Election Results 2024: ಪಶ್ಚಿಮ ಬಂಗಾಳದಲ್ಲಿ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್​ಗೂ ಜಯಭೇರಿ - Vistara News

ಕ್ರಿಕೆಟ್

Election Results 2024: ಪಶ್ಚಿಮ ಬಂಗಾಳದಲ್ಲಿ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್​ಗೂ ಜಯಭೇರಿ

Election Results 2024: ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಕಾರ, ಟಿಎಂಸಿ ಅಭ್ಯರ್ಥಿ ಕೀರ್ತಿ ಆಜಾದ್ 7,20,667 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ದಿಲೀಪ್ ಘೋಷ್ 5,82,686 ಮತಗಳನ್ನು ಪಡೆದರು. ಈ ಮೂಲಕ 1,37,981 ಮತಗಳ ಅಂತರದಿಂದ ಆಜಾದ್​ ಗೆಲುವು ಸಾಧಿಸಿದರು.

VISTARANEWS.COM


on

Election Results 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ(West Bengal) ಯೂಸುಫ್ ಪಠಾಣ್ ಮಾತ್ರವಲ್ಲದೆ ಮತ್ತೋರ್ವ ಭಾರತದ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್(Kirti Azad) ಕೂಡ ಟಿಎಂಸಿ(TMC) ಪರ ಗೆಲುವು ಕಂಡಿದ್ದಾರೆ. ಬರ್ಧಮಾನ್-ದುರ್ಗಾಪುರ ಕ್ಷೇತ್ರದಲ್ಲಿ ಕಣಕ್ಕಿಳಿದ್ದ ಅವರು ಬಿಜೆಪಿ ಅಭ್ಯರ್ಥಿ ದಿಲೀಪ್ ಘೋಷ್(Dilip Ghosh) ಅವರನ್ನು ಸೋಲಿಸುವಲ್ಲಿ(Election Results 2024) ಯಶಸ್ವಿಯಾಗಿದ್ದಾರೆ.

ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಕಾರ, ಟಿಎಂಸಿ ಅಭ್ಯರ್ಥಿ ಕೀರ್ತಿ ಆಜಾದ್ 7,20,667 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ದಿಲೀಪ್ ಘೋಷ್ 5,82,686 ಮತಗಳನ್ನು ಪಡೆದರು. ಈ ಮೂಲಕ 1,37,981 ಮತಗಳ ಅಂತರದಿಂದ ಆಜಾದ್​ ಗೆಲುವು ಸಾಧಿಸಿದರು. ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್ ಈ ಹಿಂದೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಪಕ್ಷವನ್ನು ಪ್ರತಿನಿಧಿಸಿದ್ದರು. ನವೆಂಬರ್ 2021ರಲ್ಲಿ ಟಿಎಂಸಿ ಪಕ್ಷವನ್ನು ಸೇರಿದರು. ಇದೀಗ ಲೋಕ ಸಮರ ಗೆದ್ದು ಬೀಗಿದ್ದಾರೆ.

85 ಸಾವಿರ ಮತಗಳ ಅಂತರದಿಂದ ಗೆದ್ದು ಬೀಗಿದ ಪಠಾಣ್


ಯೂಸುಫ್ ಪಠಾಣ್(Yusuf Pathan) ಅವರು ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದಾರೆ. ಯೂಸುಫ್ ಪಠಾಣ್ 5,18,066 ಮತಗಳನ್ನು ಪಡೆದರೆ, ತಮ್ಮ ಸಮೀಪದ ಪ್ರತಿಸ್ಪರ್ಧಿ ರಂಜನ್ ಚೌಧರಿ 4,32,340 ಮತಗಳನ್ನು ಮಾತ್ರ ಪಡೆದರು. ಈ ಮೂಲಕ ಯೂಸುಫ್ ಪಠಾಣ್ 85,726 ಮತಗಳ ಅಂತರದಿಂದ ಗೆದ್ದು ಬೀಗಿದರು.

ಇದನ್ನೂ ಓದಿ AP Election Results 2024: ಆಂಧ್ರದಲ್ಲಿ ಮತ್ತೊಮ್ಮೆ ಟಿಡಿಪಿ ಮ್ಯಾಜಿಕ್‌; ಆಡಳಿತ ವಿರೋಧಿ ಅಲೆಗೆ ಕೊಚ್ಚಿಹೋದ ಜಗನ್ ಮೋಹನ್ ರೆಡ್ಡಿ

ಗೆಲುವಿನ ಬಳಿಕ ಮಾತನಾಡಿದ ಯೂಸುಫ್, ನನಗೆ ಸಂತೋಷವಾಗಿದೆ, ಇದು ನನ್ನ ಬೆಂಬಲಿಗರ ಮತ್ತು ಕಾರ್ಯಕರ್ತರ ಗೆಲುವು. ಇದಕ್ಕಾಗಿ ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಜತೆ ಈಗಾಗಲೇ ಮಾತುಕತೆ ನಡೆಸಿದ್ದೇನೆ. ನಾನು ಮೊದಲು ಕ್ರೀಡಾ ಅಕಾಡೆಮಿ ಮಾಡುತ್ತೇನೆ, ಇದರಿಂದ ಯುವ ಪ್ರತಿಭೆಗಳು ವೃತ್ತಿಜೀವನ ಕಟ್ಟಿಕೊಳ್ಳಬಹುದು. ಕೈಗಾರಿಕೆಗಳಿಗೂ ಕೆಲಸ ಕೊಡಿಸುತ್ತೇನೆ. ನಾನು ಇಲ್ಲಿಯೇ ವಾಸಿಸುತ್ತೇನೆ ಮತ್ತು ನನ್ನ ಕ್ಷೇತ್ರದ ಜನರ ಸೇವೆಗಾಗಿ ಸದಾ ಸಿದ್ಧನಿರುತ್ತೇನೆ” ಎಂದು ಪಠಾಣ್​ ಹೇಳಿದರು.

