬಿಜೆಡಿಯ ಅಧಿಕಾರ ಅಂತ್ಯ

2000 ಮಾರ್ಚ್​5 ರಿಂದ 2024ರ ವರೆಗೆ ಸತತ 24 ವರ್ಷಗಳ ಕಾಲ ಬಿಜು ಜನತಾದಳ ಅಧಿಕಾರದಲ್ಲಿತ್ತು. ನವೀನ್​ ಪಟ್ನಾಯಕ್​ ಸತತ 5 ಬಾರಿ ಸಿಎಂ ಆಗುವ ಮೂಲಕ ದಾಖಲೆ ಬರೆದಿದ್ದರು. ಇದೀಗ 2024ಕ್ಕೆ ಅವರ ಅಧಿಕಾರ ಅಂತ್ಯವಾಗಿದೆ. 2024ರ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಡಿ ನವೀನ್ ಪಟ್ನಾಯಕ್ ನೇತೃತ್ವದಲ್ಲಿ ಸ್ಪರ್ಧಿಸಿದರೆ, ಬಿಜೆಪಿ ಯಾವುದೇ ಪ್ರಾದೇಶಿಕ ನಾಯಕರ ನೇತೃತ್ವವಿಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ನೆಚ್ಚಿಕೊಂಡು ಈ ಚುನಾವಣೆಯಲ್ಲಿ ಸ್ಪರ್ಧಿಸಿತ್ತು.

ಇತಿಹಾಸ ಬರೆದ ಬಿಜೆಪಿ

ಒಡಿಶಾದಲ್ಲಿ ಹಿಂದಿನ 16 ವಿಧಾನಸಭೆಯಲ್ಲಿ ಬಿಜೆಪಿಯಾಗಲೀ ಅಥವಾ ಜನಸಂಘವಾಗಲೀ ಒಮ್ಮೆಯೂ ಅಧಿಕಾರ ಪಡೆಯುವಲ್ಲಿ ಯಶಸ್ವಿ ಆಗಿಲ್ಲ. ಈಗ 17ನೇ ವಿಧಾನಸಭೆಯಲ್ಲಿ ಮೊದಲ ಬಾರಿಗೆ ಆ ರಾಜ್ಯದಲ್ಲಿ ಕೇಸರಿ ಬಾವುಟ ಹಾರಾಡುವಂತಾಗಿದೆ. ಇನ್ನು ನವೀನ್‌ ಪಟ್ನಾಯಕ್‌ ಅವರ ತಂದೆ ಬಿಜು ಪಟ್ನಾಯಕ್‌ ಕೂಡ ಮೂರು ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ನವೀನ್‌ ಪಟ್ನಾಯಕ್‌ ಕೂಡ ಬರೋಬ್ಬರಿ 24 ವರ್ಷಗಳ ಕಾಲ ಸಿಎಂ ಆಗಿ ಕಾರ್ಯ ನಿರ್ವಹಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಒಂದು ವೇಳೆ ಅವರು ಈ ಬಾರಿ ಗೆದ್ದಿದ್ದರೆ ಅವರು ದೇಶದಲ್ಲೇ ಅತೀ ಸುದೀರ್ಘವಾಗಿ ಸಿಎಂ ಆಗಿ ಆಡಳಿತ ನಡೆಸಿದ ಮೊದಲಿಗರು ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದರು.

ಇದನ್ನೂ ಓದಿ:Election results 2024: ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಢವಢವ; ಮತ ಎಣಿಕೆಯಲ್ಲಿ ಪೈಪೋಟಿ ಒಡ್ಡಿದ ಇಂಡಿಯಾ ಬ್ಲಾಕ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

V Somanna: ಹೆಜ್ಜಾಲ- ಚಾಮರಾಜನಗರ ರೈಲ್ವೆ ಕಾರ್ಯ ಶೀಘ್ರದಲ್ಲಿ: ಸಚಿವ ಸೋಮಣ್ಣ

V Somanna: 1996-97ರಲ್ಲಿ ಈ ಯೋಜನೆ ಪ್ರಪೋಸಲ್ ಇತ್ತು. ಈಗ ನನಗೆ ಅವಕಾಶ ಸಿಕ್ಕಿದೆ. 697 ಎಕರೆ ಜಮೀನು ಬೇಕಾಗಬಹುದು. ಇದರಲ್ಲಿ ಅರಣ್ಯ ಜಮೀನು ಬರುವುದಿಲ್ಲ. ರೈತರ ಜಮೀನಿನ ಮೇಲೆ ಹೋಗುತ್ತದೆ. ಇನ್ನು ಹದಿನೈದು ದಿನಗಳಲ್ಲಿ ಇದಕ್ಕಾಗಿ ಸರ್ವೇ ಕಾರ್ಯ ಆರಂಭಿಸುತ್ತೇವೆ ಎಂದು ಅವರು ಹೇಳಿದ್ದಾರೆ.

