Road Accident : ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ - Vistara News

ರಾಯಚೂರು

Road Accident : ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

Road Accident : ರಾಯಚೂರು ಹಾಗೂ ಕೊಡಗಿನ ಪ್ರತ್ಯೇಕ ಕಡೆಗಳಲ್ಲಿ ಅಪಘಾತ ನಡೆದಿದೆ. ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿಯಾಗಿ ಸವಾರ ಮೃತಪಟ್ಟರೆ, ಕಾರೊಂದು ಮತ್ತೊಂದು ಕಾರಿಗೆ ಗುದ್ದಿದ ರಭಸಕ್ಕೆ ನಾಲ್ಕೈದು ವಾಹನಗಳು ಜಖಂಗೊಂಡಿವೆ.

VISTARANEWS.COM


on

Road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ನಿಂತಿದ್ದ ಟ್ಯಾಂಕರ್ ಟ್ಯಾಲಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ (Road Accident) ಮೃತಪಟ್ಟರೆ, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಬಳಿ ಅಪಘಾತ ನಡೆದಿದೆ. ಯಮನಪ್ಪ (40) ಮೃತ ದುರ್ದೈವಿ.

ಮಸ್ಕಿ ತಾಲೂಕಿನ ಗುಡಿಹಾಳ ಗ್ರಾಮದ ಯಮನಪ್ಪ ಲಿಂಗಸೂಗೂರು ಕಡೆಯಿಂದ ಮಸ್ಕಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ನಿಂತಿದ್ದ ಟ್ಯಾಂಕರ್‌ ಟ್ಯಾಲಿ ಕಾಣದೆ ಬೈಕ್‌ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ತಲೆಗೆ ಗಂಭೀರ ಪೆಟ್ಟಾಗಿದ್ದು, ಯಮನಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗೆ ಇದ್ದ ಗಂಗಣ್ಣ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಸ್ಕಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಜ್ಜು-ಗುಜ್ಜಾಗಿದ್ದ ಬೈಕ್‌ ಅನ್ನು ವಶಕ್ಕೆ ಪಡೆಯಲಾಗಿದೆ.

ಹಿಟ್‌ ಆ್ಯಂಡ್‌ ರನ್‌ ಕೇಸ್‌ಗೆ ಬೈಕ್‌ ಸವಾರ ಸಾವು

ಬೈಕ್‌ಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರಕನ್ನಡದ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಶಿರಾಲಿ ಬಳಿ ಘಟನೆ ನಡೆದಿದೆ. ರಾಮಚಂದ್ರ ನಾಗೇಶ್ ಮೊಗೇರ (42) ಮೃತ ದುರ್ದೈವಿ.

ರಾಮಚಂದ್ರ ಭಟ್ಕಳ ತಾಲೂಕಿನ ಅಳ್ವೆಕೋಡಿ ನಿವಾಸಿಯಾಗಿದ್ದು, ಕೈಕಿಣಿಯಿಂದ ಅಳ್ವೆಕೋಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಮುರ್ಡೇಶ್ವರ ಕಡೆಯಿಂದ ಭಟ್ಕಳ ಕಡೆ ತೆರಳುತ್ತಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಾಘತದ ಬಳಿಕ ವೆಂಕಟಾಪುರ ಬಳಿ ಕಾರು ಬಿಟ್ಟು ಚಾಲಕ ಪರಾರಿ ಆಗಿದ್ದಾನೆ.

ಗಂಭೀರ ಗಾಯಗೊಂಡಿದ್ದ ರಾಮಚಂದ್ರರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಕೊಡಗಿನಲ್ಲಿ ಕಾರಿಗೆ ಕಾರು ಡಿಕ್ಕಿ

ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ನಾಲ್ಕು ಕಾರುಗಳು ಜಖಂಗೊಂಡಿವೆ. ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪದ ಮೀನುಪೇಟೆಯಲ್ಲಿ ಘಟನೆ ನಡೆದಿದೆ. ನಿದ್ರೆ ಮಂಪರಿನಲ್ಲಿ ಇದ್ದಾಗ ಈ ಅಪಘಾತ ನಡೆದಿದೆ ಎನ್ನಲಾಗಿದೆ.

