Actor Darshan: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದವನ ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ಯಾರು ಈ ಪವಿತ್ರಾ? - Vistara News

ಸಿನಿಮಾ

Actor Darshan: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದವನ ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ಯಾರು ಈ ಪವಿತ್ರಾ?

Actor Darshan: ದರ್ಶನ್‌ ಅವರಿಗೆ ಆತ್ಮೀಯರಾಗಿರುವ ನಟಿ ಪವಿತ್ರಾ ಗೌಡ ಅವರ ಫೋಟೊಗಳಿಗೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲವಾಗಿ ಕಮೆಂಟ್‌ ಮಾಡುತ್ತಿದ್ದ ರೇಣುಕಾಸ್ವಾಮಿಯನ್ನು ಕೆಲವು ದಿನಗಳ ಹಿಂದೆ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ದರ್ಶನ್‌ ಭಾಗಿಯಾಗಿದ್ದರು ಎನ್ನುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್‌ ಮಾಡಲಾಗಿದೆ. ಹಾಗಾದರೆ ಯಾರು ಈ ಪವಿತ್ರಾ ಗೌಡ? ಇಲ್ಲಿದೆ ಉತ್ತರ.

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಪೊಲೀಸರು ಸ್ಯಾಂಡಲ್‌ವುಡ್‌ ನಟ ದರ್ಶನ್‌ (Actor Darshan) ಅವರನ್ನು ಬಂಧಿಸಿದ್ದಾರೆ. ದರ್ಶನ್‌ ಅವರಿಗೆ ಆತ್ಮೀಯರಾಗಿರುವ ನಟಿ ಪವಿತ್ರಾ ಗೌಡ ಅವರ ಫೋಟೊಗಳಿಗೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲವಾಗಿ ಕಮೆಂಟ್‌ ಮಾಡುತ್ತಿದ್ದ ರೇಣುಕಾಸ್ವಾಮಿಯನ್ನು ಕೆಲವು ದಿನಗಳ ಹಿಂದೆ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ದರ್ಶನ್‌ ಭಾಗಿಯಾಗಿದ್ದರು ಎನ್ನುವ ಆರೋಪ ಕೇಳಿ ಬಂದಿದೆ. ಹಾಗಾದರೆ ಪವಿತ್ರಾ ಗೌಡ ಯಾರು?

ಫ್ಯಾಷನ್‌ ಡಿಸೈನರ್‌ ಎಂದೆನಿಸಿಕೊಂಡಿರುವ ಪವಿತ್ರಗೌಡ ಅವರು ದರ್ಶನ್‌ ಜತೆ ಆತ್ಮೀಯರಾಗಿದ್ದಾರೆ. ಇವರು ಬೆಂಗಳೂರಿನ ಆರ್.ಆರ್. ನಗರದಲ್ಲಿ ʼರೆಡ್ ಕಾರ್ಪೆಟ್ʼ ಹೆಸರಿನಲ್ಲಿ ಬೋಟಿಕ್ ನಡೆಸುತ್ತಿದ್ದಾರೆ. ಕಳೆದ 10 ವರ್ಷಗಳಿಂದ ದರ್ಶನ್ ಜತೆ ಸ್ನೇಹ ಸಂಬಂಧದಲ್ಲಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಅವರು ದರ್ಶನ್‌ ಜತೆ ಇರುವ ಹಲವು ಫೋಟೊಗಳ ರೀಲ್ಸ್‌ ಹಂಚಿಕೊಂಡು ʻನಮ್ಮ ಸಂಬಂಧಕ್ಕೆ 10 ವರ್ಷಗಳಾಗಿವೆʼ ಎಂದು ಕ್ಯಾಪ್ಷನ್‌ ಕೊಟ್ಟು ಶೇರ್‌ ಮಾಡಿಕೊಂಡಿದ್ದರು. ಇದಾದ ಬಳಿಕ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದರು. ಈ ವಿಚಾರ ಭಾರೀ ಸದ್ದು ಮಾಡಿತ್ತು.

