Naseeruddin Shah: ಮೋದಿ ಮುಸ್ಲಿಮರ ಟೋಪಿ ಧರಿಸಬೇಕೆಂದ ನಾಸಿರುದ್ದೀನ್ ಶಾ! ನಿಮ್ಮ ಅಭಿಪ್ರಾಯವೇನು? - Vistara News

ರಾಜಕೀಯ

Naseeruddin Shah: ಮೋದಿ ಮುಸ್ಲಿಮರ ಟೋಪಿ ಧರಿಸಬೇಕೆಂದ ನಾಸಿರುದ್ದೀನ್ ಶಾ! ನಿಮ್ಮ ಅಭಿಪ್ರಾಯವೇನು?

ಭಾರತದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಕೇಂದ್ರ ಸಂಪುಟದಲ್ಲಿ ಮುಸ್ಲಿಂ ಪ್ರಾತಿನಿಧ್ಯವಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ನಾಸಿರುದ್ದೀನ್ ಶಾ (Naseeruddin Shah), ಇದು ಬೇಸರವನ್ನುಂಟು ಮಾಡುತ್ತದೆ. ಆದರೆ ಆಶ್ಚರ್ಯವೇನಿಲ್ಲ. ಆದರೆ ನಾನು ಮೋದಿಯವರನ್ನು ಮುಸ್ಲಿಮರು ಹಾಕುವ ಟೋಪಿಯಲ್ಲಿ ನೋಡ ಬಯಸುತ್ತೇನೆ ಎಂದು ಹೇಳಿದರು.

VISTARANEWS.COM


on

Naseeruddin Shah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕಸಭೆ ಚುನಾವಣೆ 2024ರ (loksabha election-2024) ಬಳಿಕ ಮೂರನೇ ಬಾರಿಗೆ ಅಧಿಕಾರಕ್ಕೆ ಏರಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಬಗ್ಗೆ ನನಗೆ ಯಾವುದೇ ದ್ವೇಷವಿಲ್ಲ. ಅವರು ಯಾವಾಗಲೂ ಟೋಪಿಯನ್ನು ಇಷ್ಟಪಡುತ್ತಾರೆ ಎಂದು ತೋರುತ್ತದೆ. ಆದರೆ ನಾನು ಅವರನ್ನು ಮುಸ್ಲಿಮರು ಹಾಕುವ ಟೋಪಿಯಲ್ಲಿ (skullcap) ನೋಡಲು ಇಷ್ಟಪಡುವುದಾಗಿ ನಟ (actor) ನಾಸಿರುದ್ದೀನ್ ಶಾ (Naseeruddin Shah) ಹೇಳಿದ್ದಾರೆ.

ಸಂವಾದವೊಂದರಲ್ಲಿ ಮಾತನಾಡಿದ ಅವರು, ಭಾರತೀಯ ಮುಸ್ಲಿಮರಿಗೆ ತೋರಿಸುವ ಸಲುವಾಗಿ ನಾನು ಪ್ರಧಾನಿ ಮೋದಿಯನ್ನು ಟೋಪಿಯಲ್ಲಿ ನೋಡಲು ಇಷ್ಟಪಡುವುದಾಗಿ ಹೇಳಿಕೊಂಡಿದ್ದಾರೆ. ಭಾರತದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಮೋದಿ 3.0 ಕ್ಯಾಬಿನೆಟ್‌ನಲ್ಲಿ ಮುಸ್ಲಿಂ ಪ್ರಾತಿನಿಧ್ಯವಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಶಾ, ಇದು ಖಿನ್ನತೆಯನ್ನುಂಟು ಮಾಡುತ್ತದೆ. ಆದರೆ ಆಶ್ಚರ್ಯವೇನಿಲ್ಲ. ಮುಸ್ಲಿಮರ ಮೇಲಿನ ದ್ವೇಷವನ್ನು ಇದು ತೋರುತ್ತದೆ ಎಂದರು.

ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ದೇಶದಲ್ಲಿ ಮುಸ್ಲಿಮರಿಗೆ ಆತಂಕವಿದೆ ಎಂದು ಹೇಳಿದ್ದಾರೆ. ಇದು ನಾವು ಆತಂಕ ಪಡುವ ವಿಷಯ. ಇದು ಕೇವಲ ಹಿಂದೂಗಳು ಅಥವಾ ಮುಸ್ಲಿಮರು ಮಾತ್ರ ಮಾಡುವ ಕೆಲಸವಲ್ಲ. ಇದು ನಾವು ಒಟ್ಟಾಗಿ ಮಾಡಬೇಕಾದ ಕೆಲಸ ಎಂದು ಹೇಳಿದರು.

ಇದನ್ನೂ ಓದಿ: Tamilisai Soundararajan: ವೇದಿಕೆ ಮೇಲೆಯೇ ತಮಿಳ್‌ಸಾಯಿಗೆ ಅಮಿತ್‌ ಶಾ ಭರ್ಜರಿ ಕ್ಲಾಸ್;‌ ವಿಡಿಯೊ ನೋಡಿ

ಮೋದಿ ಅವರು ಒಂದು ದಿನ ಮುಸ್ಲಿಮರು ಧರಿಸುವ ಟೋಪಿಯಲ್ಲಿ ನೋಡಲು ನಾನು ಬಯಸುತ್ತೇನೆ. ಮುಸ್ಲಿಮರು ಧರಿಸುವ ಟೋಪಿ ಧರಿಸುವುದು ಒಂದು ಸೌಹಾರ್ದದ ಸೂಚಕವಾಗಿದೆ. ಒಂದು ಸಮಾರಂಭದಲ್ಲಿ ಅವರು ಮೌಲ್ವಿಯವರು ನೀಡಿದ ಈ ಟೋಪಿಯನ್ನು ಧರಿಸಲು ನಿರಾಕರಿಸಿದ್ದನ್ನು ಸ್ಮರಣೆಯಿಂದ ಅಳಿಸಿ ಹಾಕುವುದು ಕಷ್ಟ. ನಾನು ನಿಮ್ಮಿಂದ ಪ್ರತ್ಯೇಕವಾಗಿಲ್ಲ ಎಂದು ಅವರು ಮನವರಿಕೆ ಮಾಡಿದರೆ ಈ ದೇಶದ ಮುಸ್ಲಿಮರಿಗೆ ಇದು ಒಂದು ದೊಡ್ಡ ಸಹಾಯ ಎಂದು ನಾನು ಭಾವಿಸುತ್ತೇನೆ ಎಂದು ನಾಸಿರುದ್ದೀನ್ ಶಾ ಹೇಳಿದರು.


ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಅನಂತರ ಸತತ ಮೂರನೇ ಬಾರಿಗೆ ಗೆದ್ದ ಎರಡನೇ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. 2024ರ ಜೂನ್ 5ರಂದು ಮೂರನೇ ಬಾರಿಗೆ ನರೇಂದ್ರ ಮೋದಿಯವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡುವ ನಿರ್ಣಯವನ್ನು ಎನ್‌ಡಿಎ ಸರ್ವಾನುಮತದಿಂದ ಅಂಗೀಕರಿಸಿತು. ನರೇಂದ್ರ ಮೋದಿ ಅವರು ಜೂನ್ 9ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Parliament Sessions: ಹಿಂದೂ ಹಿಂಸಾವಾದಿ ಹೇಳಿಕೆ; ಸಂಸತ್‌ನಲ್ಲಿ ರಾಹುಲ್‌-ಮೋದಿ ಜಟಾಪಟಿ

Parliament Sessions: ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ವಿರುದ್ಧ ವಾಗ್ದಾಳಿ ಆರಂಭಿಸಿದ ರಾಹುಲ್‌, ಹಿಂದೂ ಧರ್ಮ ಹಾಗೂ ನಮ್ಮ ಅನೇಕ ಹಿಂದೂ ಮಹಾಪುರುಷರು ಅಹಿಂಸೆಯನ್ನು ಪ್ರತಿಪಾದಿಸುತ್ತಾರೆ. ಜೀಸಸ್‌ ಕ್ರೈಸ್ಟ್‌ ಕೂಡ ಅಹಿಂಸೆಯನ್ನೇ ಪ್ರತಿಪಾದಿಸುತ್ತಾನೆ. ಸ್ವತಃ ಕೈಯಲ್ಲಿ ತ್ರಿಶೂಲ ಹಿಡಿದಿರುವ ಮಹಾಶಿವನೂ ಅಹಿಂಸೆಯನ್ನೇ ಹೇಳುತ್ತಾನೆ. ಆದರೆ ದಿನದ 24 ಹಿಂದೂಗಳೆಂದು ಹೇಳುತ್ತಾ ತಿರುಗಾಡುವವರು ಹಿಂಸೆ, ಶತ್ರುತ್ವ, ಅಸತ್ಯವನ್ನೇ ಹೇಳುತ್ತಿದ್ದಾರೆ. ನೀವು ಹಿಂದೂಗಳೇ ಅಲ್ಲ ಎಂದು ಕಿಡಿ ಕಾರಿದರು

