ಧವಳ ಧಾರಿಣಿ ಅಂಕಣ: ಸಾಕೇತದ ಅಮಾತ್ಯ ಸುಮಂತ್ರ, ರಾಮಾಯಣದ ರಹಸ್ಯನಿಧಿ - Vistara News

ಅಂಕಣ

ಧವಳ ಧಾರಿಣಿ ಅಂಕಣ: ಸಾಕೇತದ ಅಮಾತ್ಯ ಸುಮಂತ್ರ, ರಾಮಾಯಣದ ರಹಸ್ಯನಿಧಿ

ಧವಳ ಧಾರಿಣಿ ಅಂಕಣ: ರಾಮಾಯಣದಲ್ಲಿ ಮಂತ್ರಿ ಸುಮಂತ್ರನ ಪಾತ್ರ ಸಣ್ಣದಾದರೂ ಮಹತ್ವದ್ದು. ದಶರಥ ಮಹಾರಾಜನ ಬಾಲ್ಯದ ಒಡನಾಡಿ ಇವನಾಗಿದ್ದ. ಬಹುಶಃ ದಶರಥನದೇ ವಯಸ್ಸು ಈತನಿಗೆ. ಈ ಕಾರಣದಿಂದಲೇ ದಶರಥನಿಗೆ ಆತ ನಂಬಿಗಸ್ಥ ಮಂತ್ರಿಯಾಗಿದ್ದನು. ಆತನ ಅಂತರಂಗದ ಆಪ್ತನೂ ಆಗಿದ್ದನು.

VISTARANEWS.COM


on

ಧವಳ ಧಾರಿಣಿ ಅಂಕಣ dasharatha sumantra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸುಮಂತ್ರ ಭಾಗ 1; ರಾಜ್ಯದ ರಹಸ್ಯಗಳನ್ನು ನಿಗೂಢವಾಗಿರಿಸಿದ ಮುತ್ಸದ್ಧಿ

dhavala dharini by Narayana yaji

ಧವಳ ಧಾರಿಣಿ ಅಂಕಣ: ತಸ್ಯಾಮಾತ್ಯಾ ಗುಣೈರಾಸನ್ನಿಕ್ಷ್ವಾಕೋಸ್ತು ಮಹಾತ್ಮನಃ
ಮನ್ತ್ರಜ್ಞಾಶ್ಚೇಙ್ಗಿತಜ್ಞಾಶ್ಚ ನಿತ್ಯಂ ಪ್ರಿಯಹಿತೇ ರತಾ: ৷৷ಬಾ.7.1৷৷

ಇಕ್ಷ್ವಾಕು ವಂಶದಲ್ಲಿ ಹುಟ್ಟಿದ ಮಹಾತ್ಮನಾದ ದಶರಥನಿಗೆ (king Dasharatha) ಮಂತ್ರಾಲೋಚನೆಯಲ್ಲಿ ಸಮರ್ಥರಾದ, ಕಾರ್ಯವಿಚಾರತತ್ಪರರಾದ ಮತ್ತು ಪರರಮನಸಿನಲ್ಲಿರುವುದನ್ನು ಮುಖಭಾವದಿಂದಲೇ ತಿಳಿಯುಬಲ್ಲ, ಯಾವಾಗಲೂ ರಾಜನ ಹಿತರಕ್ಷಣೆಯಲ್ಲಿಯೇ ನಿರತರಾಗಿರುವ ಮಂತ್ರಿಗಳಿದ್ದರು.

ಮಂತ್ರಿಗಳ ವಿಚಾರಕ್ಕೆ ಬರುವಾಗ ರಾಮಾಯಣದ (Ramayana) ಪ್ರಾರಂಭದ ಬಾಲಕಾಂಡಗಳಿಂದ ಹಿಡಿದು ಕೊನೆಯ ಉತ್ತರಕಾಂಡದ ಸೀತಾವಿಯೋಗದ ವರೆಗಿನ ಭಾಗಗಳಲ್ಲಿ ಕಂಡುಬರುವ ಪ್ರಮುಖ ಹೆಸರು ಸುಮಂತ್ರ (Sumantra) ಎನ್ನುವ ಮಹಾ ಅಮಾತ್ಯನದ್ದು. ಅಯೋಧ್ಯೆಯ ಹಿತವನ್ನು ಕಾಪಾಡಲು ಅಷ್ಟ ಮಂತ್ರಿಗಳಾದ ಧೃಷ್ಟಿ, ಜಯಂತ, ವಿಜಯ, ಸಿದ್ಧಾರ್ಥ, ಅರ್ಥಸಾಧಕ, ಅಶೋಕ, ಮಂತ್ರಪಾಲ ಮತ್ತು ಸುಮಂತ್ರ ಎನ್ನುವ ಎಂಟು ಮಂತ್ರಿಗಳಿದ್ದರು. ಅವರಲ್ಲಿ ಸುಮಂತ್ರನೆನ್ನುವ ಕೇವಲ ಮಂತ್ರಿ ಎನ್ನುವುದಕ್ಕಿಂತ ರಾಜನ ಅಂತರಂಗದ ಆಪ್ತನೂ ಆಗಿದ್ದ. ಅರ್ಥಶಾಸ್ತ್ರದಲ್ಲಿ ಸುಬಧ್ರವಾದ ರಾಜ್ಯಕ್ಕೆ “ರಾಜ, ಅಮಾತ್ಯ, ಜನಪದ, ದುರ್ಗ, ಕೋಶ, ಸೈನ್ಯ ಅಥವಾ ದಂಡ ಮತ್ತು ಮಿತ್ರ” ಎನ್ನುವ ಸಪ್ತಾಂಗ ಬಹಳ ಮಹತ್ವದ್ದು. ಅಮಾತ್ಯರಲ್ಲಿ ಮಂತ್ರಿಗಳು ಮತ್ತು ಪುರೋಹಿತ ವರ್ಗ ಎನ್ನುವ ಎರಡು ವಿಧಗಳಿವೆ. ದಕ್ಷ ಆಡಳಿತಕ್ಕೆ ಯೋಗ್ಯರಾದ ಸಚಿವರು ಮತ್ತು ಧರ್ಮಮಾರ್ಗದಲ್ಲಿ ರಾಜ ಸದಾ ಇರುವಂತೆ ನೋಡಿಕೊಳ್ಳುವ ಪುರೋಹಿತರು ಬಹು ಮುಖ್ಯ. ರಾಜನಿಗೆ ಕೆಟ್ಟ ಹೆಸರಾಗಲಿ, ಒಳ್ಳೆಯ ಹೆಸರಾಗಲಿ ಬರುವುದರಲ್ಲಿ ಅಮಾತ್ಯ ಮತ್ತು ಪುರೋಹಿತರ ಪಾತ್ರ ದೊಡ್ಡದು.

ಸುಮಂತ್ರ ಎನ್ನುವ ಮಂತ್ರಿ ಅಯೋಧ್ಯೆಯ ಆಧಾರ ಸ್ತಂಭಗಳಲ್ಲಿ ಒಂದಾಗಿದ್ದ. ಆಯೋಧ್ಯೆಯಲ್ಲಿ ಸಚಿವ ಪದವಿಯೆನ್ನುವುದು ವಂಶಪರಂಪರೆಯ ಕಾರಣ ಮಾತ್ರದಿಂದಲೇ ಬರುತ್ತಿರಲಿಲ್ಲ. ಅವರಲ್ಲಿ ಯೋಗ್ಯತೆಯೂ ಇರಬೇಕಾಗಿತ್ತು. ಯಾರನ್ನಾದರೂ ಹುದ್ದೆಗೆ ನಿಯಕ್ತಿಗೊಳಿಸುವ ಮುನ್ನ ಅವರನ್ನು ಚನ್ನಾಗಿ ಪರೀಕ್ಷಿಸಲಾಗುತ್ತಿತ್ತು. ಅರ್ಥಶಾಸ್ತ್ರದಲ್ಲಿ ರಾಜನ ಆಸ್ಥಾನದಲ್ಲಿರುವವರನ್ನು ಪರೀಕ್ಷಿಸುವ ವಿಧಾನವನ್ನು ಹೇಳುವಾಗ ಧರ್ಮಾದಿ, ಉಪಧಾ, ಅರ್ಥೋಪಧಾ, ಕಾಮೋಪಧಾ, ಭಯೋಪಧಾಗಳ ಮೂಲಕ ಪರೀಕ್ಷಿಸಬೇಕು ಎಂದು ಹೇಳುತ್ತದೆ. ಅಂದರೆ ರಾಜನಲ್ಲಿ ಅಧರ್ಮವನ್ನು ಕಲ್ಪಿಸಿ ಅವನನ್ನು ಪಟ್ಟದಿಂದ ಇಳಿಸೋಣವೇ ಎನ್ನುವ ಆಮಿಷಕ್ಕೆ ಒಡ್ಡಿದಾಗಲೂ ಅದನ್ನು ಯಾವಾತ ತಿರಸ್ಕರಿಸುತ್ತಾನೋ, ಹಣದ ಆಮಿಷದ ಮೂಲಕ ರಾಜನಿಂದ ಬೇರ್ಪಡಿಸಲು ಸಾಧ್ಯವೋ ಎನ್ನುವುದನ್ನು ಪರೀಕ್ಷಿಸುವುದು, ರಾಣಿ ನಿನ್ನನ್ನು ಬಯಸಿದ್ದಾಳೆ, ಅವಳನ್ನು ಸೇರಿದರೆ ನಿನಗೆ ಕೈತುಂಬಾ ಹಣಸಿಗುವುದು ಎನ್ನುವ ಆಮಿಷವನ್ನು ಒಡ್ಡಿದಾಗಲೂ ಅದನ್ನು ತಿರಸ್ಕರಿಸುವಂಥವರು, ರಾಜನಿಂದ ಅವಮಾನಿತರಾದ (ಹಾಗೇ ನಟಿಸಿ) ಅಮಾತ್ಯನಾದವ ಇತರರನ್ನು ನಾವೆಯಲ್ಲಿ ಕರೆದುಕೊಂಡು ಹೋಗಿ ರಾಜನ ವಿರುದ್ಧ ಅವರನ್ನು ಎತ್ತಿಕಟ್ಟಿದಾಗ ಯಾರು ತಿರಸ್ಕರಿಸಿ ರಾಜನಿಗೆ ನಿಷ್ಠೆಯುಳ್ಳವರಾಗಿರುತ್ತಾರೆಯೋ ಅಂಥವರು ಮಾತ್ರ ಅಮಾತ್ಯರಾಗಲು ಯೋಗ್ಯರು ಎನ್ನುತ್ತದೆ.

ರಾಜನ ಆಪ್ತಸಲಹೆಗಾರ

ದಶರಥ ಮಹಾರಾಜನ ಬಾಲ್ಯದ ಒಡನಾಡಿ ಇವನಾಗಿದ್ದ. ಬಹುಶಃ ದಶರಥನದೇ ವಯಸ್ಸು ಈತನಿಗೆ. ಈ ಕಾರಣದಿಂದಲೇ ದಶರಥನಿಗೆ ಆತ ನಂಬಿಗಸ್ಥ ಮಂತ್ರಿಯಾಗಿದ್ದನು. ಆತನ ಅಂತರಂಗದ ಆಪ್ತನೂ ಆಗಿದ್ದನು. ದಶರಥ ಕೌಸಲ್ಯೆ ಮತ್ತು ಸುಮಿತ್ರೆ ಇಬ್ಬರನ್ನೂ ಮದುವೆಯಾಗಿ ಹಲವುಕಾಲ ಕಳೆದಿದ್ದರೂ ಅವರಿಬ್ಬರಲ್ಲಿ ಮಕ್ಕಳಾಗಿರಲಿಲ್ಲ. ಅಯೋಧ್ಯೆಯ ಸಿಂಹಾಸನಕ್ಕೆ ವಾರಸುದಾರರು ಇಲ್ಲದೆ ಇರುವ ಕಾರಣದಿಂದ ಮತ್ತೊಂದು ಮದುವೆಯಾಗಲು ಕನ್ಯಾನ್ವೇಷಣೆಗೆ ದೊರೆ ತೊಡಗಿದ. ಆಗ ಆತನಿಗೆ ಕೇಕೇಯದ ದೊರೆ ಅಶ್ವಪತಿಗೆ ಕೈಕೇಯಿ ಎನ್ನುವ ಸುಂದರಿಯಾದ ಮಗಳು ಇರುವ ವರ್ತಮಾನ ಬಂತು. ಆಕೆಯನ್ನು ಮದುವೆಯಾಗುವ ಉದ್ಧೇಶದಿಂದ ಅಶ್ವಪತಿರಾಜನಲ್ಲಿ ಕೇಳಿದಾಗ ಆ ದೊರೆ “ತನ್ನ ಮಗಳಲ್ಲಿ ಜನಿಸುವ ಪುತ್ರನಿಗೆ ರಾಜ್ಯದ ಉತ್ತರಾಧಿಕಾರ ಸಿಗಬೇಕೆಂದು” ನಿಯಮ ಹಾಕಿ ಅದಕ್ಕೆ ಒಪ್ಪುವುದಾದರೆ ಮಗಳನ್ನು ಕೊಡುವೆ ಎಂದ. ದಶರಥನಿಗೆ ಮದುವೆ ಆಗಬೇಕಾಗಿತ್ತು. ಅದಾಗಲೇ ಆತನಿಗೆ ಇಬ್ಬರು ಹೆಂಡತಿಯರ ಜೊತೆ ಇನ್ನು ಮುನ್ನೂರೈವತ್ತು ಉಪಪತ್ನಿಯರೂ ಇದ್ದರು. ಪಟ್ಟಮಹಿಷಿಯರಲ್ಲಿ ಜನಿಸಿದವರಿಗೆ ಮಾತ್ರ ರಾಜ್ಯದ ಅಧಿಕಾರಕ್ಕೆ ಏರುವ ಅರ್ಹತೆ ಇರುತ್ತಿತ್ತು. ಹೇಗಿದ್ದರೂ ಮೊದಲ ಇಬ್ಬರು ಪತ್ನಿಯರಿಗೆ ಮಕ್ಕಳಿಲ್ಲ, ಹಾಗಾಗಿ ಕೈಕೇಯಿಯಲ್ಲಿ ಜನಿಸಿದ ಮಕ್ಕಳಿಗೆ ಸಹಜವಾಗಿ ಅಧಿಕಾರ ಸಿಗುತ್ತದೆ ಎನ್ನುವ ಕಾರಣಕ್ಕೆ ದೊರೆ ಮರುಮಾತಿಲ್ಲದೇ ಒಪ್ಪಿಕೊಂಡ.

