Radhika Merchant: ಪ್ರಿವೆಡ್ಡಿಂಗ್‌ಗೆ ಅಂಬಾನಿ ಸೊಸೆ ಧರಿಸಿದ್ದು 65 ವರ್ಷ ಹಳೆಯ ಸ್ಕರ್ಟ್‌! ಇದರ ಬೆಲೆ? - Vistara News

ಸಿನಿಮಾ

Radhika Merchant: ಪ್ರಿವೆಡ್ಡಿಂಗ್‌ಗೆ ಅಂಬಾನಿ ಸೊಸೆ ಧರಿಸಿದ್ದು 65 ವರ್ಷ ಹಳೆಯ ಸ್ಕರ್ಟ್‌! ಇದರ ಬೆಲೆ?

Radhika Merchant: ವೈರಲ್ ಬಾರ್ಬಿಕೋರ್ ಮತ್ತು ಕೊಕ್ವೆಟ್ ಕೋರ್ ಫ್ಯಾಷನ್ ಒಳಗೊಂಡ ಈ ಡ್ರೆಸ್‌ ಪ್ರಕಾಶಮಾನವಾದ ರಾಸ್ಪ್ಬೆರಿ ಗುಲಾಬಿ ಬಣ್ಣಗಳ ಮಿಶ್ರಣದಲ್ಲಿದೆ. 1959ರ ಫ್ಯಾಷನ್‌ ಸ್ಲೀವ್ ಲೆಸ್ ಡ್ರೆಸ್ ಆಗಿದ್ದರೂ ಮಾಡರ್ನ್ ಆಗಿದೆ. ವಿಶಾಲವಾದ ಭುಜದ ಪಟ್ಟಿಗಳು, ಚೌಕಾಕಾರದ ಡಿಸೈನ್‌, ಜತೆಗೆ ಸ್ಕರ್ಟ್ ರೀತಿಯ ವಿನ್ಯಾಸ ಇನ್ನಷ್ಟು ಸೌಂದರ್ಯವನ್ನು ಹೆಚ್ಚಿಸುತ್ತವೆ. ಈ ಸ್ಕರ್ಟ್‌ ಬೆಲೆ 3,20,714ರೂ. ಆಗಿದೆ.

VISTARANEWS.COM


on

Radhika Merchant archival Dior dress for her pre-wedding
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಧಿಕಾ ಮರ್ಚಂಟ್‌ (Radhika Merchant) ಹಾಗೂ ಅನಂತ್ ಅಂಬಾನಿ ಮದುವೆಗೆ ಸಜ್ಜಾಗುತ್ತಿದ್ದಾರೆ. ಈ ಮುಂಚೆ ಇಟಲಿಯಲ್ಲಿ ನಡೆದ ಪ್ರಿ ವೆಡ್ಡಿಂಗ್‌ ಫೋಟೊಗಳು ಇದೀಗ ಭಾರಿ ವೈರಲ್‌ ಆಗುತ್ತಿವೆ. ಇಟಲಿಯಲ್ಲಿ ನಾಲ್ಕು ದಿನಗಳ ಕಾಲ ನಡೆದ ವಿವಾಹ ಪೂರ್ವ ಆಚರಣೆಯಲ್ಲಿ ರಾಧಿಕಾ ಮರ್ಚಂಟ್‌ ಅವರ ಡ್ರೆಸ್‌ ಕೂಡ ಹೈಲೈಟ್‌ ಆಗಿತ್ತು. ಆರ್ಕೈವಲ್ ಡಿಯೊರ್ ಸ್ಕರ್ಟ್‌ (archival Dior dress) ಧರಿಸಿದ್ದರು ರಾಧಿಕಾ. 1959ರ ಫ್ಯಾಷನ್‌ ಸ್ಲೀವ್ ಲೆಸ್ ಡ್ರೆಸ್ ಆಗಿದ್ದರೂ ಮಾಡರ್ನ್ ಆಗಿದೆ. ವಿಶಾಲವಾದ ಭುಜದ ಪಟ್ಟಿಗಳು, ಚೌಕಾಕಾರದ ಡಿಸೈನ್‌, ಜತೆಗೆ ಸ್ಕರ್ಟ್ ರೀತಿಯ ವಿನ್ಯಾಸ ಇನ್ನಷ್ಟು ಸೌಂದರ್ಯವನ್ನು ಹೆಚ್ಚಿಸುತ್ತವೆ. ಈ ಸ್ಕರ್ಟ್‌ ಬೆಲೆ 3,20,714ರೂ. ಆಗಿದೆ.

ರಾಧಿಕಾ ಮರ್ಚಂಟ್‌ ಇಟಲಿಯ ಪೋರ್ಟೋಫಿನೋದಲ್ಲಿ ನಡೆದ ಆಚರಣೆಗಳಿಗಾಗಿ ಬಾರ್ಬಿಕೋರ್ ಟ್ರೆಂಡ್ ಧರಿಸಿದ್ದರು. ಈ ಉಡುಪನ್ನು ಯೆವ್ಸ್ ಸೇಂಟ್ ಲಾರೆಂಟ್ ವಿನ್ಯಾಸಗೊಳಿಸಿದ್ದಾರೆ. ವರದಿಯ ಪ್ರಕಾರ ರಾಧಿಕಾ ಅವರ ಆರ್ಕೈವಲ್ ಡಿಯೊರ್ ಉಡುಪನ್ನು ಸ್ಯಾನ್ ಫ್ರಾನ್ಸಿಸ್ಕೋದ ಕಸ್ಸಂದ್ರ ಕಾರ್ಪೆಂಟರ್ ಅವರಿಂದ ಪಡೆಯಲಾಗಿದೆ ಎನ್ನಲಾಗಿದೆ . ಇದು ಮೂಲತಃ ಜೀನಿ ಮ್ಯಾಗ್ನಿನ್ ಅವರದ್ದು ಎನ್ನಲಾಗಿದೆ.

ವೈರಲ್ ಬಾರ್ಬಿಕೋರ್ ಮತ್ತು ಕೊಕ್ವೆಟ್ ಕೋರ್ ಫ್ಯಾಷನ್ ಒಳಗೊಂಡ ಈ ಡ್ರೆಸ್‌ ಪ್ರಕಾಶಮಾನವಾದ ರಾಸ್ಪ್ಬೆರಿ ಗುಲಾಬಿ ಬಣ್ಣಗಳ ಮಿಶ್ರಣದಲ್ಲಿದೆ. 1959ರ ಫ್ಯಾಷನ್‌ ಸ್ಲೀವ್ ಲೆಸ್ ಡ್ರೆಸ್ ಆಗಿದ್ದರೂ ಮಾಡರ್ನ್ ಆಗಿದೆ. ವಿಶಾಲವಾದ ಭುಜದ ಪಟ್ಟಿಗಳು, ಚೌಕಾಕಾರದ ಡಿಸೈನ್‌, ಜತೆಗೆ ಸ್ಕರ್ಟ್ ರೀತಿಯ ವಿನ್ಯಾಸ ಇನ್ನಷ್ಟು ಸೌಂದರ್ಯವನ್ನು ಹೆಚ್ಚಿಸುತ್ತವೆ. ಈ ಸ್ಕರ್ಟ್‌ ಬೆಲೆ 3,20,714ರೂ. ಆಗಿದೆ. ರಾಧಿಕಾ ಅವರು ಈ ಸ್ಕರ್ಟ್‌ ಜತೆಗೆ ವಜ್ರದ ಉಂಗುರ, ಗುಲಾಬಿ ಬಣ್ಣದ ಹರ್ಮೆಸ್ ಮಿನಿ ಕೆಲ್ಲಿ ಬ್ಯಾಗ್ ಧರಿಸಿದ್ದರು. ಪೋನಿಟೇಲ್‌ಗೆ ರೇಷ್ಮೆಯ ಸ್ಕಾರ್ಫ್‌ ಧರಿಸಿದ್ದರು.

