TA Sharavana: ಮಂಡ್ಯದಿಂದ ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆ; ಸಾಯಿಬಾಬಾ ಪ್ರಸಾದ ನೀಡಿ, ಅಭಿನಂದಿಸಿದ ಟಿ.ಎ.ಶರವಣ - Vistara News

ಬೆಂಗಳೂರು

TA Sharavana: ಮಂಡ್ಯದಿಂದ ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆ; ಸಾಯಿಬಾಬಾ ಪ್ರಸಾದ ನೀಡಿ, ಅಭಿನಂದಿಸಿದ ಟಿ.ಎ.ಶರವಣ

TA Sharavana: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ, ವಿಧಾನ ಪರಿಷತ್‌ ಸದಸ್ಯ ಡಾ. ಟಿ.ಎ. ಶರವಣ ಅವರು, ಶಿರಡಿ ಸಾಯಿಬಾಬಾ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ, ಪ್ರಸಾದವನ್ನು ನೀಡುವುದರ ಮೂಲಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಅಭಿನಂದಿಸಿದರು.

VISTARANEWS.COM


on

TA Sharavana congratulated former CM hd Kumaraswamy who was elected to Lok Sabha from Mandya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಂಡ್ಯ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಡಾ. ಟಿ.ಎ. ಶರವಣ (TA Sharavana) ಅವರು ಶಿರಡಿ ಸಾಯಿಬಾಬಾ ಪ್ರಸಾದ ನೀಡಿ, ಅಭಿನಂದಿಸಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ, ವಿಧಾನ ಪರಿಷತ್‌ ಸದಸ್ಯ ಡಾ. ಟಿ.ಎ. ಶರವಣ, ಶಿರಡಿ ಸಾಯಿಬಾಬಾ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ, ಪ್ರಸಾದವನ್ನು ನೀಡುವುದರ ಮೂಲಕ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಶುಭ ಕೋರಿದರು.

ಫಲಿತಾಂಶದಿಂದ ಬಲಿಷ್ಠವಾದ ಜೆಡಿಎಸ್‌: ಟಿ.ಎ.ಶರವಣ

ಈ ಚುನಾವಣೆಯ ಫಲಿತಾಂಶವು ಜೆಡಿಎಸ್ (JDS) ಮತ್ತೊಮ್ಮೆ ಬಲಿಷ್ಠ ಪಕ್ಷ ಎನ್ನುವುದನ್ನು ಸಾಬೀತು ಮಾಡಿದೆ. ಸತತ ಮೂರನೇ ಬಾರಿಗೆ ಎನ್‌ಡಿಎ ಮೈತ್ರಿಕೂಟ ಗೆಲುವಿನ ಮೂಲಕ ಹೊಸ ದಾಖಲೆ ಬರೆದಿದೆ ಎಂದು ವಿಧಾನ ಪರಿಷತ್‌ ಸದಸ್ಯ ಟಿ.ಎ. ಶರವಣ ತಿಳಿಸಿದ್ದಾರೆ.

ಇದನ್ನೂ ಓದಿ: World Environment Day: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮ

ಲೋಕಸಭಾ ಚುನಾವಣಾ ಫಲಿತಾಂಶ 2024 ರ ಕುರಿತು ಹೇಳಿಕೆ ನೀಡಿರುವ ಅವರು, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಪ್ರಧಾನಿ ಮೋದಿ ಅವರ ನಾಯಕತ್ವಕ್ಕೆ ದೇಶದ ಜನ ಆಯ್ಕೆ ಮಾಡಿದ್ದಾರೆ. ಸತತ ಮೂರನೇ ಬಾರಿಗೆ ಎನ್‌ಡಿಎ ಮೈತ್ರಿಕೂಟ ಗೆಲುವಿನ ಮೂಲಕ ಹೊಸ ದಾಖಲೆ ಬರೆದಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿಯು ಒಂದು ಪ್ರಬಲ ರಾಜಕೀಯ ಶಕ್ತಿ ಎನ್ನುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

ಜೆಡಿಎಸ್‌ ಪಕ್ಷವನ್ನು ಮುಗಿಸುವ ಸಂಚು ವಿಫಲ ಆಗಿದೆ. ಅಧಿಕೃತವಾಗಿ ಜೆಡಿಎಸ್‌ ಪಕ್ಷವು ಎರಡು ಸ್ಥಾನಗಳನ್ನು ಗೆದ್ದಿರಬಹುದು. ಆದರೆ ಸುಮಾರು 9 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲು ಜೆಡಿಎಸ್ ಸಹಕಾರ ಸಿಕ್ಕಿದೆ. ಹೀಗಾಗಿ ರಾಜ್ಯದಲ್ಲಿ ಜೆಡಿಎಸ್ ಪ್ರಬಲ ಶಕ್ತಿಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

ರಾಷ್ಟ್ರ ರಾಜಕಾರಣದಲ್ಲಿ ಮೋದಿ ಪ್ರಶ್ನಾತೀತ ನಾಯಕರಾಗಿ ಹೊರ ಹೊಮ್ಮಿದ್ದಾರೆ ಎಂದು ತಿಳಿಸಿರುವ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರವು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಂಡರೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಗೆಲ್ಲಲು ಆಗಿಲ್ಲ, ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ, ವೋಟ್ ಬ್ಯಾಂಕ್ ಸೃಷ್ಟಿಸುವಲ್ಲಿ ಗ್ಯಾರಂಟಿ ಯೋಜನೆ ವಿಫಲವಾಗಿವೆ ಎಂದು ಅವರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯದ ಇಲ್ಲೆಲ್ಲ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ ಹಾಗೂ ಮಲೆನಾಡು ಸುತ್ತಮುತ್ತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆ ಹಗುರದಿಂದ ಕೂಡಿದ ಮಳೆ ಸುರಿಯಲಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (rain News) ಸಾಧ್ಯತೆ ಇದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (karnataka Weather Forecast) ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳದಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಂಟೆಗೆ 30-40 ಕಿ.ಮೀ ಗಾಳಿ ಬೀಸುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗುವ ನಿರೀಕ್ಷೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾದರೆ, ಕರಾವಳಿಯಲ್ಲಿ ವ್ಯಾಪಕ ಲಘುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಕರಾವಳಿ ಮತ್ತು ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆಯು ಮುಂದುವರಿದಿದೆ. ಗುಡುಗು ಸಹಿತ ಗಾಳಿಗೆ ವೇಗವು 40-50 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

