Amit Shah: ತಮಿಳಿಸೈಗೆ ಅಮಿತ್ ಶಾ ಬೈಗುಳದ ವಿಡಿಯೋ; ವಿವಾದಕ್ಕೆ ತೆರೆ ಎಳೆದ ತಮಿಳುನಾಡು ಬಿಜೆಪಿ ನಾಯಕಿ - Vistara News

ಪ್ರಮುಖ ಸುದ್ದಿ

Amit Shah: ತಮಿಳಿಸೈಗೆ ಅಮಿತ್ ಶಾ ಬೈಗುಳದ ವಿಡಿಯೋ; ವಿವಾದಕ್ಕೆ ತೆರೆ ಎಳೆದ ತಮಿಳುನಾಡು ಬಿಜೆಪಿ ನಾಯಕಿ

Amith Shah: ಸೌಂದರರಾಜನ್ ಅವರ ಪ್ರಕಾರ, ವೀಡಿಯೊದಲ್ಲಿ ಕಂಡುಬರುವಂತೆ ಅಮಿತ್ ಶಾ ಅವರ ಸೂಚನೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅಲ್ಲಿ ಅಮಿತ್ ಅವರು ತಮಗೆ ರಾಜಕೀಯವನ್ನು ಸಮರ್ಥವಾಗಿ ನಿರ್ವಹಿಸಲು ಸಲಹೆ ನೀಡಿದ್ದಾರೆ ಎಂಬುದಾಗಿ ಅವರು ಹೇಳಿದ್ದಾರೆ.

VISTARANEWS.COM


on

Amith Shah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ತಮಿಳುನಾಡು ಬಿಜೆಪಿ ನಾಯಕಿ ತಮಿಳಿಸೈಯನ್ನು ಕಾರ್ಯಕ್ರಮವೊಂದರ ವೇದಿಕೆಯಲ್ಲೇ ಗದರಿದ್ದಾರೆ ಎಂಬ ವಿಡಿಯೊ ವೈರಲ್ ಆಗಿದೆ. ಆದರೆ ಸ್ವತಃ ತಮಿಳಿಸೈ ಅವರು ಅದನ್ನು ನಿರಾಕರಿಸಿದ್ದು ಅವರು ತಮ್ಮನ್ನು ಬೈದಿದ್ದಲ್ಲ ಎಂದು ಹೇಳಿದ್ದಾರೆ.

ಸೌಂದರರಾಜನ್ ಅವರ ಪ್ರಕಾರ, ವೀಡಿಯೊದಲ್ಲಿ ಕಂಡುಬರುವಂತೆ ಅಮಿತ್ ಶಾ ಅವರ ಸೂಚನೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅಲ್ಲಿ ಅಮಿತ್ ಅವರು ತಮಗೆ ರಾಜಕೀಯವನ್ನು ಸಮರ್ಥವಾಗಿ ನಿರ್ವಹಿಸಲು ಸಲಹೆ ನೀಡಿದ್ದಾರೆ ಎಂಬುದಾಗಿ ಅವರು ಹೇಳಿದ್ದಾರೆ.

ನಿನ್ನೆ, 2024 ರ ಚುನಾವಣೆಯ ನಂತರ ಮೊದಲ ಬಾರಿಗೆ ಆಂಧ್ರಪ್ರದೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದೆ. ಅವರು ನನಗೆ ಚುನಾವಣೆ ನಂತರದ ಸವಾಲುಗಳ ಬಗ್ಗೆ ಕೇಳಿದರು. ನಾನು ವಿವರಿಸುತ್ತಿರುವಂತೆ, ಸಮಯದ ಅಭಾವದಿಂದಾಗಿ ಅವರು ರಾಜಕೀಯ ಮತ್ತು ಕ್ಷೇತ್ರದ ಕೆಲಸಗಳನ್ನು ತೀವ್ರಗತಿಯಲ್ಲಿ ಮಾಡುವಂತೆ ಸಲಹೆ ನೀಡಿದರು. ಹೀಗಾಗಿ ಭರವಸೆ ಮೂಡಿದೆ. ಇದು ಅನಗತ್ಯ ಊಹಾಪೋಹ ಸೃಷ್ಟಿಸಿದೆ ಎಂದು ತಮಿಳಸೈ ಸೌಂದರರಾಜನ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದಕ್ಕೆ ಕಾರಣವೇನು?

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಅಮಿತ್ ಶಾ ಅವರು ತೆಲಂಗಾಣದ ಮಾಜಿ ರಾಜ್ಯಪಾಲರನ್ನು ವೇದಿಕೆಯ ಮೇಲೆ ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬ ವೀಡಿಯೊ ವಿವಾದಕ್ಕೆ ಕಾರಣವಾಗಿತ್ತು . ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ರಾಜ್ಯದಲ್ಲಿನ ಚುನಾವಣಾ ಸೋಲಿನ ಬಗ್ಗೆ ಸೌಂದರರಾಜನ್ ಟೀಕಿಸಿದ್ದರು. ಅದೇ ಹೇಳಿಕೆಗಾಗಿ ಅಮಿತ್ ಶಾ ತಮಿಳಿಸೈ ಅವರನ್ನು ಬೈಯುತ್ತಿದ್ದಾರೆ ಎಂದು ಹಲವರು ಊಹಿಸಿದ್ದರು.

ಇದನ್ನೂ ಓದಿ: Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

ಈ ವಿಡಿಯೋದಲ್ಲಿ ಡಿಎಂಕೆ ನಾಯಕರು ಬಿಜೆಪಿಯನ್ನು ಗುರಿಯಾಗಿಸಿಕೊಂಡಿದ್ದು, ಅಮಿತ್ ಶಾ ಅವರ ನಡವಳಿಕೆಯನ್ನು ಪ್ರಶ್ನಿಸಿದ್ದಾರೆ. ಮಾಜಿ ಕೇಂದ್ರ ಸಚಿವ ಮತ್ತು ಡಿಎಂಕೆ ನಾಯಕ ದಯಾನಿಧಿ ಮಾರನ್ ಅವರು ಅಮಿತ್ ಶಾ ಅವರ ಈ ವೀಡಿಯೊದ ಬಗ್ಗೆ ಟೀಕಿಸಿದ್ದು, ಇದು ‘ದುರದೃಷ್ಟಕರ’ ಮತ್ತು ‘ಸ್ವಾಗತಾರ್ಹವಲ್ಲ’ ಎಂದು ಹೇಳಿದ್ದಾರೆ.

