Pawan Kalyan: ಪವನ್‌ ಕಲ್ಯಾಣ್‌ ಮಾಜಿ ಪತ್ನಿ ಮರು ಮದುವೆಗೆ ರೆಡಿ! - Vistara News

ಸಿನಿಮಾ

Pawan Kalyan: ಪವನ್‌ ಕಲ್ಯಾಣ್‌ ಮಾಜಿ ಪತ್ನಿ ಮರು ಮದುವೆಗೆ ರೆಡಿ!

Pawan Kalyan: ನಟ ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ, ನಟಿ ರೇಣು ದೇಸಾಯಿ ಅವರು ಎರಡನೇ ಮದುವೆಯಾಗಲು ರೆಡಿಯಾಗಿದ್ದಾರಂತೆ. ಮುಂದಿನ ಎರಡು ಅಥವಾ ಮೂರು ವರ್ಷದೊಳಗೆ (Renu Desai Second Marriage) ಮರು ಮದುವೆಯಾಗಲು ಯೋಜಿಸುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ.

VISTARANEWS.COM


on

Renu Desai Second Marriage
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟಾಲಿವುಡ್ ನ ಖ್ಯಾತ ನಟರಲ್ಲಿ ಪವನ್ ಕಲ್ಯಾಣ (Pawan Kalyan) ಕೂಡ ಒಬ್ಬರು. ಇವರು ಹಲವಾರು ಚಿತ್ರದಲ್ಲಿ ನಟಿಸಿ ಜನ ಮನ್ನಣೆಯನ್ನು ಪಡೆದು ಟಾಲಿವುಡ್ ನಲ್ಲಿ ಒಬ್ಬ ಖ್ಯಾತ ನಟ ಎನಿಸಿಕೊಂಡಿದ್ದಾರೆ. ಆದರೆ ಇಂತಹ ಮಹಾನ್ ನಟ ತಮ್ಮ ವೈವಾಹಿಕ ಜೀವನದಲ್ಲಿ ಸಮಸ್ಯೆಯನ್ನು ಎದುರಿಸಿದ್ದಾರೆ. ಪವನ್‌ ಕಲ್ಯಾಣ್‌ ತಮ್ಮ ಮೊದಲ ಪತ್ನಿ (Pawan Kalyan’s ex-wife) ರೇಣು ದೇಸಾಯಿ (Renu desai) ಅವರಿಂದ ವಿಚ್ಛೇದನ ಪಡೆದು ದೂರವಾಗಿರುವ ವಿಚಾರ ಎಲ್ಲರಿಗೂ ತಿಳಿದೆ ಇದೆ. ಇದೀಗ ಅವರ ಮಾಜಿ ಪತ್ನಿ, ನಟಿ ರೇಣು ದೇಸಾಯಿ (Renu Desai Second Marriage) ಅವರು ಎರಡನೇ ಮದುವೆಯಾಗಲು ರೆಡಿಯಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ನಟಿ ರೇಣು ದೇಸಾಯಿ ಅವರು ಇತ್ತೀಚೆಗೆ ಜನಪ್ರಿಯ ಯೂಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ತಮ್ಮ ಎರಡನೇ ಮದುವೆಯ ಯೋಜನೆಯ ಬಗ್ಗೆ ಪ್ರಸ್ತಾಪಮಾಡಿದ್ದಾರೆ.

ಸಂದರ್ಶನದಲ್ಲಿ ನಟಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹಂಚಿಕೊಳ್ಳುತ್ತಿರುವಾಗ ಈ ವಿಚಾರ ತಿಳಿಸಿದ್ದಾರೆ. ಹಾಗೇ ಮುಂದಿನ ಎರಡು ಅಥವಾ ಮೂರು ವರ್ಷದೊಳಗೆ ಮರು ಮದುವೆಯಾಗಲು ಯೋಜಿಸುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ. ಹಾಗಾಗಿ ಈಗಾಗಲೇ ತಂದೆಯ ಪ್ರೀತಿಯಿಂದ ವಂಚಿತರಾದ ಅವರ ಮಕ್ಕಳಿಗೆ ತಂದೆಯ ಪ್ರೀತಿ ಸಿಗಲಿದೆ ಎನ್ನಲಾಗಿದೆ.