ಈ ವಿಷಯಕ್ಕೆ ಸಾಕ್ಷಿಯಾಗಿ ಸುಮಂತ್ರ ಮಾತ್ರವೇ ಇದ್ದ. ಆದರೆ ಬುದ್ಧಿವಂತನಾದ ದಶರಥ ಮತ್ತು ಸುಮಂತ್ರ ಇಬ್ಬರೂ ಈ ವಿಷಯವನ್ನು ಗೌಪ್ಯವಾಗಿಟ್ಟಿದ್ದರು. ಅಶ್ವಪತಿ ತನ್ನ ಮಗಳಾದ ಕೈಕೇಯಿಗೂ ಈ ಮಾತನ್ನು ಹೇಳಿರಲಿಲ್ಲ. ನಂತರ ಅದು ಹೇಗೋ ರಾಮನಿಗೆ ತಿಳಿದಿತ್ತು. ರಾಜನಾಗುವಿಕೆ ಎಂದರೆ ಅದಕ್ಕೆ ಇನ್ನಿತರ ಯೋಗ್ಯತೆಯೂ ಬೇಕಿತ್ತು. ಭರತ ವನವಾಸಕ್ಕೆ ಬಂದಾಗ ಆತನಲ್ಲಿ ರಾಮ, ದಶರಥ ಕನ್ಯಾಶುಲ್ಕವಾಗಿ ಕೋಸಲ ರಾಜ್ಯವನ್ನು ಕೊಟ್ಟಿರುವ ವಿಷಯ ಹೇಳುತ್ತಾನೆ. ಮದುವೆಯಾಗುವಾಗ ಸುಳ್ಳು ಹೇಳಬಹುದು ಎನ್ನುವ ಕಾರಣಕ್ಕೆ ರಾಜ್ಯದ ಹಿತರಕ್ಷಣೆಯಿಂದ ಸುಮಂತ್ರ ಈ ವಿಷಯನ್ನು ಮುಚ್ಚಿಟ್ಟಿದ್ದ. ಮಹಾಭಾರತದಲ್ಲಿ “ಮನ್ತ್ರಗೂಢಾ ಹಿ ರಾಜಸ್ಯ ಮನ್ತ್ರಿಣೋ ಯೇ ಮನೀಷಿಣಃ – ಬುದ್ಧಿವಂತರಾದ ಮಂತ್ರಿಗಳೇ ರಾಜ್ಯದ ರಾಜ ರಹಸ್ಯಗಳನ್ನು ನಿಗೂಢವಾಗಿರಿಸುತ್ತಾರೆ” ಎನ್ನುವ ವಾಕ್ಯವಿದೆ. ಅದಕ್ಕೆ ತಕ್ಕಂತೆ ಇದ್ದವ ಸುಮಂತ್ರ.

ರಾಜ ಮತ್ತು ಅಮಾತ್ಯ ಈ ಇಬ್ಬರ ನಡುವೆ ಇರುವ ಸಂಬಂಧ ಪತಿ ಮತ್ತು ಧಾರಾ ಭಾವದಲ್ಲಿರಬೇಕು. ರಾಜನ ನಿರ್ಣಯದಲ್ಲಿ ದೋಷಕಂಡು ಅದರಲ್ಲಿ ಬದಲಾವಣೆ ಆಗಬೇಕಾದಾಗ ಬಹಿರಂಗವಾಗಿ ಆ ಕುರಿತು ಚರ್ಚಿಸಕೂಡದು. ಸಭಾಸದರ ಎದುರು ಸತ್ಯವೇ ಆದರೂ ಅದನ್ನು ಪ್ರಕಟಿಸಿದರೆ ರಾಜನ ಮಹತ್ವ ಕಡಿಮೆಯಾಗಿಬಿಡುತ್ತದೆ. ಸಚಿವನಾದವ ಹೆಂಡತಿ ತನ್ನ ಗಂಡನಿಗೆ ಏಕಾಂತದಲ್ಲಿ ಹೇಗೆ ಎಲ್ಲವನ್ನು ತಿಳಿಸಿ ಹೇಳುತ್ತಾಳೆಯೋ ಅದೇ ರೀತಿ ರಾಜ ಏಕಾಂತದಲ್ಲಿರುವಾಗ ಆತ ತೆಗೆದುಕೊಂಡ ನಿರ್ಣಯಗಳ ಕುರಿತು ವಿಮರ್ಶಿಸಿ ಮಾಡಬೇಕಾದ ಬದಲಾವಣೆಗಳನ್ನು ತಿಳಿಸಿ ಕಾರ್ಯರೂಪಕ್ಕೆ ತರುವಂತೆ ನೋಡಿಕೊಳ್ಳಬೇಕು. ದಶರಥನಿಗೆ ಬಹುಕಾಲದವರೆಗೂ ಮಕ್ಕಾಳಾಗಿಲ್ಲದ ಕಾರಣದಿಂದ ಆತ ತನ್ನ ಮಂತ್ರಿಗಳನ್ನು ಪುರೋಹಿತರಾದ ವಶಿಷ್ಠ, ವಾಮದೇವರನ್ನೂ ಕರೆಯಿಸಿ ಅವರಲ್ಲಿ ಪರಿಹಾರ ಕೇಳಿದಾಗ, ಅವರು ರಾಜನಿಗೆ ಅಶ್ವಮೇಧ ಯಾಗವನ್ನು ಮಾಡಲು ಸಲಹೆನೀಡುತ್ತಾರೆ. ಅದಕ್ಕೆ ದೊರೆ ಒಪ್ಪಿಗೆ ಸೂಚಿಸಿಯೂ ಆಗುತ್ತದೆ. ಆದರೆ ಅಲ್ಲೇ ಇದ್ದ ಸುಮಂತ್ರನಿಗೆ ಈ ಸಲಹೆ ಪೂರ್ತಿ ಮನಸ್ಸಿಗೆ ಬರಲಿಲ್ಲ. ಆತ ರಾಜನ ಅಂತಃಪುರಕ್ಕೆ ಸಾಯಂಕಾಲ ಬಂದು ರಾಜನಿಗೆ ಮಹತ್ವದ ವಿಷಗಳ ಕುರಿತು ಹೇಳುತ್ತಾನೆ.

ಸುಮಂತ್ರನ ಪಾತ್ರ ಮಹಾಭಾರತದ ವಿದುರನ ಪಾತ್ರವನ್ನು ಹೋಲುತ್ತದೆ. ಆತನಿಗೂ ವಿದುರನಂತೆ ಮಹಾನ್ ಋಷಿಗಳ ಸಂಪರ್ಕವಿತ್ತು. ಅವರಲ್ಲಿ ತನ್ನ ವಯಕ್ತಿಕವಾದ ವಿಷಯಗಳನ್ನು ಕೇಳುವುದಕ್ಕಿಂತ ಆತ ರಾಜ್ಯದ ಕಲ್ಯಾಣದ ವಿಷಯಗಳನ್ನು ಕೇಳುತ್ತಿದ್ದ. ಅಯೋಧ್ಯೆಯ ಅರಸನಿಗೆ ಮಕ್ಕಳಾಗಿಲ್ಲದ ವಿಷಯಗಳ ಕುರಿತು ಸುಮಂತ್ರನಿಗೂ ಚಿಂತೆ ಆಗಿತ್ತು. ಆ ಕುರಿತು ಆತ ಪರಿಹಾರಕ್ಕಾಗಿ ಅನೇಕ ಋಷಿಗಳನ್ನು ಬೇಡಿಕೊಳ್ಳುತ್ತಿದ್ದ. ಒಂದುಸಲ ಸುಮಂತ್ರ ಮಹಾತ್ಮರಾದ ಸನತ್ಕುಮಾರ ಋಷಿಗಳನ್ನು ಇನ್ನಿತರ ಮುನಿಗಳ ಸಮ್ಮುಖದಲ್ಲಿ ಭೇಟಿಯಾಗಿ ರಾಜನಿಗೆ ಮಕ್ಕಳಾಗುವಂತೆ ಬೇಡಿಕೊಂಡ. ಅದಕ್ಕೆ ಅವರು ವಿಭಾಂಡಕ ಮುನಿಯ ಮಗನಾದ ಋಷ್ಯಶೃಂಗನ ವಿಚಾರವನ್ನು ಹೇಳಿ, ಆತನ ಚರಿತ್ರೆಯನ್ನು ಅಮಾತ್ಯನಿಗೆ ವಿವರಿಸುತ್ತಾರೆ. ಋಷ್ಯಶೃಂಗನನ್ನು ಹೆಣ್ಣುಗಳ ಮೋಹದಲ್ಲಿ ಕೆಡಹಿ ತನ್ನ ರಾಜ್ಯಕ್ಕೆ ಕರೆಯಿಸಿಕೊಂಡ ರೋಮಪಾದ ರಾಜ ತನ್ನ ಮಗಳಾದ ಶಾಂತಾದೇವಿಯನ್ನು ಕೊಟ್ಟು ಮದುವೆಮಾಡಿದ್ದಾನೆ. ಸುಮಂತ್ರನ ನಿಸ್ಪ್ರಹ ಪ್ರಾರ್ಥನೆಗೆ ಮೆಚ್ಚಿದ ಸನತ್ಕುಮಾರರು ಧಶರಥನಿಗೆ ಮಕ್ಕಳಾಗಬೇಕೆಂದಿದ್ದರೆ ಆತ ಅಂಗರಾಜ್ಯಕ್ಕೆ ಹೋಗಿ ರೋಮಪಾದನನ್ನು ಒಲಿಸಿ ಋಷ್ಯಶೃಂಗನನ್ನು ಅಯೋಧ್ಯೆಗೆ ಕರೆಯಿಸಿ ಆತನಿಂದ ಪುತ್ರಕಾಮೇಷ್ಥಿ ಯಾಗವನ್ನು ಮಾಡಿಸಿದರೆ ನಾಲ್ವರು ಮಕ್ಕಳಾಗುವರು ಎಂದು ಉಪಾಯವನ್ನೂ ಸಹ ಹೇಳಿದ್ದ. ಈ ವಿಷಯವನ್ನು ಸೂಕ್ತ ಸಮಯದಲ್ಲಿ ದಶರಥನಿಗೆ ಹೇಳಬೇಕೆಂದುಕೊಂಡು ಅದು ತನಕ ಹೇಳಿರಲಿಲ್ಲ.

ದೇವಗುಟ್ಟು, ಋಷಿ ಗುಟ್ಟುಗಳನ್ನು ಏಕಾಏಕೀ ಬಹಿರಂಗಪಡಿಸಬಾರದೆಂದು ಶಾಸ್ತ್ರ ಹೇಳುತ್ತದೆ. ಕಾಲವಲ್ಲದ ಕಾಲದಲ್ಲಿ ಅದನ್ನು ಹೇಳಿದರೆ ಅದು ಫಲ ನೀಡದೇ ಹೋಗಬಹುದು. ಅದೂ ಅಲ್ಲದೇ ಮನುಷ್ಯ ಪ್ರಯತ್ನ ಮೀರಿದಾಗ ಮಾತ್ರವೇ, ದೇವತೆಗಳಲ್ಲಿ ಅನುಗ್ರಹಕ್ಕಾಗಿ ಕೋರಬೇಕು. ಮಕ್ಕಳಾಗಲು ಅಶ್ವಮೇಧ ಯಾಗವನ್ನು ಮಾಡುವಂತೆ ವಶಿಷ್ಠರು ಸಲಹೆ ನೀಡಿದಾಗ ಸಭೆಯ ಮರ್ಯಾದೆಯ ದೃಷ್ಟಿಯಿಂದ ಅಲ್ಲಿ ಸುಮಂತ್ರ ಏನೂ ಹೇಳಲಿಲ್ಲ. ಮಂತ್ರಾಲೋಚನೆಯ ನೆಪದಲ್ಲಿ ಅಂತಃಪುರಕ್ಕೆ ಬಂದು ಅರಸನಿಗೆ ತಾನು ರಾಜನ ಸಲುವಾಗಿ ಸನತ್ಕುಮಾರರಲ್ಲಿ ಮಕ್ಕಳಾಗುವಂತೆ ವರಬೇಡಿದುದರ ವಿಷಯವನ್ನು ಬಹಿರಂಗಪಡಿಸುತ್ತಾನೆ. ಸನತ್ಕುಮಾರರೇ ಸಲಹೆ ನೀಡಿದಂತೆ ಪುತ್ರಕಾಮೇಷ್ಟಿಯಾಗವನ್ನು ಮಾಡಲು ಪ್ರೇರೇಪಿಸುತ್ತಾನೆ. ಪುತ್ರಕಾಮೇಷ್ಟಿಯಾಗ ಅಥರ್ವ ಮಂತ್ರಕ್ಕೆ ಸಂಬಂಧಿಸಿದುದರಿಂದ ಸಭೆಯಲ್ಲಿ ನೇರವಾಗಿ ಹೇಳಕೂಡದು ಎನ್ನುವ ಪ್ರಜ್ಞೆ ಸುಮಂತ್ರನಲ್ಲಿತ್ತು. ಪುರೋಹಿತರಾದ ವಶಿಷ್ಠರು ಆಸ್ಥಾನದಲ್ಲಿ ಇರುವಾಗ ಇನ್ನೊಬ್ಬ ಪುರೋಹಿತರನ್ನು ಕರೆಯಿಸಿ ಯಾಗ ಮಾಡುವ ಸಲಹೆ ನೀಡಿದರೆ ಅದರಿಂದ ವಶಿಷ್ಠರಿಗೆ ಅವಮಾನ ಆಗಿ ಕೋಪಿಸಿಕೊಳ್ಳಬಹುದೆನ್ನುವ ಆತಂಕವೂ ಮನೆಮಾಡಿತ್ತು.

