BISFF 2022 | ಇಂದಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ಕಿರುಚಲನಚಿತ್ರೋತ್ಸವ: ವಿಶೇಷತೆ ಏನಿದೆ? - Vistara News

ಒಟಿಟಿ

BISFF 2022 | ಇಂದಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ಕಿರುಚಲನಚಿತ್ರೋತ್ಸವ: ವಿಶೇಷತೆ ಏನಿದೆ?

ಇಂದಿನಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕಿರು ಚಲನಚಿತ್ರೋತ್ಸವ (BISFF 2022) ನಡೆಯಲಿದ್ದು, ಹಲವು ವಿಶೇಷತೆಗಳನ್ನು ಹೊತ್ತು ತಂದಿದೆ. ಒಟಿಟಿ ಮೂಲಕವೂ ಈ ಬಾರಿ ವೀಕ್ಷಿಸುವ ಅವಕಾಶವನ್ನು ನೀಡಲಾಗಿದೆ.

VISTARANEWS.COM


on

BISFF 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಂತಾರಾಷ್ಟ್ರೀಯ ಕಿರು ಚಲನಚಿತ್ರೋತ್ಸವ (BISFF 2022 -Bengaluru International Short Film Festival) ತನ್ನ 12ನೇ ಆವೃತ್ತಿಯನ್ನು ಗುರುವಾರ (ಆ.4) ಆಯೋಜಿಸಿದೆ. ಆಗಸ್ಟ್ 4-14ರ ತನಕ ಕಿರು ಚಲನಚಿತ್ರೋತ್ಸವ ನಡೆಯಲಿದೆ. ಇನ್ನೂ ವಿಶೇಷ ಅಂದರೆ ಈ ಬಾರಿ ಚಿತ್ರೋತ್ಸವದಲ್ಲಿ ಭಾಗವಹಿಸುವ ಎಲ್ಲ ಕಿರು ಚಿತ್ರಗಳನ್ನು ಥಿಯೇಟರ್ ‌ಜತೆಗೆ ಓಟಿಟಿಯಲ್ಲಿಯೂ ವೀಕ್ಷಿಸಬಹುದು.

ಲಾಗಿನ್‌ ಆಗುವ ಮೂಲಕ ಕಣ್ತುಂಬಿಸಿಕೊಳ್ಳಿ
ಆಗಸ್ಟ್‌ 11 ರಿಂದ 14ರವರೆಗೆ ಸುಚಿತ್ರಾ ಮತ್ತು ಗೋಥೆ ಇನ್ಸಿಟ್ಯೂಟ್‌ ಮ್ಯಾಕ್ಸ್‌ ಮುಲ್ಲರ್‌ ಭವನದ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುತ್ತಿದೆ. ಸಿನಿಮಾಸಕ್ತರು https://bisff.in/ ನಲ್ಲಿನ ಲಾಗಿನ್‌ ಆಗುವ ಮೂಲಕ ಎಲ್ಲ ವರ್ಗಗಳ ಕಿರುಚಿತ್ರಗಳನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಈ ವರ್ಷ BISFF ವಿಶೇಷತೆ ಒಮ್ಮೆ ಉತ್ಸವಕ್ಕೆ ನೋಂದಾಯಿಸಿದ ಚಲನಚಿತ್ರಗಳನ್ನು 10 ದಿನಗಳಲ್ಲಿ ಯಾವಾಗ ಬೇಕಾದರೂ ವೀಕ್ಷಿಸಬಹುದಾಗಿದೆ. ಖ್ಯಾತ ನಿರ್ದೇಶಕ ಸತ್ಯಜೀತ್‌ ರೇ ಶತಮಾನೋತ್ಸವದ ಪುಣ್ಯ ತಿಥಿಯ ಅಂಗವಾಗಿ ಈ ಚಲನಚಿತ್ರೋತ್ಸವವನ್ನು ಸಪರ್ಮಿಸಲಾಗುತ್ತಿದೆ.

ಇದನ್ನೂ ಓದಿ | ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ; ಅತ್ಯುತ್ತಮ ನಟ ಪ್ರಶಸ್ತಿ ಹಂಚಿಕೊಂಡ ಅಜಯ್‌ ದೇವಗನ್‌, ಸೂರ್ಯ