400 ಸೀಟ್‌ ಗಳಿಸುವ ಎನ್‌ಡಿಎ ಕನಸು ನುಚ್ಚು ನೂರಾದದ್ದು ಹೇಗೆ?


ಉತ್ತರ ಪ್ರದೇಶದ ಜಾತಿ ಸಮೀಕರಣ

ಬಿಜೆಪಿ ಈ ಬಾರಿ ಉತ್ತರ ಪ್ರದೇಶದಲ್ಲಿ ಭಾರಿ ಹೊಡೆತ ತಿಂದಿದೆ. ಕಳೆದ ಸಲಕ್ಕಿಂತ 30ಕ್ಕೂ ಅಧಿಕ ಸ್ಥಾನಗಳನ್ನು ಕಳೆದುಕೊಂಡಿದೆ. ಇದಕ್ಕೆ ಈ ರಾಜ್ಯದ ಜಾತಿ ರಾಜಕೀಯವನ್ನು ಬಿಜೆಪಿ ಕಡೆಗಣಿಸಿದ್ದೇ ಕಾರಣ ಎನ್ನಲಾಗುತ್ತಿದೆ. ರಾಮ ಮಂದಿರದ ಅಲೆ ಏರಿ ಬಂದ ಬಿಜೆಪಿ, ಹಿಂದುತ್ವದ ಮೂಲಕ ಗೆಲ್ಲಬಹುದು ಎಂದುಕೊಂಡಿತು. ಆದರೆ ಇಲ್ಲಿ ಹಿಂದುತ್ವ ರಾಜಕಾರಣಕ್ಕಿಂತಲೂ ಜಾತಿ ರಾಜಕಾರಣದ ಸಮೀಕರಣವೇ ಹೆಚ್ಚು ಕೆಲಸ ಮಾಡಿದೆ. ಈ ಸಲ ದಲಿತ ಮತಗಳು ಸಾಮೂಹಿಕವಾಗಿ ಎಸ್‌ಪಿ ಸೇರಿದಂತೆ ಇಂಡಿಯಾ ಬ್ಲಾಕ್‌ನತ್ತ ತಿರುಗಿದೆ ಎನ್ನಲಾಗುತ್ತಿದೆ. ಹಾಗೆಯೇ ಮುಸ್ಲಿಂ ಮತಗಳೂ ಸಾಂಪ್ರದಾಯಿಕವಾಗಿ ಎಸ್‌ಪಿ ಹಾಗೂ ಬಿಎಸ್‌ಪಿಯ ಪಾಲಾದವು. ಇದು ಬಿಜೆಪಿಗೆ ನಷ್ಟ ಉಂಟುಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Virat Kohli: ಈ ಗೆಲುವು ನನ್ನದಷ್ಟೇ ಅಲ್ಲ, ನಿನ್ನದು ಕೂಡ ಎಂದು ಪತ್ನಿಗೆ ಪ್ರೀತಿ ವ್ಯಕ್ತಪಡಿಸಿದ ವಿರಾಟ್‌ ಕೊಹ್ಲಿ!

Virat Kohli: 17 ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup 2024)​ ಗೆದ್ದ ಟೀಮ್​ ಇಂಡಿಯಾಗೆ ಹಲವಾರು ಸೆಲೆಬ್ರಿಟಿಗಳು ಭಾರತೀಯ ಕ್ರಿಕೆಟ್ ತಂಡಕ್ಕೆ ತಮ್ಮ ಶುಭಾಶಯಗಳನ್ನು ಸಲ್ಲಿಸಿದರು. ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದರು. ಇದೀಗ ವಿರಾಟ್ ಕೊಹ್ಲಿ ತಮ್ಮ ಪತ್ನಿ, ನಟಿ ಅನುಷ್ಕಾ ಶರ್ಮಾಗೆ ಕೃತಜ್ಞತೆ ಮತ್ತು ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

irat Kohli's Heartfelt Tribute to Anushka Sharma
Koo

ಬೆಂಗಳೂರು: ವಿರಾಟ್‌ ಕೊಹ್ಲಿ (Virat Kohli) ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿರುವಂತಹ ವ್ಯಕ್ತಿ. ಆ ವ್ಯಕ್ತಿಗೂ ಸ್ಫೂರ್ತಿಯಾಗಿರುವವರಿದ್ದಾರೆ. ಅವರು ಮತ್ತಿನ್ಯಾರೂ ಅಲ್ಲ, ಅವರ ಪತ್ನಿ, ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ. 17 ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup 2024)​ ಗೆದ್ದ ಟೀಮ್​ ಇಂಡಿಯಾಗೆ ಹಲವಾರು ಸೆಲೆಬ್ರಿಟಿಗಳು ಭಾರತೀಯ ಕ್ರಿಕೆಟ್ ತಂಡಕ್ಕೆ ತಮ್ಮ ಶುಭಾಶಯಗಳನ್ನು ಸಲ್ಲಿಸಿದರು. ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದರು. ಇದೀಗ ವಿರಾಟ್ ಕೊಹ್ಲಿ ತಮ್ಮ ಪತ್ನಿ, ನಟಿ ಅನುಷ್ಕಾ ಶರ್ಮಾಗೆ ಕೃತಜ್ಞತೆ ಮತ್ತು ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

