SCO vs AUS: ಆಸೀಸ್​ಗೆ 5 ವಿಕೆಟ್​ ಗೆಲುವು; ಸೂಪರ್​-8ಗೆ ಲಗ್ಗೆಯಿಟ್ಟ ಇಂಗ್ಲೆಂಡ್​ - Vistara News

ಕ್ರೀಡೆ

SCO vs AUS: ಆಸೀಸ್​ಗೆ 5 ವಿಕೆಟ್​ ಗೆಲುವು; ಸೂಪರ್​-8ಗೆ ಲಗ್ಗೆಯಿಟ್ಟ ಇಂಗ್ಲೆಂಡ್​

SCO vs AUS: ಆಸ್ಟ್ರೇಲಿಯಾದ ಈ ಗೆಲುವಿನಿಂದಾಗಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ತಂಡ ಸೂಪರ್​-8ಗೆ ಪ್ರವೇಶ ಪಡೆಯುವಂತಾಯಿತು. ಸ್ಕಾಟ್ಲೆಂಡ್​ ಮತ್ತು ಇಂಗ್ಲೆಂಡ್​ ‘ಬಿ’ ಗುಂಪಿನಲ್ಲಿ ತಲಾ 5 ಅಂಕ ಪಡೆದಿದ್ದರೂ ಕೂಡ ರನ್​ ರೇಟ್​ ಆಧಾರದಲ್ಲಿ ಇಂಗ್ಲೆಂಡ್​ ಮುಂದಿದ್ದ ಕಾರಣ ಈ ಲಾಭ ಜಾಸ್​ ಬಟ್ಲರ್​ ಪಡೆಗೆ ಲಭಿಸಿತು.

VISTARANEWS.COM


on

SCO vs AUS
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯಾ): ಸೂಪರ್​-8 ಪ್ರವೇಶಕ್ಕೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಸ್ಕಾಟ್ಲೆಂಡ್(SCO vs AUS)​ ತಂಡ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ. ಆಸ್ಟ್ರೇಲಿಯಾದ ಈ ಗೆಲುವಿನಿಂದಾಗಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ತಂಡ ಸೂಪರ್​-8ಗೆ ಪ್ರವೇಶ ಪಡೆಯುವಂತಾಯಿತು. ಸ್ಕಾಟ್ಲೆಂಡ್​ ಮತ್ತು ಇಂಗ್ಲೆಂಡ್​ ‘ಬಿ’ ಗುಂಪಿನಲ್ಲಿ ತಲಾ 5 ಅಂಕ ಪಡೆದಿದ್ದರೂ ಕೂಡ ರನ್​ ರೇಟ್​ ಆಧಾರದಲ್ಲಿ ಇಂಗ್ಲೆಂಡ್​ ಮುಂದಿದ್ದ ಕಾರಣ ಈ ಲಾಭ ಜಾಸ್​ ಬಟ್ಲರ್​ ಪಡೆಗೆ ಲಭಿಸಿತು.

ಇಲ್ಲಿನ ಸೇಂಟ್‌ ಲೂಸಿಯಾದ ಡ್ಯಾರೆನ್​ ಶಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಸ್ಕಾಟ್ಲೆಂಡ್​ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 180 ರನ್​ಗಳ ಬೃಹತ್​ ಮೊತ್ತ ಪೇರಿಸಿತು. ಈ ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 19.4 ಓವರ್​ಗಳಲ್ಲಿ 5 ವಿಕೆಟ್​ಗೆ 186 ರನ್​ ಬಾರಿಸಿ ಗೆಲುವು ದಾಖಲಿಸಿತು. ಆಸೀಸ್​ ಬ್ಯಾಟಿಂಗ್​ ಸರದಿಯಲ್ಲಿ ಆರಂಭಿಕ ಆಟಗಾರ ಟ್ರಾವಿಸ್​ ಹೆಡ್​(68) ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್​ ಮಾರ್ಕಸ್​ ಸ್ಟೋಯಿನಿಸ್​(59) ಅರ್ಧಶತಕ ಬಾರಿಸಿ ಮಿಂಚಿದರು. ಉಳಿದಂತೆ ಟಿಮ್​ ಡೇವಿಡ್​ ಅಜೇಯ 24 ರನ್​ ಬಾರಿಸಿದರು. ಡೇವಿಡ್​ ವಾರ್ನರ್​(1) ಮತ್ತು ನಾಯಕ ಮಿಚೆಲ್​ ಮಾರ್ಷ್(8) ಮತ್ತೆ ವಿಫಲರಾದರು.​