ಮಳೆಗಾಲಕ್ಕೆ ತಕ್ಕಂತೆ ಬದಲಾಗುವ ಫುಟ್‌ವೇರ್‌ ಸ್ಟೈಲಿಂಗ್‌


ಮಳೆಗಾಲಕ್ಕೆ ತಕ್ಕಂತೆ (Monsoon Footwear Fashion) ಪ್ರತಿಯೊಬ್ಬರ ಫುಟ್‌ವೇರ್‌ ಸ್ಟೈಲಿಂಗ್‌ ಕೂಡ ಬದಲಾಗುತ್ತದೆ. ಇದಕ್ಕೆ ಪೂರಕ ಎಂಬಂತೆ, ಮಾರುಕಟ್ಟೆಯಲ್ಲಿ ನಾನಾ ಬ್ರಾಂಡ್‌ಗಳು ವಿನೂತನ ಮಾದರಿಯ ಬಗೆಬಗೆಯ ವಿನ್ಯಾಸದ ವಾಟರ್‌ಪ್ರೂಫ್‌ ಹಾಗೂ ಸ್ಕಿಡ್‌ ಆಗದ ಫುಟ್‌ವೇರ್​​ಗಳು ಲಗ್ಗೆ ಇಟ್ಟಿವೆ.

Monsoon Footwear Fashion

ವೈವಿಧ್ಯಮಯ ಫುಟ್‌ವೇರ್ಸ್

ಅವುಗಳಲ್ಲಿ ಫಂಕಿ ಕ್ರೂಕ್ಸ್‌, ಫ್ಲಿಪ್‌ಫ್ಲಾಪ್‌, ಜೆಲ್ಲಿ ಫ್ಲಾಟ್ಸ್, ವೆಡ್ಜಸ್‌ ಬೆಲ್ಲಿ ಶೂಸ್‌, ಸ್ಕಿಪ್ಪರ್‌ ಕ್ಲಾಗ್ಸ್‌, ಕ್ಯಾನ್ವಾಸ್‌, ಬ್ಯಾಲೇರಿನಾ ಫ್ಲಾಟ್‌ ಸ್ಯಾಂಡಲ್ಸ್, ಮಾನ್ಸೂನ್‌ ಸ್ನೀಕರ್‌, ರೈನ್‌ ಶೂ, ಅಕ್ವಾ ಶೂಸ್‌, ಗಮ್‌ ಬೂಟ್ಸ್, ಫೋಮ್‌ ಕ್ಲಾಗ್ಸ್ ಸೇರಿದಂತೆ ಮೆನ್ಸ್‌ ಹಾಗೂ ವುಮೆನ್ಸ್‌ ಕೆಟಗರಿಯಲ್ಲಿ ನಾನಾ ಬಗೆಯವು ಬಿಡುಗಡೆಗೊಂಡಿದ್ದು, ಮಾರಾಟ ಹೆಚ್ಚಾಗಿಯೇ ಸಾಗಿದೆ ಎನ್ನುತ್ತಾರೆ ಫುಟ್‌ವೇರ್‌ ಶೋರೂಂವೊಂದರ ಮಾರಾಟಗಾರರು.

ಸೀಸನ್‌ಗೆ ಬದಲಾಗುವ ಫುಟ್‌ವೇರ್ಸ್

ಸಮ್ಮರ್‌ ಸೀಸನ್‌ನಿಂದ ಮಾನ್ಸೂನ್‌ ಸೀಸನ್‌ಗೆ ಕಾಲಿಡುವಾಗ ಫುಟ್‌ವೇರ್‌ ಫ್ಯಾಷನ್‌ ಕೂಡ ಸಾಕಷ್ಟು ಬದಲಾಗುತ್ತದೆ. ಗ್ರ್ಯಾಂಡ್‌ ಲುಕ್‌ ನೀಡುವ ಸ್ಯಾಂಡಲ್ಸ್‌ ಆಗಲಿ, ವೆಲ್ವೆಟ್‌ ಹಾಗೂ ಡಿಸೈನರ್‌ ಶೂಗಳನ್ನಾಗಲಿ ಈ ಮಳೆಗಾಲದಲ್ಲಿ ಧರಿಸಿ ಹೊರಾಂಗಣದಲ್ಲಿ ಓಡಾಡಲು ಸಾಧ್ಯವಿಲ್ಲ! ಹಾಗಾಗಿ ಮಳೆಗಾಲಕ್ಕೆ ನೀರಿನಲ್ಲಿ ನೆನೆದರೂ, ತೊಪ್ಪೆಯಾದರೂ, ವಾಶ್‌ ಮಾಡಿದರೂ ಹಾಳಾಗದ ಮೆಟೀರಿಯಲ್‌ನ ಫುಟ್‌ವೇರ್‌ಗಳನ್ನು ಧರಿಸುವುದು, ವಾಕ್‌ ಮಾಡುವಾಗ ಸ್ಕಿಡ್‌ ಆಗದ, ಜಾರದ ಫುಟ್‌ವೇರ್‌ಗಳನ್ನು ಧರಿಸುವುದು ಅವಶ್ಯವಾಗುತ್ತದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಅದರಲ್ಲೂ ಪ್ರತಿನಿತ್ಯ ಹೆಚ್ಚು ಓಡಾಡುವ ವ್ಯಾಪಾರಸ್ಥರು, ಉದ್ಯೋಗಸ್ಥರು ಹೆಚ್ಚಾಗಿ ಕಂಫರ್ಟಬಲ್‌ ಜೊತೆಗೆ ಸೀಸನ್‌ ಮುಗಿಯುವವರೆಗೂ ಬಾಳಿಕೆ ಬರುವಂತಹ ಫುಟ್‌ವೇರ್‌ಗಳನ್ನೇ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ ಎನ್ನುತ್ತಾರೆ ಅವರು.