ವಿರಾಟ್ ಕೊಹ್ಲಿ ಅವರು ಅನುಷ್ಕಾ ಜತೆ ಇರುವ ಫೋಟೊ ಹಂಚಿಕೊಂಡು ಹೀಗೆ ಬರೆದುಕೊಂಡಿದ್ದಾರೆ. ʻʻನೀನಿಲ್ಲದೆ ಇದೆಲ್ಲವೂ ಸಾಧ್ಯವಾಗುತ್ತಿರಲಿಲ್ಲ. ನನ್ನನ್ನು ವಿನಮ್ರವಾಗಿ ಇರಲು ಪ್ರಯತ್ನಿಸಿರುವೆ. ನಾನು ನಿಮಗಾಗಿ ಹೆಚ್ಚು ಕೃತಜ್ಞರಾಗಿರಲು ಸಾಧ್ಯವಿಲ್ಲ. ಈ ಗೆಲುವು ನನ್ನದಷ್ಟೇ ನಿನ್ನದು ಕೂಡ. ಧನ್ಯವಾದಗಳು ಮತ್ತು ನಾನು ನಿನ್ನನ್ನು ತುಂಬ ಪ್ರೀತಿಸುತ್ತೇನೆ ʼʼಎಂದು ಬರೆದುಕೊಂಡಿದ್ದಾರೆ.

ನಿನ್ನೆಯಷ್ಟೇ ಅನುಷ್ಕಾ ಶರ್ಮಾ ಅವರು ಪೋಸ್ಟ್‌ನಲ್ಲಿ ʻʻನಮ್ಮ ಮಗಳ ದೊಡ್ಡ ಕಾಳಜಿ ಏನೆಂದರೆ, ಎಲ್ಲಾ ಆಟಗಾರರು ಟಿವಿಯಲ್ಲಿ ಅಳುತ್ತಿರುವುದನ್ನು ನೋಡಿದ ನಂತರ ಅವರನ್ನು ತಬ್ಬಿಕೊಳ್ಳಲು ಯಾರಾದರೂ ಇದ್ದರೆ ಎಂದು. ಆಗ ನಾನು ಅಂದೆ ..ಹೌದು, ಅವರನ್ನು 1.5 ಬಿಲಿಯನ್ ಜನರು ತಬ್ಬಿಕೊಂಡರು ಎಂದೆ. ಎಂತಹ ಅದ್ಭುತ ಗೆಲುವು ಮತ್ತು ಎಂತಹ ಪೌರಾಣಿಕ ಸಾಧನೆ!! ಚಾಂಪಿಯನ್ಸ್ – ಅಭಿನಂದನೆಗಳು!! ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ: Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ಕಂಪ್ಲೀಟ್‌ ಡಿಟೇಲ್ಸ್‌!

ಮತ್ತೊಂದು ಪೋಸ್ಟ್‌ನಲ್ಲಿ, ಅನುಷ್ಕಾ ಅವರು ವಿರಾಟ್ ಮುಗುಳ್ನಕ್ಕು ಟ್ರೋಫಿಯನ್ನು ಎತ್ತುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದರು.

ರೋಚಕ ಪಂದ್ಯ ಗೆದ್ದ ಭಾರತ

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಎರಡನೇ ಎಸೆತವನ್ನು ರಬಾಡಾ ಬೌಂಡರಿ ಬಾರಿಸಿದರು. ಮೂರನೇ ಎಸೆತದಲ್ಲಿ ಒಂದು ರನ್ ಬಂತು. ಕೊನೆಯ ಎರಡು ಎಸೆತಗಳಲ್ಲಿ 10 ರನ್ ಅಗತ್ಯವಿತ್ತು. ಹಾರ್ದಿಕ್ ಒಂದು ವೈಡ್ ಎಸೆದರು. ರಬಾಡಾ ಕ್ಯಾಚಿತ್ತು ನಿರ್ಗಮಿಸಿದರು. ಕೊನೆಯ ಎಸೆತದಲ್ಲಿ ಒಂದು ರನ್ ಮಾತ್ರ ಬಂತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

Continue Reading

ಪ್ರಮುಖ ಸುದ್ದಿ

T20 World Cup 2024 : ವೆಸ್ಟ್​ ಇಂಡೀಸ್​ನಲ್ಲಿ ಅಪಾಯಕಾರಿ ಚಂಡಮಾರುತದಲ್ಲಿ ಸಿಲುಕಿಕೊಂಡ ಚಾಂಪಿಯನ್ ಭಾರತ ತಂಡ

T20 World Cup 2024: ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ಭಾನುವಾರ ಬೆಳಿಗ್ಗೆ ಗ್ರೇಡ್​ 3 ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಭಾನುವಾರ ಬೆಳಿಗ್ಗೆಯೇ ಗಾಳಿಯು ಗಂಟೆಗೆ 120 ಕಿಲೋಮೀಟರ್​ನಷ್ಟಿತ್ತು. ಚಂಡಮಾರುತವು ಕ್ಷಣದಿಂದ ಕ್ಷಣಕ್ಕೆ ಬಲಗೊಳ್ಳುತ್ತಿದೆ.

