T20 World Cup: ಪಾಕಿಸ್ತಾನಕ್ಕೆ ಮುಖಭಂಗ ಮಾಡಿದ ಅಮೆರಿಕ ಕ್ರಿಕೆಟ್‌ ತಂಡದ ಸೌರಭ್ ನೇತ್ರವಾಲ್ಕರ್ ಹಿನ್ನೆಲೆ ಏನು? - Vistara News

ಕ್ರೀಡೆ

T20 World Cup: ಪಾಕಿಸ್ತಾನಕ್ಕೆ ಮುಖಭಂಗ ಮಾಡಿದ ಅಮೆರಿಕ ಕ್ರಿಕೆಟ್‌ ತಂಡದ ಸೌರಭ್ ನೇತ್ರವಾಲ್ಕರ್ ಹಿನ್ನೆಲೆ ಏನು?

T20 World Cup : ಮೊದಲು ಬ್ಯಾಟ್​ ಮಾಡಿದ ಅಮರಿಕ 18 ರನ್ ಬಾರಿಸಿತು. ಈ ರನ್​ ರಕ್ಷಿಸುವ ಹೊಣೆ ಅಮೆರಿಕದ ಬೌಲರ್ ಸೌರಭ್​ ನೇತ್ರವಾಲ್ಕರ್ ಹೆಗಲ ಮೇಲೆ ಬಿತ್ತು. ಅನುಭವಿ ಹಾಗೂ ಕ್ರಿಕೆಟ್​ ಪ್ರೇಮಿ ದೇಶದ ಬ್ಯಾಟರ್​ಗಳು ಒಡ್ಡಿದ ಎಲ್ಲಾ ಅಡೆತಡೆಗಳ ನಡುವೆಯೂ ನೇತ್ರವಾಲ್ಕರ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದರು. ಅವರು ಮಾರಕ ಬೌಲಿಂಗ್​ ಮೂಲಕ ಪಾಕ್ ತಂಡವನ್ನು 13 ರನ್​ಗಳಿಗೆ ಕಟ್ಟಿ ಹಾಕಿದರು. ಈ ವೇಳೆ ಯುಎಸ್ ಆಟಗಾರರು ಹಾಗೂ ಅಭಿಮಾನಿಗಳ ಸಂಭ್ರಮಕ್ಕೆ ಪಾರವೇ ಇರಲಿಲ್ಲ.

VISTARANEWS.COM


on

T20 World Cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟಿ20 ವಿಶ್ವ ಕಪ್​ನಲ್ಲಿ (T20 World Cup ) ಗುರುವಾರ ಅಚ್ಚರಿಯ ಫಲಿತಾಂಶವೊಂದು ಮೂಡಿ ಬಂದಿದೆ. ಅಲ್ಲಿನ ಗ್ರ್ಯಾಂಡ್ ಪ್ರೈರಿ ಸ್ಟೇಡಿಯಂನಲ್ಲಿ ಗುರುವಾರ ನಡೆದ ಐತಿಹಾಸಿಕ ಪಂದ್ಯದಲ್ಲಿ ಸಹ ಆತಿಥೇಯ ಯುಎಸ್ಎ ತಂಡವು ಬಾಬರ್ ಅಜಮ್ ನೇತೃತ್ವದ ಪಾಕಿಸ್ತಾನವನ್ನು ಸೂಪರ್ ಓವರ್​ನಲ್ಲಿ ಸೋಲಿಸಿತು. ಈ ಮೂಲಕ ಐತಿಹಾಸಿಕ ಸಾಧನೆ ಮಾಡಿತು. ಪಂದ್ಯವು ಟೈನಲ್ಲಿ ಕೊನೆಗೊಂಡ ನಂತರ ಸೂಪರ್​ ಓವರ್​ ನಡೆಯಿತು. ಮೊದಲು ಬ್ಯಾಟ್​ ಮಾಡಿದ ಅಮರಿಕ 18 ರನ್ ಬಾರಿಸಿತು. ಈ ರನ್​ ರಕ್ಷಿಸುವ ಹೊಣೆ ಅಮೆರಿಕದ ಬೌಲರ್ ಸೌರಭ್​ ನೇತ್ರವಾಲ್ಕರ್ ಹೆಗಲ ಮೇಲೆ ಬಿತ್ತು. ಅನುಭವಿ ಹಾಗೂ ಕ್ರಿಕೆಟ್​ ಪ್ರೇಮಿ ದೇಶದ ಬ್ಯಾಟರ್​ಗಳು ಒಡ್ಡಿದ ಎಲ್ಲಾ ಅಡೆತಡೆಗಳ ನಡುವೆಯೂ ನೇತ್ರವಾಲ್ಕರ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದರು. ಅವರು ಮಾರಕ ಬೌಲಿಂಗ್​ ಮೂಲಕ ಪಾಕ್ ತಂಡವನ್ನು 13 ರನ್​ಗಳಿಗೆ ಕಟ್ಟಿ ಹಾಕಿದರು. ಈ ವೇಳೆ ಯುಎಸ್ ಆಟಗಾರರು ಹಾಗೂ ಅಭಿಮಾನಿಗಳ ಸಂಭ್ರಮಕ್ಕೆ ಪಾರವೇ ಇರಲಿಲ್ಲ.

ಈ ಫಲಿತಾಂಶದ ಬಳಿಕ ವೇಗದ ಬೌಲರ್ ಸೌರಭ್​ ನೇತ್ರವಾಲ್ಕರ್ ಕುರಿತ ಚರ್ಚೆ ಜೋರಾಗಿದೆ. ಯಾಕೆಂದರೆ ಪಾಕ್ ತಂಡವನ್ನು ಸೋಲಿಸಲು ಅಮೆರಿಕಕ್ಕೆ ನೆರವಾಗಿದ್ದು ಭಾರತೀಯ ಮೂಲದ ಬೌಲರ್​ ಕಂ ಟೆಕಿ. ಹೀಗಾಗಿ ಮೂರು ದೇಶಗಳಲ್ಲಿ ಸೌರಭ್ ಅವರ ಬಗ್ಗೆಯೇ ಚರ್ಚೆ. ಐಟಿ ಕಂಪನಿ ಒರಾಕಲ್​ನಲ್ಲಿ ಟೆಕ್ ಇನ್ನೋವೇಶನ್ ತಂಡವನ್ನು ಮುನ್ನಡೆಸುತ್ತಿರುವ ಸೌರಭ್ ನೇತ್ರವಾಲ್ಕರ್ ಕ್ರಿಕೆಟ್ ಅಂಗಣದಲ್ಲಿ ಪಾಕಿಸ್ತಾನ ತಂಡ ಮಂಡಿಯೂರುವಂತೆ ಮಾಡಿದಾಗ ಅವರ ಬಗ್ಗೆ ಭಾರತೀಯರೂ ಮೆಚ್ಚುಗೆ ವ್ಯಕ್ತಪಡಿಸಲು ಆರಂಭಿಸಿದ್ದಾರೆ.

