Wimbledon 2024: ವಿಂಬಲ್ಡನ್ ಟೂರ್ನಿಯಿಂದ ಹಿಂದೆ ಸರಿದ ಟೆನಿಸ್ ದಿಗ್ಗಜ ರಫೆಲ್‌ ನಡಾಲ್‌ - Vistara News

ಕ್ರೀಡೆ

Wimbledon 2024: ವಿಂಬಲ್ಡನ್ ಟೂರ್ನಿಯಿಂದ ಹಿಂದೆ ಸರಿದ ಟೆನಿಸ್ ದಿಗ್ಗಜ ರಫೆಲ್‌ ನಡಾಲ್‌

Wimbledon 2024: ಒಲಿಂಪಿಕ್ಸ್​ ಆಡುವ ಸಲುವಾಗಿ ಪ್ರತಿಷ್ಠಿತ ವಿಂಬಲ್ಡನ್​ ಟೂರ್ನಿಯಿಂದ(Wimbledon 2024) ಸ್ಪೇನ್‌ನ ಟೆನಿಸ್ ದಿಗ್ಗಜ ರಫೆಲ್‌ ನಡಾಲ್‌(Rafael Nadal) ಅವರು ಹಿಂದೆ ಸರಿದಿದ್ದಾರೆ.

VISTARANEWS.COM


on

Wimbledon 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್​: ಮುಂದಿನ ತಿಂಗಳು ಆರಂಭಗೊಳ್ಳಲಿರುವ ಪ್ರತಿಷ್ಠಿತ ವಿಂಬಲ್ಡನ್​ ಟೂರ್ನಿಯಿಂದ(Wimbledon 2024) 22 ಬಾರಿ ಗ್ರ್ಯಾಂಡ್ ಸ್ಲಾಮ್ ವಿಜೇತ, ಸ್ಪೇನ್‌ನ ಟೆನಿಸ್ ದಿಗ್ಗಜ ರಫೆಲ್‌ ನಡಾಲ್‌(Rafael Nadal) ಅವರು ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಈ ವಿಚಾರವನ್ನು ಸ್ವತಃ ಅವರೇ ಟ್ವೀಟ್​ ಮಾಡುವ ಮೂಲಕ ದೃಢಪಡಿಸಿದ್ದಾರೆ.

“ಆವೆ ಮಣಿನ ಮೈದಾನದಲ್ಲಿ ಹೆಚ್ಚಿನ ಅಭ್ಯಾಸ ನಡೆಸುತ್ತಿದ್ದು ಈ ಮೂಲಕ ನಾನು ಮತ್ತೆ ಫಿಟ್​ನಿಸ್​ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಹೀಗಾಗಿ ನಾನು ಈ ವರ್ಷ ವಿಂಬಲ್ಡನ್ ಚಾಂಪಿಯನ್ ಶಿಪ್​ನಲ್ಲಿ ಆಡುವುದನ್ನು ತಪ್ಪಿಸಿಕೊಳ್ಳುತ್ತೇನೆ. ಗ್ರಾಸ್​ ಕೋರ್ಟ್​ ವಿಂಬಲ್ಡನ್​ ಆಡುವುದೇ ಒಂದು ಖಷಿ. ಅತ್ಯಂತ ಶಿಸ್ತಿನ ಟೂರ್ನಿಯಾದ ವಿಂಬಲ್ಡನ್​ನಲ್ಲಿ ಈ ಬಾರಿ ಆಡದಿರುವುದು ನಿಜಕ್ಕೂ ಬೇಸರ ತಂದಿದೆ. ನಾನು ನಿಮ್ಮೆಲ್ಲರನ್ನೂ ಮಿಸ್ ಮಾಡಿಕೊಳ್ಳುತ್ತೇನೆ” ಎಂದು ಬರೆದುಕೊಂಡು ಟೂರ್ನಿಯಿಂದ ಹಿಂದೆ ಸರಿದ ವಿಚಾರವನ್ನು ಪ್ರಕಟಿಸಿದ್ದಾರೆ.

ಸ್ನಾಯು ಸೆಳೆತದಿಂದ ಬರೋಬ್ಬರಿ ಒಂದು ವರ್ಷ ಟೆನಿಸ್​ನಿಂದ ದೂರ ಉಳಿದಿದ್ದ ನಡಾಲ್​ ಇದೇ ವರ್ಷಾರಂಭದಲ್ಲಿ ನಡೆದಿದ್ದ ಬ್ರಿಸ್ಬೇನ್‌ ಇಂಟರ್‌ನ್ಶಾಶನಲ್‌ ಕಣಕ್ಕಿಳಿದಿದ್ದರು. ಆದರೆ ಮತ್ತೆ ಗಾಯಕ್ಕೆ ತುತ್ತಾಗಿ ಆಸ್ಟ್ರೇಲಿಯನ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಕೂಟದಿಂದ ಹಿಂದೆ ಸರಿದಿದ್ದರು. ಗಾಯದಿಂದ ಚೇತರಿಕೊಂಡು ಈ ಬಾರಿಯ ಫ್ರೆಂಚ್​ ಓಪನ್​ನಲ್ಲಿ ಆಡಿದ್ದ ನಡಾಲ್​ ಮೊದಲ ಸುತ್ತಿನಲ್ಲಿ ಸೋತು ಆಘಾತ ಎದುರಿಸಿದ್ದರು.

ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಕೆ ಕಾಣದಿದ್ದರೂ ಕೂಡ ತಮ್ಮ ದೇಶಕ್ಕಾಗಿ ಒಲಿಂಪಿಕ್ಸ್​ ಆಡುವುದಾಗಿ ಹೇಳಿದ್ದರು. ಕೊಟ್ಟ ಮಾತಿನಂತೆ ಅವರು ಈ ಬಾರಿ ತವರಿನ ಅಭಿಮಾನಿಗಳ ಸಮ್ಮುಖದಲ್ಲೇ ಒಲಿಂಪಿಕ್ಸ್​ ಆಡಲಿದ್ದಾರೆ. “ಎರಡು ವರ್ಷಗಳಿಂದ ನನ್ನ ದೇಹವು ಸರಿಯಾಗಿ ಸ್ಪಂದಿಸುತ್ತಿಲ್ಲ. ಆದರೆ, ಒಲಿಂಪಿಕ್ಸ್​ ಆಡಲು ಸಿದ್ಧನಿದ್ದೇನೆ ಎಂದು ಭಾವಿಸಿದ್ದೇನೆ” ಎಂದು ನಡಾಲ್​ ಹೇಳಿದ್ದಾರೆ.

ಇದನ್ನೂ ಓದಿ Rafael Nadal: ಲೇವರ್‌ ಕಪ್‌ ಬಳಿಕ 22 ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್​ ನಡಾಲ್‌ ನಿವೃತ್ತಿ!

ಒಲಿಂಪಿಕ್ಸ್​ ಬಳಿಕ ನಿವೃತ್ತಿ ಸಾಧ್ಯತೆ?