ಪಂದ್ಯದ ತಿರುವು


17 ಓವರ್​ ತನಕ ಪಂದ್ಯ ಸ್ಕಾಟ್ಲೆಂಡ್ ತಂಡದ ಪರ ಇತ್ತು. ಆದರೆ 18ನೇ ಓವರ್​ನಲ್ಲಿ ಪಂದ್ಯದ ಚಿತ್ರಣವೇ ಬದಲಾಯಿತು. ಬ್ರಾಡ್ ವೀಲ್ ಓವರ್​ನಲ್ಲಿ ಕ್ಯಾಮರೂನ್​ ಗ್ರೀನ್​ ಹ್ಯಾಟ್ರಿಕ್​ ಬೌಂಡರಿ ಬಾರಿಸಿ ಒಟ್ಟು 13 ರನ್​ ಕಸಿದರು. ಇದಕ್ಕೂ ಮುನ್ನ 2 ಓವರ್​ ನಡೆಸಿ ಒಂದು ಮೇಡನ್​ ಸಹಿತ ವಿಕೆಟ್ ಕಿತ್ತಿದ್ದ ಬ್ರಾಡ್ ವೀಲ್ ಈ ಓವರ್​ನಲ್ಲಿ ದುಬಾರಿಯಾದರು. ಇದು ಸ್ಕಾಟ್ಲೆಂಡ್​ ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು. ಒಂದೊಮ್ಮೆ ಈ ಓವರ್​ ಕಂಟ್ರೋಲ್​ ಆಗುತ್ತಿದ್ದರೆ ಸ್ಕಾಟ್ಲೆಂಡ್​ಗೆ ಗೆಲುವಿನ ಅವಕಾಶ ಇರುತ್ತಿತ್ತು.

ಇದನ್ನೂ ಓದಿ T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

ಮೊದಲು ಬ್ಯಾಟಿಂಗ್​ ನಡೆಸಿದ ಸ್ಕಾಟ್ಲೆಂಡ್​ ಬಿರುಸಿನ ಆಟಕ್ಕೆ ಒತ್ತು ನೀಡಿ ದೊಡ್ಡ ಮೊತ್ತವನ್ನು ಕಲೆಹಾಕಿತು. ಆರಂಭಿಕ ಆಟಗಾರ ಜಾರ್ಜ್ ಮುನ್ಸಿ ಆರಂಭದಿಂದಲೇ ಆಸೀಸ್​ ಬೌಲರ್​ಗಳ ಮೇಲೆರಗಿ ಮೂರು ಸಿಕ್ಸರ್ ಮತ್ತು 2 ಸಿಕ್ಸರ್​ ನೆರವಿನಿಂದ 35 ರನ್​ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಈ ವಿಕೆಟ್​ ಪತನದ ಬಳಿಕ ಬಂದ ಬ್ರಾಂಡನ್ ಮೆಕ್‌ಮುಲ್ಲೆನ್ ಕೂಡ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸಿ ಗಮನಸೆಳೆದರು. ಕೇವಲ 34 ಎಸೆತಗಳಿಂದ 60 ರನ್​ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಇವರ ಈ ಸೊಗಸಾದ ಬ್ಯಾಟಿಂಗ್​ ವೇಳೆ ಬರೋಬ್ಬರಿ 6 ಸಿಕ್ಸರ್​ ಮತ್ತು 2 ಬೌಂಡರಿ ಸಿಡಿಯಿತು. ಇವರಿಗೆ ಮತ್ತೊಂದು ತುದಿಯಲ್ಲಿ ನಾಯಕ ರಿಚಿ ಬೆರಿಂಗ್ಟನ್ ಕೂಡ ಉತ್ತಮ ಸಾಥ್​ ನೀಡಿದರು. ಬೆರಿಂಗ್ಟನ್ 31 ಎಸೆತಗಳಿಂದ 42 ರನ್​ ಬಾರಿಸಿ ಅಜೇಯರಾಗಿ ಉಳಿದರು. ಆದರೆ ಪಂದ್ಯ ಸೋತ ಕಾರಣ ಇವರ ಬ್ಯಾಟಿಂಗ್​ ಸಾಹಸ ವ್ಯರ್ಥಗೊಂಡಿತು. ಆಸೀಸ್​ ಪರ ಗ್ಲೆನ್​ ಮ್ಯಾಕ್ಸ್​ವೆಲ್​ 44 ರನ್​ ವೆಚ್ಚದಲ್ಲಿ 2 ವಿಕೆಟ್​ ಕಿತ್ತರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Virat Kohli: ಕೊಹ್ಲಿ ಕ್ಲಾಸ್ ಪ್ಲೇಯರ್, ಫೈನಲ್​ನಲ್ಲಿ ಆಡುತ್ತಾರೆ ಎಂದು ಬೆಂಬಲ ಸೂಚಿಸಿದ ನಾಯಕ ರೋಹಿತ್​

Virat Kohli: ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ 9 ರನ್​ಗೆ ವಿಕೆಟ್​ ಕಳೆದುಕೊಂಡ ಕೊಹ್ಲಿ ಇದೇ ಬೇಸರದಲ್ಲಿ ಡ್ರೆಸ್ಸಿಂಗ್​ ರೂಮ್​ನಲ್ಲಿ ಕುಳಿತು ತನ್ನ ಬ್ಯಾಟಿಂಗ್​ ಬಗ್ಗೆ ಚಿಂತಿಸಿ ಕಣ್ಣೀರು ಸುರಿಸಿದರು. ಈ ವೇಳೆ ಮುಖ್ಯ ಕೋಚ್​ ರಾಹುಲ್​ ದ್ರಾವಿಡ್​ ಬಂದು ಕೊಹ್ಲಿಯನ್ನು ಸಂತೈಸಿದರು. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Virat Kohli
Koo

