Suryakumar Yadav: ಅರ್ಧಶತಕ ಬಾರಿಸಿದರೂ ಅನಗತ್ಯ ದಾಖಲೆ ಬರೆದ ಸೂರ್ಯಕುಮಾರ್​ ಯಾದವ್​ - Vistara News

ಕ್ರೀಡೆ

Suryakumar Yadav: ಅರ್ಧಶತಕ ಬಾರಿಸಿದರೂ ಅನಗತ್ಯ ದಾಖಲೆ ಬರೆದ ಸೂರ್ಯಕುಮಾರ್​ ಯಾದವ್​

Suryakumar Yadav: ಹೊಡಿಬಡಿ ಆಟಕ್ಕೆ ಹೆಸರುವಾಸಿಯಾದ ಸೂರ್ಯಕುಮಾರ್​ ಯಾದವ್​ ಅವರು ಅಮೆರಿಕ ವಿರುದ್ಧದ ಪಂದ್ಯದಲ್ಲಿ 49 ಎಸೆತ ಎದುರಿಸಿ 50 ರನ್​ ಗಳಿಸಿ ಅರ್ಧಶತಕ ಬಾರಿಸಿದರು. ಈ ವೇಳೆ ಅವರು ಟಿ20 ವಿಶ್ವಕಪ್​ ಟೂರ್ನಿಯಲ್ಲಿ ನಿಧಾನಗತಿಯ(ಅತಿ ಹೆಚ್ಚು ಎಸೆತ ಎದುರಿಸಿ) ಅರ್ಧಶತಕ ಬಾರಿಸಿದ ವಿಶ್ವದ 5ನೇ ಬ್ಯಾಟರ್​ ಎನಿಸಿಕೊಂಡರು.

VISTARANEWS.COM


on

suryakumar yadav
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನ್ಯೂಯಾರ್ಕ್​: ನಿನ್ನೆ(ಬುಧವಾರ) ನಡೆದ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯ 25ನೇ ಲೀಗ್​ ಪಂದ್ಯದಲ್ಲಿ ಟೀಮ್​ ಇಂಡಿಯಾ(United States vs India) ಅಮೆರಿಕ ವಿರುದ್ಧ ಗೆದ್ದು ಸೂಪರ್​ 8ಕ್ಕೆ ಪ್ರವೇಶ ಪಡೆಯಿತು. ಅರ್ಧಶತಕ ಬಾರಿಸಿ ಭಾರತ ತಂಡದ ಗೆಲುವುವಿನ ರೂವಾರಿ ಎನಿಸಿಕೊಂಡ ಸೂರ್ಯಕುಮಾರ್​ ಯಾದವ್​(Suryakumar Yadav) ಅವರು ಈ ಸಾಧನೆಯ ಹೊರತಾಗಿಯೂ ಅನಗತ್ಯ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದಿದ್ದಾರೆ.

ಹೊಡಿಬಡಿ ಆಟಕ್ಕೆ ಹೆಸರುವಾಸಿಯಾದ ಸೂರ್ಯಕುಮಾರ್​ ಯಾದವ್​ ಅವರು ಅಮೆರಿಕ ವಿರುದ್ಧದ ಪಂದ್ಯದಲ್ಲಿ 49 ಎಸೆತ ಎದುರಿಸಿ 50 ರನ್​ ಗಳಿಸಿ ಅರ್ಧಶತಕ ಬಾರಿಸಿದರು. ಈ ವೇಳೆ ಅವರು ಟಿ20 ವಿಶ್ವಕಪ್​ ಟೂರ್ನಿಯಲ್ಲಿ ನಿಧಾನಗತಿಯ(ಅತಿ ಹೆಚ್ಚು ಎಸೆತ ಎದುರಿಸಿ) ಅರ್ಧಶತಕ ಬಾರಿಸಿದ ವಿಶ್ವದ 5ನೇ ಬ್ಯಾಟರ್​ ಎನಿಸಿಕೊಂಡರು. ಕೆಟ್ಟ ದಾಖಲೆ ಪಾಕಿಸ್ತಾನ ತಂಡದ ಮೊಹಮ್ಮದ್​ ರಿಜ್ವಾನ್​ ಹೆಸರಿನಲ್ಲಿದೆ. ಅವರು ಇದೇ ಆವೃತ್ತಿಯಲ್ಲಿ ನಡೆದ ಕೆನಡಾ ವಿರುದ್ಧದ ಪಂದ್ಯದಲ್ಲಿ 52 ಎಸೆತ ಎದುರಿಸಿ ಅರ್ಧಶತಕ ಬಾರಿಸಿದ್ದರು.

ಇದನ್ನೂ ಓದಿ IND vs USA: ಭಾರತಕ್ಕೆ 5​ ಪೆನಾಲ್ಟಿ ರನ್ ಲಭಿಸಿದ್ದು ಹೇಗೆ?