‘ಮುಂದೆ ಏನಾಗಬಹುದೆಂದು ಈಗಲೇ ಹೇಳಲು ಸಾಧ್ಯವಿಲ್ಲ. ನಾನೇ ನನಗೊಂದು ಅವಕಾಶ ನೀಡಬೇಕಿದೆ. ಹಿಂದೆಯೂ ಅನೇಕ ಸಲ ಗಾಯದಿಂದ ತೇಚರಿಸಿ ಟೆನಿಸ್​ ಅಂಗಳಕ್ಕೆ ಮರಳಿ ಟ್ರೋಫಿ ಗೆದ್ದಿದ್ದೇನೆ. ದೈಹಿಕವಾಗಿ ನಾನು ಗಟ್ಟಿಯಾಗಿದ್ದು ಆಡುವ ಮನಸ್ಸು ಇದ್ದಾಗ ನಾನೇಕೆ ಈಗಲೇ ನಿವೃತ್ತಿಗೆ ಕಾಲ ನಿಗದಿಪಡಿಸಲಿ” ಎಂದು ಹೇಳುವ ಮೂಲಕ ತಮ್ಮ ನಿವೃತ್ತಿ ಸದ್ಯಕ್ಕಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಿದ್ದರು. ಆದರೆ ಅವರನ್ನು ಗಾಯ ಬೆನ್ನು ಬಿಡುವಂತೆ ತೋರುತ್ತಿಲ್ಲ ಹೀಗಾಗಿ ಅವರು ಒಲಿಂಪಿಕ್ಸ್​ ಬಳಿಕ ವಿದಾಯ ಘೋಷಿಸಿದರೂ ಅಚ್ಚರಿಯಿಲ್ಲ.

ಒಲಿಂಪಿಕ್ಸ್​ನಲ್ಲಿ ರಾಫೆಲ್ ನಡಾಲ್ ಮತ್ತು ಹಾಲಿ ಫ್ರೆಂಚ್ ಓಪನ್ ಚಾಂಪಿಯನ್ ಕಾರ್ಲೋಸ್ ಅಲ್ಕರಾಜ್(Carlos Alcaraz) ಜತೆಯಾಗಿ ಕಣಕ್ಕಿಳಿಯಲಿದ್ದಾರೆ. ಕಾರ್ಲೋಸ್ ಅಲ್ಕರಾಜ್ ಮತ್ತು ರಾಫೆಲ್ ನಡಾಲ್ ಪುರುಷರ ಡಬಲ್ಸ್ ಸ್ಪರ್ಧೆಯಲ್ಲಿ 15 ರೋಲ್ಯಾಂಡ್ ಗ್ಯಾರೋಸ್(Roland Garros) ಪ್ರಶಸ್ತಿಗಳೊಂದಿಗೆ ಉತ್ತಮ ಪ್ರಾಬಲ್ಯ ಹೊಂದಿದ್ದಾರೆ. ಮುಂಬರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಟೆನಿಸ್ ಸ್ಪರ್ಧೆಯನ್ನು ಪ್ಯಾರಿಸ್‌ನ ಕ್ಲೇ ಕೋರ್ಟ್‌ನಲ್ಲಿ ಆಡಲಾಗುತ್ತದೆ. ಕ್ಲೇ ಕೋರ್ಟ್‌ ಕಿಂಗ್​ ಎನಿಸಿಕೊಂಡಿರುವ ನಡಾಲ್​ಗೆ ಪ್ರಶಸ್ತಿ ಗೆಲ್ಲಲು ಇದು ಉತ್ತಮ ಅವಕಾಶವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IND vs SA : ಭಾರತ ವಿರುದ್ಧ ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಪ್ರಕಟ

IND vs SA : ಲ್ಲಾ ಮೂರು ಪಂದ್ಯಗಳು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದೆ. ಏಕದಿನ ಮತ್ತು ಇತ್ತೀಚೆಗೆ ಮುಕ್ತಾಯಗೊಂಡ ಏಕೈಕ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡಲಾದ ತಮ್ಮ ತಂಡದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ. ಮೂರು ಪಂದ್ಯಗಳ ಏಕ ದಿನ ಸರಣಿಯಲ್ಲಿ ಭಾರತ ಕ್ಲೀನ್ ಸ್ವೀಪ್ ಸಾಧನೆ ಮಾಡಿದ್ದರೆ, ಏಕೈಕ ಟೆಸ್ಟ್​ನಲ್ಲಿ ಭಾರತವೇ ಗೆದ್ದಿದೆ.

VISTARANEWS.COM


on

IND vs SA
Koo

ಬೆಂಗಳೂರು: ಆತಿಥೇಯ ಭಾರತ ಮಹಿಳೆಯ ಕ್ರಿಕೆಟ್​ ತಂಡದ ವಿರುದ್ಧದ ಮೂರು ಪಂದ್ಯಗಳ ಟಿ 20 ಐ ಸರಣಿಗೆ (IND vs SA ) ದಕ್ಷಿಣ ಆಫ್ರಿಕಾ ಕ್ರಿಕೆಟ್​ ಸಂಸ್ಥೆ ಸೋಮವಾರ (ಜುಲೈ 1) ತನ್ನ ತಂಡವನ್ನು ಪ್ರಕಟಿಸಿದೆ. ಜುಲೈ 5 ರಿಂದ 9 ರವರೆಗೆ ಪಂದ್ಯಗಳು ನಡೆಯಲಿವೆ. ಎಲ್ಲಾ ಮೂರು ಪಂದ್ಯಗಳು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದೆ. ಏಕದಿನ ಮತ್ತು ಇತ್ತೀಚೆಗೆ ಮುಕ್ತಾಯಗೊಂಡ ಏಕೈಕ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡಲಾದ ತಮ್ಮ ತಂಡದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ. ಮೂರು ಪಂದ್ಯಗಳ ಏಕ ದಿನ ಸರಣಿಯಲ್ಲಿ ಭಾರತ ಕ್ಲೀನ್ ಸ್ವೀಪ್ ಸಾಧನೆ ಮಾಡಿದ್ದರೆ, ಏಕೈಕ ಟೆಸ್ಟ್​ನಲ್ಲಿ ಭಾರತವೇ ಗೆದ್ದಿದೆ.

