Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು! - Vistara News

ದೇಶ

Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು!

Indian Chutneys: ಅಡುಗೆ ಎಂಬ ಶಬ್ದ ಕಿವಿಯ ಮೇಲೆ ಇದ್ದರೆ ಹೊಟ್ಟೆ ಜಾಗೃತವಾಗುತ್ತದೆ. ರುಚಿಯಾದ ಅಡುಗೆಯನ್ನು ಚಪ್ಪರಿಸಿ ತಿನ್ನುವುದೇ ಒಂದು ಭಾಗ್ಯ. ಇನ್ನು ಮಸಾಲೆ ಸಾಮಗ್ರಿಗಳನ್ನು ಬಳಸಿ ಮಾಡುವ ಭಾರತದ ಅಡುಗೆಗಳು ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿವೆ. ಭಾರತದ ಅಡುಗೆಗೆ ಈಗ ಇನ್ನೊಂದು ಗರಿ ಮೂಡಿದೆ. ಅದೇನೆಂದರೆ ಊಟದ ಎಲೆಯ ತುದಿಯ ಮೇಲೆ ಬೀಳುವ ಚಟ್ನಿ  ಈಗ ವಿಶ್ವದ 50 ಡಿಪ್‌ ಗಳಲ್ಲಿ ಸ್ಥಾನ ಪಡೆದಿದೆಯೆಂತೆ.  

VISTARANEWS.COM


on

Indian Chutneys
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಟ್ನಿ ಎಂದಾಗ ಬಾಯಲ್ಲಿ ನೀರು ಬರುವುದು ಸಹಜ. ದೋಸೆ, ಇಡ್ಲಿ ಮಾಡಿದಾಗ ಸಾಂಬಾರಿನ ಹಂಗಿಲ್ಲದೇ ಚಟ್ನಿ ಜೊತೆ ಇವುಗಳನ್ನು ಸವಿಯಬಹುದು. ಇನ್ನು ಬಿಸಿ ಬಿಸಿ ಅನ್ನದ (Rice) ಜೊತೆಗೆ ಈ ಚಟ್ನಿಯ ಕಾಂಬಿನೇಷನ್‌ ಸೂಪರ್‌ ಆಗಿರುತ್ತದೆ. ಹೆಚ್ಚಾಗಿ  ನಾವು ಕೊತ್ತಂಬರಿಸೊಪ್ಪಿನ ಚಟ್ನಿ, ಮಾವಿನಕಾಯಿ ಚಟ್ನಿ (Mango Chutney), ಟೊಮೆಟೊ ಚಟ್ನಿ, ಶೇಂಗಾ ಚಟ್ನಿ ಮಾಡುತ್ತೇವೆ. ಇನ್ನು ಹಲವು ಬಗೆಯ ತರಕಾರಿಗಳನ್ನು ಬಳಸಿ ರುಚಿ ರುಚಿಯಾದ ಚಟ್ನಿಗಳನ್ನು ಮಾಡಬಹುದು. ಚಟ್ನಿಯ ಕುರಿತು ಯಾಕಿಷ್ಟು ಪೀಠಿಕೆಯೆಂದರೆ, ಇದೀಗ ಭಾರತದ ಚಟ್ನಿಗಳಲ್ಲಿ (Indian Chutneys)ಎರಡು ಚಟ್ನಿಗಳು ವಿಶ್ವದ 50 ಡಿಪ್ ಗಳಲ್ಲಿ ಸ್ಥಾನ ಪಡೆದಿವೆಯಂತೆ!

ಟೇಸ್ಟ್ ಅಟ್ಲಾಸ್ ಇತ್ತೀಚೆಗೆ ಜೂನ್ 2024ರ  ಶ್ರೇಯಾಂಕದ ಪ್ರಕಾರ ವಿಶ್ವದ 50 ಅತ್ಯುತ್ತಮ ಡಿಪ್ ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಭಾರತೀಯ ಮಿಕ್ಸ್ ಚಟ್ನಿ  42ನೇ ಸ್ಥಾನ ಪಡೆದುಕೊಂಡಿದೆ. ಈ ಚಟ್ನಿಯನ್ನು ಬೇಯಿಸಿದ ಹಣ್ಣು ಮತ್ತು ತರಕಾರಿಗಳಿಂದ ತಯಾರಿಸಲಾಗುತ್ತದೆ. ಹಣ್ಣು ಹಾಗೂ ತರಕಾರಿಗಳನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಅದಕ್ಕೆ ಜೀರಿಗೆ, ಏಲಕ್ಕಿ, ಹುಣಸೆಹಣ್ಣು, ಶುಂಠಿ ಮತ್ತು ಅರಿಶಿನದಂತಹ ವಿವಿಧ ಮಸಾಲೆಗಳನ್ನು ಬೆರೆಸಿ ತಯಾರಿಸಲಾಗುತ್ತದೆಯಂತೆ. ಇದನ್ನು “ಭಾರತದ ರಾಷ್ಟ್ರೀಯ ಕಾಂಡಿಮೆಂಟ್ಸ್”ಎಂದು ಕರೆಯಲಾಗಿದೆ. ಹಾಗೇ ಟೇಸ್ಟ್ ಅಟ್ಲಾಸ್ ನ ಪಟ್ಟಿಯಲ್ಲಿ 47 ನೇ ಸ್ಥಾನದಲ್ಲಿ ನಮಗೆ ಪ್ರಿಯವಾದಂತಹ ಕೊತ್ತಂಬರಿ ಚಟ್ನಿ (ಧನಿಯಾ ಚಟ್ನಿ) ಹಾಗೂ ಕೊನೆಯ ಅಂದರೆ 50 ನೇ ಸ್ಥಾನದಲ್ಲಿ ಮಾವಿನ ಚಟ್ನಿ ಇದೆ. ಇದನ್ನು ಮಾವಿನ ಹಣ್ಣಿನಿಂದ ತಯಾರಿಸಲಾಗುತ್ತದೆ. ಈ ಮಾವಿನ ಚಟ್ನಿ ಹುಳಿ, ಸಿಹಿ ಮತ್ತು ಮಸಾಲೆಯ ಸುವಾಸನೆಯಿಂದ ಕೂಡಿತ್ತು ಎನ್ನಲಾಗಿದೆ.