ʻಡೊನೇಟ್‌ ನೌವ್‌ʼ ವಿಶೇಷತೆ
ಈ ಪ್ರದರ್ಶನದಲ್ಲಿ ಕಿರುಚಿತ್ರ ಪ್ರದರ್ಶನಗೊಳ್ಳಲಿದ್ದು, ಆಯ್ಕೆಯಾಗುವ ಕಿರುಚಿತ್ರವು ಅಕಾಡಮಿ ಪ್ರಶಸ್ತಿಗಳ ಲೈವ್‌ ಆ್ಯಕ್ಷನ್‌ ಕಿರುಚಿತ್ರ ವಿಭಾಗದಲ್ಲಿ ಪರಿಗಣಿಸಿಲು ಸ್ವಯಂಚಾಲಿತವಾಗಿ ಅರ್ಹವಾಗಿರುತ್ತವೆ. BISFF 2022ಗೆ 90 ದೇಶಗಳಿಂದ 3000ಕ್ಕೂ ಹೆಚ್ಚು ಕಿರುಚಿತ್ರಗಳು ಬಂದಿವೆ. ಅವುಗಳಲ್ಲಿ ಶೇ.23 ರಷ್ಟು ಮಹಿಳಾ ಚಲನಚಿತ್ರ ನಿರ್ಮಾಪಕರು ಸೇರಿರುವುದು ವಿಶೇಷ. ಉತ್ಸವದ ಪ್ರದರ್ಶನಕ್ಕೆ ಸುಮಾರು 250 ಚಲನಚಿತ್ರಗಳನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಕಿರು ಚಲನಚಿತ್ರೋತ್ಸವದ ಮತ್ತೊಂದು ವಿಶೇಷತೆ ಎಂದರೆ, ಇಲ್ಲಿ ಲಾಗಿನ್‌ ಆಗುವ ಸಿನಿಮಾಸಕ್ತರು ಸಿನಿಮಾ ನೋಡುವ ಜತೆಗೆ ಬಡ ಮಕ್ಕಳಿಗೆ ದೇಣಿಗೆ ಕೂಡ ನೀಡಬಹುದು. ವೆಬ್‌ಸೈಟ್‌ನಲ್ಲಿ ʻʻಡೊನೇಟ್‌ ನೌವ್‌ʼʼಎನ್ನುವ ಅವಕಾಶ ನೀಡಿದ್ದು, ಆಸಕ್ತರು ಡೊನೇಟ್‌ ಮಾಡಬಹುದಾಗಿದೆ. ಈ ಹಣವು ನೇರವಾಗಿ ಬೆಂಗಳೂರಿನಲ್ಲಿರುವ ಎನ್‌ಜಿಒ ʻವಿದ್ಯಾನಿಕೇತನಕ್ಕೆʼ ತಲುಪಲಿದೆ.

ಇದನ್ನೂ ಓದಿ | 68th National Film Awards | ಕನ್ನಡದ ಡೊಳ್ಳು ಮತ್ತು ತಲೆದಂಡಕ್ಕೆ ಪ್ರಶಸ್ತಿಯ ಗರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

OTT Release: ಈ ವಾರ ಒಟಿಟಿಯಲ್ಲಿ ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು

OTT Release: ಈ ವಾರ ಕೂಡ ಒಟಿಟಿಯಲ್ಲಿ ಹಲವಾರು ಹಿಟ್ ಶೋಗಳು ರಿಲೀಸ್ ಆಗಲಿವೆ. ಹೌಸ್ ಆಫ್ ದಿ ಡ್ರ್ಯಾಗನ್, ಬ್ರಿಡ್ಜರ್ಟನ್, ದಿ ಬಾಯ್ಸ್, ಪ್ರಿಸ್ಯುಮಡ್ ಇನ್ನೊಸೆಂಟ್ ಹಾಗೂ ವಿದ್ಯಾಬಾಲನ್ ಹಾಗೂ ಪ್ರತೀಕ್ ಗಾಂಧಿ ಅಭಿನಯಿಸಿದ ಗಲ್ಲಾ ಪೆಟ್ಟಿಗೆಯಲ್ಲಿ ಕಳಪೆ ಪ್ರದರ್ಶನ ಕಂಡ ಬಾಲಿವುಡ್ ಚಲನಚಿತ್ರ ದೋ ಔರ್ ದೋ ಪ್ಯಾರ್ ಕೂಡ ಈ ಬಾರಿ ಒಟಿಟಿಯಲ್ಲಿ ರಿಲೀಸ್ ಆಗಲಿವೆ. ಒಟ್ಟಾರೆ ಈ ವಾರ ಸಿನಿ ಪ್ರಿಯರಿಗೆ ಹಬ್ಬದೂಟವನ್ನು ಉಣಬಡಿಸಲಿದೆ.

VISTARANEWS.COM


on

OTT Release
Koo

ಮುಂಬೈ : ಪ್ರತಿವಾರ ಒಟಿಟಿಯಲ್ಲಿ ಸಾಕಷ್ಟು ಸೂಪರ ಹಿಟ್ ಶೋಗಳು ರಿಲೀಸ್ ಆಗುತ್ತಿರುತ್ತವೆ. ಈ ಮೂಲಕ ಒಟಿಟಿ ಜನರಿಗೆ ಸಾಕಷ್ಟು ಮನರಂಜನೆಯನ್ನು ನೀಡುತ್ತಿದೆ. ಹಾಗಾಗಿ ಈ ವಾರವೂ ಕೂಡ ಒಟಿಟಿ(OTT Release)ಯಲ್ಲಿ ಹಲವಾರು ಹಿಟ್ ಶೋಗಳು ರಿಲೀಸ್ ಆಗಲಿವೆ. ಗಲ್ಲಾ ಪೆಟ್ಟಿಗೆಯಲ್ಲಿ ಕಳಪೆ ಪ್ರದರ್ಶನ ಕಂಡ ಕೆಲವು ಬಾಲಿವುಡ್ ಚಲನಚಿತ್ರಗಳೂ ಈ ಬಾರಿ ಒಟಿಟಿಯಲ್ಲಿ ರಿಲೀಸ್ ಆಗಲಿದೆ. ಅವುಗಳ ವಿವರ ಇಲ್ಲಿದೆ.

