NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ - Vistara News

ಶಿಕ್ಷಣ

NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

NEETPG 2024 : ಜೂನ್‌ 23ಕ್ಕೆ ನೀಟ್‌ ಪಿಜಿ ಪರೀಕ್ಷೆ ನಡೆಯಲಿದ್ದು, ನಾಳೆ ಅಂದರೆ ಜೂನ್‌ 18ಕ್ಕೆ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.‌

VISTARANEWS.COM


on

NEETPG 2024
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ/ಬೆಂಗಳೂರು : ದೇಶಾದ್ಯಂತ ಸುಮಾರು 259 ಕೇಂದ್ರದಲ್ಲಿ ಜೂನ್‌ 23ಕ್ಕೆ ನೀಟ್ ಪಿಜಿ 2024 (NEETPG 2024) ಪ್ರವೇಶಕ್ಕಾಗಿ ಪರೀಕ್ಷೆ ನಡೆಯಲಿದೆ. ಈಗಾಗಲೇ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಿದ್ದಾರೆ. ಜೂನ್‌ 18ಕ್ಕೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಪರೀಕ್ಷೆಗೆ ನೋಂದಾಯಿಸಿ ಕೊಂಡಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನ ಅಧಿಕೃತ ವೆಬ್ಸೈಟ್ natboard.edu.in ಡೌನ್‌ಲೋಡ್‌ ಮಾಡಬಹುದು.

ಅರ್ಹ ಅಭ್ಯರ್ಥಿಗಳು ತಮ್ಮ ಲಾಗಿನ್ ಐಡಿ ಮೂಲಕ ನೀಟ್ ಪಿಜಿ ಹಾಲ್ ಟಿಕೆಟ್ 2024 ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಪ್ರವೇಶ ಪತ್ರ ಡೌನ್ಲೋಡ್ ಮಾಡಲು ಅಭ್ಯರ್ಥಿಗಳು ಯೂಸರ್ ಐಡಿ ಮತ್ತು ಪಾಸ್‌ವರ್ಡ್ ನಮೂದಿಸಬೇಕು.

ಇದನ್ನೂ ಓದಿ: PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ

ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ?

  1. -ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ (NBEMS) ಅಧಿಕೃತ ವೆಬ್‌ಸೈಟ್‌ಗೆ nbe.edu.in ಹೋಗಿ.
  2. -ಮುಖಪುಟದಲ್ಲಿ “ನೀಟ್ ಪಿಜಿ” ಲಿಂಕ್ ಕ್ಲಿಕ್‌ ಮಾಡಿ. ಇದು ಸಾಮಾನ್ಯವಾಗಿ “ಪರೀಕ್ಷೆಗಳು” ಅಥವಾ “ಪ್ರಮುಖ ಲಿಂಕ್‌ಗಳು” ವಿಭಾಗದಲ್ಲಿ ಕಂಡುಬರುತ್ತದೆ.
  3. -ಲಾಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ ಬಳಕೆದಾರ ಐಡಿ ಮತ್ತು ಪಾಸ್ ವರ್ಡ್ ನಮೂದಿಸಿ.
  4. -ಒಮ್ಮೆ ಲಾಗ್ ಇನ್ ಆದ ನಂತರ, ನಿಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡುವ ಆಯ್ಕೆ ಇರುತ್ತದೆ.
  5. -ಡೌನ್ಲೋಡ್ ಮಾಡುವ ಮೊದಲು, ಪ್ರವೇಶ ಪತ್ರದಲ್ಲಿನ ಎಲ್ಲಾ ವಿವರಗಳು ಸರಿಯಾಗಿವೆ ಎಂದು ಖಚಿತಪಡಿಸಿಕೊಳ್ಳಿ. ಇದರಲ್ಲಿ ನಿಮ್ಮ ಹೆಸರು, ಛಾಯಾಚಿತ್ರ, ಪರೀಕ್ಷಾ ದಿನಾಂಕ ಮತ್ತು ಪರೀಕ್ಷಾ ಕೇಂದ್ರದ ವಿವರಗಳು ಇರಲಿದೆ.
  6. -ಪ್ರವೇಶ ಪತ್ರವನ್ನು ಸೇವ್‌ ಮಾಡಲು ಡೌನ್ಲೋಡ್ ಬಟನ್ ಕ್ಲಿಕ್ ಮಾಡಿ. ಫೈಲ್ ಸಾಮಾನ್ಯವಾಗಿ ಪಿಡಿಎಫ್ ರೂಪದಲ್ಲಿರುತ್ತದೆ.
  7. -ಪ್ರವೇಶ ಪತ್ರದ ಕನಿಷ್ಠ ಎರಡು ಪ್ರತಿಗಳ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ. ಪ್ರವೇಶ ಪತ್ರದಲ್ಲಿ ಫೋಟೋ ಅಂಟಿಸಲು ಜಾಗ ಇರಲಿದೆ.
  8. -ಪರೀಕ್ಷಾ ಕೇಂದ್ರಕ್ಕೆ ಏನು ತರಬೇಕು, ನಿಷೇಧಿತ ವಸ್ತುಗಳ ಬಗ್ಗೆ ಪ್ರವೇಶ ಪತ್ರದಲ್ಲಿ ನೀಡಲಾದ ಸೂಚನೆಗಳನ್ನ ಓದಿಕೊಳ್ಳಿ. ಯಾವ ಸಮಯದೊಳಗೆ ನೀವೂ ಪರೀಕ್ಷಾ ಕೇಂದ್ರದೊಳಗೆ ಇರಬೇಕು ಎಂಬುದನ್ನೂ ಸೂಚಿಸಲಾಗುತ್ತದೆ.