VISTARANEWS.COM


on

Parliament Sessions
Koo

ಹೊಸದಿಲ್ಲಿ: ದಿನದ 24 ಗಂಟೆ ಹಿಂದೂಗಳೆಂದು ಹೇಳಿಕೊಂಡು ತಿರುಗುವವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಸಂಸತ್‌ ಅಧಿವೇಶನ(Parliament Sessions)ದಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi) ಹೇಳಿಕೆ ನೀಡಿದ್ದು, ಈ ವಿಚಾರ ಭಾರೀ ಕೋಲಾಹಲವನ್ನೇ ಸೃಷ್ಟಿಸಿತ್ತು. ರಾಹುಲ್‌ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸೇರಿದಂತೆ ಆಡಳಿತ ಪಕ್ಷ ನಾಯಕರು ಭಾರೀ ವಿರೋಧ ವ್ಯಕ್ತಪಡಿಸಿದ್ದು, ಮಾತ್ರವಲ್ಲದೇ ತಕ್ಷಣ ರಾಹುಲ್‌ ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದ ಘಟನೆಗೆ ಇಂದು ಲೋಕಸಭೆ ಸಾಕ್ಷಿಯಾಯ್ತು.

ರಾಹುಲ್‌ ಹೇಳಿದ್ದೇನು?

ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ವಿರುದ್ಧ ವಾಗ್ದಾಳಿ ಆರಂಭಿಸಿದ ರಾಹುಲ್‌, ಹಿಂದೂ ಧರ್ಮ ಹಾಗೂ ನಮ್ಮ ಅನೇಕ ಹಿಂದೂ ಮಹಾಪುರುಷರು ಅಹಿಂಸೆಯನ್ನು ಪ್ರತಿಪಾದಿಸುತ್ತಾರೆ. ಜೀಸಸ್‌ ಕ್ರೈಸ್ಟ್‌ ಕೂಡ ಅಹಿಂಸೆಯನ್ನೇ ಪ್ರತಿಪಾದಿಸುತ್ತಾನೆ. ಸ್ವತಃ ಕೈಯಲ್ಲಿ ತ್ರಿಶೂಲ ಹಿಡಿದಿರುವ ಮಹಾಶಿವನೂ ಅಹಿಂಸೆಯನ್ನೇ ಹೇಳುತ್ತಾನೆ. ಆದರೆ ದಿನದ 24 ಗಂಟೆ ಹಿಂದೂಗಳೆಂದು ಹೇಳುತ್ತಾ ತಿರುಗಾಡುವವರು ಹಿಂಸೆ, ಶತ್ರುತ್ವ, ಅಸತ್ಯವನ್ನೇ ಹೇಳುತ್ತಿದ್ದಾರೆ. ನೀವು ಹಿಂದೂಗಳೇ ಅಲ್ಲ ಎಂದು ಕಿಡಿ ಕಾರಿದರು.

ಪ್ರಧಾನಿ ಮೋದಿ ಆಕ್ಷೇಪ

ಇನ್ನು ರಾಹುಲ್‌ ಮಾತು ಪುರ್ಣಗೊಳ್ಳುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಆಡಳಿತ ಪಕ್ಷ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎಲ್ಲಾ ಹಿಂದೂಗಳನ್ನು ಹಿಂಸಾವಾದಿಗಳು ಹೇಳುತ್ತಿರುವುದು ತಪ್ಪು. ಹಿಂದೂಗ ಸಮುದಾಯವನ್ನು ಹಿಂಸಾವಾದಿಗಳೆಂದು ಕರೆಯುತ್ತಿರುವುದು ಗಂಭೀರವಾದ ಸಂಗತಿ ಎಂದಿದ್ದಾರೆ. ಇದಕ್ಕೆ ವಿರೋದ ವ್ಯಕ್ತಪಡಿಸಿದ ರಾಹುಲ್‌ ಕೇವಲ ಬಿಜೆಪಿ, ಆರ್‌ಎಸ್‌ಎಸ್‌ ನವರನ್ನು “ನಾನು ಉಲ್ಲೇಖಿಸಿ ಹೇಳಿರುವುದೇ ಹೊರತು ಪೂರ್ತಿ ಹಿಂದೂ ಸಮಾಜವನ್ನಲ್ಲ. ಪ್ರಧಾನಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುತ್ತಿದ್ದಾರೆʼʼ ಎಂದು ಹೇಳಿದರು.

ಇನ್ನು ರಾಹುಲ್‌ ಹೇಳಿಕೆಗೆ ಬಿಜೆಪಿ ನಾಯಕರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ತಕ್ಷಣ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

Continue Reading

ಪ್ರಮುಖ ಸುದ್ದಿ

DK Shivakumar: ಸಿಎಂ- ಡಿಸಿಎಂ ದಂಗಲ್‌ ವಿಷಯ ಎತ್ತುವ ಶಾಸಕರಿಗೆ ನೊಟೀಸ್: ಡಿಕೆ ಶಿವಕುಮಾರ್

DK Shivakumar: ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಸಿಎಂ- ಡಿಸಿಎಂ ದಂಗಲ್ ವಿಚಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೊಬ್ಬರಿಂದ ಪ್ರಸ್ತಾಪವಾಯಿತು. ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಮಾತನಾಡುವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರಧಾನ ಕಾರ್ಯದರ್ಶಿ ಒತ್ತಾಯ ಮಾಡಿದರು. ಪದಾಧಿಕಾರಿಗಳ ಪ್ರಸ್ತಾಪಕ್ಕೆ ಡಿಕೆ ಶಿವಕುಮಾರ್ ಖಡಕ್ ಉತ್ತರ ನೀಡಿದರು.

VISTARANEWS.COM


on

DK ShivaKumar
Koo

ಬೆಂಗಳೂರು: ಸಿಎಂ- ಡಿಸಿಎಂ ಬದಲಾವಣೆ ಕುರಿತು ಮಾತನಾಡುವ ಪಕ್ಷದ ಶಾಸಕರಿಗೆ ಇಷ್ಟರಲ್ಲೇ ನೋಟೀಸ್‌ (Notice) ನೀಡುತ್ತೇವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಜೊತೆಗೂ ಮಾತನಾಡಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಹೇಳಿದ್ದಾರೆ.

ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಸಿಎಂ- ಡಿಸಿಎಂ ದಂಗಲ್ ವಿಚಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೊಬ್ಬರಿಂದ ಪ್ರಸ್ತಾಪವಾಯಿತು. ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಮಾತನಾಡುವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರಧಾನ ಕಾರ್ಯದರ್ಶಿ ಒತ್ತಾಯ ಮಾಡಿದರು. ಪದಾಧಿಕಾರಿಗಳ ಪ್ರಸ್ತಾಪಕ್ಕೆ ಡಿಕೆ ಶಿವಕುಮಾರ್ ಖಡಕ್ ಉತ್ತರ ನೀಡಿದರು.

ʼಕೆಲವರಿಗೆ ಮೈಕ್ ಕಂಡ ತಕ್ಷಣ ಮಾತಾಡುವ ದೊಡ್ಡ ಚಟವಿದೆ. ಆದರೆ ಇದನ್ನು ಎಐಸಿಸಿ ಗಮನಿಸುತ್ತಿದೆ. ಗೊಂದಲ ಮೂಡಿಸುತ್ತಿರುವವರ ಬಗ್ಗೆ ಅರಿವಿದೆ. ಸಭೆಯಲ್ಲಿ ಶಾಸಕರಿಗೆ ನೋಟೀಸ್ ನೀಡಲಾಗುವುದು. ನಾನು ಮತ್ತು ಸಿಎಂ ಈ ಬಗ್ಗೆ ಮಾತಾಡಿದ್ದೇವೆ. ಸಿಎಂ ಜೊತೆಗೆ ಕೆಲವರ ಬಗ್ಗೆ ಮಾತಾಡಿದ್ದೇನೆ. ಶೀಘ್ರದಲ್ಲೇ ಕೆಲವು ಶಾಸಕರಿಗೆ ನೊಟೀಸ್ ನೀಡುತ್ತೇವೆʼ ಎಂದು ಡಿಕೆಶಿ ನುಡಿದರು.