ಹೌಸ್ ಆಫ್ ದಿ ಡ್ರ್ಯಾಗನ್ (ಸೀಸನ್ 2)

ಎಚ್‌ಬಿಓನ ಸೀರಿಸ್ ʼಹೌಸ್ ಆಫ್ ದಿ ಡ್ರ್ಯಾಗನ್ʼ ಸೀಸನ್ 2 ಜೂನ್ 16ರಂದು ಹೊಸ ಸಂಘರ್ಷ, ಸೇಡು ತೀರಿಸಿಕೊಳ್ಳುವ ಹೊಸ ಕಥಾವಸ್ತುಗಳೊಂದಿಗೆ ಮತ್ತೆ ಪ್ರೇಕ್ಷಕರ ಮುಂದೆ ಬಂದಿದೆ. ಜಾರ್ಜ್ ಆರ್ ಆರ್ ಮಾರ್ಟಿನ್ ಅವರ ʼಫೈರ್ ಆ್ಯಂಡ್ ಬ್ಲಡ್ʼ ಆಧರಿಸಿದ ಈ ಸರಣಿಯು ರಾಜ ಕುಟುಂಬದ ಕಥೆಯನ್ನು ಒಳಗೊಂಡಿದೆ. ರಾಜ ಕುಟುಂಬ ಅಧಿಕಾರದ ಸಂಘರ್ಷ, ಒಳಸಂಚು, ಕೌಟುಂಬಿಕ ಶತ್ರುತ್ವವನ್ನು ಇದರಲ್ಲಿ ಕಾಣಬಹುದು.
ಇದು ಜೂನ್ 16ರಂದು ಜಿಯೋ ಸಿನಿಮಾದಲ್ಲಿ ಬೆಳಗ್ಗೆ 6.30ರಿಂದ ಲಭ್ಯವಾಗಲಿದೆ.

ಬ್ರಿಡ್ಜರ್ಟನ್(ಸೀಸನ್ 3, ಭಾಗ 2)

ಇದರಲ್ಲಿ ಕಾಲಿನ್ ಮತ್ತು ಪೆನೆಲೋಪ್ ಅವರ ಪ್ರಣಯವನ್ನು ಪ್ರೇಕ್ಷಕರು ಕಣ್ತುಂಬಿಸಿಕೊಳ್ಳಬಹುದು. ಇದು ರೀಜೆನ್ಸಿ ಯುಗದ ಪ್ರಣಯ ಸರಣಿಯು ಜೂಲಿಯಾ ಕ್ವಿನ್ ಅವರ ಪುಸ್ತಕಗಳನ್ನು ಆಧರಿಸಿದೆ. ಪ್ರತಿಯೊಂದು ದೃಶ್ಯ ಬ್ರಿಡ್ಜರ್ಟನ್ ಕುಟುಂಬದ ಒಡಹುಟ್ಟಿದವರ ಮೇಲೆ ಕೇಂದ್ರೀಕರಿಸುತ್ತದೆ. ಮೂರನೇ ಸೀಸನ್‌ನಲ್ಲಿ ಪೆನೆಲೋಪ್ ಲೇಡಿ ವಿಸ್ಲ್ ಡೌನ್‌ನ ರಹಸ್ಯ ಗುರುತಿನಿಂದಾಗಿ ತನ್ನ ಜೀವನದ ಪ್ರೀತಿಯನ್ನು ಕಳೆದುಕೊಳ್ಳುವ ಅಪಾಯವನ್ನು ಎದುರಿಸುತ್ತಾಳೆ. ಅವಳ ಸತ್ಯ ಬಯಲಾಗುವುದೋ? ಅಥವಾ ಅವಳು ಸುಖವಾಗಿ ಬದುಕುವಳೋ? ಎಂಬುದನ್ನು ನೋಡಬೇಕು. ಇದು ನೆಟ್ ಫ್ಲಿಕ್ಸ್ ನಲ್ಲಿ ಸ್ಟ್ರೀಮಿಂಗ್‌ನಲ್ಲಿ ನೋಡಬಹುದು.

ದೋ ಔರ್ ದೋ ಪ್ಯಾರ್

ಬಾಕ್ಸ್ ಆಫೀಸ್‌ನಲ್ಲಿ ಕಳಪೆ ಪ್ರದರ್ಶನ ಕಂಡ ವಿದ್ಯಾ ಬಾಲನ್ ಅವರ ರೊಮ್ಯಾಂಟಿಕ್ ಕಾಮಿಡಿ ಇದೀಗ ಒಟಿಟಿಯಲ್ಲಿ ಕಾಣಿಸಿಕೊಂಡಿದೆ. ʼದೋ ಔರ್ ದೋ ಪ್ಯಾರ್‌ʼನಲ್ಲಿ ಕಾವ್ಯ ಮತ್ತು ಅನಿಯ ಪಾತ್ರದಲ್ಲಿ ವಿದ್ಯಾ ಬಾಲನ್ ಹಾಗೂ ಪ್ರತೀಕ್ ಗಾಂಧಿ ಅಭಿನಯಿಸಿದ್ದಾರೆ. ಊಟಿ ಪ್ರವಾಸದ ನಂತರ ವಿವಾಹೇತರ ಸಂಬಂಧದಲ್ಲಿ ತೊಡಗಿಕೊಂಡಿದ್ದರೂ ಸಹ ಪರಸ್ಪರ ಪ್ರೀತಿಸುವ ವಿವಾಹಿತ ದಂಪತಿಗಳಂತೆ ಇವರಿಬ್ಬರು ನಟಿಸುತ್ತಾರೆ. ಇದನ್ನು ಡಿಸ್ನಿ ಹಾಟ್ ಸ್ಟಾರ್‌ನಲ್ಲಿ ಸ್ಟ್ರೀಮಿಂಗ್ ನಲ್ಲಿ ನೋಡಬಹುದು.