ಪರೀಕ್ಷಾ ಕೇಂದ್ರದಲ್ಲಿ ಇದೆಲ್ಲವೂ ನಿರ್ಬಂಧ

ಪಠ್ಯ ಸಾಮಗ್ರಿ (ಮುದ್ರಿತ ಅಥವಾ ಲಿಖಿತ), ಟಿಪ್ಪಣಿಗಳು, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ರೈಟಿಂಗ್ ಪ್ಯಾಡ್ ಹಾಗೂ ಮೊಬೈಲ್‌ ಫೋನ್, ಬ್ಲೂಟೂತ್, ಇಯರ್ ಫೋನ್‌ಗಳು, ಮೈಕ್ರೊಫೋನ್, ಹೆಲ್ತ್ ಬ್ಯಾಂಡ್, ಎಲೆಕ್ಟ್ರಾನಿಕ್ ಪೆನ್, ಸ್ಕ್ಯಾನರ್ ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ. ಇನ್ನೂ ಹುಡುಗಿಯರು ಬ್ರೇಸ್ ಲೆಟ್ ಗಳು, ಉಂಗುರ, ಕಿವಿಯೋಲೆಗಳು, ನೋಸ್-ಪಿನ್, ಚೈನ್/ ನಂತಹ ಎಲ್ಲಾ ಆಭರಣಗಳು/ ಪೆಂಡೆಂಟ್‌, ಬ್ಯಾಡ್ಜ್, ಬ್ರೂಚ್ ಎಲ್ಲವನ್ನೂ ನಿಷೇಧಿಸಲಾಗಿದೆ. ಜತೆಗೆ ವ್ಯಾಲೆಟ್, ಕ್ಯಾಪ್ , ನೀರಿನ ಬಾಟೆಲ್‌ ಕೂಡ ಕೊಂಡೊಯ್ಯುವಂತಿಲ್ಲ.