ಪ್ರೊವಿಡೆನ್ಸ್‌: ಈ ಬಾರಿಯ ಐಪಿಎಲ್‌ನಲ್ಲಿ ರನ್‌ ಪ್ರವಾಹ ಹರಿಸಿದ ವಿರಾಟ್‌ ಕೊಹ್ಲಿ(Virat Kohli) ಅವರು ಹಾಲಿ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿನ್ನೂ(T20 World Cup 2024) ಗುಣಮಟ್ಟದ ಬ್ಯಾಟಿಂಗ್‌ ಪ್ರದರ್ಶಿಸಿಲ್ಲ. ಸಹಜವಾಗಿಯೇ ಇದು ಅಗ್ರ ಕ್ರಮಾಂಕದ ಮೇಲೆ ಒತ್ತಡ ತರುತ್ತಿದೆ. ಇಂಗ್ಲೆಂಡ್​ ವಿರುದ್ಧದ ಸೆಮಿ ಫೈನಲ್​ ಪಂದ್ಯದಲ್ಲಿಯೂ ಕೊಹ್ಲಿ ಒಂದಂಕಿಗೆ ಸೀಮಿತರಾಗಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಆದರೆ, ತಂಡದ ನಾಯಕ ರೋಹಿತ್​ ಶರ್ಮ(Rohit Sharma) ಅವರು ಕೊಹ್ಲಿ ಬೆಂಬಲಕ್ಕೆ ನಿಂತಿದ್ದಾರೆ.

ಪಂದ್ಯದ ಬಳಿಕ ವಿರಾಟ್​ ಕೊಹ್ಲಿಯ ಬ್ಯಾಟಿಂಗ್​ ವೈಫಲ್ಯದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರೋಹಿತ್​, ಖಂಡಿತವಾಗಿಯೂ ವಿರಾಟ್ ಓರ್ವ ಕ್ಲಾಸ್ ಪ್ಲೇಯರ್, ಅವರೊಬ್ಬ ಬಿಗ್ ಮ್ಯಾಚ್ ಪ್ಲೇಯರ್. ಪ್ರತಿಯೊಬ್ಬ ಆಟಗಾರನು ತನ್ನ ವೃತ್ತಿಜೀವನದಲ್ಲಿ ಏರಿಳಿತ ಕಾಣುವುದು ಸಹಜ. ಆದರೆ, ಕೊಹ್ಲಿ ವಿಷಯದಲ್ಲಿ ಫಾರ್ಮ್ ದೊಡ್ಡ ವಿಷಯವಲ್ಲ. ಅವರು ಫೈನಲ್‌ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ನನಗೆ ನಂಬಿಕೆ ಇದೆ ಫೈನಲ್​ನಲ್ಲಿ ಅವರು ಶ್ರೇಷ್ಠ ಬ್ಯಾಟಿಂಗ್​ ತೋರುವ ಮೂಲಕ ಎಲ್ಲ ಟೀಕೆಗಳಿಗೂ ಬ್ಯಾಟ್​ನಿಂದಲೇ ಉತ್ತರಿಸಲಿದ್ದಾರೆ ಎಂದು ಹೇಳುವ ಮೂಲಕ ಕೊಹ್ಲಿಗೆ ಬಂಬಲ ಸೂಚಿಸಿದರು.

ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ 9 ರನ್​ಗೆ ವಿಕೆಟ್​ ಕಳೆದುಕೊಂಡ ಕೊಹ್ಲಿ ಇದೇ ಬೇಸರದಲ್ಲಿ ಡ್ರೆಸ್ಸಿಂಗ್​ ರೂಮ್​ನಲ್ಲಿ ಕುಳಿತು ತನ್ನ ಬ್ಯಾಟಿಂಗ್​ ಬಗ್ಗೆ ಚಿಂತಿಸಿ ಕಣ್ಣೀರು ಸುರಿಸಿದರು. ಈ ವೇಳೆ ಮುಖ್ಯ ಕೋಚ್​ ರಾಹುಲ್​ ದ್ರಾವಿಡ್​ ಬಂದು ಕೊಹ್ಲಿಯನ್ನು ಸಂತೈಸಿದರು. ಈ ವಿಡಿಯೊ ವೈರಲ್​ ಆಗಿದೆ.