ಅಮೆರಿಕ ತಂಡ ಕಷ್ಟಪಟ್ಟು ಗಳಿಸಿದ ವಿಜಯದ ಸುದ್ದಿ ಸೋಶಿಯಲ್​ ಮೀಡಿಯಾಗಳಲ್ಲಿ ಚರ್ಚೆಯಾಗುತ್ತಿರುವ ನಡುವೆಯೇ ಸೌರಭ್​ ನೇತ್ರವಾಲ್ಕರ್ ಅವರ ಲಿಂಕ್ಡ್ಇನ್ ಪ್ರೊಫೈಲ್ ಸಹ ವೈರಲ್ ಆಗಿದೆ. ಅವರು ಯಾರು? ಎಲ್ಲಿನವರು? ಕ್ರಿಕೆಟ್ ಅನುಭವ ಏನು ಎಂಬೆಲ್ಲ ವಿಚಾರಗಳನ್ನು ಕ್ರಿಕೆಟ್ ಅಭಿಮಾನಿಗಳು ತಿಳಿಯಲು ಬಯಸಿದ್ದಾರೆ.

ಸೌರಭ್ ನೇತ್ರವಾಲ್ಕರ್ ಯಾರು?

ಅಕ್ಟೋಬರ್ 16, 1991 ರಂದು ಮುಂಬೈನಲ್ಲಿ ಜನಿಸಿದ ಸೌರಭ್ ನರೇಶ್ ನೇತ್ರವಾಲ್ಕರ್ ಭಾರತೀಯ ಮೂಲದ ಕ್ರಿಕೆಟಿಗ. ಹೀಗಾಗಿ ಕ್ರಿಕೆಟ್ ಅವರಿಗೆ ರಕ್ತಗತ. ಅವರು ಅಮೆರಿದಕ ರಾಷ್ಟ್ರೀಯ ಕ್ರಿಕೆಟ್ ತಂಡದ ನಾಯಕತ್ವ ವಹಿಸುವ ಮೂಲಕ ತಮ್ಮ ವೃತ್ತಿಜೀವನದಲ್ಲಿ ಗಮನಾರ್ಹ ಸಾಧನೆ ಮಾಡಿದವರು. 2015 ರಲ್ಲಿ ಯುನೈಟೆಡ್ ಸ್ಟೇಟ್ಸ್​ಗೆ ತೆರಳುವ ಮೊದಲು ನೇತ್ರವಾಲ್ಕರ್ ಭಾರತದಲ್ಲಿ ದೇಶೀಯ ಕ್ರಿಕೆಟ್​ನಲ್ಲೂ ಆಡಿದ್ದರು. ಅವರು ಪ್ರತಿಷ್ಠಿತ ರಣಜಿ ಟ್ರೋಫಿಯಲ್ಲಿ ಮುಂಬೈ ಪರ ಆಡಿದ್ದರು. ಭಾರತ ಅಂಡರ್ 19 ತಂಡದ ಸದಸ್ಯರಾಗಿದ್ದರು, ಭಾರತದ ಕ್ರಿಕೆಟ್ ತಾರೆಗಳಾದ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಹರ್ಷಲ್ ಪಟೇಲ್, ಜಯದೇವ್ ಉನಾದ್ಕಟ್ ಮತ್ತು ಸಂದೀಪ್ ಶರ್ಮಾ ಅವರೊಂದಿಗೆ ಮೈದಾನವನ್ನು ಹಂಚಿಕೊಂಡಿದ್ದರು. 2010ರ ಐಸಿಸಿ ಅಂಡರ್ -19 ವಿಶ್ವಕಪ್​​ನಲ್ಲಿ ನೇತ್ರವಾಲ್ಕರ್ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಹೊರಹೊಮ್ಮಿದರು.

ಇದನ್ನೂ ಓದಿ: T20 World Cup : ಕ್ರಿಕೆಟ್​ ಕೂಸು ಅಮೆರಿಕ ತಂಡದ ವಿರುದ್ಧ ಸೋತ ಪಾಕಿಸ್ತಾನ

ಕ್ರಿಕೆಟಿಗರ ದೊಡ್ಡ ಪಡೆಯನ್ನೇ ಹೊಂದಿರುವ ಭಾರತದಲ್ಲಿ ಸೌರಭ್ ಅವರಿಗೆ ಹೆಚ್ಚಿನ ಅವಕಾಶಗಳು ದೊರಕಿಲ್ಲ. ಇಲ್ಲಿನ ಸ್ಪರ್ಧೆಯ ಮುಂದೆ ಮಿಂಚುವುದು ಸುಲಭವಲ್ಲ. ಬಳಿಕ ಅವರು ಸಾಗಿದ್ದ ಅಮೆರಿಕದ ಕಡೆಗೆ. ಉದ್ಯೋಗಕ್ಕಾಗಿ ಹೋದ ಅವರು ಕ್ರಿಕೆಟ್​ ಮುಂದುವರಿಸಿದರು.

ಭಾರತದಲ್ಲಿ ಭರವಸೆಯ ಯುವ ಕ್ರಿಕೆಟಿಗನಿಂದ ಯುಎಸ್ ರಾಷ್ಟ್ರೀಯ ತಂಡವನ್ನು ಮುನ್ನಡೆಸುವವರೆಗಿನ ನೇತ್ರವಾಲ್ಕರ್ ಅವರ ಪ್ರಯಾಣವು ಆಟದ ಕುರಿತು ಅವರ ಉತ್ಸಾಹವನ್ನು ತೋರಿಸುತ್ತದೆ. ದೇಶೀಯ ಕ್ರಿಕೆಟ್​ನಲ್ಲಿ ಅವರು ಪಡೆದ ಅನುಭವ, ಯುಎಸ್​ನಲ್ಲಿ ಮತ್ತೆ ಕ್ರಿಕೆಟ್ ಅಭ್ಯಾಸ ಹಾಗೂ ನಾಯಕತ್ವದ ಹೊಣೆಗಾರಿಕೆಯೊಂದಿಗೆ ಅವರು ಇನ್ನಷ್ಟು ಪಳಗಿದರು. ಹೀಗಾಗಿ ಅವರು ತಮಗೆ ರಾಷ್ಟ್ರೀಯ ಮಾನ್ಯತೆ ನೀಡಿದ ತಂಡಕ್ಕೆ ಉತ್ತಮ ಪ್ರತಿಫಲ ಕೊಡುತ್ತಿದ್ದಾರೆ.