VISTARANEWS.COM


on

T20 World Cup 2024
Koo

ಬೆಂಗಳೂರು: ದ್ವೀಪಗಳ ರಾಷ್ಟ್ರ ವೆಸ್ಟ್​​ ಇಂಡೀಸ್​ ಗೆ ಅತ್ಯಂತ ಅಪಾಯಕಾರಿ ಬೆರಿಲ್ ಚಂಡಮಾರುತ ಅಪ್ಪಳಿಸುತ್ತಿದೆ. ಹೀಗಾಗಿ ಟೀಮ್ ಇಂಡಿಯಾ ಸದಸ್ಯರು ಹಲವಾರು ದಿನಗಳವರೆಗೆ ಬಾರ್ಬಡೋಸ್​ನಲ್ಲಿ ಸಿಲುಕಿ ಹಾಕಿಕೊಳ್ಳಬಹುದು. ಶನಿವಾರ (ಜೂನ್ 29) ನಡೆದ ವಿಶ್ವ ಕಪ್​ ಫೈನಲ್​​ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ರೋಹಿತ್ ಶರ್ಮಾ ಮತ್ತು ಅವರ ಬಳಗವು ಐಸಿಸಿ ಟಿ 20 ವಿಶ್ವಕಪ್ 2024 ಅನ್ನು (T20 World Cup 2024) ಗೆದ್ದುಕೊಂಡಿತ್ತು. ಅವರೆಲ್ಲರೂ ತಕ್ಷಣವೇ ಭಾರತಕ್ಕೆ ಮರಳಿ ಸಂಭ್ರಮಾಚರಣೆ ಮಾಡಬೇಕಾಗಿತ್ತು. ಆದರೆ, ಅಪಾಯಕಾರಿ ಚಂಡ ಮಾರುತ ಅವರ ಆಸೆಗೆ ತಣ್ಣೀರು ಎರಚಿದೆ. ಅವರು ತಡವಾಗಿ ಭಾರತ ಸೇರಬೇಕಾಗಿದೆ.

ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ಭಾನುವಾರ ಬೆಳಿಗ್ಗೆ ಗ್ರೇಡ್​ 3 ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಭಾನುವಾರ ಬೆಳಿಗ್ಗೆಯೇ ಮಾರುತದ ಗಂಟೆಗೆ 120 ಕಿಲೋಮೀಟರ್​ನಷ್ಟಿತ್ತು. ಚಂಡಮಾರುತವು ಕ್ಷಣದಿಂದ ಕ್ಷಣಕ್ಕೆ ಬಲಗೊಳ್ಳುತ್ತಿದೆ.

ಪೋರ್ಟೊ ರಿಕೊದ ಆಗ್ನೇಯ ಮತ್ತು ವೆನೆಜುವೆಲಾದ ಉತ್ತರಕ್ಕೆ ವಿಂಡ್ವರ್ಡ್ ದ್ವೀಪಗಳಿಗೆ ಬೆರಿಲ್ ಚಂಡಮಾರುತ ಅಪ್ಪಳಿಸಲಿದೆ ನಿರೀಕ್ಷೆಯಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ರಾತ್ರಿ 8:30 ರ ಹೊತ್ತಿಗೆ ಬೆರಿಲ್ ಬಾರ್ಬಡೋಸ್​​ನ ಪೂರ್ವ-ಆಗ್ನೇಯಕ್ಕೆ ಸುಮಾರು 355 ಮೈಲಿ ದೂರದಲ್ಲಿ ಸಾಗಲಿದೆ. ಮುಂಬರುವ ಗಂಟೆಗಳಲ್ಲಿ ಪರಿಸ್ಥಿತಿ ತೀವ್ರವಾಗಬಹುದು ಎಂದು ವರದಿಯಾಗಿದೆ.

ಕಠಿಣ ಪರಿಸ್ಥಿತಿಯಲ್ಲಿ ಟೀಮ್ ಇಂಡಿಯಾ ಸದಸ್ಯರು ದ್ವೀಪವನ್ನು ತೊರೆಯಲು ಸಾಧ್ಯವಾಗದು. ಭಾನುವಾರ, ಆಜ್ ತಕ್​ನ ವಿಕ್ರಾಂತ್ ಗುಪ್ತಾ ಪರಿಸ್ಥಿತಿಯ ಬಗ್ಗೆ ವಿವರಣೆ ನೀಡಿದ್ದಾರೆ. ಎಲ್ಲರೂ ಸದ್ಯಕ್ಕೆ ಬಾರ್ಬಡೋಸ್​ನಲ್ಲಿ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.

ವಿಮಾನಗಳ ಹಾರಾಟ ರದ್ದು

ಈಗಾಗಲೇ ವಿಮಾನಗಳನ್ನು ರದ್ದುಪಡಿಸಲಾಗಿದೆ. ವಿಮಾನ ನಿಲ್ದಾಣವನ್ನು ಶೀಘ್ರದಲ್ಲೇ ಮುಚ್ಚಲಾಗುವುದು ಎಂದು ಮೂಲಗಳು ತಿಳಿಸಿವೆ. ಭಾರತೀಯ ತಂಡವು ದ್ವೀಪದಲ್ಲಿ ಸಿಲುಕಿಕೊಳ್ಳುತ್ತದೆ ಮತ್ತು ಪರಿಸ್ಥಿತಿ ಸುಧಾರಿಸಿದ ನಂತರವೇ ಹೊರಡಲು ಸಾಧ್ಯವಾಗುತ್ತದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Rohit Sharma : ತಲೆ ಪಕ್ಕದಲ್ಲೇ ಟ್ರೋಫಿ ಇಟ್ಟುಕೊಂಡು ನಿದ್ದೆ ಮಾಡಿದ ರೋಹಿತ್ ಶರ್ಮಾ