ಇದು ತುಂಬಾ ದುರದೃಷ್ಟಕರ. ಅವರು ತೆಲಂಗಾಣ ಮತ್ತು ಪುದುಚೇರಿಯ ರಾಜ್ಯಪಾಲರಾಗಿದ್ದರು. ಗೃಹ ಸಚಿವರು ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅಥವಾ ವಿದೇಶಾಂಗ ಸಚಿವರಾಗಿರುವ ಎಸ್ ಜೈಶಂಕರ್ ಅವರನ್ನು ಅದೇ ರೀತಿ ಬೈಯುತ್ತಾರೆಯೇ? ತಮಿಳಿಸೈ ತಮಿಳುನಾಡಿನವಳು ಎಂಬ ಕಾರಣಕ್ಕಾಗಿ ತರಾಟೆಗೆ ತೆಗೆದುಕೊಂಡರೇ? ಇದು ಅತ್ಯಂತ ಸ್ವಾಗತಾರ್ಹವಲ್ಲ” ಎಂದು ಹೇಳಿದ್ದರು.

ಡಿಎಂಕೆ ವಕ್ತಾರ ಸರವಣನ್ ಅಣ್ಣಾದೊರೈ ಇದನ್ನು ಅಪದ್ಧ ಎಂದು ಕರೆದಿದ್ದಾರೆ. ಇದು ಯಾವ ರೀತಿಯ ರಾಜಕೀಯ? ತಮಿಳುನಾಡಿನ ಪ್ರಮುಖ ಮಹಿಳಾ ರಾಜಕಾರಣಿಯನ್ನು ಸಾರ್ವಜನಿಕವಾಗಿ ಖಂಡಿಸುವುದು ಸಭ್ಯವೇ? ಇದನ್ನು ಎಲ್ಲರೂ ನೋಡಿದ್ದಾರೆ ಎಂಬುದನ್ನು ಅಮಿತ್ ಶಾ ತಿಳಿದುಕೊಳ್ಳಬೇಕು. ಎಂದು ಅವರು ಎಕ್ಸ್ ನಲ್ಲಿ ಬರೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Arvind Kejriwal: ಅರವಿಂದ ಕೇಜ್ರಿವಾಲ್‌ ಬಿಡುಗಡೆ ಕನಸು ಭಗ್ನ; ಮತ್ತೆ 14 ದಿನ ನ್ಯಾಯಾಂಗ ಬಂಧನ

Arvind Kejriwal: ತನಿಖೆ ಮತ್ತು ಮುಕ್ತ ನ್ಯಾಯಾಂಗ ಪ್ರಕ್ರಿಯೆಯ ದೃಷ್ಟಿಯಿಂದ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಪಡೆಯುವುದು ಅಗತ್ಯವಿದೆ ಎಂದು ಸಿಬಿಐ ಹೇಳಿದೆ. ಮೂರು ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ನಂತರ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು.

VISTARANEWS.COM


on

Arvind Kejriwal
Koo

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರನ್ನು ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿ ದೆಹಲಿ ಅವೆನ್ಯೂ ಕೋರ್ಟ್‌ (Dehli avenue Court) ಆದೇಶ ನೀಡಿದೆ. ಸಿಬಿಐ ನಡೆಸುತ್ತಿರುವ ದೆಹಲಿ ಮದ್ಯ ನೀತಿ (Delhi Excise policy) ಪ್ರಕರಣದಲ್ಲಿ, ಅವರಿಗೆ ನೀಡಲಾಗಿದ್ದ ಜಾಮೀನನ್ನು ಪ್ರಶ್ನಿಸಲಾಗಿತ್ತು.

ತನಿಖೆ ಮತ್ತು ಮುಕ್ತ ನ್ಯಾಯಾಂಗ ಪ್ರಕ್ರಿಯೆಯ ದೃಷ್ಟಿಯಿಂದ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಪಡೆಯುವುದು ಅಗತ್ಯವಿದೆ ಎಂದು ಸಿಬಿಐ ಹೇಳಿದೆ. ಮೂರು ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ನಂತರ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆದೇಶವನ್ನು ವಿಶೇಷ ನ್ಯಾಯಾಧೀಶ ಸುನೇನಾ ಶರ್ಮಾ ಕಾಯ್ದಿರಿಸಿದ್ದರು. ಕೇಜ್ರಿವಾಲ್ ತನಿಖೆಗೆ ಸಹಕಾರ ನೀಡುತ್ತಿಲ್ಲ, ಸರಿಯಾದ ಉತ್ತರಗಳನ್ನು ಕೊಡುತ್ತಿಲ್ಲ ಎಂದು ಸಿಬಿಐ ರಿಮಾಂಡ್ ಅರ್ಜಿಯಲ್ಲಿ ಆರೋಪಿಸಿದೆ.

2021-22 ರ ದೆಹಲಿಯ ಹೊಸ ಅಬಕಾರಿ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭದ ಪ್ರಮಾಣವನ್ನು ಶೇಕಡಾ 5 ರಿಂದ 12 ಕ್ಕೆ ಹೆಚ್ಚಿಸಿರುವ ಬಗ್ಗೆ ಯಾವುದೇ ಸಮರ್ಥನೆ ಅಥವಾ ಸತ್ಯವಾದ ವಿವರಣೆ ನೀಡಿಲ್ಲ ಎಂದು ಸಿಬಿಐ ಆರೋಪಿಸಿದೆ. ಕೋವಿಡ್‌ನ ಎರಡನೇ ಅಲೆಯ ಸಂದರ್ಭದಲ್ಲಿ ದಕ್ಷಿಣ ಭಾರತದ ಪ್ರಮುಖರು ದೆಹಲಿಯಲ್ಲಿ ಮೊಕ್ಕಾಂ ಹೂಡಿದಾಗ, ಪರಿಷ್ಕೃತ ಅಬಕಾರಿ ನೀತಿಗೆ ಕ್ಯಾಬಿನೆಟ್ ಅನುಮೋದನೆಯನ್ನು ಒಂದೇ ದಿನದಲ್ಲಿ ತರಾತುರಿಯಲ್ಲಿ ಚಲಾವಣೆ ಮಾಡುವ ಮೂಲಕ ಏಕೆ ಪಡೆಯಲಾಯಿತು ಎಂಬುದನ್ನು ವಿವರಿಸಲು ಅವರಿಗೆ ಸಾಧ್ಯವಾಗಿಲ್ಲ ಎಂದಿದೆ. ಕೇಜ್ರಿವಾಲ್ ಅವರು ಪ್ರಕರಣದ ಆರೋಪಿಗಳಾದ ಮಾಗುಂಟ ಶ್ರೀನಿವಾಸಲು ರೆಡ್ಡಿ, ಅರ್ಜುನ್ ಪಾಂಡೆ ಮತ್ತು ಮೂತ ಗೌತಮ್ ಅವರನ್ನು ಭೇಟಿಯಾದ ಬಗ್ಗೆ ಸರಿಯಾದ ವಿವರಣೆಯನ್ನು ಕೊಟ್ಟಿಲ್ಲ ಎಂದು ಸಿಬಿಐ ಹೇಳಿದೆ.