ಕೋಡಿಂಗ್​ ಎಕ್ಸ್​ಪರ್ಟ್​

ಕ್ರಿಕೆಟ್ ಹೊರತಾಗಿಯೂ ನೇತ್ರವಾಲ್ಕರ್ ಕೋಡಿಂಗ್ ಬಗ್ಗೆಯೂ ಒಲವು ಹೊಂದಿದ್ದಾರೆ. ಮುಂಬೈ ವಿಶ್ವವಿದ್ಯಾಲಯ ಮತ್ತು ಪ್ರತಿಷ್ಠಿತ ಕಾರ್ನೆಲ್ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಯಾಗಿರುವ ನೇತ್ರವಾಲ್ಕರ್ ಪ್ರಸ್ತುತ ಒರಾಕಲ್​ನಲ್ಲಿ ತಾಂತ್ರಿಕ ಸಿಬ್ಬಂದಿ ವಿಭಾಗದ ಪ್ರಧಾನ ಸದಸ್ಯರಾಗಿದ್ದಾರೆ. ಅವರು ಕ್ರಿಕ್ ಡೆಕೋಡ್ ಎಂಬ ಕ್ರಿಕೆಟ್ ಕೇಂದ್ರಿತ ಅಪ್ಲಿಕೇಶನ್ ನ ಸಹ-ಸಂಸ್ಥಾಪಕರಾಗಿದ್ದಾರೆ.

ಅವರು ಉಕುಲೆಲೆ ಎಂಬ ಸಂಗೀತ ಸಾಧನವನ್ನು ನುಡಿಸುತ್ತಾರೆ. ಈ ವಾದ್ಯವನ್ನು ನುಡಿಸುತ್ತಾ ಹಾಡುವ ಹವ್ಯಾಸವನ್ನೂ ಅವರು ಹೊಂದಿದ್ದಾರೆ. ಸೌರಭ್ ವಾದ್ಯ ನುಡಿಸುತ್ತಾ ಹಾಡುವ ವಿಡಿಯೊಗಳು ಶೋಶಿಯಲ್​ ಮೀಡಿಯಾಗಳಲ್ಲಿ ಲಭ್ಯವಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs SA Final: ರಾಮನಾಮ ಸ್ಮರಣೆ ಮಾಡಿ ಭಾರತ ವಿರುದ್ಧ ಫೈನಲ್​ ಆಡಲಿದ್ದಾರೆ ದಕ್ಷಿಣ ಆಫ್ರಿಕಾ ಕ್ರಿಕೆಟಿಗ

IND vs SA Final: ಆಂಜನೇಯನ ಮತ್ತು ರಾಮನ ಪರಮ ಭಕ್ತನಾಗಿರುವ ಕೇಶವ್​ ಮಹಾರಾಜ್ ಬ್ಯಾಟಿಂಗ್​ ನಡೆಸಲು ಮೈದಾನಕ್ಕೆ ಬಂದಾಗಲೆಲ್ಲ ‘ರಾಮ್ ಸಿಯಾ ರಾಮ್’ ಹಾಡನ್ನು ಸ್ಟೇಡಿಯಂನಲ್ಲಿ ಜೋರಾಗಿ ಹಾಕಲಾಗುತ್ತದೆ. ಈ ಹಾಡನ್ನು ಕೇಳಿದರೆ ತನಗೆ ಆತ್ಮವಿಶ್ವಾಸ ಹೆಚ್ಚಾಗುತ್ತದೆ ಎಂದು ಹಿಂದೊಮ್ಮೆ ಸಂದರ್ಶನದಲ್ಲಿ ಅವರು ಹೇಳಿದ್ದರು

VISTARANEWS.COM


on

IND vs SA Final
Koo

ಬಾರ್ಬಡೋಸ್​: ವಿಶ್ವಕಪ್‌ ಇತಿಹಾಸದಲ್ಲೇ ಮೊದಲ ಸಲ ಪ್ರಶಸ್ತಿ ಸುತ್ತಿಗೆ ಕಾಲಿಟ್ಟಿರುವ ದಕ್ಷಿಣ ಆಫ್ರಿಕಾ(IND vs SA Final) ಕಪ್​ ಗೆದ್ದು ಇತಿಹಾಸ ಬರೆಯಲು ಸಜ್ಜಾಗಿ ನಿಂತಿದೆ. ಬ್ರಿಜ್‌ಟೌನ್‌ನ “ಕೆನ್ಸಿಂಗ್ಟನ್‌ ಓವಲ್‌’ನಲ್ಲಿ ಇಂದು ರಾತ್ರಿ ನಡೆಯುವ ಟಿ20 ವಿಶ್ವಕಪ್(T20 World Cup 2024)​ ಫೈನಲ್​ ಪಂದ್ಯದಲ್ಲಿ ಭಾರತ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾದ ಆಟಗಾರ ಕೇಶವ್​ ಮಹಾರಾಜ್(keshav maharaj)​ ಅವರು ರಾಮನಾಮ ಸ್ಮರಣೆ ಮಾಡಿದ್ದಾರೆ.

ಆಂಜನೇಯನ ಮತ್ತು ರಾಮನ ಪರಮ ಭಕ್ತನಾಗಿರುವ ಕೇಶವ್​ ಮಹಾರಾಜ್, ಬ್ಯಾಟಿಂಗ್​ ನಡೆಸಲು ಮೈದಾನಕ್ಕೆ ಬಂದಾಗಲೆಲ್ಲ ‘ರಾಮ್ ಸಿಯಾ ರಾಮ್’ ಹಾಡನ್ನು ಸ್ಟೇಡಿಯಂನಲ್ಲಿ ಜೋರಾಗಿ ಹಾಕಲಾಗುತ್ತದೆ. ಈ ಹಾಡನ್ನು ಕೇಳಿದರೆ ತನಗೆ ಆತ್ಮವಿಶ್ವಾಸ ಹೆಚ್ಚಾಗುತ್ತದೆ ಎಂದು ಹಿಂದೊಮ್ಮೆ ಸಂದರ್ಶನದಲ್ಲಿ ಅವರು ಹೇಳಿದ್ದರು. ಇದೀಗ ಫೈನಲ್​ ಪಂದ್ಯಕ್ಕೂ ಕೂಡ ರಾಮನಾಮ ಜಪಿಸಿ ತಂಡದ ಯಶಸ್ಸಿಗೆ ಪ್ರಾರ್ಥಿಸಿಕೊಂಡಿದ್ದಾರೆ.

ಕೇಶವ್​ ಮಹಾರಾಜ್​ ಮೂಲತಃ ಭಾರತೀಯರಾಗಿದ್ದು, ದಕ್ಷಿಣ ಆಫ್ರಿಕಾದಲ್ಲಿ ನೆಲೆಸಿದ್ದಾರೆ. ಆದರೆ ಅವರು ಭಾರತಕ್ಕೆ ಬಂದಾಗಲೆಲ್ಲಾ ಕುಟುಂಬ ಸಮೇತರಾಗಿ ಇಲ್ಲಿನ ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ. ಕಳೆದ ವರ್ಷ ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯ ವೇಳೆ ಮಹರಾಜ್​ ಕೇರಳದ ದೇವಸ್ಥಾನವೊಂದಕ್ಕೆ ಭಟಿ ನೀಡಿ ಪೂಜೆ ಸಲ್ಲಿಸಿದ್ದರು. ತಮ್ಮ ಬ್ಯಾಟ್ ಮೇಲೆ ಓಂ ಎಂದು ಬರೆದುಕೊಂಡಿದ್ದಾರೆ. ಈ ಬಾರಿಯ ಐಪಿಎಲ್​ (IPL 2024)​ ಭಾಗವಾಗಿ ಭಾರತಕ್ಕೆ ಬಂದಿದ್ದ ವೇಳೆ ಕೇಶವ್​ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ‘ಜೈ ಶ್ರೀ ರಾಮ್… ಎಲ್ಲರಿಗು ಒಳಿತು ಮಾಡಲಿ’ ಎಂದು ಬರೆದುಕೊಂಡಿದ್ದರು.