ಈ ಹಿಂದೆ ವಶಿಷ್ಠ ಪರಂಪರೆಯ ಹಿರಿಯರು ಹರಿಶ್ಚಂದ್ರನ ತಂದೆ ಸತ್ಯವ್ರತ(ತ್ರಿಶಂಕು)ನಿಗೆ ಇನ್ನೊಬ್ಬ ಪುರೋಹಿತರನ್ನು ಕರೆದು ಯಾಗ ಮಾಡಿಸುವೆ ಎಂದಾಗ ಶಾಪ ಕೊಟ್ಟಿದ್ದ. ಈ ಕಾರಣದಿಂದ ಮಹಾರಾಜನೇ ಋಷ್ಯಶೃಂಗನನ್ನು ಕರೆತರುವ ವಿಚಾರದಲ್ಲಿ ವಶಿಷ್ಠರನ್ನು ಒಲಿಸಲಿ ಎನ್ನುವ ವಿವೇಕದ ನಡತೆ ಅವನಲ್ಲಿತ್ತು. ವಿದ್ವಾಂಸನೂ ಎಲ್ಲಾ ಕಾರ್ಯಗಳಲ್ಲಿ ಶುದ್ಧನಾಗಿರುವವನು, ದೇಶಿಯನು (ಜಾನಪದಃ), ತೀಕ್ಷ್ಣವಾದ ಬುದ್ಧಿಯುಳ್ಳವ (ಕೃತಪ್ರಜ್ಞಶ್ಚ) ಆದ ಮಂತ್ರಿಯನ್ನು ಅರಸ ಹೊಂದಿರಬೇಕೆನ್ನುವ ಶೃತಿವಾಕ್ಯಕ್ಕೆ ನಿದರ್ಶನನಾಗಿ ಸುಮಂತ್ರ ಇದ್ದ. ಸುಮಂತ್ರನ ಸಲಹೆಯನ್ನು ಸ್ವೀಕರಿಸಿದ ರಾಜ ವಶಿಷ್ಠರ ನೇತ್ರತ್ವದಲ್ಲಿ ಅಶ್ವಮೇಧ ಯಾಗವನ್ನೂ ಆ ನಂತರ ಋಷ್ಯಶೃಂಗರ ಅದ್ವರ್ಯದಲ್ಲಿ ಪುತ್ರಕಾಮೇಷ್ಟಿ ಯಾಗವನ್ನೂ ನಡೆಸಲು ವಶಿಷ್ಥರಿಂದ ಅನುಮತಿ ಪಡೆಯುತ್ತಾನೆ. ನಂತರ ದಶರಥನ ಪರಿವಾರದೊಡನೆ ಅಂಗದೇಶಕ್ಕೆ ಹೋಗಿ ರೋಮಪಾದನೊಡನೆ ಋಷ್ಯಶೃಂಗನನ್ನು ಯಾಗಕ್ಕಾಗಿ ಕರೆತರುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದವ ಸುಮಂತ್ರನೇ.

ಮಂತ್ರಾಲೋಚನಾ ಪ್ರವೀಣ

ಸುಮಂತ್ರನಲ್ಲಿ ಮದ ಮತ್ಸರ ಕ್ರೋಧಗಳು ಮನೆಮಾಡಿರಲಿಲ್ಲ. ಅಯೋಧ್ಯೆಯಲ್ಲಿ ಮಂತ್ರಿಗಳಾಗುವವರನ್ನು ಕಾಯಕ, ವಾಚಕ, ಮಾನಸಿಕ, ಕರ್ಮಕೃತ ಮತ್ತು ಸಂಕೇತಜನಿತ ಎನ್ನುವ ಐದು ಅಂಗಗಳಿಂದ ಪರೀಕ್ಷಿಸಿ ತೇರ್ಗಡೆಯಾದವರನ್ನು ಮಂತ್ರಿಗಳಾಗಿ ತೆಗೆದುಕೊಳ್ಳಲಾಗುತ್ತಿತ್ತು. ಸುಮಂತ್ರ ಈ ಎಲ್ಲಾ ವಿಷಯಗಳಲ್ಲಿ ರಾಜನ ಮೊದಲ ಆಯ್ಕೆಯಾಗಿದ್ದ. ಸುಮಂತ್ರನೆನ್ನುವುದು ಈತನಿಗೆ ಅನ್ವರ್ಥನಾಮವಾಗಿದ್ದಿರಬೇಕು. ಮಂತ್ರಕ್ಕೆ ಸಚಿವ ಎನ್ನುವ ಅರ್ಥವಿದೆ. “ಸುಮಂತ್ರ” ಎಂದರೆ ಒಳ್ಳೆಯ ಸಲಹೆಯನ್ನು ಕೊಡುವವ ಎಂದು ಆಗುತ್ತದೆ. ಸುಮಂತ್ರ ಮಂತ್ರಾಲೋಚನೆಯಲ್ಲಿ ನಿಪುಣನಾಗಿದ್ದ. ಕುಮಾರವ್ಯಾಸನ ಭಾರತದಲ್ಲಿ ರಾಜನಿಗೆ ನೆರವಾಗಲು ಮಂತ್ರಾಲೋಚನೆಯಲ್ಲಿ ಸಮರ್ಥರಾದ ಸಚಿವರಿರಬೇಕು ಎನ್ನುತ್ತಾನೆ.

ಮಂತ್ರವುಳ್ಳವನವನೆ ಹಿರಿಯನು
ಮಂತ್ರವುಳ್ಳವನವನೆ ರಾಯನು
ಮಂತ್ರವುಳ್ಳವನವನೆ ಸಚಿವ ನಿಯೋಗಿಯೆನಿಸುವನು |
ಮಂತ್ರವಿಲ್ಲದ ಬರಿಯ ಬಲು ತಳ
ತಂತ್ರದಲಿ ಫಲವಿಲ್ಲವೈ ಸ್ವಾ
ತಂತ್ರವೆನಿಸಲ್ಕರಿವುದೇ ಭೂಪಾಲ ಕೇಳೆಂದ || ಸ. ಸಂ.1-49 ||

ರಾಜನಾದವ ಇಂಥ ಗುಣಲಕ್ಷಣಗಳನ್ನು ಹೊಂದಿರಬೇಕು, ಅಥವಾ ಅಂತವರನ್ನು ತನ್ನ ಆಪ್ತರನ್ನಾಗಿ ಆಯಾ ಹುದ್ಧೆಗಳಲ್ಲಿ ನಿಯುಕ್ತರನ್ನಾಗಿಸಿಕೊಳ್ಳಬೇಕು ಎನ್ನುವ ತಾತ್ಪರ್ಯ ಇದರಲ್ಲಿದೆ. ಸುಮಂತ್ರ ಈ ಎಲ್ಲಾ ಗುಣಗಳ ಸಾಕಾರ ಮೂರ್ತಿಯಾಗಿದ್ದ. ಅಯೋಧ್ಯೆಯಲ್ಲಿ ರಾಮನಿಗೆ ಪಟ್ಟಾಭಿಷೇಕವನ್ನು ನಡೆಸಲು ದಶರಥ ಹೂಡಿದ್ದ ಮಂತ್ರಾಲೋಚನೆ ಬಲು ಪ್ರಸಿದ್ಧ. ಅಲ್ಲಿ ಆತ ವಶಿಷ್ಠ, ವಾಮದೇವ ಮತ್ತು ಸುಮಂತ್ರನನ್ನು ಸೇರಿಸಿ ರಾಮನಿಗೆ ಯುವರಾಜ ಪಟ್ಟಾಭಿಷೇಕವನ್ನುಮಾಡುವ ತನ್ನ ಮನಸ್ಸಿನ ಆಶಯವನ್ನು ವ್ಯಕ್ತಪಡಿಸುತ್ತಾನೆ. ರಾಜನಿಗೆ ಅಶ್ವಪತಿಗೆ ಕೊಟ್ಟ ಮಾತು ತಪ್ಪಿಸಬೇಕಾಗಿದೆ. ಅದಕ್ಕೆ ಮಂತ್ರಿಗಳ ಒಪ್ಪಿಗೆ ಪಡೆದು ನಿಧಾನಕ್ಕೆ ಸಾಮಂತರ ಮತ್ತು ಪ್ರಜೆಗಳ ಒಪ್ಪಿಗೆಯನ್ನು ಪಡೆಯುವ ಹಂತದಲ್ಲಿ ಕರೆದ ಮಂತ್ರಾಲೋಚನೆ ಅದು. ಮಂತ್ರಾಲೋಚನೆಯ ವಿಷಯದಲ್ಲಿ ರಾಜ ಕೊಡಬೇಕಾದ ಮಹತ್ವವನ್ನು ಮಹಾಭಾರತದ ಶಾಂತಿಪರ್ವಲ್ಲಿ ವಿವರವಾಗಿ ಬಂದಿದೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಆತುರಗೆಟ್ಟು ಸ್ತಿಮಿತ ಕಳೆದುಕೊಂಡವನ ವಿಲಾಪ

“ಮನ್ತ್ರಸಂಹನನೋ ರಾಜಾ ಮನ್ತ್ರಾಙ್ಗಾನೀತರೇ ಜನಾಃ – ಮಂತ್ರಾಲೋಚನೆಯೇ ರಾಜನ ದೇಹವಾಗಿರುತ್ತದೆ. ಮಂತ್ರಿಗಳು ರಾಜರಹಸ್ಯಕ್ಕೆ ಅಂಗಭೂತರಾಗಿರುತ್ತಾರೆ” ಮಂತ್ರಾಲೋಚನೆಯ ನಡೆಯುತ್ತಿರುವಾಗ ಆ ಸ್ಥಳದ ಸುತ್ತಮುತ್ತಲೂ ವಾಮನರೂ, ಕುಬ್ಜರೂ, ಸ್ತ್ರೀಯರೂ, ನಪುಂಸಕರೂ ಸುಳಿಯದಂತೆ ಎಚ್ಚರಿಕೆ ವಶಿಸಬೇಕೆಂದಿದೆ. ರಾಜ ಅಶ್ವಪತಿಗೆ ನೀಡಿದ ವರದ ಗುಟ್ಟು ತಿಳಿದಿರುವುದು ಅಲ್ಲಿ ಸೇರಿದ್ದ ಸುಮಂತ್ರನಿಗೆ ಮಾತ್ರ. ಹಾಗಾಗಿ ಅದನ್ನು ಮರೆಮಾಚಿ ರಾಮನಿಗೆ ಪಟ್ಟಕಟ್ಟುವ ವಿಷಯವನ್ನು ರಾಜನೇ ಪ್ರಸ್ತಾಪ ಮಾಡುವಾಗ ಅದನ್ನು ಮೌನವಾಗಿ ಅನುಮೋದಿಸುವವನು ಸುಮಂತ್ರ. ಇದರ ವಿವರವನ್ನು ದಶರಥನ ಭಾಗದಲ್ಲಿ ನೀಡಲಾಗಿದೆ. ಆನಂತರದಲ್ಲಿ ರಾಮನಿಗೆ ಅಯೋಧ್ಯೆಯ ಅಧಿಪತಿಯಾಗಿ ಪಟ್ಟಗಟ್ಟುವ ನಿರ್ಣಯವನ್ನು ತಿಳಿಸಲು ಕರೆತರಲು ಹೋಗುವುದೂ ಸಹ ಸುಮಂತ್ರನೇ. ರಾಜ ಸಭೆಯ ನಂತರ ಕೂಡಲೇ ದಶರಥ ಸುಮಂತ್ರನನ್ನು ಕರೆದು ಮಂತ್ರಾಲೋಚನೆ ಮಾಡುತ್ತಾನೆ. ರಾಜನಿಗೆ ಎಲ್ಲಿ ವಿಘ್ನಗಳು ಬಂದುಬಿಡುವವೋ ಎನ್ನುವ ಹೆದರಿಕೆ ಇದ್ದಿರಬೇಕು. ಆ ಕಾರಣಕ್ಕಾಗಿ ಇಬ್ಬರೂ ಸಮಾಲೋಚಿಸಿ ಮತ್ತೊಮ್ಮೆ ರಾಮನನ್ನು ದಶರಥನ ಅಂತಃಪುರಕ್ಕೆ ಕರೆತರಲು ಸುಮಂತ್ರನೇ ಹೋಗುತ್ತಾನೆ. ದಶರಥ ರಾಮನಲ್ಲಿ “ಭವನ್ತಿ ಬಹುವಿಘ್ನಾನಿ ಕಾರ್ಯಾಣ್ಯೇವಂವಿಧಾನಿ ಹಿ” ಎನ್ನುವ ಮೂಲಕ ಆತನ ಪಟ್ಟಾಭಿಷೇಕದ ವಿಷಯದಲ್ಲಿ ತನಗಿರುವ ಆತಂಕವನ್ನು ತೋಡಿಕೊಳ್ಳುತ್ತಾನೆ. ಈ ಸಂದರ್ಭದಲ್ಲಿ ರಾಜನ ಸನಿಹದಲ್ಲಿದ್ದವ ಸುಮಂತ್ರ ಮಾತ್ರ. ರಾಮಾಯಣ ಮಹಾಕಾವ್ಯದಲ್ಲಿ ಸುಮಂತ್ರ ಮಾತನಾಡುವುದು ಬಲು ಕಡಿಮೆ. ಆದರೆ ಆತನ ಕಾರ್ಯದಕ್ಷತೆ ಪ್ರತಿಯೊಂದು ಸಂದರ್ಭಗಳಲ್ಲಿಯೂ ಎದ್ದು ಕಾಣುತ್ತದೆ.

ಸುಮಂತ್ರನ ರಾಜನಿಷ್ಠೆ ಮತ್ತು ಭಾವಪರವಶತೆಯ ಕುರಿತು ಮುಂದಿನ ಭಾಗದಲ್ಲಿ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಗೌತಮ ಬುದ್ಧ; ಭಾರತೀಯ ತತ್ತ್ವಶಾಸ್ತ್ರದ ಮುನ್ನುಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

ರಾಜಮಾರ್ಗ ಅಂಕಣ: ಭಗವಂತನು ಆತನನ್ನು ಈಜುವುದಕ್ಕಾಗಿ ಸೃಷ್ಟಿ ಮಾಡಿದ್ದ ಅನ್ನಿಸುತ್ತದೆ. ಆರು ಅಡಿ ನಾಲ್ಕು ಇಂಚು ಎತ್ತರ, ಮೀನಿನ ಹಾಗೆ ಬೆಂಡ್ ಆಗುವ ದೇಹ, ಭಾರೀ ಬಲಿಷ್ಟವಾದ ತೋಳುಗಳು, ನೀರನ್ನು ರಭಸವಾಗಿ ಹಿಂದೆ ತಳ್ಳಿ ಮುಂದೆ ಹೋಗುವ ದೋಣಿ ಆಕಾರದ ದೇಹ ಇದೆಲ್ಲವೂ ಆತನಿಗೆ ದೈವದತ್ತವಾಗಿ ಬಂದಿದ್ದವು.