VISTARANEWS.COM


on

V Somanna
Koo

ಬೆಂಗಳೂರು: ಹೆಜ್ಜಾಲದಿಂದ ಆರಂಭಿಸಿ ಕನಕಪುರ, ಸಾತನೂರು, ಹಲಗೂರು , ಕೊಳ್ಳೇಗಾಲ- ಚಾಮರಾಜನಗರದವರೆಗೆ ಬರಲಿರುವ 142 km ರೈಲು ಮಾರ್ಗದ (Railway Line) ಸರ್ವೇ ಕಾರ್ಯ (Survey) ಮತ್ತೆ ಕೈಗೆತ್ತಿಕೊಳ್ಳಲಾಗುವುದು. 2019ರಲ್ಲೇ ಸರ್ವೆ ಆಗಿ ಸ್ಥಗಿತ ಆಗಿತ್ತು, ಈಗ ಮತ್ತೆ ಸರ್ವೇ ಮಾಡುತ್ತೇವೆ. ಈ ಯೋಜನೆಗೆ ರಾಜ್ಯ ಸರ್ಕಾರ (Karnataka Govt) ಜಾಗ ಕೊಡಬೇಕಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ (Central minister) ವಿ. ಸೋಮಣ್ಣ (V Somanna) ಹೇಳಿದ್ದಾರೆ.

ರೈಲ್ವೆ ಯೋಜನೆಗಳ ಕುರಿತು ಕೇಂದ್ರ ಸಚಿವ ವಿ. ಸೋಮಣ್ಣ ನೇತೃತ್ವದ ಸಭೆ ಮುಕ್ತಾಯಗೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಚಾರ ತಿಳಿಸಿದರು. 1996-97ರಲ್ಲಿ ಈ ಯೋಜನೆ ಪ್ರಪೋಸಲ್ ಇತ್ತು. ಈಗ ನನಗೆ ಅವಕಾಶ ಸಿಕ್ಕಿದೆ. 697 ಎಕರೆ ಜಮೀನು ಬೇಕಾಗಬಹುದು. ಇದರಲ್ಲಿ ಅರಣ್ಯ ಜಮೀನು ಬರುವುದಿಲ್ಲ. ರೈತರ ಜಮೀನಿನ ಮೇಲೆ ಹೋಗುತ್ತದೆ. ಇನ್ನು ಹದಿನೈದು ದಿನಗಳಲ್ಲಿ ಇದಕ್ಕಾಗಿ ಸರ್ವೇ ಕಾರ್ಯ ಆರಂಭಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಕಂಟೋನ್ಮೆಂಟ್ ಹಾಗೂ ಯಶವಂತಪುರ ಸ್ಟೇಷನ್‌ಗಳನ್ನು ವಿಶ್ವದರ್ಜೆಗೆ ಏರಿಸಲು 2022-23ರಲ್ಲಿ ಮಂಜೂರಾತಿ ನೀಡಲಾಗಿದೆ. ಇದರ ಯೋಜನೆಯ ಮೊತ್ತ ಬೆಂಗಳೂರು ಕಂಟೋನ್ಮೆಂಟ್ 485 ಕೋಟಿ ರೂ. ಹಾಗೂ ಯಶವಂತಪುರ ಸ್ಟೇಷನ್ 387 ಕೋಟಿ ರೂ. ಈ ಎರಡೂ ನಿಲ್ದಾಣ ಪುನರಾಭಿವೃದ್ಧಿ ಕಾರ್ಯವೂ 2025ರಲ್ಲಿ ಪೂರೈಸಲಾಗುವುದು. 2018-19ರ ಯಶವಂತಪುರ – ಚನ್ನಸಂದ್ರ 25 km ಹಾಗೂ ಬೈಯಪ್ಪನಹಳ್ಳಿ – ಹೊಸೂರು 48 km ಡಬಲಿಂಗ್ ಯೋಜನೆಗಳನ್ನು ಕ್ರಮವಾಗಿ ರೂ 314 ಕೋಟಿ ಹಾಗೂ ರೂ 500 ಕೋಟಿ ಮೊತ್ತದಲ್ಲಿ ಮಂಜೂರು ಮಾಡಲಾಗಿದ್ದು, ಕಾಮಗಾರಿ ಮುಂದುವರೆದಿದೆ ಎಂದಿದ್ದಾರೆ ಸೋಮಣ್ಣ.