ಟಿ20 ವಿಶ್ವಕಪ್​ನಲ್ಲಿ ನಿಧಾನಗತಿಯಲ್ಲಿ ಅರ್ಧಶತಕ ಬಾರಿಸಿದ ಬ್ಯಾಟರ್​ಗಳು


ಮೊಹಮ್ಮದ್​ ರಿಜ್ವಾನ್​-52 ಎಸೆತ

ಡೇವಿಡ್​ ಮಿಲ್ಲರ್​- 50 ಎಸೆತ

ಡೆವೋನ್​ ಸ್ಮಿತ್​-49 ಎಸೆತ

ಡೇವಿಡ್​ ಹಸ್ಸಿ-49 ಎಸೆತ

ಸೂರ್ಯಕುಮಾರ್​ ಯಾದವ್​-49 ಎಸೆತ

ಚೇಸಿಂಗ್​ ವೇಳೆ ಭಾರತ ಕೂಡ ಅಮೆರಿಕದಂತೆ ಆರಂಭಿಕ ಆಘಾತ ಎದುರಿಸಿತು. ವಿರಾಟ್​ ಕೊಹ್ಲಿ(0) ಮತ್ತು ರೋಹಿತ್​ ಶರ್ಮ(3) ರನ್​ ಗಳಿಸಿ ವಿಕೆಟ್​ ಕೈಚೆಲ್ಲಿದರು. ಬಳಿಕ ಬಂದ ಪಂತ್​ ಕೂಡ ಬಡಬಡನೆ ಒಂದು ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ 18 ರನ್​ಗೆ ಆಟ ಮುಗಿಸಿದರು. ಪಾಕ್​ ಮೂಲದ ಅಲಿ ಖಾನ್​ ಎಸೆತಕ್ಕೆ ಕ್ಲೀನ್ ಬೌಲ್ಡ್​ ಆದರು. ಅಲ್ಪ ಮೊತ್ತಕ್ಕೆ ಮೂರು ವಿಕೆಟ್​ ಕಳೆದುಕೊಂಡ ಭಾರತ ಒಂದು ಹಂತದಲ್ಲಿ ಈ ಮೊತ್ತವನ್ನು ಬಾರಿಸಲು ಸಾಧ್ಯವೇ ಎಂಬ ಅನುಮಾನ ಕೂಡ ಕಾಡಲಾರಂಭಿಸಿತು. ಆದರೆ, ಹಾರ್ಡ್​ ಹಿಟ್ಟರ್ ಸೂರ್ಯಕುಮಾರ್​ ಯಾದವ್​ ಯಾವುದೇ ಅಪಾಯಕಾರಿ ಹೊಡೆತಗಳಿಗೆ ಮುಂದಾಗದೆ ಸಮಯೋಚಿತ ಬ್ಯಾಟಿಂಗ್​ ನಡೆಸಿ ತಂಡಕ್ಕೆ ನೆರವಾದರು. ಇವರಿಗೆ ಮತ್ತೊಂದು ತುದಿಯಲ್ಲಿ ಶಿವಂ ದುಬೆ ಕೂಡ ಉತ್ತಮ ಸಾಥ್​ ನೀಡಿದರು.

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ನಿರೀಕ್ಷಿತ ಬ್ಯಾಟಿಂಗ್​ ನಡೆಸಲು ವಿಫಲವಾಗಿದ್ದ ಸೂರ್ಯಕುಮಾರ್​ ಮತ್ತು ದುಬೆ ಈ ಪಂದ್ಯದಲ್ಲಿ ಉತ್ತಮ ಜತೆಯಾಟ ನಡೆಸುವ ಮೂಲಕ ಗಮನಸೆಳೆದರು. ಗೆಲುವಿಗೆ 20 ರನ್​ ಬೇಕಿದ್ದಾಗ ಸೂರ್ಯಕುಮಾರ್​ ತಮ್ಮ ಎಂದಿನ ಶೈಲಿಯಾದ ಸ್ಫೋಟಕ ಬ್ಯಾಟಿಂಗ್​ಗೆ ಒಗ್ಗಿಕೊಂಡರು. ಸತತ ಬೌಂಡರಿ ಮತ್ತು ಸಿಕ್ಸರ್​ ಬಾರಿಸಿ ನೆರದಿದ್ದ ಪ್ರೇಕ್ಷರಕರಿಗೆ ಕೊನೆಯ ಕ್ಷಣದಲ್ಲಿ ಮನರಂಜನೆ ನೀಡಿದರು. ಜತೆಗೆ ಅರ್ಧಶತಕ ಬಾರಿಸಿ ಮಿಂಚಿದರು. ದುಬೆ ಮತ್ತು ಸೂರ್ಯ ಜೋಡಿ 4 ವಿಕೆಟ್​ಗೆ ಅಜೇಯ 72 ರನ್​ ಒಟ್ಟುಗೂಡಿಸಿತು. ಸೂರ್ಯಕುಮಾರ್​ 49 ಎಸೆತ ಎದುರಿಸಿ ತಲಾ 2 ಬೌಂಡರಿ ಮತ್ತು ಸಿಕ್ಸರ್​ ಬಾರಿಸಿ ಭರ್ತಿ 50 ರನ್​ ಗಳಿಸಿದರೆ, ದುಬೆ 35 ಎಸೆತಗಳಿಂದ 31 ರನ್​ ಬಾರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

Hardik Pandya : ಹಾರ್ದಿಕ್ ಪಾಂಡ್ಯ ಟಿ20 ವಿಶ್ವ ಕಪ್​ ಪಂದ್ಯಾವಳಿಯಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ದೊಡ್ಡ ಪಾತ್ರ ವಹಿಸಿದ್ದರು. ಅವರೆಲ್ಲರ ಪ್ರಯತ್ನ ಭಾರತ ತಂಡದ ಐಸಿಸಿ ಟ್ರೋಫಿಗಾಗಿ ದೀರ್ಘಕಾಲದ ಕಾಯುವಿಕೆ ಕೊನೆಯಾಗಿತು.. 2007ರ ಬಳಿಕ ಭಾರತ ಟಿ20 ವಿಶ್ವಕಪ್ ಗೆದ್ದಿಲ್ಲ. ಅಂತಿಮವಾಗಿ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವಿನೊಂದಿಗೆ ದೀರ್ಘ ಕಾಯುವಿಕೆ ಕೊನೆಗೊಳಿಸುವಲ್ಲಿ ಯಶಸ್ವಿಯಾದರು.

VISTARANEWS.COM


on

Hardik Pandya
Koo

ಬೆಂಗಳೂರು: ಟಿ20 ವಿಶ್ವ ಕಪ್​​ ಗೆದ್ದು ಖುಷಿಯಲ್ಲಿರುವ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ಐಪಿಎಲ್​ನಲ್ಲಿ ಅವರ ಮುಂಬಯಿ ಇಂಡಿಯನ್ಸ್ ಜತೆಗಾರ ಇಶಾನ್ ಕಿಶನ್ ಶುಕ್ರವಾರ ಭೇಟಿಯಾದರು. ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಭಾರತದ ವಿಜಯ ಅಭಿಯಾನದಲ್ಲಿ ಅವರ ಪಾತ್ರಕ್ಕಾಗಿ ಅಭಿನಂದಿಸಿದರು. ಈ ವೇಳೆ ಅವರು ಎರಡೂ ಕೆನ್ನೆಗಳಿಗೆ ಮುತ್ತು ನೀಡಿ ಶುಭಾಶಯ ತಿಳಿಸಿದರು.

ಹಾರ್ದಿಕ್ ಪಾಂಡ್ಯ ಟಿ20 ವಿಶ್ವ ಕಪ್​ ಪಂದ್ಯಾವಳಿಯಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ದೊಡ್ಡ ಪಾತ್ರ ವಹಿಸಿದ್ದರು. ಅವರೆಲ್ಲರ ಪ್ರಯತ್ನ ಭಾರತ ತಂಡದ ಐಸಿಸಿ ಟ್ರೋಫಿಗಾಗಿ ದೀರ್ಘಕಾಲದ ಕಾಯುವಿಕೆ ಕೊನೆಯಾಗಿತು.. 2007ರ ಬಳಿಕ ಭಾರತ ಟಿ20 ವಿಶ್ವಕಪ್ ಗೆದ್ದಿಲ್ಲ. ಅಂತಿಮವಾಗಿ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವಿನೊಂದಿಗೆ ದೀರ್ಘ ಕಾಯುವಿಕೆ ಕೊನೆಗೊಳಿಸುವಲ್ಲಿ ಯಶಸ್ವಿಯಾದರು.