ಇದನ್ನೂ ಓದಿ Rohit Sharma: ಕೊಹ್ಲಿ, ಧೋನಿ ಬಳಿಕ ನಾಯಕನಾಗಿ ವಿಶೇಷ ದಾಖಲೆ ಬರೆದ ರೋಹಿತ್​

2014, 2016, 2022ರಲ್ಲಿ ಭಾರತ ಆಡಿದ ಎಲ್ಲ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅರ್ಥಶತಕ ಬಾರಿಸಿ ಮಿಂಚಿದ್ದರು. ಆದರೆ, ಈ ಬಾರಿ ಒಂದಂಕಿಗೆ ಸೀಮಿತರಾದರು. ಜತೆಗೆ ಈ ಬಾರಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಕೊಹ್ಲಿ ಬ್ಯಾಟಿಂಗ್​ ವೈಫಲ್ಯ ಕಂಡಂತಾಯಿತು. ಇಂಗ್ಲೆಂಡ್​ ವಿರುದ್ಧ 9 ಎಸೆತಗಳಲ್ಲಿ 9 ರನ್​ ಬಾರಿಸಿ ಟಾಪ್ಲಿ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಆಡಿದ 7 ಪಂದ್ಯಗಳ ಪೈಕಿ 2 ಪಂದ್ಯದಲ್ಲಿ ಶೂನ್ಯ ಸುತ್ತಿದ್ದಾರೆ. ಒಟ್ಟಾರೆ ಅವರ ಗಳಿಕೆ 75 ರನ್​.

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್​ ಕಂಡಿರುವುದು. ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಲ್ಲ ಎಂದು ಹೇಳಲಾಗಿತ್ತು. ಇದು ಕೂಡ ಅವರ ಬ್ಯಾಟಿಂಗ್​ ಹಿನ್ನಡೆಗೆ ಕಾಣವಾಗಿರಬಹುದು.

Continue Reading

ಕ್ರೀಡೆ

D. K. Shivakumar: ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಶುಭ ಹಾರೈಸಿದ ಡಿಸಿಎಂ ಶಿವಕುಮಾರ್‌

D. K. Shivakumar: ಸೆಮಿಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್(India vs England Semi Final 2)​ ತಂಡವನ್ನು 68 ರನ್​ಗಳಿಂದ ಮಣಿಸಿ ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌(D. K. Shivakumar) ಶುಭ ಹಾರೈಸಿದ್ದಾರೆ.

VISTARANEWS.COM


on

D. K. Shivakumar
Koo

ಬೆಂಗಳೂರು: ಹಾಲಿ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಸೆಮಿಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್(India vs England Semi Final 2)​ ತಂಡವನ್ನು 68 ರನ್​ಗಳಿಂದ ಮಣಿಸಿ ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌(D. K. Shivakumar) ಶುಭ ಹಾರೈಸಿದ್ದಾರೆ. ಜತೆಗೆ ಟೀಮ್​ ಇಂಡಿಯಾದ(team india) ಸಾಧನೆಯನ್ನು ಕೊಂಡಾಡಿದ್ದಾರೆ.

“ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಟೀಂ ಇಂಡಿಯಾ ಆಟಗಾರರ ಗಮನಾರ್ಹ ಪ್ರದರ್ಶನಕ್ಕೆ ಅಭಿನಂದನೆಗಳು!. ಟೂರ್ನಿಯುದ್ದಕ್ಕೂ ನೀವು ತೋರಿದ ಸಂಘಟಿತ ಪ್ರದರ್ಶನೇ ಈ ಯಶಸ್ಸಿಗೆ ಕಾರಣ. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿಯೂ ಇದೇ ಸ್ಫೂರ್ತಿಯಿಂದ ಆಡುವ ಮೂಲಕ ಚಾಂಪಿಯನ್​ ಪಟ್ಟ ಅಲಂಕರಿಸುವಂತಾಗಲಿ. ಫೈನಲ್‌ ಪಂದ್ಯಕ್ಕೆ ಶುಭ ಹಾರೈಸುತ್ತೇನೆ” ಎಂದು ಭಾರತ ತಂಡ ಫೋಟೊ ಹಂಚಿಕೊಂಡು ಟ್ವೀಟ್​ ಮಾಡಿದ್ದಾರೆ.

ಗುರುವಾರ ತಡರಾತ್ರಿ ಗಯಾನದ ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಭಾರತ, ರೋಹಿತ್​ ಶರ್ಮ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 171 ರನ್​ ಬಾರಿಸಿ ಸವಾಲೊಡ್ಡಿತು. ಜವಾಬಿತ್ತ ಇಂಗ್ಲೆಂಡ್​ ನಾಟಕೀಯ ಕುಸಿತ ಕಂಡು 16.4 ಓವರ್​ಗಳಲ್ಲಿ 103 ರನ್​ಗೆ ಸರ್ವಪತನ ಕಂಡಿತು.

ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ 2022ರ ಟಿ20 ವಿಶ್ವಕಪ್‌ ಸೆಮಿಫೈನಲ್‌ ಸೋಲಿನ ಸೇಡನ್ನು ತೀರಿಸಿಕೊಂಡಿತು. ಅಂದು ಅಡಿಲೇಡ್‌ ಓವಲ್‌ನಲ್ಲಿ ನಡೆದಿದ್ದ ಸೆಮಿ ಪಂದ್ಯದಲ್ಲಿ ಇಂಗ್ಲೆಂಡ್‌ 10 ವಿಕೆಟ್‌ಗಳಿಂದ ಭರ್ಜರಿಯಾಗಿ ರೋಹಿತ್‌ ಪಡೆಯನ್ನು ಮಗುಚಿ ಫೈನಲ್​ ಪ್ರವೇಶಿಸಿತ್ತು. ಈ ಬಾರಿ ಭಾರತ ತಂಡ ಇಂಗ್ಲೆಂಡ್​ ಮಣಿಸಿ ಫೈನಲ್​ ಪ್ರವೇಶಿಸಿತು. ಅಲ್ಲಿಗೆ ಲೆಕ್ಕ ಚುಕ್ತಾ ಗೊಂಡಿತು. ಶನಿವಾರ ಬಾರ್ಬಡೋಸ್​ನಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾದ ಸವಾಲು ಎದುರಿಸಲಿದೆ. ಕೂಟದ ಅಜೇಯ ತಂಡಗಳ ನಡುವಣ ಈ ಪ್ರಶಸ್ತಿ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಇದನ್ನೂ ಓದಿ IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

ಡಿಕೆಶಿ ಮುಖ್ಯಮಂತ್ರಿ ಮಾಡಿ ಎಂದು ಸಿಎಂಗೆ ಒತ್ತಾಯಿಸಿದ ಚಂದ್ರಶೇಖರ ಸ್ವಾಮೀಜಿ


ಡಿಕೆ ಶಿವಕುಮಾರ್ (DK Shivakumar) ಅವರನ್ನು ಸಿಎಂ ಮಾಡಿ ಎಂದು ಸ್ವಾಮೀಜಿಯೊಬ್ಬರು ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದೆ ವೇದಿಕೆಯ ಮೇಲೆಯೇ ಬೇಡಿಕೆ ಇಟ್ಟ ಪ್ರಸಂಗ ನಿನ್ನೆ(ಗುರುವಾರ) ನಡೆದ ಕೆಂಪೇಗೌಡ ಜಯಂತಿ (Kempegowda Jayanthi) ಕಾರ್ಯಕ್ರಮದಲ್ಲಿ ನಡೆದಿದೆ. ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Chandrashekhara swamiji) ಅವರು ಸಿದ್ದರಾಮಯ್ಯ ಅವರಿಗೆ ವೇದಿಕೆಯಲ್ಲೇ ಬಹಿರಂಗವಾಗಿ ಈ ಬೇಡಿಕೆಯನ್ನು ಇಟ್ಟಿದ್ದಾರೆ.

ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿಕೆ ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಡಿಕೆಶಿ ಸಿಎಂ ಆಗುವ ಕುರಿತು ಮತ್ತು ಹೊಸ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಕಾಂಗ್ರೆಸ್‌ ನಾಯಕರೊಳಗೇ ಬಣ ರಾಜಕೀಯ ನಡೆಯುತ್ತಿದೆ. ಹಲವಾರು ಕಾಂಗ್ರೆಸ್‌ ನಾಯಕರು, ಇನ್ನಷ್ಟು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ವಾದ ಮುಂದಿಟ್ಟಿದ್ದಾರೆ. ಇದೀಗ, ಒಕ್ಕಲಿಗರೊಬ್ಬರು ಸಿಎಂ ಆಗಬೇಕು ಎಂದು ಒಕ್ಕಲಿಗ ಸ್ವಾಮೀಜಿಗಳೇ ಹೇಳುವ ಮೂಲಕ ಈ ಬಣ ರಾಜಕೀಯಕ್ಕೆ ಇನ್ನಷ್ಟು ತುಪ್ಪ ಸುರಿದಂತಾಗಿದೆ.

Continue Reading

ಕ್ರೀಡೆ

Paris Olympics 2024: ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಆ್ಯತ್ಲೀಟ್‌ಗಳಿಗೆ ಶುಭ ಕೋರಿದ ರಾಷ್ಟ್ರಪತಿ ಮುರ್ಮು

Paris Olympics 2024: ಐಒಸಿ ಮುಖ್ಯಸ್ಥ ಥಾಮಸ್ ಬಾಚ್ ಅವರ ಪ್ರೋತ್ಸಾಹದಿಂದ ಭಾರತವು 2036ರ ಕ್ರೀಡಾಕೂಟದ ಆತಿಥ್ಯಕ್ಕೆ ಬಿಡ್ ಸಲ್ಲಿಸಲಿದೆ. ಆದರೆ, ಸೌದಿ ಅರೇಬಿಯಾ, ಇಂಡೊನೇಷ್ಯಾ ಮತ್ತು ಕತಾರ್ ನಂತಹ ಪ್ರಬಲ ದೇಶಗಳಿಂದ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

