CII ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ನೀಡಲಿ: ಗೃಹಸಚಿವ ಅಮಿತ್‌ ಶಾ - Vistara News

ಪ್ರಮುಖ ಸುದ್ದಿ

CII ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ನೀಡಲಿ: ಗೃಹಸಚಿವ ಅಮಿತ್‌ ಶಾ

ಪ್ರಧಾನಿ ಮೋದಿಯವರ ಕಾರಣದಿಂದಾಗಿಯೇ ಇಡೀ ವಿಶ್ವ ಬೆರಗುಗಣ್ಣಿನಿಂದ ಭಾರತವನ್ನು ನೋಡುತ್ತಿದೆ. ದೇಶ ಸುಧಾರಣೆ ಆಗದ, ಬೆಳವಣಿಗೆ ಕಾಣದ ಯಾವುದೇ ಕ್ಷೇತ್ರ ಇಂದು ಇಲ್ಲ ಎಂದು ಅಮಿತ್‌ ಶಾ ಹೇಳಿದರು.

VISTARANEWS.COM


on

Amit shah Meeting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿಐಐ ಕೇವಲ ಪ್ರಾತನಿಧಿಕ ಸಂಸ್ಥೆ ಮಾತ್ರವಾಗಿರದೆ, ಸಂಶೋಧನೆ ಮತ್ತು ಅಭಿವೃದ್ಧಿಗೆ ಉತ್ತೇಜನ ನೀಡುವ ವೇದಿಕೆಯೂ ಆಗಬೇಕು ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ಕರೆ ನೀಡಿದರು.

ಕೇಂದ್ರ ಸಂಸ್ಕೃತಿ ಸಚಿವಾಲಯ, ಸಿಐಐ ಹಾಗೂ ಇಂಡಿಯಾ@75 ಫೌಂಡೇಷನ್‌ ವತಿಯಿಂದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಆಯೋಜಿಸಿದ್ದ 3ನೇ ಆವೃತ್ತಿಯ ʻಸಂಕಲ್ಪ್‌ ಸೆ ಸಿದ್ಧಿʼ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದ ಯುವ ಪೀಳಿಗೆಯು ಸ್ವಾತಂತ್ರ್ಯದ ಇತಿಹಾಸದಿಂದ ದೂರವಾಗಿದೆ. ಸ್ವಾತಂತ್ರ್ಯ ಪ್ರಾಪ್ತಿಯ ಇತಿಹಾಸವನ್ನು ಅರಿಯದಿದ್ದರೆ ಭವಿಷ್ಯದ ಮಾರ್ಗದಲ್ಲಿ ಭಾಗಿಯಾಗಲು ಸಾಧ್ಯವಿಲ್ಲ. ಹೀಗಾಗಿ ಯುವ ಪೀಳಿಗೆಗೆ ಈ ವಿಚಾರವನ್ನು ತಿಳಿಸಲು ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಯೋಜನೆ ಮಾಡಲಾಗುತ್ತಿದೆ.

ಸಿಐಐ ಕೇವಲ ಪ್ರಾತನಿಧಿಕ ಸಂಸ್ಥೆ ಮಾತ್ರವಾಗಿರದೆ, ಉತ್ತಮ ವೇದಿಕೆಯೂ ಆಗಬೇಕು ಎಂದು ಅಮಿತ್‌ ಷಾ ಕರೆ ನೀಡಿದರು. ಸಂಶೋಧನೆ ಮತ್ತು ಅಭಿವೃದ್ಧಿಗೆ ಉತ್ತೇಜನ ನೀಡಲು ಸಿಐಐನಲ್ಲಿ ಒಂದು ವೇದಿಕೆ ನಿರ್ಮಾಣ ಮಾಡಬೇಕಿದೆ. ಕೈಗಾರಿಕೆ ಕ್ಷೇತ್ರ ತನ್ನ ವೇಗ ವರ್ಧನೆ ಬದಲಿಗೆ, ಪ್ರಮಾಣವನ್ನು ಬದಲಾಯಿಸಲು ಯೋಚಿಸಬೇಕು. ಇದಕ್ಕಾಗಿ ಬಂಡವಾಳದ ಕೊರತೆ ಇರಬಹುದು. ಕೈಗಾರಿಕಾ ಸಂಸ್ಥೆಗಳು ಒಟ್ಟುಗೂಡಬೇಕು. ಸರ್ಕಾರವೂ ತನ್ನ ಕೊಡುಗೆ ನೀಡಬಹುದು. ಸಂಶೋಧನೆಯ ಪ್ರಯೋಜನವನ್ನು ನಮ್ಮ ಮುಂದಿನ ಪೀಳಿಗೆ ಪಡೆಯಬೇಕಿದೆ. ಈ ನಿಟ್ಟಿನಲ್ಲಿ ಸಿಐಐ ಆಲೋಚಿಸಬೇಕಿದೆ ಎಂದರು.

ದೇಶದ ಸ್ವಾತಂತ್ರ್ಯದ ನೂರನೇ ವರ್ಷದ ಸಂದರ್ಭದಲ್ಲಿ ನಮ್ಮ ದೇಶ ಯಾವ ಹಂತದಲ್ಲಿರಬೇಕು ಎಂಬ ಕುರಿತು ಈಗ ಸಂಕಲ್ಪ ಮಾಡಬೇಕು. ಮುಂದಿನ 25 ವರ್ಷಗಳು ನಾವೆಲ್ಲರೂ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಪ್ರಧಾನಿ ಮೋದಿಯವರ ಮಾತಿನಲ್ಲಿ ಇದನ್ನು ಹೇಳುವುದಾದರೆ ಇದನ್ನು ಅಮೃತ ಕಾಲ ಎನ್ನಬಹುದು. ನಮ್ಮ ನಿರಂತರ ಪ್ರಯತ್ನದ ಫಲವಾಗಿಯೇ ನಾವು ಇಂದಿನ ಹಂತಕ್ಕೆ ತಲುಪಿದ್ದೇವೆ.

