Stock Market: ಫಲಿತಾಂಶದ ಬಳಿಕ ಷೇರು ಪೇಟೆ ನೆಗೆತ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಲಾಭ - Vistara News

ವಾಣಿಜ್ಯ

Stock Market: ಫಲಿತಾಂಶದ ಬಳಿಕ ಷೇರು ಪೇಟೆ ನೆಗೆತ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಲಾಭ

Stock Market: ಬಿಎಸ್‌ಇ ಸೆನ್ಸೆಕ್ಸ್‌ 1,618 ಪಾಯಿಂಟ್‌ಗಳ ಏರಿಕೆಯೊಂದಿಗೆ ದಿನದ ವಹಿವಾಟಿನ ಅಂತ್ಯಕ್ಕೆ 76693 ಪಾಯಿಂಟ್ಸ್‌ಗೆ ಏರಿಕೆಯಾಯಿತು. ಇನ್ನು ಎನ್‌ಎಸ್‌ಇ ನಿಫ್ಟಿಯು 468 ಪಾಯಿಂಟ್‌ಗಳ ಏರಿಕೆಯೊಂದಿಗೆ ಕಳೆದ ಒಂದು ವರ್ಷದಲ್ಲಿಯೇ ದಾಖಲೆಯ 23,290 ಪಾಯಿಂಟ್‌ಗಳನ್ನು ತಲುಪಿತು. ಇದರಿಂದಾಗಿ, ಹೂಡಿಕೆದಾರರು ಸುಮಾರು 7.5 ಲಕ್ಷ ಕೋಟಿ ರೂ. ಲಾಭ ಗಳಿಸಿದರು ಎಂದು ತಿಳಿದುಬಂದಿದೆ.

VISTARANEWS.COM


on

Stock Market
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಲೋಕಸಭೆ ಚುನಾವಣೆ ಫಲಿತಾಂಶದ ದಿನ (ಜೂನ್‌ 4) (Lok Sabha Election Result 2024) ಷೇರು ಮಾರುಕಟ್ಟೆಯಲ್ಲಿ (Stock Market) ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿ, ಹೂಡಿಕೆದಾರರಿಗೆ 31 ಲಕ್ಷ ಕೋಟಿ ರೂ. ನಷ್ಟವಾದ ಬೆನ್ನಲ್ಲೇ ಷೇರುಪೇಟೆಯು ಲಯಕ್ಕೆ ಮರಳಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಶುಕ್ರವಾರ ಶುಭ ಶುಕ್ರವಾರ ಆಗಿದೆ. ಬಿಎಸ್‌ಇ ಸೆನ್ಸೆಕ್ಸ್‌ ಹಾಗೂ ಎನ್‌ಎಸ್‌ಇ ನಿಫ್ಟಿ ದಾಖಲೆಯ ಏರಿಕೆಯಿಂದಾಗಿ ಶುಕ್ರವಾರ ಹೂಡಿಕೆದಾರರು ಸುಮಾರು 7.5 ಲಕ್ಷ ಕೋಟಿ ರೂ. ಲಾಭ ಗಳಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಹೂಡಿಕೆದಾರರಿಗೆ ಸುಮಾರು 21 ಲಕ್ಷ ಕೋಟಿ ರೂ. ಲಾಭವಾಗಿದೆ ಎಂದು ತಿಳಿದುಬಂದಿದೆ.

ಬಿಎಸ್‌ಇ ಸೆನ್ಸೆಕ್ಸ್‌ 1,618 ಪಾಯಿಂಟ್‌ಗಳ ಏರಿಕೆಯೊಂದಿಗೆ ದಿನದ ವಹಿವಾಟಿನ ಅಂತ್ಯಕ್ಕೆ 76693 ಪಾಯಿಂಟ್ಸ್‌ಗೆ ಏರಿಕೆಯಾಯಿತು. ಇನ್ನು ಎನ್‌ಎಸ್‌ಇ ನಿಫ್ಟಿಯು 468 ಪಾಯಿಂಟ್‌ಗಳ ಏರಿಕೆಯೊಂದಿಗೆ ಕಳೆದ ಒಂದು ವರ್ಷದಲ್ಲಿಯೇ ದಾಖಲೆಯ 23,290 ಪಾಯಿಂಟ್‌ಗಳನ್ನು ತಲುಪಿತು. ಇದರಿಂದಾಗಿ, ಹೂಡಿಕೆದಾರರು ಸುಮಾರು 7.5 ಲಕ್ಷ ಕೋಟಿ ರೂ. ಲಾಭ ಗಳಿಸಿದರು ಎಂದು ತಿಳಿದುಬಂದಿದೆ. ಇದರೊಂದಿಗೆ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಷೇರು ಮಾರುಕಟ್ಟೆಯು ಮತ್ತೆ ಲಯಕ್ಕೆ ಮರಳಿದಂತಾಗಿದೆ.

ಬಿಎಸ್‌ಇ ಸೆನ್ಸೆಕ್ಸ್‌ ಪಾಯಿಂಟ್‌ಗಳ ಏರಿಕೆಯಾದ ಕಾರಣ ಮಾರುಕಟ್ಟೆಯ ಬಂಡವಾಳವು 415 ಲಕ್ಷ ಕೋಟಿ ರೂಪಾಯಿಯಿಂದ 423 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಇದು ಹೂಡಿಕೆದಾರರಿಗೆ ವರದಾನವಾಗಿ ಪರಿಣಮಿಸಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾಗುವುದು ಖಚಿತವಾದ ಕಾರಣ ಷೇರು ಮಾರುಕಟ್ಟೆಯಲ್ಲಿ ಸ್ಥಿರತೆ ಮುಂದುವರಿದಿದೆ ಎಂದು ಷೇರು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮುಂದಿನ ದಿನಗಳಲ್ಲೂ ಲಯದ ಭರವಸೆ ಇದೆ ಎನ್ನಲಾಗಿದೆ.

ನಿಫ್ಟಿ ಐಟಿಯ ಷೇರುಗಳ ಮೌಲ್ಯವು ಶೇ.3.5ರಷ್ಟು ಏರಿಕೆಯಾದ ಕಾರಣ ಇನ್ಫೋಸಿಸ್‌, ಟೆಕ್‌ ಮಹೀಂದ್ರಾ ಹಾಗೂ ಟಿಸಿಎಸ್‌ ಸೇರಿ ಹಲವು ಕಂಪನಿಗಳು ಉತ್ತಮ ಲಾಭ ಗಳಿಸಿವೆ. ಶೋಭಾ ಲಿಮಿಟೆಡ್‌, ಬ್ರಿಗೇಡ್‌ ಎಂಟರ್‌ಪ್ರೈಸಸ್‌ ಲಿಮಿಟೆಡ್‌, ಟಿವಿಎಸ್‌ ಮೋಟರ್‌ ಲಿಮಿಟೆಡ್‌, ರಿಲಯನ್ಸ್‌, ಟಾಟಾ ಸ್ಟೀಲ್‌, ಟಾಟಾ ಮೋಟರ್ಸ್‌ ಸೇರಿ ಹಲವು ಕಂಪನಿಗಳು ಭಾರಿ ಪ್ರಮಾಣದಲ್ಲಿ ಲಾಭ ಗಳಿಸಿವೆ.