ನಟಿಯೂ ಹೌದು

ಪವಿತ್ರಾ ಗೌಡ ಅವರು ಮಾಡೆಲ್‌ ಹಾಗೂ ನಟಿಯೂ ಹೌದು. ʼಅಗಮ್ಯಾʼ, ʼಛತ್ರಿಗಳು ಸಾರ್ ಛತ್ರಿಗಳುʼ, ʼಸಾಗುವ ದಾರಿʼ, ʼಪ್ರೀತಿ ಕಿತಾಬುʼ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಮುಂಚೆ ಪವಿತ್ರಾ ಅವರು ದರ್ಶನ್‌ ಅವರ ತಾಯಿ ಹಾಗೂ ಸಹೋದರಿ ಜತೆಗಿನ ಫೋಟೊವನ್ನು ಹಂಚಿಕೊಂಡಿದ್ದರು. ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿದ್ದವು. ಇದಾದ ಮೇಲೆ ದರ್ಶನ್‌ ಸಿನಿಮಾ ಸೆಟ್‌ಗಳಲ್ಲಿ ಪವಿತ್ರಾ ಅವರು ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದೂ ಇದೆ. ಕಳೆದ ವರ್ಷ ದರ್ಶನ್‌ ಅವರ ಜನುಮದಿನ ನಟಿ ಮೇಘಾ ಶೆಟ್ಟಿ ಹಂಚಿಕೊಂಡಿದ್ದ ಚಿತ್ರದಲ್ಲಿ ದರ್ಶನ್ ಜತೆಗೆ ಪವಿತ್ರಾ ಕೂಡ ಇದ್ದರು. ಈ ವೇಳೆ ಮೊದಲ ಬಾರಿಗೆ ಇದರ ವಿರುದ್ಧ ಬಹಿರಂಗವಾಗಿ ಧ್ವನಿ ಎತ್ತಿದ್ದ ದರ್ಶನ್​ ಅವರ ಪತ್ನಿ ವಿಜಯಲಕ್ಷ್ಮೀ ಅವರು ಮೇಘಾ ಶೆಟ್ಟಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಇದಾದ ಬಳಿಕ ಮೇಘಾ ಶೆಟ್ಟಿ ಫೋಟೊ ಡಿಲಿಟ್‌ ಮಾಡಿದ್ದರು.

ಪವಿತ್ರಾ ಗೌಡ ಅವರಿಗೆ ಖುಷಿ ಎಂಬ ಮಗಳಿದ್ದಾಳೆ. ಕೆಲ ತಿಂಗಳ ಹಿಂದಷ್ಟೆ ಪುತ್ರಿ ಜತೆ ದರ್ಶನ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ವಿಡಿಯೋ ಹಂಚಿಕೊಂಡಿದ್ದರು.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

ಯಾರು ಈ ರೇಣುಕಾಸ್ವಾಮಿ?

ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರು ನಟಿ ಪವಿತ್ರಾ ಗೌಡ ಅವರಿಗೆ ಮೆಸೇಜ್‌ ಮಾಡಿದ್ದರು. ಇದರಿಂದ ಕುಪಿತಗೊಂಡಿದ್ದ ದರ್ಶನ್‌ ಅವರು ಹಲವರೊಂದಿಗೆ ತೆರಳಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿತ್ತು. ಕೊಲೆ ಕುರಿತು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎರಡು ತಿಂಗಳ ಹಿಂದೆ ಹತ್ಯೆ ಮಾಡಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Harshika Poonacha: ಮದುವೆಯಾಗಿ ವರ್ಷದೊಳಗೆ ಸಿಹಿ ಸುದ್ದಿ ಹಂಚಿಕೊಂಡ ಹರ್ಷಿಕಾ ಪೂಣಚ್ಚ–ಭುವನ್

Harshika Poonacha: ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ತಾಯಿಯಾಗುತ್ತಿದ್ದಾರೆ‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. 2023, ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

VISTARANEWS.COM


on

Harshika Poonacha
Koo


ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ (Harshika Poonacha) ತಾಯಿಯಾಗುತ್ತಿದ್ದಾರೆ‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. 2023, ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ (Bhuvann Ponnannaa) ಜತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಮದುವೆಯಾಗಿ ವರ್ಷದೊಳಗೆ ಗುಡ್‌ನ್ಯೂಸ್‌ ನೀಡಿದ್ದಾರೆ.

ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಅನೇಕ ವರ್ಷಗಳ ಸ್ನೇಹಿತರು. ಈ ಸ್ನೇಹ ಪ್ರೀತಿಗೆ ತಿರುಗಿ ಕಳೆದ ವರ್ಷ ಹಸೆಮಣೆ ಏರಿದ್ದರು. ವಿರಾಜಪೇಟೆಯ ಅಮ್ಮತ್ತಿಯಲ್ಲಿ ಹರ್ಷಿಕಾ ಮತ್ತು ಭುವನ್ ಕೊಡವ ಶೈಲಿಯಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರ ಮದುವೆಗೆ ಸ್ಯಾಂಡಲ್‌ವುಡ್‌, ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಿ ಹಾರೈಸಿದ್ದರು.

ತಾವು ಪೋಷಕರಾಗುತ್ತಿರುವ ವಿಚಾರವನ್ನು ಭುವನ್ ಮತ್ತು ಹರ್ಷಿಕಾ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ಸದ್ಯ ಹರ್ಷಿಕಾ ಐದು ತಿಂಗಳ ಗರ್ಭಿಣಿ ಆಗಿದ್ದು, ಈ ಖುಷಿ ವಿಚಾರವನ್ನ ವಿಭಿನ್ನ ರೀತಿಯಲ್ಲಿ ಫೋಟೊ ಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ.

