Kangana Ranaut: ಕಂಗನಾಗೆ ಮಹಿಳಾ ಪೇದೆ ಹೊಡೆಯಲು ಕಾರಣವೇನು? ರೈತರ ಬಗ್ಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಏನು? - Vistara News

ಪ್ರಮುಖ ಸುದ್ದಿ

Kangana Ranaut: ಕಂಗನಾಗೆ ಮಹಿಳಾ ಪೇದೆ ಹೊಡೆಯಲು ಕಾರಣವೇನು? ರೈತರ ಬಗ್ಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಏನು?

Kangana Ranaut : 2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು.

VISTARANEWS.COM


on

Kangana Ranaut
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕ ಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಸಂಸದರಾಗಿ ಆಯ್ಕೆಯಾದ ಕಂಗನಾ ರಣಾವತ್​ (Kangana Ranaut), 2020-21 ರಲ್ಲಿ ನಡೆದ ರೈತರ ಪ್ರತಿಭಟನೆಯ ಬಗ್ಗೆ ಹಿಂದೆ ನೀಡಿದ ಹೇಳಿಕೆಯಿಂದ ಕೆರಳಿದ್ದ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಿಳಾ ಸಿಬ್ಬಂದಿಯೊಬ್ಬರು ಗುರುವಾರ ಅವರು ಎದುರು ಸಿಕ್ಕಾಗ ಕಪಾಳಮೋಕ್ಷ ಮಾಡಿದ್ದರು. ನಟಿ ಹಾಗೂ ಸಂಸದೆಯ ವಿರುದ್ಧ ಕೈ ಮಾಡಿದ ಕುಲ್ವಿಂದರ್​ ಕೌರ್​ ವಿ ರುದ್ದ ಪ್ರಕರಣ ದಾಖಲಾಗಿದೆ. ಇದೇ ವೇಳೆ ನಟಿ ಈ ಹಿಂದೆ ನೀಡಿದ್ದ ಹೇಳಿಕೆಯೂ ಮುನ್ನೆಲೆಗೆ ಬಂದಿದೆ.

ನರೇಂದ್ರ ಮೋದಿ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಕಾನೂನುಗಳನ್ನ ಜಾರಿಗೆ ತರಲು ಮುಂದಾದಾಗ ಅದರ ವಿರುದ್ಧ ಆಂದೋಲನ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ‘ಖಲಿಸ್ತಾನಿ ಬೆಂಬಲಿಗರು’ ಎಂದು ಒಂದು ಗುಂಪು ಕರೆದಿತ್ತು. ಈ ವಿವಾದಕ್ಕೆ ಈಡಾದಾಗ ಕಂಗಾನಾ ಆ ಗಾಯಕ್ಕೆ ಉಪ್ಪು ಸವರುವಂಥ ಹೇಳಿಕೆ ನೀಡಿದ್ದರು.

2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್​ಸ್ಟೇಬಲ್​ ಕುಲ್ವಿಂದರ್ ಕೌರ್​ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.

100 ರೂಪಾಯಿಗೆ ಸಿಗುವ ಮಹಿಳೆಯರು ಎಂದು ಕಂಗನಾ ಕೊಟ್ಟಿರುವ ಹೇಳಿಕೆಯು ಎಕ್ಸ್ ನಲ್ಲಿ(ಟ್ವಿಟರ್​) ಕಂಗನಾ ಮತ್ತು ಗಾಯಕ-ನಟ ದಿಲ್ಜೀತ್ ದೋಸಾಂಜ್ ನಡುವೆ ಗಲಾಟೆಗೆ ಕಾರಣವಾಗಿತ್ತು.

ರಿಹಾನ್ನಾ ಬಗ್ಗೆಯೂ ಟೀಕೆ

ಫೆಬ್ರವರಿ 2021 ರಲ್ಲಿ, ಅಂತರರಾಷ್ಟ್ರೀಯ ಪಾಪ್ ಸೆನ್ಸೇಷನ್ ರಿಹಾನ್ನಾ ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಂಗನಾ ರನೌತ್ ಪ್ರತಿಭಟನಾಕಾರರನ್ನು “ಭಯೋತ್ಪಾದಕರು” ಎಂದು ಕರೆದಿದ್ದರು ಮತ್ತು ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Stock market Crash : ಜೂ. 4ರ ಷೇರುಪೇಟೆ ಕುಸಿತ ಮೋದಿ, ಅಮಿತ್​ ಶಾ ನಡೆಸಿದ ಮಹಾ ಹಗರಣ; ರಾಹುಲ್ ಗಾಂಧಿ ಆರೋಪ

ರಿಹಾನ್ನಾ ಅವರ ಎಕ್ಸ್​ ಪೋಸ್ಟ್​ಗೆ ಉತ್ತರಿಸಿದ ಕಂಗನಾ ರನೌತ್ ” ಅವರು ರೈತರಲ್ಲ, ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಭಯೋತ್ಪಾದಕರು. ಇವರಿಂದಾಗಿ ದುರ್ಬಲವಾಗುತ್ತಿರುವ ನಮ್ಮ ದೇಶವನ್ನು ಚೀನಾ ಸ್ವಾಧೀನಪಡಿಸಿಕೊಳ್ಳಬಹುದು. ಚೀನಾದ ವಸಾಹತು ಮಾಡಬಹುದು. ನೀವು ನಮ್ಮ ಬಗ್ಗೆ ಹೇಳಲು ಬರಬೇಡಿ ಎಂದು ಹೇಳಿಕೆ ನೀಡಿದ್ದರು.