ಪ್ರಧಾನಿ ಮೋದಿಯವರ ಕಾರಣದಿಂದಾಗಿಯೇ ಇಡೀ ವಿಶ್ವ ಬೆರಗುಗಣ್ಣಿನಿಂದ ಭಾರತವನ್ನು ನೋಡುತ್ತಿದೆ. ದೇಶ ಸುಧಾರಣೆ ಆಗದ, ಬೆಳವಣಿಗೆ ಕಾಣದ ಯಾವುದೇ ಕ್ಷೇತ್ರ ಇಂದು ಇಲ್ಲ. ಇಷ್ಟು ಸಮಗ್ರ ಸ್ವರೂಪದ ಏಳಿಗೆ ಬಹುಶಃ ಎಂದಿಗೂ ಆಗಿಲ್ಲ. ಸರ್ಕಾರದ ಪ್ರಯತ್ನದ ಜತೆಗೆ ಜನರ ಪಾಲ್ಗೊಳ್ಳುವಿಕೆಯೂ ಇದಕ್ಕೆ ಕಾರಣ ಎಂದರು.

ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್‌ ಶಾ, 2014ಕ್ಕೂ ಮೊದಲು ಒಂದಲ್ಲ ಒಂದು ಹಗರಣಗಳದ್ದೇ ಸುದ್ದಿಯಾಗಿರುತ್ತಿತ್ತು. ಪ್ರತಿನಿತ್ಯ ಸುದ್ದಿಪತ್ರಿಗಳಲ್ಲಿ ಇದೇ ಶೀರ್ಷಿಕೆ ಇರುತ್ತಿತ್ತು. ಬಂಡವಾಳವಾದ ಮಿತಿಮೀರಿತ್ತು, ಉದ್ಯಮಸ್ನೇಹಿ ವಾತಾವರಣ ಕುಸಿಯುತ್ತಿತ್ತು, ದೇಶದ ಗೌರವವೂ ಕುಸಿಯುತ್ತಿತ್ತು. ಈ ಸಮಯದಲ್ಲಿ ಸ್ವತಃ ಪ್ರಧಾನಿ ತಮ್ಮನ್ನು ಪ್ರಧಾನಿ ಎಂದು ಭಾವಿಸುತ್ತಿರಲಿಲ್ಲ. ಆದರೆ ಸರ್ಕಾರದ ಎಲ್ಲ ಮಂತ್ರಿಗಳೂ ತಮ್ಮನ್ನು ಪ್ರಧಾನ ಮಂತ್ರಿ ಎಂದು ಭಾವಿಸಿದ್ದರು ಎಂದು ವ್ಯಂಗ್ಯ ಮಾಡಿದರು.

ಇದೆಲ್ಲವನ್ನೂ ಗಮನಿಸುತ್ತಿದ್ದ ದೇಶದ ಜನರು, ಮೂವತ್ತು ವರ್ಷದಲ್ಲೆ ಬಹುಮತದ ಸರ್ಕಾರ ನೀಡಿದರು. ಕೊರೊನಾ ಸಂಕಷ್ಟದ ಸಮಯದಲ್ಲೂ ದೇಶ ಅತಿ ಹೆಚ್ಚು ಉತ್ಪನ್ನವನ್ನು ರಫ್ತು ಮಾಡಿದೆ, ಅತಿ ಹೆಚ್ಚು ಸೇವಾ ರಫ್ತು ಮಾಡಿದೆ, ಉದ್ಯಮ ಸ್ನೇಹಿ ವಾತಾವರಣವನ್ನು ನಿರ್ಮಿಸಿದೆ. ಈಗಾಗಲೆ ಭಾರತದ ಕುರಿತು ಮಾತನಾಡುವಾಗ ಅನೇಕರು ಯೋಚನೆ ಮಾಡುವಂತಹ ಸ್ಥಿತಿ ಇದೆ. ಮುಂದಿನ 25 ವರ್ಷದ ನಂತರ ಭಾರತದ ಆರ್ಥಿಕ ಶಕ್ತಿಯನ್ನು ಮೀರಿಸುವವರು ಯಾರೂ ಇರುವುದಿಲ್ಲ ಎಂದರು.

ಇದನ್ನೂ ಓದಿ | ಸಿದ್ದರಾಮೋತ್ಸವ ಎಫೆಕ್ಟ್‌ ಕಡೆಗಣಿಸುವಂತಿಲ್ಲ; ಅಮಿತ್‌ ಶಾಗೆ ಯಡಿಯೂರಪ್ಪ ರಿಪೋರ್ಟ್