VISTARANEWS.COM


on

Michel Phelps ರಾಜಮಾರ್ಗ ಅಂಕಣ
Koo

ಜಗತ್ತಿನ ಮಹೋನ್ನತ ಸ್ವಿಮ್ಮರ್ ನೀರಿಗೆ ಇಳಿದರೆ ದಾಖಲೆ ಮತ್ತು ದಾಖಲೆಗಳೇ ನಿರ್ಮಾಣ ಆಗುತ್ತಿದ್ದವು!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಒಲಿಂಪಿಕ್ಸ್ (Olympics) ವೇದಿಕೆಗಳಲ್ಲಿ ಒಂದೋ ಅಥವಾ ಎರಡೋ ಪದಕಗಳನ್ನು (medals) ಗೆಲ್ಲುವ ಕನಸು ಕಂಡವರು, ಅದನ್ನು ಸಾಧನೆ ಮಾಡಿದವರು ಲೆಜೆಂಡ್ ಅಂತ ಅನ್ನಿಸಿಕೊಳ್ಳುತ್ತಾರೆ. ಆದರೆ ಈ ಅಮೇರಿಕನ್ ಈಜುಗಾರ (Swimmer) ಒಟ್ಟು ನಾಲ್ಕು ಒಲಿಂಪಿಕ್ ಕೂಟಗಳಲ್ಲಿ ಭಾಗವಹಿಸಿ ಗೆದ್ದದ್ದು ಬರೋಬ್ಬರಿ 28 ಒಲಿಂಪಿಕ್ ಪದಕಗಳನ್ನು ಅಂದರೆ ನಂಬಲು ಸಾಧ್ಯವೇ ಇಲ್ಲ! ಅದರಲ್ಲಿ ಕೂಡ 23 ಹೊಳೆಯುವ ಚಿನ್ನದ ಪದಕಗಳು! ಆತನು ನೀರಿಗೆ ಇಳಿದರೆ ಸಾಕು ದಾಖಲೆಗಳು ಮತ್ತು ದಾಖಲೆಗಳು ಮಾತ್ರ ನಿರ್ಮಾಣ ಆಗುತ್ತಿದ್ದವು.

ಆತನು ಅಮೇರಿಕಾದ ಮಹೋನ್ನತ ಈಜುಗಾರ ಮೈಕೆಲ್ ಫೆಲ್ಪ್ಸ್ (Michel Phelps).

ಭಗವಂತನು ಆತನನ್ನು ಈಜುವುದಕ್ಕಾಗಿ ಸೃಷ್ಟಿ ಮಾಡಿದ್ದ ಅನ್ನಿಸುತ್ತದೆ. ಆರು ಅಡಿ ನಾಲ್ಕು ಇಂಚು ಎತ್ತರ, ಮೀನಿನ ಹಾಗೆ ಬೆಂಡ್ ಆಗುವ ದೇಹ, ಭಾರೀ ಬಲಿಷ್ಟವಾದ ತೋಳುಗಳು, ನೀರನ್ನು ರಭಸವಾಗಿ ಹಿಂದೆ ತಳ್ಳಿ ಮುಂದೆ ಹೋಗುವ ದೋಣಿ ಆಕಾರದ ದೇಹ ಇದೆಲ್ಲವೂ ಆತನಿಗೆ ದೈವದತ್ತವಾಗಿ ಬಂದಿದ್ದವು. ಸತತವಾಗಿ ನಾಲ್ಕು ಒಲಿಂಪಿಕ್ಸ್ ಕೂಟಗಳಲ್ಲಿ ಆತ ಭಾಗವಹಿಸಿದ್ದು ಮಾತ್ರವಲ್ಲ ಪ್ರತೀ ಬಾರಿ ನೀರಿಗೆ ಇಳಿದಾಗ ಒಂದಲ್ಲ ಒಂದು ದಾಖಲೆ, ಒಂದಲ್ಲ ಒಂದು ಪದಕ ಗೆಲ್ಲದೆ ಆತ ಮೇಲೆ ಬಂದ ಉದಾಹರಣೆಯೇ ಇಲ್ಲ!

ಬಾಲ್ಟಿಮೋರ್‌ನ ಬುಲ್ಲೆಟ್!

1985ನೇ ಜೂನ್ 30ರಂದು ಅಮೇರಿಕಾದ ಬಾಲ್ಟಿಮೋರ್ ಎಂಬ ಪ್ರಾಂತ್ಯದಲ್ಲಿ ಹುಟ್ಟಿದ ಆತ ತನ್ನ ಒಂಬತ್ತನೇ ವಯಸ್ಸಿಗೆ ಅಪ್ಪ ಮತ್ತು ಅಮ್ಮನ ಪ್ರೀತಿಯಿಂದ ವಂಚಿತವಾದನು. ಅದಕ್ಕೆ ಕಾರಣ ಅವರ ವಿಚ್ಛೇದನ. ಅದರಿಂದಾಗಿ ಆತನಿಗೆ ಮಾನಸಿಕ ನೆಮ್ಮದಿ ಹೊರಟುಹೋಯಿತು. ಆತನಿಗೆ Attention Deficit Hyper active Disorder (ADHD) ಎಂಬ ಮಾನಸಿಕ ಸಮಸ್ಯೆಯು ಬಾಲ್ಯದಿಂದಲೂ ತೊಂದರೆ ಕೊಡುತ್ತಿತ್ತು. ರಾತ್ರಿ ನಿದ್ದೆ ಬಾರದೆ ಆತ ಒದ್ದಾಡುತ್ತಿದ್ದನು. ಈ ಸಮಸ್ಯೆಗಳಿಂದ ಹೊರಬರಲು ಆತ ಆರಿಸಿಕೊಂಡ ಮಾಧ್ಯಮ ಎಂದರೆ ಅದು ಸ್ವಿಮ್ಮಿಂಗ್ ಪೂಲ್! ತನ್ನ ಏಳನೇ ವಯಸ್ಸಿಗೆ ನೀರಿಗೆ ಇಳಿದ ಆತನಿಗೆ ಬಾಬ್ ಬೌಮಾನ್ ಎಂಬ ಕೋಚ್ ಸಿಕ್ಕಿದ ನಂತರ ಆತನ ಬದುಕಿನ ಗತಿಯೇ ಬದಲಾಯಿತು. ಆತ ದಿನದ ಹೆಚ್ಚು ಹೊತ್ತನ್ನು ನೀರಿನಲ್ಲಿಯೇ ಕಳೆಯಲು ತೊಡಗಿದನು.

ಆತನ ಕಣ್ಣ ಮುಂದೆ ಇಬ್ಬರು ಸ್ವಿಮ್ಮಿಂಗ್ ಲೆಜೆಂಡ್ಸ್ ಇದ್ದರು. ಒಬ್ಬರು ಒಂದೇ ಒಲಿಂಪಿಕ್ ಕೂಟದಲ್ಲಿ ಏಳು ಚಿನ್ನದ ಪದಕಗಳನ್ನು ಗೆದ್ದ ಮಾರ್ಕ್ ಸ್ಪಿಟ್ಜ್ (1972). ಇನ್ನೊಬ್ಬರು ಆಸ್ಟ್ರೇಲಿಯಾದ ಸ್ವಿಮಿಂಗ್ ದೈತ್ಯ ಇಯಾನ್ ತೋರ್ಪ್. ಅವರಿಂದ ಸ್ಫೂರ್ತಿ ಪಡೆದ ಆತ ಮುಂದೆ ಮಾಡಿದ್ದು ಎಲ್ಲವೂ ವಿಶ್ವ ದಾಖಲೆಯ ಸಾಧನೆಗಳೇ ಆಗಿವೆ. ಜನರು ಆತನನ್ನು ಬಾಲ್ಟಿಮೋರದ ಬುಲೆಟ್ ಎಂದು ಪ್ರೀತಿಯಿಂದ ಕರೆದರು.

ಸತತ ನಾಲ್ಕು ಒಲಿಂಪಿಕ್ಸ್ – 28 ಪದಕಗಳು – ಅದರಲ್ಲಿ 23 ಚಿನ್ನದ ಪದಕಗಳು!

2004ರ ಅಥೆನ್ಸ್ ಒಲಿಂಪಿಕ್ಸ್ – ಒಟ್ಟು ಎಂಟು ಪದಕಗಳು.
2008 ಬೀಜಿಂಗ್ ಒಲಿಂಪಿಕ್ಸ್ – ಒಟ್ಟು ಎಂಟು ಚಿನ್ನದ ಪದಕಗಳು.
2012 ಲಂಡನ್ ಒಲಿಂಪಿಕ್ಸ್ – ನಾಲ್ಕು ಚಿನ್ನ ಮತ್ತು ಎರಡು ಬೆಳ್ಳಿಯ ಪದಕಗಳು.
2016 ರಿಯೋ ಒಲಿಂಪಿಕ್ಸ್ – ಐದು ಚಿನ್ನದ ಪದಕ ಮತ್ತು ಒಂದು ಬೆಳ್ಳಿ.

ಅಂದರೆ ಸತತ ನಾಲ್ಕು ಒಲಿಂಪಿಕ್ಸ್ ಕೂಟಗಳಲ್ಲಿ ಭಾಗವಹಿಸಿ ಒಟ್ಟು 28 ಪದಕಗಳನ್ನು ಬೇರೆ ಯಾರೂ ಕಲ್ಪನೆ ಕೂಡ ಮಾಡಲು ಸಾಧ್ಯವಿಲ್ಲ! ಬಟರ್ ಫ್ಲೈ, ಮೆಡ್ಲಿ, ಫ್ರೀ ಸ್ಟೈಲ್, ಬ್ಯಾಕ್ ಸ್ಟ್ರೋಕ್ಸ್…ಹೀಗೆ ಪ್ರತೀಯೊಂದು ವಿಭಾಗಳಲ್ಲಿಯೂ ಮೈಕೆಲ್ ಒಂದರ ಮೇಲೊಂದು ಪದಕಗಳನ್ನು ಗೆಲ್ಲುತ್ತಾ ಹೋಗಿದ್ದಾನೆ! ಆ 16 ವರ್ಷಗಳ ಅವಧಿಯಲ್ಲಿ ಆತನಿಗೆ ಸ್ಪರ್ಧಿಗಳೇ ಇರಲಿಲ್ಲ ಎನ್ನಬಹುದು!

ಮೈಕೆಲ್ ಎಂಬ ಚಿನ್ನದ ಮೀನಿನ ಜಾಗತಿಕ ದಾಖಲೆಗಳು

೧) ಆತನು ತನ್ನ ಜೀವಮಾನದಲ್ಲಿ ಗೆದ್ದ ಒಟ್ಟು ಅಂತಾರಾಷ್ಟ್ರೀಯ ಪದಕಗಳ ಸಂಖ್ಯೆ ಬೆರಗು ಹುಟ್ಟಿಸುತ್ತದೆ. ಒಟ್ಟು 82 ಪದಕಗಳು. ಅದರಲ್ಲಿ 65 ಚಿನ್ನ, 14 ಬೆಳ್ಳಿ ಮತ್ತು 3 ಕಂಚು!
೨) ಒಟ್ಟು 20 ಗಿನ್ನೆಸ್ ದಾಖಲೆಗಳು ಆತನ ಹೆಸರಿನಲ್ಲಿ ಇವೆ!
೩) ಒಟ್ಟು 39 ವಿಶ್ವದಾಖಲೆಗಳು ಆತನ ಹೆಸರಿನಲ್ಲಿ ಇವೆ. ಅದರಲ್ಲಿ 29 ವೈಯಕ್ತಿಕ ಮತ್ತು 10 ರಿಲೇ ಸ್ಪರ್ಧೆಗಳದ್ದು!
೪) 2004ರಿಂದ 2018ರವರೆಗೆ ನಡೆದ ವಿಶ್ವ ಈಜು ಚಾಂಪಿಯನಶಿಪ್ ಸ್ಪರ್ಧೆಗಳಲ್ಲಿ ಆತ ಪದಕಗಳ ಗೊಂಚಲು ಗೆಲ್ಲದೆ ಹಿಂದೆ ಬಂದ ನಿದರ್ಶನವೇ ಇಲ್ಲ!
೫) ಒಟ್ಟು ಎಂಟು ಬಾರಿ ಅವನಿಗೆ ‘ವರ್ಲ್ಡ್ ಸ್ವಿಮ್ಮರ್ ಆಫ್ ದ ಇಯರ್’ ಪ್ರಶಸ್ತಿಗಳು ದೊರೆತಿವೆ!
೬) ಒಟ್ಟು 11 ಬಾರಿ ‘ಅಮೇರಿಕನ್ ಸ್ವಿಮ್ಮರ್ ಆಫ್ ದ ಇಯರ್’ ಪ್ರಶಸ್ತಿಗಳು ದೊರೆತಿವೆ!
೭) ಒಂದೇ ಒಲಿಂಪಿಕ್ ಕೂಟದಲ್ಲಿ ಆತ ಎಂಟು ಚಿನ್ನದ ಪದಕಗಳನ್ನು (2008 ಬೀಜಿಂಗ್) ಗೆದ್ದ ದಾಖಲೆಯನ್ನು ಮುಂದೆ ಕೂಡ ಯಾರೂ ಮುರಿಯುವ ಸಾಧ್ಯತೆ ಇಲ್ಲವೇ ಇಲ್ಲ!
೮) ಆತನಿಗೆ ಜಾಗತಿಕ ಒಲಿಂಪಿಕ್ ಸಮಿತಿಯು ಜಗತ್ತಿನ ಅತ್ಯುತ್ತಮ ಸ್ವಿಮ್ಮರ್ ಪ್ರಶಸ್ತಿ ನೀಡಿ ಗೌರವಿಸಿದೆ!
೯) 100 ಮೀಟರ್ ಬಟರ್ ಫ್ಲೈ, 200 ಮೀಟರ್ ಬಟರ್ ಫ್ಲೈ, 200 ಮೀಟರ್ ಇಂಡಿವಿಜುವಲ್ ಮೆಡ್ಲಿ, 400 ಮೀಟರ್ ಇಂಡಿವಿಜುವಲ್ ಮೆಡ್ಲಿ ಈ ವಿಭಾಗದಲ್ಲಿ ಆತ ಮಾಡಿದ ಜಾಗತಿಕ ದಾಖಲೆಗಳನ್ನು ಮುಂದೆ ಕೂಡ ಯಾರೂ ಮುರಿಯುವ ಸಾಧ್ಯತೆ ಇಲ್ಲ ಎಂದು ಭಾವಿಸಲಾಗುತ್ತಿದೆ!