ಇದನ್ನೂ ಓದಿ: Stock market Crash : ಜೂ. 4ರ ಷೇರುಪೇಟೆ ಕುಸಿತ ಮೋದಿ, ಅಮಿತ್​ ಶಾ ನಡೆಸಿದ ಮಹಾ ಹಗರಣ; ರಾಹುಲ್ ಗಾಂಧಿ ಆರೋಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Birla Opus: ಬಿರ್ಲಾ ಪೇಂಟ್ ಜಾಹೀರಾತು ನಿಮಗೂ ಇಷ್ಟ ಆಗಿರಬೇಕಲ್ಲವೇ? ಇದರ ಸಂದೇಶ ಏನು? ಹಿನ್ನೆಲೆ ಏನು? ಕುತೂಹಲಕರ ಮಾಹಿತಿ

ಆದಿತ್ಯ ಬಿರ್ಲಾ ಗ್ರೂಪ್‌ನ (Aditya Birla Group) ಗ್ರಾಸಿಮ್ ಇಂಡಸ್ಟ್ರೀಸ್ ಅಡಿಯಲ್ಲಿ ಬಿರ್ಲಾ ಓಪಸ್ ಪೇಂಟ್ಸ್ ತನ್ನ ಮೊದಲ ವಿಷಯಾಧಾರಿತ ಸಂವಹನ ಚಿತ್ರವನ್ನು ಬಿಡುಗಡೆ ಮಾಡಿದೆ. ‘ಮೇಕ್ ಲೈಫ್ ಬ್ಯೂಟಿಫುಲ್’ ಎಂಬ ಅಡಿಬರಹದ ಅಡಿಯಲ್ಲಿ ಬಿರ್ಲಾ ಓಪಸ್‌ನ (Birla Opus) ಬ್ರಾಂಡ್ ಫಿಲಾಸಫಿಯನ್ನು ಈ ಜಾಹೀರಾತು ಚಿತ್ರವು ಪ್ರದರ್ಶಿಸಿದೆ. ಬದುಕನ್ನು ಸುಂದರಗೊಳಿಸು ಎಂಬ ಸಂದೇಶ ಸಾರುವ ಈ ಜಾಹೀರಾತಿನ ಕಲ್ಪನೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ಜಾಹೀರಾತಿನ ಹಿನ್ನೆಲೆಯ ಕುರಿತ ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

By

Birla Opus
Koo

ವಕ್ತ್ ಎ ಹಿ ಖುಷಿಯೋ ಕೋ ಖೋಲ್ ದೋ ದುನಿಯಾ ಕೋ ರಂಗ್ ದೋ… ಜಾಹೀರಾತಿನಲ್ಲಿ ಬರುವ ಈ ಹಾಡು ಎಲ್ಲರ ಮನದಲ್ಲೂ ಗುನುಗುನಿಸುತ್ತಿರಬಹುದು. ಬಿರ್ಲಾ ಪೇಂಟ್ ನ (Birla Opus) ಈ ಜಾಹೀರಾತು (advertisement) ಎಲ್ಲರಿಗೂ ಇಷ್ಟವಾಗಿರಬೇಕು. ಇದರ ಸಂದೇಶ ಏನು, ಹಿನ್ನೆಲೆ ಏನು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಬಣ್ಣಗಳೇ (colour) ಇಲ್ಲದ ತನ್ನ ಸುತ್ತಮುತ್ತಲಿನ ಪ್ರಪಂಚಕ್ಕೆ ಪುಟ್ಟ ಬಾಲಕನೊಬ್ಬ (kid) ಬಣ್ಣ ಕೊಡುತ್ತಾ ಹೋಗುತ್ತಾನೆ. ತಾಯಿ ಮೊದಲು ಆತನನ್ನು ತಡೆಯುತ್ತಾಳೆ. ಆದರೆ ಬಾಲಕ ತನ್ನ ಪಟ್ಟು ಬಿಡುವುದಿಲ್ಲ. ಎಲ್ಲರೂ ಅವನು ನೀಡಿದ ಬಣ್ಣದ ಖುಷಿಯಲ್ಲಿ ಮಿಂದೇಳುವಗ ಆತನ ತಾಯಿಗೂ ಬಣ್ಣ ಬೇಕೆಂದೆನಿಸುತ್ತದೆ. ಅಲ್ಲಿಗೆ ಜಾಹೀರಾತು ಕೊನೆಗೊಳ್ಳುತ್ತದೆ.

ಆದಿತ್ಯ ಬಿರ್ಲಾ ಗ್ರೂಪ್‌ನ (Aditya Birla Group) ಗ್ರಾಸಿಮ್ ಇಂಡಸ್ಟ್ರೀಸ್ ಅಡಿಯಲ್ಲಿ ಬಿರ್ಲಾ ಓಪಸ್ ಪೇಂಟ್ಸ್ ತನ್ನ ಮೊದಲ ವಿಷಯಾಧಾರಿತ ಸಂವಹನ ಚಿತ್ರವನ್ನು ಬಿಡುಗಡೆ ಮಾಡಿದೆ. ‘ಮೇಕ್ ಲೈಫ್ ಬ್ಯೂಟಿಫುಲ್’ ಎಂಬ ಅಡಿಬರಹದ ಅಡಿಯಲ್ಲಿ ಬಿರ್ಲಾ ಓಪಸ್‌ನ ಬ್ರಾಂಡ್ ಫಿಲಾಸಫಿಯನ್ನು ಈ ಚಿತ್ರವು ಪ್ರದರ್ಶಿಸಿದೆ.

ಇದು ಬಿರ್ಲಾ ಓಪಸ್ ಬ್ರ್ಯಾಂಡ್‌ನ ಬದಲಾವಣೆಯ ಶಕ್ತಿಯನ್ನು ಪ್ರದರ್ಶಿಸುತ್ತದೆ ಮತ್ತು ಹೆಚ್ಚು ಸುಂದರವಾದ ಜಗತ್ತನ್ನು ರಚಿಸಲು ಸಹಾಯ ಮಾಡುತ್ತದೆ ಎನ್ನುವ ಸಂದೇಶವನ್ನು ಒಳಗೊಂಡಿದೆ.

ಹಿಂದೆಂದೂ ಮಾಡದಿರುವ ಹೈ-ಡೆಫಿನಿಷನ್, ನೈಜ ಸಿಲೂಯೆಟ್‌ಗಳೊಂದಿಗೆ 3ಡಿ ವೈಶಿಷ್ಟ್ಯದ ಅನಿಮೇಷನ್ ಚಿತ್ರ ಇದಾಗಿದೆ.

ಖ್ಯಾತ ಭಾರತೀಯ ಸಂಗೀತ ಸಂಯೋಜಕ ರಾಮ್ ಸಂಪತ್ ರಚಿಸಿದ ಸುಮಧುರ ಟ್ರ್ಯಾಕ್ ಅನ್ನು ಇದು ಒಳಗೊಂಡಿದೆ. ಜಗತ್ತಿಗೆ ಬಣ್ಣ ನೀಡಿ ಸಂದೇಶದೊಂದಿಗೆ ಅಭಿಯಾನವನ್ನು ಉಂಟು ಮಾಡುವಂತಿದೆ.