ಬೂಟ್ಸ್-ಶೂ-ಸ್ಯಾಂಡಲ್ಸ್-ಫ್ಲಿಪ್‌-ಫ್ಲಾಪ್‌

ಮಳೆಗಾಲದಲ್ಲಿ ಫ್ಯಾಷನ್‌ ಲುಕ್‌ಗಾಗಿ ಮಾತ್ರವಲ್ಲ, ನಿಮ್ಮ ಕಂಫರ್ಟಬಲಿಟಿಗೆ ತಕ್ಕಂತೆ ಆಯ್ಕೆ ಮಾಡಿಕೊಳ್ಳುವುದು ಜಾಣತನ. ಔಟ್‌ಡೋರ್‌ನಲ್ಲಿ ಹೆಚ್ಚು ಓಡಾಡುವವರು ಹಾಗೂ ಕೆಲಸ ಮಾಡುವವರು ಬೂಟ್ಸ್​​​ಗಎ ಮೊರೆ ಹೋದರೆ, ಮಹಿಳೆಯರು ಸ್ಯಾಂಡಲ್ಸ್‌ ಹಾಗೂ ಫ್ಲಿಪ್‌-ಫ್ಲಾಪ್‌ಗಳನ್ನು ಚೂಸ್‌ ಮಾಡುತ್ತಾರೆ. ಇನ್ನು ಹುಡುಗಿಯರು ಕ್ರೂಕ್ಸ್‌ ಹಾಗೂ ಬ್ಯಾಲೇರಿನಾ ಶೂಗಳಂತವನ್ನು ಸೆಲೆಕ್ಟ್‌ ಮಾಡುತ್ತಾರೆ ಎನ್ನುತ್ತಾರೆ ಫುಟ್‌ವೇರ್‌ ಮಾರಾಟಗಾರರು.

ಫುಟ್‌ವೇರ್‌ ಸೆಲೆಕ್ಷನ್‌ ಹೀಗಿರಲಿ

  • – ಫ್ಯಾಷನ್‌ಗಿಂತ ಹೆಚ್ಚಾಗಿ ಆರಾಮದಾಯಕವಾಗಿರಲಿ.
  • – ಫುಟ್‌ವೇರ್‌ ಒದ್ದೆಯಾಗಿದ್ದಲ್ಲಿ, ಒಣಗಿಸಿ, ಧರಿಸಿ.
  • – ಗುಣಮಟ್ಟದ ಫುಟ್‌ವೇರ್ ಕೊಳ್ಳಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bengaluru News: ಬೆಂಗಳೂರಿನಲ್ಲಿ 2ನೇ ರಾಷ್ಟ್ರೀಯ ಮಕ್ಕಳ ಪಾರ್ಶ್ವವಾಯುವಿನ ಶೃಂಗ 2024ಕ್ಕೆ ಚಾಲನೆ

Bengaluru News: ಬೆಂಗಳೂರಿನಲ್ಲಿ ಎರಡು ದಿನಗಳ 2ನೇ ರಾಷ್ಟ್ರೀಯ ಪೀಡಿಯಾಟ್ರಿಕ್ ಸ್ಟ್ರೋಕ್ ಕಾನ್ ಕ್ಲೇವ್ 2024 (ಮಕ್ಕಳ ಪಾರ್ಶ್ವವಾಯು ಶೃಂಗ 2024) ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು. ಇಂಡಿಯನ್ ಸ್ಟ್ರೋಕ್ ಅಸೋಸಿಯೇಷನ್ (ಐ.ಎಸ್.ಎ) ಅಧ್ಯಕ್ಷ ಡಾ.ನಿರ್ಮಲ್ ಸೂರ್ಯ ಉದ್ಘಾಟಿಸಿದರು.

VISTARANEWS.COM


on

2nd National Pediatric Stroke Conclave 2024 inauguration in Bengaluru
Koo

ಬೆಂಗಳೂರು: ನಗರದಲ್ಲಿ ಎರಡು ದಿನಗಳ 2ನೇ ರಾಷ್ಟ್ರೀಯ ಪೀಡಿಯಾಟ್ರಿಕ್ ಸ್ಟ್ರೋಕ್ ಕಾನ್ ಕ್ಲೇವ್ 2024 (ಮಕ್ಕಳ ಪಾರ್ಶ್ವವಾಯು ಶೃಂಗ 2024) ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು. ಇಂಡಿಯನ್ ಸ್ಟ್ರೋಕ್ ಅಸೋಸಿಯೇಷನ್ (ಐ.ಎಸ್.ಎ) ಅಧ್ಯಕ್ಷ ಡಾ. ನಿರ್ಮಲ್ ಸೂರ್ಯ (Bengaluru News) ಉದ್ಘಾಟಿಸಿದರು.

