EPF Account Rules: ಕ್ಲೈಮ್ ಇತ್ಯರ್ಥ ಇನ್ನು ಸುಲಭ; ಇಪಿಎಫ್‌ಒ ಮಾಡಿದೆ ಹಲವು ಹೊಸ ಬದಲಾವಣೆ - Vistara News

ಮನಿ-ಗೈಡ್

EPF Account Rules: ಕ್ಲೈಮ್ ಇತ್ಯರ್ಥ ಇನ್ನು ಸುಲಭ; ಇಪಿಎಫ್‌ಒ ಮಾಡಿದೆ ಹಲವು ಹೊಸ ಬದಲಾವಣೆ

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು ಕ್ಲೈಮ್ ಸೆಟ್ಲ್ ಮೆಂಟ್ ನಲ್ಲಿ ವಿಳಂಬವನ್ನು ತಡೆಯಲು 2024ರ ಮೇ ತಿಂಗಳಿನಿಂದ ಹಲವಾರು ಬದಲಾವಣೆಗಳನ್ನು (EPF Account Rules) ಮಾಡಿದೆ. ಈ ಮೂಲಕ ಉದ್ಯೋಗಿಗಳ ಭವಿಷ್ಯ ನಿಧಿ (EPF) ಹೊಂದಿರುವ ಸದಸ್ಯರ ಹೊರೆಯನ್ನು ಕಡಿಮೆ ಮಾಡುವ ಗುರಿ ಹೊಂದಲಾಗಿದೆ.

VISTARANEWS.COM


on

EPF Account Rules
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (EPFO) ಕ್ಲೈಮ್ ಇತ್ಯರ್ಥ ಪ್ರಕ್ರಿಯೆಯನ್ನು ಸುಗಮಗೊಳಿಸಲು ಹಲವು ಬದಲಾವಣೆಗಳನ್ನು (EPF Account Rules) ಮಾಡಿದೆ. ಕ್ಲೈಮ್ ಸೆಟ್ಲಮೆಂಟ್ (claim settlement) ಮಾಡುವಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಿಂದ ಉಂಟಾಗುವ ವಿಳಂಬವನ್ನು ಕಡಿಮೆ ಮಾಡಲು ಮಾಡುವ ಮೂಲಕ ಕೆಲಸದಲ್ಲಿ ದಕ್ಷತೆಯನ್ನು ಹೆಚ್ಚಿಸಲು ಉದ್ಯೋಗಿಗಳ ಭವಿಷ್ಯ ನಿಧಿ (EPF) ಹೊಂದಿರುವ ಸದಸ್ಯರಿಗೆ ಹೊರೆಯನ್ನು ಕಡಿಮೆ ಮಾಡಲು ಈ ಬದಲಾವಣೆಗಳನ್ನು ಮಾಡಲಾಗಿದೆ.

ಇದರಲ್ಲಿ ಸ್ವಯಂ-ಸೆಟಲ್‌ಮೆಂಟ್ ಸೌಲಭ್ಯದ ವಿಸ್ತರಣೆ, ಬಹು-ಸ್ಥಳದ ಕ್ಲೈಮ್ ಸೆಟಲ್‌ಮೆಂಟ್‌, ಸಾವಿನ ಹಕ್ಕುಗಳ ತ್ವರಿತ ಪ್ರಕ್ರಿಯೆ ಮತ್ತು ಕೆಲವು ಆನ್‌ಲೈನ್ ಕ್ಲೈಮ್‌ಗಳಿಗೆ ಕಡ್ಡಾಯವಾದ ಡಾಕ್ಯುಮೆಂಟ್ ಅಪ್‌ಲೋಡ್‌ ಮಾಡುವಲ್ಲಿ ಸಡಿಲಿಕೆಯನ್ನು ಮಾಡಲಾಗಿದೆ.

ಸ್ವಯಂ ಸೆಟಲ್ ಮೆಂಟ್

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು ಘೋಷಿಸಿದ ಅತ್ಯಂತ ಮಹತ್ವದ ಬದಲಾವಣೆಯೆಂದರೆ ಸ್ವಯಂ-ಸೆಟಲ್‌ಮೆಂಟ್ ಸೌಲಭ್ಯದ ವಿಸ್ತರಣೆ. ಇದು 68ಬಿ ಮತ್ತು 68ಕೆ ನಿಯಮಗಳ ಅಡಿಯಲ್ಲಿ ವಸತಿ, ಶಿಕ್ಷಣ ಮತ್ತು ವಿವಾಹದ ಹಕ್ಕುಗಳನ್ನು ಒಳಗೊಂಡಿದೆ. ಈ ಈ ಕುರಿತು 2024ರ ಮೇ 13ರಂದು ಪ್ರಕಟಣೆ ಹೊರಡಿಸಲಾಗಿದೆ. ಇದು ಆಡಳಿತಾತ್ಮಕ ಹೊರೆಯನ್ನು ಕಡಿಮೆ ಮಾಡುವ ಮತ್ತು ಕ್ಲೈಮ್ ಪ್ರಕ್ರಿಯೆಯನ್ನು ವೇಗಗೊಳಿಸುವ ಗುರಿಯನ್ನು ಹೊಂದಿದೆ.

ನಿಯಮ 68ಜೆ ಅಡಿಯಲ್ಲಿ ಯಾರದೇ ಹಸ್ತಕ್ಷೇಪವಿಲ್ಲದೆಯೇ ವೈದ್ಯಕೀಯ ಪರಿಸ್ಥಿತಿಗಳಿಗಾಗಿ ಸದಸ್ಯರು 1 ಲಕ್ಷ ರೂ. ವರೆಗೆ ಮುಂಗಡ ಹಣವನ್ನು ಇಪಿಎಫ್ ಖಾತೆಯಿಂದ ಪಡೆಯಬಹುದು. 2024ರ ಏಪ್ರಿಲ್ 16ರ ಸುತ್ತೋಲೆಯಲ್ಲಿ ನವೀಕರಿಸಲಾದ ಈ ನಿಯಮವು ಸ್ವಯಂ-ಸೆಟಲ್‌ಮೆಂಟ್ ನ ಅಡಿಯಲ್ಲಿ ಈ ಕ್ಲೈಮ್‌ಗಳನ್ನು ಸ್ವಯಂಚಾಲಿತವಾಗಿ ಮಾಡುವುದನ್ನು ಖಚಿತಪಡಿಸುತ್ತದೆ.

ನಿಯಮ 68ಕೆ ಅಡಿಯಲ್ಲಿ ಮದುವೆ ಅಥವಾ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಇಪಿಎಫ್ ನಿಧಿಯಿಂದ ಹಣ ಹಿಂಪಡೆಯಲು ಅನುಮತಿ ನೀಡಲಾಗಿದೆ. ಈ ನಿಯಮವು ಸದಸ್ಯರು ತಮ್ಮ ಮಕ್ಕಳು ಅಥವಾ ಅವರ ಒಡಹುಟ್ಟಿದವರ ಮದುವೆಗೆ ಹಣವನ್ನು ಹಿಂಪಡೆಯಲು ಅವಕಾಶ ನೀಡುತ್ತದೆ. ಹಾಗೆಯೇ ಸದಸ್ಯರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ.ಸ್ವಯಂ-ಸೆಟಲ್‌ಮೆಂಟ್ ಸೌಲಭ್ಯವನ್ನು ವಿಸ್ತರಿಸುವ ಮೂಲಕ ಸದಸ್ಯರಿಗೆ ಹೆಚ್ಚು ಅಗತ್ಯವಿರುವಾಗ ಹಣವನ್ನು ಸುಲಭವಾಗಿ ಒದಗಿಸುವ ಗುರಿಯನ್ನು ಹೊಂದಿದೆ.