ದಿ ಬಾಯ್ಸ್ (ಸೀಸನ್ 4)

ವಿಡಂಬನಾತ್ಮಕ ಸೂಪರ್ ಹೀರೋ ಸರಣಿಯ ʼದಿ ಬಾಯ್ಸ್ʼ ಸೀಸನ್ 4ರ ಮೊದಲ ಮೂರು ಸಂಚಿಕೆಗಳನ್ನು ಗುರುವಾರ ಪ್ರೈಮ್ ವಿಡಿಯೊದಲ್ಲಿ ಬಿಡುಗಡೆ ಮಾಡಲಾಗಿದೆ. ಕಾರ್ಲ್ ಅರ್ಬನ್, ಜ್ಯಾಕ್ ಕ್ವೈಡ್, ಆಂಟೋನಿ ಸ್ಟಾರ್, ಜೆನ್ಸಿ ಟಿ ಉಷರ್, ಎರಿನ್ ಮೊರಿಯಾರ್ಟಿ ಮತ್ತು ಚೇಸ್ ಕ್ರಾಫೋರ್ಡ್ ಹಿಂದಿನ ಪಾತ್ರವರ್ಗದವರಾದರೆ ವ್ಯಾಲೋರಿ ಕರಿ ಮತ್ತು ಸುಸಾನ್ ಹೇವಾರ್ಡ್ ಇಬ್ಬರು ಹೊಸ ಸೂಪರ್ ಹೀರೋಗಳಾಗಿದ್ದಾರೆ. ಇದನ್ನು ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ ನಲ್ಲಿ ನೋಡಬಹುದು.

ಇದನ್ನೂ ಓದಿ: Yogi Adityanath: ರಸ್ತೆಯಲ್ಲಿ ನಮಾಜ್ ಮಾಡಿದರೆ ಹುಷಾರ್! ಬಕ್ರೀದ್ ಹಿನ್ನೆಲೆಯಲ್ಲಿ ಮುಸ್ಲಿಮರಿಗೆ ಯೋಗಿ ವಾರ್ನಿಂಗ್!

ಪ್ರಿಸ್ಯುಮಡ್ ಇನ್ನೊಸೆಂಟ್ (Presumed Innocent)

ಜೇಕ್ ಗಿಲೆನ್ ಹಾಲ್ ʼಪ್ರಿಸ್ಯುಮಡ್ ಇನ್ನೊಸೆಂಟ್‌ʼನಲ್ಲಿ ಕೊಲೆ ಪ್ರಕರಣದಲ್ಲಿನ ಪ್ರಾಸಿಕ್ಯೂಟರ್ ಆಗಿ ನಟಿಸಿದ್ದಾರೆ. ಇದು ಸ್ಕಾಟ್ ಟುರೊವ್ ಅವರ ಕಾದಂಬರಿ ಆಧರಿಸಿದೆ. ನಿಜ ಜೀವನದಲ್ಲಿ ಜೇಕ್‌ನ ಸಹೋದರಿ ಮ್ಯಾಗಿಯನ್ನು ಮದುವೆಯಾಗಿರುವ ಪೀಟರ್ ಸರ್ಸ್ ಗಾರ್ಡ್, ಗಿಲೆನ್ ಹಾಲ್‌ನ ನ್ಯಾಯಾಲಯದಲ್ಲಿ ಎದುರಾಳಿಯಾಗಿ ನಟಿಸಿದ್ದಾರೆ. ಇದನ್ನು ಆಪಲ್ ಟಿವಿ ಸ್ಟ್ರೀಮಿಂಗ್‌ನಲ್ಲಿ ನೋಡಬಹುದು.

Continue Reading

ಒಟಿಟಿ

Bigg Boss OTT 3: ಶುರುವಾಗಲಿದೆ ಬಿಗ್​ ಬಾಸ್​ ಒಟಿಟಿ 3: ನಿರೂಪಣೆಗೆ ಸಲ್ಮಾನ್​ ಖಾನ್​ ಬದಲು ಅನಿಲ್​ ಕಪೂರ್!

Bigg Boss OTT 3: ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.. ಅನಿಲ್ ಕಪೂರ್ ಅವರ ಹೋಸ್ಟಿಂಗ್ ಜತೆಗೆ ಈ ಬಾರಿ ಜನಪ್ರಿಯ ತಾರೆಗಳಾದ ಶಿವಂಗಿ ಜೋಶಿ ಮತ್ತು ಶಫಕ್ ನಾಜ್ ಕೂಡ ಇರಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Bigg Boss OTT 3 Anil Kapoor Replaces Salman Khan As Host
Koo

ಬೆಂಗಳೂರು: ಹಿಂದೆ ʻಬಿಗ್ ಬಾಸ್ OTTʼ ಹೊಸ ಸೀಸನ್‌ ಮತ್ತೆ ಬರುತ್ತಿದೆ. ಜಿಯೋ ಸಿನಿಮಾ’ ಒಟಿಟಿಯಲ್ಲಿ ‘ಬಿಗ್​ ಬಾಸ್​ ಒಟಿಟಿ 3’ ಆರಂಭ ಆಗಲಿದೆ. ಹಿಂದಿಯ ‘ಬಿಗ್​ ಬಾಸ್​ ಒಟಿಟಿ 3 (Bigg Boss OTT 3) ಕಾರ್ಯಕ್ರಮವನ್ನು ಈ ಬಾರಿ ಅನಿಲ್​ ಕಪೂರ್​ (Anil Kapoor) ನಡೆಸಿಕೊಡಲಿದ್ದಾರೆ. ಸಲ್ಮಾನ್‌ ಖಾನ್‌ ಈ ಬಾರಿ ಒಟಿಟಿ ಸೀಸನ್‌ನಿಂದ ಹಿಂದೆ ಸರಿದಿದ್ದಾರೆ. ಜಿಯೋ ಸಿನಿಮಾ ಹೊಸ ಪ್ರೋಮೊ ಹಂಚಿಕೊಂಡಿದೆ.

