Karnataka Rain : ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಸಾವು - Vistara News

ಬೆಳಗಾವಿ

Karnataka Rain : ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಸಾವು

Karnataka Rain : ನಿನ್ನೆ ಭಾನುವಾರ ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಯುವಕರ್ನೊವ ದಾರುಣವಾಗಿ ಮೃತಪಟ್ಟಿದ್ದ. ಘಟನೆಯಲ್ಲಿ ಮತ್ತಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದರು. ಆದರೆ ಸೋಮವಾರದಂದು ಗಾಯಾಳು ಒಬ್ಬ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

VISTARANEWS.COM


on

karnataka Rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಮರ ಬಿದ್ದು (Tree fall) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಯುವಕ ಮೃತಪಟ್ಟಿದ್ದಾನೆ. ಬೆಳಗಾವಿ (Belgavi News) ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ವಿಠ್ಠಲ ತಳವಾರ ಮೃತ ದುರ್ದೈವಿ.

ಸೋಮನಾಥ್ ಮುಚ್ಚಂಡಿಕರ್, ವಿಠ್ಠಲ್ ತಳವಾರ್, ಸ್ವಪ್ನಿಲ್ ದೇಸಾಯಿ ಈ ಮೂವರು ಯುವಕರು ಬೈಕ್‌ನಲ್ಲಿ ಬೆಳಗಾವಿಗೆ ಬರುತ್ತಿದ್ದರು. ಇದೇ ವೇಳೆ ಭಾರಿ ಮಳೆ ಬರುತ್ತಿತ್ತು. ಮಳೆಯಲ್ಲೇ ಬೈಕ್‌ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಏಕಾಏಕಿ ಬೃಹತ್‌ ಗಾತ್ರದ ಮರವೊಂದು ಬುಡ ಸಮೇತ ಧರೆಗುರುಳಿ ಬೈಕ್‌ ಮೇಲೆ ಬಿದ್ದಿತ್ತು.

ಮರ ಬಿದ್ದ ರಭಸಕ್ಕೆ ಸೋಮನಾಥ್ ಮುಚ್ಚಂಡಿಕರ್‌ನ ಕರುಳು ಹೊರಗೆ ಬಂದಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದ. ಗಂಭೀರ ಗಾಯಗೊಂಡಿದ್ದ ವಿಠ್ಠಲ್ ತಳವಾರ್, ಸ್ವಪ್ನಿಲ್ ದೇಸಾಯಿ ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವಿಠ್ಠಲ್‌ ತಳವಾರ್‌ ತಲೆಗೂ ಗಂಭೀರ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿತ್ತು. ಸಾವು ಬದುಕಿನ ನಡುವೆ ಹೋರಾಡಿದ ವಿಠ್ಠಲ್‌ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾನೆ.

ಸದ್ಯ ಘಟನೆಯಲ್ಲಿ ಗಂಭೀರ ಗಾಯಗೊಂಡು ಸ್ವಪ್ನಿಲ್ ದೇಸಾಯಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ

ಈ ಜಿಲ್ಲೆಗಳಲ್ಲಿ ವೇಗವಾಗಿ ಬೀಸುತ್ತೆ ಗಾಳಿ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 55-65 ಕಿ.ಮೀ ಇರಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಹಾವೇರಿ, ಕೊಪ್ಪಳ, ವಿಜಯಪುರ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಈ ಭಾಗದಲ್ಲಿ ಮಳೆ ಜತೆಗೆ ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್ 10 ರಿಂದ 12 ರವರೆಗೆ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕಬಳ್ಳಾಪುರ

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Dead Body Found : ಗ್ರಾಮದ ಹೊರವಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತನ ಮೃತದೇಹ ಪತ್ತೆಯಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Koo

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ (Dead Body Found) ಪತ್ತೆಯಾಗಿದೆ. ಮೃತನ ಕೈ ಮೇಲೆ ಲಕ್ಷ್ಮಿ ಎಂಬ ಹಚ್ಚೆ ಗುರುತು ಪತ್ತೆಯಾಗಿದೆ.

