ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ! - Vistara News

ಕರ್ನಾಟಕ

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

ಉಗ್ರರು 2025ರ ವೇಳೆಗೆ ಪ್ರತಿಯೊಂದು ಜಿಲ್ಲೆಯಲ್ಲಿ ಸ್ಲೀಪರ್‌ಸೆಲ್‌ಗಳನ್ನು ನೇಮಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರುವ ಉದ್ದೇಶ ಹೊಂದಿದ್ದರು. ಧಾರ್ಮಿಕ ಮುಖಂಡರು, ದೇಶದ ಯೋಧರು, ಪೊಲೀಸರು ಸೇರಿ ಹಲವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ. ಎಲ್ಲ ಚಟುವಟಿಕೆಗಳಿಗೂ ಉಗ್ರರು ಬಳ್ಳಾರಿಯನ್ನೇ ಪ್ರಮುಖ ಕೇಂದ್ರವನ್ನಾಗಿಸಿಕೊಂಡಿದ್ದರು ಎಂದು ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ.

VISTARANEWS.COM


on

ISIS Terrorists
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಕುಳಿತು ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಐಸಿಸ್‌ ಉಗ್ರರ ಜಾಲ (Bellary ISIS Module) ರೂಪಿಸಬೇಕು ಎಂದು ಸಂಚು ಹೆಣೆದಿದ್ದ ಏಳು ಶಂಕಿತ ಉಗ್ರರನ್ನು ಬಂಧಿಸಿದ ಎನ್‌ಐಎ ಅಧಿಕಾರಿಗಳು (NIA Officials) ಅವರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಪ್ರಸ್ತಾಪವಾಗಿರುವ ವಿಷಯಗಳು ಜನರನ್ನು ಬೆಚ್ಚಿಬೀಳಿಸಿವೆ. ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಯುವಕರನ್ನು ಐಸಿಸ್‌ ಉಗ್ರ ಸಂಘಟನೆಗೆ ನೇಮಿಸಬೇಕು ಎಂಬುದು ಉಗ್ರರ ಉದ್ದೇಶವಾಗಿತ್ತು ಅಂಶವು ಚಾರ್ಜ್‌ಶೀಟ್‌ನಿಂದ (NIA Chargesheet) ಬಯಲಾಗಿದೆ.

ಕರ್ನಾಟಕದಲ್ಲಿ ಬಂಧಿತರಾಗಿದ್ದ ಮೊಹಮ್ಮದ್‌ ಮುನಿರುದ್ದೀನ್‌, ಸೈಯದ್‌ ಅಮೀರ್‌, ಎಂ.ಡಿ.ಮುಜಮಿಲ್‌ ಹಾಗೂ ಮಹಾರಾಷ್ಟ್ರದ ನಾಲ್ವರು ಉಗ್ರರ ವಿರುದ್ಧ ನ್ಯಾಯಾಲಯಕ್ಕೆ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಸಿದೆ. ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ 50 ಯುವಕರನ್ನು ಸ್ಲೀಪರ್‌ಸೆಲ್‌ಗಳನ್ನಾಗಿ ನೇಮಕ ಮಾಡಿಕೊಂಡು, ದೇಶಾದ್ಯಂತ ಐಸಿಸ್‌ ಉಗ್ರ ಸಂಘಟನೆಯ ಜಾಲವನ್ನು ವಿಸ್ತರಣೆ ಮಾಡಬೇಕು ಎಂಬುದು ಇವರ ಉದ್ದೇಶವಾಗಿತ್ತು. ಬಳ್ಳಾರಿಯ ಮೂವರು ಹಾಗೂ ಮಹಾರಾಷ್ಟ್ರದ ನಾಲ್ವರು ಶಂಕಿತರು ಇಂತಹ ಸಂಚು ರೂಪಿಸಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