ಇದನ್ನೂ ಓದಿ: Pawan Kalyan: ಮರು ಬಿಡುಗಡೆಯಾಗುತ್ತಿದೆ ಪವನ್ ಕಲ್ಯಾಣ್ ಹಳೆಯ ಸಿನಿಮಾ..!

ವರದಿಯ ಪ್ರಕಾರ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಹಿಂದೂ ವೈದಿಕ ಸಮಾರಂಭದ ಪ್ರಕಾರ ಮದುವೆಯಾಗಲಿದ್ದಾರೆ. ವಿವಾಹ ಆಮಂತ್ರಣ ಪತ್ರಿಕೆಯ ಚಿತ್ರ ಬಹಿರಂಗಗೊಂಡಿದ್ದು ಅದರ ಪ್ರಕಾರ ಮೂರು ಸಮಾರಂಭಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ. ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ನಲ್ಲಿರುವ ಭವ್ಯವಾದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್​ನಲ್ಲಿ ಮದುವೆ ನಡೆಯಲಿದೆ.

ಜುಲೈ 12 ರಿಂದ ಮೂರು ದಿನಗಳ ಕಾಲ ವಿವಾಹ ಉತ್ಸವಗಳು ನಡೆಯಲಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 12ರಂದು ರಂದು ವಿವಾಹದೊಂದಿಗೆ ಆಚರಣೆಗೆ ಚಾಲನೆ ಸಿಗಲಿದೆ. ಅಂದು ಅತಿಥಿಗಳು ಭಾರತೀಯ ಸಾಂಪ್ರದಾಯಿಕ ಉಡುಪನ್ನು ಧರಿಸುವ ನಿರೀಕ್ಷೆಯಿದೆ. ಮದುವೆಯ ನಂತರ, ಮುಂದಿನ ಕಾರ್ಯಕ್ರಮವು ಜುಲೈ 13 ರಂದು ಶುಭ ಆಶಿರ್ವಾದ್ ಅಥವಾ ದೈವಿಕ ಆಶೀರ್ವಾದ ಕಾರ್ಯಕ್ರಮ. ಅಂದು ಡ್ರೆಸ್ ಕೋಡ್ ಭಾರತೀಯ ಕ್ಯಾಶುವಲ್ ಡ್ರೆಸ್​ ಆಗಿದೆ. ಜುಲೈ 14 ರಂದು ಆಯೋಜಿಸಲಾಗುವ ವಿವಾಹ ಆರತಕ್ಷತೆ ಅಥವಾ ಮಂಗಲ್ ಉತ್ಸವ್ ನಡೆಯಲಿದೆ. ಅಂದು ಅತಿಥಿಗಳು ಭಾರತೀಯ ಚಿಕ್ ಉಡುಪನ್ನು ಧರಿಸುವ ನಿರೀಕ್ಷೆಯಿದೆ.


ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

Actor Darshan : ದರ್ಶನ್‌‌‌ ನೋಡ್ಬೇಕೆಂದು ಜೈಲಿನ ಹೊರಗೆ ವಿಶೇಷಚೇತನ ಯುವತಿಯೊಬ್ಬಳು ಗೋಳಾಡಿದ್ದಾಳೆ. ದರ್ಶನ್‌ ಜೈಲುಪಾಲಾದ ದಿನದಿಂದ ಯುವತಿ ಊಟ ಬಿಟ್ಟು ಹಠ ಮಾಡುತ್ತಿದ್ದಾಳೆ.

VISTARANEWS.COM


on

By

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy murder case) ನಟ ದರ್ಶನ್‌ (Actor Darshan) ಹಾಗೂ ಸಹಚರರು ಜೈಲುವಾಸದಲ್ಲಿದ್ದಾರೆ. ಇತ್ತ ನಿತ್ಯವೂ ಅಭಿಮಾನಿಗಳು ದರ್ಶನ್‌ (Darshan Fans) ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಆಗಮಿಸುತ್ತಿದ್ದು, ಪೊಲೀಸರಿಗೆ ತಲೆ ಬಿಸಿಯಾಗಿದೆ. ಗುರುವಾರವೂ ದರ್ಶನ್ ಭೇಟಿಗೆ ವಿಶೇಷ ಚೇತನ ಯುವತಿ ಆಗಮಿಸಿದ್ದಳು.

ಬೆಂಗಳೂರಿನ ಜಾಲಹಳ್ಳಿ ಕ್ರಾಸ್‌ನ ನಿವಾಸಿ ಸೌಮ್ಯ ತನ್ನ ನೆಚ್ಚಿನ ನಟನನ್ನು ನೋಡಬೇಕೆಂದು ಹಠ ಹಿಡಿದಿದ್ದಳು. ದರ್ಶನ್‌ನನ್ನು ನೋಡುವ ತನಕ ಊಟ ಮಾಡುವುದಿಲ್ಲ ಎಂದಿದ್ದಾಳೆ. ಹೀಗಾಗಿ ಸೌಮ್ಯಳ ಪೋಷಕರು ಪರಪ್ಪನ ಅಗ್ರಹಾರಕ್ಕೆ ಭೇಟಿ ನಿಡಿದ್ದರು. ನಟ ದರ್ಶನ್‌ನ ಅಪ್ಪಟ ಅಭಿಮಾನಿಯಾಗಿರುವ ಸೌಮ್ಯ, ದರ್ಶನ್‌ ಜೈಲಿಗೆ ಹೋದ ದಿನದಿಂದ ಸರಿಯಾಗಿ ಊಟ ಮಾಡಿಲ್ಲ. ಜೈಲಿನಲ್ಲಿರುವ ದರ್ಶನ್ ಅವರನ್ನು ಭೇಟಿಯಾಗಬೇಕೆಂದು ಹಠ ಹಿಡಿದಿದ್ದಾಳೆ.