ರಿಹಾನ್ನಾ ವಿರುದ್ಧದ ಮತ್ತು ₹ 100 ಪೋಸ್ಟ್​​ಗಳನ್ನು ಕಂಗನಾ ರಣಾವತ್​ ಅಳಿಸಿದ್ದರು. 2021 ರ ಡಿಸೆಂಬರ್​ನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸಲಾಯಿತು ಮತ್ತು ಕೆಲವು ದಿನಗಳ ನಂತರ, ರೈತರ ವಿರುದ್ಧದ ಹೇಳಿಕೆಗಳಿಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಕಂಗನಾ ಅರ ಕಾರನ್ನು ಪಂಜಾಬ್​ನ ಕಿರಾತ್ಪುರ್ ಸಾಹಿಬ್​ನಲ್ಲಿ ತಡೆದಿದ್ದರು.

ಕಂಗನಾ ಪ್ರತಿಕ್ರಿಯೆ ಏನು?

ನಾನು ಸುರಕ್ಷಿತವಾಗಿದ್ದೇನೆ. ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ಸಮಯದಲ್ಲಿ ಈ ಘಟನೆ ನಡೆದಿದೆ. ತಪಾಸಣೆ ಮುಗಿದ ಕ್ಷಣ, ಬೇರೆ ಕ್ಯಾಬಿನ್​ನಲ್ಲಿದ್ದ ಸಿಐಎಸ್ಎಫ್​​ನ ಮಹಿಳಾ ಕಾನ್​ಸ್ಟೆಬಲ್​ ನನ್ನ ಬಳಿಗೆ ಬಂದು ನನ್ನ ಮುಖಕ್ಕೆ ಬದಿಯಿಂದ ಹೊಡೆದು ನಿಂದಿಸಿದಳು. ನೀವು ಇದನ್ನು ಏಕೆ ಮಾಡಿದ್ದೀರಿ ಎಂದು ನಾನು ಅವಳನ್ನು ಕೇಳಿದೆ. ಆಕೆ ರೈತರ ಪ್ರತಿಭಟನೆ ಬಗ್ಗೆ ನಾನು ನೀಡಿದ ಹೇಳಿಕೆಗಾಗಿ ಅಂದಳು ಎಂದು ನಟಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಂಜಾಬ್​​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ. ಇದನ್ನು ಹೇಗೆ ನಿಭಾಯಿಸಬೇಕು ಎಂಬುದು ನನಗೆ ಕಳವಳಕಾರಿಯಾಗಿದೆ ಎಂದೂ ಕಂಗನಾ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ICC Team of the Tournament : ಐಸಿಸಿ ಟೀಮ್​ ಆಫ್​​ ದಿ ಟೂರ್ನಮೆಂಟ್​ನಲ್ಲಿ ಆರು ಭಾರತೀಯರು​; ಕೊಹ್ಲಿಗಿಲ್ಲ ಚಾನ್ಸ್​

ICC Team of the Tournament : ಫೈನಲ್ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಬಗ್ಗು ಬಡಿದಿತ್ತು. ಇದರೊಂದಿಗೆ ಎಂ.ಎಸ್.ಧೋನಿ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. 2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಉದ್ಘಾಟನಾ ಆವೃತ್ತಿಯಲ್ಲಿ ಧೋನಿನೇತೃತ್ವದಲ್ಲಿ ಭಾರತ ಟ್ರೋಫಿ ಗೆದ್ದಿತ್ತು.

VISTARANEWS.COM


on

ICC Team of the Tournament
Koo

ಬೆಂಗಳೂರು: ಜೂನ್ 29 ರಂದು ವೆಸ್ಟ್​ ಇಂಡೀಸ್​ನ ಬಾರ್ಬಡೋಸ್​ನಲ್ಲಿ ನಡೆದ ಐಸಿಸಿ ಟಿ20 ವಿಶ್ವ ಕಪ್​ 2024ರ (ICC T20 World Cup 2024) ಫೈನಲ್​ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಟ್ರೋಫಿ ಗೆದ್ದಿತು. ಅಲ್ಲಿಗೆ ದೊಡ್ಡ ಅಧ್ಯಾಯವೊಂದು ಮುಗಿಯಿತು. ಇಡೀ ಟೂರ್ನಿಯಲ್ಲಿ ರೋಚಕ ಪಂದ್ಯಗಳು ಮತ್ತು ಅತ್ಯುತ್ತಮ ಪ್ರದರ್ಶನಗಳನ್ನು ಕಂಡವು. ಅವೆಲ್ಲವನ್ನೂ ಪರಿಗಣಿಸಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ , ಫೈನಲ್ ಪಂದ್ಯದ ನಂತರ ಟೀಮ್ ಆಫ್​ ದಿ ಟೂರ್ನಮೆಂಟ್​ (ICC Team of the Tournament- ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರ ತಂಡ) ಪ್ರಕಟಿಸಿದೆ. ಇದರಲ್ಲಿ 6 ಭಾರತೀಯ ಆಟಗಾರರು ಅವಕಾಶ ಪಡೆದಿದ್ದಾರೆ. ಆದರೆ ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿಗೆ ಚಾನ್ಸ್ ಸಿಕ್ಕಿಲ್ಲ.

ಫೈನಲ್ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಬಗ್ಗು ಬಡಿದಿತ್ತು. ಇದರೊಂದಿಗೆ ಎಂ.ಎಸ್.ಧೋನಿ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. 2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಉದ್ಘಾಟನಾ ಆವೃತ್ತಿಯಲ್ಲಿ ಧೋನಿನೇತೃತ್ವದಲ್ಲಿ ಭಾರತ ಟ್ರೋಫಿ ಗೆದ್ದಿತ್ತು. ಹಾಗೆಯ ಐಸಿಸಿ ಟೀಮ್ ಆಫ್​ ದಿ ಟೂರ್ನಮೆಂಟ್​​ನಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ ಸೇರಿದಂತೆ ಭಾರತ ತಂಡದ ಆರು ಆಟಗಾರರು ಇದ್ದಾರೆ. ಆದರೆ, ರನ್ನರ್ ಅಪ್ ಸ್ಥಾನ ಪಡೆದರೂ ದಕ್ಷಿಣ ಆಫ್ರಿಕಾದ ಯಾವುದೇ ಆಟಗಾರರ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದಿಲ್ಲ