Manipur violence

ಐಸಿಸ್‌ ಉಗ್ರ ಸಂಘಟನೆಯ ಸುಲೇಮಾನ್‌ ಅಲಿಯಾಸ್‌ ಮಿನಾಜ್‌ ಎಂಬಾತನಿಂದ ಏಳು ಉಗ್ರರು ಪ್ರತಿಜ್ಞೆ ಪಡೆದುಕೊಂಡಿದ್ದರು. ಭಾರತದಾದ್ಯಂತ ಐಸಿಸ್‌ ಜಾಲವನ್ನು ವಿಸ್ತರಿಸುವುದಾಗಿ ಇವರು ಪ್ರತಿಜ್ಞೆ ಸ್ವೀಕರಿಸಿದ್ದರು. ಐಸಿಸ್‌ ಉಗ್ರ ಸಂಘಟನೆಯ ಜತೆ ನಿರಂತರವಾಗಿ ಇವರು ಸಂಪರ್ಕದಲ್ಲಿದ್ದರು. ಜಿಲ್ಲೆಗಳಲ್ಲಿ ಸ್ಲೀಪರ್ ಸೆಲ್‌ಗಳನ್ನು ಬಳಸಿ ಗೆರಿಲ್ಲಾ ಮಾದರಿಯ ದಾಳಿಗೆ ಷಡ್ಯಂತ್ರ ಮಾಡಿದ್ದರು. ಸುಧಾರಿತ ಸ್ಫೋಟಕ ಸಾಧನಗಳ (IED) ಮೂಲಕ ದಾಳಿ ನಡೆಸುವುದು, ಬಳ್ಳಾರಿಯನ್ನು ಉಗ್ರ ಸಂಘಟನೆಯ ಜಾಲದ ಪ್ರಮುಖ ಕೇಂದ್ರವನ್ನಾಗಿ ರೂಪಿಸುವುದು, ಇಲ್ಲಿಯೇ ಪ್ರಾಯೋಗಿಕವಾಗಿ ಸ್ಫೋಟಿಸುವುದು ಸೇರಿ ಹಲವು ಕುತಂತ್ರಗಳನ್ನು ಹೆಣೆದಿದ್ದರು ಎಂದು ಎನ್‌ಐಎ ಅಧಿಕಾರಿಗಳು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಬಂಧಿತ ಉಗ್ರರು 2025ರ ವೇಳೆಗೆ ಪ್ರತಿಯೊಂದು ಜಿಲ್ಲೆಯಲ್ಲಿ ಸ್ಲೀಪರ್‌ಸೆಲ್‌ಗಳನ್ನು ನೇಮಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರುವ ಉದ್ದೇಶ ಹೊಂದಿದ್ದರು. ಧಾರ್ಮಿಕ ಮುಖಂಡರು, ದೇಶದ ಯೋಧರು, ಪೊಲೀಸರು ಸೇರಿ ಹಲವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ. ಇವರ ಬಳಿಯಿಂದ ಹಲವು ಡಿವೈಸ್‌ಗಳ ಜತೆಗೆ ಜಿಹಾದ್‌ ಕುರಿತ ಪುಸ್ತಕಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: NIA Raid: ಮಧ್ಯಪ್ರದೇಶದಲ್ಲಿ ಐಸಿಸ್‌ ಉಗ್ರರ ಜಾಲ ಬಯಲು; ಮಸೀದಿಗಳಲ್ಲೇ ಸಂಚು ರೂಪಿಸುತ್ತಿದ್ದ ಮೂವರ ಬಂಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karave Protest: ಕನ್ನಡಿಗರಿಗೆ ಉದ್ಯೋಗಕ್ಕಾಗಿ ಆಗ್ರಹ; ನಾಳೆ‌ ಕರುನಾಡಲ್ಲಿ ಮೊಳಗಲಿದೆ ಕರವೇ ಕಹಳೆ

Karave Protest: ಕನ್ನಡಿಗರಿಗೆ ಉದ್ಯೋಗಕ್ಕಾಗಿ ಆಗ್ರಹಿಸಿ ಸೋಮವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೂ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಪ್ರತಿಭಟನೆಗಳು ಜರುಗಲಿವೆ.

VISTARANEWS.COM


on

Karave Protest
Koo

ಬೆಂಗಳೂರು: ಕರುನಾಡಿನಲ್ಲಿ ಜುಲೈ 1ರಂದು ಕರವೇ ಕಹಳೆ ಮೊಳಗಲಿದೆ. ಕನ್ನಡಿಗರಿಗೆ ಉದ್ಯೋಗಕ್ಕಾಗಿ ಆಗ್ರಹಿಸಿ ರಾಜ್ಯಾದಾದ್ಯಂತ ಚಳವಳಿಗೆ ಕರ್ನಾಟಕ ರಕ್ಷಣಾ ವೇದಿಕೆ (Karave Protest) ಕರೆ ನೀಡಿದ್ದು, ಬೃಹತ್ ಪ್ರತಿಭಟನೆಗೆ ರಾಜಧಾನಿ ಸಾಕ್ಷಿಯಾಗಲಿದೆ. ಸೋಮವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೂ ನಗರದ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಏಕಕಾಲದಲ್ಲಿ ಪ್ರತಿಭಟನೆಗಳು ಜರುಗಲಿವೆ.

ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ. ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದ್ದು, ಇದರಿಂದ ಖಾಸಗಿ ವಲಯದಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಹೀಗಾಗಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳು ಶೇಕಡಾ 100 ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಇತರೆ ಗ್ರೂಪ್‌ಗಳಲ್ಲಿ ಶೇಕಡ 80 ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸಲಾಗುತ್ತದೆ.

ಇದನ್ನೂ ಓದಿ | CM Siddaramaiah: ಡಾ.ರಾಜ್‍ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ಎಂದ ಸಿದ್ದರಾಮಯ್ಯ