Renu Desai Second Marriage
Renu Desai Second Marriage

ನಟಿ ರೇಣು ದೇಸಾಯಿಯವರು 2012ರಲ್ಲಿ ಪವನ್ ಕಲ್ಯಾಣ್ ಅವರಿಗೆ ಡಿವೋರ್ಸ್ ನೀಡಿದ್ದರು. ಆದರೆ ಅವರು ಇಷ್ಟು ವರ್ಷಗಳ ಕಾಲ ಯಾಕೆ ಮರು ಮದುವೆಯಾಗಿಲ್ಲ ಎಂಬ ಗೊಂದಲ ಹಲವರಲ್ಲಿದೆ. ಇದಕ್ಕೆ ಉತ್ತರಿಸಿದ ನಟಿ ರೇಣು ದೇಸಾಯಿ ಅವರು, ಆ ಸಮಯದಲ್ಲಿ ಮಕ್ಕಳಿಗೆ ಆರೈಕೆಯ ಅಗತ್ಯವಿತ್ತು. ಅವರಿಗೆ ತನ್ನ ಸಹಾಯ ಬೇಕಿತ್ತು. ಆದರೆ ತಾನು ಮದುವೆಯಾದರೆ ಪತಿಯೊಂದಿಗೆ ಸಮಯ ಕಳೆಯಬೇಕಾಗುತ್ತದೆ ಆಗ ಮಕ್ಕಳಿಗೆ ಒಂಟಿತನ ಕಾಡುತ್ತದೆ. ಈಗಾಗಲೇ ತಂದೆ ಇಲ್ಲದೆ ನರಳುತ್ತಿದ್ದ ಮಕ್ಕಳಿಗೆ ತಾಯಿಯ ಪ್ರೀತಿ ಸಿಗದಿದ್ದರೆ ಅವರಿಗೆ ಅನೇಕ ಸಮಸ್ಯೆ ಉಂಟಾಗುತ್ತದೆ. ಹಾಗಾಗಿ ಇನ್ನೆರಡು ಮೂರು ವರ್ಷಗಳಲ್ಲಿ ಅವರು ದೊಡ್ಡವರಾಗುತ್ತಾರೆ. ಕಾಲೇಜಿಗೆ ಹೋಗುತ್ತಾರೆ. ಅಲ್ಲಿ ಅವರು ಸ್ನೇಹಿತರು ಮತ್ತು ಪ್ರೇಮಿಗಳ ಹೊಸ ಪ್ರಪಂಚಕ್ಕೆ ಕಾಲಿಡುತ್ತಾರೆ. ಅವರೊಂದಿಗೆ ಹೆಚ್ಚು ಸಮಯ ಕಳೆಯುತ್ತಾರೆ. ಆಗ ಅವರು ಪೋಷಕರ ಮೇಲೆ ಅವಲಂಬಿತರಾಗಿರುವುದಿಲ್ಲ. ಹಾಗಾಗಿ ಈ ನಿರ್ಧಾರ ಮಾಡಿರುವುದಾಗಿ ತಿಳಿಸಿದ್ದಾರೆ.

Renu Desai Second Marriage
Renu Desai Second Marriage

ಅಲ್ಲದೇ ಮರು ಮದುವೆಗೆ ತಮ್ಮ ಮಕ್ಕಳ ಬೆಂಬಲ ಇರುವುದಾಗಿ ತಿಳಿಸಿದ್ದಾರೆ. ಹಾಗೇ ಮರುಮದುವೆಯಿಂದ ತಾವು ಮತ್ತೆ ಸಂತೋಷವನ್ನು ಕಂಡುಕೊಳ್ಳುವ ಬಯಕೆಯನ್ನು ನಟಿ ವ್ಯಕ್ತಪಡಿಸಿದ್ದಾರೆ. ಇದು ನಟಿ ರೇಣು ದೇಸಾಯಿ ಅವರಿಗೆ ತಮ್ಮ ಮಕ್ಕಳ ಬಗ್ಗೆ ಎಷ್ಟು ಕಾಳಜಿ, ಜವಾಬ್ದಾರಿ ಇದೆ ಎಂಬುದರ ಬಗ್ಗೆ ತಿಳಿಸುತ್ತದೆ.