ಯುವತಿ ಪೋಷಣೆಗೆ ಆಟೋ ಕೊಡಿಸಿದ್ದ ದರ್ಶನ್‌

2016 ರಲ್ಲಿ ಈ ಬಡ ಕುಟುಂಬಕ್ಕೆ ನಟ ದರ್ಶನ್‌ ಆಟೋವೊಂದನ್ನು ಕೊಡಿಸಿದ್ದರು. ಲಕ್ಷ್ಮೀ ಹಾಗೂ ರಂಗಸ್ವಾಮಿ ದಂಪತಿಯ ಪುತ್ರಿ ಸೌಮ್ಯಳನ್ನು ಪೋಷಣೆಗಾಗಿ ನಟ ದರ್ಶನ್‌ ಖುದ್ದು ಆಟೋ ಕೊಡಿಸಿದ್ದರು. ಹೀಗಾಗಿ ಇದೇ ಆಟೋದಲ್ಲಿ ಜೈಲಿಗೆ ಬಂದು ದರ್ಶನ್‌ ಭೇಟಿಗಾಗಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಇಂದು ದರ್ಶನ್ ಭೇಟಿಗೆ ಅವರ ಕುಟುಂಬದವರು ಬರುತ್ತಿದ್ದು, ವಿಶೇಷ ಚೇತನ ಯುವತಿ ಭೇಟಿಗೆ ಅವಕಾಶವನ್ನು ಅಧಿಕಾರಿಗಳು ನಿರಾಕರಿಸಿದ್ದಾರೆ.

CM Siddaramaiah: ₹2000 ಕೊಟ್ಟು ₹4740 ಕಿತ್ತುಕೊಳ್ಳುತ್ತಿರುವ ರಾಜ್ಯ ಸರಕಾರ! ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿರುವುದರ ಲೆಕ್ಕ ಇಲ್ಲಿದೆ ನೋಡಿ!

ಪಟ್ಟಣಗೆರೆ ಶೆಡ್ಡಾ? ನಾವು ಅಲ್ಲಿಗೆ ಹೋಗೋಲ್ಲ ಅನ್ನುತ್ತಿರುವ ವಾಹನ ಮಾಲಿಕರು!

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy Murder) ನಟ ದರ್ಶನ್‌ (Actor Darshan) ಗ್ಯಾಂಗ್‌ನಿಂದ ಬರ್ಬರ ಕೊಲೆಯಾದ ಬಳಿಕ, ಪಟ್ಟಣಗೆರೆಯ ವಾಹನ ಶೆಡ್‌ (Pattanagere Shed) ಕಡೆ ಸುಳಿದಾಡಲು ವಾಹನ ಮಾಲಿಕರು ಅಂಜುತ್ತಿದ್ದಾರೆ. ಇಲ್ಲಿ ಸಾಲ ಬಾಕಿ (Loan default) ಉಳಿಸಿಕೊಂಡಿರುವವರ ವಾಹನಗಳನ್ನು ಸೀಜ್‌ (Seize) ಮಾಡಿ ತಂದಿಡಲಾಗುತ್ತಿದೆ. ಈಗ ಈ ವಾಹನಗಳನ್ನು ಬಿಡಿಸಿಕೊಳ್ಳಲು ಕೂಡ ಯಾರೂ ಈ ಶೆಡ್‌ ಕಡೆ ತಲೆ ಹಾಕುತ್ತಿಲ್ಲ.

ಸಾಲ ಬಾಕಿ ಉಳಿಸಿಕೊಂಡ ಪರಿಣಾಮ ಪಟ್ಟಣಗೆರೆ ಶೆಡ್‌ ಪಾಲಾಗಿರುವ ವಾಹನಗಳ ಮಾಲೀಕರಿಗೆ ಈಗ ಪಟ್ಟಣಗೆರೆಯ ಶೆಡ್ ಭಯವೇ ಹೆಚ್ಚಾಗಿದೆ. ರೇಣುಕಾ ಸ್ವಾಮಿ ಕೊಲೆಯ ನಡೆದ ತಾಣ ಹಾಗೂ ಅದರ ಬರ್ಬರತೆ ಇವರ ಕೈಕಾಲು ನಡುಗುವಂತೆ ಮಾಡಿದೆ. ʼನೋ ಆರ್ಗ್ಯುಮೆಂಟ್, ಓನ್ಲಿ ಸೆಟಲ್‌ಮೆಂಟ್‌ʼ ಎನ್ನುತ್ತ ಗಪ್‌ಚುಪ್‌ ಆಗಿ ಹಣ ಕಟ್ಟಿ ಬಿಡಿಸಿಕೊಂಡು ಬರುತ್ತಿದ್ದಾರೆ. ಇದರ ಆಸುಪಾಸಿನಲ್ಲಿ ಓಡಾಡುವವರು ಸಹ, ʼಇದೇ ಆ ಶೆಡ್‌ʼ ಎಂದು ಮಾತಾಡಿಕೊಳ್ಳುತ್ತ ಶೆಡ್ಡನ್ನು ನೋಡುತ್ತ ಬಿರಬಿರನೆ ಸಾಗುತ್ತಾರೆ!

ಪಟ್ಟಣಗೆರೆ ಶೆಡ್‌ಗೆ ಹೋಗಿ ವಾಹನ ಬಿಡಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಮಾಲೀಕರು ಕೆಲವೆಡೆ ಬ್ಯಾಂಕ್‌ಗೆ ಹೋಗಿ ಹಣ ಕಟ್ಟಿ, ʼನೀವೇ ವಾಹನ ತಂದುಕೊಡಿʼ ಎಂದೂ ಬ್ಯಾಂಕ್‌ನವರಿಗೆ ಮನವಿ ಮಾಡುತ್ತಿದ್ದಾರಂತೆ. ನಾವು ಶೆಡ್‌ಗೆ ಹೋಗಲ್ಲ‌ ಸರ್, ನೀವೆ ಹೋಗಿ ಎಂದು ದುಂಬಾಲು ಬೀಳುತ್ತಿದ್ದಾರೆ! ʼʼಕ್ರೂರವಾಗಿ ಸತ್ತವರು ದೆವ್ವಗಳಾಗುತ್ತಾರಂತೆ. ಅವರ ಆತ್ಮಗಳು ಅಲ್ಲೇ ಸುಳಿದಾಡ್ತಾ ಇರುತ್ತಾವಂತೆ, ನಮಗ್ಯಾಕೆ ಬೇಕು ಸಾರ್‌ ಇಲ್ಲದ ಉಪದ್ವ್ಯಾಪʼʼ ಎಂದು ಕೂಡ ಕೆಲವು ಮಾಲೀಕರು ಹೇಳುತ್ತಿದ್ದಾರೆ ಎಂದು ವರದಿಯಾಗಿದೆ.

ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾ ಸ್ವಾಮಿಯನ್ನು ಕೂಡಿಹಾಕಿ ದರ್ಶನ್‌ ಮತ್ತು ಗ್ಯಾಂಗ್‌ ಭೀಕರವಾಗಿ ಹಲ್ಲೆ ನಡೆಸಿತ್ತು. ವಾಹನಗಳಿಗೆ ರೇಣುಕಾ ಸ್ವಾಮಿಯ ತಲೆ ಜಪ್ಪಿ, ದೊಣ್ಣೆಗಳಿಂದ ಥಳಿಸಿ, ಮರ್ಮಾಂಗಕ್ಕೆ ಒದ್ದು ಹಿಂಸಿಸಿತ್ತು. ಈ ಪೀಡನೆಯನ್ನು ತಾಳಲಾರದೆ ರೇಣುಕಾ ಸ್ವಾಮಿ ಜೀವ ಶೆಡ್‌ನಲ್ಲಿಯೇ ಹೋಗಿತ್ತು. ಕೆಲಕಾಲ ಶವವನ್ನು ಶೆಡ್‌ನಲ್ಲೇ ಇಟ್ಟಿದ್ದ ಡಿ ಗ್ಯಾಂಗ್‌, ನಂತರ ಅದನ್ನು ಸುಮನಹಳ್ಳಿ ರಾಜಕಾಲುವೆಗೆ ಎಸೆದಿತ್ತು.

ದರ್ಶನ್‌ ಗ್ಯಾಂಗ್‌ನ ನಾಲ್ವರು ತುಮಕೂರು ಜೈಲಿಗೆ ಶಿಫ್ಟ್

ತುಮಕೂರು‌: ನಟ ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರಿನ ಜೈಲಿಗೆ ಪೊಲೀಸರು ಕರೆತಂದಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿದೆ.‌

ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವ್, ನಿಖಿಲ್ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದಾರೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ನಾಲ್ವರು ಆರೋಪಿಗಳನ್ನು ತುಮಕೂರಿನ ಊರುಕೆರೆ ಬಳಿಯ ರಂಗಾಪುರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತಾ ದೃಷ್ಟಿಯಿಂದ ಈ ನಾಲ್ವರು ಆರೋಪಿಗಳನ್ನು ಪ್ರತ್ಯೇಕವಾಗಿಡಲು ಕೋರ್ಟ್ ಆದೇಶಿಸಿತ್ತು. ಹೀಗಾಗಿ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳನ್ನು ಕರೆತರಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು 24ನೇ ಎಸಿಎಂಎಂ ಕೋರ್ಟ್ ಜೂನ್‌ 24ರಂದು ಆದೇಶ ನೀಡಿತ್ತು. ಅರ್ಜಿ ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು ತುಮಕೂರು ಜೈಲಿಗೆ ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಆರೋಪಿಗಳ ವರ್ಗಾವಣೆ ಯಾಕೆ ಅಗತ್ಯ ಎಂದು ಎಸ್‌ಪಿಪಿ ಪ್ರಸನ್ನ ಕುಮಾರ್ ವಿವರಿಸಿದ್ದರು.

ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿತ್ತು. ಒಂದೇ ಜೈಲಿನಲ್ಲಿದ್ದರೇ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆ ಇದ್ದು, ನಾಲ್ವರು ಆರೋಪಿಗಳ ಜೀವಕ್ಕೆ ಅಪಾಯ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Kalki 2898 AD: ʼಕಲ್ಕಿʼ ಕಲಾವಿದರಿಗೆ ದುಬಾರಿ ಸಂಭಾವನೆ: ಪ್ರಭಾಸ್‌ಗೆ 80 ಕೋಟಿ ರೂ.; ದೀಪಿಕಾ, ಬಿಗ್‌ಬಿ, ಕಮಲ್‌ ಪಡೆದುಕೊಂಡಿದ್ದೆಷ್ಟು?

Kalki 2898 AD: ಅತ್ಯಂತ ದುಬಾರಿ ಚಿತ್ರ ಎನ್ನುವ ಖ್ಯಾತಿಯ ʼಕಲ್ಕಿ 2898 ಎಡಿʼ ವಿವಿಧ ಭಾಷೆಗಳಲ್ಲಿ ಇಂದು ವಿಶ್ವಾದ್ಯಂತ ತೆರೆಕಂಡು ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಸುಮಾರು 600 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಈ ಚಿತ್ರದಲ್ಲಿನ ಅಭಿನಯಕ್ಕಾಗಿ ಕಲಾವಿದರು ದಾಖಲೆಯ ಸಂಭಾವನೆ ಪಡೆದುಕೊಂಡಿದ್ದು, ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಹಾಗಾದರೆ ಯಾರು ಎಷ್ಟು ಸಂಭಾವನೆ ಪಡೆದುಕೊಂಡಿದ್ದಾರೆ? ಇಲ್ಲಿದೆ ವಿವರ.

VISTARANEWS.COM


on

Kalki 2898 AD
Koo

ಮುಂಬೈ: ಈ ವರ್ಷದ ಬಹು ನಿರೀಕ್ಷಿತ, ಅತ್ಯಂತ ದುಬಾರಿ ಚಿತ್ರ ಎನ್ನುವ ಖ್ಯಾತಿಯ ʼಕಲ್ಕಿ 2898 ಎಡಿʼ (Kalki 2898 AD) ವಿವಿಧ ಭಾಷೆಗಳಲ್ಲಿ ಇಂದು (ಜೂನ್‌ 27) ವಿಶ್ವಾದ್ಯಂತ ತೆರೆಕಂಡು ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ವಿಷುವಲ್ಸ್‌, ಕಥೆ, ನಿರ್ದೇಶನ, ಅಭಿನಯ ಹೀಗೆ ಚಿತ್ರದ ಪ್ರತಿಯೊಂದು ವಿಭಾಗವನ್ನೂ ಪ್ರೇಕ್ಷಕರು ಕೊಂಡಾಡುತ್ತಿದ್ದಾರೆ. ಪೌರಾಣಿಕ ಕಥೆ ಮತ್ತು ವಿಜ್ಞಾನವನ್ನು ಹದವಾಗಿ ಬೆರೆಸಿ ತೆರೆ ಮೇಲೆ ಮ್ಯಾಜಿಕ್‌ ಸೃಷ್ಟಿಸಿದ ನಿರ್ದೇಶಕ ನಾಗ್‌ ಅಶ್ವಿನ್‌ ಅವರ ಪ್ರತಿಭೆಯನ್ನು ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಸುಮಾರು 600 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಈ ಚಿತ್ರದಲ್ಲಿನ ಅಭಿನಯಕ್ಕಾಗಿ ಕಲಾವಿದರು ದಾಖಲೆಯ ಸಂಭಾವನೆ ಪಡೆದುಕೊಂಡಿದ್ದು, ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಹಾಗಾದರೆ ಯಾರು ಎಷ್ಟು ಸಂಭಾವನೆ ಪಡೆದುಕೊಂಡಿದ್ದಾರೆ? ಈ ವರದಿ ಓದಿ.