ಯಶವಂತಪುರ – ಚನ್ನಸಂದ್ರ ಯೋಜನೆಯಲ್ಲಿ ಈಗಾಗಲೇ ಯಶವಂತಪುರ ಹೆಬ್ಬಾಳ 10.3 km ಗಳನ್ನೂ ಪೂರ್ಣಗೊಳಿಸಲಾಗಿದೆ. ಮೇ 2025ರಲ್ಲಿ ಈ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಿದೆ. 1997-98 ರಲ್ಲಿ ಮಂಜೂರಾದ, ನೆನೆನಗುದಿಗೆ ಬಿದ್ದಿದ್ದ ಮಹತ್ವದ ಬೆಂಗಳೂರು – ವೈಟ್‌ಫೀಲ್ಡ್ 38 km ಕ್ವಾಡ್ರುಪ್ಲಿಂಗ್ ಯೋಜನೆಗಳನ್ನು ಈಗ ಕೈಗೆತ್ತಿಗೊಂಡು ಕಾಮಗಾರಿಗೆ ವೇಗ ನೀಡಲಾಗಿದ್ದು, ಬೆಂಗಳೂರು ದಂಡು – ಬೈಯಪ್ಪನಹಳ್ಳಿ ನಡುವೆ 13 ಕಾಮಗಾರಿ ನಡೆಯುತ್ತಿದೆ. ಇದರ ಯೋಜನೆ ಮೊತ್ತ ರೂ. 492 ಕೋಟಿ. ಜೂನ್ 2025ರಲ್ಲಿ ಈ ಯೋಜನೆಯನ್ನು ಪೂರ್ಣ ಮಾಡುವ ಗುರಿಯಿದೆ. ನನ್ನ ಮತ ಕ್ಷೇತ್ರದ ವಿಜಯನಗರ, ನಾಯಂಡಹಳ್ಳಿ, ಯೂನಿವರ್ಸಿಟಿಯಲ್ಲಿ ಕಾಮಗಾರಿಗಳನ್ನು ಸರಿಪಡಿಸುತ್ತೇವೆ ಎಂದು ಸೋಮಣ್ಣ ತಿಳಿಸಿದರು.

11ರಂದು ಖಾತೆ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಅಧಿಕಾರಿಗಳ ಜೊತ ಚರ್ಚೆ ಮಾಡಿದ್ದೇನೆ. ಇಲಾಖೆಯ ಸಾಧಕ ಭಾದಕಗಳ ಅರಿಯುವ ಕೆಲಸ ಮಾಡ್ತಿದ್ದೇನೆ. ರೈಲ್ವೆ ಇಲಾಖೆಗೆ ರಾಜ್ಯದಿಂದ ಅತಿರಥ ಮಹಾರಥರು ಮಂತ್ರಿಗಳಾಗಿ ಕೊಡುಗೆ ಕೊಟ್ಟಿದ್ದಾರೆ. ಅಶ್ವಿನಿ ವೈಷ್ಣವ್ ಹಾಗೂ ಜಲಶಕ್ತಿ ಸಚಿವ ಸಿ. ಆರ್ ಪಾಟೀಲ್ ನನಗೆ ಹೆಚ್ಚಿನ ಹುಮ್ಮಸ್ಸು ಕೊಟ್ಟಿದ್ದಾರೆ. ಐವತ್ತು ವರ್ಷಗಳಲ್ಲಿ ಆಗದಿರುವುದನ್ನು ಹತ್ತು ವರ್ಷಗಳಲ್ಲಿ ರೈಲ್ವೆ ಇಲಾಖೆ ಮಾಡಿ ತೋರಿಸಿದೆ. ರೈಲ್ವೆ ಇಲಾಖೆಯ ಕಾರ್ಯವೈಖರಿ ಒಂದು ರೀತಿ ಮಿಲಿಟರಿ ಇದ್ದಂತೆ. ಇನ್ನೂ ಎರಡು ವರ್ಷಗಳಲ್ಲಿ ಕರ್ನಾಟಕ, ವಿಭಿನ್ನ ರೀತಿಯಲ್ಲಿ ರೈಲ್ವೆ ಇಲಾಖೆಯಲ್ಲಿ ಬದಲಾವಣೆ ಆಗುತ್ತದೆ. ನನ್ನ ನಲವತ್ತು ವರ್ಷಗಳ ಅನುಭವದೊಂದಿಗೆ ಬದಲಾವಣೆ ಆಗುತ್ತದೆ. ರೈಲ್ವೆ ಮೇಲ್ಸುತುವೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅರ್ಧ ಅರ್ಧ ಹಣ ಕೊಡಬೇಕು. ಜಾಗವನ್ನು ರಾಜ್ಯ ಸರ್ಕಾರ ಕೊಡಬೇಕು ಎಂದಿದ್ದಾರೆ ಸೋಮಣ್ಣ.