ಇದನ್ನೂ ಓದಿ: Viral Video: ಬಿಜೆಪಿ ಶಾಲು ಧರಿಸಿ ಅಯೋಧ್ಯೆ ಹೆಸರಿನ ಪ್ರತಿಕೃತಿಗೆ ಬೆಂಕಿ! ಸೋಲೇ ಕಾರಣ!

ಇತ್ತ ನಟ ಪವನ್ ಕಲ್ಯಾಣ್ ಅವರು ಚಿತ್ರರಂಗದ ಜೊತೆಗೆ ರಾಜಕೀಯ ರಂಗಕ್ಕೂ ಪ್ರವೇಶ ಮಾಡಿದ್ದಾರೆ. ಅವರು ತಮ್ಮದೇ ಜನಸೇನಾ ಪಾರ್ಟಿ ಎಂಬ ರಾಜಕೀಯ ಪಕ್ಷವನ್ನು ಕಟ್ಟಿಕೊಂಡು 2019ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಹೀನಾಯವಾಗಿ ಸೋಲನುಭವಿಸಿದ್ದರು. ಆದರೆ 2024ರಲ್ಲಿ ಆಂಧ್ರಪ್ರದೇಶದ ವಿಧಾನ ಸಭಾ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿದ್ದಾರೆ. ಹಾಗಾಗಿ ಅವರು ಇನ್ನು ಮುಂದೆ ಚಿತ್ರರಂಗದಲ್ಲಿ ಮುಂದುವರಿಯುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

Kannada New Movie: ಇಂಡಿಯನ್ ಫಿಲಂ ಹೌಸ್‌ನಿಂದ ಉತ್ತಮ ಕಥೆ ಮತ್ತು ಚಿತ್ರಕಥೆಗಾಗಿ ಪ್ರಶಸ್ತಿಗಳನ್ನು ಕೂಡ ಪಡೆದಿದ್ದಾರೆ. ಇದರ ಅನುಭವದಿಂದಲೇ ಈಗ ಸಿನಿಮಾಕ್ಕೆ ಕಥೆ,ಚಿತ್ರಕಥೆ ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರೊಫೆಸರ್, ಇಂಜಿನಿಯರ್ ಹಾಗೂ ಇತರೆ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವವರು ಚಿತ್ರದಲ್ಲಿ ಕಲಾವಿದರು, ತಂತ್ರಜ್ಘರಾಗಿ ಗುರುತಿಸಿಕೊಳ್ಳುತ್ತಿರುವುದು ವಿಶೇಷ.

VISTARANEWS.COM


on

Kannada New Movie Nava Digantha latest news
Koo

ಬೆಂಗಳೂರು: ’ನವ ದಿಗಂತ’ ಚಿತ್ರದ ಮುಹೂರ್ತ ಸಮಾರಂಭವು ಶಕ್ತಿ ದೇವತೆ ಸರ್ಕಲ್ ಮಾರಮ್ಮನ ಸನ್ನಿದಿಯಲ್ಲಿ ಸರಳವಾಗಿ ಮುಹೂರ್ತ ನಡೆಯಿತು. ’ಉಸಿರೆ’ ಸಿನಿಮಾದ ನಿರ್ಮಾಪಕಿ ಲಕ್ಷೀಹರೀಶ್ ಕ್ಯಾಮೆರ ಆನ್ ಮಾಡಿದರೆ, ಉದಯೋನ್ಮುಖ ಯುವ ನಟ ಭಾರ್ಗವ್ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಐಟಿ ಕಂಪೆನಿಯಲ್ಲಿ ವ್ಯವಸ್ಥಾಪಕರಾಗಿರುವ ದುರ್ಗಾಮೋಹನ್ ಅವರು ಚಿನ್ಮಯ ಸಿನಿ ಕ್ರಿಯೇಶನ್ಸ್ ನಿರ್ಮಾಣ ಸಂಸ್ಥೆ ಶುರು ಮಾಡಿ ಮೂರು ಕಿರುಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಅಲ್ಲದೆ ಇಂಡಿಯನ್ ಫಿಲಂ ಹೌಸ್‌ನಿಂದ ಉತ್ತಮ ಕಥೆ ಮತ್ತು ಚಿತ್ರಕಥೆಗಾಗಿ ಪ್ರಶಸ್ತಿಗಳನ್ನು ಕೂಡ ಪಡೆದಿದ್ದಾರೆ. ಇದರ ಅನುಭವದಿಂದಲೇ ಈಗ ಸಿನಿಮಾಕ್ಕೆ ಕಥೆ,ಚಿತ್ರಕಥೆ ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರೊಫೆಸರ್, ಇಂಜಿನಿಯರ್ ಹಾಗೂ ಇತರೆ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವವರು ಚಿತ್ರದಲ್ಲಿ ಕಲಾವಿದರು, ತಂತ್ರಜ್ಘರಾಗಿ ಗುರುತಿಸಿಕೊಳ್ಳುತ್ತಿರುವುದು ವಿಶೇಷ.