ಮೂಲಗಳ ಪ್ರಕಾರ ತೆಲುಗು ಸೂಪರ್‌ ಸ್ಟಾರ್‌ ಪ್ರಭಾಸ್‌ ʼಕಲ್ಕಿʼ ಚಿತ್ರಕ್ಕಾಗಿ ದುಬಾರಿ ಸಂಭಾವನೆ ಪಡೆದಿದ್ದಾರೆ. ಈ ಚಿತ್ರದಲ್ಲಿ ಅತ್ಯಧಿಕ ಸಂಭಾವನೆಯನ್ನು ಅವರು ಜೇಬಿಗಿಳಿಸಿದ್ದಾರೆ ಎನ್ನಲಾಗಿದೆ. ಅದೇ ರೀತಿ ನಾಯಕಿ ದೀಪಿಕಾ ಪಡುಕೋಣೆ, ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಅಮಿತಾಭ್‌ ಬಚ್ಚನ್‌, ಕಮಲ್‌ ಹಾಸನ್‌ ಅವರಿಗೂ ದುಬಾರಿ ಸಂಭಾವನೆ ನೀಡಲಾಗಿದೆ ಎನ್ನಲಾಗುತ್ತಿದೆ.

ಪ್ರಭಾಸ್‌ಗೆ 80 ಕೋಟಿ ರೂ.!

ʼಕಲ್ಕಿʼ ಚಿತ್ರದ ಭೈರವ ಪಾತ್ರಕ್ಕಾಗಿ ಪ್ರಭಾಸ್‌ ಅತ್ಯಧಿಕ 80 ಕೋಟಿ ರೂ. ಪಡೆದಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಸಾಮಾನ್ಯವಾಗಿ ಪ್ರಭಾಸ್‌ ಚಿತ್ರವೊಂದಕ್ಕೆ 150 ಕೋಟಿ ರೂ. ಚಾರ್ಚ್‌ ಮಾಡುತ್ತಾರಂತೆ. ಆದರೆ ಈ ಸಿನಿಮಾಕ್ಕಾಗಿ ಅವರು ಅದರ ಅರ್ಧ ಸಂಭಾವನೆ ಮಾತ್ರ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಇದರ ಜತೆಗೆ ಸುಮತಿ ಎಂಬ ಗರ್ಭಿಣಿ ಪಾತ್ರ ಮಾಡಿರುವ ದೀಪಿಕಾ ಈ ತೆಲುಗು ಚಿತ್ರಕ್ಕಾಗಿ ಬರೋಬ್ಬರಿ 20 ಕೋಟಿ ರೂ. ಪಡೆದುಕೊಂಡಿದ್ದಾರೆ. ʼಕಲ್ಕಿʼ ಸಿನಿಮಾದಲ್ಲಿ ಅವರ ಪಾತ್ರಕ್ಕೆ ಬಹಳಷ್ಟು ತೂಕ ಇದ್ದು, ಟ್ರೈಲರ್‌ನಲ್ಲೇ ಗಮನ ಸೆಳೆದಿದ್ದರು. ಈ ಚಿತ್ರಕ್ಕಾಗಿ 3 ವರ್ಷ ಮೀಸಲಿಟ್ಟ ದೀಪಿಕಾ ದುಬಾರಿ ಸಂಭಾವನೆ ಜೇಬಿಗಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇವರ ಜತೆಗೆ ಅಶ್ವತ್ಥಾಮನಾಗಿ ಮಿಂಚಿರುವ ಅಮಿತಾಭ್‌ ಬಚ್ಚನ್‌ ಮತ್ತು ಯಾಸ್ಕಿನ್‌ ಪಾತ್ರದಲ್ಲಿ ಮೋಡಿ ಮಾಡುತ್ತಿರುವ ಕಮಲ್‌ ಹಾಸನ್‌ ಅವರಿಗೂ ತಲಾ 20 ಕೋಟಿ ರೂ. ನೀಡಲಾಗಿದೆಯಂತೆ. ಪ್ರಭಾಸ್‌-ದೀಪಿಕಾ ಜತೆಗೆ ಇವರ ಪಾತ್ರವೂ ಗಮನ ಸೆಳೆಯುತ್ತಿದೆ. ಅದಾಗ್ಯೂ ಸಂಭಾವನೆ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಎಲ್ಲಿಯೂ ಮಾಹಿತಿ ಬಹಿರಂಗಪಡಿಸಿಲ್ಲ.

ವೈಜಯಂತಿ ಮೂವೀಸ್‌ ನಿರ್ಮಾಣದ ʼಕಲ್ಕಿ 2898 ಎಡಿʼ ಚಿತ್ರವನ್ನು ಈಗಾಗಲೇ ಪ್ರೇಕ್ಷಕರು ಎರಡೂ ಕೈ ಚಾಚಿ ಸ್ವಾಗತಿಸಿದ್ದಾರೆ. ದೇಶಾದ್ಯಂತ ಈಗಾಗಲೇ 19 ಲಕ್ಷಕ್ಕಿಂತ ಅಧಿಕ ಟಿಕೆಟ್‌ ಮಾರಾಟವಾಗಿದೆ. ಈ ಪೈಕಿ ತೆಲುಗೊಂದರಿಂಲೇ 15 ಲಕ್ಷ ಟಿಕೆಟ್‌ ಬಿಕರಿಯಾಗಿದೆ. ಮೊದಲ ದಿನ ಭಾರತದಲ್ಲಿ 100 ಕೋಟಿ ರೂ.ಗಿಂತ ಅಧಿಕ ಕಲೆಕ್ಷನ್‌ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: Kalki 2898 AD Review: ʼಕಲ್ಕಿʼ ಚಿತ್ರರಂಗದ ಇತಿಹಾಸದಲ್ಲೇ ಮೈಲಿಗಲ್ಲು ಎಂದ ಪ್ರೇಕ್ಷಕರು; ಹೀಗಿದೆ ನೋಡುಗರ ಪ್ರತಿಕ್ರಿಯೆ

Continue Reading

ಸಿನಿಮಾ

Kalki 2898 AD Review: ʼಕಲ್ಕಿʼ ಚಿತ್ರರಂಗದ ಇತಿಹಾಸದಲ್ಲೇ ಮೈಲಿಗಲ್ಲು ಎಂದ ಪ್ರೇಕ್ಷಕರು; ಹೀಗಿದೆ ನೋಡುಗರ ಪ್ರತಿಕ್ರಿಯೆ

Kalki 2898 AD Review: ಈ ವರ್ಷದ ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ಚಿತ್ರ ʼಕಲ್ಕಿ 2898 ಎಡಿʼ ಬೆಟ್ಟದಷ್ಟು ನಿರೀಕ್ಷೆ ಹೊತ್ತು ತೆರೆಗೆ ಬಂದಿದೆ. ಪ್ರಭಾಸ್‌-ದೀಪಿಕಾ ಪಡುಕೋಣೆ-ಅಮಿತಾಭ್‌ ಬಚ್ಚನ್‌ ಮೊದಲ ಬಾರಿಗೆ ತೆರೆ ಹಂಚಿಕೊಂಡ ಈ ಸಿನಿಮಾದ ಮೊದಲ ಶೋಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರ ನೋಡಿದವರು ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿಸುತ್ತಿದ್ದು, ಬಹುತೇಕರು ಇದನ್ನು ಮಾಸ್ಟರ್‌ ಪೀಸ್‌ ಎಂದೇ ಕರೆದಿದ್ದಾರೆ. ವೀಕ್ಷಕರು ಏನಂದ್ರು ಎನ್ನುವ ವಿವರ ಇಲ್ಲಿದೆ.