ಈಗಾಗಲೇ ಪೂರ್ಣಗೊಂಡ ಕಾಮಗಾರಿಗಳ ಮಾಹಿತಿ ಅವರು ನೀಡಿದರು.
ಹಾಸನ – ಬೆಂಗಳೂರು ಹೊಸ ಲೈನ್ : 166 km ರೂ 2010 ಕೋಟಿ ವೆಚ್ಚದಲ್ಲಿ 2017 ರಲ್ಲಿ ನಿರ್ಮಾಣಗೊಂಡಿದೆ
ಯಲಹಂಕ – ದೇವರಪಲ್ಲಿ ಡಬಲಿಂಗ್ : 72 km ರೂ 882 ಕೋಟಿ ವೆಚ್ಚದಲ್ಲಿ 2021ರಲ್ಲಿ ಪೂರ್ಣ ಗೊಂಡಿದೆ
2016 ರಲ್ಲಿ ರೂ 167 ಕೋಟಿ ವೆಚ್ಚದಲ್ಲಿ ಯಲಹಂಕ – ಚನ್ನಸಂದ್ರ 13km ಡಬಲಿಂಗ್
95 ಕೋಟೆ ವೆಚ್ಚದಲ್ಲಿ ಯಲಹಂಕ – ಯಶವಂತಪುರ 7km ಡಬಲಿಂಗ್ ಪೂರ್ಣಗೊಂಡಿದೆ
ಪ್ರಧಾನಿ ಮೋದಿಯವರ ಸಂಕಲ್ಪದಂತೆ ಸಾಮಾನ್ಯ ರೈಲ್ವೆ ಪ್ರಯಾಣಿಕರಿಗೂ ಉತ್ತಮ್ಮ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಬೈಯಪ್ಪನಹಳ್ಳಿಯಲ್ಲಿ ರೂ 314 ಕೋಟಿ ವೆಚ್ಚದಲ್ಲಿ 2022ರಲ್ಲಿ ವಿಶ್ವೇಶ್ವರಯ್ಯ ಟರ್ಮಿನಲ್ ನಿರ್ಮಾಣಗೊಂಡಿದೆ.
ರೂ 280 ಕೋಟಿ ವೆಚ್ಚದಲ್ಲಿ 11 RUB ಗಳ ಹಾಗೂ ರೂ 285 ಕೋಟಿ ವೆಚ್ಚದಲ್ಲಿ 12 ROB ಗಳ ನಿರ್ಮಾಣಗೊಂಡಿದೆ.

ಇದನ್ನೂ ಓದಿ: V Somanna : ತಮ್ಮನ್ನು ಕಡೆಗಣಿಸಿದ ಜಿಲ್ಲಾಧಿಕಾರಿ, ಸಿಇಒಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

Continue Reading

ದೇಶ

Stabbing: ಕೋಪದ ಕೈಗೆ ಬುದ್ದಿ ಕೊಟ್ರೆ ಹೀಗೇ ಆಗೋದು! ಸಹಪಾಠಿಯನ್ನೇ ಇರಿದು ಕೊಂದ ವಿದ್ಯಾರ್ಥಿ

Stabbing:ಶಾಲೆಯಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಗಳ ನಡುವೆ ಯಾವುದೋ ಕ್ಷುಲ್ಲಕ ವಿಚಾರಕ್ಕೆ ಜಗಳ ಆಗಿತ್ತು. ಮಾತಿಗೆಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಒಬ್ಬ ವಿದ್ಯಾರ್ಥಿ ಕೋಪದ ಭರದಲ್ಲಿ ಹರಿತವಾದ ಸಾಧನದಿಂದ ಮತ್ತೋರ್ವನಿಗೆ ಚುಚ್ಚಿದ್ದಾನೆ. ಘಟನೆಯಲ್ಲಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಾಲಕ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾನೆ.

VISTARANEWS.COM


on

Stabbing
Koo

ಭುವನೇಶ್ವರಂ: ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ತಾರಕಕ್ಕೇರಿ ಹರಿತವಾದ ವಸ್ತುವಿನಿಂದ ಇರಿದಿರುವ ಘಟನೆ ಒಡಿಶಾ(Odisha)ದ ಗಂಜಂ ಜಿಲ್ಲೆಯಲ್ಲಿ ನಡೆದಿದೆ. ಒಂಬತ್ತನೇ ತರಗತಿ ವಿದ್ಯಾರ್ಥಿಯೋರ್ವ ತನ್ನ ಸ್ನೇಹಿತನಿಗೇ ಕೋಪದ ಭರದಲ್ಲಿ ಇರಿದಿ(Stabbing)ದ್ದಾನೆ. ಸಾನಕೆಮುಂಡಿ ಪ್ರದೇಶದಲ್ಲಿರುವ ರಘನಾಥಂ ಪ್ರೌಢ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಗಾಯಾಳು ವಿದ್ಯಾರ್ಥಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರ:

ಶಾಲೆಯಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಗಳ ನಡುವೆ ಯಾವುದೋ ಕ್ಷುಲ್ಲಕ ವಿಚಾರಕ್ಕೆ ಜಗಳ ಆಗಿತ್ತು. ಮಾತಿಗೆಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಒಬ್ಬ ವಿದ್ಯಾರ್ಥಿ ಕೋಪದ ಭರದಲ್ಲಿ ಹರಿತವಾದ ಸಾಧನದಿಂದ ಮತ್ತೋರ್ವನಿಗೆ ಚುಚ್ಚಿದ್ದಾನೆ. ಘಟನೆಯಲ್ಲಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಾಲಕ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾನೆ. ಮೊದಲಿಗೆ ಬಾಲಕನನ್ನು ಸೆರಗಢಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ MKCG ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಲು ಪ್ರಾಂಶುಪಾಲರೂ ನಿರಾಕರಿಸಿದ್ದಾರೆ.