ಸೆಮಿಫೈನಲ್ ತಲುಪಿದ ನಂತರ ಅಫ್ಘಾನಿಸ್ತಾನದ ಮೂವರು ಆಟಗಾರರು 11ರ ಬಳಗದಲ್ಲಿರುವುದು ವಿಶೇಷ. ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾದ ತಲಾ ಒಬ್ಬ ಆಟಗಾರ ಸ್ಥಾನ ಕಂಡುಕೊಂಡಿದ್ದಾರೆ. ಆಯ್ಕೆ ಸಮಿತಿಯಲ್ಲಿ ವೀಕ್ಷಕವಿವರಣೆಗಾರರಾದ ಹರ್ಷ ಭೋಗ್ಲೆ, ಇಯಾನ್ ಬಿಷಪ್, ಕಾಸ್ ನೈದೂ ಮತ್ತು ಐಸಿಸಿ ಕ್ರಿಕೆಟ್ ಜನರಲ್ ಮ್ಯಾನೇಜರ್ ವಾಸಿಮ್ ಖಾನ್ ಇದ್ದರು.

ರೋಹಿತ್ ಶರ್ಮಾ ತಂಡದ ನಾಯಕ

ಭಾರತವನ್ನು ಪ್ರಶಸ್ತಿಗೆ ಮುನ್ನಡೆಸಿದ ನಂತರ ರೋಹಿತ್ ಶರ್ಮಾ ಐಸಿಸಿ ಟೀಮ್ ಆಫ್​ ದಿ ಟೂರ್ನಮೆಂಟ್​ಗೂ ನಾಯಕ. ರೋಹಿತ್ 8 ಇನ್ನಿಂಗ್ಸ್​ಗಳಲ್ಲಿ 257 ರನ್ ಗಳಿಸಿ ಎರಡನೇ ಗರಿಷ್ಠ ರನ್ ಸ್ಕೋರರ್ ಆಗಿದ್ದರು. 281 ರನ್ ಗಳಿಸಿರುವ ರಹಮಾನುಲ್ಲಾ ಗುರ್ಬಾಜ್ ಇತ್ತೀಚೆಗೆ ಮುಕ್ತಾಯಗೊಂಡ ಟಿ 20 ಪಂದ್ಯಾವಳಿಯಲ್ಲಿ ರೋಹಿತ್ ಅವರಿಗಿಂತ ಮುಂದಿದ್ದರು. ಅವರು ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ವಿಂಡೀಸ್​ನ ನಿಕೋಲಸ್ ಪೂರನ್ ಹಾಗೂ ಮಾರ್ಕಸ್ ಸ್ಟೊಯಿನಿಸ್ ಇದ್ದಾರೆ. ಪೂರನ್ ಅಫ್ಘಾನಿಸ್ತಾನ ವಿರುದ್ಧ 53 ಎಸೆತಗಳಲ್ಲಿ 98 ರನ್ ಸೇರಿದಂತೆ 38 ಸರಾಸರಿಯಲ್ಲಿ 228 ರನ್ ಗಳಿಸಿದ್ದರು. ಸ್ಟೋಯ್ನಿಸ್ 40 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 169 ರನ್ ಗಳಿಸಿದ್ದಾರೆ. ಅವರು 160 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಸ್ಪರ್ಧೆಯ ಸಮಯದಲ್ಲಿ ಅವರು ಬೌಲಿಂಗ್​ನಲ್ಲಿ 10 ವಿಕೆಟ್ ಗಳನ್ನು ಪಡೆದಿದ್ದಾರೆ.

ಯುಎಸ್ಎ, ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್​ನಲ್ಲಿ ಕೊಡುಗೆ ನೀಡಿದರು. ವಿಶ್ವಕಪ್ ಫೈನಲ್​​ನ ಅಂತಿಮ ಓವರ್​ನಲ್ಲಿ ಸೂರ್ಯಕುಮಾರ್ ಡೇವಿಡ್ ಮಿಲ್ಲರ್ ಅವರ ಕ್ಯಾಚ್ ಪಡೆದು ಮಿಂಚಿದ್ದಾರೆ. ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಈ ತಂಡದಲ್ಲಿದ್ದಾರೆ.

ಇದನ್ನೂ ಓದಿ: Dinesh Karthik : ಆರ್​​ಸಿಬಿ ಬ್ಯಾಟಿಂಗ್ ಕೋಚ್​, ಮಾರ್ಗದರ್ಶಕರಾಗಿ ದಿನೇಶ್​ ಕಾರ್ತಿಕ್ ನೇಮಕ

ಅಫ್ಘಾನಿಸ್ತಾನದ ನಾಯಕ ರಶೀದ್ ಖಾನ್ ಬೌಲಿಂಗ್ ಆಲ್ರೌಂಡರ್ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವೇಗದ ದಾಳಿಯಲ್ಲಿ ಜಸ್ಪ್ರೀತ್ ಬುಮ್ರಾ, ಅರ್ಷ್ದೀಪ್ ಸಿಂಗ್ ಮತ್ತು ಫಜಲ್ಹಾಕ್ ಫಾರೂಕಿ ಇದ್ದಾರೆ. ಟೂರ್ನಿಯಲ್ಲಿ 15 ವಿಕೆಟ್ ಪಡೆದ ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಅನ್ರಿಚ್ ನಾರ್ಟ್ಜೆ 12ನೇ ಆಟಗಾರನಾಗಿ ಆಯ್ಕೆಯಾಗಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ ತಂಡ ಈ ರೀತಿ ಇದೆ