ಟಿ20 ವಿಶ್ವಕಪ್ ಟೂರ್ನಿಯ 9ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಮಣಿಸಿ ಚಾಂಪಿಯನ್ ಆಯಿತು. ಹಾರ್ದಿಕ್ ಪಾಂಡ್ಯ ಪಂದ್ಯಾವಳಿಯುದ್ದಕ್ಕೂ ಟೀಮ್ ಇಂಡಿಯಾಕ್ಕಾಗಿ ಉತ್ತಮ ಪ್ರದರ್ಶನ ನೀಡಿದ್ದರು ಮತ್ತು ಫೈನಲ್​​ನಲ್ಲಿಯೂ ಭಾರಿ ಪ್ರಭಾವ ಬೀರಿದ್ದರು. 177 ರನ್​ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 16 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿತು.

ನಂತರ ಭಾರತದ ಉಪನಾಯಕ 17 ನೇ ಓವರ್​ನ ಮೊದಲ ಎಸೆತದಲ್ಲಿ ಅಪಾಯಕಾರಿಯಾಗಿದ್ದ ಹೆನ್ರಿಕ್ ಕ್ಲಾಸೆನ್ ಅವರನ್ನು 52 ರನ್​ಗಳಿಗೆ ಔಟ್ ಮಾಡುವ ಮೂಲಕ ಪಂದ್ಯವನ್ನು ಭಾರತ ಕಡೆಗೆ. ನಂತರ ಅಂತಿಮ ಓವರ್​ನಲ್ಲಿ ಡೇವಿಡ್ ಮಿಲ್ಲರ್ ಅವರನ್ನು ಔಟ್​ ಮಾಡಿದರು. ಪಾಂಡ್ಯ 48 ಸರಾಸರಿಯಲ್ಲಿ 144 ರನ್ ಗಳಿಸಿದ್ದಾರೆ ಮತ್ತು 17.36 ಸರಾಸರಿಯಲ್ಲಿ 11 ವಿಕೆಟ್​ಗಳನ್ನು ಪಡೆದಿದ್ದಾರೆ.

ಹಾರ್ದಿಕ್ ಪಾಂಡ್ಯಗೆ ಶುಭಾಶಯ ಸಲ್ಲಿಸಿದ ಇಶಾನ್ ಕಿಶನ್

ಶುಕ್ರವಾರ ಇಶಾನ್ ಕಿಶನ್ ತಮ್ಮ ಐಪಿಎಲ್​ ಸಹ ಆಟಗಾರನಿಗೆ ಶುಭಾಶಯವನ್ನು ಇನ್​​ಸ್ಟಾಗ್ರಾಮ್​ ಮೂಲಕ ಸಲ್ಲಿಸಿದರು. ಅದರಲ್ಲಿ ಅವರು ಪಾಂಡ್ಯ ಅವರ ನಿವಾಸಕ್ಕೆ ಅನಿರೀಕ್ಷಿತ ಭೇಟಿ ನೀಡಿದರು. ಅವರ ಪ್ರದರ್ಶನಕ್ಕಾಗಿ ಅವರನ್ನು ಅಭಿನಂದಿಸಿದರು. ಕಿಶನ್ ಪಾಂಡ್ಯಗೆ ಮುತ್ತಿಡುವ ಮೊದಲು ಇಬ್ಬರೂ ಅಪ್ಪಿಕೊಂಡರು.

ಇದನ್ನೂ ಓದಿ: T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

ಕಿಶನ್ ತಮ್ಮ ವಿಶ್ವಕಪ್​ ವಿಚಾರದಲ್ಲಿ ಯಾವುದೂ ಪೂರಕವಾಗಿ ನಡೆಯದಿದ್ದ ಪಾಂಡ್ಯ ಹೇಗೆ ಶಾಂತವಾಗಿ ಮತ್ತು ಏಕಾಗ್ರತೆಯಿಂದ ಇರಲು ಸಾಧ್ಯವಾಯಿತು ಎಂಬುದನ್ನು ಎತ್ತಿ ತೋರಿಸಿದ್ದಾರೆ. ಏಸ್ ಆಲ್ರೌಂಡರ್ ಐಪಿಎಲ್ ಅಭಿಯಾನದುದ್ದಕ್ಕೂ ಅಭಿಮಾನಿಗಳಿಂದ ಟೀಕೆಗಳನ್ನು ಎದುರಿಸಿದ್ದರು. ರೋಹಿತ್ ಶರ್ಮಾ ಅವರನ್ನು ಮುಂಬೈ ಇಂಡಿಯನ್ಸ್ ನಾಯಕನನ್ನಾಗಿ ಮಾಡಿದ ಬಗ್ಗೆ ಅಭಿಮಾನಿಗಳು ತಮ್ಮ ಕೋಪವನ್ನು ಹೊರಹಾಕಿದ್ದರು.

ಕಳೆದ ಕೆಲವು ತಿಂಗಳುಗಳಲ್ಲಿ ನೀವು ಅನೇಕ ಕಷ್ಟದ ದಿನಗಳನ್ನು ಎದುರಿಸಿದ್ದೀರಿ. ಆದರೂ ನೀವು ಶಾಂತವಾಗಿ ಮತ್ತು ಇಂದು ನೀವು ನಿಮ್ಮ ಕಠಿಣ ಪರಿಶ್ರಮ, ಪ್ರಾಮಾಣಿಕತೆ ಮತ್ತು ಪ್ರಾಮಾಣಿಕತೆಯ ಫಲಿತಾಂಶವನ್ನು ಪಡೆದಿದ್ದೀರಿ. ಇನ್ನೂ ಹೆಚ್ಚಿನದನ್ನು ಸಾಧನೆ ಮಾಡಿದ್ದೀರಿ. ಅದನ್ನು ಹೇಳಲು ಆದರೆ ಪದಗಳು ಕಡಿಮೆಯಾಗುತ್ತವೆ ಎಂದು ಇಶಾನ್ ಕಿಶನ್ ಬರೆದಿದ್ದಾರೆ.

Continue Reading

ಪ್ರಮುಖ ಸುದ್ದಿ

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

T20 World Cup : 2024ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ರೋಹಿತ್ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದರು. ಅವರ ಬ್ಯಾಟಿಂಗ್ ಮಾತ್ರವಲ್ಲ, ತಂಡದ ನಾಯಕ ತಂಡವನ್ನು ಸಂವೇದನಾಶೀಲವಾಗಿ ಮುನ್ನಡೆಸಿದರು. ಅವರು 257 ರನ್ ಗಳಿಸಿದರು ಮತ್ತು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದವರು.