ಬೆಂಗಳೂರಿನಲ್ಲೂ ಇಂತಹದ್ದೇ ಒಂದು ಘಟನೆ ಮೂರು ದಿನಗಳ ಹಿಂದೆ ನಡೆದಿತ್ತು. ಪರೀಕ್ಷಾ ಕೊಠಡಿಯ ಹೊರಗೆ ಬ್ಯಾಗ್ ಇಡುವ ವಿಚಾರಕ್ಕೆ ರಾಗಿ ಗುಡ್ಡ ಹಾಗೂ ಸಾರಕ್ಕಿ ಬಳಿ ಇರುವ ಶಾಲಾ ವಿದ್ಯಾರ್ಥಿಗಳ ನಡುವೆ ಕಿರಿಕ್ ನಡೆದಿದೆ. ಪರೀಕ್ಷೆ ಮಗಿಸಿ ಮನೆಗೆ ಹೋಗುವಾಗ ಎರಡು ಶಾಲೆಗಳ ಮಕ್ಕಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಖಾಸಗಿ ಶಾಲೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಂದಿದ್ದ ಎರಡು ಶಾಲೆಯ ಮಕ್ಕಳು, ಪರೀಕ್ಷಾ ಕೇಂದ್ರದಲ್ಲಿ ಜಗಳ ನಡೆಸಿದ್ದಾರೆ. ಒಳಗೆ ಜಗಳವಾಡಿ ಅದೇ ದ್ವೇಷದಿಂದ ಹಿಂಬಾಲಿಸಿ ಬಂದಿದ್ದ ರಾಗಿ ಗುಡ್ಡ ಬಳಿ ಇರುವ ಶಾಲಾ ಬಾಲಕರು, ನಂತರ ಸಾರಕ್ಕಿ ಬಳಿ ಇರುವ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದು ಪರಾರಿ ಆಗಿದ್ದಾರೆ.

ಬುಧವಾರ ಮಧ್ಯಾಹ್ನ 1-45ಕ್ಕೆ ಘಟನೆ ನಡೆದಿದ್ದು, ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಐವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಎಲ್ಲ ಬಾಲಕರ ಮೇಲೂ ಕೊಲೆ ಯತ್ನ ಪ್ರಕರಣದಡಿ ಪ್ರಕರಣ ದಾಖಲಿಸಿದ್ದಾರೆ. ಪುಸ್ತಕ ಹಿಡಿಯಬೇಕಿದ್ದ ಕೈಗಳಿಗೆ ಈಗ ಕೋಳ ಬಿದ್ದಿದೆ.

ಕಳೆದ ವರ್ಷ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ರೇಗಿಸಬೇಡಿ ಈ ರೀತಿ ರೇಗಿಸೋದ್ರಿಂದ ನಿಮಗೆ ಕೆಟ್ಟ ಹೆಸರು ಬರುವುದಲ್ಲದೇ ಕಾಲೇಜಿಗೂ ಕೆಟ್ಟ ಹೆಸರು ಬರುತ್ತೆ ಅಂತ ಬುದ್ಧಿವಾದ ಹೇಳಿದಕ್ಕೆ ಸಹಪಾಠಿಯನ್ನೇ ಚಾಕುವಿನಿಂದ ಇರಿದಿರುವ ಘಟನೆ ಜಯನಗರದಲ್ಲಿ ನಡೆದಿತ್ತು.

ವಿದ್ಯಾರ್ಥಿಗೆ ಚಾಕು ಇರಿದಿರುವ ಸಹಪಾಠಿಗಳು ನಮಗೆ ಬುದ್ಧಿವಾದ ಹೇಳ್ತಿಯಾ? ನಾವು ನಿನ್ನಂತೆಯೇ ಈ ಕಾಲೇಜಿಗೆ ಸೇರಿಕೊಂಡಿರೋದು, ನಮ್ಮ ಇಷ್ಟ ಬಂದ ಹಾಗೇ ಮಾಡ್ತೀವಿ ಅಂತ ಕ್ಯಾತೆ ತೆಗೆದಿದ್ದಾರೆ. ಆದರೆ ಇದನ್ನು ವಿದ್ಯಾರ್ಥಿ ವಿರೋಧಿಸಿದ್ದಕ್ಕಾಗಿ ಕಾಲೇಜಿನಲ್ಲಿ ಗಲಾಟೆ ಮಾಡಿಕೊಂಡಿದ್ದರು. ವಿಜಯ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜಗಳ ತಿಳಿದು ವಿದ್ಯಾರ್ಥಿಗಳನ್ನು ಅಮಾನತು ಮಾಡಿದ್ದಾರೆ. ಈ ವಿಚಾರಕ್ಕೆ ಬೇಸರವಾಗಿದ್ದರಿಂದ ಸೇಡು ತೀರಿಸಿಕೊಳ್ಳಲಿಕ್ಕಾಗಿ ವಿದ್ಯಾರ್ಥಿಯ ಮೇಲೆ ಚಾಕು ಚುಚ್ಚಿ ಪರಾರಿಯಾಗಿದ್ದಾರೆ. ವಿಚಾರ ತಿಳಿದ ಪೊಲೀಸರು ಬಾಲಾಪರಾಧಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: Vikram Misri: ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ; ಚೀನಾ ವಿಷಯದಲ್ಲಿ ಇವರು ಎಕ್ಸ್‌ಪರ್ಟ್!