ಇದೇ ಸಂದರ್ಭದಲ್ಲಿ ಪಕ್ಷಾಧ್ಯಕ್ಷನಾಗಿ ತಮ್ಮ ಶ್ರಮದ ಬಗ್ಗೆ ಪದಾಧಿಕಾರಿಗಳಿಗೆ ಡಿಕೆ ಶಿವಕುಮಾರ್ ಮನವರಿಕೆ ಮಾಡಿಕೊಟ್ಟರು. ʼನಾನು ಅಧ್ಯಕ್ಷನಾಗುವ ಮೊದಲು ಪಕ್ಷ ಹೇಗಿತ್ತು, ಈಗ ಹೇಗಿದೆ ನೋಡಿ. ಸೋನಿಯಾ ಗಾಂಧಿ ಪಕ್ಷ ಸಂಕಷ್ಟದಲ್ಲಿದ್ದಾಗ ನನ್ನ ಅಧ್ಯಕ್ಷನನ್ನಾಗಿ ಮಾಡಿದರು. ಈಗ ಪಕ್ಷ ಸದೃಢವಾಗಿದೆ, ಇನ್ನಷ್ಟು ಬಲಿಷ್ಠ ಮಾಡುವ ಹೊಣೆಗಾರಿಕೆ ನನ್ನ ಮೇಲಿದೆ. ಯಾರೋ ಒಂದಿಬ್ಬರು ನನ್ನನ್ನು ಬಗ್ಗಿಸಬಹುದು ಅಂತ ಭಾವಿಸಿದ್ದರೆ ಅದು ಆಗದ ಕೆಲಸʼ ಎಂದು ಶಿವಕುಮಾರ್‌ ಭರವಸೆ ನೀಡಿದರು.

ಪಕ್ಷ ಕಟ್ಟುವತ್ತ ಡಿಕೆ ಶಿವಕುಮಾರ್‌ ಚಿತ್ತ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ರಾಜ್ಯ ಕಾಂಗ್ರೆಸ್‌ ನಾಯಕರಿಂದಲೇ ಒತ್ತಾಯ ಕೇಳಿಬರುತ್ತಿದೆ. ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ (DCM Post) ಸ್ಥಾನವನ್ನು ಒಬ್ಬರಿಗೆ ನೀಡಿರುವುದಕ್ಕೆ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದೆ. ಆದರೆ, ಒನ್ ಮ್ಯಾನ್ ಒನ್ ಪೋಸ್ಟ್ ಕೂಗಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದು, ಕೇಡರ್ ಬೇಸ್ ಪಾರ್ಟಿ ಕಟ್ಟಲು ಅವರು ಪಣತೊಟ್ಟಿದ್ದಾರೆ. ಇದಕ್ಕಾಗಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಚುನಾವಣೆ ದೃಷ್ಟಿಯಿಂದ ಪ್ರತ್ಯೇಕ ಆ್ಯಕ್ಷನ್ ಪ್ಲ್ಯಾನ್ ಸಿದ್ಧಪಡಿಸಿ ಪದಾಧಿಕಾರಿಗಳ ಸಭೆಯಲ್ಲಿ ಮಂಡನೆ ಮಾಡಿದ್ದಾರೆ. ಇನ್ನು ಲೋಕಸಭೆ ಫಲಿತಾಂಶದ ಹಿನ್ನಡೆ ಹಿನ್ನೆಲೆಯಲ್ಲಿ ವಲಯವಾರು ಸತ್ಯ ಶೋಧನಾ ಸಮಿತಿ ರಚನೆಗೆ ನಿರ್ಧಾರ ಮಾಡಿದ್ದಾರೆ.

ಲೋಕಸಭೆಯಲ್ಲಿ ಹಿನ್ನಡೆ ಅನುಭವಿಸಿದ ವಿಧಾನಸಭಾ ಕ್ಷೇತ್ರಗಳ ಪ್ರಗತಿ ಪರಿಶೀಲನೆ, ಕಾರಣಗಳನ್ನು ಪತ್ತೆ ಹಚ್ಚುವುದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ರೂಪುರೇಷೆ ಸಿದ್ಧಪಡಿಸಲು ವಲಯವಾರು ಸಮಿತಿ ರಚನೆ ಮಾಡಲು ಹಾಗೂ ಬಿಬಿಎಂಪಿ, ಜಿಪಂ, ತಾಪಂ ಚುನಾವಣೆಗೆ ಹಾಗೂ ಉಪ ಚುನಾವಣೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ.

ಪ್ರತಿ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರವಾರು ಸಂಚಾಲನ ಸಮಿತಿ ರಚನೆಗೂ ನಿರ್ಧಾರ ಮಾಡಲಾಗಿದೆ. ಇದಕ್ಕಾಗಿ ಮಾಜಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್ ಸದಸ್ಯರ ಪ್ರತ್ಯೇಕ ಸಭೆಯನ್ನು ಡಿಕೆಶಿ ನಡೆಸಲಿದ್ದಾರೆ. ಕೆಳಹಂತದಲ್ಲಿ ಪಕ್ಷ ಬಲವರ್ಧನೆಗೆ ಸಲಹೆ ನೀಡಲು ಪದಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಾಗೆಯೇ ಬೂತ್ ಮಟ್ಟದ ಸಮಸ್ಯೆ ಬಗೆಹರಿಸಲು ವಾರ್ಡ್ ಸಮಿತಿ/ ಪಂಚಾಯತ್ ಸಮಿತಿಗಳ ರಚನೆಗೆ ತೀರ್ಮಾನ ಮಾಡಿದ್ದು, ಗ್ಯಾರಂಟಿ ಫಲಾನುಭವಿಗಳ ದಾಖಲೆ ಹಾಗೂ ಮೊಬೈಲ್ ಸಂಖ್ಯೆ ಸಂಗ್ರಹಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಮಟ್ಟದಲ್ಲಿ ಅಪಾರ್ಟ್ಮೆಂಟ್ ಸೆಲ್ ಹಾಗೂ ರೆಸಿಡೆಂಟ್ ವೆಲ್ಫೆರ್ ಅಸೋಸಿಯೇಷನ್‌ಗೆ ಪುನಶ್ಚೇತನ ನೀಡಲು ಯೋಜಿಸಿದ್ದು, ಉಪ ಚುನಾವಣೆಗಳಿಗೆ ಸಚಿವರು, ಶಾಸಕರನ್ನು ಹೋಬಳಿ ಮಟ್ಟದಲ್ಲಿ ನಿಯೋಜನೆಗೆ ನಿರ್ಧಾರ ಮಾಡಿದ್ದಾರೆ. ಅಲ್ಲದೇ ಸ್ಥಳೀಯ ಶಾಸಕರು, ಹಿರಿಯ ನಾಯಕರ ನೇತೃತ್ವದಲ್ಲಿ ಎಲೆಕ್ಷನ್ ಕ್ಯಾಂಪ್ ಆಫೀಸ್, ವಾರ್ ರೂಂ ಸ್ಥಾಪನೆ ಮಾಡಲು ನಿರ್ಧರಿಸಿದ್ದಾರೆ.