ತಜ್ಞರು ಪುಸ್ತಕ ಓದುತ್ತ ಕುಳಿತಿರಲಿ

ಕೋವಿಡ್‌ ಸಂದರ್ಭದಲ್ಲಿ ದಾರಿ ಕಾಣದಂತಹ ವಾತಾವರಣ ನಿರ್ಮಾಣವಾಗಿತ್ತು, ಸಮಾಜವನ್ನು ಕೋವಿಡ್‌ನಿಂದ ರಕ್ಷಣೆ ಮಾಡದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಲಸಿಕೆ ರೂಪಿಸಲು ಪ್ರಾಮುಖ್ಯತೆ ನೀಡಲಾಯಿತು ಎಂದ ಅಮಿತ್‌ ಶಾ, ತಥಾಕಥಿತ ತಜ್ಞರ ವಿರುದ್ಧ ವಾಗ್ದಾಳಿ ನಡೆಸಿದರು. ಆರೋಗ್ಯದ ಸುಧಾರಣೆಯೊಂದಿಗೆ, ಆರ್ಥಿಕತೆ ಕುಸಿಯದಂತೆ ನೋಡಿಕೊಳ್ಳುವ ಪ್ರಯತ್ನವೂ ನಡೆಯಿತು. ಇದೇ ಕಾರಣಕ್ಕೆ, ವಿಶ್ವದಲ್ಲೇ ಕೋವಿಡ್‌ನಿಂದ ಅತ್ಯಂತ ಕಡಿಮೆ ಬಾಧೆಗೊಳಗಾದ ದೇಶ ಭಾರತ ಎಂದು ಆರ್ಥಿಕ ತಜ್ಞರೇ ಹೇಳುತ್ತಿದ್ದಾರೆ. ವಿಶ್ವದ ದೊಡ್ಡ ಆರ್ಥಿಕ ಶಕ್ತಿಯೂ ನಿರ್ವಹಿಸಲು ಸಾಧ್ಯವಾಗದಷ್ಟು ಪ್ರಮಾಣದಲ್ಲಿ ಲಸಿಕೆ ವಿತರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಸಮಾಜ ಕೋವಿಡ್‌ ಭಯದಿಂದ ಮುಕ್ತವಾದ ಕೂಡಲೆ ಆರ್ಥಿಕತೆಯಲ್ಲಿ ಚೈತನ್ಯ ಮೂಡಿತು. ಇಷ್ಟು ದೊಡ್ಡ ಸಂಖ್ಯೆಯ ನಾಗರಿಕರಿಗೆ ಎರಡು ವರ್ಷ ಉಚಿತವಾಗಿ ಮನೆಗೆ ಆಹಾರ ಧಾನ್ಯ ನೀಡಿದ ಉದಾಹರಣೆ ಯಾವುದೇ ದೇಶದಲ್ಲಿಲ್ಲ.

ಈ ಹಿಂದೆ ಜನರು ಮನೆಯನ್ನು ನಡೆಸುವುದು, ಹೊಟ್ಟೆ ತುಂಬಿಸಿಕೊಳ್ಳುವುದರಲ್ಲೇ ನಿರತರಾಗಿದ್ದರು. ಇಂತಹ ಮೂಲಸೌಕರ್ಯಗಳನ್ನು ನರೇಂದ್ರ ಮೋದಿ ಸರ್ಕಾರ ಪೂರೈಸಿತು. ಇಂದು ಇಂತಹ ಪರಿವಾರಗಳು ತಮ್ಮ ಮನೆಗೊಂದು ಸ್ಕೂಟಿ ಕೊಳ್ಳಬೇಕು, ಒಂದು ಕೂಲರ್‌ ಖರೀದಿಸಬೇಕು ಎಂಬ ಆಲೋಚನೆಯೊಂದಿಗೆ ಜೀವನಮಟ್ಟವನ್ನು ಉತ್ತಮಗೊಳಿಸಿಕೊಳ್ಳುತ್ತಿದೆ. ದೇಶದ ಅರ್ಥ ವ್ಯವಸ್ಥೆಗೆ ಕೊಡುಗೆಯನ್ನೇ ನೀಡದಿದ್ದ ಅನೇಕರು ಇಂದು ಕೊಡುಗೆ ನೀಡುತ್ತಿದ್ದಾರೆ.

ಆರ್ಥಿಕ ತಜ್ಞರು ತಮ್ಮ ಪುಸ್ತಕಗಳಲ್ಲಿ ಇಲ್ಲ ಎಂಬ ಕಾರಣಕ್ಕೆ ಸರ್ಕಾರದ ಯೋಜನೆಗಳನ್ನು ಟೀಕಿಸಿದರು. ಪ್ರಧಾನ ಮಂತ್ರಿಯವರು ಪ್ರತಿ ಮನೆಗೆ ನೀರು ನೀಡುವುದರಿಂದ, ಪ್ರತಿಯೊಬ್ಬರಿಗೂ ಮನೆ ಕಟ್ಟಿಕೊಡುವುದರಿಂದ, ಪ್ರತಿ ಮನೆಗೆ ವಿದ್ಯುತ್‌ ನೀಡುವುದರಿಂದ ಜಿಡಿಪಿ ಹೆಚ್ಚುತ್ತದೆ ಎಂದು ಹೇಳಿದರು. ಆದರೆ ಆರ್ಥಿಕ ತಜ್ಞರು ಎನ್ನಿಸಿಕೊಂಡವರಿಗೆ ಇದು ಹೊಳೆಯಲಿಲ್ಲ. ನಾವು ಆರ್ಥಿಕತೆಗೆ ಮಾನವೀಯ ಮುಖ ನೀಡಿದ್ದೇವೆ. ಆರ್ಥಿಕ ತಜ್ಞರು ಎಲ್ಲಿದ್ದಾರೊ ಅಲ್ಲೇ ಇರಲಿ ಎಂದು ಟೀಕಿಸಿದರು.

ಇದನ್ನೂ ಓದಿ | ಕರ್ನಾಟಕದ ಆರ್ಥಿಕತೆಯನ್ನು1 ಲಕ್ಷ ಕೋಟಿ ಡಾಲರ್‌ಗೆ ಹೆಚ್ಚಿಸುವ ಗುರಿ: ಸಿಎಂ ಬೊಮ್ಮಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Self Harming: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆ; ಕಾರಿನಲ್ಲೇ ವಿಷ ಸೇವನೆ

Self Harming: ಮಾಜಿ ಸಚಿವ ಬಿ.ಸಿ. ಪಾಟೀಲ್ ಪುತ್ರಿಯ ಪತಿ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು‌ ಬಂದಿಲ್ಲ.

VISTARANEWS.COM


on

Self Harming
Koo

ದಾವಣಗೆರೆ: ಬಿಜೆಪಿ ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ಕೆ.ಜಿ. (41) ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ಸೋಮವಾರ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವನೆ ಮಾಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಪ್ರತಾಪ್ ಕುಮಾರ್ (Pratap Kumar K.G) ಮೃತಪಟ್ಟಿದ್ದಾರೆ.