Continue Reading

ಉದ್ಯೋಗ

Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Job Alert: ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 8,326 ಎಂಟಿಎಸ್‌, ಹವಾಲ್ದಾರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಜುಲೈ 31. ಮಲ್ಟಿ ಟಾಸ್ಕಿಂಗ್‌ (ನಾನ್‌ ಟಿಕ್ನಿಕಲ್‌) ಸ್ಟಾಫ್‌ (ಎಂಟಿಎಸ್‌) – 4,887 ಮತ್ತು ಸಿಬಿಐಸಿ ಮತ್ತು ಸಿಬಿಎನ್‌ನಲ್ಲಿ ಹವಾಲ್ದಾರ್‌ – 3,439 ಹುದ್ದೆಗಳಿವೆ.

VISTARANEWS.COM


on

Job Alert
Koo

ನವದೆಹಲಿ: ಎಸ್ಸೆಸ್ಸೆಲ್ಸಿ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ಹಾಗಾದರೆ ಸುವರ್ಣಾವಕಾಶವೊಂದು ನಿಮ್ಮನ್ನು ಹುಡುಕಿಕೊಂಡು ಬಂದಿದೆ. ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2024). ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 8,326 ಎಂಟಿಎಸ್‌, ಹವಾಲ್ದಾರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಜುಲೈ 31 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮಲ್ಟಿ ಟಾಸ್ಕಿಂಗ್‌ (ನಾನ್‌ ಟಿಕ್ನಿಕಲ್‌) ಸ್ಟಾಫ್‌ (ಎಂಟಿಎಸ್‌) – 4,887 ಮತ್ತು ಸಿಬಿಐಸಿ ಮತ್ತು ಸಿಬಿಎನ್‌ನಲ್ಲಿ ಹವಾಲ್ದಾರ್‌ – 3,439 ಹುದ್ದೆಗಳಿವೆ. SSC Recruitment 2024 ಅಧಿಸೂಚನೆ ಪ್ರಕಾರ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ, ವಿಶ್ವವಿದ್ಯಾನಿಯಯದಿಂದ ಎಸ್ಸೆಸ್ಸೆಲ್ಸಿ / 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಮಲ್ಟಿ ಟಾಸ್ಕಿಂಗ್‌ (ನಾನ್‌ ಟಿಕ್ನಿಕಲ್‌) ಸ್ಟಾಫ್‌ (ಎಂಟಿಎಸ್‌) ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಇನ್ನು ಹವಾಲ್ದಾರ್‌ ಹುದ್ದೆಗೆ 18-27 ವಯಸ್ಸಿನವರು ಅಪ್ಲೈ ಮಾಡಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗಕ್ಕೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ) ವಿಭಾಗಕ್ಕೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ವಿಭಾಗಕ್ಕೆ 1೦ ವರ್ಷ, ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ವಿಭಾಗಕ್ಕೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳೆ / ಇಎಸ್‌ಎಂ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ / ಒಬಿಸಿ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ, ಪ್ರಾಥಮಿಕ ಅರ್ಹತಾ ಪರೀಕ್ಷೆ (Preliminary Eligibility Test), ಫಿಸಿಕಲ್‌ ಸ್ಟ್ಯಾಂಡರ್ಡ್‌ ಟೆಸ್ಟ್‌ (Physical Standard Test) ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 18,000 ರೂ. – 22,000 ರೂ. ಮಾಸಿಕ ವೇತನ ದೊರೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಮುಂತಾದೆಡೆ ಪರೀಕ್ಷಾ ಕೇಂದ್ರಗಳಿವೆ.