ಜುಲೈ 15ರೊಳಗೆ ಫಲಿತಾಂಶ ಪ್ರಕಟ

ಇನ್ನೂ ನೀಟ್‌ ಪಿಜಿ ಫಲಿತಾಂಶವನ್ನು ಜುಲೈ 15ರೊಳಗಾಗಿ ಪ್ರಕಟಿಸಲಾಗುವುದು ಎಂದು ನ್ಯಾಷನಲ್‌ ಬೋರ್ಡ್‌ ಆಫ್‌ ಎಕ್ಸಾಮಿನೇಷನ್‌ ಮೆಡಿಕಲ್‌ ಸೈನ್ಸ್‌ ತಿಳಿಸಿದೆ. ನೀಟ್-ಪಿಜಿ 2024 ಗೆ ಅರ್ಹತೆ ಪಡೆಯಲು ಇಂಟರ್ನ್ಶಿಪ್ ಪೂರ್ಣಗೊಳಿಸಲು ಕಟ್ ಆಫ್ ದಿನಾಂಕವನ್ನು ಆಗಸ್ಟ್‌ 15ಕ್ಕೆ ನಿಗದಿ ಪಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

UGC NET Exam: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ. ಜೂನ್‌ 18ರಂದು ಕರ್ನಾಟಕ ಸೇರಿ ದೇಶಾದ್ಯಂತ ಸುಮಾರು 11 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ನೆಟ್‌ ಬರೆದಿದ್ದರು. ಇದನ್ನು ಬಳಿಕ ರದ್ದುಗೊಳಿಸಲಾಗಿತ್ತು. ಈಗ ಹೊಸ ದಿನಾಂಕ ಘೋಷಣೆ ಮಾಡಲಾಗಿದೆ.

VISTARANEWS.COM


on

UGC NET Exam
Koo

ನವದೆಹಲಿ: ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ರದ್ದಾಗಿದ್ದ ಯುಜಿಸಿ ನೆಟ್‌ (ಯುಜಿಸಿ-ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಹೊಸ ದಿನಾಂಕವನ್ನು ಘೋಷಣೆ ಮಾಡಿದೆ. ಯುಜಿಸಿ ನೆಟ್‌ ಪರೀಕ್ಷೆಯು ಆಗಸ್ಟ್‌ 21 ಹಾಗೂ ಸೆಪ್ಟೆಂಬರ್‌ 4ರಂದು ನಡೆಸಲಿದೆ. ಅದರಲ್ಲೂ, ಪರೀಕ್ಷೆಯಲ್ಲಿ ಅಕ್ರಮ ತಡೆಯುವ ದಿಸೆಯಲ್ಲಿ ಪೆನ್‌ ಹಾಗೂ ಪೇಪರ್‌ ಪದ್ಧತಿ ಬದಲಾಗಿ, ಕಂಪ್ಯೂಟರ್‌ ಆಧಾರಿತವಾಗಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಇದರ ಬೆನ್ನಲ್ಲೇ, ಆಲ್‌ ಇಂಡಿಯಾ ಆಉಷ್‌ ಪೋಸ್ಟ್‌ ಗ್ರ್ಯಾಜುಯೇಟ್‌ ಪ್ರವೇಶ ಪರೀಕ್ಷೆಯು (AIAPGET) ಜುಲೈ 6ರಂದು ನಡೆಸಲು ತೀರ್ಮಾನಿಸಲಾಗಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿತ್ತು. ನ್ಯಾಷನಲ್ ಸೈಬರ್‌ ಕ್ರೈಮ್‌ ಥ್ರೆಟ್‌ ಅನಾಲಿಟಿಕ್ಸ್‌ ಯುನಿಟ್‌ ಆಫ್‌ ಇಂಡಿಯನ್‌ ಸೈಬರ್‌ ಕ್ರೈಮ್‌ ಕೋ-ಆರ್ಡಿನೇಷನ್‌ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.

ಜೂನ್‌ 18ರಂದು ಕರ್ನಾಟಕ ಸೇರಿ ದೇಶಾದ್ಯಂತ 317 ನಗರಗಳ 1,205 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 11 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೆಟ್‌ಗೆ ಹಾಜರಾಗಿದ್ದರು. ಈಗ ಪರೀಕ್ಷೆಯನ್ನು ರದ್ದುಗೊಳಿಸಿರುವ ಕಾರಣ ಶೀಘ್ರದಲ್ಲೇ ಹೊಸ ದಿನಾಂಕ ಘೋಷಿಸಲಾಗುತ್ತದೆ ಎಂದು ತಿಳಿದುಬಂದಿತ್ತು. ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪಿಎಚ್‌.ಡಿ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಬದಲು ಅಭ್ಯರ್ಥಿಯು ನೆಟ್‌ನಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಲು ಯುಜಿಸಿಯು ಈಗಾಗಲೇ ಅನುಮೋದನೆ ನೀಡಿದೆ. ಹಾಗಾಗಿ, ಅಭ್ಯರ್ಥಿಗಳಿಗೆ ನೆಟ್‌ ಪ್ರಮುಖ ಸಂಗತಿಯಾಗಿದೆ.

ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಪರೀಕ್ಷೆಗೂ ದಿನಾಂಕ ಘೋಷಣೆ

ದೇಶದ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಜ್ಯೂನಿಯರ್‌ ರಿಸರ್ಚ್‌ ಫೆಲೋಶಿಪ್‌ (JRF) ಪಡೆಯಲು ಹಾಗೂ ಉಪನ್ಯಾಸಕರಾಗಿ ಅಥವಾ ಸಹಾಯ ಪ್ರಾಧ್ಯಾಪಕರಾಗಿ ಆಯ್ಕೆಯಾಗಲು ಅರ್ಹತೆ ಪಡೆಯಬೇಕಾದರೆ ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು. ಜೂನ್‌ 25 ಹಾಗೂ ಜೂನ್‌ 27ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಈ ಪರೀಕ್ಷೆಯನ್ನು ಜುಲೈ 25-27ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: Joint CSIR UGC NET: ನೆಟ್‌ ಪರೀಕ್ಷೆ ರದ್ದಾದ ಬೆನ್ನಲ್ಲೇ ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಮುಂದೂಡಿಕೆ!

Continue Reading

ಕರ್ನಾಟಕ

Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

Air Wing NCC: ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ. ವತಿಯಿಂದ ಏರ್ ವಿಂಗ್ ಎನ್‌ಸಿಸಿ 2024-27 ನೇ ಬ್ಯಾಚ್‌ಗೆ ಜೂ. 22ರಿಂದ ನೋಂದಣಿ ಪ್ರಾರಂಭಗೊಂಡಿದ್ದು ಜುಲೈ 09 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ ಎಂದು ಕಮಾಂಡಿಂಗ್ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ರಾಜೇಶ್ ಚಂದ್ರ ತಿಳಿಸಿದ್ದಾರೆ.

VISTARANEWS.COM


on

Application Invitation to Join Air Wing NCC July 09 is the last day for submission of application
Koo

ಬೆಂಗಳೂರು: ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ ವತಿಯಿಂದ ಏರ್ ವಿಂಗ್ ಎನ್‌ಸಿಸಿ (Air Wing NCC) 2024-27 ನೇ ಬ್ಯಾಚ್‌ಗೆ ಜೂ. 22ರಿಂದ ನೋಂದಣಿ ಪ್ರಾರಂಭಗೊಂಡಿದ್ದು, ಜುಲೈ 9 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ ಎಂದು ಕಮಾಂಡಿಂಗ್ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ರಾಜೇಶ್ ಚಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಅಭ್ಯರ್ಥಿಗಳು ಪಿಯುಸಿ ಪ್ರಥಮ ಅಥವಾ ಪ್ರಥಮ ವರ್ಷದ ಪದವಿಯಲ್ಲಿ ಬೆಂಗಳೂರಿನ ಯಾವುದಾದರೂ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಎನ್.ಸಿ.ಸಿ ಸೇರಬಯಸುವ ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಚಿತ್ರದಲ್ಲಿ ನೀಡಿರುವ ಕ್ಯೂ.ಆರ್. ಕೋಡ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Run4Research: ಬೆಂಗಳೂರಿನಲ್ಲಿ ಜೂ.30ರಂದು ʼರನ್4ರೀಸರ್ಚ್ʼ ಓಟ

ವಿಳಾಸ: ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ., ಯುವಿಸಿಇ ಕ್ಯಾಂಪಸ್, ಕೆ.ಆರ್. ಸರ್ಕಲ್ ಹತ್ತಿರ, ಬೆಂಗಳೂರು, ದೂರವಾಣಿ ಸಂಖ್ಯೆ 8788506566/9108939392 ಗೆ ಸಂಪರ್ಕಿಸಬಹುದಾಗಿದೆ.