“ಬಿಗ್ ಬಾಸ್ OTT ಯ ಹೊಸ ಸೀಸನ್‌ಗೆ ಹೊಸ ಹೋಸ್ಟ್ʼʼಎಂದು ಪ್ರೋಮೊ ಹಂಚಿಕೊಂಡಿದೆ ಜಿಯೋ ಸಿನಿಮಾ. ಆರಂಭದಲ್ಲಿ ಒಟಿಟಿ ಸೀಸನನ್ನು ಕರಣ್ ಜೋಹರ್ ಹೋಸ್ಟ್ ಮಾಡಿದರು, ನಂತರ ಎರಡನೇ ಸೀಸನ್‌ನಲ್ಲಿ ಸಲ್ಮಾನ್ ಖಾನ್ ಮಾಡಿದರು. ಮೇಗೆ ಒಟಿಟಿ ಪ್ರೀಮಿಯರ್‌ ಆಗಲಿದೆ ಎನ್ನಲಾಗಿತ್ತು. ಬಿಡುಗಡೆ ಆಗಿರುವ ಈ ಪ್ರೋಮೋದಲ್ಲಿ ಅನಿಲ್​ ಕಪೂರ್​ ಅವರ ಮುಖ ಕಾಣಿಸಿಲ್ಲ. ಆದರೆ ಧ್ವನಿ ಕೇಳಿಸಿದೆ. ಹಾಗಾಗಿ ಇದು ಪಕ್ಕಾ ಅನಿಲ್​ ಕಪೂರ್​ ಎಂಬುದು ಖಚಿತವಾಗಿದೆ.

ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.. ಅನಿಲ್ ಕಪೂರ್ ಅವರ ಹೋಸ್ಟಿಂಗ್ ಜತೆಗೆ ಈ ಬಾರಿ ಜನಪ್ರಿಯ ತಾರೆಗಳಾದ ಶಿವಂಗಿ ಜೋಶಿ ಮತ್ತು ಶಫಕ್ ನಾಜ್ ಕೂಡ ಇರಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Neha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿ ಗೊಂಬೆ-ಚಂದನ್‌ ದಂಪತಿ

ದಿವ್ಯಾ ಅಗರ್ವಾಲ್ ಬಿಗ್ ಬಾಸ್ OTT ಮೊದಲ ಸೀಸನ್ ಗೆದ್ದಿದ್ದರು. ಎರಡನೇ ಸೀಸನ್‌ನಲ್ಲಿ, ಎಲ್ವಿಶ್ ಯಾದವ್ ಇತಿಹಾಸವನ್ನು ಬರೆದರು. ದಲ್ಜಿತ್ ಕೌರ್, ಶೆಹಜಾದಾ ಧಾಮಿ, ಪ್ರತೀಕ್ಷಾ ಹೊನ್ಮುಖೆ ಮತ್ತು ಅರ್ಹಾನ್ ಬೆಹ್ಲ್ ಅವರಂತಹ ಸೆಲೆಬ್ರಿಟಿಗಳು ‘ಬಿಗ್ ಬಾಸ್ OTT 3’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.ಈ ಬಾರಿ ಒಟಿಟಿ ಸೀಸನ್‌ಗೆ ಸೋಷಿಯಲ್ ಮೀಡಿಯಾ ಸ್ಟಾರ್ ಜಾಸ್ಮಿನ್ ಕೌರ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ʻಸೋ ಬ್ಯೂಟಿಫುಲ್, ಸೋ ಎಲಿಗೆಂಟ್, ಜಸ್ಟ್ ಲುಕಿಂಗ್ ಲೈಕ್ ಎ ವಾವ್ʼ ಎಂದು ಹೇಳುವ ಮೂಲಕ ರಾತ್ರೋ ರಾತ್ರಿ ಫೇಮಸ್ ಆದವರು ಜಾಸ್ಮಿನ್ ಕೌರ್.

ಸಲ್ಮಾನ್ ಖಾನ್ ‘ಬಿಗ್ ಬಾಸ್ OTT 2’ ಅನ್ನು ಆಯೋಜಿಸಿದ್ದರು. ಇದರಲ್ಲಿ ಎಲ್ವಿಶ್ ಯಾದವ್ ವಿಜೇತರಾಗಿ ಹೊರಹೊಮ್ಮಿದ್ದರು. ಅಭಿಷೇಕ್ ಮಲ್ಹಾನ್ ರನ್ನರ್ ಅಪ್ ಆಗಿ ಹೊರಹೊಮ್ಮಿದರೆ, ಮನೀಶಾ ರಾಣಿ ಎರಡನೇ ರನ್ನರ್ ಅಪ್ ಆಗಿದ್ದರು. ಎಲ್ವಿಶ್ ಯಾದವ್ ಗೆಲುವಿನ ನಂತರ ಹಲವು ವಿವಾದಗಳನ್ನು ಎದುರಿಸಿದ್ದರು. ವಿಶೇಷವಾಗಿ ಹಾವಿನ ವಿಷದ ಪ್ರಕರಣದಲ್ಲಿ ನೋಯ್ಡಾ ಪೊಲೀಸರು ಬಂಧಿಸಿದ್ದರು, ಜಾಮೀನಿನ ಬಳಿಕ ಎಲ್ವಿಶ್ ಯಾದವ್ ಅವರನ್ನು ಬಿಡುಗಡೆ ಮಾಡಿದ್ದರು.