SSC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://ssc.gov.in/login).
  • ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಪಾರಂ ಡೌನ್‌ಲೋಡ್‌ ಮಾಡಿ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ಮಾಹಿತಿಗಾಗಿ Help Desk (SSC-HQ) 1800 309 3063, SSC (KKR), Bengaluru 080 25502520, 09483862020 ನಂಬರ್‌ಗೆ ಕರೆ ಮಾಡಿ. ಅಥವಾ ಅಧಿಕೃತ ವೆಬ್‌ಸೈಟ್‌ ssc.gov.inಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಬರೋಬ್ಬರಿ 17,727 ಹುದ್ದೆಗಳ ಭರ್ತಿಗೆ ಮುಂದಾದ SSC; ಇಂದೇ ಅಪ್ಲೈ ಮಾಡಿ

Continue Reading

ದೇಶ

Heavy Rain: ಭಾರೀ ಮಳೆಗೆ ಕುಸಿದು ಬಿದ್ದ ರಾಜ್‌ಕೋಟ್‌ ವಿಮಾನ ನಿಲ್ದಾಣ ಹೊರಭಾಗದ ಛಾವಣಿ

Heavy Rain: ಶನಿವಾರ ಸುರಿದ ಭಾರೀ ಮಳೆಗೆ ರಾಜ್‌ಕೋಟ್‌ ವಿಮಾನ ನಿಲ್ದಾಣದ ಪ್ರಯಾಣಿಕರ ಪಿಕಪ್‌ ಮತ್ತು ಡ್ರಾಪ್‌ ಪ್ರದೇಶದ ಛಾವಣಿ ಕುಸಿದಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ನೈಋತ್ಯ ಮಾನ್ಸೂನ್ ರಾಜ್ಯಕ್ಕೆ ಮತ್ತಷ್ಟು ಪ್ರವೇಶಿಸುತ್ತಿದ್ದಂತೆ ಗುಜರಾತ್‌ನಲ್ಲಿ ಭಾರಿ ಮಳೆಯಾಗುತ್ತಿದೆ.

VISTARANEWS.COM


on

Heavy Rain
Koo

ಗಾಂಧಿನಗರ: ಶುಕ್ರವಾರ ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 1ರ ಮೇಲ್ಛಾವಣಿ ಕಾರುಗಳ ಮೇಲೆ ಕುಸಿದು ಬಿದ್ದು ಓರ್ವ ಮೃತಪಟ್ಟ ಘಟನೆ ಹಸಿಯಾಗಿರುವಾಗಲೇ ಗುಜರಾತ್‌ನಲ್ಲಿಯೂ ಇಂತಹದ್ದೇ ಘಟನೆ ನಡೆದಿದೆ. ಶನಿವಾರ ಸುರಿದ ಭಾರೀ ಮಳೆ (Heavy Rain)ಗೆ ರಾಜ್‌ಕೋಟ್‌ ವಿಮಾನ ನಿಲ್ದಾಣ (Rajkot Airport)ದ ಪ್ರಯಾಣಿಕರ ಪಿಕಪ್‌ ಮತ್ತು ಡ್ರಾಪ್‌ ಪ್ರದೇಶದ ಛಾವಣಿ ಕುಸಿದಿದೆ (Canopy Collapses). ಮೂಲಗಳ ಪ್ರಕಾರ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಏತನ್ಮಧ್ಯೆ ನೈಋತ್ಯ ಮಾನ್ಸೂನ್ ರಾಜ್ಯಕ್ಕೆ ಮತ್ತಷ್ಟು ಪ್ರವೇಶಿಸುತ್ತಿದ್ದಂತೆ ಗುಜರಾತ್‌ನಲ್ಲಿ ಭಾರಿ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF)ಯ ಏಳು ತಂಡಗಳನ್ನು ಕಚ್, ರಾಜ್‌ಕೋಟ್‌, ದೇವಭೂಮಿ ದ್ವಾರಕಾ, ಗಿರ್ ಸೋಮನಾಥ್, ಭಾವನಗರ, ನರ್ಮದಾ ಮತ್ತು ವಲ್ಸಾದ್ ಜಿಲ್ಲೆಗಳಲ್ಲಿ ನಿಯೋಜಿಸಲಾಗಿದೆ.

ದಿಲ್ಲಿಯಲ್ಲಿ ಏನಾಗಿತ್ತು?

ಅಧಿಕೃತ ಮೂಲಗಳ ಪ್ರಕಾರ ಶುಕ್ರವಾರ ದಿಲ್ಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಛಾವಣಿ ಶೀಟ್‌ ಮತ್ತು ಬೀಮ್‌ ಕುಸಿದು ಬಿದ್ದಿದ್ದು, ಪಾರ್ಕಿಂಗ್‌ ಏರಿಯಾದಲ್ಲಿದ್ದ ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿದ್ದವು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಘಟನೆ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್‌ ಮೋಹನ್‌ ನಾಯ್ಡು ಪ್ರತಿಕ್ರಿಯಿಸಿದ್ದು, ʼʼದಿಲ್ಲಿ ವಿಮಾನ ನಿಲ್ದಾಣದಲ್ಲಿ ನಡೆದಿರುವ ಘಟನೆ ಖುದ್ದು ಪರಿಶೀಲನೆ ನಡೆಸಲಾಗುತ್ತಿದೆ. ಗಾಯಾಳುಗಳನ್ನು ದಿಲಿ ಆಸ್ಪತ್ರೆಗೆ ದಾಖಲಿಸಲಾಗಿದೆʼʼ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಅವರು ಮೃತರ ಕುಟುಂಬಕ್ಕೆ 20 ಲಕ್ಷ ರೂ., ಸಣ್ಣಪುಟ್ಟ ಗಾಯಗೊಂಡವರಿಗೆ ತಲಾ 3 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.