ಅಲ್ಲದೇ ಈ ಪಟ್ಟಿಯಲ್ಲಿ ಲೆಬನಾನ್ ನಿಂದ ಟೌಮ್ ಮೊದಲ ಸ್ಥಾನದಲ್ಲಿದ್ದರೆ , ಮೆಕ್ಸಿಕನ್ ನ ಜನಪ್ರಿಯ ಡಿಲೈಟ್ ಗ್ವಾಕಮೋಲ್ 4ನೇ ಸ್ಥಾನದಲ್ಲಿದೆ. ಹಮ್ಮಸ್ 10 ನೇ ಸ್ಥಾನವನ್ನು ಪಡೆದುಕೊಂಡಿದೆ.

ಇದಕ್ಕೂ ಮೊದಲು ಹಲವಾರು ಭಾರತೀಯ ಭಕ್ಷ್ಯಗಳು ಟೇಸ್ಟ್ ಅಟ್ಲಾಸ್ ನ ಟಾಪ್ 50 ಪಟ್ಟಿಗಳಲ್ಲಿ ಸ್ಥಾನ ಪಡೆದಿತ್ತು. ವಡಾ ಪಾವ್, ಮಹಾರಾಷ್ಟ್ರದ ಪ್ರಸಿದ್ಧ ಬೀದಿ ಶೈಲಿಯ ತಿಂಡಿ ವಿಶ್ವದ ಅತ್ಯುತ್ತಮ ಸ್ಯಾಂಡ್ ವಿಚ್ ಗಳಲ್ಲಿ ಹೆಸರು ಪಡೆದಿವೆ.  ಅಷ್ಟೇ ಅಲ್ಲದೇ ಮೂರು ಭಾರತೀಯ ಸಿಹಿತಿಂಡಿಗಳು ವಿಶ್ವದ 10 ಅತ್ಯುತ್ತಮ ರೈಸ್ ಪುಡಿಂಗ್ ಗಳಲ್ಲಿ ಸ್ಥಾನ ಪಡೆದಿವೆ.

ಇದೇ ರೀತಿ ಭಾರತೀಯ ಎಲ್ಲಾ ಭಕ್ಷ್ಯಗಳು ವಿಶ್ವದ ಎಲ್ಲಾ ಕಡೆ ಮೆಚ್ಚುಗೆಯನ್ನು ಗಳಿಸುವಂತಾಗಲಿ. ಎಲ್ಲರ ನಾಲಿಗೆಯ ರುಚಿಯನ್ನು ಹೆಚ್ಚಿಸುವಂತಾಗಲಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Amartya Sen: ಭಾರತ ಹಿಂದೂ ರಾಷ್ಟ್ರವಲ್ಲ ಎನ್ನುವುದಕ್ಕೆ ಲೋಕಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿ: ಅಮರ್ತ್ಯ ಸೇನ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರಿದಿದೆ. ಅದನ್ನು ನಿಲ್ಲಿಸಿ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯ ಫಲಿತಾಂಶವು ಭಾರತ ಹಿಂದೂ ರಾಷ್ಟ್ರ ಅಲ್ಲ ಎನ್ನುವುದನ್ನು ಸಾರಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

By

Amartya Sen
Koo

ಕೋಲ್ಕತ್ತಾ: ಇತ್ತೀಚಿನ ಲೋಕಸಭಾ ಚುನಾವಣಾ (Lok Sabha Election) ಫಲಿತಾಂಶವು ಭಾರತ (India) ಹಿಂದೂ ರಾಷ್ಟ್ರವಲ್ಲ (Hindu Rashtra) ಎಂಬುದನ್ನು ಸೂಚಿಸುತ್ತದೆ ಎಂದು ನೋಬೆಲ್ ಪ್ರಶಸ್ತಿ ಪುರಸ್ಕೃತ (Nobel laureate) ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಪ್ರತಿಪಾದಿಸಿದರು. ಯುಎಸ್‌ನಿಂದ (US) ಕೋಲ್ಕತ್ತಾಗೆ (Kolkata) ಆಗಮಿಸಿದ ಅವರು ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರತಿ ಚುನಾವಣೆಯ ಅನಂತರ ನಾವು ಯಾವಾಗಲೂ ಬದಲಾವಣೆಯನ್ನು ಕಾಣುತ್ತೇವೆ ಎಂದ ಅವರು, ಭಾರತವು ಹಿಂದೂ ರಾಷ್ಟ್ರ ಅಲ್ಲ ಎಂಬುದು ಚುನಾವಣಾ ಫಲಿತಾಂಶಗಳಲ್ಲಿ ಪ್ರತಿಫಲಿಸುತ್ತದೆ ಎಂದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರೆದಿದೆ. ಅದನ್ನು ನಿಲ್ಲಿಸಿ ಎಂದು ಅವರು ಹೇಳಿದರು.