ಈ ಜಾಹೀರಾತು ಚಿತ್ರವನ್ನು ಹಿಂದಿ ಮತ್ತು ಎಲ್ಲಾ ಪ್ರಮುಖ ಪ್ರಾದೇಶಿಕ ಭಾಷೆಗಳಲ್ಲಿ ಮಾಡಲಾಗಿದೆ. ಪ್ರಚಾರ ಅಭಿಯಾನ ಮೂಡಿಸಲು ಮತ್ತು ಪ್ರಯೋಗಗಳನ್ನು ಪ್ರೇರೇಪಿಸಲು ಎಲ್ಲ ಮಾದರಿಯ ಮಾಧ್ಯಮಗಳಿಂದ ಇದು ಬೆಂಬಲಿತವಾಗಿದೆ.
ಲಿಯೋ ಬರ್ನೆಟ್ ಇಂಡಿಯಾದಿಂದ ಸಂವಹನವನ್ನು ಪರಿಕಲ್ಪನೆ ಮಾಡಲಾಗಿದ್ದು, ಬ್ರೆಜಿಲ್ ಮೂಲದ ಪ್ರಮುಖ ಜಾಗತಿಕ ಅನಿಮೇಷನ್ ಸ್ಟುಡಿಯೋ ಝಾಂಬಿ ಸ್ಟುಡಿಯೋ ಇದನ್ನು ನಿರ್ಮಿಸಿದೆ.

ಪೇಂಟ್ ಉದ್ಯಮ ಪ್ರವೇಶ

2024ರ ಫೆಬ್ರವರಿಯಲ್ಲಿ ಆದಿತ್ಯ ಬಿರ್ಲಾ ಗ್ರೂಪ್ ಬಿರ್ಲಾ ಓಪಸ್ ಅನ್ನು ಪ್ರಾರಂಭಿಸುವುದರೊಂದಿಗೆ ಪೇಂಟ್ ಉದ್ಯಮಕ್ಕೆ ಪ್ರವೇಶಿಸಿದೆ. ತನ್ನ ಪೇಂಟ್ಸ್ ವ್ಯವಹಾರವನ್ನು ವಿಸ್ತರಿಸಲು ಬದ್ಧವಾಗಿರುವ ಕಂಪನಿಯು 2025ರ ವೇಳೆಗೆ ರಾಷ್ಟ್ರವ್ಯಾಪಿ ಆರು ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸಿದೆ.

ಇದರ ಉದ್ದೇಶ ಏನು?

ಅನಿಮೇಷನ್ ಜಾಹೀರಾತು ಬಿಡುಗಡೆಯ ಕುರಿತು ಪ್ರತಿಕ್ರಿಯಿಸಿದ ಬಿರ್ಲಾ ಓಪಸ್‌ನ ಸಿಇಒ ರಕ್ಷಿತ್ ಹರ್‌ಗಾವೆ, ಉದ್ದೇಶ ಮತ್ತು ಮೌಲ್ಯದೊಂದಿಗೆ ಇರುವ ಉತ್ಪನ್ನಗಳು ಮತ್ತು ಅನುಭವಗಳನ್ನು ಹುಡುಕುವ ಇಂದಿನ ಗ್ರಾಹಕರ ವಿವೇಚನಾಶೀಲ ಅಭಿರುಚಿಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಈ ಚಿತ್ರದ ತಮಾಷೆಯ ನಿರೂಪಣೆಯೊಂದಿಗೆ ‘ಮೇಕ್’ ಎಂಬ ನಮ್ಮ ಬ್ರ್ಯಾಂಡ್ ನಂಬಿಕೆಯನ್ನು ನಿರೂಪಿಸುತ್ತದೆ. ಲೈಫ್ ಬ್ಯೂಟಿಫುಲ್.. ಎಂಬುದು ನಮ್ಮ ಗ್ರಾಹಕರೊಂದಿಗೆ ಈ ಪರಿವರ್ತನೆಯ ಪ್ರಯಾಣವನ್ನು ಪ್ರಾರಂಭಿಸಲು ನಾವು ಉತ್ಸುಕರಾಗಿದ್ದೇವೆ ಎಂಬ ಸಂದೇಶವನ್ನು ಇದು ಸಾರುತ್ತದೆ ಎಂದು ಹೇಳಿದರು.

ಬಿರ್ಲಾ ಓಪಸ್‌ನ ಮಾರ್ಕೆಟಿಂಗ್ ಮುಖ್ಯಸ್ಥ ಇಂದರ್‌ಪ್ರೀತ್ ಸಿಂಗ್, ಬಿರ್ಲಾ ಓಪಸ್‌ಗಾಗಿ ನಮ್ಮ ಮೊದಲ ಬ್ರ್ಯಾಂಡ್‌ ಕಿರುಚಿತ್ರವನ್ನು ಅನಾವರಣಗೊಳಿಸಲು ನಾವು ರೋಮಾಂಚನಗೊಂಡಿದ್ದೇವೆ. ಹಾಲಿವುಡ್ ಚಲನಚಿತ್ರಗಳಲ್ಲಿನ ಹೆಚ್ ಡಿ ಅನಿಮೇಷನ್‌ಗೆ ಹೋಲಿಸಬಹುದಾದ ವಿಶ್ವದ ಅತ್ಯುತ್ತಮ ಅನಿಮೇಷನ್ ಶೈಲಿಗಳ ಮೂಲಕ ನೈಜ ಸೌಂದರ್ಯವನ್ನು ಈ ಕಿರುಚಿತ್ರವು ಉದಾಹರಿಸುತ್ತದೆ. ಇದು ಭಾರತದಲ್ಲಿನ ಬಣ್ಣಗಳ ಉದ್ಯಮದಲ್ಲಿ ಮೊದಲನೆಯದು. ಖ್ಯಾತ ಸಂಗೀತ ಸಂಯೋಜಕ ರಾಮ್ ಸಂಪತ್ ಅವರು ರಚಿಸಿರುವ ‘ದುನಿಯಾ ಕೋ ರಂಗ್ ದೋ’ ಸಂದೇಶವು ಜೀವನದಲ್ಲಿ ಭರವಸೆ, ಸಂತೋಷ ಮತ್ತು ಸೌಂದರ್ಯವನ್ನು ಕಂಡುಕೊಳ್ಳುವ ಪ್ರಬಲ ಕಲ್ಪನೆಯೊಂದಿಗೆ ಅನುರಣಿಸುತ್ತದೆ ಎಂದರು.

ಬಿರ್ಲಾ ಓಪಸ್ ಇಂದಿನ ಕ್ರಿಯಾತ್ಮಕ ಹೊಸ ಭಾರತೀಯ ಪ್ರೇಕ್ಷಕರಿಗಾಗಿ ವಿನ್ಯಾಸಗೊಳಿಸಲಾದ ಬ್ರ್ಯಾಂಡ್ ಆಗಿದೆ ಮತ್ತು ನಾವು ಅಭಿಯಾನಕ್ಕೆ ತಾಜಾ ಮತ್ತು ನವೀನ ವಿಧಾನವನ್ನು ನೀಡಲು ಬಯಸಿದ್ದೇವೆ. ಕಥೆ ಹೇಳುವಿಕೆಗಾಗಿ ಅನಿಮೇಷನ್ ಅನ್ನು ಬಳಸುವುದರಿಂದ, ನಮ್ಮ ಚಿತ್ರವು ನಮ್ಮ ಪ್ರೇಕ್ಷಕರು ಹೇಗೆ ಸ್ಫೂರ್ತಿದಾಯಕ ಮತ್ತು ರೂಪಾಂತರಗೊಳ್ಳುವ ಬಣ್ಣದಿಂದ ತಮ್ಮನ್ನು ಸುತ್ತುವರಿದಿರಬಹುದು ಎಂಬುದನ್ನು ಗ್ರಹಿಸಲು ಮಾಡಿರುವ ಕಲಾತ್ಮಕ ವಿಧಾನವಾಗಿದೆ ಎಂದು ಸಿಸಿಒ ಪಬ್ಲಿಸಿಸ್ ಗ್ರೂಪ್ – ಸೌತ್ ಏಷ್ಯಾ ಮತ್ತು ಚೇರ್ಮನ್ ರಾಜದೀಪಕ್ ದಾಸ್ ತಿಳಿಸಿದ್ದಾರೆ.