ರೋಹಿತ್ ಶರ್ಮಾ (ನಾಯಕ- ಭಾರತ), ರಹಮಾನುಲ್ಲಾ ಗುರ್ಬಾಜ್ (ಅಫ್ಘಾನಿಸ್ತಾನ), ನಿಕೋಲಸ್ ಪೂರನ್ (ವೆಸ್ಟ್ ಇಂಡೀಸ್), ಸೂರ್ಯಕುಮಾರ್ ಯಾದವ್ (ಭಾರತ), ಮಾರ್ಕಸ್ ಸ್ಟೊಯಿನಿಸ್ (ಆಸ್ಟ್ರೇಲಿಯಾ), ಹಾರ್ದಿಕ್ ಪಾಂಡ್ಯ (ಭಾರತ), ಅಕ್ಷರ್ ಪಟೇಲ್ (ಭಾರತ), ರಶೀದ್ ಖಾನ್ (ಅಫ್ಘಾನಿಸ್ತಾನ), ಜಸ್ಪ್ರೀತ್ ಬುಮ್ರಾ (ಭಾರತ), ಅರ್ಷ್ದೀಪ್ ಸಿಂಘಾ (ಭಾರತ), ಫಜಲ್ಹಾಕ್ ಫಾರೂಕಿ (ಅಫ್ಘಾನಿಸ್ತಾನ).

Continue Reading

ಉದ್ಯೋಗ

Job Alert: HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ 1 ಲಕ್ಷ ರೂ.ವರೆಗೆ: ಇಂದೇ ಅಪ್ಲೈ ಮಾಡಿ

Job Alert: ಹಿಂದುಸ್ತಾನ್‌ ಕಾಪರ್‌ ಲಿಮಿಟೆಡ್‌ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 56 ಜೂನಿಯರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಎಂಜಿನಿಯರಿಂಗ್‌ ಪದವಿ ಪಡೆದು ಕಾರ್ಯಾನುಭವ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನ.

VISTARANEWS.COM


on

Job Alert
Koo

ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದುಸ್ತಾನ್‌ ಕಾಪರ್‌ ಲಿಮಿಟೆಡ್‌ (Hindustan Copper Limited) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Hindustan Copper Recruitment 2024). ಒಟ್ಟು 56 ಜೂನಿಯರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಎಂಜಿನಿಯರಿಂಗ್‌ ಪದವಿ ಪಡೆದು ಕಾರ್ಯಾನುಭವ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನ (Job Alert).

ಹುದ್ದೆಗಳ ವಿವರ

ಜೂನಿಯರ್ ಮ್ಯಾನೇಜರ್ (ಮೈನಿಂಗ್‌)- 46 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಪದವಿ
ಜೂನಿಯರ್ ಮ್ಯಾನೇಜರ್ (ಎಲೆಕ್ಟ್ರಿಕಲ್)- 6 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ
ಜೂನಿಯರ್ ಮ್ಯಾನೇಜರ್ (ಕಂಪನಿ ಸೆಕ್ರೆಟರಿ) 2 ಹುದ್ದೆ, ವಿದ್ಯಾರ್ಹತೆ: ಕಂಪನಿ ಸೆಕ್ರೆಟರಿ, ಪದವಿ
ಜೂನಿಯರ್ ಮ್ಯಾನೇಜರ್ (ಫೈನಾನ್ಸ್)- 1 ಹುದ್ದೆ, ವಿದ್ಯಾರ್ಹತೆ: ಸಿಎ, ಪದವಿ, ಸ್ನಾತಕೋತ್ತರ ಪದವಿ / ಡಿಪ್ಲೋಮಾ
ಜೂನಿಯರ್ ಮ್ಯಾನೇಜರ್ (ಎಚ್ಆರ್) 1 ಹುದ್ದೆ, ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ / ಡಿಪ್ಲೋಮಾ, ಎಂಬಿಎ

ವಯೋಮಿತಿ

ಗರಿಷ್ಠ ವಯೋಮಿತಿ 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗದ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ (ಸಾಮಾನ್ಯ / ಇಡಬ್ಲ್ಯುಎಸ್‌) ವಿಭಾಗದ ಅಭ್ಯರ್ಥಿಗಳಿಗೆ 10, ಪಿಡಬ್ಲ್ಯುಡಿ (ಒಬಿಸಿ) ವಿಭಾಗದ ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಡಿ (ಎಸ್‌ಸಿ / ಎಸ್‌ಟಿ) ವಿಭಾಗದ ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 30,000 ರೂ. – 1,20,000 ರೂ. ಮಾಸಿಕ ವೇತನ ದೊರೆಯಲಿದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯುಎಸ್‌ ವಿಭಾಗದ ಅಭ್ಯರ್ಥಿಗಳು 500 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಇತರ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

Hindustan Copper Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.hindustancopper.com/RecruitmentNew/CandidateLogin/113).
  • ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಪಾರಂ ಡೌನ್‌ಲೋಡ್‌ ಮಾಡಿ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Continue Reading

ಕ್ರಿಕೆಟ್

Dinesh Karthik : ಆರ್​​ಸಿಬಿ ಬ್ಯಾಟಿಂಗ್ ಕೋಚ್​, ಮಾರ್ಗದರ್ಶಕರಾಗಿ ದಿನೇಶ್​ ಕಾರ್ತಿಕ್ ನೇಮಕ

Dinesh Karthik : ನಮ್ಮ ಕೀಪರ್ ದಿನೇಶ್ ಕಾರ್ತಿಕ್ ಅವರನ್ನು ಹೊಸ ಅವತಾರದಲ್ಲಿ ಆರ್​​​ಸಿಬಿಗೆ ಸ್ವಾಗತಿಸುತ್ತೇವೆ. ಆರ್​ಸಿಬಿ ಪುರುಷರ ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ಡಿಕೆ ಕಾರ್ಯನಿರ್ವಹಿಸಲಿದ್ದಾರೆ. ನೀವು ಕಾರ್ತಿಕ್ ಅವರನ್ನು ಕ್ರಿಕೆಟ್​ನಿಂದ ಹೊರತೆಗೆಯಬಹುದು ಆದರೆ ಕ್ರಿಕೆಟ್ ಅನ್ನು ಅವರಿಂದ ಹೊರತೆಗೆಯಲು ಸಾಧ್ಯವಿಲ್ಲ! 🙌 12 ಮ್ಯಾನ್​ ಆರ್ಮಿ. ಅವರಿಗಾಗಿ ಪ್ರೀತಿಯನ್ನು ಸ್ಪುರಿಸಿ ಎಂದು ಬರೆದುಕೊಂಡಿದೆ.