ಮಾಜಿ ಸಚಿವ ಬಿ.ಸಿ. ಪಾಟೀಲ್‌ರ ಮೊದಲ ಪುತ್ರಿ ಸೌಮ್ಯಾ ಅವರ ಪತಿ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು‌ ಬಂದಿಲ್ಲ. ಅವರು ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹವಿದ್ದು, ಅಲ್ಲಿಗೆ ಕುಟುಂಬಸ್ಥರು, ಸಂಬಂಧಿಕರು ತೆರಳುತ್ತಿದ್ದಾರೆ.

ಮೆಗ್ಗಾನ್‌ ಅಸ್ಪತ್ರೆಗೆ ಆಗಮಿಸಿರುವ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಅವರು ಪೊಲೀಸರಿಂದ ಮಾಹಿತಿ ಪಡೆದು, ಕಾರಿನಲ್ಲಿ ಕುಳಿತು ದುಃಖಿಸುತ್ತಿರುವುದು ಕಂಡುಬಂದಿದೆ.

ನವೋದಯ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ಚಿತ್ರದುರ್ಗ: ನವೋದಯ ಶಾಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಹಿರಿಯೂರು ತಾಲೂಕಿನ ಉಡುವಳ್ಳಿಯಲ್ಲಿ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಪ್ರೇಮ್ ಸಾಗರ್ (13) ನೇಣಿಗೆ ಶರಣಾದ ವಿದ್ಯಾರ್ಥಿ.

ಹೊಳಲ್ಕೆರೆ ತಾಲೂಕಿನ ಕೆಂಗುಂಟೆ ಗ್ರಾಮದ ನಿವಾಸಿಯಾದ ಪ್ರೇಮ ಸಾಗರ್‌ 8ನೇ ತರಗತಿ ಓದುತ್ತಿದ್ದ. ಆದರೆ, ಕೊಠಡಿಯಲ್ಲಿ ಸೋಮವಾರ ನೇಣಿಗೆ ಶರಣಾಗಿದ್ದಾನೆ. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರೇಮ ಸಾಗರ್ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Chennai Police commissioner : ಬಿಎಸ್‌‌ಪಿ ರಾಜ್ಯಾಧ್ಯಕ್ಷನ ಹತ್ಯೆ ಎಫೆಕ್ಟ್; ಚೆನ್ನೈ ಪೊಲೀಸ್ ಕಮಿಷನರ್ ಎತ್ತಂಗಡಿ

ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ದೇಶ

Terrorists Attack: ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ; ಇಬ್ಬರು ಯೋಧರಿಗೆ ಗಾಯ, ಉಗ್ರರಿಗಾಗಿ ಶೋಧ

Terrorists Attack: ಸೇನಾ ವಾಹನವನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಲೇ ಭಾರತೀಯ ಸೇನೆಯ ಯೋಧರು ತಿರುಗೇಟು ನೀಡುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಸುಮಾರು 2-3 ಉಗ್ರರು ಅಡಗಿರುವ ಶಂಕೆ ಇರುವ ಕಾರಣ ಯೋಧರು ಕಾರ್ಯಾಚರಣೆ ಆರಂಭಿಸಿದ್ದಾರೆ. ಇದು ಕಳೆದ ಒಂದು ವಾರದಲ್ಲಿ ಸೇನೆಯ ವಾಹನವನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ಎರಡನೇ ದಾಳಿಯಾಗಿದೆ.

VISTARANEWS.COM


on

Terrorists Attack
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರರ ಉಪಟಳ ಮುಂದುವರಿದಿದ್ದು, ಕಠುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ (Terrorists Attack) ನಡೆಸಿದ್ದಾರೆ. ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಸೋಮವಾರ (ಜುಲೈ 8) ಮಧ್ಯಾಹ್ನ 3.30ರ ಸುಮಾರಿಗೆ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಇದರೊಂದಿಗೆ ಕಳೆದ ಒಂದು ವಾರದಲ್ಲಿಯೇ ಉಗ್ರರು ಸೇನಾ ವಾಹನವನ್ನು ಗುರಿಯಾಗಿಸಿ ಎರಡು ಬಾರಿ ದಾಳಿ ನಡೆಸಿದಂತಾಗಿದೆ.

ಉಗ್ರರಿಗಾಗಿ ಶೋಧ ಆರಂಭ

ಸೇನಾ ವಾಹನವನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಲೇ ಭಾರತೀಯ ಸೇನೆಯ ಯೋಧರು ತಿರುಗೇಟು ನೀಡುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಸುಮಾರು 2-3 ಉಗ್ರರು ಅಡಗಿರುವ ಶಂಕೆ ಇರುವ ಕಾರಣ ಯೋಧರು ಕಾರ್ಯಾಚರಣೆ ಆರಂಭಿಸಿದ್ದಾರೆ. ಹಲವು ಯೋಧರು ಇಡೀ ಅರಣ್ಯವನ್ನು ಸುತ್ತುವರಿದಿದ್ದು, ತೀವ್ರತರವಾದ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸೇನೆಯ ವಾಹನ ತೆರಳುವ ಕುರಿತು ಮಾಹಿತಿ ಪಡೆದಿದ್ದ ಉಗ್ರರು, ಯೋಜನೆ ರೂಪಿಸಿ, ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಇಲ್ಲಿದೆ ದಾಳಿಯ ವಿಡಿಯೊ