ಕ್ಲೋಯಿ ಟ್ರಯಾನ್ ದಕ್ಷಿಣ ಆಫ್ರಿಕಾ ತಂಡಕ್ಕೆ ತಂಡಕ್ಕೆ ಸೇರಿದ ಆಟಗಾರ್ತಿ. ಬೆನ್ನುನೋವಿನಿಂದ ಚೇತರಿಸಿಕೊಂಡ ನಂತರ ಟ್ರಿಯಾನ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಅವರು ಈಗಾಗಲೇ ಭಾರತಕ್ಕೆ ಆಗಮಿಸಿದ್ದಾರೆ ಮತ್ತು ಚೆನ್ನೈನಲ್ಲಿ ನೆಟ್ ಅಭ್ಯಾಸ ನಡೆಸುತ್ತಿದ್ದಾರೆ. ಪ್ರವಾಸಿ ತಂಡ ಏಕ ದಿನ ಪಂದ್ಯವಾಡಿದ ಡೆಲ್ಮಿ ಟಕರ್ ಮತ್ತು ನೊಂಡುಮಿಸೊ ಶಂಗಾಸೆ ಅವರನ್ನು ಟಿ 20 ಪಂದ್ಯಗಳಿಗೆ ಸೇರಿಸದಿರಲು ನಿರ್ಧರಿಸಿದ್ದಾರೆ. ಆಲ್​ರೌಂಡರ್​ಗಳು ಟೆಸ್ಟ್ ಮತ್ತು ಏಕದಿನ ಪಂದ್ಯಗಳಿಗೆ ತಂಡದ ಭಾಗವಾಗಿದ್ದರು ಅವರು ಮನೆಗೆ ಮರಳಲಿದ್ದಾರೆ. ವಿಕೆಟ್ ಕೀಪರ್ ಮೈಕ್ ಡಿ ರೈಡರ್ ಕೂಡ ಟಿ 20 ಐ ತಂಡದ ಭಾಗವಾಗಿದ್ದಾರೆ. ಕಳೆದ ತಿಂಗಳು ಅವರು ಭಾರತ ವಿರುದ್ಧದ ಮೂರು ಏಕದಿನ ಪಂದ್ಯಗಳಲ್ಲಿ ಎರಡರಲ್ಲಿ ಆಡಿದ್ದರು.

ಟಿ20 ಸರಣಿಗೆ ಆಯ್ಕೆಯಾಗಿರುವ 15 ಆಟಗಾರರ ತಂಡದೊಂದಿಗೆ ನಾವು ಉತ್ಸುಕರಾಗಿದ್ದೇವೆ. ಗಾಯದಿಂದ ಚೇತರಿಸಿಕೊಂಡ ಕ್ಲೋಯ್ ಅವರನ್ನು ನಾವು ತಂಡಕ್ಕೆ ಸೇರಿಸಿದ್ದೇವೆ. ಅವರು ತಂಡಕ್ಕೆ ಸಾಕಷ್ಟು ಅನುಭವ ಹೊಂದಿದ್ದಾರೆ. ಅವರನ್ನು ಮತ್ತೆ ಅಂಗಣದಲ್ಲಿ ನೋಡಲು ನಾವು ಕಾಯಲು ಸಾಧ್ಯವಿಲ್ಲ ಎಂದು ದಕ್ಷಿಣ ಆಫ್ರಿಕಾ ಮಹಿಳಾ ತಂಡದ ಮಧ್ಯಂತರ ಮುಖ್ಯ ಕೋಚ್ ದಿಲ್ಲಾನ್ ಡು ಪ್ರೀಜ್ ಹೇಳಿದ್ದಾರೆ.

ಇದನ್ನೂ ಓದಿ: Virat Kohli : ಶುಭಾಶಯ ಕೋರಿದ ನರೇಂದ್ರ ಮೋದಿಗೆ ಪ್ರತಿಕ್ರಿಯೆ ಕೊಟ್ಟ ಕೊಹ್ಲಿ; ಇಲ್ಲಿದೆ ಅದರ ವಿವರ

ನಾವು ಭಾರತ ವಿರುದ್ಧ ಕೊನೆಯ ಮೂರು ಟಿ 20 ಪಂದ್ಯಗಳನ್ನು ಆಡಿದ್ದೇವೆ. ನಾವು ತವರಿಗೆ ಮರಳುವ ಮೊದಲು ಮತ್ತು ಬಾಂಗ್ಲಾದೇಶದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್​​ಗಾಗಿ ನಮ್ಮ ಅಂತಿಮ ಸಿದ್ಧತೆ ಪ್ರಾರಂಭಿಸಲಿದ್ದೇವೆ ಎಂದು ಡು ಪ್ರೀಜ್ ಹೇಳಿದರು.

ದಕ್ಷಿಣ ಆಫ್ರಿಕಾ ಮೇಲೆ ಸರಣಿ ಗೆಲುವು

ಏಕದಿನ ಮತ್ತು ಏಕೈಕ ಟೆಸ್ಟ್ ಪಂದ್ಯವನ್ನು ಸೋತ ನಂತರ ದಕ್ಷಿಣ ಆಫ್ರಿಕಾ ಮುಂಬರುವ ಟಿ 20 ಐ ಸರಣಿಯನ್ನು ಗೆಲ್ಲಲು ಮುಂದಾಗಿದೆ. ಆ ತಂಡ ಪ್ರವಾಸದಲ್ಲಿ ಇನ್ನೂ ಒಂದು ಪಂದ್ಯವನ್ನು ಗೆದ್ದಿಲ್ಲ ಮತ್ತು ಮುಂಬರುವ ಸರಣಿಯಲ್ಲಿ ಸೋಲಿನ ಸರಣಿಯನ್ನು ಮುರಿಯು ಭರವಸೆಯಲ್ಲಿದ್ದಾರೆ. ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದಿದ್ದ ಭಾರತ, ಟೆಸ್ಟ್​​ನಲ್ಲೂ 10 ವಿಕೆಟ್​ಗಳ ಭರ್ಜರಿ ಗೆಲುವು ಕಂಡಿತ್ತು.

ಭಾರತ ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ತಂಡ:

ಲಾರಾ ವೊಲ್ವಾರ್ಡ್ (ನಾಯಕಿ), ಅನ್ನೆಕ್ ಬಾಷ್, ತಜ್ಮಿನ್ ಬ್ರಿಟ್ಸ್, ನಾಡಿನ್ ಡಿ ಕ್ಲೆರ್ಕ್, ಅನಾರಿ ಡಿರ್ಕ್ಸೆನ್, ಮೈಕ್ ಡಿ ರೀಡರ್, ಸಿನಾಲೊ ಜಫ್ತಾ, ಮಾರಿಜಾನೆ ಕಾಪ್, ಅಯಬೊಂಗಾ ಖಾಕಾ, ಮಸಾಬಟಾ ಕ್ಲಾಸ್, ಸುನೆ ಲೂಸ್, ಎಲಿಸ್-ಮೇರಿ ಮಾರ್ಕ್ಸ್, ನೊಂಕುಲುಲೆಕೊ ಮಲಾಬಾ, ತುಮಿ ಸೆಖುಖುನೆ, ಕ್ಲೋಯ್ ಟ್ರಿಯಾನ್.