ಗಮನ ಸೆಳೆದ ಫೋಟೊ ಶೂಟ್

ಹರ್ಷಿಕಾ ಮತ್ತು ಭುವನ್ ತಮ್ಮ ಕೊಡವ ಶೈಲಿ ಹಾಗೂ ಸಂಪ್ರದಾಯದ ಕಾನ್ಸೆಪ್ಟ್‌ ಇಟ್ಟುಕೊಂಡು ಫೋಟೊ ಶೂಟ್‌ ಮಾಡಿಸುವ ಮೂಲಕ ಗಮನ ಸೆಳೆದಿದ್ದಾರೆ. ತಮ್ಮ ಚೊಚ್ಚಲ ಮಗುವಿನ ಆಗಮನದ ಸಿಹಿ ಸುದ್ದಿ ತಿಳಿಸಲು ಪುರಾತನ ಕೊಡವ ಸಾಂಪ್ರದಾಯ, ಉಡುಪು, ಕೊಡಗಿನ ‘ಐನ್ ಮನೆ’ (ದೊಡ್ಡಮನೆ), ಕೋವಿ, ಉಪಕರಣಗಳು, ಜೀವನಶೈಲಿ ಎಲ್ಲವನ್ನು ಬಳಸಿಕೊಂಡು, ಸಂಪ್ರದಾಯವನ್ನು ಬಿಂಬಿಸುವ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ.

ಅದರ ಜತೆಗೆ, ʼʼಇಂದಿನವರೆಗೂ ನಮ್ಮಿಬ್ಬರಿಗೆ ಸದಾ ಆಶೀರ್ವಾದಿಸುತ್ತಾ ಬಂದಿದ್ದೀರಿ. ಇನ್ನು ಮುಂದೆ ನಿಮ್ಮ ಪ್ರೀತಿ, ಆಶೀರ್ವಾದ ನಮ್ಮ ಈ ಇನ್ನೊಂದು ಪುಟ್ಟ ಜೀವದ ಮೇಲೂ ಇರಲಿ. ಅಕ್ಟೋಬರ್‌ಗೆ ಕಾತುರದಿಂದ ಕಾಯುತ್ತಿದ್ದೇವೆ” ಎಂದು ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಹರ್ಷಿಕಾ ಮತ್ತು ಭುವನ್‌ ಬರೆದುಕೊಂಡಿದ್ದಾರೆ.

2008ರಲ್ಲಿ ʼಪಿಯುಸಿʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಹರ್ಷಿಕಾ ಬಳಿಕ ಕೊಡವ, ಕೊಂಕಣಿ, ತೆಲುಗು, ಮಲಯಾಳಂ, ಬೋಜಪುರಿ, ತಮಿಳು ಮುಂತಾದ ಚಿತ್ರಗಳಲ್ಲಿ ನಟಿಸಿ ಬಹುಭಾಷಾ ತಾರೆ ಎನಿಸಿಕೊಂಡಿದ್ದಾರೆ. 2010ರಲ್ಲಿ ತೆರೆಕಂಡದ ಕನ್ನಡದ ʼತಮಸ್ಸುʼ ಚಿತ್ರಕ್ಕಾಗಿ ಕರ್ನಾಟಕ ರಾಜ್ಯ ಪ್ರಶಸ್ತಿ ಮುಡಿಗೇರಿಸಿಕೊಂಡ ಅವರು ಸದ್ಯ ತಮಿಳು ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ.

ಇನ್ನು ಸ್ಯಾಂಡಲ್‌ವುಡ್‌ ನಟ ಭುವನ್‌ ಪೊನ್ನಣ್ಣ 2010ರಲ್ಲಿ ತೆರೆಕಂಡ, ಸುದೀಪ್‌ ಅಭಿನಯದ ʼಜಸ್ಟ್‌ ಮಾತ್‌ ಮಾತಲ್ಲಿʼ ಚಿತ್ರದ ಮೂಲಕ ಬಣ್ಣ ಲೋಕ ಪ್ರವೇಶಿಸಿದ್ದರು. ಗಣೇಶ್‌ ಜತೆಗೆ ಕೂಲ್‌ ಚಿತ್ರದಲ್ಲಿಯೂ ನಟಿಸಿರುವ ಅವರು 2019ರಲ್ಲಿ ತೆರೆಕಂಡ ರಾಂಧವ ಸಿನಿಮಾದ ಮೂಲಕ ಜನಪ್ರಿಯರಾಗಿದ್ದಾರೆ. ಕೊಡಗು ಮೂಲದ ಭುವನ್‌ ಮತ್ತು ಹರ್ಷಿಕಾ ಈ ಹಿಂದೆ ನೆರೆ ಪೀಡಿತರಿಗೆ ನೆರವಾಗುವ ಮೂಲಕ ಅನೇಕ ಮಂದಿಯ ಕಷ್ಟಗಳಿಗೆ ಸಹಾಯ ಹಸ್ತ ಚಾಚಿದ್ದರು.