ಪದಾಧಿಕಾರಿಗಳ ಸಭೆಯಲ್ಲಿ ಎರಡು‌ ರೀತಿಯ ಪ್ಲ್ಯಾನ್ ಆಫ್ ಆ್ಯಕ್ಷನ್ ಮಾಡಲು ಮುಂದಾಗಿದ್ದು, ಪಕ್ಷ ಸಂಘಟನೆ ಮತ್ತು ಮುಂಬರುವ ಚುನಾವಣೆ ಕುರಿತು ಕಾರ್ಯ ಯೋಜನೆ ಮಾಡಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ | Hosur Airport: ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಹೊಣೆ ಬಿಐಎಎಲ್‌ಗೆ! ಕರ್ನಾಟಕಕ್ಕೆ ಟಕ್ಕರ್‌ ಕೊಟ್ಟ ತಮಿಳುನಾಡು

Continue Reading

ಕರ್ನಾಟಕ

DCM Post: ಒನ್ ಮ್ಯಾನ್ ಒನ್ ಪೋಸ್ಟ್ ಕೂಗಿಗೆ ಡಿಕೆಶಿ ಡೋಂಟ್ ಕೇರ್‌; ಕೇಡರ್ ಬೇಸ್ ಪಾರ್ಟಿ ಕಟ್ಟಲು ಪಣ!

DCM Post: ಪಕ್ಷ ಸಂಘಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಸರಣಿ ಸಭೆಗಳನ್ನು ಮುಂದುವರಿಸಿದ್ದಾರೆ. ಕಳೆದ ವಾರ ಬೆಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆದಿತ್ತು, ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆ ನಡೆಸಿದ್ದಾರೆ.

VISTARANEWS.COM


on

DCM Post
Koo

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ರಾಜ್ಯ ಕಾಂಗ್ರೆಸ್‌ ನಾಯಕರಿಂದಲೇ ಒತ್ತಾಯ ಕೇಳಿಬರುತ್ತಿದೆ. ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ (DCM Post) ಸ್ಥಾನವನ್ನು ಒಬ್ಬರಿಗೆ ನೀಡಿರುವುದಕ್ಕೆ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದೆ. ಆದರೆ, ಒನ್ ಮ್ಯಾನ್ ಒನ್ ಪೋಸ್ಟ್ ಕೂಗಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದು, ಕೇಡರ್ ಬೇಸ್ ಪಾರ್ಟಿ ಕಟ್ಟಲು ಅವರು ಪಣತೊಟ್ಟಿದ್ದಾರೆ. ಇದಕ್ಕಾಗಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಚುನಾವಣೆ ದೃಷ್ಟಿಯಿಂದ ಪ್ರತ್ಯೇಕ ಆ್ಯಕ್ಷನ್ ಪ್ಲ್ಯಾನ್ ಸಿದ್ಧಪಡಿಸಿ ಪದಾಧಿಕಾರಿಗಳ ಸಭೆಯಲ್ಲಿ ಮಂಡನೆ ಮಾಡಿದ್ದಾರೆ. ಇನ್ನು ಲೋಕಸಭೆ ಫಲಿತಾಂಶದ ಹಿನ್ನಡೆ ಹಿನ್ನೆಲೆಯಲ್ಲಿ ವಲಯವಾರು ಸತ್ಯ ಶೋಧನಾ ಸಮಿತಿ ರಚನೆಗೆ ನಿರ್ಧಾರ ಮಾಡಿದ್ದಾರೆ.

ಲೋಕಸಭೆಯಲ್ಲಿ ಹಿನ್ನಡೆ ಅನುಭವಿಸಿದ ವಿಧಾನಸಭಾ ಕ್ಷೇತ್ರಗಳ ಪ್ರಗತಿ ಪರಿಶೀಲನೆ, ಕಾರಣಗಳನ್ನು ಪತ್ತೆ ಹಚ್ಚುವುದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ರೂಪುರೇಷೆ ಸಿದ್ಧಪಡಿಸಲು ವಲಯವಾರು ಸಮಿತಿ ರಚನೆ ಮಾಡಲು ಹಾಗೂ ಬಿಬಿಎಂಪಿ, ಜಿಪಂ, ತಾಪಂ ಚುನಾವಣೆಗೆ ಹಾಗೂ ಉಪ ಚುನಾವಣೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | Hosur Airport: ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಹೊಣೆ ಬಿಐಎಎಲ್‌ಗೆ! ಕರ್ನಾಟಕಕ್ಕೆ ಟಕ್ಕರ್‌ ಕೊಟ್ಟ ತಮಿಳುನಾಡು

ಪ್ರತಿ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರವಾರು ಸಂಚಾಲನ ಸಮಿತಿ ರಚನೆಗೂ ನಿರ್ಧಾರ ಮಾಡಲಾಗಿದೆ. ಇದಕ್ಕಾಗಿ ಮಾಜಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್ ಸದಸ್ಯರ ಪ್ರತ್ಯೇಕ ಸಭೆಯನ್ನು ಡಿಕೆಶಿ ನಡೆಸಲಿದ್ದಾರೆ. ಕೆಳಹಂತದಲ್ಲಿ ಪಕ್ಷ ಬಲವರ್ಧನೆಗೆ ಸಲಹೆ ನೀಡಲು ಪದಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಾಗೆಯೇ ಬೂತ್ ಮಟ್ಟದ ಸಮಸ್ಯೆ ಬಗೆಹರಿಸಲು ವಾರ್ಡ್ ಸಮಿತಿ/ ಪಂಚಾಯತ್ ಸಮಿತಿಗಳ ರಚನೆಗೆ ತೀರ್ಮಾನ ಮಾಡಿದ್ದು, ಗ್ಯಾರಂಟಿ ಫಲಾನುಭವಿಗಳ ದಾಖಲೆ ಹಾಗೂ ಮೊಬೈಲ್ ಸಂಖ್ಯೆ ಸಂಗ್ರಹಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಮಟ್ಟದಲ್ಲಿ ಅಪಾರ್ಟ್ಮೆಂಟ್ ಸೆಲ್ ಹಾಗೂ ರೆಸಿಡೆಂಟ್ ವೆಲ್ಫೆರ್ ಅಸೋಸಿಯೇಷನ್‌ಗೆ ಪುನಶ್ಚೇತನ ನೀಡಲು ಯೋಜಿಸಿದ್ದು, ಉಪ ಚುನಾವಣೆಗಳಿಗೆ ಸಚಿವರು, ಶಾಸಕರನ್ನು ಹೋಬಳಿ ಮಟ್ಟದಲ್ಲಿ ನಿಯೋಜನೆಗೆ ನಿರ್ಧಾರ ಮಾಡಿದ್ದಾರೆ. ಅಲ್ಲದೇ ಸ್ಥಳೀಯ ಶಾಸಕರು, ಹಿರಿಯ ನಾಯಕರ ನೇತೃತ್ವದಲ್ಲಿ ಎಲೆಕ್ಷನ್ ಕ್ಯಾಂಪ್ ಆಫೀಸ್, ವಾರ್ ರೂಂ ಸ್ಥಾಪನೆ ಮಾಡಲು ನಿರ್ಧರಿಸಿದ್ದಾರೆ.

ಪದಾಧಿಕಾರಿಗಳ ಸಭೆಯಲ್ಲಿ ಎರಡು‌ ರೀತಿಯ ಪ್ಲ್ಯಾನ್ ಆಫ್ ಆ್ಯಕ್ಷನ್ ಮಾಡಲು ಮುಂದಾಗಿದ್ದು, ಪಕ್ಷ ಸಂಘಟನೆ ಮತ್ತು ಮುಂಬರುವ ಚುನಾವಣೆ ಕುರಿತು ಕಾರ್ಯ ಯೋಜನೆ ಮಾಡಲು ತೀರ್ಮಾನಿಸಿದ್ದಾರೆ.

ಪಕ್ಷ ಸಂಘಟನೆಯ ಕಾರ್ಯ ಯೋಜನೆ ಏನು?

1.ಉಸ್ತುವಾರಿಗಳ ಹಂಚಿಕೆ
ಜಿಲ್ಲೆಗಳು, ಅಸೆಂಬ್ಲಿ ಕ್ಷೇತ್ರಗಳಿಗೆ ನಿಯೋಜಿಸಲಾದ ಕೆಪಿಸಿಸಿ ಪದಾಧಿಕಾರಿಗಳಗೆ ಜವಾಬ್ದಾರಿ ಹಂಚುವುದು

2.ಹೊಣೆಗಾರಿಕೆ
ಎಲ್ಲಾ ಕೆಪಿಸಿಸಿ ಪದಾಧಿಕಾರಿಗಳಿಂದ ಮಾಸಿಕ ಕೆಲಸದ ವರದಿಗಳನ್ನು ಸಂಗ್ರಹಿಸುವುದು

    3.ವಿಭಾಗೀಯ ಸಭೆಗಳು
    ಕೆಪಿಸಿಸಿ ವಿಭಾಗೀಯ ಸಭೆಗಳು ಜುಲೈ 2024 ರಲ್ಲಿ ನಡೆಯಲಿವೆ
    ಆಗಸ್ಟ್ 2024 ರಲ್ಲಿ ಬ್ಲಾಕ್, ಜಿಲ್ಲೆ ಮತ್ತು ಅಸೆಂಬ್ಲಿ ಹಂತಗಳಲ್ಲಿ ಸಾಂಸ್ಥಿಕ ಕಾರ್ಯಾಗಾರಗಳನ್ನು ನಡೆಸುವುದು.