ನಸುಕಿನ ಜಾವ 2.30 ರ ಸಮಯಕ್ಕೆ ಅಪಘಾತ ನಡೆದಿದ್ದು, ಕಾರಿನಲ್ಲಿನದ್ದ ಐವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Actor Darshan : ಕೊಲೆ ಕೇಸ್‌ ಬೆನ್ನಲ್ಲೆ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಈಜಲು ಹೋಗಿ ಬಾಲಕರು ನೀರುಪಾಲು

ಮೈಸೂರು: ಈಜಲು (Swimming) ಹೋಗಿ ಇಬ್ಬರು ಬಾಲಕರು ನೀರು ಪಾಲಾದ ಘಟನೆ (Drowned) ಮೈಸೂರಿನ ಸೌಕಾರಹುಂಡಿ ಕೆರೆಯಲ್ಲಿ (Lake) ನಡೆದಿದೆ. ಹೂಟಗಳ್ಳಿ ಹೌಸಿಂಗ್ ಬೋರ್ಡ್ ನಿವಾಸಿ ವರುಣ್ (16) ಹಾಗೂ ಬಸವನಪುರ ನಿವಾಸಿ ಜಸ್ವಂತ್ (14) ಮೃತ ದುರ್ದೈವಿಗಳು.

ಮುಸ್ಸಂಜೆ ವೇಳೆ ಈಜಲು ತೆರಳಿದ್ದ ಈ ಯುವಕರು ಈಜುವ ವೇಳೆ ದುರ್ಘಟನೆ ನಡೆದಿದೆ. ನಡು ಕೆರೆಯಲ್ಲಿದ್ದಾಗ ಬಳಲಿ ತೀರಕ್ಕೆ ಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾವರೆ ಕೊಯ್ಯಲು ಹೋಗಿ ಹೂವಿನ ವ್ಯಾಪಾರಿ ಸಾವು

ತುಮಕೂರು: ಕೆರೆಯಲ್ಲಿದ್ದ ಕಮಲ ಕೀಳಲು ಹೋಗಿದ್ದ ವ್ಯಕ್ತಿ ಕೆಸರಿನಲ್ಲಿ ಸಿಲುಕಿ ಸಾವಿಗೀಡಾದ ಘಟನೆ ತುಮಕೂರು ತಾಲೂಕಿನ ಅರಕೆರೆ ಕೆರೆಯಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಮಧ್ಯವೆಂಕಟಪುರದ ನಿವಾಸಿ ಶ್ರೀನಿವಾಸ್ (35) ಮೃತ ದುರ್ದೈವಿ.

ಹೂವಿನ ವ್ಯಾಪಾರಿಯಾಗಿದ್ದ ಶ್ರೀನಿವಾಸ್ ಅವರು, ಅದೇ ಊರಿನ ಕೆಂಪರಾಮಯ್ಯ, ಚಿಕ್ಕಹನುಮಯ್ಯ ಜೊತೆ ಕಮಲದ ಹೂ ಕೀಳಲು ಹೋಗಿದ್ದರು. ಈ ವೇಳೆ ಕೆಸರಲ್ಲಿ ಸಿಲುಕಿ ಮೇಲೇಳಲಾಗದೆ ಸಾವನ್ನಪ್ಪಿದ್ದಾರೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ ದುರ್ಘಟನೆ ನಡೆದಿದ್ದು, ಜೊತೆಗಿದ್ದವರು ಊರಿಗೆ ಹೋಗಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅತ್ತಿಬೆಲೆಯಲ್ಲಿ ಬಾಲಕ ನೀರುಪಾಲು

ಆನೇಕಲ್: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲಾಗಿರುವ ಘಟನೆ (Drowns in lake) ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಬಳ್ಳೂರು ಅತ್ತಿಬೆಲೆ ಸಮೀಪದ ಬಳ್ಳೂರು ಕೆರೆಯಲ್ಲಿ ನಡೆದಿದೆ. ಅತ್ತಿಬೆಲೆ ವಾಸಿ ಧನುಷ್ (14) ಮೃತ ಬಾಲಕ.