ಪ್ರೀತಿ-ಪ್ರೇಮ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಮರಕ್ಕೆ ನೇತು ಹಾಕಿ ಹೋಗಿರುವ ಅನುಮಾನವಿದೆ. ಮರದಲ್ಲಿ ನೇತಾಡುತ್ತಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗೌರಿಬಿದನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರದಲ್ಲಿದ್ದ ಮೃತದೇಹವನ್ನು ಕೆಳಗಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತನ ಗುರುತು ಪತ್ತೆಯಾಗಿಲ್ಲ. ಸದ್ಯ ಪೊಲೀಸರು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

ನೀರಿನಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ

ಈಜಲು ತೆರಳಿದ್ದ ಯುವಕ ನೀರು ಪಾಲಾಗಿದ್ದ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಹೇರೂರು ಗ್ರಾಮದ ಹಾರಂಗಿ ಹಿನ್ನೀರಿನಲ್ಲಿ ನಿನ್ನೆ ಭಾನುವಾರ ಅವಘಡ ನಡೆದಿತ್ತು. ನೀರಿನಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಸೋಮವಾರ ಪತ್ತೆಯಾಗಿದೆ. ಮೈಸೂರು ಮೂಲದ ಶಶಿ (30) ಮೃತ ದುರ್ದೈವಿ. ಶಶಿ ತನ್ನ 15 ಮಂದಿ ಸ್ನೇಹಿತರೊಟ್ಟಿಗೆ ಮೈಸೂರಿನಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಶಶಿ ಈಜಲು ಹೋಗಿ ನೀರುಪಾಲಾಗಿದ್ದ, ಇದೀಗ ಆತನ ಮೃತದೇಹವ ಸಿಕ್ಕಿದ್ದು, ಕುಶಾಲನಗರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೀರಲ್ಲಿ ಕೊಚ್ಚಿ ಹೋದವರಿಗಾಗಿ ಹುಡುಕಾಟ

ಇತ್ತ ನಿನ್ನೆ ಭಾನುವಾರ ಮಹಾರಾಷ್ಟ್ರದ ಲೋನಾವಲಾ ಬಳಿ ದಿಢೀರ್ ಪ್ರವಾಹಕ್ಕೆ ನೋಡನೋಡುತ್ತಿದ್ದಂತೆ ಐವರು ಕೊಚ್ಚಿ ಹೋಗಿದ್ದರು. ಪುಣೆಯ ಅನ್ಸಾರಿ ಕುಟುಂಬದ ನಾಲ್ವರು ಮಕ್ಕಳು ಸೇರಿ ಓರ್ವ ‌ಮಹಿಳೆ‌ ನೀರುಪಾಲಾಗಿದ್ದರು. ನಿರಂತರ ಕಾರ್ಯಾಚರಣೆ ನಡೆಸಿದ ಎನ್‌ಆರ್‌ಎಫ್‌ ತಂಡ ಮೂವರ ಶವ ಹೊರ ತೆಗೆದಿತ್ತು. ನೀರಲ್ಲಿ ಕಣ್ಮರೆಯಾಗಿರುವ ಇನ್ನಿಬ್ಬರಿಗಾಗಿ ನಿರಂತರ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳದಲ್ಲಿಯೇ ಪೊಲೀಸರು ಹಾಗೂ ಅಗ್ನಿಶಾಮಕ ದಳ ಬೀಡು ಬಿಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ; ಕರಾವಳಿ-ಮಲೆನಾಡಿಗೆ ಎಚ್ಚರಿಕೆ

Karnataka Weather Forecast : ಗುಡುಗು ಸಹಿತ ಗಾಳಿಯೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಹೀಗಾಗಿ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (karnataka Weather Forecast) ನೀಡಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಇನ್ನೂ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಲ್ಲೂ ಗುಡುಗು ಮಳೆ

ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ 30 ಮತ್ತು 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಜಿಲ್ಲೆಗಳಿಗೆ ಅಲರ್ಟ್‌

ಜು.1ರಂದು ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Kidnap case : ಕೋಟಿ ಆಸೆಗೆ ಸಿನಿಮಾ ಸ್ಟೈಲ್‌ನಲ್ಲಿ ಸ್ಟಾಕ್‌ ಮಾರ್ಕೆಟ್‌ ವಂಚಕನ ಕಿಡ್ನ್ಯಾಪ್‌