Continue Reading

ಬೆಂಗಳೂರು

DCET 2024 : ಡಿಸಿಇಟಿಯಲ್ಲಿ ರ‍್ಯಾಂಕ್‌ ಪಡೆದ ವಿಕಲ ಚೇತನರಿಗೆ ಜುಲೈ 1ರಂದು ವೈದ್ಯಕೀಯ ತಪಾಸಣೆ

DCET 2024 : ಜುಲೈ 1ರಂದು ಡಿಸಿಇಟಿಯಲ್ಲಿ ರ‍್ಯಾಂಕ್‌ ಪಡೆದ ವಿಕಲ ಚೇತನರ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದ್ದು, ಬಳಿಕ ಜು.2ರಿಂದ 4ರವರೆಗೆ ಡಿಸಿಇಟಿ ದಾಖಲಾತಿ ಪರಿಶೀಲನೆ ನಡೆಯಲಿದೆ.

VISTARANEWS.COM


on

By

DCET 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಡಿಸಿಇಟಿ-2024ರಲ್ಲಿ (DCET 2024 ) ರ‍್ಯಾಂಕ್‌ ಪಡೆದಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಅಂಗವಿಕಲತೆಯ ಅರ್ಹತೆಯನ್ನು ಪರೀಕ್ಷಿಸಲು ಜುಲೈ 1ರಂದು ಮಲ್ಲೇಶ್ವರ ಕೆಇಎ ಕಚೇರಿಯಲ್ಲಿ ವೈದ್ಯಕೀಯ ತಪಾಸಣೆಯನ್ನು ನಡೆಸಲಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಯುಜಿಸಿಇಟಿ-24ಕ್ಕೆ ಸಂಬಂಧಿಸಿದಂತೆ ಜೂನ್ 10ರಿಂದ 12ರವರೆಗೆ ನಡೆದ ವೈದ್ಯಕೀಯ ತಪಾಸಣೆಗೆ ಗೈರುಹಾಜರಾದ ವಿಕಲಚೇತನ ಅಭ್ಯರ್ಥಿಗಳು ಕೂಡ ಜುಲೈ 1ರಂದು ತಪಾಸಣೆಗೆ ಬರಬಹುದು. ಈ ಮೊದಲು ತಪಾಸಣೆಗೆ ಹಾಜರಾಗಿದ್ದವರು ಪುನಃ ತಪಾಸಣೆಗೆ ಬರುವಂತಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಡಿಸಿಇಟಿ ಅರ್ಜಿಯ ಪ್ರತಿ, ಪ್ರವೇಶ ಪತ್ರ, ಅಭ್ಯರ್ಥಿಯ ಭಾವಚಿತ್ರ ಇರುವ ಗುರುತಿನ ಚೀಟಿ, ವೈದ್ಯಕೀಯ ಪ್ರಮಾಣಪತ್ರ, ಕಿವುಡುತನದ ಸಮಸ್ಯೆ ಇರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರಗಳನ್ನು ತಪಾಸಣೆ ಸಂದರ್ಭದಲ್ಲಿ ತಂದಿರಬೇಕು.

ಇದನ್ನೂ ಓದಿ: vasavi condiments : ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ; ನಿದ್ರೆ ಮಾತ್ರೆ ಸೇವಿಸಿ ಮಾಲಕಿ ಗೀತಾ ಆತ್ಮಹತ್ಯೆಗೆ ಯತ್ನ