ಕರವೇ ಪ್ರಮುಖ ಬೇಡಿಕೆಗಳು

1.ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946 ರ ಅನ್ವಯ ಬಲಿಷ್ಠ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು.
2.ಖಾಸಗಿ ಸಂಸ್ಥೆಗಳ ಸಿ ಮತ್ತು ಡಿ ದರ್ಜೆ ಹುದ್ದೆಗಳು ಶೇ.100 ಕನ್ನಡಿಗರಿಗೆ ಮೀಸಲಿಡಬೇಕು.
3.ಖಾಸಗಿ ಸಂಸ್ಥೆಗಳ ಇತರೆ ಹುದ್ದೆಯಲ್ಲಿ ಶೇ. 80 ಕನ್ನಡಿಗರಿಗೆ ಮೀಸಲಿಡಬೇಕು.
4.ಹದಿನೈದು ವರ್ಷ ರಾಜ್ಯದಲ್ಲಿದ್ದವರಿಗೆ ಕನ್ನಡಿಗರೆಂದು ಪರಿಗಣಿಸುವ ನಿಯಮವಿದ್ದು, ಅಂತವರಿಗೆ ಕನ್ನಡ ಪರೀಕ್ಷೆ ನಡೆಸಿ ಉತ್ತೀರ್ಣರಾದರೆ ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು.
5.ನಿಯಮ‌‌ ಪಾಲಿಸದ ಸಂಸ್ಥೆಗಳ ಲೈಸೆನ್ಸ್ ರದ್ದು ಮಾಡಬೇಕು. ಸರ್ಕಾರ ನೀಡಿರುವ ಭೂಮಿ, ಸವಲತ್ತುಗಳನ್ನು ವಾಪಸ್ ಪಡೆದು ಕ್ರಿಮಿನಲ್ ಮೊಕದ್ದಮೆ ಹಾಕಬೇಕು.
6.ರಾಜ್ಯ ಸರ್ಕಾರಿ ಸಂಸ್ಥೆ ಮತ್ತು ಸಾರ್ವಜನಿಕ ವಲಯದಲ್ಲಿ ಶೇ.100 ಕನ್ನಡಿಗರಿಗೆ ಮೀಸಲಾತಿ
7.ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಸಿ ಹಾಗೂ ಡಿ ಹುದ್ದೆಗಳಲ್ಲಿ ಶೇ.100 ಕನ್ನಡಿಗರಿಗೆ ಮೀಸಲಾತಿ ನೀಡಬೇಕು.
8.ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಸಿ, ಡಿ ಹೊರತಾದ ಉಳಿದ ಉದ್ಯೋಗದಲ್ಲಿ ಶೇ.90 ಮೀಸಲಾತಿ ನೀಡಬೇಕು.
9.ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಲು ವಿಫಲವಾಗುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು, ಈ ಅಂಶವನ್ನು ಉದ್ದೇಶಿತ ಕಾನೂನಿನಲ್ಲಿ ಸೇರಿಸಬೇಕು.
10. ರಾಜ್ಯ ಸರ್ಕಾರ ರೂಪಿಸುವ ಕಾನೂನು ಜಾರಿ ಮಾಡಲು ಕನ್ನಡ ಪ್ರಾಧಿಕಾರಕ್ಕೆ ಅಧಿಕಾರ ನೀಡಬೇಕು.

ರಕ್ಷಣಾ ವೇದಿಕೆ ದೊಡ್ಡ ಪ್ರಮಾಣದ ಚಳವಳಿಗೆ ಸಜ್ಜಾಗಿದೆ: ಟಿ.ಎ. ನಾರಾಯಣಗೌಡ

ಕರ್ನಾಟಕ ರಕ್ಷಣಾ ವೇದಿಕೆಯಿಂದ (Karnataka Rakshana Vedike) ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1ರಂದು ಬೃಹತ್ ಧರಣಿ ಸತ್ಯಾಗ್ರಹ (KaRaVe Protest) ನಡೆಸಲಿದ್ದು, ಸಾವಿರಾರು ಕರವೇ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ (Bengaluru News) ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕಕ್ಕೆ ಹೊರರಾಜ್ಯಗಳಿಂದ ಅವ್ಯಾಹತವಾಗಿ ವಲಸೆ ನಡೆಯುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಇದು ತೀವ್ರ ಸ್ವರೂಪ ಪಡೆದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಮಹಾನಗರಗಳು ವಲಸಿಗರ ಹಾವಳಿಯಿಂದ ಸಂಪೂರ್ಣ ಬದಲಾಗುತ್ತಿವೆ. ಕನ್ನಡಿಗರ ಉದ್ಯೋಗಗಳನ್ನು ಹೊರರಾಜ್ಯದವರು ಕಿತ್ತುಕೊಳ್ಳುತ್ತಿದ್ದಾರೆ. ಕನ್ನಡಿಗರು ತಮ್ಮ ನೆಲದಲ್ಲೇ ನಿರುದ್ಯೋಗಿಗಳಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ವೇದಿಕೆ ದೊಡ್ಡ ಪ್ರಮಾಣದ ಚಳವಳಿಗೆ ಸಜ್ಜಾಗಿದೆ. ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಲು ಆಗ್ರಹಿಸಲಿದೆ ಎಂದು ಅವರು ತಿಳಿಸಿದ್ದಾರೆ.

    Continue Reading

    ಮೈಸೂರು

    Road Accident : ತಿರುವಿನಲ್ಲಿ ಕಂದಕಕ್ಕೆ ಉರುಳಿದ ಬಸ್‌; ಚಾಲಕ ಸೇರಿ ಮೂವರು ಗಂಭೀರ

    Road Accident : ವೇಗವಾಗಿ ಬಂದ ಬಸ್‌ವೊಂದು ತಿರುವಿನಲ್ಲಿ ಕಂದಕ್ಕೆ ಉರುಳಿ ಬಿದ್ದಿದೆ. ಚಾಲಕ ಸೇರಿ ಮೂವರು ಗಂಭೀರ ಗಾಯಗೊಂಡಿದ್ದರೆ, ಉಳಿದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯವಾಗಿವೆ.