ಚಿತ್ರದ ಪರಿಕಲ್ಪನೆ ಏನು?

ಕಪ್ಪು ಬಿಳುಪಿನ ಜಗತ್ತಿನಲ್ಲಿ ಚಿತ್ರವು ತೆರೆದುಕೊಳ್ಳುತ್ತದೆ. ಮಗು ತನ್ನ ಮನೆಯಲ್ಲಿರುವ ವಸ್ತುವನ್ನು ಸ್ಪರ್ಶಿಸುತ್ತದೆ. ಅದು ಬಣ್ಣ ಪಡೆಯುತ್ತದೆ. ಮಗುವಿಗೆ ರೋಮಾಂಚನವಾಗುತ್ತದೆ. ಮಗು ಈ ರೀತಿ ಮಾಡುವುದನ್ನು ಯಾರಾದರೂ ನೋಡಿದರೆ ಆತನ ಮೇಲೆ ಕೋಪಗೊಳ್ಳಬಹುದು ಎಂದು ತಾಯಿ ಕಳವಳ ವ್ಯಕ್ತಪಡಿಸುತ್ತಾಳೆ. ಆದ್ದರಿಂದ ಹಾಗೆ ಮಾಡದಂತೆ ಹೇಳಿ ಅವನನ್ನು ರಕ್ಷಿಸಲು ಪ್ರಯತ್ನಿಸುತ್ತಾಳೆ. ಮನೆಯಿಂದ ತಾಯಿಯೊಂದಿಗೆ ಮಗನು ಹೊರಬಂದಾಗ ಅವನು ಮತ್ತೆ ತನ್ನ ಶಕ್ತಿಯನ್ನು ಬಳಸಲು ಪ್ರಯತ್ನಿಸುತ್ತಾನೆ ಮತ್ತು ಅನಂತರ ಅದನ್ನು ಸಂಭ್ರಮಿಸುತ್ತಾ ಹೋಗುತ್ತಾನೆ. ಮಂದ ಮತ್ತು ನಿರ್ಜೀವ ಜಗತ್ತನ್ನು ಅವನು ವರ್ಣರಂಜಿತ, ರೋಮಾಂಚಕ ಮತ್ತು ಸಂತೋಷವಾಗಿ ಪರಿವರ್ತಿಸುತ್ತಾ ಸಾಗುತ್ತಾನೆ. ಜಗತ್ತನ್ನು ಸುಂದರ ಸ್ಥಳವನ್ನಾಗಿ ಮಾಡಲು ತನ್ನ ಮಗ ತಂದ ಸಕಾರಾತ್ಮಕ ಪರಿಣಾಮವನ್ನು ತಾಯಿ ಅನಂತರ ಅರಿತುಕೊಳ್ಳುತ್ತಾಳೆ.

ಇದನ್ನೂ ಓದಿ: NEET-UG Row: ನೀಟ್‌ ಕೌನ್ಸೆಲಿಂಗ್‌ಗೆ ತಡೆ ಇಲ್ಲ ಎಂದು ಪುನರುಚ್ಚರಿಸಿದ ಸುಪ್ರೀಂ ಕೋರ್ಟ್

ಬಿರ್ಲಾ ಓಪಸ್ ಪೇಂಟ್ಸ್

ಆದಿತ್ಯ ಬಿರ್ಲಾ ಗ್ರೂಪ್‌ನ ಪ್ರಮುಖ ಸಂಸ್ಥೆಯಾದ ಗ್ರಾಸಿಮ್ ಇಂಡಸ್ಟ್ರೀಸ್ ಅಡಿಯಲ್ಲಿರುವ ಬಿರ್ಲಾ ಓಪಸ್ ಪೇಂಟ್ಸ್ ಭಾರತದ ಗ್ರಾಹಕರಿಗೆ ಅಲಂಕಾರಿಕ ಚಿತ್ರಕಲೆಗೆ ಬೇಕಾದ ಬಣ್ಣಗಳನ್ನು ಒದಗಿಸುತ್ತದೆ. 2024ರಲ್ಲಿ ಪ್ರಾರಂಭವಾದ ಬಿರ್ಲಾ ಓಪಸ್ ಪೇಂಟ್ಸ್ ಇಂಟೀರಿಯರ್, ಎಕ್ಸ್‌ಟೀರಿಯರ್ಸ್, ವಾಟರ್‌ಫ್ರೂಫಿಂಗ್, ಎನಾಮೆಲ್ ಪೇಂಟ್‌ಗಳು, ವುಡ್ ಫಿನಿಶ್‌ಗಳು ಮತ್ತು ವಾಲ್‌ಪೇಪರ್‌ಗಳಂತಹ ವಿಭಾಗಗಳಾದ್ಯಂತ ಉನ್ನತ ಉತ್ಪನ್ನಗಳ ಶ್ರೇಣಿಯನ್ನು ಒಳಗೊಂಡ ಸಂಪೂರ್ಣ ಪೋರ್ಟ್‌ಫೋಲಿಯೊವನ್ನು ಹೊಂದಿದೆ.

ಭಾರತದಾದ್ಯಂತ ಹರಡಿರುವ ಆರು ಉತ್ಪಾದನಾ ಘಟಕಗಳೊಂದಿಗೆ ಬಿರ್ಲಾ ಓಪಸ್ ಪೇಂಟ್ಸ್ ಅಲಂಕಾರಿಕ ಬಣ್ಣಗಳ ವಿಭಾಗದಲ್ಲಿ ಮಾರುಕಟ್ಟೆಯಲ್ಲಿ ಪ್ರಮುಖ ಸ್ಥಾನವನ್ನು ಪಡೆದಿದೆ. ಅಂತೂ, ಈ ವಿಶಿಷ್ಟ ಜಾಹೀರಾತು ಈ ಉತ್ಪನ್ನಕ್ಕೆ ಭಾರಿ ಪ್ರಚಾರ ತಂದು ಕೊಟ್ಟಿದೆ.‌ ಈ ಜಾಹೀರಾತಿನ ಸೃಜನಶೀಲ ಕಲ್ಪನೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