ಇದನ್ನೂ ಓದಿ: Harshika Poonacha: ಹಲ್ಲೆ ಪ್ರಕರಣ; ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ

Continue Reading

ಸಿನಿಮಾ

Kalki 2898 AD: ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ ʼಕಲ್ಕಿʼ; ಬಿಡುಗಡೆಯಾದ 5ನೇ ದಿನ ಗಳಿಸಿದ್ದು ಬರೋಬ್ಬರಿ 84 ಕೋಟಿ ರೂ.

Kalki 2898 AD:  ʼಕಲ್ಕಿ 2898 ಎಡಿʼ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನಾಗಾಲೋಟ ಮುಂದುವರಿಸಿದೆ. ಜೂನ್ 27ರಂದು ವಿಶ್ವಾದ್ಯಂತ ತೆರೆಕಂಡ, ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್ ಅಶ್ವಿನ್ ಆ್ಯಕ್ಷನ್‌ ಕಟ್‌ ಹೇಳಿರುವ ಈ ಸೈನ್ಸ್‌ ಫಿಕ್ಷನ್‌ ದಾಖಲೆಯ ಕಲೆಕ್ಷನ್‌ ಮಾಡಿದೆ. ಅದರಲ್ಲಿಯೂ ಚಿತ್ರ ಬಿಡುಗಡೆಯಾಗಿ 5 ದಿನ ಕಳೆದರೂ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. 5ನೇ ದಿನವಾದ ಸೋಮವಾರ (ಜುಲೈ 2) ʼಕಲ್ಕಿʼ ಚಿತ್ರ ಜಾಗತಿಕವಾಗಿ ಬರೋಬ್ಬರಿ 84 ಕೋಟಿ ರೂ. ಗಳಿಸಿದೆ. ಈ ಮೂಲಕ ಮಲ್ಟಿ ಸ್ಟಾರರ್‌ ಚಿತ್ರ ಒಟ್ಟು 635 ಕೋಟಿ ರೂ. ಬಾಚಿಕೊಂಡಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿ ತೆರೆ ಹಂಚಿಕೊಂಡಿದ್ದು, ಬಾಲಿವುಡ್‌ನ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Kalki 2898 AD
Koo

ಮುಂಬೈ:  ʼಕಲ್ಕಿ 2898 ಎಡಿʼ (Kalki 2898 AD) ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನಾಗಾಲೋಟ ಮುಂದುವರಿಸಿದೆ. ಜೂನ್ 27ರಂದು ವಿಶ್ವಾದ್ಯಂತ ತೆರೆಕಂಡ ಈ ಸೈನ್ಸ್‌ ಫಿಕ್ಷನ್‌ ದಾಖಲೆಯ ಕಲೆಕ್ಷನ್‌ ಮಾಡಿದೆ. ಅದರಲ್ಲಿಯೂ ಚಿತ್ರ ಬಿಡುಗಡೆಯಾಗಿ 5 ದಿನ ಕಳೆದರೂ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. 5ನೇ ದಿನವಾದ ಸೋಮವಾರ (ಜುಲೈ 2) ʼಕಲ್ಕಿʼ ಚಿತ್ರ ಜಾಗತಿಕವಾಗಿ ಬರೋಬ್ಬರಿ 84 ಕೋಟಿ ರೂ. ಗಳಿಸಿದೆ. ಈ ಮೂಲಕ ಮಲ್ಟಿ ಸ್ಟಾರರ್‌ ಚಿತ್ರ ಒಟ್ಟು 635 ಕೋಟಿ ರೂ. ಬಾಚಿಕೊಂಡಿದೆ.

ಭಾರತದಲ್ಲಿ ಗಳಿಸಿದ್ದೆಷ್ಟು?

ಸೋಮವಾರ ಭಾರತವೊಂದರಲ್ಲೇ ʼಕಲ್ಕಿʼ ಸುಮಾರು 34.6 ಕೋಟಿ ರೂ. ಗಳಿಸಿದೆ ಎಂದು ವರದಿಯೊಂದು ತಿಳಿಸಿದೆ. ʼʼಸೋಮವಾರ ಭಾರತದಲ್ಲಿ ಎಲ್ಲ ಭಾಷೆಗಳಲ್ಲಿ ಸೇರಿ ಸೇರಿ ಸುಮಾರು 34.6 ಕೋಟಿ ರೂ. ಬಾಚಿಕೊಂಡಿದೆ. ಇನ್ನು ಜಗತ್ತಿನ ವಿವಿಧ ಕಡೆಗಳ ಕಲೆಕ್ಷನ್‌ 45-50 ಕೋಟಿ ರೂ. ಹೀಗೆ ಒಂದೇ ದಿನ ಸುಮಾರು 84 ಕೋಟಿ ರೂ. ಬಾಚಿಕೊಂಡಿದ್ದು, ಒಟ್ಟು ಕಲೆಕ್ಷನ್‌ 635 ಕೋಟಿ ರೂ,ಗೆ ತಲುಪಿದೆʼʼ ಎಂದು ವರದಿ ತಿಳಿಸಿದೆ. ಅಧಿಕೃತ ಹೇಳಿಕೆ ಇನ್ನಷ್ಟೇ ಹೊರ ಬರಬೇಕಿದೆ. ಚಿತ್ರವನ್ನು ಸುಮಾರು 600 ಕೋಟಿ ರೂ. ಬಜೆಟ್‌ನಲ್ಲಿ ತಯಾರಿಸಲಾಗಿದ್ದು, ಈಗಾಗಲೇ ಹಾಕಿದ ದುಡ್ಡು ವಾಪಸ್‌ ಬಂದಂತಾಗಿದೆ.

