Shakib Al Hasan: ನಿವೃತ್ತಿಯಾಗಿ ಎಂದು ಲೇವಡಿ ಮಾಡಿದ ಸೆಹವಾಗ್​ಗೆ ತಕ್ಕ ತಿರುಗೇಟು ನೀಡಿದ ಬಾಂಗ್ಲಾ ನಾಯಕ - Vistara News

ಕ್ರೀಡೆ

Shakib Al Hasan: ನಿವೃತ್ತಿಯಾಗಿ ಎಂದು ಲೇವಡಿ ಮಾಡಿದ ಸೆಹವಾಗ್​ಗೆ ತಕ್ಕ ತಿರುಗೇಟು ನೀಡಿದ ಬಾಂಗ್ಲಾ ನಾಯಕ

Shakib Al Hasan: ನೆದರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಶಕೀಬ್​ ಅವರು ಅಜೇಯ 64 ರನ್​ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಈ ಮ್ಯಾಚ್​ ವಿನ್ನಿಂಗ್​ ಪ್ರದರ್ಶನಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು.

VISTARANEWS.COM


on

Shakib Al Hasan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನ್ಯೂಯಾರ್ಕ್​: ಕಳೆದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಬಾಂಗ್ಲಾದೇಶ ತಂಡದ ನಾಯಕ ಶಕೀಬ್​ ಅಲ್​ ಹಸನ್(Shakib Al Hasan)​ ಅವರನ್ನು ಬಾಂಗ್ಲಾ ಕ್ರಿಕೆಟ್ ಮಂಡಳಿ ಕೈಬಿಟ್ಟರೆ ಉತ್ತಮ ಎಂದು ಹೇಳಿದ್ದ ಟೀಮ್​ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹವಾಗ್​ಗೆ(Virender Sehwag) ಶಕೀಬ್​ ತಿರಿಗೇಟು ನೀಡಿದ್ದಾರೆ.

ಗುರುವಾರ ನಡೆದಿದ್ದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ನೆದರ್ಲೆಂಡ್ಸ್(Bangladesh vs Netherlands)​ ವಿರುದ್ಧ 25 ರನ್​ ಅಂತರದ ಗೆಲುವು ಸಾಧಿಸಿ ಸೂಪರ್​-8 ಪ್ರವೇಶವನ್ನು ಜೀವಂತವಾಗಿ ಇರಿಸಿದೆ. ಪಂದ್ಯ ಮುಕ್ತಾಯದ ಬಳಿಕ ಮಾತನಾಡಿದ ಶಕೀಬ್​, ಯಾವುದೇ ತಂಡದ ಆಟಗಾರರು ಮೂರನೇ ವ್ಯಕ್ತಿಯ ಪ್ರಶ್ನೆಗಳಿಗೆ ಉತ್ತರಿಸಲು ಆಡುತ್ತಿಲ್ಲ. ತಮ್ಮ ತಂಡಕ್ಕೆ ಹೆಚ್ಚಿನ ಕೊಡುಗೆ ನೀಡುವ ಜವಾಬ್ದಾರಿಯಿಂದ ಅಷ್ಟೇ. ಅದು ಒಬ್ಬ ಬ್ಯಾಟ್ಸ್​ಮನ್​, ಬೌಲರ್ ಅಥವಾ ಫೀಲ್ಡರ್​ ಆಗಿಯೂ ಇರಬಹುದು. ಕೊಡುಗೆ ನೀಡುವಲ್ಲಿ ವಿಫಲರಾದರೆ, ತಮ್ಮ ಫಾರ್ಮ್​ ಬಗ್ಗೆ ಇಂತಹ ಟೀಕೆಗಳು ಕೇಳಿಬರುವುದು ಸಾಮಾನ್ಯ ಎಂದು ಹೇಳುವ ಮೂಲಕ ಸೆಹವಾಗ್​ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಸೆಹವಾಗ್​ ಹೇಳಿದ್ದೇನು?


ನನ್ನ ಪ್ರಕಾರ, ಶಕೀಬ್ ಅಲ್​ ಹಸನ್​ ಕ್ರಿಕೆಟ್​ನಿಂದ ನಿವೃತ್ತಿ ಪಡೆಯುವುದೇ ಉತ್ತಮ. ಶಕೀಬ್​ ಅವರನ್ನು ಬಾಂಗ್ಲಾ ಕ್ರಿಕೆಟ್ ಮಂಡಳಿ ಅಂದೇ ಕೈಬಿಡಬೇಕಿತ್ತು. ಅವರನ್ನು ಆಡಿಸುವ ಅವಶ್ಯಕತೆಯೇ ಇರಲಿಲ್ಲ ಎಂದು ಸೆಹವಾಗ್​ ಲೇವಡಿ ಮಾಡಿದ್ದರು. ನೆದರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಶಕೀಬ್​ ಅವರು ಅಜೇಯ 64 ರನ್​ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಈ ಮ್ಯಾಚ್​ ವಿನ್ನಿಂಗ್​ ಪ್ರದರ್ಶನಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು.


ಬಾಂಗ್ಲಾದೇಶ ತಂಡ ‘ಸಿ’ ಗುಂಪಿನಲ್ಲಿ ಸದ್ಯ 4 ಅಂಕದೊಂದಿಗೆ 2ನೇ ಸ್ಥಾನಿಯಾಗಿದೆ. ಸೂಪರ್​ 8 ಹಂತಕ್ಕೇರಲು ನೆಪಾಳ ವಿರುದ್ಧ ನಡೆಯುವ ಅಂತಿಮ ಲೀಗ್​ ಪಂದ್ಯದಲ್ಲಿ ಗೆಲ್ಲಲೇ ಬೇಕು. ಒಂದು ವೇಳೆ ಬಾಂಗ್ಲಾದೇಶ ಈ ಪಂದ್ಯದಲ್ಲಿ ಸೋತು, ಶ್ರೀಲಂಕಾ ವಿರುದ್ಧ ನೆದರ್ಲೆಂಡ್ ಸೋತರೆ ಬಾಂಗ್ಲಾ ತಂಡವೇ ಸೂಪರ್​ 8ಗೆ ಪ್ರವೇಶಿಸುತ್ತದೆ.