ಸೇನಾ ವಾಹನ ಬರುವುದನ್ನೇ ಕಾದು ಕುಳಿತಿದ್ದ ಹಲವು ಉಗ್ರರು, ವಾಹನದ ಮೇಲೆ ಗ್ರೆನೇಡ್‌ಗಳ ಮೂಲಕ ದಾಳಿ ನಡೆಸಿದ್ದಾರೆ. ಗಾಯಾಳು ಯೋಧರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರೂ ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಎರಡು ದಿನಗಳ ಹಿಂದಷ್ಟೇ ಭದ್ರತಾ ಸಿಬ್ಬಂದಿಯು ಆರು ಉಗ್ರರನ್ನು (Kashmir Encounter) ಹೊಡೆದುರುಳಿಸಿದ್ದಾರೆ. ಇನ್ನು ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಕುಲ್ಗಾಮ್‌ ಜಿಲ್ಲೆಯ ಫ್ರೈಸಲ್‌ ಚಿನ್ನಿಗಮ್‌ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ. ಕಾರ್ಯಾಚರಣೆ ಕೈಗೊಳ್ಳುತ್ತಲೇ ಉಗ್ರರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಆಗ ಮುನ್ನಡೆ ಸಾಧಿಸಿದ ಭದ್ರತಾ ಸಿಬ್ಬಂದಿಯು ನಾಲ್ವರು ಉಗ್ರರನ್ನು ಹತ್ಯೆಗೈದಿದ್ದಾರೆ. ಆರು ಉಗ್ರರು ಹಿಜ್ಬುಲ್‌ ಮುಜಾಹಿದ್ದೀನ್‌ ಉಗ್ರ ಸಂಘಟನೆಯವರು ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Reasi Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಕರ ಮೇಲೆ ಉಗ್ರರ ದಾಳಿ; ಹಲವೆಡೆ NIA ರೇಡ್‌

Continue Reading

Latest

Viral Video: ಹೃಷಿಕೇಶದ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿದ ವಿದೇಶಿಯರ ಮೋಜು ಮಸ್ತಿ!

Viral Video: ಉತ್ತರಾಖಂಡದ ಹೃಷಿಕೇಶದಲ್ಲಿನ ಪವಿತ್ರ ಗಂಗಾ ಘಾಟ್‌ನಲ್ಲಿ ವಿದೇಶಿಗರು ಬಿಕಿನಿ ಧರಿಸಿ ಮೋಜು ಮಾಡುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅನೇಕರ ಕೋಪಕ್ಕೆ ಕಾರಣವಾಗಿದೆ. ವಿದೇಶಿ ಮಹಿಳೆಯರು ಬಿಕಿನಿ ಧರಿಸಿ ಮತ್ತು ಪುರುಷರು ಶಾರ್ಟ್ಸ್ ಧರಿಸಿ ನದಿಯಲ್ಲಿ ಆನಂದಿಸುತ್ತಿರುವುದನ್ನು ಸೆರೆಹಿಡಿಯಲಾಗಿದೆ, ಈ ವಿಡಿಯೊಗೆ ಹಲವಾರು ಜನರು ಟೀಕೆ ಮಾಡಿದ್ದಾರೆ. ಆಧ್ಯಾತ್ಮಿಕತೆಯ ಕೇಂದ್ರವಾಗಿದ್ದ ಸ್ಥಳಗಳಲ್ಲಿ ಸಂಪ್ರದಾಯಗಳು ಮಾಯವಾಗುತ್ತಿದೆ ಎಂದು ಕೆಲವರು ಟೀಕಿಸಿದ್ದಾರೆ. ಇಲ್ಲಿನ ಸ್ಥಳೀಯರು ಈ ನಡವಳಿಕೆಯನ್ನು ಪವಿತ್ರ ನದಿಯ ಪಾವಿತ್ರ್ಯಕ್ಕೆ ಅಗೌರವವೆಂದು ಕಿಡಿಕಾರಿದ್ದಾರೆ.

VISTARANEWS.COM


on

Viral Video
Koo

ಹೃಷಿಕೇಶ: ಸಾಮಾನ್ಯವಾಗಿ ಬಿಕಿನಿ ಧರಿಸಿದ ವಿದೇಶಿ ಮಹಿಳೆಯರು ಗೋವಾ ಬೀಚ್‍ನಂತಹ ಸ್ಥಳಗಳಲ್ಲಿ ಹೆಚ್ಚು ಕಂಡುಬರುತ್ತಾರೆ. ಗೋವಾ ಬೀಚ್‍ನಂತಹ ಸ್ಥಳಗಳಲ್ಲಿ ಈ ಉಡುಗೆ ಶೋಭೆ ತರಬಹುದು. ಆದರೆ ಇದನ್ನು ಭಕ್ತಾಧಿಗಳು ಸ್ನಾನ ಮಾಡುವಂತಹ ಪವಿತ್ರ ನದಿಗಳಲ್ಲಿ ಜಲಕ್ರೀಡೆ ಆಡಲು ಧರಿಸಿದರೆ ಹೇಗೆ? ಅದು ಭಕ್ತರ ಕೋಪಕ್ಕೆ ಕಾರಣವಾಗುವುದು ಸಹಜ. ಇದೀಗ ಅಂತಹದೊಂದು ಘಟನೆ ಉತ್ತರಾಖಂಡದ ಹೃಷಿಕೇಶದಲ್ಲಿ ನಡೆದಿದೆ. ಇಲ್ಲಿನ ಪವಿತ್ರ ಗಂಗಾ ಘಾಟ್‍ನಲ್ಲಿ ವಿದೇಶಿಗರು ಬಿಕಿನಿ ಧರಿಸಿ ಮೋಜು ಮಾಡುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video )ಆಗಿದ್ದು, ಅನೇಕರ ಕೋಪಕ್ಕೆ ಕಾರಣವಾಗಿದೆ.