ಭಾರತವು ಜಾತ್ಯತೀತ ಸಂವಿಧಾನವನ್ನು ಹೊಂದಿರುವ ಜಾತ್ಯತೀತ ರಾಷ್ಟ್ರವಾಗಿರುವಾಗ ರಾಜಕೀಯವಾಗಿ ಮುಕ್ತ ಮನಸ್ಸಿನ ಅವಶ್ಯಕತೆಯಿದೆ. ಭಾರತವನ್ನು ಹಿಂದೂ ರಾಷ್ಟ್ರವಾಗಿ ಪರಿವರ್ತಿಸುವ ಕಲ್ಪನೆಯು ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ ಅವರು, ಹೊಸ ಕೇಂದ್ರ ಸಚಿವ ಸಂಪುಟವು ಹಿಂದಿನ ಸಂಪುಟದ ನಕಲು ಎಂದು ಅಭಿಪ್ರಾಯಪಟ್ಟರು.

ಹಲವು ಸಚಿವರಿಗೆ ಅವರ ಖಾತೆಗಳನ್ನು ಮುಂದುವರಿಸಲಾಗಿದೆ. ಸ್ವಲ್ಪಮಟ್ಟಿಗೆ ಪುನರ್ರಚನೆಯ ಹೊರತಾಗಿಯೂ, ರಾಜಕೀಯವಾಗಿ ಪ್ರಬಲರು ಇನ್ನೂ ಪ್ರಬಲರಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಭಾರತವು ಬ್ರಿಟಿಷರ ಆಳ್ವಿಕೆಯಲ್ಲಿದ್ದಾಗ ಜನರನ್ನು ಯಾವುದೇ ವಿಚಾರಣೆಯಿಲ್ಲದೆ ಜೈಲಿನಲ್ಲಿಡಲಾಗಿತ್ತು ಎಂದು ತಮ್ಮ ಬಾಲ್ಯದ ದಿನಗಳನ್ನು ಸೇನ್ ನೆನಪಿಸಿಕೊಂಡರು.

ನಾನು ಚಿಕ್ಕವನಿದ್ದಾಗ ನನ್ನ ಅನೇಕ ಚಿಕ್ಕಪ್ಪಂದಿರು ಮತ್ತು ಸೋದರಸಂಬಂಧಿಗಳನ್ನು ವಿಚಾರಣೆಯಿಲ್ಲದೆ ಜೈಲಿಗೆ ಹಾಕಲಾಯಿತು. ಭಾರತವು ಇದರಿಂದ ಮುಕ್ತವಾಗುತ್ತದೆ ಎಂದು ನಾವು ಭಾವಿಸಿದ್ದೇವೆ. ಇದು ನಿಲ್ಲದಿದ್ದಕ್ಕೆ ಕಾಂಗ್ರೆಸ್ ಕೂಡ ಕಾರಣ. ಅವರು ಅದನ್ನು ಬದಲಾಯಿಸಲಿಲ್ಲ. ಆದರೆ, ಪ್ರಸ್ತುತ ಸರ್ಕಾರದ ಅಡಿಯಲ್ಲಿ ಇದು ಹೆಚ್ಚು ಆಚರಣೆಯಲ್ಲಿದೆ ಎಂದು ಹೇಳಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹೊರತಾಗಿಯೂ ಬಿಜೆಪಿ ಫೈಜಾಬಾದ್ ಲೋಕಸಭಾ ಸ್ಥಾನವನ್ನು ಕಳೆದುಕೊಂಡಿರುವ ಬಗ್ಗೆ ಸೇನ್, ದೇಶದ ನಿಜವಾದ ಗುರುತನ್ನು ಮರೆಮಾಚುವ ಪ್ರಯತ್ನಗಳು ನಡೆದಿವೆ ಎಂದು ಹೇಳಿದರು.

ಇದನ್ನೂ ಓದಿ: Parliament Sessions: ಸಂಸತ್‌ ಅಧಿವೇಶನದಲ್ಲಿ ಇಂದು ರಾಷ್ಟ್ರಪತಿ ಭಾಷಣ; Live ನೋಡಿ

ಮಹಾತ್ಮ ಗಾಂಧಿ, ರವೀಂದ್ರನಾಥ ಟ್ಯಾಗೋರ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ದೇಶದಲ್ಲಿ ಈ ರೀತಿ ನಡೆಯಬಾರದಿತ್ತು. ಭಾರತವನ್ನು ಹಿಂದೂ ರಾಷ್ಟ್ರ’ ಎಂದು ಬಿಂಬಿಸಲು ತುಂಬಾ ಹಣ ಖರ್ಚು ಮಾಡಿ ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದೆ. ಇದು ಭಾರತದ ನಿಜವಾದ ಗುರುತನ್ನು ನಿರ್ಲಕ್ಷಿಸುವ ಪ್ರಯತ್ನವನ್ನು ತೋರಿಸುತ್ತದೆ ಮತ್ತು ಇದು ಬದಲಾಗಬೇಕು ಅವರು ಹೇಳಿದರು.

ಭಾರತದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ ಮತ್ತು ಪ್ರಾಥಮಿಕ ಶಿಕ್ಷಣ ಮತ್ತು ಪ್ರಾಥಮಿಕ ಆರೋಗ್ಯದಂತಹ ಕ್ಷೇತ್ರಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಸೇನ್ ಹೇಳಿದರು.