ಮಕ್ಕಳ ಪಾರ್ಶ್ವವಾಯು ರೋಗತಡೆ, ಆರೈಕೆ ಮತ್ತು ಚಿಕಿತ್ಸೆಯ ಕ್ಷೇತ್ರಗಳ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪರಿಣಿತರು ಒಂದೇ ಸೂರಿನಡಿ ಸೇರುವ ಅಪೂರ್ವ ಸಂದರ್ಭಕ್ಕೆ ಈ ಸಮ್ಮೇಳನ ಸಾಕ್ಷಿಯಾಯಿತು.

ಜಾಗತಿಕವಾಗಿ ಮಕ್ಕಳ ಪಾರ್ಶ್ವವಾಯು ಮಕ್ಕಳಲ್ಲಿ ಮರಣಕ್ಕೆ ಆರನೇ ಮುಂಚೂಣಿಯ ಕಾರಣವಾಗಿದೆ. ಸುಮಾರು ಐವತ್ತರಿಂದ ಅರವತ್ತು ಶೇಕಡಾ ಮಕ್ಕಳ ಪಾರ್ಶ್ವವಾಯು ಪ್ರಕರಣಗಳಿಗೆ ಚಿಕಿತ್ಸೆ ನೀಡಲು ಮತ್ತು ತಡೆಯಲು ಸಾಧ್ಯ.

ಪ್ರತಿ ನಿಮಿಷ ಭಾರತದಲ್ಲಿ ಸುಮಾರು 52 ಶಿಶುಗಳು ಜನಿಸುತ್ತಿದ್ದು ಮಕ್ಕಳ ಪಾರ್ಶ್ವವಾಯುವಿನ ಸಾಮಾಜಿಕ-ಆರ್ಥಿಕ ಪರಿಣಾಮಗಳು ಅಪಾರವಾಗಿವೆ. ಭಾರತದಲ್ಲಿ ಪ್ರಕಟವಾದ ಕೆಲ ಅಧ್ಯಯನಗಳ ಪ್ರಕಾರ ಮಕ್ಕಳ ಪಾರ್ಶ್ವವಾಯು ಮಕ್ಕಳ ಆಸ್ಪತ್ರೆ ಸೇರ್ಪಡೆಯ ಶೇ.1ಕ್ಕಿಂತ ಕಡಿಮೆ ಇದೆ ಮತ್ತು ಎಲ್ಲ ಯುವ ಪಾರ್ಶ್ವವಾಯು ಪ್ರಕರಣಗಳ ಶೇಕಡಾ ಐದರಿಂದ ಹತ್ತರಷ್ಟು (40 ವರ್ಷಗಳ ವಯಸ್ಸಿಗಿಂತ ಕಿರಿಯರು) ಹೊಂದಿವೆ. ಈ ಸಂಖ್ಯೆಗಳು ಬರೀ ಅಂದಾಜು ಆಗಿದೆ ಮತ್ತು ವಾಸ್ತವ ಸಂಖ್ಯೆ ಇನ್ನೂ ಹೆಚ್ಚಾಗಿರುವ ಸಾಧ್ಯತೆ ಇದ್ದು ಸಾಕಷ್ಟು ಪ್ರಕರಣಗಳು ವರದಿಯಾಗುವುದಿಲ್ಲ ಮತ್ತು ಪತ್ತೆಯಾಗುವುದಿಲ್ಲ.

ಇದನ್ನೂ ಓದಿ: Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

ವಯಸ್ಕರಲ್ಲಿ ಹೆಚ್ಚು ರಕ್ತದೊತ್ತಡ, ಕರೊನರಿ ಆರ್ಟರಿ ರೋಗ, ಧೂಮಪಾನ, ಬೊಜ್ಜು, ಹೆಚ್ಚಿನ ಕೊಲೆಸ್ಟರಾಲ್ ಮತ್ತು ದುರ್ಬಲ ಜೀವನಶೈಲಿ ಇತ್ಯಾದಿ ರಿಸ್ಕ್ ಅಂಶಗಳಿರುತ್ತವೆ ಆದರೆ ಮಕ್ಕಳ ಪಾರ್ಶ್ವವಾಯುವಿಗೆ ಕಾರಣಗಳನ್ನು ಗುರುತಿಸುವುದು ಬಹಳ ಸಂಕೀರ್ಣ ಮತ್ತು ಹಲವು ಅಂಶಗಳನ್ನು ಹೊಂದಿದೆ.

ಸಮ್ಮೇಳನದಲ್ಲಿ ಉಪನ್ಯಾಸ ನೀಡುವ ತಜ್ಞರಲ್ಲಿ ಐ.ಎಸ್.ಎ ಅಧ್ಯಕ್ಷ ಡಾ.ನಿರ್ಮಲ್ ಸೂರ್ಯ, ಸಂಘಟನಾ ಅಧ್ಯಕ್ಷ ಡಾ.ವಿಕ್ರಮ್ ಹುಡೇದ್, ಡಾ.ಅರವಿಂದ್ ಶರ್ಮಾ, ಡಾ.ಮಿನಲ್ ಕೆಕಟ್ ಪುರೆ, ಡಾ.ವಿನಯನ್ ಕೆ.ಪಿ., ಡಾ.ಶೆಫಾಲಿ ಗುಲಾಟಿ ಮತ್ತು ಡಾ.ಪ್ರತಿಭಾ ಸಿಂಘಿ, ಡಾ.ಹೆಲ್ತರ್ ಫುಲ್ಲರ್ ಟನ್‌ ಮತ್ತು ಡಾ.ಮಜಾ ಸ್ಟೀನ್ಲಿನ್ ಅಂತಾರಾಷ್ಟ್ರೀಯ ತಜ್ಞರು ಪಾಲ್ಗೊಂಡಿದ್ದಾರೆ.