“ಹಿಮಾಲಯನ್ ಹಿಂದೂ” ಎಂಬ ಹ್ಯಾಂಡಲ್‌ನಲ್ಲಿ ಬಳಕೆದಾರರೊಬ್ಬರು ಈ ವಿಡಿಯೊ ಹಂಚಿಕೊಂಡಿದ್ದು, ಈ ವಿಡಿಯೊಗೆ “ಪೂಜ್ಯ ಗಂಗಾ ನದಿಯನ್ನು ಗೋವಾದಂತೆ ಕಡಲತೀರವಾಗಿ ಪರಿವರ್ತಿಸಿದೆ” ಎಂದು ಶೀರ್ಷಿಕೆ ನೀಡಿ ಟೀಕಿಸಿದ್ದಾರೆ. ಈ ಕ್ಲಿಪ್ ನಲ್ಲಿ ವಿದೇಶಿ ಮಹಿಳೆಯರು ಬಿಕಿನಿ ಧರಿಸಿ ಮತ್ತು ಪುರುಷರು ಶಾರ್ಟ್ಸ್ ಧರಿಸಿ ನದಿಯಲ್ಲಿ ಆನಂದಿಸುತ್ತಿರುವುದನ್ನು ಸೆರೆಹಿಡಿಯಲಾಗಿದೆ, ಈ ವಿಡಿಯೊಗೆ ಹಲವಾರು ಜನರು ಟೀಕೆ ಮಾಡಿದ್ದಾರೆ. ಆಧ್ಯಾತ್ಮಿಕತೆಯ ಕೇಂದ್ರವಾಗಿದ್ದ ಸ್ಥಳಗಳಲ್ಲಿ ಸಂಪ್ರದಾಯಗಳು ಮಾಯವಾಗುತ್ತಿದೆ ಎಂದು ಕೆಲವರು ಟೀಕಿಸಿದ್ದಾರೆ. ಇಲ್ಲಿನ ಸ್ಥಳೀಯರು ಈ ನಡವಳಿಕೆಯನ್ನು ಪವಿತ್ರ ನದಿಯ ಪಾವಿತ್ರ್ಯಕ್ಕೆ ಅಗೌರವವೆಂದು ಕಿಡಿಕಾರಿದ್ದಾರೆ.

ಈಗ ಹೃಷಿಕೇಶದಲ್ಲಿ ನಡೆಯುತ್ತಿರುವ ಈ ಘಟನೆ ಶೀಘ್ರದಲ್ಲೇ ಇದನ್ನು ಮಿನಿ ಬ್ಯಾಂಕಾಕ್ ಆಗಿ ಮಾಡಲಿದೆ ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. ಪಾಶ್ಚಿಮಾತ್ಯ ಸಂಸ್ಕೃತಿ ಹೆಚ್ಚುತ್ತಿರುವ ಪ್ರಭಾವದಿಂದ ಹೃಷಿಕೇಶದ ಸಾಂಸ್ಕೃತಿಕ ಪರಂಪರೆ ನಾಶವಾಗುತ್ತಿದೆ ಎಂದು ಇನ್ನೊಬ್ಬರು ತಿಳಿಸಿದ್ದಾರೆ. ಇನ್ನು ಮುಂದೆ ಹೃಷಿಕೇಶ್ ಆಧ್ಯಾತ್ಮಿಕ ಸ್ಥಳವಾಗಿ ಉಳಿಯುವುದಿಲ್ಲ ಎಂದು ಮತ್ತೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:1.92 ಲಕ್ಷ ರೂ. ಬೆಲೆಯ ʼಹುಕುಮ್‌ ಕಿ ರಾಣಿʼ ಸೀರೆಯಲ್ಲಿ ಮಿಂಚಿದ ದೀಪಿಕಾ ಪಡುಕೋಣೆ!

ಈ ಘಟನೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟು ಹಾಕಿದೆ. ಕೆಲವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿರುವ ಬಗ್ಗೆ ಟೀಕಿಸಿದರೆ, ಇನ್ನೂ ಕೆಲವರು ಜನರು ಪಾಶ್ಚಿಮಾತ್ಯರ ಕಡೆಗೆ ವಾಲುತ್ತಿರುವ ಬಗ್ಗೆ ವಾದ ಮಾಡಿದ್ದಾರೆ. ಸ್ಥಳೀಯ ಮೌಲ್ಯಗಳೊಂದಿಗೆ ರಾಜಿ ಮಾಡಿಕೊಂಡು ಪ್ರವಾಸೋದ್ಯಮ ಮಾದರಿಯನ್ನು ಅಧಿಕಾರಿಗಳು ಉತ್ತೇಜಿಸುತ್ತಿದ್ದಾರೆ ಎಂದು ಅನೇಕರು ಆರೋಪಿಸಿದ್ದಾರೆ

Continue Reading

ದೇಶ

Rahul Gandhi: ಹಿಂದುಗಳಿಗೆ ಅವಮಾನ ಖಂಡಿಸಿ ದೇಗುಲದ ಡೋರ್‌ಮ್ಯಾಟ್‌ಗೆ ರಾಹುಲ್‌ ಗಾಂಧಿ ಫೋಟೊ; ಇಲ್ಲಿದೆ Video

Rahul Gandhi: ಹಿಂದುಗಳ ಕುರಿತು ರಾಹುಲ್‌ ಗಾಂಧಿ ಅವರ ಹೇಳಿಕೆಯನ್ನು ಖಂಡಿಸಿ ಮಹಾರಾಷ್ಟ್ರದಲ್ಲಿ ದೇವಾಲಯವೊಂದರ ಆಡಳಿತ ಮಂಡಳಿಯು ಡೋರ್‌ಮ್ಯಾಟ್‌ಗೆ ರಾಹುಲ್‌ ಗಾಂಧಿ ಅವರ ಫೋಟೊವನ್ನು ಅಳವಡಿಸಿದೆ. ದೇಗುಲಕ್ಕೆ ತೆರಳುವ ಭಕ್ತರು ರಾಹುಲ್‌ ಗಾಂಧಿ ಅವರ ಫೋಟೊ ಇರುವ ಡೋರ್‌ಮ್ಯಾಟ್‌ಅನ್ನು ತುಳಿದುಕೊಂಡು ಹೋಗುತ್ತಿರುವ ವಿಡಿಯೊ ಲಭ್ಯವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ ಶುರುವಾಗಿದೆ.