VISTARANEWS.COM


on

Paris Olympics 2024
Koo

ನವದೆಹಲಿ: ಜುಲೈ 26ರಿಂದ ಆರಂಭಗೊಳ್ಳಲಿರುವ ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಎಲ್ಲ ಭಾರತೀಯ ಆ್ಯತ್ಲೀಟ್‌ಗಳಿಗೆ(athletes) ರಾಷ್ಟ್ರಪತಿ ದ್ರೌಪದಿ ಮುರ್ಮು(President Droupadi Murmu) ಅವರು ಶುಭಾಶಯ ಕೋರಿದ್ದಾರೆ. ಪದಕ ಗೆದ್ದು ದೇಶದ ಕೀರ್ತಿ ಹೆಚ್ಚಿಸುವಂತಾಗಲಿ ಎಂದು ಹಾರೈಸಿದ್ದಾರೆ. 21 ಶೂಟರ್‌ಗಳು ಸೇರಿದಂತೆ 100ಕ್ಕೂ ಹೆಚ್ಚು ಕ್ರೀಡಾಪಟುಗಳು ಪ್ಯಾರಿಸ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ.

ಗುರುವಾರ ನಡೆದ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ವೇಳೆ ಅವರು ಎಲ್ಲ ಕ್ರೀಡಾಪಟುಗಳಿಗೆ ಶುಭ ಹಾರೈಸುವ ಜತೆಗೆ 2036ರ ಒಲಿಂಪಿಕ್ ಕೂಟದ ಆತಿಥ್ಯ ವಹಿಸುವ ದೇಶದ ಧೈರ್ಯಶಾಲಿ ಪ್ರಯತ್ನವನ್ನು ಬೆಂಬಲಿಸಿದರು.

‘ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ಕ್ರೀಡಾಪಟುವಿಗೆ ನನ್ನ ಶುಭ ಹಾರೈಕೆಗಳು. ಈ ಸಾಧನೆಗಳನ್ನು ಮತ್ತಷ್ಟು ಮುಂದುವರಿಸಲು, ಭಾರತ ಒಲಿಂಪಿಕ್ ಅಸೋಸಿಯೇಷನ್ (ಐಒಎ) 2036ರ ಒಲಿಂಪಿಕ್ ಕೂಟದ ಆತಿಥ್ಯ ವಹಿಸಲು ಸಿದ್ಧತೆ ನಡೆಸುತ್ತಿದೆ’ ಎಂದು ಹೇಳಿದರು.

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಇದನ್ನೂ ಓದಿ Paris Olympics 2024 : ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ “ಇಂಡಿಯಾ ಹೌಸ್”

ಐಒಸಿ ಮುಖ್ಯಸ್ಥ ಥಾಮಸ್ ಬಾಚ್ ಅವರ ಪ್ರೋತ್ಸಾಹದಿಂದ ಭಾರತವು 2036ರ ಕ್ರೀಡಾಕೂಟದ ಆತಿಥ್ಯಕ್ಕೆ ಬಿಡ್ ಸಲ್ಲಿಸಲಿದೆ. ಆದರೆ, ಸೌದಿ ಅರೇಬಿಯಾ, ಇಂಡೊನೇಷ್ಯಾ ಮತ್ತು ಕತಾರ್ ನಂತಹ ಪ್ರಬಲ ದೇಶಗಳಿಂದ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ತಾವರಣವನ್ನು ಕಲ್ಪಿಸಲು ಇದರ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​”(India House)​ ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ.

ಇಂಡಿಯಾ ಹೌಸ್​ಗೆ ಎಲ್ಲ ದೇಶಗಳ ಪತ್ರಕರ್ತರಿಗೆ ಮುಕ್ತ ಪ್ರವೇಶವಿದೆ ಎಂದು ನೀತಾ ಅಂಬಾನಿ(Nita Ambani) ಹೇಳಿದ್ದಾರೆ. ನೀತಾ ಅಂಬಾನಿ ಅವರು ಅಂತಾರಾಷ್ಟ್ರೀಯ ಒಲಿಂಪಿಕ್ ಸಂಸ್ಥೆ (ಐಒಸಿ.) ಸದಸ್ಯೆಯಾಗಿದ್ದಾರೆ. ಅಮೆರಿಕಾದ ಲಾಸ್ ಏಂಜಲಿಸ್​ನಲ್ಲಿ 2028ರಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್​ ಸೇರ್ಪಡೆಗೊಳ್ಳುವಲ್ಲಿ ನೀತಾ ಅಂಬಾನಿ ಅವರ ಪಾತ್ರವೂ ಪ್ರಮುಖವಾಗಿತ್ತು. ಕಳೆದ ವರ್ಷ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧಿವೇಶನ(International Olympic Committee Session) ಮುಂಬೈಯಲ್ಲಿ ನಡೆದ ವೇಳೆಯೂ ನೀತಾ ಅಂಬಾನಿ ಈ ಸಭೆಯ ವಕಾಲತ್ತು ವಹಿಸಿದ್ದರು.