Continue Reading

ಸ್ಯಾಂಡಲ್ ವುಡ್

Kannada Cinema In OTT: ಒಟಿಟಿಗೆ ಲಗ್ಗೆ ಇಟ್ಟ ʼಬ್ಯಾಡ್‌ ಮ್ಯಾನರ್ಸ್‌ʼ, ‘O2’; ಸ್ಟ್ರೀಮಿಂಗ್ ಎಲ್ಲಿ?

Kannada Cinema In OTT: ಬಹು ಭಾಷಾ ಗಾಯಕಿ ಉಷಾ ಉತ್ತುಪ್‌ ಅವರ ಅದ್ಭುತ ಕಂಠಸಿರಿಯಲ್ಲಿ ಈ ಹಾಡು ಮೂಡಿ ಬಂದಿತ್ತು. ಗೀತೆಯಲ್ಲಿ ಅಭಿಷೇಕ್‌ ಅಂಬರೀಶ್‌ ನಿರ್ವಹಿಸಿರುವ ಪಾತ್ರದ ಚಿತ್ರಣ ಇತ್ತು. ಪ್ರತಿ ಸಾಲಿನಲ್ಲೂ ಅಭಿ ಪಾತ್ರದ ಸಾಫ್ಟ್‌ ಮತ್ತು ಹಾರ್ಡ್‌ ಮ್ಯಾನರಿಸಂನ ಝಲಕ್ ಇತ್ತು. ಆಶಿಕಾ ರಂಗನಾಥ್ ನಟನೆಯ ‘O2’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ನೋಡಿದವರು ಮೆಚ್ಚಿಕೊಂಡಿದ್ದರು.

VISTARANEWS.COM


on

Kannada Cinema In OTT bad manners 02 Kannada Movie
Koo

ಬೆಂಗಳೂರು: ಇತ್ತೀಚಿಗೆ ‘ಯುವ’, ‘ಬ್ಲಿಂಕ್’, ‘ಅವತಾರ ಪುರುಷ’-2, ‘ಶಾಖಾಹಾರಿ’, ‘ಜೂನಿ’ ರೀತಿಯ ಸಿನಿಮಾಗಳು ವೀಕ್ಷಕರನ್ನು (Kannada Cinema In OTT) ರಂಜಿಸಿವೆ. ಅದರಲ್ಲೂ ‘ಬ್ಲಿಂಕ್’ ಹಾಗೂ ‘ಶಾಖಾಹಾರಿ’ ಚಿತ್ರಗಳು ಪ್ರೇಕ್ಷಕರ ಮನ ಗೆದ್ದಿವೆ. ದುನಿಯಾ ಸೂರಿ ಹಾಗೂ ಅಭಿಷೇಕ್ ಅಂಬರೀಶ್ ಕಾಂಬಿನೇಷನ್‌ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ, ಆಶಿಕಾ ರಂಗನಾಥ್ ನಟನೆಯ ‘O2’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿವೆ.

ʼಬ್ಯಾಡ್‌ ಮ್ಯಾನರ್ಸ್‌ʼ

ʼಬ್ಯಾಡ್‌ ಮ್ಯಾನರ್ಸ್‌ʼ ಚಿತ್ರಕ್ಕೆ ದುನಿಯಾ ಸೂರಿ ನಿರ್ದೇಶನವಿದೆ. ವಿಶೇಷ ಎಂದರೆ ಈ ಚಿತ್ರದಲ್ಲಿ ಅಭಿಷೇಕ್‌ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದರು ಡಿಂಪಲ್‌ ಕ್ವೀನ್‌ ರಚಿತಾ ರಾಮ್‌. ಕಳೆದ ವರ್ಷ ನವೆಂಬರ್ 24ಕ್ಕೆ ತೆರೆಗಪ್ಪಳಿಸಿದ್ದ ‘ಬ್ಯಾಡ್‌ ಮ್ಯಾನರ್ಸ್’ ಸಿನಿಮಾ ಇದೀಗ ಸನ್‌ನೆಕ್ಸ್ಟ್ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಬ್ಯಾಡ್ ಮ್ಯಾನರ್ಸ್‌ ಹಾಡಿಗೆ ಧನು ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದರು. ಸಿನಿಮಾಟೋಗ್ರಾಫರ್ ಶೇಖರ್ ಅದನ್ನು ಅಷ್ಟೇ ಅದ್ಭುತವಾಗಿ ಸೆರೆ ಹಿಡಿದಿದ್ದರು.ಯುಗಾದಿ ಹಬ್ಬಕ್ಕೆ ಬ್ಯಾಡ್‌ ಮ್ಯಾನರ್ಸ್ ಟೈಟಲ್‌ ಟ್ರ್ಯಾಕ್‌ ಸಿನಿರಸಿಕರಿಗೆ ಸಖತ್‌ ಕಿಕ್‌ ನೀಡಿತ್ತು.