VISTARANEWS.COM


on

Rahul Gandhi
Koo

ಮುಂಬೈ: ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕರ ರಾಹುಲ್‌ ಗಾಂಧಿ (Rahul Gandhi) ಅವರು ಹಿಂದುಗಳ ಕುರಿತು ಇತ್ತೀಚೆಗೆ ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೂಡ ಸಂಸತ್‌ನಲ್ಲಿ ರಾಹುಲ್‌ ಗಾಂಧಿ ಹೇಳಿಕೆಯನ್ನು ಖಂಡಿಸಿದ್ದಾರೆ. ಇದರ ಬೆನ್ನಲ್ಲೇ, ಹಿಂದುಗಳ ಕುರಿತು ರಾಹುಲ್‌ ಗಾಂಧಿ ನೀಡಿದ ಹೇಳಿಕೆಯನ್ನು ಖಂಡಿಸಿ ಮಹಾರಾಷ್ಟ್ರದ ದೇಗುಲದ (Maharashtra Temple) ಡೋರ್‌ ಮ್ಯಾಟ್‌ಗೆ ರಾಹುಲ್‌ ಗಾಂಧಿ ಅವರ ಫೋಟೊವನ್ನು ಅಳವಡಿಸಲಾಗಿದೆ. ಈ ವಿಡಿಯೊ (Viral Video) ಈಗ ವೈರಲ್‌ ಆಗಿದೆ.

ಹಿಂದುಗಳ ಕುರಿತು ರಾಹುಲ್‌ ಗಾಂಧಿ ಅವರ ಹೇಳಿಕೆಯನ್ನು ಖಂಡಿಸಿ ದೇವಾಲಯದ ಆಡಳಿತ ಮಂಡಳಿಯು ಡೋರ್‌ಮ್ಯಾಟ್‌ಗೆ ರಾಹುಲ್‌ ಗಾಂಧಿ ಅವರ ಫೋಟೊವನ್ನು ಅಳವಡಿಸಿದೆ. ದೇಗುಲಕ್ಕೆ ತೆರಳುವ ಭಕ್ತರು ರಾಹುಲ್‌ ಗಾಂಧಿ ಅವರ ಫೋಟೊ ಇರುವ ಡೋರ್‌ಮ್ಯಾಟ್‌ಅನ್ನು ತುಳಿದುಕೊಂಡು ಹೋಗುತ್ತಿರುವ ವಿಡಿಯೊ ಲಭ್ಯವಾಗಿದೆ. ಅಷ್ಟೇ ಅಲ್ಲ, ಡೋರ್‌ ಮ್ಯಾಟ್‌ ಮೇಲೆ, “ಹಿಂದುಗಳನ್ನು ಹಿಂಸಾವಾದಿಗಳು ಎಂಬುದಾಗಿ ಕರೆಯಲು ನಿಮಗೆ ಎಷ್ಟು ಧೈರ್ಯ” ಎಂದು ಕೂಡ ಬರೆಯಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್‌ ಆಗುತ್ತಲೇ ಪರ-ವಿರೋಧ ಚರ್ಚೆಯಾಗುತ್ತಿದೆ.

ರಾಹುಲ್‌ ಗಾಂಧಿ ಹೇಳಿದ್ದೇನು?

“ಹಿಂದೂ ಧರ್ಮ ಹಾಗೂ ನಮ್ಮ ಅನೇಕ ಹಿಂದೂ ಮಹಾಪುರುಷರು ಅಹಿಂಸೆಯನ್ನು ಪ್ರತಿಪಾದಿಸುತ್ತಾರೆ. ಜೀಸಸ್‌ ಕ್ರೈಸ್ಟ್‌ ಕೂಡ ಅಹಿಂಸೆಯನ್ನೇ ಪ್ರತಿಪಾದಿಸುತ್ತಾನೆ. ಸ್ವತಃ ಕೈಯಲ್ಲಿ ತ್ರಿಶೂಲ ಹಿಡಿದಿರುವ ಮಹಾಶಿವನೂ ಅಹಿಂಸೆಯನ್ನೇ ಹೇಳುತ್ತಾನೆ. ಆದರೆ ದಿನದ 24 ಗಂಟೆ ಹಿಂದೂಗಳೆಂದು ಹೇಳುತ್ತಾ ತಿರುಗಾಡುವವರು ಹಿಂಸೆ, ಶತ್ರುತ್ವ, ಅಸತ್ಯವನ್ನೇ ಹೇಳುತ್ತಿದ್ದಾರೆ. ನೀವು ಹಿಂದೂಗಳೇ ಅಲ್ಲ” ಎಂದು ರಾಹುಲ್‌ ಗಾಂಧಿ ಸಂಸತ್‌ನಲ್ಲಿ ಜುಲೈ 1ರಂದು ಹೇಳಿದ್ದರು.