ಇದನ್ನೂ ಓದಿ T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನವೇ ತವರಿಗೆ ಮರಳಲು ಸಿದ್ಧರಾದ ಟೀಮ್​ ಇಂಡಿಯಾದ ಇಬ್ಬರು ಆಟಗಾರರು​

ಟಿ20 ವಿಶ್ವಕಪ್​ನಿಂದ ಹೊರಬಿದ್ದ ನ್ಯೂಜಿಲ್ಯಾಂಡ್​


ಶುಕ್ರವಾರ ನಡೆದ ಟಿ20 ವಿಶ್ವಕಪ್​ನ ‘ಸಿ’ ವಿಭಾಗದ ಪಂದ್ಯದಲ್ಲಿ ಅಫಘಾನಿಸ್ತಾನ(PNG vs AFG) ತಂಡ ಪಪುವಾ ನ್ಯೂ ಗಿನಿಯಾ ವಿರುದ್ಧ 7 ವಿಕೆಟ್​ ಅಂತರದ ಗೆಲುವು ಸಾಧಿಸುವ ಮೂಲಕ ಸೂಪರ್​-8 ಹಂತಕ್ಕೆ ಪ್ರವೇಶ ಪಡೆದಿದೆ. ಅಫಘಾನಿಸ್ತಾನ ಗೆಲುವಿನಿಂದ ನ್ಯೂಜಿಲ್ಯಾಂಡ್(New Zealand)​ ತಂಡ ಟೂರ್ನಿಯಿಂದ ಹೊರಬಿದ್ದಿತು.

ಇಲ್ಲಿನ ಟರೂಬದಲ್ಲಿರುವ ಬ್ರಿಯಾನ್‌ ಲಾರಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಪಪುವಾ ನ್ಯೂ ಗಿನಿಯಾ ತಂಡ ಫಜಲ್ಹಕ್ ಫಾರೂಕಿ ಮತ್ತು ನವೀನ್​ ಉಲ್​ ಹಕ್​ ಅವರ ಘಾತಕ ದಾಳಿಗೆ ನಲುಗಿ 95 ರನ್​ಗೆ ಸರ್ವಪತನ ಕಂಡಿತು. ಈ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಅಫಘಾನಿಸ್ತಾನ 15.1 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 101 ರನ್​ ಬಾರಿಸಿ ಗೆಲುವು ದಾಖಲಿಸಿತು. ಅತ್ತ ಏಕದಿನ ಸೇರಿದಂತೆ ಕಳೆದ ಆರೂ ವಿಶ್ವಕಪ್‌ ಪಂದ್ಯಾವಳಿಗಳಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದ ನ್ಯೂಜಿಲ್ಯಾಂಡ್‌ ಈ ಬಾರಿ ಲೀಗ್​ನಿಂದಲೇ ಹೊರಬಿದ್ದ ಅವಮಾನಕ್ಕೆ ಸಿಲುಕಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Sania Mirza: ಶಮಿ ಜತೆ ಮದುವೆ ಟಾಕ್​ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ‘YES’ ಎಂದು ಬರೆದುಕೊಂಡ ಸಾನಿಯಾ ಮಿರ್ಜಾ

Sania Mirza: ಶಮಿ ಜತೆ ಸಾನಿಯ ಮದುವೆಯಾಗಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸಾನಿಯಾ ‘ಎಸ್’​ ಬರೆದಿರುವುದು ಈಗ ನೆಟ್ಟಿಗರಿಗೆ ಆಹಾರವಾಗಿದೆ. ಶಮಿ ಜತೆಗಿನ ಮದುವೆಯ ಕುರಿತಾಗಿಯೇ ಅವರು ಎಸ್​ ಎಂದು ಬರೆದುಕೊಂಡಿದ್ದಾರೆ ಎಂಬುದಾಗಿ ನೆಟ್ಟಿಗರು ಬಿಂಬಿಸಿದ್ದಾರೆ.

VISTARANEWS.COM


on

Sania Mirza
Koo

ಹೈದರಾಬಾದ್​: ಭಾರತದ ಮಾಜಿ ಟೆನಿಸ್​ ತಾರೆ ಸಾನಿಯಾ ಮಿರ್ಜಾ(Sania Mirza) ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರಿಂದ ವಿಚ್ಛೇದನ ಪಡೆದ ಬಳಿಕ ಸಾನಿಯ ಮರು ಮದುವೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಗಾಗ ಸುದ್ದಿಗಳು ಹರಿದಾಡುತ್ತಿರುತ್ತದೆ. ಇತ್ತೀಚೆಗೆ ಟೀಮ್​ ಇಂಡಿಯಾದ ಕ್ರಿಕೆಟಿಗ ಮೊಹಮ್ಮದ್ ಶಮಿ(Mohammed Shami) ಜತೆಗೆ ಸಾನಿಯಾ ಮಿರ್ಜಾ ಮದುವೆಯಾಗುತ್ತಾರೆ ಎಂಬ ಊಹಾಪೋಹಾ ಹಬ್ಬಿತ್ತು. ಈ ಬಗ್ಗೆ ಸಾನಿಯಾ ತಂದೆ ಇದು ಸುಳ್ಳು ಸುದ್ದಿ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಸುದ್ದಿಯನ್ನು ನಂಬಬೇಡಿ ಎಂದು ಸ್ಪಷ್ಟನೆ ನೀಡಿದ್ದರು.