VISTARANEWS.COM


on

Dinesh Karthik
Koo

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವು ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ (Dinesh Karthik) ಅವರನ್ನು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಋತುವಿನಲ್ಲಿ (IPL 2025) ಬ್ಯಾಟಿಂಗ್ ಕೋಚ್ ಮತ್ತು ತಂಡದ ಮಾರ್ಗದರ್ಶಕರಾಗಿ ನೇಮಕ ಮಾಡಿದೆ. ಐಪಿಎಲ್ ಫ್ರಾಂಚೈಸಿ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ ನ ತನ್ನ ಅಧಿಕೃತ ಹ್ಯಾಂಡಲ್ ಮೂಲಕ ಈ ಘೋಷಣೆಯನ್ನು ಪ್ರಕಟಿಸಿದೆ.

ನಮ್ಮ ಕೀಪರ್ ದಿನೇಶ್ ಕಾರ್ತಿಕ್ ಅವರನ್ನು ಹೊಸ ಅವತಾರದಲ್ಲಿ ಆರ್​​​ಸಿಬಿಗೆ ಸ್ವಾಗತಿಸುತ್ತೇವೆ. ಆರ್​ಸಿಬಿ ಪುರುಷರ ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ಡಿಕೆ ಕಾರ್ಯನಿರ್ವಹಿಸಲಿದ್ದಾರೆ. ನೀವು ಕಾರ್ತಿಕ್ ಅವರನ್ನು ಕ್ರಿಕೆಟ್​ನಿಂದ ಹೊರತೆಗೆಯಬಹುದು ಆದರೆ ಕ್ರಿಕೆಟ್ ಅನ್ನು ಅವರಿಂದ ಹೊರತೆಗೆಯಲು ಸಾಧ್ಯವಿಲ್ಲ! 12 ಮ್ಯಾನ್​ ಆರ್ಮಿ. ಅವರಿಗಾಗಿ ಪ್ರೀತಿಯನ್ನು ಸ್ಪುರಿಸಿ ಎಂದು ಬರೆದುಕೊಂಡಿದೆ.

ದಿನೇಶ್ ಕಾರ್ತಿಕ್ ಬ್ಯಾಟಿಂಗ್ ವೈಭವ

ಕೆಳ ಮಧ್ಯಮ ಕ್ರಮಾಂಕದ ಬ್ಯಾಟರ್​ ಆಗಿರುವ ಕಾರ್ತಿಕ್, ಮೈದಾನದ ಎಲ್ಲೆಡೆ ಚೆಂಡು ಕಳುಹಿಸಿ ಸ್ಕೋರ್ ಮಾಡುವ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸಿದ್ದ ನಂತರ, ಕೀಪರ್- ಬ್ಯಾಟರ್​ ಐಪಿಎಲ್ 2022 ಕ್ಕೆ ಮುಂಚಿತವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡರು. ಐಪಿಎಲ್ ವೃತ್ತಿಜೀವನದಲ್ಲಿ ಆರು ತಂಡಗಳನ್ನು ಪ್ರತಿನಿಧಿಸಿರುವ ಕಾರ್ತಿಕ್, ಆರ್ಸಿಬಿ ಪರ 53 ಇನಿಂಗ್ಸ್​ಗಳಲ್ಲಿ 162.96 ಸ್ಟ್ರೈಕ್​ ರೇಟ್​​ನಲ್ಲಿ ಮೂರು ಅರ್ಧಶತಕಗಳು ಸೇರಿದಂತೆ 937 ರನ್ ಗಳಿಸಿದ್ದಾರೆ.

ಅವರು ಇತ್ತೀಚೆಗೆ ಐಪಿಎಲ್ 2024 ರಲ್ಲಿ ಅದ್ಭುತ ಯಶಸ್ಸನ್ನು ಅನುಭವಿಸಿದ್ದಾರೆ. 36.22 ಸರಾಸರಿ ಮತ್ತು 187.36 ಸ್ಟ್ರೈಕ್ ರೇಟ್​​ನಲ್ಲಿ 326 ರನ್ ಗಳಿಸಿದ್ದಾರೆ. ಆದಾಗ್ಯೂ, ನಾವು ಮೆಗಾ ಹರಾಜು ಬರುತ್ತಿರುವುದನ್ನು ಪರಿಗಣಿಸಿ, ಕಾರ್ತಿಕ್ ಐಪಿಎಲ್​​ನಿಂದ ಹೊರಕ್ಕೆ ನಡೆದರು.

ಇದನ್ನೂ ಓದಿ: Jasprit Bumrah : ಜಸ್​ಪ್ರಿತ್ ಬುಮ್ರಾ ವೈಟ್ ಬಾಲ್ ಕ್ರಿಕೆಟ್​​ನ ಅತ್ಯುತ್ತಮ ಬೌಲರ್​ ಎಂದು ಹೊಗಳಿದ ಮೈಕಲ್ ವಾನ್

ಕಾರ್ತಿಕ್ ಮೂರು ಸ್ವರೂಪಗಳಲ್ಲಿ 180 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಇದರಲ್ಲಿ ಅವರು ಏಕೈಕ ಟೆಸ್ಟ್ ಶತಕ ಮತ್ತು 17 ಅರ್ಧಶತಕಗಳೊಂದಿಗೆ 3463 ರನ್ ಗಳಿಸಿದ್ದಾರೆ. ಕಾರ್ತಿಕ್ 172 ಔಟ್​ಗಳನ್ನು ಸಹ ಮಾಡಿದ್ದಾರೆ. ಅವುಗಳಲ್ಲಿ ಹೆಚ್ಚಿನವು ಸ್ಪಂಪ್​​ಗಳ ಹಿಂದೆ ಹಾಗೂ ಕೆಲವು ಔಟ್​ಫೀಲ್ಡ್​ ಕ್ಯಾಚ್​ಗಳು. 2022ರ ಟಿ20 ವಿಶ್ವಕಪ್​​ನಲ್ಲಿ ಬಾಂಗ್ಲಾದೇಶ ವಿರುದ್ಧ ಕೊನೆಯ ಬಾರಿ ಆಡಿದ್ದರು.