ಬಹು ಭಾಷಾ ಗಾಯಕಿ ಉಷಾ ಉತ್ತುಪ್‌ ಅವರ ಅದ್ಭುತ ಕಂಠಸಿರಿಯಲ್ಲಿ ಈ ಹಾಡು ಮೂಡಿ ಬಂದಿತ್ತು. ಗೀತೆಯಲ್ಲಿ ಅಭಿಷೇಕ್‌ ಅಂಬರೀಶ್‌ ನಿರ್ವಹಿಸಿರುವ ಪಾತ್ರದ ಚಿತ್ರಣ ಇತ್ತು. ಪ್ರತಿ ಸಾಲಿನಲ್ಲೂ ಅಭಿ ಪಾತ್ರದ ಸಾಫ್ಟ್‌ ಮತ್ತು ಹಾರ್ಡ್‌ ಮ್ಯಾನರಿಸಂನ ಝಲಕ್ ಇತ್ತು. ನಿರ್ದೇಶಕ ದುನಿಯಾ ಸೂರಿ ಅವರ ಕಲ್ಪನೆಯ ಈ ಗೀತೆಯ ಮೇಕಿಂಗ್ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಹವಾ ಕ್ರಿಯೇಟ್‌ ಮಾಡಿತ್ತು.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

‘O2’ ಸಿನಿಮಾ

ಆಶಿಕಾ ರಂಗನಾಥ್ ನಟನೆಯ ‘O2’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ನೋಡಿದವರು ಮೆಚ್ಚಿಕೊಂಡಿದ್ದರು. ನೀವು ನೋಡಿ ಎಂದು ಸಲಹೆ ನೀಡಿದ್ದರು. ಪುನೀತ್ ರಾಜ್‌ಕುಮಾರ್ ಕಥೆ ಕೇಳಿ ಒಪ್ಪಿ ತಮ್ಮ ಬ್ಯಾನರ್‌ನಲ್ಲಿ ಆರಂಭಿಸಿದ್ದ ಕೊನೆಯ ಸಿನಿಮಾ ‘O2’. ಆಶಿಕಾ ರಂಗನಾಥ್‌ ಜೊತೆ ಪ್ರವೀಣ್‌ ತೇಜ, ರಾಘವ್‌ ನಾಯಕ್‌, ಸಿರಿ ರವಿಕುಮಾರ್, ಗೋಪಾಲ್‌ ದೇಶಪಾಂಡೆ, ಪ್ರಕಾಶ್‌ ಬೆಳವಾಡಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.ಇನ್ನು ಆಶಿಕಾ ರಂಗನಾಥ್ ಮುಖ್ಯಭೂಮಿಕೆಯಲ್ಲಿರುವ ಥ್ರಿಲ್ಲರ್ ಸಿನಿಮಾ ‘O2’ ಅಮೇಜಾನ್ ಪ್ರೈಂನಲ್ಲಿ ಸಿಗುತ್ತಿದೆ. ಸೂರಿ ನಿರ್ದೇಶನದ ‘ಬ್ಯಾಡ್‌ ಮ್ಯಾನರ್ಸ್’ ಬಾಕ್ಸ್‌ಆಫೀಸ್‌ನಲ್ಲಿ ಸದ್ದು ಮಾಡಿರಲಿಲ್ಲ. ’02’ ಒಂದು ಮೆಡಿಕಲ್‌ ಥ್ರಿಲ್ಲರ್‌ ಸಿನಿಮಾ.

Continue Reading

ಒಟಿಟಿ

Bujji and Bhairava: ಅಮೆಜಾನ್​ಗೆ ಬಂದ ‘ಕಲ್ಕಿ’ಯ ಬುಜ್ಜಿ-ಭೈರವ; ಹೆಚ್ಚಾಯ್ತು ‘ಕಲ್ಕಿ 2898 ಎಡಿ’ ನಿರೀಕ್ಷೆ!

Bujji and Bhairava: ‘ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಭೈರವನ ಪಾತ್ರ ಮಾಡಿದ್ದು, ಭೈರವನ ಜೊತೆಗಾತಿಯಾಗಿ ಬುಜ್ಜಿ ಎಂಬ ಯಂತ್ರವಿದೆ. ಇನ್ನು ʻಬುಜ್ಜಿʼ ಯಂತ್ರಕ್ಕೆ ಕೀರ್ತಿ ಸುರೇಶ್‌ ಧ್ವನಿ ನೀಡಿದ್ದಾರೆ.

VISTARANEWS.COM


on

Bujji and Bhairava Prabhas animated show raises
Koo

ಬೆಂಗಳೂರು: ಕೆಲವು ದಿನಗಳ ಹಿಂದೆ ಭೈರವ ಹಾಗೂ ಬುಜ್ಜಿಯ ಟೀಸರ್‌ವನ್ನು ‘ಕಲ್ಕಿ 2898 ಎಡಿ’ ತಂಡ ಬಿಡುಗಡೆಗೊಳಿಸಿತ್ತು. ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸಿರೀಸ್‌ವನ್ನು ಈಗ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ. . ಪ್ರಭಾಸ್ ಮತ್ತು ನಾಗ್ ಅಶ್ವಿನ್ ಅವರ ‘ಬಿ&ಬಿ: ಬುಜ್ಜಿ ಮತ್ತು ಭೈರವ’ ಜೋಡಿಯ (Bujji and Bhairava) ಮಹತ್ವಾಕಾಂಕ್ಷೆಯ ಯೋಜನೆಯಾದ ‘ಕಲ್ಕಿ 2898 ಎಡಿ’ (Kalki 2989 ad) ತಂಡ, ಸಿನಿಮಾದ ಅನಿಮೇಟೆಡ್ ಸರಣಿಯನ್ನು ಬಿಡುಗಡೆ ಮಾಡಿದೆ. ‘ಕಲ್ಕಿ 2898 ಎಡಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುವ ಮುನ್ನವೇ ಅದರ ಅನಿಮೇಟೆಡ್ ಸರಣಿ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದ್ದು ಪ್ರೇಕ್ಷಕರು ಸಖತ್‌ ಖುಷ್‌ ಆಗಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಭೈರವನ ಪಾತ್ರ ಮಾಡಿದ್ದು, ಭೈರವನ ಜೊತೆಗಾತಿಯಾಗಿ ಬುಜ್ಜಿ ಎಂಬ ಯಂತ್ರವಿದೆ. ಇನ್ನು ʻಬುಜ್ಜಿʼ ಯಂತ್ರಕ್ಕೆ ಕೀರ್ತಿ ಸುರೇಶ್‌ ಧ್ವನಿ ನೀಡಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ, ‘ಬಿ&ಬಿ: ಬುಜ್ಜಿ ಮತ್ತು ಭೈರವ’ ಸಾಕಷ್ಟು ಆಕ್ಷನ್ ಮತ್ತು ಕಾಮಿಡಿ ಇದೆ. ಅನಿಮೇಟೆಡ್ ಸರಣಿಯ ಭೈರವನ ಪಾತ್ರಕ್ಕೆ ಪ್ರಭಾಸ್ ಅವರೇ ಧ್ವನಿ ನೀಡಿದ್ದಾರೆ. 