ಎಲ್ಲ ಚರ್ಚೆಗಳ ಮಧ್ಯೆ ಸಾನಿಯಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಮಗ ಇಝಾನ್ ಜತೆಗಿನ ಹೃದಯಸ್ಪರ್ಶಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಟಿ-ಶರ್ಟ್​ ಮತ್ತು ಕ್ಯಾಪ್‌ ತೊಟ್ಟು ಮಗನ ಜತೆಗೆ ಟೆನಿಸ್ ಕೋರ್ಟ್‌ನಲ್ಲಿ ಫೋಟೊ ಶೇರ್​ ಮಾಡಿದ್ದಾರೆ. ಇಲ್ಲಿ ಇವರಿಬ್ಬರ ಫೋಟೊಕಿಂತ ಮಹತ್ವ ಪಡೆದದ್ದು ಸಾನಿಯಾ ಧರಿಸಿದ ಟಿ-ಶರ್ಟ್​ ಮೇಲಿರುವ ಬರಹ. ಹೌದು ಸಾನಿಯಾ ಅವರು “ನಾನು ಚೆನ್ನಾಗಿರುತ್ತೇನೆ ಎಂಬ ಭಾವನೆ ನನಗೆ ಸಿಕ್ಕಿದೆ” ಎಂದು ಬರೆದಿರುವ ಟಿ-ಶರ್ಟ್​ ಹಾಕಿದ್ದು ಈ ಮೂಲಕ ತಮ್ಮ ಜೀವನ ಶೈಲಿಯ ಬಗ್ಗೆ ಮಾತನಾಡುವವರಿಗೆ ಪರೋಕ್ಷವಾಗಿ ತಕ್ಕ ಉತ್ತರ ನೀಡಿದ್ದಾರೆ. ಜತೆಗೆ ಈ ಫೋಟೋಗೆ “YES” ಎಂಬ ಕ್ಯಾಪ್ಶನ್ ನೀಡಲಾಗಿದೆ.

ಇದನ್ನೂ ಓದಿ Sania Mirza: ಹೇಳಲು ತುಂಬಾ ಇದೆ, ಆದರೂ ಮೌನವಾಗಿದ್ದೇನೆ; ಸಾನಿಯಾ ಮಿರ್ಜಾ ಪೋಸ್ಟ್​ನ ಅರ್ಥವೇನು?

ಶಮಿ ಜತೆ ಸಾನಿಯ ಮದುವೆಯಾಗಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸಾನಿಯಾ ‘ಎಸ್’​ ಬರೆದಿರುವುದು ಈಗ ನೆಟ್ಟಿಗರಿಗೆ ಆಹಾರವಾಗಿದೆ. ಶಮಿ ಜತೆಗಿನ ಮದುವೆಯ ಕುರಿತಾಗಿಯೇ ಅವರು ಎಸ್​ ಎಂದು ಬರೆದುಕೊಂಡಿದ್ದಾರೆ ಎಂಬುದಾಗಿ ನೆಟ್ಟಿಗರು ಬಿಂಬಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಸಾನಿಯಾ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅಭಿಮಾನಿಗಳಿಗೆ ‘ಸಬರ್‌ ಕರೋ ಆಲ್‌ವೇಸ್​  ಸಬರ್‌ ಕರೋ…'(ಯಾವಾಗಲೂ ಕೊಂಚ ತಾಳ್ಮೆಯಿಂದ ಇರಿ) ಎಂದು ಬರೆದುಕೊಂಡಿದ್ದರು. ಅವರ ಈ ಮಾರ್ಮಿಕ ಪೋಸ್ಟ್​ ಕಂಡು ನೆಟ್ಟಿಗರು ಸಾನಿಯಾ ಅವರು ಶಮಿ ಜತೆ ಹಸೆಮಣೆ(Sania Mirza marrying Mohammed Shami) ಏರುವುದು ಪಕ್ಕಾ ಎಂದು ಹೇಳಲಾರಂಭಿಸಿದ್ದರು. ಇದೀಗ ಎಸ್​ ಎನ್ನುವ ಬರಹ ಮತ್ತೆ ಸದ್ದು ಮಾಡುತ್ತಿವೆ.

ಕೆಲವು ತಿಂಗಳುಗಳ ಹಿಂದೆ ಪಾಕಿಸ್ತಾನ ಕ್ರಿಕೆಟ್​ ತಂಡದ ಮಾಜಿ ಆಟಗಾರ ಶೋಯೆಬ್‌ ಮಲಿಕ್‌(Shoaib Malik) ಅವರಿಗೆ ಸಾನಿಯಾ ವಿಚ್ಚೇದನ ನೀಡಿದ್ದರು. ಈ ಮೂಲಕ 13 ವರ್ಷದ ದಾಂಪತ್ಯ ಜೀವನವನ್ನು ಅಂತ್ಯಗೊಳಿಸಿದ್ದರು. ಡೀಪ್‌ಫೇಕ್‌(Deepfake) ಮೂಲಕ ಶಮಿ ಮತ್ತು ಸಾನಿಯಾ ಮಿರ್ಜಾ ಅವರ ಮುಖವನ್ನು ಈ ಹಿಂದೆ ಸಾನಿಯಾ ಅವರು ಮಲಿಕ್ ಜತೆಗೆ ತೆಗಿಸಿಕೊಂಡಿದ್ದ​ ಮದುವೆಯ ಫೋಟೊಗೆ ಫೋಟೊಗೆ ಶಮಿಯ ಮುಖವನ್ನು ಎಡಿಟ್​ ಮಾಡಿ ಶಮಿ ಮತ್ತು ಸಾನಿಯಾ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೋಂಡಿದ್ದಾರೆ ಎಂದು ಟ್ವೀಟರ್​ ಎಕ್ಸ್​ನಲ್ಲಿ ಕಿಡಿಗೇಡಿಗಳು ವೈರಲ್​ ಮಾಡಿದ್ದರು.

Continue Reading

ಕ್ರೀಡೆ

INDW vs SAW: ವಿಶ್ವ ದಾಖಲೆ ನಿರ್ಮಿಸಿದ ಭಾರತ ಮಹಿಳಾ ತಂಡ

INDW vs SAW: 603 ರನ್ ಗಳಿಸುವ ಮೂಲಕ ಮಹಿಳಾ ಟೆಸ್ಟ್​ ಕ್ರಿಕೆಟ್​ನಲ್ಲಿ(highest-team total in Women’s Test) ಅತ್ಯಧಿಕ ರನ್​ ಕಲೆಹಾಕಿದ ವಿಶ್ವ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿತು. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿತ್ತು. ಅಚ್ಚರಿ ಎಂದರೆ ಇದೇ ವರ್ಷ ಪರ್ತ್​ನಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 575 ರನ್​ಗಳಿಸಿ ಈ ದಾಖಲೆ ಬರೆದಿತ್ತು.