ಸಿನಿಮಾದ ಕುರಿತು ಹೇಳುವುದಾದರೆ, ಪ್ರತಿಯೊಬ್ಬರಿಗೂ ಪ್ರತಿಭೆ ಅನ್ನುವುದು ಹುಟ್ಟಿನಿಂದಲೇ ಬಂದಿರುತ್ತದೆ. ಆದರೆ ಅದನ್ನು ಮರೆತು ಜೀವನಕ್ಕೋಸ್ಕರ ಬೇರೆ ಉದ್ಯೋಗ ಮಾಡುತ್ತಿರುತ್ತೇವೆ. ನಿಜವಾದ ಸಂತೋಷ ಸಿಗುವುದು ಕಲೆಯಿಂದ ಅಂತ ತಿಳಿಯದೆ ಜೀವನ ಸಾಗಿಸುತ್ತಿರುತ್ತೇವೆ. ವೃತ್ತಿ-ಪ್ರವೃತ್ತಿಯನ್ನು ಬದುಕಿನಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ವಿದ್ಯಾರ್ಥಿ ದೆಸೆಯಿಂದ ಬಂದಾಗ ಮಾತ್ರ, ಕೊನೆತನಕ ಸಾರ್ಥಕ ಜೀವನ ನಡೆಸಬಹುದು. ಕಲೆಯ ಕಡೆ ಗಮನ ಹರಿಸಿದರೆ ಅಡ್ಡದಾರಿಗೆ ಹೋಗಲು ಮನಸು ಬಾರದೆ, ಸಕರಾತ್ಮಕ ಚಿಂತನೆ ನಡೆಸಲು ಪ್ರೇರಣೆ ಸಿಗುತ್ತದೆ. ಸಂಗೀತ, ವಾಗ್ಮಿ, ನೃತ್ಯ, ಕ್ರೀಡೆ, ಬರವಣಿಗೆ ಏನೇ ತೆಗೆದುಕೊಂಡರೂ ಅದೇ ಕಲೆಯಾಗಿರುತ್ತದೆ ಹೊರತು ಬೇರೇನೂ ಆಗಿರುವುದಿಲ್ಲ. ಕಲೆಗೆ ಸಾವಿಲ್ಲ. ಕಲೆಯಲ್ಲಿ ತೊಡಗಿಸಿಕೊಂಡವರು ಸದಾ ಉತ್ಸಾಹಿಗಳಾಗಿ ಆನಂದದಿಂದಿರುತ್ತಾರೆ. ಇಂತಹ ಅಂಶಗಳನ್ನು ಬಳಸಿಕೊಂಡು ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ. ಪೋಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಒಂದು ಒಳ್ಳೆಯ ಸಂದೇಶ ಕೊಡಲಿದೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಪ್ರೊಫೆಸರ್ ಆಗಿ ಮೇಘನಾ, ವಿದ್ಯಾರ್ಥಿಗಳಾಗಿ ಚೇತನ್, ರೋಷನ್, ಅಭಿಜಿತ್, ಪುಷ್ಪ, ಯಮುನಾ, ಆಶುತೋಷ್, ಭೋಜರಾಜ, ಸಹದ್ಯೋಗಿಗಳಾಗಿ ಅಜಯ್, ಸಂಕೀರ್ತ್ ಉಳಿದಂತೆ ಅನಿಲ್ ಮಾರ್ಟಿಬನ್, ಪ್ರೀತಿಪಾಟೀಲ್, ನವೀನ್, ಸಂಧ್ಯಾ, ಮೂರ್ತಿ, ಲಕ್ಷೀ, ಪ್ರೀತಂ, ವಾಸುದೇವಚಾರ್. ಇವರೆಲ್ಲರಿಗೂ ಪ್ರಥಮ ಅವಕಾಶ. ನಟ ಭಾರ್ಗವ್ ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬುವ ಪಾತ್ರದಲ್ಲಿ ರೀಲ್‌ದಲ್ಲಿ ಅದೇ ರೀತಿ ಕಾಣಿಸಿಕೊಳ್ಳುತ್ತಿದ್ದಾರೆ.