ಬಹು ಸ್ಥಳದ ಕ್ಲೈಮ್ ಸೆಟಲ್ ಮೆಂಟ್

ಇಪಿಎಫ್‌ಒ ಬಹು-ಸ್ಥಳದ ಕ್ಲೈಮ್ ಸೆಟಲ್ ಮೆಂಟ್ ಸೌಲಭ್ಯವನ್ನು ಪರಿಚಯಿಸಿದೆ. 2020ರಲ್ಲಿ ಮೊದಲ ಬಾರಿಗೆ ಪ್ರಾರಂಭಿಸಲಾದ ಈ ಉಪಕ್ರಮವು ದೇಶದಾದ್ಯಂತ ಕೆಲಸದ ಹೊರೆಯನ್ನು ಹೆಚ್ಚು ಸಮವಾಗಿ ವಿತರಿಸುವ ಗುರಿಯನ್ನು ಹೊಂದಿದೆ, ಇದರಿಂದಾಗಿ ಕ್ಲೈಮ್ ಪಾವತಿ ವಿಳಂಬವನ್ನು ಕಡಿಮೆ ಮಾಡಿ ದಕ್ಷತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.

2024ರ ಮೇ 8ರ ಸುತ್ತೋಲೆಯ ಪ್ರಕಾರ ಇಪಿಎಫ್‌ಒ ಬಹು-ಸ್ಥಳದ ಕ್ಲೈಮ್ ಇತ್ಯರ್ಥಕ್ಕಾಗಿ ಲಿಂಕ್ ಆಫೀಸ್ ವ್ಯವಸ್ಥೆಯನ್ನು ಸ್ಥಾಪಿಸಿದೆ. ಈ ಮೂಲಕ ಇರುವ ಸ್ಥಳದಲ್ಲೇ ಕ್ಲೈಮ್‌ಗಳನ್ನು ಪ್ರಕ್ರಿಯೆಗೊಳನ್ನು ಪೂರ್ಣಗೊಳಿಸಲು ಅನುಮತಿ ನೀಡಲಾಗುತ್ತದೆ. ಇದರಿಂದ ಸದಸ್ಯರ ಕ್ಲೈಮ್ ಸೆಟ್ಲಮೆಂಟ್ ಪ್ರಕ್ರಿಯೆಯು ಹೆಚ್ಚು ವೇಗವಾಗಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ನಿಯೋಜಿತ ಪ್ರಾದೇಶಿಕ ಕಚೇರಿ (DRO) ಮತ್ತು ಸಹಯೋಗದ ಪ್ರಾದೇಶಿಕ ಕಚೇರಿ (CRO) ನಡುವಿನ ಸಂಪರ್ಕ ವ್ಯವಸ್ಥೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಲು ಈ ಎರಡೂ ಕಚೇರಿಗಳ ಉಸ್ತುವಾರಿಯನ್ನು ಆರ್ ಪಿಎಫ್ ಸಿ ಗೆ ವಹಿಸಲಾಗಿದೆ.ಇದರಿಂದ ಯಾವುದೇ ಸಮಸ್ಯೆಗಳಿಲ್ಲದೆ ಕ್ಲೈಮ್ ಇತ್ಯರ್ಥಗೊಳಿಸಲು ಸಾಧ್ಯವಾಗುತ್ತದೆ ಎಂದು ಸುತ್ತೋಲೆ ಹೇಳಿದೆ.

ಡೆತ್ ಕ್ಲೈಮ್‌ಗಳಿಗೆ ಹೊಸ ನಿಯಮ

ಸಾವಿನ ಹಕ್ಕುಗಳ ಪ್ರಕ್ರಿಯೆಗೆ ಇಪಿಎಫ್ ಒ ​​ಹೊಸ ಮಾರ್ಗಸೂಚಿಗಳನ್ನು ಪರಿಚಯಿಸಿದೆ. 2024ರ ಮೇ 17ರಂದು ಹೊರಡಿಸಲಾದ ಸುತ್ತೋಲೆಯ ಪ್ರಕಾರ ಸಾವಿನ ಪ್ರಕರಣಗಳಲ್ಲಿನ ಕ್ಲೈಮ್‌ಗಳನ್ನು ಆಧಾರ್ ದೃಢೀಕರಣದ ಅಗತ್ಯವಿಲ್ಲದೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಆದರೆ ಇದಕ್ಕಾಗಿ ಪ್ರಭಾರ ಅಧಿಕಾರಿ (ಒಐಸಿ) ಯಿಂದ ಅನುಮೋದನೆಯನ್ನು ಪಡೆಯಬೇಕಾಗಿದೆ.

ಯೂನಿವರ್ಸಲ್ ಅಕೌಂಟ್ ನಂಬರ್ (UAN) ನಲ್ಲಿ ಸದಸ್ಯರ ವಿವರಗಳು ಸರಿಯಾಗಿದ್ದರೂ ಆಧಾರ್ ಡೇಟಾಬೇಸ್‌ನಲ್ಲಿ ನಿಖರವಾಗಿಲ್ಲದ ಅಥವಾ ಅಪೂರ್ಣವಾಗಿರುವ ಪ್ರಕರಣಗಳಿಗೆ ಮಾತ್ರ ಈ ಸೂಚನೆಗಳು ಅನ್ವಯಿಸುತ್ತವೆ. ಈ ಕ್ರಮವು ವಂಚನೆಯ ಹಿಂಪಡೆಯುವಿಕೆಗಳನ್ನು ತಡೆಯುತ್ತದೆ ಮತ್ತು ನಿಜವಾದ ಹಕ್ಕುಗಳನ್ನು ತ್ವರಿತವಾಗಿ ಪ್ರಕ್ರಿಯೆಗೊಳಿಸುತ್ತದೆ ಎಂದು ಖಚಿತಪಡಿಸುತ್ತದೆ.


ಕಡ್ಡಾಯ ಚೆಕ್ ಲೀಫ್

ಕೆಲವು ಅರ್ಹ ಪ್ರಕರಣಗಳಿಗೆ ಚೆಕ್ ಲೀಫ್ ಅಥವಾ ದೃಢೀಕೃತ ಬ್ಯಾಂಕ್ ಪಾಸ್‌ಬುಕ್‌ನಚಿತ್ರವನ್ನು ಕಡ್ಡಾಯವಾಗಿ ಅಪ್‌ಲೋಡ್ ಮಾಡುವ ಅಗತ್ಯವನ್ನು ಇಪಿಎಫ್‌ಒ ​​ಸಡಿಲಗೊಳಿಸಿದೆ.

ಇದನ್ನೂ ಓದಿ: UPI Safety Tips: ಈ ಟಿಪ್ಸ್ ಪಾಲಿಸಿ, ಮೊಬೈಲ್ ನಿಂದ ಹಣ ಪಾವತಿಸುವಾಗ ಆಗುವ ವಂಚನೆಯಿಂದ ಪಾರಾಗಿ

2024ರ ಮೇ 28ರ ಸುತ್ತೋಲೆಯಲ್ಲಿ ಘೋಷಿಸಲಾದ ಈ ಬದಲಾವಣೆಯು ಆನ್‌ಲೈನ್ ಕ್ಲೈಮ್ ಫೈಲಿಂಗ್ ಪ್ರಕ್ರಿಯೆಯಲ್ಲಿ ಈ ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್ ಮಾಡದ ಕಾರಣ ತಿರಸ್ಕರಿಸಿದ ಕ್ಲೈಮ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಲು ಉದ್ದೇಶಿಸಲಾಗಿದೆ.