VISTARANEWS.COM


on

INDW vs SAW
Koo

ಚೆನ್ನೈ: ಪ್ರವಾಸಿ ದಕ್ಷಿಣ ಆಫ್ರಿಕಾ(INDW vs SAW) ವಿರುದ್ಧ ಸಾಗುತ್ತಿರುವ ಏಕೈಕ ಟೆಸ್ಟ್​ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಸಂಘಟಿತ ಬ್ಯಾಟಿಂಗ್​ ಪ್ರದರ್ಶನ ತೋರುವ ಮೂಲಕ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದೆ. ಮೊದಲ ದಿನದಾಟದ ಅಂತ್ಯಕ್ಕೆ ನಾಲ್ಕು ವಿಕೆಟ್ ನಷ್ಟಕ್ಕೆ 525 ರನ್ ಗಳಿಸಿದ್ದ ಭಾರತ ದ್ವಿತೀಯ ದಿನದಾಟದಲ್ಲಿ 78 ರನ್​ ಕಲೆ ಹಾಕಿ ಒಟ್ಟು 6 ವಿಕೆಟ್​ಗೆ 603 ರನ್​ ಬಾರಿಸಿ ಡಿಕ್ಲೇರ್​ ಘೋಷಿಸಿದೆ.

603 ರನ್ ಗಳಿಸುವ ಮೂಲಕ ಮಹಿಳಾ ಟೆಸ್ಟ್​ ಕ್ರಿಕೆಟ್​ನಲ್ಲಿ(highest-team total in Women’s Test) ಅತ್ಯಧಿಕ ರನ್​ ಕಲೆಹಾಕಿದ ವಿಶ್ವ ದಾಖಲೆಯನ್ನು ನಿರ್ಮಿಸಿದೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿತ್ತು. ಅಚ್ಚರಿ ಎಂದರೆ ಇದೇ ವರ್ಷ ಪರ್ತ್​ನಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 575 ರನ್​ಗಳಿಸಿ ಈ ದಾಖಲೆ ಬರೆದಿತ್ತು. ಆದರೆ ಕೆಲವೇ ತಿಂಗಳ ಅಂತರದಲ್ಲಿ ಈ ದಾಖಲೆ ಪತನಗೊಂಡಿದೆ.

ಸದ್ಯ ಈ ಟೆಸ್ಟ್ ಪಂದ್ಯದಲ್ಲಿ ಭಾರತ ಬಿಗಿ ಹಿಡಿತ ಸಾಧಿಸಿದೆ. ಮೊದಲ ದಿನದಾಟಕ್ಕೆ ಅಜೇಯರಾಗಿದ್ದ ನಾಯಕಿ ಹರ್ಮನ್ ಮತ್ತು ವಿಕೆಟ್ ಕೀಪರ್ ರಿಚಾ ಘೋಷ್ ಇಂದು ಆರಂಭಗೊಂಡ ದ್ವಿತೀಯ ದಿನದಾಟದಲ್ಲಿ ಅರ್ಧಶತಕ ಬಾರಿಸಿ ಗಮನಸೆಳೆದರು. ಹರ್ಮನ್​ಪ್ರೀತ್​ 69 ರನ್ ಗಳಿಸಿದರೆ, ರಿಚಾ 86 ರನ್ ವಿಕೆಟ್​ ಒಪ್ಪಿಸಿದರು. ರಿಚಾ ಔಟಾಗುತ್ತಿದ್ದಂತೆ ಭಾರತ ತಂಡವು ಡಿಕ್ಲೇರ್ ಘೋಷಿಸಿತು. ಸದ್ಯ ಚೇಸಿಂಗ್​ ನಡೆಸುತ್ತಿರುವ ದಕ್ಷಿಣ ಆಫ್ರಿಕಾ 1 ವಿಕೆಟ್ ಕಳೆದುಕೊಂಡು 50ರ ಗಡಿ ದಾಟಿದೆ. ​

ಇದನ್ನೂ ಓದಿ IND vs SA Final: ವಿಶ್ವಕಪ್​ ಗೆಲ್ಲಲು ಕೊಹ್ಲಿ, ರೋಹಿತ್​, ದ್ರಾವಿಡ್​ಗೆ ಇದು ಕೊನೆಯ ಅವಕಾಶ!

ಮೊದಲ ದಿನದಾಟದಲ್ಲಿ ಸೊಗಸಾದ ಬ್ಯಾಟಿಂಗ್​ ನಡೆಸಿದ ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂಧಾನ ಶತಕ ಸಂಭ್ರಮಿಸಿದರೆ, ಇವರ ಜತೆಗಾರ್ತಿ ಶಫಾಲಿ ವರ್ಷ ಬಿರುಸಿನ ಬ್ಯಾಟಿಂಗ್​ ಮೂಲಕ ದ್ವಿಶತಕ ಬಾರಿಸಿ ಮಿಂಚಿದರು. ದಕ್ಷಿಣ ಆಫ್ರಿಕಾ ಬೌಲರ್​ಗಳನ್ನು ಬೆಂಡೆತ್ತಿದ ಇವರಿಬ್ಬರು ಮೊದಲ ವಿಕೆಟ್​ಗೆ ದಾಖಲೆಯ 292 ರನ್ ಜೊತೆಯಾಟವಾಡಿದರು. ಮಂಧಾನ 149 ರನ್ ಗಳಿಸಿದರೆ, ಶಫಾಲಿ 197 ಎಸೆತಗಳಲ್ಲಿ 205 ರನ್ ಮಾಡಿದರು. ಈ ಇನ್ನಿಂಗ್ಸ್ ನಲ್ಲಿ ಅವರು 23 ಬೌಂಡರಿ ಮತ್ತು 8 ಸಿಕ್ಸರ್ ಚಚ್ಚಿದರು. ಈ ವಿಕೆಟ್​ ಪತನದ ಬಳಿಕ ಆಡಲಿಳಿದ ಮಧ್ಯಮ ಕ್ರಮಾಂಕದ ನಂಬಿಕಸ್ತ ಆಟಗಾರ್ತಿ ಜೆಮಿಮಾ ರೋಡ್ರಿಗಸ್ 55 ರನ್ ಬಾರಿಸಿದರು.