Continue Reading

ಕ್ರೈಂ

Orissa High Court: ‘ದಿನಕ್ಕೆ ಹಲವು ಬಾರಿ ನಮಾಜ್‌ ಮಾಡ್ತಾನೆʼ- ಅಪ್ರಾಪ್ತೆ ಹತ್ಯಾಚಾರ ಎಸಗಿದವನ ಗಲ್ಲು ಶಿಕ್ಷೆ ರದ್ದುಪಡಿಸಿದ ಕೋರ್ಟ್‌

Orissa High Court: ಆರು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶೇಖ್ ಆಸಿಫ್ ಅಲಿಯ ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿ ಒರಿಸ್ಸಾ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಆಸಿಫ್ ದಿನಕ್ಕೆ ಹಲವು ಬಾರಿ ನಿರಂತರವಾಗಿ ನಮಾಜ್ ಮಾಡುತ್ತಿರುವುದನ್ನು ಗಮನಿಸಿದ ಕೋರ್ಟ್‌ ಆತ ತನ್ನ ಕೃತ್ಯಕ್ಕೆ ಪ್ರಾಯಶ್ಚಿತ ಪಡುತ್ತಿರುವುದನ್ನು ಉಲ್ಲೇಖಿಸಿದ ಈ ತೀರ್ಪು ನೀಡಿದೆ. ಜತೆಗೆ ಅಪರಾಧವನ್ನು ಪೂರ್ವಯೋಜಿತ ರೀತಿಯಲ್ಲಿ ಮಾಡಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿ ಶಿಕ್ಷೆಯನ್ನು ಕಡಿತಗೊಳಿಸಿದೆ.

VISTARANEWS.COM


on

Orissa High Court
Koo

ಭುವನೇಶ್ವರ: ಆರು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶೇಖ್ ಆಸಿಫ್ ಅಲಿ (Sheikh Asif Ali)ಯ ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿ ಒರಿಸ್ಸಾ ಹೈಕೋರ್ಟ್‌ (Orissa High Court) ತೀರ್ಪು ನೀಡಿದೆ.

ಆಸಿಫ್ ದಿನಕ್ಕೆ ಹಲವು ಬಾರಿ ನಿರಂತರವಾಗಿ ನಮಾಜ್ ಮಾಡುತ್ತಿರುವುದನ್ನು ಗಮನಿಸಿದ ಕೋರ್ಟ್‌ ಆತ ತನ್ನ ಕೃತ್ಯಕ್ಕೆ ಪ್ರಾಯಶ್ಚಿತ ಪಡುತ್ತಿರುವುದನ್ನು ಉಲ್ಲೇಖಿಸಿದ ಈ ತೀರ್ಪು ನೀಡಿದೆ. ಜತೆಗೆ ನ್ಯಾಯಮೂರ್ತಿ ಎಸ್.ಕೆ.ಸಾಹೂ ಮತ್ತು ನ್ಯಾಯಮೂರ್ತಿ ಆರ್.ಕೆ.ಪಟ್ನಾಯಕ್ ಅವರನ್ನೊಳಗೊಂಡ ನ್ಯಾಯಪೀಠವು, ಶೇಖ್ ಆಸಿಫ್ ಅಲಿ ವಿರುದ್ಧ ಮರಣ ದಂಡನೆ ವಿಧಿಸಬಹುದಾದ ಪ್ರಬಲ ಸಾಕ್ಷಿಗಳಿಲ್ಲ ಎಂದು ತಿಳಿಸಿದೆ. ಈ ಪ್ರಕರಣವು ಸಾಂದರ್ಭಿಕ ಪುರಾವೆಗಳನ್ನು ಆಧರಿಸಿದೆ ಮತ್ತು ಅಪರಾಧವನ್ನು ಪೂರ್ವಯೋಜಿತ ರೀತಿಯಲ್ಲಿ ಮಾಡಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿ ಶಿಕ್ಷೆಯನ್ನು ಕಡಿತಗೊಳಿಸಿದೆ.

ಘಟನೆಯ ಹಿನ್ನೆಲೆ

ಇದು ಸುಮಾರು 10 ವರ್ಷಗಳ ಹಿಂದಿನ ಘಟನೆ. 2014ರ ಆಗಸ್ಟ್‌ 21ರಂದು ಆರು ವರ್ಷದ ಸಂತ್ರಸ್ತೆ ತನ್ನ ಅಪ್ರಾಪ್ತ ವಯಸ್ಸಿನ ಕಸಿನ್‌ ಜತೆ ಅಪರಾಹ್ನ 2 ಗಂಟೆ ಸುಮಾರಿಗೆ ಚಾಕೋಲೆಟ್‌ ಖರೀದಿಸಲು ಅಂಗಡಿಗೆ ತೆರಳಿದ್ದಳು. 3 ಗಂಟೆಯಾದರೂ ಬಾಲಕಿ ಹಿಂದಿರುಗದ ಕಾರಣ ಮನೆಯವರಿಗೆ ಗಾಬರಿ ಅಕ್ಕ ಪಕ್ಕದ ಮನೆಯವರಿಗೆ ಸುದ್ದಿ ತಿಳಿಸಿದರು. ಹೀಗೆ ಅವರೆಲ್ಲ ಸೇರಿ ಬಾಲಕಿಯನ್ನು ಹುಡುಕತೊಡಗಿದರು.

ಅನೇಕ ತಾಸಿನ ಹುಡುಕಾಟದ ಬಳಿಕ ಆರು ವರ್ಷದ ಬಾಲಕಿ ನಗ್ನಾವಸ್ಥೆಯಲ್ಲಿ, ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಶೇಖ್ ಖೈರುದ್ದೀನ್‌ ಎಂಬಾತನ ಮನೆಯ ಸಮೀಪ ಕಂಡು ಬಂದಿದ್ದಳು. ಕೂಡಲೇ ಆಕೆಯನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿಂದ ಅವರು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜಿಗೆ ದಾಖಲಿಸುವಂತೆ ಸಲಹೆ ನೀಡಿದರು. ಆದರೆ ಅಷ್ಟರಲ್ಲಿ ಬಾಲಕಿ ಅಸುನೀಗಿದ್ದಳು.