2ನೇ ನ್ಯಾಷನಲ್ ಪೀಡಿಯಾಟ್ರಿಕ್ ಕಾನ್ ಕ್ಲೇವ್ ಆರೋಗ್ಯ ಸೇವಾ ವೃತ್ತಿಪರರಿಗೆ ಮಕ್ಕಳ ಪಾರ್ಶ್ವವಾಯುವಿನ ರೋಗ ತಡೆ, ಆರೈಕೆ ಮತ್ತು ಚಿಕಿತ್ಸೆ ಕುರಿತು ಅವರ ಜ್ಞಾನ ಹಂಚಿಕೊಳ್ಳಲು, ಅರ್ಥಪೂರ್ಣ ಚರ್ಚೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುತ್ತದೆ. ಈ ಸಮ್ಮೇಳನವು ದೇಶಾದ್ಯಂತ ಪೂರೈಸುವ ಮಕ್ಕಳ ಆರೈಕೆಯ ಗುಣಮಟ್ಟ ಸುಧಾರಿಸುವ ಮತ್ತು ಈ ಕ್ಷೇತ್ರದ ಪ್ರಮುಖ ಸಮಸ್ಯೆಗಳನ್ನು ನಿವಾರಿಸುವ ಗುರಿ ಹೊಂದಿದೆ. ಈ ಎರಡು ದಿನಗಳ ಸಮ್ಮೇಳನದಲ್ಲಿ ಪೀಡಿಯಾಟ್ರಿಕ್ ಸ್ಟ್ರೋಕ್ ನ ನ್ಯೂರೋಇಮೇಜಿಂಗ್, ಪೀಡಿಯಾಟ್ರಿಕ್ ವ್ಯಾಸ್ಕುಲೈಟಿಸ್ ಮತ್ತು ವ್ಯಾಸ್ಕುಲೊಪಥೀಸ್, ಕಾರ್ಡಿಯೊಎಂಬೊಲಿಕ್ ಸ್ಟ್ರೋಕ್, ಹೈಪರಕ್ಯೂಟ್ ಮ್ಯಾನೇಜ್ಮೆಂಟ್ ಆಫ್ ಪೀಡಿಯಾಟ್ರಿಕ್ ಸ್ಟ್ರೋಕ್, ನ್ಯೂರೋಇಂಟರ್ವೆನ್ಷನ್ಸ್ ಇನ್ ಪೀಡಿಯಾಟ್ರಿಕ್ ಸ್ಟ್ರೋಕ್ ಮತ್ತಿತರೆ ಒಳಗೊಂಡಿವೆ.

ಇದನ್ನೂ ಓದಿ: Kannada New Movie: ಪ್ರವೀಣ್ ತೇಜ್ ಅಭಿನಯದ ʼಜಿಗರ್ ಚಿತ್ರ ಜುಲೈ 5ರಂದು ಬಿಡುಗಡೆ

ಇಂಡಿಯನ್ ಸ್ಟ್ರೋಕ್ ಅಸೋಸಿಯೇಷನ್ (ಐ.ಎಸ್.ಎ) ನಿಯಮಿತವಾಗಿ ಮಕ್ಕಳ ಪಾರ್ಶ್ವವಾಯುವಿನ ಅರಿವು ಹೆಚ್ಚಿಸುವ, ರೋಗನಿರ್ಣಯ ಸುಧಾರಿಸುವ, ಮಕ್ಕಳ ಪಾರ್ಶ್ವವಾಯು ನಿರ್ವಹಿಸುವ ವೈದ್ಯಕೀಯ ಸಿಬ್ಬಂದಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಹಲವಾರು ಉಪಕ್ರಮಗಳನ್ನು ಕೈಗೊಳ್ಳುತ್ತಿದ್ದು ಸುವರ್ಣ ಘಳಿಗೆಯಲ್ಲಿ ಚಿಕಿತ್ಸೆ ನೀಡುವ ಕುರಿತು ಅರಿವನ್ನು ಮೂಡಿಸುತ್ತದೆ ಮತ್ತು ಬಾಧಿತ ಮಕ್ಕಳ ಅಂಗವಿಕಲತೆ ಮಿತಿಗೊಳಿಸಲು ಕಾರ್ಯತಂತ್ರಗಳನ್ನು ವಿನೂತನ ಮಕ್ಕಳ ಪಾರ್ಶ್ವವಾಯುವಿನ ರಾಷ್ಟ್ರೀಯ ಸಮ್ಮೇಳನ ಆಯೋಜಿಸುವ ಮೂಲಕ ಕಾರ್ಯಪ್ರವೃತ್ತವಾಗಿದೆ.

Continue Reading

ಕರ್ನಾಟಕ

Foreign Investment: ರಾಜ್ಯದಲ್ಲಿ ವಾಹನ ಬಿಡಿಭಾಗ ತಯಾರಿಕೆ; ಬಂಡವಾಳ ಹೂಡಿಕೆಗೆ ದ.ಕೊರಿಯಾ ಒಲವು

Foreign Investment: ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ಸೋಮವಾರ ಸೋಲ್‌ನಲ್ಲಿ ಹೊಯ್ಸಂಗ್‌ ಅಡ್ವಾನ್ಸ್ಡ್‌ ಮಟೇರಿಯಲ್ಸ್‌, ಎಚ್‌ಎಲ್‌ ಮಾಂಡೊ ಕಾರ್ಪೊರೇಷನ್‌, ನಿಫ್ಕೊ, ಡಿಎನ್‌ ಸೊಲುಷನ್ಸ್‌ ಮತ್ತು ಹುಂಡೈ ಮೋಟರ್ಸ್‌ನ ಮುಖ್ಯಸ್ಥರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿತು.