ಡಾಕ್ಯುಮೆಂಟ್ ಅಪ್‌ಲೋಡ್‌ಗಳ ಅಗತ್ಯವಿಲ್ಲದೇ ಕ್ಲೈಮ್‌ಗಳ ದೃಢೀಕರಣವನ್ನು ಖಚಿತಪಡಿಸಿಕೊಳ್ಳಲು ಇಪಿಎಫ್ ಒ ​​ಹಲವಾರು ಮೌಲ್ಯೀಕರಣಗಳನ್ನು ಪರಿಚಯಿಸಿದೆ. ಈ ದೃಢೀಕರಣಗಳಲ್ಲಿ ಸಂಬಂಧಪಟ್ಟ ಬ್ಯಾಂಕ್ ಅಥವಾ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಮೂಲಕ ಬ್ಯಾಂಕ್ KYC ಯ ಆನ್‌ಲೈನ್ ಪರಿಶೀಲನೆ, ಡಿಜಿಟಲ್ ಸಿಗ್ನೇಚರ್ ಸರ್ಟಿಫಿಕೇಟ್ (DSC) ಅನ್ನು ಬಳಸಿಕೊಂಡು ಉದ್ಯೋಗದಾತರಿಂದ ಬ್ಯಾಂಕ್ KYC ಯ ಪರಿಶೀಲನೆ ಮತ್ತು ನೋಂದಣಿ ಮಾಡಿರುವ ಆಧಾರ್ ಸಂಖ್ಯೆಯನ್ನು ಪರಿಶೀಲಿಸುವುದು ಸೇರಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ವಾಣಿಜ್ಯ

Rule Change: ಸೆಪ್ಟೆಂಬರ್ 1ರಿಂದ ನಮ್ಮ ಮೇಲೆ ಪರಿಣಾಮ ಬೀರುವ 6 ಮುಖ್ಯ ಬದಲಾವಣೆಗಳಿವು

ಎಲ್‌ಪಿಜಿ ಮತ್ತು ಆಧಾರ್ ಕಾರ್ಡ್‌ಗೆ ಸಂಬಂಧಿಸಿ ಪ್ರತಿಯೊಬ್ಬರ ಜೇಬಿನ ಮೇಲೆ ಪರಿಣಾಮ ಬೀರುವ ಪ್ರಮುಖ ಆರು ಬದಲಾವಣೆಗಳು ಆಗಲಿವೆ. ಸೆಪ್ಟೆಂಬರ್ 1ರಿಂದ ಜಾರಿಯಾಗಲಿರುವ ಈ ನಿಯಮಗಳು (Rule Change) ಎಲ್ಲರಿಗೂ ಅನ್ವಯವಾಗುವುದು. ಆ ಬದಲಾವಣೆಗಳು ಯಾವುದು ಎನ್ನುವ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ.

VISTARANEWS.COM


on

By

Rule Change
Koo

ಸೆಪ್ಟೆಂಬರ್ 1ರಿಂದ ಎಲ್‌ಪಿಜಿ (LPG) ಮತ್ತು ಆಧಾರ್ ಕಾರ್ಡ್‌ಗೆ (Aaadhar card) ಸಂಬಂಧಿಸಿ ಆರು ದೊಡ್ಡ ಬದಲಾವಣೆಗಳು (Rule Change) ಆಗಲಿವೆ. ಇದು ಪ್ರತಿಯೊಬ್ಬರ ಜೇಬಿನ ಮೇಲೂ ಪರಿಣಾಮ ಬೀರಲಿದೆ. ಈ ಬದಲಾವಣೆಗಳು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್‌ಗಳ (LPG cylinder) ಬೆಲೆ ಮತ್ತು ಕ್ರೆಡಿಟ್ ಕಾರ್ಡ್‌ಗಳ (Credit card) ನಿಯಮಗಳನ್ನು ಒಳಗೊಂಡಿವೆ. ಅಲ್ಲದೇ ತುಟ್ಟಿಭತ್ಯೆ ಕುರಿತು ಸರ್ಕಾರಿ ನೌಕರರಿಗೆ ವಿಶೇಷ ಪ್ರಕಟಣೆಗಳು ಸೇರಿವೆ.

ಆಗಸ್ಟ್ ತಿಂಗಳ ಅಂತ್ಯಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಇಂತಹ ಪರಿಸ್ಥಿತಿಯಲ್ಲಿ ಹೊಸ ತಿಂಗಳಿನಿಂದ ಅನೇಕ ದೊಡ್ಡ ಬದಲಾವಣೆಗಳು ನಡೆಯಲಿದೆ. ಇದು ಸಾಮಾನ್ಯ ಜನರ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಅಂತಹ ಕೆಲವು ವಿಶೇಷ ಬದಲಾವಣೆಗಳು ಸೆಪ್ಟೆಂಬರ್ ತಿಂಗಳಿನ ಆರಂಭದಲ್ಲೇ ನಡೆಯಲಿದೆ.

Rule Change
Rule Change


ಎಲ್ ಪಿ ಜಿ ಸಿಲಿಂಡರ್ ಬೆಲೆ

ಪ್ರತಿ ತಿಂಗಳ ಮೊದಲ ದಿನಾಂಕದಂದು ಸರ್ಕಾರವು ಎಲ್‌ಪಿಜಿ ಬೆಲೆಯನ್ನು ಬದಲಾಯಿಸುತ್ತದೆ. ಅಂತೆಯೇ ಅಡುಗೆ ಅನಿಲ, ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಗಳಲ್ಲಿ ಬದಲಾವಣೆ ಸೆಪ್ಟೆಂಬರ್ ಮೊದಲ ದಿನವೇ ಕಾಣಬಹುದು. ಇಂತಹ ಪರಿಸ್ಥಿತಿಯಲ್ಲಿ ಈ ಬಾರಿಯೂ ಎಲ್ ಪಿ ಜಿ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ಕಳೆದ ತಿಂಗಳು, ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆ 8.50 ರೂಪಾಯಿಯಷ್ಟು ಹೆಚ್ಚಿದ್ದರೆ, ಜುಲೈನಲ್ಲಿ ಅದರ ಬೆಲೆ 30 ರೂಪಾಯಿಗಳಷ್ಟು ಕಡಿಮೆಯಾಗಿದೆ.


ಎಟಿಎಫ್, ಸಿಎನ್‌‌ಜಿ, ಪಿಎನ್‌‌ಜಿ ದರಗಳು

ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳೊಂದಿಗೆ ತೈಲ ಮಾರುಕಟ್ಟೆ ಕಂಪೆನಿಗಳು ಏರ್ ಟರ್ಬೈನ್ ಇಂಧನ (ಎಟಿಎಫ್) ಮತ್ತು ಸಿಎನ್‌ಜಿ-ಪಿಎನ್‌ಜಿ ಬೆಲೆಗಳನ್ನು ಸಹ ಪರಿಷ್ಕರಿಸುತ್ತವೆ. ಈ ಕಾರಣದಿಂದಾಗಿ ಸೆಪ್ಟೆಂಬರ್ ಮೊದಲ ದಿನಾಂಕದಂದು ಅವುಗಳ ಬೆಲೆಯಲ್ಲಿ ಬದಲಾವಣೆಗಳನ್ನು ಕಾಣಬಹುದು.

Rule Change
Rule Change


ನಕಲಿ ಕರೆಗಳಿಗೆ ಕಡಿವಾಣ

ಸೆಪ್ಟೆಂಬರ್ 1ರಿಂದ ನಕಲಿ ಕರೆ ಮತ್ತು ಸಂದೇಶಗಳಿಗೆ ಕಡಿವಾಣ ಬೀಳಲಿದೆ. ನಕಲಿ ಕರೆಗಳು ಮತ್ತು ನಕಲಿ ಸಂದೇಶಗಳಿಗೆ ಕಡಿವಾಣ ಹಾಕುವಂತೆ ಟಿಆರ್‌‌ಎಐ ಟೆಲಿಕಾಂ ಕಂಪೆನಿಗಳಿಗೆ ಸೂಚನೆ ನೀಡಿದೆ. ಇದಕ್ಕಾಗಿ ಟಿಆರ್‌‌ಎಐ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಿದೆ. ಜಿಯೋ, ಏರ್‌ಟೆಲ್, ವೊಡಾಫೋನ್, ಐಡಿಯಾ, ಬಿಎಸ್‌ಎನ್‌ಎಲ್‌ನಂತಹ ಟೆಲಿಕಾಂ ಕಂಪನಿಗಳಿಗೆ ಟೆಲಿಮಾರ್ಕೆಟಿಂಗ್ ಕರೆಗಳು ಮತ್ತು 140 ಮೊಬೈಲ್ ಸಂಖ್ಯೆಗಳ ಸರಣಿಯಿಂದ ಪ್ರಾರಂಭವಾಗುವ ವಾಣಿಜ್ಯ ಸಂದೇಶಗಳನ್ನು ಬ್ಲಾಕ್‌ಚೇನ್ ಆಧಾರಿತ ಡಿಎಲ್‌ಟಿಗೆ ವರ್ಗಾಯಿಸಲು ಟಿಆರ್ ಎಐ ಕೇಳಿದೆ. ಅಂದರೆ ಸೆಪ್ಟೆಂಬರ್ 30 ರೊಳಗೆ ವಿತರಣಾ ಲೇಸರ್ ತಂತ್ರಜ್ಞಾನ ಪ್ಲಾಟ್‌ಫಾರ್ಮ್‌ಗೆ ಬದಲಾಯಿಸಲು ಟಿಆರ್‌‌ಎಐ ಕೇಳಿದೆ. ಇದು ನಕಲಿ ಕರೆಗಳನ್ನು ನಿಲ್ಲಿಸುವ ನಿರೀಕ್ಷೆಯಿದೆ.