ರೈನ್ ಬೋ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ, ಭಾನುವಾರ ಶಾಲೆಗೆ ರಜೆ ಇದಿದ್ದದ್ದರಿಂದ ಸ್ನೇಹಿತರ ಜತೆ ಈಜಲು ಕೆರೆಗೆ ಹೋಗಿದ್ದ. ಈ ವೇಳೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಬಾಲಕನ ಮೃತ ದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದಿದ್ದು, ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Karnataka Weather Forecast : ಕರಾವಳಿ ಭಾಗದಲ್ಲಿ ಮಳೆ ಅಬ್ಬರ (Rain News) ಮುಂದುವರಿದಿದೆ. ವೀಕೆಂಡ್‌ನಲ್ಲೂ ವ್ಯಾಪಕ ಮಳೆಯಾಗುವ ಎಚ್ಚರಿಕೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ (Yellow alert) ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯೊಂದಿಗೆ (Rain News) ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯೊಂದಿಗೆ ಕೆಲವೊಮ್ಮೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೀದರ್‌, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾದರೆ, ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ಬೆಂಗಳೂರಲ್ಲಿ ತುಂತುರು ಮಳೆ

ಶನಿವಾರ ಬೆಂಗಳೂರು ಸುತ್ತಮುತ್ತ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜುಲೈ 2 ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

Rain News : ಮುಲ್ಕಿ, ಉಡುಪಿ, ಭಾಗಮಂಡಲದಲ್ಲಿ ಭಾರಿ ಮಳೆಯಾಗಿದೆ. ವಾರಾಂತ್ಯದಲ್ಲೂ ಭಾರಿ ವರ್ಷಧಾರೆಯ (Heavy rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಒಮ್ಮೆ ಬಾರಿ ಜೋರಾಗಿ ಮಳೆ (Heavy Rain) ಬಂದರೂ ಜನರಿಗೆ ಕಷ್ಟ ಕಷ್ಟ ಎನ್ನುವ ಪರಿಸ್ಥಿತಿ ಇದೆ. ಈ ನಡುವೆ ಎಂದಿಗಿಂತ ತುಸು ಜೋರಾಗಿ ಹಾಗೂ ಹೆಚ್ಚಾಗಿಯೇ ಮಳೆಯಾಗುತ್ತಿರುವುದು (Rain News) ಜನರನ್ನು ಹೈರಣಾಗಿಸಿದೆ. ಸದ್ಯ ಇನ್ನೊಂದು ವಾರಕ್ಕೂ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ವಾರಾಂತ್ಯದಲ್ಲಿ ಕರಾವಳಿಯ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ನಿರಂತರ ಗಾಳಿ ಬೀಸಲಿದ್ದು ಗಂಟೆಗೆ 40-50 ಕಿ.ಮೀನಲ್ಲಿ ವೇಗ ಇರಲಿದೆ. ಉಳಿದೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ-ಮಲೆನಾಡಿನಲ್ಲಿ ವಿಪರೀತ ಮಳೆ

ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಇನ್ನೂ ಅತಿ ಹೆಚ್ಚು ಮಳೆಯು ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 30 ಸೆಂ.ಮೀ, ಉಡುಪಿ ಹಾಗೂ ಕೊಡಗಿನ ಭಾಗಮಂಡಲದಲ್ಲಿ ತಲಾ 21 ಸೆಂ.ಮೀ ಮಳೆಯಾಗಿದೆ.