ಶೇಕ್‌ ಆಸಿಫ್‌ ಅಲಿ ಮತ್ತು ಶೇಕ್‌ ಅಕಿಲ್‌ ಅಲಿ ಬಾಲಕಿಯನ್ನು ಬಲವಂತದಿಂದ ಕರೆದೊಯ್ದಿರುವುದನ್ನು ನೋಡಿರುವುದಾಗಿ ಆಕೆಯ ಜತೆಗಿದ್ದ ಕಸಿನ್‌ ತಿಳಿಸಿದ್ದಳು. ಹೀಗಾಗಿ ಸಂತ್ರಸ್ತೆಯ ಕುಟುಂಬ ನೀಡಿದ ದೂರಿನಂತೆ ಈ ಇಬ್ಬರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302, 376-ಡಿ ಮತ್ತು 376-ಎ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಮರಣೋತ್ತರ ವರದಿ ಮತ್ತು ವಿಚಾರಣೆ ವೇಳೆ, ಆರೋಪಿಗಳು ಬಾಲಕಿಯ ಬಾಯಿಯನ್ನು ಮುಚ್ಚಿಕೊಂಡು ಅವಳನ್ನು ಕರೆದೊಯ್ದು, ಅತ್ಯಾಚಾರ ಎಸಗಿ ನಂತರ ಕತ್ತು ಹಿಸುಕಿದ್ದಾರೆ ಎಂದು ತಿಳಿದು ಬಂದಿತ್ತು. ಬಳಿಕ ವಿಚಾರಣಾ ನ್ಯಾಯಾಲಯವು ಐಪಿಸಿ ಮತ್ತು ಪೋಕ್ಸೊ ಸೆಕ್ಷನ್‌ ಅಡಿಯಲ್ಲಿ ಆರೋಪಿಗಳನ್ನು ತಪ್ಪಿತಸ್ಥರೆಂದು ಘೋಷಿಸಿದ್ದರೂ, ಒರಿಸ್ಸಾ ಹೈಕೋರ್ಟ್ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಶೇಖ್ ಅಕಿಲ್ ಅಲಿಯನ್ನು ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಿತ್ತು.

ಶೇಖ್ ಆಸಿಫ್ ಅಲಿ ಪ್ರಕರಣದಲ್ಲಿ ತೀರ್ಪು ನೀಡಿ “ಶೇಖ್ ಆಸಿಫ್ ಅಲಿ ವಿರುದ್ಧ ಐಪಿಸಿಯ ಸೆಕ್ಷನ್ 376-ಡಿ ಅಡಿಯಲ್ಲಿ ಆರೋಪವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ. ಆದರೆ ಐಪಿಸಿಯ ಸೆಕ್ಷನ್ 302, 376-ಎ ಮತ್ತು ಪಿಒಸಿಯ ಸೆಕ್ಷನ್ 6ರ ಅಡಿಯಲ್ಲಿ ತಪ್ಪಿತಸ್ಥನೆಂದು ಸಾಬೀತಾಗಿದೆʼʼ ಎಂದು ಹೇಳಿತ್ತು. ಇದೀಗ ಪೂರಕ ಸಾಕ್ಷ್ಯಾಧಾರಗಳ ಕೊರತೆಯಿಂದ ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸಿದೆ.

ಇದನ್ನೂ ಓದಿ: Physical Abuse : ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆಗೆ ಯತ್ನಿಸಿದ ಕಾಮುಕ

Continue Reading

ದೇಶ

Parliament Sessions: ಸಂಸತ್‌ ಅಧಿವೇಶನದಲ್ಲಿ ಇಂದು ರಾಷ್ಟ್ರಪತಿ ಭಾಷಣ; Live ನೋಡಿ

Parliament Sessions: 18ನೇ ಲೋಕಸಭೆಯ ಮೊದಲ ಅಧಿವೇಶನದ ನಾಲ್ಕನೇ ದಿನವಾದ ಇಂದು ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ.

VISTARANEWS.COM


on

Parliament Sessions
Koo

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ (Parliament Sessions)ದ ನಾಲ್ಕನೇ ದಿನವಾದ ಇಂದು (ಜೂನ್‌ 27) ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಭಾಷಣ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ಬಳಿಕ ನಡೆಯುತ್ತಿರುವ ಈ ಮೊದಲ ಅಧಿವೇಶನ ಜೂನ್‌ 24ರಂದು ಆರಂಭವಾಗಿದ್ದು, ಜು. 3ರವರೆಗೆ ನಡೆಯಲಿದೆ. ರಾಜ್ಯಸಭೆಯ ಅಧಿವೇಶನ ಜೂ. 27ರಿಂದ ಜು. 3ರವರೆಗೆ ನಡೆಯಲಿದೆ.

ಭಾರತೀಯ ಸಂವಿಧಾನದ 87ನೇ ವಿಧಿಯ ಪ್ರಕಾರ ರಾಷ್ಟ್ರಪತಿ ಪ್ರತಿ ಲೋಕಸಭಾ ಚುನಾವಣೆಯ ನಂತರದ ಮೊದಲ ಅಧಿವೇಶನದ ಆರಂಭದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡುತ್ತಾರೆ. ದ್ರೌಪದಿ ಮುರ್ಮು ಅವರು ತಮ್ಮ ಭಾಷಣದ ಮೂಲಕ ಸರ್ಕಾರದ ಕಾರ್ಯಕ್ರಮಗಳು ಮತ್ತು ನೀತಿಗಳನ್ನು ವಿವರಿಸಲಿದ್ದಾರೆ. ಅಧಿವೇಶನದ ಮೊದಲ ಎರಡು ದಿನ ಸಂಸದರು ಪ್ರಮಾಣ ವಚನ ಸ್ವೀಕರಿಸಿದರೆ ಮೂರನೇ ದಿನ ಸ್ಪೀಕರ್‌ ಆಯ್ಕೆ ನಡೆಯಿತು.