ಮಳೆ ಭೀತಿ

ಫೈನಲ್​ ಪಂದ್ಯಕ್ಕೆ ಹವಾಮಾನ ಇಲಾಖೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಶೇ.70ರಷ್ಟು ಮಳೆಯಾಗಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಒಂದೊಮ್ಮೆ ನಿಗದಿತ ದಿನ ಪಂದ್ಯ ನಡೆಯದೇ ಇದ್ದರೆ, ಮೀಸಲು ದಿನಕ್ಕೆ ಮುಂದುವರಿಯಲಿದೆ, ಒಂದು ವೇಳೆ ಫೈನಲ್‌(T20 World Cup 2024) ಪಂದ್ಯ ಮೀಸಲು ದಿನದಲ್ಲಿಯೂ ನಡೆಯದೇ ಹೋದರೆ, ಆಗ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಗುತ್ತದೆ.

ಇದನ್ನೂ ಓದಿ IND vs SA Final: ಭಾರತ ಸೋತರೆ ರೋಹಿತ್ ಈ ಅನಾಹುತ ಮಾಡಿಕೊಳ್ಳಬಹುದು; ಮಾಜಿ ನಾಯಕನಿಂದ ಶಾಕಿಂಗ್​ ಹೇಳಿಕೆ ​

ಮುಖಾಮುಖಿ


ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇದುವರೆಗೆ 26 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 14 ಪಂದ್ಯ ಗೆದ್ದರೆ, ದಕ್ಷಿಣ ಆಫ್ರಿಕಾ 11 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 6 ಪಂದ್ಯಗಳಲ್ಲಿ ಆಡಿದ್ದು, ಭಾರತ 4 ಪಂದ್ಯ ಗೆದ್ದಿದೆ. 2 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಕಂಡಿದೆ. 2022ರಲ್ಲಿ ನಡೆದಿದ್ದ ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಂಡಿತ್ತು.

ಸಂಭಾವ್ಯ ತಂಡ


ದಕ್ಷಿಣ ಆಫ್ರಿಕಾ:
 ಕ್ವಿಂಟನ್ ಡಿ ಕಾಕ್ (ವಿಕೀ), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಮ್​ (ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಜೆ, ತಬ್ರೈಜ್ ಶಮ್ಸಿ

ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ/ ಯಶಸ್ವಿ ಜೈಸ್ವಾಲ್​, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್​ ಬುಮ್ರಾ.

Continue Reading

ಪ್ರಮುಖ ಸುದ್ದಿ

T20 World Cup Final : ಭಾರತ ತಂಡದ ಗೆಲುವಿಗಾಗಿ ವಿಶ್ವ ಪ್ರಸಿದ್ಧ ಸಿದ್ಧಿವಿನಾಯಕ ದೇಗುದಲ್ಲಿ ವಿಶೇಷ ಪೂಜೆ

T20 World Cup Final : ಈ ಪಂದ್ಯವು ಭಾರತದ ಕ್ರಿಕೆಟ್​ ಪಾಲಿಗೆ ಪ್ರಮುಖ ಘಟನೆಯಾಗಿದೆ. ಲಕ್ಷಾಂತರ ಭಾರತೀಯರ ಭರವಸೆಗಳು ಮತ್ತು ಪ್ರಾರ್ಥನೆಗಳು ಪ್ರಸಸ್ತಿಗಾಗಿ ಹಂಬಲಿಸಿವೆ. 17 ವರ್ಷಗಳ ಸುದೀರ್ಘ ನಂತರ ಭಾರತವು ಟಿ 20 ವಿಶ್ವಕಪ್ ಟ್ರೋಫಿ ಎತ್ತುವುದನ್ನು ನೋಡಲು ಕೋಟ್ಯಂತರ ಮಂದಿ ಕಾಯುತ್ತಿದ್ದಾರೆ.

VISTARANEWS.COM


on

T20 World Cup Final
Koo

ಬೆಂಗಳೂರು: ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ವಿಶ್ವಕಪ್ ಫೈನಲ್​​ನಲ್ಲಿ(T20 World Cup Final) ಭಾರತದ ಗೆಲ್ಲಲ್ಲಿ ಎಂದು ಪ್ರಾರ್ಥಿಸಿ ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಾಲಯದ ಅರ್ಚಕರು ಶನಿವಾರ ವಿಶೇಷ ಪೂಜೆ ನಡೆಸಿದ್ದಾರೆ. ದೊಡ್ಡ ಫೈನಲ್ ಸಮೀಪಿಸುತ್ತಿದ್ದಂತೆ ಕ್ರಿಕೆಟ್​ ಅಭಿಮಾನಿಗಳಲ್ಲಿ ಉತ್ಸಾಹ ಮತ್ತು ಆತಂಕ ಹೆಚ್ಚಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಟೀಮ್ ಇಂಡಿಯಾದ ಆಟಗಾರರಿಗೆ ಪ್ರೋತ್ಸಾಹದ ಸಂದೇಶಗಳು ತುಂಬಿಕೊಂಡಿವೆ. ಪ್ರಮುಖ ಬೀದಿಗಳು ಟೀಮ್ ಇಂಡಿಯಾವನ್ನು ಬೆಂಬಲಿಸುವ ಪೋಸ್ಟರ್​ಗಳಿಂದ ತುಂಬಿಕೊಂಡಿವೆ. ಈ ನಡುವೆ ಹಲವೆಡೆ ವಿಶೇಷ ಪೂಜೆಗಳು ನಡೆಯುತ್ತಿವೆ. ಅಂತೆಯ ಸಿದ್ಧಿವಿನಾಯಕ ದೇವಾಲಯದಲ್ಲೂ ಪೂಜೆ ಮಾಡಲಾಗಿದೆ.

ಈ ಪಂದ್ಯವು ಭಾರತದ ಕ್ರಿಕೆಟ್​ ಪಾಲಿಗೆ ಪ್ರಮುಖ ಘಟನೆಯಾಗಿದೆ. ಲಕ್ಷಾಂತರ ಭಾರತೀಯರ ಭರವಸೆಗಳು ಮತ್ತು ಪ್ರಾರ್ಥನೆಗಳು ಪ್ರಸಸ್ತಿಗಾಗಿ ಹಂಬಲಿಸಿವೆ. 17 ವರ್ಷಗಳ ಸುದೀರ್ಘ ನಂತರ ಭಾರತವು ಟಿ 20 ವಿಶ್ವಕಪ್ ಟ್ರೋಫಿ ಎತ್ತುವುದನ್ನು ನೋಡಲು ಕೋಟ್ಯಂತರ ಮಂದಿ ಕಾಯುತ್ತಿದ್ದಾರೆ.

ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸಿದ್ಧಿವಿನಾಯಕ ದೇವಾಲಯವು ವಿಶ್ವ ಕಪ್​ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಮತ್ತು ಆರತಿಗಳನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಹಾಜರಿದ್ದ ಭಕ್ತರು ಮೆನ್ ಇನ್ ಬ್ಲೂಗೆ ಆಶೀರ್ವಾದ ಮಾಡುವಂತೆ ಭಗವಂತನ ಬಳಿ ಕೋರಿಕೊಂಡರು. ಸಿದ್ಧಿವಿನಾಯಕನ ಪುರೋಹಿತರು. ತಂಡ ಮತ್ತು ಅವರ ಅಭಿಮಾನಿಗಳ ಪರವಾಗಿ ಪೂಜೆ ಸಲ್ಲಿಸಿ ಪ್ರಸಾದ ವಿತಣೆ ಮಾಡಿದರು.

ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲುವ ಗುರಿ ಹೊಂದಿರುವ ಭಾರತ ಅದಕ್ಕಾಗಿ ಸಜ್ಜಾಗಿದ್ದು, ಮೊದಲ ಟಿ20 ವಿಶ್ವಕಪ್ ಗೆಲ್ಲುವ ತವಕದಲ್ಲಿರುವ ದಕ್ಷಿಣ ಆಫ್ರಿಕಾ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಎರಡೂ ತಂಡಗಳು ಐಸಿಸಿ ಟ್ರೋಫಿಗಾಗಿ ದೀರ್ಘ ಕಾಯುವಿಕೆ ಎದುರಿಸಿವೆ. ಭಾರತಕ್ಕೆ 13 ವರ್ಷಗಳಿಂದ ಪ್ರಶಸ್ತಿಗಾಗಿ ಕಾದರೆ, ದಕ್ಷಿಣ ಆಫ್ರಿಕಾ ಇದುವರೆಗೆ ಒಂದೇ ಒಂದು ಟ್ರೋಫಿ ಸಿಕ್ಕಿಲ್ಲ. ಈ ಅಂತಿಮ ಪಂದ್ಯವು ಈ ಕ್ರಿಕೆಟ್ ಶಕ್ತಿ ಕೇಂದ್ರಗಳ ಪ್ರಶಸ್ತಿ ಬರವನ್ನು ಕೊನೆಗೊಳಿಸಲಿದೆ.

ಸಿದ್ಧಿವಿನಾಯಕ ದೇವಸ್ಥಾನದಲ್ಲಿನ ಪ್ರಾರ್ಥನೆಗಳು ಫಲಿಸುತ್ತವೆ ಎಂಬುದು ನಂಬಿಕೆ. ಅಂತೆಯ ವಿಶ್ವ ಕಪ್​ಗಾಗಿ ಭಾರತದ ಆಟಗಾರರಿಗೂ ಒಳಿತಾಗಲಿ ಎಂಬ ನಂಬಿಕೆ ಅಭಿಮಾನಿಗಳದ್ದು. 2023ರ ಏಕ ದಿನ ವಿಶ್ವ ಕಪ್​ನಲ್ಲಿ ಸೋತು ಬೇಸರ ಎದುರಿಸಿರುವ ಭಾರತ ತಂಡ ಈ ವಿಶ್ವ ಕಪ್​ನಲ್ಲಿ ಗೆಲ್ಲುವ ಉದ್ದೇಶವನ್ನು ಹೊಂದಿದೆ. ಈ ಟೂರ್ನಿಯು ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರಿಗೆ ಟಿ20 ಅಂತಾರಾಷ್ಟ್ರೀಯ ಕೊನೇ ಪಂದ್ಯಗಳಾಗಿರಬಹುದು ಎಂದು ಅಂದಾಜಿಸಲಾಗಿದೆ.

ಬಾರ್ಬಡೋಸ್ನ ಬ್ರಿಜ್​ಟೌನ್​ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಫೈನಲ್ ನಡೆಯಲಿದೆ. ಇದು ದೊಡ್ಡ ಸ್ಕೋರ್​ ಹಾಗೂ ವೇಗದ ಬೌಲಿಂಗ್​ಗೆ ಪೂರಕವಾಗಿರುವ ಪಿಚ್ ಆಗಿದೆ. ಇದು ಸ್ಪಿನ್ನರ್​ಗಳಿಗೂ ಅನುಕೂಲಕರ. ಎರಡೂ ತಂಡಗಳ ಎಲ್ಲಾ ಆಟಗಾರರು ಫಿಟ್ ಆಗಿದ್ದಾರೆ ಮತ್ತು ಪಂದ್ಯದಲ್ಲಿ ಭಾಗವಹಿಸಲು ಸಿದ್ಧರಿದ್ದಾರೆ. ಹಿಂದಿನ ಪಂದ್ಯದಲ್ಲಿ ಯಾವುದೇ ಆಟಗಾರನಿಗೆ ಗಾಯಗಳಾದ ಪ್ರಕರಣಗಳಿಲ್ಲ. ಹೀಗಾಗಿ ಜಿದ್ದಾಜಿದ್ದಿನ ಪಂದ್ಯ ನಿರೀಕ್ಷಿತ.

ಇದನ್ನೂ ಓದಿ: IND vs SA Final: ರಾಮನಾಮ ಸ್ಮರಣೆ ಮಾಡಿ ಭಾರತ ವಿರುದ್ಧ ಫೈನಲ್​ ಆಡಲಿದ್ದಾರೆ ದಕ್ಷಿಣ ಆಫ್ರಿಕಾ ಕ್ರಿಕೆಟಿಗ 

ಭಾರತ-ಭಾರತ ತಂಡವು ಬಲಿಷ್ಠ ಬ್ಯಾಟರ್​ಗಳು ಮತ್ತು ಬೌಲರ್​ಗಳನ್ನು ಹೊಂದಿದ್ದು, ಟೂರ್ನಿಯಲ್ಲಿ ಇದುವರೆಗೂ ಎದುರಾಳಿಗಳ ಮೇಲೆ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಆಫ್ರಿಕಾ- ದಕ್ಷಿಣ ಆಫ್ರಿಕಾ ಬ್ಯಾಟಿಂಗ್, ಸ್ಪಿನ್ ಮತ್ತು ವೇಗದ ಘಟಕಗಳಲ್ಲಿ ಪರಿಣಿತ ಬೌಲರ್​ಗಳನ್ನು ಒಳಗೊಂಡಿದೆ.