ಮಂಗಳೂರು ವಿಮಾನ ನಿಲ್ದಾಣ , ಮಣಿ , ಕಾರ್ಕಳ, ಆಗುಂಬೆಯಲ್ಲಿ ತಲಾ 17 ಸೆಂ.ಮೀ, ಪಣಂಬೂರು , ಬೆಳ್ತಂಗಡಿ, ಹೊನ್ನಾವರ, ಧರ್ಮಸ್ಥಳದಲ್ಲಿ ತಲಾ 15 ಸೆಂ.ಮೀ ಮಳೆಯಾಗಿದೆ. ಶಿರಾಲಿ, ಕೋಟ, ಉಪ್ಪಿನಂಗಡಿ, ಕೊಟ್ಟಿಗೆಹಾರದಲ್ಲಿ ತಲಾ 14 ಸೆಂ.ಮೀ, ನಾಪೋಕ್ಲು13, ಪೊನ್ನಂಪೇಟೆ 12 ಸೆಂ.ಮೀ ಮಳೆಯಾಗಿದೆ. ಪುತ್ತೂರು , ಕೊಲ್ಲೂರು, ಸುಳ್ಯ, ಮೂರ್ನಾಡು, ವಿರಾಜಪೇಟೆಯಲ್ಲಿ 11 ಸೆಂ.ಮೀ, ಮಂಗಳೂರು 10 ಸೆಂ.ಮೀ, ಮಂಕಿ, ಕಳಸ, ಶೃಂಗೇರಿಯಲ್ಲಿ 9 ಸೆಂ.ಮೀ, ಕುಂದಾಪುರ, ಕುಮಟಾ, ಅಂಕೋಲಾದಲ್ಲಿ 8 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ಗೋಕರ್ಣ, ಕೊಪ್ಪ6 ಸೆಂ.ಮೀ, ಸಿದ್ದಾಪುರ , ಜಯಪುರ 5 ಸೆಂ.ಮೀ, ಕದ್ರಾ , ತಾಳಗುಪ್ಪ , ಬಂಡೀಪುರದಲ್ಲಿ 4 ಸೆಂ.ಮೀ ಮಳೆಯಾಗಿದೆ. ಲೋಂಡಾ, ಕುಶಾಲನಗರ, ಸೋಮವಾರಪೇಟೆ, ಹಾರಂಗಿ, ಹುಣಸೂರಿನಲ್ಲಿ 3 ಸೆಂ.ಮೀ ಮಳೆಯಾಗಿದೆ. ಜೋಯಿಡಾ, ಯಲ್ಲಾಪುರ, ಬಾಳೆಹೊನ್ನೂರು, ಹುಂಚದಕಟ್ಟೆ , ಸರಗೂರು 2 ಸೆಂ.ಮೀ, ಮುಂಡಗೋಡ , ಕಾರವಾರ , ಬನವಾಸಿ, ಹಳಿಯಾಳ, ಕಿರವತ್ತಿ , ತ್ಯಾಗರ್ತಿ, ಹಾಸನ , ಕೃಷ್ಣರಾಜಸಾಗರ, ಆನವಟ್ಟಿ, ಎನ್ ಆರ್ ಪುರ, ಗುಂಡ್ಲುಪೇಟೆ, ನಂಜನಗೂಡು, ಕೆ ಆರ್ ನಗರದಲ್ಲಿ 1 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ: Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ಚಿಕ್ಕಮಗಳೂರಲ್ಲಿ ಭಾರಿ ಮಳೆಗೆ ರಸ್ತೆ ಕಾಣದೆ ನದಿಗೆ ಬಿದ್ದ ಕಾರು

ಭಾರಿ ಮಳೆಯಿಂದಾಗಿ ರಸ್ತೆ ಕಾಣದೆ ಕಾರೊಂದು ನದಿಗೆ ಬಿದ್ದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಜೂ 28ರಂದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ‌ಕಾರು ಹೇಮಾವತಿ ನದಿಗೆ ಹಾರಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಕಾರು ನಿಯಂತ್ರಣ ತಪ್ಪಿರುವ ಶಂಕೆ ವ್ಯಕ್ತವಾಗಿದೆ. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಿಂದ ಜಿಗಿದು ನದಿಗೆ ಕಾರು ಬಿದ್ದಿದೆ. ಕಳೆದ ಎರಡು ತಿಂಗಳ ಹಿಂದೆ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಇದೆ ಸ್ಥಳದಲ್ಲೇ ಮತ್ತೊಂದು ಅಪಘಾತ ಸಂಭವಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast : ಉಡುಪಿಯಲ್ಲಿ ಭಾರಿ ಮಳೆಗೆ (Heavy Rain) ಮನೆ ಮುಂದಿದ್ದ ಬಾವಿಯೊಂದು ಕುಸಿದರೆ ಇತ್ತ ಮಂಗಳೂರಿನಲ್ಲಿ ಕಡಲ ಅಬ್ಬರಕ್ಕೆ ಮನೆಯೊಂದು (Karnataka rain) ಸಮುದ್ರಪಾಲಾಗಿದೆ. ಕೊಡಗಿನಲ್ಲಿ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ (Rain Effected) ಹಾನಿಯಾಗಿದೆ.

VISTARANEWS.COM


on

By

karnataka Rain
Koo

ಉಡುಪಿ: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು (Rain News), ನೋಡ ನೋಡುತ್ತಿದ್ದಂತೆ ಮನೆ ಮುಂದಿದ್ದ ಬಾವಿಯೊಂದು ಪಾತಾಳ (well collapsed) ಸೇರಿದೆ. ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಕುಸಿತಕ್ಕೆ ಮನೆಯ ಬಾವಿ ಧಾರಾಶಾಹಿಯಾಗಿದೆ.

ಬಾವಿಯೊಂದು ಕುಸಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಉಡುಪಿಯ ಕಾರ್ಕಳ ತಾಲೂಕಿನ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪ ಘಟನೆ ನಡೆದಿದೆ. ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಭೂಮಿ ಒಳಗೆ ಬಾವಿ ಜಾರಿದೆ. ಬಾವಿ ಪಕ್ಕದಲ್ಲೆ ಮನೆ ಇದ್ದು, ಭೂಕುಸಿತದಿಂದಾಗಿ ಆತಂಕ ಹೆಚ್ಚಾಗಿದೆ.