ರಿಲೀಸ್‌ ಆದ 4 ದಿನಕ್ಕೆ ʼಕಲ್ಕಿʼ ಜಾಗತಿಕವಾಗಿ 550 ಕೋಟಿ ರೂ. ಗಳಿಸಿದೆ ಎಂದು ಈ ಹಿಂದೆ ಚಿತ್ರತಂಡ ಘೋಷಿಸಿತ್ತು. ಮೊದಲ ದಿನವೇ ಸಿನಿಮಾ ಸುಮಾರು 191 ಕೋಟಿ ರೂ. ಕಲೆಕ್ಷನ್‌ ಮಾಡಿತ್ತು. ಆ ಮೂಲಕ ಮೊದಲ ದಿನ ಅತ್ಯಧಿಕ ಕಲೆಕ್ಷನ್‌ ಮಾಡಿದ ಚಿತ್ರಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ. ತೆಲುಗಿನ ʼಆರ್‌ಆರ್‌ಆರ್‌ʼ ಮತ್ತು ʼಬಾಹುಬಲಿ 2ʼ ಮೊದಲೆರಡು ಸ್ಥಾನಗಳಲ್ಲಿವೆ.

ಭರ್ಜರಿ ಗಳಿಕೆ

ಮೊದಲ ದಿನ ಭರ್ಜರಿ 191 ಕೋಟಿ ರೂ. ಗಳಿಸಿದ ʼಕಲ್ಕಿʼ ಆ ಮೂಲಕ ಸ್ಯಾಂಡಲ್‌ವುಡ್‌ನ ʼಕೆಜಿಎಫ್‌ 2ʼ (159 ಕೋಟಿ ರೂ.), ʼಸಲಾರ್‌ʼ (158 ಕೋಟಿ ರೂ.), ʼಲಿಯೋʼ (142.75 ಕೋಟಿ ರೂ.), ʼಸಾಹೋʼ (130 ಕೋಟಿ ರೂ.) ಮತ್ತು ʼಜವಾನ್‌ʼ (129 ಕೋಟಿ ರೂ.) ದಾಖಲೆ ಮುರಿದೆ. ಅದಾಗ್ಯೂ 223 ಕೋಟಿ ರೂ. ಕಲೆಕ್ಷನ್‌ ಮಾಡಿದ ʼಆರ್‌ಆರ್‌ಆರ್‌ʼ ಮತ್ತು 217 ಕೋಟಿ ರೂ. ಗಳಿಸಿದ ʼಬಾಹುಬಲಿ 2ʼ ಈಗಲೂ ಮೊದಲ ದಿನದ ಕಲೆಕ್ಷನ್‌ ವಿಚಾರದಲ್ಲಿ ಮೊದಲೆರಡು ಸ್ಥಾನಗಳಲ್ಲಿ ಭದ್ರವಾಗಿವೆ.

ಬಹುತಾರಾಗಣ

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್ ಅಶ್ವಿನ್ ಆ್ಯಕ್ಷನ್‌ ಕಟ್‌ ಹೇಳಿರುವ ʼಕಲ್ಕಿʼಯಲ್ಲಿ ಬಹುತಾರಾಗಣವಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿ ತೆರೆ ಹಂಚಿಕೊಂಡಿದ್ದು, ಬಾಲಿವುಡ್‌ನ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಭಾರತದ ಜನಪ್ರಿಯ ತಾರೆಗಳಾದ ಕಮಲ್‌ ಹಾಸನ್‌, ಶೋಭನಾ ಮತ್ತಿತರರು ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ.

ಇದನ್ನೂ ಓದಿ: Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಕಂಡ ʻಕಲ್ಕಿʼ: ಪ್ರಭಾಸ್‌ ಅಬ್ಬರಕ್ಕೆ ಬಾಕ್ಸ್ ಆಫೀಸ್‌ ಧೂಳೀಪಟ!