ಭಾರತ ರೋಹಿತ್ ಶರ್ಮಾ, ರಿಷಭ್ ಪಂತ್, ಶಿವಂ ದುಬೆ ಮತ್ತು ಸೂರ್ಯಕುಮಾರ್ ಯಾದವ್ ತಂಡದ ಅತ್ಯುತ್ತಮ ಬ್ಯಾಟರ್​ಗಳಾದರೆ. ಅರ್ಶ್​ದೀಪ್​ ಸಿಂಗ್ ಹಾಗೂ ಜಸ್ಪ್ರೀತ್ ಬುಮ್ರಾ ಬೌಲಿಂಗ್​ನಲ್ಲಿ ಮಿಂಚಲಿದ್ದಾರೆ. ದಕ್ಷಿಣ ಆಫ್ರಿಕಾ ಪರ ಕ್ವಿಂಟನ್ ಡಿ ಕಾಕ್, ಐಡೆನ್ ಮಾರ್ಕ್ರಮ್, ಡೇವಿಡ್ ಮಿಲ್ಲರ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ ಮತ್ತು ತಬ್ರೀಜ್ ಶಮ್ಸಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

Continue Reading

ಕ್ರೀಡೆ

IND vs SA Final: ಭಾರತ ಸೋತರೆ ರೋಹಿತ್ ಈ ಅನಾಹುತ ಮಾಡಿಕೊಳ್ಳಬಹುದು; ಮಾಜಿ ನಾಯಕನಿಂದ ಶಾಕಿಂಗ್​ ಹೇಳಿಕೆ ​

IND vs SA Final: ರೋಹಿತ್​ ಶರ್ಮ ನಾಯಕನಾಗಿ ಆಡುತ್ತಿರುವ ಎರಡನೇ ವಿಶ್ವಕಪ್ ಫೈನಲ್‌ ಇದಾಗಿದೆ. ಕಳೆದ ಏಕದಿನ ಮತ್ತು ಪ್ರಸ್ತುತ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅಜೇಯವಾಗಿ ತಂಡವನ್ನು ಫೈನಲ್​ಗೆ ಕೊಂಡೊಯ್ದಿದ್ದಾರೆ. ಇದೀಗ ಈ ಬಾರಿಯೂ ಫೈನಲ್​ನಲ್ಲಿ ಸೋತರೆ ಅವರು ಬಾರ್ಬಡೋಸ್ ಸಾಗರಕ್ಕೆ ಜಿಗಿಯಬಹುದು ಎಂದು ಸೌರವ್​ ಗಂಗೂಲಿ ಹೇಳಿದ್ದಾರೆ.

VISTARANEWS.COM


on

IND vs SA Final
Koo

ಬಾರ್ಬಡೋಸ್​: ಭಾರತ(South Africa vs India) ಮತ್ತು ದಕ್ಷಿಣ ಆಫ್ರಿಕಾ ನಡುವಣ ಟಿ20 ವಿಶ್ವಕಪ್(IND vs SA Final)​ ಫೈನಲ್​ ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಪಂದ್ಯ ಆರಂಭಕ್ಕೂ ಮುನ್ನವೇ ಮಾಜಿ ನಾಯಕ ಸೌರವ್​ ಗಂಗೂಲಿ(Sourav Ganguly) ಅವರು ರೋಹಿತ್​ ಶರ್ಮ(Rohit Sharma) ಬಗ್ಗೆ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಫೈನಲ್‌ನಲ್ಲಿ ಭಾರತ ಸೋತರೆ ರೋಹಿತ್ ಬಾರ್ಬಡೋಸ್ ಸಾಗರಕ್ಕೆ ಜಿಗಿಯಬಹುದು ಎಂದು ಹೇಳಿದ್ದಾರೆ.

ಪಿಟಿಐ ಜತೆ ಮಾತನಾಡುವ ವೇಳೆ ಗಂಗೂಲಿ ಈ ಮಾತನ್ನು ಹೇಳಿದ್ದಾರೆ. “ರೋಹಿತ್​ ಶರ್ಮ ನಾಯಕನಾಗಿ ಆಡುತ್ತಿರುವ ಎರಡನೇ ವಿಶ್ವಕಪ್ ಫೈನಲ್‌ ಇದಾಗಿದೆ. ಕಳೆದ ಏಕದಿನ ಮತ್ತು ಪ್ರಸ್ತುತ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅಜೇಯವಾಗಿ ತಂಡವನ್ನು ಫೈನಲ್​ಗೆ ಕೊಂಡೊಯ್ದಿದ್ದಾರೆ. ಇದೀಗ ಈ ಬಾರಿಯೂ ಫೈನಲ್​ನಲ್ಲಿ ಸೋತರೆ ಅವರು ಬಾರ್ಬಡೋಸ್ ಸಾಗರಕ್ಕೆ ಜಿಗಿಯಬಹುದು” ಎಂದು ಹಾಸ್ಯಾಸ್ಪದವಾಗಿ ಹೇಳಿದರು. ಜತೆಗೆ ಭಾರತ ತಂಡ ವಿಶ್ವಕಪ್​ ಗೆಲ್ಲುವಂತಾಗಲಿ ಎಂದು ಹಾರೈಸಿದ್ದಾರೆ.


36 ವರ್ಷದ ರೋಹಿತ್​ ಶರ್ಮ ಪಾಲಿಗೆ ಬಹುತೇಕ ಇದೇ ಕೊನೆಯ ಟಿ20 ವಿಶ್ವಕಪ್ ಆಗುವ ಸಾಧ್ಯತೆಯಿದೆ. ಹೀಗಾಗಿ ಅವರು ತನ್ನ ಕೊನೆಯ ಪ್ರಯತ್ನದಲ್ಲಿ ಕಪ್​ ಗೆಲ್ಲುವಂತಾಗಿ ಎಂದು ಕೊಟ್ಯಂತರ ಅಭಿಮಾನಿಗಳ ಹಾರೈಸಿದ್ದಾರೆ. 10 ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯಲ್ಲಿ ಫೈನಲ್​(IND vs SA Final) ಪ್ರವೇಶಿಸಿರುವ ಭಾರತ ತಂಡ ಗೆಲ್ಲುವಂತೆ ಅಭಿಮಾನಿಗಳು ದೇಶಾದ್ಯಂತ ವಿಶೇಷವಾಗಿ ಪೂಜೆ ಸಲ್ಲಿಸಿದ್ದಾರೆ.

ಭಾರತ ಬಲಿಷ್ಠ ಆದರೆ ಎಚ್ಚರ ಅಗತ್ಯ


ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌, ಹಾರ್ದಿಕ್‌ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಇರುವ ಭಾರತ ತಂಡವನ್ನು ಬಲಿಷ್ಠ ಎನ್ನಲೇಬೇಕು. ಆದರೆ, ಭಾರತ ಪೂರ್ಣ ಎಚ್ಚರದಿಂದಲೇ ಫೈನಲ್​ ಆಡಬೇಕು. ಎದುರಾಳಿಯನ್ನು ಒಮ್ಮೆಯೂ ಕಡೆಗಣಿಸುವುದು ಸಾಧ್ಯವೇ ಇಲ್ಲ. ಯಾರು ಯಾರನ್ನು ಕೆಡವಿ ಬೀಳಿಸುತ್ತಾರೆ ಎಂಬುದು ಟಿ20 ಮಾದರಿಯಲ್ಲಿ ಅಂದಾಜಿಸುವುದಕ್ಕೆ ಕಷ್ಟ ಸಾಧ್ಯ. ಕೆಲವೇ ಓವರ್‌ಗಳಲ್ಲಿ ಪಂದ್ಯದ ಚಿತ್ರಣವೇ ಬದಲಾಗುವುದು ಟಿ20 ಪಂದ್ಯಗಳ ಶಕ್ತಿ.