ಜು.1ರಿಂದ ಕೊಡಗಿಗೆ ಭಾರಿ ವಾಹನಗಳ ಓಡಾಟ ನಿಷೇಧ

ಕೊಡಗು: ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯ ಎಫೆಕ್ಟ್‌ನಿಂದಾಗಿ (Rain Effect), ಜಿಲ್ಲೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ. ಕೊಡಗು ಡಿಸಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಜುಲೈ 1 ರಿಂದ ಜುಲೈ 30ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳ ಪೂರೈಕೆ ಹಾಗೂ ಸಾರ್ವಜನಿಕ ಪ್ರಯಾಣಿಕರ ವಾಹನಗಳಿಲ್ಲ ಯಾವುದೇ ನಿರ್ಬಂಧ ಇಲ್ಲ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭಾರಿ ಗಾತ್ರದ ವಾಹನಗಳು ಹೆಚ್ಚು ಸಂಚರಿಸುತ್ತಿದ್ದವು. ಆದರೆ ಗುಡ್ಡದ ಬದಿಯಿಂದ ಮಣ್ಣು ಕುಸಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ ಹಾಕಲಾಗಿದೆ.

ಯಾವೆಲ್ಲ ವಾಹನಗಳಿಗೆ ನಿರ್ಬಂಧ?

ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್(ಮಲ್ಟಿ ಆಕ್ಸಿಲ್), ಆರ್ಟಿಕ್ಯೂಲೇಟೆಡ್ ವಾಹನಗಳು ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಬಂಧಿಸಲಾಗಿದೆ.

ಈ ವಾಹನಗಳಿಗೆ ವಿನಾಯಿತಿ

ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳಿಗೆ (ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಆದೇಶ ಮೀರಿದರೆ ದಂಡ ಪ್ರಯೋಗ

ಈ ಕುರಿತು ಸೂಚನಾ ಫಲಕಗಳನ್ನು ಅಳವಡಿಸಲು ಸೂಚಿಸಲಾಗಿದೆ. ಜತೆಗೆ ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸುವಂತೆ ತಿಳಿಸಲಾಗಿದೆ. ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಪೊಲೀಸ್ ಹಾಗೂ ಸಾರಿಗೆ ಇಲಾಖೆಗೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Karnataka Weather Forecast : ಭಾನುವಾರ ಬೆಂಗಳೂರು, ಕಲಬುರಗಿ, ಕೊಪ್ಪಳ ಸೇರಿದಂತೆ ಹಲವೆಡೆ ಮಳೆಯಾಗಿದೆ. ಕೊಡಗಿನಲ್ಲಿ ಮಳೆ ಎಫೆಕ್ಟ್‌ನಿಂದಾಗಿ (Rain News) ಭಾರಿ ಗಾತ್ರದ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಮೋಡ ಕವಿದ ವಾತಾವರಣ (Karnataka Weather Forecast) ಇತ್ತು. ಮಧ್ಯಾಹ್ನದ ಹೊತ್ತು ಕೆಲವೊಮ್ಮೆ ಜಿಟಿ ಜಿಟಿ ಮಳೆಯ (Rain News) ಸಿಂಚನವಾಗುತ್ತಿತ್ತು. ಭಾನುವಾರ ಗಾಳಿಯೊಂದಿಗೆ ಮಳೆಯಾಗಿದೆ. ಮೆಜೆಸ್ಟಿಕ್, ಕೆಆರ್‌ವೃತ್ತ, ಕಾರ್ಪೋರೇಶನ್ ಸರ್ಕಲ್‌, ಕೆಆರ್‌ ಮಾರ್ಕೆಟ್, ಶೇಷಾದ್ರಿಪುರಂ, ಗಾಂಧಿನಗರ, ಶಿವಾಜಿನಗರ. ವಿಧಾನಸೌಧ ಸುತ್ತಮುತ್ತ ಮಳೆಯಾಗಿದೆ. ಇತ್ತ ದಿಢೀರ್‌ ಬಂದ ಮಳೆಗೆ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸಮಸ್ಯೆಯುಂಟಾಯಿತು.