    4.ದತ್ತಾಂಶ ಪರಿಶೀಲನೆ
    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಬೂತ್ ಸಮಿತಿ ಮತ್ತು BLA 2 ನೇಮಕಾತಿಗಳನ್ನು ಪರಿಶೀಲಿಸುವುದು

    5.ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು
    ಪ್ರತಿ ಜಿಲ್ಲೆ/ಬ್ಲಾಕ್/ಬೂತ್‌ನಲ್ಲಿ ಪದಾಧಿಕಾರಿಗಳನ್ನು ನೇಮಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು
    ಖಾಲಿ ಇರುವ ಹುದ್ದೆಗಳನ್ನ ಒಂದು ಅಥವಾ ಎರಡು ತಿಂಗಳಿನಲ್ಲಿ ಡಿಸಿಸಿ ಅಧ್ಯಕ್ಷರು, ಸ್ಥಳೀಯ ಸಂಸದರು/ಶಾಸಕರು ಮತ್ತು ಹಿರಿಯ ಪದಾಧಿಕಾರಿಗಳು ಅಭಿಪ್ರಾಯ ಪಡೆದು ಭರ್ತಿ ಮಾಡುವುದು

      6.ಡಿಜಿಟಲೈಸೇಶನ್
      ಬ್ಲಾಕ್, ಹಿರಿಯ ನಾಯಕರು, ಮುಂಚೂಣಿ ಘಟಕಗಳು, ಇಲಾಖೆಗಳ ಮುಖ್ಯಸ್ಥರು ಹೀಗೆ ಎಲ್ಲರ ಸಂಪರ್ಕ ವಿವರಗಳೊಂದಿಗೆ ಕೆಪಿಸಿಸಿ ಡೇಟಾ ಡಿಜಿಟಲೈಸೇಷನ್ ಮಾಡುವುದು

      7.ವೆಬ್‌ಸೈಟ್ ಮತ್ತು ಸೋಶಿಯಲ್ ಮೀಡಿಯಾ
      ಕೆಪಿಸಿಸಿ ವೆಬ್‌ಸೈಟ್‌ನಲ್ಲಿ ಪಕ್ಷದ ಕಾರ್ಯಕ್ರಮಗಳ ಕುರಿತು ಅಪ್‌ಡೇಟ್‌ ಆಗುತ್ತಿರಬೇಕು

      8.ಪ್ರಚಲಿತ ವಿದ್ಯಮಾನಗಳು
      ಕೆಪಿಸಿಸಿ ಪದಾಧಿಕಾರಿಗಳನ್ನು ಬೆಂಬಲಿಸುವಂತ, ನರೇಟಿವ್ ಸೆಟ್ ಮಾಡುವ ಕೌಂಟರ್ ಮಾಡಬೇಕು

      9.ಗ್ರೌಂಡ್ ಲೆವೆಲ್ ರೀಚ್
      ಬ್ಲಾಕ್ ಮತ್ತು ಬೂತ್ ಮಟ್ಟದ ನಡುವೆ ಮಧ್ಯವರ್ತಿಗಳಾಗಿ ಪಂಚಾಯತಿವಾರು ಸಮಿತಿಗಳು ಕೆಲಸ ಮಾಡಬೇಕು

        10.ಸಾಧನೆಗಳ ಮಾಹಿತಿ
        ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನ ಬ್ಲಾಕ್ ಮತ್ತು ಬೂತ್ ಸಮಿತಿಗಳ ಮೂಲಕ ಸ್ಥಳೀಯವಾಗಿ ಪ್ರಚಾರ ಮಾಡಬೇಕು

          11.ಬೂತ್ ಮಟ್ಟದ ಫಲಾನುಭವಿ ಕಾರ್ಯಕ್ರಮ
          ಸರ್ಕಾರವು ಕೋಟಿಗಟ್ಟಲೆ ಫಲಾನುಭವಿಗಳನ್ನು ಸೃಷ್ಟಿಸಿದೆ
          ಹೀಗಾಗಿ ರಾಜ್ಯಾದ್ಯಂತ ತಳಮಟ್ಟದ ಆಂದೋಲನವನ್ನು ರಚಿಸಲು ಫಲಾನುಭವಿ ಆಧಾರಿತ ಕಾರ್ಯಕ್ರಮವನ್ನು ಪ್ರಾರಂಭಿಸುವುದು

          12.ಡಿಜಿಟಲ್ ಯೂತ್
          ತ್ವರಿತ ಮಾಹಿತಿ ಒದಗಿಸಲು ಹಾಗೂ ಪ್ರಚಾರ ಮಾಡಲು ಪ್ರತಿ ಬೂತ್‌ನಲ್ಲಿ “ಡಿಜಿಟಲ್ ಯೂತ್” ಸ್ಥಾಪಿಸುವುದು.
          ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗ ಇದನ್ನ ನಿರ್ವಹಿಸುವುದು.

            13.ಸದಸ್ಯತ್ವ ನೋಂದಣಿ
            ಪಕ್ಷದ ಸದಸ್ಯರನ್ನು ಹೆಚ್ಚಿಸುವ ಸಲುವಾಗಿ ಮತ್ತೊಮ್ಮೆ ಸದಸ್ಯತ್ವ ನೋಂದಣಿ ಮರುಪ್ರಾರಂಭಿಸುವುದು

              14. AIPC ಮತ್ತು ವೃತ್ತಿಪರರ ಕೋಶ ಪುನರುಜ್ಜೀವನ
              ವೃತ್ತಿಪರರ ಕೋಶ ಮತ್ತು AIPC ಅನ್ನು ಪುನರುಜ್ಜೀವನಗೊಳಿಸಲಾಗುವುದು
              ನಗರ ಕಾರ್ಯನಿರತ ವೃತ್ತಿಪರರನ್ನ ಹೆಚ್ಚೆಚ್ಚು ತಲುಪುವಂತೆ ಮಾಡುವುದು ಇದರ ಉದ್ದೇಶ

              ಚುನಾವಣಾ ಸಿದ್ಧತೆಯ ಪ್ಲಾನ್ ಆಫ್ ಆ್ಯಕ್ಷನ್

              1.ವಿಭಾಗೀಯ ಸತ್ಯಶೋಧನೆ ಮತ್ತು ತಯಾರಿ ಸಮಿತಿ
              ಇತ್ತೀಚಿನ ಚುನಾವಣೆಗಳಲ್ಲಿ ಪಕ್ಷದ ಸೋಲಿನ ಕಾರಣಗಳನ್ನು ತನಿಖೆ ಮಾಡಲು ಸಮಿತಿಯನ್ನು ನೇಮಿಸುವುದು.
              ಇತ್ತೀಚಿನ ಚುನಾವಣೆಯಲ್ಲಿ ನಮ್ಮ ಕಾರ್ಯಕ್ಷಮತೆಗೆ ಕಾರಣಗಳನ್ನು ಅಳೆಯಲು ವಿಭಾಗವಾರು ಸಮಿತಿಗಳು ಕೆಲಸ ಮಾಡುತ್ತವೆ.
              ಮುಂಬರುವ ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಚುನಾವಣೆಗಳಿಗೆ ನಿಖರ ಮಾಹಿತಿ ಒದಗಿಸುವುದು.