ಕೇಜ್ರಿವಾಲ್ ಪ್ರಮುಖ ರಾಜಕಾರಣಿ ಮತ್ತು ದೆಹಲಿಯ ಮುಖ್ಯಮಂತ್ರಿಯಾಗಿರುವುದರಿಂದ, ಅತ್ಯಂತ ಪ್ರಭಾವಶಾಲಿ ವ್ಯಕ್ತಿಯಾಗಿರುವುದರಿಂದ, ಕಸ್ಟಡಿ ವಿಚಾರಣೆಯ ಸಮಯದಲ್ಲಿ ಅವರು ಈಗಾಗಲೇ ಬಹಿರಂಗಪಡಿಸಿದ ಸಾಕ್ಷಿಗಳು ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಹುದು. ಇನ್ನೂ ಪರಿಶೀಲಿಸಬೇಕಾದವರು, ಮತ್ತಷ್ಟು ಸಂಗ್ರಹಿಸಬೇಕಾದ ಪುರಾವೆಗಳನ್ನು ಹಾಳು ಮಾಡಿ ಮತ್ತು ನಡೆಯುತ್ತಿರುವ ತನಿಖೆಗೆ ಅಡ್ಡಿಯಾಗಬಹುದು ಎಂದು ಸಿಬಿಐ ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಿದೆ.

2021-22ರ ದೆಹಲಿ ಮದ್ಯ ನೀತಿಯನ್ನು ರೂಪಿಸುವಾಗ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮೊದಲು ಬಂಧಿಸಿತ್ತು. ಕೇಜ್ರಿವಾಲ್ ಅವರು ಎಎಪಿಯ ಸಂಚಾಲಕರಾಗಿದ್ದರಿಂದ ಗೋವಾದಲ್ಲಿ ಪಕ್ಷದ ಪ್ರಚಾರಕ್ಕೆ ಹಣ ನೀಡಲು ಮದ್ಯ ಮಾರಾಟಗಾರರಿಂದ ಪಡೆದ ಹಣವನ್ನು ಬಳಸಲಾಗಿದೆ ಎಂದು ಇಡಿ ಆರೋಪಿಸಿದೆ. ಕೇಜ್ರಿವಾಲ್ ಮತ್ತು ಇತರ ಪ್ರಮುಖ ಆಮ್ ಆದ್ಮಿ ಪಾರ್ಟಿ ನಾಯಕರಿಗೆ ಕೇಂದ್ರ ಸರ್ಕಾರ ತನ್ನ ಏಜೆನ್ಸಿಗಳನ್ನು ಬಳಸಿಕೊಂಡು ಸುಳ್ಳು ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುತ್ತಿದೆ ಎಂದು ಪಕ್ಷದ ನಾಯಕರು ಆರೋಪಿಸಿದ್ದಾರೆ.

ಇದನ್ನೂ ಓದಿ: Arvind Kejriwal: ಪ್ಯಾಂಟ್‌ ಲೂಸ್‌ ಆಗಿದೆ, ಒಂದು ಬೆಲ್ಟ್‌ ಕೊಡಿ; ಕೋರ್ಟ್‌ಗೆ ಅರವಿಂದ್‌ ಕೇಜ್ರಿವಾಲ್‌ ಮನವಿ‌

Continue Reading

ಕ್ರೀಡೆ

Arshdeep Singh : ಫೈನಲ್​ ಪಂದ್ಯದಲ್ಲಿ ಅರ್ಶ್​ದೀಪ್​ ಸಿಂಗ್​ಗೆ ಇದೆ ದಾಖಲೆ ಬರೆಯುವ ಅವಕಾಶ

Arshdeep Singh: 2012-2013ರ ಆವೃತ್ತಿಯಲ್ಲಿ 15 ವಿಕೆಟ್ ಪಡೆದ ಶ್ರೀಲಂಕಾದ ಅಜಂತಾ ಮೆಂಡಿಸ್ ಮೂರನೇ ಸ್ಥಾನದಲ್ಲಿದ್ದಾರೆ. ಅರ್ಶ್​​ದೀಪ್​ ಸಿಂಗ್ 2024 ರ ಟಿ 20 ವಿಶ್ವಕಪ್​ನಲ್ಲಿ ಉತ್ತಮ ಫಾರ್ಮ್​​ನಲ್ಲಿದ್ದಾರೆ. ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಪಂದ್ಯದಲ್ಲಿ ಅದೇ ಫಾರ್ಮ್ ಅನ್ನು ಮುಂದುವರಿಸುವ ಭರವಸೆ ಹೊಂದಿದ್ದಾರೆ. ಹೀಗಾಗಿ ದಾಖಲೆ ಮುರಿಯುವ ಎಲ್ಲ ಅವಕಾಶಗಳು ಅವರ ಮುಂದಿವೆ.