    VISTARANEWS.COM


    on

    By

    Road Accident
    Koo

    ಮೈಸೂರು: ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು ಸಾರಿಗೆ ಬಸ್‌ವೊಂದು ಕಂದಕಕ್ಕೆ (Road Accident ) ಉರುಳಿದೆ. ಚಾಲಕ ಸೇರಿ ಮೂವರು ಗಂಭೀರ ಗಾಯಗೊಂಡಿದ್ದು, ಉಳಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನ ನಂಜನಗೂಡಿನ ತಾಲೂಕಿನ ಮರಡಿಹುಂಡಿ ಗ್ರಾಮದ ಸಮೀಪ ಅಪಘಾತ ನಡೆದಿದೆ.

    ಬಿಳುಗಲಿ ಗ್ರಾಮದಿಂದ ಎಸ್.ಹೊಸಕೋಟೆ ಮಾರ್ಗವಾಗಿ ಬಸ್‌ ಮೈಸೂರಿಗೆ ತೆರಳುತ್ತಿತ್ತು. ವೇಗವಾಗಿ ಬಂದು ತಿರುವು ಪಡೆದುಕೊಳ್ಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಸ್ ಪಲ್ಟಿ ಹೊಡೆದಿದೆ. ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ವರುಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಂದಕ್ಕೆ ಬಿದ್ದ ಬಸ್‌ ಅನ್ನು ತೆರವು ಮಾಡಲಾಗಿದೆ.

    ಇದನ್ನೂ ಓದಿ: Road Accident : ಬೆಂಗಳೂರಲ್ಲಿ ಬೈಕ್‌ ಸವಾರರಿಬ್ಬರ ಪ್ರಾಣ ಕಸಿದ ಹೈ ಸ್ಪೀಡ್‌

    ಡಿವೈಡರ್‌ಗೆ ಕಾರು ಡಿಕ್ಕಿ ಇಬ್ಬರು ಸಾವು

    ವಿಜಯನಗರ: ಕೂಡ್ಲಿಗಿಯ ಎನ್‌ಎಚ್‌ 50 (NH 50) ರಸ್ತೆ ಮೃತ್ಯಕೂಪವಾಗಿ ಪರಿಣಮಿಸುತ್ತಿದೆ. ಈ ರಸ್ತೆ ಪದೇ ಪದೆ ಅಪಘಾತಗಳಿಂದ ಸದ್ದು ಮಾಡುತ್ತಿದೆ. ಇದೀಗ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ (Road Accident).

    ಇತ್ತೀಚೆಗೆ ಕೂಡ್ಲಿಗಿಯ ಎನ್‌ಎಚ್‌ 50ರಲ್ಲಿ ಟಿಟಿ ಟ್ರಾವೆಲರ್‌ ಅಪಘಾತವಾಗಿ ಓರ್ವ ಮೃತಪಟ್ಟಿದ್ದರು. ಅದು ಮಾಸುವ ಮುನ್ನ ಈಗ ಮತ್ತೆ ಅದೇ ರೀತಿಯ ಅಪಫಾತ ನಡೆದು ಇಬ್ಬರನ್ನು ಬಲಿ ಪಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ನಡೆದಿದ್ದು, ಮೃತರನ್ನು ಕಾರು ಚಾಲಕ ವಿನಯ್ (27) ಮತ್ತು ಚನ್ನವಸವ (27) ಎಂದು ಗುರುತಿಸಲಾಗಿದೆ.

    ರಾಯಚೂರಿನ ಲಿಂಗಸೂಗೂರಿನಿಂದ ಕೇರಳದ ವಯನಾಡಿಗೆ ಹೊರಟಿದ್ದ ಗೆಳೆಯರ ತಂಡವಿದ್ದ ಕಾರು ಪಲ್ಟಿ ಹೊಡೆದು ಅವಘಡ ನಡೆದಿದೆ. ಅತೀ ವೇಗದಿಂದ ಬಂದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ಗಾಯಗೊಂಡ 5 ಮಂದಿಯನ್ನು ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬೈಕ್‌ನಿಂದ ಸ್ಕಿಡ್‌ ಆಗಿ ಕೆಳಗೆ ಬಿದ್ದ ಸವಾರ ಸಾವು

    ಅತಿ ವೇಗ ಚಾಲನೆಯಿಂದ ಅಪಘಾತ ಸಂಭವಿಸಿದ್ದು, ಯುವಕನೊರ್ವ ಮೃತಪಟ್ಟಿದ್ದಾನೆ. ಬೈಕ್‌ನಿಂದ ಸ್ಕಿಡ್ ಆಗಿ ಕೆಳಗೆ ಬಿದ್ದ ಕುಮಾರ್ (30) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಿನ್ನೆ ತಡರಾತ್ರಿ 1.30ಕ್ಕೆ ಬೆಂಗಳೂರಿನ ಬೊಮ್ಮನಹಳ್ಳಿ ಆಕ್ಸ್‌ಫರ್ಡ್ ಕಾಲೇಜು ಮುಂಭಾಗ ಘಟನೆ ನಡೆದಿದೆ.