                2.ಕ್ರಿಯಾಶೀಲ ಪಾತ್ರ
                ಮುಂಬರುವ BBMP/ZP/TP ಚುನಾವಣೆಗಳು ಮತ್ತು ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶಕ್ಕಾಗಿ ಕೆಪಿಸಿಸಿ ಕಚೇರಿ ಪೂರ್ವಭಾವಿಯಾಗಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದು

                3.ಸಮನ್ವಯ ತಂಡಗಳು
                ಪ್ರತಿ ಜಿಲ್ಲೆ, ವಿಧಾನಸಭಾ ಕ್ಷೇತ್ರವು ಅಭ್ಯರ್ಥಿಗಳಿಗೆ ಸಹಾಯ ಮಾಡಲು ಮತ್ತು ಕೆಪಿಸಿಸಿಗೆ ವರದಿ ಮಾಡಲು ಹಿರಿಯ ನಾಯಕರ ನೇತೃತ್ವದಲ್ಲಿ ಕಾರ್ಯನಿರತ ತಂಡ ರಚಿಸುವುದು
                ಸಮನ್ವಯ ತಂಡಕ್ಕೆ ಆಯಾ ಚುನಾವಣೆಗೆ ನಿರ್ಣಾಯಕ ಬೂತ್‌ಗಳನ್ನು ಗುರುತಿಸುವ ಜವಾಬ್ದಾರಿ ಇರುತ್ತದೆ

                4.ವಿಭಾಗೀಯ ಸಭೆಗಳು
                ಎಲ್ಲಾ ಮಾಜಿ TP/ZP ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು/ಉಪ ನಾಯಕರ ಸಭೆಗಳನ್ನ ಮಾಡಿ ಸಲಹೆ ಸೂಚನೆ ಪಡೆಯುವುದು

                5.ಮತದಾರರ ಪಟ್ಟಿಯನ್ನು ನವೀಕರಿಸುವುದು
                ಮತದಾರರ ಪಟ್ಟಿಯಿಂದ ಮತದಾರರ ಸೇರ್ಪಡೆ ಮತ್ತು ಅಳಿಸುವಿಕೆ ಮತ್ತು ಅದರ ನಿರಂತರ ಮೇಲ್ವಿಚಾರಣೆ ಮಾಡಬೇಕು

                6.ಸಮನ್ವಯ ಸಮಿತಿಗಳು
                ಬಿ.ಬಿ.ಎಂ.ಪಿ ಮತ್ತು ಗ್ರಾಮ ಪಂಚಾಯತಿಗಾಗಿ ವಾರ್ಡ್/ಪಂಚಾಯತ್ ವಾರು ಕಮಿಟಿಗಳನ್ನು ಮಾಡುವುದು
                ಗ್ರೌಂಡ್ ಲೆವೆಲ್‌ಗೆ ತಲುಪಿ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ರೂಪಿಸುವುದು

                7.ಫಲಾನುಭವಿ ಡೇಟಾ
                ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಡೇಟಾವನ್ನು ಸಂಗ್ರಹಿಸುವುದು ಮತ್ತು ಪ್ರತ್ಯೇಕಿಸುವುದು
                ನಿರ್ದಿಷ್ಟ ಸಂದೇಶವನ್ನು ಕಳುಹಿಸುವ ಸಲುವಾಗಿ ಡೇಟಾ ಬಳಕೆ ಮಾಡುವುದು.

                8.ಅಪಾರ್ಟ್‌ಮೆಂಟ್ ಸೆಲ್
                ಬಿಬಿಎಂಪಿ ಚುನಾವಣೆ ಅನುಕೂಲಕ್ಕಾಗಿ ಆರ್‌ಡಬ್ಲ್ಯೂಎ ಮತ್ತು ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ತಲುಪಲು ಕೆಪಿಸಿಸಿ ಅಪಾರ್ಟ್‌ಮೆಂಟ್ ಸೆಲ್ ಪುನರುಜ್ಜೀವನಗೊಳಿಸುವುದು

                9.ಉಪಚುನಾವಣೆಗಳ ಗಮನ
                ವಿಧಾನಸಭೆ ಮತ್ತು ಪರಿಷತ್ ಉಪಚುನಾವಣೆಗಳಲ್ಲಿ ಗೆಲುವು ಸಾಧಿಸಲು ಪಕ್ಷದ ಹಿರಿಯ ನಾಯಕರು, ಶಾಸಕರು ಮತ್ತು ಇತರ ಪ್ರಮುಖ ನಾಯಕರನ್ನು ನಿಯೋಜಿಸುವುದು

                  10.ಚುನಾವಣಾ ಶಿಬಿರ ಕಚೇರಿಗಳು
                  ಹಿರಿಯ ಕೆಪಿಸಿಸಿ ನಾಯಕರು ಮತ್ತು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಉಪ-ಚುನಾವಣೆ ಸ್ಥಾನಗಳಲ್ಲಿ ಚುನಾವಣಾ ಶಿಬಿರ ಕಚೇರಿಗಳು/ವಾರ್ ರೂಮ್‌ಗಳನ್ನು ಸ್ಥಾಪಿಸಿ.

                  11.ಪರಿಶೀಲನಾ ಸಭೆಗಳು
                  ಮಾಜಿ TP/ZP ಅಧ್ಯಕ್ಷರು/ಉಪಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು/ಉಪ ನಾಯಕರ ಸಭೆಗಳನ್ನು ನಡೆಸಿ ಜಬಾವ್ದಾರಿ ಹಂಚುವುದು ಹಾಗೂ ಸಲಹೆ ಪಡೆಯುವುದು

                  12.ಕಾರ್ಯಕ್ಷಮತೆಯ ವಿಮರ್ಶೆ
                  ಇತ್ತೀಚಿನ ಲೋಕಸಭೆ ಚುನಾವಣೆಗಳಲ್ಲಿನ ಕಾರ್ಯಕ್ಷಮತೆಯನ್ನು ಕೂಲಂಕಷವಾಗಿ ಪರಿಶೀಲಿಸುವುದು
                  ಯಾವ ಅಸೆಂಬ್ಲಿ ಸ್ಥಾನಗಳು ಕಳಪೆ ಸಾಧನೆ ಮಾಡಿವೆ ಎಂಬುದನ್ನು ಗುರುತಿಸುವುದು ಮತ್ತು ಅದಕ್ಕೆ ಕಾರಣ ತಿಳಿದುಕೊಳ್ಳುವುದು (important)

                  13.ಸದಸ್ಯತ್ವ ಡ್ರೈವ್ ಬಳಕೆ
                  ರಾಜ್ಯದಾದ್ಯಂತ ಕೆಪಿಸಿಸಿ ಸದಸ್ಯರನ್ನು ತಲುಪಲು, ಕೆಪಿಸಿಸಿ ಸದಸ್ಯತ್ವ ಡ್ರೈವ್‌ನಿಂದ ಡೇಟಾವನ್ನು ಬಳಸಿಕೊಳ್ಳುವುದು

                    14.ವಿಷನ್ ಡಾಕ್ಯುಮೆಂಟ್
                    ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿ ವಿಷನ್ ಡಾಕ್ಯುಮೆಂಟ್/ಪ್ರಣಾಳಿಕೆಯನ್ನು ರಚಿಸುವುದು

                    ಇದನ್ನೂ ಓದಿ | DV Sadananda Gowda: ಬಿಜೆಪಿ ರಾಜ್ಯ ನಾಯಕರ ಮೇಲೆ ಸಿಡಿದೆದ್ದ ಸದಾನಂದ ಗೌಡ; ಪಕ್ಷವಿರೋಧಿಗಳಿಗೆ ಮಣೆ ಹಾಕಿದ್ದಕ್ಕೆ ಕಿಡಿ

                    ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಸೋಮವಾರ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ್, ಜಿ.ಸಿ. ಚಂದ್ರಶೇಖರ್, ವಿ.ಎಸ್. ಉಗ್ರಪ್ಪ, ರಮಾನಾಥ್ ರೈ ಸೇರಿದಂತೆ ಕೆಪಿಸಿಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

                    Continue Reading

                    ದೇಶ

                    Sheikh Abdul Rashid: ಸೆರೆಮನೆಯಿಂದ ನೇರ ಸಂಸತ್‌ಗೆ! ಜೈಲಿನಿಂದಲೇ ಸ್ಪರ್ಧಿಸಿ ಗೆದ್ದ ʼಉಗ್ರರ ಬೆಂಬಲಿಗʼನ ಪ್ರಮಾಣವಚನಕ್ಕೆ NIA ಅಸ್ತು