ಈ ಎಲ್ಲಾ ಸಾಧನೆಗಳಿಗೆ ಕಾರಣ ಆತನ ಈಜುವ ಪ್ಯಾಶನ್!

ಆತನ ಆತ್ಮಚರಿತ್ರೆಯ ಪುಸ್ತಕವನ್ನು ಒಮ್ಮೆ ತಿರುವಿ ಹಾಕಿದಾಗ ಆತನ ಸ್ವಿಮ್ಮಿಂಗ್ ಪ್ಯಾಶನ್ ಬಗ್ಗೆ ಹಲವು ಉದಾಹರಣೆಗಳು ದೊರೆಯುತ್ತವೆ.

ಒಮ್ಮೆ ಏನಾಯಿತೆಂದರೆ 2001 ಸೆಪ್ಟೆಂಬರ್ 11ರಂದು ಅಮೆರಿಕದ ಟ್ವಿನ್ ಟವರ್ ಮೇಲೆ ಭಯೋತ್ಪಾದಕ ಧಾಳಿ ನಡೆದು ಇಡೀ ಟವರ್ ಕುಸಿದು ಹೋದದ್ದು, ಇಡೀ ಅಮೇರಿಕಾ ನಲುಗಿ ಹೋದದ್ದು ನಮಗೆಲ್ಲ ಗೊತ್ತಿದೆ. ಸರಿಯಾಗಿ ಅದೇ ಹೊತ್ತಿಗೆ ಮೈಕೆಲ್ ಸ್ವಿಮ್ಮಿಂಗ್ ಪೂಲನಲ್ಲಿ ಈಜುತ್ತಾ ತನ್ನ ಕೋಚಗೆ ಕಾಲ್ ಮಾಡಿ ಕೇಳಿದ್ದನಂತೆ- ಸರ್, ಎಲ್ಲಿದ್ದೀರಿ? ನಾನು ಪೂಲಲ್ಲಿ ಪ್ರಾಕ್ಟೀಸ್ ಮಾಡ್ತಾ ಇದ್ದೇನೆ!

ಮೈಕೆಲ್ ಫೆಲ್ಫ್ಸ್ ಇಷ್ಟೊಂದು ವಿಶ್ವ ದಾಖಲೆಗಳನ್ನು ಕ್ರಿಯೇಟ್ ಮಾಡಿದ್ದು ಸುಮ್ಮನೆ ಅಲ್ಲ!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಾರ್ಗಿಲ್, ಇದು‌ ಕೆಚ್ಚಿನ ಕಲಿಗಳ ಸಮರಗಾಥೆ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಾರ್ಗಿಲ್, ಇದು‌ ಕೆಚ್ಚಿನ ಕಲಿಗಳ ಸಮರಗಾಥೆ

ರಾಜಮಾರ್ಗ ಅಂಕಣ: ಪಾಕಿಸ್ತಾನ (Pakistan) ಎಂಬ ದ್ರೋಹಿ ರಾಷ್ಟ್ರವನ್ನು ಇನ್ನು ಮುಂದೆ ಯಾವಾಗಲೂ ನಂಬಲೇ ಬಾರದು ಎಂಬ ಪಾಠವನ್ನು ಭಾರತಕ್ಕೆ ಕಲಿಸಿಹೋದ ಮೃತ್ಯುಂಜಯ ಯುದ್ಧ ಅದು!

VISTARANEWS.COM


on

ರಾಜಮಾರ್ಗ ಅಂಕಣ Kargil Vijay Diwas 2024
Koo

ಇಂದು ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಭಾರತವು ಗೆದ್ದ ಅತ್ಯಂತ ಕಠಿಣ ಯುದ್ಧ (Kargil Vijay Diwas) ಅದು! 1999ರಲ್ಲಿ ಭಾರತೀಯ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ವಿ.ಪಿ ಮಲಿಕ್ ಬರೆದಿರುವ ‘KARGIL – FROM SURPRISE TO VICTORY’ ಓದುತ್ತಾ ಹೋದಂತೆ ನಾನು ಹಲವಾರು ಬಾರಿ ಬೆಚ್ಚಿಬಿದ್ದಿದ್ದೇನೆ! ಯಾಕೆಂದರೆ ಅದು ಭಾರತವು ಎದುರಿಸಿದ ಅತ್ಯಂತ ಕಠಿಣವಾದ ಯುದ್ಧ (India0 Pakistan War) ಮತ್ತು ದೀರ್ಘಕಾಲದ ಯುದ್ಧ. ಪಾಕಿಸ್ತಾನ (Pakistan) ಎಂಬ ದ್ರೋಹಿ ರಾಷ್ಟ್ರವನ್ನು ಇನ್ನು ಮುಂದೆ ಯಾವಾಗಲೂ ನಂಬಲೇ ಬಾರದು ಎಂಬ ಪಾಠವನ್ನು ಭಾರತಕ್ಕೆ ಕಲಿಸಿಹೋದ ಮೃತ್ಯುಂಜಯ ಯುದ್ಧ ಅದು!

ಯುದ್ಧದ ಹಿನ್ನೆಲೆ – ಮುಷರಫ್ ಕುತಂತ್ರ

ಆಗಷ್ಟೇ ಭಾರತವು ಅಣುಪರೀಕ್ಷೆ ಮಾಡಿ ಜಗತ್ತಿನ ಕಣ್ಣು ಕೋರೈಸುವ ಸಾಧನೆಯನ್ನು ಮಾಡಿತ್ತು. ಪಾಕ್ ಕೂಡ ಅಮೇರಿಕಾದ ನೆರವು ಪಡೆದು ತನ್ನ ಬಳಿ ಅಣುಬಾಂಬು ಇದೆ ಎಂದು ಹೇಳಿಕೊಂಡಿತ್ತು. ಆಗ ಭಾರತದ ಪ್ರಧಾನಿ ಆಗಿದ್ದ ವಾಜಪೇಯಿ (Atal Bihari Vajpayee) ಅವರು ತುಂಬಾ ಮೃದು ನಿಲುವಿನ ನಾಯಕ ಎಂದು ಪಾಕ್ ನಂಬಿ ಕುಳಿತಿತ್ತು. ಪಾಕಿಸ್ಥಾನಕ್ಕೆ ಜಗತ್ತಿನ ಅತೀ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ (Siachin) ವಶಪಡಿಸಿಕೊಳ್ಳಬೇಕು ಎಂಬ ದುರಾಸೆ. ಅಲ್ಲಿಂದ ಮುಂದೆ ಕಾರ್ಗಿಲ್ ಮತ್ತು ಮುಂದೆ ಇಡೀ ಕಾಶ್ಮೀರವನ್ನು ಕಬಳಿಸಬೇಕು ಎನ್ನುವ ಮಾಸ್ಟರ್ ಪ್ಲಾನ್! ಆಗ ಪಾಕಿಸ್ತಾನದ ಸೇನಾ ನಾಯಕ ಪರ್ವೇಜ್ ಮುಷರಫ್ (Parvez Musharraf) ಹೊಂಚು ಹಾಕಿ ಕುಳಿತ ಕಾಲ ಅದು.

ಅದಕ್ಕೆ ಪೂರಕವಾಗಿ 1998ರ ಜೂನ್ ತಿಂಗಳಿಂದಲೇ ಪಾಕಿಸ್ಥಾನದ 5000ರಷ್ಟು ಸೈನಿಕರು ಲೈನ್ ಆಫ್ ಕಂಟ್ರೋಲ್ ದಾಟಿ ಭಾರತದ 4-10 ಕಿ.ಮೀ. ಒಳಗೆ ಬಂದು ಎತ್ತರದ ಪ್ರದೇಶದಲ್ಲಿ ಜಮಾವಣೆ ಆಗತೊಡಗಿದ್ದರು! ಅವರ ಬಳಿಗೆ ಆಧುನಿಕ ಶಸ್ತ್ರಾಸ್ತ್ರಗಳು ಬಂದು ತಲುಪಿದ್ದವು. ಆದರೆ 1999ರ ಮೇ 18ರವರೆಗೆ ಭಾರತ ಸರಕಾರಕ್ಕೆ ಇದರ ಬಗ್ಗೆ ಮಾಹಿತಿಯೇ ಇರಲಿಲ್ಲ. ಭಾರತೀಯ ಸೇನಾ ಗೂಢಚಾರ ಸಂಸ್ಥೆಯವರು ಇನ್ನೂ ಸ್ವಲ್ಪ ದಿನ ಮೈಮರೆತಿದ್ದರೆ…! ಆ ಕುರಿಗಾಹಿ ಹುಡುಗರು ಆ ನುಸುಳುಕೋರ ಸೈನಿಕರ ಬಗ್ಗೆ ಭಾರತೀಯ ಸೇನೆಗೆ ಮಾಹಿತಿ ಕೊಡದೇ ಹೋಗಿದ್ದರೆ…! ನಾನು ಬೆಚ್ಚಿ ಬಿದ್ದದ್ದು ಆಗ.

ಭಾರತದ ಸೈನಿಕರ ಬಳಿ ಯುದ್ಧದ ಸಿದ್ಧತೆಗೆ ಸಮಯ ಇರಲಿಲ್ಲ

ಗಡಿಯ ಒಳಗೆ ಅಷ್ಟು ದೊಡ್ಡ ಸಂಖ್ಯೆಯ ಸೈನಿಕರು ನುಸುಳಿಬಂದ ವಿಷಯ ಭಾರತಕ್ಕೆ ಗೊತ್ತಾಯಿತು ಅಂದಾಗ ಮುಷರಫ್ ಅಲರ್ಟ್ ಆದರು. ಅವರು ನಮ್ಮ ಸೈನಿಕರೇ ಅಲ್ಲ, ಯಾವುದೋ ಭಯೋತ್ಪಾದಕ ಸಂಘಟನೆಯವರು ಎಂದು ಬಿಟ್ಟರು ಮುಷರಫ್! ಆದರೆ ಈಗ ಭಾರತದ ಪ್ರಧಾನಿ ವಾಜಪೇಯಿ, ರಕ್ಷಣಾ ಮಂತ್ರಿ ಜಾರ್ಜ್ ಫೆರ್ನಾಂಡಿಸ್ ಸೇನಾ ಮುಖ್ಯಸ್ಥರನ್ನು ಕರೆಸಿ ಯುದ್ಧ ಘೋಷಣೆ ಮಾಡಿಬಿಟ್ಟರು. ಆದರೆ ಭಾರತೀಯ ಸೈನ್ಯಕ್ಕೆ ಆ ಯುದ್ಧಕ್ಕೆ ಸಿದ್ಧತೆ ಮಾಡಲು ದೊರೆತದ್ದು 24 ಘಂಟೆ ಮಾತ್ರ! ಆದರೂ 1999ರ ಮೇ 3ರಂದು ಭಾರತ ಯುದ್ಧ ಘೋಷಣೆ ಮಾಡಿ ಆಗಿತ್ತು!

ಆರಂಭದಲ್ಲಿ ಭಾರತಕ್ಕೆ ಹಿನ್ನಡೆ ಆದದ್ದು ನಿಜ. ಆದರೆ ಮೇ 30 ಆಗುವಾಗ ಭಾರತದ 30,000 ಸೈನಿಕರು ಟೈಗರ್ ಹಿಲ್ ಬಳಿ ಬಂದು ಜಮಾವಣೆ ಮಾಡಿ ಆಗಿತ್ತು. ಭಾರತದ ಭೂಸೈನ್ಯ ಮತ್ತು ವಾಯು ಸೈನ್ಯಗಳು ವೀರಾವೇಶದಿಂದ ಹೋರಾಟಕ್ಕೆ ಇಳಿದಿದ್ದವು. ಎರಡೂ ಕಡೆಯ ಸೈನಿಕರು, ಬಾಂಬುಗಳು, ಮದ್ದುಗುಂಡುಗಳು, ಶೆಲ್‌ಗಳು ಸಿಡಿಯುತ್ತ ಕಾರ್ಗಿಲ್ ಯುದ್ಧಭೂಮಿಯು ರಕ್ತದಲ್ಲಿ ಒದ್ದೆಯಾಗುತ್ತಾ ಹೋಯಿತು. ಟೈಗರ್ ಹಿಲ್ ಏರಿ 10 ಪಾಕ್ ಸೈನಿಕರ ಹತ್ಯೆಯನ್ನು ನಮ್ಮ ಸೈನಿಕರು ಮಾಡಿದಾಗ ಭಾರತವು ಯುದ್ಧದಲ್ಲಿ ಸಣ್ಣ ಮೇಲುಗೈ ಸಾಧಿಸಿತು.