    ಕುಮಾರ್ ಮತ್ತು ನವೀನ್ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ಇಬ್ಬರು ಕೆಳಗೆ ಬಿದ್ದಿದ್ದಾರೆ. ಸ್ಥಳದಲ್ಲೇ ಕುಮಾರ್ ಮೃತಪಟ್ಟರೇ ನವೀನ್‌ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ನವೀನ್ (20) ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಕುಮಾರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಡಿವಾಳ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading

    ಪ್ರಮುಖ ಸುದ್ದಿ

    KPCC President: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳಿವು; ಲಿಂಗಾಯತರಿಗೆ ಅವಕಾಶ ನೀಡಲು ಒತ್ತಾಯ

    KPCC President: ದೆಹಲಿ‌ ಮಟ್ಟದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ನಡೆದಿದೆ. ಡಿ.ಕೆ. ಶಿವಕುಮಾರ್ ಅವರನ್ನು ಬದಲಾವಣೆ ಮಾಡುವುದು ಸೂಕ್ತ ಎಂದು ರಾಜ್ಯ ನಾಯಕರಿಂದ ಒತ್ತಾಯ ಕೇಳಿಬಂದಿದೆ.

    VISTARANEWS.COM


    on

    KPCC President
    Koo

    ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ (KPCC President) ಬದಲಾವಣೆ ಸುಳಿವು ಸಿಕ್ಕಿದ್ದು, ಅಧಿವೇಶನದ ಬಳಿಕ ಕೆಪಿಸಿಸಿ ನೂತನ ಸಾರಥಿ ಆಯ್ಕೆ ಸಾಧ್ಯತೆ ಇವೆ ಎನ್ನಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೈ ಹೈಕಮಾಂಡ್ ಇಂಗಿತ ಹೊಂದಿದ್ದು, ಇದರ ಸುಳಿವು ಸಿಗುತ್ತಿದ್ದಂತೆ ಅಧ್ಯಕ್ಷಗಿರಿ ಪಟ್ಟಕ್ಕಾಗಿ ಲಾಬಿ ಜೋರಾಗಿದೆ. ದಲಿತರು, ಬ್ರಾಹ್ಮಣರು, ಒಕ್ಕಲಿಗರ ಕೋಟಾ ಮುಗಿದಿದೆ, ಈ ಬಾರಿ ಲಿಂಗಾಯತರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಜತೆಗೆ ನಮಗೂ ಅವಕಾಶ ಕೊಡಿ ಎಂದು ವಾಲ್ಮೀಕಿ ಸಮುದಾಯದ ನಾಯಕರೂ ಆಗ್ರಹಿಸಿದ್ದಾರೆ.

    ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ‌, ಬಿ.ಕೆ. ಹರಿಪ್ರಸಾದ್ ಲಾಬಿ ನಡೆಸುತ್ತಿದ್ದಾರೆ. ಅಲ್ಲದೇ ಸತೀಶ್ ಜಾರಕಿಹೊಳಿ‌, ಕೆ.ಎನ್. ರಾಜಣ್ಣ ಹೆಸರುಗಳು ಮುನ್ನೆಲೆಗೆ ಬಂದಿವೆ. ಈಗಾಗಲೇ ನಾನು ಅಧ್ಯಕ್ಷನಾಗಲು ಸಿದ್ಧ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಮತ್ತೊಂದೆದೆ ಹಿಂದುಳಿದ ವರ್ಗಗಳ ಕೋಟಾದಡಿ ಬಿ.ಕೆ. ಹರಿಪ್ರಸಾದ್ ಹೆಸರು ಚರ್ಚೆಯಾಗುತ್ತಿದೆ. ಆದರೆ ಜಾತಿ ಮತ್ತು ಪ್ರಾದೇಶಿಕ ಆಧಾರಿತವಾಗಿ ಅಧ್ಯಕ್ಷರ ಆಯ್ಕೆ ಮಾಡಲು ಹೈ ಕಮಾಂಡ್‌ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

    ಈ ಬಾರಿ ಲಿಂಗಾಯತ ಹಾಗೂ ಕಲ್ಯಾಣ ಕರ್ನಾಟಕದ ನಾಯಕರಿಗೆ ಮಣೆ ಹಾಕುವ ಸಾಧ್ಯತೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಶ್ವರ್ ಖಂಡ್ರೆ ಅವರ ಹೆಸರು ಮುನ್ನೆಲೆಯಲ್ಲಿದೆ.

    ದೆಹಲಿ‌ ಮಟ್ಟದಲ್ಲಿ ನಡೆದಿದೆ ಚರ್ಚೆ

    ಸಿಎಂ ಸಿದ್ದರಾಮಯ್ಯ ಅವರು ರಾಹುಲ್‌ ಗಾಂಧಿ ಅವರನ್ನು ನವ ದೆಹಲಿಯಲ್ಲಿ ಭೇಟಿಯಾದ ಬೆನ್ನಲ್ಲೇ ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

    ದೆಹಲಿ‌ ಮಟ್ಟದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ನಡೆದಿದ್ದು, ಡಿ.ಕೆ. ಶಿವಕುಮಾರ್ ಬಳಿಯೇ ಎರಡು ಪ್ರಬಲ ಖಾತೆಗಳಿವೆ, ಇದು ಪಕ್ಷ ಸಂಘಟನೆಗೆ ಅನುಕೂಲವಲ್ಲ. ಹೀಗಾಗಿ ಅಧ್ಯಕ್ಷರ ಬದಲಾವಣೆ ಮಾಡಿದರೆ ಸೂಕ್ತ ಎಂದು ರಾಜ್ಯ ನಾಯಕರಿಂದ ಒತ್ತಾಯ ಕೇಳಿಬಂದಿದೆ.