Continue Reading

ಕ್ರಿಕೆಟ್

Virat Kohli : ಶುಭಾಶಯ ಕೋರಿದ ನರೇಂದ್ರ ಮೋದಿಗೆ ಪ್ರತಿಕ್ರಿಯೆ ಕೊಟ್ಟ ಕೊಹ್ಲಿ; ಇಲ್ಲಿದೆ ಅದರ ವಿವರ

Virat Kohli: “ಪ್ರೀತಿಯ ನರೇಂದ್ರ ಮೋದಿ ಸರ್, ನಿಮ್ಮ ಪ್ರೀತಿಯ ಮಾತುಗಳಿಗೆ ಮತ್ತು ನಿಮ್ಮ ಬೆಂಬಲ ಮತ್ತು ಪ್ರೋತ್ಸಾಹಕ್ಕೆ ತುಂಬಾ ಧನ್ಯವಾದಗಳು. ಕಪ್ ಗೆದ್ದ ಈ ತಂಡದ ಭಾಗವಾಗಿರುವುದು ಒಂದು ಸೌಭಾಗ್ಯ . ಇದು ಇಡೀ ರಾಷ್ಟ್ರಕ್ಕೆ ಸಂತೋಷ ನೀಡಿದ ಈ ಕ್ಷಣದ ಸಂಭ್ರಮ ನಮಗಿದೆ ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Virat Kohli
Koo

ನವದೆಹಲಿ: ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ (T20 World Cup 2024 ಚಾಂಪಿಯನ್​ ಪಟ್ಟ ಅಲಂಕರಿಸಿದ್ದ ಭಾರತ ತಂಡದ ಆಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿದ ಶುಭಾಶಯ ತಿಳಿಸಿದ್ದರು. ಇದೇ ವೇಳೆ ಟಿ20 ಮಾದರಿಯಲ್ಲಿ ನಿವೃತ್ತಿ ಪಡೆದ ಕೊಹ್ಲಿ, ಹಾಗೂ ರೋಹಿತ್​ಗೂ ವಿಶೇಷ ಹಾರೈಕೆಗಳನ್ನು ತಿಳಿಸಿದ್ದರು. ಆ ಸಂದೇಶಕ್ಕೆ ವಿರಾಟ್ ಕೊಹ್ಲಿ (Virat Kohli) ಪ್ರತಿಕ್ರಿಯೆ ನೀಡಿದ್ದು, ನಿಮ್ಮ ಬೆಂಬಲಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಫೈನಲ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಮಣಿಸಿದ ಭಾರತ ಇತಿಹಾಸದಲ್ಲಿ ಎರಡನೇ ಬಾರಿಗೆ ಟಿ 20 ವಿಶ್ವಕಪ್ ಅನ್ನು ಗೆದ್ದುಕೊಂಡಿತು. 2007 ರಲ್ಲಿ ಉದ್ಘಾಟನಾ ಆವೃತ್ತಿಯನ್ನು ಗೆದ್ದ ನಂತರ ಮೊದಲ ಬಾರಿಗೆ ಈ ಟ್ರೋಫಿ ಗೆದ್ದಿತು. ಸೆಮಿಫೈನಲ್ ತನಕ ಬ್ಯಾಟಿಂಗ್​ನಲ್ಲಿ ಹೆಣಗಾಡುತ್ತಿದ್ದ ವಿರಾಟ್ ಕೊಹ್ಲಿ, ಫೈನಲ್​​ನಲ್ಲಿ ನಿರ್ಣಾಯಕ ಅರ್ಧ ಶತಕ ಬಾರಿಸಿದ್ದರು.

ಭಾರತ 5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 34 ರನ್ ಗಳಿಸಿತ್ತು. ಆದರೆ ಮಾಜಿ ನಾಯಕ ಕೊಹ್ಲಿ 76 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಉತ್ತರವಾಗಿ ದಕ್ಷಿಣ ಆಫ್ರಿಕಾ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತು. ವಿಜಯದ ನಂತರ, ಪ್ರಧಾನಿ ಮೋದಿ ಟೀಮ್ ಇಂಡಿಯಾ ಸದಸ್ಯರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದರು. ಸ್ಮರಣೀಯ ವಿಜಯಕ್ಕಾಗಿ ಅವರನ್ನು ಅಭಿನಂದಿಸಿದ್ದರು.

ಮೋದಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ವಿಶೇಷ ಸಂದೇಶಗಳನ್ನು ಪೋಸ್ಟ್ ಮಾಡಿದ್ದರು. ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಪಂದ್ಯದ ನಂತರ ಟಿ 20 ಯಿಂದ ನಿವೃತ್ತಿ ಘೋಷಿಸಿದರು, ಆದರೆ ಪಂದ್ಯಾವಳಿಯು ದ್ರಾವಿಡ್ ಅವರ ಕೊನೆಯ ಕೋಚಿಂಗ್​​ ನೇಮಕವಾಗಿತ್ತು. ಫೈನಲ್​​ನಲ್ಲಿ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್​​ಗಾಗಿ ಕೊಹ್ಲಿಯನ್ನು ಪ್ರಧಾನಿ ಶ್ಲಾಘಿಸಿದ್ದರು. ಎಕ್ಸ್ ಮೂಲಕ ವಿಶೇಷ ಸಂದೇಶ ಪೋಸ್ಟ್ ಮಾಡಿದ್ದರು.

ಪ್ರಧಾನಿ ಮೋದಿಯವರ ಸಂದೇಶಕ್ಕೆ ಕೊಹ್ಲಿ ಸೋಮವಾರ (ಜುಲೈ 1) ಉತ್ತರಿಸಿದ್ದಾರೆ. ಎಕ್ಸ್ ನಲ್ಲಿ, ಭಾರತದ ಬ್ಯಾಟಿಂಗ್ ಸೂಪರ್ ಸ್ಟಾರ್ ತಮ್ಮನ್ನು ಪ್ರೋತ್ಸಾಹಿಸಿದ್ದಕ್ಕಾಗಿ ಪ್ರಧಾನಿಗೆ ಧನ್ಯವಾದ ಅರ್ಪಿಸಿದ್ದಾರೆ.

ಪ್ರೀತಿಯ ನರೇಂದ್ರ ಮೋದಿ ಸರ್, ನಿಮ್ಮ ಪ್ರೀತಿಯ ಮಾತುಗಳಿಗೆ ಮತ್ತು ನಿಮ್ಮ ಬೆಂಬಲ ಮತ್ತು ಪ್ರೋತ್ಸಾಹಕ್ಕೆ ತುಂಬಾ ಧನ್ಯವಾದಗಳು. ಕಪ್ ಗೆದ್ದ ಈ ತಂಡದ ಭಾಗವಾಗಿರುವುದು ಒಂದು ಸೌಭಾಗ್ಯ . ಇದು ಇಡೀ ರಾಷ್ಟ್ರಕ್ಕೆ ಸಂತೋಷ ನೀಡಿದ ಈ ಕ್ಷಣದ ಸಂಭ್ರಮ ನಮಗಿದೆ ಎಂದು ಬರೆದುಕೊಂಡಿದ್ದಾರೆ.