ಇತ್ತ ಕಲಬುರಗಿಯಲ್ಲಿ ಭಾನುವಾರ ವರುಣನ ಆರ್ಭಟ ಜೋರಾಗಿತ್ತು. ಒಂದು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದು,ಜನ ಜೀವನ ಅಸ್ತವ್ಯಸ್ತವಾಗಿತ್ತು. ಕೊಪ್ಪಳದಲ್ಲೂ ಕಳೆದ ಒಂದು ವಾರ ಬಿಡುವು ನೀಡಿದ್ದ ಮಳೆರಾಯ ಭಾನುವಾರ ಅಬ್ಬರಿಸಿದ್ದ. ಕೊಪ್ಪಳ ತಾಲೂಕಿನ‌ ಹಿರೇಸಿಂದೋಗಿ ಸುತ್ತಮುತ್ತ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ: Kidnap case : ಕೋಟಿ ಆಸೆಗೆ ಸಿನಿಮಾ ಸ್ಟೈಲ್‌ನಲ್ಲಿ ಸ್ಟಾಕ್‌ ಮಾರ್ಕೆಟ್‌ ವಂಚಕನ ಕಿಡ್ನ್ಯಾಪ್‌

ಭಾರಿ ಮಳೆ ಎಫೆಕ್ಟ್‌ ರಾ.ಹೆ 275ರಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ

ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯ ಎಫೆಕ್ಟ್‌ನಿಂದಾಗಿ, ಜಿಲ್ಲೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ. ಕೊಡಗು ಡಿಸಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ಜುಲೈ 1ರಿಂದ ಜುಲೈ 30ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳ ಪೂರೈಕೆ ಹಾಗೂ ಸಾರ್ವಜನಿಕ ಪ್ರಯಾಣಿಕರ ವಾಹನಗಳಿಲ್ಲ ಯಾವುದೇ ನಿರ್ಬಂಧ ಇಲ್ಲ. ಗುಡ್ಡದ ಬದಿಯಿಂದ ಮಣ್ಣು ಕುಸಿತಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ ಹಾಕಲಾಗಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭಾರಿ ಗಾತ್ರದ ವಾಹನಗಳು ಹೆಚ್ಚು ಸಂಚರಿಸುತ್ತಿದ್ದವು.

ಭೋರ್ಗರೆದ ಧನುಷ್ ಕೋಟಿ ಜಲಪಾತ

ಮೈಸೂರಿನ ಕಾವೇರಿ ಕೊಳ್ಳದಲ್ಲಿ ಭರ್ಜರಿ ಮಳೆ ಹಿನ್ನೆಲೆಯಲ್ಲಿ ಧನುಷ್ ಕೋಟಿ ಜಲಪಾತ ಭೋರ್ಗರೆದಿದೆ. ಮೈಸೂರಿನ ಕೆಆರ್ ನಗರದ ಚುಂಚನಕಟ್ಟೆ ಬಳಿ ಇರುವ ಧನುಷ್ಕೋಟಿ ಜಲಪಾತಕ್ಕೆ ಪ್ರವಾಸಿಗರ ಕೈಬೀಸಿ ಕರೆಯುತ್ತಿದೆ.

ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಳ

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಕೃಷ್ಣಾ ನದಿಯ ಒಳಹರಿವು ಹೆಚ್ಚಳಗೊಂಡಿದೆ. ಚಿಕ್ಕೋಡಿ ತಾಲೂಕಿನ ಮಾಂಜರಿ, ಬಾವನಸೌದತ್ತಿ ಸಂಪರ್ಕಿಸುವ ಹಳೆ ಸೇತುವೆ ಜಲಾವೃತಗೊಂಡಿದೆ.

ಕರಾವಳಿಗೆ ಭಾರಿ ಮಳೆ ಮುನ್ಸೂಚನೆ

ಜುಲೈ 1ರಂದು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ವೇಗವು 30-40 ಕಿ.ಮೀ ತಲುಪುವ ಸಾಧ್ಯತೆಯಿದೆ ಹಾಗೂ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಾಳಿ ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಧ್ಯಮ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Road Accident : ಬೈಕ್‌ಗೆ ಟಾಟಾ ಏಸ್‌ ಡಿಕ್ಕಿ; ಮಗನ ಕಣ್ಣೆದುರೇ ತಾಯಿ ಸಾವು

Road Accident : ಬೈಕ್‌ಗೆ ಟಾಟಾ ಏಸ್‌ ಡಿಕ್ಕಿ ಹೊಡೆದಿದ್ದು, ಮಗನ ಕಣ್ಣೆದುರೇ ತಾಯಿ ಮೃತಪಟ್ಟಿದ್ದಾರೆ. ಅಪಘಾತ ಮಾಡಿ ಚಾಲಕ ನಾಪತ್ತೆಯಾಗಿದ್ದಾನೆ.