    ಇನ್ನು ಹೈ ಕಮಾಂಡ್ ನಾಯಕರಿಂದಲೂ ಕೆಪಿಸಿಸಿಗೆ ನೂತನ ಸಾರಥಿ ನೀಡುವ ಬಗ್ಗೆ ಒಲವು ಹೆಚ್ಚಿದೆ ಎನ್ನಲಾಗಿದೆ. ನೂತನ ಅಧ್ಯಕ್ಷರ ಆಯ್ಕೆಯಾದರೇ ಕಾಂಗ್ರೆಸ್ ಒಳಗಿನ ಸಮಸ್ಯೆಗಳಿಗೆ ಇತಿಶ್ರೀ ಹಾಡಬಹುದು ಎಂದು ದೆಹಲಿ ಭೇಟಿ ವೇಳೆ ರಾಜ್ಯ ನಾಯಕರು ಹೇಳಿದ್ದಾರೆ. ಹೀಗಾಗಿ ರಾಜ್ಯ ನಾಯಕರ ಮಾತಿಗೆ ಬಹುತೇಕ ಮನ್ನಣೆ ಸಿಗುವ ಸಾಧ್ಯತೆ ದಟ್ಟವಾಗಿದೆ.

    ಇದನ್ನೂ ಓದಿ | CM Siddaramaiah: ಡಾ.ರಾಜ್‍ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ಎಂದ ಸಿದ್ದರಾಮಯ್ಯ

    ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ತನಕ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಡಿ.ಕೆ.ಶಿವಕುಮಾರ್ ಮುಂದುವರಿಯುವ ಇರಾದೆ ಹೊಂದಿದ್ದಾರೆ. ಆದರೆ, ಮತ್ತೊಂದೆಡೆ ರಾಜ್ಯ ನಾಯಕರು ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಹೈ ಕಮಾಂಡ್‌ ಒಲವು ಹೊಂದಿದೆ ಎನ್ನಲಾಗಿದ್ದು, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಗೆ ಇನ್ನೂ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ.

    Continue Reading

    ಬೆಂಗಳೂರು

    Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

    Actor Darshan : ದರ್ಶನ್‌ ಫ್ಯಾನ್ಸ್‌ಗೆ (Actor Darshan Fans) ಕಾನೂನು ಕಂಟಕ ಎದುರಾಗಿದೆ. ಕೊಲೆ ಕೇಸ್‌ನಲ್ಲಿ ನೆಚ್ಚಿನ ನಟ ಜೈಲುಪಾಲಾಗಿದ್ದು, ದರ್ಶನ್‌ಗೆ ನೀಡಿರುವ ಖೈದಿ ನಂಬರ್‌ನನ್ನೇ ಸ್ಟಿಕ್ಟರ್‌ ಆಗಿ ಮಾಡಿಕೊಂಡು ಗಾಡಿಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ. ಇದೀಗ ರೂಲ್ಸ್‌ ಬ್ರೇಕ್‌ ಮಾಡುವವರ ವಿರುದ್ಧ ಕೇಸ್‌ ದಾಖಲಿಸಲು ಚಿಂತನೆ ನಡೆದಿದೆ.

    VISTARANEWS.COM


    on

    By

    Actor Darshan
    Koo

    ಬೆಂಗಳೂರು: ಅಭಿಮಾನಿಗಳ ಗಾಡಿಗಳಲ್ಲಿ ದರ್ಶನ್ (Actor Darshan) ಖೈದಿ ನಂಬರ್ 6106 ಸ್ಟಿಕ್ಕರ್‌ಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಇದರ ಬೆನ್ನಲ್ಲೇ ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ ಎದುರಾಗಿದ್ದು, ರೂಲ್ಸ್‌ ಬ್ರೇಕ್‌ ಮಾಡಿದರೆ ಕೇಸ್‌ ಬೀಳುತ್ತೆ ಎಂಬ ಎಚ್ಚರಿಕೆಯನ್ನು ಬೆಂಗಳೂರು ಟ್ರಾಫಿಕ್‌ ಪೊಲೀಸರು (Traffic violation) ನೀಡಿದ್ದಾರೆ.

    ಕೊಲೆ ಕೇಸ್​ನಲ್ಲಿ ನಟ ದರ್ಶನ್‌ ಜೈಲುಪಾಲಾಗಿದ್ದಾರೆ. ದರ್ಶನ್‌ಗೆ ಜೈಲಿನಲ್ಲಿ ಖೈದಿ ನಂಬರ್ 6106 ಅನ್ನು ನೀಡಲಾಗಿದೆ. ಈ ನಂಬರ್‌ ಅನ್ನೇ ಸ್ಟಿಕರ್‌ ಮಾಡಿಕೊಂಡಿರುವ ಫ್ಯಾನ್ಸ್ ತಮ್ಮ ವಾಹನಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ. ಇದೀಗ ನಂಬರ್ ಪ್ಲೇಟ್ ಮರೆಮಾಚಿ ಸ್ಟಿಕ್ಕರ್ ಅಂಟಿಸಿದವರಿಗೆ ಸಂಕಷ್ಟ ಎದುರಾಗಿದೆ.