ಅಲ್ಲಿಂದ ಮುಂದೆ ಭಾರತದ ರಕ್ಷಣಾ ಮಂತ್ರಿ ಜಾರ್ಜ್ ಫೆರ್ನಾಂಡಿಸ್ ಸ್ವತಃ ಯುದ್ಧಭೂಮಿಗೆ ಬಂದು ಸೈನಿಕರ ಆತ್ಮಸ್ಥೈರ್ಯ ಹೆಚ್ಚಿಸಿದ್ದು, ಪ್ರಧಾನಿ ವಾಜಪೇಯಿ ವಾರ್ ರೂಮಿನಲ್ಲಿ ಕುಳಿತು ಸೈನ್ಯಕ್ಕೆ ನಿರ್ದೇಶನವನ್ನು ಕೊಟ್ಟದ್ದು ಭಾರತವನ್ನು ಗೆಲ್ಲಿಸುತ್ತಾ ಹೋದವು. 75 ದಿನಗಳ ಘನಘೋರ ಯುದ್ಧದ ನಂತರ ಭಾರತ ಜುಲೈ 26ರಂದು ದ್ರಾಸ್ ಪರ್ವತದ ತಪ್ಪಲಲ್ಲಿ ಇದ್ದ ಕೊನೆಯ ಪಾಕ್ ಸೈನಿಕನನ್ನೂ ಹೊಸಕಿ ಹಾಕಿದಾಗ ಭಾರತ ವಿಜಯೋತ್ಸವ ಆಚರಣೆ ಮಾಡಿತು. ಕಾರ್ಗಿಲ್ ಮೈದಾನದಲ್ಲಿ ಸೈನಿಕರ ನಡುವೆ ತ್ರಿವರ್ಣಧ್ವಜ ಹಾರಿಸಿದ ಕ್ಷಣವೇ ಕಾರ್ಗಿಲ್ ವಿಜಯ ದಿನ.

Kargil Vijay Diwas 2024
Kargil Vijay Diwas 2024

ಹುತಾತ್ಮರಾದವರು ಭಾರತದ 527 ಸೈನಿಕರು!

ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಭಾರತೀಯ ಸೈನಿಕರ ಬಲಿದಾನ ಭಾರತಕ್ಕೆ ಒಂದು ದೊಡ್ಡ ವಿಜಯವನ್ನು ತಂದುಕೊಟ್ಟಿತ್ತು. ಅದರಲ್ಲಿ ಕರ್ನಾಟಕದ 21 ಸೈನಿಕರೂ ಇದ್ದರು. ಸಾವಿರಾರು ಯೋಧರು ತೀವ್ರವಾಗಿ ಗಾಯಗೊಂಡರು. ಪಾಕಿಸ್ತಾನವೂ ದೊಡ್ಡ ಸಂಖ್ಯೆಯ ಸೈನಿಕರನ್ನು ಕಳೆದುಕೊಂಡಿತ್ತು.

ನಮ್ಮ ಸೈನಿಕರಾದ ಸಿಯಾಚಿನ್ ಹೀರೋ ನಾಯಬ್ ಸುಬೇದಾರ್ ಬಾಣಾ ಸಿಂಗ್, ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಮೇಜರ್ ಪದ್ಮಪಾಣಿ ಆಚಾರ್ಯ, ಗ್ರೆನೆಡಿಯರ್ ಯೋಗೇಂದರ್ ಸಿಂಘ್ ಯಾದವ್, ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ, ಕ್ಯಾಪ್ಟನ್ ಅನುಜ್ ನಯ್ಯರ್, ಲೆಫ್ಟಿನೆಂಟ್ ಬಲವಾನ್ ಸಿಂಘ್, ರೈಫಲ್ ಮ್ಯಾನ್ ಸಂಜಯ ಕುಮಾರ್, ಕ್ಯಾಪ್ಟನ್ ವಿಜಯವಂತ್ ಥಾಪರ್, ಮೇಜರ್ ಸೋನಂ ವಾಂಗಚುಕ್, ಲೆಫ್ಟಿನೆಂಟ್ ಕರ್ನಲ್ ವೈ.ಕೆ. ಜೋಷಿ ಇವರೆಲ್ಲರೂ ನಿಜವಾದ ಕಾರ್ಗಿಲ್ ಹೀರೋಗಳು. ಅದರಲ್ಲಿ ಹೆಚ್ಚಿನವರು ಹುತಾತ್ಮರಾದವರು. ಅವರಿಗೆಲ್ಲ ವಿವಿಧ ಸೇನಾ ಶೌರ್ಯ ಪ್ರಶಸ್ತಿಗಳನ್ನು ನೀಡಿ ಭಾರತ ಸರಕಾರವು ಗೌರವಿಸಿತು.

ಕಾರ್ಗಿಲ್ ಯುದ್ಧದ ಫಲಶ್ರುತಿ ಏನೆಂದರೆ ಮುಂದೆ ಭಾರತವು ಎಂದಿಗೂ ಪಾಕಿಸ್ತಾನವನ್ನು ನಂಬಲಿಲ್ಲ ಮತ್ತು ಪಾಕಿಸ್ತಾನ ಯಾವತ್ತೂ ಭಾರತದ ಮೇಲೆ ಮತ್ತೆ ದಂಡೆತ್ತಿ ಬರುವ ಸಾಹಸವನ್ನು ಮಾಡಲಿಲ್ಲ!

ಜೈ ಹಿಂದ್.

ಇದನ್ನೂ ಓದಿ: ರಾಜಮಾರ್ಗ ಅಂಕಣ:  ಕನ್ನಡದ ಶ್ರೇಷ್ಠ ಲೇಖಕ ನಿರಂಜನರನ್ನು ನಾಡು ಮರೆತರೆ ಹೇಗೆ?

Continue Reading

ಅಂಕಣ

ರಾಜಮಾರ್ಗ ಅಂಕಣ:  ಕನ್ನಡದ ಶ್ರೇಷ್ಠ ಲೇಖಕ ನಿರಂಜನರನ್ನು ನಾಡು ಮರೆತರೆ ಹೇಗೆ?

ರಾಜಮಾರ್ಗ ಅಂಕಣ: ಕುಳಕುಂದ ಶಿವರಾವ್ ಅಂದರೆ ಯಾರಿಗೂ ಥಟ್ಟನೆ ಪರಿಚಯ ಆಗಲಾರದು. ಆದರೆ ಕನ್ನಡದ ಶ್ರೇಷ್ಠ ಲೇಖಕ ನಿರಂಜನ ಎಂದರೆ ಎಲ್ಲರಿಗೂ ಪರಿಚಯ ಆಗುತ್ತದೆ. ಈ ವರ್ಷ ಅವರ ಜನ್ಮ ಶತಮಾನೋತ್ಸವ.

VISTARANEWS.COM


on

ರಾಜಮಾರ್ಗ ಅಂಕಣ
Koo

ಈ ವರ್ಷ (2024) ಲೇಖಕ ನಿರಂಜನರ ಜನ್ಮ ಶತಮಾನೋತ್ಸವ

Rajendra-Bhat-Raja-Marga-Main-logo

ಕುಳಕುಂದ ಶಿವರಾವ್ ಅಂದರೆ ಯಾರಿಗೂ ಥಟ್ಟನೆ ಪರಿಚಯ ಆಗಲಾರದು. ಆದರೆ ಕನ್ನಡದ ಶ್ರೇಷ್ಠ ಲೇಖಕ ನಿರಂಜನ (Niranjana) ಎಂದರೆ ಎಲ್ಲರಿಗೂ ಪರಿಚಯ ಆಗುತ್ತದೆ. ಅವರು 71 ವರ್ಷಗಳ ಕಾಲ ಬದುಕಿ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದವರು. ಕನ್ನಡದ ಮೊದಲ ಮತ್ತು ಜನಪ್ರಿಯ ಅಂಕಣ ಲೇಖಕರು ಅಂದರೆ ಅದು ನಿರಂಜನ! (ರಾಜಮಾರ್ಗ ಅಂಕಣ)

ಬಾಲ್ಯದಿಂದಲೂ ಬರವಣಿಗೆ

1924 ಜೂನ್ 15ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಳಕುಂದ ಎಂಬ ಗ್ರಾಮದಲ್ಲಿ ಜನಿಸಿದ ಅವರು ಸಣ್ಣ ಪ್ರಾಯದಲ್ಲಿ ಪತ್ರಿಕೆಗಳಿಗೆ ಬರೆಯಲು ತೊಡಗಿದರು. ಮೊದಲು ಕಂಠೀರವ ಪತ್ರಿಕೆ ಅವರಿಗೆ ಬರೆಯಲು ಅವಕಾಶ ಕೊಟ್ಟಿತು. ಮುಂದೆ ಕನ್ನಡದ ಎಲ್ಲ ಪ್ರಸಿದ್ಧ ಪತ್ರಿಕೆಗಳಿಗೆ ಅವರು ಅಂಕಣಗಳನ್ನು ಬರೆಯುತ್ತಾ ಹೋದರು. ರಾಷ್ಟ್ರಬಂಧು ಎಂಬ ಪತ್ರಿಕೆಯ ಪ್ರಮುಖ ಲೇಖಕರಾಗಿ ಅವರು ಸಾವಿರಾರು ಅಂಕಣಗಳನ್ನು ಬರೆದರು. ಅವರ ಅಂಕಣ ಲೇಖನಗಳು ಎಂಟು ಕೃತಿಗಳಾಗಿ ಹೊರಬಂದು ಅವರಿಗೆ ಅಪಾರ ಜನಪ್ರಿಯತೆ ಕೊಟ್ಟವು. ಅವರು ಕನ್ನಡದ ಮೊದಲ ಅಂಕಣಕಾರ ಎಂಬ ದಾಖಲೆಯೂ ನಿರ್ಮಾಣವಾಯಿತು.

ಪ್ರಭಾವಶಾಲಿ ಸಣ್ಣ ಕಥೆಗಳು

ಸಣ್ಣ ಕಥೆಗಳು ಅವರಿಗೆ ಇಷ್ಟವಾದ ಇನ್ನೊಂದು ಪ್ರಕಾರ. ಅವರ 156 ಸಣ್ಣ ಕಥೆಗಳ ಸಂಗ್ರಹವಾದ ‘ಧ್ವನಿ’ ಕನ್ನಡದ ಶ್ರೇಷ್ಠ ಕೃತಿ ಆಗಿದೆ. ಕಾರಂತರ ಸಂಪರ್ಕ, ಲೆನಿನ್ ಬಗ್ಗೆ ಓದು ಅವರನ್ನು ಬೆಳೆಸುತ್ತಾ ಹೋದವು.

ಬಾಪೂಜಿ ಬಾಪು ಅವರ ಅತ್ಯಂತ ಶ್ರೇಷ್ಟವಾದ ಸಣ್ಣ ಕಥೆ. ಗಾಂಧೀಜಿ ಬದುಕಿದ್ದಾಗಲೇ ಅವರು ಸತ್ತಂತೆ ಕಲ್ಪಿಸಿಕೊಂಡು ಬರೆದ ಕಥೆ ಇದು! ರಕ್ತ ಸರೋವರ ಕಾಶ್ಮೀರದ ದಾಲ್ ಸರೋವರದ ಹಿನ್ನೆಲೆಯಲ್ಲಿ ಅರಳಿದ ಅದ್ಭುತವಾದ ಕಥೆ.
ತಿರುಕಣ್ಣನ ಮತದಾನ ರಾಜಕೀಯ ವಿಡಂಬನೆಯ ಕಥೆ. ಅವರ ಸಣ್ಣ ಕಥೆಗಳು ಕರ್ನಾಟಕದ ಬೇರೆ ಬೇರೆ ಪ್ರದೇಶಗಳಲ್ಲಿ, ಬೇರೆ ಬೇರೆ ಸಂಸ್ಕೃತಿಯಲ್ಲಿ ಅರಳಿದ ಕಥೆಗಳು. ಕನ್ನಡದಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ನಂತರ ಇಷ್ಟೊಂದು ವೈವಿಧ್ಯಮಯವಾದ ಸಣ್ಣ ಕಥೆಗಳನ್ನು ಬರೆದವರು ನಿರಂಜನ ಮಾತ್ರ ಅಂದರೆ ಅದು ಅತಿಶಯೋಕ್ತಿ ಅಲ್ಲ!

ಕಾದಂಬರಿಕಾರರಾಗಿ ನಿರಂಜನರು

ಅವರು ಬರೆದದ್ದು ಒಟ್ಟು 21 ಕಾದಂಬರಿಗಳು. ವರ್ಗ ಸಂಘರ್ಷ ಮತ್ತು ಸಾಮಾಜಿಕ ಸಮಾನತೆ ಅವರ ಹೆಚ್ಚಿನ ಕಾದಂಬರಿಗಳ ಹೂರಣ. 700 ಪುಟಗಳ ಬೃಹತ್ ಕಾದಂಬರಿ ಮೃತ್ಯುಂಜಯ ಅದೊಂದು ಮಾಸ್ಟರಪೀಸ್ ಕಲಾಕೃತಿ. ವಿಮೋಚನೆ, ಬನಶಂಕರಿ, ಅಭಯ, ಚಿರಸ್ಮರಣೆ, ರಂಗಮ್ಮನ ವಟಾರ ಮೊದಲಾದ ಕಾದಂಬರಿಗಳು ಒಮ್ಮೆ ಓದಿದರೆ ಮರೆತುಹೋಗೋದಿಲ್ಲ. ಸುಳ್ಯ ಮತ್ತು ಮಡಿಕೇರಿ ಪ್ರದೇಶದಲ್ಲಿ ಕಲ್ಯಾಣಸ್ವಾಮಿ ಎಂಬಾತ ನಡೆಸಿದ ರಕ್ತಕ್ರಾಂತಿಯ ಹಸಿಹಸಿ ಕಥೆಯನ್ನು ಹೊಂದಿರುವ ಒಂದು ಶ್ರೇಷ್ಟವಾದ ಕಾದಂಬರಿ ಅವರು ಬರೆದಿದ್ದಾರೆ. ನಿರಂಜನರು ಬರೆದ ನಾಟಕಗಳೂ ಜನಪ್ರಿಯವಾಗಿವೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ನೇಪಥ್ಯಕ್ಕೆ ಸರಿದ ರಂಗ ನಿರ್ದೇಶಕ ಸದಾನಂದ ಸುವರ್ಣ

ನಿರಂಜನ ಅವರ ಸಂಪಾದನಾ ಗ್ರಂಥಗಳು

ಇಂದು ಕನ್ನಡ ನಾಡು ನಿರಂಜನರನ್ನು ನೆನಪಿಟ್ಟುಕೊಳ್ಳಲೇ ಬೇಕಾದ ಮುಖ್ಯ ಕಾರಣ ಎಂದರೆ ಅವರ ಸಂಪಾದನೆಯ ಗ್ರಂಥಗಳು. 25 ಸಂಪುಟಗಳ ವಿಶ್ವ ಕಥಾಕೋಶ, ಜ್ಞಾನಗಂಗೋತ್ರಿ ಹೆಸರಿನ ಎಳೆಯರ ಏಳು ಸಂಪುಟಗಳ ವಿಶ್ವ
ಜ್ಞಾನಕೋಶ, ಪುರೋಗಾಮಿ ಪ್ರಕಾಶನದ ಎಂಟು ಪುಸ್ತಕಗಳು, ಜನತಾ ಸಾಹಿತ್ಯಮಾಲೆಯ 25 ಪುಸ್ತಕಗಳು….ಹೀಗೆ ಲೆಕ್ಕ ಮಾಡುತ್ತಾ ಹೋದರೆ ಸಾವಿರಾರು ಪುಟಗಳ ಅದ್ಭುತ ಜ್ಞಾನಕೋಶಗಳು ಅರಳಿದ್ದು ನಿರಂಜನರ ಸಂಪಾದಕತ್ವದಲ್ಲಿ! ಅವರ ಇಡೀ ಜೀವನವನ್ನು ನಿರಂಜನರು ಅಧ್ಯಯನ ಮತ್ತು ಬರವಣಿಗೆಯಲ್ಲಿಯೇ ಕಳೆದರು.