VISTARANEWS.COM


on

Arshdeep Singh
Koo

ಬೆಂಗಳೂರು : ಭಾರತ ತಂಡದ ಎಡಗೈ ವೇಗಿ ಅರ್ಶ್​ದೀಪ್​ ಸಿಂಗ್​ಗೆ (Arshdeep Singh) 2024 ರ ಟಿ 20 ವಿಶ್ವಕಪ್​ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್​ಗಳನ್ನು ಪಡೆದಿರುವ ಹೊಸ ದಾಖಲೆಯನ್ನು ಮಾಡುವ ಅವಕಾಶ ಹೊಂದಿದ್ದಾರೆ. ಅರ್ಶ್​ದೀಪ್​ 7.50ರ ಎಕಾನಮಿ ರೇಟ್​ನಲ್ಲಿ ಇದುವರೆಗೆ ಆಡಿರುವ ಏಳು ಪಂದ್ಯದಲ್ಲಿ 15 ವಿಕೆಟ್​ಗಳನ್ನು ಪಡೆದಿದ್ದಾರೆ. ಈ ಸಾಧನೆಯು ಟಿ 20 ವಿಶ್ವಕಪ್​​ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಸಾರ್ವಕಾಲಿಕ ಆಟಗಾರರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಪ್ರಸ್ತುತ ಅಫ್ಘಾನಿಸ್ತಾನ ತಂಡದ ಆಟಗಾರ ಫಜಲ್ಹಾಕ್ ಫಾರೂಕಿ 2024ರ ಆವೃತ್ತಿಯಲ್ಲಿ 17 ವಿಕೆಟ್​ಗಳನ್ನು ಪಡೆದುಕೊಂಡಿದ್ದಾರೆ. ಅವರು ಇತ್ತೀಚೆಗೆ 2021- 2022 ಋತುವಿನಲ್ಲಿ ಶ್ರೀಲಂಕಾದ ಆಲ್​ರೌಂಡರ್​ ವನಿಂದು ಹಸರಂಗ ಅವರ 16 ವಿಕೆಟ್​ಗಳ ದಾಖಲೆಯನ್ನು ಮುರಿದಿದ್ದಾರೆ ಹೀಗಾಗಿ ಅರ್ಶ್​ದೀಪ್​ ಇನ್ನೆರಡು ವಿಕೆಟ್​ ಪಡೆದರೆ ದಾಖಲೆ ಗ್ಯಾರಂಟಿ.

2012-2013ರ ಆವೃತ್ತಿಯಲ್ಲಿ 15 ವಿಕೆಟ್ ಪಡೆದ ಶ್ರೀಲಂಕಾದ ಅಜಂತಾ ಮೆಂಡಿಸ್ ಮೂರನೇ ಸ್ಥಾನದಲ್ಲಿದ್ದಾರೆ. ಅರ್ಶ್​​ದೀಪ್​ ಸಿಂಗ್ 2024 ರ ಟಿ 20 ವಿಶ್ವಕಪ್​ನಲ್ಲಿ ಉತ್ತಮ ಫಾರ್ಮ್​​ನಲ್ಲಿದ್ದಾರೆ. ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಪಂದ್ಯದಲ್ಲಿ ಅದೇ ಫಾರ್ಮ್ ಅನ್ನು ಮುಂದುವರಿಸುವ ಭರವಸೆ ಹೊಂದಿದ್ದಾರೆ. ಹೀಗಾಗಿ ದಾಖಲೆ ಮುರಿಯುವ ಎಲ್ಲ ಅವಕಾಶಗಳು ಅವರ ಮುಂದಿವೆ.

ಭಾರತದ ಗೆಲವಿಗೆ ವಿಶೇಷ ಪೂಜೆ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ವಿಶ್ವಕಪ್ ಫೈನಲ್​​ನಲ್ಲಿ(T20 World Cup Final) ಭಾರತದ ಗೆಲ್ಲಲ್ಲಿ ಎಂದು ಪ್ರಾರ್ಥಿಸಿ ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಾಲಯದ ಅರ್ಚಕರು ಶನಿವಾರ ವಿಶೇಷ ಪೂಜೆ ನಡೆಸಿದ್ದಾರೆ. ದೊಡ್ಡ ಫೈನಲ್ ಸಮೀಪಿಸುತ್ತಿದ್ದಂತೆ ಕ್ರಿಕೆಟ್​ ಅಭಿಮಾನಿಗಳಲ್ಲಿ ಉತ್ಸಾಹ ಮತ್ತು ಆತಂಕ ಹೆಚ್ಚಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಟೀಮ್ ಇಂಡಿಯಾದ ಆಟಗಾರರಿಗೆ ಪ್ರೋತ್ಸಾಹದ ಸಂದೇಶಗಳು ತುಂಬಿಕೊಂಡಿವೆ. ಪ್ರಮುಖ ಬೀದಿಗಳು ಟೀಮ್ ಇಂಡಿಯಾವನ್ನು ಬೆಂಬಲಿಸುವ ಪೋಸ್ಟರ್​ಗಳಿಂದ ತುಂಬಿಕೊಂಡಿವೆ. ಈ ನಡುವೆ ಹಲವೆಡೆ ವಿಶೇಷ ಪೂಜೆಗಳು ನಡೆಯುತ್ತಿವೆ. ಅಂತೆಯ ಸಿದ್ಧಿವಿನಾಯಕ ದೇವಾಲಯದಲ್ಲೂ ಪೂಜೆ ಮಾಡಲಾಗಿದೆ.

ಇದನ್ನೂ ಓದಿ: IND vs SA Final: ರಾಮನಾಮ ಸ್ಮರಣೆ ಮಾಡಿ ಭಾರತ ವಿರುದ್ಧ ಫೈನಲ್​ ಆಡಲಿದ್ದಾರೆ ದಕ್ಷಿಣ ಆಫ್ರಿಕಾ ಕ್ರಿಕೆಟಿಗ

ಈ ಪಂದ್ಯವು ಭಾರತದ ಕ್ರಿಕೆಟ್​ ಪಾಲಿಗೆ ಪ್ರಮುಖ ಘಟನೆಯಾಗಿದೆ. ಲಕ್ಷಾಂತರ ಭಾರತೀಯರ ಭರವಸೆಗಳು ಮತ್ತು ಪ್ರಾರ್ಥನೆಗಳು ಪ್ರಸಸ್ತಿಗಾಗಿ ಹಂಬಲಿಸಿವೆ. 17 ವರ್ಷಗಳ ಸುದೀರ್ಘ ನಂತರ ಭಾರತವು ಟಿ 20 ವಿಶ್ವಕಪ್ ಟ್ರೋಫಿ ಎತ್ತುವುದನ್ನು ನೋಡಲು ಕೋಟ್ಯಂತರ ಮಂದಿ ಕಾಯುತ್ತಿದ್ದಾರೆ.