20007 ವಿಶ್ವ ಕಪ್ ವಿಜೇತ

2007 ರ ಟಿ 20 ವಿಶ್ವಕಪ್ ವಿಜೇತ ತಾರೆ ಕಾರ್ತಿಕ್​ ಐಪಿಎಲ್​ನಲ್ಲಿ ಭರ್ಜರಿ ಅನುಭವ ಹೊಂದಿದ್ದಾರೆ. 257 ಪಂದ್ಯಗಳನ್ನು ಆಡಿದ ಅವರು 26.32 ಸರಾಸರಿಯಲ್ಲಿ 4,842 ರನ್ ಗಳಿಸಿದ್ದಾರೆ. ಕಾರ್ತಿಕ್ ತಮ್ಮ ಐಪಿಎಲ್ ಪ್ರಯಾಣವನ್ನು ಡೆಲ್ಲಿ ಡೇರ್ ಡೆವಿಲ್ಸ್ (ಈಗ ಕ್ಯಾಪಿಟಲ್ಸ್) ನೊಂದಿಗೆ ಪ್ರಾರಂಭಿಸಿದ್ದರು. ಆರ್ ಸಿಬಿ ಹೊರತುಪಡಿಸಿ ಕೋಲ್ಕತ್ತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ಅನ್ನು ಪ್ರತಿನಿಧಿಸಿದರು.

ಬ್ಯಾಟಿಂಗ್ ಕೋಚ್ ಮತ್ತು ಬ್ಯಾಟಿಂಗ್ ಮೆಂಟರ್ ಆಗಿ ನೇಮಕಗೊಂಡ ಬಗ್ಗೆ ಮಾತನಾಡಿದ ದಿನೇಶ್ ಕಾರ್ತಿಕ್, ವೃತ್ತಿಪರ ಮಟ್ಟದಲ್ಲಿ ಕೋಚಿಂಗ್ ನನಗೆ ನಂಬಲಾಗದಷ್ಟು ರೋಮಾಂಚನಕಾರಿಯಾಗಿದೆ. ಇದು ನನ್ನ ಜೀವನದ ಹೊಸ ಅಧ್ಯಾಯ. ನಾನು ನಿಜವಾಗಿಯೂ ಉತ್ಸುಕನಾಗಿದ್ದೇನೆ. ಒಬ್ಬ ಆಟಗಾರನಾಗಿ ನನ್ನ ಅನುಭವಗಳನ್ನು ತಂಡದ ಅಭಿವೃದ್ಧಿಗೆ ಕೊಡುಯಾಗಿ ನೀಡುತ್ತೇನೆ. ಹೆಚ್ಚುವರಿ ಮೌಲ್ಯವನ್ನು ತರುತ್ತೇನೆ ಎಮದು ಹೇಳಿದ್ದಾರೆ.

ಕ್ರಿಕೆಟ್ ಯಶಸ್ಸು ಕೇವಲ ತಾಂತ್ರಿಕ ಪ್ರಾವೀಣ್ಯತೆಯ ಮೇಲೆ ಮಾತ್ರವಲ್ಲ, ಬುದ್ಧಿವಂತಿಕೆ ಮತ್ತು ಸಂಯಮದ ಮೇಲೂ ಅವಲಂಬಿತವಾಗಿದೆ ಎಂದು ನಾನು ನಂಬುತ್ತೇನೆ. ನಮ್ಮ ಬ್ಯಾಟಿಂಗ್ ಗುಂಪಿಗೆ ತರಬೇತಿ ನೀಡಲು ಮತ್ತು ಮಾರ್ಗದರ್ಶನ ನೀಡಲು ನಾನು ಉತ್ಸುಕನಾಗಿದ್ದೇನೆ. ಆಟಗಾರರ ವಿಧಾನವನ್ನು ಪರಿಷ್ಕರಿಸಲು ಮಾತ್ರವಲ್ಲದೆ ಒತ್ತಡದಲ್ಲಿ ಉತ್ತಮ ಸಾಧನೆ ಮಾಡಲು ಅಗತ್ಯ ಅರಿವನ್ನು ಬೆಳೆಸಿಕೊಳ್ಳಲು ಸಹಾಯ ಮಾಡುತ್ತೇನೆ. ನಾನು ಆರ್ಸಿಬಿಯೊಂದಿಗೆ ನನ್ನ ಒಡನಾಟವನ್ನು ಮುಂದುವರಿಸುವುದು ಖುಷಿಯ ವಿಚಾರ ಎಂದು ಅವರು ಹೇಳಿದರು.

ಆರ್​ಸಿಬಿ ದೊಡ್ಡ ಪ್ರಮಾಣದ ಅಭಿಮಾನಿ ಬಳಗ ಹೊಂದಿದೆ. ಆದರೆ ಇನ್ನೂ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿಲ್ಲ. ಫ್ರಾಂಚೈಸಿ ನಾಯಕ ಮತ್ತು ತರಬೇತುದಾರರ ಹಲವಾರು ಸಂಯೋಜನೆಗಳನ್ನು ಪ್ರಯತ್ನಿಸಿದೆ ಮತ್ತು ಪರೀಕ್ಷಿಸಿದೆ. ಆದರೆ ಏನೂ ಕೆಲಸ ಮಾಡಿಲ್ಲ. ಆದರೆ 2008ರಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 2011ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹಾಗೂ 2016ರಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಫೈನಲ್​​ನಲ್ಲಿ ಆರ್​ಸಿಬಿ ಸೋತಿದೆ