ಕ್ರೆಡಿಟ್ ಕಾರ್ಡ್ ನಿಯಮಗಳು

ಸೆಪ್ಟೆಂಬರ್ 1ರಿಂದ ಎಚ್‌ಡಿಎಫ್‌ಸಿ ಬ್ಯಾಂಕ್ ಯುಟಿಲಿಟಿ ವಹಿವಾಟುಗಳ ರಿವಾರ್ಡ್ ಪಾಯಿಂಟ್‌ಗಳ ಮಿತಿಯನ್ನು ನಿಗದಿಪಡಿಸಲಿದೆ. ಇದರ ಅಡಿಯಲ್ಲಿ ಗ್ರಾಹಕರು ಈ ವಹಿವಾಟುಗಳಲ್ಲಿ ತಿಂಗಳಿಗೆ 2,000 ಪಾಯಿಂಟ್‌ಗಳವರೆಗೆ ಮಾತ್ರ ಪಡೆಯಬಹುದು. ಸೆಪ್ಟೆಂಬರ್ 2024ರಿಂದ ಐಡಿಎಫ್ ಸಿ ಫಸ್ಟ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳಲ್ಲಿ ಪಾವತಿಸಬೇಕಾದ ಕನಿಷ್ಠ ಮೊತ್ತವನ್ನು ಕಡಿಮೆ ಮಾಡುತ್ತದೆ. ಪಾವತಿ ದಿನಾಂಕವನ್ನು 18 ರಿಂದ 15 ದಿನಗಳವರೆಗೆ ಕಡಿಮೆ ಮಾಡಲಾಗುತ್ತದೆ.

ಇದರ ಹೊರತಾಗಿ 2024ರ ಸೆಪ್ಟೆಂಬರ್ 1ರಿಂದ ಯುಪಿಐ ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಪಾವತಿಗಳಿಗಾಗಿ ರುಪೇ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುವ ಗ್ರಾಹಕರು ಇತರ ಪಾವತಿ ಸೇವಾ ಪೂರೈಕೆದಾರರ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುವಂತೆಯೇ ರಿವಾರ್ಡ್ ಪಾಯಿಂಟ್‌ಗಳನ್ನು ಪಡೆಯುತ್ತಾರೆ.

Rule Change
Rule Change


ತುಟ್ಟಿಭತ್ಯೆ

ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಘೋಷಣೆಯಾಗುವ ಸಾಧ್ಯತೆ ಇದೆ. ಸರ್ಕಾರವು ನೌಕರರಿಗೆ ತುಟ್ಟಿಭತ್ಯೆಯನ್ನು ಶೇಕಡಾ 3ರಷ್ಟು ಹೆಚ್ಚಿಸುವ ನಿರೀಕ್ಷೆಯಿದೆ. ಪ್ರಸ್ತುತ, ಸರ್ಕಾರಿ ನೌಕರರಿಗೆ ಶೇ. 50ರಷ್ಟು ತುಟ್ಟಿಭತ್ಯೆ (ಡಿಎ) ನೀಡಲಾಗುತ್ತಿದ್ದು, ಶೇ. 3ರಷ್ಟು ಹೆಚ್ಚಳದ ಅನಂತರ ಅದು ಶೇ. 53 ಆಗಲಿದೆ.


ಇದನ್ನೂ ಓದಿ: UPS: ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ಏಕೀಕೃತ ಪಿಂಚಣಿ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು

ಆಧಾರ್ ಕಾರ್ಡ್ ಉಚಿತ ನವೀಕರಣ

ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲು ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 14 ಎಂದು ನಿಗದಿಪಡಿಸಲಾಗಿದೆ. ಇದರ ಅನಂತರ, ಆಧಾರ್‌ಗೆ ಸಂಬಂಧಿಸಿದ ಕೆಲವು ವಿಷಯಗಳನ್ನು ಉಚಿತವಾಗಿ ನವೀಕರಿಸಲು ಸಾಧ್ಯವಾಗುವುದಿಲ್ಲ. ಸೆಪ್ಟೆಂಬರ್ 14ರ ಅನಂತರ ಆಧಾರ್ ಅನ್ನು ನವೀಕರಿಸಲು ಶುಲ್ಕವನ್ನು ಪಾವತಿಸಬೇಕಾಗುತ್ತದೆ.

Continue Reading

ವಾಣಿಜ್ಯ

Unified Pension Scheme: ಏಕೀಕೃತ ಪಿಂಚಣಿ ಯೋಜನೆ; ನೌಕರರಿಗೆ ಸಿಗುವ ಟಾಪ್‌ 9 ಪ್ರಯೋಜನಗಳಿವು

ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ಏಕೀಕೃತ ಪಿಂಚಣಿ ಯೋಜನೆಯನ್ನು (Unified Pension Scheme) ಅರ್ಥೈಸಿಕೊಳ್ಳಲು ನೆರವಾಗುವ ಕೆಲವು ಪ್ರಮುಖ ಅಂಶಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಹಂಚಿಕೊಂಡಿದ್ದಾರೆ. 2004ರ ಜನವರಿ 1ರ ಅನಂತರ ಸೇವೆಗೆ ಸೇರಿದವರಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಈ ಯೋಜನೆ ಕುರಿತ ಮತ್ತಷ್ಟು ವಿವರಗಳನ್ನು ಇಲ್ಲಿ ಕೊಡಲಾಗಿದೆ.

VISTARANEWS.COM


on

By

Unified Pension Scheme
Koo

ನಿವೃತ್ತಿಯ ಬಳಿಕ ಸರ್ಕಾರಿ ನೌಕರರಿಗೆ (central government employees) ಆರ್ಥಿಕ ಭದ್ರತೆ ಮತ್ತು ಸ್ಥಿರತೆಯನ್ನು ಒದಗಿಸುವ ಉದ್ದೇಶದಿಂದ 23 ಲಕ್ಷ ಉದ್ಯೋಗಿಗಳ ಮೇಲೆ ಪರಿಣಾಮ ಬೀರುವ ʼಏಕೀಕೃತ ಪಿಂಚಣಿ ಯೋಜನೆʼಗೆ (Unified Pension Scheme) ಕೇಂದ್ರ ಸರ್ಕಾರ ಶನಿವಾರ ಅನುಮೋದನೆ ನೀಡಿದೆ. 2004ರ ಜನವರಿ 1ರ ಅನಂತರ ಸೇವೆಗೆ ಸೇರಿದವರಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಈ ಯೋಜನೆ ಕುರಿತ ಮತ್ತಷ್ಟು ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಯುಪಿಎಸ್‌ ವೈಶಿಷ್ಟ್ಯಗಳೇನು?