ಡಿಸಿಇಟಿ: ಜು.2ರಿಂದ 4ರವರೆಗೆ ದಾಖಲಾತಿ ಪರಿಶೀಲನೆ

ಬೆಂಗಳೂರು: ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗೆ ಹಾಗು ಮೊದಲನೇ ವರ್ಷದ ಆರ್ಕಿಟೆಕ್ಚರ್ ಕೋರ್ಸಿಗೆ ಅರ್ಹತೆಯನ್ನು ಪಡೆಯುವುದಕ್ಕಾಗಿ ಜು.2ರಿಂದ 4ವರೆಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರ‍್ಯಾಂಕ್‌ ಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ದಾಖಲಾತಿ ಪರಿಶೀಲನೆ ನಡೆಸುವ ಕಾಲೇಜುಗಳ ಪಟ್ಟಿಯನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ತಮಗೆ ಹತ್ತಿರ ಇರುವ ಯಾವುದಾದರೊಂದು ಕಾಲೇಜಿಗೆ ಖುದ್ದು ಹೋಗಬೇಕು. ಆನ್ ಲೈನ್ ಅರ್ಜಿ ಸಲ್ಲಿಸುವಾಗ ಕೋರಿರುವ ಕ್ಲೇಮುಗಳಿಗೆ ಪೂರಕವಾದ ಎಲ್ಲಾ ಶೈಕ್ಷಣಿಕ ಮೂಲ ದಾಖಲೆಗಳನ್ನು ಮತ್ತು ವಿಶೇಷ ಪ್ರವರ್ಗದ (ಎನ್ ಸಿಸಿ, ಕ್ರೀಡೆ, ಸೈನಿಕರು, ಮಾಜಿ ಸೈನಿಕರು, ಸಿಎಪಿಎಫ್, ಮಾಜಿ-ಸಿಎಪಿಎಫ್- ಕ್ಲೇಮ್ ಮಾಡಿದ್ದಲ್ಲಿ ಮಾತ್ರ ಅರ್ಹತೆ) ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

GR vishwanath : ಬೆಂಗಳೂರು ನಗರ ವಿವಿಯಿಂದ ಕ್ರಿಕೆಟ್ ದಿಗ್ಗಜ ಗುಂಡಪ್ಪ ವಿಶ್ವನಾಥ್​ಗೆ ಗೌರವ ಡಾಕ್ಟರೇಟ್

GR vishwanath : ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮೂರನೇ ವಾರ್ಷಿಕ ಘಟಿಕೋತ್ಸವ ಜೂನ್ 29 ಶನಿವಾರ ಬೆಳಿಗ್ಗೆ 11.30 ಕ್ಕೆ ನಗರದ ಅರಮನೆ ರಸ್ತೆಯ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜರುಗಲಿದೆ. ರಾಜ್ಯಪಾಲ ಹಾಗೂ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ.