“ಬೆರಿಲ್ ಚಂಡಮಾರುತವು ಇಂದು ರಾತ್ರಿ ಅಥವಾ ಸೋಮವಾರ ಮುಂಜಾನೆ ಬಾರ್ಬಡೋಸ್​ಗೆ ಅಪ್ಪಳಿಸಲಿದೆ. ಭೂಕುಸಿತವು ತೀವ್ರವಾಗಿರಲಿದೆ. ಬಾರ್ಬಡೋಸ್ ವಿಮಾನ ನಿಲ್ದಾಣವನ್ನು ಮುಚ್ಚಲಾಗುವುದು ಮತ್ತು ವಿಮಾನಗಳನ್ನು ರದ್ದುಗೊಳಿಸಲಾಗುತ್ತಿದೆ. ಚಂಡಮಾರುತ ಕಡಿಮೆಯಾಗಿ ವಿಮಾನ ನಿಲ್ದಾಣ ಪುನರಾರಂಭವಾಗುವವರೆಗೂ ಭಾರತ ತಂಡವೂ ಇಲ್ಲಿ ಸಿಲುಕಿಕೊಳ್ಳಲಿದೆ. ನಾವೂ ಇಲ್ಲಿ ಸಿಲುಕಿಕೊಂಡಿದ್ದೇವೆ. ಎಲ್ಲಾ ಹೊರಹೋಗುವ ವಿಮಾನಗಳನ್ನು ರದ್ದುಗೊಳಿಸಲಾಗುತ್ತಿದೆ” ಎಂದು ಗುಪ್ತಾ ವಿವರಿಸಿದ್ದಾರೆ.

ಟೀಂ ಇಂಡಿಯಾಗೆ ಐತಿಹಾಸಿಕ ಗೆಲುವು

ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಮಣಿಸಿದ ಭಾರತ 2007ರ ಬಳಿಕ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ನಂತರ ಎರಡು ಬಾರಿ ಪಂದ್ಯಾವಳಿಯನ್ನು ಗೆದ್ದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ವಿರಾಟ್ ಕೊಹ್ಲಿ 76 ರನ್ ಗಳಿಸಿದರೆ, ಅಕ್ಷರ್ ಪಟೇಲ್ 47 ರನ್ ಗಳಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 169 ರನ್​ಗೆ ಹೋರಾಟ ಮುಗಿಸಿತು

Continue Reading

ಪ್ರಮುಖ ಸುದ್ದಿ

Rohit Sharma : ತಲೆ ಪಕ್ಕದಲ್ಲೇ ಟ್ರೋಫಿ ಇಟ್ಟುಕೊಂಡು ನಿದ್ದೆ ಮಾಡಿದ ರೋಹಿತ್ ಶರ್ಮಾ

Rohit Sharma: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟೂರ್ನಿಯುದ್ದಕ್ಕೂ ಬ್ಯಾಟಿಂಗ್​ ಮತ್ತು ನಾಯಕನಾಗಿ ತಮ್ಮ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಅದೇ ರೀತಿ ತಂಡವನ್ನು ಪ್ರಶಸ್ತಿ ಗೆಲುವಿನತ್ತ ಕೊಂಡೊಯ್ದರು. ಐಸಿಸಿ ವಿಶ್ವಕಪ್ 2023 ರ ಫೈನಲ್​​ನಲ್ಲಿ ತಂಡವು ಸೋತ ನಂತರ, ರೋಹಿತ್ ಬೇಸರಗೊಂಡಿದ್ದರು. ಈಗ ಕೆಲವೇ ತಿಂಗಳುಗಳ ನಂತರ ಅವರು ಮತ್ತೆ ಕಣ್ಣೀರು ಹಾಕಿದ್ದಾರೆ. ಅದು ಆನಂದ ಭಾಷ್ಪ.

VISTARANEWS.COM


on

Rohit Sharma
Koo

ಬೆಂಗಳೂರು: 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ (T20 World Cup 2024) ಭಾರತ ತಂಡವನ್ನು ಮುನ್ನಡೆಸಿದ ರೋಹಿತ್ ಶರ್ಮಾ (Rohit Sharma) ಚಾಂಪಿಯನ್ ಪಟ್ಟ ಗೆದ್ದ ಮರುದಿನ (ವೆಸ್ಟ್​ ಇಂಡೀಸ್​ನಲ್ಲಿ ಈಗ ಬೆಳಗ್ಗಿನ ಅವಧಿ) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ತಂಡದ ನಾಯಕ ಭಾನುವಾರ ಜೂನ್​ 29ರಂದು ಪಂದ್ಯ ಮುಗಿದು ಕಪ್ ಗೆದ್ದ ಬಳಿಕ ಅದನ್ನು ತಮ್ಮ ಹಾಸಿಗೆಯ ಪಕ್ಕದಲ್ಲಿ ತಲೆ ಬಳಿಯೇ ಟ್ರೋಫಿಯೊಂದಿಗೆ ಇರುವ ಚಿತ್ರವನ್ನು ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತ ತಂಡ ಬಾರ್ಬಡೋಸ್​​ನ ಬ್ರಿಜ್​ಟೌನ್ ಕೆನ್ಸಿಂಗ್ಟನ್ ಓವಲ್​​ನಲ್ಲಿ ಶನಿವಾರ (ಜೂನ್ 29) ನಡೆದ ಫೈನಲ್​​ನಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್​ಗಳಿಂದ ಸೋಲಿಸುವ ಕ್ರಿಕೆಟ್ ತಂಡವು ಟಿ 20 ವಿಶ್ವಕಪ್ 2024 ಅನ್ನು ಗೆದ್ದುಕೊಂಡಿತು.