ಸಿದ್ಧಿವಿನಾಯಕ ದೇವಾಲಯವು ವಿಶ್ವ ಕಪ್​ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಮತ್ತು ಆರತಿಗಳನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಹಾಜರಿದ್ದ ಭಕ್ತರು ಮೆನ್ ಇನ್ ಬ್ಲೂಗೆ ಆಶೀರ್ವಾದ ಮಾಡುವಂತೆ ಭಗವಂತನ ಬಳಿ ಕೋರಿಕೊಂಡರು. ಸಿದ್ಧಿವಿನಾಯಕನ ಪುರೋಹಿತರು. ತಂಡ ಮತ್ತು ಅವರ ಅಭಿಮಾನಿಗಳ ಪರವಾಗಿ ಪೂಜೆ ಸಲ್ಲಿಸಿ ಪ್ರಸಾದ ವಿತಣೆ ಮಾಡಿದರು.

ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲುವ ಗುರಿ ಹೊಂದಿರುವ ಭಾರತ ಅದಕ್ಕಾಗಿ ಸಜ್ಜಾಗಿದ್ದು, ಮೊದಲ ಟಿ20 ವಿಶ್ವಕಪ್ ಗೆಲ್ಲುವ ತವಕದಲ್ಲಿರುವ ದಕ್ಷಿಣ ಆಫ್ರಿಕಾ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಎರಡೂ ತಂಡಗಳು ಐಸಿಸಿ ಟ್ರೋಫಿಗಾಗಿ ದೀರ್ಘ ಕಾಯುವಿಕೆ ಎದುರಿಸಿವೆ. ಭಾರತಕ್ಕೆ 13 ವರ್ಷಗಳಿಂದ ಪ್ರಶಸ್ತಿಗಾಗಿ ಕಾದರೆ, ದಕ್ಷಿಣ ಆಫ್ರಿಕಾ ಇದುವರೆಗೆ ಒಂದೇ ಒಂದು ಟ್ರೋಫಿ ಸಿಕ್ಕಿಲ್ಲ. ಈ ಅಂತಿಮ ಪಂದ್ಯವು ಈ ಕ್ರಿಕೆಟ್ ಶಕ್ತಿ ಕೇಂದ್ರಗಳ ಪ್ರಶಸ್ತಿ ಬರವನ್ನು ಕೊನೆಗೊಳಿಸಲಿದೆ.

Continue Reading

ಪ್ರಮುಖ ಸುದ್ದಿ

T20 World Cup Final : ಭಾರತ ತಂಡದ ಗೆಲುವಿಗಾಗಿ ವಿಶ್ವ ಪ್ರಸಿದ್ಧ ಸಿದ್ಧಿವಿನಾಯಕ ದೇಗುದಲ್ಲಿ ವಿಶೇಷ ಪೂಜೆ

T20 World Cup Final : ಈ ಪಂದ್ಯವು ಭಾರತದ ಕ್ರಿಕೆಟ್​ ಪಾಲಿಗೆ ಪ್ರಮುಖ ಘಟನೆಯಾಗಿದೆ. ಲಕ್ಷಾಂತರ ಭಾರತೀಯರ ಭರವಸೆಗಳು ಮತ್ತು ಪ್ರಾರ್ಥನೆಗಳು ಪ್ರಸಸ್ತಿಗಾಗಿ ಹಂಬಲಿಸಿವೆ. 17 ವರ್ಷಗಳ ಸುದೀರ್ಘ ನಂತರ ಭಾರತವು ಟಿ 20 ವಿಶ್ವಕಪ್ ಟ್ರೋಫಿ ಎತ್ತುವುದನ್ನು ನೋಡಲು ಕೋಟ್ಯಂತರ ಮಂದಿ ಕಾಯುತ್ತಿದ್ದಾರೆ.

VISTARANEWS.COM


on

T20 World Cup Final
Koo

ಬೆಂಗಳೂರು: ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ವಿಶ್ವಕಪ್ ಫೈನಲ್​​ನಲ್ಲಿ(T20 World Cup Final) ಭಾರತದ ಗೆಲ್ಲಲ್ಲಿ ಎಂದು ಪ್ರಾರ್ಥಿಸಿ ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಾಲಯದ ಅರ್ಚಕರು ಶನಿವಾರ ವಿಶೇಷ ಪೂಜೆ ನಡೆಸಿದ್ದಾರೆ. ದೊಡ್ಡ ಫೈನಲ್ ಸಮೀಪಿಸುತ್ತಿದ್ದಂತೆ ಕ್ರಿಕೆಟ್​ ಅಭಿಮಾನಿಗಳಲ್ಲಿ ಉತ್ಸಾಹ ಮತ್ತು ಆತಂಕ ಹೆಚ್ಚಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಟೀಮ್ ಇಂಡಿಯಾದ ಆಟಗಾರರಿಗೆ ಪ್ರೋತ್ಸಾಹದ ಸಂದೇಶಗಳು ತುಂಬಿಕೊಂಡಿವೆ. ಪ್ರಮುಖ ಬೀದಿಗಳು ಟೀಮ್ ಇಂಡಿಯಾವನ್ನು ಬೆಂಬಲಿಸುವ ಪೋಸ್ಟರ್​ಗಳಿಂದ ತುಂಬಿಕೊಂಡಿವೆ. ಈ ನಡುವೆ ಹಲವೆಡೆ ವಿಶೇಷ ಪೂಜೆಗಳು ನಡೆಯುತ್ತಿವೆ. ಅಂತೆಯ ಸಿದ್ಧಿವಿನಾಯಕ ದೇವಾಲಯದಲ್ಲೂ ಪೂಜೆ ಮಾಡಲಾಗಿದೆ.