                    Sheikh Abdul Rashid: ಜೈಲಿನಲ್ಲಿರುವ ಕಾರಣ ಜೂ.24ರಂದು ನಡೆದ ಪ್ರಮಾಣವಚನ ಸ್ವೀಕಾರ ಸಭಾರಂಭದಲ್ಲಿ ರಶೀದ್‌ಗೆ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಪ್ರಮಾಣವಚನಕ್ಕೆ ಅವಕಾಶ ಕಲ್ಪಿಸುವಂತೆ ಆತ ಕೋರ್ಟ್‌ ಮೊರೆ ಹೋಗಿದ್ದು, ಇದಕ್ಕೆ ಪ್ರತಿಕ್ರಿಯಿಸುವಂತೆ ಕೋರ್ಟ್‌ ಹೇಳಿತ್ತು. 2017 ರ ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಬಂಧಿತರಾಗಿರುವ ಬಾರಾಮುಲ್ಲಾ ಸಂಸದ ರಶೀದ್ ಅವರು ಪ್ರಮಾಣ ವಚನ ಸ್ವೀಕರಿಸಲು ಮತ್ತು ಸಂಸತ್ತಿನ ಕಾರ್ಯಗಳನ್ನು ನಿರ್ವಹಿಸಲು ಮಧ್ಯಂತರ ಜಾಮೀನು ಅಥವಾ ಪರ್ಯಾಯವಾಗಿ ಕಸ್ಟಡಿ ಪೆರೋಲ್ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದ.

                    VISTARANEWS.COM


                    on

                    Sheikh Abdul Rashid
                    Koo

                    ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಜೈಲಿನಿಂದಲೇ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕಾಶ್ಮೀರಿ ನಾಯಕ ಶೇಖ್ ಅಬ್ದುಲ್ ರಶೀದ್ (Sheikh Abdul Rashid) ಸಂಸದನಾಗಿ ಪ್ರಮಾಣವಚನ ಸ್ವೀಕರಿಸಲು ಎನ್‌ಐಎ ಅನುಮತಿ ನೀಡಿದೆ. ಭಯೋತ್ಪಾದಕರಿಗೆ ಹಣಕಾಸಿನ ನೆರವು ಒದಗಿಸಿದ ಆರೋಪ ಎದುರಿಸುತ್ತಿರುವ ಎಂಜಿನಿಯರ್ ರಶೀದ್ ಎಂದೇ ಜನಪ್ರಿಯವಾಗಿರುವ ಶೇಖ್ ಅಬ್ದುಲ್ ರಶೀದ್ ಜು. 25ರಂದು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಬಗ್ಗೆ ದಿಲ್ಲಿ ಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶ ಚಂದರ್‌ ಜಿತ್‌ ಸಿಂಗ್‌(Chander Jit Singh) ಆದೇಶ ಹೊರಡಿಸಲಿದ್ದಾರೆ.

                    ಜೈಲಿನಲ್ಲಿರುವ ಕಾರಣ ಜೂ.24ರಂದು ನಡೆದ ಪ್ರಮಾಣವಚನ ಸ್ವೀಕಾರ ಸಭಾರಂಭದಲ್ಲಿ ರಶೀದ್‌ಗೆ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಪ್ರಮಾಣವಚನಕ್ಕೆ ಅವಕಾಶ ಕಲ್ಪಿಸುವಂತೆ ಆತ ಕೋರ್ಟ್‌ ಮೊರೆ ಹೋಗಿದ್ದು, ಇದಕ್ಕೆ ಪ್ರತಿಕ್ರಿಯಿಸುವಂತೆ ಕೋರ್ಟ್‌ ಹೇಳಿತ್ತು. 2017 ರ ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಬಂಧಿತರಾಗಿರುವ ಬಾರಾಮುಲ್ಲಾ ಸಂಸದ ರಶೀದ್ ಅವರು ಪ್ರಮಾಣ ವಚನ ಸ್ವೀಕರಿಸಲು ಮತ್ತು ಸಂಸತ್ತಿನ ಕಾರ್ಯಗಳನ್ನು ನಿರ್ವಹಿಸಲು ಮಧ್ಯಂತರ ಜಾಮೀನು ಅಥವಾ ಪರ್ಯಾಯವಾಗಿ ಕಸ್ಟಡಿ ಪೆರೋಲ್ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದ.

                    ಇದೀಗ ಎನ್‌ಐಎ ಅನುಮತಿ ನೀಡಿದ್ದು, ಸೋಮವಾರ, ಎನ್‌ಐಎ ಪರ ವಕೀಲರು ರಶೀದ್ ಪ್ರಮಾಣ ವಚನ ಸ್ವೀಕಾರವು ಮಾಧ್ಯಮಗಳೊಂದಿಗೆ ಮಾತನಾಡದಂತಹ ಕೆಲವು ಷರತ್ತುಗಳಿಗೆ ಒಳಪಟ್ಟಿರುತ್ತದೆ ಎಂದು ಹೇಳಿದರು. ಒಂದು ದಿನದೊಳಗೆ ರಶೀದ್ ಎಲ್ಲವನ್ನೂ ಪೂರ್ಣಗೊಳಿಸಬೇಕು ಎಂದು ಅವರು ತಿಳಿಸಿದ್ದಾರೆ.

                    ಯಾರು ಈ ಶೇಖ್ ಅಬ್ದುಲ್ ರಶೀದ್?

                    ಇಂಜಿನಿಯರ್ ರಶೀದ್ ಪ್ರಸ್ತುತ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾನೆ. ಅವಾಮಿ ಇತ್ತೆಹಾದ್ ಪಕ್ಷದ ಮುಖ್ಯಸ್ಥ, ಎರಡು ಬಾರಿ ಶಾಸಕನಾಗಿದ್ದ ರಶೀದ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) 2019 ರಲ್ಲಿ ಭಯೋತ್ಪಾದನೆ-ಧನಸಹಾಯ ಚಟುವಟಿಕೆಗಳ ಆರೋಪದ ಮೇಲೆ ಬಂಧಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಆತ ನ್ಯಾಷನಲ್‌ ಕಾನ್ಫರೆನ್ಸ್‌ನ ಓಮರ್‌ ಅಬ್ದುಲ್ಲಾ ವಿರುದ್ಧ ಸ್ಪರ್ಧಿಸಿ 4,7,2481 ಮತಗಳನ್ನು ಗಳಿಸಿದ್ದಾನೆ. ಒಮ್ಮೆಯೂ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡದ ರಶೀದ್ 2,04,142 ಮತಗಳ ಭಾರೀ ಅಂತರದಿಂದ ಗೆದ್ದಿದ್ದಾನೆ.