VISTARANEWS.COM


on

Rohit Sharma
Koo

ಬೆಂಗಳೂರು: 2024ರ ಐಸಿಸಿ ಟಿ20 ವಿಶ್ವಕಪ್ (T20 World Cup) ಗೆದ್ದ ಬಳಿಕ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ತಂಡದ ಆಟಗಾರರು ಸಂಭ್ರಮದಲ್ಲಿದ್ದಾರೆ. ಬಾರ್ಬಡೋಸ್​​​ನ ಬ್ರಿಜ್​​ಟೌನ್​​ ಕೆನ್ಸಿಂಗ್ಟನ್ ಓವಲ್​​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್​​ಗಳಿಂದ ಸೋಲಿಸಿ ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಎರಡನೇ ಟಿ 20 ಪ್ರಶಸ್ತಿ ಗೆದ್ದುಕೊಂಡಿತು. 2024ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಮುಂಬೈ ಆಟಗಾರರಾದ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಪ್ರಮುಖ ಪಾತ್ರ ವಹಿಸಿದ್ದರು. ರೋಹಿತ್ ತಂಡವನ್ನು ಮುನ್ನಡೆಸಿದರೆ ಸೂರ್ಯಕುಮಾರ್ ಮತ್ತು ದುಬೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು.

2024ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ರೋಹಿತ್ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದರು. ಅವರ ಬ್ಯಾಟಿಂಗ್ ಮಾತ್ರವಲ್ಲ, ತಂಡದ ನಾಯಕ ತಂಡವನ್ನು ಸಂವೇದನಾಶೀಲವಾಗಿ ಮುನ್ನಡೆಸಿದರು. ಅವರು 257 ರನ್ ಗಳಿಸಿದರು ಮತ್ತು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದವರು.

ರೋಹಿತ್ ಶರ್ಮಾ ಪ್ರಭಾವಿ ನಾಯಕತ್ವವನ್ನು ಪ್ರದರ್ಶಿಸಿದ್ದರು ಮತ್ತು ಅವರ ಅದ್ಭುತ ತಂತ್ರಗಾರಿಕೆ ತೋರಿದ್ದರು. ಭಾರತದ ನಾಯಕ ಅದ್ಭುತ ಬೌಲಿಂಗ್ ಬದಲಾವಣೆಗಳು ಮತ್ತು ಫೀಲ್ಡ್ ಪ್ಲೇಸ್​ಮೆಂಟ್​​ಗಳು ಟೂರ್ನಿಯುದ್ದಕ್ಕೂ ಗಮನ ಸೆಳೆಯಿತು. ಇದು ಪ್ರತಿಯೊಂದು ಪಂದ್ಯದಲ್ಲೂ ಫಲ ನೀಡಿತು. 2024 ರ ಟಿ 20 ವಿಶ್ವಕಪ್ ಗೆಲ್ಲಲು ಭಾರತಕ್ಕೆ ಸಹಾಯ ಮಾಡಿತು.

ಸೂರ್ಯಕುಮಾರ್ ಯಾದವ್ ಕೂಡ ಬ್ಯಾಟಿಂಗ್​ನಲ್ಲಿ ಉತ್ತಮ ಪಾತ್ರ ವಹಿಸಿದ್ದರು. ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಮತ್ತು ಯುಎಸ್ಎ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ಮೂಲಕ ಉತ್ತಮ ಪ್ರದರ್ಶನವನ್ನು ನೀಡಿದ್ದರು. ಅಲ್ಲಿ ಭಾರತವು ಮುಂದುವರಿಯಲು ಹೆಣಗಾಡಿತು. ಅವರು ತಂಡದ ಪ್ರಮುಖ ಪಂದ್ಯಗಳಲ್ಲಿ ನಿರ್ಣಾಯಕ ಅರ್ಧ ಶತಕಗಳನ್ನು ಗಳಿಸಿದ್ದರು.

ಸೂರ್ಯಕುಮಾರ್ ಎಂಟು ಪಂದ್ಯಗಳಲ್ಲಿ 28.42 ಸರಾಸರಿಯಲ್ಲಿ 199 ರನ್ ಗಳಿಸಿದ್ದರೆ, ಟಿ 20 ವಿಶ್ವಕಪ್​​ನ ಫೈನಲ್​​ನಲ್ಲಿ ರೋಚಕ ಕ್ಯಾಚ್ ಹಿಡಿದು ಡೇವಿಡ್​ ಮಿಲ್ಲರ್​ ಅವರನ್ನು ಔಟ್ ಮಾಡಿದ್ದರು. ಆ ಕ್ಯಾಚ್ ಭಾರತವನ್ನು ಗೆಲ್ಲಿಸಿತ್ತು.

ಶಿವಂ ದುಬೆ ಕೂಡ ಉತ್ತಮವಾಗಿ ಆಡಿದ್ದರು. ಆಲ್ರೌಂಡರ್ ಮಧ್ಯದಲ್ಲಿ ಬ್ಯಾಟರ್​ ಮತ್ತು ಅವರು ಪರಿಣಾಮಕಾರಿ ಇನ್ನಿಂಗ್ಸ್​ಗಳನ್ಉ ಆಡುವುದನ್ನು ಖಚಿತಪಡಿಸಿಕೊಂಡರು. ಅವರು 16 ಎಸೆತಗಳಲ್ಲಿ ಮೂರು ಸಿಕ್ಸರ್ ಮತ್ತು ಒಂದು ಬೌಂಡರಿ ಸೇರಿದಂತೆ 27 ರನ್ ಗಳಿಸಿದ್ದರು. 168 ಸ್ಟ್ರೈಕ್ ರೇಟ್​​ನಲ್ಲಿ ಇದು ಫೈನಲ್​ನಲ್ಲಿ ಭಾರತೀಯ ಬ್ಯಾಟರ್​​​ಗಳ ಪೈಕಿ ಅತ್ಯಧಿಕವಾಗಿದೆ.

11 ಕೋಟಿ ರೂ. ಬಹುಮಾನ ಘೋಷಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ

2024 ರ ಟಿ 20 ವಿಶ್ವಕಪ್​​ನಲ್ಲಿ ಮುಂಬೈ ಮೂಲದ ಆಟಗಾರರು ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದರಿಂದ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಅವರಂತಹ ನಾಲ್ವರು ಆಟಗಾರರಿಗೆ ಬಹುಮಾನದ ಮೊತ್ತವನ್ನು ಘೋಷಿಸಿದ್ದಾರೆ.