VISTARANEWS.COM


on

GR Vishwnath
Koo

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮೂರನೇ ಘಟಿಕೋತ್ಸವದಲ್ಲಿ ಕ್ರಿಕೆಟ್ ದಿಗ್ಗಜ ಗುಂಡಪ್ಪ ವಿಶ್ವನಾಥ್ ರಿಗೆ (GR vishwanath) ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ ಎಂದು ಕುಲಪತಿ ಲಿಂಗರಾಜ ಗಾಂಧಿ ತಿಳಿಸಿದರು. ಸೆಂಟ್ರಲ್ ಕಾಲೇಜು ಆವರಣದ ಜ್ಞಾನ ಜ್ಯೋತಿ ಸಂಭಾಂಗಣದ ಬೋರ್ಡ್ ರೂಮ್ ನಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮೂರನೇ ಘಟಿಕೋತ್ಸವ ಜೂನ್ 29 ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಇಬ್ಬರಿಗೆ ನೀಡಲಾಗುತ್ತಿದೆ. ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ಸಾಧನೆ ಮಾಡಿರುವ ಗೋಕುಲ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಆರ್. ಜಯರಾಮ್ ಒಬ್ಬರಾದರೆ ಮತ್ತೊಬ್ಬರು ಖ್ಯಾತ ಮಾಜಿ ಕ್ರಿಕೆಟ್ ಆಟಗಾರ ಜಿ.ಆರ್. ವಿಶ್ವನಾಥ್ ಆಗಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮೂರನೇ ವಾರ್ಷಿಕ ಘಟಿಕೋತ್ಸವ ಜೂನ್ 29 ಶನಿವಾರ ಬೆಳಿಗ್ಗೆ 11.30 ಕ್ಕೆ ನಗರದ ಅರಮನೆ ರಸ್ತೆಯ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜರುಗಲಿದೆ. ರಾಜ್ಯಪಾಲ ಹಾಗೂ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಮ ಕುಲಾಧಿಪತಿ ಡಾ. ಎಂ. ಸಿ. ಸುಧಾಕರ್ ಮತ್ತು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್​ ಎಜುಕೇಶನ್ ಅಧ್ಯಕ್ಷ ಪ್ರೊ. ಟಿ. ಜಿ. ಸೀತಾರಾಮ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಯುನಿಫೈಡ್ ಯೂನಿವರ್ಸಿಟಿ ಕಾಲೇಜು ಮ್ಯಾನೇಜ್ಮೆಂಟ್ ಸಿಸ್ಟಮ್ ತಂತ್ರಾಂಶದ ಪ್ರಕಾರ ಸ್ನಾತಕ ಹಾಗೂ ಸ್ಟಾಂಡ್ ಅಲೋನ್ ಕೋರ್ಸುಗಳ ಪ್ರವೇಶ ಪ್ರಕ್ರಿಯೆ ಹಾಗೂ ಪರೀಕ್ಷಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ವಹಿಸಲಾಗುತ್ತಿದೆ. ಅಂತಹ ವಿದ್ಯಾರ್ಥಿಗಳಿಗೆ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡುತ್ತಿರುವ ರಾಜ್ಯ ಪ್ರಥಮ ವಿಶ್ವವಿದ್ಯಾನಿಲಯ ನಮ್ಮದಾಗಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

63 ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಈ ಘಟಿಕೋತ್ಸವದಲ್ಲಿ ಒಟ್ಟು 63 ವಿದ್ಯಾರ್ಥಿಗಳು ಪ್ರಥಮ ರಾಂಕ್ ಪ್ರಮಾಣ ಪತ್ರಗಳನ್ನು, ಚಿನ್ನದ ಪದಕ ಮತ್ತು ನಗದು ಬಹುಮಾನವನ್ನು ಸ್ವೀಕರಿಸಲಿದ್ದಾರೆ. ಈ ರ್ಯಾಂಕ್​ ವಿಜೇತರಲ್ಲಿ 40 ವಿದ್ಯಾರ್ಥಿಗಳು ಬೆಂಗಳೂರು ನಗರ ವಿಶ್ವವಿದ್ಯಾನಿಲಯದಿಂದ ಸ್ಥಾಪಿತ ಚಿನ್ನದ ಪದಕ ಮತ್ತು ನಗದು ಬಹುಮಾನಗಳನ್ನು ಸ್ವೀಕರಿಸಲಿದ್ದಾರೆ. ವಿವಿಧ ದಾನಿಗಳು ಸ್ಥಾಪಿಸಿರುವ ಒಟ್ಟು 15 ಚಿನ್ನದ ಪದಕಗಳನ್ನು ಸಹ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಸ್ವೀಕರಿಸಲಿದ್ದಾರೆ. ಬಿ.ಎ. ಮ್ಯೂಸಿಕ್, ಟೂರಿಸಂ ಮ್ಯಾನೇಜ್ಮೆಂಟ್ ವಿಭಾಗಗಳಲ್ಲಿ ಅರ್ಹ ವಿದ್ಯಾರ್ಥಿಗಳು ಇಲ್ಲದ ಕಾರಣ ಈ ವರ್ಷ ಎರಡು ಚಿನ್ನದ ಪದಕ ವಿತರಿಸಲಾಗುತ್ತಿಲ್ಲ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​​ ಸ್ಮರಣೆಗಾಗಿ ಜೆಎಸ್​ಡಬ್ಲ್ಯುನಿಂದ ಪ್ಯಾರಿಸ್​ನಲ್ಲಿ ವಿಶೇಷ ಪ್ರದರ್ಶನ

ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಸ್ಥಾಪಿಸಿದ 35 ಚಿನ್ನದ ಪದಕ ಮತ್ತು ನಗದು ಬಹುಮಾನಗಳನ್ನು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಬಿ.ಎ., ಬಿ.ಎಸ್ಸಿ, ಬಿ.ಕಾಂ., ಬಿ.ಬಿ.ಎ. ಬಿ.ಇಡಿ., ಕೋರ್ಸುಗಳಲ್ಲಿ ಅತಿ ಹೆಚ್ಚು ಅಂಕ ಪಡೆದವರಿಗೆ ನೀಡಲಾಗುವುದು ಎಂದು ಲಿಂಗರಾಜ ಗಾಂಧಿ ಹೇಳಿದರು.

Continue Reading
Advertisement
Ram Path
ದೇಶ15 mins ago

Ram Path: ಅಯೋಧ್ಯೆ ರಾಮ ಪಥ ಕಾಮಗಾರಿಯಲ್ಲಿ ನಿರ್ಲಕ್ಷ್ಯ; 6 ಅಧಿಕಾರಿಗಳ ತಲೆದಂಡ

DP Manu
ಕ್ರೀಡೆ16 mins ago

DP Manu: ಡೋಪಿಂಗ್ ಸುಳಿಯಲ್ಲಿ ಸಿಲುಕಿದ ಜಾವೆಲಿನ್‌ ತಾರೆ ಮನು; ಒಲಿಂಪಿಕ್ಸ್​ಗೆ ಹಿನ್ನಡೆ

Love Failure
ರಾಯಚೂರು25 mins ago

Love Failure : ಅತ್ತಿಗೆ ತಂಗಿಯ ಪ್ರೀತಿ ಸಿಗದ್ದಕ್ಕೆ ಫ್ಯಾನಿಗೆ ನೇಣು ಬಿಗಿದುಕೊಂಡ ಹುಚ್ಚು ಪ್ರೇಮಿ

Gold Rate Today
ಪ್ರಮುಖ ಸುದ್ದಿ36 mins ago

Gold Rate Today: ತುಸು ಏರಿಕೆ ಕಂಡ ಚಿನ್ನದ ಬೆಲೆ; ಇಷ್ಟಿದೆ ಇಂದಿನ ದರ

ಬಾಲಿವುಡ್44 mins ago

Asha Bhosle: ಹಿರಿಯ ಗಾಯಕಿ ಆಶಾ ಭೋಂಸ್ಲೆ ಪಾದಕ್ಕೆ ಮುತ್ತಿಟ್ಟು, ಪನ್ನೀರಿನಿಂದ ತೊಳೆದು ನಮಸ್ಕರಿಸಿದ ಸೋನು ನಿಗಮ್

karnataka Rain
ಮಳೆ53 mins ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

Mohan Bhagwat
ದೇಶ1 hour ago

Mohan Bhagwat: ಮುಕೇಶ್‌ ಅಂಬಾನಿ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌; ಕೈ ಮುಗಿದು ಸ್ವಾಗತಿಸಿದ ನೀತಾ ಅಂಬಾನಿ

Kalki 2898 AD Yash calls visually stunning spectacle
ಟಾಲಿವುಡ್1 hour ago

Kalki 2898 AD: ʻಕಲ್ಕಿʼ ಸಿನಿಮಾ ಹಾಡಿ ಹೊಗಳಿದ ರಾಕಿಂಗ್‌ ಸ್ಟಾರ್‌ ಯಶ್‌!

IND vs SA Final
ಕ್ರೀಡೆ1 hour ago

IND vs SA Final: ವಿಶ್ವಕಪ್​ ಗೆಲ್ಲಲು ಕೊಹ್ಲಿ, ರೋಹಿತ್​, ದ್ರಾವಿಡ್​ಗೆ ಇದು ಕೊನೆಯ ಅವಕಾಶ!

Law And Order
ಕರ್ನಾಟಕ1 hour ago

Law And Order: ಗದಗ, ರಾಯಚೂರಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆ; ಕಾನೂನು ಸುವ್ಯವಸ್ಥೆ ಗತಿ ಏನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ53 mins ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ17 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