ಇಡೀ ಕುಟುಂಬವು ಸಾಹಿತ್ಯಕ್ಕೆ ಮೀಸಲು

ನಿರಂಜನರ ಪತ್ನಿ ಅನುಪಮಾ ನಿರಂಜನ ಕನ್ನಡದ ಸ್ಟಾರ್ ಕಾದಂಬರಿಕಾರರು. ಹೆಣ್ಣು ಮಕ್ಕಳಾದ ತೇಜಸ್ವಿನಿ ಮತ್ತು ಸೀಮಂತಿನಿ ಇಬ್ಬರೂ ಕನ್ನಡದ ಪ್ರಭಾವೀ ಲೇಖಕರಾಗಿ ಗುರುತಿಸಿಕೊಂಡವರು. ಹಾಗೆ ನಿರಂಜನರ ಇಡೀ ಕುಟುಂಬವು ಕನ್ನಡದ ಸಾಹಿತ್ಯಲೋಕವನ್ನು ಶ್ರೀಮಂತಗೊಳಿಸಿತು.

ಕರ್ನಾಟಕ ವಿವಿಯಿಂದ ಗೌರವ ಡಾಕ್ಟರೇಟ್, ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ಅವರಿಗೆ ದೊರೆತವು. 1995ರಲ್ಲಿ ಅವರು ನಮ್ಮನ್ನು ಅಗಲಿದರು. ಕನ್ನಡ ಸಾಹಿತ್ಯಲೋಕವನ್ನು ಚಂದವಾಗಿ ಬೆಳೆಸಿದ ನಿರಂಜನರ ಜನ್ಮ ಶತಮಾನೋತ್ಸವದ ಈ ವರ್ಷ ಕನ್ನಡ ಸಾರಸ್ವತ ಲೋಕ ಒಂದು ಸ್ಮರಣೀಯ ಕಾರ್ಯಕ್ರಮವನ್ನು ಅವರ ನೆನಪಿನಲ್ಲಿ ಮಾಡಬೇಕು ಎನ್ನುವುದು ನಮ್ಮೆಲ್ಲರ ಆಗ್ರಹ ಆಗಬೇಕು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಆಲ್ಫೀ ಹೆವೆಟ್ಟ್- ವೀಲ್ ಚೇರ್ ಮೇಲಿನ ಟೆನ್ನಿಸ್ ಬೆರಗು

Continue Reading

ಅಂಕಣ

Guru Purnima 2024: ಗುರು ಎಂದರೆ ವ್ಯಕ್ತಿಯಲ್ಲ, ಅದ್ಭುತವಾದ ಶಕ್ತಿ!

Guru Purnima 2024: ನಮ್ಮ ಉಪನಿಷತ್ತು, ಪುರಾಣಗಳು, ವೇದ, ಶಾಸ್ತ್ರಗಳೆಲ್ಲದರಲ್ಲೂ ಮತ್ತು ವಿಶೇಷವಾಗಿ ಭಕ್ತಿ ಮಾರ್ಗದಲ್ಲೂ ಗುರುವಿಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ – ಅರ್ಜುನರ ಸಂಬಂಧ ಮತ್ತು ರಾಮಾಯಣದಲ್ಲಿ ಶ್ರೀರಾಮ – ಹನುಮರ ಸಂಬಂಧಗಳು, ಗುರುಗೋವಿಂದ ಭಟ್ಟರು-ಸಂತ ಶಿಶುನಾಳ ಶರೀಫ , ರಾಮಕೃಷ್ಣ ಪರಮಹಂಸರು- ಸ್ವಾಮಿ ವಿವೇಕಾನಂದರು, ಬ್ರಹ್ಮಚೈತನ್ಯ ಗೊಂದಾವಲಿಕರ ಮಹಾರಾಜ-ಬ್ರಹ್ಮಾನಂದ ಮಹಾರಾಜ… ಹೀಗೆ ಗುರು-ಶಿಷ್ಯರಿಗೆ ಪರಂಪರೆಗಳ ಐತಿಹ್ಯವಿದೆ.

VISTARANEWS.COM


on

Guru Purnima 2024
Koo

ಪ್ರೊ. ವಿದ್ವಾನ್ ನವೀನಶಾಸ್ತ್ರಿ ರಾ. ಪುರಾಣಿಕ
(ಲೇಖಕರು, ಸಂಸ್ಕೃತ ಉಪನ್ಯಾಸಕರು, ಸಂಸ್ಕೃತಿ ಚಿಂತಕರು ಹಾಗೂ ಜ್ಯೋತಿಷಿಗಳು)

ಆಷಾಢ ಮಾಸ ಶುಕ್ಲ ಪಕ್ಷದಲ್ಲಿ ಬರುವ “ಕಡ್ಲಿಗರ ಹುಣ್ಣಿಮೆ”ಯನ್ನು ನಾವು ಆಚರಿಸ್ಪಡುವ, ಶ್ರೇಷ್ಠವಾದ ಪರ್ವವೆಂದರೆ ಅದು “ಗುರು ಪೂರ್ಣಿಮೆ”.
ಈ ದಿನ ನಾವು ನಂಬಿದ ನಮ್ಮಲ್ಲಿಯ ಅಂಧಕಾರವನ್ನು ತೊಲಗಿಸಿ ಜ್ಞಾನ ಸಾಕ್ಷಾತ್ಕಾರ ಮಾಡಿಸಿದ ನಮ್ಮ ಗುರುಗಳಿಗೆ ವಂದನೆ (Guru Purnima 2024) ಸಲ್ಲಿಸುವ ದಿನ. ಆ ಗುರುವನ್ನು ನೆನೆದು ಅವರ ಮಹತ್ವವನ್ನು ಸಾರುವ ದಿನ. ಗುರುಗಳು ನಮಗೆ ನಮ್ಮ ಜೀವನಕ್ಕೆ ಸರಿಯಾದ ಮಾರ್ಗ ಸೂಚಿಸುವ, ನಮ್ಮ ಕೈ ಹಿಡಿದು ನಡೆಸುವ ದಿಕ್ಸೂಚಿ,ದಾರಿದೀಪ. ಪರಮಾತ್ಮನ, ಪರಮಾರ್ಥದ ಅರಿವನ್ನು ತಿಳಿಯಲು ನಮ್ಮೊಳಗಿರುವ ನಮ್ಮ ಆತ್ಮಜ್ಯೋತಿಯನ್ನು ಜ್ಞಾನವೆಂಬ ತೈಲ ಹಾಕಿ ಬೆಳುಗುವಂತೆ ಮಾಡಿ ಜಾಗೃತಿಗೊಳಿಸುವ ಮಹತ್ವದ ವ್ಯಕ್ತಿ. ಆಧ್ಯಾತ್ಮದ ಜತೆಗೆ ಲೌಕಿಕ ಪ್ರಪಂಚದ ಹಾದಿಯಲ್ಲಿ ನಮ್ಮನ್ನು ನಡೆಸಿ, ನಮ್ಮ ಗುರಿ ಮುಟ್ಟವ ತನಕ ಸಹಾಯ ಮಾಡುವವನೇ “ ಶ್ರೇಷ್ಠಗುರು”.

ಅಲೆದು ಅಲೆದು ಹುಡಕಿದರೆ ಸಿಗುವವನಲ್ಲ ಗುರು, ನಮ್ಮನ್ನು ಹುಡುಕಿ, ನಾವು ಗುರುವನ್ನು ಕಾಣುವ ಮಟ್ಟಿಗೆ ಸಾಧನೆ ಮಾಡಿದ್ದರೆ ತಾನಾಗೇ ನಮ್ಮ ಬಳಿಗೆ ಬರುವವನು. ನಾವುಗಳೆಲ್ಲರೂ ಆ ಗುರುವಿನ ಮುಖಾಂತರವೇ ಪರಮಾತ್ಮನ ಅರಿವು, ಪ್ರಪಂಚದ ಅರಿವು, ಅರಿಯಬೇಕಾಗಿರುವುದರಿಂದ, ನಾವು ಪ್ರತಿ ಆಷಾಢ ಮಾಸದ ಈ ಪೌರ್ಣಿಮೆಯಂದು ಮಾತ್ರ ಗುರುವನ್ನು ಪೂಜಿಸದೆ.. ಅನು ದಿನ, ಅನು ಕ್ಷಣ, ಗುರುವನ್ನು ನಮ್ಮ ಅಂತರಂಗದಲ್ಲೇ ಪ್ರತಿಷ್ಠಾಪಿಸಿ ಪೂಜಿಸುತ್ತಾ ನಮ್ಮನ್ನು ನಾವು ಸಮರ್ಪಿಸಿಕೊಳ್ಳಬೇಕು. ಹೀಗೆ ನನ್ನದೇನೂ ಇಲ್ಲ ಎಂದು ಅಂತಹ ಗುರುವಿಗೆ ಶರಣಾದಾಗ ಮಾತ್ರ ನಮ್ಮ ಗುರಿ ಮುಟ್ಟುವ ಪ್ರಯತ್ನ ಫಲಪ್ರದವಾಗುತ್ತದೆ.

ಉಪನಿಷತ್ತಿನಲ್ಲಿ ಗುರು

ಉಪನಿಷತ್ತಿನಲ್ಲಿ ಗುರು ಎಂಬುದನ್ನು ಈ ರೀತಿಯಾಗಿ ವಿವರಿಸಿದ್ದಾರೆ. “ಗು” ಎಂದರೆ ಅಂಧಕಾರವೆಂದು “ರು” ಎಂದರೆ ದೂರೀಕರಿಸುವ ಅಥವಾ ಅಜ್ಞಾನದ ಅಂಧಕಾರವನ್ನು ನಿವಾರಿಸಿ ಜ್ಞಾನದ ಹಾದಿಯ ಕಡೆಗೆ ನಡೆಸುವ ಎಂಬ ಅರ್ಥವಾಗುತ್ತದೆ. ಸಂಸ್ಕೃತದಲ್ಲಿ “ಗುರು” ಪದಕ್ಕೆ ಭಾರವಾದ ಎನ್ನುವ ಅರ್ಥವೂ ಇದೆಯೆನ್ನುತ್ತಾರೆ. ಯಾರು ಜ್ಞಾನದಿಂದ ಭಾರವಾಗಿರುವನೋ ಅವನೇ ನಿಜವಾದ ಗುರು ಎಂದು ಅರ್ಥೈಸಬಹುದೇನೋ ಎಂಬ ಅಭಿಪ್ರಾಯ.

ಆದಿಗುರು ಶ್ರೀ ಶಂಕರಭಗವತ್ಪಾದಚಾರ್ಯರು ಗುರು ಮಹಿಮೆ ಕುರಿತು ಹೀಗೆ ಸ್ತೋತ್ರವನ್ನು ಹೇಳಿದ್ದಾರೆ:

ಗುರುರ್ಬ್ರಹ್ಮಾ ಗುರುರ್ವಿಷ್ಣುಃ | ಗುರುರ್ದೇವೋ ಮಹೇಶ್ವರಃ |
ಗುರುಸ್ಸಾಕ್ಶಾತ್ ಪರಬ್ರಹ್ಮಃ | ತಸ್ಮೈ ಶ್ರೀ ಗುರವೇ ನಮಃ ||

ಗುರುವು ತ್ರೀಮೂರ್ತಿ ಸ್ವರೂಪಿಯಾಗಿದ್ದು, ಅದಕ್ಕೂ ಮಿಗಿಲಾದ ಪರಬ್ರಹ್ಮ ತತ್ತ್ವವೇ ಆಗಿದ್ದಾನೆ. ಅಂಥ ಗುರುವಿಗೆ ಪ್ರಣಾಮಗಳು ಎಂಬ ಅರ್ಥವಾಗುತ್ತದೆ. ಸ್ಕಂದ ಪುರಾಣದ “ಗುರುಗೀತೆ”ಯಲ್ಲಿ ಗುರುವನ್ನು ನಂದಾದೀಪದಂತೆ ಬೆಳಗುವ ಜ್ಯೋತಿಯಂತೆ ಎಂದು ಗುರುವಿನ ಹಿರಿಮೆಯನ್ನು ವಿಸ್ತಾರವಾಗಿ ತಿಳಿಸಲ್ಪಟಿದೆ :

ಅಖಂಡ ಮಂಡಲಾಕಾರಂ ವ್ಯಾಪ್ತಂ ಯೇನಾ ಚರಾಚರಂ।
ತತ್ಪದಂ ದರ್ಶಿತಂ ಯೇನಾ ತಸ್ಮೈ ಶ್ರೀಗುರವೇ ನಮಃ॥
ಅಜ್ಞಾನ ತಿಮಿರಾಂಧಸ್ಯ ಜ್ಞಾನಾಂಜನ ಶಲಾಕಯಾ।
ಚಕ್ಷುರುನ್ಮೀಲಿತಂ ಯೇನ
ತಸ್ಮೈ ಶ್ರೀ ಗುರವೇ ನಮಃ॥

ಅಂದರೆ ನಮ್ಮಲ್ಲಿರುವ ಅಜ್ಞಾನವೆಂಬ ಕಣ್ಣಿಗೆ ಅಂಟಿದ ಅಂಧಕಾರವನ್ನು ಜ್ಞಾನವೆಂಬ ಕಡ್ಡಿಯಿಂದ ಗುಣಪಡಿಸಿ, ಶಿಷ್ಯನ ಏಳ್ಗಿಗೆ ಬೇಕಾದ ಸೋಪಾನವನ್ನು ಹತ್ತಿಸುವ ಹಾಗೂ ಸಾಧನೆಯ ಮಾರ್ಗದರ್ಶನ ಮಾಡುವ ಶ್ರೀ ಗುರುವಿಗೆ ವಂದನೆಗಳು.
ಹೀಗೆ ನಮ್ಮ ಪರಂಪರೆಯಲ್ಲಿ ಅನಾದಿ ಕಾಲದಿಂದಲೂ ಗುರುವಿನ ಮಹತ್ವವನ್ನು ಸಾರುತ್ತಾ ಬಂದಿದ್ದಾರೆ..