1. ಖಚಿತ ಪಿಂಚಣಿ

ಕನಿಷ್ಠ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಉದ್ಯೋಗಿಗಳು ನಿವೃತ್ತಿಯ ಹಿಂದಿನ 12 ತಿಂಗಳುಗಳಲ್ಲಿ ಪಡೆದ ಸರಾಸರಿ ಮೂಲ ವೇತನದ ಶೇ. 50ರಷ್ಟು ಖಚಿತವಾದ ಪಿಂಚಣಿಯನ್ನು ಪಡೆಯುತ್ತಾರೆ. 25 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರ ಪಿಂಚಣಿಯು ಅವರ ಅವಧಿಗೆ ಅನುಗುಣವಾಗಿರುತ್ತದೆ. ಕನಿಷ್ಠ ಅರ್ಹತಾ ಸೇವಾ ಅವಧಿಯನ್ನು 10 ವರ್ಷಗಳಿಗೆ ನಿಗದಿಪಡಿಸಲಾಗಿದೆ.

2. ಖಚಿತವಾದ ಕುಟುಂಬ ಪಿಂಚಣಿ

ಅಪಘಾತದಿಂದ ನೌಕರ ಮರಣ ಹೊಂದಿದರೆ ಅವರ ಸಂಗಾತಿಯು ಅಥವಾ ಅವಲಂಬಿತರು ಕುಟುಂಬ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ. ಮರಣದ ಮೊದಲು ಉದ್ಯೋಗಿ ಪಡೆಯುತ್ತಿದ್ದ ಪಿಂಚಣಿಯ ಶೇ. 60ರಷ್ಟು ಅವರ ಸಂಗಾತಿಗೆ ಕುಟುಂಬ ಪಿಂಚಣಿಯಾಗಿ ದೊರೆಯುತ್ತದೆ.

3. ಖಚಿತವಾದ ಕನಿಷ್ಠ ಪಿಂಚಣಿ

ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನೌಕರರಿಗೆ ನಿವೃತ್ತಿಯ ಅನಂತರ ತಿಂಗಳಿಗೆ 10,000 ರೂ. ಕನಿಷ್ಠ ಪಿಂಚಣಿಯ ಖಾತರಿ ಇದೆ.

4. ಹಣದುಬ್ಬರ ಸೂಚ್ಯಂಕ

ಖಚಿತ ಮತ್ತು ಕುಟುಂಬ ಪಿಂಚಣಿ ಎರಡೂ ಹಣದುಬ್ಬರ ಸೂಚ್ಯಂಕಕ್ಕೆ ಒಳಪಟ್ಟಿರುತ್ತವೆ. ಈ ಹೊಂದಾಣಿಕೆಯು ಪಿಂಚಣಿಗಳು ಹಣದುಬ್ಬರಕ್ಕೆ ಅನುಗುಣವಾಗಿರುವುದನ್ನು ಖಚಿತಪಡಿಸುತ್ತದೆ.

5. ದರ ಏರಿಕೆ ಪರಿಹಾರ

ಸೇವೆಯಲ್ಲಿರುವ ಉದ್ಯೋಗಿಗಳಂತೆಯೇ ಯುಪಿಎಸ್ ಅಡಿಯಲ್ಲಿ ನಿವೃತ್ತರಾದ ಕೈಗಾರಿಕಾ ಕಾರ್ಮಿಕರಿಗೆ (AICPI-IW) ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ದರ ಏರಿಕೆ ಪರಿಹಾರವನ್ನು ಪಡೆಯುತ್ತಾರೆ.


6. ನಿವೃತ್ತಿಯ ಮೇಲೆ ಒಟ್ಟು ಮೊತ್ತ

ಗ್ರಾಚ್ಯುಟಿ ಜೊತೆಗೆ ಉದ್ಯೋಗಿಗಳು ನಿವೃತ್ತಿಯ ಸಮಯದಲ್ಲಿ ಒಂದು ದೊಡ್ಡ ಮೊತ್ತದ ಪಾವತಿಯನ್ನು ಸ್ವೀಕರಿಸುತ್ತಾರೆ. ಈ ಪಾವತಿಯು ವೇತನ ಮತ್ತು ತುಟ್ಟಿ ಭತ್ಯೆ ಸೇರಿ ನಿವೃತ್ತಿಯ ದಿನಾಂಕ ಪೂರ್ಣಗೊಂಡ ಪ್ರತಿ ಆರು ತಿಂಗಳ ಸೇವೆಗೆ ಉದ್ಯೋಗಿಯ ಮಾಸಿಕ ವೇತನದ 1/10 ಭಾಗವಾಗಿರುತ್ತದೆ. ಈ ಒಟ್ಟು ಮೊತ್ತದ ಪಾವತಿಯು ಖಚಿತವಾದ ಪಿಂಚಣಿಯ ಪ್ರಮಾಣವನ್ನು ಕಡಿಮೆ ಮಾಡುವುದಿಲ್ಲ.

7. ಸರ್ಕಾರದ ಕೊಡುಗೆ

ಈ ಪಿಂಚಣಿ ಯೋಜನೆಯಡಿ ಸರ್ಕಾರವು ತನ್ನ ಕೊಡುಗೆಯನ್ನು ಶೇ. 14ರಿಂದ ಶೇ.18.5ಕ್ಕೆ ಹೆಚ್ಚಿಸುತ್ತಿದೆ. ಆದರೆ ನೌಕರರ ಕೈಯಿಂದ ಈಗಿರುವ ಪ್ರಮಾಣದಷ್ಟೇ ಹಣ ಈ ಯೋಜನೆಗೆ ಸಂದಾಯವಾಗುತ್ತದೆ. ಹಾಗಾಗಿ ಇದರಿಂದ ನೌಕರರಿಗೆ ಹೆಚ್ಚು ಪ್ರಯೋಜನ ಸಿಗುವಂತಾಗುತ್ತದೆ.


8. ನಿವೃತ್ತಿ ಹೊಂದಿದವರಿಗೂ ಅನ್ವಯ

ಏಕೀಕೃತ ಪಿಂಚಣಿ ಯೋಜನೆಯ ನಿಬಂಧನೆಗಳು ರಾಷ್ಟ್ರೀಯ ಪಿಂಚಣಿ ಯೋಜನೆ ಹೊಂದಿರುವ ಹಿಂದಿನ ನಿವೃತ್ತರಿಗೆ ಅಂದರೆ ಈಗಾಗಲೇ ನಿವೃತ್ತಿ ಹೊಂದಿದವರಿಗೂ ಅನ್ವಯಿಸುತ್ತದೆ. ಹಿಂದಿನ ಅವಧಿಯ ಬಾಕಿಯನ್ನು ಪಿಪಿಎಫ್ ದರಗಳಲ್ಲಿ ಬಡ್ಡಿಯೊಂದಿಗೆ ಪಾವತಿಸಲಾಗುತ್ತದೆ.

ಇದನ್ನೂ ಓದಿ: Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

9. ಏಕೀಕೃತ ಪಿಂಚಣಿ ಯೋಜನೆಗೆ ಸೇರುವ ಆಯ್ಕೆ

ಅಸ್ತಿತ್ವದಲ್ಲಿರುವ ಎನ್‌ಪಿಎಸ್, ವಿಆರ್‌ಎಸ್ ಜೊತೆಗೆ ಎನ್‌ಪಿಎಸ್ ಜೊತೆಗೆ ಭವಿಷ್ಯದ ಉದ್ಯೋಗಿಗಳು ಯುಪಿಎಸ್‌ಗೆ ಸೇರುವ ಆಯ್ಕೆಯನ್ನು ಹೊಂದಿರುತ್ತಾರೆ. ಈ ಆಯ್ಕೆಯನ್ನು ಒಮ್ಮೆ ಮಾಡಿಕೊಂಡರೆ ಅದೇ ಅಂತಿಮವಾಗಿರುತ್ತದೆ. ಕೇಂದ್ರ ಸರ್ಕಾರದಿಂದ ಯುಪಿಎಸ್ ಅನ್ನು ಜಾರಿಗೊಳಿಸಲಾಗುತ್ತಿದೆ. ಇದನ್ನು ರಾಜ್ಯ ಸರ್ಕಾರಗಳೂ ಅಳವಡಿಸಿಕೊಳ್ಳಬಹುದಾಗಿದೆ. ಆದರೆ ಕೇಂದ್ರದಂತೆ ರಾಜ್ಯ ಸರ್ಕಾರವೂ ಹೆಚ್ಚುವರಿ ಮೊತ್ತ ಪಾವತಿಸಬೇಕಾಗುತ್ತದೆ.