ಈ ಪಂದ್ಯವು ಭಾರತದ ಕ್ರಿಕೆಟ್​ ಪಾಲಿಗೆ ಪ್ರಮುಖ ಘಟನೆಯಾಗಿದೆ. ಲಕ್ಷಾಂತರ ಭಾರತೀಯರ ಭರವಸೆಗಳು ಮತ್ತು ಪ್ರಾರ್ಥನೆಗಳು ಪ್ರಸಸ್ತಿಗಾಗಿ ಹಂಬಲಿಸಿವೆ. 17 ವರ್ಷಗಳ ಸುದೀರ್ಘ ನಂತರ ಭಾರತವು ಟಿ 20 ವಿಶ್ವಕಪ್ ಟ್ರೋಫಿ ಎತ್ತುವುದನ್ನು ನೋಡಲು ಕೋಟ್ಯಂತರ ಮಂದಿ ಕಾಯುತ್ತಿದ್ದಾರೆ.

ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸಿದ್ಧಿವಿನಾಯಕ ದೇವಾಲಯವು ವಿಶ್ವ ಕಪ್​ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಮತ್ತು ಆರತಿಗಳನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಹಾಜರಿದ್ದ ಭಕ್ತರು ಮೆನ್ ಇನ್ ಬ್ಲೂಗೆ ಆಶೀರ್ವಾದ ಮಾಡುವಂತೆ ಭಗವಂತನ ಬಳಿ ಕೋರಿಕೊಂಡರು. ಸಿದ್ಧಿವಿನಾಯಕನ ಪುರೋಹಿತರು. ತಂಡ ಮತ್ತು ಅವರ ಅಭಿಮಾನಿಗಳ ಪರವಾಗಿ ಪೂಜೆ ಸಲ್ಲಿಸಿ ಪ್ರಸಾದ ವಿತಣೆ ಮಾಡಿದರು.

ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲುವ ಗುರಿ ಹೊಂದಿರುವ ಭಾರತ ಅದಕ್ಕಾಗಿ ಸಜ್ಜಾಗಿದ್ದು, ಮೊದಲ ಟಿ20 ವಿಶ್ವಕಪ್ ಗೆಲ್ಲುವ ತವಕದಲ್ಲಿರುವ ದಕ್ಷಿಣ ಆಫ್ರಿಕಾ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಎರಡೂ ತಂಡಗಳು ಐಸಿಸಿ ಟ್ರೋಫಿಗಾಗಿ ದೀರ್ಘ ಕಾಯುವಿಕೆ ಎದುರಿಸಿವೆ. ಭಾರತಕ್ಕೆ 13 ವರ್ಷಗಳಿಂದ ಪ್ರಶಸ್ತಿಗಾಗಿ ಕಾದರೆ, ದಕ್ಷಿಣ ಆಫ್ರಿಕಾ ಇದುವರೆಗೆ ಒಂದೇ ಒಂದು ಟ್ರೋಫಿ ಸಿಕ್ಕಿಲ್ಲ. ಈ ಅಂತಿಮ ಪಂದ್ಯವು ಈ ಕ್ರಿಕೆಟ್ ಶಕ್ತಿ ಕೇಂದ್ರಗಳ ಪ್ರಶಸ್ತಿ ಬರವನ್ನು ಕೊನೆಗೊಳಿಸಲಿದೆ.

ಸಿದ್ಧಿವಿನಾಯಕ ದೇವಸ್ಥಾನದಲ್ಲಿನ ಪ್ರಾರ್ಥನೆಗಳು ಫಲಿಸುತ್ತವೆ ಎಂಬುದು ನಂಬಿಕೆ. ಅಂತೆಯ ವಿಶ್ವ ಕಪ್​ಗಾಗಿ ಭಾರತದ ಆಟಗಾರರಿಗೂ ಒಳಿತಾಗಲಿ ಎಂಬ ನಂಬಿಕೆ ಅಭಿಮಾನಿಗಳದ್ದು. 2023ರ ಏಕ ದಿನ ವಿಶ್ವ ಕಪ್​ನಲ್ಲಿ ಸೋತು ಬೇಸರ ಎದುರಿಸಿರುವ ಭಾರತ ತಂಡ ಈ ವಿಶ್ವ ಕಪ್​ನಲ್ಲಿ ಗೆಲ್ಲುವ ಉದ್ದೇಶವನ್ನು ಹೊಂದಿದೆ. ಈ ಟೂರ್ನಿಯು ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರಿಗೆ ಟಿ20 ಅಂತಾರಾಷ್ಟ್ರೀಯ ಕೊನೇ ಪಂದ್ಯಗಳಾಗಿರಬಹುದು ಎಂದು ಅಂದಾಜಿಸಲಾಗಿದೆ.

ಬಾರ್ಬಡೋಸ್ನ ಬ್ರಿಜ್​ಟೌನ್​ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಫೈನಲ್ ನಡೆಯಲಿದೆ. ಇದು ದೊಡ್ಡ ಸ್ಕೋರ್​ ಹಾಗೂ ವೇಗದ ಬೌಲಿಂಗ್​ಗೆ ಪೂರಕವಾಗಿರುವ ಪಿಚ್ ಆಗಿದೆ. ಇದು ಸ್ಪಿನ್ನರ್​ಗಳಿಗೂ ಅನುಕೂಲಕರ. ಎರಡೂ ತಂಡಗಳ ಎಲ್ಲಾ ಆಟಗಾರರು ಫಿಟ್ ಆಗಿದ್ದಾರೆ ಮತ್ತು ಪಂದ್ಯದಲ್ಲಿ ಭಾಗವಹಿಸಲು ಸಿದ್ಧರಿದ್ದಾರೆ. ಹಿಂದಿನ ಪಂದ್ಯದಲ್ಲಿ ಯಾವುದೇ ಆಟಗಾರನಿಗೆ ಗಾಯಗಳಾದ ಪ್ರಕರಣಗಳಿಲ್ಲ. ಹೀಗಾಗಿ ಜಿದ್ದಾಜಿದ್ದಿನ ಪಂದ್ಯ ನಿರೀಕ್ಷಿತ.