VISTARANEWS.COM


on

Manufacturing of auto parts in the state Increased propensity for capital investment
Koo

ಬೆಂಗಳೂರು: ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ (Foreign Investment) ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ಸೋಮವಾರ ಸೋಲ್‌ನಲ್ಲಿ ಹೊಯ್ಸಂಗ್‌ ಅಡ್ವಾನ್ಸ್ಡ್‌ ಮಟೇರಿಯಲ್ಸ್‌, ಎಚ್‌ಎಲ್‌ ಮಾಂಡೊ ಕಾರ್ಪೊರೇಷನ್‌, ನಿಫ್ಕೊ, ಡಿಎನ್‌ ಸೊಲುಷನ್ಸ್‌ ಮತ್ತು ಹುಂಡೈ ಮೋಟರ್ಸ್‌ನ ಮುಖ್ಯಸ್ಥರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿತು.

ಜಪಾನಿನ ಐದು ದಿನಗಳ ಯಶಸ್ವಿ ಭೇಟಿ ಪೂರ್ಣಗೊಳಿಸಿ ದಕ್ಷಿಣ ಕೊರಿಯಾಕ್ಕೆ ತೆರಳಿರುವ ನಿಯೋಗವು ಈ ತಿಂಗಳ 5 ರವರೆಗೆ ಅಲ್ಲಿನ ಬಹುರಾಷ್ಟ್ರೀಯ ಕಂಪನಿಗಳ ಜತೆ ಸಮಾಲೋಚನೆ ನಡೆಸಿ ಬಂಡವಾಳ ಹೂಡಿಕೆ ಆಕರ್ಷಿಸಲಿದೆ.

ರಾಜ್ಯದಲ್ಲಿ ವಾಹನ ಬಿಡಿಭಾಗ, ಜವಳಿ ಉತ್ಪನ್ನ, ನವೀಕರಿಸಬಹುದಾದ ಇಂಧನ, ಮಷಿನ್‌ಟೂಲ್ಸ್‌ ತಯಾರಿಕಾ ವಲಯಗಳಲ್ಲಿ ಬಂಡವಾಳ ಹೂಡಿಕೆ ಹೆಚ್ಚಿಸಲು, ವಹಿವಾಟು ವಿಸ್ತರಿಸಲು ದಕ್ಷಿಣ ಕೊರಿಯಾದ ಈ ಬಹುರಾಷ್ಟ್ರೀಯ ಕಂಪನಿಗಳು ತೀವ್ರ ಆಸಕ್ತಿ ವ್ಯಕ್ತಪಡಿಸಿವೆ.

ಇದನ್ನೂ ಓದಿ: Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

ರಾಜ್ಯದಲ್ಲಿ ವಿದ್ಯುತ್‌ಚಾಲಿತ ವಾಹನಗಳ (ಇವಿ) ಮಾರುಕಟ್ಟೆಯು ವ್ಯಾಪಕವಾಗಿ ವಿಸ್ತರಣೆ ಆಗುತ್ತಿರುವುದು ಮತ್ತು ಭಾರತದಲ್ಲಿನ ತಯಾರಿಕಾ ಘಟಕಗಳಲ್ಲಿ ʼಇವಿʼಗಳನ್ನು ತಯಾರಿಸುವ ಬಗ್ಗೆ ಹುಂಡೈ ಮುಖ್ಯಸ್ಥರ ಜತೆಗಿನ ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು.

ರಾಜ್ಯದಲ್ಲಿ ಕೈಗಾರಿಕಾ ಅಶಾಂತಿ (ಕಾರ್ಮಿಕರ ವಿವಾದಗಳು) ಕಡಿಮೆ ಪ್ರಮಾಣದಲ್ಲಿ ಇರುವುದು ಮತ್ತು ಪೂರೈಕೆ ಸರಪಣಿಯಲ್ಲಿ ಸ್ಥಿರತೆ ಇರುವುದನ್ನು ಸಚಿವರು ಹುಂಡೈ ಕಂಪನಿಯ ಪ್ರಮುಖರ ಗಮನಕ್ಕೆ ತಂದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ವಾಹನಗಳ ಪ್ಲಾಸ್ಟಿಕ್‌ ಬಿಡಿಭಾಗ ತಯಾರಿಸುವ ಘಟಕ ಸ್ಥಾಪಿಸಲಿರುವ ನಿಫ್ಕೊ ಕೊರಿಯಾ ಕಂಪನಿಗೆ ಅಗತ್ಯವಾದ ಭೂಮಿ ಸ್ವಾಧೀನ ಮತ್ತು ಇತರ ಅನುಮೋದನೆಗಳಿಗೆ ರಾಜ್ಯ ಸರ್ಕಾರ ತ್ವರಿತವಾಗಿ ಸ್ಪಂದಿಸಲಿದೆ. ಕಾರ್ಖಾನೆಗೆ ಸಂಸ್ಕರಿಸಿದ ನೀರನ್ನು ಪೂರೈಸಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ ಭರವಸೆ ನೀಡಿದರು.

ರಾಜ್ಯದಲ್ಲಿ ಫೈಬರ್‌ ಆಪ್ಟಿಕ್‌ ಅಳವಡಿಕೆ ಯೋಜನೆಗಳು ಮತ್ತು ವಿದ್ಯುತ್‌ಚಾಲಿತ ವಾಹನಗಳ (ಇವಿ) ಬಳಕೆ ಹೆಚ್ಚಿಸುವ ಕ್ಷೇತ್ರಗಳಲ್ಲಿ ವಹಿವಾಟು ನಡೆಸಲು ಹೊಯ್ಸಂಗ್‌ ಅಡ್ವಾನ್ಸ್ಡ್‌ ಮಟೇರಿಯಲ್ಸ್‌ ಇಂಗಿತ ವ್ಯಕ್ತಪಡಿಸಿದೆ.