Continue Reading

ಮನಿ-ಗೈಡ್

Sukanya Samriddhi Yojana: ಸುಕನ್ಯಾ ಸಮೃದ್ಧಿ ಯೋಜನೆ; ನಿಮ್ಮ ಮಗಳು 71 ಲಕ್ಷ ರೂ. ಪಡೆಯಲು ಸಾಧ್ಯ!

ಸುಕನ್ಯಾ ಸಮೃದ್ಧಿ ಯೋಜನೆಯನ್ನು (Sukanya Samriddhi Yojana) ಕೇಂದ್ರ ಸರ್ಕಾರ ಹೆಣ್ಣುಮಕ್ಕಳಿಗಾಗಿ ಮಾಡಿರುವ ಯೋಜನೆಯಾಗಿದೆ. ದೇಶದ ಯಾವುದೇ ನಾಗರಿಕರು ತಮ್ಮ 10 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಗಳಿಗೆ ಈ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಬಹುದು. ಇದರ ಅಡಿಯಲ್ಲಿ ಹೂಡಿಕೆ ಮಾಡಿದರೆ ಮಗಳಿಗೆ 21 ವರ್ಷವಾದಾಗ ಅವಳನ್ನು ಲಕ್ಷಾಧಿಪತಿಯನ್ನಾಗಿ ಮಾಡಬಹುದು. ಅದು ಹೇಗೆ ಎನ್ನುವ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Sukanya Samriddhi Yojana
Koo

ಹಣವನ್ನು ತ್ವರಿತವಾಗಿ ಹೆಚ್ಚಿಸಬೇಕು ಎನ್ನುವ ಯೋಚನೆ ಇದ್ದರೆ ಅದನ್ನು ಬ್ಯಾಂಕ್ ನಲ್ಲಿ ಸುಮ್ಮನೆ ಇರಿಸುವ ಬದಲು ಪೋಸ್ಟ್ ಆಫೀಸ್ ನ (post office) ವಿವಿಧ ಯೋಜನೆಗಳಲ್ಲಿ ಒಂದಾದ ಸುಕನ್ಯಾ ಸಮೃದ್ಧಿ ಯೋಜನೆಯಂತಹ (Sukanya Samriddhi Yojana) ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಉತ್ತಮ ಆಯ್ಕೆ. ಇತ್ತೀಚಿನ ದಿನಗಳಲ್ಲಿ ಷೇರು ಮಾರುಕಟ್ಟೆ (share market), ಮ್ಯೂಚುವಲ್ ಫಂಡ್‌ಗಳಂತಹ (mutual fund) ಯೋಜನೆಗಳಲ್ಲಿ ಹೂಡಿಕೆದಾರರ ಸಂಖ್ಯೆ ವೇಗವಾಗಿ ಹೆಚ್ಚುತ್ತಿರುವುದು ಇದೇ ಕಾರಣಕ್ಕೆ.

ಹೂಡಿಕೆ ಮಾಡಲು ಜೊತೆಗೆ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದಾರೆ ಅನೇಕ ಸರ್ಕಾರಿ ಯೋಜನೆಗಳಿವೆ. ಭಾರತ ಸರ್ಕಾರವು ಮಕ್ಕಳ ಭವಿಷ್ಯದ ಮೇಲೆ ಕೇಂದ್ರೀಕೃತವಾಗಿರುವ ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಇದು ಉತ್ತಮ ಆದಾಯವನ್ನು ನೀಡುತ್ತದೆ. ಇಲ್ಲಿ ಅಂತಹ ಒಂದು ಸರ್ಕಾರಿ ಯೋಜನೆಯ ಬಗ್ಗೆ ತಿಳಿಸುತ್ತೇವೆ.

ಕೇಂದ್ರ ಸರ್ಕಾರದ ಈ ಯೋಜನೆಯು ಹೆಣ್ಣುಮಕ್ಕಳ ಮೇಲೆ ಕೇಂದ್ರೀಕೃತವಾಗಿದೆ. ದೇಶದ ಯಾವುದೇ ನಾಗರಿಕರು ತಮ್ಮ 10 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಗಳಿಗೆ ಈ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಬಹುದು. ಇದು ಸುಕನ್ಯಾ ಸಮೃದ್ಧಿ ಯೋಜನೆ. ಇದರ ಅಡಿಯಲ್ಲಿ ಯಾರಾದರೂ ವಾರ್ಷಿಕವಾಗಿ ಕನಿಷ್ಠ 250 ರೂ. ನಿಂದ ಗರಿಷ್ಠ 1.5 ಲಕ್ಷ ರೂ. ವರೆಗೆ ಠೇವಣಿ ಮಾಡಬಹುದು.

ಬಡ್ಡಿ ದರ

ಸುಕನ್ಯಾ ಸಮೃದ್ಧಿ ಯೋಜನೆಯ ದೊಡ್ಡ ವೈಶಿಷ್ಟ್ಯವೆಂದರೆ ದೇಶಾದ್ಯಂತ ನಡೆಯುತ್ತಿರುವ ಸರ್ಕಾರಿ ಯೋಜನೆಗಳಲ್ಲಿ ಇದು ಹೆಚ್ಚಿನ ಬಡ್ಡಿಯನ್ನು ನೀಡುವ ಯೋಜನೆಗಳಲ್ಲಿ ಒಂದಾಗಿದೆ. ಖಾತೆದಾರರಿಗೆ ಪ್ರತಿ ವರ್ಷ ಶೇ. 8.2 ದರದಲ್ಲಿ ಬಡ್ಡಿಯನ್ನು ನೀಡಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕೆಲವು ವರ್ಷಗಳವರೆಗೆ ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡುವ ಮೂಲಕ ಮಗಳಿಗಾಗಿ 71 ಲಕ್ಷಕ್ಕಿಂತ ಹೆಚ್ಚಿನ ಮೊತ್ತವನ್ನು ಸಿದ್ಧಪಡಿಸಬಹುದು.

Sukanya Samriddhi Yojana
Sukanya Samriddhi Yojana


ಸುಕನ್ಯಾ ಸಮೃದ್ಧಿ ಯೋಜನೆ ಎಂದರೇನು?

ಕೇಂದ್ರ ಸರ್ಕಾರ ಆರಂಭಿಸಿರುವ ಈ ಯೋಜನೆಯಡಿ ಯಾವುದೇ ಭಾರತೀಯ ಪ್ರಜೆ ತಮ್ಮ ಮಗಳ ಹೆಸರಿನಲ್ಲಿ ಈ ಯೋಜನೆಯನ್ನು ಆರಂಭಿಸಬಹುದು. ಈ ಯೋಜನೆಗೆ ಅರ್ಹರಾಗಲು ಮಗಳ ವಯಸ್ಸು 0 ರಿಂದ 10 ವರ್ಷಗಳ ನಡುವೆ ಇರಬೇಕು. ಈ ಯೋಜನೆಯನ್ನು ಅಂಚೆ ಕಚೇರಿಯ ಯಾವುದೇ ಶಾಖೆಯಲ್ಲಿ ತೆರೆಯಬಹುದು. ಈ ಯೋಜನೆಯಡಿಯಲ್ಲಿ, ನೀವು ಒಟ್ಟು 15 ವರ್ಷಗಳವರೆಗೆ ಹೂಡಿಕೆ ಮಾಡಬಹುದು. ಅದರ ಅನಂತರ 21 ವರ್ಷಗಳು ಪೂರ್ಣಗೊಂಡ ತಕ್ಷಣ ಪೂರ್ಣ ಮೊತ್ತವನ್ನು ಮುಕ್ತಾಯದ ಮೇಲೆ ನೀಡಲಾಗುತ್ತದೆ.