ಇದನ್ನೂ ಓದಿ IND vs SA Final: ವಿಶ್ವಕಪ್​ ಗೆಲ್ಲಲು ಕೊಹ್ಲಿ, ರೋಹಿತ್​, ದ್ರಾವಿಡ್​ಗೆ ಇದು ಕೊನೆಯ ಅವಕಾಶ!

ಭಾರತ ತಂಡದ ದೊಡ್ಡ ಸಮಸ್ಯೆ ಎಂದರೆ ಲೀಗ್, ಸೆಮಿಫೈನಲ್​ನಲ್ಲಿ ಎಷ್ಟೇ ಉತ್ತಮ ಪ್ರದರ್ಶನ ತೋರಿದರೂ ಕೂಡ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸಂಪೂರ್ಣ ನರ್ವಸ್​ ಆಗಿ ಆಡುವುದು. ಒಂದು ವಿಕೆಟ್​ ಬಿದ್ದರೆ ಸಾಕು ಬಳಿಕ ಕ್ರೀಸ್​ಗಿಳಿವ ಬ್ಯಾಟರ್​ಗಳು ಭಯದಿಂದಲೇ ಆಡಲು ಮುಂದಾಗಿ ಸತತವಾಗಿ ವಿಕೆಟ್​ ಕಳೆದುಕೊಂಡು ಅಲ್ಪ ಮೊತ್ತಕ್ಕೆ ಕುಸಿಯುತ್ತಾರೆ. ಕಳೆದ ಏಕದಿನ ವಿಶ್ವಕಪ್​ ಫೈನಲ್​, ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಇದಕ್ಕೆ ಉತ್ತಮ ನಿದರ್ಶನ. ಹೀಗಾಗಿ ನಾಳೆ ನಡೆಯುವ ಫೈನಲ್​ ಪಂದ್ಯದಲ್ಲಿ ಬ್ಯಾಟರ್​ಗಳು ಮತ್ತು ಬೌಲರ್​ಗಳು ವಿಚಲಿತರಾಗದೆ ಆಡಬೇಕು.

Continue Reading

ಕ್ರೀಡೆ

Sania Mirza: ಶಮಿ ಜತೆ ಮದುವೆ ಟಾಕ್​ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ‘YES’ ಎಂದು ಬರೆದುಕೊಂಡ ಸಾನಿಯಾ ಮಿರ್ಜಾ

Sania Mirza: ಶಮಿ ಜತೆ ಸಾನಿಯ ಮದುವೆಯಾಗಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸಾನಿಯಾ ‘ಎಸ್’​ ಬರೆದಿರುವುದು ಈಗ ನೆಟ್ಟಿಗರಿಗೆ ಆಹಾರವಾಗಿದೆ. ಶಮಿ ಜತೆಗಿನ ಮದುವೆಯ ಕುರಿತಾಗಿಯೇ ಅವರು ಎಸ್​ ಎಂದು ಬರೆದುಕೊಂಡಿದ್ದಾರೆ ಎಂಬುದಾಗಿ ನೆಟ್ಟಿಗರು ಬಿಂಬಿಸಿದ್ದಾರೆ.

VISTARANEWS.COM


on

Sania Mirza
Koo

ಹೈದರಾಬಾದ್​: ಭಾರತದ ಮಾಜಿ ಟೆನಿಸ್​ ತಾರೆ ಸಾನಿಯಾ ಮಿರ್ಜಾ(Sania Mirza) ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರಿಂದ ವಿಚ್ಛೇದನ ಪಡೆದ ಬಳಿಕ ಸಾನಿಯ ಮರು ಮದುವೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಗಾಗ ಸುದ್ದಿಗಳು ಹರಿದಾಡುತ್ತಿರುತ್ತದೆ. ಇತ್ತೀಚೆಗೆ ಟೀಮ್​ ಇಂಡಿಯಾದ ಕ್ರಿಕೆಟಿಗ ಮೊಹಮ್ಮದ್ ಶಮಿ(Mohammed Shami) ಜತೆಗೆ ಸಾನಿಯಾ ಮಿರ್ಜಾ ಮದುವೆಯಾಗುತ್ತಾರೆ ಎಂಬ ಊಹಾಪೋಹಾ ಹಬ್ಬಿತ್ತು. ಈ ಬಗ್ಗೆ ಸಾನಿಯಾ ತಂದೆ ಇದು ಸುಳ್ಳು ಸುದ್ದಿ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಸುದ್ದಿಯನ್ನು ನಂಬಬೇಡಿ ಎಂದು ಸ್ಪಷ್ಟನೆ ನೀಡಿದ್ದರು.

ಎಲ್ಲ ಚರ್ಚೆಗಳ ಮಧ್ಯೆ ಸಾನಿಯಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಮಗ ಇಝಾನ್ ಜತೆಗಿನ ಹೃದಯಸ್ಪರ್ಶಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಟಿ-ಶರ್ಟ್​ ಮತ್ತು ಕ್ಯಾಪ್‌ ತೊಟ್ಟು ಮಗನ ಜತೆಗೆ ಟೆನಿಸ್ ಕೋರ್ಟ್‌ನಲ್ಲಿ ಫೋಟೊ ಶೇರ್​ ಮಾಡಿದ್ದಾರೆ. ಇಲ್ಲಿ ಇವರಿಬ್ಬರ ಫೋಟೊಕಿಂತ ಮಹತ್ವ ಪಡೆದದ್ದು ಸಾನಿಯಾ ಧರಿಸಿದ ಟಿ-ಶರ್ಟ್​ ಮೇಲಿರುವ ಬರಹ. ಹೌದು ಸಾನಿಯಾ ಅವರು “ನಾನು ಚೆನ್ನಾಗಿರುತ್ತೇನೆ ಎಂಬ ಭಾವನೆ ನನಗೆ ಸಿಕ್ಕಿದೆ” ಎಂದು ಬರೆದಿರುವ ಟಿ-ಶರ್ಟ್​ ಹಾಕಿದ್ದು ಈ ಮೂಲಕ ತಮ್ಮ ಜೀವನ ಶೈಲಿಯ ಬಗ್ಗೆ ಮಾತನಾಡುವವರಿಗೆ ಪರೋಕ್ಷವಾಗಿ ತಕ್ಕ ಉತ್ತರ ನೀಡಿದ್ದಾರೆ. ಜತೆಗೆ ಈ ಫೋಟೋಗೆ “YES” ಎಂಬ ಕ್ಯಾಪ್ಶನ್ ನೀಡಲಾಗಿದೆ.