ಲೋಕಸಭಾ ಸ್ಪೀಕರ್‌ ಆಗಿ ಓಂ ಬಿರ್ಲಾ ನೇಮಕ

ಇನ್ನು ಬುಧವಾರ ನಡೆದ ಲೋಕಸಭಾ ಸ್ಪೀಕರ್‌ ಆಯ್ಕೆಯ ಚುನುವಾಣೆಯಲ್ಲಿ ಬಿಜೆಪಿಯ ಓಂ ಬಿರ್ಲಾ ನೇಮಕಗೊಂಡಿದ್ದಾರೆ. ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಕಣಕ್ಕಿಳಿದಿದ್ದರು. ಭಾರೀ ಕುತೂಹಲ ಮೂಡಿಸಿದ್ದ ಈ ಐತಿಹಾಸಿಕ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದರು.

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಹಂಗಾಮಿ ಸ್ಪೀಕರ್‌ ಭಾರ್ತೃಹರಿ ಮಹತಾಬ್‌ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

ಇನ್ನು ಎರಡನೇ ಬಾರಿ ಲೋಕಸಭೆ ಸ್ಪೀಕರ್‌ ಆಗಿ ಆಯ್ಕೆ ಆಗಿರುವ ಓಂ ಬಿರ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಎಲ್ಲಾ ಸಂಸತ್‌ ಸದಸ್ಯರು ಪಕ್ಷಾತೀತ ಅಭಿನಂದನೆ ಸಲ್ಲಿಸಿದರು.

ಮೋದಿ ಮಾತನಾಡಿ, ʼʼಸದನದ ಪರವಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ಅಮೃತ ಕಾಲದ ಸಮಯದಲ್ಲಿ ನೀವು ಎರಡನೇ ಬಾರಿಗೆ ಈ ಜವಾಬ್ದಾರಿಯುತ ಹುದ್ದೆ ಅಲಂಕರಿಸಿರುವುದು ಬಹಳ ಸಂತಸ ತಂದಿದೆ. ನಿಮ್ಮ ಅನುಭವದೊಂದಿಗೆ, ಮುಂದಿನ 5 ವರ್ಷಗಳವರೆಗೆ ನೀವು ನಮಗೆ ಮಾರ್ಗದರ್ಶನ ನೀಡುತ್ತೀರಿ ಎಂದು ನಾವು ಭಾವಿಸುತ್ತೇವೆ. ನಿಮ್ಮ ಮುಖದ ಮೇಲಿನ ಸಿಹಿಯಾದ ನಗು ಇಡೀ ಸದನವನ್ನು ಸಂತೋಷವನ್ನಾಗಿರಿಸುತ್ತದೆʼʼ ಎಂದು ಹೇಳಿದರು.

ಇನ್ನು ರಾಹುಲ್‌ ಗಾಂಧಿ ಮಾತನಾಡಿ, “ಪ್ರತಿಪಕ್ಷಗಳಿಗೆ ಮಾತನಾಡಲು ಅವಕಾಶ ನೀಡಿ ಭಾರತದ ಜನರನ್ನು ಪ್ರತಿನಿಧಿಸಲು ಅವಕಾಶ ನೀಡುವ ಮೂಲಕ, ನೀವು ಭಾರತದ ಸಂವಿಧಾನವನ್ನು ರಕ್ಷಿಸುವ ನಿಮ್ಮ ಕರ್ತವ್ಯವನ್ನು ನೀವು ಸರಿಯಾಗಿ ನಿರ್ವಹಿಸುತ್ತೀರಿ ಎಂಬ ಬಗ್ಗೆ ನಮಗೆ ವಿಶ್ವಾಸವಿದೆ. ನಾನು ಮತ್ತೊಮ್ಮೆ ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆʼʼ ಎಂದು ನುಡಿದರು. ಈ ಬಾರಿ ಪ್ರತಿಪಕ್ಷ ಪ್ರಬಲವಾಗಿರುವುದರಿಂದ ಅಧಿವೇಶನ ಯಾವ ರೋತಿ ನಡೆಯಲಿದೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Continue Reading

Latest

Train Tragedy: ರೈಲಿನ ಮೇಲಿನ ಬರ್ತ್‌ನಲ್ಲಿದ್ದ ವ್ಯಕ್ತಿ ಉರುಳಿ ಬಿದ್ದು ಕೆಳ ಬರ್ತ್‌ನ ಪ್ರಯಾಣಿಕ ಸಾವು

Train Tragedy: ಸಾವು ಯಾವಾಗ ಯಾರಿಗೆ ಬರುತ್ತದೆ ಎಂದು ಹೇಳಲಾಗುವುದಿಲ್ಲ. ಈಗ ಇದ್ದ ಮನುಷ್ಯ ಇನ್ನೊಂದು ಕ್ಷಣ ಇರುವುದಿಲ್ಲ. ಜೀವನ ನೀರ ಮೇಲಿನ ಗುಳ್ಳೆಯಂತೆ! ಆಯಸ್ಸು ಮುಗಿತು ಎಂದರೆ ಸಾವು ಯಾವ ದಿಕ್ಕಿನಲ್ಲಿ ಯಾವ ರೂಪದಲ್ಲಿ ಬರುತ್ತದೆ ಎಂದು ಹೇಳಲಾಗುವುದಿಲ್ಲ. ರೈಲಿನಲ್ಲಿ ಪ್ರಯಾಣ ಮಾಡಿದರೆ ಯಾವುದೇ ತೊಂದರೆ ಇರಲ್ಲ ಎಂದು ಕೆಲವರು ರೈಲಿನ ಪ್ರಯಾಣ ಇಷ್ಟಪಡುತ್ತಾರೆ. ಆದರೆ ಇಲ್ಲೊಬ್ಬರಿಗೆ ಸಾವು ರೈಲಿನಲ್ಲಿಯೇ ಕಾದಿತ್ತು. ವರದಿ ಇಲ್ಲಿದೆ.