                    ಅಮೃತ್‌ ಸಿಂಗ್‌ ಪ್ರಮಾಣವಚನ ಸ್ವೀಕರಿಸಿಲ್ಲ

                    ಇನ್ನು ಜೈಲಿನಿಂದಲೇ ಸ್ಪರ್ಧಿಸಿ ಅಭೂತಪೂರ್ವ ಗೆಲುವು ಸಾಧಿಸಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್‌ ಸಿಂಗ್‌ ಕೂಡ ಪ್ರಮಾಣವಚನ ಸ್ವೀಕರಿಸಿಲ್ಲ. ಅಮೃತಸರದ ಜಲ್ಲುಪುರ್‌ ಖೇರಾ ಎಂಬ ಗ್ರಾಮದಲ್ಲಿ 1993ರಲ್ಲಿ ಜನಿಸಿದ ಅಮೃತ್‌ಪಾಲ್‌, 12ನೇ ತರಗತಿವರೆಗೆ ಓದಿದ್ದಾನೆ. 2012ರಲ್ಲಿ ಭಾರತ ತೊರೆದು, ದುಬೈಯಲ್ಲಿ ತನ್ನ ಚಿಕ್ಕಪ್ಪನ ಟ್ರಾನ್ಸ್‌ಪೋರ್ಟ್‌ ಕಂಪನಿಯಲ್ಲಿ ದುಡಿದ. ಈತ ಪಂಜಾಬ್‌ನ ಪೊಲೀಸರ ಹಾಗೂ ರಾಜಕಾರಣಿಗಳ ಗಮನಕ್ಕೆ ಬಂದುದೇ ಕೆಲವು ದಿನಗಳ ಹಿಂದೆ- ʼವಾರಿಸ್‌ ಪಂಜಾಬ್‌ ದೇʼ ಸಂಘಟನೆಯ ಮುಖ್ಯಸ್ಥನಾಗಿ ನಿಯುಕ್ತನಾದ ಸಂದರ್ಭದಲ್ಲಿ. ಈ ಸಂಘಟನೆಯನ್ನು ಸ್ಥಾಪಿಸಿದವನು ನಟ, ಚಳವಳಿಗಾರ ದೀಪ್‌ ಸಿಧು. ಇವನು 2022ರ ಫೆಬ್ರವರಿಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ. ಇವನನ್ನು ಸರ್ಕಾರ ಸಾಯಿಸಿದೆ ಎಂದು ಅಮೃತ್‌ಪಾಲ್‌ ಮತ್ತು ಬೆಂಬಲಿಗರು ಆರೋಪಿಸುತ್ತ ಬಂದಿದ್ದಾರೆ. ಅಮೃತ್‌ಪಾಲ್‌ ಯಾವತ್ತೂ ಸಿಧುವನ್ನು ಭೇಟಿ ಮಾಡಿದವನೇ ಅಲ್ಲ. ಆದರೆ ಆನ್‌ಲೈನ್‌ನಲ್ಲಿ ತನ್ನನ್ನು ಅತ್ಯಂತ ಪ್ರಭಾವಿಸಿದ್ದ ಎಂದು ಹೇಳಿಕೊಳ್ಳುತ್ತಾನೆ. ಸಿಧುವಿನ ಸಾವಿನ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಸಿಧುವಿನ ಸಲಹೆಯಂತೆ ತಾನು ಗಡ್ಡ ಟ್ರಿಮ್‌ ಮಾಡಿಕೊಳ್ಳುವುದು ಬಿಟ್ಟಿರುವುದಾಗಿ ಹೇಳಿದ್ದ.

                    ಹಲವು ಸಮಯದಿಂದ ಆತ ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಖಲಿಸ್ತಾನ್ ಪರ ಪೋಸ್ಟ್‌ಗಳನ್ನು ಹಾಕುತ್ತಿದ್ದ. 2021ರಲ್ಲಿ ಕೆಂಪು ಕೋಟೆಯ ಮೇಲೆ ನಡೆದ ಗುಂಪು ದಾಳಿಯ ವೇಳೆ ಅದರ ನೇತೃತ್ವ ವಹಿಸಿದ್ದ ದೀಪ್‌ ಸಿಧುವಿನ ಕೃತ್ಯವನ್ನು ಈತ ಸಮರ್ಥಿಸಿಕೊಂಡಿದ್ದ. 2022ರಲ್ಲಿ ಪಂಜಾಬ್‌ನಲ್ಲಿ ಅಮೃತ್‌ಪಾಲ್‌ನನ್ನು ಅರೆಸ್ಟ್‌ ಮಾಡಲಾಗಿತ್ತು.

                    ಇದನ್ನೂ ಓದಿ: Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

                    Continue Reading
                    Advertisement
                    new criminal law
                    ಕ್ರೈಂ9 mins ago

                    New Criminal Law: ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ ಹಾಸನದಲ್ಲಿ ದಾಖಲು, ಯಾವ ಕೇಸ್?‌

                    tumkur News Assault Case
                    ತುಮಕೂರು25 mins ago

                    Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

                    Amith Shah
                    ದೇಶ26 mins ago

                    Amit Shah: ಹೊಸ ಕ್ರಿಮಿನಲ್ ಕಾನೂನಿನಲ್ಲಿ ಶಿಕ್ಷೆಯ ಬದಲು ನ್ಯಾಯಕ್ಕೆ ಪ್ರಾಧಾನ್ಯತೆ; ಅಮಿತ್ ಶಾ

                    Parliament Sessions
                    ದೇಶ27 mins ago

                    Parliament Sessions: ಹಿಂದೂ ಹಿಂಸಾವಾದಿ ಹೇಳಿಕೆ; ಸಂಸತ್‌ನಲ್ಲಿ ರಾಹುಲ್‌-ಮೋದಿ ಜಟಾಪಟಿ

                    Meghana Raj didn't want to enter the film Father Sundarraj
                    ಸ್ಯಾಂಡಲ್ ವುಡ್33 mins ago

                    Meghana Raj: ಮೇಘನಾ ರಾಜ್‌  ಫಿಲ್ಮ್​ಗೆ ಎಂಟ್ರಿ ಕೊಟ್ಟಿದ್ದು ಇಷ್ಟವಿರಲಿಲ್ಲ; ಬೇಸರ ಹೊರಹಾಕಿದ್ದ ಅಪ್ಪ ಸುಂದರರಾಜ್​ 

                    Assault Case in Hubballi
                    ಹುಬ್ಬಳ್ಳಿ42 mins ago

                    Assault case: ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ಗ್ಯಾಂಗ್ ವಾರ್! ನಡುರಸ್ತೆಯಲ್ಲೆ ಹೊಡಿಬಡಿ

                    DK ShivaKumar
                    ಪ್ರಮುಖ ಸುದ್ದಿ48 mins ago

                    DK Shivakumar: ಸಿಎಂ- ಡಿಸಿಎಂ ದಂಗಲ್‌ ವಿಷಯ ಎತ್ತುವ ಶಾಸಕರಿಗೆ ನೊಟೀಸ್: ಡಿಕೆ ಶಿವಕುಮಾರ್

                    M.R.Jayaram
                    ಪ್ರಮುಖ ಸುದ್ದಿ50 mins ago

                    M.R.Jayaram: ಶಿಕ್ಷಣ ತಜ್ಞ ಡಾ ಎಂ ಆರ್ ಜಯರಾಮ್‌ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

                    Actor Darshan
                    ಕರ್ನಾಟಕ54 mins ago

                    Actor Darshan: ದರ್ಶನ್ ಅಪ್ಪಿಕೊಂಡು ಕಣ್ಣೀರಿಟ್ಟ ತಾಯಿ ಮೀನಾ; ಕುಟುಂಬಸ್ಥರನ್ನು ಕಂಡು ನಟ ಭಾವುಕ

                    DCM Post
                    ಕರ್ನಾಟಕ2 hours ago

                    DCM Post: ಒನ್ ಮ್ಯಾನ್ ಒನ್ ಪೋಸ್ಟ್ ಕೂಗಿಗೆ ಡಿಕೆಶಿ ಡೋಂಟ್ ಕೇರ್‌; ಕೇಡರ್ ಬೇಸ್ ಪಾರ್ಟಿ ಕಟ್ಟಲು ಪಣ!

                    Sharmitha Gowda in bikini
                    ಕಿರುತೆರೆ9 months ago

                    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

                    Kannada Serials
                    ಕಿರುತೆರೆ9 months ago

                    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

                    Bigg Boss- Saregamapa 20 average TRP
                    ಕಿರುತೆರೆ9 months ago

                    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

                    galipata neetu
                    ಕಿರುತೆರೆ7 months ago

                    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

                    Kannada Serials
                    ಕಿರುತೆರೆ9 months ago

                    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

                    Kannada Serials
                    ಕಿರುತೆರೆ9 months ago

                    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

                    Bigg Boss' dominates TRP; Sita Rama fell to the sixth position
                    ಕಿರುತೆರೆ8 months ago

                    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

                    geetha serial Dhanush gowda engagement
                    ಕಿರುತೆರೆ7 months ago

                    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

                    varun
                    ಕಿರುತೆರೆ8 months ago

                    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

                    Kannada Serials
                    ಕಿರುತೆರೆ10 months ago

                    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

                    karnataka Weather Forecast
                    ಮಳೆ22 hours ago

                    Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

                    Actor Darshan
                    ಬೆಂಗಳೂರು1 day ago

                    Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

                    karnataka weather Forecast
                    ಮಳೆ2 days ago

                    Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

                    karnataka Rain
                    ಮಳೆ2 days ago

                    Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

                    karnataka Weather Forecast
                    ಮಳೆ3 days ago

                    Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

                    karnataka Rain
                    ಮಳೆ3 days ago

                    Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

                    Karnataka Weather Forecast
                    ಮಳೆ4 days ago

                    Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

                    karnataka Weather Forecast
                    ಮಳೆ4 days ago

                    Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

                    Heart Attack
                    ಕೊಡಗು4 days ago

                    Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

                    karnataka Rains Effected
                    ಮಳೆ4 days ago

                    Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

                    ಟ್ರೆಂಡಿಂಗ್‌