VISTARANEWS.COM


on

By

Road Accident
Koo

ಬೆಳಗಾವಿ: ಬೈಕ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದ (Road Accident) ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಿಣಿ ಟೋಲ್ ಬಳಿ ಘಟನೆ ನಡೆದಿದೆ. ನಿಪ್ಪಾಣಿ ಮಾಹಾಲಿಂಗಪುರ ರಾಜ್ಯ ಹೆದ್ದಾರಿಯಲ್ಲಿ ಟಾಟಾ ಏಸ್ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ, ಯುವಕನೊಬ್ಬ ಗಂಭೀರ ಗಾಯಗೊಂಡಿದ್ದಾರೆ.

ಅಪಘಾತವಾಗುತ್ತಿದ್ದಂತೆ ಚಾಲಕ ಟಾಟಾ ಏಸ್ ವಾಹನದೊಂದಿಗೆ ಪರಾರಿ ಆಗಿದ್ದಾನೆ. ಅಪಘಾತದಲ್ಲಿ ಮಹಾದೇವಿ ಶಿರಗುಪ್ಪಿ (೫೪) ಮೃತಪಟ್ಟರೆ, ಮಗ ಮಹಾಂತೇಶ ಶಿರಗುಪ್ಪಿ (೨೯) ಗಂಭೀರ ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ವಾಹನ ವಿಡಿಯೊ ಆಧರಿಸಿದ ಚಿಕ್ಕೋಡಿ ಪೊಲೀಸರು ವಾಹನಕ್ಕೆ ಹುಡುಕಾಟ ನಡೆಸಿದ್ದಾರೆ. ತಾಯಿ ಮಗ ಬೈಕ್‌ನಲ್ಲಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಚಿಕ್ಕೋಡಿ ಸಿಪಿಐ ಮತ್ತು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿ ಆಗಿರುವ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Bike Wheeling: ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಜತೆಗೆ ಯುವತಿಗೆ ಕೀಟಲೆ ಮಾಡಿದ ಪುಂಡರು

ಮೈಸೂರಿನಲ್ಲಿ ತಿರುವಿನಲ್ಲಿ ಕಂದಕಕ್ಕೆ ಉರುಳಿದ ಬಸ್‌

ಮೈಸೂರು: ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು ಸಾರಿಗೆ ಬಸ್‌ವೊಂದು ಕಂದಕಕ್ಕೆ (Road Accident ) ಉರುಳಿದೆ. ಚಾಲಕ ಸೇರಿ ಮೂವರು ಗಂಭೀರ ಗಾಯಗೊಂಡಿದ್ದು, ಉಳಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನ ನಂಜನಗೂಡಿನ ತಾಲೂಕಿನ ಮರಡಿಹುಂಡಿ ಗ್ರಾಮದ ಸಮೀಪ ಅಪಘಾತ ನಡೆದಿದೆ.

ಬಿಳುಗಲಿ ಗ್ರಾಮದಿಂದ ಎಸ್.ಹೊಸಕೋಟೆ ಮಾರ್ಗವಾಗಿ ಬಸ್‌ ಮೈಸೂರಿಗೆ ತೆರಳುತ್ತಿತ್ತು. ವೇಗವಾಗಿ ಬಂದು ತಿರುವು ಪಡೆದುಕೊಳ್ಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಸ್ ಪಲ್ಟಿ ಹೊಡೆದಿದೆ. ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ವರುಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಂದಕ್ಕೆ ಬಿದ್ದ ಬಸ್‌ ಅನ್ನು ತೆರವು ಮಾಡಲಾಗಿದೆ.

ಡಿವೈಡರ್‌ಗೆ ಕಾರು ಡಿಕ್ಕಿ ಇಬ್ಬರು ಸಾವು

ವಿಜಯನಗರ: ಕೂಡ್ಲಿಗಿಯ ಎನ್‌ಎಚ್‌ 50 (NH 50) ರಸ್ತೆ ಮೃತ್ಯಕೂಪವಾಗಿ ಪರಿಣಮಿಸುತ್ತಿದೆ. ಈ ರಸ್ತೆ ಪದೇ ಪದೆ ಅಪಘಾತಗಳಿಂದ ಸದ್ದು ಮಾಡುತ್ತಿದೆ. ಇದೀಗ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ (Road Accident).