Continue Reading

ಮನಿ-ಗೈಡ್

Money Guide: ಕಡಿಮೆ ಸಂಬಳ ಇದ್ದರೂ ಚಿಂತೆ ಬೇಡ; ಉಳಿತಾಯಕ್ಕಾಗಿ ಈ ಟಿಪ್ಸ್‌ ಫಾಲೋ ಮಾಡಿ

Money Guide: ಸಂಬಳ ಕೈಗೆ ಸಿಗಲು ಆರಂಭಿಸಿದ ದಿನದಿಂದ ಕಡ್ಡಾಯವಾಗಿ ಒಂದಷ್ಟು ಮೊತ್ತ ಉಳಿತಾಯ ಮಾಡಿ ಎಂದು ಆರ್ಥಿಕ ತಜ್ಞರು ಸಲಹೆ ನೀಡುತ್ತಾರೆ. ಕೈಗೆ ಸಿಗುವುದೇ ಇಷ್ಟು ಸಣ್ಣ ಮೊತ್ತ. ಇದರಲ್ಲಿ ಉಳಿತಾಯ ಮಾಡುವುದಾದರೂ ಹೇಗೆ? ಎನ್ನುವುದು ಬಹುತೇಕರ ಪ್ರಶ್ನೆ. ಅದಕ್ಕೆ ಇಲ್ಲಿದೆ ಉತ್ತರ. ಎಷ್ಟೇ ಸಂಬಳ ಬರಲಿ ಅದರಲ್ಲಿ ಒಂದಷ್ಟು ಹಣ ಸೇವಿಂಗ್ಸ್‌ ಮಾಡುವುದು ಹೇಗೆ ಎನ್ನುವ ಟಿಪ್ಸ್‌ ಇಂದಿನ ಮನಿಗೈಡ್‌ನಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ದಿನ ಕಳೆದ ಹಾಗೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಎಷ್ಟು ದುಡಿದರೂ ಕಡಿಮೆಯೇ ಎನ್ನುವಂತಾಗಿದೆ. ಅದರಲ್ಲಿಯೂ ಈಗಷ್ಟೇ ಉದ್ಯೋಗಕ್ಕೆ ಸೇರಿದವರಿಗೆ ಇನ್ನಷ್ಟು ಚಿಂತೆ. ತಮ್ಮ ಖರ್ಚು ನೋಡಬೇಕು, ಮನೆಯವರಿಗೂ ಹಣ ಕಳುಹಿಸಬೇಕು, ಲೋನ್‌ ಇದ್ದರೆ ಅದನ್ನೂ ತುಂಬಬೇಕು. ಇಷ್ಟರ ನಡುವೆ ಉಳಿತಾಯ ಎನ್ನುವುದು ಕನಸಿನ ಮಾತು ಎಂದುಕೊಳ್ಳುತ್ತಾರೆ. ಆದರೆ ನೆನಪಿಡಿ ಸಂಬಳ ಎಷ್ಟೇ ಬರಲಿ ಅದರಲ್ಲಿ ಪ್ರತಿ ತಿಂಗಳು ಒಂದಷ್ಟು ಹಣವನ್ನು ಉಳಿತಾಯ ಮಾಡಲೇ ಬೇಕು. ಯಾವಾಗ, ಯಾವ ರೀತಿಯಲ್ಲಿ ಅಪಾಯ ಎದುರಾಗುತ್ತದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ಹೀಗಾಗಿ ಸಂಬಳ ಕೈಗೆ ಸಿಗಲು ಆರಂಭಿಸಿದ ದಿನದಿಂದ ಕಡ್ಡಾಯವಾಗಿ ಒಂದಷ್ಟು ಮೊತ್ತ ಉಳಿತಾಯ ಮಾಡಿ ಎಂದು ಆರ್ಥಿಕ ತಜ್ಞರು ಸಲಹೆ ನೀಡುತ್ತಾರೆ. ಕೈಗೆ ಸಿಗುವುದೇ ಇಷ್ಟು ಸಣ್ಣ ಮೊತ್ತ. ಇದರಲ್ಲಿ ಉಳಿತಾಯ ಮಾಡುವುದಾದರೂ ಹೇಗೆ? ಎನ್ನುವುದು ಬಹುತೇಕರ ಪ್ರಶ್ನೆ. ಅದಕ್ಕೆ ಇಲ್ಲಿದೆ ಉತ್ತರ. ಎಷ್ಟೇ ಸಂಬಳ ಬರಲಿ ಅದರಲ್ಲಿ ಒಂದಷ್ಟು ಹಣ ಸೇವಿಂಗ್ಸ್‌ ಮಾಡುವುದು ಹೇಗೆ ಎನ್ನುವ ಟಿಪ್ಸ್‌ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಬಜೆಟ್‌ ತಯಾರಿಸಿ

ಮೊದಲಿಗೆ ಬಜೆಟ್‌ ತಯಾರಿಸಿಕೊಳ್ಳಿ. ಕೈಗೆ ಎಷ್ಟು ಸಂಬಳ ಬರುತ್ತದೆ ಎನ್ನುವುದನ್ನು ಗಮನಿಸಿ ಬಜೆಟ್‌ ತಯಾರಿಸಿ. ತಿಂಗಳ ಆರಂಭದಲ್ಲೇ ಸಂಬಳದ ಮೊತ್ತವನ್ನು ಪ್ರತಿ ಖರ್ಚಿಗೆ ಇಷ್ಟೆಂದು ನಿರ್ಧರಿಸಿ. ಇದರಿಂದ ಅನಗತ್ಯ ಖರ್ಚನ್ನು ತಪ್ಪಿಸಬಹುದು. ಇದೇ ಕಾರಣಕ್ಕೆ ರಾಜ್ಯ, ಕೇಂದ್ರ ಸರ್ಕಾರಗಳು ಬಜೆಟ್‌ಗೆ ಒತ್ತು ನೀಡುತ್ತವೆ.

ಎಮರ್ಜೆನ್ಸಿ ಫಂಡ್‌

ಜೀವನ ಎನ್ನುವುದು ಅನಿರೀಕ್ಷಿತಗಳ ಆಗರ. ಇಲ್ಲಿ ಯಾವಾಗ, ಏನು ಸಂಭವಿಸುತ್ತದೆ ಎನ್ನುವುದನ್ನು ಮೊದಲೇ ನಿರೀಕ್ಷಿಸಲು ಸಾಧ್ಯವಿಲ್ಲ. ಹೀಗಾಗಿ ಎಮರ್ಜೆನ್ಸಿ ಫಂಡ್‌ ಹೊಂದಿರುವುದು ಅತ್ಯಗತ್ಯ. ಅಂದರೆ 4-5 ತಿಂಗಳ ಸಂಬಳದಷ್ಟು ಹಣ ನಮ್ಮ ಸೇವಿಂಗ್ ಅಕೌಂಟ್‌ನಲ್ಲಿ ಯಾವತ್ತೂ ಇರಬೇಕು. ಅನಿರೀಕ್ಷಿತ ಅಗತ್ಯಗಳಿಗೆ ಇದು ನೆರವಾಗುತ್ತದೆ. ತಕ್ಷಣ ದುಡ್ಡು ಕೈಗೆ ಬರುವಂತಿರಬೇಕು. ಇದರಿಂದ ಕಷ್ಟ ಕಾಲದಲ್ಲಿ ಸಾಲಕ್ಕಾಗಿ ಇತರರ ಮುಂದೆ ಕೈ ಚಾಚುವುದು ತಪ್ಪುತ್ತದೆ.