Continue Reading

ಕ್ರೀಡೆ

Rohit Sharma: ಕೊಹ್ಲಿ, ಧೋನಿ ಬಳಿಕ ನಾಯಕನಾಗಿ ವಿಶೇಷ ದಾಖಲೆ ಬರೆದ ರೋಹಿತ್​

Rohit Sharma: ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ ಅವರು 37 ರನ್​ ಪೂರ್ತಿಗೊಳಿಸುತ್ತಿದ್ದಂತೆ ಭಾರತ ತಂಡದ ನಾಯಕನಾಗಿ ಎಲ್ಲ ಮಾದರಿಯ ಕ್ರಿಕೆಟ್​ ಸೇರಿ 5 ಸಾವಿರ ರನ್​ ಪೂರೈಸಿದರು. ಈ ಸಾಧನೆ ಮಾಡಿದ ಭಾರತದ 5ನೇ ನಾಯಕ ಎನಿಸಿಕೊಂಡರು.

VISTARANEWS.COM


on

Rohit Sharma
Koo

ಪ್ರೊವಿಡೆನ್ಸ್‌: ಇಂಗ್ಲೆಂಡ್​ ವಿರುದ್ಧ ನಡೆದ ಟಿ20 ವಿಶ್ವಕಪ್​ ಪಂದ್ಯದಲ್ಲಿ ಅರ್ಥಶತಕ ಬಾರಿಸಿದ ಟೀಮ್​ ಇಂಡಿಯಾ ಕಪ್ತಾನ ರೋಹಿತ್​ ಶರ್ಮ(Rohit Sharma) ಅವರು ವಿರಾಟ್​ ಕೊಹ್ಲಿ(Virat Kohli), ಮಹೇಂದ್ರ ಸಿಂಗ್​ ಧೋನಿ(MS Dhoni) ಜತೆಗಿನ ದಾಖಲೆಯೊಂದರ ಎಲೈಟ್​ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.

ಗುರುವಾರ ತಡರಾತ್ರಿ ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಭಾರತ, ರೋಹಿತ್​ ಶರ್ಮ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 171 ರನ್​ ಬಾರಿಸಿ ಸವಾಲೊಡ್ಡಿತು. ಜವಾಬಿತ್ತ ಇಂಗ್ಲೆಂಡ್​ ನಾಟಕೀಯ ಕುಸಿತ ಕಂಡು 16.4 ಓವರ್​ಗಳಲ್ಲಿ 103 ರನ್​ಗೆ ಸರ್ವಪತನ ಕಂಡಿತು.

ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ ಅವರು 37 ರನ್​ ಪೂರ್ತಿಗೊಳಿಸುತ್ತಿದ್ದಂತೆ ಭಾರತ ತಂಡದ ನಾಯಕನಾಗಿ ಎಲ್ಲ ಮಾದರಿಯ ಕ್ರಿಕೆಟ್​ ಸೇರಿ 5 ಸಾವಿರ ರನ್​ ಪೂರೈಸಿದರು. ಈ ಸಾಧನೆ ಮಾಡಿದ ಭಾರತದ 5ನೇ ನಾಯಕ ಎನಿಸಿಕೊಂಡರು. ವಿರಾಟ್​ ಕೊಹ್ಲಿ(12883) ಮೊದಲ ಸ್ಥಾನದಲ್ಲಿದ್ದಾರೆ. ಮಾಜಿ ನಾಯಕ ಮಹೇಂದ್ರ ಸಿಂಗ್​(11207) ದ್ವಿತೀಯ ಸ್ಥಾನಿಯಾಗಿದ್ದಾರೆ.  

ಇದನ್ನೂ ಓದಿ Rohit Sharma: ತಂಡ ಫೈನಲ್​ ಪ್ರವೇಶಿಸಿದ ಖುಷಿಯಲ್ಲಿ ಕಣ್ಣೀರು ಹಾಕಿದ ರೋಹಿತ್​; ವಿಡಿಯೊ ವೈರಲ್​

5 ರನ್​ ಗಳಿಸಿದ್ದ ವೇಳೆ ಫಿಲ್ ಸಾಲ್ಟ್ ಅವರಿಂದ ಕ್ಯಾಚ್​ ಕೈಚೆಲ್ಲಿ ಜೀವದಾನ ಪಡೆದ ರೋಹಿತ್, ಇದರ ಸಂಪೂರ್ಣ ಲಾಭವೆತ್ತಿದರು. 33 ಎಸೆತಗಳಿಂದ ಅರ್ಧಶತಕ ಬಾರಿಸಿ ಮಿಂಚಿದರು. ಇದು ರೋಹಿತ್​ ಅವರ 32ನೇ ಅಂತಾರಾಷ್ಟ್ರೀಯ ಟಿ20 ಅರ್ಧಶತಕ. ಅಂತಿಮವಾಗಿ 6 ಬೌಂಡರಿ ಮತ್ತು 2 ಸಿಕ್ಸರ್​ ನೆರವಿನಿಂದ 57 ರನ್​ ಗಳಿಸಿ ಆದೀಲ್​ ರಶೀದ್​ ಓವರ್​ನಲ್ಲಿ ಕ್ಲೀನ್​ ಬೌಲ್ಡ್​ ಆದರು.