ಮೋದಿ ತಿರುಗೇಟು ಕೊಟ್ಟಿದ್ದರು

ರಾಹುಲ್‌ ಗಾಂಧಿ ಹೇಳಿಕೆಗೆ ನರೇಂದ್ರ ಮೋದಿ ಅವರು ಸಂಸತ್‌ನಲ್ಲಿಯೇ ತಿರುಗೇಟು ಕೊಟ್ಟಿದ್ದರು. “ಸ್ವಾಮಿ ವಿವೇಕಾನಂದರು ಯಾವ ಧರ್ಮದ ಕುರಿತು ಅಭಿಮಾನದಿಂದ ಹೇಳಿದ್ದರೋ, ಯಾವ ಧರ್ಮದ ಮಹತ್ವ, ಸಹಿಷ್ಣುತೆಯನ್ನು ಜಗತ್ತಿಗೇ ತಿಳಿಸಿದ್ದರೋ, ಅದೇ ಧರ್ಮದವರು ನಾವು. ಹಿಂದು ಧರ್ಮವು ಎಂದಿಗೂ ದ್ವೇಷ, ಹಿಂಸೆಯನ್ನು ಪ್ರಚೋದಿಸಿಲ್ಲ. ಬಿಜೆಪಿಯು ಇಂತಹ ಧರ್ಮದಲ್ಲಿ ನಂಬಿಕೆ ಇರಿಸಿದ್ದು, ರಾಜಕೀಯ ಕಾರಣಕ್ಕಾಗಿ ಕಾಂಗ್ರೆಸ್‌ ಹಿಂದುಗಳನ್ನು ಅವಮಾನಿಸುತ್ತಿದೆ. ಹಿಂದುಗಳು ಕಾಂಗ್ರೆಸ್‌ನ ಈ ಷಡ್ಯಂತ್ರವನ್ನು ತಿಳಿಯಬೇಕು. ದೇಶದಲ್ಲಿ ಹಿಂದುಗಳು ಕಾಂಗ್ರೆಸ್‌ ಬಗ್ಗೆ ಎಚ್ಚರದಿಂದ ಇರಬೇಕು” ಎಂದು ಹೇಳಿದ್ದರು.

“ಹಿಂದುಗಳ ಕುರಿತು ರಾಹುಲ್‌ ಗಾಂಧಿ ಅವರು ಸುಳ್ಳುಗಳನ್ನು ಹರಡಿಸುತ್ತಿದ್ದಾರೆ. ಹಿಂದುಗಳು ಹಿಂಸಾವಾದಿಗಳು ಎಂದು ಹೇಳುವ ಮೂಲಕ ಪ್ರಚೋದನೆ ನೀಡುತ್ತಿದೆ. ಇದು ಕಾಂಗ್ರೆಸ್‌ ಹಾಗೂ ಕಾಂಗ್ರೆಸ್‌ ನಾಯಕನ ಸಂಸ್ಕೃತಿ, ಇದು ನಿಮ್ಮ ವ್ಯಕ್ತಿತ್ವ, ಇವು ನಿಮ್ಮ ಕೆಟ್ಟ ವಿಚಾರಗಳು, ಹಿಂದುಗಳ ಮೇಲೆ ನೀವು ಹೊಂದಿರುವ ದ್ವೇಷ, ನಿಮ್ಮ ಚಟುವಟಿಕೆಗಳು ಹಿಂದುಗಳ ವಿರೋಧಿಯಾಗಿವೆ. ಇದನ್ನು ಹಿಂದುಗಳು ಗಮನಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Continue Reading
Advertisement
Ambani Family's Jewels
ಫ್ಯಾಷನ್10 mins ago

Ambani Family’s Jewels: ನೀತಾ ಅಂಬಾನಿಯ ನೆಕ್‌ಲೆಸ್‌ ಬೆಲೆ 500 ಕೋಟಿ ರೂ! ಅಂಬಾನಿ ಮಹಿಳೆಯರ ಬಳಿ ಎಂಥೆಂಥ ಆಭರಣಗಳಿವೆ ನೋಡಿ!

Self Harming
ಪ್ರಮುಖ ಸುದ್ದಿ32 mins ago

Self Harming: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆ; ಕಾರಿನಲ್ಲೇ ವಿಷ ಸೇವನೆ

Terrorists Attack
ದೇಶ45 mins ago

Terrorists Attack: ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ; ಇಬ್ಬರು ಯೋಧರಿಗೆ ಗಾಯ, ಉಗ್ರರಿಗಾಗಿ ಶೋಧ

Tamil Nadu violence
ದೇಶ45 mins ago

Tamil Nadu Violence: NDA ಮಿತ್ರಪಕ್ಷದ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌

Rain Effect
ಮಳೆ48 mins ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Chirag Shetty
ಕ್ರೀಡೆ51 mins ago

Chirag Shetty: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗುಡುಗಿದ ಶಟ್ಲರ್ ಚಿರಾಗ್ ಶೆಟ್ಟಿ; ಕಾರಣವೇನು?

Viral Video
Latest1 hour ago

Viral Video: ಹೃಷಿಕೇಶದ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿದ ವಿದೇಶಿಯರ ಮೋಜು ಮಸ್ತಿ!

Dengue Cases
ರಾಜಕೀಯ1 hour ago

Dengue Cases: ಕಲುಷಿತ ನೀರು ಪೂರೈಕೆಯಾದ್ರೆ ಅಧಿಕಾರಿಗಳೇ ಹೊಣೆ; 15 ದಿನಕ್ಕೊಮ್ಮೆ ಕ್ವಾಲಿಟಿ ಟೆಸ್ಟ್ ಮಾಡಿ ಎಂದ ಸಿಎಂ

Mahanati Show bindu honnali not selected
ಕಿರುತೆರೆ1 hour ago

Mahanati Show: ಫಿನಾಲೆಗೆ ಆಯ್ಕೆಯಾಗಿಲ್ಲ ದಾವಣಗೆರೆ ಟೀಚರ್; ಕೋಪಗೊಂಡ ನೆಟ್ಟಿಗರು!

PGET 2024 Online application for PGET can be submitted till July 10
ಶಿಕ್ಷಣ2 hours ago

PGET 2024 : ಪಿಜಿಇಟಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 10ರವರೆಗೆ ಅವಕಾಶ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ48 mins ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ3 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ6 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು7 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ22 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