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟೂರ್ನಿಯುದ್ದಕ್ಕೂ ಬ್ಯಾಟಿಂಗ್​ ಮತ್ತು ನಾಯಕನಾಗಿ ತಮ್ಮ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಅದೇ ರೀತಿ ತಂಡವನ್ನು ಪ್ರಶಸ್ತಿ ಗೆಲುವಿನತ್ತ ಕೊಂಡೊಯ್ದರು. ಐಸಿಸಿ ವಿಶ್ವಕಪ್ 2023 ರ ಫೈನಲ್​​ನಲ್ಲಿ ತಂಡವು ಸೋತ ನಂತರ, ರೋಹಿತ್ ಬೇಸರಗೊಂಡಿದ್ದರು. ಈಗ ಕೆಲವೇ ತಿಂಗಳುಗಳ ನಂತರ ಅವರು ಮತ್ತೆ ಕಣ್ಣೀರು ಹಾಕಿದ್ದಾರೆ. ಅದು ಆನಂದ ಭಾಷ್ಪ.

2024 ರ ಟಿ 20 ವಿಶ್ವಕಪ್​ನಲ್ಲಿ ಭಾರತವು ರೋಚಕ ಪ್ರದರ್ಶನ ನೀಡಿತ್ತು. ಅವರು ಪಂದ್ಯಾವಳಿಯುದ್ದಕ್ಕೂ ಅಜೇಯರಾಗಿ ಉಳಿದಿದ್ದರು. ಬಳಿಕ ಸೋಲಿನ ದವಡೆಯಿಂದ ಪಾರಾಗಿ ಫೈನಲ್ ಪಂದ್ಯ ಗೆದ್ದಿದ್ದರು. ಅರ್ಶ್​ದೀಪ್​ ಸಿಂಗ್, ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಂತಹ ಬೌಲರ್​ಗಳು ಭಾರತದ ಭಾರತದ ನಾಯಕನ ನಂಬಿಕೆ ಉಳಿಸಿದ್ದಾರೆ.

ಗೆಲುವಿನ ನಂತರ ಭಾರತೀಯ ಆಟಗಾರ ಭಾವುಕರಾಗಿದ್ದರು. ನಂತರ ಸಾಮಾಜಿಕ ಮಾಧ್ಯಮ ಪೋಸ್ಟ್​ಗಳಲ್ಲಿ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದ್ದರು. ಹಾರ್ದಿಕ್ ಪಾಂಡ್ಯ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ಇತರರು ಸಂತೋಷದ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ರೋಹಿತ್ ಶರ್ಮಾ ಗೆಲುವಿನ ನಂತರ ಸಾಮಾಜಿಕ ಮಾಧ್ಯಮದಲ್ಲಿ ಏನನ್ನೂ ಪೋಸ್ಟ್ ಮಾಡದ ಕಾರಣ ಮೌನವಾಗಿದ್ದರು. ಅನೇಕರು ನಾಯಕನ ಪೋಸ್ಟ್​​ಗಾಗಿ ಕಾಯುತ್ತಿದ್ದರು. ಈಗ ಅವರು ಟಿ 20 ವಿಶ್ವಕಪ್ 2024 ಗೆದ್ದ ನಂತರ ಅವರು ಗುಡ್ ಮಾರ್ನಿಂಗ್​ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಖುಷಿ ಪಟ್ಟಿದ್ದಾರೆ.

ಇದನ್ನೂ ಓದಿ: T20 World Cup 2024 : ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಸಿಗಲಿದೆ ಪ್ರಧಾನಿ ಮೋದಿಯ ಭರ್ಜರಿ ಆತಿಥ್ಯ

ರೋಹಿತ್ ಶರ್ಮಾ ಟಿ 20 ವಿಶ್ವಕಪ್ ಟ್ರೋಫಿಯೊಂದಿಗೆ ಹಾಸಿಗೆಯ ಮೇಲೆ ತಮ್ಮ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. “ಎಲ್ಲರಿಗೂ ನಮಸ್ಕಾರ” ಎಂಬ ಶೀರ್ಷಿಕೆಯೊಂದಿಗೆ ಅವರು ಕಥೆಯನ್ನು ಹಂಚಿಕೊಂಡಿದ್ದಾರೆ.

Continue Reading

ಪ್ರಮುಖ ಸುದ್ದಿ

T20 World Cup 2024 : ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಸಿಗಲಿದೆ ಪ್ರಧಾನಿ ಮೋದಿಯ ಭರ್ಜರಿ ಆತಿಥ್ಯ

T20 World Cup 2024 : ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ ಹೊರತುಪಡಿಸಿ ಹೆಚ್ಚಿನ ಆಟಗಾರರು ಭಾಗವಹಿಸವ ನಿರೀಕ್ಷೆಯಿದೆ. ಸ್ಯಾಮ್ಸನ್, ಜೈಸ್ವಾಲ್ ಮತ್ತು ದುಬೆ ಮುಂಬರುವ ಜಿಂಬಾಬ್ವೆ ವಿರುದ್ಧದ ಟಿ 20 ಐ ಸರಣಿಗೆ ಭಾರತದ ತಂಡದ ಭಾಗವಾಗಿದ್ದಾರೆ. ಭಾರತ-ಜಿಂಬಾಬ್ವೆ ನಡುವಿನ ಸರಣಿ ಜುಲೈ 6ರಿಂದ ಹರಾರೆಯಲ್ಲಿ ಆರಂಭವಾಗಲಿದೆ. ಅವರು ನೇರವಾಗಿ ವಿಂಡೀಸ್​ನಿಂದ ಅಲ್ಲಿಗೆ ತೆರಳಲಿದ್ದಾರೆ.