ಮೊದಲು ವಿಕೆಟ್ 292 ರನ್ ಜೊತೆಯಾಟವಾಡಿದ ಮಂಧನಾ ಮತ್ತು ಶಫಾಲಿ ಹೊಸ ವಿಶ್ವದಾಖಲೆ ಬರೆದರು. 2004 ರಲ್ಲಿ ಕರಾಚಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಾಕಿಸ್ತಾನದ ಸಜ್ಜಿದಾ ಶಾ ಮತ್ತು ಕಿರಣ್ ಬಲೂಚ್ ಅವರ 241 ರನ್ ಆರಂಭಿಕ ವಿಕೆಟ್ ಜೊತೆಯಾಟದ ದಾಖಲೆಯನ್ನು ಶಫಾಲಿ ಮತ್ತು ಸ್ಮೃತಿ ಹಿಂದಿಕ್ಕಿದರು.

Continue Reading

ಕ್ರೀಡೆ

Aiden Markram: ಧೋನಿಯಂತೆ ಮಾರ್ಕ್ರಮ್​ ಕೂಡ ಲಕ್ಕಿ ಕ್ಯಾಪ್ಟನ್​; ಸಾಧನೆ ಹೀಗಿದೆ

Aiden Markram:ಐಡನ್‌ ಮಾರ್ಕ್ರಮ್ ನಾಯಕತ್ವದಲ್ಲಿ 2014ರ ಅಂಡರ್‌-19 ವಿಶ್ವಕಪ್‌ ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾ ಚಾಂಪಿಯನ್‌ ಆಗಿತ್ತು. ಇದೀಗ ಸೀನಿಯರ್‌ ಮಟ್ಟದಲ್ಲಿಯೂ ಅವರ ನಾಯಕತ್ವದಲ್ಲೇ ಮೊದಲ ಬಾರಿಗೆ ಫೈನಲ್​ ಪ್ರವೇಶಿಸಿದೆ. 32 ವರ್ಷಗಳ ಬಳಿಕ ದಕ್ಷಿಣ ಆಫ್ರಿಕಾ ಸೆಮಿಫೈನಲ್‌ ಗಡಿ ದಾಟಿದ್ದು ಕೂಡ ಇವರ ನಾಯಕತ್ವದಲ್ಲೇ.

VISTARANEWS.COM


on

Aiden Markram
Koo

ಬಾರ್ಬಡೋಸ್​: ವಿಶ್ವಕಪ್‌(T20 World Cup 2024) ಇತಿಹಾಸದಲ್ಲೇ ಮೊದಲ ಸಲ ಪ್ರಶಸ್ತಿ ಸುತ್ತಿಗೆ ನೆಗೆದು ಇತಿಹಾಸ ಬರೆಯಲು ಮುಂದಾಗಿರುವ ದಕ್ಷಿಣ ಆಫ್ರಿಕಾ(South Africa vs India Final) ತಂಡಕ್ಕೆ ಐಡನ್‌ ಮಾರ್ಕ್ರಮ್(Aiden Markram)​ ಲಕ್ಕಿ ಕ್ಯಾಪ್ಟನ್​(lucky captain) ಆಗಿದ್ದಾರೆ. ಇದು ಈಗಾಗಲೇ ಸಾಬೀತಾಗಿದೆ. ಅವರ ನಾಯಕತ್ವದ ಸಾಧನೆ ಇಂತಿದೆ.

ಹೌದು, ಐಡನ್‌ ಮಾರ್ಕ್ರಮ್ ನಾಯಕತ್ವದಲ್ಲಿ 2014ರ ಅಂಡರ್‌-19 ವಿಶ್ವಕಪ್‌ ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾ ಚಾಂಪಿಯನ್‌ ಆಗಿತ್ತು. ಇದೀಗ ಸೀನಿಯರ್‌ ಮಟ್ಟದಲ್ಲಿಯೂ ಅವರ ನಾಯಕತ್ವದಲ್ಲೇ ಮೊದಲ ಬಾರಿಗೆ ಫೈನಲ್​ ಪ್ರವೇಶಿಸಿದೆ. 32 ವರ್ಷಗಳ ಬಳಿಕ ದಕ್ಷಿಣ ಆಫ್ರಿಕಾ ಸೆಮಿಫೈನಲ್‌ ಗಡಿ ದಾಟಿದ್ದು ಕೂಡ ಇವರ ನಾಯಕತ್ವದಲ್ಲೇ. ಇದೀಗ ಫೈನಲ್​ನಲ್ಲಿ ಇವರ ಲಕ್‌ ಹೇಗಿದೆ, ಚೋಕರ್ಸ್ ಹೋಗಿ ಚಾಂಪಿಯನ್​ ಆಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಧೋನಿ 2007ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್​ ಮತ್ತು 2011ರ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ತಮ್ಮ ನಾಯಕತ್ವದ ಮೊದಲ ಪ್ರಯತ್ನದಲ್ಲೇ ಕಪ್​ ಗೆದ್ದು ಭಾರತದ ಪಾಲಿಗೆ ಲಕ್ಕಿ ಕ್ಯಾಪ್ಟನ್​ ಎನಿಸಿಕೊಂಡಿದ್ದರು. 2013ರಲ್ಲಿ ಇವರ ನಾಯಕತ್ವದಲ್ಲೇ ಚಾಂಪಿಯನ್ಸ್​ ಟ್ರೋಫಿ ಕೂಡ ಗೆದ್ದಿತ್ತು. ಇದಾದ ಬಳಿಕ ಭಾರತ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ದಕ್ಷಿಣ ಆಫ್ರಿಕಾ ಕೂಡ ಇದುವರೆಗೂ ಒಂದೇ ಒಂದು ವಿಶ್ವಕಪ್​ ಗೆದ್ದಿಲ್ಲ. ಇದೀಗ ಧೋನಿಯಂತೆ ಮಾರ್ಕ್ರಮ್​ ಅವರು ದಕ್ಷಿಣ ಆಫ್ರೀಕಾಗೆ ಐತಿಹಾಸಿಕ ಕಪ್​ ಗೆಲ್ಲವು ಕಾತರದಲ್ಲಿದ್ದಾರೆ. ಅಜೇಯವಾಗಿ ಫೈನಲ್ ಪ್ರವೇಶಿಸಿರುವವ ಹರಿಣ ಪಡೆಗೆ ಈ ಬಾರಿಯಾದರೂ ಕಪ್​ ಗೆಲ್ಲುವ ಭಾಗ್ಯ ಇದೆಯಾ ಎಂದು ಕಾದು ನೋಡಬೇಕಿದೆ. ಈ ಹಿಂದೆ ಆಡಿದ ಎಲ್ಲ 7(ಏಕದಿನ, ಟಿ20) ಸೆಮಿಫೈನಲ್​ ಪಂದ್ಯದಲ್ಲಿಯೂ ಸೋಲು ಕಂಡಿತ್ತು.