VISTARANEWS.COM


on

Train Tragedy
Koo

ನವದೆಹಲಿ: ಸಾವು ಯಾವಾಗ ಯಾರಿಗೆ ಹೇಗೆ ಬರುತ್ತದೆ ಎಂದು ಹೇಳಲಾಗುವುದಿಲ್ಲ. ಈಗ ಇದ್ದ ಮನುಷ್ಯ ಇನ್ನೊಂದು ಕ್ಷಣ ಇರುವುದಿಲ್ಲ. ಜೀವನ ನೀರ ಮೇಲಿನ ಗುಳ್ಳೆಯಂತೆ! ಆಯಸ್ಸು ಮುಗಿತು ಎಂದರೆ ಸಾವು ಯಾವ ದಿಕ್ಕಿನಲ್ಲಿ ಯಾವ ರೂಪದಲ್ಲಿ ಬರುತ್ತದೆ ಎಂದು ಹೇಳಲಾಗುವುದಿಲ್ಲ. ಅದಕ್ಕೆ ನಿದರ್ಶನ ಎಂಬಂತೆ ಇದೆ ಈ ದುರ್ಘಟನೆ. ನವದೆಹಲಿಗೆ ತೆರಳುತ್ತಿದ್ದ ರೈಲಿನಲ್ಲಿ (Train Tragedy) ಆಕಸ್ಮಿಕವಾಗಿ ಅವಘಡವೊಂದು ಸಂಭವಿಸಿದ್ದು, ಇದರಿಂದ 62 ವರ್ಷದ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ.

ಎಂ ಅಲಿಖಾನ್ (62) ಸಾವನಪ್ಪಿದ ವ್ಯಕ್ತಿ. ಇವರು ಜೂನ್ 18ರಂದು ನವದೆಹಲಿಗೆ ತೆರಳುತ್ತಿದ್ದ ರೈಲಿನಲ್ಲಿ ಕೆಳ ಬರ್ತ್ ನಲ್ಲಿ ಮಲಗಿದ್ದರು. ರೈಲು ತೆಲಂಗಾಣದ ವಾರಂಗಲ್ ಗೆ ತಲುಪಿದಾಗ ಅವರ ಮೇಲಿನ ಬರ್ತ್ ನಲ್ಲಿ ಪ್ರಯಾಣಿಕರೊಬ್ಬರು ಮಲಗಿದ್ದು, ಸಡನ್ ಆಗಿ ಮೇಲಿನ ಬರ್ತ್ ಕುಸಿದು ಇವರ ಮೈಮೇಲೆ ಬಿದ್ದಿದೆ. ಇದರಿಂದ ಅಲಿಖಾನ್ ಅವರ ಕುತ್ತಿಗೆಯ ಮೂರು ಮೂಳೆಗಳು ಮುರಿದಿವೆ. ತಕ್ಷಣ ರೈಲ್ವೆ ಅಧಿಕಾರಿಗಳು ಅವರನ್ನು ವಾರಂಗಲ್ ನ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ ಅಲಿಖಾನ್ ಅವರು ಗಂಭೀರವಾಗಿ ಗಾಯಗೊಂಡ ಹಿನ್ನಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ನ ಕಿಂಗ್ಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರಗೆ ಸ್ಥಳಾಂತರಿಸಲಾಗಿತ್ತು. ಆದರೆ ಜೂನ್ 21ರಂದು ಮೂರು ಶಸ್ತ್ರಚಿಕಿತ್ಸೆಗಳ ಬಳಿಕ ಅವರು ಸಾವನಪ್ಪಿದ್ದಾರೆ. ಜೂನ್ 19ರಂದು ಅವರ ಪಾರ್ಥಿವ ಶರೀರವನ್ನು ಕೇರಳದ ಮರಂಚೇರಿಯಲ್ಲಿರುವ ಅವರ ನಿವಾಸಕ್ಕೆ ತರಲಾಗಿದೆ. ಮಧ್ಯಾಹ್ನ ವಡನುಕ್ಕುದಲ್ಲಿರುವ ಕುನ್ನತ್ ಜುಮಾ ಮಸೀದಿಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ಇನ್ನು ರೈಲ್ವೆ ಅಧಿಕಾರಿಗಳು ಹೇಳುವುದೇನೆಂದರೆ, ಸ್ಲಿಪರ್‌ ಕೋಚ್‌ನ ಬರ್ತ್‌ನಲ್ಲಿ ಯಾವುದೇ ತೊಂದರೆ ಇಲ್ಲ. ಮೇಲಿನ ಬರ್ತ್‌ನಲ್ಲಿರುವವರು ಸರಿಯಾಗಿ ಸರಪಳಿಯನ್ನು ಹಾಕದೇ ಇದ್ದ ಕಾರಣ ಮೇಲಿನ ಸೀಟು ಕೆಳಗೆ ಬಿದ್ದಿದೆ. ಇದರಿಂದ ಈ ಅವಘಡ ಉಂಟಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