VISTARANEWS.COM


on

T20 World Cup
Koo

ನವದೆಹಲಿ: ವೆಸ್ಟ್ ಇಂಡೀಸ್​ನಲ್ಲಿ ನಡೆದ ಟಿ 20 ವಿಶ್ವಕಪ್ (T20 World Cup 2024) ಪ್ರಶಸ್ತಿ ಗೆಲುವಿನ ನಂತರ ದೇಶಕ್ಕೆ ಮರಳಲಿರುವ ಚಾಂಪಿಯನ್ ಆಟಗಾರರಿಗೆ ಪ್ರಧಾನಿ ಮೋದಿ ಭರ್ಜರಿ ಆತಿಥ್ಯ ನೀಡುವ ಸಾಧ್ಯತೆಗಳಿವೆ ಎಂಬುದಾಗಿ ವರದಿಯಾಗಿದೆ. ಅವರೆಲ್ಲರೂ ವೆಸ್ಟ್​​ ಇಂಡೀಸ್​ನಿಂದ ಭಾರತಕ್ಕೆ ಬಂದ ಬಳಿಕ ಮೋದಿಯವನ್ನು ಭೇಟಿಯಾಗಿ ಸಂಭ್ರಮ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂಲಗಳ ಪ್ರಕಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಟೀಮ್ ಇಂಡಿಯಾ ಆಟಗಾರರ ಸಭೆ ಯೋಜಿಸುತ್ತಿದ್ದಾರೆ. ಆಟಗಾರರ ನಿಯೋಗ ಭಾರತದಲ್ಲಿ ಜತೆಯಾದ ಬಳಿಕ ಈ ಭೇಟಿ ಸಂಭವಿಸಲಿದೆ.

ಈ ಸಂಭ್ರಮ ಕೂಟದಲ್ಲಿ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ ಹೊರತುಪಡಿಸಿ ಹೆಚ್ಚಿನ ಆಟಗಾರರು ಭಾಗವಹಿಸವ ನಿರೀಕ್ಷೆಯಿದೆ. ಸ್ಯಾಮ್ಸನ್, ಜೈಸ್ವಾಲ್ ಮತ್ತು ದುಬೆ ಮುಂಬರುವ ಜಿಂಬಾಬ್ವೆ ವಿರುದ್ಧದ ಟಿ 20 ಐ ಸರಣಿಗೆ ಭಾರತದ ತಂಡದ ಭಾಗವಾಗಿದ್ದಾರೆ. ಭಾರತ-ಜಿಂಬಾಬ್ವೆ ನಡುವಿನ ಸರಣಿ ಜುಲೈ 6ರಿಂದ ಹರಾರೆಯಲ್ಲಿ ಆರಂಭವಾಗಲಿದೆ. ಅವರು ನೇರವಾಗಿ ವಿಂಡೀಸ್​ನಿಂದ ಅಲ್ಲಿಗೆ ತೆರಳಲಿದ್ದಾರೆ.

ಶನಿವಾರ ನಡೆದ ಟಿ 20 ವಿಶ್ವಕಪ್ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಏಳು ರನ್​ಗಳ ಜಯ ಸಾಧಿಸಿದ ನಂತರ ಪ್ರಧಾನಿ ಮೋದಿ, ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ನಾಯಕ ರೋಹಿತ್ ಶರ್ಮಾ ಮತ್ತು ಅನುಭವಿ ಬ್ಯಾಟರ್​ ವಿರಾಟ್ ಕೊಹ್ಲಿ ಅವರೊಂದಿಗೆ ಮಾತನಾಡಿದ್ದರು. ಅವರೆಲ್ಲರಿಗೂ ದೇಶದ ಜನತೆಯ ಪರವಾಗಿ ಶುಭಾಶಯ ಹೇಳಿದ್ದರು.

ಇದನ್ನೂ ಓದಿ:Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ಕಂಪ್ಲೀಟ್‌ ಡಿಟೇಲ್ಸ್‌!

ನವದೆಹಲಿ: 2024 ರ ಟಿ 20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ವೆಸ್ಟ್ ಇಂಡೀಸ್ನಿಂದ ಹಿಂದಿರುಗಿದ ನಂತರ ಭಾರತೀಯ ಕ್ರಿಕೆಟ್ ತಂಡವು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಜಿಂಬಾಬ್ವೆ ವಿರುದ್ಧದ ಐದು ಟಿ 20 ಪಂದ್ಯಗಳಿಂದಾಗಿ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ ಮಾತ್ರ ಅಲಭ್ಯರಾಗಿರುವುದರಿಂದ ಹೆಚ್ಚಿನ ಆಟಗಾರರು ಹಾಜರಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಅದಕ್ಕಿಂತ ಹಿಂದೆ ಭಾರತ ಕಪ್​ ಗೆದ್ದ ತಕಷಣ ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್​ನಲ್ಲಿ ಸರಣಿ ಪೋಸ್ಟ್​​ನಲ್ಲಿ ಪಿಎಂ ಮೋದಿ ತಂಡವನ್ನು ಶ್ಲಾಘಿಸಿದ್ದರು.