ಸಾಧ್ಯವಿರುವಲ್ಲೆಲ್ಲ ಖರ್ಚು ಕಡಿಮೆ ಮಾಡಿ

ನಿಮ್ಮ ಸಂಬಳವನ್ನು ಉಳಿಸಲು ಇದೊಂದು ಅತ್ಯುತ್ತಮ ಮಾರ್ಗ. ಸಾಧ್ಯವಾದಷ್ಟು ಮನೆಯಲ್ಲೇ ಆಹಾರ ತಯಾರಿಸಿ. ಪ್ರತಿ ದಿನ ಹೋಟೆಲ್‌ ಆಹಾರ ಸೇವಿಸುವುದರಿಂದ ಖರ್ಚು ಅಧಿಕ. ಮಾತ್ರವಲ್ಲ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಇನ್ನು ಆದಷ್ಟು ಕರೆಂಟ್‌ ಉಳಿತಾಯ ಮಾಡಿ. ಅನಗತ್ಯ ಬಳಕೆ ತಪ್ಪಿಸಿ. ಮನೆ ಸಮೀಪದಲ್ಲೇ ಆಫೀಸ್‌ ಇದ್ದರೆ ಆದಷ್ಟು ನಡೆದುಕೊಂಡೇ ಹೋಗಿ. ಇದರಿಂದ ವಾಕಿಂಗ್‌ ಮಾಡಿದಂತೂ ಆಗುತ್ತದೆ. ಇನ್ನು ಅಗತ್ಯ ವಸ್ತುಗಳನ್ನು ಆನ್‌ಲೈನ್‌ / ಆಫ್‌ಲೈನ್‌ನಲ್ಲಿ ಆಫರ್‌ ಇದ್ದಾಗ ಕಂಡುಕೊಳ್ಳಿ.

ವಿಮೆ ಮಾಡಿಸಿ

ಜೀವ ವಿಮೆ ಮತ್ತು ಆರೋಗ್ಯ ವಿಮೆ ಮಾಡಿಸಿಲ್ಲ ಎಂದಾದರೆ ಮೊದಲು ಇದನ್ನು ಮಾಡಿಸಿ. ಇದು ಅನಿವಾರ್ಯವೂ ಹೌದು. ಆರೋಗ್ಯ ವಿಮೆ ಕಠಿಣ ಸಂದರ್ಭದಲ್ಲಿ ನಿಮ್ಮನ್ನು ರಕ್ಷಿಸುತ್ತದೆ. ನಿಮ್ಮ ಕುಟುಂಬದ ಪ್ರತಿಯೊಬ್ಬ ಸದಸ್ಯರೂ ಈ ವಿಮೆ ವ್ಯಾಪ್ತಿಗೆ ಒಳಪಡುತ್ತಾರೆ ಎನ್ನುವುದನ್ನು ಖಚಿತಪಡಿಸಿಕೊಳ್ಳಿ. ಜತೆಗೆ ಜೀವ ವಿಮೆಯೂ ಪ್ರಮುಖವಾದುದು. ನಿಮ್ಮ ಜೀವ ವಿಮಾ ರಕ್ಷಣೆಯು ವಾರ್ಷಿಕ ಮನೆಯ ವೆಚ್ಚಗಳ ಮೂರು ಪಟ್ಟು ಇರುವಂತೆ ನೋಡಿಕೊಳ್ಳಿ. ಇದರಿಂದ ತುರ್ತು ಪರಿಸ್ಥಿತಿಯಲ್ಲಿ ನಿಮ್ಮ ಅಕೌಂಟ್‌ನಲ್ಲಿರುವ ಹಣವನ್ನು ಹಾಗೇ ಉಳಿಸಬಹುದು.

ಕಂಡದ್ದೆಲ್ಲ ಕೊಂಡು ಗುಡ್ಡೆ ಹಾಕಬೇಡಿ

ಶಾಪಿಂಗ್‌ ಹೋದಾಗ ಅಥವಾ ಆನ್‌ಲೈನ್‌ನಲ್ಲಿ ಆಕರ್ಷಕವಾಗಿ ಕಂಡದ್ದನ್ನೆಲ್ಲ ಕೊಂಡುಕೊಳ್ಳುವ ಅಭ್ಯಾಸ ಕೆಲವರಿಗಿರುತ್ತದೆ. ಅದರ ಉಪಯೋಗವೇನು, ತಾವೆಷ್ಟು ಅದನ್ನು ಬಳಸುತ್ತೇವೆ ಎನ್ನುವ ಬಗ್ಗೆ ಯೋಚನೆಯನ್ನೂ ಮಾಡದೆ ಖರೀದಿಸಿ ಗುಡ್ಡೆ ಹಾಕುತ್ತಾರೆ. ಈ ಅಭ್ಯಾಸವನ್ನು ನಿಲ್ಲಿಸಿ. ಯಾವುದೇ ವಸ್ತು ಕಂಡುಕೊಳ್ಳಬೇಕಾದರೆ ನಿಜವಾಗಿಯೂ ಅಗತ್ಯ ಉಂಟಾ ಎನ್ನುವುದನ್ನು ಹಲವು ಬಾರಿ ಯೋಚಿಸಿ.

ಹೂಡಿಕೆ ಮಾಡಿ

ಇಂದಿನ ಉಳಿತಾಯವೇ ನಾಳೆಯ ಆದಾಯ. ಹೀಗಾಗಿ ನಿಮ್ಮ ಆದಾಯದ 10% ಅನ್ನು ಹೂಡಿಕೆ ಮಾಡಿ. ಆದರೆ ಎಲ್ಲವನ್ನೂ ಒಂದೇ ಕಡೆ ಹೂಡಿಕೆ ಮಾಡಬೇಡಿ. ಇದಕ್ಕಾಗಿ ಈಕ್ವಿಟಿ, ಚಿನ್ನ, ಮ್ಯೂಚುವಲ್‌ ಫಂಡ್‌ನಂತಹ ವೈವಿಧ್ಯಮಯ ಮಾರ್ಗಗಳನ್ನು ಆಯ್ಕೆ ಮಾಡಿಕೊಳ್ಳಿ. ಮ್ಯೂಚುವಲ್‌ ಫಂಡ್‌ ಎಂದರೆ ಸಾಮೂಹಿಕ ಹೂಡಿಕೆಯ ಸಾಧನ. ಹಲವಾರು ಹೂಡಿಕೆದಾರರಿಂದ ಹಣವನ್ನು ಸಂಗ್ರಹಿಸಿ, ಅದನ್ನು ವೃತ್ತಿಪರ ಫಂಡ್ ಮ್ಯಾನೇಜರ್‌ಗಳ ನೆರವಿನಿಂದ ಈಕ್ವಿಟಿ, ಬಾಂಡ್‌, ಸರ್ಕಾರಿ ಸೆಕ್ಯುರಿಟೀಸ್‌, ಮನಿ ಮಾರ್ಕೆಟ್‌ ಸಾಧನಗಳಲ್ಲಿ ಹೂಡಿಕೆ ಮಾಡುವುದು.‌ ಪ್ರತಿ ಮ್ಯೂಚುವಲ್‌ ಫಂಡ್‌ ಯೋಜನೆಗೂ ಅದರದ್ದೇ ಆದ ಉದ್ದೇಶ ಇರುತ್ತದೆ. ಸ್ಟಾಕ್‌ ಮಾರ್ಕೆಟ್‌ ಬಗ್ಗೆ ಸಾಕಷ್ಟು ತಿಳುವಳಿಕೆ ಇಲ್ಲದವರು ಹಾಗೂ ತಿಳಿಯಲು ಸಮಯದ ಅಭಾವ ಇರುವವರು ಮ್ಯೂಚುವಲ್‌ ಫಂಡ್‌ ಆಯ್ಕೆ ಮಾಡಬಹುದು. ನೆನಪಿಡಿ ಹೂಡಿಕೆಯಲ್ಲಿ ತೊಡಗುವ ಮುನ್ನ ಹಣಕಾಸು ಸಲಹೆಗಾರರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಇಎಂಐ ತಪ್ಪಿಸಬೇಡಿ