Continue Reading

ಕರ್ನಾಟಕ

Kannada New Movie: ಮೊಬೈಲ್ ಮುಂಚಿನ ಪ್ರೇಮಕಥೆ ‘ಕಾಗದ’ ಜುಲೈ 5ರಂದು ಬಿಡುಗಡೆ

Kannada New Movie: ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆಯಾದ “ಕಾಗದ” ಚಿತ್ರ ಇದೇ ವಾರ ಜುಲೈ 5 ರಂದು ತೆರೆಗೆ ಬರುತ್ತಿದೆ. ಅರುಣ್ ಕುಮಾರ್ ಆಂಜನೇಯ ಅವರ ನಿರ್ಮಾಣದಲ್ಲಿ ರಂಜಿತ್ ನಿರ್ದೇಶಿಸಿದ್ದು, ಆದಿತ್ಯ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಬಾಲನಟಿಯಾಗಿ ಜನಪ್ರಿಯರಾಗಿರುವ ಅಂಕಿತ ಜಯರಾಂ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದು, ನೇಹಾ ಪಾಟೀಲ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Kannada New Movie kagada film released on 5th July
Koo

ಬೆಂಗಳೂರು: ಅರುಣ್ ಕುಮಾರ್ ಆಂಜನೇಯ ಅವರ ನಿರ್ಮಾಣದಲ್ಲಿ ರಂಜಿತ್ ನಿರ್ದೇಶಿಸಿರುವ ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆಯಾದ “ಕಾಗದ” ಚಿತ್ರ (Kannada New Movie) ಇದೇ ಜುಲೈ 5ರಂದು ತೆರೆಗೆ ಬರುತ್ತಿದೆ.

“ಕಾಗದ” ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆ. 2005 ರ ಕಾಲಘಟ್ಟದ ಕಥೆಯೂ ಕೂಡ. ಹಳ್ಳಿಹಳ್ಳಿಗಳ ನಡುವಿನ ವೈಷಮ್ಯದ ನಡುವೆ ಅರಳಿದ ಪ್ರೇಮಕಥೆಯೂ ಹೌದು.

ಆದಿತ್ಯ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಬಾಲನಟಿಯಾಗಿ ಜನಪ್ರಿಯರಾಗಿರುವ ಅಂಕಿತ ಜಯರಾಂ “ಕಾಗದ” ಚಿತ್ರದ ನಾಯಕಿ. ನೇಹಾ ಪಾಟೀಲ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಲ ರಾಜ್ವಾಡಿ, ನೀನಾಸಂ ಅಶ್ವಥ್, ಮಠ ಕೊಪ್ಪಳ, ಶಿವಮಂಜು ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: IND vs SA : ಭಾರತ ವಿರುದ್ಧ ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಪ್ರಕಟ

ನಾಲ್ಕು ಹಾಡುಗಳಿರುವ “ಕಾಗದ” ಚಿತ್ರಕ್ಕೆ ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ ಹಾಗೂ ಪವನ್ ಗೌಡ ಸಂಕಲನ ಈ ಚಿತ್ರಕ್ಕಿದೆ.

Continue Reading

Latest

Sha Rukh Khan: ಸಾಲದ ಇಎಂಐ ಕಟ್ಟಲಾಗದೆ ಕಾರನ್ನು ಕಳೆದುಕೊಂಡಿದ್ದ ಶಾರುಖ್ ಖಾನ್!

Sha Rukh Khan: ಕೋಟಿ ಕೋಟಿ ಸಂಭಾವನೆ ಪಡೆಯುವ ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಕೂಡ ಒಂದು ಕಾಲದಲ್ಲಿ ಆರ್ಥಿಕ ಸಮಸ್ಯೆಯಿಂದ ಬಳಲಿದ್ದರಂತೆ. ಕಾರಿನ ಇಎಂಐ ಪಾವತಿಸಲು ಸಾಧ್ಯವಾಗದ ಕಾರಣ ಶಾರುಖ್ ಖಾನ್ ಅವರ ಕಾರನ್ನು ಬ್ಯಾಂಕ್‌ನವರು ತೆಗೆದುಕೊಂಡು ಹೋಗಿದ್ದರು ಎಂದು ಶಾರುಖ್ ಖಾನ್ ಬಗ್ಗೆ ಅವರ ಸ್ನೇಹಿತೆ ನಟಿ ಜೂಹಿ ಚಾವ್ಲಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಆಗ ಶಾರುಕ್ ಖಾನ್ ನಟಿ ಜೂಹಿ ಚಾವ್ಲಾ ಹಾಗೂ ನಟ ಜಾಕಿಶ್ರಾಫ್ ಅವರ ಕಾರಿನಲ್ಲಿ ಓಡಾಡುತ್ತಿದ್ದರಂತೆ.