ಚಾಂಪಿಯನ್ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ

ಐಸಿಸಿ ಪುರುಷರ ಟಿ20 ವಿಶ್ವಕಪ್ 2024ರಲ್ಲಿ (T20 World Cup 2024 ) ಚಾಂಪಿಯನ್ ಪಟ್ಟ ಅಲಂಕರಿಸಿದ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬರೋಬ್ಬರಿ 125 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ. ಬಾರ್ಬಡೋಸ್​​ನಲ್ಲಿ ಶನಿವಾರ ನಡೆದ ವಿಶ್ವ ಕಪ್​ನ ಫೈನಲ್​ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಭಾರತೀಯ ಪುರುಷರ ಕ್ರಿಕೆಟ್ ತಂಡವು ಐಸಿಸಿ ಟ್ರೋಫಿಗಾಗಿ 11 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿತು. ಅಲ್ಲದೇ ಎರಡನೇ ಬಾರಿ ಟಿ20 ವಿಶ್ವ ಕಪ್​ ಗೆದ್ದುಕೊಂಡಿತು. 2007ರಲ್ಲಿ ಧೋನಿ ನೇತೃತ್ವದಲ್ಲಿ ಭಾರತ ತಂಡ ಉದ್ಘಾಟನಾ ಆವೃತ್ತಿಯ ವಿಶ್ವ ಕಪ್​ ಗೆದ್ದುಕೊಂಡಿತ್ತು.

Continue Reading
Advertisement
Rakshit Shetty Visited Koragajja Temple And Prayed
ಸಿನಿಮಾ16 mins ago

Rakshit Shetty: ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ!

Parliament Sessions
ದೇಶ28 mins ago

Parliament Sessions: ಇಂದು ಸಂಸತ್‌ ಕಲಾಪ ಪುನರಾರಂಭ; ʼನೀಟ್‌ʼ ಚರ್ಚೆಗೆ ಪ್ರತಿಪಕ್ಷಗಳ ಪಟ್ಟು ಸಾಧ್ಯತೆ: Live ಇಲ್ಲಿ ನೋಡಿ

Watermelon At Nigh
ಆರೋಗ್ಯ28 mins ago

Watermelon At Night: ಸಂಜೆ 7 ಗಂಟೆಯ ಕಲ್ಲಂಗಡಿ ಹಣ್ಣನ್ನು ತಿನ್ನಲು ಹೋಗಬೇಡಿ!

Off Shoulder Tops Fashion
ಫ್ಯಾಷನ್28 mins ago

Off Shoulder Tops Fashion: ನೀವೂ ಆಫ್‌ ಶೋಲ್ಡರ್‌ ಟಾಪ್‌ ಧರಿಸಬಹುದು! ಆದರೆ ಈ ಎಚ್ಚರಿಕೆ ವಹಿಸಿ

shubham milk price hike
ಪ್ರಮುಖ ಸುದ್ದಿ31 mins ago

Milk Price Hike: ಹಾಲಿನ ದರ 4 ರೂ. ಹೆಚ್ಚಳ? ಶುಭಂ ಗೋಲ್ಡ್‌ ದರ ಏರಿಕೆ

irat Kohli's Heartfelt Tribute to Anushka Sharma
ಕ್ರಿಕೆಟ್38 mins ago

Virat Kohli: ಈ ಗೆಲುವು ನನ್ನದಷ್ಟೇ ಅಲ್ಲ, ನಿನ್ನದು ಕೂಡ ಎಂದು ಪತ್ನಿಗೆ ಪ್ರೀತಿ ವ್ಯಕ್ತಪಡಿಸಿದ ವಿರಾಟ್‌ ಕೊಹ್ಲಿ!

Birla Opus
ವಾಣಿಜ್ಯ49 mins ago

Birla Opus: ಬಿರ್ಲಾ ಪೇಂಟ್ ಜಾಹೀರಾತು ನಿಮಗೂ ಇಷ್ಟ ಆಗಿರಬೇಕಲ್ಲವೇ? ಇದರ ಸಂದೇಶ ಏನು? ಹಿನ್ನೆಲೆ ಏನು? ಕುತೂಹಲಕರ ಮಾಹಿತಿ

Kalki 2898 AD Prabhas Film Hits Jackpot 500 Cr WW In Opening
ಟಾಲಿವುಡ್1 hour ago

Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಕಂಡ ʻಕಲ್ಕಿʼ: ಪ್ರಭಾಸ್‌ ಅಬ್ಬರಕ್ಕೆ ಬಾಕ್ಸ್ ಆಫೀಸ್‌ ಧೂಳೀಪಟ!

hosur airport
ಪ್ರಮುಖ ಸುದ್ದಿ1 hour ago

Hosur Airport: ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಹೊಣೆ ಬಿಐಎಎಲ್‌ಗೆ! ಕರ್ನಾಟಕಕ್ಕೆ ಟಕ್ಕರ್‌ ಕೊಟ್ಟ ತಮಿಳುನಾಡು

Healthy Foods For Kidney
ಆರೋಗ್ಯ1 hour ago

Healthy Foods For Kidney: ನಮ್ಮ ಕಿಡ್ನಿ ಆರೋಗ್ಯವಾಗಿರಲು ಈ ಆಹಾರ ಸೇವನೆ ಸೂಕ್ತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು21 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