    Actor Darshan

    ಯಾವುದೇ ಕಾರಣಕ್ಕೂ ವಾಹನಗಳ ನಂಬರ್ ಪ್ಲೇಟ್ ಮರೆಮಾಚುವಂತಿಲ್ಲ. ನಂಬರ್‌ ಪ್ಲೇಟ್ ಇರುವ ಕಡೆ ಸ್ಟಿಕ್ಕರ್‌ಗಳನ್ನು ಅಂಟಿಸುವಂತಿಲ್ಲ. ಈ ರೀತಿ ಮಾಡಿದರೆ ಸಂಚಾರಿ ನಿಯಮ ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಖೈದಿ ನಂಬರ್ ಸ್ಟಿಕ್ಕರ್ ಅಂಟಿಸಿ ನಂಬರ್ ಪ್ಲೇಟ್ ಮರೆ ಮಾಚಿರುವವರ ವಿರುದ್ಧ ಕೇಸ್ ದಾಖಲಿಸಲು ಟ್ರಾಫಿಕ್‌ ಪೊಲೀಸರು ಮುಂದಾಗಿದ್ದಾರೆ. ಡಿಫೆಕ್ಟಿವ್ ನಂಬರ್ ಪ್ಲೇಟ್ ಅಡಿ ಕೇಸ್ ದಾಖಲಾಗುತ್ತದೆ.

    ದರ್ಶನ್ ಭೇಟಿಯಾಗಲು ಅಭಿಮಾನಿಯ ರಂಪಾಟ

    ದರ್ಶನ್ ಭೇಟಿ ಮಾಡಬೇಕೆಂದು ಅಭಿಮಾನಿಯೊಬ್ಬ ರಂಪಾಟವಾಡಿರುವುದು ಕಂಡುಬಂದಿದೆ. ಜೈಲ್ ಚೆಕ್ ಪೋಸ್ಟ್ ಬಳಿ ರಸ್ತೆಯಲ್ಲಿ ಕುಳಿತ ಅಭಿಮಾನಿ, ದರ್ಶನ್ ನೋಡಬೇಕೆಂದು ಕಣ್ಣೀರು ಹಾಕಿದ್ದಾನೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿ, ದರ್ಶನ್ ನೋಡಲೇ ಬೇಕು ಎಂದು ಪಟ್ಟು ಹಿಡಿದಿದ್ದರಿಂದ ಆತನನ್ನು ಮನವೊಲಿಸಲು ಪೊಲೀಸರು ಹೈರಾಣಾದರು.

    ಇದನ್ನೂ ಓದಿ: T20 World Cup 2024: ದರ್ಶನ್‌ ಜೈಲಿಗೆ ಹೋದಾಗೆಲ್ಲ ವಿಶ್ವಕಪ್‌ ಗೆದ್ದ ಭಾರತ; ಹೀಗ್ಯಾಕೆ ಅಂದ್ರು ನೆಟ್ಟಿಗರು?

    ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ

    ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು (Actor Darshan) ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

    ನಟ ದರ್ಶನ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ನಟಿ ರಕ್ಷಿತಾ, ಈ ಘಟನೆ ನಡೆದಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ ಎಂದು ಹೇಳಿದರು.

    ನಿರ್ದೇಶಕ ಜೋಗಿ ಪ್ರೇಮ್ ಪ್ರತಿಕ್ರಿಯಿಸಿ, ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿ, ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

    ಪ್ರಕರಣದ ಬಗ್ಗೆ ಪವಿತ್ರಾ ಗೌಡಗೆ ಏನೂ ಗೊತ್ತಿಲ್ಲ: ವಕೀಲ

    ಪವಿತ್ರಾ ಗೌಡ ಪರ ವಕೀಲ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ನ್ಯಾಯಾಂಗ ಬಂಧನದಲ್ಲಿದ್ದಾಗ ಎಲ್ಲರೂ ಚೆನ್ನಾಗಿಯೇ ಇರುತ್ತಾರೆ. ಯಾರಿಗೂ ಹಿಂಸೆ ಕೋಡಲು ಇಲ್ಲಿಗೆ ಕರೆದುಕೊಂಡು ಬರೋದಿಲ್ಲ. ಅವರ ಮನಪರಿವರ್ತನೆಯಾಗಲಿ ಎಂದು ಜೈಲಿಗೆ ಕರೆದುಕೊಂಡು ಬರಲಾಗುತ್ತದೆ. ಎಲ್ಲರೂ ಹೇಗೆ ಇರುತ್ತಾರೋ ಹಾಗೆ ಪವಿತ್ರಾ ಕೂಡ ಇರುತ್ತಾರೆ. ಅವರಿಗೆ ಸ್ಪೇಷಲ್ ಏನು ಇಲ್ಲ ಎಂದು ತಿಳಿಸಿದ್ದಾರೆ.