ದಂಡದ ಮೂಲಕ ನಿಮ್ಮ ಒಂದಷ್ಟು ಹಣ ಪೋಲಾಗುವುದನ್ನು ತಡೆಯುವ ಅತ್ಯುತ್ತಮ ಮಾರ್ಗ ಎಂದರೆ ಸರಿಯಾದ ಸಮಯಕ್ಕೆ ಇಎಂಐ ಪಾವತಿಸುವುದು. ಸರಿಯಾಗಿ ಇಎಂಐ ಪಾವತಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಇದರಿಂದ ನಿಮ್ಮ ಹಣ ವ್ಯರ್ಥವಾದಂತಾಗುತ್ತದೆ. ಅಲ್ಲದೆ ವಾಹನದಲ್ಲಿ ಸಂಚರಿಸುವಾಗ ದಾಖಲೆಗಳು ತಪ್ಪದೆ ನಿಮ್ಮ ಬಳಿ ಇರಲಿ. ಹೆಲ್ಮೆಟ್‌, ಸೀಟ್‌ ಬೆಲ್ಟ್‌ ಧರಿಸುವುದು ಮುಂತಾದ ನಿಯಮಗಳನ್ನು ಉಲ್ಲಂಘಿಸಲೇಬೇಡಿ.

ಇದನ್ನೂ ಓದಿ: Money Guide: ಅಸಂಘಟಿತ ವಲಯದ ಕಾರ್ಮಿಕರು ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ಪಡೆಯಲು ಹೀಗೆ ಮಾಡಿ

Continue Reading

ಚಿನ್ನದ ದರ

Gold Rate Today: ಆಭರಣ ಖರೀದಿಗೆ ಇದು ಸೂಕ್ತ ಸಮಯ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಶನಿವಾರ ಬಂಗಾರದ ದರ ತುಸು ಏರಿಕೆಯಾಗಿತ್ತು. ಇಂದು ಬೆಲೆ ಹೆಚ್ಚಳವಾಗದೆ ಗ್ರಾಹಕರು ನಿರಾಳರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದಿನ ದರದ ವಿವರ ಇಲ್ಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ (ಜೂನ್‌ 30) ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ಶನಿವಾರ ಬಂಗಾರದ ದರ ತುಸು ಏರಿಕೆಯಾಗಿತ್ತು. ಇಂದು ಬೆಲೆ ಹೆಚ್ಚಳವಾಗದೆ ಗ್ರಾಹಕರು ನಿರಾಳರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದಿನ ದರದ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,616 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,228 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,000. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,250 ಮತ್ತು ₹ 6,62,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,824 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,280 ಮತ್ತು ₹ 7,22,800 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ ₹ 6,640 ₹ 7,242
ಮುಂಬೈ₹ 6,625 ₹ 7,228
ಬೆಂಗಳೂರು₹ 6,616₹ 7,228
ಚೆನ್ನೈ₹ 6,685 ₹ 7,293

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯೂ ಕೊಂಚ ಇಳಿಮುಖವಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 90.25 ಹಾಗೂ 8 ಗ್ರಾಂಗೆ ₹ 722 ಇದೆ. 10 ಗ್ರಾಂಗೆ ₹ 902.50 ಹಾಗೂ 1 ಕಿಲೋಗ್ರಾಂಗೆ ₹ 90,250 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

Continue Reading

ದೇಶ

Mohan Bhagwat: ಮುಕೇಶ್‌ ಅಂಬಾನಿ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌; ಕೈ ಮುಗಿದು ಸ್ವಾಗತಿಸಿದ ನೀತಾ ಅಂಬಾನಿ

Mohan Bhagwat: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ತಮ್ಮ ನಿವಾಸ ಆಂಟಿಲಿಯಾ ದಲ್ಲಿ ಶುಕ್ರವಾರ ಆಯೋಜಿಸಿದ್ದ ಆತಿಥ್ಯವನ್ನು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಸ್ವೀಕರಿಸಿದರು. ಮೋಹನ್‌ ಭಾಗವತ್‌ ಅವರನ್ನು ಖುದ್ದು ಮುಕೇಶ್ ಅಂಬಾನಿ, ನೀತಾ ಅಂಬಾನಿ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಸ್ವಾಗತಿಸಿದರು.

VISTARANEWS.COM


on

Mohan Bhagwat
Koo

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರು ತಮ್ಮ ನಿವಾಸ ಆಂಟಿಲಿಯಾ (Antilia)ದಲ್ಲಿ ಶುಕ್ರವಾರ ಆಯೋಜಿಸಿದ್ದ ಆತಿಥ್ಯವನ್ನು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ (Mohan Bhagwat) ಸ್ವೀಕರಿಸಿದರು. ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ (Nita Ambani) ದಂಪತಿ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ (Radhika Merchant) ಅವರ ವಿವಾಹ ಜುಲೈಯಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌ ಅವರನ್ನು ಖುದ್ದು ಮುಕೇಶ್ ಅಂಬಾನಿ, ನೀತಾ ಅಂಬಾನಿ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಸ್ವಾಗತಿಸಿದರು.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹ ಜುಲೈ 12ರಂದ್ ಅದ್ಧೂರಿಯಾಗಿ ನೆರವೇರಲಿದ್ದು, ಗಣ್ಯರನ್ನು ಆಮಂತ್ರಿಸಲಾಗುತ್ತಿದೆ. ಮೋಹನ್‌ ಭಾಗವತ್‌ ಭೇಟಿ ವೇಳೆ ರಾಧಿಕಾ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡರೆ, ಅನಂತ್‌ ಕುರ್ತಾ ಮತ್ತು ಜಾಕೆಟ್‌ ಧರಿಸಿ ಮಿಂಚಿದರು. ನೀತಾ ಅವರು ರೇಷ್ಮೆ ಸೀರೆಯಲ್ಲಿ ಕಾಣಿಸಿಕೊಂಡರೆ ಮುಕೇಶ್ ಅಂಬಾನಿ ಸರಳವಾಗಿ ಪ್ಯಾಂಟ್‌-ಷರ್ಟ್‌ ಧರಿಸಿದ್ದರು. ನೀತಾ ಅಂಬಾನಿ ಕೈ ಮುಗಿದು ಮೋಹನ್‌ ಭಾಗವತ್‌ ಅವರನ್ನು ಸ್ವಾಗತಿಸಿದರು.