VISTARANEWS.COM


on

Sha Rukh Khan
Koo

ಮುಂಬೈ : ಹಣದ ಸಮಸ್ಯೆ ಎನ್ನುವುದು ಬಡವರಿಗೆ, ಮಧ್ಯಮವರ್ಗದವರಿಗೆ ಮಾತ್ರವಲ್ಲ, ಕೆಲವೊಮ್ಮೆ ಶ್ರೀಮಂತರು, ಸ್ಟಾರ್ ನಟರೂ ಕೂಡ ಆರ್ಥಿಕ ಸಮಸ್ಯೆಯಿಂದ ಬಳಲುತ್ತಾರೆ. ಶಾರುಖ್ ಖಾನ್ (Sha Rukh Khan) ಅವರು ಬಾಲಿವುಡ್ ಸ್ಟಾರ್ ನಟರಲ್ಲಿ ಒಬ್ಬರು. ಕೋಟಿ ಕೋಟಿ ಸಂಭಾವನೆ ಪಡೆಯುವ ಈ ಸ್ಟಾರ್ ನಟ ಕೂಡ ಆರ್ಥಿಕ ಸಮಸ್ಯೆಯಿಂದ ಒಂದು ಕಾಲದಲ್ಲಿ ಬಳಲಿದ್ದರು ಎಂದು ಅವರ ಸ್ನೇಹಿತೆ ನಟಿ ಜೂಹಿ ಚಾವ್ಲಾ ಹೇಳಿಕೆ ನೀಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Sha Rukh Khan

ಶಾರುಖ್ ಖಾನ್ ಮತ್ತು ಜೂಹಿ ಚಾವ್ಲಾ 90ರ ದಶಕದಲ್ಲಿ ಬಾಲಿವುಡ್‌ನ ಹಲವಾರು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದರು. ಆವಾಗಿನಿಂದ ಇವರಿಬ್ಬರು ಆಪ್ತ ಸ್ನೇಹಿತರಾಗಿದ್ದರು. ಇಬ್ಬರೂ ಸೇರಿ ಡ್ರೀಮ್ಸ್‌ ಅನ್‌ಲಿಮಿಟೆಡ್‌ ಎಂಬ ಚಿತ್ರ ನಿರ್ಮಾಣ ಸಂಸ್ಥೆಯನ್ನೂ ಸ್ಥಾಪಿಸಿದ್ದರು.

Sha Rukh Khan

ಅಲ್ಲದೇ ಇವರಿಬ್ಬರು ಐಪಿಎಲ್ ತಂಡದ ಮಾಲೀಕರಾಗಿ ಸಹ ಜೊತೆಯಾಗಿದ್ದರು. ಇತ್ತೀಚೆಗೆ, ಕಾರ್ಯಕ್ರಮವೊಂದರಲ್ಲಿ, ನಟಿ ಜೂಹಿ ಚಾವ್ಲಾ ಅವರು ಮಾತನಾಡಿ ಇಎಂಐ ಪಾವತಿಸಲು ಸಾಧ್ಯವಾಗದ ಕಾರಣ ಶಾರುಖ್ ಖಾನ್ ಅವರ ಕಾರನ್ನು ಬ್ಯಾಂಕ್‌ನವರು ತೆಗೆದುಕೊಂಡು ಹೋಗಿದ್ದರು ಎಂಬ ಸಂಗತಿಯನ್ನು ಶಾರುಖ್ ಖಾನ್ ವೃತ್ತಿ ಜೀವನದ ಆರಂಭದ ದಿನಗಳನ್ನು ಸ್ಮರಿಸಿಕೊಂಡು ಹೇಳಿದ್ದಾರೆ.

Sha Rukh Khan

ಶಾರುಖ್ ಖಾನ್ ಅವರ ಬಳಿ ಕಪ್ಪು ಜಿಪ್ಸಿ ಕಾರ್ ಇತ್ತು. ಶಾರುಖ್ ಖಾನ್ ಅವರು ಹಗಲಿರುಳು ತಮ್ಮ ಸಿನಿಮಾ ಶೂಟಿಂಗ್‌ಗಾಗಿ ಆ ಕಾರಿನಲ್ಲೇ ಹೋಗುತ್ತಿದ್ದರು. ಆದರೆ ಕೆಲವು ಕಾರಣಗಳಿಂದಾಗಿ, ಅವರು ತಮ್ಮ ಕಾರಿಗೆ ಇಎಂಐ ಪಾವತಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅವರ ಕಾರನ್ನು ತೆಗೆದುಕೊಂಡು ಹೋದರು ಎಂದು ಹೇಳಿದ್ದಾರೆ. ಅಲ್ಲದೇ ಅವರಿಗೆ ಮುಂಬೈನಲ್ಲಿ ಮನೆ ಇರಲಿಲ್ಲ. ಹಾಗೇ ಅವರಿಗೆ ಅಡುಗೆ ಮಾಡಲು ಯಾರೂ ಇರಲಿಲ್ಲ. ಅವರ ಬಗ್ಗೆ ಚಿಂತಿಸುತ್ತಿದ್ದೆ ಎಂದು ನಟಿ ಹಿಂದೆ ನಡೆದ ಘಟನೆಗಳ ಬಗ್ಗೆ ಮೆಲುಕು ಹಾಕಿದ್ದಾರೆ. ಆದರೆ ಈಗ ಅವರು ದೊಡ್ಡ ನಟ ಆಗಿದ್ದಾರೆ ಎಂದು ಅವರು ಖುಷಿ ಪಟ್ಟಿದ್ದಾರೆ.