ನಾಲ್ಕು ಹಾಡುಗಳಿಗೆ ಶರತ್-ಪ್ರಫುಲ್ಲಾ ಸಂಗೀತ, ಪ್ರಜ್ವಲ್ ವಿನೋದ್ ಛಾಯಾಗ್ರಹಣ, ಸಂಕಲನ ನೊಮಾಡಿಕ್ ಸ್ಟುಡಿಯೋ, ನೃತ್ಯ ರೋಶನ್, ಮೇಕಪ್ ಪವಿತ್ರಾ, ಹಾಗೂ ಎರಡು ಸಾಹಸ ದೃಶ್ಯಗಳನ್ನು ಕ್ಯಾಮೆರಾ ಟ್ರಿಕ್ಸ್‌ದಲ್ಲಿ ಚಿತ್ರೀಕರಿಸಲಾಗುವುದು. ಡಾಬಸಪೇಟೆ, ಬೆಂಗಳೂರು ಸುತ್ತಮುತ್ತ ೩೦ ದಿನಗಳ ಕಾಲ ಎರಡು ಹಂತದಲ್ಲಿ ಚಿತ್ರೀಕರಣ ನಡೆಸಲು ತಂಡವು ಯೋಜನೆ ರೂಪಿಸಿಕೊಂಡಿದೆ.

Continue Reading

ಬಿಗ್ ಬಾಸ್

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

Drone Prathap: , ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ.

VISTARANEWS.COM


on

Drone Prathap Eye surgery for an old woman with her own money
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (Bigboss kannada season 10)ರ ಪ್ರಬಲ ಸ್ಪರ್ಧಿಯಾಗಿದ್ದ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿ ಹೊರ ಹೊಮ್ಮಿದ್ದರು. ಬಿಗ್​ಬಾಸ್ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್, ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ. ಅಜ್ಜಿಯೋರ್ವರಿಗೆ ಆಪರೇಶನ್ ಮಾಡಿಸಿದ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಮುಂಚೆ ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿ ತಾವು ಮಾಡಲು ಹೊರಟಿರುವ ಸಮಾಜ ಸೇವಾ ಕಾರ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದರು. ಡ್ರೋನ್‌ ಪ್ರತಾಪ್‌ ಇನ್‌ಸ್ಟಾದಲ್ಲಿ ವಿಡಿಯೊ ಪೋಸ್ಟ್‌ ಮಾಡಿ ʻʻಎಲ್ಲರಿಗೂ ನಮಸ್ಕಾರಗಳು. ಡಾ. ರಾಜ್‌ಕುಮಾರ್‌ ಅವರು ಹೇಳ್ತಾರೆ. ನೇತ್ರದಾನ ಮಹಾದಾನ ಎಂದು. ಮುಂಬರುವ ಜೂನ್‌ 11ಕ್ಕೆ ನನ್ನ ಹುಟ್ಟು ಹಬ್ಬ ಇದೆ ಸ್ನೇಹಿತರೆ. ನನಗೆ ತುಂಬ ಕುತೂಹಲ ಇದೆ. ನನ್ನ ಹುಟ್ಟು ಹಬ್ಬವನ್ನು ಈ ಬಾರಿ ವಿಶೇಷವಾಗಿ ಆಚರಿಸಿಸಬೇಕು ಎಂದು ನಿರ್ಧಾರ ಮಾಡಿದ್ದೇನೆ. ಹಾಗಾಗಿ ಯಾರಿಗಾದರೂ ಬಡವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಬೇಕು ಎಂದು ತೀರ್ಮಾನ ಮಾಡಿದ್ದೇನೆ.  ಯಾರಾದರೂ ಬಡವರಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಹಣ ಭರಿಸಲು ಸಾಧ್ಯವಾಗದೇ ಇರುವವರು ಇದ್ದರೆ ದಯವಿಟ್ಟು ನಮಗೆ ತಿಳಿಸಿ. ನಮಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಕಳಿಸಿ ಅಥವಾ ಕಮೆಂಟ್ ಸೆಕ್ಷನ್​ನಲ್ಲಿ ಅವರನ್ನು ಮೆನ್ಷನ್ ಮಾಡಿ, ನಾವು ಅಗತ್ಯವಿರುವ ಐದು ಮಂದಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುತ್ತೇವೆ’ ಎಂದಿದ್ದರು.