ಇದನ್ನೂ ಓದಿ: Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

ಮುಂಬೈ ಆಟಗಾರರಿಗೆ ಮಹಾರಾಷ್ಟ್ರ ಸರ್ಕಾರದಿಂದ 11 ಕೋಟಿ ರೂಪಾಯಿ ಹಾಗೂ ಭಾರತೀಯ ನಾಯಕ ರೋಹಿತ್ ಶರ್ಮಾ ಅವರಿಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆ ಉಡುಗೊರೆಯಾಗಿ ನೀಡಿದರು.

2024 ರ ಟಿ 20 ವಿಶ್ವಕಪ್ ನಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ ನಂತರ, ರೋಹಿತ್ ಶರ್ಮಾ ಟಿ 20ಯಿಂದ ನಿವೃತ್ತಿ ಘೋಷಿಸಿದರು. ಅವರು 4231 ರನ್​ಗಳೊಂದಿಗೆ ಸಾರ್ವಕಾಲಿಕ ಅತ್ಯಧಿಕ ರನ್ ಸ್ಕೋರರ್ ಆಗಿ ತಮ್ಮ ವೃತ್ತಿಜೀವನ ಕೊನೆಗೊಳಿಸಿದರು. ನಾಯಕ ಐದು ಶತಕಗಳನ್ನು ಗಳಿಸಿದ್ದಾರೆ. ಇದು ಟಿ 20 ಐ ಕ್ರಿಕೆಟ್​​ನಲ್ಲಿ ಬ್ಯಾಟರ್​ ಗಳಿಸಿದ ಗರಿಷ್ಠ ಮೊತ್ತವಾಗಿದೆ. ಅವರು 32 ಅರ್ಧಶತಕ ಬಾರಿಸಿದ್ದರೆ ವೃತ್ತಿಜೀವನದ ಸ್ಟ್ರೈಕ್ ರೇಟ್ 140 ಆಗಿದೆ.

Continue Reading

ಪ್ರಮುಖ ಸುದ್ದಿ

Virat Kohli : ನಿವೃತ್ತಿ ಬಳಿಕ ಪತ್ನಿ ಜತೆ ಲಂಡನ್​ಗೆ ತೆರಳಿ ನೆಲೆಸಲಿದ್ದಾರೆ ವಿರಾಟ್​ ಕೊಹ್ಲಿ,

Virat kohli : ಅನುಷ್ಕಾ ಮತ್ತು ವಿರಾಟ್ ಆಗಾಗ್ಗೆ ಲಂಡನ್​ಗೆ ಭೇಟಿ ನೀಡುತ್ತಿರುವ ಕಾರಣ ಈ ಊಹಾಪೋಹಗಳು ಎದ್ದಿವೆ. . 2023 ರಲ್ಲಿ, ವಿರಾಟ್ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯಿಂದ ವಿರಾಮ ತೆಗೆದುಕೊಂಡು ಲಂಡನ್​​ನಲ್ಲಿ ಅನುಷ್ಕಾ ಅವರೊಂದಿಗೆ ಸ್ವಲ್ಪ ಸಮಯ ಕಳೆದರು. ವೈರಲ್ ಫೋಟೋದಲ್ಲಿ ಅನುಷ್ಕಾ ಮತ್ತು ವಿರಾಟ್ ಲಂಡನ್​​​ ರೆಸ್ಟೋರೆಂಟ್ ಹೊರಗೆ ಕಾಣಿಸಿಕೊಂಡಿದ್ದರು.

VISTARANEWS.COM


on

Virat kohli
Koo

ಬೆಂಗಳೂರು: ಸ್ಟಾರ್​ ಬ್ಯಾಟರ್ ವಿರಾಟ್​ ಕೊಹ್ಲಿಯ (Virat Kohli) ಪತ್ನಿ ಹಾಗೂ ನಟಿ ಅನುಷ್ಕಾ ಶರ್ಮಾ ಪ್ರಸ್ತುತ ತಮ್ಮ ಇಬ್ಬರು ಮಕ್ಕಳಾದ ವಾಮಿಕಾ ಮತ್ತು ಅಕಾಯ್ ಜತೆ ಲಂಡನ್​​ನಲ್ಲಿದ್ದಾರೆ. ಬಾರ್ಬಡೋಸ್​​ನಿಂದ ಭಾರತಕ್ಕೆ ಮರಳಿದ ವಿರಾಟ್ ಕೊಹ್ಲಿ ತಕ್ಷಣವೇ ಲಂಡನ್​ಗೆ ಹೋಗಿದ್ದಾರೆ. ಜೂನ್ 29ರಂದು ಟೀಮ್ ಇಂಡಿಯಾ ಟಿ 20 ವಿಶ್ವಕಪ್ ಗೆದ್ದ ತಕ್ಷಣವೇ ಕೊಹ್ಲಿ 20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಲಂಡನ್​ಗೆ ತೆರಳಿರುವ ಅವರು ಭವಿಷ್ಯದಲ್ಲಿ ಕಾಯಂ ಅಲ್ಲೇ ನೆಲೆಗೊಳ್ಳಲಿದ್ದರೆ ಎಂಬುದಾಗಿ ಹೇಳಲಾಗಿದೆ.

ಅನುಷ್ಕಾ ಮತ್ತು ವಿರಾಟ್ ಆಗಾಗ್ಗೆ ಲಂಡನ್​ಗೆ ಭೇಟಿ ನೀಡುತ್ತಿರುವ ಕಾರಣ ಈ ಊಹಾಪೋಹಗಳು ಎದ್ದಿವೆ. . 2023 ರಲ್ಲಿ, ವಿರಾಟ್ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯಿಂದ ವಿರಾಮ ತೆಗೆದುಕೊಂಡು ಲಂಡನ್​​ನಲ್ಲಿ ಅನುಷ್ಕಾ ಅವರೊಂದಿಗೆ ಸ್ವಲ್ಪ ಸಮಯ ಕಳೆದರು. ವೈರಲ್ ಫೋಟೋದಲ್ಲಿ ಅನುಷ್ಕಾ ಮತ್ತು ವಿರಾಟ್ ಲಂಡನ್​​​ ರೆಸ್ಟೋರೆಂಟ್ ಹೊರಗೆ ಕಾಣಿಸಿಕೊಂಡಿದ್ದರು. ಅಕಾಯ್ ಅವರ ಜನನವನ್ನು ಘೋಷಿಸಿದ ಕೆಲವು ದಿನಗಳ ನಂತರ ವಿರಾಟ್ ಲಂಡನ್​ನ ರೆಸ್ಟೋರೆಂಟ್​​ನಲ್ಲಿ ವಮಿಕಾ ಅವರೊಂದಿಗೆ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: Narendra Modi : ಚಾಂಪಿಯನ್ನರ ಜತೆ ಸ್ಮರಣೀಯ ಸಂಭಾಷಣೆ; ಭಾರತ ಕ್ರಿಕೆಟ್ ತಂಡದ ಜತೆಗಿನ ಮಾತುಕತೆಯ ವಿಡಿಯೊ ಬಿಡುಗಡೆ ಮಾಡಿದ ಮೋದಿ