ವಿರಾಟ್ ಕೊಹ್ಲಿಯ ಅದ್ಭುತ ಟಿ 20 ಐ ವೃತ್ತಿಜೀವನ

ಟಿ20 ಕ್ರಿಕೆಟ್​​ನಲ್ಲಿ ಅತ್ಯಂತ ಬಲಿಷ್ಠ ಬ್ಯಾಟರ್​ಗಳಲ್ಲಿ ಒಬ್ಬರಾಗಿ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದಾರೆ. 2010 ರಲ್ಲಿ ಆಟದ ಕಿರು ಸ್ವರೂಪದಲ್ಲಿ ಪಾದಾರ್ಪಣೆ ಮಾಡಿದ ಬ್ಯಾಟಿಂಗ್ ದಿಗ್ಗಜ 2012 ರಲ್ಲಿ ಮೊದಲ ಟಿ 20 ವಿಶ್ವಕಪ್​​ನಲ್ಲಿ ಆಡಿದ್ದರು.

ಇದನ್ನೂ ಓದಿ: ZIM v IND 2024: ಭಾರತ ವಿರುದ್ಧ ಟಿ20 ಸರಣಿಗೆ ಜಿಂಬ್ವಾಬ್ವೆ ತಂಡ ಪ್ರಕಟ, ಸಿಕಂದರ್​ ನಾಯಕ

ಬ್ಯಾಟಿಂಗ್ ಘಟಕದ ಮುಖ್ಯ ಆಧಾರವಾಗುವ ಜತೆಗೆ ಟಿ 20 ಐ ತಂಡದ ಅವಿಭಾಜ್ಯ ಸದಸ್ಯರಾಗಲು ಹೆಚ್ಚು ಸಮಯ ತೆಗೆದುಕೊಳ್ಳಲಿಲ್ಲ. ವಿರಾಟ್ ಕೊಹ್ಲಿ ಒಟ್ಟು 125 ಟಿ 20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಈ ಸ್ವರೂಪದಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದವರು. ರೋಹಿತ್ ಶರ್ಮಾ ಮಾತ್ರ ಟಿ20ಐನಲ್ಲಿ ಅವರಿಗಿಂತ ಹೆಚ್ಚು ರನ್ ಗಳಿಸಿದ್ದಾರೆ.

125 ಪಂದ್ಯಗಳನ್ನಾಡಿರುವ ಕೊಹ್ಲಿ 48.69ರ ಸರಾಸರಿಯಲ್ಲಿ 4188 ರನ್ ಗಳಿಸಿದ್ದಾರೆ. ಅವರು ಟಿ 20 ಪಂದ್ಯಗಳಲ್ಲಿ ಒಂದು ಶತಕ ಮತ್ತು 38 ಅರ್ಧಶತಕಗಳನ್ನು ಬಾರಿಸಿದ್ದಾರೆ. ಟಿ 20 ವಿಶ್ವಕಪ್​ನಲ್ಲಿ ದಾಖಲೆಯೂ ಅಷ್ಟೇ ಪ್ರಭಾವಶಾಲಿಯಾಗಿದೆ. ಕೊಹ್ಲಿ ಪ್ರಸ್ತುತ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. 35 ಪಂದ್ಯಗಳಲ್ಲಿ 15 ಅರ್ಧಶತಕಗಳ ಸಹಾಯದಿಂದ 1292 ರನ್ ಗಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

ZIM v IND 2024: ಭಾರತ ವಿರುದ್ಧ ಟಿ20 ಸರಣಿಗೆ ಜಿಂಬ್ವಾಬ್ವೆ ತಂಡ ಪ್ರಕಟ, ಸಿಕಂದರ್​ ನಾಯಕ

ZIM v IND 2024 :ಭಾರತ ವಿರುದ್ಧದ ಸರಣಿಯಲ್ಲಿ ನಖ್ವಿಯ ಭಾಗವಹಿಸುವಿಕೆ ಅವರ ಪೌರತ್ವದ ಸ್ಥಾನಮಾನದ ದೃಢೀಕರಣಕ್ಕೆ ಒಳಪಟ್ಟಿರುತ್ತದೆ ಎಂದು ಜಿಂಬಾಬ್ವೆ ಕ್ರಿಕೆಟ್ ಪ್ರಕಟಣೆಯಲ್ಲಿ ತಿಳಿಸಿದೆ. ಆಸ್ಟ್ರೇಲಿಯಾಕ್ಕೆ ತೆರಳುವ ಮೊದಲು ಬೆಲ್ಜಿಯಂನ ಬ್ರಸೆಲ್​​ನಲ್ಲಿ ಪಾಕಿಸ್ತಾನಿ ಪೋಷಕರಿಗೆ ಜನಿಸಿದ್ದರು ನಖ್ವಿ. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅವರು ಜಿಂಬಾಬ್ವೆಯನ್ನು ಪ್ರತಿನಿಧಿಸುವ ಬಯಕೆ ವ್ಯಕ್ತಪಡಿಸಿದ್ದರು. ಹೀಗಾಗಿ ಅವರನ್ನು ಭಾರತ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾಗಿತ್ತು.

VISTARANEWS.COM


on

ZIM v IND 2024
Koo

ಬೆಂಗಳೂರು: ಜಿಂಬಾಬ್ವೆಯ ರಾಜಧಾನಿ ಹರಾರೆಯಲ್ಲಿ ಜುಲೈ 6 ರಂದು ಪ್ರಾರಂಭವಾಗಲಿರುವ ವಿಶ್ವ ಚಾಂಪಿಯನ್ ಭಾರತ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಗೆ (ZIM v IND 2024) ಜಿಂಬಾಬ್ವೆ ಕ್ರಿಕೆಟ್​ ಸಂಸ್ಥೆ ಸೋಮವಾರ (ಜುಲೈ 1) ತನ್ನ ತಂಡವನ್ನು ಪ್ರಕಟಿಸಿದೆ. ಅನುಭವಿ ಆಲ್​ರೌಂಡರ್​ ಸಿಕಂದರ್ ರಾಜಾ ಅವರನ್ನು ಜಿಂಬಾಬ್ವೆ ತಂಡದ ನಾಯಕರನ್ನಾಗಿ ಘೋಷಿಸಲಾಗಿದೆ. ತಂಡದಲ್ಲಿ ಬೆಲ್ಜಿಯಂ ಮೂಲದ ಆಟಗಾರ ಅಂಟಮ್ ನಖ್ವಿ ಕೂಡ ಸೇರಿಕೊಂಡಿದ್ದಾರೆ.