ಅದರಂತೆ ಇಬ್ಬರು ಮಕ್ಕಳಿದ್ದರೂ ಕೂಡ ಗುಡಿಸಿಲಿನಲ್ಲಿ ಇದ್ದುಕೊಂಡು ವಾಸ ಮಾಡುತ್ತಿದ್ದ ಬಡ ಅಜ್ಜಿಯ ಕಣ್ಣಿನ ಆಪರೇಶನ್ ಮಾಡಿಸಿದ್ದಾರೆ. ಆ ಅಜ್ಜಿಯು ಪ್ರತಾಪ್ ಅವರನ್ನು ಹರಿಸಿದ್ದು, ನನಗೆ ಈಗ ಸರಿಯಾಗಿ ಕಣ್ಣು ಕಾಣುತ್ತಿದೆ ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಡ್ರೋನ್ ಪ್ರತಾಪ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ಇಷ್ಟುದಿನ ನನಗೆ ಒಬ್ಬ ಮೊಮ್ಮಗ ಇದ್ದನು, ಈಗ ಇನ್ನೊಬ್ಬ ಮೊಮ್ಮಗನಾಗಿ ನೀನು ಇದ್ದೀಯಾ. ನನಗೆ ನಿಜವಾಗಿಯೂ ಖುಷಿಯಾಗಿದೆ, ನಿನಗೆ ದೇವರು ಆಯುಷ್ಯ, ಆರೋಗ್ಯ ಕೊಟ್ಟು ಒಳ್ಳೆಯದನ್ನು ಮಾಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಈ ಎಲ್ಲದಕ್ಕೂ ಮುಂಚೆ ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾಗಿದ್ದರು.

Continue Reading

ಕ್ರಿಕೆಟ್

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Ashwini Puneeth Rajkumar: ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

VISTARANEWS.COM


on

Ashwini Puneeth Rajkumar launched Appu Cup season 2
Koo

ಬೆಂಗಳೂರು: ಅಪ್ಪು ನೆನಪನ್ನು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಅಪ್ಪು ಕಪ್‌ ಸೀಸನ್‌ 2 ಬ್ಯಾಡ್ಮಿಂಟನ್‌ ಟೂರ್ನಿಗೆ ಇಂದು ನಾಗರಬಾವಿಯ ಕಿಂಗ್ಸ್‌ ಕ್ಲಬ್‌ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸ್ಪರ್ಧಾಳುಗಳಿಗೆ ಶುಭ ಕೋರಿ, ಮೊದಲ ಪಂದ್ಯದ ಆರಂಭಕ್ಕೆ ಟಾಸ್‌ ಹಾಕಿದರು.