ಇತ್ತೀಚೆಗೆ ಕೂಡ್ಲಿಗಿಯ ಎನ್‌ಎಚ್‌ 50ರಲ್ಲಿ ಟಿಟಿ ಟ್ರಾವೆಲರ್‌ ಅಪಘಾತವಾಗಿ ಓರ್ವ ಮೃತಪಟ್ಟಿದ್ದರು. ಅದು ಮಾಸುವ ಮುನ್ನ ಈಗ ಮತ್ತೆ ಅದೇ ರೀತಿಯ ಅಪಫಾತ ನಡೆದು ಇಬ್ಬರನ್ನು ಬಲಿ ಪಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ನಡೆದಿದ್ದು, ಮೃತರನ್ನು ಕಾರು ಚಾಲಕ ವಿನಯ್ (27) ಮತ್ತು ಚನ್ನವಸವ (27) ಎಂದು ಗುರುತಿಸಲಾಗಿದೆ.

ರಾಯಚೂರಿನ ಲಿಂಗಸೂಗೂರಿನಿಂದ ಕೇರಳದ ವಯನಾಡಿಗೆ ಹೊರಟಿದ್ದ ಗೆಳೆಯರ ತಂಡವಿದ್ದ ಕಾರು ಪಲ್ಟಿ ಹೊಡೆದು ಅವಘಡ ನಡೆದಿದೆ. ಅತೀ ವೇಗದಿಂದ ಬಂದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ಗಾಯಗೊಂಡ 5 ಮಂದಿಯನ್ನು ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actor Darshan grandmother came running distant town to see and not punish him
ಸ್ಯಾಂಡಲ್ ವುಡ್7 mins ago

Actor Darshan: ದರ್ಶನ್‌ ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ ಎಂದು ದೂರದ ಊರಿಂದ ಓಡೋಡಿ ಬಂದ ಅಜ್ಜಿ!

ಚಿಕ್ಕಬಳ್ಳಾಪುರ8 mins ago

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Hurricane Beryl
ಪ್ರಮುಖ ಸುದ್ದಿ12 mins ago

Hurricane Beryl : ವೆಸ್ಟ್​ ಇಂಡೀಸ್​ನಲ್ಲಿ ಚಂಡಮಾರುತ, ಸಂಕಷ್ಟದಲ್ಲಿ ಸಿಲುಕಿದ ಚಾಂಪಿಯನ್ ಭಾರತ ತಂಡ

NEET UG 2024 Re-Test Result
ದೇಶ22 mins ago

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

National Doctor’s Day
ಆರೋಗ್ಯ26 mins ago

National Doctor’s Day: ಇಂದು ರಾಷ್ಟ್ರೀಯ ವೈದ್ಯರ ದಿನ; ಕಾಳಜಿಯ ಕೈಗಳಿಗೆ ಕೃತಜ್ಞತೆ ಹೇಳುವ ದಿನ

hassan murder case
ಕ್ರೈಂ35 mins ago

Murder Case: ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

Golden Star Ganesh Birthday Not Celebrating His Birthday This Year
ಸ್ಯಾಂಡಲ್ ವುಡ್35 mins ago

Golden Star Ganesh Birthday:  ಈ ವರ್ಷವೂ ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಗೋಲ್ಡನ್ ಸ್ಟಾರ್ ಗಣೇಶ್

ICC Team of the Tournament
ಪ್ರಮುಖ ಸುದ್ದಿ38 mins ago

ICC Team of the Tournament : ಐಸಿಸಿ ಟೀಮ್​ ಆಫ್​​ ದಿ ಟೂರ್ನಮೆಂಟ್​ನಲ್ಲಿ ಆರು ಭಾರತೀಯರು​; ಕೊಹ್ಲಿಗಿಲ್ಲ ಚಾನ್ಸ್​

Job Alert
ಉದ್ಯೋಗ58 mins ago

Job Alert: HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ 1 ಲಕ್ಷ ರೂ.ವರೆಗೆ: ಇಂದೇ ಅಪ್ಲೈ ಮಾಡಿ

murder case
ಬೆಂಗಳೂರು1 hour ago

Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ19 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು24 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