ಅನುಷ್ಕಾ ಶರ್ಮಾ ತನ್ನ ಗರ್ಭಧಾರಣೆಯ ಹಲವಾರು ತಿಂಗಳುಗಳನ್ನು ಲಂಡನ್​ನಲ್ಲಿ ಕಳೆದರು ಎಂದು ವರದಿಯಾಗಿದೆ. ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಮ್ಮ ಮಗನ ಜನನದ ಸುದ್ದಿಯನ್ನು ಐದು ದಿನಗಳ ನಂತರ ಘೋಷಿಸಿದ್ದರು. ಅಲ್ಲಿಯವರೆಗೆ ಅಭಿಮಾನಿಗಳಿಗೆ ಅಕಾಯ್ ಜನನದ ಬಗ್ಗೆ ಯಾವುದೇ ಸುಳಿವು ಇರಲಿಲ್ಲ . ವಿರಾಟ್ ಕೊಹ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು. ತಮ್ಮ ಎರಡನೇ ಮಗುವಿನ ಜನನಕ್ಕಾಗಿ ಇಂಗ್ಲೆಂಡ್​​ ಪ್ರಯಾಣಿಸಿದ್ದಾರೆ ಎಂದು ವರದಿಗಳು ಹೇಳಿದವು.

ಬಾಲಿವುಡ್ ಕಾರ್ಯಕ್ರಮಗಳು ಮತ್ತು ಚಲನಚಿತ್ರಗಳಿಂದ ಅನುಷ್ಕಾ ಶರ್ಮಾ ಅನುಪಸ್ಥಿತಿಯೂ ಈ ಊಹಾಪೋಹಗಳಿಗೆ ಕಾರಣವಾಯಿತು. ಕಳೆದ ವರ್ಷ ನಟಿ ಇನ್ನು ಮುಂದೆ ಹೆಚ್ಚು ಚಲನಚಿತ್ರಗಳನ್ನು ಮಾಡಲು ಬಯಸುವುದಿಲ್ಲ ಮತ್ತು ಕುಟುಂಬದೊಂದಿಗೆ ಸಮಯ ಕಳೆಯಲು ಬಯಸುವೆ ಎಂದಿದ್ದರು. “ನನಗೆ ನಟನೆ ಇಷ್ಟ. ನಾನು ಮೊದಲು ಮಾಡಿದಷ್ಟು ಹೆಚ್ಚು ಚಲನಚಿತ್ರಗಳನ್ನು ಮಾಡಲು ಇಷ್ಟಪಡುವುದಿಲ್ಲ . ನಾನು ವರ್ಷಕ್ಕೆ ಒಂದು ಚಿತ್ರ ಮಾಡಲು ಬಯಸುತ್ತೇನೆ. ಹೆಚ್ಚಾಗಿ ಕುಟುಂಬಕ್ಕೆ ಸಮಯ ನೀಡಲು ಬಯಸುತ್ತೇನೆ” ಎಂದು ಅವರು ಹೇಳಿದ್ದರು.

ವಿರಾಟ್ ಕೊಹ್ಲಿ ಕೂಡ ಲಂಡನ್​​ನಲ್ಲಿ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ಇಷ್ಟಪಡುತ್ತಾರೆ ಎಂದು ಆಗಾಗ್ಗೆ ವ್ಯಕ್ತಪಡಿಸಿದ್ದರು. “ಕುಟುಂಬದೊಂದಿಗೆ ಸಮಯ ಕಳೆಯಲು ಸಿಗುವ ಅವಕಾಶಕ್ಕಾಗಿ ದೇವರಿಗೆ ಕೃತಜ್ಞತೆ ಹೇಳುವೆ. ಸಾಮಾನ್ಯ ವ್ಯಕ್ತಿಯಾಗಿ ಅಲ್ಲಿರುವುದು ಖುಷಿ ” ಎಂದು ವಿರಾಟ್ ಕೊಹ್ಲಿ ಹೇಳಿದ್ದರು.

ಸ್ಟಾರ್ ಕ್ರಿಕೆಟಿಗ ಕೊಹ್ಲಿ ಮೇ ತಮ್ಮ ಅಭಿಪ್ರಾಯ ಹೇಳಿದ್ದರು. “ನಾನು ಕ್ರಿಕೆಟ್​​ ಮುಗಿದ ನಂತರ ಕುಟುಂಬದ ಜತೆ ಹೋಗುತ್ತೇನೆ. ನೀವು ಸ್ವಲ್ಪ ಸಮಯದವರೆಗೆ ನೋಡಲು ಆಗುವುದಿಲ್ಲ. ಆದ್ದರಿಂದ ನಾನು ಆಡುವ ಸಮಯದವರೆಗೆ ನನ್ನಲ್ಲಿರುವ ಎಲ್ಲವನ್ನೂ ನೀಡಲು ನಾನು ಬಯಸುತ್ತೇನೆ ಎಂದು ಹೇಳಿದ್ದರು

ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಅನುಷ್ಕಾ ಮತ್ತು ವಿರಾಟ್ ಯುಕೆ ಮೂಲದ ಕಂಪನಿಯ ನಿರ್ದೇಶಕರಾಗಿದ್ದಾರೆ. ಯುಕೆ ಸರ್ಕಾರದ ಫೈಂಡ್ ಅಂಡ್ ಅಪ್ಡೇಟ್ ಕಂಪನಿಯ ಮಾಹಿತಿ ಸೇವೆಯ ಪ್ರಕಾರ, ದಂಪತಿಗಳು ಮ್ಯಾಜಿಕ್ ಲ್ಯಾಂಪ್​​ನ ಮೂವರು ನಿರ್ದೇಶಕರಲ್ಲಿ ಇಬ್ಬರು. ಇದು ಆಗಸ್ಟ್ 1, 2022 ರಂದು ಆರಂಭಗೊಂಡ ಸಲಹಾ ಸಂಸ್ಥೆಯಾಗಿದೆ. ಕಂಪನಿಯ ಅಧಿಕೃತ ಕಚೇರಿ ವಿಳಾಸವು ಯುಕೆಯ ವೆಸ್ಟ್ ಯಾರ್ಕ್​ಶೈರ್​ನಲ್ಲಿದೆ.