ಕಂಪನಿಯ ಉಪಾಧ್ಯಕ್ಷ ಹಾಂಗ್‌ ಸಂಗ್‌ ಅಹ್ನ್‌ ಅವರು ರಾಜ್ಯದ ನಿಯೋಗದ ಜತೆಗಿನ ಮಾತುಕತೆಯಲ್ಲಿ ಭಾಗಿಯಾಗಿದ್ದರು. ಟೈರ್‌ ಕೋರ್ಡ್ಸ್‌ ತಯಾರಿಕೆಗೆ ಭಾರತವನ್ನು ಪ್ರಮುಖ ನೆಲೆಯನ್ನಾಗಿ ಅಭಿವೃದ್ಧಿಪಡಿಸಲು ಕಂಪನಿಯ ಉದ್ದೇಶಿಸಿದೆ. ಭಾರತದಲ್ಲಿ ಪರಿಸರ ಸ್ನೇಹಿ ಸರಕುಗಳು ಹಾಗೂ ಸುಧಾರಿತ ಜವಳಿ ಉತ್ಪನ್ನಗಳನ್ನು ತಯಾರಿಸುವ ವಹಿವಾಟು ವಿಸ್ತರಿಸುವ ಅವಕಾಶಗಳನ್ನು ಕಂಪನಿಯು ಪರಿಶೀಲಿಸುತ್ತಿದೆ.

ಇದನ್ನೂ ಓದಿ: Kabzaa movie: ಅತಿ ಹೆಚ್ಚು ತೆರಿಗೆ ಪಾವತಿ; ಆರ್. ಚಂದ್ರು ನಿರ್ಮಾಣ ಸಂಸ್ಥೆಗೆ ಕೇಂದ್ರದಿಂದ ಪ್ರಶಂಸಾ ಪತ್ರ!

ರಾಜ್ಯದಲ್ಲಿನ ನವೀಕರಿಸಬಹುದಾದ ಇಂಧನ ವಲಯದಲ್ಲಿನ ಭವಿಷ್ಯದ ವಿಸ್ತರಣೆ ಬಗ್ಗೆ ಸೌರಕೋಶಗಳ ಸೆಮಿಕಂಡಕ್ಟರ್‌ ತಯಾರಿಸುವ ಒಸಿಐ ಹೋಲ್ಡಿಂಗ್ಸ್‌ ಕಂಪನಿ ಜೊತೆ ಸಚಿವರು ಮಾತುಕತೆ ನಡೆಸಿದರು.

ಸೌರಶಕ್ತಿ ಫಲಕಗಳನ್ನು ತಯಾರಿಸುವ ಯೋಜನೆಗಳಿಗೆ ರಾಜ್ಯ ಸರ್ಕಾರವು ಕೊಡಮಾಡುತ್ತಿರುವ ಉತ್ತೇಜನಗಳನ್ನು ನಿಯೋಗವು ಕಂಪನಿಯ ಪ್ರಮುಖರಿಗೆ ಮನವರಿಕೆ ಮಾಡಿಕೊಟ್ಟಿತು.

ವಾಹನ ಬಿಡಿಭಾಗ ತಯಾರಿಸುವ ಎಚ್‌ಎಲ್‌ ಮಂಡೊ ಕಾರ್ಪೊರೇಷನ್ನಿನ ಸಿಎಫ್‌ಒ ಲೀ ಚುಲ್‌ ಮತ್ತು ನಿರ್ದೇಶಕ ಕಿಮ್‌ ಇವುನ್‌ ಸಂಗ್‌ ಅವರನ್ನು ರಾಜ್ಯದ ನಿಯೋಗವು ಭೇಟಿಯಾಗಿತ್ತು.

ಇದನ್ನೂ ಓದಿ: Kannada New Movie: ಪ್ರವೀಣ್ ತೇಜ್ ಅಭಿನಯದ ʼಜಿಗರ್ ಚಿತ್ರ ಜುಲೈ 5ರಂದು ಬಿಡುಗಡೆ

ಬೆಂಗಳೂರಿನಲ್ಲಿ ತಯಾರಿಕಾ ಘಟಕ ಹೊಂದಿರುವ ಕಂಪನಿಯು ರಾಜ್ಯದಲ್ಲಿ ಇನ್ನಷ್ಟು ಬಂಡವಾಳ ಹೂಡಿಕೆ ಮಾಡಲು ಉತ್ಸುಕತೆ ತೋರಿದೆ. ವಿದ್ಯುತ್‌ಚಾಲಿತ ಸೇರಿದಂತೆ ರಾಜ್ಯದಲ್ಲಿನ ಒಟ್ಟಾರೆ ವಾಹನ ಉದ್ಯಮ ಕ್ಷೇತ್ರದಲ್ಲಿನ ಅನುಕೂಲತೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರಾಜ್ಯದ ನಿಯೋಗವು ಆಹ್ವಾನ ನೀಡಿದೆ. ಮಷೀನ್‌ಟೂಲ್ಸ್‌ ತಯಾರಿಕಾ ಕಂಪನಿ ಡಿಎನ್‌ ಸೊಲುಷನ್ಸ್‌, ಬೆಂಗಳೂರು ಬಳಿ 25 ಎಕರೆ ಪ್ರದೇಶದಲ್ಲಿ ತನ್ನ ತಯಾರಿಕಾ ಘಟಕ ಆರಂಭಿಸಲಿದೆ.