ಭಾರತ ವಿರುದ್ಧದ ಸರಣಿಯಲ್ಲಿ ನಖ್ವಿಯ ಭಾಗವಹಿಸುವಿಕೆ ಅವರ ಪೌರತ್ವದ ಸ್ಥಾನಮಾನದ ದೃಢೀಕರಣಕ್ಕೆ ಒಳಪಟ್ಟಿರುತ್ತದೆ ಎಂದು ಜಿಂಬಾಬ್ವೆ ಕ್ರಿಕೆಟ್ ಪ್ರಕಟಣೆಯಲ್ಲಿ ತಿಳಿಸಿದೆ. ಆಸ್ಟ್ರೇಲಿಯಾಕ್ಕೆ ತೆರಳುವ ಮೊದಲು ಬೆಲ್ಜಿಯಂನ ಬ್ರಸೆಲ್​​ನಲ್ಲಿ ಪಾಕಿಸ್ತಾನಿ ಪೋಷಕರಿಗೆ ಜನಿಸಿದ್ದರು ನಖ್ವಿ. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅವರು ಜಿಂಬಾಬ್ವೆಯನ್ನು ಪ್ರತಿನಿಧಿಸುವ ಬಯಕೆ ವ್ಯಕ್ತಪಡಿಸಿದ್ದರು. ಹೀಗಾಗಿ ಅವರನ್ನು ಭಾರತ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾಗಿತ್ತು.

ಕೆರಿಬಿಯನ್ ಮತ್ತು ಯುಎಸ್ಎಯಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆಯಲು ಜಿಂಬಾಬ್ವೆ ತಂಡ ವಿಫಲಗೊಂಡಿತ್ತು. ಆ ಬಳಿ ಜಿಂಬಾಬ್ವೆ ಹೊಸ ಮುಖ್ಯ ಕೋಚ್ ಜಸ್ಟಿನ್ ಸಮ್ಮನ್ಸ್ ಅವರ ಅಡಿಯಲ್ಲಿ ತಂಡವನ್ನು ಪುನರ್​ರಚನೆ ಮಾಡಲಾಯಿತು. ಇತ್ತೀಚೆಗೆ ಮುಕ್ತಾಯಗೊಂಡ ಟಿ 20 ವಿಶ್ವಕಪ್​ಗೆ ಅರ್ಹತೆ ಪಡೆಯಲು ವಿಫಲವಾದ ನಂತರ ಹೊಸ ಮುಖ್ಯ ಕೋಚ್ ಜಸ್ಟಿನ್ ಸಮ್ಮನ್ಸ್ ಅವರ ಅಡಿಯಲ್ಲಿ ಪುನರ್ನಿರ್ಮಾಣ ಮಾಡುವ ಗುರಿಯನ್ನು ಹೊಂದಿರುವ ಜಿಂಬಾಬ್ವೆ, ರಾಜಾ ನೇತೃತ್ವದ ಯುವ ತಂಡವನ್ನು ಆಯ್ಕೆ ಮಾಡಿದೆ. ಇದು ಭಾರತ ವಿರುದ್ಧ ಆಡಿ ತನ್ನು ಅನುಭವ ಹೆಚ್ಚಿಸಿಕೊಳ್ಳಲಿದೆ.

ಇದನ್ನೂ ಓದಿ: IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್​​ನಲ್ಲಿ ಮಹಿಳೆಯರ ತಂಡಕ್ಕೆ10 ವಿಕೆಟ್​ ಭರ್ಜರಿ ಭರ್ಜರಿ ಜಯ

86 ಟಿ 20 ಪಂದ್ಯಗಳನ್ನು ಹೊಂದಿರುವ ನಾಯಕ ರಾಜಾ ತಂಡದ ಅತ್ಯಂತ ಅನುಭವಿ ಆಟಗಾರ. ಲ್ಯೂಕ್ ಜಾಂಗ್ವೆ ಜಿಂಬಾಬ್ವೆ ಪರ ಚುಟುಕು ಸ್ವರೂಪದಲ್ಲಿ 63 ಪಂದ್ಯಗಳನ್ನು ಆಡಿದ ಇನ್ನೊಬ್ಬ ಆಟಗಾರ. ವೇಗದ ಬೌಲರ್​ಗಳಾದ ರಿಚರ್ಡ್ ಎನ್ಗರವ (52 ಟಿ 20 ಐ) ಮತ್ತು ಬ್ಲೆಸ್ಸಿಂಗ್ ಮುಜರಬಾನಿ (51 ಟಿ 20 ಐ) ತಂಡದಲ್ಲಿರುವ ಇತರ ಅನುಭವಿ ಕ್ರಿಕೆಟಿಗರು. ಅಲ್ಲಿನ ಅನುಭವಿ ಆಟಗಾರರಾದ ಕ್ರೇಗ್ ಎರ್ವಿನ್ ಮತ್ತು ಸೀನ್ ವಿಲಿಯಮ್ಸ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ರಿಯಾನ್ ಬರ್ಲ್, ಜಾಯ್ಲಾರ್ಡ್ ಗುಂಬಿ ಮತ್ತು ಐನ್ಸ್ಲೆ ಎನ್ಡ್ಲೋವು ಕೂಡ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

ಜಿಂಬಾಬ್ವೆ ತಂಡ: ಸಿಕಂದರ್ ರಾಜಾ (ನಾಯಕ), ಅಕ್ರಮ್ ಫರಾಜ್, ಬೆನೆಟ್ ಬ್ರಿಯಾನ್, ಕ್ಯಾಂಪ್ಬೆಲ್ ಜೋನಾಥನ್, ಚಟಾರಾ ತೆಂಡೈ, ಜೊಂಗ್ವೆ ಲ್ಯೂಕ್, ಕೈಯಾ ಇನ್ನೋಸೆಂಟ್, ಮದಂಡೆ ಕ್ಲೈವ್, ಮಡ್ವೆರೆ ವೆಸ್ಲಿ, ಮಾವುಮಣಿ ತಡಿವಾನಾಶೆ, ಮಸಕಡ್ಜಾ ವೆಲ್ಲಿಂಗ್ಟನ್, ಮಾವುಟಾ ಬ್ರಾಂಡನ್, ಮುಜರಬಾನಿ ಬ್ಲೆಸ್ಸಿಂಗ್, ಮೈಯರ್ಸ್ ಡಿಯೋನ್, ನಖ್ವಿ ಅಂಟಮ್, ಎನ್ಗರವಾ ರಿಚರ್ಡ್, ಶುಂಬಾ ಮಿಲ್ಟನ್.

Continue Reading

ಪ್ರಮುಖ ಸುದ್ದಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್​​ನಲ್ಲಿ ಮಹಿಳೆಯರ ತಂಡಕ್ಕೆ10 ವಿಕೆಟ್​ ಭರ್ಜರಿ ಭರ್ಜರಿ ಜಯ

IND vs SA: ಚೆನ್ನೈನ ಎಂಎ ಚಿದಂಬರಂ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಟೆಸ್ಟ್​ ಪಂದ್ಯದಲ್ಲಿ ಗೆಲುವಿಗೆ 37 ರನ್​​ಗಳ ಗುರಿ ಪಡೆದಿದ್ದ ಭಾರತ 9.2 ಓವರ್​​ಗಳಲ್ಲಿ ವಿಜಯ ದಾಖಲಿಸಿತು. ಶಫಾಲಿ ವರ್ಮಾ ಮತ್ತೆ 24 ರನ್, ಶುಭಾ ಸತೀಶ್ 13 ರನ್ ​ಗಳಿಸಿ ಅಜೇಯರಾಗಿ ಉಳಿದರು.