ಭಾರತ ಪರ 5 ಸಾವಿರ ರನ್​ ಗಳಿಸಿದ ನಾಯಕರು


ವಿರಾಟ್​ ಕೊಹ್ಲಿ-12,883 ರನ್​

ಮಹೇಂದ್ರ ಸಿಂಗ್​ ಧೋನಿ-11,207 ರನ್​

ಮೊಹಮ್ಮದ್​ ಅಜರುದ್ದೀನ್​-8,095 ರನ್​

ಸೌರವ್​ ಗಂಗೂಲಿ-7,643 ರನ್​

ರೋಹಿತ್​ ಶರ್ಮ-5,033* ರನ್​

ಜಯವರ್ಧನೆ ದಾಖಲೆ ಪತನ

ರೋಹಿತ್ ಈ ಪಂದ್ಯದಲ್ಲಿ​ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಹೆಸರಿನಲ್ಲಿತ್ತು. ಜಯವರ್ಧನೆ 111 ಬೌಂಡರಿ ಬಾರಿಸಿದ್ದರು. ಈ ದಾಖಲೆಯನ್ನು ರೋಹಿತ್​ ಹಿಂದಿಕ್ಕಿದ್ದಾರೆ. ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ರೋಹಿತ್​ ಅವರ ಬೌಂಡರಿಗಳ ಸಂಖ್ಯೆ 91 ಇತ್ತು. ಸದ್ಯ ರೋಹಿತ್​ ಅವರ ಬೌಂಡರಿಗಳ ಸಂಖ್ಯೆ 113*ಕ್ಕೆ ಏರಿಕೆಯಾಗಿದೆ. ಫೈನಲ್​ ಪಂದ್ಯವನ್ನು ಆಡಲಿರುವ ಕಾರಣ ಈ ಸಂಖ್ಯೆ ಇನ್ನೂ ಹೆಚ್ಚಾಗಬಹುದು.

Continue Reading
Advertisement
Actor Darshan fans starts sticker trend mobile cover 6106
ಸ್ಯಾಂಡಲ್ ವುಡ್13 mins ago

Actor Darshan: ‘ಕೈದಿ ನಂ. 6106…ನಮ್ದೇ ದರ್ಬಾರುʼ ಅಂದ್ರು ಫ್ಯಾನ್ಸ್‌; ಮೊಬೈಲ್ ಕವರ್, ಆಟೋ, ಬೈಕ್‌ಗಳಲ್ಲಿ ಸ್ಟಿಕ್ಟರ್ ಟ್ರೆಂಡ್!

Valmiki Corporation Scam
ಕ್ರೈಂ15 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಸಿಬಿಐನಿಂದ ಬಂಧನ ಆತಂಕದಲ್ಲಿ ಮಾಜಿ ಸಚಿವ ನಾಗೇಂದ್ರ

Virat Kohli
ಕ್ರಿಕೆಟ್23 mins ago

Virat Kohli: ಕೊಹ್ಲಿ ಕ್ಲಾಸ್ ಪ್ಲೇಯರ್, ಫೈನಲ್​ನಲ್ಲಿ ಆಡುತ್ತಾರೆ ಎಂದು ಬೆಂಬಲ ಸೂಚಿಸಿದ ನಾಯಕ ರೋಹಿತ್​

karnataka Rain
ಮಳೆ24 mins ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Viral Video
Latest25 mins ago

Viral Video: ನಡುರಸ್ತೆಯಲ್ಲಿ ಶಿಕ್ಷಕಿಯ ಹಣೆಗೆ ಸಿಂಧೂರ ಹಚ್ಚಿ ಬಲವಂತವಾಗಿ ಮದುವೆಯಾದ ಯುವಕ!

Viral Video
Latest27 mins ago

Viral Video: ನೋಡುಗರ ಕಣ್ಮನ ಸೆಳೆಯುತ್ತಿದೆ ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಆಮಂತ್ರಣ ಪತ್ರಿಕೆ

Actor Darshan support by singer dr shamitha malnad
ಸ್ಯಾಂಡಲ್ ವುಡ್48 mins ago

Actor Darshan: ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

airtel price hike
ಪ್ರಮುಖ ಸುದ್ದಿ52 mins ago

Airtel Price Hike: ಜಿಯೋ ನಂತರ ಏರ್‌ಟೆಲ್‌ ಡೇಟಾ ಬಳಕೆದಾರರ ಜೇಬಿಗೂ ಕತ್ತರಿ; 21% ದರ ಏರಿಕೆ

murder Case in Kalaburagi
ಕಲಬುರಗಿ55 mins ago

Murder case : ಗಾಣಗಾಪುರ ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

Actor Darshan special appeal to the fans
ಸ್ಯಾಂಡಲ್ ವುಡ್1 hour ago

Actor Darshan: ಪರಪ್ಪನ ಅಗ್ರಹಾರದಿಂದಲೇ ಅಭಿಮಾನಿಗಳ ಬಳಿ ದರ್ಶನ್‌ ವಿಶೇಷ ಮನವಿ; ಏನದು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ24 mins ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ17 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು20 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ24 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