ಕೆಲವು ದಿನಗಳ ಹಿಂದೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರಿಗೆ ಅಂಬಾನಿ ಕುಟುಂಬ ಸದಸ್ಯರು ಆಮಂತ್ರಣ ಪತ್ರಿಕೆ ನೀಡಿದ್ದರು. ಜತೆಗೆ ಸೋಮವಾರ ಬಾಲಿವುಡ್‌ ಸ್ಟಾರ್‌ ಅಜಯ್ ದೇವಗನ್ ಮತ್ತು ಕಾಜೋಲ್ ಅವರ ಮನೆಗೆ ತೆರಳಿದ್ದರು.

ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ

ನೀತಾ ಅಂಬಾನಿ ಅವರು ಸೋಮವಾರ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಿ ದೇವರಿಗೆ ಮದುವೆಯ ಆಮಂತ್ರಣ ನೀಡಿದ್ದರು. ದೇವರ ದರ್ಶನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼನಾನು ಈಗಷ್ಟೇ ಬಾಬಾ ಭೋಲೆನಾಥ್ ಅವರ ದರ್ಶನ ಪಡೆದಿದ್ದೇನೆ. ಹಿಂದೂ ಸಂಪ್ರದಾಯದ ಪ್ರಕಾರ ನಾವು ಮೊದಲು ಭಗವಂತನ ಆಶೀರ್ವಾದವನ್ನು ಪಡೆಯುತ್ತೇವೆ. ನಾನು ಬಾಬಾಗೆ ಮದುವೆಯ ಆಮಂತ್ರಣವನ್ನು ನೀಡಿದ್ದೇನೆ. ನನಗೆ ತುಂಬಾ ಸಂತೋಷವಾಗಿದೆ. 10 ವರ್ಷಗಳ ಅನಂತರ ಇಲ್ಲಿಗೆ ಬಂದಿದ್ದೇನೆ. ಅಭಿವೃದ್ಧಿ ಮತ್ತು ಕಾಶಿ ವಿಶ್ವನಾಥ ಕಾರಿಡಾರ್, ನಮೋ ಘಾಟ್, ಸೌರಶಕ್ತಿ ಸ್ಥಾವರಗಳು ಮತ್ತು ಸ್ವಚ್ಛತೆಯನ್ನು ನೋಡಲು ನನಗೆ ಸಂತೋಷವಾಗಿದೆʼʼ ಎಂದು ಹೇಳಿದ್ದರು.

ʼʼ10 ವರ್ಷಗಳ ಹಿಂದೆ ಕಾಶಿ ವಿಶ್ವನಾಥ ದೇವಸ್ಥಾನದ ದರ್ಶನಕ್ಕೆ ಬಂದಿದ್ದೆ. ಇಲ್ಲಿನ ಕುಶಲಕರ್ಮಿಗಳೊಂದಿಗೆ ನನಗೆ ವಿಶೇಷ ಬಾಂಧವ್ಯವಿದೆ. ನಾನು ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ರಿಲಯನ್ಸ್ ಫೌಂಡೇಶನ್ ಮತ್ತು ಸ್ವದೇಶ್ ಮಾಧ್ಯಮದ ಮೂಲಕ ನಾವು ಅವರಿಗೆ ಜಾಗತಿಕ ಮನ್ನಣೆ ಮತ್ತು ಗೌರವವನ್ನು ನೀಡಲು ಬಯಸುತ್ತೇವೆʼʼ ಎಂದು ತಿಳಿಸಿದ್ದರು.

ಜುಲೈ 12ರಂದು ಮದುವೆ

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12ರಂದು ಮುಂಬೈಯ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಇದರ ವಿವರವನ್ನು ಬಹಿರಂಗಪಡಿಸುವ ಆಹ್ವಾನ ಪತ್ರಿಕೆ ರಿಲೀಸ್‌ ಆಗಿ, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ: Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Continue Reading
Advertisement
Team India Captain
ಕ್ರೀಡೆ18 seconds ago

Team India Captain : ರೋಹಿತ್ ಶರ್ಮಾ ನಂತರ ಟಿ20 ತಂಡದ ನಾಯಕ ಯಾರು? ಇಲ್ಲಿದೆ ಐದು ಮುಂಚೂಣಿ ಹೆಸರುಗಳು

Water tank Collapsed
ದೇಶ2 mins ago

Water Tank Collapsed: ಭೀಕರ ದುರಂತ; ಇಬ್ಬರು ಸ್ಥಳದಲ್ಲೇ ಸಾವು-12ಮಂದಿಗೆ ಗಂಭೀರ ಗಾಯ

New Criminal Law
ದೇಶ13 mins ago

New Criminal Law: ಹೊಸ ಕ್ರಿಮಿನಲ್‌ ಕಾನೂನಿನಂತೆ ಬೀದಿ ವ್ಯಾಪಾರಿ ವಿರುದ್ಧ ಮೊದಲ ಎಫ್‌ಐಆರ್‌ ದಾಖಲು

Actor Darshan In Central Jail remembering mother and son
ಕ್ರೈಂ14 mins ago

Actor Darshan: ಇಂದಾದ್ರೂ ಭೇಟಿಗೆ ಬರ್ತಾರಾ ದರ್ಶನ್‌ ಅಮ್ಮ, ತಮ್ಮ?

Rakshit Shetty Visited Koragajja Temple And Prayed
ಸಿನಿಮಾ35 mins ago

Rakshit Shetty: ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ!

Parliament Sessions
ದೇಶ48 mins ago

Parliament Sessions: ಇಂದು ಸಂಸತ್‌ ಕಲಾಪ ಪುನರಾರಂಭ; ʼನೀಟ್‌ʼ ಚರ್ಚೆಗೆ ಪ್ರತಿಪಕ್ಷಗಳ ಪಟ್ಟು ಸಾಧ್ಯತೆ: Live ಇಲ್ಲಿ ನೋಡಿ

Watermelon At Nigh
ಆರೋಗ್ಯ48 mins ago

Watermelon At Night: ಸಂಜೆ 7 ಗಂಟೆಯ ಕಲ್ಲಂಗಡಿ ಹಣ್ಣನ್ನು ತಿನ್ನಲು ಹೋಗಬೇಡಿ!

Off Shoulder Tops Fashion
ಫ್ಯಾಷನ್48 mins ago

Off Shoulder Tops Fashion: ನೀವೂ ಆಫ್‌ ಶೋಲ್ಡರ್‌ ಟಾಪ್‌ ಧರಿಸಬಹುದು! ಆದರೆ ಈ ಎಚ್ಚರಿಕೆ ವಹಿಸಿ

shubham milk price hike
ಪ್ರಮುಖ ಸುದ್ದಿ50 mins ago

Milk Price Hike: ಹಾಲಿನ ದರ 4 ರೂ. ಹೆಚ್ಚಳ? ಶುಭಂ ಗೋಲ್ಡ್‌ ದರ ಏರಿಕೆ

irat Kohli's Heartfelt Tribute to Anushka Sharma
ಕ್ರಿಕೆಟ್57 mins ago

Virat Kohli: ಈ ಗೆಲುವು ನನ್ನದಷ್ಟೇ ಅಲ್ಲ, ನಿನ್ನದು ಕೂಡ ಎಂದು ಪತ್ನಿಗೆ ಪ್ರೀತಿ ವ್ಯಕ್ತಪಡಿಸಿದ ವಿರಾಟ್‌ ಕೊಹ್ಲಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು21 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