Continue Reading

ಕರ್ನಾಟಕ

Kannada New Movie: ಮೊಬೈಲ್ ಮುಂಚಿನ ಪ್ರೇಮಕಥೆ ‘ಕಾಗದ’ ಜುಲೈ 5ರಂದು ಬಿಡುಗಡೆ

Kannada New Movie: ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆಯಾದ “ಕಾಗದ” ಚಿತ್ರ ಇದೇ ವಾರ ಜುಲೈ 5 ರಂದು ತೆರೆಗೆ ಬರುತ್ತಿದೆ. ಅರುಣ್ ಕುಮಾರ್ ಆಂಜನೇಯ ಅವರ ನಿರ್ಮಾಣದಲ್ಲಿ ರಂಜಿತ್ ನಿರ್ದೇಶಿಸಿದ್ದು, ಆದಿತ್ಯ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಬಾಲನಟಿಯಾಗಿ ಜನಪ್ರಿಯರಾಗಿರುವ ಅಂಕಿತ ಜಯರಾಂ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದು, ನೇಹಾ ಪಾಟೀಲ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Kannada New Movie kagada film released on 5th July
Koo

ಬೆಂಗಳೂರು: ಅರುಣ್ ಕುಮಾರ್ ಆಂಜನೇಯ ಅವರ ನಿರ್ಮಾಣದಲ್ಲಿ ರಂಜಿತ್ ನಿರ್ದೇಶಿಸಿರುವ ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆಯಾದ “ಕಾಗದ” ಚಿತ್ರ (Kannada New Movie) ಇದೇ ಜುಲೈ 5ರಂದು ತೆರೆಗೆ ಬರುತ್ತಿದೆ.

“ಕಾಗದ” ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆ. 2005 ರ ಕಾಲಘಟ್ಟದ ಕಥೆಯೂ ಕೂಡ. ಹಳ್ಳಿಹಳ್ಳಿಗಳ ನಡುವಿನ ವೈಷಮ್ಯದ ನಡುವೆ ಅರಳಿದ ಪ್ರೇಮಕಥೆಯೂ ಹೌದು.

ಆದಿತ್ಯ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಬಾಲನಟಿಯಾಗಿ ಜನಪ್ರಿಯರಾಗಿರುವ ಅಂಕಿತ ಜಯರಾಂ “ಕಾಗದ” ಚಿತ್ರದ ನಾಯಕಿ. ನೇಹಾ ಪಾಟೀಲ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಲ ರಾಜ್ವಾಡಿ, ನೀನಾಸಂ ಅಶ್ವಥ್, ಮಠ ಕೊಪ್ಪಳ, ಶಿವಮಂಜು ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: IND vs SA : ಭಾರತ ವಿರುದ್ಧ ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಪ್ರಕಟ

ನಾಲ್ಕು ಹಾಡುಗಳಿರುವ “ಕಾಗದ” ಚಿತ್ರಕ್ಕೆ ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ ಹಾಗೂ ಪವನ್ ಗೌಡ ಸಂಕಲನ ಈ ಚಿತ್ರಕ್ಕಿದೆ.

Continue Reading
Advertisement
Food for Concentration
ಆರೋಗ್ಯ12 mins ago

Food for Concentration: ಈ ಆಹಾರಗಳ ಸೇವನೆಯಿಂದ ನಿಮ್ಮ ಏಕಾಗ್ರತೆ ಶಕ್ತಿಯೇ ಕುಂಠಿತವಾಗಬಹುದು!

Grand Marriage
Latest12 mins ago

Grand Marriage: ಭಾರತದ ಶ್ರೀಮಂತ ಕುಟುಂಬಗಳ ಅತ್ಯಂತ ಅದ್ಧೂರಿ ಮದುವೆ ಯಾರದು? ಪಟ್ಟಿ ಇಲ್ಲಿದೆ

ರಾಜಮಾರ್ಗ ಅಂಕಣ virat kohli rohit sharma
ಅಂಕಣ31 mins ago

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್ ಫೈನಲ್; ಒಂದು ಪಂದ್ಯ – ಹಲವು ಪಾಠ

niranjana ನನ್ನ ದೇಶ ನನ್ನ ದನಿ ಅಂಕಣ
ಅಂಕಣ45 mins ago

ನನ್ನ ದೇಶ ನನ್ನ ದನಿ: ಜಗತ್ತಿನ ಇತಿಹಾಸ ಕನ್ನಡದಲ್ಲಿ ತರಲು ಆಸೆಪಟ್ಟಿದ್ದ ನಿರಂಜನ

dengue fever hassan girl death
ಕ್ರೈಂ1 hour ago

Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

ITR Filing
ಮನಿ-ಗೈಡ್1 hour ago

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು ಈ ಸಂಗತಿ ತಿಳಿದಿರಲೇಬೇಕು!

karnataka weather Forecast
ಮಳೆ2 hours ago

Karnataka Weather : ರಾಜ್ಯದ ಇಲ್ಲೆಲ್ಲ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Mosquito Repellents
ಆರೋಗ್ಯ2 hours ago

Mosquito Repellents: ರಾಸಾಯನಿಕದ ಅಪಾಯ ಏಕೆ? ಸೊಳ್ಳೆ ಓಡಿಸಲು ಇಲ್ಲಿವೆ 10 ನೈಸರ್ಗಿಕ ವಿಧಾನಗಳು!

Karnataka Tour
ಪ್ರವಾಸ2 hours ago

Karnataka Tour: ಮಳೆಗಾಲದಲ್ಲಿ ಭೇಟಿ ನೀಡಬಹುದಾದ ಕರ್ನಾಟಕದ 15 ರಮಣೀಯ ತಾಣಗಳು

dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ದಿಢೀರ್ ಧನಾಗಮನದಿಂದ ಸಂತೋಷ ಇಮ್ಮಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ14 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