ಮಂಗಳೂರಿನಲ್ಲಿ ಹೆಚ್ಚಾದ ಕಡಲ ಅಬ್ಬರ

ಮಂಗಳೂರಿನಲ್ಲಿ ಕಡಲ ಅಬ್ಬರ ಹೆಚ್ಚಾಗುತ್ತಿದ್ದು, ನೋಡ ನೋಡುತ್ತಿದ್ದಂತೆ ಮನೆಯೊಂದು ಸಮುದ್ರಕ್ಕುರುಳಿದೆ. ಉಳ್ಳಾಲದ ಬಟ್ಟಪಾಡಿ ಕಡಲ ತೀರದಲ್ಲಿದ್ದ ಮನೆಯು ಅಲೆಗಳ ಹೊಡೆತಕ್ಕೆ ಸಿಲುಕಿ ಬಿದ್ದು ಹೋಗಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಕಡಲ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮನೆಯವರನ್ನು ಸ್ಥಳಾಂತರ ಮಾಡಿತ್ತು. ಮನೆ ಬೀಳುವ ದೃಶ್ಯ ಮೊಬೈಲ್‌ನಲ್ಲಿ‌ ಸೆರೆಯಾಗಿದೆ.

karnataka rain

ಇದನ್ನೂ ಓದಿ: Rain News: ಅಬ್ಬರಿಸುತ್ತಿರುವ ಮುಂಗಾರು: 3 ಜಿಲ್ಲೆಗೆ ರೆಡ್‌ ಅಲರ್ಟ್‌, ಇನ್ನೂ ನಾಲ್ಕು ದಿನ ಜೋರು ಮಳೆ

ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ

ಕೊಡಗು ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ಅನಾಹುತವನ್ನೇ ಸೃಷ್ಟಿಸಿದೆ. ಭಾರೀ ಮಳೆಗೆ ಶಾಲಾ ಕಟ್ಟಡದ ಮೇಲೆ ಗುಡ್ಡ ಕುಸಿದಿದೆ. ಕೊಡಗಿನ ಮಡಿಕೇರಿ ತಾಲೂಕಿನ ಕೊಯನಾಡಿನಲ್ಲಿ ಘಟನೆ ನಡೆದಿದೆ. ಕೊಯನಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ವೇಳೆ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ ಯಾಗಿದೆ.

ಗುಡ್ಡದ ಮಣ್ಣು ಬಿದ್ದ ರಭಸಕ್ಕೆ ಶಾಲೆಯ ಗೋಡೆ ಧ್ವಂಸವಾಗಿದೆ. ಸುಮಾರು 80ಕ್ಕೂ ಅಧಿಕ ಮಕ್ಕಳು ಓದುತ್ತಿರುವ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ನಡೆಯುತ್ತಿದ್ದ ತರಗತಿಗೂ ಹಾನಿಯಾಗಿದೆ. ಮಳೆ ಹೆಚ್ಚಾದರೆ ಮಣ್ಣು ಮತ್ತಷ್ಟು ಕುಸಿಯುವ ಸಾಧ್ಯತೆ ಇದ್ದು, ಶಾಲೆ ಬಳಿಯ ಗುಡ್ಡದ ಮಣ್ಣು ತೆರವಿಗೆ ಪೋಷಕರು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ-ಮಳೆಗೆ ರಸ್ತೆಗೆ ಬಿದ್ದ ಬೃಹತ್ ಮರ

ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ಬೃಹತ್‌ ಮರವೊಂದು ಬುಡ ಸಮೇತ ಕಿತ್ತುಬಂದಿದೆ. ರಾಜ್ಯ ಹೆದ್ದಾರಿಗೆ ಬೃಹತ್ ಮರ ಉರುಳಿದೆ. ಮೂಡಿಗೆರೆಯಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ಮರ ತೆರವು ಮಾಡಿ ಸುಗಮ ಸಂಚಾರಕ್ಕೆ ಸ್ಥಳೀಯರು ಅವಕಾಶ ಮಾಡಿಕೊಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌; ತಿಂಗಳಾಂತ್ಯದವರೆಗೆ ಮೀನುಗಾರರಿಗೆ ನಿರ್ಬಂಧ