ಇದನ್ನೂ ಓದಿ IND vs SA Final: ವಿಶ್ವಕಪ್​ ಗೆಲ್ಲಲು ಕೊಹ್ಲಿ, ರೋಹಿತ್​, ದ್ರಾವಿಡ್​ಗೆ ಇದು ಕೊನೆಯ ಅವಕಾಶ!

ಚೋಕರ್ಸ್​

ದಕ್ಷಿಣ ಆಫ್ರಿಕಾ ತಂಡ(South Africa) 1992ರಲ್ಲಿ ಸಿಡ್ನಿಯಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಮೊದಲ ಬಾರಿಗೆ​ ಸೆಮಿಫೈನಲ್​ ಪ್ರವೇಶಿಸಿತ್ತು. ಇನ್ನೇನು ಪಂದ್ಯ ಗೆಲ್ಲುತ್ತದೆ ಎನ್ನುವಷ್ಟರಲ್ಲಿ ಮಳೆ ಸುರಿದು ಪಂದ್ಯ ಸ್ಥಗಿತಗೊಂಡಿತು. 13 ಎಸೆತಗಳಲ್ಲಿ ಗೆಲುವಿಗೆ 22 ರನ್ ಬೇಕಿತ್ತು.​ ಮತ್ತೆ ಆಟ ಮುಂದುವರಿದಾಗ ಮೊಟ್ಟ ಮೊದಲ ಬಾರಿಗೆ ಪರಿಚವಾಗಿದ್ದ ಡಕ್​ವರ್ತ್​ ಲೂಯಿಸ್​ ನಿಯದ ಪ್ರಕಾರ ಹರಿಣ ಪಡೆಗೆ 1 ಎಸೆತದಲ್ಲಿ 22 ರನ್​ ಗಳಿಸುವ ಗುರಿ ನೀಡಲಾಯಿತು. ಈ ಪಂದ್ಯ ಸೋತ ಬಳಿಕ 1999ರಲ್ಲಿ ಬರ್ಮಿಂಗ್‌ಹ್ಯಾಮ್​ನಲ್ಲಿ ಆಸ್ಟ್ರೇಲಿಯ ವಿರುದ್ದದ ಪಂದ್ಯ ಟೈ ಆಗಿತ್ತು. ಆ ಪಂದ್ಯದಲ್ಲಿ ಆಸ್ಟ್ರೇಲಿಯ ಲೆಕ್ಕಾಚಾರದ ಮೂಲಕ ಫೈನಲ್ ಪ್ರವೇಶಿಸಿ ಕಪ್ ಗೆದ್ದಿತ್ತು. 2007 ರಲ್ಲಿ ಆಸ್ಟ್ರೇಲಿಯ ವಿರುದ್ಧ ಗ್ರಾಸ್‌ ಐಲೆಟ್‌ ನಲ್ಲಿ 7 ವಿಕೆಟ್‌ ಸೋಲು ಅನುಭವಿಸಿ ಆಘಾತಕ್ಕೆ ಗುರಿಯಾಗಿತ್ತು. 2015 ರಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಆಕ್ಲೆಂಡ್‌ ನಲ್ಲಿ 4 ವಿಕೆಟ್‌ ಸೋಲು ಅನುಭವಿಸಿ ಚೋಕರ್ಸ್ ಎಂದು ಮತ್ತೆ ಕರೆಸಿಕೊಳ್ಳುವ ಸ್ಥಿತಿ ಹರಿಣಗಳ ಪಾಲಿಗೆ ಬಂದೊದಗಿತ್ತು.

Continue Reading

ಕ್ರೀಡೆ

DP Manu: ಡೋಪಿಂಗ್ ಸುಳಿಯಲ್ಲಿ ಸಿಲುಕಿದ ಜಾವೆಲಿನ್‌ ತಾರೆ ಮನು; ಒಲಿಂಪಿಕ್ಸ್​ಗೆ ಹಿನ್ನಡೆ

DP Manu: 24 ವರ್ಷ ವರ್ಷದ ಮನು ಅವರು ವಿಶ್ವ ರ‍್ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ಗೆ ಆಯ್ಕೆಯಾಗುವುದು ಬಹುತೇಕ ಖಚಿತವಾಗಿತ್ತು. ಆದರೆ ಅವರ ವಿರುದ್ಧ ಉದ್ದೀಪನ ಮದ್ದು ಸೇವನೆ ಆರೋಪ ಕೇಳಿ ಬಂದಿರುವ ಕಾರಣ ಅವರಿಗೆ ‘ಪ್ಯಾರಿಸ್‌ ಟಿಕೆಟ್‌’ ಕೈತಪ್ಪುವ ಆತಂಕ ಎದುರಾಗಿದೆ.