Continue Reading

ಪ್ರಮುಖ ಸುದ್ದಿ

Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

Dengue Fever: ಹೊಸದಾಗಿ 213 ಡೆಂಗ್ಯು ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1742 ಜನರಿಗೆ ಡೆಂಗ್ಯು ಸೋಂಕು ತಗುಲಿದೆ. ಮಹಿಳೆಯರು ಮತ್ತು ಮಕ್ಕಳು ಡೆಂಗ್ಯು ಸೋಂಕಿಗೆ ಬೇಗ ಒಳಗಾಗುತ್ತಿದ್ದಾರೆ ಎನ್ನಲಾಗಿದ್ದು, ಗರ್ಭಿಣಿಯರಲ್ಲಿ ಡೆಂಗ್ಯು ಹೆಚ್ಚಿನ ಹಾನಿ ಎಸಗುತ್ತಿರುವುದರಿಂದಾಗಿ ಹೆಚ್ಚಿನ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.

VISTARANEWS.COM


on

Dengue fever rises across the state including Bengaluru BBMP Commissioner also get fever
Koo

ಬೆಂಗಳೂರು: ಕಗ್ಗದಾಸಪುರದ 27 ವರ್ಷದ ಯುವಕ ಡೆಂಗ್ಯು ಸೋಂಕಿನಿಂದಲೇ (Dengue Fever) ಸಾವಿಗೀಡಾಗಿದ್ದಾರೆ ಎಂದು ಬಿಬಿಎಂಪಿ (BBMP) ಖಚಿತಪಡಿಸಿದೆ. ಕಳೆದ ಶುಕ್ರವಾರ ಎರಡು ಡೆಂಗ್ಯು ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು ಡೆಂಗ್ಯುವಿನಿಂದಾಗಿದೆ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ (BBMP Health Audit) ಖಚಿತಪಡಿಸಿದೆ.

ಕಗ್ಗದಾಸಪುರದ ಯುವಕನ ಸಾವಿಗೆ ಡೆಂಗ್ಯು ಕಾರಣವವಾಗಿದೆ. ಆದರೆ 80ರ ವೃದ್ಧೆಯ ಸಾವಿಗೆ ಕ್ಯಾನ್ಸರ್ ಕಾರಣ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ನಗರದಲ್ಲಿ ಸದ್ಯ 1743 ಆಕ್ಟಿವ್ ಡೆಂಗ್ಯು ಕೇಸ್‌ಗಳು ಇವೆ.

ಹೊಸದಾಗಿ 213 ಡೆಂಗ್ಯು ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1742 ಜನರಿಗೆ ಡೆಂಗ್ಯು ಸೋಂಕು ತಗುಲಿದೆ. ಮಹಿಳೆಯರು ಮತ್ತು ಮಕ್ಕಳು ಡೆಂಗ್ಯು ಸೋಂಕಿಗೆ ಬೇಗ ಒಳಗಾಗುತ್ತಿದ್ದಾರೆ ಎನ್ನಲಾಗಿದ್ದು, ಗರ್ಭಿಣಿಯರಲ್ಲಿ ಡೆಂಗ್ಯು ಹೆಚ್ಚಿನ ಹಾನಿ ಎಸಗುತ್ತಿರುವುದರಿಂದಾಗಿ ಹೆಚ್ಚಿನ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.

ಇದೂವರೆಗೂ ನಗರದಲ್ಲಿ ಇಬ್ಬರು ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದಾರೆ. ಸಿವಿ ರಾಮನ್ ನಗರದ 27 ವರ್ಷದ ಯುವಕ ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದು, ಈತ ತೀವ್ರ ಜ್ವರದಿಂದ ಬಳಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ ಎಂದು ಬಿಬಿಎಂಪಿ ಮೂಲಗಳು ಮಾಹಿತಿ ನೀಡಿವೆ.

4 ಸಾವಿರ ಗಡಿ ದಾಟಿದ ಡೆಂಗ್ಯೂ; ಐವರು ಸಾವು

ಹವಾಮಾನ ವೈಪರೀತ್ಯ ಮತ್ತು ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. 2024ರಲ್ಲಿ ಈ ವರೆಗೆ (ಜೂನ್‌) 93,012 ಶಂಕಿತವಾಗಿದ್ದು, ಇದರಲ್ಲಿ 40,918 ಮಂದಿಯ ರಕ್ತ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಆ ಪ್ರಕಾರ 4364 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಫಲಿಸದೇ ಐವರು ಮೃತಪಟ್ಟಿದ್ದಾರೆ. ಶಿವಮೊಗ್ಗ, ಬಾಗಲಕೋಟೆ, ಗದಗದಲ್ಲಿ ತಲಾ ಒಬ್ಬರು ಹಾಗೂ ಹಾಸನದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಡೆತ್‌ ಆಡಿಟಿಂಗ್‌ಗೆ ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ವಿಪರೀತ ಏರಿಕೆ ಆಗಿವೆ. ಬೆಂಗಳೂರಲ್ಲಿ ಜನವರಿಯಿಂದ ಈವರೆಗೆ 1,385 ಮಂದಿಗೆ ಡೆಂಗ್ಯೂ ಜ್ವರ ಕಂಡು ಬಂದಿದೆ. ಈವರೆಗೆ ಡೆಂಗ್ಯೂನಿಂದ ಮೃತಪಟ್ಟ ವರದಿ ಆಗಿಲ್ಲ. ಆದರೆ ಇಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವ ಶಂಕೆ ಇದ್ದು, ಸಾವಿಗೆ ಕಾರಣ ತಿಳಿಯುವ ಸಲುವಾಗಿ ಡೆತ್ ಆಡಿಟ್‌ಗೆ ಬಿಬಿಎಂಪಿ ಮುಂದಾಗಿದೆ.