ರಣಭೀಕರ ಮಳೆಗೆ ದಿಲ್ಲಿ ತತ್ತರ

ದಿಲ್ಲಿಯಲ್ಲಿಯೂ ಭಾರೀ ಮಳೆಯಾಗುತ್ತಿದೆ. ರಸ್ತೆ, ಮನೆಗಳಿಗೆ ನೀರು ನುಗ್ಗಿದ್ದು, ಜನ ಸಂಚಾರ ಅಸ್ತವ್ಯಸ್ತಗೊಂಡಿದೆ. ದಿಲ್ಲಿಯ ವಿವಿಧ ರಸ್ತೆಗಳಲ್ಲಿ ಟ್ರಾಫಿಕ್‌ ಸಮಸ್ಯೆ ಉಂಟಾಗಿತ್ತು. ಸದ್ಯ ಭಾರೀ ಮಳೆಯ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಆರೆಂಹ್‌ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ: Delhi Rain: ಕುಸಿದು ಬಿದ್ದ ದಿಲ್ಲಿ ಏರ್‌ಪೋರ್ಟ್‌ ಛಾವಣಿ- ಒಬ್ಬ ಬಲಿ, 5 ಮಂದಿಗೆ ಗಂಭೀರ ಗಾಯ; ಕಾರುಗಳು ನಜ್ಜುಗುಜ್ಜು

Continue Reading
Advertisement
Arshdeep Singh
ಕ್ರೀಡೆ3 mins ago

Arshdeep Singh : ಫೈನಲ್​ ಪಂದ್ಯದಲ್ಲಿ ಅರ್ಶ್​ದೀಪ್​ ಸಿಂಗ್​ಗೆ ಇದೆ ದಾಖಲೆ ಬರೆಯುವ ಅವಕಾಶ

International Mud Day
ಫ್ಯಾಷನ್14 mins ago

International Mud Day: ಆರೋಗ್ಯ, ಸೌಂದರ್ಯದ ಪಾಲಿಗೆ ಹೊನ್ನು ಈ ಮಣ್ಣು!

Physical relationship
ವಿದೇಶ32 mins ago

Physical relationship: ಕೈದಿ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ್ದ ಮಹಿಳಾ ಜೈಲಾಧಿಕಾರಿ ಬಗ್ಗೆ ಶಾಕಿಂಗ್‌ ವಿಚಾರ ಬಯಲು

Actor Darshan does not need counseling says by shamitha malnad
ಸ್ಯಾಂಡಲ್ ವುಡ್37 mins ago

Actor Darshan: ದಚ್ಚು ಪರಿಸ್ಥಿತಿಗೆ ಪವಿತ್ರಾ ಕಾರಣ ಅನ್ನೋಕಾಗಲ್ಲ; ದರ್ಶನ್‌ಗೆ ಕೌನ್ಸೆಲಿಂಗ್‌ ಅಗತ್ಯ ಇಲ್ಲ ಎಂದ ಖ್ಯಾತ ಗಾಯಕಿ!

IND vs SA Final
ಕ್ರೀಡೆ49 mins ago

IND vs SA Final: ರಾಮನಾಮ ಸ್ಮರಣೆ ಮಾಡಿ ಭಾರತ ವಿರುದ್ಧ ಫೈನಲ್​ ಆಡಲಿದ್ದಾರೆ ದಕ್ಷಿಣ ಆಫ್ರಿಕಾ ಕ್ರಿಕೆಟಿಗ

karnataka weather Forecast
ಮಳೆ49 mins ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

Road Accident
ಕರ್ನಾಟಕ52 mins ago

Road Accident: ಮುಧೋಳ ಬಳಿ ಶಾಲಾ ಬಸ್‌ ಹರಿದು 4 ವರ್ಷದ ಬಾಲಕ ಸಾವು

T20 World Cup Final
ಪ್ರಮುಖ ಸುದ್ದಿ56 mins ago

T20 World Cup Final : ಭಾರತ ತಂಡದ ಗೆಲುವಿಗಾಗಿ ವಿಶ್ವ ಪ್ರಸಿದ್ಧ ಸಿದ್ಧಿವಿನಾಯಕ ದೇಗುದಲ್ಲಿ ವಿಶೇಷ ಪೂಜೆ

Manvita Kamath One and Half cinema song out
ಸ್ಯಾಂಡಲ್ ವುಡ್58 mins ago

Manvita Kamath: ಮದುವೆ ಆದ ಒಂದು ತಿಂಗಳ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ʻಟಗರು ಪುಟ್ಟಿʼ!

Viral Video
Latest1 hour ago

Viral Video: ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ! ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ49 mins ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ7 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ23 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