VISTARANEWS.COM


on

Kalki 2898 AD Review
Koo

ಮುಂಬೈ: ಈ ವರ್ಷದ ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ಚಿತ್ರ ʼಕಲ್ಕಿ 2898 ಎಡಿʼ (Kalki 2898 ADಬೆಟ್ಟದಷ್ಟು ನಿರೀಕ್ಷೆ ಹೊತ್ತು ತೆರೆಗೆ ಬಂದಿದೆ. ಪ್ರಭಾಸ್‌-ದೀಪಿಕಾ ಪಡುಕೋಣೆ-ಅಮಿತಾಭ್‌ ಬಚ್ಚನ್‌ ಮೊದಲ ಬಾರಿಗೆ ತೆರೆ ಹಂಚಿಕೊಂಡ ಈ ಸಿನಿಮಾದ ಮೊದಲ ಶೋಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರ ನೋಡಿದವರು ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿಸುತ್ತಿದ್ದು, ಬಹುತೇಕರು ಇದನ್ನು ಮಾಸ್ಟರ್‌ ಪೀಸ್‌ ಎಂದೇ ಕರೆದಿದ್ದಾರೆ (Kalki 2898 AD Review).

ನಾಗ್‌ ಅಶ್ವಿನ್‌ ನಿರ್ದೇಶನದ ಈ ಸೈನ್ಸ್‌ ಫಿಕ್ಷನ್‌ ಚಿತ್ರಕ್ಕೆ ಪ್ರೇಕ್ಷರು ಫಿದಾ ಆಗಿದ್ದಾರೆ. ಭಾರತೀಯ ಸಿನಿಮಾ ಇತಿಹಾಸದಲ್ಲೇ ಇದೊಂದು ಮೈಲಿಗಲ್ಲು ಎಂದು ಅನೇಕರು ಕೊಂಡಾಡಿದ್ದಾರೆ. ಅಧ್ಬುತ ಕಥೆ ಮತ್ತು ವಿಷುವಲ್ಸ್‌ ನೋಡುಗರ ಗಮನ ಸೆಳೆಯುತ್ತಿದೆ. ಪೌರಾಣಿಕ ಮತ್ತು ಆಧುನಿಕ ಕಾಲಘಟ್ಟದ ಕಥೆಯನ್ನು ಹಿತವಾಗಿ ಬೆರೆಸಿ ತೆರೆ ಮೇಲೆ ಮೂಡಿಸಿರುವ ಈ ವಿಶಿಷ್ಟ ಪ್ರಯತ್ನಕ್ಕೆ ಸೋಷಿಯಲ್‌ ಮೀಡಿಯಾದಲ್ಲಿ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಪ್ರೇಕ್ಷಕರು ಏನಂದ್ರು?

ʼʼಕಲ್ಕಿ 2898 ಎಡಿʼ ಭಾರತೀಯ ಚಿತ್ರರಂಗದಲ್ಲೇ ಅದ್ಭುತ ಸಿನಿಮಾ. ಇದೊಂದು ಮೈಲಿಗಲ್ಲು. ತೆರೆ ಮೇಲೆ ಮೂಡುವ ದೃಶ್ಯಗಳು ಬೇರೊಂದು ಲೋಕಕ್ಕೆ ನಮ್ಮನ್ನು ಕೊಂಡೊಯ್ಯುತ್ತವೆ. ತೆರೆ ಮೇಲೆ ಏನೆಲ್ಲ ಮ್ಯಾಜಿಕ್‌ ಮಾಡಲು ಸಾಧ್ಯವೋ ಅದನ್ನೆಲ್ಲ ಮಾಡಿದ್ದಾರೆʼʼ ಎಂದು ಒಬ್ಬರು ಬರೆದುಕೊಂಡಿದ್ದಾರೆ. ʼʼಬ್ಲ್ಯಾಕ್‌ ಬಸ್ಟರ್‌. ಫಸ್ಟ್‌ ಆಫ್‌ ಸ್ವಲ್ಪ ನಿಧಾನವಾಗಿ ಸಾಗುತ್ತದೆ. ಇಂಟರ್‌ವೆಲ್‌ ಸೀನ್‌ ಅದ್ಭುತ. ಸೆಕೆಂಡ್‌ ಆಫ್‌ ಚಿಂದಿ. ಅದರಲ್ಲಿಯೂ ಕ್ಲೈಮಾಕ್ಸ್‌ನ ಕೊನೆಯ 10 – 15 ಮರೆಯಲು ಸಾಧ್ಯವೇ ಇಲ್ಲʼʼ ಎಂದು ಇನ್ನೊಬ್ಬರು ತಿಳಿಸಿದ್ದಾರೆ.

ʼʼಅಮಿತಾಭ್‌ ಬಚ್ಚನ್‌ ಮತ್ತು ಪ್ರಭಾಸ್‌ ಗಮನ ಸೆಳೆಯುತ್ತಾರೆ. ಸೆಕೆಂಡ್‌ ಆಫ್‌ ಹಾಲಿವುಡ್‌ ಚಿತ್ರಗಳ ಮಾದರಿಯಲ್ಲಿ ಮೂಡಿ ಬಂದಿದೆ. ಈ ಸೈನ್ಸ್‌ ಫಿಕ್ಷನ್‌ ಮಹಾಭಾರತದ ಕಥೆಯನ್ನು ಒಳಗೊಂಡಿದ್ದು, ಪ್ರತಿಯೊಬ್ಬರೂ ತಪ್ಪದೇ ನೋಡಬೇಕುʼʼ ಎಂದು ವೀಕ್ಷಕರೊಬ್ಬರು ಸಲಹೆ ನೀಡಿದ್ದಾರೆ.

ಸಿನಿಮಾದ ಕಥೆ, ವಿಷುವಲ್ಸ್‌, ಅಭಿನಯಕ್ಕೆ ಪೂರ್ಣಾಂಕ ನೀಡಿದ ಪ್ರೇಕ್ಷಕರು ನಿರ್ದೇಶಕ ನಾಗ್‌ ಅಶ್ವಿನ್‌ ಅವರಿಗೆ ಸೆಲ್ಯೂಟ್‌ ಹೊಡೆದಿದ್ದಾರೆ. ʼʼತಂಡದ ಪ್ರತಿಯೊಬ್ಬರೂ ಅದ್ಭುತ ಕೆಲಸ ಮಾಡಿದ್ದಾರೆ. ಅದರಲ್ಲಿಯೂ ನಿರ್ದೇಶಕ ನಾಗ್‌ ಅಶ್ವಿನ್‌ ಅವರ ಕಾರ್ಯವಂತೂ ಇನ್ನು ಒಂದು ಹೆಜ್ಜೆ ಮುಂದೆ. ಪೌರಾಣಿ ಕತೆ ಮತ್ತು ವಿಜ್ಞಾನವನ್ನು ಹದವಾಗಿ ಬೆರೆಸಿ ಮ್ಯಾಜಿಕ್‌ ಸೃಷ್ಟಿಸಿದ್ದಾರೆ. ಎರಡನೇ ಭಾಗಕ್ಕಾಗಿ ಕಾಯುತ್ತಿದ್ದೇವೆʼʼ ಎಂದು ನೋಡುಗರೊಬ್ಬರು ಬರೆದಿದ್ದಾರೆ.