Continue Reading

ಪ್ರಮುಖ ಸುದ್ದಿ

Narendra Modi : ಚಾಂಪಿಯನ್ನರ ಜತೆ ಸ್ಮರಣೀಯ ಸಂಭಾಷಣೆ; ಭಾರತ ಕ್ರಿಕೆಟ್ ತಂಡದ ಜತೆಗಿನ ಮಾತುಕತೆಯ ವಿಡಿಯೊ ಬಿಡುಗಡೆ ಮಾಡಿದ ಮೋದಿ

Narendra Modi: ಮೋದಿ ಹಾಗೂ ಕ್ರಿಕಟಿಗರ ನಡುವಿನ ಸಂಭ್ರಮದ ಕ್ಷಣಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗಿದ್ದವು. ಕ್ರಿಕೆಟಿಗರು ಚಾಂಪಿಯನ್ ಎಂದು ಬರೆದುಕೊಂಡಿದ್ದ ಜೆರ್ಸಿಯನ್ನ ಧರಿಸಿಕೊಂಡು ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು, ಮೋದಿಯೊಂದಿಗೆ ಕೈ ಕುಲುಕಿ ಮಾತನಾಡಿರುವುದು, ಟ್ರೋಫಿಯೊಂದಿಗೆ ಫೋಟೊ ತೆಗೆಸಿಕೊಂಡಿರುವುದು ವಿಶೇವಾಗಿತ್ತು.

VISTARANEWS.COM


on

Narendra Modi
Koo

ಬೆಂಗಳೂರು: ವೆಸ್ಟ್​​ ಇಂಡೀಸ್ ಹಾಗೂ ಅಮೆರಿಕದ ಆತಿಥ್ಯದಲ್ಲಿ ನಡೆದ ಟಿ20 ವಿಶ್ವ ಕಪ್​ನಲ್ಲಿ (T20 World Cup) ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಕ್ರಿಕೆಟ್​ ಪ್ರೇಮಿಗಳ ಪಾಲಿಗೆ ಅತ್ಯಂತ ಸಂಭ್ರಮದ ವಿಷಯ. ಅಂತೆಯೇ ಭಾರತಕ್ಕೆ ವಾಪಸಾದ ಟೀಮ್ ಇಂಡಿಯಾ ಸದಸ್ಯರಿಗೆ ಮುಂಬೈನ ಬೀದಿ ಬೀದಿಗಳಲ್ಲಿ ಅದ್ಧೂರಿ ಸ್ವಾಗತ ದೊರಕಿದೆ. ತೆರೆದ ಬಸ್​​ನಲ್ಲಿ ಮೆರವಣಿ, ಐತಿಹಾಸಿಕ ವಾಂಖೆಡೆ ಸ್ಟೇಡಿಯಮ್​​ನಲ್ಲಿ ಅವಿಸ್ಮರಣೀಯ ಸಮಾರಂಭವನ್ನೂ ಆಯೋಜಿಸಲಾಗಿತ್ತು. ಈ ಎಲ್ಲ ಕ್ಷಣಗಳು ಭಾರತೀಯ ಕ್ರಿಕೆಟ್ ಇತಿಹಾಸದ ಪುಸ್ತಕದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಲಾಗಿದೆ. ಆದರೆ, ಇದಕ್ಕಿಂತ ಮೊದಲು ಭಾರತಕ್ಕೆ ಏರ್​ ಇಂಡಿಯಾದ ವಿಶೇಷ ವಿಮಾನದಲ್ಲಿ ಬಂದಿಳಿದ ಚಾಂಪಿಯನ್ ಭಾರತ ತಂಡಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ತಮ್ಮ ನಿವಾಸದಲ್ಲಿ ವಿಶೇಷ ಆತಿಥ್ಯ ನೀಡಿದ್ದರು. ಗುರುವಾರ (ಜುಲೈ4ರಂದು) ಬೆಳಗ್ಗೆ 11 ಗಂಟೆಯಿಂದ 12 ಗಂಟೆಯ ತನಕ ಮೋದಿ ಕ್ರಿಕೆಟಿಗರೊಂದಿಗೆ ಮಾತುಕತೆ ನಡೆಸಿದ್ದರು.

ಮೋದಿ ಹಾಗೂ ಕ್ರಿಕಟಿಗರ ನಡುವಿನ ಸಂಭ್ರಮದ ಕ್ಷಣಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗಿದ್ದವು. ಕ್ರಿಕೆಟಿಗರು ಚಾಂಪಿಯನ್ ಎಂದು ಬರೆದುಕೊಂಡಿದ್ದ ಜೆರ್ಸಿಯನ್ನ ಧರಿಸಿಕೊಂಡು ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು, ಮೋದಿಯೊಂದಿಗೆ ಕೈ ಕುಲುಕಿ ಮಾತನಾಡಿರುವುದು, ಟ್ರೋಫಿಯೊಂದಿಗೆ ಫೋಟೊ ತೆಗೆಸಿಕೊಂಡಿರುವುದು ವಿಶೇವಾಗಿತ್ತು. ಕೊನೆಯಲ್ಲಿ ಮೋದಿ ಅವರಿಗೆ ಚಾಂಪಿಯನ್​ ಎಂದು ಬರೆದಿದ್ದ 1 ಸಂಖ್ಯೆಯ ಜೆರ್ಸಿಯನ್ನೂ ನೀಡಿದ್ದರು. ಈ ಎಲ್ಲ ಕ್ಷಣಗಳು ಮೋದಿ ಅವರಿಗೆ ಖುಷಿ ಕೊಟ್ಟಿತ್ತು. ಈ ಬಗ್ಗೆ ಅವರು ಶುಕ್ರವಾರ ಸೋಶಿಯಲ್ ಮೀಡಿಯಾ ಪೋಸ್ಟ್ ಒಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಅವರು ‘ವಿಶ್ವ ಟಿ 20 ಚಾಂಪಿಯನ್ ಭಾರತೀಯ ಕ್ರಿಕೆಟ್ ತಂಡದೊಂದಿಗೆ ಅವಿಸ್ಮರಣೀಯ ಸಂಭಾಷಣೆ,’ ಎಂದು ಬರೆದುಕೊಂಡಿದ್ದಾರೆ.