ಇದನ್ನೂ ಓದಿ: Heat Wave: ಬಿಸಿಗಾಳಿ ಶಾಖಕ್ಕೆ ಉತ್ತರ ಭಾರತ ಸಂಪೂರ್ಣ ತತ್ತರ; ಎಮರ್ಜೆನ್ಸಿ ಘೋಷಣೆ ಆಗುತ್ತಾ?

ಪ್ಯಾನ್‍ ಇಂಡಿಯಾ ಸೂಪರ್‌ ಸ್ಟಾರ್‌ ಪ್ರಭಾಸ್‍ (Actor Prabhas) ಅಭಿನಯದ ‘ಕಲ್ಕಿ 2898 ಎಡಿ’ (Kalki 2898 AD) ಚಿತ್ರ ಸದ್ಯ ಸದ್ದು ಮಾಡುತ್ತಿದೆ. ಜೂನ್ 27ರಂದು ತೆರೆಗೆ ಬರಲು ಸಜ್ಜಾಗಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಸಿನಿ ಪ್ರಿಯರ ಗಮನ ಸೆಳೆದಿದೆ.

ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ

ಐದನೇ ಸೂಪರ್‌ ಸ್ಟಾರ್‌ ಬುಜ್ಜಿ ಬೇರೆ ಯಾರೂ ಅಲ್ಲ ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ. ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಎನಿಸಿಕೊಂಡಿದೆ ಎಂದು ಚಿತ್ರ ತಂಡ ವಿವರಿಸಿದೆ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿತ್ತು.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಜತೆಗೆ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ತಯಾರಾಗುತ್ತಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

Continue Reading
Advertisement
Job Alert
ಉದ್ಯೋಗ1 min ago

Job Alert: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 164 ಹುದ್ದೆ; ಆನ್‌ಲೈಲ್‌ ಮೂಲಕ ಅಪ್ಲೈ ಮಾಡಿ

murder case in Bengaluru rural
ಬೆಂಗಳೂರು ಗ್ರಾಮಾಂತರ2 mins ago

Murder case : ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

V Cinemas multiplex inauguration by dolly dhanjay Ramesh arvind
ಸ್ಯಾಂಡಲ್ ವುಡ್2 mins ago

V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

Petrol Diesel Price
ರಾಜಕೀಯ16 mins ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Team India Coach
ಕ್ರೀಡೆ29 mins ago

Team India Coach: ಭಾರತ ತಂಡದ ಕೋಚ್​ ಆಗಿ ಗಂಭೀರ್​ ಆಯ್ಕೆ; ಶೀಘ್ರದಲ್ಲೇ ಅಧಿಕೃತ ಘೋಷಣೆ

murder Case
ಬೆಂಗಳೂರು ಗ್ರಾಮಾಂತರ34 mins ago

Murder Case : ಓವರ್‌ ಟೇಕ್‌ ವಿಷ್ಯಕ್ಕೆ ಯುವಕನ ಕೊಚ್ಚಿ ಕೊಂದ ದುಷ್ಕರ್ಮಿಗಳು; ಮಗನ ಶವ ಕಂಡು ತಂದೆ ಕಣ್ಣೀರು

R Ashok
ಕರ್ನಾಟಕ39 mins ago

R Ashok:‌ ದುಡ್ಡಿಗಾಗಿ ಕಾರ್ಪೊರೇಷನ್‌, ಯುಟಿಲಿಟಿ ಬಿಲ್ಡಿಂಗ್‌ ಅಡ ಇಡಲು ಸಿದ್ದರಾಮಯ್ಯ ಪ್ಲಾನ್; ಅಶೋಕ್‌ ಆರೋಪ

Viral News
ವೈರಲ್ ನ್ಯೂಸ್58 mins ago

Viral News: ಮಾನವನ ಬೆರಳಾಯ್ತು, ಇದೀಗ ಐಸ್‌ಕ್ರೀಂನಲ್ಲಿ ಹುಳ ಪತ್ತೆ; ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕಪ್ಪ ಎಂದ ನೆಟ್ಟಿಗರು

Chandan Shetty Students Party Video Song Vidyarthi Vidyarthiniyare Movie
ಸ್ಯಾಂಡಲ್ ವುಡ್1 hour ago

Chandan Shetty: ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ!

Vijayanagara News
ವಿಜಯನಗರ1 hour ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ1 hour ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ24 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