ನ ಗುರೋರಧಿಕಂ ತತ್ವಂ, ನ ಗುರೋರಧಿಕಂ ತಪಃ।
ತತ್ವ ಜ್ಞಾನಾತ್ ಪರಂ ನಾಸ್ತಿ, ತಸ್ಮೈ ಶ್ರೀ ಗುರವೇ ನಮಃ॥

ಅಂದರೆ ಗುರುವಿಗಿಂತ ಮೀರಿದ ತತ್ವ, ತಪಸ್ಸು ಯಾವುದೂ ಇಲ್ಲ. ಜ್ಞಾನವೆಂಬ ದಾರಿದೀಪವಾಗಿರುವ ಶ್ರೀ ಗುರುವೇ ನಿನಗೆ ವಂದನೆಗಳು ಎಂದು ಹೇಳಿದ್ದಾರೆ. ಶಾಶ್ವತವಾದ ಆನಂದವನ್ನು ಪಡೆಯುವುದು ಆ ಸದ್ಗುರುವಿನಿಂದಲೆ ಮಾತ್ರವೇ ಸಾಧ್ಯ ಎಂದು ಶ್ರೀ ಶಂಕರಾಚಾರ್ಯರು ತಮ್ಮ “ಗುರ್ವಷ್ಟಕಮ್” ಎಂಬ ಸ್ತೂತ್ರದಲ್ಲಿ ಹೀಗೆ ಹೇಳಿದ್ದಾರೆ :
ಶರೀರಂ ಸುರೂಪಂ ತಥಾ ವಾ ಕಲತ್ರಂ ಯಶಶ್ಚಾರು ಚಿತ್ರಂ ಧನಂ ಮೇರುತುಲ್ಯಮ್ ।

ಕಲತ್ರಂ ಧನಂ ಪುತ್ರಪೌತ್ರಾದಿ ಸರ್ವಂಗೃಹಂ ಬಾಂಧವಾಃ ಸರ್ವಮೇತದ್ಧಿ ಜಾತಮ್।।

ನಮಗೆ ಸುಂದರ ಶರೀರ, ಅಪಾರ ಅಂತಸ್ತು, ಕೀರ್ತಿ, ಸಂಸಾರ ಎಲ್ಲವೂ ಇದ್ದರೂ ಗುರುವಿನ ಚರಣಗಳಲ್ಲಿ ಭಕ್ತಿ, ಶ್ರದ್ಧೆ ಇಲ್ಲದವನಿಗೆ ಮೋಕ್ಷವಿಲ್ಲ ಎಂದು.ಏನೆಲ್ಲ ಸಾಧಿಸಿದ್ದರೂ, ತ್ಯಜಿಸಿದ್ದರೂ,ಗುರುವಿನ ಕರುಣೆಯಿಲ್ಲದೆ ಎಲ್ಲವೂ ವ್ಯರ್ಥ ಎಂದು ತಿಳಿಯುತ್ತದೆ.ಗುರುವಿನ ಪಾದಗಳಲ್ಲಿ ಮನಸ್ಸನ್ನು ನಿಲ್ಲಿಸದಿದ್ದರೆ ನಮ್ಮ ಸಾಧನೆ ಕಷ್ಟಸಾದ್ಯ ಎನ್ನುತ್ತಾ ಗುರುವಿನ ಮಹತ್ವನ್ನು ವಿವರಿಸುತ್ತಾರೆ ಆಚಾರ್ಯರು.

ನಮ್ಮ ಈ ಸನಾತನ ಪರಂಪರೆಯಲ್ಲಿ ಈಗಿರುವ “ಗುರುವಿನ ಗುರುವಿಗೆ ಪರಮಗುರು”ಎಂದೂ, “ಪರಮ ಗುರುವಿನ ಗುರುವನ್ನು ಪರಾಪರ ಗುರು”ಎಂದೂ,”ಪರಾಪರ ಗುರುವಿನ ಗುರುವನ್ನು ಪರಮೇಷ್ಠಿ ಗುರು”ಎಂದೂ ಗುರುತಿಸಲ್ಪಡುತ್ತಾರೆ. “ಗುರು ಪೂರ್ಣಿಮೆ’ಯಂದು ಸಮಸ್ತ ಗುರು ಪರಂಪರೆಯೇ ಪೂಜಿಸಲ್ಪಡುತ್ತದೆ. ವೇದದಲ್ಲಿನ ಬ್ರಹ್ಮ ತತ್ವವನ್ನು ಅರಿತಿದ್ದ ವಿಷ್ಣುವಿನ ಅವತಾರ ವಂದೇ ಕರೆಯಲ್ಪಡುವ ಶ್ರೀ ವೇದವ್ಯಾಸರನ್ನ ನಾವು ವಿಶೇಷವಾಗಿ ನಮ್ಮ ಗುರು ಪರಂಪರೆಯ ಜತೆಗೇ “ಗುರು ಪೂರ್ಣಿಮೆ”ಯಂದು ಪೂಜಿಸುತ್ತೇವೆ. ಲೋಕಗುರು, ಪರಮಗುರು ಎಂದೇ ಪ್ರಖ್ಯಾತರಾಗಿದ್ದರು ಶ್ರೀ ವೇದವ್ಯಾಸರು. ವೇದಗಳನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಿದ್ದರಿಂದ ಇವರನ್ನು ವೇದವ್ಯಾಸರೆಂದು ಕರೆದರು. ಇಡೀ ಮಾನವ ಕುಲಕ್ಕೇ ಒಳಿತಾಗಲೆಂದು ಮತ್ತು ವೇದಗಳ ರಹಸ್ಯ ಸಾಮಾನ್ಯರೂ ಅರಿಯುವಂತಾಗ ಬೇಕೆಂದು ಅವರು ನಮಗಾಗಿ “ಮಹಾಭಾರತ”ವೆಂಬ ಲಕ್ಷ್ಯ ಶ್ಲೋಕಗಳಿರುವ “ಪಂಚಮವೇದ”ವನ್ನು ರಚಿಸಿ ಕೊಟ್ಟರು. ಜತೆಗೇ ಭಾಗವತವನ್ನೂ ಮತ್ತು ಹದಿನೆಂಟು ಪುರಾಣಗಳನ್ನೂ ರಚಿಸಿಕೊಟ್ಟರು. ಇಂತಹ ಪುಣ್ಯಾತ್ಮರು ವೇದವ್ಯಾಸರು. ಆದ್ದರಿಂದಲೇ ಅವರನ್ನು ಲೋಕಗುರುವೆಂದು ಕರೆದು ಶ್ರದ್ಧೆ ಹಾಗೂ ಭಕ್ತಿಯಿಂದ ಗುರು ಪೂರ್ಣಿಮೆಯಂದು ಪೂಜಿಸುತ್ತೇವೆ. “ಗುರು” ಬೇರೆ ಬೇರೆ ಗುರುಗಳು ಭೌತಿಕ ಶರೀರದಿಂದ ಅಂದರೆ ಹೊರಗಿನಿಂದ ನೋಡಲು ವ್ಯತ್ಯಾಸವಾಗಿದ್ದರೂ ಅವರೆಲ್ಲರ ಒಳಗಿನ “ಗುರು ತತ್ವ” ಮಾತ್ರ ಒಂದೇ ಆಗಿರುತ್ತದೆ. ಅವೆರೆಲ್ಲರೂ ಹೊರ ಹೊಮ್ಮಿಸುವ, ಪಸರಿಸುವ ಲಹರಿಗಳು ತುಂಬ ಚೈತನ್ಯದಾಯಕವಾಗಿರುತ್ತದೆ.

ಗುರುವಿಗೆ ಯಾವಾಗಲೂ ಶಿಷ್ಯನ ಉನ್ನತಿಯ, ಬೆಳವಣಿಗೆಯ ಚಿಂತನೆಯೇ ಆಗಿರುತ್ತದೆ. ಗುರು ತನ್ನ ಶಿಷ್ಯನನ್ನು ತಾನೇ ಹುಡುಕಿ ಕೊಳ್ಳುತ್ತಾನೆ. ಶಿಷ್ಯ ಸಿಕ್ಕಿದ ಕ್ಷಣವೇ ಗುರು ಶಿಷ್ಯನ ಏಳಿಗೆಯ “ ಸಿದ್ಧ ಸಂಕಲ್ಪ” ಮಾಡಿಕೊಂಡು ಬಿಟ್ಟಿರುತ್ತಾನೆ. ನಮ್ಮ ಉಪನಿಷತ್ತು, ಪುರಾಣಗಳು, ವೇದ, ಶಾಸ್ತ್ರಗಳೆಲ್ಲದರಲ್ಲೂ ಮತ್ತು ವಿಶೇಷವಾಗಿ ಭಕ್ತಿ ಮಾರ್ಗದಲ್ಲೂ ಗುರುವಿಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ – ಅರ್ಜುನರ ಸಂಬಂಧ ಮತ್ತು ರಾಮಾಯಣದಲ್ಲಿ ಶ್ರೀರಾಮ – ಹನುಮರ ಸಂಬಂಧಗಳು ,ಗುರುಗೋವಿಂದ ಭಟ್ಟರು-ಸಂತ ಶಿಶುನಾಳ ಶರೀಫ , ರಾಮಕೃಷ್ಣ ಪರಮಹಂಸರು- ಸ್ವಾಮಿ ವಿವೇಕಾನಂದರು,ಬ್ರಹ್ಮಚೈತನ್ಯ ಗೊಂದಾವಲಿಕರ ಮಹಾರಾಜ-ಬ್ರಹ್ಮಾನಂದ ಮಹಾರಾಜ… ಇವರೆಲ್ಲ ಗುರು – ಶಿಷ್ಯರ ಸಂಬಂಧಕ್ಕೆ ಅತಿ ಸೂಕ್ತವಾದ ನಿದರ್ಶನಗಳು.

ಗುರುವಿನ ಬಗೆಗೆ ವರ್ಣಿಸುತ್ತಾ ಹೊರಟರೆ ಅದು ಸಾಗರದಷ್ಟು ಆಳ, ಅಗಲ. ಆಗಸದಷ್ಟು ವಿಶಾಲ, ವಿಸ್ತಾರ. ಗುರು ಎನ್ನುವುದು ಒಬ್ಬ ವ್ಯಕ್ತಿ ಎಂದು ನೋಡದೆ ನಾವು ಒಂದು ಅದ್ಬುತ ಶಕ್ತಿ ಎಂದು ಅರ್ಥೈಸಿ ತಿಳಿದುಕೊಂಡರೆ ನಮಗೆ ಗುರುವಿನ ಮಹತ್ವ ಇನ್ನೂ ಹೆಚ್ಚು ಆಳವಾಗಿ ತಿಳಿಯುತ್ತದೆ….

ಇದನ್ನೂ ಓದಿ: Guru Purnima 2024: ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 ‘ಗುರು’ಗಳಿವರು

Continue Reading
Advertisement
HD Kumaraswamy
ಪ್ರಮುಖ ಸುದ್ದಿ5 seconds ago

HD Kumaraswamy: ರಾಜ್ಯದಲ್ಲಿ ನಾಳೆ ಚುನಾವಣೆ ನಡೆದ್ರೂ ಕಾಂಗ್ರೆಸ್‌ ಮನೆಗೆ; ಭವಿಷ್ಯ ನುಡಿದ ಕುಮಾರಸ್ವಾಮಿ

Paris Olympics 2024
ಪ್ರಮುಖ ಸುದ್ದಿ4 mins ago

Paris Olympics 2024 : ಶೂಟಿಂಗ್​ನಲ್ಲಿ ಭಾರತಕ್ಕೆ ಖುಷಿ ಸುದ್ದಿ; ಮಹಿಳೆಯರ 10 ಮೀಟರ್ ಏರ್​ ಪಿಸ್ತೂಲ್ ವಿಭಾಗದಲ್ಲಿ ಮನು ಭಾಕರ್​ ಫೈನಲ್​ಗೆ

Paris Olympics 2024
ಫ್ಯಾಷನ್7 mins ago

Paris Olympics 2024: ಭಾರತೀಯ ಅಥ್ಲೀಟ್‌ಗಳ ಡ್ರೆಸ್‌ ಕೋಡ್‌ ವಿನ್ಯಾಸಕ್ಕೆ ಜನರ ಮಿಶ್ರ ಪ್ರತಿಕ್ರಿಯೆ

Vaccin for Hiv
ಆರೋಗ್ಯ40 mins ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Physical Assault
ದೇಶ48 mins ago

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Paris Olympics
ಕ್ರೀಡೆ1 hour ago

Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್‌ಗೆ ಆಹಾರ ಕೊರತೆ; ರೆಸ್ಟೋರೆಂಟ್​ನಿಂದ ರೋಟಿ, ದಾಲ್‌ ತರಿಸಿದ ಬಾಕ್ಸರ್​

karnataka Rain
ಮಳೆ1 hour ago

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Rahul Gandhi
ದೇಶ1 hour ago

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Gautam Gambhir
ಕ್ರೀಡೆ1 hour ago

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Kannada New Movie Nava Digantha latest news
ಸಿನಿಮಾ1 hour ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ4 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ5 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ23 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