    ಜಾಮೀನು ಅರ್ಜಿ ಯಾವಾಗ ಹಾಕಿಕೊಳ್ಳಬೇಕು ಎನ್ನುವುದಕ್ಕೆ ಕಾಯುತ್ತಿದ್ದೇವೆ. ಅದರ ಬಗ್ಗೆಯೇ ಚರ್ಚೆ ನಡೆಸಲು ಭೇಟಿ ಮಾಡಿದ್ದೆ. ಅವರಿಗೆ ಪ್ರಕರಣದ ಬಗ್ಗೆಯೇ ಏನೂ ತಿಳಿದಿಲ್ಲ. ಅವರಿಗೆ ಶಾಕ್ ಆಗಿದೆ. ಯಾವಾಗಲೂ ತಪ್ಪು ಮಾಡಿರಲಿಲ್ಲ, ಈ ರೀತಿಯಾದಾಗ ನೋವಾಗುತ್ತೆ. ತಪ್ಪು ಮಾಡಿರುವವರಿಗಾದರೆ ಅದರ ಅರಿವಿರುತ್ತದೆ. ನಾನು ಏನೂ ಮಾಡಿಲ್ಲ, ನನಗೆ ಯಾಕೆ ಇಂತ ಪರಿಸ್ಥಿತಿ ಎಂದು ಶಾಕ್‌ನಲ್ಲಿದ್ದಾರೆ. ಜುಲೈ 4ರ ಬಳಿಕ ಜಾಮೀನು ಅರ್ಜಿ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿದ್ದಾರೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading
    Advertisement
    Rohit Sharma
    ಕ್ರೀಡೆ3 mins ago

    Rohit Sharma: ಲಿಯೋನೆಲ್ ಮೆಸ್ಸಿ ಶೈಲಿಯಲ್ಲಿ ವಿಶ್ವಕಪ್​ ಎತ್ತಿ ಹಿಡಿದ ರೋಹಿತ್​; ವಿಡಿಯೊ ವೈರಲ್​

    Karave Protest
    ಕರ್ನಾಟಕ4 mins ago

    Karave Protest: ಕನ್ನಡಿಗರಿಗೆ ಉದ್ಯೋಗಕ್ಕಾಗಿ ಆಗ್ರಹ; ನಾಳೆ‌ ಕರುನಾಡಲ್ಲಿ ಮೊಳಗಲಿದೆ ಕರವೇ ಕಹಳೆ

    T20 World Cup 2024
    ಕ್ರೀಡೆ18 mins ago

    T20 World Cup 2024: ಎರಡನೇ ವಿಶ್ವಕಪ್‌ಗೆ ತಾಳ್ಮೆಯಿಂದ ಕಾದಂತೆ ಟ್ರಾಫಿಕ್‌ ಸಿಗ್ನಲ್‌ನಲ್ಲೂ ಕಾಯಿರಿ; ದೆಹಲಿ ಪೊಲೀಸರ ಕ್ರಿಯೇಟಿವ್​ ವಿಷ್‌

    Road Accident
    ಮೈಸೂರು55 mins ago

    Road Accident : ತಿರುವಿನಲ್ಲಿ ಕಂದಕಕ್ಕೆ ಉರುಳಿದ ಬಸ್‌; ಚಾಲಕ ಸೇರಿ ಮೂವರು ಗಂಭೀರ

    KPCC President
    ಪ್ರಮುಖ ಸುದ್ದಿ1 hour ago

    KPCC President: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳಿವು; ಲಿಂಗಾಯತರಿಗೆ ಅವಕಾಶ ನೀಡಲು ಒತ್ತಾಯ

    Jayam Ravi married to superstar rajinikanth daughter
    ಕಾಲಿವುಡ್1 hour ago

    Jayam Ravi: ರಜನಿಕಾಂತ್‌ ಮಗಳ ಜತೆ ಜಯಂ ರವಿ ಮದುವೆ?

    T20 World Cup 2024
    ಕ್ರೀಡೆ1 hour ago

    T20 World Cup 2024: ಸಂಭ್ರಮಾಚರಣೆ ವೇಳೆ ದುರಂತ: ಧ್ವಜ ಹಾರಿಸಲು ಹೋಗಿ ಬಿದ್ದ ಅಭಿಮಾನಿ; ವೈರಲ್‌ ವಿಡಿಯೊ ಇಲ್ಲಿದೆ

    ಕ್ರೀಡೆ2 hours ago

    Rohit Sharma: ವಿಶ್ವಕಪ್​ ಗೆದ್ದ ನಾಯಕ ರೋಹಿತ್​ಗೆ ಆಶೀರ್ವಾದ ಮಾಡಿದ ಕಾಂತಾರದ ‘ಪಂಜುರ್ಲಿ’ ದೈವ!

    Actor Darshan
    ಬೆಂಗಳೂರು2 hours ago

    Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

    CM Siddaramaiah To Inaugurate Film Producers Association Building says build film city
    ಸ್ಯಾಂಡಲ್ ವುಡ್2 hours ago

    CM Siddaramaiah: ಡಾ.ರಾಜ್‍ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ಎಂದ ಸಿದ್ದರಾಮಯ್ಯ

    Sharmitha Gowda in bikini
    ಕಿರುತೆರೆ9 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ9 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ8 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ7 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ9 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ7 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ7 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Actor Darshan
    ಬೆಂಗಳೂರು2 hours ago

    Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

    karnataka weather Forecast
    ಮಳೆ22 hours ago

    Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

    karnataka Rain
    ಮಳೆ1 day ago

    Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

    karnataka Weather Forecast
    ಮಳೆ2 days ago

    Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

    karnataka Rain
    ಮಳೆ2 days ago

    Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

    Karnataka Weather Forecast
    ಮಳೆ3 days ago

    Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

    karnataka Weather Forecast
    ಮಳೆ3 days ago

    Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

    Heart Attack
    ಕೊಡಗು3 days ago

    Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

    karnataka Rains Effected
    ಮಳೆ3 days ago

    Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

    karnataka Weather Forecast
    ಮಳೆ6 days ago

    Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

    ಟ್ರೆಂಡಿಂಗ್‌