2015ರಲ್ಲಿ ಇದೇ ವಿಚಾರದ ಬಗ್ಗೆ ನಟ ಶಾರುಖ್ ಖಾನ್‌ವರು ಕೂಡ ಟಿವಿ ಚಾನೆಲ್‌ವೊಂದರಲ್ಲಿ ಹೇಳಿದ್ದರು. ತಾನು ಖರೀದಿಸಿದ ಮೊದಲ ಕಾರಿಗೆ ಇಎಂಐ ಕಟ್ಟಲು ಆಗದ ಕಾರಣ ಬ್ಯಾಂಕಿನವರು ತೆಗೆದುಕೊಂಡು ಹೋಗಿದ್ದರು. ಆಗ ನಟಿ ಜೂಹಿ ಚಾವ್ಲಾ ತಮ್ಮ ಕಾರನ್ನು ನೀಡಿರುವುದಾಗಿ ಹೇಳಿದ್ದರು. ಮತ್ತು ಕೆಲವೊಮ್ಮೆ ನಟ ಜಾಕಿಶ್ರಾಫ್ ಅವರ ಕಾರಿನಲ್ಲಿ ಓಡಾಡುತ್ತಿದ್ದೆ ಎಂದು ತಿಳಿಸಿದ್ದರು.

Sha Rukh Khan

ಇದನ್ನೂ ಓದಿ: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ಹಿರಿಯ ನಟ ಗೋವಿಂದ್ ನಾಮದೇವ್ ಅವರು 2000ರಲ್ಲಿ ಬಿಡುಗಡೆಯಾದ “ಫಿರ್ ಭಿ ದಿಲ್ ಹೈ ಹಿಂದೂಸ್ತಾನಿ” ಚಿತ್ರದ ಚಿತ್ರೀಕರಣ ಸಮಯದಲ್ಲಿ ಶಾರುಖ್ ಖಾನ್ ಅವರ ಜೊತೆ ಕಳೆದ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ. ಆ ವೇಳೆ ಅವರು ಕೆಲಸದ ಒತ್ತಡದಿಂದ ಅವರು ಧೂಮಪಾನ ಮಾಡುತ್ತಿದ್ದರು ಎಂದು ಶಾಕಿಂಗ್ ಹೇಳಿಕೆ ನೀಡಿದ್ದರು.

Continue Reading
Advertisement
Gold Rate Today
ಚಿನ್ನದ ದರ3 mins ago

Gold Rate Today: ಮತ್ತೆ ಮೇಲ್ಮುಖವಾಗಿ ಸಾಗಿದ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Road Accident
ಕ್ರೈಂ19 mins ago

Road Accident : ಹೆದ್ದಾರಿಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ಗೆ ‌ವೃದ್ಧ ಸಾವು; ಯುವಕನ ತಲೆ ಮೇಲೆ ಹರಿದ ಟ್ಯಾಂಕರ್‌

Virat Kohli
ಕ್ರೀಡೆ32 mins ago

Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

Stock Market
ವಾಣಿಜ್ಯ41 mins ago

Stock Market: ಷೇರು ಪೇಟೆಯಲ್ಲಿ ಗೂಳಿ ನೆಗೆತ; 80,000 ಅಂಕಗಳ ಗಡಿ ತಲುಪಿದ ಸೆನ್ಸೆಕ್ಸ್‌

self harming mysore
ಕ್ರೈಂ55 mins ago

Self Harming: ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ

police constable commits suicide by jumping into well
ಬೆಂಗಳೂರು1 hour ago

Police constable : ಬೆನ್ನಿಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ ಮಡಿವಾಳ ಪೊಲೀಸ್‌ ಕಾನ್ಸ್‌ಟೇಬಲ್!

Euro 2024
ಕ್ರೀಡೆ1 hour ago

Euro 2024: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಪೋರ್ಚುಗಲ್; ಫ್ರಾನ್ಸ್ ಎದುರಾಳಿ

Yogi Adityanath
ದೇಶ1 hour ago

Yogi Adityanath: ಉತ್ತರಪ್ರದೇಶಕ್ಕೆ ಅಪಮಾನ ಮಾಡಲು ರಾಹುಲ್‌ ಗಾಂಧಿ ಸಂಚು; ಯೋಗಿ ಕಿಡಿ

Good News For Farmers
ದೇಶ1 hour ago

Good News For Farmers: ಬಿಸಿಲಿನ ಝಳಕ್ಕೆ ಬಸವಳಿದ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಈ ತಿಂಗಳು ಉತ್ತಮ ವರ್ಷಧಾರೆ

train service
ಬೆಂಗಳೂರು2 hours ago

Train services: ಗೋಲಗುಂಬಜ್ ಎಕ್ಸ್‌ಪ್ರೆಸ್‌ ವೇಳಾಪಟ್ಟಿ ಪರಿಷ್ಕರಣೆ; ಬೆಂಗಳೂರಿನಿಂದ ವಿಶೇಷ ರೈಲುಗಳ ಓಡಾಟ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ18 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