ಇನ್ನೂ 3,470 ಲಾರ್ವಾ ಉತ್ಪತ್ತಿ ತಾಣ ಪತ್ತೆಯಾಗಿದ್ದು, ಇದರಲ್ಲಿ 2,004 ತಾಣಗಳ ನಾಶ ಮಾಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗ ಮಾಹಿತಿ ನೀಡಿದೆ. ಪಾಲಿಕೆಯ ಆರೋಗ್ಯ ಸಿಬ್ಬಂದಿ ನಿನ್ನೆವರೆಗೂ 17,877 ಮನೆಗಳ ಸಮೀಕ್ಷೆ ನಡೆಸಿದ್ದಾರೆ. ಆಡಿಟ್ ಬಳಿಕ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರವಾನೆ ಮಾಡಲಾಗುತ್ತದೆ.

ಡೆಂಗ್ಯೂ ಹೇಗೆ ಹರಡುತ್ತದೆ?

ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು ಆಗಿದೆ. ಇದು ಈಡಿಪಸ್‌ ಎಂಬ ಹೆಣ್ಣು ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಸೊಳ್ಳೆ ಕಚ್ಚಿದ 4-7 ದಿನಗಳ ನಂತರ ರೋಗ ಲಕ್ಷಣಗಳು ಸಾಮಾನ್ಯವಾಗಿ ಕಂಡು ಬರುತ್ತವೆ. ಇದರ ಪ್ರಭಾವ 10 ದಿನಗಳವರೆಗೆ ಇರುತ್ತದೆ. ಹೀಗಾಗಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಉತ್ತಮವಾಗಿದೆ.

ಡೆಂಗ್ಯೂ ಜ್ವರ ತಲೆನೋವಿನಂತಹ ರೋಗಲಕ್ಷಣಗಳನ್ನು ಉಂಟು ಮಾಡಬಹುದು. ಡೆಂಗ್ಯೂವನ್ನು ಹೆಮರಾಜಿಕ್ ಜ್ವರ ಎಂದೂ ಕರೆಯಲಾಗುತ್ತದೆ. ಡೆಂಗ್ಯೂ ಜ್ವರದ ತೀವ್ರ ಸ್ವರೂಪವು ತೀವ್ರ ರಕ್ತಸ್ರಾವ, ರಕ್ತದೊತ್ತಡ ಹಾಗೂ ರಕ್ತಕಣಗಳ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿ ವ್ಯಕ್ತಿಯ ಸಾವಿಗೂ ಕಾರಣವಾಗಬಹುದು. ಅಧಿಕ ಜ್ವರ, ತೀವ್ರ ತಲೆನೋವು, ವಾಂತಿ, ದೇಹದ ವಿವಿಧ ಭಾಗಗಳಲ್ಲಿ ದದ್ದುಗಳು, ಗ್ರಂಥಿಗಳಲ್ಲಿ ಊತ, ಮೂಳೆ ಮತ್ತು ಕೀಲು ನೋವು, ರಕ್ತಸ್ರಾವವಾಗವುದು ರೋಗ ಲಕ್ಷಣಗಳಾಗಿವೆ.

ಇದನ್ನೂ ಓದಿ: World Malaria Day: ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

Continue Reading
Advertisement
hassan murder case
ಕ್ರೈಂ8 mins ago

Murder Case: ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

Golden Star Ganesh Birthday Not Celebrating His Birthday This Year
ಸ್ಯಾಂಡಲ್ ವುಡ್8 mins ago

Golden Star Ganesh Birthday:  ಈ ವರ್ಷವೂ ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಗೋಲ್ಡನ್ ಸ್ಟಾರ್ ಗಣೇಶ್

ICC Team of the Tournament
ಪ್ರಮುಖ ಸುದ್ದಿ11 mins ago

ICC Team of the Tournament : ಐಸಿಸಿ ಟೀಮ್​ ಆಫ್​​ ದಿ ಟೂರ್ನಮೆಂಟ್​ನಲ್ಲಿ ಆರು ಭಾರತೀಯರು​; ಕೊಹ್ಲಿಗಿಲ್ಲ ಚಾನ್ಸ್​

Job Alert
ಉದ್ಯೋಗ31 mins ago

Job Alert: HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ 1 ಲಕ್ಷ ರೂ.ವರೆಗೆ: ಇಂದೇ ಅಪ್ಲೈ ಮಾಡಿ

murder case
ಬೆಂಗಳೂರು39 mins ago

Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

Viral News
ವೈರಲ್ ನ್ಯೂಸ್42 mins ago

Viral News: ನೀರ ಬಿಟ್ಟು ರಸ್ತೆಗೆ ಬಂದ ಮೊಸಳೆಗೆ ಇಲ್ಲೇನು ಕೆಲಸ? ಅಪರೂಪದ Video ಇಲ್ಲಿದೆ ನೋಡಿ

Dinesh Karthik
ಕ್ರಿಕೆಟ್44 mins ago

Dinesh Karthik : ಆರ್​​ಸಿಬಿ ಬ್ಯಾಟಿಂಗ್ ಕೋಚ್​, ಮಾರ್ಗದರ್ಶಕರಾಗಿ ದಿನೇಶ್​ ಕಾರ್ತಿಕ್ ನೇಮಕ

Actor Darshan Family Jail Entry Police personnel taken in a private car
ಸ್ಯಾಂಡಲ್ ವುಡ್48 mins ago

Actor Darshan: ದರ್ಶನ್ ಕುಟುಂಬ ಜೈಲಿಗೆ ಎಂಟ್ರಿ; ಖಾಸಗಿ ಕಾರಿನಲ್ಲಿ ಕರೆದೊಯ್ದ ಪೊಲೀಸ್ ಸಿಬ್ಬಂದಿ

Dengue fever rises across the state including Bengaluru BBMP Commissioner also get fever
ಪ್ರಮುಖ ಸುದ್ದಿ55 mins ago

Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

Gold Rate Today
ಕರ್ನಾಟಕ55 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಹೇಗಿದೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ18 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು23 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