ವಿಶ್ವ ಕಪ್​ ಗೆದ್ದುಕೊಂಡು ಭಾರತಕ್ಕೆ ಬಂದಿದ್ದ ಆಟಗಾರರಿಗೆ ಪ್ರೇರಣಾದಾಯಕ ಮಾತುಗಳಿಂದ ಮೋದಿ ಹುರಿದುಂಬಿಸಿದ್ದರು. ಅಲ್ಲದೆ ಆಟಗಾರರು ಕಠಿಣ ಹಾಗೂ ಒತ್ತಡದ ಸಂದರ್ಭದಲ್ಲಿ ತೋರಿದ ಮನಸ್ಥಿತಿಯನ್ನು ಹೊಗಳಿದ್ದರು. ಈ ಎಲ್ಲ ಮಾತುಕತೆಯ ತುಣುಕುಗಳನ್ನು ಒಟ್ಟಾಗಿಸಿ ಸಣ್ಣ ವಿಡಿಯೊವೊಂದನ್ನು ಮಾಡಿ ನರೇಂದ್ರ ಮೋದಿ ಅವರು ಅಧಿಕೃತ ಹ್ಯಾಂಡಲ್​ ಮೂಲಕ ಶೇರ್ ಮಾಡಲಾಗಿದೆ.

ಯೂಟ್ಯೂಬ್ ಮೂಲಕ ಬಿಡುಗಡೆ ಮಾಡಿರುವ ವಿಡಿಯೊ ಸುಮಾರು 41 ನಿಮಿಷವಿದೆ. ಅದರಲ್ಲಿ ಆಟಗಾರರು ಹಾಗೂ ಮೋದಿ ನಡುವಿನ ನೇರ ಸಂಭಾಷಣೆಯಿದೆ. ಕೋಚ್​ ದ್ರಾವಿಡ್​, ನಾಯಕ ರೋಹಿತ್​, ಸ್ಟಾರ್ ಬ್ಯಾಟರ್​ ವಿರಾಟ್​ ಸೇರಿದಂತೆ ಎಲ್ಲರ ನಡುವಿನ ಸಂಭಾಷಣೆಯನ್ನು ವಿಡಿಯೊ ಮೂಲಕ ವೀಕ್ಷಿಸಬಹುದು.

ಇದನ್ನೂ ಓದಿ: T20 World Cup :​ ವಿಜಯೋತ್ಸವದ ಕ್ಷಣಗಳನ್ನು ಉಲ್ಲೇಖಿಸಿ ಬಿಸಿಸಿಐಗೆ ಕುಟುಕಿದ ಆದಿತ್ಯ ಠಾಕ್ರೆ

ಮೋದಿ ಅವರ ಜತೆ ಆಟಗಾರರು ಉಪಾಹಾರ ಸೇವಿಸಿದರು. ನಂತರ ಕೆಲ ಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಮೋದಿ ವಿಶ್ವಕಪ್‌ ಹೀರೋಗಳನ್ನು ಸನ್ಮಾನಿಸಿ, ಅಭಿನಂದಿಸಿದರು. ಸುಮಾರು 17 ವರ್ಷಗಳ ಬಳಿಕ ಟಿ-20 ವಿಶ್ವಕಪ್‌ ಗೆದ್ದುಕೊಂಡ ರೋಹಿತ್‌ ಶರ್ಮ ಮತ್ತು ತಂಡದ ಗೆಲುವನ್ನು ಪ್ರಧಾನಿ ಕೊಂಡಾಡಿದರು.

ಆಟಗಾರರಿಗೆ ಕರೆ ಮಾಡಿದ್ದ ಮೋದಿ

ಜೂನ್‌ 29ರಂದು ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾದ ವಿರುದ್ಧ ಭಾರತ 7 ರನ್‌ಗಳಿಂದ ಜಯ ಸಾಧಿಸಿತ್ತು. ಆ ವೇಳೆ ಆಟಗಾರರಿಗೆ ಕರೆ ಮಾಡಿ ಮೋದಿ ಅಭಿನಂದನೆ ಸಲ್ಲಿಸಿದ್ದರು. ಮೋದಿ ಅವರು ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಮಾತನಾಡಿ, ಅದ್ಭುತ ನಾಯಕತ್ವಕ್ಕಾಗಿ ಅಭಿನಂದನೆ ತಿಳಿಸಿದರು. ಅವರ ಟಿ20 ವೃತ್ತಿ ಜೀವನವನ್ನು ಶ್ಲಾಘಿಸಿದರು. ಜತೆಗೆ ಪ್ರಧಾನಿ ಫೈನಲ್‌ ಪಂದ್ಯದಲ್ಲಿ ಭಾರತವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ಸಹಾಯ ಮಾಡಿದ ವಿರಾಟ್ ಕೊಹ್ಲಿ (76 ರನ್) ಅವರ ಆಟವನ್ನೂ ಮೆಚ್ಚಿಕೊಂಡರು. ಜತೆಗೆ ಭಾರತೀಯ ಕ್ರಿಕೆಟ್‌ಗೆ ಕೊಹ್ಲಿ ನೀಡಿದ ಕೊಡುಗೆಯನ್ನೂ ನೆನಪಿಸಿಕೊಂಡಿದ್ದರು.

Continue Reading
Advertisement
Hardik Pandya
ಪ್ರಮುಖ ಸುದ್ದಿ2 mins ago

Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

Weather News
ಉತ್ತರ ಕನ್ನಡ58 mins ago

Weather News: ಭಾರಿ ಮಳೆ; ಕರಾವಳಿಯಾದ್ಯಂತ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahindra Marazzo
ಪ್ರಮುಖ ಸುದ್ದಿ1 hour ago

Mahindra Marazzo : ಈ 7 ಸೀಟರ್​ ಕಾರಿನ ಉತ್ಪಾದನೆ ನಿಲ್ಲಿಸಿದ ಮಹೀಂದ್ರಾ

BSP President
ದೇಶ2 hours ago

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

Dengue Fever
ಕರ್ನಾಟಕ2 hours ago

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Rohit Sharma
ಪ್ರಮುಖ ಸುದ್ದಿ2 hours ago

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

RBI Fine
ದೇಶ2 hours ago

RBI Fine: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಆರ್‌ಬಿಐ 1.31 ಕೋಟಿ ರೂ. ದಂಡ; ಕಾರಣ ಹೀಗಿದೆ

Namma Metro
ಕರ್ನಾಟಕ2 hours ago

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

Viral Video
ವೈರಲ್ ನ್ಯೂಸ್2 hours ago

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

Brain Eating Amoeba
ಆರೋಗ್ಯ2 hours ago

Brain Eating Amoeba: ಏನಿದು ಮೆದುಳು ತಿನ್ನುವ ಅಮೀಬಾ? ಇದರಿಂದ ನಮಗೂ ಅಪಾಯ ಇದೆಯೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ5 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ7 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ7 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ9 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ11 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು12 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು12 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ17 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