ರೈಲಿನಲ್ಲಿ ಈ ರೀತಿಯ ಆಕಸ್ಮಿಕ ಘಟನೆಗಳು ನಡೆಯುತ್ತಿದ್ದು, ಜನರು ಅಚಾನಕ್ ಆಗಿ ಸಾವನಪ್ಪುತ್ತಿರುವುದು ನೋಡಿದರೂ ಕೂಡ ನಮ್ಮ ಯುವಜನತೆ ಮಾತ್ರ ಚಲಿಸುತ್ತಿರುವ ರೈಲಿನಲ್ಲಿ ರೀಲ್ಸ್, ಮೋಜು ಮಸ್ತಿ ಮಾಡಿ ತಮ್ಮ ಪ್ರಾಣಕ್ಕೆ ತಾವೇ ಕುತ್ತು ತಂದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಮುಂಬೈ ಯುವತಿಯೊಬ್ಬಳು ಚಲಿಸುತ್ತಿದ್ದ ರೈಲಿನ ಬಾಗಿಲಿನಲ್ಲಿ ನಿಂತು ರೀಲ್ ಗಾಗಿ ಡ್ಯಾನ್ಸ್ ಮಾಡಿ ಸುದ್ದಿಯಾಗಿದ್ದಾಳೆ. ಜನರು ಆಕೆಯ ಮೇಲೆ ಆಕ್ರೋಶ ವ್ಯಕ್ತಪಡಿಸಿದ ವಿಚಾರ ಈಗಾಗಲೇ ತಿಳಿದಿದೆ.

Continue Reading
Advertisement
Share Market
ವಾಣಿಜ್ಯ8 mins ago

Share Market: ಮೊದಲ ಬಾರಿಗೆ 79,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್; ಗರಿಷ್ಠ ಮಟ್ಟ ತಲುಪಿದ ನಿಫ್ಟಿ

pattanagere shed actor darshan renuka swamy murder
ಕ್ರೈಂ29 mins ago

Actor Darshan: ಪಟ್ಟಣಗೆರೆ ಶೆಡ್ಡಾ? ನಾವು ಅಲ್ಲಿಗೆ ಹೋಗೋಲ್ಲ ಅನ್ನುತ್ತಿರುವ ವಾಹನ ಮಾಲಿಕರು!

Chris Silverwood
ಪ್ರಮುಖ ಸುದ್ದಿ34 mins ago

Chris Silverwood : ಲಂಕಾ ಕೋಚ್​ ಕ್ರಿಸ್​ ಸಿಲ್ವರ್​ವುಡ್​​ ಏಕಾಏಕಿ ರಾಜೀನಾಮೆ

Viral Video
Latest38 mins ago

Viral Video : ನೋಯ್ಡಾದಲ್ಲಿ ನಿರ್ಮಾಣವಾಗುತ್ತಿದೆ ಲಕ್ಷುರಿ ಅಪಾರ್ಟ್‌ಮೆಂಟ್‌! ಇದರ ಬೆಲೆ ಅಬ್ಬಬ್ಬಾ!

Yelahanka railway Newborn baby found at Yelahanka railway station in Bengaluru
ಬೆಂಗಳೂರು40 mins ago

Yelahanka Railway : ರೈಲು ಬೋಗಿಯ ಕಸದ ಬುಟ್ಟಿಯಲ್ಲಿತ್ತು ನವಜಾತ ಶಿಶು; ನರಳಾಡಿ ಪ್ರಾಣಬಿಟ್ಟ ಕಂದ

Women Arrest
Latest42 mins ago

Women Arrest: ಅತ್ಯಾಚಾರಿಗೆ ಬೈದಿದ್ದಕ್ಕೆ ಜೈಲುಪಾಲಾದ ಮಹಿಳೆ! ಇದೆಂಥಾ ನ್ಯಾಯ?

Indian Origin Doctor
ಕ್ರೈಂ43 mins ago

Indian Origin Doctor: ಅಮೆರಿಕದಲ್ಲಿ ಪತ್ನಿ ಮಕ್ಕಳ ಕೊಲೆಗೆ ಯತ್ನ; ಭಾರತೀಯ ಮೂಲದ ವೈದ್ಯನಿಗೆ ಜೈಲು ಶಿಕ್ಷೆ ಬದಲು ಮಾನಸಿಕ ಚಿಕಿತ್ಸೆ

Amartya Sen
ದೇಶ46 mins ago

Amartya Sen: ಭಾರತ ಹಿಂದೂ ರಾಷ್ಟ್ರವಲ್ಲ ಎನ್ನುವುದಕ್ಕೆ ಲೋಕಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿ: ಅಮರ್ತ್ಯ ಸೇನ್

Gold Rate Today
ಚಿನ್ನದ ದರ53 mins ago

Gold Rate Today: ಆಭರಣ ಖರೀದಿಗೆ ಇದು ಗೋಲ್ಡನ್‌ ಟೈಮ್‌; ಇಳಿದ ಚಿನ್ನದ ದರ

Louis Kimber
ಪ್ರಮುಖ ಸುದ್ದಿ1 hour ago

Louis Kimber: 127 ಎಸೆತಗಳಲ್ಲಿ 243 ರನ್ ಚಚ್ಚಿ ಹಲವು ದಾಖಲೆಗಳನ್ನು ಬರೆದ ಕೌಂಟಿ ಆಟಗಾರ ಲೂಯಿಸ್ ಕಿಂಬರ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ7 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 weeks ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 weeks ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