VISTARANEWS.COM


on

DP Manu
Koo

ಬೆಂಗಳೂರು: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ವಿಶ್ವಾಸದಲ್ಲಿದ, ಕನ್ನಡಿಗ, ಜಾವೆಲಿನ್‌ ಥ್ರೊ ಸ್ಪರ್ಧಿ ಡಿ.ಪಿ. ಮನು(DP Manu) ಅವರಿಗೆ ಆಘಾತವೊಂದು ಎದುರಾಗಿದೆ. ಅವರು ಉದ್ದೀಪನ ಮದ್ದು ಸೇವನೆ ಬಲೆಯಲ್ಲಿ ಸಿಲುಕಿರುವ ಸಾಧ್ಯತೆಯೊಂದು ಕಂಡುಬಂದಿದೆ. ರಾಷ್ಟ್ರೀಯ ಉದ್ದೀಪನ ಮದ್ದುಸೇವನೆ ತಡೆ ಘಟಕ (National Anti-Doping Agency) ಸೂಚನೆಯ ಮೇರೆಗೆ ಮನು ಅವರಿಗೆ ಸ್ಪರ್ಧೆಗಳಿಂದ ದೂರ ಉಳಿಯುವಂತೆ ಅಥ್ಲೆಟಿಕ್ಸ್‌ ಫೆಡರೇಷನ್ ಆಫ್‌ ಇಂಡಿಯಾ (ಎಎಫ್‌ಐ) ಹೇಳಿದೆ. ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ವಿಶ್ವಾಸದಲ್ಲಿದ್ದ

ಕಳೆದ ವರ್ಷ ಏಷ್ಯನ್ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ, ಮತ್ತು ಕಳೆದ ತಿಂಗಳು ಭುವನೇಶ್ವರದಲ್ಲಿ ನಡೆದ ಫೆಡರೇಷನ್‌ ಕಪ್‌ ಕೂಟದಲ್ಲಿ ನೀರಜ್​ ಚೋಪ್ರಾಗೆ ಭಾರೀ ಪೈಪೋಟಿ ನೀಡಿ ಬೆಳ್ಳಿ ಗೆದ್ದಿದ್ದ 24 ವರ್ಷ ವರ್ಷದ ಮನು ಅವರು ವಿಶ್ವ ರ‍್ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ಗೆ ಆಯ್ಕೆಯಾಗುವುದು ಬಹುತೇಕ ಖಚಿತವಾಗಿತ್ತು. ಆದರೆ ಅವರ ವಿರುದ್ಧ ಉದ್ದೀಪನ ಮದ್ದು ಸೇವನೆ ಆರೋಪ ಕೇಳಿ ಬಂದಿರುವ ಕಾರಣ ಅವರಿಗೆ ‘ಪ್ಯಾರಿಸ್‌ ಟಿಕೆಟ್‌’ ಕೈತಪ್ಪುವ ಆತಂಕ ಎದುರಾಗಿದೆ.

ಹರಿಯಾಣದ ಪಂಚಕುಲಾದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಅಂತರ-ರಾಜ್ಯ ಚಾಂಪಿಯನ್‌ಷಿಪ್ಸ್‌ನ ಪ್ರಾಥಮಿಕ ಪಟ್ಟಿಯಲ್ಲಿ ಮನು ಹೆಸರು ಹೆಸರು ಇತ್ತು. ಆದರೆ ನಾಡಾ(NADA) ಸೂಚನೆಯ ಮೇರೆಗೆ ಪರಿಷ್ಕೃತ ಪಟ್ಟಿಯಿಂದ ಅವರ ಹೆಸರನ್ನು ಕೈಬಿಡಲಾಗಿದೆ. ಸ್ಪರ್ಧಾಕೂಟಗಳಲ್ಲಿ ಭಾಗವಹಿಸದಂತೆ ಮನು ಅವರನ್ನು ತಡೆಯುವಂತೆ ‘ನಾಡಾ’, ಫೆಡರೇಷನ್‌ಗೆ ಸೂಚನೆ ನೀಡಿದೆ.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಎಎಫ್‌ಐ ಅಧ್ಯಕ್ಷ ಅದಿಲ್‌ ಸುಮರಿವಾಲಾ, ನಾಡಾ ಸೂಚನೆಯಂತೆ ಅವರನ್ನು ಯಾವುದೇ ಸ್ಪರ್ಧೆಯಲ್ಲಿ ಪಾಲ್ಗೊಳ್ಳದಂತೆ ಹೇಳಲಾಗಿದೆ. ಆದರೆ ಅವರು ಉದ್ದೀಪನ ಮದ್ದು ಸೇವನೆ ಪ್ರಕರಣದಲ್ಲಿ ದೋಷಿಯಾಗಿದ್ದಾರೆಯೇ ಎಂಬುದು ಖಚಿತವಾಗಿಲ್ಲ ಎಂದು ಪಿಟಿಐಗೆ ಹೇಳಿದ್ದಾರೆ.

ಡಿ.ಪಿ. ಮನು ಅವರು ಹಾಸನ(D. P. Manu Hassan) ಜಿಲ್ಲೆ ಬೇಲೂರು ತಾಲೂಕು ಕುಪ್ಪಗೋಡು ಗ್ರಾಮದವರು. ತಂದೆ ಪ್ರಕಾಶ ಹಾಗೂ ತಾಯಿ ಸುಜಾತಾ. ಹೊಯ್ಸಳ ಶಾಲೆಯಲ್ಲಿ ಓದುವಾಗಲೇ ಭರ್ಜಿಯತ್ತ ಆಕರ್ಷಣೆ ಬೆಳೆಸಿಕೊಂಡ ಮನು ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ಕಠಿಣ ತರಬೇತಿ ಪಡೆದರು. ಇದೇ ವೇಳೆ ಮನು ಅವರು ಅಂತಾರಾಜ್ಯ, ಜೂನಿಯರ್‌ ರಾಷ್ಟ್ರೀಯ ಕೂಟಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡರು. ಆಳ್ವಾಸ್‌ ಕಾಲೇಜಿನಲ್ಲಿ ಅವರು ಪಡೆದ ತರಬೇತಿ, ನೀಡಿದ ಪ್ರದರ್ಶನವು ಚಿಗುರು ಮೀಸೆ ಹುಡುಗನನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದೆ.