PRK ಸಂಸ್ಥೆಯ ಸಹಯೋಗದೊಂದಿಗೆ ಚೇತನ್‌ ಸೂರ್ಯ ಅವರು ಈ ಟೂರ್ನಮೆಂಟ್‌ ಅನ್ನು ಆಯೋಜಿಸಿದ್ದು, ಈ ಪಂದ್ಯಾವಳಿಯು ಮೂರು ದಿನಗಳ ಕಾಲ ನಡೆಯಲಿದೆ. ಅಪ್‌ ಕಪ್‌ ಸೀಸನ್‌ 2ನಲ್ಲಿ ಹತ್ತು ತಂಡಗಳು ಭಾಗವಹಿಸಲಿದ್ದು, ಸಿನಿಮಾ, ಧಾರಾವಾಹಿ ಮತ್ತು ಮಾಧ್ಯಮದವರು ಆಡಲಿದ್ದಾರೆ.

ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಹಾಗೂ ಸಿಇಒ ದಿವ್ಯಾ ರಂಗೇನಹಳ್ಳಿ, ಡಿಪಿಐಎಸ್ ಫೌಂಡರ್‌, ಚೇರ್‌ಪರ್ಸನ್ ಸುನಿತಾ ಗೌಡ, ‌ಹಿರಿಯ ನಿರ್ಮಾಕರಾದ ಸಾರಾ ಗೋವಿಂದು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

Ghuspaithia Hindi movie: ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

VISTARANEWS.COM


on

Ghuspaithia Hindi movie release on August 9
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರಮೇಶ್ ರೆಡ್ಡಿ, ಜ್ಯೋತಿಕ ಶೆಣೈ ಹಾಗೂ ಮಂಜರಿ ಸುಸಿ ಗಣೇಶನ್ ನಿರ್ಮಿಸಿರುವ ಈ ಚಿತ್ರವನ್ನು ಸುಸಿ ಗಣೇಶನ್ ನಿರ್ದೇಶಿಸಿದ್ದಾರೆ.

ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ಮಾಪಕ ರಮೇಶ್ ರೆಡ್ಡಿ, ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ. ಮುಂದೆ ಕೂಡ ಹಿಂದಿ ಚಿತ್ರಗಳನ್ನು ನಿರ್ಮಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

ಆಗಸ್ಟ್ 9ರಂದು AA ಫಿಲಂಸ್ ಮೂಲಕ ಬಿಡುಗಡೆಯಾಗಲಿರುವ ಈ ಚಿತ್ರದ ತಾರಾಬಳಗದಲ್ಲಿ ವಿನೀತ್ ಕುಮಾರ್ ಸಿಂಗ್, ಊರ್ವಶಿ ರೌಟೇಲ, ಅಕ್ಷಯ್ ಒಬೆರಾಯ್ ಮುಂತಾದವರಿದ್ದಾರೆ.

Continue Reading
Advertisement
Paris Olympics 2024
ಫ್ಯಾಷನ್2 mins ago

Paris Olympics 2024: ಭಾರತೀಯ ಅಥ್ಲೀಟ್‌ಗಳ ಡ್ರೆಸ್‌ ಕೋಡ್‌ ವಿನ್ಯಾಸಕ್ಕೆ ಜನರ ಮಿಶ್ರ ಪ್ರತಿಕ್ರಿಯೆ

Vaccin for Hiv
ಆರೋಗ್ಯ35 mins ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Physical Assault
ದೇಶ43 mins ago

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Paris Olympics
ಕ್ರೀಡೆ59 mins ago

Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್‌ಗೆ ಆಹಾರ ಕೊರತೆ; ರೆಸ್ಟೋರೆಂಟ್​ನಿಂದ ರೋಟಿ, ದಾಲ್‌ ತರಿಸಿದ ಬಾಕ್ಸರ್​

karnataka Rain
ಮಳೆ1 hour ago

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Rahul Gandhi
ದೇಶ1 hour ago

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Gautam Gambhir
ಕ್ರೀಡೆ1 hour ago

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Kannada New Movie Nava Digantha latest news
ಸಿನಿಮಾ1 hour ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

DK Shivakumar
ಕರ್ನಾಟಕ2 hours ago

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Drone Prathap Eye surgery for an old woman with her own money
ಬಿಗ್ ಬಾಸ್2 hours ago

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ4 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ5 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ23 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