ವಿಶೇಷ ನಿಯಮಗಳು

ಸರ್ಕಾರವು ಪ್ರತಿ ತ್ರೈಮಾಸಿಕದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಗೆ ನೀಡುವ ಬಡ್ಡಿಯನ್ನು ಪರಿಷ್ಕರಿಸುತ್ತದೆ. ಬಡ್ಡಿಯ ಹೆಚ್ಚಳ ಅಥವಾ ಇಳಿಕೆಯು ಮುಕ್ತಾಯದ ಮೇಲೆ ಸ್ವೀಕರಿಸಿದ ಮೊತ್ತದ ಮೇಲೆ ಪರಿಣಾಮ ಬೀರುತ್ತದೆ. ಸುಕನ್ಯಾ ಸಮೃದ್ಧಿ ಖಾತೆಯಲ್ಲಿ ಹೂಡಿಕೆ ಮಾಡಿದ ಮೊತ್ತವನ್ನು ಪ್ರತಿ ವರ್ಷ ಏಪ್ರಿಲ್ 5 ರ ಮೊದಲು ಠೇವಣಿ ಮಾಡಬೇಕು. ಇದರಿಂದ ಮಗಳು ಗರಿಷ್ಠ ಬಡ್ಡಿ ಪಡೆಯಬಹುದು.

ಖಾತೆಯನ್ನು ತೆರೆಯುವ ಸಮಯದಲ್ಲಿ ಮಗಳಿಗೆ ಒಂದು ವರ್ಷವೂ ಆಗದೇ ಇದ್ದರೆ ಖಾತೆಯು 21 ವರ್ಷಗಳನ್ನು ಪೂರೈಸಿದಾಗ ಮಗಳು ಮೆಚ್ಯೂರಿಟಿ ಮೊತ್ತವನ್ನು ಪಡೆಯುತ್ತಾಳೆ. ಇದರ ಅರ್ಥ ಮಗಳು 21 ವರ್ಷಕ್ಕೆ ಬಂದಾಗ ಅಲ್ಲ. ಖಾತೆಯನ್ನು ತೆರೆದು 21 ವರ್ಷ ಪೂರ್ಣಗೊಂಡಾಗ.

ಇದನ್ನೂ ಓದಿ Fixed Deposits: ಪೋಸ್ಟ್ ಆಫೀಸ್ ಎಫ್‌ಡಿ; ಬಡ್ಡಿ ದರ ಎಷ್ಟು, ಏನೆಲ್ಲ ಲಾಭ?

71 ಲಕ್ಷ ಹೇಗೆ ಸಿಗುತ್ತದೆ?

ಈ ಯೋಜನೆಯಡಿಯಲ್ಲಿ ವಾರ್ಷಿಕವಾಗಿ 1.5 ಲಕ್ಷ ರೂಪಾಯಿಗಳನ್ನು 15 ವರ್ಷಗಳವರೆಗೆ ಠೇವಣಿ ಮಾಡಬಹುದು. ಅದರ ಮೇಲೆ ನಿಮಗೆ ಗರಿಷ್ಠ ಪ್ರಯೋಜನವನ್ನು ನೀಡಲಾಗುತ್ತದೆ. ಈ ಮೊತ್ತವನ್ನು 15 ವರ್ಷಗಳವರೆಗೆ ಠೇವಣಿ ಮಾಡಿದರೆ ಒಟ್ಟು 22,50,000 ರೂ. ಮುಕ್ತಾಯದ ಅನಂತರ 71,82,119 ರೂ. ಗಳನ್ನು ಪಡೆಯಬಹುದು. ಇದರಲ್ಲಿ ಬಡ್ಡಿಯಿಂದ ಪಡೆದ ಒಟ್ಟು ಮೊತ್ತ 49,32,119 ರೂ. ಮೆಚ್ಯೂರಿಟಿಯಲ್ಲಿ ಪಡೆದ ಈ ಮೊತ್ತದ ಮೇಲೆ ಯಾವುದೇ ತೆರಿಗೆ ಇರುವುದಿಲ್ಲ.

Continue Reading

ಮನಿ-ಗೈಡ್

Recurring Deposit: ಸಣ್ಣ, ಆರಂಭಿಕ ಹೂಡಿಕೆದಾರರಿಗೆ ಸೂಕ್ತ ಪೋಸ್ಟ್ ಆಫೀಸ್‌ನ ಆರ್‌ಡಿ; ಏನಿದರ ಲಾಭ?

ಪೋಸ್ಟ್ ಆಫೀಸ್‌ನಲ್ಲಿರುವ ಆರ್‌ಡಿ (Recurring Deposit) ಸಣ್ಣ ಹೂಡಿಕೆದಾರರು ಅಥವಾ ಆರಂಭಿಕರು ತೆರೆಯಬಹುದಾದ ರಾಷ್ಟ್ರೀಯ ಉಳಿತಾಯ ಮರುಕಳಿಸುವ ಠೇವಣಿ ಖಾತೆಯಾಗಿದೆ. ಈ ಉಳಿತಾಯ ಯೋಜನೆಯಲ್ಲಿ ಹಣಕಾಸಿನ ಅವಶ್ಯಕತೆಗಳಿಗೆ ಸಾಕಷ್ಟು ಹಣವನ್ನು ಸಂಗ್ರಹಿಸಬಹುದು. ಮಾತ್ರವಲ್ಲದೆ ಇನ್ನೂ ಹಲವು ವೈಶಿಷ್ಟ್ಯಗಳನ್ನು ಹೊಂದಿರುವ ಈ ಯೋಜನೆಯ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Recurring Deposit
Koo

ಪ್ರತಿಯೊಬ್ಬರಿಗೂ ದೊಡ್ಡ ಪ್ರಮಾಣದಲ್ಲಿ ಹಣವನ್ನು ಹೂಡಿಕೆ (investment) ಮಾಡುವುದು ಸಾಧ್ಯವಿಲ್ಲ. ವಿಶೇಷವಾಗಿ ಉದ್ಯೋಗಕ್ಕೆ ಇತ್ತೀಚೆಗಷ್ಟೇ ಸೇರಿದವರು, ಸಣ್ಣ ಹೂಡಿಕೆದಾರರು ಅಥವಾ ಆರಂಭಿಕರಿಗಾಗಿ (small investors or beginners) ಸಹಾಯ ಮಾಡಲು ಕೇಂದ್ರ ಸರ್ಕಾರವು (Indian Govt) ಉಳಿತಾಯ ಯೋಜನೆಯೊಂದನ್ನು (Recurring Deposit) ಪರಿಚಯಿಸಿದೆ.

ಇದು ಕೇಂದ್ರ ಸರ್ಕಾರದಿಂದ ನಿಯಂತ್ರಿಸಲ್ಪಟ್ಟಿರುವುದರಿಂದ ಹೂಡಿಕೆ ಮಾಡಲು ಸುರಕ್ಷಿತ ಆಯ್ಕೆಯಾಗಿದೆ. ಹಾಗಾದರೆ ಈ ಉಳಿತಾಯ ಯೋಜನೆ ಯಾವುದು, ಅದರ ವಿಶೇಷತೆಗಳು ಏನು ಎಂಬುದನ್ನು ನೋಡೋಣ.
ಪೋಸ್ಟ್ ಆಫೀಸ್‌ನಲ್ಲಿರುವ ಆರ್ ಡಿ ಸಣ್ಣ ಹೂಡಿಕೆದಾರರು ಅಥವಾ ಆರಂಭಿಕರು ತೆರೆಯಬಹುದಾದ ರಾಷ್ಟ್ರೀಯ ಉಳಿತಾಯ ಮರುಕಳಿಸುವ ಠೇವಣಿ ಖಾತೆಯಾಗಿದೆ.