ಕಾಶಿನಾಥ ನಾಯ್ಕ್ ಗರಡಿಯಲ್ಲಿ ಬೆಳೆದ ಪ್ರತಿಭೆ


ಮನು ಅವರು ಕಾಶಿನಾಥ ನಾಯ್ಕ್​ ಅವರ ಗರಡಿಯಲ್ಲಿ ಬೆಳೆದು ಬಂದ ಪ್ರತಿಭೆ. 2020ರಲ್ಲಿ ಡಿ.ಪಿ.ಮನು ಅವರಿಗೆ ಮಹತ್ವದ ತಿರುವು ಸಿಕ್ಕಿತು. ಅವರು ಪುಣೆಯಲ್ಲಿರುವ ಆರ್ಮಿ ಸ್ಪೋರ್ಟ್ಸ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಹವಾಲ್ದಾರ್‌ ಕೆಲಸಕ್ಕೆ ಸೇರಿದರು. ಇದೇ ವೇಳೆ ಕಾಶಿನಾಥ ನಾಯ್ಕ್​ ಅವರ ಪರಿಚಯವಾಯಿತು. ಕಾಶಿನಾಥ ಅವರ ಬಳಿ ಸತತ ತರಬೇತಿ ಪಡೆದ ಮನು, 65 ಮೀಟರ್‌ ದೂರ ಭರ್ಜಿ ಎಸೆತದಿಂದ 80 ಮೀಟರ್‌ ದಾಟುವಂತಾದರು. ಇದೀಗ ವಿಶ್ವ ಚಾಂಪಿಯನ್​ ನೀರಜ್​ಗೆ ತೀವ್ರ ಪೈಪೋಟಿ ನೀಡುವಷ್ಟರ ಮಟ್ಟಿಗೆ ಬೆಳೆದು ನಿಂತಿದ್ದಾರೆ. ನೀರಜ್​ ಕೂಡ ಕಾಶಿನಾಥ ನಾಯ್ಕ್ ಮಾರ್ಗದರ್ಶನದಲ್ಲೇ ಬೆಳೆದು ಬಂದ ಪ್ರತಿಭೆಯಾಗಿದ್ದಾರೆ. ಒಟ್ಟಿನಲ್ಲಿ ಕನ್ನಡಿಗರೊಬ್ಬರು ಜಾವೆಲಿನ್‌ ಥ್ರೋ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡುತ್ತಿರುವುದು ಹೆಮ್ಮೆಯ ಸಂಗತಿ.

Continue Reading
Advertisement
Chinnamma song from Krishnam Pranaya Sakhi is at 3rd position in All India YouTube trending list
ಕರ್ನಾಟಕ18 seconds ago

Kannada New Movie: “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯ 3ನೇ ಸ್ಥಾನದಲ್ಲಿ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು!

Kanguva vs Alia Bhatt Kanguva finally set a date
ಕಾಲಿವುಡ್2 mins ago

Kanguva vs Alia Bhatt: ಕಂಗುವ- ಮಾರ್ಟಿನ್‌ ಜತೆ ಆಲಿಯಾ ಭಟ್‌ ಸಿನಿಮಾ ಕೂಡ ಕ್ಲ್ಯಾಶ್‌!

DCET 2024
ಬೆಂಗಳೂರು10 mins ago

DCET 2024 : ಡಿಸಿಇಟಿ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

vinay Kulkarni
ಕರ್ನಾಟಕ11 mins ago

Vinay Kulkarni: ವಿನಯ್‌ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶ ಮತ್ತೆ ನಿರಾಕರಿಸಿದ ಕೋರ್ಟ್‌

Sania Mirza
ಕ್ರೀಡೆ29 mins ago

Sania Mirza: ಶಮಿ ಜತೆ ಮದುವೆ ಟಾಕ್​ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ‘YES’ ಎಂದು ಬರೆದುಕೊಂಡ ಸಾನಿಯಾ ಮಿರ್ಜಾ

Mohamed Muizzu
ವಿದೇಶ31 mins ago

Mohamed Muizzu: ಮಾಲ್ಡೀವ್ಸ್‌ ಅಧ್ಯಕ್ಷನ ವಿರುದ್ಧ ವಾಮಾಚಾರ; ಸಚಿವೆ ಅರೆಸ್ಟ್‌

Rakshana Vedike
ಕರ್ನಾಟಕ39 mins ago

ಕರ್ನಾಟಕ ತೋಟದಪ್ಪನ ಛತ್ರ ಅಲ್ಲ; ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿ ಜು.1ರಂದು ಕರವೇ ಬೃಹತ್‌ ಪ್ರತಿಭಟನೆ!

Heavy Rain
ದೇಶ39 mins ago

Heavy Rain: ಭಾರೀ ಮಳೆಗೆ ಕುಸಿದು ಬಿದ್ದ ರಾಜ್‌ಕೋಟ್‌ ವಿಮಾನ ನಿಲ್ದಾಣ ಹೊರಭಾಗದ ಛಾವಣಿ

Valmiki Corporation Scam
ಕರ್ನಾಟಕ46 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇನ್ನೂ 10 ಕೋಟಿ‌ ಎಸ್ಐಟಿ ವಶಕ್ಕೆ, ಇದುವರೆಗೆ ರಿಕವರಿ ಆಗಿದ್ದೆಷ್ಟು?

baby Death
ತುಮಕೂರು1 hour ago

Baby Death : ಶವ ಸಾಗಿಸಲು ಹಣವಿಲ್ಲದೇ ರೈಲಿನಲ್ಲೇ ಶಿಶು ಬಿಟ್ಟು ಹೋದ ಪೋಷಕರು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ21 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