ಅಭಿನಯಕ್ಕೆ ಮೆಚ್ಚುಗೆ

ವಿಷುವಲ್ಸ್‌, ನಿರ್ದೇಶನ, ಕಥೆಯ ಜತೆಗೆ ಕಲಾವಿದರ ಅಭಿನಯಕ್ಕೂ ಪ್ರೇಕ್ಷಕರು ಜೈ ಎಂದಿದ್ದಾರೆ. ಅದರಲ್ಲಿಯೂ ಅಮಿತಾಭ್‌, ಪ್ರಭಾಸ್‌, ದೀಪಿಕಾ, ಕಮಲ್‌ ಹಾಸನ್‌ ಅವರ ನಟನೆ ಎಲ್ಲರ ಗಮನ ಸೆಳೆದಿದೆ. ʼʼಅಮಿತಾಭ್‌ ಫಸ್ಟ್‌ ಹಾಫ್‌ನಲ್ಲಿ ಮಿಂಚಿದರೆ ಸೆಕೆಂಡ್‌ ಆಪ್‌ನಲ್ಲಿ ಪ್ರಭಾಸ್‌ ಮತ್ತು ದೀಪಿಕಾ ಗಮನ ಸೆಳೆಯುತ್ತಾರೆ. ಕೆಲವೇ ನಿಮಿಷಗಳಲ್ಲಿ ಬಂದು ಹೋಗುವ ವಿಲನ್‌ ಕಮಲ್‌ ಹಾಸನ್‌ ಅಬಿನಯವೂ ಗಮನ ಸೆಳೆಯುತ್ತದೆʼʼ ಎಂದು ಒಬ್ಬರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಅಶ್ವತ್ಥಾಮನಾಗಿ ಅಮಿತಾಭ್‌, ಗರ್ಭಿಣಿ ದೀಪಿಕಾ, ಪ್ರಭಾಸ್‌ ಕಲ್ಕಿಯನ್ನು ಎತ್ತಿಕೊಂಡಿರುವ ದೃಶೃವನ್ನಂತೂ ಮರೆಯಲು ಸಾಧ್ಯವೇ ಇಲ್ಲ ಎಂದು ಇನ್ನೊಬ್ಬರು ಹೇಳಿದ್ದು, ಸಿನಿಮಾ ಬಗ್ಗೆ ಇನ್ನಷ್ಟು ಕುತೂಹಲ ಮೂಡಿಸಿದ್ದಾರೆ.

ಇನ್ನು ಕೆಲವರಿಗೆ ಕಲ್ಕಿ ಸಿನಿಮಾ ಇಷ್ಟವಾಗಿದ್ದರೂ ಅದರಲ್ಲಿನ ಕೆಲವೊಂದು ಅಂಶಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಸಿನಿಮಾ, ನಿರ್ದೇಶನ, ಅಭಿನಯ, ವಿಷುವಲ್ಸ್‌ ಎಲ್ಲವೂ ಚೆನ್ನಾಗಿದೆ. ಆದರೆ ಕಥೆ ತುಂಬ ನಿಧಾನವಾಗಿ ಸಾಗುತ್ತದೆ ಎಂದು ಒಬ್ಬರು ಹೇಳಿದರೆ ಇನ್ನೊಬ್ಬರು ಸಂಗೀತ ಅಷ್ಟೇನೂ ಗಮನ ಸೆಳೆಯುವುದಿಲ್ಲ ಎಂದಿದ್ದಾರೆ. ಮತ್ತೊಬ್ಬರು ಚಿತ್ರ ಚೆನ್ನಾಗಿದೆ. ಆದರೆ ಪದೇ ಪದೆ ನೋಡುವಷ್ಟಿಲ್ಲ. ಒಮ್ಮೆ ಮಾತ್ರ ನೋಡಬಹುದು ಎಂದಿದ್ದಾರೆ. ಒಟ್ಟಿನಲ್ಲಿ ಬಹುಭಾಷೆಯಲ್ಲಿ ತೆರೆಕಂಡ ಸಿನಿಮಾ ಗಮನ ಸೆಳೆದಿರುವುದಂತು ಸತ್ಯ.

ಇದನ್ನೂ ಓದಿ: Rishab Shetty: ಕುಂದಾಪುರಕ್ಕೆ ಆಗಮಿಸಿದ ʼಕಲ್ಕಿʼಯ ಬುಜ್ಜಿ; ಪ್ರಭಾಸ್‌ ಕಾರು ರೈಡ್‌ ಮಾಡಿದ ರಿಷಬ್‌ ಶೆಟ್ಟಿ ಹೇಳಿದ್ದೇನು?

Continue Reading

ಕರ್ನಾಟಕ

Vijayalakshmi Darshan: ಜೈಲಲ್ಲಿ ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ; ಇಲ್ಲಿದೆ ಪೋಸ್ಟ್!

Vijayalakshmi Darshan: ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್‌ ಅವರನ್ನು ಭೇಟಿ ಮಾಡಿಕೊಂಡು ಬಂದ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮೀ ಅವರು ಪೋಸ್ಟ್‌ ಮಾಡಿದ್ದಾರೆ. ಅಭಿಮಾನಿಗಳು ಶಾಂತಿಯಿಂದ ವರ್ತಿಸಬೇಕು. ನಮಗೆ ನ್ಯಾಯ ಸಿಗಲಿದೆ ಎಂದು ಹೇಳುವ ಮೂಲಕ ಅವರು ಅಭಿಮಾನಿಗಳ ದುಃಖ, ಬೇಸರವನ್ನು ತಣಿಸುವ ಪ್ರಯತ್ನ ಮಾಡಿದ್ದಾರೆ.