ಇದನ್ನೂ ಓದಿ Sania Mirza: ಹೇಳಲು ತುಂಬಾ ಇದೆ, ಆದರೂ ಮೌನವಾಗಿದ್ದೇನೆ; ಸಾನಿಯಾ ಮಿರ್ಜಾ ಪೋಸ್ಟ್​ನ ಅರ್ಥವೇನು?

ಶಮಿ ಜತೆ ಸಾನಿಯ ಮದುವೆಯಾಗಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸಾನಿಯಾ ‘ಎಸ್’​ ಬರೆದಿರುವುದು ಈಗ ನೆಟ್ಟಿಗರಿಗೆ ಆಹಾರವಾಗಿದೆ. ಶಮಿ ಜತೆಗಿನ ಮದುವೆಯ ಕುರಿತಾಗಿಯೇ ಅವರು ಎಸ್​ ಎಂದು ಬರೆದುಕೊಂಡಿದ್ದಾರೆ ಎಂಬುದಾಗಿ ನೆಟ್ಟಿಗರು ಬಿಂಬಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಸಾನಿಯಾ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅಭಿಮಾನಿಗಳಿಗೆ ‘ಸಬರ್‌ ಕರೋ ಆಲ್‌ವೇಸ್​  ಸಬರ್‌ ಕರೋ…'(ಯಾವಾಗಲೂ ಕೊಂಚ ತಾಳ್ಮೆಯಿಂದ ಇರಿ) ಎಂದು ಬರೆದುಕೊಂಡಿದ್ದರು. ಅವರ ಈ ಮಾರ್ಮಿಕ ಪೋಸ್ಟ್​ ಕಂಡು ನೆಟ್ಟಿಗರು ಸಾನಿಯಾ ಅವರು ಶಮಿ ಜತೆ ಹಸೆಮಣೆ(Sania Mirza marrying Mohammed Shami) ಏರುವುದು ಪಕ್ಕಾ ಎಂದು ಹೇಳಲಾರಂಭಿಸಿದ್ದರು. ಇದೀಗ ಎಸ್​ ಎನ್ನುವ ಬರಹ ಮತ್ತೆ ಸದ್ದು ಮಾಡುತ್ತಿವೆ.

ಕೆಲವು ತಿಂಗಳುಗಳ ಹಿಂದೆ ಪಾಕಿಸ್ತಾನ ಕ್ರಿಕೆಟ್​ ತಂಡದ ಮಾಜಿ ಆಟಗಾರ ಶೋಯೆಬ್‌ ಮಲಿಕ್‌(Shoaib Malik) ಅವರಿಗೆ ಸಾನಿಯಾ ವಿಚ್ಚೇದನ ನೀಡಿದ್ದರು. ಈ ಮೂಲಕ 13 ವರ್ಷದ ದಾಂಪತ್ಯ ಜೀವನವನ್ನು ಅಂತ್ಯಗೊಳಿಸಿದ್ದರು. ಡೀಪ್‌ಫೇಕ್‌(Deepfake) ಮೂಲಕ ಶಮಿ ಮತ್ತು ಸಾನಿಯಾ ಮಿರ್ಜಾ ಅವರ ಮುಖವನ್ನು ಈ ಹಿಂದೆ ಸಾನಿಯಾ ಅವರು ಮಲಿಕ್ ಜತೆಗೆ ತೆಗಿಸಿಕೊಂಡಿದ್ದ​ ಮದುವೆಯ ಫೋಟೊಗೆ ಫೋಟೊಗೆ ಶಮಿಯ ಮುಖವನ್ನು ಎಡಿಟ್​ ಮಾಡಿ ಶಮಿ ಮತ್ತು ಸಾನಿಯಾ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೋಂಡಿದ್ದಾರೆ ಎಂದು ಟ್ವೀಟರ್​ ಎಕ್ಸ್​ನಲ್ಲಿ ಕಿಡಿಗೇಡಿಗಳು ವೈರಲ್​ ಮಾಡಿದ್ದರು.

Continue Reading
Advertisement
International Mud Day
ಫ್ಯಾಷನ್10 mins ago

International Mud Day: ಆರೋಗ್ಯ, ಸೌಂದರ್ಯದ ಪಾಲಿಗೆ ಹೊನ್ನು ಈ ಮಣ್ಣು!

Physical relationship
ವಿದೇಶ28 mins ago

Physical relationship: ಕೈದಿ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ್ದ ಮಹಿಳಾ ಜೈಲಾಧಿಕಾರಿ ಬಗ್ಗೆ ಶಾಕಿಂಗ್‌ ವಿಚಾರ ಬಯಲು

Actor Darshan does not need counseling says by shamitha malnad
ಸ್ಯಾಂಡಲ್ ವುಡ್33 mins ago

Actor Darshan: ದಚ್ಚು ಪರಿಸ್ಥಿತಿಗೆ ಪವಿತ್ರಾ ಕಾರಣ ಅನ್ನೋಕಾಗಲ್ಲ; ದರ್ಶನ್‌ಗೆ ಕೌನ್ಸೆಲಿಂಗ್‌ ಅಗತ್ಯ ಇಲ್ಲ ಎಂದ ಖ್ಯಾತ ಗಾಯಕಿ!

IND vs SA Final
ಕ್ರೀಡೆ44 mins ago

IND vs SA Final: ರಾಮನಾಮ ಸ್ಮರಣೆ ಮಾಡಿ ಭಾರತ ವಿರುದ್ಧ ಫೈನಲ್​ ಆಡಲಿದ್ದಾರೆ ದಕ್ಷಿಣ ಆಫ್ರಿಕಾ ಕ್ರಿಕೆಟಿಗ

karnataka weather Forecast
ಮಳೆ44 mins ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

Road Accident
ಕರ್ನಾಟಕ48 mins ago

Road Accident: ಮುಧೋಳ ಬಳಿ ಶಾಲಾ ಬಸ್‌ ಹರಿದು 4 ವರ್ಷದ ಬಾಲಕ ಸಾವು

T20 World Cup Final
ಪ್ರಮುಖ ಸುದ್ದಿ51 mins ago

T20 World Cup Final : ಭಾರತ ತಂಡದ ಗೆಲುವಿಗಾಗಿ ವಿಶ್ವ ಪ್ರಸಿದ್ಧ ಸಿದ್ಧಿವಿನಾಯಕ ದೇಗುದಲ್ಲಿ ವಿಶೇಷ ಪೂಜೆ

Manvita Kamath One and Half cinema song out
ಸ್ಯಾಂಡಲ್ ವುಡ್54 mins ago

Manvita Kamath: ಮದುವೆ ಆದ ಒಂದು ತಿಂಗಳ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ʻಟಗರು ಪುಟ್ಟಿʼ!

Viral Video
Latest56 mins ago

Viral Video: ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ! ವಿಡಿಯೊ ನೋಡಿ

Dr HS Shetty
ಪ್ರಮುಖ ಸುದ್ದಿ58 mins ago

Dr HS Shetty: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನಿಂದ ಜುಲೈ 6ರಂದು 41 ಸಾವಿರ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ44 mins ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ7 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ23 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