VISTARANEWS.COM


on

IND vs SA:
Koo

ಚೆನ್ನೈ: ಬ್ಯಾಟಿಂಗ್​​ನಲ್ಲಿ ಶಫಾಲಿ ವರ್ಮಾ ಅವರ ದಾಖಲೆಯ ದ್ವಿಶತಕ (205), ಸ್ಮೃತಿ ಮಂಧಾನ ಬಾರಿಸಿದ ಅಮೋಘ ಶತಕ (149) ಹಾಗೂ ಸ್ನೆಹ್ ರಾಣಾ ಅವರ ವಿಶ್ವ ದಾಖಲೆಯ 10 ವಿಕೆಟ್​ಗಳ ನೆರವು ಪಡೆದ ಭಾರತ ಮಹಿಳೆಯ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್​ ಪಂದ್ಯದಲ್ಲಿ (IND vs SA) 10 ವಿಕೆಟ್​ಗಳ ಭರ್ಜರಿ ವಿಜಯ ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಟೆಸ್ಟ್​ ಪಂದ್ಯದಲ್ಲಿ ಗೆಲುವಿಗೆ 37 ರನ್​​ಗಳ ಗುರಿ ಪಡೆದಿದ್ದ ಭಾರತ 9.2 ಓವರ್​​ಗಳಲ್ಲಿ ವಿಜಯ ದಾಖಲಿಸಿತು. ಶಫಾಲಿ ವರ್ಮಾ ಮತ್ತೆ 24 ರನ್, ಶುಭಾ ಸತೀಶ್ 13 ರನ್ ​ಗಳಿಸಿ ಅಜೇಯರಾಗಿ ಉಳಿದರು.

ಟಾಸ್ ಗೆದ್ದು ಮೊದಲ ಬ್ಯಾಟ್​ ಮಾಡಿದ ಹರ್ಮನ್​ಪ್ರೀತ್ ಬಳಗ ಬೃಹತ್​ ಮೊತ್ತವನ್ನು ಪೇರಿಸಿತು. 115.1 ಓವರ್​​​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 603 ರನ್ ದಾಖಲಿಸಿತು ಇದು ಮಹಿಳಾ ಟೆಸ್ಟ್​ ಕ್ರಿಕೆಟ್​​ನಲ್ಲಿ ವಿಶ್ವದಾಖಲೆಯ ಮೊತ್ತ. ಪ್ರತಿಯಾಗಿ ಆಡಿದ ದಕ್ಷಿಣ ಆಫ್ರಿಕಾ ಮಹಿಳೆಯರ ಬಳಗ ಮೊದಲ ಇನ್ನಿಂಗ್ಸ್​​ನಲ್ಲಿ 84.3 ಓವರ್​ಗಳಿಗೆ 266 ರನ್ ಬಾರಿಸಿ ಆಲ್ಔಟ್ ಆಯಿತು. 337 ರನ್​ಗಳ ಹಿನ್ನಡೆಯೊಂದಿಗೆ ಫಾಲೋ ಆನ್​ಗೆ ಗುರಿಯಾಯಿತು. ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಫ್ರಿಕಾ, 373 ಗಳಿಸಿಇತು. ಭಾರತ 37 ರನ್​ಗಳ ಗುರಿ ಪಡೆದು ಸುಲಭ ಜಯ ದಾಖಲಿಸಿತು.

ಮಿಂಚಿದ ಆರಂಭಿಕರು

ಭಾರತದ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ ಪಂದ್ಯದಲ್ಲಿ ಅತಿವೇಗದ ದ್ವಿಶತಕ ಹಾಗೂ ಸ್ಮೃತಿ ಮಂಧಾನ ಶತಕ ಸಿಡಿಸಿದರು. ಹೀಗಾಗಿ ಮೊದಲ ವಿಕೆಟ್​ಗೆ 292 ರನ್​ಗಳ ಜತೆಯಾಟ ಸಿಕ್ಕಿತು. ಸ್ಮೃತಿ ಮಂಧಾನ 161 ಬಾಲ್​ಗಳಲ್ಲಿ 26 ಬೌಂಡರಿ, 1 ಸಿಕ್ಸರ್ ಸಹಿತ 149 ರನ್ ಗಳಿಸಿ ಔಟಾದರು. ಶಫಾಲಿ 197 ಎಸೆತಗಳಲ್ಲಿ 23 ಬೌಂಡರಿ, 8 ಸಿಕ್ಸರ್ ಸಹಿತ ದಾಖಲೆಯ ಹಾಗೂ ದ್ವಿಶತಕ ಸಿಡಿಸಿದರು. ಬಳಿಕ ಜೆಮಿಮಾ ರೋಡ್ರಿಗಸ್ 55, ಹರ್ಮನ್​ಪ್ರೀತ್ ಕೌರ್ 69, ರಿಚಾ ಘೋಷ್ 86 ರನ್ ಸಿಡಿಸಿದರು.

ಸ್ನೇಹ್ ರಾಣಾ ದಾಳಿಗೆ ಕುಸಿದ ಪ್ರವಾಸಿ ತಂತ

ಮೊದಲ ಇನ್ನಿಂಗ್ಸ್​ ಬ್ಯಾಟ್​ ಮಾಡಿದ ದಕ್ಷಿಣ ಆಫ್ರಿಕಾ ಸ್ನೇಹ್ ರಾಣಾ ಬೌಲಿಂಗ್ ದಾಳಿಗೆ ತತ್ತರಿಸಿತು. ಇದರ ನಡುವೆಯೂ ಸುನೆ ಲುಸ್ (65) ಮತ್ತು ಮರಿಜಾನ್ನೆ ಕಪ್ (74) ಮೊದಲ ಇನ್ನಿಂಗ್ಸ್​ನಲ್ಲಿ ಅರ್ಧಶತಕ ಸಿಡಿಸಿದರು. ದೀಪ್ತಿ ಶರ್ಮಾ 2 ವಿಕೆಟ್ ಪಡೆದರೆ, ಸ್ನೇಹ್​ ರಾಣಾ 8 ವಿಕೆಟ್ ಕಿತ್ತರು. ವೋಲ್ವಾರ್ಡ್ (20), ಅನ್ನೆಕೆ ಬಾಷ್ (39), ನಾಡಿನ್ ಡಿ ಕ್ಲರ್ಕ್ (39) ಸಣ್ಣ ಮೊತ್ತಗಳನ್ನು ಪೇರಿಸಿದರು. ಆದಾಗ್ಯೂ 266 ರನ್​​ಗಳಿಗೆ ಆಲೌಟ್ ಆಯಿತು. 337 ರನ್​ಗಳ ಹಿನ್ನಡೆ ಅನುಭವಿಸಿತು. ಹೀಗಾಗಿ ಭಾರತ ಫಾಲೋಆನ್ ಹೇರಿತು.