VISTARANEWS.COM


on

Vijayalakshmi Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ್‌ (Actor Darshan) ಬಂಧಿತನಾಗಿ, ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಜೈಲಿನಲ್ಲಿರುವ ಪತಿಯನ್ನು ಭೇಟಿಯಾಗಿ ಬಂದಿರುವ ಪತ್ನಿ ವಿಜಯಲಕ್ಷ್ಮೀ (Vijayalakshmi Darshan) ಅವರು ಇನ್‌ಸ್ಟಾಗ್ರಾಂ ಪೋಸ್ಟ್‌ ಮೂಲಕ ನಟನ ಅಭಿಮಾನಿಗಳಿಗೆ ದೊಡ್ಡ ಸಂದೇಶವೊಂದನ್ನು ರವಾನಿಸಿದ್ದಾರೆ. “ಅಭಿಮಾನಿಗಳು ಶಾಂತಿಯಿಂದ ಇರಬೇಕು” ಎಂಬುದಾಗಿ ಅವರು ಪೋಸ್ಟ್‌ ಮೂಲಕ ಮನವಿ ಮಾಡಿದ್ದಾರೆ.

ವಿಜಯಲಕ್ಷ್ಮೀ ಪೋಸ್ಟ್‌ ಹೀಗಿದೆ…

” ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ” ಎಂಬುದಾಗಿ ವಿಜಯಲಕ್ಷ್ಮೀ ದರ್ಶನ್‌ ಪೋಸ್ಟ್‌ ಮಾಡಿದ್ದಾರೆ.

“ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ” ಎಂದು ಅವರು ಹೇಳಿದ್ದಾರೆ. ಇದಕ್ಕೆ ದರ್ಶನ್‌ ಅವರ ನೂರಾರು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿಗೆ ಸೋಮವಾರ (ಜೂನ್‌ 24) ದರ್ಶನ್ ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್ ಕಪ್ಪು ಬಣ್ಣದ ಕಿಯಾ ಕಾರಿನಲ್ಲಿ ಆಗಮಿಸಿದ್ದರು. ಮೊದಲು ಜೈಲಿನ ಚೆಕ್ ಪೋಸ್ಟ್ ಸಮೀಪ ಕಾರು ನಿಲ್ಲಿಸಲಾಗಿತ್ತು. ಆಗ ಮಾಧ್ಯಮಗಳ ಕ್ಯಾಮೆರಾ ಕಂಡು ವಿಜಯಲಕ್ಷ್ಮಿ, ವಿನೀಶ್ ವಾಪಸ್ ತೆರಳಿದರು. ನಂತರ ಬೇರೊಂದು ಕಾರಿನಲ್ಲಿ ಜೈಲಿನ ಬಳಿ ಬಂದರು. ಆಗ ಮಾಧ್ಯಮಗಳ ಕಣ್ತಪ್ಪಿಸಿ ಜೈಲಿನ ಒಳಗೆ ದರ್ಶನ್‌ ಪತ್ನಿ, ಪುತ್ರನನ್ನು ಪೊಲೀಸರು ಕರೆದೊಯ್ದಿದ್ದರು.‌ ದರ್ಶನ್‌ ಭೇಟಿ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮೀ ಅವರು ಪೋಸ್ಟ್‌ ಮಾಡಿದ್ದಾರೆ.

ದರ್ಶನ್‌ ಪತ್ನಿ, ಪುತ್ರ ಭೇಟಿ ಮಾಡಿ ಹೊರಟ ಬಳಿಕ, ನಟ ವಿನೋದ್ ಪ್ರಭಾಕರ್ ಅವರು ಸ್ನೇಹಿತರ ಜತೆ ತೆರಳಿ ದರ್ಶನ್ ಅವರನ್ನು ಭೇಟಿ ಮಾಡಿ ನಿರ್ಗಮಿಸಿದರು. ನಂತರ ಮಾತನಾಡಿದ ವಿನೋದ್ ಪ್ರಭಾಕರ್ ಅವರು, ಮೃತ ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿ ಭಗವಂತ ನೀಡಲಿ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದರು.

ಇದನ್ನೂ ಓದಿ: Actor Darshan: `ದರ್ಶನ್‌’ ಫುಲ್‌ ಟೈಟ್‌ ಆದಾಗಲೇ ಅಗ್ರೆಸಿವ್‌ ಆಗೋದು‌ ಎಂದ ಭಾವನಾ ಬೆಳಗೆರೆ!

Continue Reading
Advertisement
IND vs ENG
ಕ್ರೀಡೆ9 mins ago

IND vs ENG: ಹೈವೋಲ್ಟೇಜ್ ಸೆಮಿ ಕಾದಾಟಕ್ಕೆ ಕ್ಷಣಗಣನೆ; ಸೇಡು ತೀರಿಸಲು ರೋಹಿತ್​ ಪಡೆ ಸಜ್ಜು

Parliament Sessions
ದೇಶ21 mins ago

Parliament Sessions: ಸೆಂಗೋಲ್‌ ಮೇಲೆ ಪ್ರತಿಪಕ್ಷಗಳ ಕಣ್ಣು; ಸಂಸತ್‌ನಲ್ಲಿ ಭಾರೀ ಕೋಲಾಹಲ

Bengaluru Metro
Latest22 mins ago

Bengaluru Metro: ಸರ್ಜಾಪುರ-ಹೆಬ್ಬಾಳದ 3ಎ ಮೆಟ್ರೋ ಮಾರ್ಗ ಯಾವಾಗ ಪೂರ್ಣ?

Nitin Gadkari
ಪ್ರಮುಖ ಸುದ್ದಿ26 mins ago

Nitin Gadkari : ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ

IND vs ENG Semi Final
ಕ್ರೀಡೆ43 mins ago

IND vs ENG Semi Final: ಮೀಸಲು ದಿನ ಇರದ ಭಾರತ-ಇಂಗ್ಲೆಂಡ್​ ಸೆಮಿ ಪಂದ್ಯದ ಮಳೆ ನಿಯಮ ಹೇಗಿದೆ?

Droupadi Murmu
ದೇಶ54 mins ago

Droupadi Murmu: ನೀಟ್‌ ಅಕ್ರಮ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು

Fazalhaq Farooqi
ಕ್ರೀಡೆ55 mins ago

Fazalhaq Farooqi : ವಿಶ್ವ ಕಪ್​ 2024ರಲ್ಲಿ ಹೊಸ ದಾಖಲೆ ಬರೆದ ಆಪ್ಘನ್ ಬೌಲರ್​ ಫಜಲ್ಹಾಕ್​ ಫಾರೂಕಿ

Vande Bharath Train
Latest58 mins ago

Vande Bharath Train: ಬೆಂಗಳೂರು-ಮಧುರೈ ʼವಂದೇ ಭಾರತ್ʼ ರೈಲು ಜುಲೈನಿಂದ ಆರಂಭ

Actor Darshan
ಸಿನಿಮಾ1 hour ago

Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

cm siddaramaiah price hikes
ಕರ್ನಾಟಕ2 hours ago

CM Siddaramaiah: ₹2000 ಕೊಟ್ಟು ₹4740 ಕಿತ್ತುಕೊಳ್ಳುತ್ತಿರುವ ರಾಜ್ಯ ಸರಕಾರ! ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿರುವುದರ ಲೆಕ್ಕ ಇಲ್ಲಿದೆ ನೋಡಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rains Effected
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ7 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 weeks ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 weeks ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

ಟ್ರೆಂಡಿಂಗ್‌