ಇದನ್ನೂ ಓದಿ: IND vs SA Final: ರಾಮನಾಮ ಸ್ಮರಣೆ ಮಾಡಿ ಭಾರತ ವಿರುದ್ಧ ಫೈನಲ್​ ಆಡಲಿದ್ದಾರೆ ದಕ್ಷಿಣ ಆಫ್ರಿಕಾ ಕ್ರಿಕೆಟಿಗ 

ಭಾರತ-ಭಾರತ ತಂಡವು ಬಲಿಷ್ಠ ಬ್ಯಾಟರ್​ಗಳು ಮತ್ತು ಬೌಲರ್​ಗಳನ್ನು ಹೊಂದಿದ್ದು, ಟೂರ್ನಿಯಲ್ಲಿ ಇದುವರೆಗೂ ಎದುರಾಳಿಗಳ ಮೇಲೆ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಆಫ್ರಿಕಾ- ದಕ್ಷಿಣ ಆಫ್ರಿಕಾ ಬ್ಯಾಟಿಂಗ್, ಸ್ಪಿನ್ ಮತ್ತು ವೇಗದ ಘಟಕಗಳಲ್ಲಿ ಪರಿಣಿತ ಬೌಲರ್​ಗಳನ್ನು ಒಳಗೊಂಡಿದೆ.

ಭಾರತ ರೋಹಿತ್ ಶರ್ಮಾ, ರಿಷಭ್ ಪಂತ್, ಶಿವಂ ದುಬೆ ಮತ್ತು ಸೂರ್ಯಕುಮಾರ್ ಯಾದವ್ ತಂಡದ ಅತ್ಯುತ್ತಮ ಬ್ಯಾಟರ್​ಗಳಾದರೆ. ಅರ್ಶ್​ದೀಪ್​ ಸಿಂಗ್ ಹಾಗೂ ಜಸ್ಪ್ರೀತ್ ಬುಮ್ರಾ ಬೌಲಿಂಗ್​ನಲ್ಲಿ ಮಿಂಚಲಿದ್ದಾರೆ. ದಕ್ಷಿಣ ಆಫ್ರಿಕಾ ಪರ ಕ್ವಿಂಟನ್ ಡಿ ಕಾಕ್, ಐಡೆನ್ ಮಾರ್ಕ್ರಮ್, ಡೇವಿಡ್ ಮಿಲ್ಲರ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ ಮತ್ತು ತಬ್ರೀಜ್ ಶಮ್ಸಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

Continue Reading

Latest

Viral Video: ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ! ವಿಡಿಯೊ ನೋಡಿ

Viral Video: ಕಳ್ಳನೊಬ್ಬ ಮಹಿಳೆಯೊಬ್ಬರ ಮೊಬೈಲ್ ಕದ್ದು ಓಡುತ್ತಿದ್ದಾಗ ಕಾರಿಗೆ ಡಿಕ್ಕಿ ಹೊಡೆದು ಸಾವನಪ್ಪಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೊದಲ್ಲಿ ಕಳ್ಳ ಮಹಿಳೆಯಿಂದ ಕದ್ದ ಮೊಬೈಲ್ ಪೋನ್ ಅನ್ನು ತೆಗೆದುಕೊಂಡು ತಪ್ಪಿಸಿಕೊಳ್ಳಲು ಜೋರಾಗಿ ಓಡುತ್ತಾ ರಸ್ತೆ ದಾಟುತ್ತಿದ್ದಾಗ ಎದುರಿಗೆ ವೇಗವಾಗಿ ಬಂದ ಕಾರೊಂದು ಆತನಿಗೆ ಡಿಕ್ಕಿ ಹೊಡೆದಿದೆ ಆತ ದೂರ ಹೋಗಿ ಬಿದ್ದಿದ್ದರೂ, ಕಾರು ತನ್ನ ವೇಗವನ್ನು ನಿಯಂತ್ರಿಸಲಾಗದೆ ಕೆಳಗೆ ಬಿದ್ದ ಆತನ ಮೆಲೆ ಹರಿದು ನಂತರ ನಿಂತಿದೆ. ಇದರಿಂದ ಆತ ಸ್ಥಳದಲ್ಲೇ ಸಾವನಪ್ಪಿದ್ದಾನೆ.

VISTARANEWS.COM


on

Viral Video
Koo

ಬೆಂಗಳೂರು: ಇಂದು ಮಾಡಿದ ತಪ್ಪಿನ ಶಿಕ್ಷೆ ಮುಂದಿನ ಜನ್ಮದಲ್ಲಿ ಸಿಗುತ್ತದೆ ಎಂದು ನಮ್ಮ ಹಿರಿಯರು ಹೇಳುತ್ತಾರೆ. ಆದರೆ ಅದು ಸುಳ್ಳು, ಇಂದು ಮಾಡಿದ ತಪ್ಪಿಗೆ ಶಿಕ್ಷೆ ಇದೇ ಕಾಲದಲ್ಲಿ ಸಿಗುತ್ತದೆ. ಆದರೆ ಕೆಲವರಿಗೆ ತಡವಾಗಿ ಸಿಕ್ಕರೆ, ಕೆಲವರಿಗೆ ಅಂದೇ ಸಿಗುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಕಳ್ಳನೊಬ್ಬ ಮಹಿಳೆಯೊಬ್ಬರ ಮೊಬೈಲ್ ಕದ್ದು ಓಡುತ್ತಿದ್ದಾಗ ಕಾರಿಗೆ ಡಿಕ್ಕಿ ಹೊಡೆದು ಸಾವನಪ್ಪಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Viral Video )ಆಗಿದೆ.