ವೋಲ್ವರ್ತ್​​ ಮತ್ತು ಸುನೆ ಲೂಸ್ ಶತಕ

337 ರನ್​ಗಳ ಹಿನ್ನಡೆ ಅನುಭವಿಸಿದ ಪ್ರವಾಸಿ ಎರಡನೇ ಇನ್ನಿಂಗ್ಸ್​ನಲ್ಲಿ ಉತ್ತಮ ಪ್ರದರ್ಶನ ನೀಡಿತು. ನಾಯಕಿ ಲಾರಾ ವೋಲ್ವರ್ತ್​​ ಮತ್ತು ಸುನೆ ಲುಸ್​ ಶತಕ ಸಿಡಿಸಿ ಗಮನ ಸೆಳೆದರು. ಲಾರಾ 16 ಬೌಂಡರಿ ಸಹಿತ 122 ರನ್ ಬಾರಿಸಿದರೆ ಲುಸ್​ 203 ಎಸೆತಗಳಲ್ಲಿ 18 ಬೌಂಡರಿ ಸಹಿತ 109 ರನ್ ಗಳಿಸಿದರು. ನಾಡಿನ್ ಡಿ ಕ್ಲರ್ಕ್ (61) ಅರ್ಧಶತಕ ಸಿಡಿಸಿದರು. ಮೊದಲ ಇನ್ನಿಂಗ್ಸ್​​ನಲ್ಲಿ 8 ವಿಕೆಟ್ ಕಿತ್ತಿದ್ದ ಸ್ನೆಹ್ ರಾಣಾ ಎರಡನೇ ಇನ್ನಿಂಗ್ಸ್​​ನಲ್ಲಿ 2 ವಿಕೆಟ್ ಪಡೆದರು. ದೀಪ್ತಿ ಶರ್ಮಾ, ರಾಜೇಶ್ವರಿ ಗಾಯಕ್ವಾಡ್ ತಲಾ 2 ವಿಕೆಟ್, ಶಫಾಲಿ ವರ್ಮಾ, ಹರ್ಮನ್ ಪ್ರೀತ್ ಕೌರ್ ತಲಾ 1 ವಿಕೆಟ್ ಪಡೆದು ದಕ್ಷಿಣ ಆಫ್ರಿಕಾದ ಆಟವನ್ನು ಕೊನೆಗೊಳಿಸಿದರು.

ಭಾರತಕ್ಕೆ 37 ರನ್​​ಗಳ ಗುರಿ ಸಿಕ್ಕಿತು. 4ನೇ ದಿನದಾಟದ ಕೊನೆಯಲ್ಲಿ ಸಾಧಾರಣ ಗುರಿ ಬೆನ್ನಟ್ಟಿದ ಭಾರತ 9.2 ಓವರ್​​​ಗಳಲ್ಲೇ 37 ರನ್ ಗಳಿಸಿತು. ಟೆಸ್ಟ್ ಸರಣಿಗೂ ಮುನ್ನ ಸೌತ್ ಆಫ್ರಿಕಾ ವಿರುದ್ಧ ನಡೆದಿದ್ದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲೂ ಭಾರತ ಕ್ಲೀನ್ ಸ್ವೀಪ್ ಸಾಧನೆ ಮಾಡಿತ್ತು.

Continue Reading
Advertisement
IND vs SA
ಪ್ರಮುಖ ಸುದ್ದಿ22 mins ago

IND vs SA : ಭಾರತ ವಿರುದ್ಧ ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಪ್ರಕಟ

Mangalore Jail
ಕರ್ನಾಟಕ33 mins ago

Mangalore Jail: ಮಂಗಳೂರು ಜೈಲಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ; ಇಬ್ಬರಿಗೆ ಗಾಯ

Virat Kohli
ಕ್ರಿಕೆಟ್46 mins ago

Virat Kohli : ಶುಭಾಶಯ ಕೋರಿದ ನರೇಂದ್ರ ಮೋದಿಗೆ ಪ್ರತಿಕ್ರಿಯೆ ಕೊಟ್ಟ ಕೊಹ್ಲಿ; ಇಲ್ಲಿದೆ ಅದರ ವಿವರ

Challa Sreenivasulu Setty
ವಾಣಿಜ್ಯ47 mins ago

Challa Sreenivasulu Setty: ಚಲ್ಲಾ ಶ್ರೀನಿವಾಸುಲು ಸೆಟ್ಟಿ; ಅಂದು ಪ್ರೊಬೆಷನರಿ ಅಧಿಕಾರಿ, ಈಗ ಎಸ್‌ಬಿಐ ಅಧ್ಯಕ್ಷ!

CM Siddaramaiah
ವೈರಲ್ ನ್ಯೂಸ್1 hour ago

CM Siddaramaiah: ಏರ್‌ಪೋರ್ಟ್‌ನಲ್ಲೇ ಟಿ20 ವಿಶ್ವಕಪ್‌ ಫೈನಲ್‌ ವೀಕ್ಷಿಸಿದ್ದ ಸಿಎಂ ಸಿದ್ದರಾಮಯ್ಯ; 70 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡ ವಿಡಿಯೊ!

Sha Rukh Khan
Latest1 hour ago

Sha Rukh Khan: ಸಾಲದ ಇಎಂಐ ಕಟ್ಟಲಾಗದೆ ಕಾರನ್ನು ಕಳೆದುಕೊಂಡಿದ್ದ ಶಾರುಖ್ ಖಾನ್!

ZIM v IND 2024
ಪ್ರಮುಖ ಸುದ್ದಿ1 hour ago

ZIM v IND 2024: ಭಾರತ ವಿರುದ್ಧ ಟಿ20 ಸರಣಿಗೆ ಜಿಂಬ್ವಾಬ್ವೆ ತಂಡ ಪ್ರಕಟ, ಸಿಕಂದರ್​ ನಾಯಕ

A total of Rs 13.93 crore livelihood relief for the farmer families of the district says DC Gangubai Manakar
ಉತ್ತರ ಕನ್ನಡ1 hour ago

Uttara Kannada News: ಜಿಲ್ಲೆಯ ರೈತ ಕುಟುಂಬಗಳಿಗೆ 13.93 ಕೋಟಿ ರೂ. ಜೀವನೋಪಾಯ ಪರಿಹಾರ: ಡಿಸಿ

IND vs SA:
ಪ್ರಮುಖ ಸುದ್ದಿ2 hours ago

IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್​​ನಲ್ಲಿ ಮಹಿಳೆಯರ ತಂಡಕ್ಕೆ10 ವಿಕೆಟ್​ ಭರ್ಜರಿ ಭರ್ಜರಿ ಜಯ

Viral News
Latest2 hours ago

Viral News: ಮಹಿಳೆಯ ಬೆತ್ತಲೆ ದೇಹದ ಮೇಲೆ ಮೃಷ್ಟಾನ್ನ ಬಡಿಸುವ ರೆಸ್ಟೋರೆಂಟ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ4 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ1 day ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