Karnataka Weather Forecast: ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಕರಾವಳಿ ಭಾಗಕ್ಕೆ ರೆಡ್‌ ಹಾಗೂ ಮಲೆನಾಡಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ತಿಂಗಳಾಂತ್ಯದವರೆಗೆ ಮೀನುಗಾರರಿಗೆ ಕಡಲತೀರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ಇನ್ನೊಂದು ವಾರ ಮಳೆಯು (Rain News) ಅಬ್ಬರಿಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಈ ದಿನ ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಹಗುರವಾದ ವರ್ಷಧಾರೆಯಾಗಲಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಭಾಗಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸುತ್ತಮುತ್ತ ಸಾಧಾರಣ ಮಳೆಯೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾದ ಮಧ್ಯಮದಿಂದ ಭಾರಿ ಮಳೆಯಾಗಲಿದ್ದು, ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಈ ಜಿಲ್ಲೆಗಳಲ್ಲಿ ಭಯಂಕರ ಮಳೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಜಿಲ್ಲೆಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಮೀನುಗಾರರಿಗೆ ಮುಂದುವರಿದ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್‌ 30ರವರೆಗೆ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Isha Ambani
ವಾಣಿಜ್ಯ5 mins ago

Isha Ambani: ತಾನು ಅವಳಿ ಮಕ್ಕಳಿಗೆ ತಾಯಿಯಾಗಿದ್ದು ಐವಿಎಫ್ ಮೂಲಕ ಎಂದ ಇಶಾ ಅಂಬಾನಿ

Road Accident
ದೇಶ11 mins ago

Road Accident: ಭೀಕರ ರಸ್ತೆ ಅಪಘಾತ; 2 ಕಾರು ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಸಾವು

IND vs SA Final
ಕ್ರಿಕೆಟ್23 mins ago

IND vs SA Final: ಭಾರತ ತಂಡ ವಿಶ್ವಕಪ್​ ಗೆಲ್ಲಲಿ; ಪ್ರಯಾಗ್ ರಾಜ್​ನಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ

Job Alert
ಉದ್ಯೋಗ53 mins ago

Job Alert: ಗಮನಿಸಿ: ಗ್ರಾಮೀಣ ಬ್ಯಾಂಕ್‌ನ 9,995 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ನಾಳೆ ಕೊನೆಯ ದಿನ

Kannada New Movie Kenda in premier In world wide
ಸ್ಯಾಂಡಲ್ ವುಡ್57 mins ago

Kannada New Movie: ವಿಶ್ವಮಟ್ಟದಲ್ಲಿ ದಾಖಲೆ ಬರೆದ ಕನ್ನಡದ `ಕೆಂಡ’!

Orange Peel Benefits
ಆರೋಗ್ಯ58 mins ago

Orange Peel Benefits: ಕಿತ್ತಳೆ ಸಿಪ್ಪೆ ಎಸೆಯಬೇಡಿ; ಹೃದಯದ ಆರೋಗ್ಯಕ್ಕೆ ಇದು ಒಳ್ಳೆಯದು!

Shivamogga News
ಕರ್ನಾಟಕ58 mins ago

Shivamogga News: ಶಿವಮೊಗ್ಗದಲ್ಲಿ ಆಂಬುಲೆನ್ಸ್-ಬೈಕ್‌ ಡಿಕ್ಕಿ; ಸ್ಥಳದಲ್ಲೇ ಮೂವರ ಸಾವು

IND vs SA Final
ಕ್ರೀಡೆ1 hour ago

IND vs SA Final: ಫೈನಲ್​ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ನಡುಕ ಹುಟ್ಟಿಸಿದ ಅಂಪೈರ್​!

Kalki 2898 AD box office day 2 prediction Prabhas
ಟಾಲಿವುಡ್1 hour ago

Kalki 2898 AD: ಎರಡನೇ ದಿನವೂ ಒಳ್ಳೆಯ ಗಳಿಕೆ ಕಂಡ  ‘ಕಲ್ಕಿ 2898 ಎಡಿ’ ಸಿನಿಮಾ!

US Presidential Election
ವಿದೇಶ1 hour ago

US Presidential Election: ಬಹಿರಂಗ ಚರ್ಚೆ ಬಳಿಕ ಅಭ್ಯರ್ಥಿಯ ಬದಲಾವಣೆ? ಬೈಡೆನ್‌ ಬದಲಿಗೆ ಮಿಶೆಲ್‌ ಒಬಾಮಾ ಕಣಕ್ಕೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ22 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