ಈ ವಿಡಿಯೊವನ್ನು @Desam_officialz ತಮ್ಮ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದು ‘ಇದು ಭೂಮಿಯ ಮೇಲೆ ದೇವರ ತಕ್ಷಣದ ತೀರ್ಪು. ದೇವರು ಕರುಣೆ ತೋರಲಿ’ ಎಂದು ಬರೆದಿದ್ದಾರೆ. ಈ ವಿಡಿಯೊದಲ್ಲಿ ಕಳ್ಳ ಮಹಿಳೆಯಿಂದ ಕದ್ದ ಮೊಬೈಲ್ ಪೋನ್ ಅನ್ನು ತೆಗೆದುಕೊಂಡು ತಪ್ಪಿಸಿಕೊಳ್ಳಲು ಜೋರಾಗಿ ಓಡುತ್ತಾ ರಸ್ತೆ ದಾಟುತ್ತಿದ್ದಾಗ ಎದುರಿಗೆ ವೇಗವಾಗಿ ಬಂದ ಕಾರೊಂದು ಆತನಿಗೆ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮ ಆತ ಹಾರಿ ಹೋಗಿ ತುಂಬಾ ದೂರ ರಸ್ತೆಯ ಮೇಲೆ ಬಿದ್ದಿದ್ದಾನೆ. ಆದರೆ ಕಾರು ತನ್ನ ವೇಗವನ್ನು ನಿಯಂತ್ರಿಸಲಾಗದೆ ಕೆಳಗೆ ಬಿದ್ದ ಆತನ ಮೆಲೆ ಹರಿದು ನಂತರ ನಿಂತಿದೆ. ಇದರಿಂದ ಆತ ಸ್ಥಳದಲ್ಲೇ ಸಾವನಪ್ಪಿದ್ದಾನೆ.
ಈ ಘಟನೆ ನಡೆದ ಸ್ಥಳ ಮತ್ತು ದಿನಾಂಕ ತಿಳಿದುಬಂದಿಲ್ಲ. ಆದರೆ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅನೇಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಇದು ದೇವರ ತೀರ್ಪು ಎಂದು ಹೇಳಿದರೆ. ಕೆಲವರು ‘ಬಡವರ ವಿಷಯದಲ್ಲಿ ದೇವರು ತಕ್ಷಣ ತೀರ್ಪುಗಳನ್ನು ನೀಡುತ್ತಾನೆ? ಆದರೆ ಶ್ರೀಮಂತರು ಮತ್ತು ಶಕ್ತಿವಂತರಿಗೆ ಏಕೆ ದೇವರು ತಕ್ಷಣದ ತೀರ್ಪುಗಳನ್ನು ನೀಡುತ್ತಿಲ್ಲ? ಪ್ರತಿದಿನ ಇಂತಹ ಲಕ್ಷಾಂತರ ದರೋಡೆಗಳು, ರಸ್ತೆಗಳಲ್ಲಿ ಕೊಲೆಗಳು ನಡೆಯುತ್ತಿವೆ, ಯಾವುದೇ ತಕ್ಷಣದ ತೀರ್ಪುಗಳನ್ನು ನೋಡಿಲ್ಲ, ಏಕೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

ಸೆಪ್ಟೆಂಬರ್ 2023 ರಲ್ಲಿ ಗುಜರಾತ್‌ ನಲ್ಲಿಯೂ ಇಂತಹದ್ದೇ ಒಂದು ಘಟನೆ ನಡೆದಿತ್ತು. ಗುಜರಾತ್‌ನ ಮೊದಸಾದಲ್ಲಿ ಶೋರೂಂನಿಂದ ಕದಿಯಲು ಪ್ರಯತ್ನಿಸುತ್ತಿದ್ದ ಕಳ್ಳನಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಈ ಘಟನೆಯು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

Continue Reading
Advertisement
Arvind Kejriwal
ಪ್ರಮುಖ ಸುದ್ದಿ6 mins ago

Arvind Kejriwal: ಅರವಿಂದ ಕೇಜ್ರಿವಾಲ್‌ ಬಿಡುಗಡೆ ಕನಸು ಭಗ್ನ; ಮತ್ತೆ 14 ದಿನ ನ್ಯಾಯಾಂಗ ಬಂಧನ

Dengue Fever
ಕರ್ನಾಟಕ16 mins ago

Dengue Fever: ರಾಯಚೂರಲ್ಲಿ 6 ವರ್ಷದ ಮಗುವಿಗೆ ಡೆಂಗ್ಯೂ; ದಾವಣಗೆರೆ ಜಿಲ್ಲೆಯಲ್ಲಿ 142 ಪ್ರಕರಣಗಳು ಪತ್ತೆ!

Arshdeep Singh
ಕ್ರೀಡೆ22 mins ago

Arshdeep Singh : ಫೈನಲ್​ ಪಂದ್ಯದಲ್ಲಿ ಅರ್ಶ್​ದೀಪ್​ ಸಿಂಗ್​ಗೆ ಇದೆ ದಾಖಲೆ ಬರೆಯುವ ಅವಕಾಶ

International Mud Day
ಫ್ಯಾಷನ್34 mins ago

International Mud Day: ಆರೋಗ್ಯ, ಸೌಂದರ್ಯದ ಪಾಲಿಗೆ ಹೊನ್ನು ಈ ಮಣ್ಣು!

Physical relationship
ವಿದೇಶ52 mins ago

Physical relationship: ಕೈದಿ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ್ದ ಮಹಿಳಾ ಜೈಲಾಧಿಕಾರಿ ಬಗ್ಗೆ ಶಾಕಿಂಗ್‌ ವಿಚಾರ ಬಯಲು

Actor Darshan does not need counseling says by shamitha malnad
ಸ್ಯಾಂಡಲ್ ವುಡ್57 mins ago

Actor Darshan: ದಚ್ಚು ಪರಿಸ್ಥಿತಿಗೆ ಪವಿತ್ರಾ ಕಾರಣ ಅನ್ನೋಕಾಗಲ್ಲ; ದರ್ಶನ್‌ಗೆ ಕೌನ್ಸೆಲಿಂಗ್‌ ಅಗತ್ಯ ಇಲ್ಲ ಎಂದ ಖ್ಯಾತ ಗಾಯಕಿ!

IND vs SA Final
ಕ್ರೀಡೆ1 hour ago

IND vs SA Final: ರಾಮನಾಮ ಸ್ಮರಣೆ ಮಾಡಿ ಭಾರತ ವಿರುದ್ಧ ಫೈನಲ್​ ಆಡಲಿದ್ದಾರೆ ದಕ್ಷಿಣ ಆಫ್ರಿಕಾ ಕ್ರಿಕೆಟಿಗ

karnataka weather Forecast
ಮಳೆ1 hour ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

Road Accident
ಕರ್ನಾಟಕ1 hour ago

Road Accident: ಮುಧೋಳ ಬಳಿ ಶಾಲಾ ಬಸ್‌ ಹರಿದು 4 ವರ್ಷದ ಬಾಲಕ ಸಾವು

T20 World Cup Final
ಪ್ರಮುಖ ಸುದ್ದಿ1 hour ago

T20 World Cup Final : ಭಾರತ ತಂಡದ ಗೆಲುವಿಗಾಗಿ ವಿಶ್ವ ಪ್ರಸಿದ್ಧ ಸಿದ್ಧಿವಿನಾಯಕ ದೇಗುದಲ್ಲಿ ವಿಶೇಷ ಪೂಜೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 hour ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ7 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ24 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