ಆರ್ ಡಿ ಯೋಜನೆ

ಈ ಉಳಿತಾಯ ಯೋಜನೆಯು ನಿರ್ದಿಷ್ಟವಾಗಿ ಸಣ್ಣ ಹೂಡಿಕೆದಾರರಿಗಾಗಿ ಮಾಡಲ್ಪಟ್ಟಿದೆ. ಇದರಿಂದ ಅವರು ತಮ್ಮ ಹಣಕಾಸಿನ ಅವಶ್ಯಕತೆಗಳಿಗೆ ಸಾಕಷ್ಟು ಹಣವನ್ನು ಸಂಗ್ರಹಿಸಬಹುದು. ಇದಲ್ಲದೆ, ಠೇವಣಿಯ ಮೇಲೆ ಯಾವುದೇ ಗರಿಷ್ಠ ಮಿತಿಯಿಲ್ಲ.

ಯೋಜನೆ ಅವಧಿ ಎಷ್ಟು?

ರಾಷ್ಟ್ರೀಯ ಉಳಿತಾಯ ಮರುಕಳಿಸುವ ಠೇವಣಿ ಖಾತೆಯು 5 ವರ್ಷಗಳ ಮೆಚುರಿಟಿ ಅವಧಿಯ ಸಣ್ಣ ಉಳಿತಾಯ ಯೋಜನೆಯಾಗಿದೆ. ಈ ಉಳಿತಾಯ ಯೋಜನೆಯೊಂದಿಗೆ ಮಾಸಿಕ ಆಧಾರದ ಮೇಲೆ ಹೂಡಿಕೆ ಮಾಡಬಹುದು. ಇದಲ್ಲದೆ ಈ ಯೋಜನೆಯು ಒಬ್ಬ ವ್ಯಕ್ತಿಗೆ ಏಕ ಮತ್ತು ಜಂಟಿ ಖಾತೆಯನ್ನು ತೆರೆಯಲು ಅನುಮತಿಸುತ್ತದೆ.


ಹೂಡಿಕೆ ಹೇಗೆ?

ತಿಂಗಳಿಗೆ ಕನಿಷ್ಠ 100 ರೂ.ನಿಂದ ಹೂಡಿಕೆಯನ್ನು ಪ್ರಾರಂಭಿಸಬಹುದು. ಯಾವುದೇ ಗರಿಷ್ಠ ಮಿತಿ ಇಲ್ಲದಿರುವುದರಿಂದ ಎಷ್ಟು ಸಾಧ್ಯವೋ ಅಷ್ಟು ಹೂಡಿಕೆ ಮಾಡಬಹುದು. ಆದರೆ ಕ್ಯಾಲೆಂಡರ್ ತಿಂಗಳ 15ರಂದು ಖಾತೆಯನ್ನು ತೆರೆದರೆ ತಿಂಗಳ 15ನೇ ದಿನದವರೆಗೆ ಠೇವಣಿ ಮಾಡಬೇಕು ಎಂಬುದನ್ನು ಗಮನಿಸಬೇಕು. ಕ್ಯಾಲೆಂಡರ್ ತಿಂಗಳ 16ನೇ ದಿನ ಮತ್ತು ಕೊನೆಯ ಕೆಲಸದ ದಿನದ ನಡುವೆ ಖಾತೆಯನ್ನು ತೆರೆದರೆ, ಅನಂತರದ ಠೇವಣಿ ತಿಂಗಳ ಕೊನೆಯ ಕೆಲಸದ ದಿನದವರೆಗೆ ಮಾಡಲಾಗುತ್ತದೆ.

ಖಾತೆಯ ಬಡ್ಡಿ ದರ

ಈ ಉಳಿತಾಯ ಯೋಜನೆಯು ವಾರ್ಷಿಕ ಶೇ. 6.7ರಷ್ಟು ಬಡ್ಡಿ ದರವನ್ನು ನೀಡುತ್ತದೆ. ಐದು ವರ್ಷಗಳವರೆಗೆ 10,000 ರೂ. ಮಾಸಿಕ ಹೂಡಿಕೆಯೊಂದಿಗೆ 7 ಲಕ್ಷ ರೂ.ಗಳಿಗಿಂತ ಹೆಚ್ಚಿನ ಲಾಭವನ್ನು ಪಡೆಯಬಹುದು.

ಇದನ್ನೂ ಓದಿ: Anil Ambani: ಅನಿಲ್‌ ಅಂಬಾನಿಗೆ ಸೆಬಿ ಶಾಕ್‌; 5 ವರ್ಷ ಸೆಕ್ಯೂರಿಟೀಸ್‌ ಮಾರುಕಟ್ಟೆಯಿಂದ ನಿಷೇಧ, 25 ಕೋಟಿ ರೂ. ದಂಡ

ಯಾರು ಅರ್ಜಿ ಸಲ್ಲಿಸಬಹುದು?

ಯಾವುದೇ ಒಬ್ಬ ವಯಸ್ಕ, ಅಪ್ರಾಪ್ತ ವಯಸ್ಕ, ಅಸ್ವಸ್ಥ ಮನಸ್ಸಿನ ವ್ಯಕ್ತಿಯ ಪರವಾಗಿ ಪೋಷಕರು, 10 ವರ್ಷಕ್ಕಿಂತ ಮೇಲ್ಪಟ್ಟ ಅಪ್ರಾಪ್ತರು ತಮ್ಮ ಹೆಸರಿನಲ್ಲಿ ಈ ಖಾತೆಯನ್ನು ತೆರೆಯಬಹುದು. ಇದರ ಹೊರತಾಗಿ ಈ ಯೋಜನೆಯು ಹೂಡಿಕೆದಾರರಿಗೆ ಜಂಟಿ ಖಾತೆಯನ್ನು ತೆರೆಯಲು ಅವಕಾಶವಿದೆ. ಇದಲ್ಲದೆ ಬಹು ಖಾತೆಗಳನ್ನು ತೆರೆಯಲು ಅವಕಾಶವಿದೆ.

Continue Reading
Advertisement
Actor darshan
ಪ್ರಮುಖ ಸುದ್ದಿ4 ಗಂಟೆಗಳು ago

Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

KEA UGCET 2024
ಬೆಂಗಳೂರು4 ಗಂಟೆಗಳು ago

UGCET 2024 : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌

ಚಿಕ್ಕೋಡಿ5 ಗಂಟೆಗಳು ago

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

BBMP plans to make arrangements for food in areas where stray dogs do not get food
ಬೆಂಗಳೂರು5 ಗಂಟೆಗಳು ago

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Cm Siddaramaiah
ಬೆಂಗಳೂರು6 ಗಂಟೆಗಳು ago

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

Mahalaya Amavasya on Gandhi Jayanti Poultry Association demands withdrawal of ban on sale of meat
ಬೆಂಗಳೂರು7 ಗಂಟೆಗಳು ago

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Road Accident
ಬೆಂಗಳೂರು8 ಗಂಟೆಗಳು ago

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ; ಚಾಲಕನ ನಿದ್ರೆ ಮಂಪರಿಗೆ ಜೀವ ಬಿಟ್ಟಳು ಯುವತಿ

Techie robbery plans to delete her photo video from lovers mobile phone
ಬೆಂಗಳೂರು9 ಗಂಟೆಗಳು ago

Robbery case : ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ, ವಿಡಿಯೊ ಡಿಲೀಟ್‌ ಮಾಡಿಸಲು ಟೆಕ್ಕಿಯ ಖರ್ತನಾಕ್‌ ರಾಬರಿ ಪ್ಲ್ಯಾನ್‌

Hopcoms store loses charm in Bengaluru
ಬೆಂಗಳೂರು10 ಗಂಟೆಗಳು ago

HOPCOMS Outlets : ಬೆಂಗಳೂರಿನಲ್ಲಿ ಚಾರ್ಮ್‌ ಕಳೆದುಕೊಂಡ ಹಾಪ್‌ಕಾಮ್ಸ್‌ ಮಳಿಗೆ

fire accident
ಬೆಂಗಳೂರು ಗ್ರಾಮಾಂತರ10 ಗಂಟೆಗಳು ago

Fire Accident : ಹೊಸೂರು ಸಮೀಪದ ಟಾಟಾ ಕಂಪೆನಿಯಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು ಓಡಿ ಬಂದ ಕಾರ್ಮಿಕರು ‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